ನವದೆಹಲಿ: ವಿಶ್ವದ ಅತ್ಯಂತ ಜನಪ್ರಿಯ ಮೆಸೇಜಿಂಗ್ ಅಪ್ಲಿಕೇಶನ್ ಟೆಲಿಗ್ರಾಮ್ನ (Telegram) ಬಿಲಿಯನೇರ್ ಸಂಸ್ಥಾಪಕ ಮತ್ತು ಸಿಇಒ ಪಾವೆಲ್ ಡುರೊವ್ ಅವರನ್ನು ಶನಿವಾರ ಪ್ಯಾರಿಸ್ ಬಳಿಯ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ. ಇದರ ನಡುವೆ ಪಾವೆಲ್ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ಭಾರತದಲ್ಲಿ (India) ಟೆಲಿಗ್ರಾಮ್ ಬ್ಯಾನ್ (Telegram Ban) ಮಾಡಲು ಸರ್ಕಾರ ಯೋಚಿಸಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.
ಸುಲಿಗೆ ಮತ್ತು ಜೂಜಾಟ ಹೀಗೆ ಇತ್ಯಾದಿಗಳನ್ನು ಒಳಗೊಂಡಿರುವ ಅಪರಾಧ ಚಟುವಟಿಕೆಗಳಲ್ಲಿ ಈ ಅಪ್ಲಿಕೇಶನ್ನ್ನು ಬಳಸಲಾಗುತ್ತಿದೆಯೇ ಎಂದು ತಿಳಿಯಲು ಸರ್ಕಾರ ಇದೀಗ ತನಿಖೆ ಪ್ರಾರಂಭಿಸಿದೆ. ಈ ಬಗ್ಗೆ ಕೆಲವು ಮಾಧ್ಯಮಗಳು ಸಹ ವರದಿ ಮಾಡಿದ್ದು, ತನಿಖೆಯಲ್ಲಿ ಸತ್ಯ ಬಯಲಾದ್ರೆ, ಟೆಲಿಗ್ರಾಮ್ ಅಪ್ಲಿಕೇಶನ್ ನಿಷೇಧಿಸುವ ಸಾಧ್ಯತೆಯಿದೆ ಎಂಬ ಸುದ್ದಿ ಹರಿದಾಡುತ್ತಿದೆ.
ಭಾರತದಲ್ಲಿ, ಗೃಹ ವ್ಯವಹಾರಗಳ ಸಚಿವಾಲಯ ಮತ್ತು ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುವ ಸಂಸ್ಥೆಯಾದ ಇಂಡಿಯನ್ ಸೈಬರ್ ಕ್ರೈಮ್ ಕೋ ಆರ್ಡಿನೇಷನ್ ಸೆಂಟರ್ (I4C) ಮೂಲಕ ಈ ತನಿಖೆಯನ್ನು ಪ್ರಾರಂಭಿಸುವ ಸಾಧ್ಯತೆಯಿದೆ. ಡುರೊವ್ ತನ್ನ ಅಪ್ಲಿಕೇಷನ್ ಕ್ರಿಮಿನಲ್ ಬಳಕೆಯನ್ನು ತಡೆಗಟ್ಟಲು ಕ್ರಮ ತೆಗೆದುಕೊಳ್ಳಲು ವಿಫಲರಾಗಿದ್ದಾರೆ ಎನ್ನಲಾಗಿದೆ.
ರಷ್ಯಾದ ಮೂಲದ ಡುರೊವ್ ಅವರು ಈ ಸಂದೇಶ ಕಳುಹಿಸುವ ಅಪ್ಲಿಕೇಶನ್ ಟೆಲಿಗ್ರಾಮ್ನ್ನು ಪ್ರಾರಂಭಿಸಿದ್ದರು. ಟೆಲಿಗ್ರಾಮ್ ಭಾರತದಲ್ಲಿ ಸುಮಾರು 5 ಮಿಲಿಯನ್ಗೂ ಅಧಿಕ ಬಳಕೆದಾರರನ್ನು ಹೊಂದಿದೆ.
ಬೆಂಗಳೂರು: ಪೊಲೀಸರು ಬೆಂಗಳೂರಿನಲ್ಲಿ (Bengaluru) ಬೃಹತ್ ಸೈಬರ್ ಕ್ರೈಂ (Cyber Crime) ಜಾಲವನ್ನು ಪತ್ತೆ ಹಚ್ಚಿದ್ದು, ಸಾವಿರಾರು ಕೋಟಿ ಲೂಟಿ ಮಾಡುತ್ತಿದ್ದ ಗ್ಯಾಂಗ್ ಅನ್ನು ಪತ್ತೆ ಹಚ್ಚಿ 6 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.
ಈ ಗ್ಯಾಂಗ್ ದೇಶಾದ್ಯಂತ ಸುಮಾರು 854 ಕೋಟಿ ರೂ. ಲೂಟಿ ಮಾಡಿದ್ದು, ಬೆಂಗಳೂರಿನಲ್ಲಿ 17 ಪ್ರಕರಣಗಳು ದಾಖಲಾಗಿವೆ. ವಿದ್ಯಾರಣ್ಯಪುರ (Vidyaranyapura) ಮೂಲದ ಮನೋಹರ್ ಸೇರಿ ಆರು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ತನಿಖೆ ವೇಳೆ ದೇಶದ ಹಲವೆಡೆ 5,013 ಪ್ರಕರಣ ದಾಖಲಾಗಿದ್ದು, ಸದ್ಯ 5 ಕೋಟಿ ರೂ. ಹಣವನ್ನು ಸೈಬರ್ ಕ್ರೈಂ ಪೊಲೀಸರು ಫ್ರೀಜ್ ಮಾಡಿದ್ದಾರೆ. ಇದನ್ನೂ ಓದಿ: ಬಲೂಚಿಸ್ತಾನದ ಮಸೀದಿ ಬಳಿ ಭಾರೀ ಸ್ಫೋಟ – 52 ಜನ ದುರ್ಮರಣ
ಆರೋಪಿಗಳು ವಿದೇಶದಲ್ಲಿ ಇದ್ದುಕೊಂಡು ಬೆಂಗಳೂರಿನಿಂದ ಅಕೌಂಟ್ಗಳನ್ನು ಮ್ಯಾನೇಜ್ ಮಾಡುತ್ತಿದ್ದರು. ಬೆಂಗಳೂರಿನ ಗ್ಯಾಂಗ್ ವಿದೇಶದಲ್ಲಿ ಇರುವವರಿಗೆ ಸಹಾಯ ಮಾಡುತ್ತಿತ್ತು. ಮನೋಜ್ ಅಲಿಯಾಸ್ ಜಾಕ್, ಫಣೀಂದ್ರ, ವಸಂತ್, ಶ್ರೀನಿವಾಸ, ಚಕ್ರಾದರ್ ಅಲಿಯಾಸ್ ಚಕ್ರಿ, ಸೋಮಶೇಖರ್ ಅಲಿಯಾಸ್ ಅಂಕಲ್ ಬಂಧಿತ ಆರೋಪಿಗಳು. ಬೆಂಗಳೂರಿನ ವಿದ್ಯಾರಣ್ಯಪುರ, ಯಲಹಂಕ, ಭಾಗದಲ್ಲಿ ವಾಸವಾಗಿದ್ದ ಆರೋಪಿಗಳು ವಿದೇಶದಿಂದ ಬರುವ ಆದೇಶದಂತೆ ಬ್ಯಾಂಕ್ ಅಕೌಂಟ್ಗಳನ್ನು ಮ್ಯಾನೇಜ್ ಮಾಡುತ್ತಿದ್ದರು. ಇದನ್ನೂ ಓದಿ: ಕೊಳ್ಳೇಗಾಲ ಸರ್ಕಾರಿ ಆಸ್ಪತ್ರೆ ವೈದ್ಯೆಯಾಗಿದ್ದ ತಮಿಳುನಾಡಿನ ಡಾ. ಸಿಂಧುಜಾ ಅನುಮಾನಾಸ್ಪದ ಸಾವು
ಕೃತ್ಯ ಹೇಗೆ ನಡೆಯುತಿತ್ತು?
ವಾಟ್ಸಪ್ ಮತ್ತು ಟೆಲಿಗ್ರಾಂ ಮೂಲಕ ಭಾರತದಾದ್ಯಂತ ಜಾಬ್ ಆಫರ್ ಮೆಸೇಜ್ಗಳನ್ನು ಕಳುಹಿಸಲಾಗುತ್ತಿತ್ತು. ಮೆಸೇಜ್ ಕಳುಹಿಸಲು ಮತ್ತು ಸಾರ್ವಜನಿಕರ ಜೊತೆ ಸಂವಹನ ನಡೆಸಲು ಬೇರೆನೇ ತಂಡ ಇತ್ತು. ಪಾರ್ಟ್ ಟೈಮ್ ಜಾಬ್, ಗೂಗಲ್ನಲ್ಲಿ ಹೋಟೆಲ್ ಸೇರಿ ವಿವಿಧ ಶಾಪ್ಗಳಿಗೆ ಸ್ಟಾರ್ ರೇಟಿಂಗ್ ನೀಡಿ ಗೂಗಲ್ ರಿವ್ಯೂ ಹಾಕುವಂತೆ ಹೇಳುತ್ತಿದ್ದರು. ಈ ರೀತಿ ಮಾಡಿದರೆ ಹಣ ನೀಡುತ್ತೇವೆ ಎಂದು ನಂಬಿಸಿ ಬಳಿಕ ಟೆಲಿಗ್ರಾಂ ಗ್ರೂಪ್ನಲ್ಲಿ ಸೇರಿಸುತ್ತಿದ್ದರು. ಆರೋಪಿಗಳು ಸೇರಿದ್ದ ಟೆಲಿಗ್ರಾಂ ಗ್ರೂಪ್ನಲ್ಲಿ ಕ್ರಿಪ್ಟೋ ಕರೆನ್ಸಿಗೆ ಸಂಬಂಧ ಪಟ್ಟು ಹೂಡಿಕೆ ಮಾಡಲು ಪ್ರೇರಣೆ ಮಾಡಲಾಗುತ್ತಿತ್ತು. ಇದನ್ನೂ ಓದಿ: ಪೊಲೀಸ್ ಕಾರಿನ ಮೇಲೆ ಕುಳಿತು ಮಹಿಳೆಯ ಭರ್ಜರಿ ಡಾನ್ಸ್ – ರೀಲ್ಸ್ಗಾಗಿ ಕಾರು ಕೊಟ್ಟ ಅಧಿಕಾರಿ ಅಮಾನತು
ಒಂದು ಸಾವಿರದಿಂದ ಹತ್ತು ಸಾವಿರ ಹೂಡಿಕೆ ಮಾಡಲು ಹೇಳುತ್ತಿದ್ದರು. ಇಷ್ಟು ಹೂಡಿಕೆ ಮಾಡಿದರೆ ದಿನಕ್ಕೆ ಸಾವಿರದಿಂದ ಐದು ಸಾವಿರ ಹಣ ಬರುತ್ತೆ ಎಂದು ಹೇಳಿ ಪ್ರಾರಂಭದಲ್ಲಿ ಹಣ ನೀಡುತ್ತಿದ್ದರು. ಗ್ರೂಪ್ನಲ್ಲಿ ಇದ್ದವರು ತಮಗೆ ಇಂತಿಷ್ಟು ಲಾಭ ಬಂದಿದೆ ಎಂದೆಲ್ಲಾ ಮಾಹಿತಿ ಹಂಚಿಕೊಳ್ಳುವ ಮೂಲಕ ಸಾರ್ವಜನಿಕರ ನಂಬಿಕೆ ಗಳಿಸಿ ಹೂಡಿಕೆ ಮಾಡಿಸುತ್ತಿದ್ದರು. ಒಬ್ಬೊಬ್ಬರಿಂದ ಲಕ್ಷದಿಂದ ಕೋಟಿ ರೂ.ವರೆಗೆ ಹೂಡಿಕೆ ಮಾಡಿಸಲಾಗುತ್ತಿತ್ತು. ಹೀಗೆ ಹೂಡಿಕೆ ಮಾಡಿಸುತಿದ್ದ ಹಣ ಬೆಂಗಳೂರಿನ ವಿವಿಧ ಬ್ಯಾಂಕ್ನಲ್ಲಿನ ಕರೆಂಟ್ ಅಕೌಂಟ್ಗೆ ಸೇರುತಿತ್ತು. ನಂತರ ಹಣ ವಿದೇಶದ ಬ್ಯಾಂಕ್ ಅಕೌಂಟ್ಗೆ ಹೋಗುತ್ತಿತ್ತು. ಬಳಿಕ ಬ್ಯಾಂಕ್ ಅಕೌಂಟ್ ಮ್ಯಾನೇಜ್ ಮಾಡುತ್ತಿದ್ದ ಗ್ಯಾಂಗ್ಗೆ ಕ್ರಿಪ್ಟೋ ಕರೆನ್ಸಿ ಮೂಲಕ ಹಣ ನೀಡಲಾಗುತ್ತಿತ್ತು. ಈ ಹಣವನ್ನು ವಿದೇಶಿ ಗ್ಯಾಂಗ್ ಹಣವನ್ನು ವಿದೇಶದ ವಿವಿಧ ಕಂಪನಿಯಲ್ಲಿ ಹೂಡಿಕೆ ಮಾಡುತ್ತಿದ್ದರು. ಇದನ್ನೂ ಓದಿ: ಸಾಹಿತಿಗಳಿಗೆ ಜೀವ ಬೆದರಿಕೆ ಪತ್ರ – ದಾವಣಗೆರೆ ಮೂಲದ ಹಿಂದೂ ಸಂಘಟನೆಯ ಸಂಚಾಲಕ ಅರೆಸ್ಟ್
ಬರ್ಲಿನ್: ಮೆಸೇಜಿಂಗ್ ಅಪ್ಲಿಕೇಶನ್ ಟೆಲಿಗ್ರಾಮ್ ಪ್ರೀಮಿಯಂ ಚಂದಾದಾರಿಕೆಯನ್ನು ಹೊರ ತರಲು ಸಿದ್ಧವಾಗಿದೆ. ಟೆಲಿಗ್ರಾಂ ತನ್ನ ಪ್ರೀಮಿಯಂ ಅನ್ನು ಇದೇ ತಿಂಗಳಿನಲ್ಲಿ ಬಿಡುಗಡೆ ಮಾಡಲಿದೆ ಎಂದು ಟೆಲಿಗ್ರಾಂ ಸಿಇಒ ಪಾವೆಲ್ ಡುರೋವ್ ಖಚಿತಪಡಿಸಿದ್ದಾರೆ.
ಟೆಲಿಗ್ರಾಂನ ಹೊಸ ಚಂದಾದಾರಿಕೆಯಲ್ಲಿ ಬಳಕೆದಾರರು ಕೆಲವು ಫೀಚರ್ಗಳಿಗಾಗಿ ಪಾವತಿ ಮಾಡಬೇಕಾಗುತ್ತದೆ. ಆದರೂ ಸದ್ಯ ಅಸ್ತಿತ್ವದಲ್ಲಿರುವ ಫೀಚರ್ಗಳಿಗೆ ಟೆಲಿಗ್ರಾಂ ಶುಲ್ಕ ವಿಧಿಸುವುದಿಲ್ಲ. ಬದಲಾಗಿ ಹೊಸ ಫೀಚರ್ಗಳಿಗೆ ಮಾತ್ರವೇ ಶುಲ್ಕ ವಿಧಿಸಲಿದೆ ಎಂದು ಸ್ಪಷ್ಟಪಡಿಸಿದೆ. ಇದನ್ನೂ ಓದಿ: ರಾಜ್ಯದ ಹಲವೆಡೆ ಇಂದಿನಿಂದ 3 ದಿನ ಮಳೆ ಸಾಧ್ಯತೆ – ಹವಾಮಾನ ಇಲಾಖೆ
ಮೆಸೇಜಿಂಗ್ ದೈತ್ಯ ಮೆಟಾ ಮಾಲೀಕತ್ವದ ವಾಟ್ಸಪ್ಗೆ ಟೆಲಿಗ್ರಾಂ ಪ್ರತಿಸ್ಪರ್ಧಿಯಾಗಿದ್ದು, ಇದು ಪ್ರಸ್ತುತ 50 ಕೋಟಿ ಮಾಸಿಕ ಸಕ್ರಿಯ ಬಳಕೆದಾರರನ್ನು ಹೊಂದಿದೆ. 2 ವರ್ಷಗಳ ಹಿಂದೆ ವಾಟ್ಸಪ್ ಬಳಕೆದಾರರ ಗೌಪ್ಯತೆ ಬಗ್ಗೆ ಚರ್ಚೆಗೆ ಬಂದಿದ್ದಾಗ ಹೆಚ್ಚಿನ ಜನರು ಟೆಲಿಗ್ರಾಂ ಅಪ್ಲಿಕೇಶನ್ ಕಡೆ ವಾಲಿದ್ದರು. ಟೆಲಿಗ್ರಾಂ ವಿಶ್ವದ ಅತಿ ಹೆಚ್ಚು ಬಾರಿ ಡೌನ್ಲೋಡ್ ಮಾಡಲಾದ 10 ಅಪ್ಲಿಕೇಶನ್ಗಳ ಪಟ್ಟಿಯಲ್ಲಿ ಒಂದಾಗಿದೆ ಎಂದು ವರದಿಯಾಗಿದೆ.
ಕೀವ್: ರಷ್ಯಾ ಉಕ್ರೇನ್ ಯುದ್ಧ ಪ್ರಾರಂಭವಾದಾಗಿನಿಂದ ಭೀಕರ ಯುದ್ಧ, ರಕ್ತಪಾತದ ನಡುವೆಯೂ ಯಾವೊಬ್ಬ ದೇಶವೂ ಶರಣಾಗುವ ಹಂತಕ್ಕೆ ಬಂದಿಲ್ಲ. ಆದರೆ ಉಕ್ರೇನ್ ಅಧ್ಯಕ್ಷನ ನಕಲಿ ಟೆಲಿಗ್ರಾಮ್ ಖಾತೆ ಸೈನಿಕರಲ್ಲಿ ಗೊಂದಲ ಸೃಷ್ಟಿಸುವಂತೆ ಮಾಡಿದೆ.
ಉಕ್ರೇನ್ ಅಧ್ಯಕ್ಷನ ಟೆಲಿಗ್ರಾಮ್ ಖಾತೆಯಂತೆಯೇ ಹೋಲುವ ನಕಲಿ ಖಾತೆಯೊಂದರಲ್ಲಿ ಉಕ್ರೇನ್ ಯೋಧರಿಗೆ ಶರಣಾಗುವಂತೆ ಸಂದೇಶ ನೀಡಲಾಗಿತ್ತು. ಈ ಸಂದೇಶ ದೇಶಾದ್ಯಂತ ವೈರಲ್ ಆಗುತ್ತಿದ್ದಂತೆ ಸೈನಿಕರಲ್ಲಿ ಗೊಂದಲ ಏರ್ಪಟ್ಟಿತು.
ಈ ಮಾಹಿತಿ ಹರಿದಾಡಲು ಪ್ರಾರಂಭವಾಗುತ್ತಿದ್ದಂತೆ ಉಕ್ರೇನ್ ಅಧ್ಯಕ್ಷ ಎಚ್ಚೆತ್ತು, ಇದು ತಪ್ಪು ಮಾಹಿತಿ ಎಂದು ತನ್ನ ಪ್ರಜೆಗಳಿಗೆ ತಿಳಿಸಿದ್ದಾರೆ. ಬಳಿಕ ಝೆಲೆನ್ಸ್ಕಿ ಹೆಸರಿನಲ್ಲಿದ್ದ ನಕಲಿ ಖಾತೆಯನ್ನು ಬ್ಯಾನ್ ಮಾಡಲಾಗಿದೆ. ಇದನ್ನೂ ಓದಿ: ಡೊನಾಲ್ಡ್ ಟ್ರಂಪ್ ಪ್ರಯಾಣಿಸುತ್ತಿದ್ದ ವಿಮಾನ ತುರ್ತು ಲ್ಯಾಂಡಿಂಗ್
ಟೆಲಿಗ್ರಾಮ್ ಉಕ್ರೇನ್ನಲ್ಲಿ ವ್ಯಾಪಕವಾಗಿ ಬಳಸುವ ಜನಪ್ರಿಯ ಮೆಸೇಜಿಂಗ್ ಅಪ್ಲಿಕೇಶನ್ ಆಗಿದೆ. ಈ ಅಪ್ಲಿಕೇಶನ್ ಉಕ್ರೇನ್ನಲ್ಲಿ ಅತ್ಯಂತ ಉಪಯುಕ್ತವಾಗಿದ್ದು, ಇದರ ವೈಶಿಷ್ಯದಲ್ಲಿ 2ಲಕ್ಷ ಸದಸ್ಯರಿರುವ ಗುಂಪಿಗೂ ಸಂದೇಶ ಕಳುಹಿಸಲು ಸಾಧ್ಯವಿದೆ. ಆದರೆ ಟೆಲಿಗ್ರಾಮ್ನ ನಕಲಿ ಖಾತೆಯ ತಪ್ಪು ಮಾಹಿತಿಯಿಂದಾಗಿ ಸೈನಿಕರ ದಾರಿ ತಪ್ಪಿಸುವಂತೆ ಮಾಡಿದೆ.