Tag: telagu films

  • `ಗೇಮ್ ಚೇಂಜರ್’ ಬಳಿಕ ಕನ್ನಡದ ನಿರ್ದೇಶಕರ ಜೊತೆ ಸಿನಿಮಾ ಮಾಡ್ತಾರೆ ರಾಮ್ ಚರಣ್

    `ಗೇಮ್ ಚೇಂಜರ್’ ಬಳಿಕ ಕನ್ನಡದ ನಿರ್ದೇಶಕರ ಜೊತೆ ಸಿನಿಮಾ ಮಾಡ್ತಾರೆ ರಾಮ್ ಚರಣ್

    `ಆರ್‌ಆರ್‌ಆರ್’ ಸೂಪರ್ ಸಕ್ಸಸ್ ಬಳಿಕ ಶಂಕರ್ ನಿರ್ದೇಶನದ `ಗೇಮ್ ಚೇಂಜರ್’ (Game Changer) ಸಿನಿಮಾದಲ್ಲಿ ರಾಮ್ ಚರಣ್ (Ram Charan) ಬ್ಯುಸಿಯಾಗಿದ್ದಾರೆ. `ಗೇಮ್ ಚೇಂಜರ್’ ಸಿನಿಮಾ ಬಳಿಕ ಕನ್ನಡದ ಸ್ಟಾರ್ ನಿರ್ದೇಶಕರ ಜೊತೆ ಸಿನಿಮಾ ರಾಮ್ ಚರಣ್ ಓಕೆ ಎಂದಿದ್ದಾರೆ ಎಂಬ ಲೇಟೆಸ್ಟ್ ಅಪ್‌ಡೇಡ್ ಸಿಕ್ಕಿದೆ.

    RRR ಚಿತ್ರದ ನಾಟು ನಾಟು (Naatu Naatu) ಹಾಡಿಗೆ ಆಸ್ಕರ್ (Oscar) ಸಿಕ್ಕಿದ್ದಕ್ಕೆ ಸಂಭ್ರಮಾಚರಣೆ ಇನ್ನೂ ನಡೆಯುತ್ತಲೇ ಇದೆ. ಸಿನಿಮಾ ಸಕ್ಸಸ್ ನಡುವೆ ಹೊಸ ಸಿನಿಮಾಗಳತ್ತ ರಾಮ್ ಚರಣ್ ಗಮನ ಕೊಡುತ್ತಿದ್ದಾರೆ. ಇದನ್ನೂ ಓದಿ: ಶೋಭಿತಾ ಜೊತೆ ಡೇಟಿಂಗ್‌, ರೆಡ್‌ಹ್ಯಾಂಡ್ ಆಗಿ ಸಿಕ್ಕಿಬಿದ್ದ ನಾಗಚೈತನ್ಯ

    ರಾಮ್ ಚರಣ್ ಅವರು ಸಿನಿಮಾ ಆಯ್ಕೆಯಲ್ಲಿ ಅವರು ಹೆಚ್ಚು ಚ್ಯೂಸಿ. ಕುಟುಂಬದ ಕಡೆ ಗಮನ ನೀಡುವ ಕಾರಣಕ್ಕೆ ಪ್ರತಿ ಸಿನಿಮಾ ಕೆಲಸಗಳ ಮಧ್ಯೆ ದೊಡ್ಡ ಬ್ರೇಕ್ ತೆಗೆದುಕೊಳ್ಳುತ್ತಾರೆ. ಸದ್ಯ ಅವರು 15ನೇ ಸಿನಿಮಾ `ಗೇಮ್ ಚೇಂಜರ್’ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಇದರ ಜೊತೆ ಜೊತೆಗೆ ಅವರು ಹೊಸ ಸಿನಿಮಾ ಕೂಡ ಒಪ್ಪಿಕೊಳ್ಳುತ್ತಿದ್ದಾರೆ. ರಾಮ್ ಚರಣ್ ಅವರು ಮುಂದಿನ ದಿನಗಳಲ್ಲಿ ಕೆಜಿಎಫ್ ಡೈರೆಕ್ಟರ್ ಪ್ರಶಾಂತ್ ನೀಲ್ (Prashanth Neel) ಹಾಗೂ ನರ್ತನ್ (Narthan) ಜೊತೆ ಕೆಲಸ ಮಾಡುತ್ತಾರೆ ಎನ್ನಲಾಗಿದೆ.

    ನರ್ತನ್ ಹಾಗೂ ಪ್ರಶಾಂತ್ ನೀಲ್ ಅವರು ರಾಮ್ ಚರಣ್ ಬರ್ತಡೇ ಕಾಣಿಸಿಕೊಂಡಿದ್ದಾರೆ. ರಾಮ್ ಚರಣ್ ಆಯೋಜಿಸಿದ್ದ ಪಾರ್ಟಿಗೆ ಹಾಜರಿ ಹಾಕಿದವರಲ್ಲಿ ಬಹುತೇಕರು ರಾಮ್ ಚರಣ್ ಜೊತೆ ಕೆಲಸ ಮಾಡಿದವರೇ ಆಗಿದ್ದರು. ನರ್ತನ್ ಹಾಗೂ ಪ್ರಶಾಂತ್ ನೀಲ್ ಈವರೆಗೆ ರಾಮ್ ಚರಣ್ ಜೊತೆ ಕೆಲಸ ಮಾಡಿಲ್ಲ. ಆದರೆ ಈ ಪಾರ್ಟಿಗೆ ಅವರಿಗೆ ಆಹ್ವಾನ ಇತ್ತು. ಈ ಕಾರಣಕ್ಕೆ ಇಬ್ಬರೂ ಸಿನಿಮಾ ಮಾಡೋದು ಬಹುತೇಕ ಖಚಿತ ಎನ್ನಲಾಗುತ್ತಿದೆ.

  • ನಡುರಸ್ತೆಯಲ್ಲಿ ಹುಡುಗಿಗೆ ಹೊಡೆದ ಲವರ್‌ಗೆ ಜಾಡಿಸಿದ ನಟ ನಾಗಶೌರ್ಯ

    ನಡುರಸ್ತೆಯಲ್ಲಿ ಹುಡುಗಿಗೆ ಹೊಡೆದ ಲವರ್‌ಗೆ ಜಾಡಿಸಿದ ನಟ ನಾಗಶೌರ್ಯ

    ತೆರೆಯ ಮೇಲಷ್ಟೇ ನಾವು ಹೀರೋ ಅಲ್ಲ, ನಿಜ ಜೀವನದಲ್ಲೂ ಹೀರೋನೇ ಎಂದು ಇತ್ತೀಚಿನ ಘಟನೆಯೊಂದರಿಂದ ಟಾಲಿವುಡ್ (Tollywood) ನಟ ನಾಗಶೌರ್ಯ (Actor Naga shourya) ಪ್ರೂವ್ ಮಾಡಿದ್ದಾರೆ. ನಡುರಸ್ತೆಯಲ್ಲಿ ಯುವತಿಗೆ ಹೊಡೆದ ಲವರ್‌ಗೆ ಇದೀಗ ನಟ ನಾಗಶೌರ್ಯ ಹಿಗ್ಗಾಮುಗ್ಗಾ ಜಾಡಿಸಿದ್ದಾರೆ. ಈ ವೀಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿದೆ.

    ಸಿನಿಮಾ ತಮ್ಮ ಖಾಸಗಿ ಜೀವನ ಅಂತಾ ನಟ-ನಟಿಯರು ಬ್ಯುಸಿಯಿರುತ್ತಾರೆ. ಇತರೆ ವಿಚಾರಗಳಿಗೆ ತಲೆ ಕೆಡಿಸಿಕೊಳ್ಳುವ ಗೋಜಿಗೆ ಹೋಗುವುದಿಲ್ಲ. ಹೀಗಿರುವಾಗ ನಾಗಶೌರ್ಯ ಇದೀಗ ಮಾಡಿರುವ ಕೆಲಸ ಅಭಿಮಾನಿಗಳಿಗೆ ಖುಷಿ ಕೊಟ್ಟಿದೆ. ಸಿನಿಮಾದಲ್ಲಿಷ್ಟೇ ಹೀರೋ ಅಲ್ಲ, ತೆರೆ ಹಿಂದೆ ಕೂಡ ರಿಯಲ್ ಹೀರೋ ಎಂಬುದನ್ನ ನಟ ಪ್ರೂವ್ ಮಾಡಿದ್ದಾರೆ. ಇದನ್ನೂ ಓದಿ: ಅನುಷ್ಕಾಳೇ ನನ್ನ ಸ್ಫೂರ್ತಿ ಎಂದು ಪತ್ನಿಯನ್ನು ಹಾಡಿ ಹೊಗಳಿದ ವಿರಾಟ್ ಕೊಹ್ಲಿ

    ಅಷ್ಟಕ್ಕೂ ಅಲ್ಲಿ ನಡೆದ ಘಟನೆ ಏನೆಂದರೆ, ಪ್ರೇಮಿಗಳಿಬ್ಬರು ರಸ್ತೆ ಮಧ್ಯೆ ಜಗಳವಾಡುತ್ತಿದ್ದರು. ಆಗ ಯುವಕ, ಯುವತಿ ಮೇಲೆ ಕೈ ಮಾಡಿದ್ದಾನೆ. ಇದನ್ನು ಕಂಡು ಸಿಟ್ಟಿಗೆದ್ದ ನಾಗ ಶೌರ್ಯ, ಕಾರಿನಿಂದ ಇಳಿದಿದ್ದಾರೆ. ಯುವತಿ ಹಲ್ಲೆ ಮಾಡಿದ್ದಕ್ಕಾಗಿ ಕ್ಷಮೆ ಕೇಳುವಂತೆ ಆ ಹುಡುಗನನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಆದರೆ ಆ ಹುಡುಗ, ನಾನು ಆಕೆಯ ಲವರ್ ಎಂದು ಸಬೂಬು ಹೇಳಿದ್ದಾನೆ. ಇದರಿಂದ ಮತ್ತಷ್ಟು ಕೋಪಗೊಂಡ ನಟ, ಲವರ್ ಆಗಿಬಿಟ್ಟರೆ, ಆಕೆಯ ಮೇಲೆ ಕೈ ಮಾಡಬಹುದಾ ಕ್ಷಮೆ ಕೇಳು ಎಂದು ಯುವಕನ ವಿರುದ್ಧ ಗರಂ ಆಗಿದ್ದಾರೆ. ಈ ರೀತಿ ಆ ಹುಡುಗನಿಗೆ ನಟ ಜೋರು ಮಾಡುತ್ತಿರುವ ವಿಡಿಯೋ ವೈರಲ್ ಆಗಿದೆ.

    ಆರಂಭದಲ್ಲಿ ಈ ವಿಡಿಯೋ ವೈರಲ್ ಆದಾಗ, ನಟ ನಾಗ ಶೌರ್ಯ ಅವರು ನಡುರಸ್ತೆಯಲ್ಲಿ ಯಾರೋ ಯುವಕನ ಮೇಲೆ ದಬ್ಬಾಳಿಕೆ ನಡೆಸುತ್ತಿದ್ದಾರೆ ಎಂದು ಹೇಳಲಾಗಿತ್ತು. ಸತ್ಯಾಸತ್ಯತೆ ಗೊತ್ತಾದ ಮೇಲೆ ನಾಗ ಶೌರ್ಯ ಅವರ ಕಾರ್ಯಕ್ಕೆ ಎಲ್ಲರಿಂದ ಮೆಚ್ಚುಗೆ ಸಿಕ್ಕಿದೆ. ಇನ್ನೂ, ಆ ಯುವಕನ ಪರವಾಗಿ ಮಾತನಾಡಿರುವ ಆ ಯುವತಿ, ಏನೋ ಆಗಿದ್ದು ಆಗಿದೆ, ಬಿಟ್ಟುಬಿಡಿ ಎಂದು ಕೇಳಿಕೊಂಡರು ಎನ್ನಲಾಗಿದೆ. ಅಲ್ಲಿದ್ದವರು ಕೂಡ ಆ ಯುವಕನಿಗೆ ಕ್ಷಮೆ ಕೇಳುವಂತೆ ಪಟ್ಟುಹಿಡಿದಿದ್ದರು. ಒಟ್ಟಾರೆ ನಟ ನಾಗಶೌರ್ಯ ನಡೆಗೆ ಫ್ಯಾನ್ಸ್ ಭೇಷ್ ಎಂದಿದ್ದಾರೆ. ಮಹಿಳೆಯರಿಗೆ ನಾಗಶೌರ್ಯ ಗೌರವಿಸುವ ರೀತಿಯನ್ನ ಫ್ಯಾನ್ಸ್‌ ಮೆಚ್ಚಿದ್ದಾರೆ.

  • ನಟ ತಾರಕ ರತ್ನ ಅಂತಿಮ ದರ್ಶನಕ್ಕೆ ತೆಲುಗು ಫಿಲ್ಮ್ ಚೇಂಬರ್ ವ್ಯವಸ್ಥೆ

    ನಟ ತಾರಕ ರತ್ನ ಅಂತಿಮ ದರ್ಶನಕ್ಕೆ ತೆಲುಗು ಫಿಲ್ಮ್ ಚೇಂಬರ್ ವ್ಯವಸ್ಥೆ

    ಜ್ಯೂ.ಎನ್‌ಟಿಆರ್ (Jr.Ntr)ಸಹೋದರ ತೆಲುಗು ನಟ- ರಾಜಕಾರಣಿ ನಂದಮೂರಿ ತಾರಕ ರತ್ನ (Nandamuri Tarak Ratna) ಅವರು ಬೆಂಗಳೂರಿನಲ್ಲಿ ಶನಿವಾರ (ಫೆ.18) ಕೊನೆಯುಸಿರೆಳೆದಿದ್ದಾರೆ. ತಾರಕ ರತ್ನ ನಿಧನ ನಂದಮೂರಿ ಕುಟುಂಬಕ್ಕೆ (Nandamuri Family) ಆಘಾತ ನೀಡಿದೆ. ತೆಲುಗು ಫಿಲ್ಮ್ ಚೇಂಬರ್ ಆವರಣದಲ್ಲಿ ಫೆ.20ರ ಬೆಳಗ್ಗೆ ತಾರಕ ರತ್ನ ಅವರ ಪಾರ್ಥಿವ ಶರೀರವನ್ನ ಅಂತಿಮ ದರ್ಶನಕ್ಕೆ ಇಡಲಾಗುತ್ತದೆ.

    ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು (Chandrababu Naidu) ಅವರ ಪುತ್ರ ನರಾ ಲೋಕೇಶ್ ಅವರು ಏರ್ಪಡಿಸಿದ್ದ ಪಾದಯಾತ್ರೆಯಲ್ಲಿ ಜ.27ರಂದು ನಂದಮೂರಿ ತಾರಕ ರತ್ನ ಭಾಗಿ ಆಗಿದ್ದರು. ಪಾದಯಾತ್ರೆ ಆರಂಭವಾದ ಕೆಲವೇ ನಿಮಿಷಗಳಲ್ಲಿ ಅವರು ಪ್ರಜ್ಞೆ ತಪ್ಪಿ ಬಿದ್ದಿದ್ದರು. ಕೂಡಲೇ ಅವರನ್ನು ಕುಪ್ಪಂ ಬಳಿ ಇರುವ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಇದನ್ನೂ ಓದಿ:ನಟ ನಂದಮೂರಿ ತಾರಕ ರತ್ನ ಇನ್ನಿಲ್ಲ

    ನಂತರ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ನಾರಾಯಣ ಹೃದಯಾಲಯ (Narayana Hrudayalaya) ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರು ನಿಧನರಾಗಿದ್ದಾರೆ. ಭಾನುವಾರ (ಫೆ.19) ನಂದಮೂರಿ ತಾರಕ ರತ್ನ ಅವರ ಪಾರ್ಥಿವ ಶರೀರವನ್ನು ರಂಗಾ ರೆಡ್ಡಿ ಜಿಲ್ಲೆಯ ಮೋಕಿಲಾಗೆ ರವಾನೆ ಮಾಡಲಾಗಿದೆ. ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದೆ. ಸೋಮವಾರ (ಫೆ.20) ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಬಳಿಕ ನಂದಮೂರಿ ತಾರಕ ರತ್ನ ಅಂತ್ಯಕ್ರಿಯೆ ನಡೆಯಲಿದೆ.

    ತೆಲುಗು ಚಲನಚಿತ್ರ ವಾಣಿಜ್ಯ ಮಂಡಳಿಯ (Telagu Film Chamber) ಆವರಣದಲ್ಲಿ ನಂದಮೂರಿ ತಾರಕ ರತ್ನ ಅವರ ಪಾರ್ಥೀವ ಶರೀರ ಇರಿಸಲಾಗುವುದು. ಅಲ್ಲಿ ಸಾರ್ವಜನಿಕರು ಅಂತಿಮ ದರ್ಶನ ಪಡೆಯಬಹುದು. ಬೆಳಗ್ಗೆ 7 ಗಂಟೆಯಿಂದಲೇ ಅಂತಿಮ ದರ್ಶನಕ್ಕೆ ಅವಕಾಶ ಇರಲಿದೆ. ಅಂದು ಸಂಜೆ 5 ಗಂಟೆ ಸುಮಾರಿಗೆ ಹೈದರಾಬಾದ್‌ನ ಮಹಾಪ್ರಸ್ತಾನಂನಲ್ಲಿ ಅಂತ್ಯಕ್ರಿಯೆ ಮಾಡಲಾಗುವುದು.

    ಇನ್ನೂ ನಂದಮೂರಿ ತಾರಕ ರತ್ನ ಅವರ ನಿಧನಕ್ಕೆ ಟಾಲಿವುಡ್ ಜೊತೆ ಇಡೀ ಚಿತ್ರರಂಗ ಕಂಬನಿ ಮಿಡಿದಿದೆ. ತಾರಕ ರತ್ನ ಅವರ ನಿಧನ ಚಿತ್ರರಂಗಕ್ಕೆ ಮತ್ತು ರಾಜಕೀಯಕ್ಕೆ ತುಂಬಲಾರದ ನಷ್ಟವಾಗಿದೆ.

    LIVE TV
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಟಿಡಿಪಿ ಪಕ್ಷದ ರಾಜಕಾರಣಿ ಮೊಮ್ಮಗಳ ಜೊತೆ ಶರ್ವಾನಂದ ಎಂಗೇಜ್‌ಮೆಂಟ್

    ಟಿಡಿಪಿ ಪಕ್ಷದ ರಾಜಕಾರಣಿ ಮೊಮ್ಮಗಳ ಜೊತೆ ಶರ್ವಾನಂದ ಎಂಗೇಜ್‌ಮೆಂಟ್

    ಟಾಲಿವುಡ್‌ನ (Tollywood)  ಯಂಗ್ ಹೀರೋ ಶರ್ವಾನಂದ (Sharwanand) ಮನೆಯಲ್ಲಿ ಗಟ್ಟಿಮೇಳದ ಸೌಂಡ್ ಜೋರಾಗಿದೆ. ಸದ್ದಿಲ್ಲದೇ ಹಸೆಮಣೆ ಏರಲು ನಟ ರೆಡಿಯಾಗಿದ್ದಾರೆ. ಸದ್ಯ ಎಂಗೇಜ್‌ಮೆಂಟ್ (Engagement) ಡೇಟ್ ಕೂಡ ಫಿಕ್ಸ್ ಆಗಿದ್ದು, ತೆರೆಮರೆಯಲ್ಲಿ ಮದುವೆಗೆ ಸಕಲ ತಯಾರಿ ನಡೆಯುತ್ತಿದೆ.

    ತೆಲುಗಿನ ಸಾಕಷ್ಟು ಸಿನಿಮಾಗಳ ಮೂಲಕ ಸಂಚಲನ ಮೂಡಿಸಿರುವ ಶರ್ವಾನಂದ ತಮ್ಮ 38ನೇ ವಯಸ್ಸಿಗೆ ಹಸೆಮಣೆ ಏರಲು ರೆಡಿಯಾಗಿದ್ದಾರೆ. ಟಿಡಿಪಿ ಪಕ್ಷದ (Tdp Party) ರಾಜಕಾರಣಿ ಬೊಜ್ಜಲ ಗೋಪಾಲ ಕೃಷ್ಣಾ ರೆಡ್ಡಿ (Gopal Krishna Reddy) ಮೊಮ್ಮಗಳು ಪದ್ಮಾ (Padma) ಅವರ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ಇದನ್ನೂ ಓದಿ: ಸಿದ್-ಕಿಯಾರಾ ಮದುವೆ, ತೆರೆಮರೆಯಲ್ಲಿ ಭರ್ಜರಿ ತಯಾರಿ

    ಇದೇ ಜನವರಿ 26ರಂದು ಹೈದರಾಬಾದ್‌ನ ಪಾರ್ಕ್ ಹಯಾತ್‌ನಲ್ಲಿ ಶರ್ವಾನಂದ್ ಮತ್ತು ಪದ್ಮಾ ಎಂಗೇಜ್‌ಮೆಂಟ್ ನಡೆಯಲಿದೆ. ಎರಡು ಕುಟುಂಬದವರ ಸಮ್ಮುಖದಲ್ಲಿ ಈ ಕಾರ್ಯಕ್ರಮ ಜರುಗಲಿದೆ. ಶರ್ವಾನಂದ್ ಅವರದ್ದು, ಗುರುಹಿರಿಯರು ನಿಗದಿಪಡಿಸಿರುವ ಅರೇಂಜ್ ಮ್ಯಾರೇಜ್ ಆಗಿದೆ.

    ನೂರಾರು ಕೋಟಿಗಳ ಒಡತಿಯಾಗಿರುವ ಪದ್ಮಾ ಅವರು ಸಾಫ್ಟ್‌ವೇರ್ ಇಂಜಿನಿಯರ್ ಆಗಿದ್ದಾರೆ. 2023ರ ಜುಲೈನಲ್ಲಿ ಈ ಜೋಡಿ ಹೊಸ ಬಾಳಿಗೆ ಕಾಲಿಡಲಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಹಿರಿಯ ನಟ ಚಲಪತಿ ರಾವ್ ಹೃದಯಾಘಾತದಿಂದ ನಿಧನ

    ಹಿರಿಯ ನಟ ಚಲಪತಿ ರಾವ್ ಹೃದಯಾಘಾತದಿಂದ ನಿಧನ

    ತ್ತೀಚೆಗಷ್ಟೇ ತೆಲುಗು ಚಿತ್ರರಂಗದ ಹಿರಿಯ ನಟ ಸೂಪರ್ ಸ್ಟಾರ್ ಕೃಷ್ಣ (Actor Krishna) ನಿಧನರಾಗಿದ್ದರು. ಈ ಬೆನ್ನಲ್ಲೇ ಟಾಲಿವುಡ್‌ನ ಮತ್ತೊಬ್ಬ ಹಿರಿಯ ನಟ ಚಲಪತಿ ರಾವ್ ನಿಧನರಾಗಿದ್ದಾರೆ. ಅವರ ಅನಿರೀಕ್ಷಿತ ಸಾವು ಚಿತ್ರರಂಗಕ್ಕೆ ಆಘಾತವನ್ನುಂಟು ಮಾಡಿದೆ. ಇದನ್ನೂ ಓದಿ:ಬಿಗ್ ಬಾಸ್ ಮನೆಯಿಂದ ಅಮೂಲ್ಯ ಗೌಡ ಔಟ್

    600ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದ 78ರ ವಯಸ್ಸಿನ ನಟ ಚಲಪತಿ ರಾವ್(Actor Chalapathi Rao) ಇನ್ನಿಲ್ಲ. ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಇವರು ಭಾನುವಾರ (ಡಿ.25) ಬೆಳಗಿನ ಜಾವ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಇಬ್ಬರು ಪುತ್ರಿಯರು, ಪುತ್ರ ಮತ್ತು ಪತ್ನಿಯನ್ನು ಅಗಲಿದ್ದಾರೆ.

    ಖಳನಟ, ಪೋಷಕ ನಟ, ಹಾಸ್ಯ ಪಾತ್ರಗಳ ಮೂಲಕ ರಂಜಿಸಿದ್ದ ಮಹಾನ್ ಪ್ರತಿಭೆ ಚಲಪತಿ ರಾವ್ ನಿಧನಕ್ಕೆ ಇಡೀ ಚಿತ್ರರಂಗ ಕಂಬನಿ ಮಿಡಿದಿದೆ. ಇನ್ನೂ ಅಮೆರಿಕದಲ್ಲಿರುವ ಪುತ್ರಿಯ ಆಗಮನ ನಂತರ (ಡಿ.28) ಮಧ್ಯಾಹ್ನ 3 ಗಂಟೆಯ ನಂತರ ನಟನ ಅಂತ್ಯಕ್ರಿಯೆ ನಡೆಯಲಿದೆ. ಪಾರ್ಥಿವ ಶರೀರವನ್ನು ಭಾನುವಾರ ಮಧ್ಯಾಹ್ನದವರೆಗೆ ಅಭಿಮಾನಿಗಳ ಭೇಟಿಗಾಗಿ ಬಂಜಾರಾ ಹಿಲ್ಸ್ನಲ್ಲಿರುವ ರವಿಬಾಬು ಅವರ ಮನೆಯಲ್ಲಿ ಇರಿಸಲಾಗಿದೆ.

    Live Tv
    [brid partner=56869869 player=32851 video=960834 autoplay=true]

  • ತಂದೆಯ ನಿಧನದ ನಂತರ ಹೊಸ ಉದ್ಯಮದತ್ತ ನಟ ಮಹೇಶ್ ಬಾಬು

    ತಂದೆಯ ನಿಧನದ ನಂತರ ಹೊಸ ಉದ್ಯಮದತ್ತ ನಟ ಮಹೇಶ್ ಬಾಬು

    ಟಾಲಿವುಡ್ ಸೂಪರ್ ಸ್ಟಾರ್ ಮಹೇಶ್ ಬಾಬು(Mahesh Babu) ಹೊಸ ಉದ್ಯಮಕ್ಕೆ ಕೈ ಹಾಕಿದ್ದಾರೆ. ತಂದೆ ತಾಯಿ ನಿಧನದ ನೋವಿನ ನಂತರ ಕೊಂಚ ಚೇತರಿಸಿಕೊಂಡಿರುವ ಮಹೇಶ್ ಬಾಬು ಪತ್ನಿ ನಮ್ರತಾ (Namratha Shirodkar) ಹೆಸರಿನಲ್ಲಿ ರೆಸ್ಟೋರೆಂಟ್ ಬ್ಯುಸಿನೆಸ್ ಶುರು ಮಾಡಿದ್ದಾರೆ.

    ಇತ್ತೀಚೆಗೆ ಅಣ್ಣ, ತಂದೆ ತಾಯಿ ನಿಧನದ ಶಾಕ್‌ನಲ್ಲಿದ್ದ ಮಹೇಶ್ ಬಾಬು ಕುಟುಂಬ ಕೊಂಚ ಚೇತರಿಸಿಕೊಂಡಿದ್ದಾರೆ. ಮತ್ತೆ ಸಿನಿಮಾ, ಬ್ಯುಸಿನೆಸ್ ಅಂತಾ ಮಹೇಶ್ ಬಾಬು ಬ್ಯುಸಿಯಾಗಿದ್ದಾರೆ. ಕೆಲ ವರ್ಷಗಳ ಹಿಂದೆ ಮಲ್ಟಿಫ್ಲೆಕ್ಸ್ ಉದ್ಯಮಕ್ಕೆ ಕಾಲಿಟ್ಟ ಮಹೇಶ್ ಪತ್ನಿ ನಮ್ರತಾ ಈಗ ಹೊಸ ರೆಸ್ಟೋರೆಂಟ್ ಬ್ಯುಸಿನೆಸ್‌ಗೆ ಕೈ ಹಾಕಿದ್ದಾರೆ. ಇದನ್ನೂ ಓದಿ: ರಶ್ಮಿಕಾ ನಂತರ ಟ್ರೋಲಿಗರ ಕಣ್ಣಿಗೆ ಗುರಿಯಾದ್ರು ನಿವೇದಿತಾ ಗೌಡ

    ಪತ್ನಿಯ ಹೆಸರಿನಲ್ಲಿ ರೆಸ್ಟೋರೆಂಟ್ ಮಾಡಲು ಮಹೇಶ್ ಬಾಬು ಹೊರಟಿದ್ದಾರೆ. ಈಗ ನಮ್ರತಾ ಶಿರೋಡ್ಕರ್ ಅವರ ರೆಸ್ಟೋರೆಂಟ್ ಅನ್ನು ಏಷ್ಯನ್ ನಮ್ರತಾ ಎಂದು ಹೆಸರಿಸಲಾಗಿದೆ.  ಹೈದರಾಬಾದ್‌ನ ಬಂಜಾರಾ ಹಿಲ್ಸ್‌ನಲ್ಲಿದೆ. ಇದು ಡಿಸೆಂಬರ್ 8, 2022 ರಂದು ಬೆಳಗ್ಗೆ  ಅದ್ಧೂರಿಯಾಗಿ ಚಾಲನೆ ಸಿಗಲಿದೆ ಎನ್ನಲಾಗುತ್ತಿದೆ.

    Live Tv
    [brid partner=56869869 player=32851 video=960834 autoplay=true]

  • ವಿಮಾನ ನಿಲ್ದಾಣದಲ್ಲಿ ಲಗೇಜ್ ನಾಪತ್ತೆ: ಇಂಡಿಗೋ ವಿರುದ್ಧ ರಾಣಾ ದಗ್ಗುಭಾಟಿ ರಾಂಗ್

    ವಿಮಾನ ನಿಲ್ದಾಣದಲ್ಲಿ ಲಗೇಜ್ ನಾಪತ್ತೆ: ಇಂಡಿಗೋ ವಿರುದ್ಧ ರಾಣಾ ದಗ್ಗುಭಾಟಿ ರಾಂಗ್

    ಟ ರಾಣಾ ದಗ್ಗುಭಾಟಿ (Rana Daggubati) ಟಾಲಿವುಡ್‌ನ (Tollywood) ಪ್ರತಿಭಾನ್ವಿತ ನಟ, ಇದೀಗ ತಮ್ಮ ಲಗೇಜ್ ನಾಪತ್ತೆ ಆಗಿರುವ ವಿಚಾರಕ್ಕೆ ರೊಚ್ಚಿಗೆದ್ದಿದ್ದಾರೆ. ಅವರ ಲಗೇಜ್ ವಿಮಾನ ನಿಲ್ದಾಣದಲ್ಲಿ ನಾಪತ್ತೆಯಾಗಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬಹಿರಂಗಪಡಿಸಿರುವ ರಾಣಾ ಏರ್‌ಲೈನ್ಸ್ ವಿರುದ್ಧ ರೊಚ್ಚಿಗೆದ್ದಿದ್ದಾರೆ. ಆಗಾಗ ವಿಮಾನದಲ್ಲಿ ಪಯಣ ಮಾಡುವ ರಾಣಾ, ಇದು ಆದ ಕೆಟ್ಟ ಅನುಭವವನ್ನು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ್ದಾರೆ.

    ಇತ್ತೀಚೆಗೆ ಇಂಡಿಗೋ (Indigo Airlines) ವಿಮಾನದಲ್ಲಿ ಪ್ರಯಾಣ ಮಾಡಿದ ರಾಣಾಗೆ ಕಹಿ ಅನುಭವ ಆಗಿದೆ. ಪ್ರಯಾಣಿಸುವಾಗ ರಾಣಾ ಅವರ ಲಗೇಜ್ ಕಳೆದು ಹೋಗಿದೆ. ಈವರೆಗೂ ಅವರ ಲಗೇಜ್ ಪತ್ತೆ ಆಗಿಲ್ಲ. ಇದೀಗ ಅವರು ನೇರವಾಗಿ ಟ್ವೀಟ್ ಮಾಡುವ ಮೂಲಕ ಅಸಮಾಧಾನ ಹೊರಹಾಕಿದ್ದಾರೆ. ತನ್ನ ಅನಿಕೆಯನ್ನ ಟ್ವೀಟ್ ಮಾಡುವ ಮೂಲಕ ಇಂಡಿಗೋ ಖಾತೆಗೆ ಟ್ಯಾಗ್ ಮಾಡಿದ್ದಾರೆ. ಇದರಿಂದ ಇಂಡಿಗೋ ಕಂಪನಿಗೆ ಮುಜುಗರ ಆಗಿದೆ. ಈ ಬಗ್ಗೆ ಇಂಡಿಗೋ ಸಂಸ್ಥೆ ಕ್ಷಮೆ ಕೇಳಿದೆ. ಇಂಡಿಗೋ ವಿರುದ್ಧ ಗರಂ ಆಗಿರುವುದು ರಾಣಾ ಮಾತ್ರವಲ್ಲ, ಈ ಹಿಂದೆ ನಟಿ ಪೂಜಾ ಹೆಗ್ಡೆ (Pooja Hegde) ಕೂಡ ಈ ವಿಮಾನಯಾನ ಸಂಸ್ಥೆಯ ಸಿಬ್ಬಂದಿಗಳ ವರ್ತನೆ ವಿರುದ್ಧ ಬೇಸರ ಹೊರಹಾಕಿದ್ದರು. ಇದೀಗ ರಾಣಾ ಕೂಡ ಇಂಡಿಯೋ ವಿರುದ್ಧ ರಾಂಗ್ ಆಗಿದ್ದಾರೆ.

    `ಭಾರತದ ಅತ್ಯಂತ ಕೆಟ್ಟ ಏರ್‌ಲೈನ್ ಅನುಭವ ಇಂಡಿಗೋ. ವಿಮಾನದ ಸಮಯದ ಬಗ್ಗೆಯೂ ಯಾವುದೇ ಸುಳಿವು ಇಲ್ಲ. ಲಗೇಜ್‌ಗಳು ಕಾಣೆಯಾಗಿವೆ’ ಎಂದು ರಾಣಾ ದಗ್ಗುಬಾಟಿ ಸಾಮಾಜಿಕ ಜಾಲತಾಣದಲ್ಲಿ ಅಸಮಧಾನ ಹೊರಹಾಕಿದ್ದಾರೆ. ಇದನ್ನೂ ಓದಿ: ಸ್ಯಾಂಡಲ್‌ವುಡ್‌ ನಟ ಮನದೀಪ್ ರಾಯ್‌ಗೆ ಹೃದಯಾಘಾತ: ಆಸ್ಪತ್ರೆಗೆ ದಾಖಲು

    ಇದಾದ ಬಳಿಕ ಇಂಡಿಗೋ ಸಂಸ್ಥೆ ಅನಾನುಕುಲತೆಗಾಗಿ ನಾವು ಕ್ಷಮೆಯಾಚಿಸುತ್ತೇವೆ. ನಿಮ್ಮ ಲಗೇಜ್ ಅನ್ನು ಆದಷ್ಟು ಬೇಗ ನಿಮಗೆ ತಲುಪಿಸಲು ನಮ್ಮ ತಂಡ ಸಕ್ರಿಯವಾಗಿದೆ ಕಾರ್ಯನಿರ್ವಹಿಸುತ್ತಿದೆ ಎಂದು ಪ್ರತಿಕ್ರಿಯೆ ನೀಡಿದರು. ಇಂಡಿಯೋ ಪ್ರತಿಕ್ರಿಯೆ ಬಳಿಕ ರಾಣಾ ತನ್ನ ಟ್ವೀಟ್ ಅನ್ನು ಡಿಲೀಟ್ ಮಾಡಿದರು. ಆದರೆ ರಾಣಾ ಟ್ವೀಟ್ ಆಗಲೇ ಸುದ್ದಿ ಆಗಿತ್ತು. ಕೆಲ ನೆಟ್ಟಿಗರು ಸೆಲೆಬ್ರಿಟಿ ಎನ್ನುವ ಕಾರಣಕ್ಕೆ ಇಂಡಿಯೋ ತಕ್ಷಣ ಪ್ರತಿಕ್ರಿಯೆ ನೀಡಿದೆ ಜನ ಸಾಮಾನ್ಯರ ಕಥೆ ಏನು ಪ್ರಶ್ನೆ ಮಾಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಕರ್ನಾಟಕ ಮೂಲದ ತೆಲುಗಿನ ನಟ ಶ್ರೀಕಾಂತ್ ದಾಂಪತ್ಯದಲ್ಲಿ ಬಿರುಕು

    ಕರ್ನಾಟಕ ಮೂಲದ ತೆಲುಗಿನ ನಟ ಶ್ರೀಕಾಂತ್ ದಾಂಪತ್ಯದಲ್ಲಿ ಬಿರುಕು

    ಚಿತ್ರರಂಗದಲ್ಲಿ ಡಿವೋರ್ಸ್ (Divorce) ಪ್ರಕರಣಗಳು ಹೆಚ್ಚಾಗುತ್ತಲೇ ಇದೆ. ಕಳೆದ ವರ್ಷ ಸಮಂತಾ, ನಾಗಚೈತನ್ಯ ನಂತರ ತೆಲುಗಿನ ಖ್ಯಾತ ನಟ ಶ್ರೀಕಾಂತ್ (Srikanth) ದಾಂಪತ್ಯದಲ್ಲಿ ಬಿರುಕಾಗಿದೆ. ಡಿವೋರ್ಸ್ಗೆ ರೆಡಿಯಾಗಿದ್ದಾರೆ ಎನ್ನಲಾಗುತ್ತಿದೆ.

    ತೆಲುಗು(Tollywood) ಮತ್ತು ಕನ್ನಡ ಸಾಕಷ್ಟು ಸಿನಿಮಾಗಳಲ್ಲಿ ನಟಿಸಿರುವ ನಟ ಶ್ರೀಕಾಂತ್ ವೈವಾಹಿಕ ಬದುಕಲ್ಲಿ ಬಿರುಗಾಳಿ ಎದ್ದಿದೆ. 25 ವರ್ಷಗಳಿಂದ ಜೊತೆಯಾಗಿದ್ದ ಈ ಜೋಡಿ, ದಾಂಪತ್ಯಕ್ಕೆ ಫುಲ್ ಸ್ಟಾಪ್ ಇಡಲು ರೆಡಿಯಾಗಿದ್ದಾರಂತೆ. 1997ರಲ್ಲಿ ಶ್ರೀಕಾಂತ್ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಈ ಜೋಡಿಗೆ ಇಬ್ಬರೂ ಗಂಡು ಮಕ್ಕಳು ರೋಷನ್, ರೋಹನ್ ಮತ್ತು ಮಗಳು ವೇದಾ. ಇನ್ನೂ ಪತ್ನಿ ಊಹಾ ಕೂಡ ನಟಿಯಾಗಿದ್ದು, ಸಾಕಷ್ಟು ಸೌತ್ ಚಿತ್ರಗಳಲ್ಲಿ ನಟಿಸಿದ್ದಾರೆ. ಇದನ್ನೂ ಓದಿ:ಏಕಾಂಗಿಯಾಗಿ ಹನಿಮೂನ್ ಸ್ಪಾಟ್, ಬಾಲಿಗೆ ಹಾರಿದ ನಿವೇದಿತಾ ಗೌಡ

    ಟಾಲಿವುಡ್ ಗಲ್ಲಿಗಳಲ್ಲಿ ಶ್ರೀಕಾಂತ್ ಡಿವೋರ್ಸ್ ವಿಚಾರವೇ ದೊಡ್ಡಮಟ್ಟದಲ್ಲಿ ಸದ್ದು ಮಾಡುತ್ತಿದೆ. 100ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿರುವ ಶ್ರೀಕಾಂತ್ ಇದೀಗ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ ಎನ್ನಲಾಗುತ್ತಿದೆ. ನಟ ಆರ್ಥಿಕ ಸಂಕಷ್ಟವೇ ಡಿವೋರ್ಸ್ಗೆ ಕಾರಣ ಎಂಬ ಸುದ್ದಿ ಹರಿದಾಡುತ್ತಿದೆ.

    ಇನ್ನೂ ಪುತ್ರ ರೋಷನ್ ಕೂಡ ಟಾಲಿವುಡ್‌ಗೆ ಈಗಾಗಲೇ ಎಂಟ್ರಿ ಕೊಟ್ಟಾಗಿದೆ. `ಪೆಲ್ಲಿ ಸಂದಡಿ’ ಚಿತ್ರದ ಮೂಲಕ ಗುರುತಿಸಿಕೊಂಡಿದ್ದಾರೆ. ಈ ಚಿತ್ರಕ್ಕೆ ನಾಯಕಿಯಾಗಿ ಕನ್ನಡ ಭರಾಟೆ ನಟಿ ಶ್ರೀಲೀಲಾ ನಟಿಸಿದ್ದರು.

    Live Tv
    [brid partner=56869869 player=32851 video=960834 autoplay=true]

  • ನಡುರಸ್ತೆಯಲ್ಲಿ ನಿಶ್ಚಿತಾರ್ಥ ಮಾಡಿಕೊಂಡ ನಟ ವಿಜಯ್ ದೇವರಕೊಂಡ

    ನಡುರಸ್ತೆಯಲ್ಲಿ ನಿಶ್ಚಿತಾರ್ಥ ಮಾಡಿಕೊಂಡ ನಟ ವಿಜಯ್ ದೇವರಕೊಂಡ

    ಟಾಲಿವುಡ್ ನಟ ವಿಜಯ್ ದೇವರಕೊಂಡಗೆ ರಾಜ್ಯದೆಲ್ಲೆಡೆ ಅಭಿಮಾನಿಗಳಿದ್ದಾರೆ. ಅದರಲ್ಲೂ ವಿಜಯ್‌ಗೆ ಫೀಮೇಲ್ ಫ್ಯಾನ್ಸ್ ಜಾಸ್ತಿ. ಇದೀಗ ನಡುರಸ್ತೆಯಲ್ಲಿ `ಅರ್ಜುನ್ ರೆಡ್ಡಿ’ ಸ್ಟಾರ್ ವಿಜಯ್ ಎಂಗೇಜ್‌ಮೆಂಟ್ ಮಾಡಿಕೊಂಡಿದ್ದಾರೆ.

    vijaydevarakonda

    ದಕ್ಷಿಣದ ಸ್ಟಾರ್ ನಟರಲ್ಲಿ ಒಬ್ಬರಾಗಿ ಗುರುತಿಸಿಕೊಂಡಿರುವ ವಿಜಯ್‌ಗೆ ಅಪಾರ ಅಭಿಮಾನಿಗಳಿದ್ದಾರೆ. ವಿಜಯ್ ಸಿನಿಮಾಗಾಗಿಯೇ ಕಾದು ಕೂರುವ ಫ್ಯಾನ್ಸ್ ಕೂಡ ಇದ್ದಾರೆ. ಇತ್ತೀಚೆಗೆ ಚಿತ್ರದ ಪ್ರಚಾರವೊಂದಕ್ಕೆ ವಿಜಯ್ ದೇವರಕೊಂಡ ಬೆಂಗಳೂರಿಗೆ ಬಂದಿದ್ದರು. ಈ ವೇಳೆ ಕ್ರೇಜಿ ಫೀಮೇಲ್ ಫ್ಯಾನ್ ಒಬ್ಬರು ವಿಜಯ್ ಅವರನ್ನ ಭೇಟಿ ಮಾಡಿದ್ದಾರೆ. ಅಷ್ಟೇ ಅಲ್ಲ, ನಡುರಸ್ತೆಯಲ್ಲಿ ಯುವತಿ ಜತೆ ಎಂಗೇಜ್‌ಮೆಂಟ್ ಮಾಡಿಕೊಂಡಿದ್ದಾರೆ. ಇದನ್ನೂ ಓದಿ:ಕಾಫಿನಾಡು ಚಂದುಗೆ ಸರ್ಪ್ರೈಸ್ ಗಿಫ್ಟ್ ನೀಡಿದ ಅನುಶ್ರೀ

    ಈ ವೇಳೆ ಅಭಿಮಾನಿಯೊಬ್ಬರು, ವಿಜಯ್‌ಗೆ ಉಂಗುರ ಕೊಟ್ಟಿದ್ದಾರೆ. ಸಂತೋಷದಿಂದ ಮಂಡಿಯೂರಿ ಸ್ವೀಕರಿಸಿದ್ದಾರೆ. ನೆಚ್ಚಿನ ನಟನನ್ನ ನೋಡಿ ಅಭಿಮಾನಿ ಭಾವುಕರಾಗಿದ್ದಾರೆ. ಅಭಿಮಾನಿಯ ಆಸೆಯಂತೆ, ಆಕೆಯ ಕೈಯಿಂದ ಉಂಗುರ ತೊಡಿಸಿಕೊಂಡಿದ್ದಾರೆ. ಸದ್ಯ ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದೆ.

    Live Tv
    [brid partner=56869869 player=32851 video=960834 autoplay=true]

  • ಸಮಂತಾ ಮಾಜಿ ಪತಿ ಜೊತೆ ರಶ್ಮಿಕಾ ಮಂದಣ್ಣ ರೊಮ್ಯಾನ್ಸ್

    ಸಮಂತಾ ಮಾಜಿ ಪತಿ ಜೊತೆ ರಶ್ಮಿಕಾ ಮಂದಣ್ಣ ರೊಮ್ಯಾನ್ಸ್

    ಕ್ಕಿ ನಟಿ ರಶ್ಮಿಕಾ ಮಂದಣ್ಣಗೆ ಸಾಲು ಸಾಲು ಸಿನಿಮಾ ಅವಕಾಶಗಳು ಅರಸಿ ಬರುತ್ತಿದೆ. ಹೀಗಿರುವಾಗ ಸಮಂತಾ ಮಾಜಿ ಪತಿ ನಾಗಚೈತನ್ಯ ಜೊತೆ ರಶ್ಮಿಕಾ ರೊಮ್ಯಾನ್ಸ್ ಮಾಡಲು ರೆಡಿಯಾಗಿದ್ದಾರೆ.

    `ಸೀತಾ ರಾಮಂ’ ಚಿತ್ರದ ಸೂಪರ್ ಸಕ್ಸಸ್ ನಂತರ ಇದೀಗ ರಶ್ಮಿಕಾ ಮಂದಣ್ಣಗೆ ಭರ್ಜರಿ ಆಫರ್ ಸಿಕ್ಕಿದೆ. ಟಾಲಿವುಡ್ ನಟ ನಾಗಚೈತನ್ಯಗೆ ನಾಯಕಿಯಾಗಿ ರಶ್ಮಿಕಾ ಮಂದಣ್ಣ ಕಾಣಿಸಿಕೊಳ್ಳಲಿದ್ದಾರೆ. ಸಮಂತಾ ಮಾಜಿ ಪತಿ ಜತೆ ರಶ್ಮಿಕಾ ರೊಮ್ಯಾನ್ಸ್ ಮಾಡಲು ರೆಡಿಯಾಗಿದ್ದಾರೆ. ಇದನ್ನೂ ಓದಿ: ನಾನು ಎಷ್ಟೋ ಜನರ ಜೊತೆ ಫ್ಲರ್ಟ್ ಮಾಡಿದ್ದೇನೆ ಲೆಕ್ಕವಿಲ್ಲ: ಅರ್ಜುನ್ ರಮೇಶ್

    `ಸರ್ಕಾರು ವಾರಿ ಪಾಟ’ ಖ್ಯಾತಿಯ ಪರಶುರಾಮ್ ನಿರ್ದೇಶನದ ಚಿತ್ರದಲ್ಲಿ ನಾಗಚೈತನ್ಯ ಮತ್ತು ರಶ್ಮಿಕಾ ಡ್ಯುಯೇಟ್ ಹಾಡಲು ಸಜ್ಜಾಗಿದ್ದಾರೆ. ಚಿತ್ರದ ಮತ್ತೊಂದು ವಿಶೇಷ ಅಂದ್ರೆ, ಈ ಚಿತ್ರಕ್ಕೆ ನಾಗಚೈತನ್ಯ ತಾತ, ಅಕ್ಕಿನೇನಿ ನಾಗೇಶ್ವರ ರಾವ್ ಅವರೇ ಹಸರೇ ಇಡಲಿದ್ದಾರಂತೆ.

    ಇನ್ನು ಇದೇ ಮೊದಲ ಬಾರಿಗೆ ತೆರೆಯ ಮೇಲೆ ರೊಮ್ಯಾನ್ಸ್ ಮಾಡಲಿರುವ ಜೋಡಿ ನಾಗಚೈತನ್ಯ ಮತ್ತು ರಶ್ಮಿಕಾ ಸಿನಿಮಾ ನೋಡಲು ಫ್ಯಾನ್ಸ್ ಕೂಡ ಥ್ರಿಲ್ ಆಗಿದ್ದಾರೆ. ಸದ್ಯದಲ್ಲೇ ಚಿತ್ರದ ಕುರಿತು ಅಧಿಕೃತ ಮಾಹಿತಿ ಹೊರಬೀಳಲಿದೆ.

    Live Tv
    [brid partner=56869869 player=32851 video=960834 autoplay=true]