Tag: teaser

  • ಚಿತ್ರದಲ್ಲಿ ಸಂಪೂರ್ಣ ಬೆತ್ತಲಾಗಿದ್ದೇಕೆ – ಸ್ಪಷ್ಟನೆ ಕೊಟ್ಟ ಅಮಲಾ ಪೌಲ್

    ಚಿತ್ರದಲ್ಲಿ ಸಂಪೂರ್ಣ ಬೆತ್ತಲಾಗಿದ್ದೇಕೆ – ಸ್ಪಷ್ಟನೆ ಕೊಟ್ಟ ಅಮಲಾ ಪೌಲ್

    ಚೆನ್ನೈ: ಬಹುಭಾಷಾ ನಟಿ ಅಮಲಾ ಪೌಲ್ ಅವರು ತಮಿಳಿನಲ್ಲಿ ನಟಿಸಿದ `ಅದಾಯಿ’ ಚಿತ್ರದ ಟೀಸರ್ ನಲ್ಲಿ ಸಂಪೂರ್ಣ ಬೆತ್ತಲಾಗಿ ಕಾಣಿಸಿಕೊಂಡಿದ್ದರು. ಆದರೆ ಈಗ ಅವರು ಚಿತ್ರಕ್ಕಾಗಿ ಬೆತ್ತಲಾಗಿದ್ದೇಕೆ ಎಂಬುದರ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.

    ಸಂದರ್ಶನವೊಂದರಲ್ಲಿ ಮಾತನಾಡಿದ ಅವರು, ನಾನು ವಿಭಿನ್ನ ಪಾತ್ರದಲ್ಲಿ ನಟಿಸಿದ್ದೇನೆ. ನಶೆಯಲ್ಲಿ ನಾಪತ್ತೆಯಾಗುವ ಮಗಳ ಪಾತ್ರದಲ್ಲಿ ನಟಿಸಿದ್ದೇನೆ. ಈ ರೀತಿಯ ಪಾತ್ರ ಮಾಡುವುದಕ್ಕೂ ಒಂದು ಕಾರಣ ಇದೆ. ಈ ಚಿತ್ರದ ಮೊದಲು ನಾನು ಅತ್ಯಾಚಾರ ಸಂತ್ರಸ್ತೆ, ಹೋರಾಟ ಮಾಡುವ ಮಹಿಳೆ, ತಂಗಿ ಹಾಗೂ ತಾಯಿಯ ಪಾತ್ರದಲ್ಲಿ ನಟಿಸಿ ಬೋರ್ ಆಗಿತ್ತು. ಇದರಿಂದಾಗಿ ನನಗೆ ಬೋರ್ ಆಗಿ ಸಿನಿಮಾ ರಂಗವನ್ನು ಬಿಡಲು ಮುಂದಾಗಿದ್ದೆ. ಚಿತ್ರದಲ್ಲಿ ಇದು ವಿಶೇಷ ಪಾತ್ರ ಅನಿಸಿದ್ದಕ್ಕೆ ಅಭಿನಯಿಸಲು ಒಪ್ಪಿಕೊಂಡೆ ಎಂದು ಹೇಳಿದರು.

    ಒಂದು ದಿನ ನನಗೆ ‘ಅದಾಯಿ’ ಚಿತ್ರದಲ್ಲಿ ಕೆಲಸ ಮಾಡುವ ಅವಕಾಶ ದೊರೆಯಿತು. ನಾನು ಮೊದಲು ಈ ಚಿತ್ರದ ಸ್ಕ್ರಿಪ್ಟ್ ಓದಿದೆ. ವಿಶೇಷ ಎಂದರೆ ಈ ಚಿತ್ರ ತೆಲುಗು, ತಮಿಳು ಹಾಗೂ ಹಿಂದಿಯಲ್ಲಿ ಬಿಡುಗಡೆ ಆಗುತ್ತಿದೆ. ಹಾಗಾಗಿ ಈ ಸಿನಿಮಾ ಮಾಡಲು ನಾನು ಒಪ್ಪಿಕೊಂಡೆ. ಬಳಿಕ ನಿರ್ದೇಶಕ ರತ್ನ ಕುಮಾರ್ ಚಿತ್ರದ ಕತೆ ಬಗ್ಗೆ ಹೇಳಿ ಈ ಚಿತ್ರದಲ್ಲಿ ನಗ್ನ ದೃಶ್ಯ ಇದೆ. ಈ ಸೀನ್‍ಗಾಗಿ ವಿಶೇಷ ಕಾಸ್ಟ್ಯೂಮ್ ಧರಿಸಬಹುದು ಎಂದು ಅವರು ಹೇಳಿದರು ಎಂದು ಅಮಲಾ ಹೇಳಿದ್ದಾರೆ.

    ನಾನು ನಿರ್ದೇಶಕರಿಂದ ಯಾವುದೇ ವಿಶೇಷ ಕಾಸ್ಟ್ಯೂಮ್ ಪಡೆಯಲು ನಿರಾಕರಿಸಿದೆ. ಅಲ್ಲದೆ ಈ ಬೆತ್ತಲೆ ದೃಶ್ಯ ಚಿತ್ರೀಕರಿಸಲು ಒಪ್ಪಿಕೊಂಡೆ. ನಾನು ಒತ್ತಡದಲ್ಲಿ ಇದ್ದಾಗ ಈ ದೃಶ್ಯ ಮಾಡುತ್ತೇನೆ ಎಂದು ಒಪ್ಪಿಕೊಂಡೆ. ಅಲ್ಲದೆ ಸಿನಿಮಾ ಸೆಟ್‍ನಲ್ಲಿ ಏನಾಗಬಹುದು ಎಂದು ನೋಡಲು ಕಾತುರದಿಂದ ಕಾಯುತ್ತಿದ್ದೆ. ಬೆತ್ತಲೆ ದೃಶ್ಯ ಚಿತ್ರೀಕರಿಸುವಾಗ ಸಿನಿಮಾ ಸೆಟ್‍ನಲ್ಲಿ ಕೇವಲ 15 ಮಂದಿ ಇದ್ದರು. ಅಲ್ಲಿದ್ದ ಸಿಬ್ಬಂದಿ ಒಳ್ಳೆಯವರು ಆಗಿರದೇ ಇದ್ದರೆ ಆ ದೃಶ್ಯ ಚೆನ್ನಾಗಿ ಬರುತ್ತಿರಲಿಲ್ಲ ಎಂದು ತಿಳಿಸಿದ್ದಾರೆ.

    ಅಮಲಾ ಅವರು ಬೆತ್ತಲಾಗಿ ಟೀಸರ್‍ನಲ್ಲಿ ಕಾಣಿಸಿಕೊಂಡಿದ್ದಕ್ಕೆ ಕೆಲವರು ಮೆಚ್ಚುಗೆ ವ್ಯಕ್ತಪಡಿಸಿದ್ದರೆ, ಮತ್ತೆ ಕೆಲವರು ಅವರನ್ನು ಟೀಕಿಸಿ ಆಕ್ರೋಶ ಹೊರ ಹಾಕಿದ್ದರು. ಟೀಕೆಗಳಿಗೆ ಪ್ರತಿಕ್ರಿಯಿಸಿದ ಅಮಲಾ, ನಾನು ಪ್ರಾಮಾಣಿಕತೆಯಿಂದ ಈ ನಿರ್ಧಾರ ತೆಗೆದುಕೊಂಡಿದ್ದೇನೆ. ಈ ಸಿನಿಮಾ ಬಹಳ ಚೆನ್ನಾಗಿ ಇರಲಿದೆ ಎಂದು ಹೇಳಿದರು.

    https://twitter.com/karanjohar/status/1140930156929794048?ref_src=twsrc%5Etfw%7Ctwcamp%5Etweetembed%7Ctwterm%5E1140930156929794048&ref_url=https%3A%2F%2Fpublictv.jssplgroup.com%2Famala-paul-bares-all-after-daring-first-look%2Famp

  • 39ನೇ ವಸಂತಕ್ಕೆ ಕಾಲಿಟ್ಟ ಗೋಲ್ಡನ್ ಸ್ಟಾರ್ – ಹುಟ್ಟುಹಬ್ಬಕ್ಕೆ ಗೀತಾ ಟೀಸರ್ ರಿಲೀಸ್

    39ನೇ ವಸಂತಕ್ಕೆ ಕಾಲಿಟ್ಟ ಗೋಲ್ಡನ್ ಸ್ಟಾರ್ – ಹುಟ್ಟುಹಬ್ಬಕ್ಕೆ ಗೀತಾ ಟೀಸರ್ ರಿಲೀಸ್

    ಬೆಂಗಳೂರು: ಗೋಲ್ಡನ್ ಸ್ಟಾರ್ ಗಣೇಶ್ ಅವರು ಇಂದು 39ನೇ ವಸಂತಕ್ಕೆ ಕಾಲಿಟ್ಟಿದ್ದು, ಅವರ ಹುಟ್ಟುಹಬ್ಬಕ್ಕೆ ‘ಗೀತಾ’ ಚಿತ್ರದ ಟೀಸರ್ ಬಿಡುಗಡೆ ಆಗಿದೆ.

    ಗಣೇಶ್ ಅವರು ಈ ವರ್ಷ ತಮ್ಮ ಹುಟ್ಟುಹಬ್ಬವನ್ನು ಆಚರಿಸುತ್ತಿಲ್ಲ. ಈ ಬಗ್ಗೆ ಅವರು ತಮ್ಮ ಟ್ವಿಟ್ಟರಿನಲ್ಲಿ ಸ್ಪಷ್ಟನೆ ಕೂಡ ನೀಡಿದ್ದರು. ಇಂದು ಗಣೇಶ್ ಅವರ ಹುಟ್ಟುಹಬ್ಬದ ಪ್ರಯುಕ್ತವಾಗಿ ಅವರು ಅಭಿನಯದ ‘ಗೀತಾ’ ಚಿತ್ರದ ಟೀಸರ್ ರಿಲೀಸ್ ಆಗಿದೆ.

    ಗೀತಾ ಚಿತ್ರದ ಟೀಸರ್ ನಲ್ಲಿ ಗಣೇಶ್ ಕನ್ನಡ ಭಾಷೆಗಾಗಿ ಹೋರಾಟ ನಡೆಸಿದ್ದಾರೆ. ಅಲ್ಲದೆ ಗಣೇಶ್ ‘ಕರ್ನಾಟಕದಲ್ಲಿ ಕನ್ನಡಿಗನೇ ಯಜಮಾನ’, ‘ಕರ್ನಾಟಕದಲ್ಲಿ ಕನ್ನಡಿಗನೇ ಸಾರ್ವಭೌಮ’ ಎಂಬ ಪಂಚಿಂಗ್ ಡೈಲಾಗ್‍ನಲ್ಲಿ ಹೊಡೆದಿದ್ದಾರೆ. ಈ ಚಿತ್ರದ ಚಿತ್ರೀಕರಣವನ್ನು ಮನಾಲಿ, ಕೋಲ್ಕತ್ತಾ, ಮೈಸೂರು, ಹೈದರಾಬಾದ್, ಬೆಂಗಳೂರು ಮತ್ತು ಇನ್ನಿತರ ಸ್ಥಳಗಳಲ್ಲಿ ನಡೆಸಲಾಗಿದೆ. ಗಣೇಶ್ ಅವರೊಡನೆ ಸಾನ್ವಿ, ಪಾರ್ವತಿ, ಪ್ರಯಾಗ ಮಾರ್ಟಿನ್, ಸುಧಾರಾಣಿ, ದೇವರಾಜ್, ಅಚ್ಯುತ್, ರಂಗಾಯಣ ರಘು ಮತ್ತು ಇನ್ನಿತರರು ಅಭಿನಯಿಸಿದ್ದಾರೆ.

    ಹುಟ್ಟುಹಬ್ಬ ಏಕೆ ಆಚರಿಸುತ್ತಿಲ್ಲ:
    ಗಣೇಶ್ ತಮ್ಮ ಟ್ವಿಟ್ಟರಿನಲ್ಲಿ, ನನ್ನ ಅಚ್ಚು ಮೆಚ್ಚಿನ ಪ್ರೀತಿಯ ಅಭಿಮಾನಿಗಳು, ಹಿತೈಷಿಗಳು, ಸ್ನೇಹಿತರಲ್ಲಿ ಒಂದು ಕಳಕಳಿಯ ವಿನಂತಿ. ಈ ಸಲ ನಾನು ಹುಟ್ಟುಹಬ್ಬ ಆಚರಿಸುತ್ತಿಲ್ಲ. ಕಾರಣ ಕೆಲವು ತಿಂಗಳ ಹಿಂದೆಯಷ್ಟೇ ನನ್ನ ತಂದೆಯವರನ್ನು ಅಗಲಿದ್ದೇನೆ ಅಲ್ಲದೇ ಈ ಸಂದರ್ಭದಲ್ಲಿ ಮನೆಯಲ್ಲಿ ನಾವ್ಯಾರೂ ಇರುವುದಿಲ್ಲ. ಆದ್ದರಿಂದ ದೂರದ ಊರುಗಳಿಂದ ಬಂದು ಕಾಯುವ ಪ್ರಯತ್ನ ಮಾಡಬೇಡಿ. ನನ್ನ ಹುಟ್ಟುಹಬ್ಬ ಆಚರಿಸಲು ದೂರದಿಂದ ಹಲವು ಸಿದ್ಧತೆಗಳೊಂದಿಗೆ ಬಂದು ಶುಭಕೋರಿ ಸಂಭ್ರಮಿಸುವ ನಿಮ್ಮ ಪ್ರೀತಿಗೆ ನಾನೆಂದೂ ಋಣಿ.

    ಆದ್ದರಿಂದ ಅಭಿಮಾನಿಗಳು ದಯವಿಟ್ಟು ಹಾರ, ಕೇಕ್, ಬ್ಯಾನರ್ ಗಳಿಗಾಗಿ ಹಣ ಖರ್ಚು ಮಾಡದೇ ಹತ್ತಿರದ ಅನಾಥಾಶ್ರಮ, ವೃದ್ಧಾಶ್ರಮಗಳಿಗೆ ಸಹಾಯವಾಗುವಂತಹ ಕೆಲಸ ಮಾಡಿದರೆ ಅದೇ ನನಗೆ ನೀವು ಕೊಡುವ ಅತ್ಯುತ್ತಮ ಉಡುಗೊರೆ, ಇಷ್ಟು ಪ್ರೀತಿ, ಅಭಿಮಾನ ಹೊಂದಿರುವ ನೀವು ನನ್ನ ಕೋರಿಕೆಯನ್ನು ಅರ್ಥ ಮಾಡಿಕೊಂಡು, ಗಂಭೀರವಾಗಿ ಪರಿಗಣಿಸುವಿರಿ ಎಂಬ ಸಂಪೂರ್ಣ ವಿಶ್ವಾಸವಿದೆ. ದಯವಿಟ್ಟು ಸಹಕರಿಸಿ. ನಿಮ್ಮ ಪ್ರೀತಿ ಸದಾ ಇರಲಿ ಎಂದು ಗಣೇಶ್ ವಿನಂತಿಸಿಕೊಂಡಿದ್ದಾರೆ.

  • ಪ್ರಜ್ವಲ್ ಬರ್ತ್ ಡೇಗೆ ಇನ್‌ಸ್ಪೆಕ್ಟರ್‌ ವಿಕ್ರಮ್ ಸ್ಪೆಷಲ್ ಟೀಸರ್!

    ಪ್ರಜ್ವಲ್ ಬರ್ತ್ ಡೇಗೆ ಇನ್‌ಸ್ಪೆಕ್ಟರ್‌ ವಿಕ್ರಮ್ ಸ್ಪೆಷಲ್ ಟೀಸರ್!

    ಬೆಂಗಳೂರು: ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ಅಭಿನಯದ ಇನ್‌ಸ್ಪೆಕ್ಟರ್‌ ವಿಕ್ರಂ ಚಿತ್ರವೀಗ ಟೀಸರ್ ಕಾರಣದಿಂದ ಸಖತ್ ಸುದ್ದಿ ಮಾಡುತ್ತಿದೆ. ಈ ಸಿನಿಮಾ ಮೂಲಕವೇ ಪ್ರಜ್ವಲ್ ವೃತ್ತಿ ಬದುಕಿನ ಮಹತ್ವದ ಮೈಲಿಗಲ್ಲಾಗುವಂಥಾ ಸೂಚನೆಗಳೇ ದಟ್ಟವಾಗಿವೆ. ಇತ್ತೀಚೆಗಷ್ಟೇ ಈ ಚಿತ್ರದ ಟೀಸರ್ ಬಿಡುಗಡೆಯಾಗಿ ಹೆಚ್ಚಿನ ವೀಕ್ಷಣೆಯೊಂದಿಗೆ ಪ್ರೇಕ್ಷಕರನ್ನ ತಲುಪಿಕೊಂಡಿತ್ತು. ಇದೀಗ ಜುಲೈ ಮೂರನೇ ತಾರೀಕು ಮಧ್ಯರಾತ್ರಿ ಮತ್ತೊಂದು ವಿಶೇಷ ಟೀಸರ್ ಬಿಡುಗಡೆಗೊಳಿಸಲು ಚಿತ್ರತಂಡ ನಿರ್ಧರಿಸಿದೆ.

    ಹೀಗೆ ಇನ್‌ಸ್ಪೆಕ್ಟರ್‌ ವಿಕ್ರಂ ಚಿತ್ರತಂಡ ತರಾತುರಿಯಿಂದ ಮತ್ತೊಂದು ಟೀಸರ್ ಬಿಡುಗಡೆಗೆ ಮುಂದಾಗಿರೋದರ ಹಿಂದೆ ಪ್ರಜ್ವಲ್ ದೇವರಾಜ್ ಅವರಿಗೆ ಬರ್ತ್‍ಡೇ ಗಿಫ್ಟು ಕೊಡುವ ಇರಾದೆ ಇದೆ. ಜೂನ್ 4ನೇ ತಾರೀಕು ಪ್ರಜ್ವಲ್ ಹುಟ್ಟಿದ ದಿನ. ಆದ್ದರಿಂದ ಜುಲೈ 3ನೇ ತಾರೀಕಿನ ನಡು ರಾತ್ರಿಯೇ ಈ ವಿಶೇಷವಾದ ಟೀಸರ್ ಬಿಡುಗಡೆಗೊಳ್ಳಲಿದೆಯಂತೆ.

    ವಿಖ್ಯಾತ್ ನಿರ್ಮಾಣ ಮಾಡಿರೋ ಈ ಚಿತ್ರವನ್ನು ಶ್ರೀ ನರಸಿಂಹ ರೆಡ್ಡಿ ನಿರ್ದೇಶನ ಮಾಡಿದ್ದಾರೆ. ಜಾಕಿ ಖ್ಯಾತಿಯ ಭಾವನಾ ಈ ಚಿತ್ರದ ಮೂಲಕ ಮೊದಲ ಸಲ ಪ್ರಜ್ವಲ್ ಜೋಡಿಯಾಗಿ ನಟಿಸಿದ್ದಾರೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ ಕೂಡಾ ಅತಿಥಿ ಪಾತ್ರವೊಂದರ ಮೂಲಕ ಸಾಥ್ ಕೊಟ್ಟಿರೋದು ಈ ಸಿನಿಮಾ ಬಗೆಗಿನ ನಿರೀಕ್ಷೆ ಮತ್ತಷ್ಟು ಗರಿಗೆದರುವಂತೆ ಮಾಡಿದೆ.

    ಇದೇ ಹೊತ್ತಿನಲ್ಲಿ ಪ್ರಜ್ವಲ್ ದೇವರಾಜ್ ಅವರ ಮುಂದೆ ಅಪರೂಪ ಅನ್ನಿಸುವಂಥಾ ಸಾಲು ಸಾಲು ಅವಕಾಶಗಳಿವೆ. ಒಂದು ಚಿತ್ರ ಚಿತ್ರೀಕರಣದ ಹಂತದಲ್ಲಿರುವಾಗಲೇ ಮತ್ತೊಂದು ಹೊಸಾ ಆಫರ್ ಅವರನ್ನು ಅರಸಿ ಬರುತ್ತಿದೆ. ಹೀಗೆ ಮದುವೆಯ ನಂತರದಲ್ಲಿ ಅವರ ವೃತ್ತಿ ಜೀವನ ಅಚ್ಚರಿದಾಯಕವಾಗಿ ಟೇಕಾಫ್ ಆಗಿದೆ. ಅವರ ಹಿಟ್ ಯಾನ ಇನ್‌ಸ್ಪೆಕ್ಟರ್‌ ವಿಕ್ರಂ ಚಿತ್ರದಿಂದಲೇ ಶುರುವಾಗೋ ಲಕ್ಷಣಗಳೇ ಢಾಳಾಗಿವೆ.

  • ಸಂಪೂರ್ಣ ಬೆತ್ತಲಾಗಿ ಪ್ರೇಕ್ಷಕರ ಮುಂದೆ ಬಂದ ಹೆಬ್ಬುಲಿ ನಟಿ

    ಸಂಪೂರ್ಣ ಬೆತ್ತಲಾಗಿ ಪ್ರೇಕ್ಷಕರ ಮುಂದೆ ಬಂದ ಹೆಬ್ಬುಲಿ ನಟಿ

    ಚೆನ್ನೈ: ಬಹುಭಾಷಾ ನಟಿ ಅಮಲಾ ಪೌಲ್ ಅವರು ತಮಿಳಿನಲ್ಲಿ ನಟಿಸಿದ ‘ಅದಾಯಿ’ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಈ ಟೀಸರ್‍ನಲ್ಲಿ ನಟಿ ಸಂಪೂರ್ಣ ಬೆತ್ತಲಾಗಿ ಪ್ರೇಕ್ಷಕರ ಮುಂದೆ ಬಂದಿದ್ದಾರೆ.

    ಬಾಲಿವುಡ್ ಖ್ಯಾತ ನಿರ್ದೇಶಕ ಕರಣ್ ಜೋಹರ್ ತಮ್ಮ ಟ್ವಿಟ್ಟರಿನಲ್ಲಿ ನಟಿ ಅಮಲಾ ಪೌಲ್ ನಟಿಸಿದ ಅದಾಯಿ ಚಿತ್ರದ ಟೀಸರ್ ಬಿಡುಗಡೆ ಮಾಡಿದ್ದಾರೆ. ಈ ಟೀಸರ್ ಒಂದೂವರೆ ನಿಮಿಷವಿದ್ದು, ಅಮಲಾ ಈ ಟೀಸರ್ ನ ಕೊನೆಯಲ್ಲಿ ಸಂಪೂರ್ಣ ಬೆತ್ತಲಾಗಿ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾರೆ.

    ತಾಯಿ ತನ್ನ ಕಾಣೆಯಾದ ಮಗಳನ್ನು ಹುಡುಕಿಕೊಡಿ ಎಂದು ಪೊಲೀಸ್ ಠಾಣೆಯಲ್ಲಿ ದೂರು ನೀಡುತ್ತಾರೆ. ಇಲ್ಲಿಂದ ಶುರುವಾಗುವ ಈ ಟೀಸರ್ ಕೊನೆಯಲ್ಲಿ ಪ್ರತ್ಯೇಕ ಬಹುಮಹಡಿ ಕಟ್ಟಡದಲ್ಲಿ ಅಮಲಾ ಸಂಪೂರ್ಣವಾಗಿ ನಗ್ನಳಾಗಿ ಏಳುವ ದೃಶ್ಯದೊಂದಿಗೆ ಕೊನೆ ಆಗಿದೆ.

    ಈ ಚಿತ್ರದಲ್ಲಿ ಅಮಲಾ ಬೋಲ್ಡ್ ಯುವ ಮಹಿಳೆಯ ಪಾತ್ರದಲ್ಲಿ ನಟಿಸಿದ್ದಾರೆ. ಈ ಚಿತ್ರಕ್ಕೆ ‘ಎ’ ಸರ್ಟಿಫಿಕೇಟ್ ದೊರೆತಿದ್ದು, ಚೆನ್ನೈ ಸುತ್ತಮುತ್ತ ಈ ಚಿತ್ರದ ಚಿತ್ರೀಕರಣ ನಡೆದಿದೆ. ಪ್ರದೀಪ್ ಕುಮಾರ್ ಹಾಗೂ ಬಾಂಡ್ ಓರ್ಕಾ ಈ ಚಿತ್ರಕ್ಕೆ ಸಂಗೀತ ನೀಡಿದ್ದಾರೆ.

    ಈ ಚಿತ್ರದ ಫಸ್ಟ್ ಲುಕ್ ಬಿಡುಗಡೆ ಆಗಿದ್ದಾಗ ನೋಡುಗರನ್ನು ಬೆಚ್ಚಿ ಬೀಳಿಸಿತ್ತು. ಫಸ್ಟ್ ಲುಕ್‍ನಲ್ಲಿ ಅಮಲಾ, ವಿಭಿನ್ನ ಲುಕ್ ನಲ್ಲಿ ಕಾಣಿಸಿಕೊಳ್ಳುವ ಮೂಲಕ ಅಭಿಮಾನಿಗಳಿಗೆ ಶಾಕ್ ನೀಡಿದ್ದರು. ಕಂಬವನ್ನು ಹಿಡಿದು ಸಹಾಯಕ್ಕಾಗಿ ಅಂಗಲಾಚುತ್ತಿರುವ ರೂಪದಲ್ಲಿ ಅಮಲಾ ಪೌಲ್ ಕಾಣಿಸಿಕೊಂಡಿದ್ದರು.

    ಅಲ್ಲದೆ ಅಮಲಾ ದೇಹದಲ್ಲಿ ಗಾಯಗಳಾಗಿದ್ದು, ರಕ್ತ ಕಾಣುತ್ತಿತ್ತು. ಟಾಯ್ಲೆಟ್ ನಲ್ಲಿರುವ ಪೇಪರ್ ಬಳಸಿ ಮೈಯನ್ನು ಮುಚ್ಚಿಕೊಂಡಿದ್ದರು. ಸಿನಿಮಾ ಟೈಟಲ್ ಕೆಳಗೆ ಅಹಂಕಾರ, ಕೌಶಲ್ಯ ಮತ್ತು ಧೈರ್ಯಶಾಲಿ ಎಂಬ ಪದಗಳನ್ನು ಬರೆಯಲಾಗಿತ್ತು.

    https://twitter.com/karanjohar/status/1140930156929794048?ref_src=twsrc%5Etfw%7Ctwcamp%5Etweetembed%7Ctwterm%5E1140930156929794048%7Ctwgr%5E393039363b636f6e74726f6c&ref_url=https%3A%2F%2Ftimesofindia.indiatimes.com%2Fentertainment%2Ftamil%2Fmovies%2Fnews%2Faadai-teaser-amala-paul-bares-all-after-daring-first-look%2Farticleshow%2F69841934.cms

  • ಸಾಹೋ ಟೀಸರ್ ರಿಲೀಸ್ ದಿನಾಂಕ ಅನೌನ್ಸ್

    ಸಾಹೋ ಟೀಸರ್ ರಿಲೀಸ್ ದಿನಾಂಕ ಅನೌನ್ಸ್

    ಹೈದರಾಬಾದ್: ನಟ ಪ್ರಭಾಸ್ ಅಭಿನಯದ ‘ಸಾಹೋ’ ಸಿನಿಮಾ ಆರಂಭದಿಂದಲೂ ಸದ್ದು ಮಾಡುತ್ತಿದ್ದು, ಇದೀಗ ನಟಿ ಶ್ರದ್ಧಾ ಕಪೂರ್ ಅವರ ಸಿನಿಮಾ ಪೋಸ್ಟರ್ ಹಾಕಿ ಅಭಿಮಾನಿಗಳಿಗೆ ಒಂದು ಗುಡ್‍ನ್ಯೂಸ್ ನೀಡಿದ್ದಾರೆ.

    ನಟ ಪ್ರಭಾಸ್ ಅವರು, ಶ್ರದ್ಧಾ ಕಪೂರ್ ಗನ್ ಹಿಡುದಿರುವ ಪೋಸ್ಟರ್ ಹಾಕಿ ಸಿನಿಮಾ ಟೀಸರ್ ಬಗ್ಗೆ ತಿಳಿಸಿದ್ದಾರೆ. ‘ಹೇ ಡಾರ್ಲಿಂಗ್ಸ್, ಇದೇ ಜೂನ್ 13 ರಂದು ‘ಸಾಹೋ’ ಸಿನಿಮಾದ ಟೀಸರ್ ಬಿಡುಗಡೆಯಾಗಲಿದೆ. ಜೊತೆಗೆ ಜೂನ್ 14 ರಂದು ಥಿಯೇಟರ್ ಗಳಲ್ಲಿ ಇದನ್ನು ನೀವು ನೋಡಬಹುದು’ ಎಂದು ಇನ್​​​ಸ್ಟಾಗ್ರಾಂನಲ್ಲಿ ಬರೆದು ಅಭಿಮಾನಿಗಳಿಗೆ ಸರ್ಪ್ರೈಸ್ ಕೊಟ್ಟಿದ್ದಾರೆ.

    ಸುಜಿತ್ ನಿರ್ದೇಶಿರುವ ಸಿನಿಮಾ ಇದ್ದಾಗಿದ್ದು, ಸುಮಾರು 300 ಕೋಟಿ ಬಜೆಟ್‍ನಲ್ಲಿ ಚಿತ್ರವನ್ನು ನಿರ್ಮಿಸಲಾಗಿದೆ. ಯೂವಿ ಕ್ರಿಯೇಷನ್ಸ್ ಈ ಸಿನಿಮಾವನ್ನು ನಿರ್ಮಿಸಿದೆ.

    ನಟ ಪ್ರಭಾಸ್ ಅವರು ಕೆಲವು ದಿನ ಹಿಂದೆಯಷ್ಟೆ ಇನ್‍ಸ್ಟಾಗ್ರಾಂ ಖಾತೆಯನ್ನು ತೆರೆದಿದ್ದು, ‘ಸಾಹೋ’ ಸಿನಿಮಾ ಒಂದೊಂದೆ ಪೋಸ್ಟರ್ ಅನ್ನು ಪೋಸ್ಟ್ ಮಾಡಿದ್ದಾರೆ. ಈ ಸಿನಿಮಾದಲ್ಲಿ ಪ್ರಭಾಸ್‍ಗೆ ನಾಯಕಿಯಾಗಿ ಶ್ರದ್ಧಾ ಕಪೂರ್ ಅಭಿನಯಿಸಿದ್ದಾರೆ.

    https://www.instagram.com/p/ByhqMDHHIvX/

  • ‘ಅವನೇ ಶ್ರೀಮನ್ನಾರಾಯಣ’ ಟೀಸರ್ ರಿಲೀಸ್

    ‘ಅವನೇ ಶ್ರೀಮನ್ನಾರಾಯಣ’ ಟೀಸರ್ ರಿಲೀಸ್

    ಬೆಂಗಳೂರು: ನಟ ರಕ್ಷಿತ್ ಶೆಟ್ಟಿ ಅಭಿನಯದ ‘ಅವನೇ ಶ್ರೀಮನ್ನಾರಾಯಣ’ ಚಿತ್ರ ಸ್ಯಾಂಡಲ್‍ವುಡ್ ಮತ್ತೊಂದು ಹೈವೋಲ್ಟೇಜ್ ಸಿನಿಮಾವಾಗಿದೆ. ಇದೀಗ ಈ ಚಿತ್ರದ ಮಗದೊಂದು ಟೀಸರ್ ಬಿಡುಗಡೆಯಾಗಿದೆ.

    ರಕ್ಷಿತ್ ಹುಟ್ಟುಹಬ್ಬದ ಪ್ರಯುಕ್ತ ಗುರುವಾರವೇ ಯೂಟ್ಯೂಬ್‍ನಲ್ಲಿ ಬಿಡುಗಡೆಯಾಗಿದೆ. ಟೀಸರ್ ನ ಕ್ವಾಲಿಟಿ ಪ್ರೇಕ್ಷಕರನ್ನು ಸೆಳೆಯುತ್ತಿದ್ದು, ‘ರಾಕ್ಷಸನ ಎದುರಿಸಬೇಕಾದರೆ, ಮೊದಲು ನಮ್ಮೊಳಗಿನ ರಾಕ್ಷಸನಿಂದ ಮುಕ್ತವಾಗಬೇಕು” ಎಂಬ ಡೈಲಾಗ್ ಅಭಿಮಾನಿಗಳಿಗೆ ಇಷ್ಟವಾಗಿದೆ.

    ಕೆಜಿಎಫ್ ಚಿತ್ರದಂತೆ 1980ರ ದಶಕದ ಬ್ಯಾಕ್‍ಡ್ರಾಪ್‍ನಲ್ಲಿ ಸಾಗುವ ‘ಅವನೇ ಶ್ರೀಮನ್ನಾರಾಯಣ’ ಸಿನಿಮಾಗೆ ಸಾವಿರಾರು ಜನ ಕಲಾವಿದರು ಸಾಥ್ ನೀಡಿದ್ದಾರೆ. ಬಿಡುಗಡೆಯಾದ ಒಂದೇ ದಿನದಲ್ಲಿ ಯೂಟ್ಯೂಬ್‍ನಲ್ಲಿ ನಂಬರ್ 1 ಟ್ರೆಂಡಿಂಗ್ ಆಗಿದೆ.

    ಕನ್ನಡ, ತೆಲುಗು, ತಮಿಳು, ಮಲೆಯಾಳಂ, ಹಿಂದಿ ಸೇರಿದಂತೆ ಪಂಚ ಭಾಷೆಯಲ್ಲಿ ಬೆಳ್ಳಿತೆರೆಗೆ ಬರಲಿದೆ. ಈ ಚಿತ್ರಕ್ಕೆ ಎಚ್.ಕೆ ಪ್ರಕಾಶ್ ಹಾಗೂ ಪುಷ್ಕರ್ ಮಲ್ಲಿಕಾರ್ಜುನಯ್ಯ ಕೋಟಿ ಕೋಟಿ ಬಂಡವಾಳ ಹೂಡಿದ್ದಾರೆ. ಸಿನಿಮಾದಲ್ಲಿ ರಕ್ಷಿತ್ ಶೆಟ್ಟಿಗೆ ನಟಿ ಶಾನ್ವಿ ಶ್ರೀವತ್ಸವ್ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ಇದೇ ಮೊದಲ ಬಾರಿ ರಕ್ಷಿತ್ ಶೆಟ್ಟಿ ಅವರು ಪೊಲೀಸ್ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

    ಗುರುವಾರ ರಕ್ಷಿತ್ ಶೆಟ್ಟಿ ಅವರ ಹುಟ್ಟುಹಬ್ಬವಿತ್ತು. ಹೀಗಾಗಿ ಹಲವು ತಿಂಗಳ ಬಳಿಕ ಸಾಮಾಜಿಕ ಜಾಲತಾಣಕ್ಕೆ ಮರಳಿದ್ದು, ಅವನೇ ಶ್ರೀಮನ್ನಾರಾಯಣ ಚಿತ್ರದ ಇಂಟ್ರಸ್ಟಿಂಗ್ ಪೋಸ್ಟರ್ ಅನ್ನು ಟ್ವಿಟ್ಟರಿನಲ್ಲಿ ಪ್ರೊಫೈಲ್ ಫೋಟೋವನ್ನಾಗಿ ಹಾಕಿದ್ದರು.

  • ರಕ್ಷಿತ್ ಶೆಟ್ಟಿಗೆ 36ರ ಹುಟ್ಟುಹಬ್ಬದ ಸಂಭ್ರಮ- ಅಭಿಮಾನಿಗಳಿಗೆ ಸಿಂಪಲ್ ಸ್ಟಾರ್‌ನಿಂದ ಗಿಫ್ಟ್

    ರಕ್ಷಿತ್ ಶೆಟ್ಟಿಗೆ 36ರ ಹುಟ್ಟುಹಬ್ಬದ ಸಂಭ್ರಮ- ಅಭಿಮಾನಿಗಳಿಗೆ ಸಿಂಪಲ್ ಸ್ಟಾರ್‌ನಿಂದ ಗಿಫ್ಟ್

    ಬೆಂಗಳೂರು: ಸ್ಯಾಂಡಲ್‍ವುಡ್ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಇಂದು ತಮ್ಮ 36ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ.

    ರಕ್ಷಿತ್ ಶೆಟ್ಟಿ ಅವರ ಹುಟ್ಟುಹಬ್ಬಕ್ಕೆ ಅಭಿಮಾನಿಗಳಿಂದ ಶುಭಾಶಯಗಳ ಮಹಾಪೂರವೇ ಹರಿದು ಬರುತ್ತಿದೆ. ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಸಂಜೆ ‘ಅವನೇ ಶ್ರೀಮನ್ನಾರಾಯಣ’ ಚಿತ್ರತಂಡ ಟೀಸರ್ ಬಿಡುಗಡೆ ಆಗಲಿದೆ.

    ಸದ್ಯ ರಕ್ಷಿತ್ ಶೆಟ್ಟಿ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಈಗಾಗಲೇ ‘ಅವನೇ ಶ್ರೀಮನ್ನಾರಾಯಣ’ ಹಾಗೂ ‘777 ಚಾರ್ಲಿ’ ಸಿನಿಮಾದ ಪೋಸ್ಟರ್ ರಿಲೀಸ್ ಆಗಿದೆ. ಈ ಎರಡು ಚಿತ್ರದ ಪೋಸ್ಟರ್ ನೋಡಿದ ಅಭಿಮಾನಿಗಳು ಖುಷಿಯಾಗಿದ್ದಾರೆ. ಈಗ ಅವರು ಅವನೇ ಶ್ರೀಮನ್ನಾರಾಯಣ ಚಿತ್ರದ ಟೀಸರ್ ಗಾಗಿ ಕಾಯುತ್ತಿದ್ದಾರೆ.

    ಹಲವು ತಿಂಗಳ ಬಳಿಕ ಇಂದು ರಕ್ಷಿತ್ ಶೆಟ್ಟಿ ಸಾಮಾಜಿಕ ಜಾಲತಾಣಕ್ಕೆ ಮರಳಿದ್ದು ಅವನೇ ಶ್ರೀಮನ್ನಾರಾಯಣ ಚಿತ್ರದ ಇಂಟ್ರಸ್ಟಿಂಗ್ ಪೋಸ್ಟರ್ ವೊಂದು ಟ್ವಿಟ್ಟರಿನಲ್ಲಿ ಪ್ರೋಫೈಲ್ ಫೋಟೋವನ್ನಾಗಿ ಹಾಕಿದ್ದಾರೆ. ಈ ಪೋಸ್ಟರ್ ನಲ್ಲಿ ರಕ್ಷಿತ್ ಪೊಲೀಸ್ ಸಮವಸ್ತ್ರದಲ್ಲಿ ಗನ್ ಹಿಡಿದುಕೊಂಡು ನಿಂತಿದ್ದಾರೆ.

    ಅವನೇ ಶ್ರೀಮನ್ನಾರಾಯಣ ಚಿತ್ರದ ಚಿತ್ರೀಕರಣ ಸಂಪೂರ್ಣವಾಗಿದ್ದು, ಈಗ ಪೋಸ್ಟ್ ಪ್ರೊಡಕ್ಷನ್ ಕೆಲಸ ನಡೆಯುತ್ತಿದೆ. ಈ ಚಿತ್ರದ ಚಿತ್ರೀಕರಣವೇ ಬರೋಬ್ಬರಿ 600 ದಿನ ನಡೆದಿದೆ. ಈ ಚಿತ್ರವನ್ನು ಸಚಿನ್ ರವಿ ನಿರ್ದೇಶನ ಮಾಡುತ್ತಿದ್ದು, ರಕ್ಷಿತ್ ಅವರಿಗೆ ನಾಯಕಿಯಾಗಿ ಶಾನ್ವಿ ಶ್ರೀವತ್ಸ್ ನಟಿಸಿದ್ದಾರೆ.

    ರಕ್ಷಿತ್ ನಟಿಸುತ್ತಿರುವ 777 ಚಾರ್ಲಿ ಚಿತ್ರದ ಪೋಸ್ಟರ್ ಕೂಡ ರಿಲೀಸ್ ಆಗಿದೆ. ಈ ಪೋಸ್ಟರ್ ನಲ್ಲಿ ರಾಯಲ್ ಎನ್‍ಫೀಲ್ಡ್ ನಲ್ಲಿ ನಾಯಿ ಜೊತೆ ಹೋಗುತ್ತಿದ್ದಾರೆ. ಈಗಾಗಲೇ ಈ ಚಿತ್ರದ ಎರಡು ಪೋಸ್ಟರ್ ಈ ಮೊದಲು ಬಿಡುಗಡೆಯಾಗಿದೆ. ಈ ಚಿತ್ರವನ್ನು ಕಿರಣ್ ರಾಜ್ ನಿರ್ದೇಶನ ಮಾಡುತ್ತಿದ್ದಾರೆ.

    ರಕ್ಷಿತ್ ಶೆಟ್ಟಿ ಕೆಲ ದಿನಗಳ ಹಿಂದೆ ಹೇಳಿದಂತೆಯೇ ಸಾಮಾಜಿಕ ಜಾಲತಾಣಕ್ಕೆ ರೀ- ಎಂಟ್ರಿ ನೀಡುವ ಮೂಲಕ ತಮ್ಮ ಹುಟ್ಟುಹಬ್ಬಕ್ಕೆ ಅಭಿಮಾನಿಗಳಿಗೆ ಗಿಫ್ಟ್ ನೀಡಿದ್ದಾರೆ.

  • ಅತ್ಯಾಕರ್ಷಕವಾದ ‘ಕುರುಕ್ಷೇತ್ರ’ದ ಹೊಸ ಟೀಸರ್ ರಿಲೀಸ್

    ಅತ್ಯಾಕರ್ಷಕವಾದ ‘ಕುರುಕ್ಷೇತ್ರ’ದ ಹೊಸ ಟೀಸರ್ ರಿಲೀಸ್

    ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಬಹುನಿರೀಕ್ಷಿತ ‘ಕುರುಕ್ಷೇತ್ರ’ ಚಿತ್ರದ ಹೊಚ್ಚ ಹೊಸ ಟೀಸರ್ ರಿಲೀಸ್ ಆಗಿದೆ.

    ನಿರ್ದೇಶಕ ಮುನಿರತ್ನ ಅವರು ಸಿನಿಮಾ ಬಿಡುಗಡೆಯ ಡೇಟ್ ಅನೌನ್ಸ್ ಮಾಡಿರುವ ಬೆನ್ನಲ್ಲೇ ‘ಕುರುಕ್ಷೇತ್ರ’ ಸಿನಿಮಾದ ಟೀಸರ್ ರಿಲೀಸ್ ಆಗಿದೆ. ಈ ಟೀಸರ್‌ನಲ್ಲಿ ಅನೇಕ ಪಾತ್ರಗಳ ಮುಖ ರಿವೀಲ್ ಮಾಡಲಾಗಿದೆ. ಅತ್ಯಾಕರ್ಷಕ ಗ್ರಾಫಿಕ್ಸ್ ಮತ್ತು ತಂತ್ರಜ್ಞಾನ ಎದ್ದು ಕಾಣುತ್ತಿದೆ. ಜೊತೆಗೆ ದುರ್ಯೋಧನನ ಇನ್ನೊಂದು ಝಲಕ್ ಈ ಟೀಸರ್‌ನಲ್ಲಿ ಸಿಕ್ಕಿದೆ.

    ದುರ್ಯೋಧನಾಗಿ ದರ್ಶನ್, ಅರ್ಜುನನಿಗೆ ಸಾರಥಿಯಾಗಿ ಕೃಷ್ಣ (ರವಿಚಂದ್ರನ್), ಕರ್ಣ (ಅರ್ಜುನ್ ಸರ್ಜಾ) ಹಾಗೂ ಭೀಷ್ಮ (ಅಂಬರೀಶ್) ಅವರ ಪಾತ್ರ ಟೀಸರ್‌ನಲ್ಲಿ ರಿವೀಲ್ ಆಗಿದೆ. ದ್ರೌಪದಿ (ಸ್ನೇಹ), ಕುಂತಿ (ಭಾರತಿ ವಿಷ್ಣುವರ್ಧನ್), ಶಕುನಿ (ರವಿಶಂಕರ್) ಮತ್ತು ಧರ್ಮರಾಯ (ಶಶಿಕುಮಾರ್) ಲುಕ್ ಕೂಡ ಬಿಡುಗಡೆಯಾಗಿದೆ.

    ಸಿನಿಮಾವನ್ನು ಮುನಿರತ್ನ ನಿರ್ಮಾಣ ಮಾಡಿದ್ದರೆ, ನಾಗಣ್ಣ ಚಿತ್ರವನ್ನ ನಿರ್ದೇಶಿಸಿದ್ದಾರೆ. ಶೀಘ್ರದಲ್ಲೇ ಕುರುಕ್ಷೇತ್ರದ ಅದ್ಧೂರಿ ಆಡಿಯೋ ರಿಲೀಸ್ ಸಮಾರಂಭ ನಡೆಯಲಿದ್ದು, ವರಮಹಾಲಕ್ಷ್ಮಿ ಹಬ್ಬಕ್ಕೆ ಚಿತ್ರ ರಿಲೀಸ್‍ಗೆ ಸಿದ್ಧವಾಗಿದೆ. ಕನ್ನಡ, ತೆಲುಗು, ತಮಿಳು, ಮಲಯಾಳಂ ಹಾಗೂ ಹಿಂದಿ ಭಾಷೆಯಲ್ಲಿ ವಿಶ್ವಾದ್ಯಂತ ತೆರೆಕಾಣುತ್ತಿದೆ.

    https://www.youtube.com/watch?v=EqmBzjcBu6s

  • ಮಾಸ್ ಪ್ರೇಕ್ಷಕರಿಗಾಗಿ ಹೊರ ಬಂತು ‘ಟಕ್ಕರ್’ ಟೀಸರ್

    ಮಾಸ್ ಪ್ರೇಕ್ಷಕರಿಗಾಗಿ ಹೊರ ಬಂತು ‘ಟಕ್ಕರ್’ ಟೀಸರ್

    – ದಾಸನ ಗರಡಿ ಹುಡುಗನ ಟಕ್ಕರ್

    ಬೆಂಗಳೂರು: ಚಂದನವನದಲ್ಲಿ ಪ್ರತಿ ದಿನ ವಿಭಿನ್ನ ಕಥಾನಕವುಳ್ಳ ಹಲವು ಸಿನಿಮಾಗಳು ಸೆಟ್ಟೇರುತ್ತವೆ. ಕೆಲವು ತಿಂಗಳ ಹಿಂದೆ ಸೆಟ್ಟೇರಿದ್ದ ಟಕ್ಕರ್ ಚಿತ್ರ ಪಕ್ಕಾ ಮಾಸ್ ಪ್ರೇಕ್ಷಕರನ್ನು ಗಮನದಲ್ಲಿರಿಸಿ ತಯಾರಿಸಲಾಗಿದೆ ಎಂದು ಟೀಸರ್ ಹೇಳುತ್ತಿದೆ. ಇಂದು ಬೆಳಗ್ಗೆ ಟಕ್ಕರ್ ಸಿನಿಮಾದ ಟೀಸರ್ ಬಿಡುಗಡೆಗೊಂಡಿದ್ದು ಗಾಂಧಿ ನಗರದಲ್ಲಿ ಹೊಸ ಸಂಚಲನ ಸೃಷ್ಟಿಸುವ ತವಕದಲ್ಲಿದೆ.

    ಚಾಲೆಂಜಿಂಗ್ ಸ್ಟಾರ್ ದರ್ಶನ್ ಸೋದರಳಿಯ ಮನೋಜ್ ಟಕ್ಕರ್ ಸಿನಿಮಾದ ಮೂಲಕ ಬಣ್ಣದ ಲೋಕಕ್ಕೆ ಪ್ರವೇಶ ನೀಡುತ್ತಿದ್ದಾರೆ. ಈ ಮೊದಲೇ ಸಿನಿಮಾ ಭರಪೂರ ಆ್ಯಕ್ಷನ್ ಸೀನ್‍ಗಳಿಂದ ಕೂಡಿರಲಿದೆ ಎಂದು ಚಿತ್ರತಂಡ ತಿಳಿಸಿತ್ತು. ನೀನು ಟಕ್ಕರ್ ಕೊಡಲು ಬಂದಿರೋದು ದಾಸನ ಗರಡಿ ಹುಡುಗನ ಜೊತೆ ಎಂಬ ಪಂಚಿಂಗ್ ಡೈಲಾಗ್ ಮೂಲಕ ಟೀಸರ್ ಆರಂಭಗೊಳ್ಳುತ್ತದೆ. ಇದೀಗ ಟೀಸರ್ ಸಿನಿ ಅಂಗಳದಲ್ಲಿ ಭರವಸೆಯನ್ನು ಹುಟ್ಟಿಸಿದೆ. ಇದನ್ನೂ ಓದಿ :  EXCLUSIVE: ದರ್ಶನ್ ಸೋದರಳಿಯ ‘ಟಕ್ಕರ್’ ಮನೋಜ್ ಫೈಟ್ ನೋಡಿ!

    ಮನೋಜ್ ತಮ್ಮ ಆ್ಯಕ್ಷನ್ ಸೀನ್ ಗಳಲ್ಲಿ ಮಾಸ್ ಅಭಿಮಾನಿಗಳನ್ನು ಸೆಳೆಯುವಲ್ಲಿ ಯಶಸ್ವಿ ಆಗುತ್ತಾರೆ ಎಂಬುವುದು ಚಿತ್ರತಂಡದ ನಂಬಿಕೆ. ಅಂತೆಯೇ ಮನೋಜ್ ಸಹ ಸಹಜ ನಟನೆಯ ಮೂಲಕ ಟೀಸರ್ ನಲ್ಲಿ ಅಬ್ಬರಿಸಿದ್ದಾರೆ. ಆ್ಯಕ್ಷನ್ ಜೊತೆ ಸಿನಿಮಾದ ಮುದ್ದಾದ ಪ್ರೇಮ ಕಥೆಯನ್ನು ಹೊಂದಿದೆ. ಮನೋಜ್ ಜೊತೆಯಾಗಿ ಪುಟ್ಟ ಗೌರಿ ಧಾರಾವಾಹಿ ಖ್ಯಾತಿಯ ರಂಜನಿ ರಾಘವನ್ ನಟಿಸಿದ್ದಾರೆ. ಇದನ್ನೂ ಓದಿ :  ಟಕ್ಕರ್ ಸೆಟ್ಟಿಗೆ ಬಂದ್ರು ದಿನಕರ್ ತೂಗುದೀಪ!

    ವಿ.ರಘು ಶಾಸ್ತ್ರಿ ನಿರ್ದೇಶನದಲ್ಲಿ ಟಕ್ಕರ್ ಮೂಡಿ ಬಂದಿದ್ದು, ಕೆ.ಎನ್.ನಾಗೇಶ್ ಕೋಗಿಲು ನಿರ್ಮಾಣವಿದೆ. ಈ ಹಿಂದೆ ಟಕ್ಕರ್ ಶೂಟಿಂಗ್ ಸೆಟ್ ಗೆ ಕುಟುಂಬ ಸಮೇತರಾಗಿ ದಿನಕರ್ ತೂಗುದೀಪ್ ಭೇಟಿ ನೀಡಿದ್ದರು. ಅಂದು ಸೃಜನ್ ಲೋಕೇಶ್ ಕೂಡಾ ತಮ್ಮ ಬ್ಯುಸಿ ಕೆಲಸ ಕಾರ್ಯಗಳ ನಡುವೆಯೂ ದಿನಕರ್ ಅವರ ಜೊತೆ ಬಂದು ಟಕ್ಕರ್ ಚಿತ್ರತಂಡಕ್ಕೆ ಹುರುಪು ತುಂಬಿದ್ದರು. ಇದನ್ನೂ ಓದಿ : ‘ಟಕ್ಕರ್’ಗಾಗಿ ಬಂತು ಫ್ಯಾಂಟಮ್!

    https://www.youtube.com/watch?v=ie-xeBo4DA4

  • ನೋ ವೇ, ಚಾನ್ಸೇ ಇಲ್ಲ, ನಾನು ಹೀರೋನೇ – ಇದು ಯಂಗ್ ರೆಬೆಲ್ ಗುಡುಗು

    ನೋ ವೇ, ಚಾನ್ಸೇ ಇಲ್ಲ, ನಾನು ಹೀರೋನೇ – ಇದು ಯಂಗ್ ರೆಬೆಲ್ ಗುಡುಗು

    – ಬಿಡುಗಡೆಯಾಯ್ತು ಜೂ.ಅಂಬಿಯ ಖಡಕ್ ಟೀಸರ್

    ಬೆಂಗಳೂರು: ರೆಬೆಲ್ ಸ್ಟಾರ್ ಅಂಬರೀಶ್ ಅವರ ಪುತ್ರ ಅಭಿಷೇಕ್ ನಟಿಸಿದ ಮೊದಲ ಚಿತ್ರ ‘ಅಮರ್’ ಟೀಸರ್ ಇಂದು ಬಿಡುಗಡೆಯಾಗಿದೆ. ಪ್ರೇಮಿಗಳ ದಿನದಂದು ಚಿತ್ರದ ಟೀಸರ್ ಅಥವಾ ಆಡಿಯೋ ಬಿಡುಗಡೆ ಮಾಡಬೇಕೆಂದು ಅಂಬರೀಶ್ ಆಸೆಪಟ್ಟಿದ್ದರು. ಈಗ ಅವರ ಆಸೆಯಂತೆ ಚಿತ್ರದ ಟೀಸರ್ ಬಿಡುಗಡೆಯಾಗಿದೆ.

    ಚಿತ್ರದ ಟೀಸರ್ ಶುರುವಾಗುವ ಮೊದಲೇ ಈ ಟೀಸರ್ ರನ್ನು ದಿವಂಗತ ಅಂಬರೀಶ್ ಅವರಿಗೆ ನಿರ್ಮಾಪಕ ಸಂದೇಶ್ ನಾಗರಾಜ್ ಅರ್ಪಿಸಿದ್ದಾರೆ. ಈ ಟೀಸರ್ ನಲ್ಲಿ ಅಭಿಷೇಕ್ ಆ್ಯಕ್ಷನ್ ಸೀನ್ ಮೂಲಕ ಎಂಟ್ರಿ ಕೊಟ್ಟಿದ್ದಾರೆ. ಅಲ್ಲದೇ ನಾನ್ ಹೀರೋ ತರ ಅಲ್ಲ, ಹೀರೋನೇ ಎಂಬ ಖಡಕ್ ಡೈಲಾಗ್ ಹೇಳಿದ್ದಾರೆ.

    ಅಂಬರೀಶ್ ನನ್ನ ಸಿನಿಮಾದಲ್ಲಿ ಇರುತ್ತಾರೆ. ಇನ್ನು ಮುಂದೆ ನಾನು ಯಾವ ಸಿನಿಮಾ ಮಾಡಿದರೂ ಅದರಲ್ಲಿ ಅಪ್ಪಾಜಿ ಇರುತ್ತಾರೆ ಎಂದು ಅಭಿಷೇಕ್ ಹೇಳಿದ್ದರು. ಹಾಗೆಯೇ ಅಮರ್ ಚಿತ್ರದಲ್ಲಿ ತಮ್ಮ ತಂದೆಯ ‘ಚಾನ್ಸೇ ಇಲ್ಲ, ನೋ ವೇ’ ಎಂಬ ಫೇಮಸ್ ಡೈಲಾಗ್‍ವನ್ನು ಹೇಳಿದ್ದಾರೆ. ಟೀಸರ್ ನಲ್ಲಿ ನಾಯಕಿಯ ಪಾತ್ರವನ್ನು ಪರಿಚಯಿಸದೇ ಗುಟ್ಟಾಗಿ ಇಡಲಾಗಿದೆ.

    ಈ ಚಿತ್ರದ ಟೀಸರ್ ಬಗ್ಗೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು, “ನನ್ನ ಪ್ರೀತಿಯ ತಮ್ಮ ಅಭಿ ಅಂಬರೀಷ್ `ಅಮರ್’ ಚಿತ್ರದ ಮೂಲಕ ಯಂಗ್ ರೆಬೆಲ್ ಸ್ಟಾರ್ ಆಗಿ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುತ್ತಿದ್ದಾನೆ. ಚಿತ್ರದ ಟೀಸರ್ ಈಗ ನಿಮ್ಮ ಮುಂದೆ. ನೋಡಿ ಹರಸಿ, ಪ್ರೀತಿಯಿಂದ ಅಭಿಯನ್ನು ಬರಮಾಡಿಕೊಳ್ಳಿ” ಎಂದು ಟ್ವೀಟ್ ಮಾಡಿದ್ದಾರೆ.

    ಅಮರ್ ಚಿತ್ರದಲ್ಲಿ ಅಭಿಷೇಕ್‍ಗೆ ನಾಯಕಿಯಾಗಿ ತಾನ್ಯ ಹೋಪ್ ನಟಿಸಿದ್ದಾರೆ. ಚಿತ್ರ ರೊಮ್ಯಾಂಟಿಕ್ ಆ್ಯಕ್ಷನ್ ಚಿತ್ರ ಆಗಿದ್ದು, ಈ ಚಿತ್ರವನ್ನು ನಾಗಶೇಖರ್ ನಿರ್ದೇಶಿಸಿದ್ದಾರೆ. ಸಂದೇಶ್ ನಾಗರಾಜ್ ಈ ಚಿತ್ರವನ್ನು ನಿರ್ಮಿಸಿದರೆ, ಅರ್ಜುನ್ ಜನ್ಯ ಸಂಗೀತ ನೀಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv