Tag: technician

  • ತೆಲುಗು ಧಾರಾವಾಹಿ ಶೂಟಿಂಗ್ ಸೆಟ್‌ನಲ್ಲಿ ಕನ್ನಡದ ನಟ ಚಂದನ್‍ಗೆ ಕಪಾಳ ಮೋಕ್ಷ..!

    ತೆಲುಗು ಧಾರಾವಾಹಿ ಶೂಟಿಂಗ್ ಸೆಟ್‌ನಲ್ಲಿ ಕನ್ನಡದ ನಟ ಚಂದನ್‍ಗೆ ಕಪಾಳ ಮೋಕ್ಷ..!

    ನ್ನಡ ಕಿರುತೆರೆಯ ಸ್ಟಾರ್ ನಟ ಚಂದನ್ ಕುಮಾರ್‌ಗೆ ತೆಲುಗು ತಂತ್ರಜ್ಞರು ಕಪಾಳಮೋಕ್ಷ ಮಾಡಿರುವ ವೀಡಿಯೋ ಸೊಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ.

    ಕನ್ನಡ ಮಾತ್ರವಲ್ಲದೇ ತೆಲುಗು ಧಾರಾವಾಹಿಗಳಲ್ಲಿ ಅಭಿನಯಿಸುವ ಮೂಲಕ ಚಂದನ್ ಕುಮಾರ್ ಸಾಕಷ್ಟು ಜನಪ್ರಿಯತೆ ಗಳಿಸಿದ್ದಾರೆ. ಕೆಲವು ದಿನಗಳ ಹಿಂದೆ ಹೈದರಾಬಾದ್‍ನಲ್ಲಿ ಸಾವಿತ್ರಮ್ಮಗಾರು ಅಬ್ಬಾಯಿ ಧಾರಾವಾಹಿಯ ಶೂಟಿಂಗ್ ನಡೆಯುತ್ತಿತ್ತು. ಈ ಧಾರಾವಾಹಿಯಲ್ಲಿ ಮುಖ್ಯಪಾತ್ರದಲ್ಲಿ ಚಂದನ್ ಕುಮಾರ್ ಅಭಿನಯಿಸುತ್ತಿದ್ದಾರೆ. ಈ ಧಾರವಾಹಿ ಶೂಟಿಂಗ್ ಸೆಟ್‍ನಲ್ಲಿ ಅಲ್ಲಿನ ತಂತ್ರಜ್ಞರು ನಟ ಚಂದನ್ ಮೇಲೆ ಹಲ್ಲೆ ನಡೆಸಿದ್ದಾರೆ. ಇದನ್ನೂ ಓದಿ: ಸರ್ಕಾರಿ ವಸತಿ ಶಾಲೆಯಲ್ಲಿ ‘ವಿಕ್ರಾಂತ್ ರೋಣ ‘ ಪೈರಸಿ ಸಿನಿಮಾ ವೀಕ್ಷಣೆ : ಕ್ರಮಕ್ಕೆ ಒತ್ತಾಯ

    ಶೂಟಿಂಗ್ ವೇಳೆ ಕ್ಯಾಮೆರಾಮೆನ್ ಹಾಗೂ ತಂತ್ರಜ್ಞರ ಜೊತೆ ಚಂದನ್ ಕುಮಾರ್ ಕಿರಿಕ್ ಮಾಡಿಕೊಂಡಿದ್ದು, ಕ್ಯಾಮೆರಾ ಅಸಿಸ್ಟೆಂಟ್‍ಗೆ ಮೊದಲು ಚಂದನ್ ಅವರೇ ಹಲ್ಲೆ ಮಾಡಿದ್ದಾರೆ ಎಂಬ ಆರೋಪಿಸಲಾಗಿದ್ದು, ಬಳಿಕ ತೆಲುಗು ತಂತ್ರಜ್ಞರು ಒಟ್ಟಾಗಿ ಚಂದನ್‍ಗೆ ನಿಂದಿಸಿದ್ದಾರೆ. ಸೀರಿಯಲ್ ತಂತ್ರಜ್ಞರ ಜೊತೆ ಮಾತಿಗೆ ಮಾತು ಬೆಳೆದು ಕನ್ನಡ ನಟ ಚಂದನ್‍ಗೆ ಅವರು ಕಪಾಳಮೋಕ್ಷ ಮಾಡಿದ್ದಾರೆ ಎನ್ನಲಾಗಿದೆ. ಕಳೆದ ಒಂದು ತಿಂಗಳ ಹಿಂದೆ ಹಲ್ಲೆ ನಡೆದಿದ್ದು, ಇದೀಗ ಈ ವೀಡಿಯೋ ವೈರಲ್ ಆಗಿದೆ.

    ಚಂದನ್ ಹಿಂದೆ ಲಕ್ಷ್ಮೀ ಬಾರಮ್ಮ, ‘ರಾಧಾ ಕಲ್ಯಾಣ’, ‘ಸರ್ವ ಮಂಗಳ ಮಾಂಗಲ್ಯೇ’ ಧಾರವಾಹಿಗಳಲ್ಲಿ ನಟಿಸಿದ್ದಾರೆ. ಕ್ರೇಜಿಸ್ಟಾರ್ ರವಿಚಂದ್ರನ್ ಜೊತೆ ಲವ್ ಯು ಅಲಿಯಾ, ಅರ್ಜುನ್ ಸರ್ಜಾ ನಿರ್ದೇಶನದ “ಪ್ರೇಮ ಬರಹ” ಸೇರಿ ಕನ್ನಡದ ಕೆಲವು ಸಿನಿಮಾಗಳಲ್ಲೂ ಚಂದನ್ ಬಣ್ಣಹಚ್ಚಿದ್ದಾರೆ. ಸದ್ಯ ಸ್ಟಾರ್ ಸುವರ್ಣದಲ್ಲಿ ಪ್ರಸಾರವಾಗುತ್ತಿರುವ’ ಮರಳಿ ಮನಸಾಗಿದೆ, ಧಾರಾವಾಹಿಯಲ್ಲಿ ನಟಿಸುತ್ತಿದ್ದಾರೆ. ಇದನ್ನೂ ಓದಿ: ನಾಡದೇವಿ ಚಾಮುಂಡೇಶ್ವರಿ ಹಬ್ಬಕ್ಕೆ ದಿನಗಣನೆ – ಮೈಸೂರು ದಸರಾಕ್ಕೆ ಬಹಿಷ್ಕಾರ ಹಾಕಿದ ಮಾವುತ ಕಾವಾಡಿಗಳು

    ಬಿಗ್ ಬಾಸ್‍ನಲ್ಲೂ ಕಾಣಿಸಿಕೊಂಡಿದ್ದ ಚಂದು, ನಟಿ ಕವಿತಾ ಗೌಡರನ್ನು ವಿವಾಹವಾಗಿದ್ದಾರೆ. ಚಂದನ್ ಕುಮಾರ್ ಒಡೆತನದಲ್ಲಿ ಬಿರಿಯಾನಿ ಹೋಟೆಲ್ ಕೂಡ ಇದ್ದು, ಇದರ ಜೊತೆಗೆ ಪ್ರೋಟೀನ್ ಅಂಗಡಿ ಇಟ್ಟುಕೊಂಡು ಜೀವನ ಸಾಗಿಸುತ್ತಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಮಂಗಳಮುಖಿಗೆ ಸ್ಕ್ಯಾನಿಂಗ್ ಮಾಡಲು ಪೂರ್ಣ ವಿವಸ್ತ್ರಗೊಳಿಸಿ ಮಲಗುವಂತೆ ಹೇಳಿದ ಟೆಕ್ನಿಶಿಯನ್!

    ಮಂಗಳಮುಖಿಗೆ ಸ್ಕ್ಯಾನಿಂಗ್ ಮಾಡಲು ಪೂರ್ಣ ವಿವಸ್ತ್ರಗೊಳಿಸಿ ಮಲಗುವಂತೆ ಹೇಳಿದ ಟೆಕ್ನಿಶಿಯನ್!

    ಬೆಂಗಳೂರು: ಸ್ಕ್ಯಾನಿಂಗ್ ಸೆಂಟರ್ ವೊಂದರಲ್ಲಿ ಮಂಗಳಮುಖಿಗೆ ಕಿರುಕುಳ ನೀಡಿರುವ ಆರೋಪವೊಂದು ಕೇಳಿಬಂದಿದೆ.

    ಬೆಂಗಳೂರಿನ ಆಸ್ಟೀನ್ ಟೌನ್‍ನಲ್ಲಿ ಮಂಗಳವಾರ ಈ ಘಟನೆ ನಡೆದಿದ್ದು, ರಿಯಾನ ಎಂಬ ಮಂಗಳಮುಖಿಗೆ ಕೇರ್ ಸ್ಕ್ಯಾನ್ ಆಂಡ್ ಡಯಾಗ್ನೋಸ್ಟಿಕ್ ಸೆಂಟರ್ ಸಿಬ್ಬಂದಿ ಲೈಂಗಿಕ ಕಿರುಕುಳ ನೀಡಿರುವ ಆರೋಪ ವ್ಯಕ್ತವಾಗಿದೆ.

    ಕೆಲವು ವೈಯಕ್ತಿಕ ಸಮಸ್ಯೆಗಳಿಂದ ಬಳಲುತ್ತಿದ್ದ ರಿಯಾನ ಇಂದು ಬೆಳಗೆ ಸ್ಕಾನಿಂಗ್ ಮಾಡಿಸಲೆಂದು ಸ್ಕ್ಯಾನಿಂಗ್ ಸೆಂಟರ್ ಗೆ ತೆರಳಿದ್ದರು. ಈ ವೇಳೆ ಸ್ಕ್ಯಾನಿಂಗ್ ಸೆಂಟರ್ ನ ಟೆಕ್ನಿಶಿಯನ್ ಆಗಿರೋ ಮಹೇಂದ್ರ ಎಂಬಾತ ಮೈಮೇಲಿದ್ದ ಬಟ್ಟೆಗಳನ್ನು ಸಂಪೂರ್ಣ ಕಳಚಿ ಮಲಗುವಂತೆ ಹೇಳಿದ್ದಾನೆ. ಆದ್ರೆ ರಿಯಾನ ಇದನ್ನು ನಿರಾಕರಿಸಿದ್ದಾರೆ. ಇದೀಗ ರಿಯಾನ ತನಗೆ ಮಹೇಂದ್ರ ಲೈಂಗಿಕ ಕಿರುಕುಳ ನೀಡಿದ್ದಾನೆ ಅಂತ ಆರೋಪಿಸುತ್ತಿದ್ದಾರೆ.