Tag: teasing

  • ಸಾನಿಯಾ ಮಿರ್ಜಾಗೆ ಕಿರುಕುಳ: ಅಂತರಾಷ್ಟ್ರೀಯ ಪಂದ್ಯದಿಂದ ನಿಷೇಧಕ್ಕೊಳಗಾದ ಬಾಂಗ್ಲಾ ಕ್ರಿಕೆಟಿಗ!

    ಸಾನಿಯಾ ಮಿರ್ಜಾಗೆ ಕಿರುಕುಳ: ಅಂತರಾಷ್ಟ್ರೀಯ ಪಂದ್ಯದಿಂದ ನಿಷೇಧಕ್ಕೊಳಗಾದ ಬಾಂಗ್ಲಾ ಕ್ರಿಕೆಟಿಗ!

    ಢಾಕಾ: ಭಾರತದ ಖ್ಯಾತ ಟೆನ್ನಿಸ್ ಆಟಗಾರ್ತಿ ಸಾನಿಯಾ ಮಿರ್ಜಾರವರಿಗೆ ಕಿರುಕುಳ ನೀಡಿರುವ ಆರೋಪ ಎದುರಿಸುತ್ತಿರುವ ಬಾಂಗ್ಲಾ ಕ್ರಿಕೆಟಿಗ ಶಬ್ಬೀರ್ ರೆಹಮಾನ್‍ಗೆ ಬಾಂಗ್ಲಾ ಕ್ರಿಕೆಟ್ ಮಂಡಳಿ 6 ತಿಂಗಳ ಕಾಲ ಅಂತರಾಷ್ಟ್ರೀಯ ಪಂದ್ಯಗಳಿಂದ ನಿಷೇಧ ಹೇರಿದೆ.

    2014 ರಲ್ಲಿ ಪಾಕಿಸ್ತಾನ ಕ್ರಿಕೆಟಿಗ ಶೋಯಬ್ ಮಲ್ಲಿಕ್ ಹಾಗೂ ಪತ್ನಿ ಸಾನಿಯಾ ಮಿರ್ಜಾ ಬಾಂಗ್ಲಾ ದೇಶಕ್ಕೆ ಪಂದ್ಯವೊಂದಕ್ಕೆ ಆಗಮಿಸಿದ್ದರು. ಈ ವೇಳೆ ಮೈದಾನವನ್ನು ಪ್ರವೇಶಿಸುತ್ತಿರುವಾಗ ಶಬ್ಬೀರ್ ರೆಹಮಾನ್ ಸಾನಿಯಾರವನ್ನು ಚುಡಾಯಿಸಿದ್ದರು. ಇದರಿಂದ ಕೋಪಗೊಂಡ ಶೋಯಬ್ ಮಲ್ಲಿಕ್ ಬಾಂಗ್ಲಾ ಕ್ರಿಕೆಟ್ ಮಂಡಳಿ ಹಾಗೂ ಢಾಕಾ ಮೆಟ್ರೋ ಪೊಲೀಸ್ ಮುಖ್ಯಸ್ಥರಿಗೆ ದೂರು ನೀಡಿದ್ದರ ಬಗ್ಗೆ ಬಾಂಗ್ಲಾ ಮಾಧ್ಯಮಗಳು ವರದಿ ಪ್ರಕಟಿಸಿದ್ದವು.

    ಮೈದಾನದ ಒಳಗೂ ಹಾಗೂ ಹೊರಗಡೆ ವಿವಾದಗಳಿಂದಲೇ ಸುದ್ದಿಯಾಗುತ್ತಿರುವ ಶಬ್ಬೀರ್ ರೆಹಮಾನ್‍ರಿಂದಾಗಿ ಬಾಂಗ್ಲಾ ಕ್ರಿಕೆಟ್ ಮಂಡಳಿ ತೀವ್ರ ಮುಜುಗರಕ್ಕೀಡಾಗಿತ್ತು. ಹೀಗಾಗಿ ಪ್ರಕರಣಗಳ ತನಿಖೆ ನಡೆಸಲು ಶಿಸ್ತು ಪಾಲನಾ ಸಮಿತಿಯನ್ನು ಬಾಂಗ್ಲಾ ಕ್ರಿಕೆಟ್ ಮಂಡಳಿ ನೇಮಕ ಮಾಡಿತ್ತು. ಈ ಕುರಿತು ಸುದೀರ್ಘ ವಿಚಾರಣೆ ನಡೆಸಿದ ಬಾಂಗ್ಲಾ ಕ್ರಿಕೆಟ್ ಮಂಡಳಿ, ಶಬ್ಬೀರ್ ರೆಹಮಾನ್‍ಗೆ 6 ತಿಂಗಳ ಕಾಲ ಎಲ್ಲಾ ಅಂತರಾಷ್ಟ್ರೀಯ ಪಂದ್ಯಗಳಿಂದ ನಿಷೇಧ ಹೇರಿದೆ.

    ಈ ಮೊದಲು ಸಹ ಶಬ್ಬೀರ್ ಖಾಸಗಿ ಹೋಟೆಲ್‍ಗೆ ಅನುಮತಿ ಇಲ್ಲದೆ ಮಹಿಳೆಯನ್ನು ಕರೆದುಕೊಂಡು ಬಂದು ಕೊಠಡಿಯಲ್ಲಿರಿಸಿಕೊಂಡಿದ್ದಕ್ಕೆ 6 ತಿಂಗಳು ನಿಷೇಧಕ್ಕೆ ಒಳಗಾಗಿದ್ದರು. ಇನ್ನು ಶಿಕ್ಷೆಯ ಪ್ರಮಾಣ ಮುಗಿಯದೇ ಇರುವಾಗಲೇ ಮತ್ತೊಂದು ಶಿಕ್ಷೆಗೆ ಗುರಿಯಾಗಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಕೇಂದ್ರ ಸಚಿವೆಯನ್ನೇ ಚುಡಾಯಿಸಿದ ಪುಂಡರು!

    ಕೇಂದ್ರ ಸಚಿವೆಯನ್ನೇ ಚುಡಾಯಿಸಿದ ಪುಂಡರು!

    ವಾರಾಣಾಸಿ: ಕೇಂದ್ರ ಸಚಿವೆ ಅನುಪ್ರಿಯಾ ಪಟೇಲ್ ಅವರನ್ನು ಪುಂಡರು ಚುಡಾಯಿಸಿದ ಘಟನೆ ಉತ್ತರ ಪ್ರದೇಶದ ಅರೋಯ್ ಮತ್ತು ಮಿರ್ಜಾಮುರದ್ ನಡುವೆ  ನಡೆದಿದೆ.

    ಕಳೆದ ಸೋಮವಾರ ರಾತ್ರಿ ಕೇಂದ್ರದ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆಯ ರಾಜ್ಯ ಸಚಿವೆಯಾದ ಅನುಪ್ರಿಯಾ ಪಟೇಲ್‍ರವರು ಕಾಶಿಯಲ್ಲಿ ಕಾರ್ಯಕ್ರಮ ಮುಗಿಸಿಕೊಂಡು ವಾಪಾಸ್ಸಾಗುತ್ತಿದ್ದರು. ಈ ವೇಳೆ ಅರೋಯ್ ಮತ್ತು ಮಿರ್ಜಾಮುರದ್ ನಡುವೆ ಪ್ರಯಾಣಿಸುತ್ತಿದ್ದಾಗ, ನೋಂದಣಿ ಇಲ್ಲದ ಕಾರಿನಲ್ಲಿ ಬಂದ ಮೂವರು ಯುವಕರು ಓವರ್ ಟೇಕ್ ಮಾಡುವ ವೇಳೆ ಸಚಿವೆಗೆ ಅಸಭ್ಯವಾಗಿ ಬೈದಿದ್ದಾರೆ. ಅಲ್ಲದೇ ಭದ್ರತಾ ಸಿಬ್ಬಂದಿಯವರ ಜೊತೆಗೂ ಅಸಭ್ಯ ರೀತಿಯಿಂದ ವರ್ತಿಸಿ ಸ್ಥಳದಿಂದ ಪರಾರಿಯಾಗಿದ್ದಾರೆ.

    ಘಟನೆ ಕುರಿತು ಸಚಿವೆ ವಾರಣಾಸಿಯ ಎಸ್‍ಪಿ ಎಸ್ ಕೆ ಭಾರದ್ವಜ್ ಬಳಿ ದೂರು ನೀಡಿದ್ದಾರೆ. ನೋಂದಣಿ ಇಲ್ಲದ ಕಾರನಲ್ಲಿದ್ದ ಆರೋಪಿಗಳನ್ನು ಪತ್ತೆಹಚ್ಚುವಂತೆ ತಿಳಿಸಿದ್ದಾರೆ. ಕೂಡಲೇ ಜಾಗೃತರಾದ ಮಿರ್ಜಾಪುರದ್ ಪೊಲೀಸರು ಕಾರ್ಯಾಚರಣೆ ನಡೆಸಿ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

    ಕೇಂದ್ರದ ಸಚಿವೆಯರಿಗೆ ಚುಡಾಯಿಸುತ್ತಿರುವುದು ಇದೇ ಮೊದಲೆನಲ್ಲ. ಈ ಏಪ್ರಿಲ್‍ನಲ್ಲಿ ಕೇಂದ್ರ ಸಚಿವೆ ಸ್ಮೃತಿ ಇರಾನಿಯವರಿಗೂ ಇಂತಹುದೆ ಅನುಭವವಾಗಿತ್ತು. ದೆಹಲಿ ವಿಮಾನ ನಿಲ್ದಾಣದಿಂದ ಮನೆಗೆ ಬರುವಾಗ ಕಾರಿನಲ್ಲಿದ್ದ ಯುವತಿ ಮತ್ತು ಮೂವರು ಯುವಕರು ರೇಗಿಸಿದ್ದರು.