Tag: technology

  • ಇಂಪೆಲ್ಸಿಸ್- ಲೆಯರ್ಡಲ್ ಕಂಪನಿಗಳ ಸಂಶೋಧನೆ & ಸಾಫ್ಟ್ ವೇರ್ ಅಭಿವೃದ್ಧಿ ಕೇಂದ್ರ ಉದ್ಘಾಟನೆ

    ಇಂಪೆಲ್ಸಿಸ್- ಲೆಯರ್ಡಲ್ ಕಂಪನಿಗಳ ಸಂಶೋಧನೆ & ಸಾಫ್ಟ್ ವೇರ್ ಅಭಿವೃದ್ಧಿ ಕೇಂದ್ರ ಉದ್ಘಾಟನೆ

    ಬೆಂಗಳೂರು: ಆರೋಗ್ಯ ಸೇವೆಗಳ ಕ್ಷೇತ್ರ ಸೇರಿದಂತೆ ಹಲವು ವಲಯಗಳಿಗೆ ಡಿಜಿಟಲ್ ಸೇವೆಗಳನ್ನು ಒದಗಿಸುವ ಜಾಗತಿಕ ಮಟ್ಟದ ಕಂಪನಿಗಳಾದ ‘ಇಂಪೆಲ್ಸಿಸ್’ ಮತ್ತು ‘ಲೆಯರ್ಡಲ್ ಮೆಡಿಕಲ್’ ಕಂಪನಿಗಳು ನಗರದಲ್ಲಿ ಸ್ಥಾಪಿಸಿರುವ ವಿಶ್ವದರ್ಜೆಯ ಅತ್ಯಾಧುನಿಕ ಕಚೇರಿಗಳನ್ನು ಐಟಿ-ಬಿಟಿ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಮಂಗಳವಾರ ಉದ್ಘಾಟಿಸಿದರು.

    ಈ ಸಂದರ್ಭದಲ್ಲಿ ಮಾತನಾಡಿದ ಅವರು, ‘ಬೆಂಗಳೂರು ಭಾರತದ ಐಟಿ, ಬಿಟಿ ಮತ್ತು ಸಂಶೋಧನೆ ಹಾಗೂ ನಾವೀನ್ಯತೆಗಳ ರಾಜಧಾನಿಯಾಗಿದ್ದು, ಜಾಗತಿಕ ಮಟ್ಟದಲ್ಲಿ ಗಮನ ಸೆಳೆದಿದೆ. ಈ ಎರಡು ಕಂಪನಿಗಳು ಮನುಷ್ಯನ ದೇಹಾರೋಗ್ಯದ ಅಧ್ಯಯನ ಮತ್ತು ಕಂಡುಬರುವ ಅನಾರೋಗ್ಯಗಳಿಗೆ ಸೂಕ್ತ ಚಿಕಿತ್ಸೆ ನೀಡಲು ಸಂಶೋಧನಾ ಮೂಲಮಾತೃಕೆಗಳನ್ನು ಅಭಿವೃದ್ಧಿ ಪಡಿಸಿ, ಡಿಜಿಟಲ್ ಸೇವೆಗಳ ಮೂಲಕ ನೆರವು ನೀಡಲಿದೆ’ ಎಂದರು.

    `ಆರೋಗ್ಯ ಸೇವೆಗಳಿಗೆ ಆಧುನಿಕ ಜಗತ್ತಿನಲ್ಲಿ ಅತ್ಯಂತ ಮಹತ್ವವಿದೆ. ಹೃದಯಾಘಾತ, ರಕ್ತದೊತ್ತಡ, ಪಾಶ್ರ್ವವಾಯು ಮುಂತಾದ ಅನಾರೋಗ್ಯಗಳನ್ನು ತ್ವರಿತವಾಗಿ ಪತ್ತೆ ಹಚ್ಚಿ, ಕ್ಷಿಪ್ರ ವೇಗದಲ್ಲಿ ಸೂಕ್ತ ಚಿಕಿತ್ಸೆಯ ಮಾರ್ಗದರ್ಶನ ನೀಡುವುದು ಜರೂರಾಗಿ ನಡೆಯಬೇಕಾಗಿದೆ. ಇಂಪೆಲ್ಸಿಸ್ ಮತ್ತು ಲೆಯರ್ಡಲ್ ಕಂಪನಿಗಳು ಇವುಗಳನ್ನು ಸಾಧ್ಯವಾಗಿಸಲು ಐಟಿ ತಂತ್ರಜ್ಞಾನವನ್ನು ಪರಿಣಾಮಕಾರಿಯಾಗಿ ಬಳಸಿಕೊಂಡು, ಸಾಫ್ಟ್‍ವೇರ್ ಅಭಿವೃದ್ಧಿಪಡಿಸುವುದು ರೋಗಿಗಳಿಗೆ ವರದಾನವಾಗಲಿದೆ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದರು. ಇದನ್ನೂ ಓದಿ: ನೂತನ ಲೋಕಾಯುಕ್ತರಾಗಿ ಭೀಮನಗೌಡ ಸಂಗನಗೌಡ ಪಾಟೀಲ್‌ ನೇಮಕ

    ಅಮೆರಿಕ ಮೂಲದ ಇಂಪೆಲ್ಸಿಸ್ ಕಂಪನಿಯು ಬೆಂಗಳೂರು ಮತ್ತು ಮಂಗಳೂರುಗಳಲ್ಲಿ ಕಚೇರಿ ಹೊಂದಿರುವುದು ಸ್ವಾಗತಾರ್ಹವಾಗಿದೆ. ಈ ಅತ್ಯಾಧುನಿಕ ಸಂಶೋಧನಾ ಕೇಂದ್ರದ ಮೂಲಕ ಆರೋಗ್ಯ ಸೇವೆಗಳ ಜತೆಗೆ ಇ-ಕಲಿಕೆ, ಕಂಟೆಂಟ್ ಎಂಜಿನಿಯರಿಂಗ್, ಡಿಜಿಟಲ್ ಮಾರ್ಕೆಟಿಂಗ್ ಮುಂತಾದ ಕ್ಷೇತ್ರಗಳಿಗೂ ನೆರವು ಸಿಗಲಿದೆ ಎಂದು ನುಡಿದರು.

    ಮಾಹಿತಿ ತಂತ್ರಜ್ಞಾನ ಮೂಲಸೌಲಭ್ಯ, ಸುರಕ್ಷತೆ ಮತ್ತು ಅಭಿವೃದ್ಧಿಯ ಸುಸ್ಥಿರ ಮಾದರಿಗಳನ್ನು ಈ ಕೇಂದ್ರಗಳು ಅಳವಡಿಸಿಕೊಂಡಿವೆ. 20 ವರ್ಷಗಳ ಅನುಭವ ಹೊಂದಿರುವ ಇಂಪೆಲ್ಸಿಸ್ ಕಂಪನಿಯಲ್ಲಿ ಸಾವಿರಕ್ಕೂ ಹೆಚ್ಚು ಪರಿಣತ ತಂತ್ರಜ್ಞರಿರುವುದು ಒಳ್ಳೆಯದು. ಕರ್ನಾಟಕವು ಇದರ ಲಾಭವನ್ನು ಪಡೆದುಕೊಳ್ಳಲಿದೆ ಎಂದು ಸಚಿವರು ಆಶಯ ವ್ಯಕ್ತಪಡಿಸಿದರು.

    ಕಾರ್ಯಕ್ರಮದಲ್ಲಿ ಲೆಯರ್ಡಲ್ ಮೆಡಿಕಲ್ ಸಂಸ್ಥೆಯ ಸಿಇಒ ಆಲ್ಫ್ ಕ್ರಿಶ್ಚಿಯನ್ ಡೈಡಲ್ ಅವರು ಉಪಸ್ಥಿತರಿದ್ದರು. ಇದನ್ನೂ ಓದಿ: ರಾಯಚೂರು ನಗರಸಭೆ ಕಲುಷಿತ ನೀರಿಗೆ ಮತ್ತೊಂದು ಬಲಿ – ಸಾವಿನ ಸಂಖ್ಯೆ 6ಕ್ಕೆ ಏರಿಕೆ

  • ವಿಶ್ವಸಂಸ್ಥೆ ಮುಖ್ಯಸ್ಥರ ತಂತ್ರಜ್ಞಾನ ರಾಯಭಾರಿಯಾಗಿ ಭಾರತದ ಅಮನ್ ದೀಪ್ ನೇಮಕ

    ವಿಶ್ವಸಂಸ್ಥೆ ಮುಖ್ಯಸ್ಥರ ತಂತ್ರಜ್ಞಾನ ರಾಯಭಾರಿಯಾಗಿ ಭಾರತದ ಅಮನ್ ದೀಪ್ ನೇಮಕ

    ನ್ಯೂಯಾರ್ಕ್: ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಅಂಟೋನಿಯೋ ಗುಟೆರೆಸ್ ಅವರ ತಂತ್ರಜ್ಞಾನ ರಾಯಭಾರಿಯಾಗಿ ಭಾರತೀಯ ರಾಜತಾಂತ್ರಿಕ ಅಧಿಕಾರಿ ಅಮನ್ ದೀಪ್ ಸಿಂಗ್ ಗಿಲ್ ಅವರನ್ನು ನೇಮಿಸಲಾಗಿದೆ.

    2016 ರಿಂದ 2018 ರವರೆಗೆ ಜಿನೀವಾದಲ್ಲಿ ನಡೆದ ನಿಶಸ್ತ್ರೀಕರಣದ ಸಮ್ಮೇಳನಕ್ಕೆ ಭಾರತೀಯ ರಾಯಭಾರಿ ಹಾಗೂ ಖಾಯಂ ಪ್ರತಿನಿಧಿಯಾಗಿದ್ದ ಗಿಲ್, ಗ್ರಾಜುಯೇಟ್ ಇನ್‌ಸ್ಟಿಟ್ಯೂಟ್‌ನ ಅಂತಾರಾಷ್ಟ್ರೀಯ ಡಿಜಿಟಲ್ ಆರೋಗ್ಯ ಮತ್ತು ಕೃತಕ ಬುದ್ಧಿಮತ್ತೆ ಸಂಶೋಧನಾ ಸಹಯೋಗದ ಯೋಜನೆಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿದ್ದಾರೆ. ಇದನ್ನೂ ಓದಿ: ಮುತ್ತಪ್ಪ ರೈ ಆಪ್ತ ಬಳಗದಲ್ಲಿ ಕೋಲ್ಡ್ ವಾರ್ – ನಟಿ ಅನುಷ್ಕಾ ಶೆಟ್ಟಿ ಸಹೋದರನ ಕೊಲೆಗೆ ಸ್ಕೆಚ್

    ಪಂಜಾಬ್ ವಿವಿಯಲ್ಲಿ ಎಲೆಕ್ಟ್ರಾನಿಕ್ಸ್ ಹಾಗೂ ಎಲೆಕ್ಟ್ರಿಕಲ್ ಕಮ್ಯುನಿಕೇಷನ್ ತಂತ್ರಜ್ಞಾನದಲ್ಲಿ ಪದವಿ ಪಡೆದಿರುವ ಗಿಲ್, ಲಂಡನ್‌ನ ಕಿಂಗ್ಸ್ ಕಾಲೇಜಿನಿಂದ ಪಿಹೆಚ್‌ಡಿ ಪದವಿ ಪಡೆದಿದ್ದಾರೆ. ಜಿನಿವಾ ವಿವಿಯಿಂದ ಫ್ರೆಂಚ್ ಇತಿಹಾಸ ಹಾಗೂ ಭಾಷೆಯಲ್ಲಿ ಡಿಪ್ಲೋಮಾ ಪಡೆದಿದ್ದಾರೆ. ಇದನ್ನೂ ಓದಿ: ನೂಪುರ್ ಶರ್ಮಾಗೆ ಮುಂಬೈ ಪೊಲೀಸರಿಂದ ಸಮನ್ಸ್

    ಅಮನ್ ದೀಪ್ ಸಿಂಗ್ ಗಿಲ್ ಅವರು ಡಿಜಿಟಲ್ ತಂತ್ರಜ್ಞಾನದ ಚಿಂತನೆಯ ನಾಯಕನಾಗಿದ್ದು, ಡಿಜಿಟಲ್ ತಂತ್ರಜ್ಞಾನಗಳ ಬಗ್ಗೆ ಆಳವಾದ ಜ್ಞಾನವನ್ನು ಹೊಂದಿದ್ದಾರೆ. ಡಿಜಿಟಲ್ ರೂಪಾಂತರಗಳನ್ನು ಜವಾಬ್ದಾರಿಯುತವಾಗಿ ಹಾಗೂ ಅಭಿವೃದ್ಧಿಗೊಳಿಸುವ ಬಗ್ಗೆ ಒಳ್ಳೆಯ ತಿಳುವಳಿಕೆ ಹೊಂದಿದ್ದಾರೆ ಎಂದು ವಿಶ್ವಸಂಸ್ಥೆ ತಿಳಿಸಿದೆ.

  • ವಿಶ್ವದಲ್ಲೇ ಅತೀ ವೇಗದ ಚಾರ್ಜಿಂಗ್ ಬ್ಯಾಟರಿ – ಬೆಂಗಳೂರು ಸ್ಟಾರ್ಟ್ಅಪ್ ಸಂಶೋಧನೆ

    ವಿಶ್ವದಲ್ಲೇ ಅತೀ ವೇಗದ ಚಾರ್ಜಿಂಗ್ ಬ್ಯಾಟರಿ – ಬೆಂಗಳೂರು ಸ್ಟಾರ್ಟ್ಅಪ್ ಸಂಶೋಧನೆ

    ಬೆಂಗಳೂರು: ವಿಶ್ವದಲ್ಲೇ ಅತೀ ವೇಗವಾಗಿ ಚಾರ್ಜ್ ಆಗುವ ಹಾಗೂ ಬೆಂಕಿ ಹತ್ತಿಕೊಳ್ಳದ ಅಲ್ಯೂಮಿನಿಯಂ ಇಯಾನ್ ಗ್ರಾಫೇನ್ ಪೌಚ್ ಸೆಲ್(Aluminum Ion Graphene Pouch Cells) ತಂತ್ರಜ್ಞಾನವನ್ನು ಬೆಂಗಳೂರಿನ ಸ್ಟಾರ್ಟ್ಅಪ್ ನೋರ್ಡಿಶ್ಚೇ ಟೆಕ್ನಾಲಜೀಸ್(NORDISCHE TECHNOLOGIES) ಸಿದ್ದಪಡಿಸಿದೆ. ಇದು ಲಿಥೀಯಂ ಇಯಾನ್ ಸೆಲ್ಸ್ ಬ್ಯಾಟರಿಗಿಂತಲೂ 50 ಪಟ್ಟು ಹೆಚ್ಚು ವೇಗದಲ್ಲಿ ಚಾರ್ಜ್ ಆಗುವ ಹಾಗೂ ಅಷ್ಟೇ ಮಟ್ಟದ ಬ್ಯಾಟರಿ ಸಾಮರ್ಥ್ಯ ಹೊಂದಿರುವ, ನಾನ್ ಟಾಕ್ಸಿಕ್ ಮತ್ತು ಅಗ್ನಿ ನಿರೋಧಕ ತಂತ್ರಜ್ಞಾನವನ್ನು ಹೊಂದಿದೆ.

    ಬ್ಯಾಟರಿ ಕ್ಷೇತ್ರದಲ್ಲಿನ ಈ ವಿನೂತನ ಹಾಗೂ ಕ್ರಾಂತಿಕಾರಿ ತಂತ್ರಜ್ಞಾನವನ್ನು ಆದಿ ಚುಂಚನಗಿರಿ ಮಹಾ ಸಂಸ್ಥಾನದ ಮುಖ್ಯಸ್ಥ ಜಗದ್ಗುರು ಶ್ರೀ ಡಾ. ನಿರ್ಮಲಾನಂದನಾಥ ಮಹಾ ಸ್ವಾಮೀಜಿ ಲೋಕಾರ್ಪಣೆಗೊಳಿಸಿದರು.

    ಡಾ. ನಿರ್ಮಲಾನಂದನಾಥ ಮಹಾ ಸ್ವಾಮೀಜಿ ಕಾರ್ಯಕ್ರಮದಲ್ಲಿ ಮಾತನಾಡಿ, ಈಗ ಬಹುತೇಕ ಎಲ್ಲಾ ಎಲೆಕ್ಟ್ರಿಕ್ ವಾಹನಗಳಲ್ಲಿ  ಬಳಸಲಾಗುತ್ತಿರುವ ಲೀಥಿಯಂ ಬ್ಯಾಟರಿ ತಂತ್ರಜ್ಞಾನದಿಂದ ಬಹಳಷ್ಟು ಸಮಸ್ಯೆಗಳು ಕಂಡುಬರುತ್ತಿವೆ. ವಾಹನಗಳಲ್ಲಿ ಬಳಸಲಾಗಿರುವ ಬ್ಯಾಟರಿಗಳು ಬೆಂಕಿ ಹತ್ತಿಕೊಳ್ಳುವುದು, ಸರಿಯಾದ ಸಾಮರ್ಥ್ಯತೆ ಹೊಂದದೇ ಇರುವುದು. ಇಂತಹ ಹಲವಾರು ಸಮಸ್ಯೆಗಳಿಗೆ ಪರಿಹಾರವೆಂಬಂತೆ ಅಲ್ಯೂಮಿನಿಯಂ ಇಯಾನ್ ಗ್ರಾಫೇನ್ ಪೌಚ್ ಸೆಲ್ ತಂತ್ರಜ್ಞಾನವನ್ನು ಬೆಂಗಳೂರಿನ ಸ್ಟಾರ್ಟ್ಅಪ್ ನೋರ್ಡಿಶ್ಚೇ ಟೆಕ್ನಾಲಜೀಸ್ – ಸಿಪಿಟ್ (ಸೆಂಟ್ರಲ್ ಇನ್ಸಿಟ್ಯೂಟ್ ಆಫ್ ಪೆಟ್ರೋಕೆಮಿಕಲ್ ಎಂಜಿನೀಯರಿಂಗ್ & ಟೆಕ್ನಾಲಜಿ)ಯ ಜೊತೆಗೂಡಿ ಸಂಶೋಧಿಸಿದೆ. ರಫ್ತು ಅವಲಂಬಿತ ಲೀಥೀಯಂ ಬ್ಯಾಟರಿ ತಂತ್ರಜ್ಞಾನದಷ್ಟೇ ಸಾಮರ್ಥ್ಯ ಹೊಂದಿರುವ ಈ ತಂತ್ರಜ್ಞಾನ ನಮ್ಮ ದೇಶದ ಆವಿಷ್ಕಾರಗಳಲ್ಲಿ ಬಹಳ ಮಹತ್ವದ್ದು ಎಂದು ಹೇಳಿದರು. ಇದನ್ನೂ ಓದಿ: ಆಡಳಿತ ಮಂಡಳಿ ಎಚ್ಚರಿಕೆಗೆ ಡೋಂಟ್‍ಕೇರ್- ಹಿಜಬ್ ಧರಿಸಿ ಬಂದ 15 ವಿದ್ಯಾರ್ಥಿನಿಯರು!

    ಬೆಂಗಳೂರಿನ ಸ್ಟಾರ್ಟ್ಅಪ್ ನೋರ್ಡಿಶ್ಚೇ ಟೆಕ್ನಾಲಜೀಸ್‌ನ ಮುಖ್ಯ ತಾಂತ್ರಿಕ ಅಧಿಕಾರಿ ಸಬ್ಯಸಾಚಿ ದಾಸ್ ಮಾತನಾಡಿ, ಕಳೆದ 5 ವರ್ಷಗಳಿಂದ ನಮ್ಮ ಸಂಸ್ಥೆ ನಡೆಸಿದ ಸಂಶೋಧನೆಯ ಫಲವಾಗಿ ಈ ವಿನೂತನ ಅಲ್ಯೂಮಿನಿಯಂ-ಗ್ರಾಫೇನ್ ಪೌಚ್ ಸೆಲ್ ಮತ್ತು ಭವಿಷ್ಯದ ಇಲೆಕ್ಟ್ರಿಕಲ್ ವೆಹಿಕಲ್ ಬ್ಯಾಟರಿ ತಂತ್ರಜ್ಞಾನವನ್ನು ಸಂಶೋಧಿಸಲಾಗಿದೆ. ಈ ಬ್ಯಾಟರಿಗಳು ಬಹಳಷ್ಟು ಹಗುರ ಹಾಗೂ ವಿಶ್ವದಲ್ಲೇ ಅತೀ ವೇಗವಾಗಿ ಚಾರ್ಜ್ ಆಗಬಲ್ಲ ಸಾಮರ್ಥ್ಯ ಹೊಂದಿದೆ. ಅಲ್ಲದೇ, ಈ ಬ್ಯಾಟರಿ ಕೆಲಸ ಮಾಡುವ ಉಷ್ಣಾಂಶದ ರೇಂಜ್ ಬಹಳಷ್ಟಿದ್ದು(-25ಸೆಲ್ಸಿಯಸ್ ನಿಂದ 60 ಡಿಗ್ರಿ ಸೆಲ್ಸಿಯಸ್), ಬೆಂಕಿ ಹತ್ತಿಕೊಳ್ಳುವುದಿಲ್ಲ. ಹೆಚ್ಚಿನ ಸಾಮರ್ಥ್ಯ ಹೊಂದಿರುವ ಮತ್ತು 5 ರಿಂದ 7 ವರ್ಷಗಳ ಬಾಳಿಕೆ ಬರುತ್ತದೆ. ಅಲ್ಲದೇ ಈ ರಿಚಾರ್ಜೆಬಲ್ ಬ್ಯಾಟರಿಗಳನ್ನು 3,000 ಸೈಕಲ್‌ಗಳಲ್ಲಿ ಬಳಸಬಹುದಾಗಿದೆ. ಈ ತಂತ್ರಜ್ಞಾವನ್ನು ಎಲೆಕ್ಟ್ರಿಕ್ ವೆಹಿಕಲ್‌ಗಳಲ್ಲೂ ಬಳಸಬಹುದು ಎಂದು ಹೇಳಿದರು. ಇದನ್ನೂ ಓದಿ: ಜಾರಂದಾಯ ದೈವದ ಪವಾಡ – ಮದುವೆ ಹಾಲ್‍ನಲ್ಲಿ ಕಳ್ಳತನವಾದ ಚಿನ್ನದ ಸರ ಅಚ್ಚರಿಯ ರೀತಿಯಲ್ಲಿ ಪತ್ತೆ

    ವಿಶೇಷತೆಗಳೇನು?
    ಹಗುರ ಮತ್ತು ಅತಿವೇಗವಾಗಿ ಚಾರ್ಜ್ ಅಗುವ ಸಾಮರ್ಥ್ಯ
    ಹೈ ಎನರ್ಜಿ ಡೆನ್ಸಿಟಿ – 150ವ್ಯಾಟ್/ಕೆಜಿ
    ಕೈಗೆಟಕುವ ದರ
    ಫ್ಲೆಕ್ಸಿಬಲ್ ಸೋರ್ಸ್ ಆಫ್ ಎನರ್ಜಿ ಸ್ಟೋರೇಜ್
    ಲಾರ್ಜ್ ರೇಂಜ್ ಆಫ್ ಟೆಂಪರೇಚರ್‌ನಲ್ಲಿ ಕಾರ್ಯನಿರ್ವಹಣೆ (ಈಡಿom -25ಅ ಣo 60ಅ)
    5 ರಿಂದ 7 ವರ್ಷಗಳ ಬಾಳಿಕೆ
    ಸುಮಾರು 3,000 ಬಾರಿ ರಿಚಾರ್ಜ್ ಮಾಡಬಹುದು
    ಪರಿಸರ ಸ್ನೇಹಿ, ಹೊಗೆ ರಹಿತ ಮತ್ತು ಬೆಂಕಿ ಹತ್ತಿಕೊಳ್ಳದೇ ಇರುವುದು

  • ಭಾರತದ ಮೊದಲ 5ಜಿ ಕರೆ ಯಶಸ್ವೀ ಪರೀಕ್ಷೆ

    ಭಾರತದ ಮೊದಲ 5ಜಿ ಕರೆ ಯಶಸ್ವೀ ಪರೀಕ್ಷೆ

    ಚೆನ್ನೈ: ಭಾರತದಲ್ಲಿ ಮೊದಲ ಬಾರಿಗೆ 5ಜಿ ಆಡಿಯೋ ಹಾಗೂ ವೀಡಿಯೋ ಕರೆಗಳನ್ನು ಗುರುವಾರ ಚೆನ್ನೈನಲ್ಲಿ ಸಂಪರ್ಕ ಸಚಿವ ಅಶ್ವಿನಿ ವೈಷ್ಣವ್ ಯಶಸ್ವೀ ಪರೀಕ್ಷೆ ನಡೆಸಿದರು.

    ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ(ಐಐಟಿ) ಮದ್ರಾಸ್‌ನಲ್ಲಿ ಮೊದಲ ಬಾರಿಗೆ 5ಜಿ ಕರೆಯನ್ನು ಯಶಸ್ವಿಯಾಗಿ ಪರೀಕ್ಷಿಸಿದ ಅಶ್ವಿನಿ ವೈಷ್ಣವ್, ಇಡೀ ನೆಟ್‌ವರ್ಕ್ ಅನ್ನು ಭಾರತದಲ್ಲಿ ವಿನ್ಯಾಸಗೊಳಿಸಲಾಗಿದೆ ಹಾಗೂ ಅಭಿವೃದ್ಧಿಪಡಿಸಲಾಗಿದೆ ಎಂದರು.

    5G

    ಇದು ಪ್ರಧಾನಿ ನರೇಂದ್ರ ಮೋದಿಯವರ ದೂರದೃಷ್ಟಿಯ ಸಾಕ್ಷಾತ್ಕಾರವಾಗಿದೆ. ಭಾರತದಲ್ಲೇ ತಯಾರಾಗುವ 4ಜಿ ಹಾಗೂ 5ಜಿ ತಂತ್ರಜ್ಞಾನದ ಸ್ಟಾಕ್ ಅನ್ನು ಇತರ ದೇಶಗಳಿಗೂ ವಿತರಿಸುವುದು ಅವರ ಗುರಿಯಾಗಿದೆ. ಈ ಸಂಪೂರ್ಣ ತಂತ್ರಜ್ಞಾನದ ಯಶಸ್ಸಿನೊಂದಿಗೆ ನಾವು ಜಗತ್ತನ್ನೇ ಗೆಲ್ಲಬೇಕು ಎಂದು ವೈಷ್ಣವ್ ಹೇಳಿದರು. ಇದನ್ನೂ ಓದಿ: 2030ರ ವೇಳೆಗೆ ಭಾರತಕ್ಕೆ 6ಜಿ ನೆಟ್‌ವರ್ಕ್ – ಪ್ರಧಾನಿ ಮೋದಿ

    ದೂರಸಂಪರ್ಕ ಇಲಾಖೆ 5ಜಿ ನೆಟ್‌ವರ್ಕ್ ಹರಾಜಿನ ಬಗ್ಗೆ ಮುಂದಿನ ವಾರದಲ್ಲಿ ಅಂತಿಮ ಅನುಮೋದನೆಗೆ ಕೇಂದ್ರ ಸಚಿವ ಸಂಪುಟಕ್ಕೆ ವರ್ಗಾಯಿಸುವ ಸಾಧ್ಯತೆ ಇದೆ. ಇದೇ ವರ್ಷದ ಕೊನೆಯಲ್ಲಿ ಗ್ರಾಹಕರ ಕೈಗೆ 5ಜಿ ನೆಟ್‌ವರ್ಕ್ ಲಭಿಸುವ ಸಾಧ್ಯತೆ ಇದೆ. ಇದನ್ನೂ ಓದಿ: ಯಾರಿಗೂ ತಿಳಿಯದೇ ವಾಟ್ಸಪ್ ಗ್ರೂಪ್‍ನಿಂದ ನಿರ್ಗಮಿಸುವುದು ಹೇಗೆ?

    ಈ ತಿಂಗಳ ಆರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಐಐಟಿ ಮದ್ರಾಸ್‌ನಲ್ಲಿ ದೇಶದ ಮೊದಲ 5ಜಿ ಟೆಸ್ಟ್‌ಬೆಡ್ ಅನ್ನು ಉದ್ಘಾಟಿಸಿದ್ದರು. ಇದೀಗ ಅದೇ ಕೇಂದ್ರದಲ್ಲಿ ಸಂಪರ್ಕ ಸಚಿವ ದೇಶದಲ್ಲಿ ಮೊದಲ ಬಾರಿಗೆ 5ಜಿ ಆಡಿಯೋ ಹಾಗೂ ವೀಡಿಯೋ ಕರೆಗಳನ್ನು ಪರೀಕ್ಷಿಸಿದ್ದಾರೆ.

  • ಅಮೆರಿಕದ ಬಳಿಕ ಭಾರತದ ಜೊತೆ ವ್ಯಾಪಾರ, ತಂತ್ರಜ್ಞಾನ ಮಂಡಳಿ ಸ್ಥಾಪಿಸಿದ ಯುರೋಪ್ ಒಕ್ಕೂಟ

    ಅಮೆರಿಕದ ಬಳಿಕ ಭಾರತದ ಜೊತೆ ವ್ಯಾಪಾರ, ತಂತ್ರಜ್ಞಾನ ಮಂಡಳಿ ಸ್ಥಾಪಿಸಿದ ಯುರೋಪ್ ಒಕ್ಕೂಟ

    ನವದೆಹಲಿ: ಉಕ್ರೇನ್ ರಷ್ಯಾ ಯುದ್ಧದಲ್ಲಿ ಯಾರ ಪರವು ನಿಲ್ಲದ ತಟಸ್ಥ ಧೋರಣೆ ಅನುಸರಿಸಿದ ಭಾರತ ಜೊತೆ ಯುರೋಪಿಯನ್ ಒಕ್ಕೂಟ ಮಹತ್ವದ ಒಪ್ಪಂದ ಮಾಡಿಕೊಂಡಿದೆ. ಯುರೋಪಿಯನ್ ಒಕ್ಕೂಟ ಹಾಗೂ ಭಾರತ ತಮ್ಮ ವ್ಯಾಪಾರವನ್ನು ವಿಸ್ತರಿಸಲು ವ್ಯಾಪಾರ ಹಾಗೂ ತಂತ್ರಜ್ಞಾನ ಮಂಡಳಿಯನ್ನು ಸ್ಥಾಪಿಸಲು ಒಪ್ಪಿಕೊಂಡಿವೆ.

    ಸೋಮವಾರ ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಯುರೋಪಿಯನ್ ಒಕ್ಕೂಟದ ಅಧ್ಯಕ್ಷೆ ಸುರ್ಸುಲಾ ವಾನ್ ಡೆರ್ ಲೇಯೆನ್ ಮಾತುಕತೆ ನಡೆಸಿದ್ದಾರೆ. ದ್ವಿಪಕ್ಷಿಯ ಮಾತುಕತೆಯಲ್ಲಿ ವ್ಯಾಪಾರ, ಹವಾಮಾನ, ಡಿಜಿಟಲ್ ತಂತ್ರಜ್ಞಾನ ಕ್ಷೇತ್ರಗಳಲ್ಲಿ ಸಹಕಾರಗಳನ್ನು ಹೆಚ್ಚಿಸಿಕೊಳ್ಳುವುದಾಗಿ ಉಭಯ ರಾಷ್ಟ್ರಗಳು ಒಪ್ಪಂದಗಳನ್ನು ಮಾಡಿಕೊಂಡವು.

    ಈ ಮೊದಲು ಯುರೋಪಿಯನ್ ಒಕ್ಕೂಟ ವ್ಯಾಪಾರ, ತಂತ್ರಜ್ಞಾನ ಮಂಡಳಿಯನ್ನು ಅಮೆರಿಕದ ಜೊತೆ ಮಾಡಿಕೊಂಡಿತ್ತು. ಈಗ ಈ ರೀತಿ ಒಪ್ಪಂದ ಮಾಡಿಕೊಂಡ ಎರಡನೇ ದೇಶ ಭಾರತವಾಗಿರುವುದು ವಿಶೇಷ. ಅದರಲ್ಲೂ ರಷ್ಯಾ ವಿರೋಧಿ ನಿಲುವು ತೆಗೆದುಕೊಳ್ಳದೇ ಇರುವ ಸಮಯದಲ್ಲೇ ಈ ಮಹತ್ವದ ಒಪ್ಪಂದ ನಡೆದಿರುವುದು ಇನ್ನೊಂದು ವಿಶೇಷ. ಸೋಮವಾರ ಭಾರತದ ಈ ನಿರ್ಧಾರವನ್ನು ಯುರೋಪಿಯನ್ ಯೂನಿಯನ್ ಒಪ್ಪಿಕೊಂಡಿದೆ.

    ಡೆರ್ ಲೇಯೆನ್ ಹೇಳಿದ್ದೇನು?
    ಈ ವೇಳೆ ಮಾತನಾಡಿದ ವಾನ್ ಡೆರ್ ಲೇಯೆನ್, ಯುಇ ಇಲ್ಲಿವರೆಗೆ ಅಮೆರಿಕದೊಂದಿಗೆ ವ್ಯಾಪಾರ ಹಾಗೂ ತಂತ್ರಜ್ಞಾನಗಳಲ್ಲಿ ಒಕ್ಕೂಟವನ್ನು ಏರ್ಪಡಿಸಿಕೊಂಡಿತ್ತು. ಇದೀಗ ಬಹು ಮುಖ್ಯವಾದ ಹಾಗೂ ನಮ್ಮ ಎರಡನೇ ಒಕ್ಕೂಟವನ್ನು ಭಾರತದೊಂದಿಗೆ ಸ್ಥಾಪಿಸುವ ಸಮಯ ಎಂದರು. ಭಾರತ ಹಾಗೂ ಯುರೋಪಿಯನ್ ಯೂನಿಯನ್‌ನ ಅಂತರಾಷ್ಟ್ರೀಯ ಸಂಬಂಧದ 60ನೇ ವಾರ್ಷಿಕೋತ್ಸವದ ಸಮಯದಲ್ಲಿ ಈ ಹೊಸ ಒಕ್ಕೂಟ ಬಹು ಮುಖ್ಯವಾದುದು ಎಂದು ಹೇಳಿದರು. ಇದನ್ನೂ ಓದಿ: ಮುಗಿಯದ ವಿಚಾರಣೆ – BBMP ಚುನಾವಣೆ ಮತ್ತಷ್ಟು ವಿಳಂಬ

    ಭಾರತ ಹಾಗೂ ಯುರೋಪ್ ರಾಷ್ಟ್ರಗಳಿಗೆ ಶಕ್ತಿ ಸುರಕ್ಷತೆ ಒಂದು ಅತ್ಯಂತ ಮುಖ್ಯವಾದ ವಿಷಯವಾಗಿದೆ. ಯುರೋಪ್ ಈ ಹಿಂದೆ ರಷ್ಯಾದಿಂದ ಪಡೆಯುತ್ತಿದ್ದ ಇಂಧನಗಳಿಂದ ದೂರ ಉಳಿಯಲು ಇಷ್ಟಪಡುತ್ತಿದ್ದು, ಇದೀಗ ಹೊಸ, ಶುದ್ಧ ಹಾಗೂ ನವೀಕರಿಸಬಹುದಾದ ಶಕ್ತಿಗಳೆಡೆ ಗಮನ ಹರಿಸುತ್ತಿದ್ದೇವೆ. ಇದರಲ್ಲಿ ಸೌರ ಹಾಗೂ ಜಲಜನಕದ ಮೇಲೆ ಭಾರತ ಹಾಗೂ ಯುರೋಪ್‌ನ ಸಹಕಾರ ಪ್ರಮುಖವಾಗಿದೆ.

    ಈ ಸಹಕಾರದಲ್ಲಿ #GlobalGateway ನಿರ್ಣಾಯಕ ಪಾತ್ರ ವಹಿಸಲಿದೆ. ಯುರೋಪ್ ಭಾರತದ 3ನೇ ಪ್ರಮುಖ ವ್ಯಾಪಾರ ಪಾಲುದಾರ ಹಾಗೂ ಅದರ ಪ್ರಮುಖ ಹೂಡಿಕೆದಾರರಲ್ಲಿ ಒಂದಾಗಿದೆ. ನಾವು ಶೀಘ್ರದಲ್ಲೇ ಭಾರತದೊಂದಿಗೆ ವ್ಯಾಪಾರ ಹಾಗೂ ಹೂಡಿಕೆ ಒಪ್ಪಂದಗಳ ಕುರಿತು ಮಾತುಕತೆ ಪ್ರಾರಂಭಿಸಲಿದ್ದೇವೆ. ಇದನ್ನೂ ಓದಿ: ಬುಧವಾರ ಎಲ್ಲ ರಾಜ್ಯಗಳ ಸಿಎಂ ಜೊತೆ ಮೋದಿ ತುರ್ತು ಸಭೆ

    ಭಾರತ ಹಾಗೂ ಯುರೋಪ್‌ನ ಪಾಲುದಾರಿಕೆಯನ್ನು ಬಲಪಡಿಸುವುದು ಈ ದಶಕದ ಪ್ರಮುಖ ಆದ್ಯತೆಯಾಗಿದೆ. ನಾವು ವ್ಯಾಪಾರ, ತಂತ್ರಜ್ಞಾನ ಹಾಗೂ ಭದ್ರತೆಯಲ್ಲಿ ಸಹಕಾರವನ್ನು ಹೆಚ್ಚಿಸುತ್ತೇವೆ. ಈ ವಿಚಾರವಾಗಿ ನಾನು ಅತ್ಯಂತ ಸಂತಸಗೊಂಡಿದ್ದೇನೆ ಹಾಗೂ ಭಾರತ-ಯುರೋಪ್‌ನ ವ್ಯಾಪಾರ ಮತ್ತು ತಂತ್ರಜ್ಞಾನ ಮಂಡಳಿಯನ್ನು ಸ್ಥಾಪಿಸುತ್ತೇನೆ.

    ಕಳೆದ ವಾರವಷ್ಟೇ ಇಂಗ್ಲೆಂಡ್ ಪ್ರಧಾನಿ ಬೋರಿಸ್ ಜಾನ್ಸನ್ ಭಾರತಕ್ಕೆ ಆಗಮಿಸಿದ್ದರು. ಇವರು ಮರಳಿದ ಎರಡು ದಿನದಲ್ಲಿ ವಾನ್ ಡೆರ್ ಲೇಯೆನ್ ಭಾರತಕ್ಕೆ ಆಗಮಿಸಿ ಮಹತ್ವದ ಒಪ್ಪಂದ ಮಾಡಿದ್ದಾರೆ.

  • ತಂತ್ರಜ್ಞಾನ ಅವಕಾಶ ಬಳಸಿ ಯಶಸ್ವಿ ಮಹಿಳಾ ಉದ್ಯಮಿಗಳಾಗಿ: ಉಮಾ ರೆಡ್ಡಿ

    ತಂತ್ರಜ್ಞಾನ ಅವಕಾಶ ಬಳಸಿ ಯಶಸ್ವಿ ಮಹಿಳಾ ಉದ್ಯಮಿಗಳಾಗಿ: ಉಮಾ ರೆಡ್ಡಿ

    ಬೆಂಗಳೂರು: ತಂತ್ರಜ್ಞಾನದ ಅವಕಾಶಗಳನ್ನು ಸೂಕ್ತವಾಗಿ ಸದುಪಯೋಗಪಡಿಸಿಕೊಳ್ಳುವ ಮೂಲಕ ಯಶಸ್ವಿ ಮಹಿಳಾ ಉದ್ಯಮಿಗಳಾಗಬಹುದು ಎಂದು ಹೈಟೆಕ್ ಮ್ಯಾಗ್ನಟಿಕ್ ಸಲ್ಯೂಶನ್ಸ್ ವ್ಯವಸ್ಥಾಪಕ ನಿರ್ದೇಶಕಿ ಉಮಾ ರೆಡ್ಡಿ ಅಭಿಪ್ರಾಯಪಟ್ಟಿದ್ದಾರೆ.

    ಕರ್ನಾಟಕ ಪತ್ರಕರ್ತೆಯರ ಸಂಘ, ಎಫ್ ಕೆಸಿಸಿಐ ಮತ್ತು ಇನ್ಫೋಸಿಸ್ ಸಹಯೋಗದಲ್ಲಿ ನಗರದಲ್ಲಿಂದು ಪತ್ರಕರ್ತೆಯರಿಗಾಗಿ ಆಯೋಜಿಸಿದ್ದ ಡಿಜಿಟಲ್ ಲಿಟರಸಿ ಕಾರ್ಯಾಗಾರದಲ್ಲಿ ತಂತ್ರಜ್ಞಾನ ಹಾಗೂ ಅವಕಾಶಗಳ ಕುರಿತು ಮಾತನಾಡಿದರು. ಇದನ್ನೂ ಓದಿ: ಪ್ರಶಾಂತ್ ಸಂಬರಗಿ ಸಾರಥ್ಯದಲ್ಲಿ ಸಿನಿಮಾವಾಗ್ತಿದೆ ‘ಆಗಸ್ಟ್ 15’ರ ಸ್ಟೋರಿ

    ಪ್ರಸ್ತುತ ಡಿಜಿಟಲ್ ಲಿಟರಸಿ ಮುಖ್ಯವಾಗಿದೆ. ಅದರಲ್ಲೂ ಕೋವಿಡ್ ಸಮಯದಲ್ಲಿ ತಂತ್ರಜ್ಞಾನ ಬಳಕೆ ಹೆಚ್ಚಾಯಿತು. ಹೆಚ್ಚು ಜನರನ್ನು ತಲುಪಲು ಸಾಧ್ಯವಾಯಿತು. ಪ್ರತಿ ದಿನ ತಂತ್ರಜ್ಞಾನ ಅಪ್ ಗ್ರೇಡ್ ಆಗುತ್ತಿರುತ್ತದೆ. ಅದನ್ನು ಹೇಗೆ ಬಳಸಿಕೊಳ್ಳಬೇಕು, ಪ್ರಯೋಜನಗಳು ಮತ್ತು ನೆಟ್ ವಕಿರ್ಂಗ್ ಕುರಿತು ಅರಿವು ಇರಲೇಬೇಕು. ಅಗತ್ಯವಿರುವ ಮತ್ತು ಸೂಕ್ತವಾದ ತಂತ್ರಜ್ಞಾನ ಬಳಸಿಕೊಂಡು ಯಶಸ್ವಿ ಮಹಿಳಾ ಉದ್ಯಮಿಯಾಗಬಹುದು ಎಂದರು. ಇದನ್ನೂ ಓದಿ: 40% ಕಮಿಷನ್ – ಈಶ್ವರಪ್ಪ ವಿರುದ್ಧ ಮೋದಿಗೆ ಪತ್ರ ಬರೆದ ಗುತ್ತಿಗೆದಾರ

    ಕಾರ್ಯಾಗಾರದ ಸಂಪನ್ಮೂಲ ವ್ಯಕ್ತಿ ರಜಿನಿ ರಮೇಶ್ ಮಾತನಾಡಿ, ಪ್ರತಿಯೊಬ್ಬರು ತಮ್ಮನ್ನು ತಾವು ತೆರೆದುಕೊಳ್ಳಲು ಸಾಮಾಜಿಕ ಜಾಲತಾಣ ಉತ್ತಮ ವೇದಿಕೆಯಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಇರುವ ಅವಕಾಶಗಳನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಬೇಕು. ಆದರೂ ಅವುಗಳನ್ನು ವೈಯಕ್ತಿಕ ಸುರಕ್ಷತೆ ಕಾಪಾಡಿಕೊಳ್ಳುವಂತೆ ಎಚ್ಚರಿಕೆಯಿಂದ ಬಳಸಬೇಕು. ಈ ಅರಿವು ಅತ್ಯಗತ್ಯ ಎಂದು ತಿಳಿಸಿದರು. ಪತ್ರಕರ್ತೆಯರಿಗೆ ಅಗತ್ಯವಿರುವ ಸೋಶಿಯಲ್ ಮೀಡಿಯಾ, ಬಳಕೆ, ಉಪಯೋಗ ಕುರಿತು ಪ್ರಾತ್ಯಕ್ಷಿಕೆ ನೀಡುವ ಮೂಲಕ ವಿವರಿಸಿದರು.

    ಸಂಘದ ಅಧ್ಯಕ್ಷೆ ಶಾಂತಲಾ ಧರ್ಮರಾಜ್ ಪ್ರಾಸ್ತಾವಿಕವಾಗಿ ಮಾತನಾಡಿ, ಸಂಘದ ಕಾರ್ಯಚಟುವಟಿಕೆ ಹಾಗೂ ಪತ್ರಕರ್ತೆಯರ ಮುಂದಿರುವ ಸವಾಲುಗಳ ಬಗ್ಗೆ ವಿವರಿಸಿದರು. ಕಾರ್ಯಾಗಾರದಲ್ಲಿ ಸಂಘದ ಕಾರ್ಯದರ್ಶಿ ಮಾಲತಿ ಭಟ್, ಹಿರಿಯ ಪತ್ರಕರ್ತೆ ಕೆ.ಹೆಚ್. ಸಾವಿತ್ರಿ, ಆಕಾಶವಾಣಿ ನಿರ್ದೇಶಕಿ ನಿರ್ಮಲಾ ಎಲಿಗಾರ್, ಪಿಐಬಿ ಅಧಿಕಾರಿ ಜಯಂತಿ ಕೆ.ವೈ ಸೇರಿದಂತೆ ಹಿರಿಯ ಹಾಗೂ ಕಿರಿಯ ಪತ್ರಕರ್ತೆಯರು ಭಾಗವಹಿಸಿದ್ದರು.

  • ತಂತ್ರಜ್ಞಾನ ಈಗ ಭದ್ರತಾ ವ್ಯವಸ್ಥೆಯಲ್ಲಿ ಸಂಭಾವ್ಯ ಅಸ್ತ್ರವಾಗಿದೆ: ಮೋದಿ

    ತಂತ್ರಜ್ಞಾನ ಈಗ ಭದ್ರತಾ ವ್ಯವಸ್ಥೆಯಲ್ಲಿ ಸಂಭಾವ್ಯ ಅಸ್ತ್ರವಾಗಿದೆ: ಮೋದಿ

    ನವದೆಹಲಿ: ತಂತ್ರಜ್ಞಾನ ಈಗ ಭದ್ರತಾ ವ್ಯವಸ್ಥೆಯಲ್ಲಿ ಸಂಭಾವ್ಯ ಅಸ್ತ್ರವಾಗಿದೆ ಎಂದು ಪ್ರಧಾನಿ ಮೋದಿ ಹೇಳಿದರು.

    ಎರಡು ದಿನಗಳ ಗುಜರಾತ್ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ, ಶನಿವಾರ ಬೆಳಗ್ಗೆ ಗಾಂಧಿನಗರದ ಲಾವಡ್ ಪ್ರದೇಶದ ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ಮಾತನಾಡಿದರು. ಭದ್ರತಾ ಪಡೆಗಳನ್ನು ಶ್ಲಾಘಿಸಿದರು ಮತ್ತು ಕೋವಿಡ್-19 ಸಾಂಕ್ರಾಮಿಕ ರೋಗದ ವಿರುದ್ಧ ಭಾರತದ ಹೋರಾಟಕ್ಕೆ ಅವರ ಕೊಡುಗೆಯನ್ನು ಸ್ಮರಿಸಿದರು.

    ದೇಶದ ಭದ್ರತೆಯಲ್ಲಿ ತಂತ್ರಜ್ಞಾನದ ಪಾತ್ರವನ್ನು ಒತ್ತಿ ಹೇಳಿದ ಅವರು, ತಂತ್ರಜ್ಞಾನವು ಈಗ ಭದ್ರತಾ ವ್ಯವಸ್ಥೆಯಲ್ಲಿ ಸಂಭಾವ್ಯ ಅಸ್ತ್ರವಾಗಿದೆ. ಭದ್ರತಾ ಪಡೆಗಳಲ್ಲಿರಲು ಕೇವಲ ದೈಹಿಕ ತರಬೇತಿ ಸಾಕಾಗುವುದಿಲ್ಲ. ಈಗ ವಿಶೇಷ ಸಾಮಥ್ರ್ಯವುಳ್ಳ ಹಾಗೂ ದೈಹಿಕವಾಗಿ ಸದೃಢರಾಗದಿದ್ದರೂ ಸಹ ಭದ್ರತೆಗೆ ಕೊಡುಗೆ ನೀಡಬಹುದು ಎಂದರು. ಇದನ್ನೂ ಓದಿ: ಭಾರತದ ರಫೇಲ್ ಯುದ್ಧ ವಿಮಾನ ಎದುರಿಸಲು ಚೀನಾದ ಜೆ-10ಸಿ ಫೈಟರ್ ಜೆಟ್ ಖರೀದಿಸಿದ ಪಾಕಿಸ್ತಾನ

    ಕೋವಿಡ್ ಸಾಂಕ್ರಾಮಿಕ ಸಮಯದಲ್ಲಿ ನಾವು ನೋಡಿದ್ದೇವೆ. ಲಾಕ್‍ಡೌನ್ ಸಮಯದಲ್ಲಿ ಸಮವಸ್ತ್ರದಲ್ಲಿ ಅನೇಕ ಪೊಲೀಸರು ಅಗತ್ಯವಿರುವವರಿಗೆ ಆಹಾರ ಮತ್ತು ಔಷಧಿಗಳನ್ನು ನೀಡಿದರು. ಜನರು ಪೊಲೀಸರ ಮಾನವೀಯ ಮುಖವನ್ನು ನೋಡಿದ್ದಾರೆ ಎಂದು ಹೇಳಿದರು.

    ಪೊಲೀಸರ ಬಗ್ಗೆ ಜನರಲ್ಲಿರುವ ಗ್ರಹಿಕೆಯನ್ನು ಬದಲಾಯಿಸುವ ರೀತಿಯಲ್ಲಿ ಪೊಲೀಸ್ ಸಿಬ್ಬಂದಿಗೆ ತರಬೇತಿ ನೀಡಬೇಕು. ಪೊಲೀಸ್ ಬಗ್ಗೆ ಜನರಲ್ಲಿ ಒಂದು ಕೆಟ್ಟ ಗ್ರಹಿಕೆ ಇದೆ. ಜನರೊಂದಿಗೆ ಸೌಹಾರ್ದಯುತವಾಗಿರುವ ರೀತಿಯಲ್ಲಿ ಪೊಲೀಸ್ ಪಡೆಯನ್ನು ತರಬೇತುಗೊಳಿಸುವುದು ಕಡ್ಡಾಯವಾಗಿದೆ ಎಂದು ಸಲಹೆ ನೀಡಿದರು. ಇದನ್ನೂ ಓದಿ: ನೆದರ್‌ಲ್ಯಾಂಡ್‌ನ ಅಮೆರಿಕ ರಾಯಭಾರಿಯಾಗಿ ಭಾರತ ಮೂಲದ ಮಹಿಳೆ ನಾಮನಿರ್ದೇಶನ

    ಭದ್ರತಾ ಪಡೆಗಳಲ್ಲಿನ ನೇಮಕಾತಿಯಲ್ಲಿನ ಸುಧಾರಣೆಗಳ ಅಗತ್ಯದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಸ್ವಾತಂತ್ರ್ಯದ ನಂತರ, ಕಾನೂನು ಮತ್ತು ಸುವ್ಯವಸ್ಥೆಯಲ್ಲಿನ ನೇಮಕಾತಿಯಲ್ಲಿ ಸುಧಾರಣೆಗಳ ಅಗತ್ಯವಿತ್ತು. ದುರದೃಷ್ಟವಶಾತ್ ನಾವು ಹಿಂದುಳಿದಿದ್ದೇವೆ ಎಂದು ಹೇಳಿದರು.

    ಪ್ರಧಾನಿ ಮೋದಿಯವರ ಎರಡು ದಿನಗಳ ಗುಜರಾತ್ ಭೇಟಿ ಶುಕ್ರವಾರ ಪ್ರಾರಂಭವಾಯಿತು. ಅಲ್ಲಿ ಅವರು ವಿಮಾನ ನಿಲ್ದಾಣದಿಂದ ಬಿಜೆಪಿ ಕಚೇರಿ ಕಮಲಂವರೆಗೆ ರೋಡ್‍ಶೋ ನಡೆಸಿದರು. ನಂತರ ಅಹಮದಾಬಾದ್‍ನಲ್ಲಿ ಪಕ್ಷದ ನಾಯಕರೊಂದಿಗೆ ಸಭೆ ನಡೆಸಿದರು. ಇದಲ್ಲದೆ ಅಹಮದಾಬಾದ್‍ನ ಜಿಎಂಡಿಸಿ ಮೈದಾನದಲ್ಲಿ ಮಹಾ ಪಂಚಾಯತ್ ಸಮ್ಮೇಳನವನ್ನು ಉದ್ದೇಶಿಸಿ ಮಾತನಾಡಿದರು.

    ನಂತರ ಗಾಂಧಿನಗರದಲ್ಲಿರುವ ಅವರ ನಿವಾಸದಲ್ಲಿ ಅವರ ತಾಯಿ ಹೀರಾಬೆನ್ ಮೋದಿ ಅವರನ್ನು ಭೇಟಿ ಮಾಡಿ ಅವರ ಜೊತೆ ಕುಳಿತು ಭೋಜನ ಸ್ವೀಕರಿಸಿದರು.

  • ರಕ್ತ ಪರೀಕ್ಷೆಯಿಂದ ಕ್ಯಾನ್ಸರ್ ಕಂಡುಹಿಡಿಯುವ ಹೊಸ ತಂತ್ರಜ್ಞಾನ ಅಭಿವೃದ್ಧಿ

    ರಕ್ತ ಪರೀಕ್ಷೆಯಿಂದ ಕ್ಯಾನ್ಸರ್ ಕಂಡುಹಿಡಿಯುವ ಹೊಸ ತಂತ್ರಜ್ಞಾನ ಅಭಿವೃದ್ಧಿ

    ಲಂಡನ್: ಕ್ಯಾನ್ಸರ್ ಲಕ್ಷಣ ಇಲ್ಲದಿದ್ದರೂ ರಕ್ತದ ಪರೀಕ್ಷೆಯ ಮೂಲಕ ಅದನ್ನು ಕಂಡುಹಿಡಿಯುವಂತಹ ತಂತ್ರಜ್ಞಾನವನ್ನು ವಿಜ್ಞಾನಿಗಳು ಕಂಡುಹಿಡಿದಿದ್ದಾರೆ.

    ಜನರಲ್ಲಿ ಕ್ಯಾನ್ಸರ್‌ನ ಪ್ರಾರಂಭಿಕ ಹಂತದಲ್ಲಿ ಅದರ ಲಕ್ಷಣವನ್ನು ಕಂಡುಹಿಡಿಯುವುದು ವೈದ್ಯರಿಗೆ ಒಂದು ಸವಾಲಿನ ವಿಷಯ. ಹಲವು ಬಾರಿ ರೋಗಿಗಳು ಕ್ಯಾನ್ಸರ್‌ನ ಪ್ರಾರಂಭದ ಹಂತದಲ್ಲಿ ವೈದ್ಯರಿಗೂ ತಿಳಿಯದೇ ಸಾಮಾನ್ಯ ಸಮಸ್ಯೆ ಎಂದುಕೊಂಡು ಕೊನೇ ಹಂತದಲ್ಲಿ ಜೀವವನ್ನೇ ಕಳೆದುಕೊಂಡಿರುವಂತಹ ಘಟನೆಗಳನ್ನು ನಾವು ಸಾಕಷ್ಟು ಬಾರಿ ನೋಡಿರುತ್ತೇವೆ.

    ಕ್ಯಾನ್ಸರ್ ಕಂಡು ಹಿಡಿಯುವುದು ವೈದ್ಯರಿಗೂ ದೊಡ್ಡ ಸವಾಲು. ಹೀಗಿರುವಾಗ ವಿಜ್ಞಾನಿಗಳು ಹೊಸ ತಂತ್ರಜ್ಞಾನ ಕಂಡುಹಿಡಿದಿದ್ದಾರೆ. ಇದರ ಸಹಾಯದಿಂದ ರೋಗಿಗಳ ರಕ್ತದ ಮಾದರಿಯನ್ನು ಬಳಸಿಕೊಂಡು ಅವರಿಗೆ ಕ್ಯಾನ್ಸರ್ ಇದೆಯೇ ಇಲ್ಲವೇ ಎಂಬುದನ್ನು ಸುಲಭವಾಗಿ ಕಂಡು ಹಿಡಿಯಬಹುದು ಎಂದಿದ್ದಾರೆ. ಇದನ್ನೂ ಓದಿ: 12,000 ಕೆಜಿ ತೂಕದ ಬಸ್ಸನ್ನು ಕೂದಲಿನಿಂದ ಎಳೆದ ಭಾರತೀಯ ಮಹಿಳೆ- Video Viral

    ಸಂಶೋಧಕರು ನ್ಯೂಕ್ಲಿಯರ್ ಮ್ಯಾಗ್ನೆಟಿಕ್ ರೆಸೋನೆನ್ಸ್ ಸ್ಪೆಕ್ರೋಸ್ಕೋಪಿ ತಂತ್ರಜ್ಞಾನವನ್ನು ಬಳಸಿಕೊಂಡು, ರಕ್ತದ ಅಣುವನ್ನು ಸರಿಯಾಗಿ ಪರಿಶೀಲನೆ ನಡೆಸುವ ಮೂಲಕ ಕ್ಯಾನ್ಸರ್ ರೋಗ ಪತ್ತೆ ಹಚ್ಚಬಹುದು ಎಂದು ತಿಳಿಸಿದ್ದಾರೆ.

    ಈ ತಂತ್ರಜ್ಞಾನದ ಮೂಲಕ ಕ್ಯಾನ್ಸರ್‌ನ ಲಕ್ಷಣಗಳನ್ನು ಗುರುತಿಸಬಹುದು. ಸಂಶೋಧಕರು ಆಯಾಸ ಹಾಗೂ ತೂಕ ನಷ್ಟಗಳಂತಹ ಲಕ್ಷಣಗಳು ಹೊಂದಿದ್ದ 20 ರೋಗಿಗಳ ರಕ್ತದ ಕಣಗಳಲ್ಲಿ 19 ರೋಗಿಗಳಿಗೆ ಕ್ಯಾನ್ಸರ್ ಇರುವುದನ್ನು ಪತ್ತೆ ಹಚ್ಚಿದ್ದಾರೆ. ಇದನ್ನೂ ಓದಿ: ಸ್ಟಾರ್‌ಲಿಂಕ್ ಇಂಡಿಯಾದ ಮುಖ್ಯಸ್ಥ ಸಂಜಯ್ ಭಾರ್ಗವ ರಾಜೀನಾಮೆ

    ಈ ತಂತ್ರಜ್ಞಾನದ ಮೂಲಕ 2000 ದಿಂದ 3000 ಬ್ರಿಟಿಷ್ ರೋಗಿಗಳಲ್ಲಿ ಕ್ಯಾನ್ಸರ್ ಅನ್ನು ಮೊದಲ ಹಂತದಲ್ಲೇ ಪತ್ತೆ ಹಚ್ಚಿದ್ದಾರೆ. ಈ ತಂತ್ರಜ್ಞಾನ ಜಾಗತಿಕವಾಗಿ ಬಳಕೆಯಾದಲ್ಲಿ ಕ್ಯಾನ್ಸರ್‌ಅನ್ನು ವೇಗವಾಗಿ ಪತ್ತೆ ಹಚ್ಚಿ, ರೋಗಿಯ ಜೀವ ಉಳಿಸಲು ಸಹಾಯವಾಗಬಹುದು ಎಂದು ಸಂಶೋಧಕರು ಹೇಳಿದ್ದಾರೆ.

  • ಊಸರವಳ್ಳಿಯಂತೆ ಬಣ್ಣ ಬದಲಾಗುವ ಚರ್ಮ ಮನುಷ್ಯನಿಗೂ ಬಂತು

    ಊಸರವಳ್ಳಿಯಂತೆ ಬಣ್ಣ ಬದಲಾಗುವ ಚರ್ಮ ಮನುಷ್ಯನಿಗೂ ಬಂತು

    ಸಿಯೋಲ್: ನೈಸರ್ಗಿಕ ಜೀವವಿಜ್ಞಾನದಿಂದ ಪ್ರೇರಿತವಾದ ದಕ್ಷಿಣ ಕೊರಿಯಾದ ಸಂಶೋಧಕರು ಊಸರವಳ್ಳಿಯಂತೆ ಬದಲಾಗುವ ಕೃತಕ ಚರ್ಮವನ್ನು ಕಂಡು ಹಿಡಿದಿದ್ದಾರೆ.

    sದಕ್ಷಿಣ ಕೊರಿಯಾದ ಸಿಯೋಲ್ ರಾಷ್ಟ್ರೀಯ ವಿಶ್ವವಿದ್ಯಾಲಯದ ಮೆಕ್ಯಾನಿಕಲ್ ಎಂಜಿನಿಯರಿಂಗ್ ಪ್ರಾಧ್ಯಾಪಕ ಕೋ ಸೆಯುಂಗ್ ಹ್ವಾನ್ ಈ ಕೃತಕ ಚರ್ಮವನ್ನು ಕಂಡು ಹಿಡಿದಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿದ ಅವರು, ನೈಸರ್ಗಿಕ ಜೀವವಿಜ್ಞಾನದಿಂದ ಪ್ರೇರಿತನಾಗಿ ಕೃತಕ ಚರ್ಮದಂತಹ ವಸ್ತುವನ್ನು ಕಂಡು ಹಿಡಿದಿದ್ದೇನೆ. ಈ ಕೃತಕ ಚರ್ಮ ತಾಪಮಾನಕ್ಕೆ ತಕ್ಕಂತೆ ಊಸರವಳ್ಳಿಯ ರೀತಿ ತಕ್ಷಣ ತನ್ನ ಬಣ್ಣವನ್ನ ಬದಲಾಯಿಸುತ್ತದೆ ಎಂದು ಹೇಳಿದ್ದಾರೆ. ಇದನ್ನೂ ಓದಿ:  ಕ್ಷುಲ್ಲಕ ಕಾರಣಕ್ಕೆ ಕುಟುಂಬಗಳ ಮಧ್ಯೆ ಮಾರಾಮಾರಿ- ಮೂವರಿಗೆ ಗಾಯ

    ಒಂದು ವೇಳೆ ನಾವು ಮರುಭೂಮಿ ರೀತಿಯ ಪ್ರದೇಶಕ್ಕೆ ಹೋದರೆ ಈ ರೀತಿಯ ಚರ್ಮವನ್ನು ಧರಿಸಬಹುದು. ಈ ಮೂಲಕ ನಾವು ಎಷ್ಟೇ ಬಿಸಿಲಿನಲ್ಲಿದ್ದರೂ ಸುಲಭವಾಗಿ ಓಡಾಡಬಹುದು. ಅದೇ ರೀತಿ ನಾವು ತಯಾರಿಸುವ ಈ ಕೃತಕ ಚರ್ಮವನ್ನು ಆ ವಾತಾವರಣಕ್ಕೆ ತಕ್ಕಂತೆ ಬದಲಾಯಿಸಬೇಕು ಎಂದಿದ್ದಾರೆ. ಇದನ್ನೂ ಓದಿ: ಸಾಲಬಾಧೆ ತಾಳದೆ ರೈತ ನೇಣು ಬಿಗಿದುಕೊಂಡು ಆತ್ಮಹತ್ಯೆ

    ಕೋ ಸೆಯುಂಗ್ ಹ್ವಾನ್ ಮತ್ತು ಅವರ ತಂಡ ವಿವಿಧ ಬಣ್ಣಗಳ ಮೇಲೆ ರೋಬೋಟ್ ಅನ್ನು ಬಿಟ್ಟು ತಮ್ಮ ಪ್ರಯೋಗವನ್ನು ಪ್ರದರ್ಶಿಸಿದರು. ರೋಬೋಟ್ ಕೆಂಪು, ನೀಲಿ ಮತ್ತು ಹಸಿರು ಬಣ್ಣಗಳ ಮೇಲೆ ಹೋಗುತ್ತ ಇದ್ದಂತೆ ಆ ಬಣ್ಣಗಳಿಗೆ ತಿರುಗುತ್ತಿತ್ತು ಇದನ್ನು ನೋಡಿದ ವಿದ್ಯಾರ್ಥಿಗಳು ಮತ್ತು ಸ್ಥಳೀಯರು ಬೆರಗಾಗಿ ನಿಂತಿದ್ದರು. ಇದನ್ನೂ ಓದಿ: ಸಿಲಿಂಡರ್ ಸ್ಫೋಟ- ಮೊಮ್ಮಗಳ ಸಮಯ ಪ್ರಜ್ಞೆಯಿಂದ ಉಳೀತು ಅಜ್ಜಿ ಜೀವ

    ಈ ಕುರಿತು ಪ್ರತಿಕ್ರಿಯಿಸಿದ ಕೋ, ಸೆನ್ಸರ್‍ಗಳಿಂದ ಪತ್ತೆಯಾದ ಬಣ್ಣದ ಮಾಹಿತಿಯನ್ನು ಮೈಕ್ರೊಪ್ರೊಸೆಸರ್ ಗೆ ಮತ್ತು ನಂತರ ಸಿಲ್ವರ್ ನ್ಯಾನೊವೈರ್ ಹೀಟರ್‍ಗಳಿಗೆ ವರ್ಗಾಯಿಸಲಾಗುತ್ತದೆ. ಹೀಟರ್‍ಗಳು ಒಂದು ನಿರ್ದಿಷ್ಟ ತಾಪಮಾನವನ್ನು ತಲುಪಿದ ನಂತರ, ಥರ್ಮೋಕ್ರೋಮಿಕ್ ಲಿಕ್ವಿಡ್ ಸ್ಫಟಿಕ ಪದರವು ಅದರ ಬಣ್ಣವನ್ನು ಬದಲಾಯಿಸುತ್ತೆ ಎಂದು ತಿಳಿಸಿದರು.

  • ಕೆಲ ತಿಂಗಳಲ್ಲೇ ಮಾಸಿಕ 17 ಕೋಟಿ ಕೋವಿಡ್ ಲಸಿಕೆ ತಯಾರಿ- ಅಶ್ವತ್ಥನಾರಾಯಣ

    ಕೆಲ ತಿಂಗಳಲ್ಲೇ ಮಾಸಿಕ 17 ಕೋಟಿ ಕೋವಿಡ್ ಲಸಿಕೆ ತಯಾರಿ- ಅಶ್ವತ್ಥನಾರಾಯಣ

    – ಆವಿಷ್ಕಾರ, ನವೋದ್ಯಮ ಕ್ಷೇತ್ರದಲ್ಲಿ ಕರ್ನಾಟಕ
    – ಫ್ರಾನ್ಸ್ ನಡುವೆ ಮಹತ್ವದ ಒಪ್ಪಂದ
    – ಫ್ರೆಂಚ್ ವಿದೇಶಾಂಗ ಸಚಿವರ ಜೊತೆ ಡಿಸಿಎಂ ಮಾತುಕತೆ

    ಬೆಂಗಳೂರು: ಕೋವಿಡ್ ಮಹಾಮಾರಿಯಿಂದ ನಮ್ಮ ಜನರನ್ನು ರಕ್ಷಣೆ ಮಾಡಿಕೊಳ್ಳಲು ಭಾರತವು ಲಸಿಕೆ ಉತ್ಪಾದನೆಯಲ್ಲಿ ಮುಂಚೂಣಿಯಲ್ಲಿದ್ದು, ಇನ್ನು ಕೆಲ ತಿಂಗಳಲ್ಲೇ ಮಾಸಿಕ 17 ಕೋಟಿ ಲಸಿಕೆಗಳನ್ನು ಉತ್ಪಾದನೆ ಮಾಡಲಿದೆ ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ ಅವರು ಹೇಳಿಕೆ ನೀಡಿದ್ದಾರೆ.

    ಬೆಂಗಳೂರಿನಲ್ಲಿ ಶುಕ್ರವಾರ ಕರ್ನಾಟಕ ಆವಿಷ್ಕಾರ ಮತ್ತು ತಂತ್ರಜ್ಞಾನ ಸಂಸ್ಥೆ (KITS) ಮತ್ತು ಇಂಡೋ- ಫ್ರೆಂಚ್ ಕೈಗಾರಿಕಾ ಮತ್ತು ವಾಣಿಜ್ಯ ಒಕ್ಕೂಟ (IFCCI) ನಡುವೆ ಏರ್ಪಟ್ಟ ಒಪ್ಪಂದದ ವೇಳೆ ಮಾತನಾಡಿದ ಅಶ್ವತ್ಥನಾರಾಯಣ ಅವರು, “ಸದ್ಯಕ್ಕೆ ಮಾಸಿಕ 7 ಕೋಟಿ ಕೋವಿಡ್ ಲಸಿಕೆಯನ್ನು ಉತ್ಪಾದನೆ ಮಾಡುತ್ತಿದೆ. ಇದಕ್ಕೆ ಇನ್ನೂ 10 ಕೋಟಿ ಲಸಿಕೆ ಸೇರಲಿದೆ. ತದ ನಂತರ ಕರ್ನಾಟಕವೂ ಸೇರಿ ದೇಶಾದ್ಯಂತ ಲಸಿಕೆ ಅಭಿಯಾನ ಮತ್ತಷ್ಟು ವೇಗಗೊಳ್ಳಲಿದೆ. ಇದರ ಜತೆ ಮತ್ತಷ್ಟು ಹೊಸ ಲಸಿಕೆಗಳು ಕೂಡ ಬರಲಿವೆ. ಅವು ರಾಜ್ಯಕ್ಕೂ ಲಭ್ಯವಾಗಲಿವೆ” ಎಂದರು.

    ಕೋವಿಡ್ ಮತ್ತಿತರೆ ಜಾಗತಿಕ ಸವಾಲುಗಳ ನಡುವೆಯೂ ಕರ್ನಾಟಕದಲ್ಲಿ ವಿದೇಶಿ ಹೂಡಿಕೆ ಮೇಲ್ಮುಖವಾಗಿಯೇ ಇದೆ. ಅದಕ್ಕೂ ಮೊದಲು, ಅಂದರೆ, 2000ರಿಂದ 2019ರವರೆಗೆ ರಾಜ್ಯಕ್ಕೆ 49.7 ಶತಕೋಟಿ ಡಾಲರ್ ವಿದೇಶಿ ಹೂಡಿಕೆ ಹರಿದುಬಂದಿದೆ. ವಿದೇಶಿ ಹೂಡಿಕೆ ಒಳಹರಿವಿನಲ್ಲಿ ರಾಜ್ಯವು ಮಹಾರಾಷ್ಟ್ರ ಮತ್ತು ನವದೆಹಲಿಯ ನಂತರ ಮೂರನೇ ಅಗ್ರರಾಜ್ಯವಾಗಿದೆ. ಕೋವಿಡ್‍ಗೂ ಮೊದಲು ಕರ್ನಾಟಕ ಹೂಡಿಕೆ ಅತ್ಯುತ್ತಮ ತಾಣವಾಗಿತ್ತು. ಅದೇ ರೀತಿ ಕೋವಿಡ್ಡೋತ್ತರ ಕಾಲದಲ್ಲಿಯೂ ಹೂಡಿಕೆಗೆ ಪ್ರಶಸ್ತ್ಯ ನೆಲೆಯಾಗಿದೆ ಎಂದು ನುಡಿದರು.

    ಮಾಹಿತಿ ತಂತ್ರಜ್ಞಾನ (ಐಟಿ) ಉತ್ಪನ್ನಗಳ ರಫ್ತು ವಹಿವಾಟಿನಲ್ಲಿ ಕರ್ನಾಟಕ ದೊಡ್ಡ ಶಕ್ತಿಯಾಗಿ ಹೊರಹೊಮ್ಮಿದೆ. ಭಾರತದ ಐಟಿ ರಫ್ತಿಗೆ ಕರ್ನಾಟಕ ಅತಿದೊಡ್ಡ ಕೊಡುಗೆ ಶೇ.40ರಷ್ಟಿ ಇದೆ. ಇದು ತೆಲಂಗಾಣ, ತಮಿಳುನಾಡು ಮತ್ತು ಮಹಾರಾಷ್ಟ್ರ ರಾಜ್ಯಗಳಿಗಿಂತ ಹೆಚ್ಚು ಹಾಗೂ ಅದರಲ್ಲಿ ಕರ್ನಾಟಕ ಮತ್ತಿತರೆ ರಾಜ್ಯಗಳ ನಡುವೆ ಭಾರೀ ಅಂತರವಿದೆ. ಕೈಗಾರಿಕೆ, ಆವಿಷ್ಕಾರ, ಸಂಶೋಧನೆ, ಅಭಿವೃದ್ಧಿ ಇತ್ಯಾದಿ ಕ್ಷೇತ್ರಗಳಲ್ಲಿ ಕರ್ನಾಟಕವು ಅತ್ಯಂತ ಸಮೃದ್ಧ ರಾಜ್ಯವಾಗಿದೆ. ಒಟ್ಟು ದೇಶಿಯ ಉತ್ಪನ್ನದಲ್ಲಿ (GSDP) 220 ಶತಕೋಟಿ ಡಾಲರ್ ಹೊಂದಿದೆ. ಮುಖ್ಯವಾಗಿ ಐಟಿ, ಬಿಟಿ, ಇಎಸ್‍ಡಿಎಂ (ಎಲೆಕ್ಟ್ರಾನಿಕ್ಸ್ ಸಿಸ್ಟಮ್ ವಿನ್ಯಾಸ ಮತ್ತು ಉತ್ಪಾದನೆ) ಮತ್ತು ಎವಿಜಿಸಿ (ಆನಿಮೇಷನ್, ವಿಷುಯಲ್ ಎಫೆಕ್ಟ್ಸ್, ಗೇಮಿಂಗ್ ಮತ್ತು ಕಾಮಿಕ್ಸ್) ಮುಂತಾದ ಕ್ಷೇತ್ರಗಳಿಗಾಗಿ ಪ್ರತ್ಯೇಕ ನೀತಿಗಳನ್ನೂ ರೂಪಿಸಿರುವ ಏಕೈಕ ರಾಜ್ಯ ಕರ್ನಾಟಕವಾಗಿದೆ ಎಂದು ಅವರು ತಿಳಿಸಿದರು.

    ಈ ಒಪ್ಪಂದ ಬಹಳ ಮಹತ್ವದ್ದು:
    ಮೊದಲಿನಿಂದಲೂ ಭಾರತ ಮತ್ತು ಫ್ರಾನ್ಸ್ ಸಹಜ ಪಾಲುದಾರ ದೇಶಗಳಾಗಿವೆಯಲ್ಲದೆ ಸಾಂಸ್ಕೃತಿಕ, ಆರ್ಥಿಕ, ವಿಜ್ಞಾನ-ತಂತ್ರಜ್ಞಾನ, ಶಿಕ್ಷಣ ಮತ್ತು ರಕ್ಷಣಾ ಕ್ಷೇತ್ರಗಳಲ್ಲಿ ಎರಡೂ ದೇಶಗಳು ನಿಕಟವಾಗಿ ಕೆಲಸ ಮಾಡುತ್ತಿವೆ. ಈ ಹಿನ್ನೆಲೆಯಲ್ಲಿ ಭಾರತ ಮತ್ತು ಫ್ರಾನ್ಸ್ ಬಹಳ ನಿಕಟವಾಗಿ ಕೆಲಸ ಮಾಡುತ್ತಿವೆ. ಕರ್ನಾಟಕ ಆವಿಷ್ಕಾರ ಮತ್ತು ತಂತ್ರಜ್ಞಾನ ಸಂಸ್ಥೆ (KITS)ಮತ್ತು ಇಂಡೋ-ಫ್ರೆಂಚ್ ಕೈಗಾರಿಕಾ ಮತ್ತು ವಾಣಿಜ್ಯ ಒಕ್ಕೂಟ (IFCCI) ನಡುವೆ ಏರ್ಪಟ್ಟ ಒಪ್ಪಂದ ಅತ್ಯಂತ ಮಹತ್ವಪೂರ್ಣವಾಗಿದೆ. ಈ ಒಪ್ಪಂದದ ಮೂಲಕ ಭಾರತ ಮತ್ತು ಫ್ರಾನ್ಸ್ ಬಾಂಧವ್ಯ ಇನ್ನಷ್ಟು ಗಟ್ಟಿಗೊಳಿಸುವಲ್ಲಿ ಕರ್ನಾಟಕದ ಪಾತ್ರ ಮುನ್ನೆಲೆಗೆ ಬಂದಂತೆ ಆಗಿದೆ. ತಂತ್ರಜ್ಞಾನ, ಸ್ಟಾರ್ಟ್ ಆಪ್ ಇನ್ನಿತರೆ ಕ್ಷೇತ್ರಗಳಲ್ಲಿ ರಾಜ್ಯವು ಫ್ರಾನ್ಸ್ ಜತೆ ಮತ್ತಷ್ಟು ನಿಕಟವಾಗಿ ಕೆಲಸ ಮಾಡಲಿದೆ. ಒಪ್ಪಂದವು ಎರಡೂ ದೇಶಗಳ ನಡುವಿನ ನಾವೀನ್ಯತಾ ಸಹಯೋಗದ ಬೆಳವಣಿಗೆಗೆ ಪ್ರಮುಖ ಮೈಲಿಗಲ್ಲು. ಈ ಒಪ್ಪಂದವು ಎರಡೂ ದೇಶಗಳ ಉದ್ಯಮಶೀಲತೆ ಮತ್ತು ಆವಿಷ್ಕಾರದ ಹಿನ್ನೆಲೆಯಲ್ಲಿ ಮಹತ್ವದ ಪಾತ್ರ ವಹಿಸಲಿದೆ ಎಂದು ಅಭಿಪ್ರಾಯಪಟ್ಟರು.

    ಒಪ್ಪಂದಕ್ಕೆ ಐಟಿ ಇಲಾಖೆ ನಿರ್ದೇಶಕ ಗೋಪಾಲಕೃಷ್ಣ ಮತ್ತು ಇಂಡೋ-ಫ್ರೆಂಚ್ ಕೈಗಾರಿಕಾ ಮತ್ತು ವಾಣಿಜ್ಯ ಒಕ್ಕೂಟದ ಯಹೋನನ್ ಸ್ಯಾಮ್ಯುಯಲ್ ಅಂಕಿತ ಹಾಕಿದರು. ಒಪ್ಪಂದ ಏರ್ಪಡುವುದಕ್ಕೂ ಮುನ್ನ ಡಿಸಿಎಂ ಡಾ.ಅಶ್ವತ್ಥನಾರಾಯಣ, ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಡಾ.ಇ.ವಿ.ರಮಣರೆಡ್ಡಿ ಅವರು ಫ್ರಾನ್ಸ್ ನ ವಿದೇಶಾಂಗ ವ್ಯವಹಾರಗಳ ಖಾತೆ ಸಚಿವ ಜೀನ್ ವಿಯಾಸ್ ಲೆ ಡ್ರಿಯಾನ್ ಹಾಗೂ ಭಾರತದಲ್ಲಿರುವ ಫ್ರಾನ್ಸ್ ರಾಯಭಾರಿ ಇಮ್ಯಾನ್ಯುಯಲ್ ಲೆನಿಯಾನ್, ಬೆಂಗಳೂರು ಫ್ರಾನ್ಸ್ ರಾಯಭಾರ ಕಚೇರಿಯ ಕಾನ್ಸುಲೇಟ್ ಜನರಲ್ ಮಾರ್ಜೋರಿ ವ್ಯಾನ್‍ಬೆಲಿಂಗ್ಹೆಮ್ ಜತೆ ಮಾತುಕತೆ ನಡೆಸಿದರು. ಕಾರ್ಯಕ್ರಮದಲ್ಲಿ ಐಟಿ ಇಲಾಖೆಯ ಪ್ರಧಾನ ವ್ಯವಸ್ಥಾಪಕಿ ಚಂಪಾ ಮುಂತಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.