Tag: Telugu cinema

  • ತೆಲುಗಿನತ್ತ ಹೊರಟ ಕ್ರೇಜಿಸ್ಟಾರ್ ರವಿಚಂದ್ರನ್

    ತೆಲುಗಿನತ್ತ ಹೊರಟ ಕ್ರೇಜಿಸ್ಟಾರ್ ರವಿಚಂದ್ರನ್

    ಒಂದು ಕಾಲದಲ್ಲಿ ಭಾರತೀಯ ಸಿನಿಮಾ ರಂಗವನ್ನೇ ಕನ್ನಡದತ್ತ ನೋಡುವಂತೆ ಮಾಡಿದ್ದ, ರವಿಚಂದ್ರನ್ ಸಿನಿಮಾಗಳನ್ನು ನೋಡಲಿಕ್ಕೆ ಕರ್ನಾಟಕಕ್ಕೆ ಬರುತ್ತಿದ್ದ ತಮಿಳು ಮತ್ತು ತೆಲುಗು ನಿರ್ದೇಶಕರ ನೆಚ್ಚಿನ ಹೀರೋ ಕ್ರೇಜಿಸ್ಟಾರ್ ರವಿಚಂದ್ರನ್ ತೆಲುಗಿನಲ್ಲಿ ಸಿನಿಮಾ ಮಾಡಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಕರ್ನಾಟಕದಲ್ಲೇ ಇವರಿಗೆ ಕೈ ತುಂಬಾ ಕೆಲಸವಿದ್ದರೂ, ಯಾಕೆ ತೆಲುಗು ಸಿನಿಮಾದಲ್ಲಿ ನಟಿಸಲು ಒಪ್ಪಿಕೊಂಡಿದ್ದಾರೆ ಎನ್ನುವುದಕ್ಕೆ ಕಾರಣವಿದೆ.

    ಇವರು ತೆಲುಗಿಗೆ ಹೋಗುತ್ತಿರುವುದು ಬೇರೆ ಯಾರಿಗೂ ಅಲ್ಲ, ಮಹೇಶ್ ಬಾಬು ನಟಿಸಲಿರುವ ಹೊಸ ಸಿನಿಮಾದಲ್ಲಿ ರವಿಚಂದ್ರನ್ ಅವರು ಮಹೇಶ್ ಬಾಬು ಅವರ ತಂದೆಯ ಪಾತ್ರವನ್ನು ನಿರ್ವಹಿಸಲಿದ್ದಾರೆ ಎನ್ನುವ ಸುದ್ದಿಯಿದೆ. ಮಹೇಶ್ ಬಾಬುಗಾಗಿ ಅವರು ಆ ಪಾತ್ರವನ್ನು ಒಪ್ಪಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಈ ಕುರಿತು ಅಧಿಕೃತ ಮಾಹಿತಿಯನ್ನು ಸಿನಿಮಾ ಟೀಮ್ ನೀಡಲಿದೆಯಂತೆ. ಇದನ್ನೂ ಓದಿ : Exclusive : ರಾಷ್ಟ್ರ ಪ್ರಶಸ್ತಿ ವಿಜೇತ ನಟ ಸಂಚಾರಿ ವಿಜಯ್ ಮೊದಲ ವರ್ಷದ ಪುಣ್ಯಸ್ಮರಣೆ : ಪುತ್ಥಳಿ ಅನಾವರಣ

    ಮಹೇಶ್ ಬಾಬು ಅವರು ಮುಂದಿನ ಸಿನಿಮಾವನ್ನು ತ್ರಿವಿಕ್ರಮ್ ನಿರ್ದೇಶನ ಮಾಡುತ್ತಿದ್ದು, ಈ ಸಿನಿಮಾದಲ್ಲಿ ಕ್ರೇಜಿಸ್ಟಾರ್ ಪ್ರಮುಖವಾದ ಪಾತ್ರವನ್ನೇ ನಿರ್ವಹಿಸಲಿದ್ದಾರಂತೆ. ಈಗಾಗಲೇ ಮಹೇಶ್ ಬಾಬು ಈ ಚಿತ್ರಕ್ಕಾಗಿ ತಯಾರಿ ಮಾಡಿಕೊಳ್ಳುತ್ತಿದ್ದರೆ, ಹೀಗಾಗಿ ರವಿಚಂದ್ರನ್ ಅವರ ಜೊತೆ ಒಂದು ಹಂತದ ಮಾತುಕತೆ ಕೂಡ ಆಗಿದೆಯಂತೆ. ಹತ್ತು ಹಲವು ಕಾರ್ಯಕ್ರಮಗಳಲ್ಲಿ ಬ್ಯುಸಿಯಾಗಿರುವ ರವಿಚಂದ್ರನ್, ಅವುಗಳನ್ನು ನಿಭಾಯಿಸಿಕೊಂಡು ತೆಲುಗು ಸಿನಿಮಾದಲ್ಲೂ ನಟಿಸಲಿದ್ದಾರೆ ಎನ್ನಲಾಗುತ್ತಿದೆ.

  • ಕನ್ನಡದಲ್ಲಿ ಇಲ್ಲ, ಕನ್ನಡಿಗರೇ ಆಗಿದ್ದ  ಮೇಜರ್ ಸಂದೀಪ್ ಉನ್ನಿಕೃಷ್ಣನ್ ಸಿನಿಮಾ

    ಕನ್ನಡದಲ್ಲಿ ಇಲ್ಲ, ಕನ್ನಡಿಗರೇ ಆಗಿದ್ದ ಮೇಜರ್ ಸಂದೀಪ್ ಉನ್ನಿಕೃಷ್ಣನ್ ಸಿನಿಮಾ

    ಮೂಲತಃ ಮಲಯಾಳಿ ಆದರೂ, ಕನ್ನಡಿಗರೇ ಆಗಿ ಹೋಗಿದ್ದ ಮೇಜರ್ ಸಂದೀಪ್ ಉನ್ನಿಕೃಷ್ಣನ್ ಬದುಕಿನ ಕುರಿತಾಗಿ ‘ಮೇಜರ್’ ಹೆಸರಿನಲ್ಲಿ ಸಿನಿಮಾ ನಿರ್ಮಾಣವಾಗಿದೆ. ಈ ಸಿನಿಮಾ ಇದೇ ಜೂ.03ರಂದು ದೇಶಾದ್ಯಂತ ರಿಲೀಸ್ ಆಗುತ್ತಿದೆ. ತಮಿಳು, ತೆಲುಗು ಮತ್ತು ಹಿಂದಿ ಭಾಷೆಗಳಲ್ಲಿ ಈ ಸಿನಿಮಾ ರಿಲೀಸ್ ಆಗುತ್ತಿದ್ದರೂ, ಕನ್ನಡದಲ್ಲಿ ಮಾತ್ರ ಬೇರೆ ಭಾಷೆಯಲ್ಲೇ ಈ ಸಿನಿಮಾ ನೋಡಬೇಕಂತೆ. ಇದನ್ನೂ ಓದಿ:ಕಿಯಾರಾಗೆ ಸಿದ್ಧಾರ್ಥ್ ಮಲ್ಹೋತ್ರಾ ಕ್ಲಾಸ್: ಅಷ್ಟಕ್ಕೂ ಆಗಿದ್ದೇನು?

    ಬೆಂಗಳೂರಿನಲ್ಲೇ ಬಾಳಿ ಬದುಕಿ, ಕೊನೆಗೆ ಮೇಜರ್ ಸಂದೀಪ್ ಉನ್ನಿಕೃಷ್ಣನ್ ಹುತಾತ್ಮರಾದಾಗಲೂ ಅವರ ಸಮಾಧಿಯನ್ನು ಬೆಂಗಳೂರಿನಲ್ಲೇ ಮಾಡಲಾಗಿದೆ. ಈ ಹೊತ್ತಿಗೂ ಸಂದೀಪ್ ಅವರ ಕುಟುಂಬ ಬೆಂಗಳೂರಿನಲ್ಲೇ ನೆಲೆಯೂರಿದೆ. ಕನ್ನಡಿಗರ ನೆಚ್ಚಿನ ಮೇಜರ್ ಆಗಿದ್ದ ಸಂದೀಪ್ ಅವರ ಸಿನಿಮಾವನ್ನು ಕನ್ನಡ ಭಾಷೆಯಲ್ಲಿ ಏಕೆ ಬಿಡುಗಡೆ ಮಾಡುತ್ತಿಲ್ಲ ಎಂದು ಸೋಷಿಯಲ್ ಮೀಡಿಯಾದಲ್ಲಿ ಪ್ರಶ್ನೆ ಮಾಡಲಾಗುತ್ತಿದೆ.

    ಈ ಸಿನಿಮಾದ ಪ್ರಚಾರಕ್ಕೆಂದು ಸಿನಿಮಾ ತಂಡ ಬೆಂಗಳೂರಿಗೂ ಬಂದಿತ್ತು. ಈ ಸಂದರ್ಭದಲ್ಲಿ ಕನ್ನಡದಲ್ಲಿ ಯಾಕೆ ಈ ಸಿನಿಮಾ ಬರುತ್ತಿಲ್ಲ ಎಂಬ ಪ್ರಶ್ನೆ ಕೂಡ ಚಿತ್ರತಂಡಕ್ಕೆ ಎದುರಾಯಿತು. ಸ್ಸಾರಿ ಮಾಡುವುದಕ್ಕೆ ಆಗಲಿಲ್ಲ, ಕ್ಷಮಿಸಿ ಎಂದಷ್ಟೇ ಉತ್ತರ ಸಿಕ್ಕಿತು. ಕನ್ನಡಿಗರೇ ಆಗಿದ್ದ ಸಂದೀಪ್ ಅವರ ಬಗ್ಗೆ ಕನ್ನಡದಲ್ಲೇ ಸಿನಿಮಾ ನೋಡಬೇಕು ಎನ್ನುವುದು ಹಲವರ ಅಭಿಪ್ರಾಯವಾಗಿತ್ತು. ಆದರೆ, ಈ ಸಿನಿಮಾವನ್ನು ಪರಭಾಷೆಯಲ್ಲಿ ನೋಡುವುದು ಅನಿವಾರ್ಯವಾಗಿದೆ.

    ಸಂದೀಪ್ ಉನ್ನಿಕೃಷ್ಣ ಅವರ ಬಯೋಪಿಕ್ ಗೆ ‘ಮೇಜರ್’ ಎಂದು ಹೆಸರಿಡಲಾಗಿದೆ. ತೆಲುಗಿನ ನಟ ಅರಿವಿ ಶೇಷ ಅವರು ಸಂದೀಪ್ ಅವರ ಪಾತ್ರವನ್ನು ನಿರ್ವಹಿಸಿದ್ದಾರೆ. ಖ್ಯಾತ ತೆಲುಗು ನಟ ಪ್ರಿನ್ಸ್ ಮಹೇಶ್ ಬಾಬು ಅವರು ಈ ಸಿನಿಮಾದ ಹಿಂದಿದ್ದಾರೆ.

  • ಪ್ರಶಾಂತ್ ನೀಲ್ ನಿರ್ದೇಶನದ ‘ಸಲಾರ್’ ಸಿನಿಮಾದ ಸ್ಟೋರಿ ಬಹಿರಂಗ!

    ಪ್ರಶಾಂತ್ ನೀಲ್ ನಿರ್ದೇಶನದ ‘ಸಲಾರ್’ ಸಿನಿಮಾದ ಸ್ಟೋರಿ ಬಹಿರಂಗ!

    ಕೆಜಿಎಫ್ 2 ಸಿನಿಮಾದ ಗೆಲುವಿನ ಖುಷಿಯಲ್ಲೇ ನಿರ್ದೇಶಕ ಪ್ರಶಾಂತ್ ನೀಲ್ , ತಮ್ಮ ಚೊಚ್ಚಲು ನಿರ್ದೇಶನದ ತೆಲುಗಿನ ‘ಸಲಾರ್’ ಸಿನಿಮಾದ ಚಿತ್ರೀಕರಣಕ್ಕೆ ಸಿದ್ಧತೆ ಮಾಡಿಕೊಂಡಿದ್ದಾರೆ. ಈ ವಾರದಿಂದಲೇ ಸಲಾರ್ ಸಿನಿಮಾದ ಶೂಟಿಂಗ್ ನಡೆಯಲಿದ್ದು, ಇದಕ್ಕೂ ಮುನ್ನ ಚಿತ್ರದ ಕಥೆಯನ್ನು ಸ್ವತಃ ಚಿತ್ರತಂಡವೇ ಸೋರಿಕೆ ಮಾಡಿದೆ. ಇದನ್ನೂ ಓದಿ:  ಫ್ಯಾಟ್‌ ಸರ್ಜರಿ ಎಫೆಕ್ಟ್‌ – ಕಿರುತೆರೆ ನಟಿ ಚೇತನಾ ರಾಜ್‌ ಸಾವು

    ಸಲಾರ್ ಸಿನಿಮಾದ ಕತೆಯ ಬಗ್ಗೆ ಸಾಕಷ್ಟು ಕುತೂಹಲವಿತ್ತು. ಯಾಕೆಂದರೆ, ಈ ಸಿನಿಮಾ ಕನ್ನಡದ ‘ಉಗ್ರಂ’ ಸಿನಿಮಾದ ರಿಮೇಕ್ ಎಂದು ಹೇಳಲಾಗಿತ್ತು. ತಮ್ಮ ನಿರ್ದೇಶನದ ಉಗ್ರಂ ಸಿನಿಮಾವನ್ನು ತಾವೇ ತೆಲುಗಿನಲ್ಲಿ ಸಲಾರ್ ಹೆಸರಿನಲ್ಲಿ ರಿಮೇಕ್ ಮಾಡುತ್ತಿದ್ದಾರೆ ಎಂದೂ ಸುದ್ದಿ ಆಗಿತ್ತು. ಆನಂತರ ಈ ಕುರಿತು ಸ್ವತಃ ಪ್ರಶಾಂತ್ ನೀಲ್ ಪ್ರತಿಕ್ರಿಯೆ ನೀಡಿದ್ದರು. ಸಲಾರ್ ರಿಮೇಕ್ ಸಿನಿಮಾವಲ್ಲ ಎಂದು ಸ್ಪಷ್ಟನೆ ನೀಡಿದ್ದರು. ಈಗ ಸಿನಿಮಾದ ಕಥೆಯ ಬಗ್ಗೆ ಸಣ್ಣದೊಂದು ಸುಳಿವು ಸಿಕ್ಕಿದೆ.

    ಇಂದು ಸಲಾರ್ ಸಿನಿಮಾದ ಪೋಸ್ಟರ್ ವೊಂದನ್ನು ಬಿಡುಗಡೆ ಮಾಡಿರುವ ಚಿತ್ರತಂಡ, ಪೋಸ್ಟರ್ ನಲ್ಲಿ ಕೆಜಿಎಫ್ 2 ನೆನಪಿಸುವಂತಹ ಡೈಲಾಗ್ ವೊಂದನ್ನು ಬಳಸಿಕೊಳ್ಳಲಾಗಿದೆ. ಕೆಜಿಎಫ್ 2 ಸಿನಿಮಾ ಅಂದಾಕ್ಷಣ ತಕ್ಷಣವೇ ನೆನಪಿಗೆ ಬರುವ ಡೈಲಾಗ್ ‘ವೈಲೆನ್ಸ್.. ವೈಲೆನ್ಸ್.. ವೈಲೆನ್ಸ್..’ ಈ ಡೈಲಾಗ್ ಅನ್ನು ಸಲಾರ್ ಸಿನಿಮಾದಲ್ಲೂ ಬಳಸಿಕೊಂಡಿದ್ದಾರೆ ಪ್ರಶಾಂತ್ ನೀಲ್. ಇದನ್ನೂ ಓದಿ: ರಾಖಿ ಸಾವಂತ್ ಹೊಸ ಬಾಯ್‌ಫ್ರೆಂಡ್‌ ಮೈಸೂರಿನವನು : ಗೆಳೆಯ ಕೊಟ್ಟ ದುಬಾರಿ ಉಡುಗೊರೆ

    ಇಂದು ಅಧಿಕೃತ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡ ಪೋಸ್ಟರ್ ನಲ್ಲಿ ‘ದಿ ಮೋಸ್ಟ್ ವೈಲೆಂಟ್ ಮೆನ್, ಕಾಲ್ಡ್ ಒನ್ ಮ್ಯಾನ್, ದಿ ಮೋಸ್ಟ್ ವೈಲೆಂಟ್’ ಎಂದು ವಿಶೇಷ ಬರಹವನ್ನು ಹಾಕಿದ್ದಾರೆ. ಹಾಗಾಗಿ ಸಲಾರ್ ಕೂಡ ಮೋಸ್ಟ್ ವೈಲೆಂಟ್ ಆಗಿಯೇ ಇರಲಿದೆ ಎನ್ನುವ ಸೂಚನೆಯನ್ನು ಕೊಟ್ಟಿದ್ದಾರೆ. ಈ ಮೂಲಕ ವೈಲೆಂಟ್ ಪದವು ಅಷ್ಟು ಬೇಗ ಪ್ರಶಾಂತ್ ನೀಲ್ ಅವರಿಂದ ದೂರ ಹೋಗದು ಎನ್ನುವುದನ್ನು ಸೂಕ್ಷ್ಮವಾಗಿ ಹೇಳಿದ್ದಾರೆ.

  • ಸಮಂತಾ, ವಿಜಯ್ ದೇವರಕೊಂಡ ಪ್ರೀತಿಗಿಟ್ಟ ಹೆಸರು ‘ಖುಷಿ’

    ಸಮಂತಾ, ವಿಜಯ್ ದೇವರಕೊಂಡ ಪ್ರೀತಿಗಿಟ್ಟ ಹೆಸರು ‘ಖುಷಿ’

    ಮೊನ್ನೆಯಷ್ಟೇ ವಿಜಯ್ ದೇವರಕೊಂಡ ಅವರ ಹುಟ್ಟು ಹಬ್ಬಕ್ಕೆ ವಿಭಿನ್ನವಾಗಿ ವಿಶ್ ಮಾಡಿ ಸುದ್ದಿಯಾಗಿದ್ದ ಸಮಂತಾ, ಇದೀಗ ಮತ್ತೊಂದು ಕಾರಣಕ್ಕೆ ಸದ್ದು ಮಾಡುತ್ತಿದ್ದಾರೆ. ವಿಜಯ್ ದೇವರಕೊಂಡ ಮತ್ತು ಸಮಂತಾ ನಟನೆಯ ಹೊಸ ಸಿನಿಮಾಗೆ ವಿಭಿನ್ನವಾಗಿ ಶೀರ್ಷಿಕೆ ಇಡಲಾಗಿದ್ದು, ಅದು ಈಗ ರಿವೀಲ್ ಆಗಿದೆ. ಇದನ್ನೂ ಓದಿ: ದೊಡ್ಮನೆ ಕುಡಿ ಯುವರಾಜ್ ಎದುರು ವಿಲನ್ ಆಗಿ ಡಾಲಿ!

    ಇದೇ ಮೊದಲ ಬಾರಿಗೆ ವಿಜಯ್ ದೇವರಕೊಂಡ ಮತ್ತು ಸಮಂತಾ ಒಟ್ಟಾಗಿ ನಟಿಸುತ್ತಿದ್ದರಿಂದ ಈ ಚಿತ್ರಕ್ಕೆ ಯಾವ ರೀತಿಯ ಟೈಟಲ್ ಇಡಬಹುದು ಎಂದು ಚರ್ಚೆ ಶುರುವಾಗಿತ್ತು. ಈಗ ಅದಕ್ಕೆ ಫುಲ್ ಸ್ಟಾಪ್ ಬಿದ್ದಿದ್ದು ಚಿತ್ರಕ್ಕೆ ‘ಖುಷಿ’ ಎಂದು ಶೀರ್ಷಿಕೆ ಇಟ್ಟಿದ್ದಾರೆ ನಿರ್ದೇಶಕರು. ಸಮಂತಾ ಮತ್ತು ವಿಜಯ್ ದೇವರಕೊಂಡ ಅವರ ತೆರೆಯ ಮೇಲಿನ ಪ್ರೀತಿಗೆ ‘ಖುಷಿ’ಯೇ ಸಾಕ್ಷಿಯಾಗಿದೆ ಎಂದಿದ್ದಾರೆ ನಿರ್ದೇಶಕರು. ಇನದನ್ನೂ ಓದಿ:`ಫಿದಾ’ ಬ್ಯೂಟಿ ಸಾಯಿ ಪಲ್ಲವಿಗೆ ಕನ್ನಡ ಹೇಳಿಕೊಟ್ಟ ಶೀತಲ್ ಶೆಟ್ಟಿ

    ಟೈಟಲ್ ರಿವೀಲ್ ಗಾಗಿಯೇ ತಯಾರಾದ ಪೋಸ್ಟರ್ ನಲ್ಲಿ ಸಮಂತಾ ಕಲರ್ ಫುಲ್ ಸೀರೆ ಧರಿಸಿ, ಫಳಫಳ ಹೊಳೆಯುತ್ತಿದ್ದಾರೆ. ಥೇಟ್ ಮದುವಣಗಿತ್ತಿಯಂತೆಯೇ ಕಾಣುತ್ತಾರೆ. ದೇವರಕೊಂಡ ಅವರದ್ದು ಕಾಶ್ಮೀರಿ ಶೈಲಿಯ ಡ್ರೆಸ್. ಹೀಗಾಗಿ ಸಿನಿಮಾದಲ್ಲಿ ಕತೆಯು ಹೇಗಿರಬಹುದು ಎಂಬ ಕುತೂಹಲ ಮೂಡಿಸಿದೆ ಪೋಸ್ಟರ್. ಇದನ್ನೂ ಓದಿ: ಟಗರು-2ನಲ್ಲಿ ಶಿವಣ್ಣನ ಜತೆ ನಟಿಸಬೇಕಿತ್ತು ಅಪ್ಪು!

    ಸಿನಿಮಾದ ಶೂಟಿಂಗ್ ಇನ್ನೂ ನಡೆದಿದ್ದರೂ, ಟೈಟಲ್ ಜೊತೆ ಫಸ್ಟ್ ಲುಕ್ ಮತ್ತು ಸಿನಿಮಾ ಬಿಡುಗಡೆಯ ದಿನಾಂಕವನ್ನೂ ಚಿತ್ರತಂಡ ಬಹಿರಂಗಗೊಳಿಸಿದೆ. ಡಿಸೆಂಬರ್ 23 ರಂದು ಖುಷಿ ಸಿನಿಮಾ ತೆರೆಗೆ ಬರಲಿದೆ. ಈ ಚಿತ್ರಕ್ಕೆ ಶಿವ ನಿರರ್ವಾನ ನಿರ್ದೇಶನ ಮಾಡಿದ್ದು, ನಾನಾ ಕಾರಣಗಳಿಂದಾಗಿ ಈ ಸಿನಿಮಾ ಕುತೂಹಲ ಮತ್ತು ನಿರೀಕ್ಷೆ ಹೆಚ್ಚು ಮಾಡಿದೆ.

  • ಆರ್.ಆರ್.ಆರ್ ಬೈಕಾಟ್ : ಕನ್ನಡ ಪರ ಹೋರಾಟಗಾರರಿಗೇ ಜವಾಬ್ದಾರಿ ಕೊಟ್ಟ ರಾಜಮೌಳಿ ಟೀಮ್

    ಆರ್.ಆರ್.ಆರ್ ಬೈಕಾಟ್ : ಕನ್ನಡ ಪರ ಹೋರಾಟಗಾರರಿಗೇ ಜವಾಬ್ದಾರಿ ಕೊಟ್ಟ ರಾಜಮೌಳಿ ಟೀಮ್

    ರಾಜಮೌಳಿ ನಿರ್ದೇಶನದ ಆರ್.ಆರ್.ಆರ್ ಸಿನಿಮಾ ಕನ್ನಡದಲ್ಲಿ ಡಬ್ ಆಗಿದ್ದರೂ, ಅದು ಕರ್ನಾಟಕದಲ್ಲಿ ಪ್ರದರ್ಶನ ಕಾಣುತ್ತಿಲ್ಲ. ಒಂದೇ ಒಂದು ಥಿಯೇಟರ್ ಕೂಡ ಕನ್ನಡ ಡಬ್ಬಿಂಗ್ ಚಿತ್ರಕ್ಕೆ ಕೊಟ್ಟಿಲ್ಲವೆಂದು ಎರಡು ದಿನಗಳಿಂದ ‘ಬೈಕಾಟ್ ಆರ್.ಆರ್.ಆರ್’ ಹೋರಾಟ ಸೋಷಿಯಲ್ ಮೀಡಿಯಾದಲ್ಲಿ ಶುರುವಾಗಿದೆ. ಕನ್ನಡ ಪರ ಕೆಲ ಹೋರಾಟಗಾರರು ಮತ್ತು ಸತತವಾಗಿ ಡಬ್ಬಿಂಗ್ ಪರ ಒಲವು ತೋರಿರುವ ಕನ್ನಡಿಗರ ‘ಆರ್.ಆರ್.ಆರ್’ ಸಿನಿಮಾ ಕನ್ನಡದಲ್ಲೇ ಬೇಕು ಎಂದು ಕ್ಯಾಂಪೇನ್ ಶುರು ಮಾಡಿದ್ದರು. ಇದನ್ನೂ ಓದಿ : ಅನಿಲ್ ಕಪೂರ್ ಈ ಫೋಟೋ ಹಾಕಬಾರದಿತ್ತು: ಕಿವಿ ಹಿಂಡಿದ ಅಭಿಮಾನಿಗಳು

    ಸೋಷಿಯಲ್ ಮೀಡಿಯಾದಲ್ಲಿ ಈ ಹೋರಾಟ ಕಾವು ಪಡೆದುಕೊಂಡಿತ್ತು. ಕನ್ನಡದಲ್ಲೇ ಆರ್.ಆರ್.ಆರ್ ನೋಡುತ್ತೇವೆ. ಬೇರೆ ಭಾಷೆಯಲ್ಲಿರುವ ಚಿತ್ರವನ್ನು ತಿರಸ್ಕರಿಸುತ್ತೇವೆ ಎಂದು ಅನೇಕ ಕನ್ನಡಿಗರು ಪೋಸ್ಟ್ ಮಾಡಿದ್ದರು. ಈ ಕಾವು ಮತ್ತಷ್ಟು ಜೋರಾಗುತ್ತಿದ್ದಂತೆಯೇ ಕರ್ನಾಟಕದಲ್ಲಿ ವಿತರಣಾ ಹಕ್ಕು ಪಡೆದಿರುವ ಕೆ.ವಿ.ಎನ್ ಸಂಸ್ಥೆಯು ತುಂಬಾ ಜಾಣ್ಮೆಯ ಉತ್ತರವನ್ನು ಕೊಟ್ಟಿದೆ. ಆರ್.ಆರ್.ಆರ್ ಸಿನಿಮಾವನ್ನು ಕನ್ನಡದಲ್ಲಿ ನೋಡಲು ನೀವೇ ನಮಗೆ ಸಹಾಯ ಮಾಡಬೇಕು ಎಂದು ಕನ್ನಡ ಪರ ಹೋರಾಟಗಾರರಿಗೆ ಈ ಜವಾಬ್ದಾರಿ ಹೊರೆಸಿದೆ. ಇದನ್ನೂ ಓದಿ : ರಾಜಕೀಯ ದಾಳವಾದ ಪುನೀತ್ ನಟನೆಯ ‘ಜೇಮ್ಸ್’ ಚಿತ್ರ

    ಈ ಕುರಿತು ಡಬ್ಬಿಂಗ್ ಪರ ಹೋರಾಟಗಾರರಿಗೆ ಅದು ಸುದೀರ್ಘವಾಗಿ ಪತ್ರ ಬರೆದು, “ಆರ್.ಆರ್.ಆರ್ ನಾಯಕ ನಟರಾದ ರಾಮ್ ಚರಣ್ ಮತ್ತು ಜ್ಯೂ.ಎನ್.ಟಿ.ಆರ್ ಕನ್ನಡ ಕಲಿಯಲು ವಿಶೇಷ ಪ್ರಯತ್ನಗಳನ್ನು ಮಾಡಿ, ಮೊದಲ ಬಾರಿಗೆ ತಮ್ಮದೇ ಧ್ವನಿಯಲ್ಲಿ ಡಬ್ ಮಾಡಿದ್ದಾರೆ. ನೀವು ಕನ್ನಡ ಭಾಷೆಯಲ್ಲಿ ಈ ಮಹೋನ್ನತ ದೃಶ್ಯಕಾವ್ಯವನ್ನು ನೋಡಲು ಇಷ್ಟಪಡುತ್ತೀರಿ ಎಂದು ನಾವು ಭಾವಿಸಿದ್ದೇವೆ. ಆದ್ದರಿಂದ ಆರ್.ಆರ್.ಆರ್ ಸಿನಿಮಾವನ್ನು ಕನ್ನಡದ ಅವತರಣಿಕೆಯನ್ನು ಪ್ರದರ್ಶಿಸಲು ಹಿಂದೇಟು ಹಾಕುತ್ತಿರುವ ಥಿಯೇಟರ್ ಮಾಲೀಕರ ಮನವೊಲಿಸುವ ಕಾರ್ಯ ನಡೆಯುತ್ತಿದೆ. ಕನ್ನಡದ ಅವತರಣಿಕೆಯನ್ನು ಹೆಚ್ಚಿನ ಸ್ಕ್ರೀನ್ ಗಳಲ್ಲಿ ಬಿಡುಗಡೆ ಮಾಡಲು ಎಲ್ಲಾ ಪ್ರಯತ್ನಗಳನ್ನೂ ನಾವು ಸತತವಾಗಿ ಮಾಡುತ್ತಿದ್ದೇವೆ. ಈ ಬಗ್ಗೆ ನಾಳೆಯೊಳಗೆ ಸಂಪೂರ್ಣ ಮಾಹಿತಿ ನೀಡಲಿದ್ದೇವೆ. ಕನ್ನಡ ಅವತರಣಿಕೆಯನ್ನು ವೀಕ್ಷಿಸುವ ಮೂಲಕ ಹಾಗೂ ರಾಜ್ಯದಾದ್ಯಂತ ಹೆಚ್ಚಿನ ಪರದೆಗಳಲ್ಲಿ ಕನ್ನಡದ ಆವೃತ್ತಿಯನ್ನೇ ಬಿಡುಗಡೆ ಮಾಡುವುದಕ್ಕೆ ನಮಗೆ ನೀವು ಸಹಾಯ ಮಾಡುತ್ತೀರಿ, ನಮ್ಮನ್ನು ಬೆಂಬಲಿಸುತ್ತೀರಿ ಎಂದು ಭಾವಿಸುತ್ತೇವೆ’’ ಕನ್ನಡದ ಸಿನಿಮಾವನ್ನು ಗೆಲ್ಲಿಸುವ ಜವಾಬ್ದಾರಿ ನಿಮ್ಮದೇ ಎಂದು ಕೈ ತೊಳೆದುಕೊಂಡಿದೆ. ಇದನ್ನೂ ಓದಿ : ಸ್ವಂತ ಜಮೀನು ಮಾರಿ ಆಸ್ಪತ್ರೆ ಕಟ್ಟಿಸಲು ಮುಂದಾದ ಹಿರಿಯ ನಟಿ ಲೀಲಾವತಿ: ಬಹುಪರಾಕ್ ಹೇಳಿದ ಕನ್ನಡ ಜನತೆ

     

     

    ಇನ್ನೆರಡು ದಿನ ಕಳೆದರೆ ಆರ್.ಆರ್. ಆರ್ ಸಿನಿಮಾ ವಿಶ್ವದಾದ್ಯಂತ ಬಿಡುಗಡೆ ಆಗುತ್ತಿದೆ. ಮಾರ್ಚ್ 25ಕ್ಕೆ ಹತ್ತು ಸಾವಿರಕ್ಕೂ ಹೆಚ್ಚಿನ ಚಿತ್ರಮಂದಿರಗಳಲ್ಲಿ ಈ ಸಿನಿಮಾ ತೆರೆ ಕಾಣುತ್ತಿದೆ.

  • ಮಿಷನ್ ಇಂಪಾಸಿಬಲ್ ಚಿತ್ರದಲ್ಲಿ ರಿಷಭ್ ಶೆಟ್ಟಿ: ತಾಪ್ಸಿ ಪನ್ನು ನಾಯಕಿ

    ಮಿಷನ್ ಇಂಪಾಸಿಬಲ್ ಚಿತ್ರದಲ್ಲಿ ರಿಷಭ್ ಶೆಟ್ಟಿ: ತಾಪ್ಸಿ ಪನ್ನು ನಾಯಕಿ

    ವಿಭಿನ್ನ ಸಿನಿಮಾಗಳ ಮೂಲಕ ಗುರುತಿಸಿಕೊಂಡಿರುವ ರಿಷಭ್ ಶೆಟ್ಟಿ ಸದ್ಯ ಕಾಂತರ ಸೇರಿದಂತೆ ಹಲವು ಸಿನಿಮಾಗಳಲ್ಲಿ ಕೆಲಸ ಮಾಡುತ್ತಿದ್ದರೂ, ಈ ನಡುವೆ ಸದ್ದಿಲ್ಲದೇ ತೆಲುಗು ಸಿನಿಮಾದಲ್ಲೂ ನಟಿಸಿ ಬಂದಿದ್ದಾರೆ. ‘ಮಿಷನ್ ಇಂಪಾಸಿಬಲ್’ ಹೆಸರಿನಲ್ಲಿ ಮೂಡಿ ಬಂದಿರುವ ಈ ಸಿನಿಮಾದ ಟ್ರೇಲರ್ ರಿಲೀಸ್ ಆಗಿದ್ದು, ಆನಂತರವೇ ಅವರು ತೆಲುಗಿಗೆ ಹಾರಿದ ಸುದ್ದಿ ಪಕ್ಕಾ ಆಗಿದೆ. ಇದನ್ನೂ ಓದಿ : ಹಿಂದಿ ಆಯ್ತು, ಇದೀಗ ಮರಾಠಿಯಲ್ಲೂ ಕನ್ನಡದ ದಿಯಾ

    ರಿಲೀಸ್ ಆಗಿರುವ ಟ್ರೇಲರ್ ಗಮನಿಸಿದರೆ, ಅದೊಂದು ಪಕ್ಕಾ ಕಾಮಿಡಿ ಮಾದರಿಯ ಸಿನಿಮಾ ಎನಿಸುತ್ತಿದೆ. ಭೂಗತ ಜಗತ್ತಿನ ದೊರೆ ದಾವೂದ್ ಇಬ್ರಾಹಿಂ ಅರೆಸ್ಟ್ ಮಾಡಿದರೆ ಮೂರು ಲಕ್ಷ ರೂಪಾಯಿ ಸಿಗುತ್ತದೆ ಎನ್ನುವ ಕಾರಣಕ್ಕೆ ಮೂವರು ಮಕ್ಕಳು ಅವನ ಹಿಂದೆ ಬೀಳುವುದು. ಆ ಮೂವರು ಮಕ್ಕಳ ಕೀಟಲೆ ಹೀಗೆ ಟ್ರೇಲರ್ ಸಾಗುತ್ತದೆ. ಇದನ್ನೂ ಓದಿ : ಸಿಂಬು ನಟನೆಯ ಚಿತ್ರಕ್ಕೆ ಐಶ್ವರ್ಯ ರಜನೀಕಾಂತ್ ನಿರ್ದೇಶಕಿ

    ಅಂದಹಾಗೆ ಈ ಸಿನಿಮಾದಲ್ಲಿ ರಿಷಭ್ ಶೆಟ್ಟಿ ಕಲೀಲ ಹೆಸರಿನ ಪಾತ್ರವನ್ನು ನಿರ್ವಹಿಸಿದ್ದಾರೆ. ಈ ಕಲೀಲ ಯಾರು? ಇವನ ಹಿನ್ನೆಲೆ ಏನು? ಇವನಿಂದ ಏನೆಲ್ಲ ಸಾಧ್ಯ ಎನ್ನುವುದನ್ನು ಸಿನಿಮಾದಲ್ಲಿಯೇ ನೋಡಬೇಕು. ಮಹತ್ವದ ಪಾತ್ರವಂತೂ ಆಗಿರುತ್ತದೆ. ಇದನ್ನೂ ಓದಿ : ಅಂದು ಸುದೀಪ್ ಪುಸ್ತಕ ಬಿಡುಗಡೆ ಮಾಡಿದ್ದ ಪುನೀತ್, ಇಂದು ಪುನೀತ್ ಪುಸ್ತಕ ಬಿಡುಗಡೆ ಮಾಡಿದ ಸುದೀಪ್

    ಸಿನಿಮಾದ ಹೆಸರು ಮಿಷನ್ ಇಂಪಾಸಿಬಲ್ ಅಂತ ಇಟ್ಟಿದ್ದರೂ, ಕನ್ನಡದ ಅನೇಕ ನಂಟುಗಳನ್ನು ಈ ಸಿನಿಮಾ ಹೊಂದಿದೆ. ರಿಷಭ್ ಪಾತ್ರದ ಶೂಟಿಂಗ್ ಬೆಂಗಳೂರಿನಲ್ಲೇ ನಡೆದಿದೆ. ಕನ್ನಡದ ಭಾರೀ ಬಜೆಟ್ ಸಿನಿಮಾ ಕೆಜಿಎಫ್ ನ ಪ್ರಸ್ತಾಪ ಕೂಡ ಸಿನಿಮಾದಲ್ಲಿ ಆಗಿದೆ. ಈ ತೆಲುಗಿನಲ್ಲಿ ಸಿನಿಮಾದಲ್ಲಿ ತಾಪಸ್ಸಿ ಪನ್ನು ನಾಯಕಿ. ಉಳಿದಂತೆ ತೆಲುಗಿನ ನಟರೇ ತಾರಾಗಣದಲ್ಲಿ ಇದ್ದಾರೆ.

  • ಮಾರ್ಚ್ 14ಕ್ಕೆ ಆರ್.ಆರ್.ಆರ್ ‘ಎತ್ತುವ ಜಂಡಾ’ ಸಾಂಗ್ ರಿಲೀಸ್

    ಮಾರ್ಚ್ 14ಕ್ಕೆ ಆರ್.ಆರ್.ಆರ್ ‘ಎತ್ತುವ ಜಂಡಾ’ ಸಾಂಗ್ ರಿಲೀಸ್

    ಬಾಹುಬಲಿ ಸಿನಿಮಾದ ನಂತರ ರಾಜಮೌಳಿ ಮತ್ತು ಸಂಗೀತ ನಿರ್ದೇಶಕ ಎಂ.ಎಂ. ಕೀರವಾಣಿ ಕಾಂಬಿನೇಷನ್ ನ ಆರ್.ಆರ್.ಆರ್ ಸಿನಿಮಾ ಸಂಗೀತದ ಕಾರಣದಿಂದಾಗಿಯೂ ಗಮನ ಸೆಳೆಯುತ್ತಿದೆ. ಈಗಾಗಲೇ ಬಿಡುಗಡೆ ಆಗಿರುವ ‘ಜನನಿ’, ‘ದೋಸ್ತಿ’ ಹಾಗೂ ‘ಹಳ್ಳಿನಾಟು’ ಹಾಡುಗಳು ಟಾಪ್ ಲಿಸ್ಟ್ ನಲ್ಲಿವೆ. ಈಗ ಮತ್ತೊಂದು ಹಾಡು ರಿಲೀಸ್ ಮಾಡಲು ಚಿತ್ರತಂಡ ಸಿದ್ಧತೆ ಮಾಡಿಕೊಂಡಿದೆ. ಇದೇ ಮಾರ್ಚ್ 14 ರಂದು ‘ಎತ್ತುವ ಜಂಡಾ’ ಸಾಂಗ್ ಬಿಡುಗಡೆ ಆಗಲಿದೆ. ಇದನ್ನೂ ಓದಿ : ತಮಿಳಿಗೆ ಹೊರಟ ಬಸಣ್ಣಿ ಖ್ಯಾತಿಯ ತಾನ್ಯ ಹೋಪ್ : ಪ್ರಶಾಂತ್ ರಾಜ್ ಚಿತ್ರಕ್ಕೆ ತಾನ್ಯ ನಾಯಕಿ

    ಈ ಹಾಡಿನ ವಿಶೇಷತೆ ಅಂದರೆ, ಸ್ಫೂರ್ತಿ ತುಂಬಬಲ್ಲಂತ ಸಾಹಿತ್ಯವನ್ನು ಒಳಗೊಂಡಿದೆ. ಅಲ್ಲದೇ, ಹಲವು ಅಪರೂಪದ ವಾದ್ಯಗಳನ್ನೂ ಈ ಹಾಡಿಗೆ ಕೀರವಾಣಿ ಬಳಸಿಕೊಂಡಿದ್ದಾರಂತೆ. ಹಾಗಾಗಿ ಬೇರೆ ರೀತಿಯ ಸೌಂಡ್ ಈ ಹಾಡಿನಲ್ಲಿದೆ. ಇದನ್ನೂ ಓದಿ : ಸೋಲೊ ಟ್ರಿಪ್ ನಲ್ಲಿ ಪ್ಯಾರ್ಗೆ ಹುಡುಗಿ ಪಾರುಲ್ ಯಾದವ್

    ಬಾಹುಬಲಿ ಸಿನಿಮಾ ನಂತರ ರಾಜಮೌಳಿ ನಿರ್ದೇಶಿಸುತ್ತಿರುವ ಸಿನಿಮಾ ಇದಾಗಿದ್ದು ಭಾರಿ ನಿರೀಕ್ಷೆಗಳನ್ನು ಹುಟ್ಟುಹಾಕಿದೆ. ಜೂ.ಎನ್.ಟಿಆರ್ ಮತ್ತು ರಾಮ್ ಚರಣ್ ಮುಖ್ಯಪಾತ್ರದಲ್ಲಿ ಅಭಿನಯಿಸಿದ್ದು, ಬಾಲಿವುಡ್ ನಟರಾದ ಅಜಯ್ ದೇವಗನ್, ಆಲಿಯಾ ಭಟ್ ಸೇರಿದಂತೆ ಹಲವು ಪ್ರಮುಖ ನಟರು ಆರ್ ಆರ್ ಆರ್ ಸಿನಿಮಾದಲ್ಲಿ ನಟಿಸಿದ್ದಾರೆ. ಇದನ್ನೂ ಓದಿ : ಸದ್ಯ ಡೇಟಿಂಗ್, ಮುಂದೆ ಮದ್ವೆ, ಹೃತಿಕ್ –ಸಬಾ ಜೋಡಿ ಪ್ರೇಮ್ ಕಹಾನಿ

    ಡಿವಿವಿ ಎಂಟರ್‌ಟೈನ್ಮೆಂಟ್ ಬ್ಯಾನರ್‌ನಲ್ಲಿ ನಿರ್ಮಾಣವಾಗುತ್ತಿರುವ ಆರ್ ಆರ್ ಆರ್ ಸಿನಿಮಾಗೆ ವಿ.ವಿಜಯೇಂದ್ರ ಪ್ರಸಾದ್ ಕಥೆ, ಮತ್ತು ಶ್ರೀಕರ್ ಪ್ರಸಾದ್ ಸಂಕಲನವಿದೆ. ಕನ್ನಡ, ತೆಲುಗು, ಮಲಯಾಳಂ ಮತ್ತು ತಮಿಳು ಹಾಗೂ ಹಿಂದಿಯಲ್ಲಿ ರಿಲೀಸ್ ಆಗಲಿರುವ ‘ಆರ್‌ಆರ್‌ಆರ್‌’ ಚಿತ್ರವು ಇಂಗ್ಲಿಷ್, ಪೋರ್ಚುಗೀಸ್, ಕೊರಿಯನ್, ಟರ್ಕಿಷ್, ಸ್ಪ್ಯಾನಿಶ್‌ ಭಾಷೆಗಳಿಗೆ ಡಬ್ ಆಗಲಿದೆ.

  • ಸುದ್ದಿಗೋಷ್ಠಿಯಲ್ಲಿ ಕ್ಷಮೆ ಕೇಳಿದ ಅಲ್ಲು ಅರ್ಜುನ್

    ಸುದ್ದಿಗೋಷ್ಠಿಯಲ್ಲಿ ಕ್ಷಮೆ ಕೇಳಿದ ಅಲ್ಲು ಅರ್ಜುನ್

    ಬೆಂಗಳೂರು: ನನಗೆ ಈ ಕಾರ್ಯಕ್ರಮ ಇಷ್ಟೂ ಬೇಗ ಪ್ರಾರಂಭವಾಗುತ್ತೆ ಎಂದು ತಿಳಿದಿರಲಿಲ್ಲ. ನಿಮ್ಮನ್ನು ಕಾಯಿಸಿದ್ದಕ್ಕೆ ನನ್ನನ್ನು ಕ್ಷಮಿಸಿ ಎಂದು ದಕ್ಷಿಣ ಭಾರತದ ಖ್ಯಾತ ನಟ ಅಲ್ಲು ಅರ್ಜುನ್ ವೇದಿಕೆಯ ಮೇಲೆಯೇ ಕೇಳಿದ್ದಾರೆ.

    ‘ಪುಷ್ಪ’ ಸಿನಿಮಾದ ಸುದ್ದಿಗೋಷ್ಠಿಯನ್ನು ಇಂದು ಬೆಂಗಳೂರಿನಲ್ಲಿ ನಡೆಸಲಾಗಿತ್ತು. ಆದರೆ ಈ ವೇಳೆ ಅಲ್ಲು ಅರ್ಜುನ್ ಸುದ್ದಿಗೋಷ್ಠಿಗೆ ತಡವಾಗಿ ಬಂದಿದ್ದರು. ಈ ವೇಳೆ ಸುದ್ದಿಗೋಷ್ಠಿ 11 ಗಂಟೆಗೆ ಇತ್ತು. ಆದರೆ ನೀವು 2 ಗಂಟೆಗೆ ಬಂದಿದ್ದೀರಾ, ನಾವು 3 ಗಂಟೆಗಳ ಕಾಲ ನಿಮಗಾಗಿ ಕಾದಿದ್ದೇವೆ ಎಂದು ಪ್ರಶ್ನೆ ಕೇಳಲಾಯಿತು. ಇದನ್ನೂ ಓದಿ: ‘ಸುಶಾಂತ್ ಸ್ಟಾರ್ ಅಲ್ಲ’ ಎಂದು ಸಿನಿಮಾ ಮಾಡಲು ನಿರ್ಮಾಪಕರು ಮುಂದೆ ಬಂದಿರಲಿಲ್ಲ: ಅಭಿಷೇಕ್ ಕಪೂರ್

    ಈ ವೇಳೆ ಅಲ್ಲು ಅರ್ಜುನ್ ಅವರು ವೇದಿಕೆ ಮೇಲೆಯೇ, ನನಗೆ ಇಷ್ಟು ಬೇಗ ಸುದ್ದಿಗೋಷ್ಠಿ ಇರುತ್ತೆ ಎಂದು ತಿಳಿದಿರಲಿಲ್ಲ. ನಾವು ಬರುವಾಗ ಹವಾಮಾನ ವೈಪರೀತ್ಯದಿಂದ ವಿಮಾನ ಸ್ವಲ್ಪ ತಡವಾಯಿತು. ಅದಕ್ಕೆ ನಿಮ್ಮನ್ನು ಕಾಯಿಸಬೇಕಾಗಿ ಬಂತು. ನನ್ನನ್ನು ಕ್ಷಮಿಸಿ ಎಂದು ಹೇಳಿದರು.

    ಕನ್ನಡ ಮಾಧ್ಯಮಗಳಿಗೆ ಧನ್ಯವಾದ ತಿಳಿಸಿದ ಅವರು, ನನ್ನ ಸಿನಿಮಾ ಮಾತ್ರವಲ್ಲ. ತೆಲುಗು ಸಿನಿಮಾಕ್ಕೆ ನೀವು ನೀಡುತ್ತಿರುವ ಬೆಂಬಲಕ್ಕೆ ನನಗೆ ತುಂಬಾ ಖುಷಿಯಾಗುತ್ತಿದೆ. ಕನ್ನಡ ಮೀಡಿಯಾದವರು ನಮ್ಮ ಸಿನಿಮಾಗಳಿಗೂ ತುಂಬಾ ಪ್ರೀತಿಯನ್ನು ಕೊಟ್ಟಿದ್ದೀರಿ ಅದಕ್ಕೆ ನಾನು ಕೃತಜ್ಞತೆಯನ್ನು ತಿಳಿಸುತ್ತೇನೆ ಎಂದು ಸಂತೋಷವನ್ನು ವ್ಯಕ್ತಪಡಿಸಿದರು.

    ನಾನು ಚಿಕ್ಕವಯಸ್ಸಿನಲ್ಲಿ ಬೆಂಗಳೂರಿಗೆ ಬಂದು ನೋಡುತ್ತಿದ್ದಾಗ ಯಾವತ್ತು ನಾನು ಒಂದು ಸಿನಿಮಾವನ್ನು ತೆಗೆಯುತ್ತೇನೆ. ಬೆಂಗಳೂರಿನಲ್ಲಿ ರಿಲೀಸ್ ಮಾಡುತ್ತೇನೆ ಎಂದುಕೊಂಡಿರಲಿಲ್ಲ. ನನ್ನ ಕನಸಿನಲ್ಲಿಯೂ ಈ ಒಂದು ದಿನ ಬರುತ್ತೆ ಎಂದು ನಾನು ಎಂದು ನಾನು ತಿಳಿದುಕೊಂಡಿರಲಿಲ್ಲ. ಕರ್ನಾಟಕ ಜನರು ನಮ್ಮನ್ನು ಒಪ್ಪಿಕೊಳ್ಳುತ್ತಾರೆ ಎಂದು ನಾನು ಕನಸಿನಲ್ಲಿಯೂ ತಿಳಿದುಕೊಂಡಿರಲಿಲ್ಲ. ನಿಮ್ಮ ಪ್ರೀತಿಗೆ ಧನ್ಯವಾದಗಳು ಎಂದು ತಿಳಿಸಿದರು

    ರಶ್ಮಿಕಾ ಮಂದಣ್ಣ ಅವರ ಬಗ್ಗೆ ಮಾತನಾಡಿದ ಅವರು, ರಶ್ಮಿಕಾ ಅವರು ನನಗೆ ತುಂಬಾ ಇಷ್ಟವಾದ ಹುಡುಗಿ. ನ್ಯಾಷನಲ್ ಕ್ರಶ್ ಆಗಿರುವ ಅವರು ಕನ್ನಡ ಸಿನಿಮಾದಲ್ಲಿ ಮಾತ್ರವಲ್ಲ ತೆಲುಗು, ತೆಮಿಳು, ಹಿಂದಿ ಎಲ್ಲ ಭಾಷೆಯ ಸಿನಿಮಾಗಳಲ್ಲಿಯೂ ನಟಿಸುತ್ತಿದ್ದಾರೆ. ಇದು ಎಲ್ಲ ಕನ್ನಡಿಗರು ಹೆಮ್ಮೆ ಪಡುವಂತಹ ವಿಷಯವಾಗಿದೆ. ಕರ್ನಾಟಕವನ್ನು ರಶ್ಮಿಕಾ ಎಲ್ಲ ಭಾಷೆಗಳಲ್ಲಿಯೂ ಪ್ರತಿಬಿಂಬಿಸುತ್ತಿದ್ದಾರೆ. ಅವರು ಇಷ್ಟು ದೊಡ್ಡ ನಟಿಯಾಗಿರುವುದು ಎಲ್ಲ ಕನ್ನಡಿಗರು ಹೆಮ್ಮೆ ಪಡುವಂತಹ ವಿಷಯವಾಗಿದೆ. ಏಕೆಂದರೆ ಯಾರಾದರೂ ಚೆನ್ನಾಗಿ ಕೆಲಸ ಮಾಡುತ್ತಿದ್ದಾರೆ ಅವರನ್ನು ನೋಡಿ ಆ ಹುಡುಗಿಯ ಊರು ಯಾವುದು ಎಂದು ಕೇಳುತ್ತಾರೆ. ಅಂತಹ ಕೆಲಸವನ್ನು ರಶ್ಮಿಕಾ ಮಾಡುತ್ತಿದ್ದಾರೆ ಎಂದು ಹೊಗಳಿದರು.

    ಈ ಸಿನಿಮಾವನ್ನು ಕನ್ನಡದಲ್ಲಿ ಡಬ್ಬಿಂಗ್ ಮಾಡಿದ ಎಲ್ಲ ಕಲಾವಿದರಿಗೂ ನನ್ನ ಧನ್ಯವಾದಗಳು. ನಮ್ಮ ನಿರ್ದೇಶಕರು ಸುಕುಮಾರ್ ಅವರಿಗೆ ಎಷ್ಟು ಧನ್ಯವಾದ ಹೇಳಿದರು ಅದು ಕಮ್ಮಿಯಾಗುತ್ತೆ. ಇಂತಹ ಅದ್ಭುತ ಪಾತ್ರವನ್ನು ನನಗೆ ನೀಡಿದ್ದಕ್ಕೆ ನಿಮಗೆ ತುಂಬು ಹೃದಯದ ಧನ್ಯವಾದಗಳು. ಇಡೀ ‘ಪುಷ್ಪ’ ತಂಡಕ್ಕೆ ಧನ್ಯವಾದಗಳು ಎಂದರು. ಇದನ್ನೂ ಓದಿ: ಶ್ರೀನಿವಾಸ್ ಪೂಜಾರಿ ಒಂದು ರೂಪಾಯಿ ಖರ್ಚು ಮಾಡದೇ ಗೆದ್ದಿದ್ದಾರೆ: ಬಿ.ಎಲ್.ಸಂತೋಷ್

    ಕನ್ನಡದ ಯುವರತ್ನ ಪುನೀತ್ ರಾಜ್‍ಕುಮಾರ್ ಅವರು ಸಾವನ್ನಪ್ಪಿದ್ದಾಗ ನಾನು ಇಲ್ಲಿಗೆ ಬರಲು ಸಾಧ್ಯವಾಗಿರಲಿಲ್ಲ. ಆದರೆ ಈಗ ಎಲ್ಲರೂ ‘ಪುಷ್ಟ’ ಸಿನಿಮಾಗಾಗಿ ಇಲ್ಲಿಗೆ ಬಂದಿದ್ದಾರೆ ಎಂದು ತಿಳಿದುಕೊಂಡಿರುತ್ತಾರೆ. ಆದರೆ ನಾನು ಈ ಸಿನಿಮಾ ರಿಲೀಸ್ ಆದ ಮೇಲೆ ಮತ್ತೆ ಇಲ್ಲಿಗೆ ಬರುತ್ತೇನೆ. ಇಲ್ಲಿ ಬಂದು ಅವರ ಕುಟುಂಬವನ್ನು ಭೇಟಿ ಮಾಡುತ್ತೇನೆ ಎಂದು ತಿಳಿಸಿದರು.

  • ದುಬಾರಿ ಕಾರ್ ಮಾಲೀಕನಾದ ನಟ ಪ್ರಭಾಸ್

    ದುಬಾರಿ ಕಾರ್ ಮಾಲೀಕನಾದ ನಟ ಪ್ರಭಾಸ್

    ಬೆಂಗಳೂರು: ಟಾಲಿವುಡ್ ನಟ ಪ್ರಭಾಸ್ ಮನೆಗೆ ಇದೀಗ ಹೊಸ ಅತಿಥಿಯ ಆಗಮನವಾಗಿದೆ. ದುಬಾರಿ ಬೆಲೆಯ ಲ್ಯಾಂಬೋರ್ಗಿನಿ ಕಾರನ್ನು ಪ್ರಭಾಸ್ ಖರೀದಿ ಮಾಡಿ ಸುದ್ದಿಯಾಗಿದ್ದಾರೆ.

    ಹೌದು ಬಾಹುಬಲಿ ಖ್ಯಾತಿಯ ಪ್ರಭಾಸ್ ಕಿತ್ತಳೆ ಬಣ್ಣದ ಹೊಸ ಕಾರ್ ಖರೀದಿಸಿದ್ದಾರೆ. ಭಾರತದಲ್ಲಿ ಲ್ಯಾಂಬೋರ್ಗಿನಿ ಅವೆನ್ಟೆಡೊರ್ ರೋಡ್‍ಸ್ಟರ್ ಬೆಲೆ 5.6 ಕೋಟಿ ರೂಪಾಯಿ. ಪ್ರಭಾಸ್ ದುಬಾರಿ ಬೆಲೆಯ ಕಾರ್ ಖರೀದಿಸುವ ಮೂಲಕ ಸುದ್ದಿಯಾಗಿದ್ದಾರೆ.

    ಪ್ರಭಾಸ್ ಬಳಿ ಈಗಾಗಲೇ ಹಲವು ಐಷಾರಾಮಿ ಕಾರುಗಳಿವೆ. ಪ್ರಭಾಸ್ ಬಳಿ ಈಗಾಗಲೇ ಬಿಎಂಡಬ್ಲ್ಯೂ, ಮರ್ಸಿಡೀಸ್, ಆಡಿ ಕ್ಯೂ5 ಕಾರ್‍ಗಳಿವೆ. ಇದೀಗ ಈ ಸಾಲಿಗೆ ಲ್ಯಾಂಬೋರ್ಗಿನಿ ಕೂಡ ಸೇರಿದೆ. ಪ್ರಭಾಸ್ ಅವರ ಹೊಸ ಕಾರಿನ ಫೋಟೋ ಮತ್ತು ವೀಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿವೆ.

    ಬಿಲ್ಲಾ, ಡಾಲಿರ್ಂಗ್, ಮಿರ್ಚಿ, ಬಾಹುಬಲಿ, ಬಾಹುಬಲಿ 2, ಸಾಹೋ ಚಿತ್ರಗಳಲ್ಲಿ ಅಭಿನಯಿಸಿ ಪ್ರೇಕ್ಷಕರ ಮನ ಗೆದ್ದಿದ್ದಾರೆ. ಬ್ಯಾಕ್ ಟು ಬ್ಯಾಕ್ ಸೂಪರ್ ಹಿಟ್ಸ್ ಕೊಟ್ಟಿರುವ ನಟ ಪ್ರಭಾಸ್ ಭಾರತದಲ್ಲಿ ಅತಿ ಹೆಚ್ಚು ಸಂಭಾವನೆ ಪಡೆಯುವ ನಟರ ಪೈಕಿ ಒಬ್ಬರಾಗಿದ್ದಾರೆ. ಸಿನಿಮಾಗಳ ಮೂಲಕವಾಗಿ ಸುದ್ದಿಯಾಗುತ್ತಿದ್ದ ನಟ ಇದೀಗ ಐಶಾರಾಮಿ ಕಾರ್ ಕೊಳ್ಳುವ ಮೂಲಕವಾಗಿ ಸುದ್ದಿಯಾಗಿದ್ದಾರೆ.

  • ತೆಲುಗು ಸಿನಿಮಾ ಮಾಡಿ ಎಂದು ಮನವಿ ಮಾಡಿಕೊಂಡ ಅಭಿಮಾನಿಗೆ ಉತ್ತರ ಕೊಟ್ಟ ಕಿಚ್ಚ

    ತೆಲುಗು ಸಿನಿಮಾ ಮಾಡಿ ಎಂದು ಮನವಿ ಮಾಡಿಕೊಂಡ ಅಭಿಮಾನಿಗೆ ಉತ್ತರ ಕೊಟ್ಟ ಕಿಚ್ಚ

    ಬೆಂಗಳೂರು: ಸ್ಯಾಂಡಲ್ ವುಡ್ ನ ಕಿಚ್ಚ ಸುದೀಪ್ ಅವರಿಗೆ ಕರ್ನಾಟಕದಲ್ಲಿ ಮಾತ್ರವಲ್ಲ ತಮಿಳುನಾಡು, ಆಂಧ್ರ ಮತ್ತು ತೆಲಂಗಾಣಗಳಲ್ಲೂ ಅಭಿಮಾನಿಗಳಿದ್ದಾರೆ.

    ಸುದೀಪ್ ತಮಿಳು ಮತ್ತು ತೆಲುಗು ಭಾಷೆಯಲ್ಲೂ ಅಭಿನಯಿಸಿ ಅಭಿಮಾನ ಗಳಿಸಿದ್ದಾರೆ. ಸಾಮಾನ್ಯವಾಗಿ ಸುದೀಪ್ ಅವರ ಸಿನಿಮಾ ಬಂದಿಲ್ಲವೆಂದರೆ ಸ್ಯಾಂಡಲ್ ವುಡ್ ಅಭಿಮಾನಿಗಳು ಕಿಚ್ಚನನ್ನ ಮಿಸ್ ಮಾಡಿಕೊಳ್ಳುತ್ತಾರೆ. ಆದರೆ ತೆಲುಗು ಫ್ಯಾನ್ಸ್ ಕೂಡ ಸುದೀಪ್ ಅವರನ್ನ ಮಿಸ್ ಮಾಡಿಕೊಳ್ಳುತ್ತಿದ್ದಾರೆ ಎಂಬುದಕ್ಕೆ ಸಾಕ್ಷಿ ಸಿಕ್ಕಿದೆ.

    ತೆಲುಗು ಅಭಿಮಾನಿಯೊಬ್ಬ ಕಿಚ್ಚ ಅವರಿಗೆ ಟ್ವೀಟ್ ಮಾಡಿದ್ದು, “ಸುದೀಪ್ ಅಣ್ಣ ನಾನು ಆಂಧ್ರದವನು. ನಿಮ್ಮ ಸಿನಿಮಾಗಳನ್ನ ಹೆಚ್ಚು ಇಷ್ಟ ಪಡುತ್ತೀನಿ. ಅದರಲ್ಲೂ ‘ಹೆಬ್ಬುಲಿ’ ಅಂದರೆ ನನಗೆ ತುಂಬಾ ಇಷ್ಟ. ದಯವಿಟ್ಟು ತೆಲುಗು ಸಿನಿಮಾ ಮಾಡಿ. ನಾವು ನಿಮ್ಮನ್ನ ಮತ್ತು ನಿಮ್ಮ ಧ್ವನಿಯನ್ನ ಹೆಚ್ಚು ಮಿಸ್ ಮಾಡಿಕೊಳ್ಳುತ್ತಿದ್ದೇವೆ” ಎಂದು ಕೇಳಿಕೊಂಡಿದ್ದಾರೆ.

    ಇದಕ್ಕೆ ಪ್ರತಿಕ್ರಿಯಿಸಿರುವ ಸುದೀಪ್ ”ಒಳ್ಳೆ ಸ್ಕ್ರಿಪ್ಟ್ ಸಿಕ್ಕರೆ ಖಂಡಿತವಾಗಿಯೂ ತೆಲುಗು ಸಿನಿಮಾ ಮಾಡುತ್ತೇನೆ” ಎಂದು ಅಭಿಮಾನಿಯ ಮನವಿಗೆ ಉತ್ತರಿಸಿದ್ದಾರೆ.

    ಸುದೀಪ್ ಎಸ್.ಎಸ್ ರಾಜಮೌಳಿ ನಿರ್ದೇಶನದ ‘ಈಗ’ ಚಿತ್ರದ ಮೂಲಕ ತೆಲುಗು ಸಿನಿಮಾರಂಗ ಪ್ರವೇಶಿಸಿದ್ದರು. ನಂತರ ‘ಬಾಹುಬಲಿ ದಿ ಬಿಗಿನಿಂಗ್’ ಚಿತ್ರದಲ್ಲಿ ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ‘ಕೋಟಿಗೊಬ್ಬ-2’ ಸಿನಿಮಾ ತೆಲುಗಿನಲ್ಲಿ ಡಬ್ಬಿಂಗ್ ಆಗಿ ಯಶಸ್ಸು ಕಂಡಿತ್ತು. ಈಗ ಮೆಗಾಸ್ಟಾರ್ ಚಿರಂಜೀವಿ ಅವರ 151ನೇ ಚಿತ್ರ ‘ಸೈರಾ ನರಸಿಂಹ ರೆಡ್ಡಿ’ಯಲ್ಲಿ ಸುದೀಪ್ ಅಭಿನಯಿಸುತ್ತಿದ್ದಾರೆ.