Tag: tempo

  • ಕಂಟೇನರ್ ಡಿಕ್ಕಿ ಹೊಡೆದು ಈರುಳ್ಳಿ ಟೆಂಪೋ ಪಲ್ಟಿ – ಓರ್ವ ಸಾವು

    ಕಂಟೇನರ್ ಡಿಕ್ಕಿ ಹೊಡೆದು ಈರುಳ್ಳಿ ಟೆಂಪೋ ಪಲ್ಟಿ – ಓರ್ವ ಸಾವು

    – ಈರುಳ್ಳಿ ತುಂಬಿಕೊಳ್ಳಲು ಮುಗಿಬಿದ್ದ ಜನ

    ನೆಲಮಂಗಲ: ಹಿಂಬದಿಯಿಂದ ಕಂಟೇನರ್ (Container) ಡಿಕ್ಕಿ ಹೊಡೆದ ಪರಿಣಾಮ ಈರುಳ್ಳಿ ತುಂಬಿದ್ದ ಟೆಂಪೋ (Tempo) ಪಲ್ಟಿಯಾಗಿ ಓರ್ವ ಸಾವನ್ನಪ್ಪಿದ ಘಟನೆ ಬೆಂಗಳೂರು (Bengaluru) ಹೊರವಲಯದ ನೆಲಮಂಗಲದ (Nelamangala) ಅಂಚೆಪಾಳ್ಯದ (Anchepalya) ಬಳಿ ನಡೆದಿದೆ.

    ತುಮಕೂರು ಮಾರ್ಗವಾಗಿ ಬೆಂಗಳೂರಿನ ಯಶವಂತಪುರ ಮಾರುಕಟ್ಟೆಗೆ ಬರುತ್ತಿದ್ದ ಈರುಳ್ಳಿ ತುಂಬಿದ ಟೆಂಪೋಗೆ ಹಿಂಬದಿಯಿಂದ ವೇಗವಾಗಿ ಬಂದ ಮತ್ತೊಂದು ಕಂಟೇನರ್ ಲಾರಿ ಡಿಕ್ಕಿ ಹೊಡೆದಿದೆ. ಕಂಟೇನರ್ ಗುದ್ದಿದ ರಭಸಕ್ಕೆ ಟೆಂಪೋ ಪಲ್ಟಿಯಾಗಿದೆ. ಘಟನೆಯಲ್ಲಿ ಈರುಳ್ಳಿ ಟೆಂಪೋದಲ್ಲಿದ್ದ ಗಂಗಾಧರಪ್ಪ (55) ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ಇಡೀ ವಿಶ್ವದಲ್ಲಿ ಜನರ ಖಾತೆಗೆ ಹಣ ಹಾಕುತ್ತಿರುವ ಏಕೈಕ ಸರ್ಕಾರ ನಮ್ಮದು – ಯತೀಂದ್ರ

    ಮತ್ತೊಂದು ವಾಹನದ ಚಾಲಕ ಓಬಣ್ಣರಿಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಟೆಂಪೋ ಪಲ್ಟಿಯಾಗಿದ್ದರಿಂದ ಕೆಲ ಜನರು ಈರುಳ್ಳಿ ತುಂಬಲು ಮುಗಿಬಿದ್ದ ಘಟನೆ ಕೂಡ ನಡೆದಿದೆ. ಸ್ಥಳಕ್ಕೆ ಬಂದ ನೆಲಮಂಗಲ ಸಂಚಾರಿ ಪೊಲೀಸರು ಎರಡೂ ವಾಹನಗಳನ್ನು ತೆರವು ಮಾಡಿದ್ದಾರೆ. ಈ ಅಪಘಾತದಿಂದ ಕೆಲಕಾಲ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದ್ದು, ಪೊಲೀಸರು ನಿಯಂತ್ರಿಸಿದ್ದಾರೆ. ಇದನ್ನೂ ಓದಿ: ರಾಜ್ಯೋತ್ಸವ ಪ್ರಶಸ್ತಿಗೆ ಫುಲ್‌ ಡಿಮ್ಯಾಂಡ್‌ – 69 ಪ್ರಶಸ್ತಿಗೆ 2,000ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ

  • ವೇಗವಾಗಿ ಸೈಕಲ್ ಚಾಲನೆ – ಟೆಂಪೋ ಚಕ್ರದಡಿಗೆ ಸಿಲುಕಿ ಬಾಲಕ ಸಾವು

    ವೇಗವಾಗಿ ಸೈಕಲ್ ಚಾಲನೆ – ಟೆಂಪೋ ಚಕ್ರದಡಿಗೆ ಸಿಲುಕಿ ಬಾಲಕ ಸಾವು

    ಮೈಸೂರು: ಸೈಕಲ್‌ನಲ್ಲಿ (Cycle) ವೇಗವಾಗಿ ಹೋಗುತ್ತಿದ್ದ ಬಾಲಕ ಸೈಕಲ್ ನಿಯಂತ್ರಣವನ್ನು ಕಳೆದುಕೊಂಡು ಟೆಂಪೋ (Tempo) ಚಕ್ರದಡಿಗೆ ಸಿಲುಕಿ ಮೃತಪಟ್ಟಿರುವ ಘಟನೆ ಮೈಸೂರಿನ (Mysuru) ಅಭಿಷೇಕ್ ವೃತ್ತದಲ್ಲಿ ನಡೆದಿದೆ.

    ಬಾಲಾಜಿ (10) ಮೃತ ಬಾಲಕ ಎಂದು ಗುರುತಿಸಲಾಗಿದೆ. ಮೃತ ಬಾಲಾಜಿ ಮೂಲತಃ ಯಳಂದೂರಿನವನಾಗಿದ್ದು, ರಾಮಣ್ಣ ಎಂಬವರ ಪುತ್ರ. ಬಾಲಾಜಿ 5ನೇ ತರಗತಿ ವಿದ್ಯಾರ್ಥಿಯಾಗಿದ್ದು, ಗೆಳೆಯನೊಂದಿಗೆ ಸೈಕಲ್‌ನಲ್ಲಿ ಮನೆಗೆ ತೆರಳುತ್ತಿದ್ದ ವೇಳೆ ಘಟನೆ ನಡೆದಿದೆ. ಇದನ್ನೂ ಓದಿ: ಬಾರ್‌ನಲ್ಲಿ ಗಲಾಟೆ – ಯುವಕನ ಮರ್ಮಾಂಗಕ್ಕೆ ಹೊಡೆದು ಹತ್ಯೆ

    ವೇಗವಾದ ಸೈಕಲ್ ಚಾಲನೆಯಿಂದ ಮಕ್ಕಳು (Children) ಸೈಕಲ್ ನಿಯಂತ್ರಣವನ್ನು ಕಳೆದುಕೊಂಡಿದ್ದು, ಟೆಂಪೋ ಚಕ್ರದಡಿಗೆ ಸಿಲುಕಿ ಬಾಲಾಜಿ ಸಾವನ್ನಪ್ಪಿದ್ದಾನೆ. ಇನ್ನೊಬ್ಬ ಬಾಲಕ ಸಣ್ಣಪುಟ್ಟ ಗಾಯಗಳಿಂದ ಬಚಾವ್ ಆಗಿದ್ದು, ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ಕುರಿತು ವಿವಿ ಪುರಂ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಮಕ್ಕಳಿಗೆ ಜಾಮೂನಿನಲ್ಲಿ ವಿಷ ಹಾಕಿದ ತಂದೆ – ಬಳಿಕ ತಾನೂ ಆತ್ಮಹತ್ಯೆಗೆ ಯತ್ನ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಸ್ಕೂಟಿ, ಬೈಕ್‍ಗೆ ಟೆಂಪೋ ಡಿಕ್ಕಿ- ದಂಪತಿ ಸ್ಥಳದಲ್ಲೇ ಸಾವು

    ಸ್ಕೂಟಿ, ಬೈಕ್‍ಗೆ ಟೆಂಪೋ ಡಿಕ್ಕಿ- ದಂಪತಿ ಸ್ಥಳದಲ್ಲೇ ಸಾವು

    – ಮೂವರು ಮಕ್ಕಳಿಗೆ ಗಾಯ

    ಚಿಕ್ಕಬಳ್ಳಾಪುರ: ದಂಪತಿ ಹಾಗೂ ಅವರ ಮೂವರು ಮಕ್ಕಳು ಪ್ರತ್ಯೇಕವಾಗಿ ತೆರಳುತ್ತಿದ್ದ ಸ್ಕೂಟಿ ಹಾಗೂ ಬೈಕ್‍ಗೆ (Bike) ಟೆಂಪೋ (Tempo) ಡಿಕ್ಕಿಯಾಗಿ (Accident) ಗಂಡ ಹಾಗೂ ಹೆಂಡತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿಂತಾಮಣಿ ತಾಲೂಕಿನ ಕಾಚನಹಳ್ಳಿ ಬಳಿ ನಡೆದಿದೆ.

    ಕುರಬೂರು ಗ್ರಾಮದ ಶ್ರೀರಾಮ್ (40) ಹಾಗೂ ಶ್ಯಾಮಲ (35) ಮೃತಪಟ್ಟ ದುರ್ದೈವಿಗಳು ಎಂದು ತಿಳಿದು ಬಂದಿದೆ. ಕೋಲಾರದ ಕಡೆಯಿಂದ ಚಿಂತಾಮಣಿ (Chintamani) ಕಡೆಗೆ ಸ್ಕೂಟಿ ಹಾಗೂ ಬೈಕ್ ಮೂಲಕ ಮಕ್ಕಳಾದ ಮೋಕ್ಷ ಹಾಗೂ ತುಷಾರ್ ಸೇರಿದಂತೆ ಅಣ್ಣನ ಮಗ ತೇಜಸ್‍ನನ್ನು ಕೂರಿಸಿಕೊಂಡು ತೆರಳುತ್ತಿದ್ದರು. ಈ ವೇಳೆ ಚಿಂತಾಮಣಿ ಕಡೆಯಿಂದ ಕೋಲಾರದ ಕಡೆಗೆ ತೆರಳುತ್ತಿದ್ದ ಟೆಂಪೋ ಡಿಕ್ಕಿಯಾಗಿದೆ. ಪರಿಣಾಮ ಘಟನೆಯಲ್ಲಿ ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಲ್ಲದೇ ಮೂವರು ಮಕ್ಕಳು ಗಾಯಗೊಂಡಿದ್ದು ಚಿಂತಾಮಣಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದನ್ನೂ ಓದಿ: ಜೈನಮುನಿಗಳ ಹಂತಕರ ವಿರುದ್ಧ ಕಠಿಣ ಕ್ರಮ: ಡಿ.ಕೆ ಶಿವಕುಮಾರ್

    ಬಳಿಕ ಟೆಂಪೋ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿದೆ. ಇದರಿಂದ ಟೆಂಪೋಗೆ ಬೆಂಕಿ ಹೊತ್ತಿಕೊಂಡು ಉರಿದಿದ್ದು, ಆಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಸ್ಥಳಕ್ಕೆ ಚಿಂತಾಮಣಿ ಗ್ರಾಮಾಂತರ ಠಾಣೆ ಸಿಪಿಐ ಸುಧಾಕರ್ ರೆಡ್ಡಿ, ಎಎಸ್ಪಿ ಕುಶಾಲ್ ಚೋಕ್ಸಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಹಿಂದೂ ಎನ್ನುವುದು ಒಂದು ಧರ್ಮವೇ ಅಲ್ಲ: ತೋಂಟದಾರ್ಯ ಸಿದ್ದರಾಮ ಸ್ವಾಮೀಜಿ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • 8 ಕ್ವಿಂಟಾಲ್ ಗೋಮಾಂಸವಿದ್ದ ಮೀನಿನ ವಾಹನ ಪಲ್ಟಿ

    8 ಕ್ವಿಂಟಾಲ್ ಗೋಮಾಂಸವಿದ್ದ ಮೀನಿನ ವಾಹನ ಪಲ್ಟಿ

    ಕಾರವಾರ: ಅಕ್ರಮ ಗೋಮಾಂಸ (Beef) ತುಂಬಿಕೊಂಡು ಹೋಗುತ್ತಿದ್ದ ಮೀನು ಸಾಗಿಸುವ ವಾಹನ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಪಲ್ಟಿಯಾದ (Overturn) ಘಟನೆ ಉತ್ತರ ಕನ್ನಡ (Uttara Kannada) ಜಿಲ್ಲೆಯಲ್ಲಿ ನಡೆದಿದೆ.

    ಕುಮಟಾ ನಗರದ ರಾಷ್ಟ್ರೀಯ ಹೆದ್ದಾರಿ 66ರ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಘಟನೆ ನಡೆದಿದೆ. ವಾಹನ ಪಲ್ಟಿಯಾಗುತ್ತಲೇ ಚಾಲಕ ಅಲ್ಲಿಂದ ಪರಾರಿಯಾಗಿದ್ದಾನೆ. ಬಳಿಕ ವಾಹನದಲ್ಲಿ ಬರೋಬ್ಬರಿ 8 ಕ್ವಿಂಟಾಲ್ ದನದ ಮಾಂಸವನ್ನು ಕಂಡ ಸ್ಥಳೀಯರು ದಂಗಾಗಿದ್ದಾರೆ.

    ವಾಹನ ಶಿರಸಿಯಿಂದ ಕುಮಟಾ ಮಾರ್ಗವಾಗಿ ಮಂಗಳೂರು ಕಡೆ ತೆರಳುತ್ತಿತ್ತು. ಮೀನಿನ ವಾಹನ ಇದಾಗಿದ್ದು, ಅಕ್ರಮವಾಗಿ ಗೋಮಾಂಸವನ್ನು ಸಾಗಿಸಲಾಗುತ್ತಿತ್ತು. ಇದನ್ನೂ ಓದಿ: ಸಹೋದರನ ಜೊತೆ ಜಗಳವಾಡಿ ಮೊಬೈಲನ್ನೇ ನುಂಗಿದ್ಳು!

    ವಿಚಾರ ತಿಳಿದು ಸ್ಥಳಕ್ಕೆ ಕುಮಟಾ ಪಿಎಸ್‌ಐ ಸಂಪತ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವಾಹನದ ಮಾಲೀಕ ಗಣೇಶ್ ಹರಿಕಾಂತ್ರ ಎಂಬುದು ತಿಳಿದುಬಂದಿದ್ದು, ಪರಾರಿಯಾದ ಚಾಲಕ ಜಾವೇದ್ ಎಂದು ಗುರುತಿಸಲಾಗಿದೆ. ಇಬ್ಬರ ಮೇಲೂ ಕುಮಟಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳಿಗೆ ಹುಡುಕಾಟ ನಡೆಸಲಾಗುತ್ತಿದೆ. ಇದನ್ನೂ ಓದಿ: ಗಂಡನನ್ನ ಬಿಟ್ಟು ಮತ್ತೊಬ್ಬನನ್ನ ಮದುವೆಯಾದ್ಳು, ಅವನಿಂದಲೇ ಕೊಲೆಯಾದ್ಳು

  • ಟೆಂಪೋಗೆ  ಡಿಕ್ಕಿ ಹೊಡೆದ ಐರಾವತ ಬಸ್‍ – ಮೂವರಿಗೆ ಗಂಭೀರ ಗಾಯ

    ಟೆಂಪೋಗೆ ಡಿಕ್ಕಿ ಹೊಡೆದ ಐರಾವತ ಬಸ್‍ – ಮೂವರಿಗೆ ಗಂಭೀರ ಗಾಯ

    ಕಾರವಾರ: ಟೆಂಪೋ (Tempo)  ಮತ್ತು ಐರಾವತ (Airavata) ಬಸ್ (Bus) ನಡುವೆ ಡಿಕ್ಕಿಯಾದ ಪರಿಣಾಮ ಮೂವರು ಗಂಭೀರ ಗಾಯಗೊಂಡಿರುವ ಘಟನೆ ಉತ್ತರ ಕನ್ನಡ (Uttara Kannada), ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 66ರ ಭಟ್ಕಳ ತಾಲೂಕಿನ ಶಿರಾಲಿ ಬಳಿ ನಡೆದಿದೆ.

    ಕಾರವಾರದಿಂದ ಮಂಗಳೂರು ಕಡೆ ಹೊರಟಿದ್ದ ಐರಾವತ ಬಸ್‍ ಟೆಂಪೋ ಹಿಂಬದಿಗೆ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದ್ದು, ಬಸ್‍ನಲ್ಲಿ 50ಕ್ಕೂ ಹೆಚ್ಚು ಪ್ರಯಾಣಿಕರು ಪ್ರಯಾಣಿಸುತ್ತಿದ್ದರು. ಬಸ್‍ನ ಮುಂಭಾಗದ ಸೀಟ್‍ನಲ್ಲಿ ಕುಳಿತ ಮೂವರಿಗೆ ಗಂಭೀರ ಗಾಯವಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಇದನ್ನೂ ಓದಿ: ಮತ್ತೆ ಸಿಪಿವೈ Vs ಎಚ್‌ಡಿಕೆ – ಕಲ್ಲು, ಮೊಟ್ಟೆ ಎಸೆತ, ಲಾಠಿ ಚಾರ್ಜ್‌, ಜೆಡಿಎಸ್‌ ಕಾರ್ಯಕರ್ತರು ವಶಕ್ಕೆ

    ಗಾಯಾಳುಗಳನ್ನು ಭಟ್ಕಳದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದು, ಸ್ಥಳಕ್ಕೆ ಮುರುಡೇಶ್ವರ ಪೊಲೀಸರು ಭೇಟಿನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಸಂಬಂಧ ಮುರುಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಹೈಕೋರ್ಟ್ ವಕೀಲ ಆತ್ಮಹತ್ಯೆ- ಕೋರ್ಟ್ ಕೊಠಡಿ ಧ್ವಂಸ

    Live Tv
    [brid partner=56869869 player=32851 video=960834 autoplay=true]

  • ಕತ್ತಲಲ್ಲಿ ಕಾಣದೆ ಮಲಗಿದ್ದ ಬಾಲಕಿಯ ಮೇಲೆ ಹರಿದ ಟೆಂಪೋ

    ಕತ್ತಲಲ್ಲಿ ಕಾಣದೆ ಮಲಗಿದ್ದ ಬಾಲಕಿಯ ಮೇಲೆ ಹರಿದ ಟೆಂಪೋ

    ಬೆಂಗಳೂರು: ಮಲಗಿದ್ದ ಬಾಲಕಿಯೊಬ್ಬಳ ಮೇಲೆ ಚಾಲಕ ಟೆಂಪೋ ಹರಿಸಿದ ಪರಿಣಾಮ 7 ವರ್ಷದ ಕಂದಮ್ಮ ಸಾವನ್ನಪ್ಪಿದ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ.

    ಮೃತ ದುರ್ದೈವಿ ಬಾಲಕಿಯನ್ನು ಶಿವಾನ್ಯಾ ಎಂದು ಗುರುತಿಸಲಾಗಿದೆ. ಈ ದುರ್ಘಟನೆ ಇಂದು ಮುಂಜಾನೆ 4 ಗಂಟೆ ಸುಮಾರಿಗೆ ಕೆ.ಆರ್ ಮಾರ್ಕೆಟ್‍ನಲ್ಲಿ ಸಂಭವಿಸಿದೆ. ಇದನ್ನೂ ಓದಿ: ಚಾಲಕನ ನಿಯಂತ್ರಣ ತಪ್ಪಿದ ಲಾರಿ: ಅರ್ಧ ಮನೆಯೇ ಧ್ವಂಸ

    ಟೆಂಪೋದಲ್ಲಿ ತರಕಾರಿ ತುಂಬಿಕೊಂಡು ಮಾರ್ಕೆಟ್‍ಗೆ ಬರುತ್ತಿದ್ದಾಗ ಕತ್ತಲಲ್ಲಿ ಕಾಣದೆ ಚಾಲಕ ಮಲಗಿದ್ದ ಬಾಲಕಿಯ ಮೇಲೆ ಹರಿಸಿಬಿಟ್ಟಿದ್ದಾನೆ. ಪರಿಣಾಮ ಬಾಲಕಿ ಗಂಭೀರ ಗಾಯಗೊಂಡಿದ್ದಾಳೆ. ಈ ವಿಚಾರ ತಿಳಿಯುತ್ತಿದ್ದಂತೆಯೇ ಡ್ರೈವರ್ ಸ್ಥಳದಿಂದ ಕಾಲ್ಕಿತ್ತಿದ್ದಾನೆ.

    ಇತ್ತ ಗಾಯಾಳು ಬಾಲಕಿಯನ್ನು ಕೂಡಲೇ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಚಿಕಿತ್ಸೆ ಫಲಿಸದೆ ಆಕೆ ಸಾವನ್ನಪ್ಪಿದ್ದಾಳೆ. ಮಗಳನ್ನು ಕಳೆದುಕೊಂಡ ಹೆತ್ತಮ್ಮನ ಆಕ್ರಂದನ ಮುಗಿಲುಮುಟ್ಟಿತು. ಇದನ್ನೂ ಓದಿ: ಅತ್ತೆ-ಸೊಸೆ ಜಗಳದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡ್ರಾ ಶಂಕರಣ್ಣ..?

    ಬೀದಿಬದಿ ವ್ಯಾಪಾರ ಮಾಡಿ ಮಗಳನ್ನು ತಾಯಿ ಸಾಕುತ್ತಿದ್ದರು. ಘಟನಾ ಸ್ಥಳಕ್ಕೆ ಸಿಟಿ ಮಾರ್ಕೆಟ್ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಲ್ಲದೆ ಪರಾರಿಯಾದ ಚಾಲಕನಿಗಾಗಿ ಹುಡುಕಾಟ ಆರಂಭಿಸಿದ್ದಾರೆ.

  • ಮುಂಬೈ ಅತ್ಯಾಚಾರ ಪ್ರಕರಣ- ಚಿಕಿತ್ಸೆ ಫಲಿಸದೆ ಮೃತಪಟ್ಟ ಸಂತ್ರಸ್ತೆ

    ಮುಂಬೈ ಅತ್ಯಾಚಾರ ಪ್ರಕರಣ- ಚಿಕಿತ್ಸೆ ಫಲಿಸದೆ ಮೃತಪಟ್ಟ ಸಂತ್ರಸ್ತೆ

    ಮುಂಬೈ: ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಟೆಂಪೋದಲ್ಲಿ ಮಹಿಳೆಯನ್ನು ಅತ್ಯಾಚಾರ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಾಚಾರಕ್ಕೊಳಗಾದ ಸಂತ್ರಸ್ತೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.

    ನಿರ್ಭಯಾ ಮಾದರಿಯ ಪ್ರಕರಣವೊಂದು ಮತ್ತೆ ವಾಣಿಜ್ಯ ನಗರಿ ಮುಂಬೈನಲ್ಲಿ ನಡೆದು ಹೋಗಿದೆ. ಮುಂಬೈನ ಸಾಕಿನಾಕಾ ಪ್ರದೇಶದ ಕೈರಾನಿ ರಸ್ತೆಯಲ್ಲಿ ವ್ಯಕ್ತಿಯೊಬ್ಬ ಮಹಿಳೆಗೆ ಚಿತ್ರ ಹಿಂಸೆ ನೀಡಿ, ಬಳಿಕ ಆಕೆಯನ್ನು ಅತ್ಯಾಚಾರ ಎಸಗಿದ್ದಾನೆ. ಕೈರಾನಿ ರಸ್ತೆಯಲ್ಲಿ ಮಹಿಳೆಯೊಬ್ಬರ ಮೇಲೆ ವ್ಯಕ್ತಿಯೊಬ್ಬ ಹಲ್ಲೆ ನಡೆಸುತ್ತಿದ್ದಾನೆ ಎಂದು ಸ್ಥಳೀಯರು ಪೊಲೀಸರಿಗೆ ಫೋನ್ ಮಾಡಿದ್ದಾರೆ. ಕೂಡಲೇ ಪೊಲೀಸರು ಸ್ಥಳಕ್ಕೆ ದೌಡಾಯಿಸುವಷ್ಟರಲ್ಲಿ ಕೃತ್ಯ ನಡೆದಿದೆ. ಆರೋಪಿಯು ಮಹಿಳೆಗೆ ಥಳಿಸಿ, ಹಲ್ಲೆ ಮಾಡಿದ್ದ. ರಕ್ತದ ಮಡುವಿನಲ್ಲಿ ಬಿದ್ದಿದ್ದ ಮಹಿಳೆಯನ್ನು ಪೊಲೀಸರು ರಾಜವಾಡಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಇದೀಗ 33 ಗಂಟೆಗಳ ನರಳಾಟದ ಬಳಿಕ ಸಂತ್ರಸ್ತೆ ಕೊನೆಯುಸಿರೆಳೆದಿದ್ದಾರೆ. ಇದನ್ನೂ ಓದಿ: ಟೆಂಪೋದಲ್ಲೇ ಮಹಿಳೆಯ ಅತ್ಯಾಚಾರವೆಸಗಿದ ಕಾಮುಕ!

    ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಮುಂಬೈ ಪೊಲೀಸರು ಮೋಹನ್ ಚೌಹಾಟ್ ಎಂಬ ಆರೋಪಿಯನ್ನು ಬಂಧಿಸಿದ್ದು, ಆತನನನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸಿದ್ದಾರೆ. ಇದನ್ನೂ ಓದಿ: ಹಿಂದೂ ಹುಡುಗಿಯರ ತಂಟೆಗೆ ಬಂದ್ರೆ ಸುಮ್ನಿರಲ್ಲ: ಗುಜರಾತ್ ಸಿಎಂ

  • ಟೆಂಪೋದಲ್ಲೇ ಮಹಿಳೆಯ ಅತ್ಯಾಚಾರವೆಸಗಿದ ಕಾಮುಕ!

    ಟೆಂಪೋದಲ್ಲೇ ಮಹಿಳೆಯ ಅತ್ಯಾಚಾರವೆಸಗಿದ ಕಾಮುಕ!

    ಮುಂಬೈ: ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಟೆಂಪೋದಲ್ಲಿ ಮಹಿಳೆಯ ಮೇಲೆ ಕಾಮಾಂಧನೊಬ್ಬ ಅಟ್ಟಹಾಸ ಮೆರೆದು, ಅತ್ಯಾಚಾರ ಎಸಗಿರುವುದನ್ನು ಕಂಡು ಇಡೀ ದೇಶವೇ ಬೆಚ್ಚಿಬಿದ್ದಿದೆ.

    ಮುಂಬೈನ ಕೈರಾನಿ ರಸ್ತೆಯಲ್ಲಿ ವ್ಯಕ್ತಿಯೊಬ್ಬ 34 ವರ್ಷದ ಮಹಿಳೆಗೆ ಚಿತ್ರ ಹಿಂಸೆ ನೀಡಿ, ಬಳಿಕ ಆಕೆಯನ್ನು ಅತ್ಯಾಚಾರ ಎಸಗಿದ್ದಾನೆ. ಸದ್ಯ ಸಂತ್ರಸ್ತೆಯ ಸ್ಥಿತಿ ಚಿಂತಾಜನಕವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಪೊಲೀಸರು ಮೋಹನ್ ಚೌಹಾಟ್ ಎಂಬ ಆರೋಪಿಯನ್ನು ಬಂಧಿಸಿದ್ದಾರೆ. ಇದನ್ನೂ ಓದಿ: ಮಂತ್ರಾಲಯದಿಂದ ವಾಪಸ್ಸಾಗ್ತಿದ್ದಾಗ ಕಾರು ಅಪಘಾತ- ಮದ್ವೆಯಾಗ್ಬೇಕಿದ್ದ ಜೋಡಿ ಸಾವು

    ಕೈರಾನಿ ರಸ್ತೆಯಲ್ಲಿ ಮಹಿಳೆಯೊಬ್ಬರ ಮೇಲೆ ವ್ಯಕ್ತಿಯೊಬ್ಬ ಹಲ್ಲೆ ನಡೆಸುತ್ತಿದ್ದಾನೆ ಎಂದು ಸ್ಥಳೀಯರು ಪೊಲೀಸರಿಗೆ ಫೋನ್ ಮಾಡಿದ್ದಾರೆ. ಕೂಡಲೇ ಪೊಲೀಸರು ಸ್ಥಳಕ್ಕೆ ದೌಡಾಯಿಸುವಷ್ಟರಲ್ಲಿ ಕೃತ್ಯ ನಡೆದಿದೆ. ಆರೋಪಿಯು ಮಹಿಳೆಗೆ ಥಳಿಸಿ, ಹಲ್ಲೆ ಮಾಡಿದ್ದಾನೆ. ರಕ್ತದ ಮಡುವಿನಲ್ಲಿ ಬಿದ್ದಿದ್ದ ಮಹಿಳೆಯನ್ನು ಪೊಲೀಸರು ರಾಜವಾಡಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದು, ಸದ್ಯ ಆಕೆಯ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಇದನ್ನೂ ಓದಿ: ಬೈಕ್ ಆಕ್ಸಿಡೆಂಟ್ – ಟಾಲಿವುಡ್ ನಟ ಸಾಯಿಧರ್ಮ ತೇಜ್ ಸ್ಥಿತಿ ಗಂಭೀರ

  • ಡಿಕ್ಕಿಯಾಗಿ 20 ಮೀಟರ್ ಬೈಕ್ ಸವಾರನನ್ನು ಎಳೆದೊಯ್ದ ಟೆಂಪೋ!

    ಡಿಕ್ಕಿಯಾಗಿ 20 ಮೀಟರ್ ಬೈಕ್ ಸವಾರನನ್ನು ಎಳೆದೊಯ್ದ ಟೆಂಪೋ!

    – ಸವಾರ ದುರ್ಮರಣ

    ಹುಬ್ಬಳ್ಳಿ: ದ್ವಿಚಕ್ರ ವಾಹನಕ್ಕೆ ಮುಖಾಮುಖಿ ಡಿಕ್ಕಿ ಹೊಡೆದ ಟೆಂಪೋವೊಂದು ಸುಮಾರು 20 ಮೀಟರ್ ಬೈಕ್ ಸಮೇತ ಎಳೆದೊಯ್ದಿದೆ. ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಸಾವಿಗೀಡಾದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

    ಹುಬ್ಬಳ್ಳಿಯಿಂದ ಅಂಚಟಗೇರಿಗೆ ಹೋಗುತ್ತಿದ್ದ ಟೆಂಪೋ ಹಾಗೂ ಕಲಘಟಗಿ ಕಡೆಯಿಂದ ಬರುತ್ತಿದ್ದ ಬೈಕ್, ಕಾರವಾರ ರಸ್ತೆಯ ಕೆಂಪಗೇರಿಯ ಗಣೇಶ್ ಗುಡಿ ಹತ್ತಿರ ಮುಖಾಮುಖಿ ಡಿಕ್ಕಿಯಾಗಿದೆ. ಘಟನೆಯಲ್ಲಿ ಹುಬ್ಬಳ್ಳಿ ಅಲ್ತಾಫನಗರದ ನಿವಾಸಿ ಮೆಹಬೂಬಸಾಬ ತಾರೆಗಾರ್(23) ಸ್ಥಳದಲ್ಲೇ ಮೃತಪಟ್ಟಿದ್ದಾನೆ.

    ಟೆಂಪೋ ಚಾಲಕ ವೇಗವಾಗಿ ಬರುತ್ತಿದ್ದ ಸಮಯದಲ್ಲಿ ಮುಂದೆ ಬಂದ ಬೈಕಿಗೆ ಡಿಕ್ಕಿ ಹೊಡೆದು, ಅದೇ ವೇಗದಲ್ಲಿ 20 ಮೀಟರ್ ಟೆಂಪೋ ಚಲಿಸಿದೆ. ರಸ್ತೆಯಲ್ಲಿಯೇ ತೀವ್ರವಾಗಿ ಗಾಯಗೊಂಡಿದ್ದ ಯುವಕ, ಕಿಮ್ಸ್ ಗೆ ರವಾನೆಯಾಗುವ ಮುನ್ನವೇ ಸಾವಿಗೀಡಾಗಿದ್ದಾನೆ.

    ಅಂಚಟಗೇರಿ ಸಮೀಪ ರಸ್ತೆ ಕಾಮಗಾರಿ ಪ್ರಗತಿಯಲ್ಲಿರುವ ಕಾರಣ ರಸ್ತೆ ಧೂಳಿನಿಂದ ತುಂಬಿದ್ದು, ಎದುರಿಗೆ ಬರುವ ವಾಹನಗಳು ಸಡನ್ನಾಗಿ ಕಾಣುವುದೇ ಇಲ್ಲ. ಹೀಗಾಗಿಯೇ ಘಟನೆ ನಡೆದಿದ್ದು, ಅಪಘಾತ ನಡೆಯುತ್ತಿದ್ದ ಹಾಗೇ ಟೆಂಪೋ ಚಾಲಕ ವಾಹನವನ್ನ ಸ್ಥಳದಲ್ಲಿಯೇ ಬಿಟ್ಟು ಪರಾರಿಯಾಗಿದ್ದಾನೆ.

  • ನಿಶ್ಚಿತಾರ್ಥಕ್ಕೆ ಹೊರಟಿದ್ದ ಟೆಂಪೋ ಭೀಕರ ಅಪಘಾತ- ನಾಲ್ವರು ಸ್ಥಳದಲ್ಲೇ ಸಾವು

    ನಿಶ್ಚಿತಾರ್ಥಕ್ಕೆ ಹೊರಟಿದ್ದ ಟೆಂಪೋ ಭೀಕರ ಅಪಘಾತ- ನಾಲ್ವರು ಸ್ಥಳದಲ್ಲೇ ಸಾವು

    ಕೊಪ್ಪಳ: ಬೈಕ್ ಹಾಗೂ ಟೆಂಪೋ ನಡುವೆ ಅಪಘಾತ ಸಂಭವಿಸಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿ, 10ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯಗಳಾಗಿರುವ ಘಟನೆ ಜಿಲ್ಲೆಯ ಕುಕನೂರ ತಾಲೂಕಿನ ನಿಟ್ಟಾಲಿ ಕ್ರಾಸ್ ಬಳಿ ನಡೆದಿದೆ.

    ಬೈಕ್ ಹಾಗೂ ಟೆಂಪೋ ನಡುವೆ ಡಿಕ್ಕಿ ಸಂಭವಿಸಿ, ಬಳಿಕ ಟೆಂಪೋ ಮರಕ್ಕೆ ಗುದ್ದಿದೆ. ಈ ವೇಳೆ ಸ್ಥಳದಲ್ಲೇ ನಾಲ್ವರು ಸಾನ್ನಪ್ಪಿದ್ದಾರೆ. 10ಕ್ಕೂ ಹೆಚ್ಚು ಜನ ಗಾಯಗೊಂಡಿದ್ದು, ಇನ್ನೂ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಬೈಕ್ ಸವಾರನ ವೇಗದ ಚಾಲನೆಯೇ ದುರಂತಕ್ಕೆ ಕಾರಣ ಎನ್ನಲಾಗುತ್ತಿದೆ.

    ಮಿನಿ ಬಸ್ ಬಾಗಲಕೋಟೆ ಜಿಲ್ಲೆಯ ಬದಾಮಿ ತಾಲೂಕಿನ ಅಗಸನಕೊಪ್ಪ ಗ್ರಾಮದಿಂದ ಕೊಪ್ಪಳ ತಾಲೂಕು ಹಿರೇಸಿಂಧೋಗಿಗೆ ಬರುತ್ತಿತ್ತು. ಈ ವೇಳೆ ಬೈಕ್ ವೇಗವಾಗಿ ಬಂದಿದ್ದರಿಂದ ಮಿನಿ ಬಸ್‍ಗೆ ಡಿಕ್ಕಿ ಹೊಡೆದಿದ್ದು, ಬಳಿಕ ಟೆಂಪೋ ಮರಕ್ಕೆ ಗುದ್ದಿದೆ. ಪರಿಣಾಮ ನಾಲ್ವರು ಸಾವನ್ನಪ್ಪಿದ್ದಾರೆ. ಮಿನಿ ಬಸ್ ನಿಶ್ಚಿತಾರ್ಥ ಕಾರ್ಯಕ್ರಮಕ್ಕೆ ಹೊರಟಿತ್ತು ಎಂಬ ಮಾಹಿತಿ ಲಭ್ಯವಾಗಿದೆ.