Tag: Tempo Traveler

  • ವಾಹನ ಚಾಲನೆ ಮಾಡುತ್ತಲೇ ಮೂರ್ಛೆ ಹೋದ ಚಾಲಕ – ಪ್ರವಾಸಿಗರಿದ್ದ ವಾಹನ ಪಲ್ಟಿ

    ವಾಹನ ಚಾಲನೆ ಮಾಡುತ್ತಲೇ ಮೂರ್ಛೆ ಹೋದ ಚಾಲಕ – ಪ್ರವಾಸಿಗರಿದ್ದ ವಾಹನ ಪಲ್ಟಿ

    ಶಿವಮೊಗ್ಗ: ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಟೆಂಪೋ ಟ್ರಾವೆಲರ್ (ಟಿಟಿ) ಚಾಲಕನಿಗೆ ಇದ್ದಕ್ಕಿದ್ದಂತೆ ಮೂರ್ಛೆ ರೋಗ ಕಾಣಿಸಿಕೊಂಡು, ಟೆಂಪೋ ಟ್ರಾವೆಲರ್ ಅಪಘಾತಕ್ಕೀಡಾದ ಘಟನೆ ಜಿಲ್ಲೆಯ ಸಾಗರ ತಾಲೂಕಿನ ಕಳಸವಳ್ಳಿ ಬಳಿ ನಡೆದಿದೆ.

    ಘಟನೆಯಲ್ಲಿ ನಾಲ್ವರು ಗಾಯಗೊಂಡಿದ್ದು, ಓರ್ವ ಪ್ರವಾಸಿಗನ ಸ್ಥಿತಿ ಗಂಭೀರವಾಗಿದೆ. ಇದನ್ನೂ ಓದಿ: ಮದರಸಾಗಳಲ್ಲಿ ಓದಿದವರು ಹಿಂದೂ ವಿರೋಧಿ, ಭಯೋತ್ಪಾದಕರಾಗಿ ಬರ್ತಾರೆ – ಮುತಾಲಿಕ್ ಕಿಡಿʼ

    ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಬಿಡದಿ ಮೂಲದ 10 ಮಂದಿ ಪ್ರವಾಸಿಗರು ಸಿಗಂದೂರು ಚೌಡೇಶ್ವರಿದೇವಿ ದರ್ಶನಕ್ಕೆ ಆಗಮಿಸಿದ್ದರು. ದರ್ಶನ ಮಾಡಿ ವಾಪಸ್ ತೆರಳುತ್ತಿದ್ದರು. ಇಲ್ಲಿನ ಕಳಸವಳ್ಳಿ ಗ್ರಾಮದ ಬಳಿ ವಾಹನ ಚಾಲನೆ ಮಾಡುತ್ತಿರುವಾಗಲೇ ಚಾಲಕನಿಗೆ ಮೂರ್ಛೆ ಕಾಣಿಸಿಕೊಂಡಿದೆ. ಇದರಿಂದ ಟಿಟಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ದಿಬ್ಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಇದನ್ನೂ ಓದಿ: ಶ್ರೀರಂಗಪಟ್ಟಣದ ಜಾಮಿಯಾ ಮಸೀದಿ ಹಿಂದೂಗಳಿಗೆ ಬಿಟ್ಟು ಕೊಡುವಂತೆ ಆಗ್ರಹ

    ಟಿಟಿ ವಾಹನದಲ್ಲಿದ್ದ 10 ಮಂದಿ ಪ್ರವಾಸಿಗರಲ್ಲಿ ನಾಲ್ವರಿಗೆ ಪೆಟ್ಟಾಗಿದ್ದು, ಓರ್ವನ ಸ್ಥಿತಿ ಗಂಭೀರವಾಗಿದೆ. ಗಾಯಗೊಂಡವರನ್ನು ಬಾಬು, ಸುಚಿತ್ರಾ, ಡಿಂಪಾ, ಸಂಚಿತ, ಗುತ್ಯಮ್ಮ ಎಂದು ಗುರುತಿಸಲಾಗಿದೆ. ಅವರಿಗೆ ಸಿಗಂದೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ, ನಂತರ ಸಾಗರದ ಉಪವಿಭಾಗೀಯ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.

  • ಟೆಂಪೋ ಟ್ರಾವೆಲರ್‌ನಲ್ಲಿ ಪ್ರವಾಸಿಗರ ಹುಚ್ಚಾಟ – ಸಾರ್ವಜನಿಕರಿಂದ ತರಾಟೆ

    ಟೆಂಪೋ ಟ್ರಾವೆಲರ್‌ನಲ್ಲಿ ಪ್ರವಾಸಿಗರ ಹುಚ್ಚಾಟ – ಸಾರ್ವಜನಿಕರಿಂದ ತರಾಟೆ

    ಮಡಿಕೇರಿ: ಹಲವು ದಿನಗಳಿಂದ ಬಣಗುಡುತ್ತಿದ್ದ ರಾಜ್ಯದ ಪ್ರಮುಖ ಪ್ರವಾಸಿ ತಾಣಗಳಲ್ಲೀಗ ಸಾಲು ಸಾಲು ರಜೆ ಹಿನ್ನೆಲೆಯಲ್ಲಿ ಮತ್ತೆ ಪ್ರವಾಸಿಗರ ಕಲರವ ಆರಂಭವಾಗಿದೆ. ವೀಕೆಂಡ್ ಸೇರಿದಂತೆ ಹಬ್ಬಗಳ ರಜೆ ಇರುವುದರಿಂದ ರಾಜ್ಯದ ಪ್ರಮುಖ ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರ ಭಾರೀ ದಂಡು ಕಾಣಸಿಗುತ್ತಿದೆ. ಈ ಮೂಲಕ ಪ್ರವಾಸೋದ್ಯಮ ಕ್ಷೇತ್ರ, ರಾಜ್ಯದ ಆರ್ಥಿಕತೆ ಚೇತರಿಕೆಯ ಮುನ್ಸೂಚನೆ ನೀಡುತ್ತಿದೆ.

    ಕೊಡಗು ಜಿಲ್ಲೆಯಲ್ಲೂ ಸಾವಿರಾರು ಸಂಖ್ಯೆಯಲ್ಲಿ ಪ್ರವಾಸಿಗರ ಕಲರವ ಕಂಡು ಬರುತ್ತಿದೆ. ಅದರೆ ಬಂದ ಪ್ರವಾಸಿಗರು ಹುಚ್ಚಾಟ ನಡೆಸುತ್ತಿದ್ದಾರೆ. ಹೌದು, ಕೊಡಗಿಗೆ ಜಾಲಿ ರೈಡ್ ನೆಪದಲ್ಲಿ ಬಂದ ಪ್ರವಾಸಿಗರು ಅಪಾಯಕಾರಿ ಪ್ರಯಾಣಕ್ಕೆ ಮುಂದಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರವಾಸಿಗರನ್ನು ತಡೆದು ಸಾರ್ವಜನಿಕರು ತರಾಟೆಗೆ ತೆಗೆದುಕೊಂಡಿದ್ದಾರೆ.

    ಮಡಿಕೇರಿ ಸಮೀಪದ ಗಾಳಿಬೀಡು ರಸ್ತೆ ಮೂಲಕ ನಗರಕ್ಕೆ ಮರಳುತ್ತಿದ್ದ ಟೆಂಪೋ ಟ್ರಾವೆಲರ್ ವಾಹನವೊಂದು ವೇಗವಾಗಿ ಸಾಗುತ್ತಿದ್ದು, ವಾಹನದ ಮೇಲೆ 12 ಮಕ್ಕಳು ಅಪಾಯಕಾರಿ ಸ್ಥಿತಿಯಲ್ಲಿ ಕುಳಿತಿರುವುದನ್ನು ಸಾರ್ವಜನಿಕರು ಗಮನಿಸಿದ್ದಾರೆ. ಕೂಡಲೇ ಎಚ್ಚೆತ್ತುಕೊಂಡ ಸಾರ್ವಜನಿಕರು ವೇಗವಾಗಿ ಚಲಿಸುತ್ತಿದ್ದ ವಾಹನವನ್ನು ಹಿಂಬಾಲಿಸಿ, ಚಾಲಕ ಹಾಗೂ ಒಳಗೆ ಕುಳಿತಿದ್ದ ಪಾಲಕರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಇದನ್ನೂ ಓದಿ: RRR ಚಿತ್ರದಲ್ಲಿ ಕರ್ನಾಟಕದ ಪ್ರಕೃತಿ ರೆಡ್ಡಿ ಹಾಡಿದ ಕೊಮ್ಮ ಉಯ್ಯಾಲ ಹಾಡು ರಿಲೀಸ್

    ಗುಡ್ಡಗಾಡು ಪ್ರದೇಶವಾಗಿರುವ ಕೊಡಗಿನ ರಸ್ತೆಗಳಲ್ಲಿ ಸಾಕಷ್ಟು ತಿರುವುಗಳಿವೆ. ಆದರೂ ಮಕ್ಕಳನ್ನು ವಾಹನದ ಟಾಪ್ ಮೇಲೆ ಕೂರಿಸಿಕೊಂಡು ಪ್ರಯಾಣಿಸುತ್ತಿದ್ದೀರಿ. ಏನಾದರೂ ಅನಾಹುತ ಆದರೆ ಮಕ್ಕಳ ಸ್ಥಿತಿ ಏನಾಗಬೇಡ ಎಂದು ಸಾರ್ವಜನಿಕರು ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: ಯೇಸುವಿನ ಮರಣದ ಜೀವಂತ ದೃಶ್ಯ ರೂಪಕ ಕಂಡು ಕಣ್ಣೀರು ಹಾಕಿದ ಭಕ್ತರು

    ಬೆಂಗಳೂರು ಮೂಲದ ಪ್ರವಾಸಿಗರು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದಾಗ ಸ್ಥಳದಲ್ಲೇ ಕ್ಷಮೆ ಕೇಳಿ ಬಳಿಕ ಮಕ್ಕಳನ್ನು ಗಾಡಿ ಒಳಗೆ ಕೂರಿಸಿ ಹೋಗಿದ್ದಾರೆ. ಇತ್ತೀಚಿನ ದಿನಗಳಲ್ಲಿ ಅನೇಕ ಪ್ರವಾಸಿಗರು ಈ ರೀತಿಯ ವರ್ತನೆ ಮಾಡುತ್ತಿದ್ದಾರೆ ಎಂದು ಸ್ಥಳೀಯರು ಬೇಸರ ವ್ಯಕ್ತಪಡಿಸಿದ್ದಾರೆ.

  • ಮರ್ಯಾದೆ ಹೋಯ್ತು, ನಾನ್ ಮನೆಗೆ ಬರಲ್ಲ – ಹಲ್ಲೆಗೊಳಗಾಗಿದ್ದ ಸುನೀಲ್ ಫೋನ್ ಸ್ವಿಚ್ ಆಫ್

    ಮರ್ಯಾದೆ ಹೋಯ್ತು, ನಾನ್ ಮನೆಗೆ ಬರಲ್ಲ – ಹಲ್ಲೆಗೊಳಗಾಗಿದ್ದ ಸುನೀಲ್ ಫೋನ್ ಸ್ವಿಚ್ ಆಫ್

    – ಸುನೀಲ್ ವಿರುದ್ಧವೇ ಟ್ರಾಫಿಕ್ ಪೊಲೀಸ್ ದೂರು

    ಬೆಂಗಳೂರು: ಹಲಸೂರು ಟ್ರಾಫಿಕ್ ಪೊಲೀಸರಿಂದ ಡ್ರೈವರ್ ಮೇಲೆ ಹಲ್ಲೆ ಪ್ರಕರಣ ಸಂಬಂಧ ಟೆಂಪೋ ಟ್ರಾವೆಲರ್ ಸುನೀಲ್ ಪೋಷಕರು ಪುಟ್ಟೇನಹಳ್ಳಿ ಠಾಣೆಗೆ ದೂರು ನೀಡಿದ್ದಾರೆ.

    ಹಲ್ಲೆಗೊಳಗಾದ ಬೇಸರದಲ್ಲಿ ಕಳೆದ 3 ದಿನಗಳಿಂದ ಮನೆ ಹೋಗದ ಸುನೀಲ್, ತಾಯಿಗೆ ಕರೆ ಮಾಡಿ ನನ್ನ ಮರ್ಯಾದೆ ಹೋಯ್ತು. ನಾನು ಮನೆಗೆ ಬರಲ್ಲ ಎಂದು ಕಾಲ್ ಕಟ್ ಮಾಡಿದ್ದಾರೆ. ಅಲ್ಲದೆ 3 ದಿನದಿಂದ ಸುನೀಲ್ ಮೊಬೈಲ್ ಫೋನ್ ಸ್ವಿಚ್ ಆಫ್ ಆಗಿದ್ದು, ಹೆತ್ತವರನ್ನು ಆತಂಕ್ಕೀಡು ಮಾಡಿದೆ.

    ಸುನೀಲ್ ಕಳೆದ ಶುಕ್ರವಾರ ಹಲಸೂರು ಬಳಿ ಟ್ರಾಫಿಕ್ ಎಎಸ್‍ಐ ಮಹಾಸ್ವಾಮಿಯಿಂದ ಹಲ್ಲೆಗೊಳಗಾಗಿದ್ದರು. ಅದೇ ದಿನ ರಾತ್ರಿ ಜೆ.ಪಿ.ನಗರದ ಜರಗನಹಳ್ಳಿಯ ಸುನೀಲ್ ನಿವಾಸಕ್ಕೆ ಬಂದ ಏಳೆಂಟು ಜನರು ಬೆದರಿಕೆ ಹಾಕಿದ್ದಾರೆ. ಮೀಡಿಯಾ ಮುಂದೆ ಹೋದರೆ ನಿಮ್ಮನ್ನು ಸುಮ್ನೆ ಬಿಡಲ್ಲವೆಂದು ಧಮ್ಕಿ ಹಾಕಿದ್ದರು. ಒಂದು ವೇಳೆ ನನ್ನ ಮಗನಿಗೆ ಏನಾದ್ರೂ ಆದರೆ ಪೊಲೀಸರೇ ಕಾರಣ ಎಂದು ಸುನೀಲ್ ತಾಯಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಏನಿದು ಪ್ರಕರಣ..?
    ಟೆಂಪೋ ಟ್ರಾವೆಲರ್ ಚಾಲಕನಾಗಿರುವ ಸುನೀಲ್ ಅವರು ಶುಕ್ರವಾರ ಬಿಬಿಎಂಪಿ ಕಡೆಯಿಂದ ಟೌನ್ ಹಾಲ್ ಬಳಿ ಯೂಟರ್ನ್ ತೆಗೆದುಕೊಂಡರು ಎಂಬ ಕಾರಣಕ್ಕೆ ಟ್ರಾಫಿಕ್ ಪೊಲೀಸರೊಬ್ಬರು ಥಳಿಸಿದ್ದರು. ಅಲ್ಲದೆ ಅವಾಚ್ಯ ಶಬ್ದಳಿಂದ ನಿಂದಿಸಿದ್ದರು.

    ಟ್ರಾಫಿಕ್ ಪೊಲೀಸ್ ಹಲ್ಲೆ ಹಾಗೂ ನಿಂದಿಸಿರುವುದನ್ನು ಸುನೀಲ್ ತಮ್ಮ ಮೊಬೈಲ್ ನಲ್ಲಿ ರೆಕಾರ್ಡ್ ಮಾಡಿಕೊಂಡಿದ್ದರು. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಭಾರೀ ಚರ್ಚೆಗೀಡಾಗಿತ್ತು. ಟ್ರಾಫಿಕ್ ಪೊಲೀಸಪ್ಪನ ದೌರ್ಜನ್ಯವನ್ನು ಕಂಡ ಜಾಲತಾಣಿಗರು ಆಕ್ರೋಶ ವ್ಯಕ್ತಪಡಿಸಿದ್ದರು.

    ಯೂಟರ್ನ್ ತೆಗೆದುಕೊಂಡ ಎಂಬ ಕಾರಣಕ್ಕೆ ಟೆಂಪೋ ಏರಿ ಚಾಲಕ ಸುನೀಲ್ ಪಕ್ಕ ಕುಳೀತ ಪೇದೆ ಮೊದಲಿಗೆ ವಾಹನವನ್ನು ರಸ್ತೆ ಬದಿಯಲ್ಲಿ ನಿಲ್ಲಿಸುವಂತೆ ಹೇಳಿದ್ದಾರೆ. ಈ ವೇಳೆ ಚಾಲಕ ಇಲ್ಲಿ ವಾಹನಗಳಿವೆ ಮುಂದೆ ನಿಲ್ಲಿಸುತ್ತೇನೆ ಎಂದಿದ್ದಾರೆ. ಇದರಿಂದ ಸಿಟ್ಟಿಗೆದ್ದ ಪೊಲೀಸ್, ತಾನೇ ವಾಹನದ ಸ್ಟೇರಿಂಗ್ ವ್ಹೀಲ್ ಹಿಡಿದು ಪಕ್ಕಕ್ಕೆ ಎಳೆಯು ಪ್ರಯತ್ನ ಮಾಡುವುದನ್ನು ನಾವು ವಿಡಿಯೋದಲ್ಲಿ ಕಾಣಬಹುದಾಗಿದೆ. ವೀಡಿಯೋ ವೈರಲ್ ಆದ ಬೆನ್ನಲ್ಲೇ ಸುನೀಲ್ ವಿರುದ್ಧವೇ ಟ್ರಾಫಿಕ್ ಪೊಲೀಸ್ ಎಫ್‍ಐಆರ್ ದಾಖಲು ಮಾಡಿದ್ದಾರೆ.

  • ಟೆಂಪೋ ಟ್ರಾವೆಲರ್, ಲಾರಿ ಮಧ್ಯೆ ಭೀಕರ ಅಪಘಾತ- ಒಂದೇ ಕುಟುಂಬದ ಮೂವರ ಸಾವು

    ಟೆಂಪೋ ಟ್ರಾವೆಲರ್, ಲಾರಿ ಮಧ್ಯೆ ಭೀಕರ ಅಪಘಾತ- ಒಂದೇ ಕುಟುಂಬದ ಮೂವರ ಸಾವು

    ಮೈಸೂರು: ಟೆಂಪೋ ಟ್ರಾವೆಲರ್ ಹಾಗೂ ಲಾರಿ ಮಧ್ಯೆ ನಡೆದಿರುವ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ್ದು, 14 ಮಂದಿ ಗಾಯಗೊಂಡಿರುವ ಘಟನೆ ಮೈಸೂರು-ಹುಣಸೂರು ಮಾರ್ಗದ ಬಸರಿಕಟ್ಟೆ ಬಳಿ ನಡೆದಿದೆ.

    ಅಪಘಾತದಲ್ಲಿ ಸಾವನ್ನಪ್ಪಿರುವವರನ್ನು ಅಬ್ದುಲ್ ಹಮೀದ್(47), ಮಹಮದ್ ಇಕ್ಬಾಲ್(37) ಹಾಗೂ ಶೇಕ್ ಹಕೀಬ್(11) ಎಂದು ಗುರುತಿಸಲಾಗಿದೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

    ಟೆಂಪೋ ಟ್ರಾವೆಲರ್ ನಲ್ಲಿದ್ದವರು ಮಂಗಳೂರಿನಿಂದ ಊಟಿಗೆ ಕುಟುಂಬ ಸಮೇತ ತೆರಳುತ್ತಿದ್ದರು. ಈ ವೇಳೆ ಮೈಸೂರಿನ ಬಸರಿಕಟ್ಟೆ ಬಳಿ ಟೆಂಪೋ ಟ್ರಾವೆಲರ್ ಲಾರಿಯನ್ನು ಓವರ್ ಟೇಕ್ ಮಾಡುವ ಸಂದರ್ಭದಲ್ಲಿ ಅಪಘಾತ ಸಂಭವಿಸಿದೆ ಎಂದು ಹೇಳಲಾಗಿದೆ.

    ಘಟನಾ ಸ್ಥಳಕ್ಕೆ ಹುಣಸೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.