Tag: teaser

  • Exclusive Details- ಇಂದು ಯುವರಾಜ ಹೊಸ ಚಿತ್ರದ ಟೈಟಲ್, ಟೀಸರ್ ಅನಾವರಣ

    Exclusive Details- ಇಂದು ಯುವರಾಜ ಹೊಸ ಚಿತ್ರದ ಟೈಟಲ್, ಟೀಸರ್ ಅನಾವರಣ

    ಯುವರಾಜಕುಮಾರ್ (Yuva Rajkumar) ಹೊಸ ಸಿನಿಮಾದ ಮಹತ್ವದ ವಿಷಯಗಳು ಇಂದು ಅನಾವರಣಗೊಳ್ಳಲಿವೆ. ಕಳೆದ ಒಂದು ವರ್ಷದಿಂದ ಈ ಸಿನಿಮಾದ ಬಗ್ಗೆ ನಾನಾ ರೀತಿಯ ಸುದ್ದಿಗಳು ಹೊರ ಬರುತ್ತಿದ್ದವು. ಇಂದು ನಾಳೆ ಅಂದುಕೊಂಡು ಒಂದು ವರ್ಷಗಳ ಕಾಲ ಸಿನಿಮಾದ ಬಗ್ಗೆ ಅಧಿಕೃತವಾಗಿ ಯಾವುದೇ ಮಾಹಿತಿಯನ್ನು ಚಿತ್ರತಂಡ ಬಿಟ್ಟುಕೊಟ್ಟಿರಲಿಲ್ಲ. ಇವತ್ತು ಹಲವು ವಿಚಾರಗಳನ್ನು ಚಿತ್ರತಂಡ ಹಂಚಿಕೊಳ್ಳಲಿದೆ. ಅಲ್ಲಿಗೆ ಅಧಿಕೃತ ಮಾಹಿತಿಗಳು ಹೊರಬೀಳಲಿವೆ.

    ದೊಡ್ಮನೆ ಕುಟುಂಬದ ಕುಡಿ ಯುವರಾಜಕುಮಾರ್ ನಟನೆಯ ಹೊಸ ಸಿನಿಮಾದ ಮುಹೂರ್ತ ಇಂದು ಸಂಜೆ 5.45 ಗಂಟೆಗೆ ಸುಬ್ರಮಣ್ಯ ದೇವಸ್ಥಾನದಲ್ಲಿ ಸಿಂಪಲ್ ಆಗಿ ನಡೆಯಲಿದೆ. ಆದರೆ, ಟೀಸರ್ ರಿಲೀಸ್ ಮಾತ್ರ ಅದ್ಧೂರಿಯಾಗಿ ಮಾಡುವುದಾಗಿ ಡಾ.ರಾಜ್ ಕುಟುಂಬದ ಅಭಿಮಾನಿಗಳು ಸದಸ್ಯರು ತಿಳಿಸಿದ್ದಾರೆ. ಹೊಸ ಸಿನಿಮಾದ ಮುಹೂರ್ತದ ನಂತರ ಟೀಸರ್ ರಿಲೀಸ್ ಮಾಡುವ ಪ್ಲ್ಯಾನ್ ಮಾಡಿದ್ದು, ಬೆಂಗಳೂರಿನ ಜೆ.ಪಿ ನಗರದ ಸಿದ್ದಲಿಂಗೇಶ್ವರ ಚಿತ್ರಮಂದಿರದಲ್ಲಿ ಸಂಜೆ 6.55ಕ್ಕೆ ಟೀಸರ್ ಬಿಡುಗಡೆಯಾಗಲಿದೆ. ಜೊತೆಗೆ ಸಿನಿಮಾದ ಟೈಟಲ್ ಕೂಡ ಅನೌನ್ಸ್ ಆಗಲಿದೆ.  ಅಲ್ಲದೇ, ಕುರುಬರಹಳ್ಳಿಯ ಡಾ.ರಾಜ್ ಪ್ರತಿಮೆಯ ಮುಂದೆಯೇ ಟೀಸರ್ ತೋರಿಸಲಾಗುತ್ತಿದೆ. ಇದನ್ನೂ ಓದಿ: ಮತ್ತೆ ಕಿರುತೆರೆಗೆ ಮರಳಿದ ಬಿಗ್ ಬಾಸ್ ವಿನ್ನರ್ ರೂಪೇಶ್ ಶೆಟ್ಟಿ

    ಈ ಹಿಂದೆ ಸಿನಿಮಾದ ಟೀಸರ್ ಮತ್ತು ಟೈಟಲ್ ಲಾಂಚ್ ಅನ್ನು ಪುನೀತ್ ರಾಜ್ ಕುಮಾರ್ ಅವರ ಹುಟ್ಟು ಹಬ್ಬದಂದು ರಿಲೀಸ್ ಮಾಡಲಾಗುತ್ತದೆ ಎಂದು ಹೇಳಲಾಗಿತ್ತು. ಅಪ್ಪು ಹುಟ್ಟುಹಬ್ಬ 15 ದಿನ ಬಾಕಿ ಇರುವಾಗಲೇ ನಾಳೆಗೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಇದಕ್ಕೆ ಕಾರಣ ಅಂದು ಪುನೀತ್ ಪತ್ನಿ ಅಶ್ವಿನಿ ಅವರು ಲಭ್ಯವಿಲ್ಲ ಎನ್ನುವ ಮಾಹಿತಿಯೂ ಹರಿದಾಡುತ್ತಿದೆ. ಈ ಕಾರಣದಿಂದಾಗಿ ಮಾರ್ಚ್ 3ಕ್ಕೆ ಮುಹೂರ್ತ, ಟೈಟಲ್ ಮತ್ತು ಟೀಸರ್ ಲಾಂಚ್ ಮಾಡಲು ಸಂಸ್ಥೆ ಮುಂದೆ ಬಂದಿದೆಯಂತೆ.

    ಈ ಸಿನಿಮಾ ಮೂಲಕ ಪುನೀತ್ ರಾಜಕುಮಾರ್ ಅವರ ಉತ್ತರಾಧಿಕಾರಿ ಎಂದೇ ಬಿಂಬಿಸಲಾಗುತ್ತಿರುವ ಯುವರಾಜಕುಮಾರ್ ಅಧಿಕೃತವಾಗಿ ಸಿನಿಮಾ ರಂಗಕ್ಕೆ ಎಂಟ್ರಿ ಕೊಡುತ್ತಿದ್ದಾರೆ. ಹೊಂಬಾಳೆ ಫಿಲ್ಮ್ಸ್ (Hombale Films) ಬ್ಯಾನರ್ ನಲ್ಲಿ ಸಿನಿಮಾ ಮೂಡಿ ಬರಲಿದೆ.  ಪುನೀತ್ ರಾಜಕುಮಾರ್ ಜೊತೆ ಒಳ್ಳೆಯ ಬಾಂಧವ್ಯ ಹಾಗೂ ಅವರ ಎರಡು ಸಿನಿಮಾಗಳನ್ನು ನಿರ್ದೇಶನ ಮಾಡಿರುವ ಸಂತೋಷ್ ಆನಂದ್ ರಾಮ್ ಈ ಸಿನಿಮಾವನ್ನು ನಿರ್ದೇಶನ ಮಾಡುತ್ತಿದ್ದರೆ, ನುರಿತ ತಂತ್ರಜ್ಞರ ತಂಡವೇ ಸಿನಿಮಾದಲ್ಲಿದೆ.

    ಅಂದುಕೊಂಡಂತೆ ಆಗಿದ್ದರೆ ಯುವರಾಜಕುಮಾರ್ ಈ ಹಿಂದೆಯೇ ಲಾಂಚ್ ಆಗಬೇಕಿತ್ತು. ಯುವಗಾಗಿಯೇ ‘ಯುವ ರಣಧೀರ ಕಂಠೀರವ’ ಸಿನಿಮಾ ಮಾಡಲು ಹೊರಟಿದ್ದರು ಜಾಕಿ ತಿಮ್ಮಯ್ಯ. ಸಾಕಷ್ಟು ಹಣ ಖರ್ಚು ಮಾಡಿ ಟೀಸರ್ ಕೂಡ ರಿಲೀಸ್ ಮಾಡಿದ್ದರು. ಆದರೆ, ಆ ಸಿನಿಮಾ ಮುಂದುವರೆಯಲಿಲ್ಲ. ಈ ಕಾರಣದಿಂದಾಗಿ ಸಂತೋಷ್ ಆನಂದ್ ರಾಮ್ (Santhosh Anand Ram) ಅವರ ಚಿತ್ರವೇ ಯುವ ನಟನೆಯ ಚೊಚ್ಚಲು ಸಿನಿಮಾವಾಗಲಿದೆ.

  • ನಾಳೆಯೇ ರಿಲೀಸ್ ಆಗಲಿದೆ ಯುವರಾಜ ನಟನೆಯ ಹೊಸ ಚಿತ್ರದ ಟೀಸರ್

    ನಾಳೆಯೇ ರಿಲೀಸ್ ಆಗಲಿದೆ ಯುವರಾಜ ನಟನೆಯ ಹೊಸ ಚಿತ್ರದ ಟೀಸರ್

    ದೊಡ್ಮನೆ ಕುಟುಂಬದ ಕುಡಿ ಯುವರಾಜಕುಮಾರ್ (Yuva Rajkumar) ನಟನೆಯ ಹೊಸ ಸಿನಿಮಾದ ಮುಹೂರ್ತ ನಾಳೆ ಸಿಂಪಲ್ ಆಗಿ ನಡೆಯಲಿದೆ. ಆದರೆ, ಟೀಸರ್ ರಿಲೀಸ್ ಮಾತ್ರ ಅದ್ಧೂರಿಯಾಗಿ ಮಾಡುವುದಾಗಿ ಡಾ.ರಾಜ್ ಕುಟುಂಬದ ಅಭಿಮಾನಿಗಳು ಸದಸ್ಯರು ತಿಳಿಸಿದ್ದಾರೆ. ಹೊಸ ಸಿನಿಮಾದ ಮುಹೂರ್ತದ ನಂತರ ಟೀಸರ್ ರಿಲೀಸ್ ಮಾಡುವ ಪ್ಲ್ಯಾನ್ ಮಾಡಿದ್ದು, ಬೆಂಗಳೂರಿನ ಜೆ.ಪಿ ನಗರದ ಸಿದ್ದಲಿಂಗೇಶ್ವರ ಚಿತ್ರಮಂದಿರದಲ್ಲಿ ಸಂಜೆ 6ಕ್ಕೆ ಟೀಸರ್ ಬಿಡುಗಡೆಯಾಗಲಿದೆ. ಜೊತೆಗೆ ಸಿನಿಮಾದ ಟೈಟಲ್ ಕೂಡ ಅನೌನ್ಸ್ ಆಗಲಿದೆ.

    ಈ ಹಿಂದೆ ಸಿನಿಮಾದ ಟೀಸರ್ ಮತ್ತು ಟೈಟಲ್ ಲಾಂಚ್ ಅನ್ನು ಪುನೀತ್ ರಾಜ್ ಕುಮಾರ್ ಅವರ ಹುಟ್ಟು ಹಬ್ಬದಂದು ರಿಲೀಸ್ ಮಾಡಲಾಗುತ್ತದೆ ಎಂದು ಹೇಳಲಾಗಿತ್ತು. ಅಪ್ಪು ಹುಟ್ಟುಹಬ್ಬ 15 ದಿನ ಬಾಕಿ ಇರುವಾಗಲೇ ನಾಳೆಗೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಇದಕ್ಕೆ ಕಾರಣ ಅಂದು ಪುನೀತ್ ಪತ್ನಿ ಅಶ್ವಿನಿ ಅವರು ಲಭ್ಯವಿಲ್ಲ ಎನ್ನುವ ಮಾಹಿತಿಯೂ ಹರಿದಾಡುತ್ತಿದೆ. ಈ ಕಾರಣದಿಂದಾಗಿ ಮಾರ್ಚ್ 3ಕ್ಕೆ ಮುಹೂರ್ತ, ಟೈಟಲ್ (Title) ಮತ್ತು ಟೀಸರ್ (Teaser) ಲಾಂಚ್ ಮಾಡಲು ಸಂಸ್ಥೆ ಮುಂದೆ ಬಂದಿದೆಯಂತೆ.

    ಈ ಸಿನಿಮಾ ಮೂಲಕ ಪುನೀತ್ ರಾಜಕುಮಾರ್ ಅವರ ಉತ್ತರಾಧಿಕಾರಿ ಎಂದೇ ಬಿಂಬಿಸಲಾಗುತ್ತಿರುವ ಯುವರಾಜಕುಮಾರ್ ಅಧಿಕೃತವಾಗಿ ಸಿನಿಮಾ ರಂಗಕ್ಕೆ ಎಂಟ್ರಿ ಕೊಡುತ್ತಿದ್ದಾರೆ. ಹೊಂಬಾಳೆ ಫಿಲ್ಮ್ಸ್ (Hombale Films)ಬ್ಯಾನರ್ ನಲ್ಲಿ ಸಿನಿಮಾ ಮೂಡಿ ಬರಲಿದೆ.  ಪುನೀತ್ ರಾಜಕುಮಾರ್ ಜೊತೆ ಒಳ್ಳೆಯ ಬಾಂಧವ್ಯ ಹಾಗೂ ಅವರ ಎರಡು ಸಿನಿಮಾಗಳನ್ನು ನಿರ್ದೇಶನ ಮಾಡಿರುವ ಸಂತೋಷ್ ಆನಂದ್ ರಾಮ್ (Santhosh Anand Ram) ಈ ಸಿನಿಮಾವನ್ನು ನಿರ್ದೇಶನ ಮಾಡುತ್ತಿದ್ದರೆ, ನುರಿತ ತಂತ್ರಜ್ಞರ ತಂಡವೇ ಸಿನಿಮಾದಲ್ಲಿದೆ. ಇದನ್ನೂ ಓದಿ:`ಸಿಟಾಡೆಲ್’ ಫಸ್ಟ್ ಲುಕ್ ಔಟ್: ಆ್ಯಕ್ಷನ್ ಅವತಾರದಲ್ಲಿ ಪ್ರಿಯಾಂಕಾ ಚೋಪ್ರಾ

    ಅಂದುಕೊಂಡಂತೆ ಆಗಿದ್ದರೆ ಯುವರಾಜಕುಮಾರ್ ಈ ಹಿಂದೆಯೇ ಲಾಂಚ್ ಆಗಬೇಕಿತ್ತು. ಯುವಗಾಗಿಯೇ ‘ಯುವ ರಣಧೀರ ಕಂಠೀರವ’ ಸಿನಿಮಾ ಮಾಡಲು ಹೊರಟಿದ್ದರು ಜಾಕಿ ತಿಮ್ಮಯ್ಯ. ಸಾಕಷ್ಟು ಹಣ ಖರ್ಚು ಮಾಡಿ ಟೀಸರ್ ಕೂಡ ರಿಲೀಸ್ ಮಾಡಿದ್ದರು. ಆದರೆ, ಆ ಸಿನಿಮಾ ಮುಂದುವರೆಯಲಿಲ್ಲ. ಈ ಕಾರಣದಿಂದಾಗಿ ಸಂತೋಷ್ ಆನಂದ್ ರಾವ್ ಅವರ ಚಿತ್ರವೇ ಯುವ ನಟನೆಯ ಚೊಚ್ಚಲು ಸಿನಿಮಾವಾಗಲಿದೆ.

  • ರಾಜವರ್ಧನ್ ನಟನೆಯ ‘ಪ್ರಣಯಂ’  ಫಸ್ಟ್ ಲುಕ್ ಟೀಸರ್ ರಿಲೀಸ್

    ರಾಜವರ್ಧನ್ ನಟನೆಯ ‘ಪ್ರಣಯಂ’ ಫಸ್ಟ್ ಲುಕ್ ಟೀಸರ್ ರಿಲೀಸ್

    ಲ್ಲಕ್ಕಿ, ಗಣಪ, ಕರಿಯಾ 2, ಪಾರಿಜಾತದಂಥ ಯಶಸ್ವಿ ಚಿತ್ರಗಳನ್ನು ನಿರ್ಮಿಸಿದ ಪರಮೇಶ್ ಬಹಳ ದಿನಗಳ ನಂತರ ಮತ್ತೊಂದು ಲವ್ ಸ್ಟೋರಿಯೊಂದಿಗೆ ಬಂದಿದ್ದಾರೆ. “ಪ್ರಣಯಂ” (Pranayam) ಹೆಸರಿನ ಆ ಚಿತ್ರಕ್ಕೆ ದತ್ತಾತ್ರೇಯ ಆಕ್ಷನ್ ಕಟ್ ಹೇಳಿದ್ದಾರೆ.  ನಿಶ್ಚಿತಾರ್ಥವಾದ ನವಜೋಡಿಗಳ ನಡುವಿನ ಪ್ರೀತಿ ಪ್ರೇಮದ ಕಥೆಯಿದಾಗಿದ್ದು, ಯುವ ನಟ ರಾಜವರ್ಧನ್ (Rajavardhan), ನೈನಾ ಗಂಗೂಲಿ ಚಿತ್ರದ  ನಾಯಕ, ನಾಯಕಿಯಾಗಿ ಅಭಿನಯಿಸಿದ್ದಾರೆ.  ಈಗಾಗಲೇ ಚಿತ್ರದ  ಚಿತ್ರೀಕರಣ ಪೂರ್ಣಗೊಂಡಿದ್ದು,  ಬಿಡುಗಡೆಯ  ಹಂತಕ್ಕೆ ಬಂದಿದೆ. ಈ ಚಿತ್ರದ ಟೀಸರ್ ಬಿಡುಗಡೆ ಕಾರ್ಯಕ್ರಮ ಇತ್ತೀಚಿಗೆ ನೆರವೇರಿತು.

    ನಿರ್ಮಾಪಕ ಪರಮೇಶ್ ಮಾತನಾಡಿ, ಈ ಕಥೆಯನ್ನು ಬಹಳ ದಿನಗಳಿಂದ ಇಟ್ಟುಕೊಂಡಿದ್ದೆ. ದತ್ತಾತ್ರೇಯ ಸಿಕ್ಕನಂತರ ಇದರ ಸ್ಕ್ರಿಪ್ಟ್ ಮಾಡಿಕೊಂಡು ಬಂದದ್ದು. ನಾನು ಈವರೆಗೂ ಹೊಸಬರನ್ನೇ ಇಟ್ಟುಕೊಂಡು ಸಿನಿಮಾ ಮಾಡಿಕೊಂಡು ಬಂದವನು. ಈ ಸಿನಿಮಾದಲ್ಲೂ ಬಹುತೇಕ ಹೊಸಬರಿದ್ದಾರೆ. ಚಿತ್ರಕ್ಕೆ ನಾಯಕಿಯರಾಗಿ ರಚಿತಾರಾಮ್, ಆಶಿಕಾ ರಂಗನಾಥ್ ಹೀಗೆ ಬಹಳಷ್ಟು ಜನರನ್ನು ಕೇಳಿದ್ದೆವು. ಕೊನೆಗೆ ನಯನಾ ಗಂಗೂಲಿ ಬಂದರು. ಅವರು ತುಂಬಾ ಚೆನ್ನಾಗಿ  ಪರ್ಫಾಮೆನ್ಸ್, ಮಾಡಿದ್ದಾರೆ. ಪ್ರಯಣಂ, ನಿಶ್ಚಿತಾರ್ಥದಿಂದ ಮದುವೆ ಆಗುವವರೆಗೆ  ನಡೆಯುವ ಕಥೆ. ಏಪ್ರಿಲ್‍ನಲ್ಲಿ ಚಿತ್ರವನ್ನು ತೆರೆಗೆ ತರುವ ಉದ್ದೇಶವಿದೆ. ತೆಲುಗು, ತಮಿಳು, ಮಲಯಾಳಂನಲ್ಲಿ ಕೆಲವರ ಜೊತೆ ಡಬ್ಬಿಂಗ್ ಕುರಿತು ಮಾತಾಡಿದ್ದೇನೆ. ಎಲ್ಲ ಕಲಾವಿದರ ಸಹಕಾರದಿಂದ ಚಿತ್ರ ಚೆನ್ನಾಗಿ ಬಂದಿದೆ ಎಂದರು. ಇದನ್ನೂ ಓದಿ: ಪವನ್ ಕಲ್ಯಾಣ್ ಚಿತ್ರದಲ್ಲಿ ಸೊಂಟ ಬಳುಕಿಸಲು ಸಜ್ಜಾದ ನಟಿ ಶ್ರೀಲೀಲಾ

    ನಿರ್ದೇಶಕ ದತ್ತಾತ್ರೇಯ ಮಾತನಾಡುತ್ತ ಕಳೆದ 15 ವರ್ಷದಿಂದ ಭಗವಾನ್, ರಾಮನಾಥ ಋಗ್ವೇದಿ ಇತರರ ಜೊತೆ ವರ್ಕ್ ಮಾಡಿದ್ದೇನೆ. ಚಿಕ್ಕಮಗಳೂರು, ಮಡಿಕೇರಿಯಂಥ ಸುಂದರ ಲೊಕೇಶನ್ ಗಳಲ್ಲಿ  ಚಿತ್ರದ ಚಿತ್ರೀಕರಣ ನಡೆಸಲಾಗಿದೆ. ಎಲ್ಲರೂ ಚಿತ್ರವನ್ನು ಇಷ್ಟ ಪಡುತ್ತಾರೆ ಎನ್ನುವ ವಿಶ್ವಾಸ ವ್ಯಕ್ತಡಿಸಿದರು. ಕಲಾವಿದರಾದ ಗೋವಿಂದೇಗೌಡ,  ಮಂಥನ, ಪ್ರಶಾಂತ್, ಸಮೀಕ್ಷಾ, ಪ್ರಿಯಾ ತರುಣ್, ನೃತ್ಯ ನಿರ್ದೇಶಕರಾದ ಮದನ್ ಹರಿಣಿ ಸೇರಿದಂತೆ ಅನೇಕರಿಗೆ ನಿರ್ಮಾಪಕ ಪರಮೇಶ್ ಚಿತ್ರ ಆರಂಭಕ್ಕೂ ಮುನ್ನವೇ ಸಂಭಾವನೆಯನ್ನು ಚೆಕ್ ಮೂಲಕ ನೀಡಿದ್ದರು. ಇದು ಖುಷಿ ಪಡುವ ಸಂಗತಿ. ಇದರ ಜೊತೆಗೆ ಚಿತ್ರದ ಸಣ್ಣ ಸಣ್ಣ ವಿಷಯಗಳ ಬಗ್ಗೆ ಕಾಳಜಿ ವಹಿಸುತ್ತಿದ್ದರು ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

    ನಾಯಕ ರಾಜವರ್ಧನ್ ಮಾತನಾಡಿ,  ಇದುವರೆಗೂ ಆಕ್ಷನ್ ಚಿತ್ರಗಳನ್ನೇ ಮಾಡುತ್ತಿದ್ದೆ. ಈ ಚಿತ್ರದಲ್ಲಿ ಒಬ್ಬ ಲವರ್ ಬಾಯ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದೇನೆ. ಪಾತ್ರ ಹೊಸತನದಿಂದ ಕೂಡಿದೆ. ಚಿತ್ರ ನೋಡಿದ ಎಲ್ಲರಿಗೂ ಇಷ್ಟವಾಗಲಿದೆ ಎಂದು ಮಾಹಿತಿ ನೀಡಿದರು.  ಮನೋಮೂರ್ತಿ ಅವರ  ಸಂಗೀತ ನಿರ್ದೇಶನ, ವಿ. ನಾಗೇಶ್ ಆಚಾರ್ಯ ಅವರ ಛಾಯಾಗ್ರಹಣ. ಮದನ್ ಹರಿಣಿ ಅವರ ನೃತ್ಯ ನಿರ್ದೇಶನ, ಥ್ರಿಲ್ಲರ್ ಮಂಜು, ಮಾಸ್ ಮಾದ ಅವರ ಸಾಹಸ ನಿರ್ದೇಶನ ಪ್ರಣಯಂ  ಚಿತ್ರಕ್ಕಿದೆ.

  • ಮಾರ್ಟಿನ್ ಟೀಸರ್ ಟ್ರೆಂಡಿಂಗ್ : ಸ್ಟಾರ್ ಜೊತೆ ಪೈಪೋಟಿ ಇಲ್ಲ ಎಂದ ಧ್ರುವ ಸರ್ಜಾ

    ಮಾರ್ಟಿನ್ ಟೀಸರ್ ಟ್ರೆಂಡಿಂಗ್ : ಸ್ಟಾರ್ ಜೊತೆ ಪೈಪೋಟಿ ಇಲ್ಲ ಎಂದ ಧ್ರುವ ಸರ್ಜಾ

    ನ್ನಡದ ಹೆಸರಾಂತ ನಟ ಧ್ರುವ ಸರ್ಜಾ (Dhruva Sarja) ನಟನೆಯ ‘ಮಾರ್ಟಿನ್’ (Martin) ಸಿನಿಮಾದ ಟೀಸರ್ (Teaser) ಎರಡ್ಮೂರು ದಿನಗಳಿಂದ ಟ್ರೆಂಡಿಂಗ್ ನಲ್ಲಿದೆ. ಕೋಟಿ ಕೋಟಿ ವೀಕ್ಷಣೆ ಪಡೆದುಕೊಂಡಿದೆ. ಕೇವಲ ಕನ್ನಡದಲ್ಲಿ ಮಾತ್ರವಲ್ಲ, ಇತರ ಭಾಷೆಗಳಲ್ಲೂ ಸಿನಿಮಾ ಬಗ್ಗೆ ಮಾತನಾಡುವಂತಾಗಿದೆ. ಹಾಗಾಗಿ ಧ್ರುವ ಸರ್ಜಾ ಬೇರೆ ಸ್ಟಾರ್ ನಟರ ಜೊತೆ ಪೈಪೋಟಿಗೆ ಇಳಿದಿದ್ದಾರೆ ಎನ್ನುವ ಮಾತು ಕೇಳಿ ಬರುತ್ತಿದೆ.

    ಈ ಹಿಂದಿ ಕನ್ನಡದ ಚಾರ್ಲಿ 777, ಕೆಜಿಎಫ್ 2, ಕಾಂತಾರ, ಕಬ್ಜ, ವಿಕ್ರಾಂತ್ ರೋಣ ಸಿನಿಮಾದ ಟೀಸರ್ ಗಳು ಕೂಡ ಟ್ರೆಂಡಿಂಗ್ ಆಗಿದ್ದವು. ರಕ್ಷಿತ್ ಶೆಟ್ಟಿ, ರಿಷಬ್ ಶೆಟ್ಟಿ, ಯಶ್, ಉಪೇಂದ್ರ ಹಾಗೂ ಸುದೀಪ್ ಕೂಡ ಭಾರತೀಯ ಸಿನಿಮಾ ರಂಗದ ಹೆಸರಾಂತ ನಟರ ಜೊತೆ ಪೈಪೋಟಿಗೆ ಇಳಿದಿದ್ದರು. ಕನ್ನಡದ ಬಹುತೇಕ ಚಿತ್ರಗಳು ಬಾಕ್ಸ್ ಆಫೀಸಿನಲ್ಲಿ ಧೂಳ್ ಎಬ್ಬಿಸಿದ್ದವು. ಇದೀಗ ಮಾರ್ಟಿನ್ ಆ ಸಿನಿಮಾದ ಸಾಲಿಗೆ ಸೇರುವ ಎಲ್ಲ ಲಕ್ಷಣಗಳು ಗೋಚರಿಸುತ್ತಿವೆ.  ಇದನ್ನೂ ಓದಿ: ಹೊಂಬಾಳೆ ಫಿಲ್ಮ್ ಯುವ ಚಿತ್ರಕ್ಕೆ ರುಕ್ಮಿಣಿ ವಸಂತ್ ನಾಯಕಿನಾ? ಸ್ಪಷ್ಟನೆ ನೀಡಿದ ನಟಿ

    ಮಾರ್ಟಿನ್ ಸಿನಿಮಾ ರಾಷ್ಟ್ರ ಮಟ್ಟದಲ್ಲಿ ಭಾರೀ ಸದ್ದು ಮಾಡುತ್ತಿದ್ದಂತೆಯೇ ಧ್ರುವ ಸರ್ಜಾ ಕೂಡ ಭಾರತೀಯ ಸಿನಿಮಾ ರಂಗದ ಸ್ಟಾರ್ ನಟರ ಜೊತೆ ಪೈಪೋಟಿಗೆ ಇಳಿದಿದ್ದಾರೆ ಎನ್ನುವ ಮಾತು ಬಂದಿದ್ದು ಸಹಜ. ಅದಕ್ಕೆ ಸ್ವತಃ ಧ್ರುವ ಅವರೇ ಉತ್ತರ ನೀಡಿದ್ದಾರೆ. ತಾವು ಯಾವುದೇ ಕಾರಣಕ್ಕೂ ಯಾವುದೇ ನಟರ ಜೊತೆ ಪೈಪೋಟಿಗೆ ಇಳಿಯಲಾರೆ. ನನ್ನ ಸಿನಿಮಾ ಮತ್ತು ನಾನು ಅಂದಷ್ಟೇ ಉತ್ತರಿಸಿದ್ದಾರೆ.

    ಎ.ಪಿ ಅರ್ಜುನ್ ಮತ್ತು ಧ್ರುವ ಕಾಂಬಿನೇಷನ್ ನ ಚಿತ್ರಗಳು ಗೆಲ್ಲುತ್ತವೆ ಎನ್ನುವುದು ಈಗಾಗಲೇ ಸಾಬೀತಾಗಿದೆ. ಹಾಗಾಗಿ ಮಾರ್ಟಿನ್ ಕೂಡ ಭರ್ಜರಿ ಗೆಲ್ಲುತ್ತದೆ ಎಂದು ಸಿನಿ ಪಂಡಿತರ ಲೆಕ್ಕಾಚಾರ. ಹಲವು ಭಾಷೆಗಳಲ್ಲಿ ಏಕಕಾಲಕ್ಕೆ ಸಿನಿಮಾ ರಿಲೀಸ್ ಆಗಲಿದ್ದು, ಅದಕ್ಕಾಗಿ ಚಿತ್ರತಂಡ ಸಿದ್ಧತೆ ಮಾಡಿಕೊಳ್ಳುತ್ತಿದೆ.

  • ಟೀಸರ್ ನಿಂದ ಬಂದ ಹಣವನ್ನು ಗೋಶಾಲೆಗೆ ನೀಡುವೆವು : ಮಾರ್ಟಿನ್ ನಿರ್ದೇಶಕ ಅರ್ಜುನ್ ಘೋಷಣೆ

    ಟೀಸರ್ ನಿಂದ ಬಂದ ಹಣವನ್ನು ಗೋಶಾಲೆಗೆ ನೀಡುವೆವು : ಮಾರ್ಟಿನ್ ನಿರ್ದೇಶಕ ಅರ್ಜುನ್ ಘೋಷಣೆ

    ಧ್ರುವ ಸರ್ಜಾ (Dhruva Sarja) ನಟನೆಯ ಮಾರ್ಟಿನ್ (Martin) ಟೀಸರ್ (Teaser) ನಿನ್ನೆಯಷ್ಟೇ ಬಿಡುಗಡೆಯಾಗಿದೆ. ಸೋಷಿಯಲ್ ಮೀಡಿಯಾದಲ್ಲಿ ಸಖತ್ ರೆಸ್ಪಾನ್ಸ್ ಬಂದಿದೆ. ಅಲ್ಲದೇ ಇದೇ ಮೊದಲ ಬಾರಿಗೆ ಟೀಸರ್ ಅನ್ನು ಟಿಕೆಟ್ ಖರೀದಿಸಿ ನೋಡುವಂತಹ ವ್ಯವಸ್ಥೆಯನ್ನು ಚಿತ್ರತಂಡ ಮಾಡಿತ್ತು. ಅದರಿಂದ ಬಂದ ಹಣವನ್ನು ಒಳ್ಳೆಯ ಕೆಲಸಕ್ಕೆ ಉಪಯೋಗಿಸುವುದಾಗಿ ನಿರ್ದೇಶಕ ಎ.ಪಿ.ಅರ್ಜುನ್ ತಿಳಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು ಟೀಸರ್ ನಿಂದ ಬಂದ ಹಣವನ್ನು ಗೋಶಾಲೆಗಳಿಗೆ ನೀಡುವುದಾಗಿ ತಿಳಿಸಿದ್ದಾರೆ.

    ಕನ್ನಡದ ಮತ್ತೊಂದು ಸಿನಿಮಾ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಸಖತ್ ಸದ್ದು ಮಾಡುತ್ತಿದೆ. ಧ್ರುವ ಸರ್ಜಾ ನಟನೆಯ ಮಾರ್ಟಿನ್ ಸಿನಿಮಾದ ಟೀಸರ್ ನಿನ್ನೆ ಬಿಡುಗಡೆಯಾಗಿದ್ದು, ಟೀಸರ್ ನೋಡಿದ ಪರಭಾಷಾ ನಟರು ಹಾಗೂ ತಂತ್ರಜ್ಞರು ಅಭಿನಂದನೆಯ ಸುರಿಮಳೆಗೈದಿದ್ದಾರೆ. ಕನ್ನಡದಲ್ಲಿ ಈ ಮಟ್ಟದ ಚಿತ್ರಗಳು ಬರುತ್ತಿರುವುದಕ್ಕೆ ಅಕ್ಷರಶಃ ಬಾಲಿವುಡ್ ಕಂಗಾಲಾಗಿದೆ. ಈಗಾಗಲೇ ಕೆಜಿಎಫ್, ಕಾಂತಾರ ಸಿನಿಮಾಗಳು ಬಾಕ್ಸ್ ಆಫೀಸಿನಲ್ಲಿ ಸಖತ್ ಸದ್ದು ಮಾಡಿವೆ. ಕಬ್ಜ ಸಿನಿಮಾ ಇನ್ನಷ್ಟೇ ರಿಲೀಸ್ ಆಗುತ್ತಿದೆ. ನಂತರ ಮಾರ್ಟಿನ್ ಮತ್ತೆ ಬಾಲಿವುಡ್ ಅನ್ನು ನಿದ್ದೆಗೆಡಿಸಲಿದೆ.

    ಧ್ರುವ ಸರ್ಜಾ ಮತ್ತು ಎ.ಪಿ.ಅರ್ಜುನ್ ಕಾಂಬಿನೇಷನ್ ನ ಮಾರ್ಟಿನ್ ಸಿನಿಮಾದ ಟೀಸರ್ ನಿನ್ನೆ ಬಿಡುಗಡೆ ಆಗಿದೆ. ಈ ಟೀಸರ್ ನೋಡಲೆಂದೇ ಅಭಿಮಾನಿಗಳು ತುದಿಗಾಲಲ್ಲಿ ನಿಂತಿದ್ದರು. ಇದೇ ಮೊದಲ ಬಾರಿಗೆ ಟೀಸರ್ ನೋಡುವುದಕ್ಕಾಗಿ ಟಿಕೆಟ್ ಖರೀದಿಸಬೇಕಿತ್ತು. ಟೀಸರ್ ನೋಡಿದ ನಂತರ ಟಿಕೆಟ್ ಹಣಕ್ಕೆ ಮೋಸವಾಗಿಲ್ಲ ಎಂದಿದ್ದಾರೆ ಅಭಿಮಾನಿಗಳು. ಆ ರೀತಿಯಲ್ಲಿ ಟೀಸರ್ ಅದ್ಭುತವಾಗಿ ಮೂಡಿ ಬಂದಿದೆ. ಇದನ್ನೂ ಓದಿ: ಹೊಂಬಾಳೆ ಫಿಲ್ಮ್ ಯುವ ಚಿತ್ರಕ್ಕೆ ರುಕ್ಮಿಣಿ ವಸಂತ್ ನಾಯಕಿನಾ? ಸ್ಪಷ್ಟನೆ ನೀಡಿದ ನಟಿ

    ಮಾರ್ಟಿನ್ ಸಾಹಸ ಪ್ರಧಾನ ಸಿನಿಮಾ ಎನ್ನುವುದು ಟೀಸರ್ ನ ಪ್ರತಿ ಫ್ರೇಮ್ ಹೇಳುತ್ತದೆ. ಅದರಲ್ಲೂ ಅಚ್ಚರಿ ಮೂಡುವಂತಹ ಮೈಕಟ್ಟಿನ ಧ್ರುವ ಸರ್ಜಾ ಎದುರಾಳಿಗಳನ್ನು ಕುಟ್ಟಿ ಪುಡಿ ಮಾಡುವುದನ್ನು ನೋಡುವುದೇ ರೋಮಾಂಚನ. ಆ ಮಟ್ಟಿಗೆ ಚಿತ್ರದಲ್ಲಿ ತಮ್ಮ ಇರುವಿಕೆಯನ್ನು ತೋರಿಸಿದ್ದಾರೆ ಧ್ರುವ ಸರ್ಜಾ. ಟೀಸರ್ ತುಂಬಾ ಹೊಡೆದಾಟ, ಬಂದೂಕು, ಬಾಂಬುಗಳೇ ಘರ್ಜಿಸಿವೆ. ಅದರಲ್ಲೂ ಕಾರ್ ಚೇಸ್ ದೃಶ್ಯ ಮತ್ತಷ್ಟು ಸಿನಿಮಾದ ತೂಕವನ್ನು ಹೆಚ್ಚಿಸಿದೆ.

    ಪಾಕಿಸ್ತಾನದ ಜೈಲಿನಲ್ಲಿ ಬಂಧಿಯಾಗಿರುವ ನಾಯಕ. ಆ ನಾಯಕನ ಸುತ್ತ ಹೆಣೆದಿರುವ ಕಥೆ ಮಾರ್ಟಿನ್ ಎನ್ನುವುದು ಮೇಲ್ನೋಟಕ್ಕೆ ಗೊತ್ತಾಗುತ್ತಿದೆ. ಭಾರತಕ್ಕೂ ಮತ್ತು ಪಾಕಿಸ್ತಾನದಲ್ಲಿ ಬಂಧಿಯಾಗಿರುವ ನಾಯಕನಿಗೆ ಕನೆಕ್ಷನ್ ಏನಿರಲಿದೆ ಎನ್ನುವುದು ಕುತೂಹಲದ ಪ್ರಶ್ನೆ. ಒಟ್ಟಿನಲ್ಲಿ ಸಿನಿಮಾ ಅದ್ಧೂರಿಯಾಗಿ ಮೂಡಿ ಬಂದಿದೆ. ನಿರ್ದೇಶಕರ ಶ್ರಮವೂ ಎದ್ದು ಕಾಣುತ್ತದೆ. ಈ ಸಿನಿಮಾ ಕೂಡ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಬಿಡುಗಡೆ ಆಗುತ್ತಿರುವುದರಿಂದ ಮತ್ತೊಂದು ಕನ್ನಡ ಸಿನಿಮಾ ಭಾರತದಾದ್ಯಂತ ಹವಾ ಸೃಷ್ಟಿ ಮಾಡಲಿದೆ.

    LIVE TV
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಬಾಲಿವುಡ್ ನಿದ್ದೆಗೆಡಿಸಿದ ಧ್ರುವ ಸರ್ಜಾ ನಟನೆಯ ‘ಮಾರ್ಟಿನ್’ ಟೀಸರ್

    ಬಾಲಿವುಡ್ ನಿದ್ದೆಗೆಡಿಸಿದ ಧ್ರುವ ಸರ್ಜಾ ನಟನೆಯ ‘ಮಾರ್ಟಿನ್’ ಟೀಸರ್

    ನ್ನಡದ ಮತ್ತೊಂದು ಸಿನಿಮಾ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಸಖತ್ ಸದ್ದು ಮಾಡುತ್ತಿದೆ. ಧ್ರುವ ಸರ್ಜಾ (Dhruva Sarja) ನಟನೆಯ ಮಾರ್ಟಿನ್ (Martin) ಸಿನಿಮಾದ ಟೀಸರ್ ನಿನ್ನೆ ಬಿಡುಗಡೆಯಾಗಿದ್ದು, ಟೀಸರ್ (Teaser) ನೋಡಿದ ಪರಭಾಷಾ ನಟರು ಹಾಗೂ ತಂತ್ರಜ್ಞರು ಅಭಿನಂದನೆಯ ಸುರಿಮಳೆಗೈದಿದ್ದಾರೆ. ಕನ್ನಡದಲ್ಲಿ ಈ ಮಟ್ಟದ ಚಿತ್ರಗಳು ಬರುತ್ತಿರುವುದಕ್ಕೆ ಅಕ್ಷರಶಃ ಬಾಲಿವುಡ್ ಕಂಗಾಲಾಗಿದೆ. ಈಗಾಗಲೇ ಕೆಜಿಎಫ್, ಕಾಂತಾರ ಸಿನಿಮಾಗಳು ಬಾಕ್ಸ್ ಆಫೀಸಿನಲ್ಲಿ ಸಖತ್ ಸದ್ದು ಮಾಡಿವೆ. ಕಬ್ಜ ಸಿನಿಮಾ ಇನ್ನಷ್ಟೇ ರಿಲೀಸ್ ಆಗುತ್ತಿದೆ. ನಂತರ ಮಾರ್ಟಿನ್ ಮತ್ತೆ ಬಾಲಿವುಡ್ (Bollywood) ಅನ್ನು ನಿದ್ದೆಗೆಡಿಸಲಿದೆ.

    ಧ್ರುವ ಸರ್ಜಾ ಮತ್ತು ಎ.ಪಿ.ಅರ್ಜುನ್ ಕಾಂಬಿನೇಷನ್ ನ ಮಾರ್ಟಿನ್ ಸಿನಿಮಾದ ಟೀಸರ್ ನಿನ್ನೆ ಬಿಡುಗಡೆ ಆಗಿದೆ. ಈ ಟೀಸರ್ ನೋಡಲೆಂದೇ ಅಭಿಮಾನಿಗಳು ತುದಿಗಾಲಲ್ಲಿ ನಿಂತಿದ್ದರು. ಇದೇ ಮೊದಲ ಬಾರಿಗೆ ಟೀಸರ್ ನೋಡುವುದಕ್ಕಾಗಿ ಟಿಕೆಟ್ ಖರೀದಿಸಬೇಕಿತ್ತು. ಟೀಸರ್ ನೋಡಿದ ನಂತರ ಟಿಕೆಟ್ ಹಣಕ್ಕೆ ಮೋಸವಾಗಿಲ್ಲ ಎಂದಿದ್ದಾರೆ ಅಭಿಮಾನಿಗಳು. ಆ ರೀತಿಯಲ್ಲಿ ಟೀಸರ್ ಅದ್ಭುತವಾಗಿ ಮೂಡಿ ಬಂದಿದೆ.

    ಮಾರ್ಟಿನ್ ಸಾಹಸ ಪ್ರಧಾನ ಸಿನಿಮಾ ಎನ್ನುವುದು ಟೀಸರ್ ನ ಪ್ರತಿ ಫ್ರೇಮ್ ಹೇಳುತ್ತದೆ. ಅದರಲ್ಲೂ ಅಚ್ಚರಿ ಮೂಡುವಂತಹ ಮೈಕಟ್ಟಿನ ಧ್ರುವ ಸರ್ಜಾ ಎದುರಾಳಿಗಳನ್ನು ಕುಟ್ಟಿ ಪುಡಿ ಮಾಡುವುದನ್ನು ನೋಡುವುದೇ ರೋಮಾಂಚನ. ಆ ಮಟ್ಟಿಗೆ ಚಿತ್ರದಲ್ಲಿ ತಮ್ಮ ಇರುವಿಕೆಯನ್ನು ತೋರಿಸಿದ್ದಾರೆ ಧ್ರುವ ಸರ್ಜಾ. ಟೀಸರ್ ತುಂಬಾ ಹೊಡೆದಾಟ, ಬಂದೂಕು, ಬಾಂಬುಗಳೇ ಘರ್ಜಿಸಿವೆ. ಅದರಲ್ಲೂ ಕಾರ್ ಚೇಸ್ ದೃಶ್ಯ ಮತ್ತಷ್ಟು ಸಿನಿಮಾದ ತೂಕವನ್ನು ಹೆಚ್ಚಿಸಿದೆ.

    ಪಾಕಿಸ್ತಾನದ ಜೈಲಿನಲ್ಲಿ ಬಂಧಿಯಾಗಿರುವ ನಾಯಕ. ಆ ನಾಯಕನ ಸುತ್ತ ಹೆಣೆದಿರುವ ಕಥೆ ಮಾರ್ಟಿನ್ ಎನ್ನುವುದು ಮೇಲ್ನೋಟಕ್ಕೆ ಗೊತ್ತಾಗುತ್ತಿದೆ. ಭಾರತಕ್ಕೂ ಮತ್ತು ಪಾಕಿಸ್ತಾನದಲ್ಲಿ ಬಂಧಿಯಾಗಿರುವ ನಾಯಕನಿಗೆ ಕನೆಕ್ಷನ್ ಏನಿರಲಿದೆ ಎನ್ನುವುದು ಕುತೂಹಲದ ಪ್ರಶ್ನೆ. ಒಟ್ಟಿನಲ್ಲಿ ಸಿನಿಮಾ ಅದ್ಧೂರಿಯಾಗಿ ಮೂಡಿ ಬಂದಿದೆ. ನಿರ್ದೇಶಕರ ಶ್ರಮವೂ ಎದ್ದು ಕಾಣುತ್ತದೆ. ಈ ಸಿನಿಮಾ ಕೂಡ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಬಿಡುಗಡೆ ಆಗುತ್ತಿರುವುದರಿಂದ ಮತ್ತೊಂದು ಕನ್ನಡ ಸಿನಿಮಾ ಭಾರತದಾದ್ಯಂತ ಹವಾ ಸೃಷ್ಟಿ ಮಾಡಲಿದೆ.

    LIVE TV
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಫೆ.23ಕ್ಕೆ ಧ್ರುವ ಸರ್ಜಾ ನಟನೆಯ ‘ಮಾರ್ಟಿನ್’ ಟೀಸರ್

    ಫೆ.23ಕ್ಕೆ ಧ್ರುವ ಸರ್ಜಾ ನಟನೆಯ ‘ಮಾರ್ಟಿನ್’ ಟೀಸರ್

    ಧ್ರುವ ಸರ್ಜಾ (Dhruva Sarja) ಅಭಿನಯದ ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಚಿತ್ರ ಮಾರ್ಟಿನ್. ಎ.ಪಿ. ಅರ್ಜುನ್‌ (AP Arjun)  ನಿರ್ದೇಶನದಲ್ಲಿ ಮೂಡಿ ಬರುತ್ತಿರುವ  ಈ ಚಿತ್ರವನ್ನು ವಾಸವಿ ಎಂಟರ್ ಪ್ರೈಸಸ್ ಅಡಿಯಲ್ಲಿ  ಉದಯ್ ಕೆ.ಮೆಹ್ತಾ ಅವರು ನಿರ್ಮಿಸುತ್ತಿರುವ  9ನೇ ಚಿತ್ರ ಇದಾಗಿದೆ, ಮಾರ್ಟಿನ್ ಚಿತ್ರದ  ಪ್ಯಾನ್ ಇಂಡಿಯಾ ಟೀಸರ್ (Teaser) ಇದೇ ತಿಂಗಳ 23ರಂದು ಅದ್ದೂರಿಯಾಗಿ ಬಿಡುಗಡೆಯಾಗುತ್ತಿದೆ. ಈ ಕುರಿತು ಮಾಹಿತಿ ನೀಡಲು ಕರೆದಿದ್ದ ಪತ್ರಿಕಾಗೋಷ್ಟಿಯಲ್ಲಿ  ಹಾಜರಿದ್ದ ಚಿತ್ರತಂಡ ಒಂದಷ್ಟು ಮಾಹಿತಿಗಳನ್ನು ಹಂಚಿಕೊಂಡಿತು.

    ಮೊದಲು ಮಾತನಾಡಿದ ನಿರ್ಮಾಪಕ ಉದಯ್ ಕೆ.ಮೆಹ್ತಾ ಕಳೆದ ಆಗಸ್ಟ್ 15ಕ್ಕೆ ನಮ್ಮ ಚಿತ್ರದ ಫಸ್ಟ್ ಲುಕ್ ಬಿಡುಗಡೆ ಮಾಡುವುದರೊಂದಿಗೆ ಚಿತ್ರವನ್ನು ಆರಂಭಿಸಿದೆವು. ಈಗಾಗಲೇ ಚಿತ್ರದ ಟಾಕಿ ಪೋರ್ಷನ್ ಮುಗಿದಿದ್ದು, ಹಾಡುಗಳ ಚಿತ್ರೀಕರಣ ಮಾತ್ರ ಬಾಕಿ ಇದೆ. ಫೆ.23ರಂದು ವಿಐಪಿ ಅಭಿಮಾನಿಗಳಿಗೋಸ್ಕರ ಪೇಯ್ಡ್ ಪ್ರೀಮಿಯರ್ ಟೀಸರ್ ಪ್ರದರ್ಶನವನ್ನು ವೀರೇಶ್  ಚಿತ್ರಮಂದಿರದಲ್ಲಿ ಏರ್ಪಡಿಸಿದ್ದೇವೆ. ಹಾಗಂತ ಇದರಿಂದ ಹಣ ಮಾಡುವ ಉದ್ದೇಶವಿಲ್ಲ, ಚಿತ್ರಮಂದಿರದಲ್ಲಿ ಹೆವಿ ಕ್ರೌಡ್ ಆಗಬಾರದೆಂಬ ಉದ್ದೇಶ ನಮ್ಮದು.  ಇದರಿಂದ ಬಂದ ಹಣವನ್ನು ಗೋಶಾಲೆಗೆ ಕೊಡುತ್ತಿದ್ದೇವೆ. ಅಲ್ಲದೆ ಅದೇ ದಿನ ಸಂಜೆ ತಮ್ಮ ಮೊಬೈಲ್‌ಗಳಲ್ಲೇ ಅಭಿಮಾನಿಗಳು ಮಾರ್ಟಿನ್ ಟೀಸರ್ ನೋಡಬಹುದು. ಅಲ್ಲದೆ 5 ಭಾಷೆಗಳಲ್ಲಿ  ನಿರ್ಮಾಣವಾಗುತ್ತಿರುವ ಚಿತ್ರ ಇದಾಗಿರುವುದರಿಂದ ಬೇರೆ ಭಾಷೆಗಳ ಮಾದ್ಯಮದವರನ್ನು ಆಹ್ವಾನಿಸಿ ಪ್ಯಾನ್ ಇಂಡಿಯಾ ಪ್ರೆಸ್‌ಮೀಟ್ ಮಾಡುತ್ತಿದ್ದೇವೆ. ಆರಂಭದಲ್ಲಿ ನಮ್ಮ ಚಿತ್ರ ಇಷ್ಟು ದೊಡ್ಡ ಮಟ್ಟದಲ್ಲಿ ಆಗುತ್ತೆ ಅಂದುಕೊಂಡಿರಲಿಲ್ಲ, ಬರುಬರುತ್ತಾ ದೊಡ್ಡದಾಗುತ್ತಾ ಹೋಯಿತು ಎಂದು ಹೇಳಿದರು.  ಇದನ್ನೂ ಓದಿಬಾಲಯ್ಯ ಜೊತೆ ಸೊಂಟ ಬಳುಕಿಸಲು ಮಿಲ್ಕಿ ಬ್ಯೂಟಿಗೆ ಭರ್ಜರಿ ಸಂಭಾವನೆ

    ನಿರ್ದೇಶಕ ಎಪಿ. ಅರ್ಜುನ್ ಮಾತನಾಡುತ್ತ ಮಾರ್ಟಿನ್ ನಮ್ಮ ಕನ್ನಡದ ಸಿನಿಮಾ. ಮೊದಲು ನಮ್ಮವರ ಜೊತೆ ಮಾಹಿತಿ ಹಂಚಿಕೊಂಡು ನಂತರ ಬೇರೆಯವರ ಮುಂದೆ ಹೋಗುತ್ತಿದ್ದೇವೆ.  ಇದು ಎಲ್ಲಾ ಕಡೆಗೂ ಸಲ್ಲುವ ಯೂನಿವರ್ಸಲ್ ಕಥೆಯಾಗಿದ್ದರಿಂದ, ಬೇರೆ ಬೇರೆ ಭಾಷೆಗಳಲ್ಲಿ ನಿರ್ಮಿಸಿದ್ದೇವೆ, ಕಳೆದ 2021ರ ಸೆಪ್ಟೆಂಬರ್‌ನಲ್ಲಿ ಚಿತ್ರ ಆರಂಭವಾಯಿತು, ಇಷ್ಟುದಿನ, ಈ ಮಟ್ಟದಲ್ಲಿ ಆಗುತ್ತೆ ಅಂದ್ಕೊಂಡಿರಲಿಲ್ಲ,  ಹೈದರಾಬಾದ್‌ ನಲ್ಲಿ ಸೆಟ್ ಹಾಕಿ 45ದಿನ ಶೂಟ್ ಮಾಡಿದೆವು. ವೈಜಾಕ್‌ನಲ್ಲಿ ಚೇಸ್‌ಸೀನ್ 20 ದಿನಗಳವರೆಗೆ ಆಯಿತು, ಜೊತೆಗೆ  ಆಗಾಗ ಬರುತ್ತಿದ್ದ ಮಳೆಯಿಂದಲೂ ತಡವಾಯಿತು, ಇನ್ನು ಕಾಶ್ಮೀರದಲ್ಲಿ 25 ದಿನ  ಅಲ್ಲದೆ ಮುಂಬೈನಲ್ಲಿ ಚೇಸಿಂಗ್ ಸೀನ್  ಚಿತ್ರೀಕರಣ ಮಾಡಿಕೊಂಡು ಬಂದೆವು. ಒಂದೊಂದು ಕಡೆ ಶೂಟ್ ಮಾಡಿಕೊಂಡು ಬಂದಾಗಲೂ ಒಂದಷ್ಟು ದಿನ ಗ್ಯಾಪ್ ಬೇಕಾಯಿತು. ಚಿತ್ರದಲ್ಲಿ ಧ್ರುವ ಅವರಿಗೆ ತುಂಬಾ ಗೆಟಪ್ ಇದೆ, ನನ್ನ ಕೆರಿಯರ್‌ನಲ್ಲೇ ಅತಿದೊಡ್ಡ ಪವರ್ ಪ್ಯಾಕ್ಡ್ ಚಿತ್ರವಿದು. ವಿಶೇಷವಾದ ಮೋಕೋಬೋಟ್ ಕ್ಯಾಮೆರಾದಲ್ಲಿ  52 ದಿನ  ಕ್ಲೈಮ್ಯಾಕ್ಸ್ ಸೀನ್ ಚಿತ್ರೀಕರಿಸಿದ್ದೇವೆ.  ರಾಮ್ ಲಕ್ಷ್ಮಣ್ ಆಕ್ಷನ್ ಹಾಗೂ ರವಿವರ್ಮಾ ಚೇಸಿಂಗ್ ಸೀನ್ ಮಾಡಿದ್ದಾರೆ. ಸದ್ಯ ಚಿತ್ರದ ಪೋಸ್ಟ್ ಪ್ರೊಡಕ್ಷನ್ ಕೆಲಸ ನಡೆಯುತ್ತಿದೆ. ಪರೀಕ್ಷೆಗಳು, ಐಪಿಎಲ್, ಚುನಾವಣೆ ಮುಗಿದ ನಂತರ ಚಿತ್ರವನ್ನು ರಿಲೀಸ್ ಮಾಡುವ ಯೋಜನೆಯಿದೆ ಎಂದು ಹೇಳಿದರು.

    ನಾಯಕ ಧ್ರುವ ಮಾತನಾಡಿ 23ರ ಸಂಜೆ 5.55ಕ್ಕೆ ಲಹರಿ ಯುಟ್ಯೂಬ್ ಚಾನೆಲ್‌ನಲ್ಲಿ ನಮ್ಮ ಚಿತ್ರದ ಟೀಸರ್ ರಿಲೀಸಾಗುತ್ತಿದೆ. ಈ ಚಿತ್ರದಲ್ಲಿ ನನ್ನ ಪಾತ್ರ ಈವರೆಗೆ ಮಾಡಿದ್ದಕ್ಕಿಂತ ಬೇರೆ ಥರನೇ ಇದೆ. ಇಡೀ ಸಿನಿಮಾದಲ್ಲಿ  ತುಂಬಾ ಕಡಿಮೆ ಡೈಲಾಗ್ ಇದ್ದು,  ಆ್ಯಕ್ಷನ್ ಸೀನ್ ಜಾಸ್ತಿ ಇರುತ್ತದೆ ಎಂದು ಹೇಳಿದರು. ಛಾಯಾಗ್ರಾಹಕ ಸತ್ಯ ಹೆಗಡೆ ಮಾತನಾಡಿ ಕ್ಯಾಮೆರಾ ವರ್ಕ್ ಬಗ್ಗೆ ಮಾಹಿತಿ ನೀಡಿದರು.

    ಬಹುಭಾಷಾ ನಟಿ ವೈಭವಿ ಶಾಂಡಿಲ್ಯ (Shandilya) ಚಿತ್ರದ  ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ.  ತೆಲುಗಿನ ಮಣಿ ಶರ್ಮಾ ಅವರ ಸಂಗೀತ ಸಂಯೋಜನೆ, ಕೆಜಿಎಫ್  ಖ್ಯಾತಿಯ ರವಿ ಬಸ್ರೂರು ಅವರ ಹಿನ್ನೆಲೆ  ಸಂಗೀತ ಈ ಚಿತ್ರಕ್ಕಿದೆ. ಕಾಶ್ಮೀರದ ಮೈನಸ್ 7 ಡಿಗ್ರಿ ತಾಪಮಾನ ಇರುವ ಲೊಕೇಶನ್‌ಗಳಲ್ಲಿ  ಆಕ್ಷನ್‌ಸೀನ್  ಚಿತ್ರೀಕರಿಸಲಾಗಿದೆ. ಕಾಶ್ಮೀರದ ಐಸ್‌ವಾರ್ ಸಾಹಸ ದೃಶ್ಯಗಳ ಜೊತೆಗೆ ರೋಮಾಂಚನಕಾರಿ ಸ್ಕೇಟಿಂಗ್ ಆ್ಯಕ್ಷನ್ ಸೀನ್‌ಗಳು ಚಿತ್ರದ ಹೈಲೈಟ್.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಮತ್ತೆ ಸಿನಿಮಾ ರಂಗದಲ್ಲಿ ಕಾಣಿಸಿಕೊಂಡ ‘ಜಮಾನ’ ಸಿನಿಮಾದ ಜೆಪಿ

    ಮತ್ತೆ ಸಿನಿಮಾ ರಂಗದಲ್ಲಿ ಕಾಣಿಸಿಕೊಂಡ ‘ಜಮಾನ’ ಸಿನಿಮಾದ ಜೆಪಿ

    ಚೇತನ್ ರಮೇಶ್ ನಿರ್ಮಾಣದ, ಬಿ.ಎಸ್ ಸಂಜಯ್ (Sanjay) ನಿರ್ದೇಶನದ, ವಿಭಿನ್ನ ಕಥಾಹಂದರ ಹೊಂದಿರುವ  ‘ದಿಗ್ದರ್ಶಕ’  (Digdarshaka) ಚಿತ್ರದ ಟೀಸರ್ (Teaser) ಇತ್ತೀಚಿಗೆ ಬಿಡುಗಡೆಯಾಯಿತು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಭಾ.ಮ.ಹರೀಶ್ ಟೀಸರ್ ಬಿಡುಗಡೆ ಮಾಡಿ ಶುಭ ಕೋರಿದರು.

    ಇದೊಂದು ನೈಜಘಟನೆ ಆಧಾರಿತ ಚಿತ್ರ. ಚಿತ್ರದ ನಾಯಕನಾಗಿ ಜೆ.ಪಿ(ಜಯಪ್ರಕಾಶ್) (Jayaprakash) ಅಭಿನಯಿಸಿದ್ದಾರೆ. ಈ ಹಿಂದೆ ನನ್ನ ನಿರ್ದೇಶನದ ‘ಜಮಾನ’ ಚಿತ್ರದಲ್ಲೂ ಜೆ‌.ಪಿ ಅವರೆ ನಾಯಕನಾಗಿ ಅಭಿನಯಿಸಿದ್ದರು. ಚೇತನ್ ರಮೇಶ್ ಈ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ‌. ನಾನೇ ಕಥೆ ಬರೆದು ಸಂಕಲನ ಕೂಡ ಮಾಡಿದ್ದೇನೆ. ದಿಗ್ದರ್ಶಕ ಎಂದರೆ ಚಿತ್ರದಲ್ಲಿ ಬರುವ ಎಲ್ಲಾ ಪಾತ್ರಗಳಿಗೆ ಮಾರ್ಗದರ್ಶನ ನೀಡುವಾತ. ಚಿತ್ರದಲ್ಲಿ ನಾಲ್ಕು ಸಾಹಸ ಸನ್ನಿವೇಶಗಳಿದೆ‌.‌ ಕೌರವ ವೆಂಕಟೇಶ್ ಸಾಹಸ ನಿರ್ದೇಶನ ಮಾಡಿದ್ದಾರೆ.   ಆಕ್ಷನ್ ಹಾಗೂ ಥ್ರಿಲ್ಲರ್ ಕಥಾಹಂದರ ಹೊಂದಿದೆ. ಜೆ‌.ಪಿ, ಪವನ್ ಶೆಟ್ಟಿ, ಅನನ್ಯ ಶುಭ ರಕ್ಷ, ಬಲ ರಾಜವಾಡಿ ಮುಂತಾದವರು ತಾರಾಬಳಗದಲ್ಲಿದ್ದಾರೆ.

    ನಾನು ಕೂಡ ಪತ್ರಕರ್ತ. ಈ ಹಿಂದೆ ‘ಜಮಾನ’ ಚಿತ್ರದಲ್ಲಿ ನಟಿಸಿದ್ದೆ. ನಿರ್ದೇಶಕ ಸಂಜಯ್ ಅವರು ‘ದಿಗ್ದರ್ಶಕ’ ಚಿತ್ರದ ಕಥೆ ಹೇಳಿ, ಈ ಪಾತ್ರ ನೀವೇ ಮಾಡಬೇಕು ಎಂದರು. ‘ದಿಗ್ದರ್ಶಕ’ ಅಂದರೆ ದಿಕ್ಕುಗಳನ್ನು ತೋರಿಸುವವನು ಎಂದು. ನಿರ್ದೇಶಕರು ಈ ಚಿತ್ರದ ಕೊನೆಯಲ್ಲಿ ಉತ್ತಮ ಸಂದೇಶ ಸಹ ನೀಡಲಿದ್ದಾರೆ. ನನ್ನ ಜೊತೆ ನಟಿಸಿರುವ ಎಲ್ಲಾ ಕಲಾವಿದರು ಚೆನ್ನಾಗಿ ಅಭಿನಯಿಸಿದ್ದಾರೆ ಎಂದು ನಾಯಕ ಜೆ.ಪಿ ತಿಳಿಸಿದರು. ಇದನ್ನೂ ಓದಿ: ದಾಂಪತ್ಯ ಜೀವನಕ್ಕೆ ಕಾಲಿಟ್ಟ ಸಿದ್ಧಾರ್ಥ್ -ಕಿಯಾರಾ ಜೋಡಿ

    ನಾನು ರಾಜಕುಮಾರ್ ಅವರ ಮನೆಯಲ್ಲಿ ಬೆಳೆದವನು. ಶಿವರಾಜಕುಮಾರ್ ಅವರ ಜೊತೆ ಹತ್ತಕ್ಕೂ ಅಧಿಕ ಚಿತ್ರಗಳಲ್ಲಿ ಅಭಿನಯಿಸಿದ್ದೇ‌ನೆ. ನಿರ್ದೇಶಕ ಸಂಜಯ್ ಅವರು ಈ ಚಿತ್ರದ ಕಥೆ ಹೇಳಿದರು. ಇಷ್ಟವಾಯಿತು.‌ ಎಲ್ಲಾ ಕಲಾವಿದರ ಹಾಗೂ ತಂತ್ರಜ್ಞರ ಸಹಕಾರದಿಂದ ಚಿತ್ರ ಚೆನ್ನಾಗಿ ಬಂದಿದೆ. ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದರು ನಿರ್ಮಾಪಕ ಚೇತನ್ ರಮೇಶ್. ಚಿತ್ರದಲ್ಲಿ ಅಭಿನಯಿಸಿರುವ ಪವನ್ ಶೆಟ್ಟಿ, ಅನನ್ಯ ದೇ,‌ ಕಾರ್ಯಕಾರಿ ನಿರ್ಮಾಪಕ ರಮೇಶ್ ಗೌಡ, ಮಹೇಶ್ ತಲಕಾಡು, ರಾಜೀವ್,  ಸಾಹಸ ನಿರ್ದೇಶಕ ಕೌರವ ವೆಂಕಟೇಶ್ ಮುಂತಾದವರು ಚಿತ್ರದ ಕುರಿತು ಮಾತನಾಡಿದರು.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಡಾಲಿ ಧನಂಜಯ್ ನಟನೆಯ  25ನೇ ಸಿನಿಮಾ ‘ಹೊಯ್ಸಳ’ ಟೀಸರ್ ರಿಲೀಸ್

    ಡಾಲಿ ಧನಂಜಯ್ ನಟನೆಯ 25ನೇ ಸಿನಿಮಾ ‘ಹೊಯ್ಸಳ’ ಟೀಸರ್ ರಿಲೀಸ್

    ಕೆ.ಆರ್.ಜಿ ಸ್ಟುಡಿಯೋಸ್ ಅಡಿಯಲ್ಲಿ ನಿರ್ಮಾಣವಾಗಿರುವ, ನಟ ರಾಕ್ಷಸ ಧನಂಜಯ ಅಭಿನಯದ ಬಹು ನಿರೀಕ್ಷಿತ ಚಿತ್ರ, “ಹೊಯ್ಸಳ” ದ ಟೀಸರ್ ಇಂದು ಬಿಡುಗಡೆಯಾಗಿದೆ. ನಿಷ್ಠಾವಂತ – ಖಡಕ್ ಪೊಲೀಸ್ ಪಾತ್ರ ನಿರ್ವಹಿಸಿರುವ ನಟ ಧನಂಜಯ, ತಪ್ಪು ಮಾಡಿದವರ ಪಾಲಿಗೆ ಖಾಕಿ ತೊಟ್ಟ ಯಮನಾಗಿ ಕಾಣಿಸಿಕೊಂಡಿದ್ದಾರೆ.

    ಟೀಸರ್ ಬಿಡುಗಡೆಯಾಗಿದ್ದು, ಭಾರತ ಸಿನಿಮಾಗಳಲ್ಲಿ ರಫ್ ಅಂಡ್ ಟಫ್ ಪೊಲೀಸ್ ಆಫೀಸರ್ ಗಳಾಗಿ ಕಾಣಿಸಿಕೊಂಡಿದ್ದ ಕನ್ನಡದ ಕಿಚ್ಚ ಸುದೀಪ, ತೆಲುಗು ನಟ ಅದಿವಿ ಶೇಷ್, ಮಲಯಾಳಂ ನಟ ಪೃಥ್ವಿರಾಜ್ ಹಾಗೂ ತಮಿಳು ನಟ ಕಾರ್ತಿ ರವರು ‘ಗ್ಲಿಮ್ಪ್ಸ್ ಆಫ್ ಗುರುದೇವ್’ ಅನ್ನು ಬಿಡುಗಡೆ ಮಾಡಿದರು. ಆಫೀಸರ್ ಗುರುದೇವ್ ಅಲಿಯಾಸ್ ಧನಂಜಯರವರನ್ನು ಅಭಿನಂದಿಸಿ ತಮ್ಮ ಪೊಲೀಸ್ ಗ್ಯಾಂಗ್ ಗೆ ಬರಮಾಡಿಕೊಂಡಿದ್ದಾರೆ. ಇದನ್ನೂ ಓದಿ: ಡಿ.ಕೆ ಶಿವಕುಮಾರ್ ಜೊತೆ ಕಾಣಿಸಿಕೊಂಡ ಕಿಚ್ಚ ಸುದೀಪ್ : ಕುತೂಹಲ ಮೂಡಿಸಿದ ಭೇಟಿ

    ಹೊಯ್ಸಳ ಟೀಸರ್ ನಲ್ಲಿ ಧನಂಜಯರವರ ಖಾಕಿ ಖದರ್, ಹಾಗೂ ಡೈಲಾಗ್ ಗೆ ಜನ ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ. ಆನಂದ್ ಆಡಿಯೋ ಚಾನೆಲ್ ನಲ್ಲಿ ಟೀಸರ್ ಬಿಡುಗಡೆಯಾಗಿದ್ದು ಬ್ಲಾಕ್ಬಸ್ಟರ್ ಹಿಟ್ ಆಗಿದೆ. ಚಿತ್ರವು ಇದೇ ಮಾರ್ಚ್ ಬಿಡುಗಡೆಯಾಗಲಿದ್ದು ಡಾಲಿ ಧನಂಜಯ ರವರು ಪೊಲೀಸ್ ಆಫೀಸರ್  “ಗುರುದೇವ್” ಆಗಿ ಮಾರ್ಚ್ 30 ರಿಂದ ಚಾರ್ಜ್ ತೆಗೆದುಕೊಳ್ಳಲಿದ್ದಾರೆ.

    ಡಾಲಿ ಧನಂಜಯರವರ 25ನೇ ಚಿತ್ರ ಇದಾಗಿದ್ದು,  ಹೊಂಬಾಳೆ ಸಂಸ್ಥೆಯ ವಿಜಯ್ ಕಿರಗಂದೂರ್ ಅರ್ಪಿಸುವ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣ ಸಂಸ್ಥೆ ಬ್ಯಾನರ್‌ನಡಿ  ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ರವರು ಚಿತ್ರವನ್ನು ನಿರ್ಮಿಸಿದ್ದಾರೆ. ವಿಜಯ್.ಎನ್ ರವರು ಕಥೆ, ಚಿತ್ರಕಥೆ ಬರೆದು ನಿರ್ದೇಶನದ ಹೊಣೆಯನ್ನೂ ಹೊತ್ತಿದ್ದಾರೆ. ಈ ಚಿತ್ರಕ್ಕೆ ಅಜನೀಶ್ ಲೋಕನಾಥ್ ರವರು ಸಂಗೀತ ಸಂಯೋಜಿಸಿದ್ದು, ಕಾರ್ತಿಕ್ ಎಸ್ ರವರು ಛಾಯಾಗ್ರಾಹಕರಾಗಿದ್ಡಾರೆ.

    ಸಂಕಲನ ದೀಪು ಎಸ್ ಕುಮಾರ್, ಸಂಭಾಷಣೆ ಮಾಸ್ತಿ ಅವರದು. ಧನಂಜಯ ಹಾಗೂ ಅಮೃತ ಅಯ್ಯಂಗಾರ್ ಜೋಡಿಯಲ್ಲಿ ಈ ಚಿತ್ರ ಮೂಡಿಬಂದಿದೆ. ಅಚ್ಯುತಕುಮಾರ್, ನವೀನ್ ಶಂಕರ್, ಅವಿನಾಶ್, ರಾಜೇಶ್ ನಟರಂಗ ಹಾಗೂ ನಾಗಭೂಷಣ್ ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ‘ದಸರಾ’ ಸಿನಿಮಾ ಟೀಸರ್ ಬಿಡುಗಡೆ ಮಾಡಲಿದ್ದಾರೆ ಸೂಪರ್ ಸ್ಟಾರ್ಸ್

    ‘ದಸರಾ’ ಸಿನಿಮಾ ಟೀಸರ್ ಬಿಡುಗಡೆ ಮಾಡಲಿದ್ದಾರೆ ಸೂಪರ್ ಸ್ಟಾರ್ಸ್

    ನ್ಯಾಚುರಲ್ ಸ್ಟಾರ್ ನಾನಿ (Nani) ಅಭಿನಯದ ಮೆಗಾ ಪ್ರಾಜೆಕ್ಟ್ ಪ್ಯಾನ್ ಇಂಡಿಯಾ ಸಿನಿಮಾ “ದಸರಾ’ (Dasara) ಟೀಸರ್ (Teaser) ಬಿಡುಗಡೆಗೆ ಒಂದೇ‌ ದಿನ ಬಾಕಿ ಇದೆ. ಬಹು ನಿರೀಕ್ಷಿತ ಟೀಸರ್ ಬಿಡುಗಡೆಯನ್ನು ಸಿನಿ ಪ್ರೇಮಿಗಳು ಎದುರು ನೋಡುತ್ತಿದ್ದಾರೆ. ಜನವರಿ 30 ಟೀಸರ್ ಬಿಡುಗಡೆಯ ವಿಶೇಷತೆಯನ್ನು ಚಿತ್ರತಂಡ ರಿವೀಲ್ ಮಾಡಿದ್ದು ಕನ್ನಡ, ಹಿಂದಿ, ತಮಿಳು, ಮಲಯಾಳಂ ಭಾಷೆಯ ಸ್ಟಾರ್ ನಟರು ಟೀಸರ್ ಬಿಡುಗಡೆ ಮಾಡಲಿದ್ದಾರೆ.

    ಮಾಸ್ ಆಕ್ಷನ್ ಸಬ್ಜೆಕ್ಟ್ ಒಳಗೊಂಡ ‘ದಸರಾ’ ಈಗಾಗಲೇ ಸಿನಿ ಪ್ರಿಯರಲ್ಲಿ ನಿರೀಕ್ಷೆ ಹುಟ್ಟುಹಾಕಿದೆ. ಪ್ಯಾನ್ ಇಂಡಿಯಾ ಸಿನಿಮಾವಾಗಿ ಮೂಡಿ ಬರ್ತಿರುವ ಚಿತ್ರದಲ್ಲಿ ನಾನಿ ಮಾಸ್ ಅವತಾರದಲ್ಲಿ ರಂಜಿಸಲು ರೆಡಿಯಾಗಿದ್ದು, ಮಾರ್ಚ್ 30ರಂದು ಬಿಡುಗಡೆಯಾಗುತ್ತಿರುವ ಚಿತ್ರದ ಟೀಸರ್ ಝಲಕ್ ನಾಳೆ ಬಿಡುಗಡೆಯಾಗುತ್ತಿದೆ.  ಬಾಲಿವುಡ್ ನಟ ಶಾಹಿದ್ ಕಪೂರ್, ಧನುಷ್ (Dhanush), ರಕ್ಷಿತ್ ಶೆಟ್ಟಿ (Rakshit Shetty), ದುಲ್ಕರ್ ಸಲ್ಮಾನ್ (Dulquer Salmaan) ಚಿತ್ರದ  ಮ್ಯಾಸಿವ್ ಟೀಸರ್ ಬಿಡುಗಡೆ ಮಾಡಲಿದ್ದಾರೆ ಎಂದು ಚಿತ್ರತಂಡ ವಿಶೇಷ ವೀಡಿಯೋ ಮುಖಾಂತರ ಹಂಚಿಕೊಂಡಿದೆ.

    ನಾನಿ ಹಾಗೂ ಕೀರ್ತಿ ಸುರೇಶ್ ಜೋಡಿಯಾಗಿರುವ ‘ದಸರಾ’ ಚಿತ್ರಕ್ಕೆ ಶ್ರೀಕಾಂತ್ ಒಡೆಲಾ ಆಕ್ಷನ್ ಕಟ್ ಹೇಳಿದ್ದಾರೆ. ಮಾರ್ಚ್ 30ರಂದು ಸಿನಿಮಾ ಗ್ರ್ಯಾಂಡ್ ಆಗಿ ತೆರೆ ಕಾಣುತ್ತಿದೆ. ಈಗಾಗಲೇ ಹಾಡುಗಳ ಮೂಲಕ ಕ್ರೇಜ್ ಸೃಷ್ಟಿಸಿರುವ ಚಿತ್ರತಂಡ ಟೀಸರ್ ಝಲಕ್ ಮೂಲಕ ಪ್ರೇಕ್ಷಕರ ಮನ ಸೆಳೆಯಲು ಸಜ್ಜಾಗಿದೆ. ಇದನ್ನೂ ಓದಿ: ವಿಷ್ಣುವರ್ಧನ್ ಪರಭಾಷಾ ನಟರಾ?: ಫಿಲ್ಮ್ ಚೇಂಬರ್ ವಿರುದ್ಧ ವೀರಕಪುತ್ರ ಶ್ರೀನಿವಾಸ್ ಆಕ್ರೋಶ

    ಬಹು ದೊಡ್ಡ ತಾರಾಗಣ ಒಳಗೊಂಡ ಈ ಚಿತ್ರದಲ್ಲಿ ದೀಕ್ಷಿತ್ ಶೆಟ್ಟಿ, ಸಮುದ್ರಕನಿ, ಸಾಯಿಕುಮಾರ್, ಜರೀನಾ ವಹಾಬ್ ಸೇರಿದಂತೆ ಸ್ಟಾರ್ ಕಲಾವಿದರ ತಾರಾಬಳಗವಿದೆ. ಶ್ರೀಲಕ್ಷ್ಮೀ ವೆಂಕಟೇಶ್ವರ ಸಿನಿಮಾಸ್ ಬ್ಯಾನರ್ ನಡಿ ಸುಧಾಕರ್ ಚೆರುಕುರಿ ಚಿತ್ರವನ್ನು ಅದ್ದೂರಿಯಾಗಿ ನಿರ್ಮಾಣ ಮಾಡಿದ್ದಾರೆ. ಸಂತೋಷ್ ನಾರಾಯಣನ್ ಮ್ಯೂಸಿಕ್, ಸತ್ಯನ್ ಸೂರ್ಯನ್ ಕ್ಯಾಮೆರಾ ವರ್ಕ್, ನವೀನ್ ನೂಲಿ ಸಂಕಲನ, ಅನ್ಬರಿವ್ ಸಾಹಸ ನಿರ್ದೇಶನ, ವಿಜಯ್ ಚಗಂಟಿ ಕಾರ್ಯಕಾರಿ ನಿರ್ಮಾಣ ಚಿತ್ರಕ್ಕಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k