Tag: Tehreek-e-Taliban

  • ಪಾಕಿಸ್ತಾನದಲ್ಲಿ ಬಾಂಬ್‌ ಸ್ಫೋಟ – 39 ಮಂದಿ ಬಲಿ, 200ಕ್ಕೂ ಹೆಚ್ಚು ಮಂದಿಗೆ ಗಾಯ

    ಪಾಕಿಸ್ತಾನದಲ್ಲಿ ಬಾಂಬ್‌ ಸ್ಫೋಟ – 39 ಮಂದಿ ಬಲಿ, 200ಕ್ಕೂ ಹೆಚ್ಚು ಮಂದಿಗೆ ಗಾಯ

    ಪೇಶಾವರ: ರಾಜಕೀಯ ಕಾರ್ಯಕ್ರಮದಲ್ಲಿ ಬಾಂಬ್‌ ಸ್ಫೋಟಗೊಂಡ (Bomb Blast) ಪರಿಣಾಮ ಕನಿಷ್ಠ 39 ಮಂದಿ ಸಾವನ್ನಪ್ಪಿ 200 ಮಂದಿ ಗಾಯಗೊಂಡ ಘಟನೆ ಪಾಕಿಸ್ತಾನ ಅಫ್ಘಾನಿಸ್ತಾನ ಗಡಿಯ (Pakistan-Afghanistan Border) ಸಮೀಪವಿರುವ ಖಾರ್ ಪಟ್ಟಣದಲ್ಲಿ ನಡೆದಿದೆ.

    ಪಟ್ಟಣದಲ್ಲಿ  ಧಾರ್ಮಿಕವಾಗಿ ಹೆಚ್ಚು ಗುರುತಿಸಿಕೊಂಡಿದ್ದ ಜಮಿಯತ್ ಉಲೇಮಾ-ಎ-ಇಸ್ಲಾಂ-ಎಫ್ (Jamiat Ulema-e-Islam-F) ರಾಜಕೀಯ ಪಕ್ಷದ ಕಾರ್ಯಕ್ರಮ ನಡೆಯುತ್ತಿತ್ತು. ಟೆಂಟ್‌ ಒಳಗಡೆ ನಡೆಯುತ್ತಿದ್ದ ಈ ಕಾರ್ಯಕ್ರಮದಲ್ಲಿ 400ಕ್ಕೂ ಹೆಚ್ಚು ಮಂದಿ ಭಾಗಿಯಾಗಿದ್ದರು. ಈ ದಾಳಿಯಲ್ಲಿ ಸ್ಥಳೀಯ ಜೆಯುಎಲ್‌-ಎಫ್‌ ನಾಯಕ ಮೃತಪಟ್ಟಿದ್ದಾರೆ.

    https://twitter.com/AqssssFajr/status/1685660799082045440

    ಆಸ್ಪತ್ರೆಯಲ್ಲಿ 39 ಮೃತ ದೇಹಗಳಿವೆ. 123 ಮಂದಿ ಗಾಯಗೊಂಡಿದ್ದು ಈ ಪೈಕಿ 17 ಮಂದಿಯ ಸ್ಥಿತಿ ಗಂಭೀರವಾಗಿದೆ ಎಂದು ಖೈಬರ್ ಪಖ್ತುಂಕ್ವಾ ಪ್ರಾಂತ್ಯದ ಆರೋಗ್ಯ ಸಚಿವ ರಿಯಾಜ್ ಅನ್ವರ್ ತಿಳಿಸಿದ್ದಾರೆ. ಇದನ್ನೂ ಓದಿ: ಮಾಸ್ಕೋ ಮೇಲೆ ಡ್ರೋನ್‌ ದಾಳಿ – ಇದು ಉಕ್ರೇನ್‌ ಕೃತ್ಯ ಎಂದ ರಷ್ಯಾ

    ಯಾವುದೇ ಗುಂಪು ದಾಳಿಯ ಹೊಣೆಯನ್ನು ಹೊತ್ತುಕೊಂಡಿಲ್ಲ. ಪಾಕಿಸ್ತಾನದಲ್ಲಿರುವ ತೆಹ್ರಿಕ್‌ ಇ ತಾಲಿಬಾನ್‌ (Tehreek-e-Taliban) ಸಂಘಟನೆ ಪೊಲೀಸ್ ಅಧಿಕಾರಿಗಳು ಸೇರಿದಂತೆ ಅಲ್ಲಿನ ಸೈನಿಕರ ವಿರುದ್ಧ ಈ ಹಿಂದೆ ದಾಳಿ ನಡೆಸಿತ್ತು.

    ಜನವರಿಯಲ್ಲಿ ಪಾಕಿಸ್ತಾನದ ತಾಲಿಬಾನ್‌ಗೆ ಸಂಬಂಧ ಹೊಂದಿರುವ ಆತ್ಮಹತ್ಯಾ ಬಾಂಬರ್ ವಾಯುವ್ಯ ನಗರದ ಪೇಶಾವರ್‌ನ ಪೊಲೀಸ್ ಆವರಣದೊಳಗಿನ ಮಸೀದಿಯೊಂದರಲ್ಲಿ ತನ್ನನ್ನು ತಾನು ಸ್ಫೋಟಿಸಿಕೊಂಡಿದ್ದ. ಈ ದಾಳಿಯಲ್ಲಿ 80 ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದರು.

    2021 ರಲ್ಲಿ ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಆಡಳಿತದ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಪಾಕಿಸ್ತಾನದಲ್ಲಿ ಭಾರೀ ಪ್ರಮಾಣದಲ್ಲಿ ಉಗ್ರ ದಾಳಿ ನಡೆಯುತ್ತಿದೆ.

     

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಉಗ್ರರ ದಾಳಿ ಸಂದೇಶ: ದೆಹಲಿಯಲ್ಲಿ ಹೈ ಅಲರ್ಟ್ ಘೋಷಣೆ

    ಉಗ್ರರ ದಾಳಿ ಸಂದೇಶ: ದೆಹಲಿಯಲ್ಲಿ ಹೈ ಅಲರ್ಟ್ ಘೋಷಣೆ

    ನವದೆಹಲಿ: ಉಗ್ರರು ದಾಳಿಯ ಸಂದೇಶ ಬಂದ ಹಿನ್ನೆಲೆಯಲ್ಲಿ ರಾಜಧಾನಿ ದೆಹಲಿಯಲ್ಲಿ ಹೈ ಅಲರ್ಟ್ ಘೋಷಣೆಯಾಗಿದೆ.

    ಭಯೋತ್ಪಾದಕ ಸಂಘಟನೆ ತೆಹ್ರಿಕ್-ಎ-ತಾಲಿಬಾನ್ (ಭಾರತೀಯ ಸೆಲ್) ಕಳುಹಿಸಿರುವ ಅನಾಮಧೇಯ ಇಮೇಲ್ ಕುರಿತು ಉತ್ತರ ಪ್ರದೇಶ ಪೊಲೀಸರು ದೆಹಲಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಮಾಹಿತಿ ಸಿಗುತ್ತಿದ್ದಂತೆ ರಾಷ್ಟ್ರ ರಾಜಧಾನಿಯಲ್ಲಿ ಭದ್ರತಾ ಎಚ್ಚರಿಕೆ ನೀಡಲಾಗಿದೆ.

    ತೆಹ್ರಿಕ್-ಎ-ತಾಲಿಬಾನ್‌ನಿಂದ ಅನಾಮಧೇಯ ಇಮೇಲ್‌ಗಳು ಬಂದಿರುವ ಬಗ್ಗೆ ಕೆಲವರು ಉತ್ತರ ಪ್ರದೇಶ ಪೊಲೀಸರಿಗೆ ತಿಳಿಸಿದ್ದಾರೆ. ಈ ಬಗ್ಗೆ ತಿಳಿಯುತ್ತಲೇ ಯುಪಿ ಪೊಲೀಸರು ದೆಹಲಿ ಪೊಲೀಸರಿಗೆ ಮಾಹಿತಿ ನಿಡಿ ಎಚ್ಚರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ಸಿಕಂದರಾಬಾದ್‍ನಲ್ಲಿ ಟಿಂಬರ್ ಗೋಡಾನ್‍ಗೆ ಬೆಂಕಿ- 11 ಮಂದಿ ಸಜೀವ ದಹನ

    ಮಾರುಕಟ್ಟೆಯನ್ನು ಮುಚ್ಚಲು ಹಾಗೂ ಎಚ್ಚರವಾಗಿರಲು ಪೊಲೀಸರಿಗೆ ತಾಲಿಬಾನ್ ಕಡೆಯಿಂದ ಬೆದರಿಕೆ ಸಂದೇಶ ಬಂದಿರುವುದಾಗಿ ಸರೋಜಿನಿ ನಗರ ಮಿನಿ ಮಾರುಕಟ್ಟೆ ವರ್ತಕ ಸಂಘದ ಅಧ್ಯಕ್ಷ ಅಶೋಕ್ ರಾಂಧವ್ ತಿಳಿಸಿದ್ದಾರೆ. ಆದರೆ ದೆಹಲಿ ಪೊಲೀಸರು ಮಾರುಕಟ್ಟೆಯನ್ನು ಮುಚ್ಚುವ ಕುರಿತು ಯಾವುದೇ ಅಧಿಕೃತ ಆದೇಶ ನೀಡಿಲ್ಲ. ಇದನ್ನೂ ಓದಿ: ಸತತ 2ನೇ ದಿನವೂ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಏರಿಕೆ

    ಈ ಬಗ್ಗೆ ಪೊಲೀಸರು ಮುನ್ನೆಚ್ಚರಿಕೆ ವಹಿಸಿದ್ದು, ಸರೋಜಿನಿ ನಗರ ಮಾರುಕಟ್ಟೆಯನ್ನು ಮುಚ್ಚಿಸುವ ಅಗತ್ಯವಿಲ್ಲ. ಇಮೇಲ್ ಕಳುಹಿಸಿರುವ ವ್ಯಕ್ತಿಯನ್ನು ಹುಡುಕಲಾಗುತ್ತಿದೆ. ಹಾಗೂ ಇಮೇಲ್ ಬಗೆಗಿನ ಸತ್ಯಾಸತ್ಯತೆಯನ್ನು ತಿಳಿದುಕೊಳ್ಳಲು ಪ್ರಯತ್ನಿಸಲಾಗುತ್ತಿದೆ ಎಂದಿದ್ದಾರೆ.

  • ಪಾಕಿಸ್ತಾನ ತಾಲಿಬಾನ್ ಮಧ್ಯೆ ಬೇಲಿಗಾಗಿ ಘರ್ಷಣೆ – ತಂತಿಯನ್ನೇ ಕದ್ದ ಉಗ್ರರು

    ಪಾಕಿಸ್ತಾನ ತಾಲಿಬಾನ್ ಮಧ್ಯೆ ಬೇಲಿಗಾಗಿ ಘರ್ಷಣೆ – ತಂತಿಯನ್ನೇ ಕದ್ದ ಉಗ್ರರು

    ಇಸ್ಲಾಮಾಬಾದ್: ಅಫ್ಘಾನಿಸ್ತಾನದ ತಾಲಿಬಾನ್ ಸರ್ಕಾರವನ್ನು ಸ್ವಾಗತಿಸಿದ್ದ ಪಾಕಿಸ್ತಾನಕ್ಕೆ ಈಗ ಅಲ್ಲಿನ ಉಗ್ರರು ಕಾಟ ನೀಡಲು ಆರಂಭಿಸಿದ್ದಾರೆ. ಗಡಿ ವಿಚಾರದಲ್ಲಿ ಅಫ್ಘಾನ್ ಉಗ್ರರು ಮತ್ತು ಪಾಕ್ ಸೇನೆಯ ಮಧ್ಯೆ ತಿಕ್ಕಾಟ ನಡೆದಿದೆ.

    ಖೈಬರ್ ಪಖ್ತುಂಖ್ವಾ ಪ್ರಾಂತ್ಯದ ಬಜೌರ್ ಜಿಲ್ಲೆಯ ಅಂತಾರಾಷ್ಟ್ರೀಯ ಗಡಿ ಪ್ರದೇಶದಲ್ಲಿ ಬೇಲಿ ಹಾಕುವ ವಿಚಾರಕ್ಕೆ ತಾಲಿಬಾನ್ ಉಗ್ರರು ಮತ್ತು ಪಾಕ್ ಯೋಧರ ನಡುವೆ ಗಂಜ್ಗಾಲ್, ಸಾರ್ಕನೋ ಮತ್ತು ಕುನಾರ್ ಎಂಬಲ್ಲಿ ಅರ್ಧ ಗಂಟೆ ಗುಂಡಿನ ಚಕಮಕಿ ನಡೆದಿದೆ ಎಂದು ವರದಿಯಾಗಿದೆ

    ತಾಲಿಬಾನ್ ಉಗ್ರರೊಬ್ಬರು ಗಡಿ ಬೇಲಿಯ ಬಳಿ ಇದ್ದ ಇಬ್ಬರು ಪಾಕ್ ಸೈನಿಕರನ್ನು ಹತ್ಯೆಗೈದಿದ್ದಾರೆ. ಆ ಹಿನ್ನೆಲೆಯಲ್ಲಿ ಪಾಕ್ ಸೇನೆ, ಆಫ್ಘಾನ್ ಭಾಗದ ಗ್ರಾಮಗಳತ್ತ ಗುಂಡು ಮತ್ತು ಶೆಲ್ ದಾಳಿ ನಡೆಸಿದ್ದಾರೆ. ಅದಕ್ಕೆ ಪ್ರತಿಯಾಗಿ ತಾಲಿಬಾನ್‌ರು ಪ್ರತಿದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಸೋಮವಾರ ಯಾದಗಿರಿಯಲ್ಲಿ ಚುನಾವಣೆ – ಪೊಲೀಸ್ ಇಲಾಖೆ ಸಜ್ಜು

    ಗಡಿ ವಿಚಾರದಲ್ಲಿ ಉಭಯ ರಾಷ್ಟ್ರಗಳ ನಡುವೆ ಸಾಕಷ್ಟು ಗೊಂದಲಗಳಿವೆ. ಕೆಲವು ದಿನಗಳ ಹಿಂದೆ ಅಷ್ಟೇ ಅದರ ಬಗ್ಗೆ ಸಭೆ ನಡೆಸಿ ಪರಿಹಾರ ಮಾಡಿಕೊಂಡಿದ್ದೇವೆ ಎಂದು ಎರಡು  ರಾಷ್ಟ್ರಗಳು ಹೇಳಿಕೊಂಡಿದ್ದವು. ತೆಹ್ರೀಕ್-ಎ-ತಾಲಿಬಾನ್ ಉಗ್ರ ಸಂಘಟನೆ ಪಾಕಿಸ್ತಾನದೊಂದಿಗೆ ಮಾಡಿಕೊಂಡಿದ್ದ ಕದನ ವಿರಾಮವನ್ನು ಮುಂದುವರೆಸುವುದಾಗಿಯೂ ಹೇಳಿತ್ತು. ಆದರೆ ಅದರ ಬೆನ್ನಲ್ಲೇ ಈ ಘರ್ಷಣೆ ನಡೆದಿದೆ.

    ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನದ ನಡುವೆ 2,600 ಕಿಮೀ ದೂರದ ಅಂತಾರಾಷ್ಟ್ರೀಯ ಗಡಿ ಇದೆ. ಆಫ್ಘಾನ್‌ನ ಉಗ್ರರ ಒಳನುಸುಳುವಿಕೆ ತಪ್ಪಿಸುವ ನಿಟ್ಟಿನಲ್ಲಿ ಪಾಕಿಸ್ತಾನವು 2017ರ ರಿಂದ ತನ್ನ ಗಡಿಗೆ ಬೇಲಿ ಹಾಕಿಕೊಳ್ಳಲಾರಂಭಿಸಿದೆ. 90 ಶೇಕಡಾದಷ್ಟು ಕೆಲಸ ಮುಗಿದಿದೆ.

    ಬೇಲಿ ಹಾಕುವ ಕೆಲಸಕ್ಕೆ ವಿರೋಧ ವ್ಯಕ್ತಪಡಿಸಿರುವ ತಾಲಿಬಾನ್ ಉಗ್ರರು ನಂಗರ ಹಾರ್‌ನ ಪೂರ್ವ ಭಾಗದಲ್ಲಿರುವ ಗುಷ್ಟಾ ಜಿಲ್ಲೆಯಲ್ಲಿ ಪಾಕಿಸ್ತಾನದ ಬೇಲಿಯನ್ನು ಹಾಳು ಮಾಡಿದ್ದಾರೆ. ಅಲ್ಲಿದ್ದ ತಂತಿಯನ್ನೆಲ್ಲಾ ತುಂಡರಿಸಿದ್ದು, ಬೇಲಿಗೆಂದು ಇಟ್ಟಿದ್ದ ತಂತಿಯನ್ನು ಎತ್ತಿಕೊಂಡು ಹೋಗಿದ್ದಾರೆ. ಇದನ್ನೂ ಓದಿ: ಯೋಗಿ ಆದಿತ್ಯನಾಥ್‌ ಸರ್ಕಾರ ಜಾಹೀರಾತಿಗೆ ವಾರ್ಷಿಕ 2,000 ಕೋಟಿ ಖರ್ಚು ಮಾಡ್ತಿದೆ: ಎಎಪಿ