Tag: Telangana Assembly Elections

  • 50 ವರ್ಷ ದಾಟಿದೆ, ಒಂಟಿತನ ನಿಮ್ಮನ್ನು ಕಾಡುತ್ತಿರಬಹುದು – ರಾಗಾ ಬಗ್ಗೆ ಓವೈಸಿ ವ್ಯಂಗ್ಯ

    50 ವರ್ಷ ದಾಟಿದೆ, ಒಂಟಿತನ ನಿಮ್ಮನ್ನು ಕಾಡುತ್ತಿರಬಹುದು – ರಾಗಾ ಬಗ್ಗೆ ಓವೈಸಿ ವ್ಯಂಗ್ಯ

    ಹೈದರಾಬಾದ್‌: ನಿಮಗೆ ಈಗಾಗಲೇ 50 ವರ್ಷ ದಾಟಿದೆ. ಬಹುಶಃ ಒಂಟಿತನ ನಿಮ್ಮನ್ನು ಕಾಡುತ್ತಿರಬಹುದು ಎಂದು ಅಖಿಲ ಭಾರತ ಮಜ್ಲಿಸ್-ಎ-ಇತ್ತೆಹಾದ್-ಉಲ್-ಮುಸ್ಲಿಮೀನ್ (AIMIM) ಅಧ್ಯಕ್ಷ ಅಸಾದುದ್ದೀನ್ ಓವೈಸಿ (Asaduddin Owaisi) ವ್ಯಂಗ್ಯವಾಡಿದ್ದಾರೆ.

    ಓವೈಸಿ ಅವರು ಪ್ರಧಾನಿ ಮೋದಿ (Modi) ಅವರ ಮಾಜಿ ಸ್ನೇಹಿತ ಎನ್ನುವ ರಾಹುಲ್‌ ಗಾಂಧಿ (Rahul Gandhi) ಹೇಳಿಕೆಗೆ ಪ್ರತಿಕ್ರಿಯಿಸಿದ್ದಾರೆ. ನಾವು ಯಾರ ನಿರ್ಧಾರಗಳನ್ನು ಪ್ರಶ್ನೆ ಮಾಡುವುದಿಲ್ಲ, ಯಾರ ಜೀವನದಲ್ಲಿ ಹಸ್ತಕ್ಷೇಪ ಮಾಡಲು ಬಯಸುವುದಿಲ್ಲ, ಯಾರಿಗೂ ತೊಂದರೆ ಕೊಡುವುದಿಲ್ಲ. ನೀವೂ ಸಹ ನಿಮ್ಮನ್ನು ಚುಡಾಯಿಸಿದವರನ್ನು ಬಿಡಬೇಡಿ ಎಂದು ಹೇಳಿದ್ದಾರೆ.

    ಇತ್ತೀಚೆಗೆ ತೆಲಂಗಾಣದಲ್ಲಿ ಚುನಾವಣಾ ಭಾಗವಾಗಿ ನಡೆದ ಸಾರ್ವಜನಿಕ ಸಭೆಯಲ್ಲಿ ರಾಹುಲ್‌ ಗಾಂಧಿ ಮಾತನಾಡಿದ್ದರು. ಈ ವೇಳೆ ಆಡಳಿತರೂಢ ಭಾರತ್‌ ರಾಷ್ಟ್ರ ಸಮಿತಿ (BRS) ಸರ್ಕಾರವನ್ನು ಭ್ರಷ್ಟ ಸರ್ಕಾರ ಎಂದು ಕಿಡಿ ಕಾರಿದ್ದರು. ಅಲ್ಲದೇ ಪ್ರಧಾನಿ ಮೋದಿಗೆ ತೆಲಂಗಾಣ ಸಿಎಂ ಕೆ. ಚಂದ್ರಶೇಖರ್‌ ರಾವ್‌ ಮತ್ತು ಓವೈಸಿ ಇಬ್ಬರು ಸ್ನೇಹಿತರಿದ್ದಾರೆ ಎಂದು ನುಡಿದಿದ್ದರು. ಇದಕ್ಕೆ ಓವೈಸಿ ಪ್ರತಿಕ್ರಿಯಿಸಿದ್ದಾರೆ.

    ಕೆಸಿಆರ್‌ ಮೋದಿ ಪ್ರಧಾನಿ ಆಗಬೇಕೆಂದು ಬಯಸುತ್ತಿದ್ದಾರೆ, ಅದೇ ರೀತಿ ಕೆಸಿಆರ್‌ ಮುಖ್ಯಮಂತ್ರಿ ಆಗಬೇಕೆಂದು ಮೋದಿ ಬಯಸುತ್ತಿದ್ದಾರೆ. ಆದ್ದರಿಂದ ಕಾಂಗ್ರೆಸ್‌ ಪಕ್ಷವು ತೆಲಂಗಾಣದಲ್ಲಿ ಮೋದಿ ತೇನೃತ್ವದ ಬಿಜೆಪಿ ಸರ್ಕಾರವನ್ನು ಸೋಲಿಸುವ ಉದ್ದೇಶ ಹೊಂದಿದೆ. ಮುಂಬರುವ ಚುನಾವಣೆಯಲ್ಲಿ ನಮ್ಮ ಪಕ್ಷ ಪ್ರಚಂಡ ಗೆಲುವು ಸಾಧಿಸಲಿದೆ ಎಂದು ಗುಡುಗಿದ್ದರು. ಇದನ್ನೂ ಓದಿ: ಮಹಾತ್ಮ ಗಾಂಧಿ ‘ಮಹಾಪುರುಷ’, ಪ್ರಧಾನಿ ಮೋದಿ ‘ಯುಗಪುರುಷ’: ಉಪ ರಾಷ್ಟ್ರಪತಿ ಬಣ್ಣನೆ

    ನವೆಂಬರ್ 30 ರಂದು ರಾಜ್ಯ ವಿಧಾನಸಭೆಗೆ ಮತದಾನ ನಡೆಯಲಿದೆ. ಛತ್ತೀಸ್‌ಗಢ, ಮಿಜೋರಾಂ, ಮಧ್ಯಪ್ರದೇಶ ಮತ್ತು ರಾಜಸ್ಥಾನದೊಂದಿಗೆ ಡಿಸೆಂಬರ್ 3 ರಂದು ಫಲಿತಾಂಶ ಪ್ರಕಟವಾಗಲಿದೆ. ಇದನ್ನೂ ಓದಿ:  ಮೂರು ತಿಂಗಳಲ್ಲಿ 242 ಭ್ರೂಣ ಹತ್ಯೆ: ಪೊಲೀಸ್ ಆಯುಕ್ತ

  • ತೆಲಂಗಾಣದಲ್ಲಿ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್‌ ಈಶ್ವರ್‌ ಪ್ರತಿಭಟನೆ

    ತೆಲಂಗಾಣದಲ್ಲಿ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್‌ ಈಶ್ವರ್‌ ಪ್ರತಿಭಟನೆ

    ಚಿಕ್ಕಬಳ್ಳಾಪುರ: ಕರ್ನಾಟಕದ ಕಾಂಗ್ರೆಸ್‌ ಗ್ಯಾರಂಟಿಗಳ (Congress Guarantee) ಬಗ್ಗೆ ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್‌ ರಾವ್‌ ಅವರ ಪಕ್ಷದ ಅಭ್ಯರ್ಥಿಯೊಬ್ಬರು ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಆರೋಪಿಸಿ ತೆಲಂಗಾಣದಲ್ಲಿ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್‌ ಈಶ್ವರ್‌ (Pradeep Eshwar) ಪ್ರತಿಭಟನೆ ನಡೆಸಿದ್ದಾರೆ.

    ತೆಲಂಗಾಣದಲ್ಲಿ (Telangana) ಕಾಂಗ್ರೆಸ್‌ ಪರವಾಗಿ ಶಾಸಕ ಪ್ರದೀಪ್‌ ಈಶ್ವರ್‌ ಚುನಾವಣಾ ಪ್ರಚಾರದಲ್ಲಿದ್ದರು. ಇದರ ನಡುವೆಯೇ ತೆಲಂಗಾಣ ಸಚಿವ ಪ್ರತಾಪ್ ರೆಡ್ಡಿ ಸ್ವಗ್ರಾಮದ ವೆಲುಪುರದಲ್ಲಿ ಅಂಬೇಡ್ಕರ್‌ ಪ್ರತಿಮೆ ಎದುರು ಕಾಂಗ್ರೆಸ್‌ ಕಾರ್ಯಕರ್ತರೊಂದಿಗೆ ಪ್ರದೀಪ್‌ ಈಶ್ವರ್‌ ಪ್ರತಿಭಟನೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ನಿಗಮ ಮಂಡಳಿ ಅಧ್ಯಕ್ಷರ ಆಯ್ಕೆ ಕಸರತ್ತು – ಅಧ್ಯಕ್ಷರ ಮೊದಲ ಪಟ್ಟಿ ಫೈನಲ್: ಸಭೆಯಲ್ಲಿ ಏನಾಯ್ತು?

    ಶಾಸಕ ಪ್ರದೀಪ್‌ ಈಶ್ವರ್‌, ಬಾಲಕೊಂಡ ಕ್ಷೇತ್ರದಲ್ಲಿ ಚುನಾವಣಾ ಉಸ್ತುವಾರಿಯಾಗಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಮುತ್ಯಾಲ ಸುನೀಲ್ ಕುಮಾರ್ ಪರ ಪ್ರಚಾರ ನಡೆಸುತ್ತಿದ್ದಾರೆ. ಇದೇ ಕ್ಷೇತ್ರದ ಕೆಸಿಆರ್‌ ಪಕ್ಷದ ಅಭ್ಯರ್ಥಿ ಪ್ರತಾಪ್ ರೆಡ್ಡಿ ಅವರು ಕರ್ನಾಟಕದ ಕಾಂಗ್ರೆಸ್‌ ಗ್ಯಾರಂಟಿಗಳ ಬಗ್ಗೆ ಟೀಕೆ ಮಾಡಿದ್ದರು. ಕರ್ನಾಟಕದಲ್ಲೇ ಕಾಂಗ್ರೆಸ್ ಗ್ಯಾರಂಟಿಗಳು ಅನುಷ್ಟಾನ ಆಗಿಲ್ಲ ಎಂದು ಪ್ರಚಾರ ಮಾಡಿದ್ದರು.

    ಹೀಗಾಗಿ ಸಚಿವ ಪ್ರತಾಪ್ ರೆಡ್ಡಿ ವಿರುದ್ಧ ಪ್ರದೀಪ್‌ ಈಶ್ವರ್‌ ಕಿಡಿಕಾರಿದ್ದಾರೆ. ರೆಡ್ಡಿ ವಿರುದ್ಧ ಕರ್ನಾಟಕದ ಶಾಸಕ ಬೀದಿಗಿಳಿದು ಪ್ರತಿಭಟಿಸಿದ್ದಾರೆ. ಫ್ಲೈಟ್ ಟಿಕೆಟ್, ಕಾರು ಎಲ್ಲವೂ ಸಿದ್ಧವಾಗಿದೆ. ಬನ್ನಿ ಕರ್ನಾಟಕಕ್ಕೆ ಹೋಗೋಣ. ಕರ್ನಾಟಕದ ಯಾವುದಾದರೂ ಹಳ್ಳಿಗೆ ಹೋಗೋಣ. ಕರ್ನಾಟಕದಲ್ಲಿ ಗ್ಯಾರಂಟಿಗಳು ಜಾರಿಯಾಗಿಲ್ವಾ ಅಂತ ತೋರಿಸ್ತೀವಿ ಎಂದು ಧರಣಿಗೆ ಕುಳಿತಿರುವ ಪ್ರದೀಪ್‌ ಈಶ್ವರ್‌ ಸವಾಲು ಹಾಕಿದ್ದಾರೆ. ಇದನ್ನೂ ಓದಿ: ಧೂಳು ಹಿಡಿದ ಲಾರಿಯಲ್ಲಿ ಬೆಲೆ ಬಾಳುವ ಔಷಧಿಗಳ ಸಂಗ್ರಹ

  • ಮುಸ್ಲಿಂ ಸಮುದಾಯದ 4% ಮೀಸಲಾತಿಯನ್ನೂ ತೆಗೆದುಹಾಕ್ತೀವಿ – ಅಮಿತ್‌ ಶಾ

    ಮುಸ್ಲಿಂ ಸಮುದಾಯದ 4% ಮೀಸಲಾತಿಯನ್ನೂ ತೆಗೆದುಹಾಕ್ತೀವಿ – ಅಮಿತ್‌ ಶಾ

    ಹೈದರಾಬಾದ್‌: ಭಾರತೀಯ ಜನತಾ ಪಕ್ಷವೂ (BJP) ಮುಸ್ಲಿಂ ಸಮುದಾಯಕ್ಕಿರುವ 4% ಮೀಸಲಾತಿಯನ್ನೂ (Muslim Reservation) ತೆಗೆದುಹಾಕುತ್ತೇವೆ. ಅದನ್ನು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ (SC-ST) ಹಾಗೂ ಇತರೇ ಹಿಂದುಳಿದ ವರ್ಗದ ಜನರಿಗೆ ಹಂಚುತ್ತೇವೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ (Amit Shah) ಹೇಳಿದ್ದಾರೆ.

    ನವೆಂಬರ್‌ 30 ರಂದು ನಡೆಯಲಿರುವ ತೆಲಂಗಾಣ ವಿಧಾನಸಭಾ ಚುನಾವಣೆ (Telangana Assembly Elections) ಹಿನ್ನೆಲೆಯಲ್ಲಿ ಜಗ್ತಿಯಾಲ್‌ನಲ್ಲಿ ಚುನಾವಣಾ ಪ್ರಚಾರಸಭೆ ನಡೆಯಿತು. ಪ್ರಚಾರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಶಾ, ಮುಸ್ಲಿಂ ಸಮುದಾಯಕ್ಕೆ ನೀಡಿರುವ 4% ಮೀಸಲಾತಿಯನ್ನೂ ತೆಗೆದುಹಾಕ್ತೇವೆ, ಎಂದರಲ್ಲದೇ ತೆಲಂಗಾಣದಲ್ಲಿರುವ ಮಾದಿಗ ಸಮುದಾಯಕ್ಕೆ ಎಸ್ಸಿ ವರ್ಗದ ಅಡಿಯಲ್ಲಿ ಮೀಸಲಾತಿ ನೀಡುವುದಾಗಿ ಘೋಷಿಸಿದ್ದಾರೆ. ಇದನ್ನೂ ಓದಿ: ಕಣ್ಣೀರಿಟ್ಟ ಕಿಂಗ್‌ ಕೊಹ್ಲಿ – ಪ್ರೀತಿಯ ಅಪ್ಪುಗೆ ನೀಡಿ ಸಾಂತ್ವನ ಹೇಳಿದ ಅನುಷ್ಕಾ

    ತೆಲಂಗಾಣ ಸಿಎಂ ಕೆ.ಚಂದ್ರಶೇಖರ ರಾವ್‌ ಅವರು ಆಲ್‌ ಇಂಡಿಯಾ ಮಜ್ಲಿಸ್-ಇ-ಇತ್ತೆಹಾದುಲ್ ಮುಸ್ಲಿಮೀನ್ (AIMIM) ಅಸಾದುದ್ದೀನ್‌ ಓವೈಸಿಗೆ ಹೆದರಿ ಹೈದರಾಬಾದ್‌ ವಿಮೋಚನಾ ದಿನವನ್ನು ಆಚರಿಸುತ್ತಿಲ್ಲ. ಆದ್ರೆ ನಾವು ಓವೈಸಿಗೆ ಹೆದರಲ್ಲ. ಮುಂದೆ ತೆಲಂಗಾಣದಲ್ಲಿ ಹೈದರಾಬಾದ್‌ ವಿಮೋಚನಾ ದಿನವನ್ನು ರಾಜ್ಯ ದಿನವನ್ನಾಗಿ ಆಚರಿಸುತ್ತೇವೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಇದೇ ಕೊನೆಯಲ್ಲ, ನಾವು ಕಪ್‌ ಗೆಲ್ಲೋವರೆಗೂ ಇದು ಮುಗಿಯಲ್ಲ – ಗಿಲ್‌ ಭಾವುಕ

    ಅಲ್ಲದೇ ಭಾರತ್ ರಾಷ್ಟ್ರ ಸಮಿತಿ (BRS), ಎಐಎಂಐಎಂ ಮತ್ತು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಅಮಿತ್‌ ಶಾ, ಈ ಎಲ್ಲಾ ಪಕ್ಷಗಳು 2G, 3G ಮತ್ತು 4G ಪಕ್ಷಗಳು. 2G ಎಂದರೆ ಕೆಸಿಆರ್ ಮತ್ತು ಕೆಟಿಆರ್, 3G ಅಂದ್ರೆ ಓವೈಸಿಯ ಅಜ್ಜ, ಅವರ ತಂದೆ ಮತ್ತು ಓವೈಸಿ, 4G ಅಂದ್ರೆ ಜವಾಹರಲಾಲ್ ನೆಹರು, ಇಂದಿರಾ ಗಾಂಧಿ, ರಾಜೀವ್ ಗಾಂಧಿ ಮತ್ತು ರಾಹುಲ್ ಗಾಂಧಿ. ಅದರಲ್ಲಿ ನಿಮ್ಮಸ್ಥಾನ ಎಲ್ಲಿದೆ ಎಂದು ಪ್ರಶ್ನಿಸಿದರು. ಇದನ್ನೂ ಓದಿ: ಪೊಲೀಸರ ಮೇಲಿನ ಐನೂರು ಪ್ರಕರಣಗಳನ್ನು ವಿಚಾರಣೆಗೆ ಒಳಪಡಿಸಿದ್ದೇನೆ: ಪರಮೇಶ್ವರ್‌

    ಇದೇ ವೇಳೆ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಸಾಧನೆಗಳನ್ನು ಶ್ಲಾಘಿಸಿದ ಸಚಿವರು, ಪ್ರಧಾನಿ ನರೇಂದ್ರ ಮೋದಿ ಅವರು ಭಾರತದ ತಿರಂಗವನ್ನು ಚಂದ್ರನ ಮೇಲೆ ಕೊಂಡೊಯ್ಯುವಂತೆ ಮಾಡಿದ್ದಾರೆ, ಹೊಸ ಸಂಸತ್‌ ಭವನ ಸ್ಥಾಪನೆಗೆ ಕಾರಣರಾಗಿದ್ದಾರೆ. ಜಿ20 ಶೃಂಗಸಭೆ ನೇತೃತ್ವ ವಹಿಸಿದ್ದಾರೆ. ಜೊತೆಗೆ ಭಾರತವನ್ನು ಆರ್ಥಿಕತೆಯಲ್ಲಿ 11ನೇ ಸ್ಥಾನದಿಂದ 5ನೇ ಸ್ಥಾನಕ್ಕೆ ಕೊಂಡೊಯ್ದು  ಸೃದೃಢ ರಾಷ್ಟ್ರವಾಗಿ ಮಾಡಿದ್ದಾರೆ ಎಂದು ಶ್ಲಾಘಿಸಿದರು.