Tag: Telangan

  • ತೆಲಂಗಾಣ ಸಿಎಂ ಜೊತೆ ಅದಾನಿ ಸಮೂಹ ಮಾತುಕತೆ – ರಾಹುಲ್‌ಗೆ ಪಕ್ಷದಲ್ಲೇ ಹಿನ್ನಡೆ ಎಂದ ನೆಟ್ಟಿಗರು

    ತೆಲಂಗಾಣ ಸಿಎಂ ಜೊತೆ ಅದಾನಿ ಸಮೂಹ ಮಾತುಕತೆ – ರಾಹುಲ್‌ಗೆ ಪಕ್ಷದಲ್ಲೇ ಹಿನ್ನಡೆ ಎಂದ ನೆಟ್ಟಿಗರು

    ಹೈದರಾಬಾದ್‌: ಅದಾನಿ ಸಮೂಹ (Adani Group) ತೆಲಂಗಾಣ ಸಿಎಂ ರೇವಂತ್‌ ರೆಡ್ಡಿಯನ್ನು (Telangana CM Revanth Reddy) ಬುಧವಾರ ಭೇಟಿ ಮಾಡಿದ ಬೆನ್ನಲ್ಲೇ ಸಾಮಾಜಿಕ ಜಾಲತಾಣದಲ್ಲಿ ಕಾಂಗ್ರೆಸ್‌ (Congress) ವಿರುದ್ಧ ಟ್ರೋಲ್‌ (Troll) ಆರಂಭವಾಗಿದೆ.

    ಚುನಾವಣಾ ಭಾಷಣದಲ್ಲಿ, ಸಂಸತ್‌ ಕಲಾಪದಲ್ಲಿ ಅದಾನಿ ಕಂಪನಿ ವಿರುದ್ಧ ಕಾಂಗ್ರೆಸ್‌ ನಾಯಕರು ಟೀಕೆ ಮಾಡುತ್ತಲೇ ಇರುತ್ತಾರೆ. ಆದರೆ ಈಗ ಗೌತಮ್‌ ಅದಾನಿ (Gautam Adani) ಅವರ ಪುತ್ರ ಕರಣ್‌ ಅದಾನಿ (Karan Adani) ಅವರು ರೇವಂತ್‌ ರೆಡ್ಡಿ ಅವರ ಜೊತೆ ಡೇಟಾ ಸೆಂಟರ್‌ ಮತ್ತು ಏರೋಸ್ಪೇಸ್‌ ಪಾರ್ಕ್‌ ನಿರ್ಮಾಣ ಹೂಡಿಕೆ ಸಂಬಂಧ ಮಾತುಕತೆ ನಡೆಸಿದ್ದಾರೆ.

    ಅದಾನಿ ಪೋರ್ಟ್‌ ಮತ್ತು ಎಸ್‌ಇಝಡ್‌ ಕಂಪನಿಯ ಸಿಇಒ ಆಗಿರುವ ಕರಣ್‌ ಅದಾನಿ ಅವರು ರೇವಂತ್‌ ರೆಡ್ಡಿ ಜೊತೆಗಿನ ಮಾತುಕತೆ ವಿಚಾರ ಹೊರ ಬರುತ್ತಿದ್ದಂತೆ ಸಾಮಾಜಿಕ ಜಾಲತಾಣದಲ್ಲಿ ನೆಟ್ಟಿಗರು ಕಾಂಗ್ರೆಸ್‌ ನಾಯಕರನ್ನು ಪ್ರಶ್ನೆ ಮಾಡುತ್ತಿದ್ದಾರೆ. ಇದನ್ನೂ ಓದಿ: ಬಂಧನ ಊಹಾಪೋಹ ಮಧ್ಯೆ 3 ದಿನ ಗುಜರಾತ್‌ ಪ್ರವಾಸ ಕೈಗೊಳ್ಳಲಿದ್ದಾರೆ ಕೇಜ್ರಿವಾಲ್‌

    ರಾಹುಲ್‌ ಗಾಂಧಿ ಅವರು ಗೌತಮ್‌ ಅದಾನಿ ಅವರ ವಿರುದ್ಧ ನಿರಂತರ ವಾಗ್ದಾಳಿ ನಡೆಸುತ್ತಿದ್ದರೆ ಇತ್ತ ತೆಲಂಗಾಣ ಸಿಎಂ ಅವರು ಗೌತಮ್‌ ಅದಾನಿ ಅವರ ಪುತ್ರ ಕರಣ್‌ ಅದಾನಿ ಜೊತೆ ಮಾತನಾಡುತ್ತಾರೆ ಎಂದು ಟ್ರೋಲ್‌ ಮಾಡುತ್ತಿದ್ದಾರೆ.

    ಕಾಂಗ್ರೆಸ್‌ ಬೂಟಾಟಿಕೆ ಇದೊಂದು ಉತ್ತಮ ಉದಾಹರಣೆ. ರಾಹುಲ್‌ ಗಾಂಧಿ ಅವರಿಗೆ ಸುಪ್ರೀಂ ಕೋರ್ಟ್‌ನಲ್ಲಿ ಮಾತ್ರವಲ್ಲ. ಪಕ್ಷದಲ್ಲೇ ಅವರಿಗೆ ಹಿನ್ನಡೆಯಾಗುತ್ತಿದ್ದು, ಅವರ ಮಾತಿಗೆ ಕಾಂಗ್ರೆಸ್‌ನಲ್ಲೇ ಯಾರು ಗೌರವ ನೀಡುತ್ತಿಲ್ಲ ಅಭಿಪ್ರಾಯ ಹಂಚಿಕೊಳ್ಳುತ್ತಿದ್ದಾರೆ.

     

  • ಪ್ರಾಮಾಣಿಕ ನಾಯಕ ಸಿಎಂ ಆಗಲೆಂದು ನಾಲಿಗೆ ಕತ್ತರಿಸಿ ದೇವರ ಹುಂಡಿಗೆ ಹಾಕಿದ ಮತದಾರ

    ಪ್ರಾಮಾಣಿಕ ನಾಯಕ ಸಿಎಂ ಆಗಲೆಂದು ನಾಲಿಗೆ ಕತ್ತರಿಸಿ ದೇವರ ಹುಂಡಿಗೆ ಹಾಕಿದ ಮತದಾರ

    ಹೈದರಾಬಾದ್: ಪ್ರಾಮಾಣಿಕ ನಾಯಕ ಮುಖ್ಯಮಂತ್ರಿಯಾಗಲಿ ಅಂತಾ ಮತದಾರನೊಬ್ಬ ತನ್ನ ನಾಲಿಗೆ ಕತ್ತರಿಸಿಕೊಂಡು, ದೇವರ ಹುಂಡಿಗೆ ಹಾಕಿದ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ.

    ಪಶ್ಚಿಮ ಗೋದಾವರಿ ಜಿಲ್ಲೆಯ ಮಹೇಶ್ (35) ಬುಧವಾರ ನಾಲಿಗೆ ಕತ್ತರಿಸಿಕೊಂಡಿದ್ದಾರೆ. ಮಹೇಶ್ ಹೈದ್ರಾಬಾದ್‍ನ ಶ್ರೀನಗರ ಕಾಲೊನಿಯ ವೆಂಕಟೇಶ್ವರ ದೇವಾಲಯದ ಹುಂಡಿಗೆ ನಾಲಿಗೆ ಹಾಕಿದ್ದಾರೆ. ಅವರನ್ನು ಸ್ಥಳೀಯ ಓಸ್ಮಾನಿಯಾ ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

    ತೆಲಂಗಾಣ ವಿಧಾನಸಭೆ ಚುನಾವಣೆಯ ಮತದಾನ ಪೂರ್ಣಗೊಂಡಿದ್ದು, ಮತ ಎಣಿಕೆಯು ಡಿಸೆಂಬರ್ 11ರಂದು ನಡೆಯಲಿದೆ. ಈ ನಿಟ್ಟಿನಲ್ಲಿ ನಾಯಕರ ಗೆಲುವಿಗಾಗಿ ಅಭಿಮಾನಿಗಳು ಪೂಜೆ, ದಾನದ ಮೂಲಕ ದೇವರಿಗೆ ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ.

    ತೆಲಂಗಾಣ ಹಾಗೂ ಆಂಧ್ರ ಪ್ರದೇಶಗಳಲ್ಲಿ ಪ್ರಾಮಾಣಿಕ ರಾಜಕಾರಣಿಗಳು ಮುಖ್ಯಮಂತ್ರಿಗಳಾಗಬೇಕು ಎಂದು ಮಹೇಶ್ ಪತ್ರ ಬರೆದಿಟ್ಟಿದ್ದಾರೆ ಎಂದು ಬಂಜಾರ ಹಿಲ್ಸ್ ಇನ್ಸ್‍ಪೆಕ್ಟರ್ ಗೋವಿಂದ ರೆಡ್ಡಿ ತಿಳಿಸಿದ್ದಾರೆ.

    ಮಹೇಶ್ ಅವರು ಕಳೆದ 2004 ಹಾಗೂ 2009ರ ಚುನಾವಣೆ ವೇಳೆ ಮಹೇಶ್ ನಾಲಿಗೆಯನ್ನು ಕತ್ತರಿಸಿಕೊಂಡಿದ್ದ ಎನ್ನಲಾಗಿದೆ. ಮಹೇಶ್ ಆಂಧ್ರ ಪ್ರದೇಶದ ಮಾಜಿ ಮುಖ್ಯಮಂತ್ರಿ ವೈ.ಎಸ್.ರಾಜಶೇಖರ ರೆಡ್ಡಿ ಅವರು ಗೆಲುವು ಸಾಧಿಸಲಿ ಎನ್ನುವ ಉದ್ದೇಶದಿಂದ ನಾಲಿಗೆ ಕತ್ತರಿಸಿಕೊಂಡಿದ್ದ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv