Tag: temple run

  • ಸಿಎಂ ಕುರ್ಚಿ ಕದನದ ಮಧ್ಯೆ ಡಿಕೆಶಿ ಟೆಂಪನ್‌ ರನ್‌ – ನಾಗೇಶ್ವರ ದೇವಾಲಯಕ್ಕೆ ದಿಢೀರ್ ಭೇಟಿ

    ಸಿಎಂ ಕುರ್ಚಿ ಕದನದ ಮಧ್ಯೆ ಡಿಕೆಶಿ ಟೆಂಪನ್‌ ರನ್‌ – ನಾಗೇಶ್ವರ ದೇವಾಲಯಕ್ಕೆ ದಿಢೀರ್ ಭೇಟಿ

    ಹಾಸನ: ಸಿಎಂ ಕುರ್ಚಿ ಕದನದ ಮಧ್ಯೆ ಡಿಸಿಎಂ ಡಿ.ಕೆ ಶಿವಕುಮಾರ್‌ (D K Shivakumar) ಅವರು ಟೆಂಪಲ್‌ ರನ್‌ ಶುರುಮಾಡಿದ್ದು, ಬುಧವಾರ ಸಂಜೆ ದಿಢೀರ್‌ ನಾಗರನವಿಲೆಯ ನಾಗೇಶ್ವರ ದೇವಾಲಯಕ್ಕೆ (Nageshwara Temple) ಭೇಟಿ ನೀಡಿದ್ದಾರೆ.

    ಹಾಸನ (Hassan) ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ನಾಗರನವಿಲೆ (Nagaranavile) ಗ್ರಾಮದಲ್ಲಿರುವ ನಾಗೇಶ್ವರ ದೇವಸ್ಥಾನಕ್ಕೆ ಡಿಕೆಶಿ ಭೇಟಿ ಕೊಟ್ಟಿದ್ದಾರೆ. ವಿಚಾರ ತಿಳಿದು ಸ್ಥಳಕ್ಕೆ ಆಗಮಿಸಿದ ಸ್ಥಳೀಯ ಶಾಸಕ ಸಿ.ಎನ್.ಬಾಲಕೃಷ್ಣ, ಡಿ.ಕೆ ಶಿವಕುಮಾರ್‌ ಅವರನ್ನು ದೇವಾಲಯಕ್ಕೆ ಕರೆದೊಯ್ದರು. ಇದನ್ನೂ ಓದಿ: ಇಂದು ಜಾಮೀನು ಭವಿಷ್ಯ; ಕೋರ್ಟ್‌ ತೀರ್ಪಿಗೂ ಮುನ್ನವೇ ರಾಯರ ಮೊರೆ ಹೋದ ಪವಿತ್ರಾಗೌಡ

    ಬೆಂಗಾವಲು ವಾಹನವಿಲ್ಲದೆ ಡಿಕೆಶಿ ದೇವಾಲಯಕ್ಕೆ ಭೇಟಿ ನೀಡಿದ್ದಾರೆ. ಇದೀಗ ಡಿ.ಕೆ.ಶಿವಕುಮಾರ್ ಅವರು ನಾಗರನವಿಲೆ ದೇವಸ್ಥಾನ ಭೇಟಿ ನೀಡಿರುವುದು ಎಲ್ಲರ ಕುತೂಹಲ ಕಾರಣವಾಗಿದೆ.

  • ತವರು ಜಿಲ್ಲೆಯಲ್ಲಿ ಟೆಂಪಲ್ ರನ್ – ರೇವಣ್ಣ ಜೊತೆಗೂಡಿ ಮನೆದೇವರ ದರ್ಶನ ಪಡೆದ ಕುಮಾರಸ್ವಾಮಿ

    ತವರು ಜಿಲ್ಲೆಯಲ್ಲಿ ಟೆಂಪಲ್ ರನ್ – ರೇವಣ್ಣ ಜೊತೆಗೂಡಿ ಮನೆದೇವರ ದರ್ಶನ ಪಡೆದ ಕುಮಾರಸ್ವಾಮಿ

    ಹಾಸನ: ಹೆಚ್‌.ಡಿ ಕುಮಾರಸ್ವಾಮಿ (HD Kumaraswamy) ಅವರಿಂದು ತವರು ಜಿಲ್ಲೆಗೆ ಆಗಮಿಸಿದ್ದು, ಕೇಂದ್ರ ಸಚಿವರಾದ ಬಳಿಕ ಮೊದಲಬಾರಿಗೆ ಮನೆ ದೇವರ ದರ್ಶನ ಪಡೆದು ಪೂಜೆ ಸಲ್ಲಿಸಿದ್ದಾರೆ.

    ಚನ್ನರಾಯಪಟ್ಟಣ ತಾಲೂಕಿನ ಯಲಿಗೂರು ಗ್ರಾಮದಲ್ಲಿರುವ ದೇವೀರಮ್ಮ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಬಳಿಕ ಹೊಳೆನರಸೀಪುರ ತಾಲ್ಲೂಕಿನ, ಮಾವಿನಕೆರೆಯ ಶ್ರೀ ರಂಗನಾಥ ಸ್ವಾಮಿ ದೇವಾಲಯಕ್ಕೆ ಆಗಮಿಸಿದ್ದಾರೆ. ದೇವಾಲಯದಲ್ಲಿ ನೆಲೆದ ಮೇಲೆ ಕುಳಿತು ಪೂಜೆ ಸಲ್ಲಿಸಿದ್ದಾರೆ. ಇದನ್ನೂ ಓದಿ: 12 ವರ್ಷಗಳ ಬಳಿಕ ಉತ್ತರ ಪ್ರದೇಶದಲ್ಲಿ ಮಹಾ ಕುಂಭಮೇಳ – ಸಿದ್ಧತೆ ಹೇಗಿದೆ? ವಿಶೇಷತೆಗಳೇನು?

    ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ, ಚೆನ್ನಮ್ಮ, ಪುತ್ರ, ಸೊಸೆ, ಮೊಮ್ಮಗನ ಹೆಸರಿನಲ್ಲಿ ಅರ್ಚನೆ ಮಾಡಿಸಿದ್ದಾರೆ. ಇದೇ ವೇಳೆ ಹೆಚ್‌ಡಿಕೆ ಸಹೋದರನೂ ಆಗಿರುವ ಮಾಜಿ ಸಚಿವ ಹೆಚ್.ಡಿ ರೇವಣ್ಣ (HD Revanna), ಶಾಸಕ ಸಿ.ಎನ್ ಬಾಲಕೃಷ್ಣ ಜೊತೆಯಾಗಿದ್ದಾರೆ. ಇದನ್ನೂ ಓದಿ: Brazil | ಮನೆ, ಮಳಿಗೆಗಳಿಗೆ ಅಪ್ಪಳಿಸಿದ ಲಘು ವಿಮಾನ – ಎಲ್ಲಾ 10 ಮಂದಿ ಪ್ರಯಾಣಿಕರು ದುರ್ಮರಣ

    ಹೆಚ್‌ಡಿಕೆ ಜೊತೆಗೆ ದೇವಸ್ಥಾನಕ್ಕೆ ಭೇಟಿ ನೀಡಿದ ರೇವಣ್ಣ, ಪತ್ನಿ ಭವಾನಿ ರೇವಣ್ಣ, ಪುತ್ರರಾದ ಸೂರಜ್, ಪ್ರಜ್ವಲ್ ಹೆಸರಿನಲ್ಲಿ ಅರ್ಚನೆ ಮಾಡಿಸಿದ್ದಾರೆ. ಸಂಕಷ್ಟಗಳು ದೂರಾಗಲೆಂದು ದೇವರಿಗೆ ಪ್ರಾರ್ಥನೆ ಸಲ್ಲಿಸಿದ್ದಾರೆ. ಇದನ್ನೂ ಓದಿ: ಸುವರ್ಣಸೌಧದಲ್ಲಿ ಸಿ.ಟಿ ರವಿ ಮೇಲೆ ಹಲ್ಲೆಗೆ ಯತ್ನ ಪ್ರಕರಣ – ಹೆಬ್ಬಾಳ್ಕರ್‌ ಆಪ್ತ ಸೇರಿ 10 ಜನರ ವಿರುದ್ಧ FIR

  • ಬಾಬ್ ಕಟ್ ಮಾಡಿಸಿಕೊಂಡು ಬಾಲಿಗೆ ಹಾರಿದ ನಟಿ ಸಮಂತಾ

    ಬಾಬ್ ಕಟ್ ಮಾಡಿಸಿಕೊಂಡು ಬಾಲಿಗೆ ಹಾರಿದ ನಟಿ ಸಮಂತಾ

    ನಾರೋಗ್ಯದ ಕಾರಣದಿಂದಾಗಿ ಸಿನಿಮಾ ರಂಗಕ್ಕೆ ಅಲ್ಪವಿರಾಮ ಹೇಳಿರುವ ನಟಿ ಸಮಂತಾ (Samantha), ಅಮೆರಿಕಾಗೆ ಹಾರುವ ಮುನ್ನ ಟೆಂಪಲ್ ರನ್ (Temple Run) ಮಾಡಿದ್ದರು. ಸ್ವಲ್ಪ ದಿನಗಳ ಕಾಲ ಸದ್ಗುರು ಆಶ್ರಮದಲ್ಲೂ ಕಾಣಿಸಿಕೊಂಡಿದ್ದರು. ಇದೀಗ ಬಾಬ್ ಕಟ್ (Bob Cut) ಮಾಡಿಕೊಂಡು ಬಾಲಿಗೆ (Bali)  ಹಾರಿದ್ದಾರೆ. ಅಲ್ಲಷ್ಟು ದಿನಗಳನ್ನು ಕಳೆದು ಅವರು ಅಮೆರಿಕಾಗೆ ಹಾರಲಿದ್ದಾರೆ ಎಂದು ಹೇಳಲಾಗುತ್ತಿದೆ.

    ಇತರ ಭಕ್ತಾಧಿಗಳ ಜೊತೆಗೆ ನೆಲಹಾಸಿನ ಮೇಲೆ ಕುಳಿತು ಧ್ಯಾನ ಮಾಡುತ್ತಿರುವ ತಮ್ಮ ಚಿತ್ರವನ್ನು ಸಮಂತಾ ಹಂಚಿಕೊಂಡಿದ್ದಾರೆ. ಕೆಲವು ಹೊತ್ತಿಗೆ ಮುಂಚೆ ಏನಾದರೂ ತಿರುವುತ್ತಾ, ಮುರಿಯುತ್ತಾ, ಮೈಯಿ ಕೆರೆಯುತ್ತಾ, ಯೋಚನೆಗಳ ಪ್ರವಾಹಗಳಲ್ಲಿ ಇರುತ್ತಿದ್ದೆ. ಇವುಗಳನ್ನು ಮಾಡದೆ ಸುಮ್ಮನೆ ಕೂರುವುದು ಅಸಾಧ್ಯ ಎಂಬ ಪರಿಸ್ಥಿತಿಯಲ್ಲಿದ್ದೆ. ಆದರೆ ಇಂದು ಸತತವಾಗಿ ಧ್ಯಾನಮಗ್ನಳಾಗಿದ್ದೆ. ಧ್ಯಾನ ನನ್ನ ಶಕ್ತಿ ಎಂದು ಅರಿತುಕೊಂಡೆ. ಧ್ಯಾನ ನನ್ನ ಸಂವಹನ, ನನಗೆ ಸ್ಪಷ್ಟನೆಯನ್ನು ನೀಡುತ್ತದೆ ಎಂದು ಅರಿತುಕೊಂಡೆ. ಇಷ್ಟು ಸರಳವಾದ ಕಾರ್ಯವೊಂದರಲ್ಲಿ ಇಷ್ಟು ಶಕ್ತಿ ಅಡಗಿರುತ್ತದೆ ಎಂದು ತಿಳಿದಿರಲಿಲ್ಲ ಎಂದು ಸಮಂತಾ ಬರೆದುಕೊಂಡಿದ್ದಾರೆ.  ಇದನ್ನೂ ಓದಿ:ಮನೀಷ್ ಮಲ್ಹೋತ್ರಾ ನಿರ್ದೇಶನದಲ್ಲಿ ಮೀನಾ ಕುಮಾರಿ ಬಯೋಪಿಕ್- ಕೃತಿ ಸನೋನ್ ನಾಯಕಿ?

    ವೈಯಕ್ತಿಕ ಜೀವನದ ಅದ್ಯಾವ ವಿಷಯವನ್ನೂ ಸಮಂತಾ ಮುಚ್ಚಿಡೋದೇ ಇಲ್ಲ. ಇದೀಗ ಶೂಟಿಂಗ್ ಇಲ್ಲದೇ ಇದ್ದಾಗ ದಿನಚರಿ ಹೇಗಿರುತ್ತೆ ಅನ್ನೋದ್ರ ಬಗ್ಗೆ ಸಮಂತಾ ಮನಬಿಚ್ಚಿದ್ದಾರೆ. ಬೆಳಗ್ಗೆ ಬೇಗ ಏಳುವುದು, ಬಳಿಕ ರುದ್ರಾಕ್ಷಿ ಹಿಡಿದು ಧ್ಯಾನ ಮಾಡುವುದು, ಬಳಿಕ ಯೋಗ. ಹೀಗೆ ಕಟ್ಟುನಿಟ್ಟಿನ ದಿನಚರಿಯನ್ನು ಅವರು ಅನುಸರಿಸುತ್ತಾರೆ.

     

    ಸಮಂತಾ ಅವರು ಸಿಟಾಡೆಲ್, ವಿಜಯ್ ದೇವರಕೊಂಡ ಜೊತೆಗಿನ ‘ಖುಷಿ’ (Kushi) ಸಿನಿಮಾವನ್ನು ಮುಗಿಸಿಕೊಟ್ಟಿದ್ದಾರೆ. ಎರಡು ಪ್ರಾಜೆಕ್ಟ್‌ನಲ್ಲೂ ಭಿನ್ನವಾಗಿ ಕಾಣಿಸಿಕೊಂಡಿದ್ದಾರೆ. ನಾಗಚೈತನ್ಯ ಜೊತೆಗಿನ ಡಿವೋರ್ಸ್, ಅನಾರೋಗ್ಯದ ಸಮಸ್ಯೆ ಇರೋದ್ರಿಂದ ಇದೆಲ್ಲದರಿಂದ ಅವರಿಗೆ ಬಿಡುವು ಬೇಕಾಗಿದೆ. ಆರೋಗ್ಯ ಮತ್ತು ಮನಸ್ಸಿಗೆ ರಿಲಾಕ್ಸೇಷನ್ ಬೇಕಾಗಿದೆ. ಹಾಗಾಗಿ ಹಲವಾರು ಕಾರ್ಯಕ್ರಮಗಳಲ್ಲಿ ಅವರು ಬ್ಯುಸಿಯಾಗಿರುತ್ತಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ‘ಜೊತೆ ಜೊತೆಯಲಿ’ ಧಾರಾವಾಹಿಯಿಂದ ಹೊರಬಿದ್ದ ನಂತರ ಅನಿರುದ್ಧ ಟೆಂಪಲ್ ರನ್

    ‘ಜೊತೆ ಜೊತೆಯಲಿ’ ಧಾರಾವಾಹಿಯಿಂದ ಹೊರಬಿದ್ದ ನಂತರ ಅನಿರುದ್ಧ ಟೆಂಪಲ್ ರನ್

    ಜೊತೆ ಜೊತೆಯಲಿ ಧಾರಾವಾಹಿಯಿಂದ ಅನಿರುದ್ಧ ಅವರನ್ನು ಹೊರ ಹಾಕಿದ ನಂತರ ಅವರು ನೋವಿನಲ್ಲಿರುವುದನ್ನು ನಾನಾ ರೀತಿಯಲ್ಲಿ ತೋರಿಸಿಕೊಳ್ಳುತ್ತಿದ್ದಾರೆ. ದಿನವೂ ಅಭಿಮಾನಿಗಳಿಗೆ ಸೋಷಿಯಲ್ ಮೀಡಿಯಾ ಮೂಲಕ ಗುಡ್ ಮಾರ್ನಿಂಗ್ ಹೇಳುವಾಗ ಜೊತೆ ಜೊತೆಯಲಿ ಧಾರಾವಾಹಿಯ ಫೋಟೋಗಳನ್ನೇ ಬಳಸುತ್ತಿದ್ದಾರೆ. ಅಷ್ಟರ ಮಟ್ಟಿಗೆ ಆ ಧಾರಾವಾಹಿಯನ್ನು ಅವರು ಮಿಸ್ ಮಾಡಿಕೊಳ್ಳುತ್ತಿದ್ದಾರೆ.

    ಇದೀಗ ಅನಿರುದ್ಧ ಅವರು ಹಲವು ದೇವಸ್ಥಾನಗಳಿಗೆ ಭೇಟಿ ನೀಡುತ್ತಿದ್ದು, ಆಯಾ ದೇವಸ್ಥಾನಗಳ ಫೋಟೋಗಳನ್ನೂ ಅವರು ಸೋಷಿಯಲ್ ಮೀಡಿಯಾದಲ್ಲಿ ಹಾಕುತ್ತಿದ್ದಾರೆ. ಹಣೆಗೆ ಭಂಡಾರ ಹಚ್ಚಿದ್ದು ನೋಡಿದರೆ ಅವರು ಸವದತ್ತಿ ಯಲ್ಲಮ್ಮನ ದೇವಸ್ಥಾನಕ್ಕೆ ಹೋಗಿದ್ದಾರೆ ಎಂದು ಹೇಳಲಾಗುತ್ತಿದೆ. ಅಲ್ಲದೇ, ಸಾಯಿಬಾಬಾ ಫೋಟೋ ಮುಂದಿರ ಫೋಟೋವನ್ನೂ ಅವರು ಹಂಚಿಕೊಂಡಿದ್ದಾರೆ. ಇದನ್ನೂ ಓದಿ:ನಾನು ಅಂಬರೀಶ್ ಅಣ್ಣನ ಅಭಿಮಾನಿ, ಅವರ ಮಗನಿಗೆ ಸಿನಿಮಾ ಮಾಡುತ್ತಿರುವುದು ಹೆಮ್ಮೆ : ನಿರ್ದೇಶಕ ಮಹೇಶ್ ಕುಮಾರ್

    ಜೊತೆ ಜೊತೆಯಲಿ ಧಾರಾವಾಹಿಯಿಂದ ಅನಿರುದ್ಧ ಹೊರ ಬಂದ ನಂತರ ಸೀರಿಯಲ್ ನಲ್ಲಿ ಹಲವು ಬದಲಾವಣೆಗಳನ್ನು ಮಾಡಿಕೊಳ್ಳುತ್ತಿದ್ದು, ಅವೆಲ್ಲವನ್ನೂ ಸಸ್ಪೆನ್ಸ್ ಆಗಿಯೇ ಇಡುತ್ತಿದೆ ತಂಡ. ಅನಿರುದ್ಧ ನಿರ್ವಹಿಸುತ್ತಿದ್ದ ಆರ್ಯವರ್ಧನ್ ಪಾತ್ರದ ಬದಲು ಹೊಸದೊಂದು ಪಾತ್ರ ತರಲಾಗುತ್ತಿದೆ ಎಂದು ಹೇಳಲಾಗುತ್ತಿದ್ದು, ಆ ಪಾತ್ರವನ್ನು ಹರೀಶ್ ರಾಜ್ ಮಾಡಲಿದ್ದಾರಂತೆ. ಆದರೆ, ಆರ್ಯವರ್ಧನ್ ಪಾತ್ರವನ್ನು ಸದ್ಯಕ್ಕೆ ಯಾರೂ ಮಾಡುವುದಿಲ್ಲ ಎನ್ನಲಾಗುತ್ತಿದೆ.

    Live Tv
    [brid partner=56869869 player=32851 video=960834 autoplay=true]

  • ಪ್ರಧಾನಿ ಮೋದಿ ಲಾಕ್‍ಡೌನ್ ಘೋಷಿಸಿದ ಕೆಲವೇ ಗಂಟೆಗಳಲ್ಲಿ ಅಯೋಧ್ಯೆಗೆ ತೆರಳಿದ ಯೋಗಿ

    ಪ್ರಧಾನಿ ಮೋದಿ ಲಾಕ್‍ಡೌನ್ ಘೋಷಿಸಿದ ಕೆಲವೇ ಗಂಟೆಗಳಲ್ಲಿ ಅಯೋಧ್ಯೆಗೆ ತೆರಳಿದ ಯೋಗಿ

    ಲಕ್ನೋ: ದೇಶದಲ್ಲಿ ಕೊರೊನಾ ಸೋಂಕಿತರ ಹಾಗೂ ಸಾವಿನ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಹೀಗಾಗಿ ಪ್ರಧಾನಿ ನರೇಂದ್ರ ಮೋದಿ ಏಪ್ರಿಲ್ 14ರವರೆಗೆ ದೇಶಾದ್ಯಂತ ಲಾಕ್‍ಡೌನ್ ಘೋಷಿಸಿದ್ದಾರೆ. ಆದರೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಲಾಕ್‍ಡೌನ್ ಘೋಷಿಸಿದ ಕೆಲವೇ ಗಂಟೆಗಳಲ್ಲಿ ಟೆಂಪಲ್ ರನ್ ನಡೆಸಿದ್ದಾರೆ.

    ಯೋಗಿ ಆದಿತ್ಯನಾಥ್ ಅವರು ಮಂಗಳವಾರ ತಡರಾತ್ರಿ ಅಯೋಧ್ಯೆಗೆ ತಲುಪಿದ್ದರು. ಶ್ರೀರಾಮ ಮಂದಿರ ನಿರ್ಮಾಣ ಕಾರ್ಯ ಆರಂಭವಾಗುವ ಹಿನ್ನೆಲೆಯಲ್ಲಿ ಯೋಗಿ ಅವರು ಇಂದು ಬೆಳಗ್ಗೆ ಶ್ರೀರಾಮನ ವಿಗ್ರಹವನ್ನು ತಾತ್ಕಾಲಿಕವಾಗಿ ನಿರ್ಮಿಸಿದ ದೇವಾಲಯಕ್ಕೆ ಸ್ಥಳಾಂತರಗೊಳಿಸಿದರು. ಈ ಕಾರ್ಯಕ್ರಮದಲ್ಲಿ ಸುಮಾರು ಇಪ್ಪತ್ತರಿಂದ ಮೂವತ್ತು ಜನರು ಭಾಗವಹಿಸಿದ್ದರು ಎಂದು ವರದಿಯಾಗಿದೆ.

    ಈ ಕಾರ್ಯಕ್ರಮದ ವೇಳೆ ಯಾವುದೇ ಮಾಧ್ಯಮಗಳಿಗೆ ಅವಕಾಶ ನೀಡಿರಲಿಲ್ಲ. ಆದರೆ ಸಾಮಾಜಿಕ ಜಾಲತಾಣದಲ್ಲಿ ಕೆಲವು ವಿಡಿಯೋ ಹಾಗೂ ಫೋಟೋಗಳು ಹರಿದಾಡುತ್ತಿವೆ. ಅಷ್ಟೇ ಅಲ್ಲದೆ ಸಿಎಂ ಕೆಲವು ಫೋಟೋಗಳನ್ನು ಟ್ವೀಟ್ ಮಾಡಿದ್ದಾರೆ. ಕಾರ್ಯಕ್ರಮದಲ್ಲಿ ಸಿಎಂ ಜೊತೆಗೆ ಅಯೋಧ್ಯೆಯ ಜಿಲ್ಲಾಧಿಕಾರಿ, ಪೊಲೀಸ್ ಮುಖ್ಯಸ್ಥರು ಸೇರಿದಂತೆ ಸರ್ಕಾರಿ ಅಧಿಕಾರಿಗಳು ಉಪಸ್ಥಿತರಿದ್ದರು. ಆದರೆ ಯೋಗಿ ಆದಿತ್ಯನಾಥ್ ಸೇರಿದಂತೆ ಕೆಲವರು ಮಾಸ್ಕ್ ಕೂಡ ಧರಿಸಿರಲಿಲ್ಲ.

    ಪ್ರಧಾನಿ ಮೋದಿ ಅವರ ಸೂಚನೆ, ಮನವಿಯನ್ನು ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಗಾಳಿ ತೂರಿಬಿಡ್ರಾ? ಇಂತಹ ಗಂಭೀರ ಪರಿಸ್ಥಿತಿಯಲ್ಲಿ ಶ್ರೀರಾಮನ ಮೂರ್ತಿಯನ್ನು ಸ್ಥಳಾಂತರಿಸವುದು ಅಗತ್ಯವಿತ್ತೇ ಎಂಬ ಪ್ರಶ್ನೆಗಳು ಸಾರ್ವಜನಿಕರಿಂದ ಕೇಳಿ ಬರುತ್ತಿವೆ.

    ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣದ ಕುರಿತು ಏಪ್ರಿಲ್ ತಿಂಗಳ ಮೊದಲ ವಾರದಂದು ಮೊದಲ ಸಭೆ ಕರೆಯಲಾಗಿದೆ. ಈ ಸಭೆಯನ್ನು ದೇವಸ್ಥಾನ ನಿರ್ಮಾಣ ಸಮಿತಿ ಮುಂದೂಡುತ್ತೋ, ಇಲ್ಲವೋ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಸಿಎಂ ಯೋಗಿ ಆದಿತ್ಯನಾಥ್ ಅವರ ಇಂದಿನ ನಡೆಯ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗಿದೆ.

  • ಯುಗಾದಿ ಹಬ್ಬದ ನಿಮಿತ್ತ ಜೊಲ್ಲೆ ದಂಪತಿ ಭರ್ಜರಿ ಪ್ರಚಾರ!

    ಯುಗಾದಿ ಹಬ್ಬದ ನಿಮಿತ್ತ ಜೊಲ್ಲೆ ದಂಪತಿ ಭರ್ಜರಿ ಪ್ರಚಾರ!

    ಬೆಳಗಾವಿ(ಚಿಕ್ಕೋಡಿ): ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅಣ್ಣಾಸಾಹೇಬ ಜೊಲ್ಲೆ ಇಂದು ಭರ್ಜರಿ ಪ್ರಚಾರ ಆರಂಭಿಸಿದ್ದು, ಅವರಿಗೆ ಪತ್ನಿ ನಿಪ್ಪಾಣಿ ಶಾಸಕಿ ಶಶಿಕಲಾ ಜೊಲ್ಲೆ ಕೂಡ ಯುಗಾದಿ ಹಬ್ಬದ ದಿನಂದಂದು ಸಾಥ್ ನೀಡಿದ್ದಾರೆ.

    ಭರ್ಜರಿ ಪ್ರಚಾರದ ನಡುವೆಯೇ ಯುಗಾದಿ ಹಬ್ಬದ ನಿಮಿತ್ತ ಇಂದು ಜೊಲ್ಲೆ ದಂಪತಿ ಟೆಂಪಲ್ ರನ್ ನಡೆಸಿದ್ದಾರೆ. ರಾಯಬಾಗ ತಾಲೂಕಿನ ಸುಪ್ರಸಿದ್ದ ಚಿಂಚಲಿ ಮಾಯಕ್ಕ ದೇವಿ ದೇವಾಲಯ, ಮುಗಳಖೋಡ ಮಠ, ನಿಡಸೋಷಿ ದುರದುಂಡೇಶ್ವರ ಮಠ ಹಾಗೂ ಅಲಕನೂರು ಅರಣ್ಯಸಿದ್ದೇಶ್ವರ ದೇವಾಲಯಕ್ಕೆ ಭೇಟಿ ನೀಡಿ ಜೊಲ್ಲೆ ದಂಪತಿ ದರ್ಶನ ಪಡೆದರು.

    ಶಾಸಕ ಪಿ. ರಾಜೀವ್ ಹಾಗೂ ಕುಡಚಿ ಕ್ಷೇತ್ರದ ಮುಖಂಡರ ಮನೆಗಳಿಗೆ ಭೇಟಿ ನೀಡಿ, ಜೋಡಿಯಾಗಿ ಮತಯಾಚನೆ ನಡೆಸಿದರು. ಅಲ್ಲದೆ ಈ ಬಾರಿ ಚುನಾವಣೆಯಲ್ಲಿ ತಮಗೆ ಬೆಂಬಲ ನೀಡುವಂತೆ ಕ್ಷೇತ್ರದ ಮತದಾರರ ಬಳಿ ಮನವಿ ಮಾಡಿಕೊಂಡರು.

  • ಸಮಸ್ಯೆಗಳಿಗೆ ಸ್ಪಂದಿಸೋದು ಬಿಟ್ಟು, ದೇವಸ್ಥಾನಕ್ಕೆ ಹೋಗೋದನ್ನೆ ಸಿಎಂ ಚಟ ಮಾಡ್ಕೊಂಡಿದ್ದಾರೆ: ಆರ್.ಅಶೋಕ್

    ಸಮಸ್ಯೆಗಳಿಗೆ ಸ್ಪಂದಿಸೋದು ಬಿಟ್ಟು, ದೇವಸ್ಥಾನಕ್ಕೆ ಹೋಗೋದನ್ನೆ ಸಿಎಂ ಚಟ ಮಾಡ್ಕೊಂಡಿದ್ದಾರೆ: ಆರ್.ಅಶೋಕ್

    ಬೆಂಗಳೂರು: ಸಿಎಂ ಕುಮಾರಸ್ವಾಮಿಯವರು ರಾಜ್ಯದ ಸಮಸ್ಯೆಗಳಿಗೆ ಸ್ಪಂದಿಸುವುದುನ್ನು ಬಿಟ್ಟು ದೇವಸ್ಥಾನಗಳಿಗೆ ಹೋಗುವುದನ್ನೇ ಚಟವನ್ನಾಗಿ ಮಾಡಿಕೊಂಡಿದ್ದಾರೆ ಎಂದು ಬಿಜೆಪಿ ಶಾಸಕ ಆರ್.ಅಶೋಕ್ ಹೇಳಿದ್ದಾರೆ.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಕುಮಾರಸ್ವಾಮಿ ಪದೇ ಪದೇ ನಾನು ಜನಗಳಿಂದ ಗೆದ್ದಿಲ್ಲ. ದೇವರ ದಯೆಯಿಂದ ಸಿಎಂ ಆಗಿದ್ದೀನಿ ಎಂದು ಹೇಳುತ್ತಲೇ ಇರುತ್ತಾರೆ. ಹೀಗಾಗಿ ದೇವರ ದಯೆಯಿಂದ ಸಿಎಂ ಆಗಿರುವ ಅವರು ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ಭೇಟಿ ನೀಡಿ ಸಮಸ್ಯೆಗಳಿಗೆ ಸ್ಪಂದಿಸಿಬೇಕಿತ್ತು. ಆದರೆ ಆದನ್ನು ಬಿಟ್ಟು ಟೆಂಪಲ್ ರನ್ ಮಾಡುತ್ತಿದ್ದಾರೆ. ದೇವಸ್ಥಾನಕ್ಕೆ ಹೋಗುವುದು ತಪ್ಪಲ್ಲ, ಆದರೆ ಅವರು ಅದನ್ನೇ ಚಟವನ್ನಾಗಿ ಮಾಡಿಕೊಂಡಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.

    ಮುಖ್ಯಮಂತ್ರಿ ಕುಮಾರಸ್ವಾಮಿಯವರು ಕೇವಲ ದೇವಸ್ಥಾನಗಳನ್ನು ಸುತ್ತುತ್ತಿದ್ದಾರೆಯೇ ಹೊರತು, ಜನಗಳನ್ನು ಸುತ್ತುತ್ತಿಲ್ಲ. ಈಗಾಗಲೇ ಮಂಡ್ಯದಲ್ಲಿ 20 ಜನ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಲ್ಲದೇ, ನಿರಂತರವಾಗಿ ರೈತರ ಸಾವಾಗುತ್ತಿದೆ. ಸರ್ಕಾರ ಸೂತ್ರವಿಲ್ಲದ ಗಾಳಿಪಟದಂತಾಗಿದೆ. ಕರ್ನಾಟಕದ ಜನರೂ ಸಹ ಭ್ರಮ ನಿರಸಗೊಂಡಿದ್ದಾರೆ. ಟೆಂಪಲ್ ರನ್ ಬಿಟ್ಟು, ಮೊದಲು ಜನರ ಬಳಿ ಸಿಎಂ ಕುಮಾರಸ್ವಾಮಿ ರನ್ ಮಾಡಲಿ ಎಂದು ಕಿಡಿಕಾರಿದರು.

    ಇದೇ ವೇಳೆ ಕಾಂಗ್ರೆಸ್ಸಿನ ಆಂತರಿಕ ಜಗಳ, ಬೆಳಗಾವಿ ಕಿತ್ತಾಟ ಹಾಗೂ ಹೊಸಕೋಟೆ ಕಿತ್ತಾಟ ವಿಚಾರದಲ್ಲಿ ಬಿಜೆಪಿಯ ಯಾವುದೇ ಪಾತ್ರ ಇಲ್ಲ ಎಂದು ಸ್ಪಷ್ಟಪಡಿಸಿ, ಅದು ಅವರ ಆತಂರಿಕ ಕಿತ್ತಾಟ ಅಷ್ಟೇ. ನಾವು ಆಪರೇಷನ್ ಕಮಲ ಮಾಡಲ್ಲ. ಆಪರೇಷನ್ ಕಮಲದ ಬಗ್ಗೆ ನಮಗೆ ವಿಶ್ವಾಸ ಇಲ್ಲ. ಅವರೇ ಬಿದ್ದು ಹೋದರೆ, ಏನೂ ಮಾಡುವುದಕ್ಕೆ ಆಗಲ್ಲ. ಆ ಮೇಲೆ ಬೇಕಾದರೆ ಬಿಜೆಪಿ ಸರ್ಕಾರ ರಚನೆಯಾಗುತ್ತೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಬಿಎಸ್‍ವೈ ತಿರುಗಾಡಿದಷ್ಟು ನಾವು ದೇವಸ್ಥಾನಕ್ಕೆ ಹೋಗಿಲ್ಲ: ಟೆಂಪಲ್ ರನ್ ಸಮರ್ಥಿಸಿಕೊಂಡ ರೇವಣ್ಣ

    ಬಿಎಸ್‍ವೈ ತಿರುಗಾಡಿದಷ್ಟು ನಾವು ದೇವಸ್ಥಾನಕ್ಕೆ ಹೋಗಿಲ್ಲ: ಟೆಂಪಲ್ ರನ್ ಸಮರ್ಥಿಸಿಕೊಂಡ ರೇವಣ್ಣ

    ಬೆಂಗಳೂರು: ವಿಪಕ್ಷ ನಾಯಕ ಬಿ.ಎಸ್.ಯಡಿಯೂರಪ್ಪ ತಿರುಗಾಡಿದಷ್ಟು ನಾವು ದೇವಸ್ಥಾನಕ್ಕೆ ಹೋಗಿಲ್ಲ. ಕುಲದೇವರಿಗೆ ಹೋಗಿ ಪೂಜೆ ಮಾಡಬಾರದೇ ಎಂದು ಲೋಕೋಪಯೋಗಿ ಸಚಿವ ರೇವಣ್ಣ ಪ್ರಶ್ನಿಸಿ ಬಿಎಸ್‍ವೈಗೆ ಟಾಂಗ್ ಕೊಟ್ಟಿದ್ದಾರೆ.

    ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಟೆಂಪಲ್ ರನ್ ಕುರಿತು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವರು, ನಮ್ಮ ಮನೆ ದೇವರಿಗೆ ಪೂಜೆ ಮಾಡುವುದು ತಪ್ಪಾ? ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದಾಗ ಜಮ್ಮು-ಕಾಶ್ಮೀರದ ವೈಷ್ಣವಿ ದೇವಿ ದೇವಸ್ಥಾನಕ್ಕೆ ಹೋಗಿದ್ದರು. ನಾವು ಇನ್ನು ಅಲ್ಲಿಯವರೆಗೆ ಹೋಗಿಲ್ಲ, ಇಲ್ಲಿಯ ದೇವರನ್ನು ಅಷ್ಟೇ ನೋಡುತ್ತಿದ್ದೇವೆ. ಅವರಂತೆ ದೇಶದ ಹಾಗೂ ರಾಜ್ಯದ ವಿವಿಧ ದೇವಸ್ಥಾನಗಳಿಗೆ ಹೋಗಿಲ್ಲ ಎಂದು ಕಾಲೆಳೆದರು.

    ಕುಮಾರಸ್ವಾಮಿ 42 ದೇವಸ್ಥಾನಕ್ಕೆ ಹೋಗಿದ್ದರಿಂದಲೇ ರಾಜ್ಯದಲ್ಲಿ ಉತ್ತಮ ಮಳೆ, ಬೆಳೆ, ರೈತರ ಸಾಲ ಮನ್ನಾ ಆಗುತ್ತಿದೆ ಎಂದು ತಮ್ಮ ಟೆಂಪಲ್ ರನ್ ಸಮರ್ಥಿಸಿಕೊಂಡರು.

    ಚುನಾವಣೆ ಬಂದಾಗ ರಾಜಕಾರಣ ಮಾಡೋಣ. ಪ್ರಧಾನಿ ನರೇಂದ್ರ ಮೋದಿಗೆ ಮಧ್ಯಪ್ರವೇಶಿಸಿ ಮಹದಾಯಿ ಸಮಸ್ಯೆಯನ್ನು ಇತ್ಯರ್ಥ ಮಾಡುಬೇಕೆಂದು ರಾಜ್ಯದ 17 ಜನ ಬಿಜೆಪಿ ಸಂಸದರು ಹಾಗೂ ಬಿಎಸ್ ಯಡಿಯೂರಪ್ಪ ಕೇಳಿಕೊಳ್ಳಬೇಕು ಎಂದು ಮನವಿ ಮಾಡಿಕೊಂಡ ಸಚಿವರು, ನಾವು 36.5 ಟಿಎಂಸಿ ನೀರು ಕೇಳಿದ್ದೇವು. ಆದರೆ ನಮಗೆ ಸೂಕ್ತ ನ್ಯಾಯ ಸಿಕ್ಕಿಲ್ಲ ಎಂದು ಪ್ರತಿಕ್ರಿಯಿಸಿದರು.

    ಮಳೆಯಿಂದಾಗಿ ರಸ್ತೆಗಳು ಹಾಳಾಗಿದ್ದು, ಜನ ಸಾಮಾನ್ಯರಿಗೆ ತೊಂದರೆಯಾಗದಂತೆ ಶೀಘ್ರ ಕ್ರಮಕ್ಕೆ ಸೂಚನೆ ನೀಡಲಾಗಿದೆ. ಅಧಿಕಾರಿಗಳು ಸ್ಥಳದಲ್ಲಿಯೇ ಇದ್ದು ಪರಿಸ್ಥಿತಿಯನ್ನು ನಿಭಾಯಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಹಣಕ್ಕೆ ಯಾವುದೇ ಚಿಂತೆಬೇಡವೆಂದು ಅಧಿಕಾರಿಗಳಿಗೆ ತಿಳಿಸಿದ್ದೇನೆ. ರಸ್ತೆಯ ಮೇಲೆ ಗುಡ್ಡ ಕುಸಿದು ಸಂಚಾರಕ್ಕೆ ಅಡ್ಡಿಯಾಗಿದ್ದು, ಪ್ರಯಾಣಿಕರು ಪರದಾಡುವಂತಾಗಿತ್ತು. ಶೀಘ್ರವೇ ರಸ್ತೆ ದುರಸ್ತಿಗೆ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದೇನೆ ಎಂದು ಸಚಿವರು ಹೇಳಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ರಾಹುಲ್ ಗಾಂಧಿ ಟೆಂಪಲ್ ರನ್‍ಗೆ ಎಚ್‍ಡಿಕೆ ವ್ಯಂಗ್ಯ!

    ರಾಹುಲ್ ಗಾಂಧಿ ಟೆಂಪಲ್ ರನ್‍ಗೆ ಎಚ್‍ಡಿಕೆ ವ್ಯಂಗ್ಯ!

    ಬೆಂಗಳೂರು: ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಟೆಂಪಲ್ ರನ್ ಗೆ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರು ಟ್ವಿಟ್ಟರ್ ಹಾಗೂ ಫೇಸ್ ಬುಕ್ ನಲ್ಲಿ ನಯವಾಗಿಯೇ ತಿವಿದಿದ್ದಾರೆ.

    ರಾಹುಲ್ ಗಾಂಧಿ ಮೈಸೂರು ಪ್ರವಾಸದ ವೇಳೆಯಲ್ಲಿಯೇ ಎಚ್‍ಡಿಕೆ ಟಾಂಗ್ ನೀಡಿರುವುದು ವಿಶೇಷ. ಎಚ್.ಡಿ.ಕುಮಾರಸ್ವಾಮಿ ಅವರು ಟ್ವಿಟ್ಟರ್ ಹಾಗೂ ಫೇಸ್ ಬುಕ್ ನಲ್ಲಿ ಶೇರ್ ಮಾಡಿದ ಪೋಸ್ಟ್ ನ ಪೂರ್ಣರೂಪ ಇಲ್ಲಿದೆ.

    ರಾಹುಲ್ ಗಾಂಧಿ ಅವರೇ ಚಾಮುಂಡಿತಾಯಿಯ ನಾಡು ಮೈಸೂರಿಗೆ ಬಂದಿದ್ದೀರಿ. ಚಾಮುಂಡಿ ಸನ್ನಿಧಿಗೆ ಹೊಗುತ್ತಿದ್ದೀರಿ ಎಂದು ತಿಳಿಯಿತು. ನೀವು ನಂಬಿದ ಡೋಂಗಿ ಸಿದ್ಧಾಂತಗಳು ದೇಶಾದ್ಯಂತ ನಿಮಗೆ ಕೊಟ್ಟ ಹೊಡೆತಕ್ಕೆ ನಲುಗಿ ಹಿಂದಿನ ನಾಸ್ತಿಕತೆಯನ್ನು ಬಿಟ್ಟು ಈಗ ಬಿಜೆಪಿಯವರಂತೆ ಕಪಟ ಭಕ್ತಿ ಪ್ರದರ್ಶಿಸುತ್ತಾ #ಟೆಂಪಲ್_ರನ್ ಕೈಗೊಂಡಿದ್ದೀರಿ. ಆಗಲಿ.

    ನನಗಾದ ಶಸ್ತ್ರ ಚಿಕಿತ್ಸೆ ನಂತರ ನಾನು ಪುನಃ ರಾಜಕೀಯ ಆರಂಭಿಸಲು ಪ್ರೇರಣೆ ನೀಡಿದ ಆ ತಾಯಿ ಚಾಮುಂಡಿಯು ನಿಮಗೆ ಅಪ್ರಬುದ್ಧತೆಯನ್ನು ನೀಗಲಿ ಎಂದು ಆಶಿಸುತ್ತೇನೆ.

    ಎಲ್ಲಕ್ಕಿಂತ ಪ್ರಮುಖವಾಗಿ ಕಳೆದ ಬಾರಿ ನೀವು ಕರ್ನಾಟಕಕ್ಕೆ ಬಂದಾಗ ಜೆಡಿಎಸ್ ವಿರುದ್ಧ ಬಾಲಿಶ ಹೇಳಿಕೆ ಕೊಟ್ಟು ಹೋಗಿದ್ದಿರಿ. ಅದಕ್ಕೆ ನಾನು ಸೂಕ್ತ ಉತ್ತರ ಕೊಟ್ಟಿದ್ದೇನೆ. ನಾನು ಹೇಳಿದ್ದಕ್ಕೆ ನಿಮ್ಮ ಪ್ರತಿಕ್ರಿಯೆ ನಿರೀಕ್ಷೆಯಲ್ಲಿದ್ದೇನೆ. ಆ ಮೂಲಕ ಜನರ ಸಂಶಯವನ್ನು ನಾನು ನಿವಾರಿಸಬೇಕಿದೆ. ನೀವು ಉತ್ತರ ಕೊಡದಿದ್ದರೆ ನನ್ನ ವಾದ ಒಪ್ಪಿದಂತೆ ಮತ್ತು #ಹಿಟ್_ಆಂಡ್_ರನ್ ಮಾಡಿದಂತೆ. ಆನಂತರ ನೀವು ಕೇವಲ #ಟೆಂಪಲ್_ರನ್_ರಾಹುಲ್ ಆಗಿ ಉಳಿದಿರುವುದಿಲ್ಲ. ಬದಲಿಗೆ #ಹಿಟ್_ಆಂಡ್_ರನ್_ರಾಹುಲ್ ಆಗಲಿದ್ದೀರಿ.

     

  • ಮಲ್ಲಿಕಾರ್ಜುನ ಖರ್ಗೆ ದೇಶದ ಅತಿದೊಡ್ಡ ಶ್ರೀಮಂತ ದಲಿತ- ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಬಿಡುಗಡೆ

    ಮಲ್ಲಿಕಾರ್ಜುನ ಖರ್ಗೆ ದೇಶದ ಅತಿದೊಡ್ಡ ಶ್ರೀಮಂತ ದಲಿತ- ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಬಿಡುಗಡೆ

    ಬೆಂಗಳೂರು: ಚುನಾವಣೆ ಹತ್ತಿರವಾಗುತ್ತಿದ್ದಂತೆಯೇ ರಾಜ್ಯ ರಾಜಕಾರಣದಲ್ಲಿ ಟ್ವಿಟ್ಟರ್ ವಾರ್ ಜೋರಾಗಿಯೇ ನಡೆಯುತ್ತಿದ್ದು, ಇದೀಗ ಬಿಜೆಪಿಯವರು ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ತಿರುಗಿ ಬಿದ್ದಿದ್ದಾರೆ.

    ರಾಹುಲ್ ಗಾಂಧಿಯವರು ಕರ್ನಾಟಕದಲ್ಲಿ ಟೆಂಪಲ್ ರನ್ ಮುಗಿಸಿ ಹೋದ ನಂತರ ಟೀಕೆಗಳು ಆರಂಭವಾಗಿವೆ. ಬಿಜೆಪಿಯವರು ಇದೀಗ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ವಿಡಿಯೋವೊಂದನ್ನು ರಿಲೀಸ್ ಮಾಡಿದ್ದಾರೆ.

    ವಿಡಿಯೋದಲ್ಲಿ ಮಲ್ಲಿಕಾರ್ಜುನ ಖರ್ಗೆ ದೇಶದ ಅತಿದೊಡ್ಡ ಶ್ರೀಮಂತ ದಲಿತ ವ್ಯಕ್ತಿಯಾಗಿದ್ದು, ಇವರಲ್ಲಿ 50 ಸಾವಿರ ಕೋಟಿ ಆಸ್ತಿಯಿದೆ. ಚಿಕ್ಕಮಗಳೂರಿನಲ್ಲಿ 1000 ಕೋಟಿ ಮೌಲ್ಯದ 300 ಎಕರೆ ಕಾಫಿ ಎಸ್ಟೇಟ್ ಇದೆ ಎಂದು ಆರೋಪ ಮಾಡಲಾಗಿದೆ. ಇದನ್ನೂ ಓದಿ: ಸಿದ್ದರಾಮಯ್ಯ ದೇಶದ 6ನೇ ಶ್ರೀಮಂತ ಸಿಎಂ: ದೇಶದ ಸಿಎಂಗಳ ಆಸ್ತಿ ಎಷ್ಟಿದೆ? ಇಲ್ಲಿದೆ ಮಾಹಿತಿ

    1427 ಎಂಜಿನಿಯರ್ ಹುದ್ದೆಗಳ ಅಕ್ರಮ ನೇಮಕಾತಿಯ ಆರೋಪ ಮಾಡಲಾಗಿದ್ದು, ಬನ್ನೇರುಘಟ್ಟದಲ್ಲಿ 500 ಕೋಟಿ ಮೌಲ್ಯದ ಕಾಂಪ್ಲೆಕ್ಸ್, ರಾಮಯ್ಯ ಮೆಡಿಕಲ್ ಕಾಲೇಜು ಸಮೀಪ 25 ಕೋಟಿ ವೆಚ್ಚ ಕಟ್ಟಡ, ಕೆಂಗೇರಿ ಬಳಿ ಸರ್ಕಾರಿ ಜಾಗದಲ್ಲಿ 40 ಎಕರೆ ಫಾರ್ಮ್ ಹೌಸ್, ಮಗಳ ಹೆಸರಿನಲ್ಲಿ 50 ಕೋಟಿ ವೆಚ್ಚದ ಮನೆ, 13 ಎಕರೆ ಬಳ್ಳಾರಿ ರಸ್ತೆಯಲ್ಲಿ ಜಮೀನು, ಇಂದಿರಾನಗರದಲ್ಲಿ 3 ಬಿಲ್ಡಿಂಗ್, ಸದಾಶಿವನಗರದಲ್ಲಿ ಎರಡು ಮನೆ ಇದೆ. ಇವುಗಳ ಬಗ್ಗೆ ಯಾಕೆ ತನಿಖೆ ಆಗ್ತಿಲ್ಲ ಅಂತ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬಿಜೆಪಿಯವರು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ನಾನು ದೇಶದ 6ನೇ ಶ್ರೀಮಂತ ಸಿಎಂ ಆಗಿದ್ದು ಹೇಗೆ: ಸಿದ್ದರಾಮಯ್ಯ ಹೇಳ್ತಾರೆ ಓದಿ

    ನಿಮಗೆ ಬೇರೆ ಯಾರು ವಿರೋಧ ಪಕ್ಷದ ನಾಯಕನ ನೇಮಕ ಮಾಡಲು ಆಗಲಿಲ್ಲವಾ? ಲೋಕಾಯುಕ್ತ ಅಧಿಕಾರವನ್ನು ಕಿತ್ತು ಹಾಕಿದ್ದು ಇದಕ್ಕೇನಾ ಸಿದ್ದರಾಮಯ್ಯ ಅವರೇ? ಚಾರ್ಜ್ ಮಾಡುವ ಕಾಲ ಬಂದಿದೆ. ಹೀಗಾಗಿ ಉತ್ತರ ಕೊಡಿ ಅಂತ ಬಿಜೆಪಿಯವರು ರಾಹುಲ್ ಹಾಗೂ ಸಿದ್ದರಾಮಯ್ಯಗೆ ಸವಾಲು ಹಾಕಿದ್ದಾರೆ.