Tag: teaser

  • ‘ಕೆಂಡದ ಸೆರಗು’ ಚಿತ್ರಕ್ಕಾಗಿ ಒಂದಾದ ಮಾಲಾಶ್ರೀ ಮತ್ತು ಭೂಮಿ ಶೆಟ್ಟಿ : ಟೀಸರ್ ರಿಲೀಸ್

    ‘ಕೆಂಡದ ಸೆರಗು’ ಚಿತ್ರಕ್ಕಾಗಿ ಒಂದಾದ ಮಾಲಾಶ್ರೀ ಮತ್ತು ಭೂಮಿ ಶೆಟ್ಟಿ : ಟೀಸರ್ ರಿಲೀಸ್

    ರಾಕಿ ಸೋಮ್ಲಿ ಚೊಚ್ಚಲ ನಿರ್ದೇಶನದಲ್ಲಿ ಭೂಮಿ ಶೆಟ್ಟಿ ಮುಖ್ಯ ಭೂಮಿಕೆಯ ಹಾಗೂ ಕನಸಿನ ರಾಣಿ ಮಾಲಾಶ್ರೀ ನಟಿಸಿರುವ ‘ಕೆಂಡದ ಸೆರಗು’ ಸಿನಿಮಾದ ಟೀಸರ್ ಬಿಡುಗಡೆಯಾಗಿದೆ. ಈ ಚಿತ್ರ ನಿರ್ದೇಶಕ ರಾಕಿ ಸೋಮ್ಲಿ ಬರೆದ ‘ಕೆಂಡದ ಸೆರಗು’ ಕಾದಂಬರಿ ಆಧಾರಿತ ಸಿನಿಮಾ. ಕುಸ್ತಿ ಸುತ್ತ ಹೆಣೆಯಲಾದ ಚಿತ್ರದಲ್ಲಿ ಕನಸಿನ ರಾಣಿ ಮಾಲಾಶ್ರೀ ಪೊಲೀಸ್ ಕಮಿಷನರ್ ಪಾತ್ರದಲ್ಲಿ ನಟಿಸಿದ್ದು, ಭೂಮಿ ಶೆಟ್ಟಿ ಕುಸ್ತಿ ಪಟುವಾಗಿ ಬಣ್ಣಹಚ್ಚಿದ್ದಾರೆ. ಟೀಸರ್ ಬಿಡುಗಡೆ ಮಾಡುವ ಮೂಲಕ ಚಿತ್ರತಂಡ ಸಿನಿಮಾ ಬಗ್ಗೆ ಮಾಹಿತಿ ಹಂಚಿಕೊಂಡಿದೆ.

    ನಟಿ ಮಾಲಾಶ್ರೀ ಮಾತನಾಡಿ ಒಂದೊಳ್ಳೆ ಸಬ್ಜೆಕ್ಟ್ ಚಿತ್ರದಲ್ಲಿದೆ. ಸಿನಿಮಾ ಕೆಲಸ ಆದ ಮೇಲೆ ಒಮ್ಮೆ ನನಗೆ ತೋರಿಸಿ ಎಂದು ಹೇಳಿದ್ದೆ ರಫ್ ಸ್ಕೆಚ್ ನೋಡಿದ್ದೀನಿ ತುಂಬಾ ಚೆನ್ನಾಗಿ ಬಂದಿದೆ ಸಿನಿಮಾ. ನಾನು ಪೋಲೀಸ್ ಪಾತ್ರ ತುಂಬಾ ಮಾಡಿದ್ದೀನಿ ಆದ್ರೆ ಇಲ್ಲಿವರೆಗೆ ಮಾಡಿರುವ ಪಾತ್ರಕ್ಕಿಂತ ಡಿಫ್ರೆಂಟ್ ಫೀಲ್ ಈ ಪಾತ್ರ ನೀಡಿದೆ. ಈ ಚಿತ್ರ ಕೇವಲ ಕುಸ್ತಿ ಬಗ್ಗೆ ಅಂತಲ್ಲ ಹೆಣ್ಣುಮಗಳೊಬ್ಬಳ ನೋವಿನ ಕಥೆ ಚಿತ್ರದಲ್ಲಿದೆ. ಒಂದೊಳ್ಳೆ ಮೆಸೇಜ್ ಚಿತ್ರದಲ್ಲಿದೆ. ಈ ಸಿನಿಮಾದ ಭಾಗವಾಗಿದ್ದಕ್ಕೆ ತುಂಬಾ ಖುಷಿ ಇದೆ. ನಾನೇ ಈ ಚಿತ್ರಕ್ಕೆ ಡಬ್ ಮಾಡುತ್ತಿದ್ದೇನೆ ಎಂದು ಸಿನಿಮಾ ಬಗ್ಗೆ ಸಂತಸ ಹಂಚಿಕೊಂಡ್ರು. ಇದನ್ನೂ ಓದಿ: ಸಾನ್ಯ ಅಯ್ಯರ್‌ ಬೆರಳಲ್ಲಿ ಶೆಟ್ಟಿ ವಧು ಧರಿಸುವ ರಿಂಗ್ ನೋಡಿ ಶಾಕ್‌ ಆದ ನೆಟ್ಟಿಗರು

    ನಿರ್ದೇಶಕ ರಾಕಿ ಸೋಮ್ಲಿ ಮಾತನಾಡಿ ‘ಕೆಂಡದ ಸೆರಗು’ ನಾನೇ ಬರೆದ ಕಾದಂಬರಿ ಆಧಾರಿತ ಸಿನಿಮಾ. ನಿರ್ಮಾಪಕ ಕೊಟ್ರೇಶ್ ಹಾಗೂ ನಾನು ಇಬ್ಬರು ಸ್ನೇಹಿತರು. ಅವರಿಗೆ ನಾನು ಈ ಕಾದಂಬರಿ ಬಗ್ಗೆ ಹೇಳಿದಾಗ. ಸಿನಿಮಾ ಮಾಡೋಣ ಎಂದು ಹೇಳಿದ್ರು. ಭೂಮಿ ಶೆಟ್ಟಿ ತಮ್ಮ ಪಾತ್ರವನ್ನು ಅದ್ಭುತವಾಗಿ ನಿಭಾಯಿಸಿದ್ದಾರೆ. ಸಿನಿಮಾ ಮಾಡುವಾಗ ಮಾಲಾಶ್ರೀ ಮೇಡಂ ಕೈನಲ್ಲಿ ಒಂದು ಪಾತ್ರ ಮಾಡಿಸಬೇಕು ಎಂದು ಒಂದು ಆಲೋಚನೆ ಬಂತು. ಕಥೆ ಕೇಳಿದ ಮೇಲೆ ಒಪ್ಪಿಕೊಂಡ್ರು. ಸಿನಿಮಾ ಚಿತ್ರೀಕರಣದಲ್ಲೂ ಸಪೋರ್ಟ್ ಮಾಡಿದ್ರು. ಕಮರ್ಶಿಯಲ್ ಆಗಿ ಮೂಡಿ ಬಂದಿದೆ. ಕುಸ್ತಿಗೆ ಹೆಚ್ಚು ಫೋಕಸ್ ನೀಡಲಾಗಿದೆ. ಡಬ್ಬಿಂಗ್ ಕೆಲಸ ನಡೆಯುತ್ತಿದೆ ಚಿತ್ರದಲ್ಲಿ ಆರು ಹಾಡುಗಳಿವೆ ಎಂದು ಸಿನಿಮಾ ಬಗ್ಗೆ ಮಾಹಿತಿ ಹಂಚಿಕೊಂಡ್ರು.

    ನಾಯಕಿ ಭೂಮಿ ಶೆಟ್ಟಿ ಮಾತನಾಡಿ ಮಹಿಳೆ ಎಲ್ಲಿ ಪ್ರಧಾನವಾಗಿರುತ್ತಾಳೆ ಆ ರೀತಿಯ ಪಾತ್ರ ಮಾಡಲು ನಾನು ಕಾತುರದಿಂದ ಕಾಯುತ್ತಿದ್ದೆ. ಅದೇ ಸಮಯದಲ್ಲಿ ಕೆಂಡದ ಸೆರಗು ಸಿನಿಮಾ ಸಿಕ್ತು. ಕಥೆ, ಅದರ ಸುತ್ತಮುತ್ತ ಇರುವ ಪಾತ್ರಗಳು, ಸಿನಿಮಾದಲ್ಲಿನ ಶೇಡ್ ಎಲ್ಲವನ್ನು ಕೇಳಿ ಇಷ್ಟವಾಯ್ತು. ಚಾಲೆಂಜಿಂಗ್ ಪಾತ್ರ ನಾನು ಮಾಡಲೇಬೇಕು ಎಂದು ಒಪ್ಪಿಕೊಂಡೆ. ಕುಸ್ತಿಗೆ ಹಂಡ್ರೆಡ್ ಪರ್ಸೆಂಟ್ ಗಿಂತ ಜಾಸ್ತಿ ಎಫರ್ಟ್ ಹಾಕಿದ್ದೇನೆ. ನನ್ನ ಪಾತ್ರಕ್ಕಿರುವ ಶೇಡ್ಸ್ ತುಂಬಾ ಚೆನ್ನಾಗಿದೆ. ಸಮಾಜದಲ್ಲಿ ವೇಶ್ಯೆ ಹಾಗೂ ಆಕೆಯ ಮಗಳನ್ನು ಬೇರೆಯದ್ದೇ ರೀತಿ ನೋಡುತ್ತಾರೆ ಆದ್ರೆ ಆಕೆಗೂ ಅವಕಾಶ ನೀಡಿದ್ರೆ ಏನ್ ಬೇಕಿದ್ರು ಸಾಧಿಸುತ್ತಾಳೆ ಎನ್ನುವ ಎಳೆ ಚಿತ್ರದ್ದು. ತುಂಬಾ ಚೆನ್ನಾಗಿ ಮೂಡಿ ಬಂದಿದೆ ಎಲ್ಲರೂ ಸಪೋರ್ಟ್ ಮಾಡಿ ಎಂದು ಪಾತ್ರದ ಬಗ್ಗೆ ಮಾಹಿತಿ ಹಂಚಿಕೊಂಡ್ರು.

    ನಿರ್ಮಾಪಕ ಕೆ. ಕೊಟ್ರೇಶ್  ಗೌಡ ಮಾತನಾಡಿ ದಾವಣಗೆರೆಯಲ್ಲಿ ನನ್ನದೊಂದು ಬೀಡ ಅಂಗಡಿ ಇದೆ. ಸಿನಿಮಾ ಮಾಡಬೇಕು ಎಂದು ನಾನು ರಾಕಿ ಸೋಮ್ಲಿ ಮಾತನಾಡುತ್ತಿದ್ವಿ. ಪ್ರೊಡ್ಯೂಸರ್ ಗಾಗಿ ಒಂದು ವರ್ಷ ಹುಡುಕಾಟ ನಡೆಸಿದ್ವಿ ನಂತರ ನಂದೇ ಒಂದು ಸೈಟ್ ಇತ್ತು, ಬಂಗಾರ ಇತ್ತು ಅದನ್ನು ಮಾರಿ ಸಿನಿಮಾ ಮಾಡಿದ್ದೀನಿ. ರಾಕಿ ನನ್ನ ಸ್ನೇಹಿತ ಅತನಿಗೆ ಸಪೋರ್ಟ್ ಮಾಡಬೇಕು, ಜೊತೆಗೆ ಕೆಂಡದ ಸೆರಗು ಪುಸ್ತಕದಲ್ಲಿ ಕುಸ್ತಿ ಬಗ್ಗೆ ತುಂಬಾ ಡಿಟೈಲ್ ಆಗಿ ಬರೆದಿದ್ದಾರೆ. ಸಿನಿಮಾ ಮಾಡಿದ್ರೆ ಕ್ಲಿಕ್ ಆಗುತ್ತೆ ಎಂದು ಬಂಡವಾಳ ಹಾಕಿದ್ದೀನಿ ಸಿನಿಮಾ ತುಂಬಾ ಚೆನ್ನಾಗಿ ಮೂಡಿ ಬಂದಿದೆ ಎಂದು ತಿಳಿಸಿದ್ರು.  ಶ್ರೀ ಮುತ್ತು ಟಾಕೀಸ್ ಮತ್ತು ಎಸ್ ಕೆ ಪ್ರೊಡಕ್ಷನ್ಸ್ ಬ್ಯಾನರ್ ನಡಿ ಕೆ.ಕೊಟ್ರೇಶ್ ಗೌಡ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಯಶ್ ಶೆಟ್ಟಿ, ವರ್ಧನ್ ತೀರ್ಥಹಳ್ಳಿ, ಪ್ರತಿಮಾ. ಹರೀಶ್ ಅರಸು, ಬಸು ಹಿರೇಮಠ್, ಶೋಭಿತ, ಸಿಂಧು ಲೋಕನಾಥ್ ಚಿತ್ರದ ತಾರಾಬಳಗದಲ್ಲಿದ್ದಾರೆ. ವಿಪಿನ್ ವಿ ರಾಜ್ ಛಾಯಾಗ್ರಹಣ, ವೀರೇಶ್ ಕಂಬ್ಲಿ ಸಂಗೀತ ನಿರ್ದೇಶನ, ಶ್ರೀಕಾಂತ್ ಸಂಕಲನ ಚಿತ್ರಕ್ಕಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • 19.20.21 ಸಿನಿಮಾ ಟೀಸರ್ ರಿಲೀಸ್ : ನಿರೀಕ್ಷೆ ಹೆಚ್ಚಿಸಿದ ನಿರ್ದೇಶಕ ಮಂಸೋರೆ

    19.20.21 ಸಿನಿಮಾ ಟೀಸರ್ ರಿಲೀಸ್ : ನಿರೀಕ್ಷೆ ಹೆಚ್ಚಿಸಿದ ನಿರ್ದೇಶಕ ಮಂಸೋರೆ

    ನಿನ್ನೆ ಲಹರಿ ಮ್ಯೂಸಿಕ್ ಯೂಟ್ಯೂಬ್ ಚಾನೆಲ್ ನಲ್ಲಿ ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕ ಮಂಸೋರೆ ಅವರ ’19.20.21’ ಹೆಸರಿನ ಸಿನಿಮಾದ ಟೀಸರ್ ರಿಲೀಸ್ ಆಗಿದೆ. ಸಮಾಜದ ಮತ್ತೊಂದು ಮುಖವನ್ನು ಅನಾವರಣಗೊಳಿಸಿರುವ ಈ ಟೀಸರ್ ಬಗ್ಗೆ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಕನ್ನಡದಲ್ಲಿ ಮತ್ತೊಂದು ಭರವಸೆಯ ಸಿನಿಮಾ ಎಂದು ಹಲವರು ಹೊಗಳಿದ್ದಾರೆ. ಸಿನಿಮಾಟೋಗ್ರಫಿ, ಮ್ಯೂಸಿಕ್, ಪಾತ್ರಗಳ ಆಯ್ಕೆ ಹಾಗೂ ಚಿತ್ರಕಥೆಯ ತಾಕತ್ತಿನ ಬಗ್ಗೆ ಚರ್ಚೆಗಳು ನಡೆದಿವೆ.

    ನಾಗರೀಕ ಸಮಾಜದಲ್ಲಿನ ಅನಾಗರೀಕ ವರ್ತನೆಗೆ ಕನ್ನಡಿ ಹಿಡಿದಂತಿದೆ ಟೀಸರ್. ಶೋಷಿತ ಸಮುದಾಯದ ಕಥೆಯನ್ನು ಈ ಸಿನಿಮಾದಲ್ಲಿ ಹೇಳಲು ಹೊರಟಿದ್ದಾರಾ ನಿರ್ದೇಶಕರು ಎನ್ನುವ ಪ್ರಶ್ನೆಯನ್ನೂ ಟೀಸರ್ ಮೂಡಿಸುತ್ತದೆ. ನಿರ್ದೇಶಕ ಮಂಸೋರೆ ಪ್ರತಿಭಾವಂತ ಮತ್ತು ಜೀವಪರ ನಿರ್ದೇಶಕರು. ಹಾಗಾಗಿ ಈವರೆಗೂ ಹೇಳದೇ ಇರುವಂತಹ ಘಟನೆಯನ್ನು ಈ ಸಿನಿಮಾಗಾಗಿ ಆಯ್ಕೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.

    75ನೇ ಸ್ವಾತಂತ್ರ ದಿನೋತ್ಸವ ಸಂದರ್ಭದಲ್ಲಿ ಚಿತ್ರದ ಪೋಸ್ಟರ್ ಅನ್ನು ರಿಲೀಸ್ ಮಾಡಿದ್ದರು ನಿರ್ದೇಶಕರು. ವ್ಯಕ್ತಿಯೊಬ್ಬರ ಬಾಯಿಗೆ ಬಟ್ಟೆ ಕಟ್ಟಿ, ಬೆನ್ನಿನಲ್ಲಿ ರಕ್ತ ಸುರಿಯುವಂತಹ ಆ ಪೋಸ್ಟರ್ ಅನೇಕ ವಿಷಯಗಳನ್ನು ಹೇಳುವಂತಿತ್ತು. 2018 ರಿಂದ 2022ರ ತನಕ ಯುಎಪಿಎ ಕಾಯ್ದೆ ಅಡಿಯಲ್ಲಿ ಬಂಧನಕ್ಕೆ ಒಳಗಾದ 4690ಜನರಲ್ಲಿ ಕೇವಲ 149 ಮಂದಿ ಮಾತ್ರ ಅಪರಾಧಿಗಳು ಎಂಬ ಮಾಹಿತಿಯನ್ನೂ ಅವರು ಹಂಚಿಕೊಂಡಿದ್ದರು. ಹೀಗಾಗಿ ಇದೊಂದು ವಿಶೇಷ ಸಿನಿಮಾ ಎನ್ನುವುದು ಖಾತರಿ ಆಗಿತ್ತು. ಇದನ್ನೂ ಓದಿ: ನಾಗತಿಹಳ್ಳಿ ಚಂದ್ರಶೇಖರ್ ಚಿತ್ರಕ್ಕೆ ನಟಿ ಶಾನ್ವಿ ಶ್ರೀವಾಸ್ತವ್ ನಾಯಕಿ

    ಸಿನಿಮಾದ ತಾರಾ ಬಳಗವೇ ವಿಶೇಷವಾಗಿದೆ ಖ್ಯಾತ ಗಾಯಕಿ ಎಂ.ಡಿ.ಪಲ್ಲವಿ, ಬಾಲಾಜಿ ಮನೋಹರ್, ಕೃಷ್ಣ ಹೆಬ್ಬಾಳೆ, ಸಂಪತ್ ಮೈತ್ರೇಯಾ, ಶೃಂಗ ಸೇರಿದಂತೆ ಪ್ರತಿಭಾವಂತ ಕಲಾವಿದರ ದಂಡೇ ಈ ಸಿನಿಮಾದಲ್ಲಿದೆ. ನಾತಿಚರಾಮಿ ಸಿನಿಮಾ ನಂತರ ಮತ್ತೆ ಈ ಚಿತ್ರಕ್ಕೆ ಬಿಂದು ಮಾಲಿನ ಸಂಗೀತ ನೀಡಿದ್ದಾರೆ. ನಾತಿಚರಾಮಿ ಚಿತ್ರಕ್ಕಾಗಿ ಬಿಂದು ಮಾಲಿನಿ ರಾಷ್ಟ್ರ ಪ್ರಶಸ್ತಿ ಕೂಡ ಪಡೆದಿದ್ದರು.

    ನಿರ್ದೇಶಕರ ಜೊತೆಗೂಡಿ ವೀರೇಂದ್ರ ಮಲ್ಲಣ್ಣ ಚಿತ್ರಕ್ಕೆ ಚಿತ್ರಕಥೆ ಬರೆದಿದ್ದು, ರೋಣದ ಬಕ್ಕೇಶ್ ಅವರ ಹಿನ್ನೆಲೆ ಸಂಗೀತ ವಿದೆ. ಶಿವು ಕುಮಾರ್ ಛಾಯಾಗ್ರಹಣ, ಸುರೇಶ್ ಆರ್ಮುಗಂ ಸಂಕಲನದಲ್ಲಿ ಈ ಸಿನಿಮಾ ಮೂಡಿ ಬಂದಿದೆ. ದೇವರಾಜ್ ಆರ್ ನಿರ್ಮಾಪಕರು.  ಈಗಾಗಲೇ ಬಹುತೇಕ ಶೂಟಿಂಗ್ ಕೂಡ ಮುಗಿದಿದ್ದು, ಬಿಡುಗಡೆಗೆ ಸಿದ‍್ಧವಾಗಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಪೆಂಟಗನ್ ಟೀಸರ್: ನಿರ್ದೇಶಕರ ಕಚೇರಿಗೆ ಕರವೇ ಮುತ್ತಿಗೆ ಬೆದರಿಕೆ

    ಪೆಂಟಗನ್ ಟೀಸರ್: ನಿರ್ದೇಶಕರ ಕಚೇರಿಗೆ ಕರವೇ ಮುತ್ತಿಗೆ ಬೆದರಿಕೆ

    ರಡು ದಿನಗಳ ಹಿಂದೆಯಷ್ಟೇ ರಿಲೀಸ್ ಆಗಿರುವ ‘ಪೆಂಟಗನ್’ (Pentagon) ಸಿನಿಮಾದ ಟೀಸರ್‍ನಲ್ಲಿ (Teaser) ಕನ್ನಡಪರ ಹೋರಾಟಗಾರರಿಗೆ ರೋಲ್‍ಕಾಲ್ ಎಂದು ಕರೆದಿರುವ ಕುರಿತು ಕನ್ನಡಪರ ಸಂಘಟನೆಗಳು ತೀವ್ರ ಆಕ್ಷೇಪ ವ್ಯಕ್ತ ಪಡಿಸಿವೆ. ಕರ್ನಾಟಕ ರಕ್ಷಣಾ ವೇದಿಕೆ (Karave) ಯುವ ಘಟಕ ಈ ಕುರಿತು ವಿಡಿಯೋವೊಂದನ್ನು ರಿಲೀಸ್ ಮಾಡಿದ್ದು, ರೋಲ್‍ಕಾಲ್ ಪದವನ್ನು ಟೀಸರ್‍ನಿಂದ ಕಿತ್ತುಹಾಕದೇ ಇದ್ದರೆ ನಿರ್ದೇಶಕ ಗುರು ದೇಶಪಾಂಡೆ ಕಚೇರಿಗೆ ಮುತ್ತಿಗೆ ಹಾಕುವುದಾಗಿ ತಿಳಿಸಿದೆ.

    ಕಿಶೋರ್ ನಾಯಕ ನಟಿಸಿರುವ ‘ಪೆಂಟಗನ್’ ಸಿನಿಮಾದ 5ನೇ ಕಥೆಯ ಟೀಸರ್ ಬಿಡುಗಡೆಯ ವೇದಿಕೆಯಲ್ಲೇ ಕನ್ನಡಪರ ಹೋರಾಟಗಾರರಿಗೆ ಅವಮಾನ ಮಾಡಲಾಗಿದೆ ಎಂದು ಕನ್ನಡಪರ ಹೋರಾಟಗಾರ ರೂಪೇಶ್ ರಾಜಣ್ಣ (Rupesh Rajanna) ವಿರೋಧ ವ್ಯಕ್ತಪಡಿಸಿದ್ದರು. ಜೊತೆಗೆ ಕನ್ನಡ ರಕ್ಷಣಾ ವೇದಿಕೆಯ ಅಶ್ವಿನಿ ಗೌಡ ಕೂಡ ಧ್ವನಿಗೂಡಿಸಿದರು. ಇಬ್ಬರೂ ಒಟ್ಟಾಗಿ ವಿರೋಧಿಸಿದ್ದರಿಂದ ನಿರ್ದೇಶಕ ಗುರು ದೇಶಪಾಂಡೆ (Guru Deshpande) ಅದೇ ವೇದಿಕೆಯಲ್ಲೇ ಸ್ಪಷ್ಟನೆ ಕೂಡ ನೀಡಿದ್ದರು. ಇದನ್ನೂ ಓದಿ:ʻಸೂರರೈ ಪೊಟ್ರುʼ ನಾಯಕಿ ಅಪರ್ಣಾ ಜೊತೆ ಕಾಲೇಜು ವಿದ್ಯಾರ್ಥಿಯ ಅನುಚಿತ ವರ್ತನೆ

    ಈ ಕುರಿತು ಮಾತನಾಡಿದ ನಿರ್ದೇಶಕ ಗುರು ದೇಶಪಾಂಡೆ, ‘ಟೀಸರ್ ನೋಡಿ ಎಲ್ಲವನ್ನೂ ತೀರ್ಮಾನ ಮಾಡಬೇಡಿ. ಸಿನಿಮಾ ರಿಲೀಸ್ ಆದ ನಂತರ ಮಾತನಾಡಿ. ಟೀಸರ್ ನಲ್ಲಿ ಏನೇ ಮಾತನಾಡಿಸಿದ್ದರು. ಅದಕ್ಕೆ ಸಿನಿಮಾದಲ್ಲಿ ಉತ್ತರ ಕೊಟ್ಟಿದ್ದೇವೆ. ಸಿನಿಮಾ ನೋಡಿದ ನಂತರ ನಿಮ್ಮಲ್ಲಿ ಪ್ರಶ್ನೆಗಳು ಉಳಿದರೆ, ಆಗ ಪ್ರತಿಭಟಿಸಿ’ ಎಂದು ರೂಪೇಶ್ ರಾಜಣ್ಣ ಅವರನ್ನು ಸಮಾಧಾನಿಸಿದರು.

    ಟೀಸರ್ ನಲ್ಲಿ ನಟ ಪೃಥ್ವಿ ಅಂಬರ್ ಆಡುವ ಡೈಲಾಗ್ ಒಂದೊಂದು ಕನ್ನಡ ಸಂಘಟನೆಯ ಮುಖಂಡನನ್ನು ನೆನಪಿಸುವುದಂತೂ ಸತ್ಯ. ಅದರಲ್ಲೂ ರೋಲ್ ಕಾಲ್, ರೌಡಿ, ‘ಅ’ಕಾರ-‘ಹಕಾರ’, ಮಾಜಿ ರೌಡಿ, ಮಾಜಿ ಭೂಗತ ದೊರೆ ಹೀಗೆ ಸೂಚ್ಯವಾಗಿ ಅನೇಕ ಮಾತುಗಳನ್ನು ಆಡಿಸುವ ಮೂಲಕ ಗುರು ದೇಶಪಾಂಡೆ ಅಚ್ಚರಿ ಮೂಡಿಸಿದ್ದಾರೆ. ಕನ್ನಡ ಪರ ಸಂಘಟನೆಗಳ ಮುಖಂಡರ ಬಗ್ಗೆ ಅನುಮಾನ ಮೂಡುವ ರೀತಿಯಲ್ಲಿ ಟೀಸರ್ ತಯಾರಾಗಿದೆ.

    ಅಷ್ಟೇ ಅಲ್ಲ, ಪ್ರತಿಭಟನೆಯ ನೆಪದಲ್ಲಿ ಹೋರಾಟ, ಬ್ಯಾನ್ ಅಂತ ಹೇಳಿ ಆಮೇಲೆ ಮೌನ ತಾಳುವ ಹೋರಾಟಗಾರರ ಚಳಿಯನ್ನೂ ನಿರ್ದೇಶಕರು ಬಿಡಿಸಿದ್ದಾರೆ. ನೇರವಾಗಿ ರಜನಿಕಾಂತ್ ಸಿನಿಮಾ ಬಿಡುಗಡೆಯ ಹೋರಾಟದ ವಿಷಯವನ್ನು ತಂದಿದ್ದಾರೆ. ಹೀಗಾಗಿ ಒಂದಷ್ಟು ಹೋರಾಟಗಳನ್ನು ಈ ಟೀಸರ್ ನೆನಪಿಸುತ್ತದೆ. ಈ ಟೀಸರ್ ಅನ್ನು ಕನ್ನಡ ಪರ ಹೋರಾಟಗಾರರು ಯಾವ ರೀತಿಯಲ್ಲಿ ತಗೆದುಕೊಳ್ಳುತ್ತಾರೆ ಎನ್ನುವುದೇ ಸದ್ಯಕ್ಕಿರುವ ಪ್ರಶ್ನೆ.

    ಗುರು ದೇಶಪಾಂಡೆ ನಿರ್ದೇಶನದಲ್ಲಿ ಈ ಅಧ್ಯಾಯದ ಮುಖ್ಯ ಭೂಮಿಕೆಯಲ್ಲಿ ಕಿಶೋರ್ ಕಾಣಿಸಿಕೊಂಡಿದ್ದಾರೆ. ಪ್ರಮುಖ ಪಾತ್ರಗಳಲ್ಲಿ ಪೃಥ್ವಿ ಅಂಬರ್, ರೂಪೇಶ್ ರಾಜಣ್ಣ, ಅಶ್ವಿನಿ ಗೌಡ ಸೇರಿದಂತೆ ಹಲವು ಅನುಭವಿ ಕಲಾವಿದರು ಇದ್ದಾರೆ. ಇದು ಕನ್ನಡಪರ ಹೋರಾಟಗಾರನೊಬ್ಬನ ಕಥೆಯೂ ಆಗಿರುವುದರಿಂದ ಕನ್ನಡ ಸಂಘಟನೆಗಳ ಸದಸ್ಯರನ್ನೂ ಈ ಸಿನಿಮಾದಲ್ಲಿ ಬಳಸಿಕೊಂಡಿದ್ದಾರೆ ನಿರ್ದೇಶಕರು.

    ಈ ಕುರಿತು ನಿರ್ದೇಶಕ ಗುರು ದೇಶಪಾಂಡೆ, “ಈ ಕಥೆಯು ಕನ್ನಡದ ಹೋರಾಟಗಾರನೊಬ್ಬನ ಕುರಿತಾಗಿದ್ದು, ಅವನ ವ್ಯಕ್ತಿತ್ವವನ್ನು ವೈಭವೀಕರಿಸದೇ ಅಥವಾ ಅವನ ಕ್ರಿಯಾಶೀಲತೆಯ ಬಗ್ಗೆ ನಕಾರಾತ್ಮಕವಾಗಿ ಹೇಳದೇ, ಹೋರಾಟಗಾರನೊಬ್ಬನ ಒಳತುಮುಲು ಹಾಗೂ ಅವನ ಜೀವನ ಸುತ್ತ ನಡೆಯುವ ಘಟನೆಗಳನ್ನು ತೋರಿಸಲಾಗಿದೆ. ಇದೊಂದು ಸೂಕ್ಷ್ಮ ರೀತಿಯ ಕಥೆಯಾಗಿದ್ದು, ಅದನ್ನು ಅಷ್ಟೇ ನಾಜೂಕಾಗಿ ಹಿಡಿದಿಡುವ ಪ್ರಯತ್ನ ಮಾಡಿದ್ದೇವೆ. ಹೋರಾಟಗಾರನೊಬ್ಬನ ಸಕಾರಾತ್ಮಕ ಮತ್ತು ನಕಾರಾತ್ಮಕ ಅಂಶಗಳನ್ನು ಚರ್ಚಿಸುತ್ತಲೇ, ಹೋರಾಟಗಾರರ ಮೇಲಿನ ಹಲವು ಅನುಮಾನಗಳನ್ನು ನಿವಾರಿಸುವ ಪ್ರಯತ್ನವನ್ನು ಮಾಡಲಾಗಿದೆ,” ಎನ್ನುತ್ತಾರೆ.

    ಈ ಅಧ್ಯಾಯಕ್ಕೆ ಅಭಿಲಾಷ್ ಕಲ್ಲಟ್ಟಿ ಸಿನಿಮಾಟೋಗ್ರಫಿ ಮಾಡಿದ್ದು, ಮಣಿಕಾಂತ್ ಕದ್ರಿ ಅವರ ಸಂಗೀತ ಸಂಯೋಜನೆಯಿದೆ. ಪೆಂಟಗನ್ ಸಿನಿಮಾದಲ್ಲಿ ಒಟ್ಟು ಐದು ಕಥೆಗಳಿದ್ದು, ಆಕಾಶ್ ಶ್ರೀವತ್ಸ (ಶಿವಾಜಿ ಸುರತ್ಕಲ್) ಚಂದ್ರಮೋಹನ್ (ಬ್ರಹ್ಮಚಾರಿ), ರಾಘು ಶಿವಮೊಗ್ಗ (ಚೂರಿಕಟ್ಟೆ), ಕಿರಣ್ ಕುಮಾರ್ (Debut) ಹಾಗೂ ಗುರು ದೇಶಪಾಂಡೆ ತಲಾ ಒಂದೊಂದು ಕಥೆಯನ್ನು ನಿರ್ದೇಶನ ಮಾಡಿದ್ದಾರೆ. ಜಿ ಸಿನಿಮಾಸ್ ಬ್ಯಾನರ್ ನಲ್ಲಿ ಮೂಡಿ ಬಂದಿರುವ ಈ ಸಿನಿಮಾಗೆ ಕ್ರಿಯೇಟಿವ್ ಹೆಡ್ ಮತ್ತು ನಿರ್ಮಾಪಕರು ಗುರು ದೇಶಪಾಂಡೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ನಾಳೆ ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕ ಮಂಸೋರೆ ಹೊಸ ಸಿನಿಮಾದ ಟೀಸರ್ ರಿಲೀಸ್

    ನಾಳೆ ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕ ಮಂಸೋರೆ ಹೊಸ ಸಿನಿಮಾದ ಟೀಸರ್ ರಿಲೀಸ್

    ನ್ನಡ ಸಿನಿಮಾ ರಂಗದ ಪ್ರತಿಭಾವಂತ ನಿರ್ದೇಶಕ, ರಾಷ್ಟ್ರ ಪ್ರಶಸ್ತಿ ಪಡೆದ ಮಂಸೋರೆ ಇದೀಗ ಹೊಸ ಸಿನಿಮಾವೊಂದನ್ನು ನಿರ್ದೇಶನ ಮಾಡಿದ್ದಾರೆ. 19.20.21 ಹೆಸರಿನಲ್ಲಿ ಮೂಡಿ ಬಂದಿರುವ ಈ ಚಿತ್ರದ ಟೀಸರ್ ನಾಳೆ ಸಂಜೆ 6 ಗಂಟೆಗೆ ಲಹರಿ ಮ್ಯೂಸಿಕ್ ಯೂ ಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ ಆಗುತ್ತಿದೆ. ಟೈಟಲ್ ನಿಂದಾಗಿಯೇ ಸಖತ್ ಕುತೂಹಲ ಮೂಡಿಸಿರುವ ಈ ಟೀಸರ್ ನಲ್ಲಿ ಹತ್ತು ಹಲವು ಚರ್ಚಿಸಬೇಕಾದ ವಿಷಯಗಳು ಇರಲಿವೆ ಎನ್ನಲಾಗುತ್ತಿದೆ.

    75ನೇ ಸ್ವಾತಂತ್ರ ದಿನೋತ್ಸವ ಸಂದರ್ಭದಲ್ಲಿ ಚಿತ್ರದ ಪೋಸ್ಟರ್ ಅನ್ನು ರಿಲೀಸ್ ಮಾಡಿದ್ದರು ನಿರ್ದೇಶಕರು. ವ್ಯಕ್ತಿಯೊಬ್ಬರ ಬಾಯಿಗೆ ಬಟ್ಟೆ ಕಟ್ಟಿ, ಬೆನ್ನಿನಲ್ಲಿ ರಕ್ತ ಸುರಿಯುವಂತಹ ಆ ಪೋಸ್ಟರ್ ಅನೇಕ ವಿಷಯಗಳನ್ನು ಹೇಳುವಂತಿತ್ತು. 2018 ರಿಂದ 2022ರ ತನಕ ಯುಎಪಿಎ ಕಾಯ್ದೆ ಅಡಿಯಲ್ಲಿ ಬಂಧನಕ್ಕೆ ಒಳಗಾದ 4690ಜನರಲ್ಲಿ ಕೇವಲ 149 ಮಂದಿ ಮಾತ್ರ ಅಪರಾಧಿಗಳು ಎಂಬ ಮಾಹಿತಿಯನ್ನೂ ಅವರು ಹಂಚಿಕೊಂಡಿದ್ದರು. ಹೀಗಾಗಿ ಇದೊಂದು ವಿಶೇಷ ಸಿನಿಮಾ ಎನ್ನುವುದು ಖಾತರಿ ಆಗಿತ್ತು.

    ಸಿನಿಮಾದ ತಾರಾ ಬಳಗವೇ ವಿಶೇಷವಾಗಿದೆ ಖ್ಯಾತ ಗಾಯಕಿ ಎಂ.ಡಿ.ಪಲ್ಲವಿ, ಬಾಲಾಜಿ ಮನೋಹರ್, ಕೃಷ್ಣ ಹೆಬ್ಬಾಳೆ, ಸಂಪತ್ ಮೈತ್ರೇಯಾ, ಶೃಂಗ ಸೇರಿದಂತೆ ಪ್ರತಿಭಾವಂತ ಕಲಾವಿದರ ದಂಡೇ ಈ ಸಿನಿಮಾದಲ್ಲಿದೆ. ನಾತಿಚರಾಮಿ ಸಿನಿಮಾ ನಂತರ ಮತ್ತೆ ಈ ಚಿತ್ರಕ್ಕೆ ಬಿಂದು ಮಾಲಿನ ಸಂಗೀತ ನೀಡಿದ್ದಾರೆ. ನಾತಿಚರಾಮಿ ಚಿತ್ರಕ್ಕಾಗಿ ಬಿಂದು ಮಾಲಿನಿ ರಾಷ್ಟ್ರ ಪ್ರಶಸ್ತಿ ಕೂಡ ಪಡೆದಿದ್ದರು. ಇದನ್ನೂ ಓದಿ: ವಿಜಯ್ ಕಿರಗಂದೂರು ಸೇರಿದಂತೆ ಮೂವರಿಗೆ ವಿಶೇಷ ಪ್ರಶಸ್ತಿ

    ನಿರ್ದೇಶಕರ ಜೊತೆಗೂಡಿ ವೀರೇಂದ್ರ ಮಲ್ಲಣ್ಣ ಚಿತ್ರಕ್ಕೆ ಚಿತ್ರಕಥೆ ಬರೆದಿದ್ದು, ರೋಣದ ಬಕ್ಕೇಶ್ ಅವರ ಹಿನ್ನೆಲೆ ಸಂಗೀತ ವಿದೆ. ಶಿವು ಕುಮಾರ್ ಛಾಯಾಗ್ರಹಣ, ಸುರೇಶ್ ಆರ್ಮುಗಂ ಸಂಕಲನದಲ್ಲಿ ಈ ಸಿನಿಮಾ ಮೂಡಿ ಬಂದಿದೆ. ದೇವರಾಜ್ ಆರ್ ನಿರ್ಮಾಪಕರು.  ಈಗಾಗಲೇ ಬಹುತೇಕ ಶೂಟಿಂಗ್ ಕೂಡ ಮುಗಿದಿದ್ದು, ಬಿಡುಗಡೆಗೆ ಸಿದ‍್ಧವಾಗಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ‘ಪೆಂಟಗನ್’ ಟೀಸರ್ ರಿಲೀಸ್ : ವೇದಿಕೆಯ ಮೇಲೆ ವಿರೋಧಿಸಿದ ರೂಪೇಶ್ ರಾಜಣ್ಣ

    ‘ಪೆಂಟಗನ್’ ಟೀಸರ್ ರಿಲೀಸ್ : ವೇದಿಕೆಯ ಮೇಲೆ ವಿರೋಧಿಸಿದ ರೂಪೇಶ್ ರಾಜಣ್ಣ

    ಕಿಶೋರ್ ನಾಯಕನಾಗಿ ನಟಿಸಿರುವ ‘ಪೆಂಟಗನ್’ (Pentagon) ಸಿನಿಮಾದ 5ನೇ ಕಥೆಯ ಟೀಸರ್ (Teaser) ನಿನ್ನೆ ಬಿಡುಗಡೆ ಆಗಿದೆ. ಕನ್ನಡಪರ ಹೋರಾಟಗಾರನ ಕುರಿತಾದ ಈ ಕಥೆಯಲ್ಲಿ ಕನ್ನಡಪರ ಹೋರಾಟಗಾರರಿಗೆ ಅವಮಾನ ಮಾಡಲಾಗಿದೆ ಎಂದು ವೇದಿಕೆಯ ಮೇಲೆಯೇ ಕನ್ನಡಪರ ಹೋರಾಟಗಾರ ರೂಪೇಶ್ ರಾಜಣ್ಣ (Rupesh Rajanna) ವಿರೋಧಿಸಿದ ಘಟನೆ ನಡೆದಿದೆ. ಕನ್ನಡಪರ ಹೋರಾಟಗಾರರಿಗೆ ರೋಲ್ ಕಾಲ್ ಸೇರಿದಂತೆ ಹಲವು ಶಬ್ದಗಳನ್ನು ಟೀಸರ್ ನಲ್ಲಿ ಬಳಸಲಾಗಿದೆ ಎಂದು ಅವರು ವಿರೋಧಿಸಿದರು. ಜೊತೆಗೆ ಕನ್ನಡ ರಕ್ಷಣಾ ವೇದಿಕೆಯ ಅಶ್ವಿನಿ ಗೌಡ ಕೂಡ ಧ್ವನಿಗೂಡಿಸಿದರು.

    ಈ ಕುರಿತು ಮಾತನಾಡಿದ ನಿರ್ದೇಶಕ ಗುರು ದೇಶಪಾಂಡೆ (Guru Deshpande), ‘ಟೀಸರ್ ನೋಡಿ ಎಲ್ಲವನ್ನೂ ತೀರ್ಮಾನ ಮಾಡಬೇಡಿ. ಸಿನಿಮಾ ರಿಲೀಸ್ ಆದ ನಂತರ ಮಾತನಾಡಿ. ಟೀಸರ್ ನಲ್ಲಿ ಏನೇ ಮಾತನಾಡಿಸಿದ್ದರು. ಅದಕ್ಕೆ ಸಿನಿಮಾದಲ್ಲಿ ಉತ್ತರ ಕೊಟ್ಟಿದ್ದೇವೆ. ಸಿನಿಮಾ ನೋಡಿದ ನಂತರ ನಿಮ್ಮಲ್ಲಿ ಪ್ರಶ್ನೆಗಳು ಉಳಿದರೆ, ಆಗ ಪ್ರತಿಭಟಿಸಿ’ ಎಂದು ರೂಪೇಶ್ ರಾಜಣ್ಣ ಅವರನ್ನು ಸಮಾಧಾನಿಸಿದರು. ಇದನ್ನೂ ಓದಿ: ಕಿಚ್ಚ ಅಭಿಮಾನಿಗಳಿಗೆ ಸಿಹಿಸುದ್ದಿ: ಸುದೀಪ್ ಸಿನಿಮಾ ಬಗ್ಗೆ ಸಿಕ್ತು ಬಿಗ್ ಅಪ್‌ಡೇಟ್

    ಟೀಸರ್ ನಲ್ಲಿ ನಟ ಪೃಥ್ವಿ ಅಂಬರ್ ಆಡುವ ಡೈಲಾಗ್ ಒಂದೊಂದು ಕನ್ನಡ ಸಂಘಟನೆಯ ಮುಖಂಡನನ್ನು ನೆನಪಿಸುವುದಂತೂ ಸತ್ಯ. ಅದರಲ್ಲೂ ರೋಲ್ ಕಾಲ್, ರೌಡಿ, ‘ಅ’ಕಾರ-‘ಹಕಾರ’, ಮಾಜಿ ರೌಡಿ, ಮಾಜಿ ಭೂಗತ ದೊರೆ ಹೀಗೆ ಸೂಚ್ಯವಾಗಿ ಅನೇಕ ಮಾತುಗಳನ್ನು ಆಡಿಸುವ ಮೂಲಕ ಗುರು ದೇಶಪಾಂಡೆ ಅಚ್ಚರಿ ಮೂಡಿಸಿದ್ದಾರೆ. ಕನ್ನಡ ಪರ ಸಂಘಟನೆಗಳ ಮುಖಂಡರ ಬಗ್ಗೆ ಅನುಮಾನ ಮೂಡುವ ರೀತಿಯಲ್ಲಿ ಟೀಸರ್ ತಯಾರಾಗಿದೆ.

    ಅಷ್ಟೇ ಅಲ್ಲ, ಪ್ರತಿಭಟನೆಯ ನೆಪದಲ್ಲಿ ಹೋರಾಟ, ಬ್ಯಾನ್ ಅಂತ ಹೇಳಿ ಆಮೇಲೆ ಮೌನ ತಾಳುವ ಹೋರಾಟಗಾರರ ಚಳಿಯನ್ನೂ ನಿರ್ದೇಶಕರು ಬಿಡಿಸಿದ್ದಾರೆ. ನೇರವಾಗಿ ರಜನಿಕಾಂತ್ ಸಿನಿಮಾ ಬಿಡುಗಡೆಯ ಹೋರಾಟದ ವಿಷಯವನ್ನು ತಂದಿದ್ದಾರೆ. ಹೀಗಾಗಿ ಒಂದಷ್ಟು ಹೋರಾಟಗಳನ್ನು ಈ ಟೀಸರ್ ನೆನಪಿಸುತ್ತದೆ. ಈ ಟೀಸರ್ ಅನ್ನು ಕನ್ನಡ ಪರ ಹೋರಾಟಗಾರರು ಯಾವ ರೀತಿಯಲ್ಲಿ ತಗೆದುಕೊಳ್ಳುತ್ತಾರೆ ಎನ್ನುವುದೇ ಸದ್ಯಕ್ಕಿರುವ ಪ್ರಶ್ನೆ.

    ಗುರು ದೇಶಪಾಂಡೆ ನಿರ್ದೇಶನದಲ್ಲಿ ಈ ಅಧ್ಯಾಯದ ಮುಖ್ಯ ಭೂಮಿಕೆಯಲ್ಲಿ ಕಿಶೋರ್ ಕಾಣಿಸಿಕೊಂಡಿದ್ದಾರೆ. ಪ್ರಮುಖ ಪಾತ್ರಗಳಲ್ಲಿ ಪೃಥ್ವಿ ಅಂಬರ್, ರೂಪೇಶ್ ರಾಜಣ್ಣ, ಅಶ್ವಿನಿ ಗೌಡ ಸೇರಿದಂತೆ ಹಲವು ಅನುಭವಿ ಕಲಾವಿದರು ಇದ್ದಾರೆ. ಇದು ಕನ್ನಡಪರ ಹೋರಾಟಗಾರನೊಬ್ಬನ ಕಥೆಯೂ ಆಗಿರುವುದರಿಂದ ಕನ್ನಡ ಸಂಘಟನೆಗಳ ಸದಸ್ಯರನ್ನೂ ಈ ಸಿನಿಮಾದಲ್ಲಿ ಬಳಸಿಕೊಂಡಿದ್ದಾರೆ ನಿರ್ದೇಶಕರು.

    ಈ ಕುರಿತು ನಿರ್ದೇಶಕ ಗುರು ದೇಶಪಾಂಡೆ, “ಈ ಕಥೆಯು ಕನ್ನಡದ ಹೋರಾಟಗಾರನೊಬ್ಬನ ಕುರಿತಾಗಿದ್ದು, ಅವನ ವ್ಯಕ್ತಿತ್ವವನ್ನು ವೈಭವೀಕರಿಸದೇ ಅಥವಾ ಅವನ ಕ್ರಿಯಾಶೀಲತೆಯ ಬಗ್ಗೆ ನಕಾರಾತ್ಮಕವಾಗಿ ಹೇಳದೇ, ಹೋರಾಟಗಾರನೊಬ್ಬನ ಒಳತುಮುಲು ಹಾಗೂ ಅವನ ಜೀವನ ಸುತ್ತ ನಡೆಯುವ ಘಟನೆಗಳನ್ನು ತೋರಿಸಲಾಗಿದೆ. ಇದೊಂದು ಸೂಕ್ಷ್ಮ ರೀತಿಯ ಕಥೆಯಾಗಿದ್ದು, ಅದನ್ನು ಅಷ್ಟೇ ನಾಜೂಕಾಗಿ ಹಿಡಿದಿಡುವ ಪ್ರಯತ್ನ ಮಾಡಿದ್ದೇವೆ. ಹೋರಾಟಗಾರನೊಬ್ಬನ ಸಕಾರಾತ್ಮಕ ಮತ್ತು ನಕಾರಾತ್ಮಕ ಅಂಶಗಳನ್ನು ಚರ್ಚಿಸುತ್ತಲೇ, ಹೋರಾಟಗಾರರ ಮೇಲಿನ ಹಲವು ಅನುಮಾನಗಳನ್ನು ನಿವಾರಿಸುವ ಪ್ರಯತ್ನವನ್ನು ಮಾಡಲಾಗಿದೆ,” ಎನ್ನುತ್ತಾರೆ.

    ಈ ಅಧ್ಯಾಯಕ್ಕೆ ಅಭಿಲಾಷ್ ಕಲ್ಲಟ್ಟಿ ಸಿನಿಮಾಟೋಗ್ರಫಿ ಮಾಡಿದ್ದು, ಮಣಿಕಾಂತ್ ಕದ್ರಿ ಅವರ ಸಂಗೀತ ಸಂಯೋಜನೆಯಿದೆ. ಪೆಂಟಗನ್ ಸಿನಿಮಾದಲ್ಲಿ ಒಟ್ಟು ಐದು ಕಥೆಗಳಿದ್ದು, ಆಕಾಶ್ ಶ್ರೀವತ್ಸ (ಶಿವಾಜಿ ಸುರತ್ಕಲ್) ಚಂದ್ರಮೋಹನ್ (ಬ್ರಹ್ಮಚಾರಿ), ರಾಘು ಶಿವಮೊಗ್ಗ (ಚೂರಿಕಟ್ಟೆ), ಕಿರಣ್ ಕುಮಾರ್ (Debut) ಹಾಗೂ ಗುರು ದೇಶಪಾಂಡೆ ತಲಾ ಒಂದೊಂದು ಕಥೆಯನ್ನು ನಿರ್ದೇಶನ ಮಾಡಿದ್ದಾರೆ. ಜಿ ಸಿನಿಮಾಸ್ ಬ್ಯಾನರ್ ನಲ್ಲಿ ಮೂಡಿ ಬಂದಿರುವ ಈ ಸಿನಿಮಾಗೆ ಕ್ರಿಯೇಟಿವ್ ಹೆಡ್ ಮತ್ತು ನಿರ್ಮಾಪಕರು ಗುರು ದೇಶಪಾಂಡೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಕನ್ನಡಪರ ಹೋರಾಟಗಾರರ ಕೋಪಕ್ಕೆ ಕಾರಣವಾಗುತ್ತಾ ಪೆಂಟಗನ್ ಟೀಸರ್: ವಿವಾದ ಎಬ್ಬಿಸುವ ವಿಚಾರ

    ಕನ್ನಡಪರ ಹೋರಾಟಗಾರರ ಕೋಪಕ್ಕೆ ಕಾರಣವಾಗುತ್ತಾ ಪೆಂಟಗನ್ ಟೀಸರ್: ವಿವಾದ ಎಬ್ಬಿಸುವ ವಿಚಾರ

    ಗುರು ದೇಶಪಾಂಡೆ ನಿರ್ಮಾಣದಲ್ಲಿ ಮೂಡಿ ಬಂದಿರುವ ‘ಪೆಂಟಗನ್’ ಸಿನಿಮಾದ 5ನೇ ಕಥೆಯ ಟೀಸರ್ ರಿಲೀಸ್ ಆಗಿದ್ದು, ಹತ್ತು ಹಲವು ವಿಚಾರಗಳನ್ನು ಅದು ಹೊತ್ತು ತಂದಿದೆ. ಒಟ್ಟು ಐದು ಕಥೆಗಳ ಸಂಕಲನದಂತಿರುವ ‘ಪೆಂಟಗನ್’ ಸಿನಿಮಾದ ಐದನೇ ಕಥೆಯ ಟೀಸರ್ ಇದಾಗಿದ್ದು ಕನ್ನಡಪರ ಹೋರಾಟಗಾರರೊಬ್ಬರ ಕಥೆಯನ್ನು ಇದು ಒಳಗೊಂಡಿದೆ ಎನ್ನುವ ಅನುಮಾನ ಮೂಡಿಸುತ್ತದೆ. ಟೀಸರ್ ನಲ್ಲಿ ಬಳಸಲಾದ ಸಂಭಾಷಣೆ ಕೇಳಿದರೆ, ಕನ್ನಡ ಪರ ಸಂಘಟನೆಯ ಅನೇಕ ಹೋರಾಟಗಾರರನ್ನು ಅದು ನೆನಪಿಸುತ್ತದೆ.

    ಟೀಸರ್ ನಲ್ಲಿ ನಟ ಪೃಥ್ವಿ ಅಂಬರ್ ಆಡುವ ಡೈಲಾಗ್ ಒಂದೊಂದು ಕನ್ನಡ ಸಂಘಟನೆಯ ಮುಖಂಡನನ್ನು ನೆನಪಿಸುವುದಂತೂ ಸತ್ಯ. ಅದರಲ್ಲೂ ರೋಲ್ ಕಾಲ್, ರೌಡಿ, ‘ಅ’ಕಾರ-‘ಹಕಾರ’, ಮಾಜಿ ರೌಡಿ, ಮಾಜಿ ಭೂಗತ ದೊರೆ ಹೀಗೆ ಸೂಚ್ಯವಾಗಿ ಅನೇಕ ಮಾತುಗಳನ್ನು ಆಡಿಸುವ ಮೂಲಕ ಗುರು ದೇಶಪಾಂಡೆ ಅಚ್ಚರಿ ಮೂಡಿಸಿದ್ದಾರೆ. ಕನ್ನಡ ಪರ ಸಂಘಟನೆಗಳ ಮುಖಂಡರ ಬಗ್ಗೆ ಅನುಮಾನ ಮೂಡುವ ರೀತಿಯಲ್ಲಿ ಟೀಸರ್ ತಯಾರಾಗಿದೆ.

    ಅಷ್ಟೇ ಅಲ್ಲ, ಪ್ರತಿಭಟನೆಯ ನೆಪದಲ್ಲಿ ಹೋರಾಟ, ಬ್ಯಾನ್ ಅಂತ ಹೇಳಿ ಆಮೇಲೆ ಮೌನ ತಾಳುವ ಹೋರಾಟಗಾರರ ಚಳಿಯನ್ನೂ ನಿರ್ದೇಶಕರು ಬಿಡಿಸಿದ್ದಾರೆ. ನೇರವಾಗಿ ರಜನಿಕಾಂತ್ ಸಿನಿಮಾ ಬಿಡುಗಡೆಯ ಹೋರಾಟದ ವಿಷಯವನ್ನು ತಂದಿದ್ದಾರೆ. ಹೀಗಾಗಿ ಒಂದಷ್ಟು ಹೋರಾಟಗಳನ್ನು ಈ ಟೀಸರ್ ನೆನಪಿಸುತ್ತದೆ. ಈ ಟೀಸರ್ ಅನ್ನು ಕನ್ನಡ ಪರ ಹೋರಾಟಗಾರರು ಯಾವ ರೀತಿಯಲ್ಲಿ ತಗೆದುಕೊಳ್ಳುತ್ತಾರೆ ಎನ್ನುವುದೇ ಸದ್ಯಕ್ಕಿರುವ ಪ್ರಶ್ನೆ. ಇದನ್ನೂ ಓದಿ: ತಾಯಿಯಾಗುತ್ತಿರುವ ಗುಡ್‌ ನ್ಯೂಸ್‌ ಕೊಟ್ರು ʻಯೇ ಜವಾನಿ ಹೇ ದಿವಾನಿ’ ನಟಿ

    ಗುರು ದೇಶಪಾಂಡೆ ನಿರ್ದೇಶನದಲ್ಲಿ ಈ ಅಧ್ಯಾಯದ ಮುಖ್ಯ ಭೂಮಿಕೆಯಲ್ಲಿ ಕಿಶೋರ್ ಕಾಣಿಸಿಕೊಂಡಿದ್ದಾರೆ. ಪ್ರಮುಖ ಪಾತ್ರಗಳಲ್ಲಿ ಪೃಥ್ವಿ ಅಂಬರ್, ರೂಪೇಶ್ ರಾಜಣ್ಣ, ಅಶ್ವಿನಿ ಗೌಡ ಸೇರಿದಂತೆ ಹಲವು ಅನುಭವಿ ಕಲಾವಿದರು ಇದ್ದಾರೆ. ಇದು ಕನ್ನಡಪರ ಹೋರಾಟಗಾರನೊಬ್ಬನ ಕಥೆಯೂ ಆಗಿರುವುದರಿಂದ ಕನ್ನಡ ಸಂಘಟನೆಗಳ ಸದಸ್ಯರನ್ನೂ ಈ ಸಿನಿಮಾದಲ್ಲಿ ಬಳಸಿಕೊಂಡಿದ್ದಾರೆ ನಿರ್ದೇಶಕರು.

    ಈ ಕುರಿತು ನಿರ್ದೇಶಕ ಗುರು ದೇಶಪಾಂಡೆ, “ಈ ಕಥೆಯು ಕನ್ನಡದ ಹೋರಾಟಗಾರನೊಬ್ಬನ ಕುರಿತಾಗಿದ್ದು, ಅವನ ವ್ಯಕ್ತಿತ್ವವನ್ನು ವೈಭವೀಕರಿಸದೇ ಅಥವಾ ಅವನ ಕ್ರಿಯಾಶೀಲತೆಯ ಬಗ್ಗೆ ನಕಾರಾತ್ಮಕವಾಗಿ ಹೇಳದೇ, ಹೋರಾಟಗಾರನೊಬ್ಬನ ಒಳತುಮುಲು ಹಾಗೂ ಅವನ ಜೀವನ ಸುತ್ತ ನಡೆಯುವ ಘಟನೆಗಳನ್ನು ತೋರಿಸಲಾಗಿದೆ. ಇದೊಂದು ಸೂಕ್ಷ್ಮ ರೀತಿಯ ಕಥೆಯಾಗಿದ್ದು, ಅದನ್ನು ಅಷ್ಟೇ ನಾಜೂಕಾಗಿ ಹಿಡಿದಿಡುವ ಪ್ರಯತ್ನ ಮಾಡಿದ್ದೇವೆ. ಹೋರಾಟಗಾರನೊಬ್ಬನ ಸಕಾರಾತ್ಮಕ ಮತ್ತು ನಕಾರಾತ್ಮಕ ಅಂಶಗಳನ್ನು ಚರ್ಚಿಸುತ್ತಲೇ, ಹೋರಾಟಗಾರರ ಮೇಲಿನ ಹಲವು ಅನುಮಾನಗಳನ್ನು ನಿವಾರಿಸುವ ಪ್ರಯತ್ನವನ್ನು ಮಾಡಲಾಗಿದೆ,” ಎನ್ನುತ್ತಾರೆ.

    ಈ ಅಧ್ಯಾಯಕ್ಕೆ ಅಭಿಲಾಷ್ ಕಲ್ಲಟ್ಟಿ ಸಿನಿಮಾಟೋಗ್ರಫಿ ಮಾಡಿದ್ದು, ಮಣಿಕಾಂತ್ ಕದ್ರಿ ಅವರ ಸಂಗೀತ ಸಂಯೋಜನೆಯಿದೆ. ಪೆಂಟಗನ್ ಸಿನಿಮಾದಲ್ಲಿ ಒಟ್ಟು ಐದು ಕಥೆಗಳಿದ್ದು, ಆಕಾಶ್ ಶ್ರೀವತ್ಸ (ಶಿವಾಜಿ ಸುರತ್ಕಲ್) ಚಂದ್ರಮೋಹನ್ (ಬ್ರಹ್ಮಚಾರಿ), ರಾಘು ಶಿವಮೊಗ್ಗ (ಚೂರಿಕಟ್ಟೆ), ಕಿರಣ್ ಕುಮಾರ್ (Debut) ಹಾಗೂ ಗುರು ದೇಶಪಾಂಡೆ ತಲಾ ಒಂದೊಂದು ಕಥೆಯನ್ನು ನಿರ್ದೇಶನ ಮಾಡಿದ್ದಾರೆ. ಜಿ ಸಿನಿಮಾಸ್ ಬ್ಯಾನರ್ ನಲ್ಲಿ ಮೂಡಿ ಬಂದಿರುವ ಈ ಸಿನಿಮಾಗೆ ಕ್ರಿಯೇಟಿವ್ ಹೆಡ್ ಮತ್ತು ನಿರ್ಮಾಪಕರು ಗುರು ದೇಶಪಾಂಡೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಡಾರ್ಲಿಂಗ್ ಕೃಷ್ಣ – ಮಿಲನ ನಾಗರಾಜ್ ನಟನೆಯ ‘ಲವ್ ಬರ್ಡ್ಸ್’ ಟೀಸರ್ ರಿಲೀಸ್

    ಡಾರ್ಲಿಂಗ್ ಕೃಷ್ಣ – ಮಿಲನ ನಾಗರಾಜ್ ನಟನೆಯ ‘ಲವ್ ಬರ್ಡ್ಸ್’ ಟೀಸರ್ ರಿಲೀಸ್

    ಡ್ಡಿಪುಡಿ ಚಂದ್ರು ನಿರ್ಮಿಸಿರುವ, ಪಿ.ಸಿ.ಶೇಖರ್ ನಿರ್ದೇಶನದ, ಡಾರ್ಲಿಂಗ್ ಕೃಷ್ಣ(Darling Krishna) – ಮಿಲನ ನಾಗರಾಜ್ (Milana Nagaraj) ನಾಯಕ, ನಾಯಕಿಯಾಗಿ ನಟಿಸಿರುವ ‘ಲವ್ ಬರ್ಡ್ಸ್’ (Lovebirds) ಚಿತ್ರದ ಟೀಸರ್ ಬಿಡುಗಡೆಯಾಗಿದೆ. ನಾಯಕ, ನಾಯಕಿಯ ಪಾತ್ರವನ್ನು ಪರಿಸಿಚಯಿಸುವ ಈ ಟೀಸರ್ ಗೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಕನ್ನಡ ಚಿತ್ರರಂಗದ ಖ್ಯಾತ ನಟರಾದ ವಿಜಯ ರಾಘವೇಂದ್ರ ಹಾಗೂ ಅಜಯ್ ರಾವ್ ‘ಲವ್ ಬರ್ಡ್ಸ್’ ಚಿತ್ರದ ಟೀಸರ್ (Teaser) ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು.

    ನಾನು ಸಾಮಾನ್ಯವಾಗಿ ಒಂದೇ ತರಹದ ಚಿತ್ರ ಮಾಡುವುದಿಲ್ಲ. ಬೇರೆಬೇರೆ ರೀತಿಯ ಚಿತ್ರ ಮಾಡುತ್ತಿರುತ್ತೇನೆ. ಲಾಕ್ ಡೌನ್ ಸಮಯದಲ್ಲಿ ಬರೆದ ಕಥೆಯಿದು. ಮದುವೆಯಾದ ನನ್ನ ಸ್ನೇಹಿತರು ಹಂಚಿಕೊಳ್ಳುತ್ತಿದ್ದ ಕೆಲವು ವಿಷಯಗಳು ಈ ಕಥೆ ಬರೆಯಲು ಸ್ಪೂರ್ತಿ. ಕಥೆ ಬರೆಯಬೇಕಾದರೆ ಕೃಷ್ಣ – ಮಿಲನ ನಾಗರಾಜ್ ಅವರೆ ನಾಯಕ-ನಾಯಕಿ ಅಂತ ನಿರ್ಧರಿಸಿದ್ದೆ. ಆನಂತರ ನಿರ್ಮಾಪಕ ಚಂದ್ರು ಅವರಿಗೆ ಕಥೆ ಹೇಳಿದೆ. ಅವರು ಚಿತ್ರ ಮಾಡಲು ಮುಂದಾದರು.  ಚಿತ್ರತಂಡದ ಸಹಕಾರದಿಂದ “ಲವ್ ಬರ್ಡ್ಸ್” ಚಿತ್ರ ಚೆನ್ನಾಗಿ ಬಂದಿದೆ. ನಿಮ್ಮೆಲ್ಲರ ಸಹಕಾರವಿರಲಿ ಎಂದರು ನಿರ್ದೇಶಕ ಪಿ.ಸಿ.ಶೇಖರ್. ಇದನ್ನೂ ಓದಿ: ಮದುವೆ ಬಗ್ಗೆ ನಟಿ ರಚಿತಾ ರಾಮ್ ಮನದಾಳದ ಮಾತು

    ಚಿತ್ರ ಚೆನ್ನಾಗಿ ಬಂದಿದೆ. ಟೀಸರ್ ಬಿಡುಗಡೆ ಮಾಡಿಕೊಟ್ಟ ವಿಜಯ ರಾಘವೇಂದ್ರ – ಅಜಯ್ ರಾವ್ ಅವರಿಗೆ ಧನ್ಯವಾದ. ಮುಂದಿನವಾರ ಚಿತ್ರದ ಹಾಡನ್ನು ಬಿಡುಗಡೆ ಮಾಡುತ್ತೇವೆ ಎಂದು ನಿರ್ಮಾಪಕ ಕಡ್ಡಿಪುಡಿ ಚಂದ್ರು ತಿಳಿಸಿದರು. ನಾನು ಹಾಗೂ ಮಿಲನ ನಾಗರಾಜ್ “ಲವ್ ಮಾಕ್ಟೇಲ್” ಚಿತ್ರದ ನಂತರ ಮಾಡಿರುವ ಚಿತ್ರವಿದು. ಅದರಲ್ಲಿ ಆದಿ ಹಾಗೂ ನಿಧಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದೆವು. ಇದರಲ್ಲಿ ದೀಪಕ್ – ಪೂಜಾ ಪಾತ್ರದಲ್ಲಿ ಅಭಿನಯಿಸಿದ್ದೇವೆ. ಚಿತ್ರದಲ್ಲಿ ಆಕ್ಷನ್ ಸನ್ನಿವೇಶಗಳು ಚೆನ್ನಾಗಿದೆ. ನಿರ್ದೇಶಕ ಪಿ.ಸಿ.ಶೇಖರ್ ಚಿತ್ರವನ್ನು ಚೆನ್ನಾಗಿ ಮಾಡಿದ್ದಾರೆ. ನಿರ್ಮಾಪಕ ಚಂದ್ರು ಅವರಿಗೆ ಧನ್ಯವಾದ ಎಂದರು ಡಾರ್ಲಿಂಗ್ ಕೃಷ್ಣ.

    ನಿರ್ಮಾಪಕ ಚಂದ್ರು ಅವರು ತುಂಬಾ ಫಾಸ್ಟ್. ನಾನಿದ್ದ ಜಾಗಕ್ಕೆ ಬಂದು ಈ ಚಿತ್ರದ ಕುರಿತು ಹೇಳಿದರು. ಕಥೆ ಇಷ್ಟವಾಯಿತು. ಪಿ.ಸಿ.ಶೇಖರ್ ಸುಂದರವಾದ ಕಥೆ ಬರೆದಿದ್ದಾರೆ. “ಲವ್ ಬರ್ಡ್ಸ್” ಚಿತ್ರದಲ್ಲಿ ಲವ್ ಅಷ್ಟೇ ಅಲ್ಲ. ಬೇರೆ ವಿಷಯಗಳು ಇದೆ. ಎಲ್ಲರೂ ಚಿತ್ರ ನೋಡಿ ಪ್ರೋತ್ಸಾಹ ನೀಡಿ ಎಂದು ಮಿಲನ ನಾಗರಾಜ್ ಹೇಳಿದರು. ಹೊಸಪ್ರತಿಭೆ ಗೌರವ್ ತಮ್ಮ ಪಾತ್ರದ ಬಗ್ಗೆ ಹೇಳಿಕೊಂಡರು.

     

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ‘ಪೆಂಟಗನ್’ ಸಿನಿಮಾದ 5ನೇ ಕಥೆ ಟೀಸರ್ ಜನವರಿ 18ಕ್ಕೆ ರಿಲೀಸ್

    ‘ಪೆಂಟಗನ್’ ಸಿನಿಮಾದ 5ನೇ ಕಥೆ ಟೀಸರ್ ಜನವರಿ 18ಕ್ಕೆ ರಿಲೀಸ್

    ದು ಕಥೆಗಳನ್ನು ಒಳಗೊಂಡ, ಐವರು ನಿರ್ದೇಶಕರು ನಿರ್ದೇಶನ ಮಾಡಿರುವ ಪೆಂಟಗನ್ (Pentagon) ಸಿನಿಮಾದ ಬಗ್ಗೆ ಸ್ಯಾಂಡಲ್ ವುಡ್ ನಲ್ಲಿ ಈಗಾಗಲೇ ಸಾಕಷ್ಟು ಚರ್ಚೆ  ಆಗಿದೆ. ಈಗಾಗಲೇ ಈ ಸಂಕಲನದ ಫಸ್ಟ್ ಲುಕ್, ಮೋಷನ್ ಪೋಸ್ಟರ್ ಗಳು ಬಿಡುಗಡೆಯಾಗಿ ಜನ ಮೆಚ್ಚುಗೆ ಪಡೆದಿವೆ.  ಇದೀಗ ಈ ಚಿದ್ರದಲ್ಲಿನ ಐದನೇ ಕಥೆಯ ಟೀಸರ್ (Teaser) ಅನ್ನು ಜನವರಿ 18 ರಂದು ಸಂಜೆ 6.04ಕ್ಕೆ ಬಿಡುಗಡೆ ಮಾಡಲಾಗುತ್ತಿದೆ. ಪೆಂಟಗನ್ ಸಿನಿಮಾದ ಈ ಕಥೆಯಲ್ಲಿ ಕನ್ನಡ ಹೋರಾಟಗಾರನೊಬ್ಬನ ವಿರೋಧಾಭಾಸ ಜೀವನವನ್ನು ಕಟ್ಟಿಕೊಡುವ ಪ್ರಯತ್ನ ಮಾಡಲಾಗಿದೆ. ಹಾಗಾಗಿ ಈ ಸಿನಿಮಾದೊಳಗಿನ ಈ ಕತೆಯು ಅತ್ಯಂತ ಕುತೂಹಲ ಮೂಡಿಸುವಂಥದ್ದು.

    ಗುರು ದೇಶಪಾಂಡೆ (Guru Deshpande) ನಿರ್ದೇಶನದಲ್ಲಿ ಈ ಅಧ್ಯಾಯದ ಮುಖ್ಯ ಭೂಮಿಕೆಯಲ್ಲಿ ಕಿಶೋರ್ (Kishor) ಕಾಣಿಸಿಕೊಂಡಿದ್ದಾರೆ. ಪ್ರಮುಖ ಪಾತ್ರಗಳಲ್ಲಿ ಪೃಥ್ವಿ ಅಂಬರ್ (Prithvi Amber), ರೂಪೇಶ್ ರಾಜಣ್ಣ(Rupesh Rajanna), ಅಶ್ವಿನಿ ಗೌಡ ಸೇರಿದಂತೆ ಹಲವು ಅನುಭವಿ ಕಲಾವಿದರು ಇದ್ದಾರೆ. ಇದು ಕನ್ನಡಪರ ಹೋರಾಟಗಾರನೊಬ್ಬನ ಕಥೆಯೂ ಆಗಿರುವುದರಿಂದ ಕನ್ನಡ ಸಂಘಟನೆಗಳ ಸದಸ್ಯರನ್ನೂ ಈ ಸಿನಿಮಾದಲ್ಲಿ ಬಳಸಿಕೊಂಡಿದ್ದಾರೆ ನಿರ್ದೇಶಕರು. ಇದನ್ನೂ ಓದಿ: ಸಚಿವ ಸುಧಾಕರ್‌ರನ್ನ ಹಾಡಿ ಹೊಗಳಿದ ರಮ್ಯಾ: ಕೈಗೆ ನಟಿ ಬೈ ಹೇಳಿ ಬಿಜೆಪಿ ಸೇರ್ಪಡೆ?

    ಈ ಕುರಿತು ನಿರ್ದೇಶಕ ಗುರು ದೇಶಪಾಂಡೆ, “ಈ ಕಥೆಯು ಕನ್ನಡದ ಹೋರಾಟಗಾರನೊಬ್ಬನ ಕುರಿತಾಗಿದ್ದು, ಅವನ ವ್ಯಕ್ತಿತ್ವವನ್ನು ವೈಭವೀಕರಿಸದೇ ಅಥವಾ ಅವನ ಕ್ರಿಯಾಶೀಲತೆಯ ಬಗ್ಗೆ ನಕಾರಾತ್ಮಕವಾಗಿ ಹೇಳದೇ, ಹೋರಾಟಗಾರನೊಬ್ಬನ ಒಳತುಮುಲು ಹಾಗೂ ಅವನ ಜೀವನ ಸುತ್ತ ನಡೆಯುವ ಘಟನೆಗಳನ್ನು ತೋರಿಸಲಾಗಿದೆ. ಇದೊಂದು ಸೂಕ್ಷ್ಮ ರೀತಿಯ ಕಥೆಯಾಗಿದ್ದು, ಅದನ್ನು ಅಷ್ಟೇ ನಾಜೂಕಾಗಿ ಹಿಡಿದಿಡುವ ಪ್ರಯತ್ನ ಮಾಡಿದ್ದೇವೆ. ಹೋರಾಟಗಾರನೊಬ್ಬನ ಸಕಾರಾತ್ಮಕ ಮತ್ತು ನಕಾರಾತ್ಮಕ ಅಂಶಗಳನ್ನು ಚರ್ಚಿಸುತ್ತಲೇ, ಹೋರಾಟಗಾರರ ಮೇಲಿನ ಹಲವು ಅನುಮಾನಗಳನ್ನು ನಿವಾರಿಸುವ ಪ್ರಯತ್ನವನ್ನು ಮಾಡಲಾಗಿದೆ,” ಎನ್ನುತ್ತಾರೆ.

    ಈ ಅಧ್ಯಾಯಕ್ಕೆ ಅಭಿಲಾಷ್ ಕಲ್ಲಟ್ಟಿ ಸಿನಿಮಾಟೋಗ್ರಫಿ ಮಾಡಿದ್ದು, ಮಣಿಕಾಂತ್ ಕದ್ರಿ ಅವರ ಸಂಗೀತ ಸಂಯೋಜನೆಯಿದೆ. ಪೆಂಟಗನ್ ಸಿನಿಮಾದಲ್ಲಿ ಒಟ್ಟು ಐದು ಕಥೆಗಳಿದ್ದು, ಆಕಾಶ್ ಶ್ರೀವತ್ಸ (ಶಿವಾಜಿ ಸುರತ್ಕಲ್) ಚಂದ್ರಮೋಹನ್ (ಬ್ರಹ್ಮಚಾರಿ), ರಾಘು ಶಿವಮೊಗ್ಗ (ಚೂರಿಕಟ್ಟೆ), ಕಿರಣ್ ಕುಮಾರ್ (Debut) ಹಾಗೂ ಗುರು ದೇಶಪಾಂಡೆ ತಲಾ ಒಂದೊಂದು ಕಥೆಯನ್ನು ನಿರ್ದೇಶನ ಮಾಡಿದ್ದಾರೆ. ಜಿ ಸಿನಿಮಾಸ್ ಬ್ಯಾನರ್ ನಲ್ಲಿ ಮೂಡಿ ಬಂದಿರುವ ಈ ಸಿನಿಮಾಗೆ ಕ್ರಿಯೇಟಿವ್ ಹೆಡ್ ಮತ್ತು ನಿರ್ಮಾಪಕರು ಗುರು ದೇಶಪಾಂಡೆ.

    ತಮ್ಮ ಬ್ಯಾನರ್ ಅಡಿಯಲ್ಲಿ ಈಗಾಗಲೇ ಅನೇಕ ನಿರ್ದೇಶಕರನ್ನು ಪರಿಚಯಿಸಿರುವ ಗುರು ದೇಶಪಾಂಡೆ, ಜಂಟಲ್ ಮನ್ ಮೂಲಕ ಜಡೇಶ್ ಹಂಪಿ, ಲವ್ ಯೂ ರಚ್ಚು ಮೂಲಕ ಶಂಕರ್ ಅವರನ್ನು ಸಿನಿಮಾ ರಂಗಕ್ಕೆ ನಿರ್ದೇಶಕರಾಗಿ ಪರಿಚಯಿಸಿದ್ದಾರೆ. ರಾಜಾ ಹುಲಿ ಹಾಗೂ ಜಾನ್ ಜಾನಿ ಜನಾರ್ದನ್ ಗಳಂತ ಚಿತ್ರಗಳ ನಿರ್ದೇಶಕರಾದ ಗುರು ದೇಶಪಾಂಡೆ ಮೂರು ವರ್ಷಗಳ ನಂತರ ಮತ್ತೆ ನಿರ್ದೇಶನಕ್ಕೆ ಮರಳಿದ್ದಾರೆ.

    ತಮ್ಮ ಬ್ಯಾನರ್ ಬಗ್ಗೆ ಗುರು ದೇಶಪಾಂಡೆ, “ನಮ್ಮ ಜಿ ಸಿನಿಮಾಸ್ ಕೇವಲ ಮನರಂಜನೆಯ ಸಿನಿಮಾಗಳನ್ನು ಮಾತ್ರ ಮಾಡದೇ, ಚಿಂತನೆ- ಪ್ರಚೋದನೆ ಹಾಗೂ ಪ್ರಚಲಿತ ವಿಷಯಗಳನ್ನು ಸಿನಿಮಾವಾಗಿಸುವ ಪ್ರಯತ್ನಗಳನ್ನು ಮಾಡುತ್ತಿದೆ. ಈಗಾಗಲೇ ಹಲವು ನಿರ್ದೇಶಕರನ್ನು, ತಂತ್ರಜ್ಞರನ್ನು ಮತ್ತು ಹೊಸ ಹೊಸ ಕಲಾವಿದರನ್ನು ಸಿನಿಮಾ ರಂಗಕ್ಕೆ ಪರಿಚಯಿಸಿದೆ. ಪೆಂಟಗನ್ ಸಿನಿಮಾದಲ್ಲೂ ಇದನ್ನು ಮುಂದುವರೆಸಿದೆ,” ಎನ್ನುತ್ತಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ನಟ ದೇವರಾಜ್ ಕಿರಿಯ ಪುತ್ರನ ‘ವೈರಂ’ ಚಿತ್ರದ ಟೀಸರ್ ರಿಲೀಸ್

    ನಟ ದೇವರಾಜ್ ಕಿರಿಯ ಪುತ್ರನ ‘ವೈರಂ’ ಚಿತ್ರದ ಟೀಸರ್ ರಿಲೀಸ್

    ಹಿರಿಯನಟ ದೇವರಾಜ್ ಪುತ್ರ ಪ್ರಣಾಮ್ (Pranam) ದೇವರಾಜ್ ಅಭಿನಯದ ವೈರಂ (Vairam) ಚಿತ್ರದ ಟೀಸರ್ (Teaser) ಇತ್ತೀಚೆಗೆ ಬಿಡುಗಡೆಯಾಗಿದೆ.  ನಟ ದೇವರಾಜ್, ಚಂದ್ರಕಲಾ ದೇವರಾಜ್ ಹಾಗೂ ರಾಗಿಣಿ ಪ್ರಜ್ವಲ್ (Ragini Prajwal) ಟೀಸರ್ ಬಿಡುಗಡೆ ಸಮಾರಂಭದಲ್ಲಿ ಉಪಸ್ಥಿತರಿದ್ದರು. ಟೀಸರ್ ಬಿಡುಗಡೆ ಮಾಡಿದ ದೇವರಾಜ್ ಅವರು ಮಾತನಾಡುತ್ತಾ,  ಕನ್ನಡ ಚಿತ್ರರಂಗ ಈಗ ಮತ್ತೆ ಬ್ಯುಸಿಯಾಗಿದೆ. ಇಂತಹ  ಸಮಯದಲ್ಲಿ ನನ್ನ ಮಗನ 2ನೇ  ಸಿನಿಮಾ ಬರುತ್ತಿದೆ. ನಿರ್ದೇಶಕ ಸಾಯಿಶಿವನ್  ಒಳ್ಳೆಯ ಸಿನಿಮಾ ಮಾಡಿದ್ದಾರೆ. ಚಿತ್ರದ ಹಾಡುಗಳನ್ನು ಕೇಳಿದ್ದೇನೆ. ಚೆನ್ನಾಗಿದೆ. ಈ ಸಿನಿಮಾ ಶತದಿನೋತ್ಸವ ಆಚರಿಸಲಿ ಎಂದು ಶುಭ ಹಾರೈಸಿದರು.

    ಚಿಕ್ಕ ವಯಸಿನಿಂದ ಅಪ್ಪ, ಅಣ್ಣನ ಸಿನಿಮಾಗಳನ್ನು ನೋಡಿಕೊಂಡು ಬೆಳೆದವನು. 4 ವರ್ಷಗಳ ನಂತರ ಈ ಸ್ಟೇಜ್ ಮೇಲೆ ನಿಂತು ಮಾತನಾಡುತ್ತಿದ್ದೇನೆ.. ಹಿಂದಿನ  ಚಿತ್ರದಲ್ಲಿ ಚಾಕೊಲೇಟ್ ಬಾಯ್ ಆಗಿದ್ದೆ. ಈ ಸಿನಿಮಾದಲ್ಲಿ ಆಕ್ಷನ್ ಹೀರೋ ಆಗಿದ್ದೇನೆ. ಸಾಯಿ ಶಿವನ್ ಅವರಲ್ಲಿ ತುಂಬಾ ಕಾನ್ಫಿಡೆನ್ಸ್ ಇದೆ. ನಿರ್ಮಾಪಕರಾಗಿ ಮಲ್ಲಿಕಾರ್ಜುನ ಹಾಗೂ ವೇಮಾರೆಡ್ಡಿ ಅವರು ತುಂಬಾ ಸಪೋರ್ಟ್ ಮಾಡಿದ್ದಾರೆ. ಡಿ.ಓ.ಪಿ. ಕೆಲಸವೂ ಅದ್ಭುತವಾಗಿದೆ. ನಾನು ಇಷ್ಟು ಚೆನ್ನಾಗಿ ತೆರೆಮೇಲೆ ಕಾಣಿಸಲು ಅವರೇ ಕಾರಣ. ಒಬ್ಬ ಹೀರೋ ಗುರುತಿಸಿಕೊಳ್ಳೋದು ಅವನೆದುರು ಸ್ಟ್ರಾಂಗ್ ವಿಲನ್ ಇದ್ದಾಗ, ನನಗೆ ಎರಡನೇ ಚಿತ್ರದಲ್ಲೇ ಗರುಡರಾಮ್ ರಂಥ ಖಳನಟರೆದುರು ಅಭಿನಯಿಸುವ ಅವಕಾಶ ಸಿಕ್ತು. ಶಂಕರ್ ಅಶ್ವಥ್ ಹಾಗೂ ವೀಣಾಸುಂದರ್ ನನ್ನ ತಂದೆ, ತಾಯಿ ಪಾತ್ರ ಮಾಡಿದ್ದಾರೆ. ಚಿತ್ರದಲ್ಲಿ ಎಂಜಾಯ್ ಮಾಡುವಂಥ ೪ ಹಾಡುಗಳಿದ್ದು, ಕವಿರಾಜ್, ನಾಗೇಂದ್ರ ಪ್ರಸಾದ್, ರಾಮ್ ನಾರಾಯಣ್ ಹಾಡುಗಳನ್ನು ಬರೆದಿದ್ದಾರೆ ಎಂದು ನಾಯಕ ಪ್ರಣಾಮ್ ದೇವರಾಜ್ ತಿಳಿಸಿದರು.  ಇದನ್ನೂ ಓದಿ: ಡಿವೋರ್ಸ್ ನಂತರ ಆಧ್ಯಾತ್ಮದತ್ತ ಹೊರಳಿದ್ರಾ ನಟಿ ಸಮಂತಾ

    ಚಿತ್ರದ ನಾಯಕಿ ಮೋನಾಲ್ ಮಾತನಾಡುತ್ತ ಇದು ನನ್ನ ಮೊದಲ ಕನ್ನಡ ಚಿತ್ರ. ಒಬ್ಬ ಕ್ರಿಶ್ಚಿಯನ್ ಹುಡುಗಿಯಾಗಿ ಕಾಣಿಸಿಕೊಂಡಿದ್ದೇನೆ. ಒಂದೊಳ್ಳೆ ಲವ್ ಸ್ಟೋರಿ ಚಿತ್ರದಲ್ಲಿದೆ ಎಂದರು.  ಚಿತ್ರದಲ್ಲಿ ಜನರಿಗೆ ಒಂದು ಯೂನಿವರ್ಸಲ್ ಮೆಸೇಜ್ ಇದೆ. ಜನ ಬದಲಾಗಬೇಕು ಎಂದು ಹೇಳಲಾಗಿದೆ. ಜನ ಸಪೋರ್ಟ್ ಮಾಡುತ್ತಾರೆಂಬ ನಂಬಿಕೆಯಿದೆ ಎಂದರು ಖಳನಾಯಕ ಗರುಡಾರಾಮ್.

     ಚಿತ್ರದಲ್ಲಿ ಹೀರೋ ಡೆಡಿಕೇಶನ್, ಇನ್ವಾಲ್ ಮೆಂಟ್ ತುಂಬಾ ಚೆನ್ನಾಗಿತ್ತು. ಆತ ಸಿಂಗಲ್ ಟೇಕ್ ಆರ್ಟಿಸ್ಟ್ ಎಂದು ನಿರ್ದೇಶಕ ಸಾಯಿಶಿವನ್,  ಪ್ರಣಾಮ್ ದೇವರಾಜ್ ಅವರನ್ನು ಹೊಗಳಿದರು. ನಿರ್ಮಾಪಕರಾದ ಜೆ.ಮಲ್ಲಿಕಾರ್ಜುನ ಹಾಗೂ ವೇಮಾರೆಡ್ಡಿ ಅವರು ಚಿತ್ರದ ಬಗ್ಗೆ ಮಾತನಾಡಿದರು. ಗೋಪಿನಾಥ್ ಅವರ ಛಾಯಾಗ್ರಹಣ ಹಾಗೂ ಮಹತಿ ಸ್ವರಸಾಗರ್ ಅವರ ಸಂಗೀತ ನಿರ್ದೇಶನ ಈ ಚಿತ್ರಕ್ಕಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • 50 ಜನ ಸೆಲೆಬ್ರೆಟಿಗಳಿಂದ ‘ಕೆಟಿಎಂ’ ಸಿನಿಮಾದ ಟೀಸರ್ ರಿಲೀಸ್

    50 ಜನ ಸೆಲೆಬ್ರೆಟಿಗಳಿಂದ ‘ಕೆಟಿಎಂ’ ಸಿನಿಮಾದ ಟೀಸರ್ ರಿಲೀಸ್

    ದಿಯಾ ಸಿನಿಮಾ ಖ್ಯಾತಿಯ ದೀಕ್ಷಿತ್ ಶೆಟ್ಟಿ (Dixit Shetty) ನಟನೆಯ ‘ಕೆಟಿಎಂ’ ಸಿನಿಮಾ ಟೀಸರ್ (Teaser) ಬಿಡುಗಡೆಯಾಗಿದೆ. ವಿಶೇಷವಾಗಿ ಟೀಸರ್ ಬಿಡುಗಡೆ ಮಾಡುವ ಮೂಲಕ ಚಿತ್ರತಂಡ ಎಲ್ಲರ ಗಮನ ಸೆಳೆದಿದೆ. ಸ್ಯಾಂಡಲ್ ವುಡ್ ಅಂಗಳದ 50 ಜನ ಸೆಲೆಬ್ರೆಟಿಗಳು ‘ಕೆಟಿಎಂ’ ಟೀಸರ್ ಬಿಡುಗಡೆ ಮಾಡಿರೋದು ವಿಶೇಷ. ಏಕಕಾಲದಲ್ಲಿ ಐವತ್ತು ಜನ ಸೆಲೆಬ್ರೆಟಿಗಳು ಸೋಶಿಯಲ್ ಮೀಡಿಯಾದಲ್ಲಿ ಟೀಸರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ.

    ‘ಅಥರ್ವ’ ಸಿನಿಮಾ ಖ್ಯಾತಿಯ ಅರುಣ್ (Arun) ನಿರ್ದೇಶನದಲ್ಲಿ ಮೂಡಿ ಬಂದಿರುವ ಎರಡನೇ ಸಿನಿಮಾ ‘ಕೆಟಿಎಂ’. ಚಿತ್ರೀಕರಣ ಕೆಲಸ ಮುಗಿಸಿ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ನಿರತವಾಗಿರುವ ಚಿತ್ರತಂಡ ಚಿತ್ರದ ಪ್ರಚಾರ ಕಾರ್ಯವನ್ನು ಆರಂಭಿಸಿದ್ದು, ಇಂಟ್ರಸ್ಟಿಂಗ್ ಟೀಸರ್ ತುಣುಕನ್ನು ಬಿಡುಗಡೆ ಮಾಡಿದೆ. ವಿಕ್ರಮ್ ರವಿಚಂದ್ರನ್, ಶೃತಿ ಹರಿಹರನ್ (Shruti Hariharan), ವಿಜಯ ರಾಘವೇಂದ್ರ, ದೀಪಿಕಾ ದಾಸ್, ಅನುಪಮಾ ಗೌಡ, ನವೀನ್ ಶಂಕರ್, ಮೇಘಾ ಶೆಟ್ಟಿ, ಸಿದ್ದು ಮೂಲಿಮನಿ, ಖುಷಿ ರವಿ, ಇಶಾನ್, ಶೈನ್ ಶೆಟ್ಟಿ ಸೇರಿದಂತೆ 50 ಸೆಲೆಬ್ರೆಟಿಗಳು ಡಿಜಿಟಲಿ ಟೀಸರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಸಾಥ್ ನೀಡಿದ್ದಾರೆ. ಇದನ್ನೂ ಓದಿ: ಸಾನ್ಯ ಎಲಿಮಿನೇಟ್‌ ಆದಮೇಲೆ ಅವಳ ಬೆಲೆ ರೂಪೇಶ್‌ ಶೆಟ್ಟಿಗೆ ಗೊತ್ತಾಯ್ತು: ದೀಪಿಕಾ ದಾಸ್

    ನವಿರಾದ ಪ್ರೇಮ್ ಕಹಾನಿ ಹೊತ್ತ ‘ಕೆಟಿಎಂ’ ಚಿತ್ರದಲ್ಲಿ ದೀಕ್ಷಿತ್ ಶೆಟ್ಟಿ ನಾಯಕ ನಟನಾಗಿ ನಟಿಸಿದ್ದು, ನಾಲ್ಕು ಶೇಡ್ ನಲ್ಲಿ ತೆರೆ ಮೇಲೆ ಕಾಣಸಿಗಲಿದ್ದಾರೆ. ಕಾಜಲ್ ಕುಂದರ್ ಹಾಗೂ ಸಂಜನಾ ಡೋಸ್ ಚಿತ್ರದಲ್ಲಿ ನಾಯಕಿಯರಾಗಿ ತೆರೆ ಹಂಚಿಕೊಂಡಿದ್ದಾರೆ. ಉಷಾ ಭಂಡಾರಿ, ಪ್ರಕಾಶ್ ತುಮಿನಾಡು, ರಘು ರಮಣಕೊಪ್ಪ, ಶಾನಿಲ್ ಗುರು, ಬಾಬು ಹಿರಿಯಣಯ್ಯ, ದೇವ್ ದೇವಯ್ಯ,ಅಭಿಷೇಕ್, ಕಾಮಿಡಿ ಕಿಲಾಡಿಗಳು ಖ್ಯಾತಿಯ ಸಂತೋಷ್ ಸೇರಿದಂತೆ ಹಲವು  ಕಲಾವಿದರು ಚಿತ್ರದ ತಾರಾಬಳಗದಲ್ಲಿದ್ದಾರೆ.

    ಮಹಾಸಿಂಹ ಮೂವೀಸ್ ಬ್ಯಾನರ್ ನಡಿ ವಿನಯ್ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ನವೀನ್ ಕ್ಯಾಮೆರಾ ವರ್ಕ್, ಚೇತನ್ ಸಂಗೀತ ನಿರ್ದೇಶನ ಕೆಟಿಎಂ ಚಿತ್ರಕ್ಕಿದೆ. ಉಡುಪಿ, ಮಂಗಳೂರು, ಕಾರ್ಕಳ, ಬೆಂಗಳೂರಿನಲ್ಲಿ ಸಿನಿಮಾವನ್ನು ಸೆರೆ ಹಿಡಿಯಲಾಗಿದೆ. ಪೋಸ್ಟ್ ಪ್ರೊಡಕ್ಷನ್ ಕೊನೆಯ ಹಂತದಲ್ಲಿರುವ ಚಿತ್ರತಂಡ ಮಾರ್ಚ್ ನಲ್ಲಿ ಸಿನಿಮಾ ತೆರೆಗೆ ತರಲು ಪ್ಲ್ಯಾನ್ ಮಾಡಿಕೊಂಡಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k