Tag: tender

  • Bengaluru | ಸುರಂಗ ಮಾರ್ಗಕ್ಕೆ ಶೀಘ್ರದಲ್ಲೇ ಟೆಂಡರ್: ಡಿಕೆಶಿ

    Bengaluru | ಸುರಂಗ ಮಾರ್ಗಕ್ಕೆ ಶೀಘ್ರದಲ್ಲೇ ಟೆಂಡರ್: ಡಿಕೆಶಿ

    ಬೆಂಗಳೂರು: ಸಚಿವ ಸಂಪುಟ ಸಭೆಯಲ್ಲಿ ಬೆಂಗಳೂರಿನ ಎರಡು ಹಂತದ ಸುರಂಗ ರಸ್ತೆ (Tunnel Road) ನಿರ್ಮಾಣಕ್ಕೆ ಅನುಮೋದನೆ ದೊರೆತಿದ್ದು, ಮೊದಲ ಹಂತದ ಯೋಜನೆಗೆ ಶೀಘ್ರವೇ ಟೆಂಡರ್ ಕರೆಯಲಾಗುವುದು ಎಂದು ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ತಿಳಿಸಿದರು.

    ಬೆಂಗಳೂರಲ್ಲಿ ಸುರಂಗ ರಸ್ತೆ ನಿರ್ಮಾಣ ಹಾಗೂ ಮಂಡ್ಯದ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ನಡೆಸುವ ಸಂಬಂಧ ಡಿಸಿಎಂ ಡಿಕೆ ಶಿವಕುಮಾರ್ ಅವರು ವಿಧಾನಸೌಧದಲ್ಲಿ ಸಭೆ ನಡೆಸಿದ ನಂತರ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದರು. ಬೆಂಗಳೂರಿನ ಸುರಂಗ ರಸ್ತೆಯ ಪ್ರವೇಶ ಹಾಗೂ ನಿರ್ಗಮನದ ಭಾಗದಲ್ಲಿ ಸಂಚಾರ ದಟ್ಟಣೆ ಆಗಬಾರದು ಎಂಬ ಉದ್ದೇಶದಿಂದ ಈ ಯೋಜನೆಗೆ ಟೆಂಡರ್ ಕರೆಯುವ ಮುನ್ನ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಅಧಿಕಾರಿಗಳು, ಪೊಲೀಸ್ ಇಲಾಖೆಯ ಡಿಜಿಪಿ, ಐಜಿಪಿ ಮತ್ತು ಸಂಚಾರಿ ಪೊಲೀಸ್ ಇಲಾಖೆ ಅಧಿಕಾರಿಗಳ ಜತೆ ಸಭೆ ನಡೆಸಲಾಗಿದೆ ಎಂದು ಮಾಹಿತಿ ನೀಡಿದರು. ಇದನ್ನೂ ಓದಿ: ಯಾದಗಿರಿ ಕಾಂಗ್ರೆಸ್ ಕಚೇರಿಗೆ ಬೆಂಕಿಯಿಟ್ಟ ಕಿಡಿಗೇಡಿಗಳು – ಸೋಫಾ, ಎಸಿ ಎಲ್ಲವೂ ಭಸ್ಮ

    ವಿಧಾನಸೌಧದ ಒಂದು ಕಿ.ಮೀ ಸುತ್ತಮುತ್ತ ಎಲ್ಲೂ ನಿರ್ಗಮನಕ್ಕೆ ಅವಕಾಶ ಕಲ್ಪಿಸುವುದಿಲ್ಲ. ಇಲ್ಲಿ ಟ್ರಾಫಿಕ್ ಜಾಮ್ ಆದರೆ ಎಲ್ಲಾಕಡೆ ಆಗುತ್ತದೆ. ಹೀಗಾಗಿ ಇದನ್ನು ಪರಿಶೀಲಿಸಲು ಪೊಲೀಸ್ ಅಧಿಕಾರಿಗಳಿಗೆ ತಿಳಿಸಿದ್ದೇನೆ. ನಾನು, ಸರ್ಕಾರದ ಮುಖ್ಯ ಕಾರ್ಯದರ್ಶಿಗಳು, ಜಿಬಿಎ ಮುಖ್ಯ ಆಡಳಿತಾಧಿಕಾರಿಗಳು ಈ ಸಭೆ ಮಾಡಿದ್ದೇವೆ ಎಂದು ಹೇಳಿದರು. ಇದನ್ನೂ ಓದಿ: Davanagere | ಚಾಲಕನ ನಿಯಂತ್ರಣ ತಪ್ಪಿ ಸಾರಿಗೆ ಬಸ್ ಪಲ್ಟಿ – 40ಕ್ಕೂ ಹೆಚ್ಚು ಮಂದಿಗೆ ಗಾಯ

    ಇನ್ನು ಬೆಂಗಳೂರಿನಲ್ಲಿ 114 ಕಿ.ಮೀ ಎಲಿವೆಟೆಡ್ ಕಾರಿಡಾರ್ ನಿರ್ಮಾಣಕ್ಕೆ ತೀರ್ಮಾನ ಮಾಡಿದ್ದು, ಈ ಯೋಜನೆ ಸಂಬಂಧ ಸಂಚಾರ ಪೊಲೀಸ್ ಅಧಿಕಾರಿಗಳ ಅಭಿಪ್ರಾಯ ಪಡೆಯಲಾಗಿದೆ ಎಂದರು. ಇದನ್ನೂ ಓದಿ: ಚಾ.ನಗರ| ಈ ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟ, ಜೂಜಾಟವಾಡಿದ್ರೆ 50,000 ದಂಡ – ಮಾಹಿತಿ ಕೊಟ್ಟವರಿಗೆ 10,000 ಬಹುಮಾನ

  • KGF ಚಿನ್ನದ ಗಣಿಯಲ್ಲಿ ಮತ್ತೆ ಹೊಳೆಯುವ ಚಿನ್ನ – ಟೆಂಡರ್ ಕರೆದ ಕೇಂದ್ರ

    KGF ಚಿನ್ನದ ಗಣಿಯಲ್ಲಿ ಮತ್ತೆ ಹೊಳೆಯುವ ಚಿನ್ನ – ಟೆಂಡರ್ ಕರೆದ ಕೇಂದ್ರ

    ಕೋಲಾರ: 22 ವರ್ಷಗಳ ನಂತರ ವಿಶ್ವ ಪ್ರಸಿದ್ಧ ಕೆಜಿಎಫ್ (KGF) ಚಿನ್ನದ (Gold) ಗಣಿಯಲ್ಲಿ ಮತ್ತೆ ಚಿನ್ನ ಹೊಳೆಯುವ ಸಾಧ್ಯತೆ ಗೋಚರವಾಗುತ್ತಿದೆ. ಕೆಜಿಎಫ್‍ನಲ್ಲಿ ಚಿನ್ನ ತೆಗೆಯಲು ಮನಸ್ಸು ಮಾಡಿರುವ ಕೇಂದ್ರ ಸರ್ಕಾರ ಎರಡು ದಶಕಗಳ ನಂತರ ಕೆಜಿಎಫ್ ಚಿನ್ನದ ಗಣಿಯ ಬಗ್ಗೆ ಆಸಕ್ತಿ ವಹಿಸಿರುವುದು ಸಂತಸ ತಂದಿದೆ. ಆದ್ರೆ ಸರ್ಕಾರ ಕಾರ್ಮಿಕರ ಹಿತಾಸಕ್ತಿ ಮರೆತಿದ್ದು ಬೇಸರ ಮೂಡಿಸಿದೆ.

    ವಿಶ್ವಕ್ಕೆ ಚಿನ್ನವನ್ನು ಕೊಟ್ಟ ಹೆಗ್ಗಳಿಗೆ ಕೋಲಾರದ ಕೆಜಿಎಫ್ ಚಿನ್ನದ ಗಣಿಗೆ ಸಲ್ಲುತ್ತದೆ. ಆದರೆ 2001ರಲ್ಲಿ ಚಿನ್ನದ ಗಣಿಗೆ ಬೀಗ ಹಾಕಿದ ನಂತರ, ಕೇಂದ್ರ ಸರ್ಕಾರ ಕೆಜಿಎಫ್ ಚಿನ್ನದ ಗಣಿಯನ್ನು ಇಲ್ಲಿನ ಕಾರ್ಮಿಕರನ್ನು ಅವರ ಸಂಕಷ್ಟಗಳು ಎಲ್ಲವನ್ನೂ ಮರೆತು ಹೋಗಿತ್ತು. ಚಿನ್ನದ ಗಣಿಗೆ ಬೀಗ ಹಾಕಿದ್ದ ಸರ್ಕಾರ ಕೆಲಸ ಕಳೆದುಕೊಂಡ ಕಾರ್ಮಿಕರಿಗೆ ಯಾವುದೇ ಪರಿಹಾರ ನೀಡದೇ, ನಿವೃತ್ತಿ ಪರಿಹಾರವನ್ನೂ ನೀಡಿರಲಿಲ್ಲ. ಸುಮಾರು 3,500 ಜನ ಕಾರ್ಮಿಕರಿಗೆ 52 ಕೋಟಿ ರೂಪಾಯಿ ಪರಿಹಾರ ನೀಡಬೇಕಿತ್ತು. ಯಾವುದನ್ನೂ ನೀಡದೆ ಚಿನ್ನದ ಗಣಿಗೆ ಬೀಗ ಹಾಕಿ ಸುಮ್ಮನಾಗಿತ್ತು. ಅತ್ತ ಕಾರ್ಮಿಕ ಸಂಘಟನೆಗಳು ಹತ್ತಾರು ವರ್ಷಕಾಲ ನ್ಯಾಯಕ್ಕಾಗಿ ಸರ್ಕಾರಗಳ ಬಳಿ, ನ್ಯಾಯಾಲಯದಲ್ಲಿ ಹೋರಾಟ ಮಾಡುತ್ತಲೇ ಇದ್ದಾರೆ. ಇನ್ನು ಕಾರ್ಮಿಕರಿಗೆ ಪರಿಹಾರ ಸಿಕ್ಕಿಲ್ಲ. ಇದನ್ನೂ ಓದಿ: ತುರಹಳ್ಳಿ ಫಾರೆಸ್ಟ್‌ನಲ್ಲಿ ಆಪರೇಷನ್ ಚಿರತೆ- ಬೆಂಗ್ಳೂರಿನಲ್ಲೂ `ರುದ್ರಪ್ರಯಾಗ’ದ ಥ್ರಿಲ್ಲರ್ ಸ್ಟೋರಿ

    ಏಕಾಏಕಿ ಸರ್ಕಾರ ಈಗ ಕೆಜಿಎಫ್‍ನಲ್ಲಿ ಇರುವ ಚಿನ್ನವನ್ನು ತೆಗೆದ ನಂತರ ಹೊರ ಹಾಕಿರುವ ಮಣ್ಣಿನಲ್ಲಿ ಅಂದರೆ ಕೆಜಿಎಫ್‍ನಲ್ಲಿರುವ 13 ಸೈನೈಡ್ ಗುಡ್ಡಗಳಲ್ಲಿ ಚಿನ್ನವನ್ನು ಮತ್ತೊಮ್ಮೆ ಶೋಧಿಸುವ ಕೆಲಸಕ್ಕೆ ಟೆಂಡರ್ ಕರೆದಿದೆ. ಕೆಜಿಎಫ್ ನಗರದ ಸುತ್ತಮುತ್ತ 13 ಸೈನೈಡ್ ಗುಡ್ಡಗಳಿದ್ದು ಅದರಲ್ಲಿ ಸುಮಾರು 35 ಲಕ್ಷ ಮಿಲಿಯನ್ ಟನ್ ಮಣ್ಣಿದೆ. ಸಂಶೋಧನೆಗಳ ಪ್ರಕಾರ ಒಂದು ಟನ್ ಮಣ್ಣಿನಲ್ಲಿ ಸರಾಸರಿ ಒಂದು ಗ್ರಾಮ್ ಚಿನ್ನ ಸಿಗುತ್ತದೆ. ಅದರಂತೆ 25 ಟನ್ ಚಿನ್ನ ಸಿಗುವ ನಿರೀಕ್ಷೆ ಇದೆ. ಸದ್ಯ ಆ ಮಣ್ಣಿನಲ್ಲಿ ಚಿನ್ನವನ್ನು ಹೊರತೆಗೆಯುವ ಕೆಲಸ ಆರಂಭಿಸಿದ್ದು ಮೊದಲ ಹಂತದ ಟೆಂಡರ್ ಪ್ರಕ್ರಿಯೆ ಶುರುಮಾಡಿದೆ. ಇದನ್ನೂ ಓದಿ: ಇಕ್ಬಾಲ್ ಅನ್ಸಾರಿ ಹನುಮ ಮಾಲಾಧಾರಿಗಳಿಗೆ ಸ್ವಾಗತ ಕೋರಿ ಬ್ಯಾನರ್ – ಶ್ರೀರಾಮಸೇನೆ ಆಕ್ಷೇಪ

    22 ವರ್ಷಗಳ ಹಿಂದೆ ಚಿನ್ನದ ಗಣಿಯಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರು ಕೆಲಸ ಕಳೆದುಕೊಂಡ ನಂತರ ಸಾವಿರಾರು ಕಾರ್ಮಿಕರು ಕೆಲಸವಿಲ್ಲದೆ ಬೀದಿಗೆ ಬಿದ್ದರು. ಕಾರ್ಮಿಕರ ಕುಟುಂಬಗಳು ಬೀದಿಗೆ ಬಿದ್ದ ಪರಿಸ್ಥಿತಿಯಲ್ಲಿ ಸರ್ಕಾರ ಕಾರ್ಮಿಕರಿಗೆ ಯಾವುದೇ ರೀತಿಯ ಪರಿಹಾರ ರೂಪಿಸಲಿಲ್ಲ. ಕೊನೆ ಪಕ್ಷ ಕಾರ್ಮಿಕರಿಗೆ ಆರೋಗ್ಯ, ಶಿಕ್ಷಣ, ಉದ್ಯೋಗ ಯಾವುದೇ ಪರ್ಯಾಯ ವ್ಯವಸ್ಥೆ ಮಾಡಲಿಲ್ಲ. ಚಿನ್ನದ ಗಣಿಗೆ ಬೀಗ ಹಾಕಿದ ನಂತರ ಕೆಜಿಎಫ್‍ನ್ನು ಮರೆತೇ ಹೋಗಿತ್ತು. ಆದರೆ ಈಗ ಜಾಗತಿಕ ಮಟ್ಟದಲ್ಲಿ ಚಿನ್ನಕ್ಕೆ ಹೆಚ್ಚಿನ ಬೇಡಿಕೆ ಇರುವ ಕಾರಣದಿಂದಾಗಿ ಕೇಂದ್ರ ಸರ್ಕಾರ ಇಷ್ಟು ದಿನ ಕಾರ್ಮಿಕರ ಹಿತಾಸಕ್ತಿಯನ್ನು ಕಡೆಗಣಿಸಿ ಈಗ ಏಕಾಏಕಿ ಚಿನ್ನಕ್ಕಾಗಿ ಕೆಜಿಎಫ್ ಮೇಲೆ ಪ್ರೀತಿ ತೋರಿಸುವ ನಾಟಕ ಆಡುತ್ತಿದೆ ಎಂದು ಕೆಜಿಎಫ್ ಶಾಸಕಿ ರೂಪಕಲಾ ಆರೋಪಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಹೆಸ್ಕಾಂ ಗುತ್ತಿಗೆದಾರರ ಒಳರಾಜಕೀಯ – ಆರೋಪಕ್ಕೆ VTSD ತಿರುಗೇಟು

    ಹೆಸ್ಕಾಂ ಗುತ್ತಿಗೆದಾರರ ಒಳರಾಜಕೀಯ – ಆರೋಪಕ್ಕೆ VTSD ತಿರುಗೇಟು

    ಹುಬ್ಬಳ್ಳಿ: ಹೆಸ್ಕಾಂ (HESCL)  ಅನುಮತಿಪಡೆದ ಗುತ್ತಿಗೆದಾರ ಸಂಘದ ಒಳ ರಾಜಕೀಯ ಸದ್ಯಕ್ಕೆ ಮುಗಿದಂತೆ ಕಾಣುತ್ತಿಲ್ಲ. ಹೆಸ್ಕಾಂ ನಲ್ಲಿ 25 ಪರ್ಸೆಂಟ್ ಲಂಚದ ಆರೋಪ ಬೆನ್ನಲ್ಲೇ, ಬೆಂಗಳೂರು ಮೂಲದ ವಿಟಿಎಸ್‌ಡಿ (VTSD) ಗುತ್ತಿಗೆದಾರ ಕಂಪನಿಯ ಮೇಲೆ ಟೆಂಡರ್ ಗೋಲ್ ಮಾಲ್ ಆರೋಪ ಕೇಳಿಬಂದಿತ್ತು.

    ವಿಟಿಎಸ್‌ಡಿ (VTSD) ಕಂಪನಿ ಅಧಿಕೃತ ಪರವಾನಿಗೆ ಇಲ್ಲದೇ ಟೆಂಡರ್ (Tender) ಪಡೆದಿದೆ ಎಂದು ಆರೋಪ ಮಾಡಲಾಗಿತ್ತು. ಈ ಆರೋಪ ಬೆನ್ನಲ್ಲೇ ಇಂಧನ ಇಲಾಖೆ ಒಟ್ಟು 472 ಕೋಟಿ ಟೆಂಡರ್ ಗಳನ್ನು ರದ್ದುಪಡಿಸಿತು. ಇದೀಗ ವಿಟಿಎಸ್‌ಡಿ ತನ್ನ ಮೇಲಿನ ಆರೋಪಕ್ಕೆ ತಿರುಗೇಟು ನೀಡಿದೆ. ಇದನ್ನೂ ಓದಿ: ಕ್ಯಾಂಪಸ್‌ನಲ್ಲಿ ಲವ್‌ಜಿಹಾದ್‌ಗೆ ಉತ್ತೇಜನ, ಸೇನೆಗೆ ಅಪಮಾನ – 6 ಶಿಕ್ಷಕರಿಗೆ ಪಾಠ ಮಾಡದಂತೆ ಸೂಚನೆ

    ಹುಬ್ಬಳ್ಳಿಯಲ್ಲಿಂದು (Hubballi) ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕಂಪನಿ ಪ್ರಮುಖ ಪ್ರವೀಣ್ ರುದ್ರಪ್ಪ, ಗುತ್ತಿಗೆದಾರ ಸಂಘದ ಮಾಜಿ ಪದಾಧಿಕಾರಿಗಳಾದ ವಿಜಯ್ ಕುಮಾರ್ ಹಾಗೂ ಇತರರಿಗೆ ಟೆಂಡರ್ ಸಿಕ್ಕಿಲ್ಲ ಎಂದು ನಮ್ಮ ಕಂಪನಿ ಮೇಲೆ ಸುಳ್ಳು ಆರೋಪ ಮಾಡಿದ್ದಾರೆ. ಟೆಂಡರ್ ಸಿಗದೇ ಇರೋದಕ್ಕೆ ಆರೋಪ ಮಾಡಲಾಗಿದೆ ಎಂದು ದಾಖಲೆ ಬಿಡುಗಡೆ ಮಾಡಿದ್ದಾರೆ. ಇದನ್ನೂ ಓದಿ: ವಿವಾಹಪೂರ್ವ ಸೆಕ್ಸ್ ಮಾಡಿದ್ರೆ 1 ವರ್ಷ ಜೈಲು – ಹೊಸ ಕಾನೂನು ಜಾರಿಗೆ ಇಂಡೋನೇಷ್ಯಾ ಸಜ್ಜು

    ಆರೋಪ ಕೇಳಿಬಂದ ಕೂಡಲೇ ಟೆಂಡರ್ ರದ್ದು ಪಡಿಸೋದು ಸರಿಯಲ್ಲ. ಕೂಡಲೇ ಟೆಂಡರ್ ಪ್ರಕ್ರಿಯೆಯನ್ನು ಕೂಲಂಕಷವಾಗಿ ಮರುವಿಚಾರಣೆ ಮಾಡುವಂತೆ ಮನವಿ ಸಹ ಮಾಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • 47,627 ಬುಲೆಟ್ ಪ್ರೂಫ್ ಜಾಕೆಟ್‍ಗಳಿಗೆ ಟೆಂಡರ್ ಕೊಟ್ಟ ಭಾರತೀಯ ಸೇನೆ

    47,627 ಬುಲೆಟ್ ಪ್ರೂಫ್ ಜಾಕೆಟ್‍ಗಳಿಗೆ ಟೆಂಡರ್ ಕೊಟ್ಟ ಭಾರತೀಯ ಸೇನೆ

    ನವದೆಹಲಿ: ಮಾರಣಾಂತಿಕ ಸ್ಟೀಲ್ ಕೋರ್ ಬುಲೆಟ್‍ಗಳಿಂದ ಯೋಧರನ್ನು ರಕ್ಷಿಸಲು ಭಾರತೀಯ ಸೇನೆಯು (Indian Army) ಮುಂಚೂಣ ಪಡೆಗಳಿಗಾಗಿ 47,627 ಬುಲೆಟ್‍ಪ್ರೂಫ್ ಜಾಕೆಟ್‍ಗಳಿಗಾಗಿ (Bulletproof Jackets) ಟೆಂಡರ್ ನೀಡಿದೆ.

    ರಕ್ಷಣಾ ಸಚಿವಾಲಯವು ಮೇಕ್ ಇನ್ ಇಂಡಿಯಾ (Make in India) ಅಡಿಯಲ್ಲಿ ಜಾಕೆಟ್‍ಗಳಿಗೆ ಟೆಂಡರ್ ನೀಡಿದ್ದು, ಎಲ್ಲಾ ವಿಧಾನಗಳನ್ನು ಅಂತಿಮಗೊಳಿಸಿ, ಜಾಕೆಟ್ ಬಳಸಲು ಸೂಕ್ತವಾಗಿದೆಯೇ ಎಂದು ಪರಿಶೀಲನೆ ನಡೆಸಿದ ನಂತರ 12 ರಿಂದ 24 ತಿಂಗಳ ಅವಧಿಯೊಳಗೆ ಜಾಕೆಟ್ ತಯಾರಿಸಲಾಗುತ್ತದೆ ಎಂದು ಭಾರತೀಯ ರಕ್ಷಣಾ ಇಲಾಖೆ (Ministry of Defence) ತಿಳಿಸಿದೆ. ಇದನ್ನೂ ಓದಿ: ಮೋದಿಯಿಂದ ಏಷ್ಯಾದ ಮೊದಲ ಗಾರ್ಡನ್‌ ಟರ್ಮಿನಲ್‌ ಉದ್ಘಾಟನೆ – ವಿಶೇಷತೆ ಏನು?

    7.62 ಎಂಎಂ ರಕ್ಷಾಕವಚ ಚುಪಾದ ರೈಫಲ್ ಮದ್ದುಗುಂಡುಗಳು ಮತ್ತು 10 ಮೀಟರ್ ದೂರದಿಂದ ವೇಗವಾಗಿ ಬರುವ ಉಕ್ಕಿನ ಕೋರ್ ಬುಲೆಟ್‍ಗಳಿಂದ ಸೈನಿಕನನ್ನು ರಕ್ಷಿಸಲು ಸಾಮಥ್ರ್ಯವನ್ನು ಈ ಜಾಕೆಟ್ ಹೊಂದಿರಲಿದೆ. ಈ ಜಾಕೆಟ್ ಸರಿಸುಮಾರು 10 ಕೆಜಿಗಿಂತ ಕಡಿಮೆ ಇರಲಿದೆ. ಇದನ್ನೂ ಓದಿ : ಯಾರಿಗೂ ಭಯಪಡಬೇಡಿ, ದೇಶದಲ್ಲಿ ಪ್ರೀತಿ, ಭ್ರಾತೃತ್ವವನ್ನು ಹರಡಿ – ಯುವ ಜನತೆಗೆ ರಾಹುಲ್ ಸಂದೇಶ

    ಭಾರತದ ಸೇನೆ ಬುಲೆಟ್ ಪ್ರೂಫ್ ಜಾಕೆಟ್‍ಗಳ ಕೊರತೆ ಅನುಭವಿಸುತ್ತಿದೆ. ಹಲವು ವರ್ಷಗಳಿಂದ ಖರೀದಿಗೆ ಸಿದ್ಧತೆ ನಡೆಸುತ್ತಿದ್ದರೂ ಗುಣಮಟ್ಟದ ವಿಷಯದಿಂದಾಗಿ ಈ ಪ್ರಕ್ರಿಯೆ ತಡವಾಗುತ್ತಿತ್ತು. ಮುಂದಿನ ದಿನಗಳಲ್ಲಿ ಸೈನಿಕರಿಗೆ ಪೂರ್ಣ ದೇಹಕ್ಕೆ ರಕ್ಷಣೆ ನೀಡುವ ಬುಲೆಟ್ ಪ್ರೂಫ್ ಜಾಕೆಟ್ ತಯಾರಿಸಲು ಟೆಂಡರ್ ನೀಡುವ ಸಾಧ್ಯತೆಯಿದೆ.

    Live Tv
    [brid partner=56869869 player=32851 video=960834 autoplay=true]

  • ದಲಿತರಿಗೆ ಚಪ್ಪಲಿ ಕಾಯುವ ಕೆಲಸ – ಇದು ಸಿದ್ದು ಸರ್ಕಾರದ ಆದೇಶ ಎಂದ ಬಿಜೆಪಿ

    ದಲಿತರಿಗೆ ಚಪ್ಪಲಿ ಕಾಯುವ ಕೆಲಸ – ಇದು ಸಿದ್ದು ಸರ್ಕಾರದ ಆದೇಶ ಎಂದ ಬಿಜೆಪಿ

    ಬೆಂಗಳೂರು: ಬಸವನಗುಡಿಯಲ್ಲಿರುವ ದೊಡ್ಡಗಣಪತಿ(Basavanagudi Dodda Ganapathi Temple) ದೇವಸ್ಥಾನದ ಚಪ್ಪಲಿ ಸ್ಟ್ಯಾಂಡ್‌ ಟೆಂಡರ್‌(Tender) ಅನ್ನು ಪರಿಶಿಷ್ಟರಿಗೆ ಮೀಸಲಿಟ್ಟ ವಿಚಾರಕ್ಕೆ ಸಂಬಧಿಸಿದಂತೆ ಈಗ ಕಾಂಗ್ರೆಸ್‌(Congress) ಮತ್ತು ಬಿಜೆಪಿ(BJP) ಮಧ್ಯೆ ಕಿತ್ತಾಟ ಶುರುವಾಗಿದೆ. ಈ ಆರೋಪಕ್ಕೆ ಬಿಜೆಪಿ ಪ್ರತಿಕ್ರಿಯಿಸಿ ಕಾಂಗ್ರೆಸ್‌ ಸರ್ಕಾರದಲ್ಲಿರುವಾಗಲೇ ಈ ರೀತಿಯ ಟೆಂಡರ್‌ ಕರೆಯಲಾಗಿತ್ತು ಎಂದು ಹೇಳಿ ಸಿದ್ದರಾಮಯ್ಯ ಸರ್ಕಾರವನ್ನು ದೂರಿದೆ.

    ಮುಜರಾಯಿ ದೇವಾಲಯಗಳಲ್ಲಿ ಮಿಕ್ಕೆಲ್ಲ ಟೆಂಡರ್ ಸಾಮಾನ್ಯ ವರ್ಗಕ್ಕೆ, ಚಪ್ಪಲಿ ಕಾಯುವುದು ಮಾತ್ರ ದಲಿತರಿಗೆ. ಇದು ಸರ್ಕಾರಿ ಅಸ್ಪೃಶ್ಯತೆ ಆಚರಣೆ, ದಲಿತರನ್ನು ಚಪ್ಪಲಿ ಕಾಯಲು ಸೀಮಿತಗೊಳಿಸಿ ಮನುಸ್ಮೃತಿ ಪಾಲಿಸುತ್ತಿದೆ ಬಿಜೆಪಿ ಸರ್ಕಾರ ಎಂದು ಕಾಂಗ್ರೆಸ್‌ ಶಾಸಕ ಪ್ರಿಯಾಂಕ್‌ ಖರ್ಗೆ ದೂರಿದ್ದರು.

    ಈ ಆರೋಪಕ್ಕೆ ಪ್ರತಿಕ್ರಿಯಿಸಿದ  ಬಿಜೆಪಿ ಕರ್ನಾಟಕ, ಈ ಪ್ರಸ್ತಾವನೆಯನ್ನು ಕೂಲಂಕುಷವಾಗಿ ಪರಿಶೀಲಿಸಿ ಆದೇಶ ಹೊರಡಿಸಲಾಗಿದೆ ಎಂದು ಆದೇಶ ಹೊರಡಿಸುವಾಗ ಕಾಂಗ್ರೆಸ್‌ ಸರ್ಕಾರ ಅಧಿಕಾರದಲ್ಲಿತ್ತು. ಸಿದ್ದರಾಮಯ್ಯ ಸಿಎಂ ಆಗಿದ್ದರು. ಬಿಜೆಪಿ ಸರ್ಕಾರ ಈ ಆದೇಶವನ್ನು ಹಿಂದಕ್ಕೆ ತೆಗೆದುಕೊಂಡಿದೆ, ಹಾಗಾದರೆ ದಲಿತರನ್ನು ಚಪ್ಪಲಿ ಕಾಯಲು ಸೀಮಿತಗೊಳಿಸಿದ್ದು ಯಾರು ಪ್ರಿಯಾಂಕ್‌ ಖರ್ಗೆ ಅವರೇ ಎಂದು ಪ್ರಶ್ನಿಸಿದೆ. ಇದನ್ನೂ ಓದಿ: ಭಾರತಮಾತೆ ವಿಧವೆಯಲ್ಲ – ಹಣೆಗೆ ಬೊಟ್ಟು ಇಡದ ಪತ್ರಕರ್ತೆಗೆ ಪ್ರತಿಭಟನಾಕಾರನಿಂದ ತರಾಟೆ

    ಮುಜರಾಯಿ ಖಾತೆ ಸಚಿವೆ ಶಶಿಕಲಾ ಜೊಲ್ಲೆ ಪ್ರತಿಕ್ರಿಯಿಸಿ, ಈ ರೀತಿ ಟೆಂಡರ್‌ ಪ್ರಕಟಿಸಬಾರದಿತ್ತು. 2016ರಲ್ಲೇ ಈ ರೀತಿಯ ಆದೇಶ ಪ್ರಕಟವಾಗಿತ್ತು. ಈ ಹಿಂದೆಯೇ ಇಂಥ ಪದ್ದತಿ ಇತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಟೆಂಡರ್ ಕರೆದ ಅಧಿಕಾರಿಗೆ ನೋಟಿಸ್‌ ನೀಡಲಾಗುವುದು. ಮುಂದಿನ ದಿನಗಳಲ್ಲಿ ಇಂಥ ತಪ್ಪು ಆಗದ ರೀತಿ ಕ್ರಮ ವಹಿಸಲಾಗುವುದು ಎಂದು ಹೇಳಿದ್ದಾರೆ.

    ಏನಿದು ವಿವಾದ?
    ದೊಡ್ಡ ಗಣಪತಿ ದೇವಸ್ಥಾನದ ಆಡಳಿತ ಮಂಡಳಿ ಕರೆದ ಟೆಂಡರ್‌ನಲ್ಲಿ(Tender) ಇಂಥಾದ್ದೇ ಸಮುದಾಯದವರು ಭಾಗವಹಿಸಬೇಕು ಎಂಬ ಅಂಶವಿದೆ. ಬರುವ ಭಕ್ತರ ಪಾದರಕ್ಷೆ ಕಾಯಲು ಟೆಂಡರ್ ಆಹ್ವಾನಿಸಿದ್ದು, ಪರಿಶಿಷ್ಟ ವರ್ಗದವರು ಮಾತ್ರ ಪಾಲ್ಗೊಳ್ಳಬೇಕು ಎಂದು ಪ್ರಕಟಿಸಿದೆ. ಜೊತೆಗೆ ಪೂಜಾ ಸಾಮಾಗ್ರಿ ಮಾರಾಟ, ಈಡುಗಾಯಿ ಆಯ್ದುಕೊಳ್ಳುವ ಹಕ್ಕಿನ ಟೆಂಡರ್, ಎಳನೀರು ಮಾರಾಟದ ಟೆಂಡರ್ ಅನ್ನು ಸಾಮಾನ್ಯ ವರ್ಗಕ್ಕೆ ಮೀಸಲಿಡಲಾಗಿದೆ.

    ದೇವಸ್ಥಾನದ ಈ ಟೆಂಡರ್ ಪ್ರಕಟಣೆಗೆ ವ್ಯಾಪಕ ಟೀಕೆಗೆ ವ್ಯಕ್ತವಾಗಿದೆ. ಇದು ವಿವಾದ ಆಗುತ್ತಿದ್ದಂತೆ ಎಚ್ಚೆತ್ತ ದೊಡ್ಡ ಗಣೇಶ ದೇಗುಲದ ಆಡಳಿತ ಮಂಡಳಿ, ಟೆಂಡರ್ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಿ ಪ್ರಕಟಣೆ ಹೊರಡಿಸಿದೆ. ಮುಜರಾಯಿ ಇಲಾಖೆ ತಹಶೀಲ್ದಾರರು ಈಗ ಈ ರೀತಿಯಾಗಿ ಹೇಗೆ ಟೆಂಡರ್ ಕರೆದಿದ್ದೀರಿ ವಿವರಣೆ ನೀಡಿ ಎಂದು ದೊಡ್ಡ ಗಣೇಶ ದೇಗುಲದ ಆಡಳಿತ ಮಂಡಳಿಗೆ ನೋಟಿಸ್‌ ನೀಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಬಬಲೇಶ್ವರ, ತಿಕೋಟ ಜನರಿಗೆ ಸಿಹಿ ಸುದ್ದಿ- ಮಿನಿ ವಿಧಾನಸೌಧ ನಿರ್ಮಾಣಕ್ಕೆ ಟೆಂಡರ್ ಆಹ್ವಾನ

    ಬಬಲೇಶ್ವರ, ತಿಕೋಟ ಜನರಿಗೆ ಸಿಹಿ ಸುದ್ದಿ- ಮಿನಿ ವಿಧಾನಸೌಧ ನಿರ್ಮಾಣಕ್ಕೆ ಟೆಂಡರ್ ಆಹ್ವಾನ

    ವಿಜಯಪುರ: ಜಿಲ್ಲೆಯ ಬಬಲೇಶ್ವರ ವಿಧಾನಸಭಾ ಕ್ಷೇತ್ರದ ಬಬಲೇಶ್ವರ ಮತ್ತು ತಿಕೋಟಾ ನೂತನ ತಾಲೂಕು ಕೇಂದ್ರಗಳಾಗಿ ಒಂದು ವರ್ಷ ಕಳೆದಿದೆ. ಆದರೂ ತಾಲೂಕು ಅಡಳಿತ ಕಚೇರಿ ಇಲ್ಲ. ಇದೀಗ ಎರಡೂ ತಾಲೂಕುಗಳ ಜನತೆಗೆ ಸಿಹಿ ಸುದ್ದಿ ಸಿಕ್ಕಿದ್ದು, ಮಿನಿ ವಿಧಾನಸೌಧ ನಿರ್ಮಾಣಕ್ಕೆ ಟೆಂಡರ್ ಆಹ್ವಾನಿಸಲಾಗಿದೆ.

    ಎರಡು ನೂತನ ತಾಲೂಕಿನ ಜನರು ತಾಲೂಕು ಕಚೇರಿಗಳನ್ನು ನಿರ್ಮಿಸಲು ಅನೇಕ ಹೋರಾಟ ಮಾಡಿದ್ದರು. ಆದರೆ ಸೂಕ್ತ ಕಟ್ಟಡಗಳ ಕೊರತೆ ಇರುವುದರಿಂದ ತಾಲೂಕು ಕಚೇರಿ ನಿರ್ಮಾಣಕ್ಕೆ ಹಿಂದೇಟು ಹಾಕಿದ್ದರು. ಇದೀಗ ಎರಡು ನೂತನ ತಾಲೂಕಿನ ಜನರಿಗೆ ಕ್ಷೇತ್ರದ ಶಾಸಕ, ಮಾಜಿ ಸಚಿವ ಎಂ.ಬಿ.ಪಾಟೀಲ್ ಖುಷಿ ವಿಚಾರ ಪ್ರಕಟಿಸಿದ್ದಾರೆ. ತಾಲೂಕು ಕೇಂದ್ರಗಳಾದ ಬಬಲೇಶ್ವರ ಮತ್ತು ತಿಕೋಟಾದಲ್ಲಿ ಮಿನಿ ವಿಧಾನಸೌಧಗಳನ್ನು ನಿರ್ಮಿಸಲು ಟೆಂಡರ್ ಕರೆಯಲಾಗಿದೆ.

    ನೂತನ ತಾಲೂಕು ಕೇಂದ್ರಗಳಲ್ಲಿ ಎಲ್ಲ ತಾಲೂಕು ಮಟ್ಟದ ವಿವಿಧ ಇಲಾಖೆಗಳ ಕಚೇರಿಗಳನ್ನು ಒಂದೇ ಸೂರಿನಡಿ ತರುವ ಉದ್ದೇಶದಿಂದ ತಲಾ 10 ಕೋಟಿ ರೂ. ವೆಚ್ಚದಲ್ಲಿ ಬಬಲೇಶ್ವರ ಹಾಗೂ ತಿಕೋಟಾ ಎರಡು ಕಡೆ ಸುಸಜ್ಜಿತ ಮಿನಿ ವಿಧಾನಸೌಧ ನಿರ್ಮಿಸಲಾಗುತ್ತಿದೆ. ಬಬಲೇಶ್ವರದಲ್ಲಿ ಅಡವಿಸಂಗಾಪುರ ರಸ್ತೆಯಲ್ಲಿರುವ ಸರ್ಕಾರಿ ಜಾಗದಲ್ಲಿ ಹಾಗೂ ತಿಕೋಟಾದಲ್ಲಿ ಹಳೆ ಪ್ರವಾಸಿ ಮಂದಿರದ ಜಾಗದಲ್ಲಿ ಈ ಮಿನಿ ವಿಧಾನಸೌಧಗಳನ್ನು ನಿರ್ಮಿಸಲಾಗುತ್ತಿದೆ. ಈಗಾಗಲೇ ಟೆಂಡರ್ ಕರೆಯಲಾಗಿದ್ದು, ಟೆಂಡರ್ ಪ್ರಕ್ರಿಯೆ ಮುಗಿದ ನಂತರ ಕಾಮಗಾರಿ ಆರಂಭಿಸಲಾಗುವುದು ಎಂದು ಶಾಸಕ ಎಂ.ಬಿ.ಪಾಟೀಲ್ ಪ್ರಕಟಿಸಿದ್ದಾರೆ.

  • 1800 ಕೋಟಿ ಟೆಂಡರ್‌ ರದ್ದು – ಸರ್ಕಾರ ಕ್ರಮವೇ ನ್ಯಾಯಾಂಗ ನಿಂದನೆ ಎಂದ ಹೈಕೋರ್ಟ್‌

    1800 ಕೋಟಿ ಟೆಂಡರ್‌ ರದ್ದು – ಸರ್ಕಾರ ಕ್ರಮವೇ ನ್ಯಾಯಾಂಗ ನಿಂದನೆ ಎಂದ ಹೈಕೋರ್ಟ್‌

    ಬೆಂಗಳೂರು: ಅಂಬುಲೆನ್ಸ್ ನಿಯಂತ್ರಣಾ ಕೇಂದ್ರ ಸ್ಥಾಪಿಸುವ ಸಂಬಂಧ 1800 ಕೋಟಿ ರೂ. ಟೆಂಡರ್‌ ರದ್ದುಗೊಳಿಸಿದ್ದಕ್ಕೆ ಹೈಕೋರ್ಟ್‌ ರಾಜ್ಯ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದೆ.

    ಅಂಬುಲೆನ್ಸ್ ಗಳ ಸುಗಮ‌ ಸಂಚಾರಕ್ಕೆ ನಿಯಂತ್ರಣ ಕೇಂದ್ರ ಸ್ಥಾಪಿಸಲು 1800 ಕೋಟಿ ರೂ. ಟೆಂಡರ್‌ ಕರೆಯಲು ಸರ್ಕಾರ ಮುಂದಾಗಿತ್ತು. ಆದರೆ ಆರೋಗ್ಯ ಸಚಿವರ ಸೂಚನೆಯಂತೆ ಟೆಂಡರ್ ರದ್ದುಗೊಳಿಸಿದ್ದು ಯಾಕೆ ಎಂದು ಪ್ರಶ್ನಿಸಿ ಸಿಜೆ ಎ.ಎಸ್.ಒಕಾ‌ ನೇತೃತ್ವದ ವಿಭಾಗೀಯ ಪೀಠ ತರಾಟೆಗೆ ತೆಗೆದುಕೊಂಡಿದೆ.

    ಹೈಕೋರ್ಟ್ ಟೆಂಡರ್ ಪ್ರಕ್ರಿಯೆಯ ನಿಗಾ ವಹಿಸಿದೆ. ಕೋರ್ಟ್‌ಗೆ ಭರವಸೆ ನೀಡಿದ ಬಳಿಕವೂ ಟೆಂಡರ್ ರದ್ದುಪಡಿಸಿದ್ದು ಯಾಕೆ? ಸರ್ಕಾರದ ಕ್ರಮವೇ ನ್ಯಾಯಾಂಗ ನಿಂದನೆಯಾಗಿದೆ. ಸಚಿವರಿಗೆ ಕೋರ್ಟ್ ವಿಚಾರಣೆಯ ಮಾಹಿತಿ ಇರಲಿಲ್ಲವೇ ಎಂದು ಪ್ರಶ್ನಿಸಿದೆ.

    ಸರ್ಕಾರದ ಪ್ರಮಾಣಪತ್ರದಲ್ಲೂ ರದ್ದಿಗೆ ಸಕಾರಣ ನೀಡಿಲ್ಲ. ಕೋರ್ಟ್‌ಗೂ ಮಾಹಿತಿ ನೀಡದೇ ಟೆಂಡರ್ ರದ್ದುಪಡಿಸಿದ್ದೇಕೆ? ಸರ್ಕಾರ ಇದಕ್ಕೆ ಸೂಕ್ತ ವಿವರಣೆ ನೀಡಬೇಕು. ಇಲ್ಲವಾದರೆ ಆರೋಗ್ಯ ಸಚಿವರನ್ನೇ ಪ್ರತಿವಾದಿಯಾಗಿಸುವುದಾಗಿ ಎಚ್ಚರಿಕೆ ನೀಡಿದೆ.

    ಟೆಂಡರ್‌ ರದ್ದುಪಡಿಸಲು ತಜ್ಞರ ಲಿಖಿತ ಅಭಿಪ್ರಾಯವನ್ನೂ ಪಡೆದಿಲ್ಲ. ಇದು ಟೆಂಡರ್ ಪ್ರಕ್ರಿಯೆಯನ್ನು ವಿಳಂಬಿಸುವ ಯತ್ನವೆನಿಸುತ್ತಿದೆ. ಆರೋಗ್ಯ ಸಚಿವರೇ ಸ್ವತಃ ವೃತ್ತಿಪರ ವೈದ್ಯರಾಗಿದ್ದಾರೆ. ಹೀಗಿರುವಾಗ ಟೆಂಡರ್‌ ರದ್ದುಗೊಳಿಸಿದ್ದು ಯಾಕೆ ಎಂದು ಪ್ರಶ್ನಿಸಿದೆ.

     

    ಅಕ್ರಮಗಳು ನಡೆದಿದೆ ಎಂಬ ಆರೋಪ ಬಂದ ಹಿನ್ನೆಲೆಯಲ್ಲಿ ಸರ್ಕಾರ ಟೆಂಡರ್‌ ಪ್ರಕ್ರಿಯೆ ರದ್ದು ಮಾಡಲಾಗಿದೆ ಎಂದು ಕೋರ್ಟ್‌ಗೆ ಪ್ರಮಾಣಪತ್ರ ಸಲ್ಲಿಸಿತ್ತು. ಆದರೆ ಈ ಸಮಜಾಯಿಷಿಯನ್ನು ಒಪ್ಪದ ಕೋರ್ಟ್‌ ಚಾಟಿ ಬೀಸಿ ಪ್ರಶ್ನಿಸಿದೆ.

    ಬೆಂಗಳೂರಿನಲ್ಲಿ ಸಂಚಾರ ದಟ್ಟಣೆಯಲ್ಲಿ ಅಂಬುಲೆನ್ಸ್‌ಗಳು ಸಿಲುಕಿಕೊಳ್ಳುತ್ತಿವೆ. ಆಸ್ಪತ್ರೆ ತಲುಪುವುದು ವಿಳಂಬವಾಗಿ ರೋಗಿಗಳು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಸಮರ್ಪಕ ಅಂಬುಲೆನ್ಸ್ ಸೇವೆಗಾಗಿ ನಿಯಂತ್ರಣಾ ಕೇಂದ್ರ ಸ್ಥಾಪಿಸಲು ನಿರ್ದೇಶನ ನೀಡಬೇಕು ಎಂದು ಕೋರಿ ಭಾರತ ಪುನರುತ್ಥಾನ ಟ್ರಸ್ಟ್ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿತ್ತು.

  • 15 ದಿನಗಳಲ್ಲಿ ಗುತ್ತಿಗೆದಾರರ ಸಮಸ್ಯೆಗೆ ಸ್ಪಂದಿಸದಿದ್ದರೆ ರಾಜ್ಯಾದ್ಯಂತ ಉಗ್ರ ಹೋರಾಟದ ಎಚ್ಚರಿಕೆ

    15 ದಿನಗಳಲ್ಲಿ ಗುತ್ತಿಗೆದಾರರ ಸಮಸ್ಯೆಗೆ ಸ್ಪಂದಿಸದಿದ್ದರೆ ರಾಜ್ಯಾದ್ಯಂತ ಉಗ್ರ ಹೋರಾಟದ ಎಚ್ಚರಿಕೆ

    ಬೆಂಗಳೂರು: ಕೋವಿಡ್ ನಿಂದಾಗಿ ರಾಜ್ಯ ಸರಕಾರವು ಗುತ್ತಿಗೆದಾರರ ವಹಿವಾಟುಗಳಿಗೆ ತಾತ್ಕಾಲಿಕವಾಗಿ ಕೆಲವು ತಿಂಗಳುಗಳಿಂದ ಹಲವು ನಿರ್ಬಂಧಗಳನ್ನು ಹೇರಿದೆ. ಇದರ ಪರಿಣಾಮ ರಾಜ್ಯದ ಒಂದು ಲಕ್ಷಕ್ಕೂ ಅಧಿಕ ನೋಂದಾಯಿತ ಗುತ್ತಿಗೆದಾರರು ಆರ್ಥಿಕ ಸಂಕಷ್ಟಕ್ಕೆ ಗುರಿಯಾಗಿ ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಹೀಗಾಗಿ ರಾಜ್ಯದ ಗುತ್ತಿಗೆದಾರರು ತೀವ್ರ ಸಂಕಷ್ಟಕ್ಕೆ ಈಡಾಗಲಿದ್ದು, ಗುತ್ತಿಗೆದಾರರ ಸಮಸ್ಯೆಗಳ ಪರಿಹಾರಕ್ಕೆ ಕೂಡಲೇ ಕ್ರಮ ಕೈಗೊಳ್ಳಬೇಕು ಇಲ್ಲದಿದ್ದಲ್ಲಿ ರಾಜ್ಯಾದ್ಯಂತ ಉಗ್ರ ಹೋರಾಟ ಮಾಡುವುದಾಗಿ ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷರಾದ ಕೆಂಪಣ್ಣ ಅವರು ಎಚ್ಚರಿಕೆ ನೀಡಿದ್ದಾರೆ.

    ವಿವಿಧ ಸರ್ಕಾರಿ ಇಲಾಖೆಗಳಲ್ಲಿ ಗುತ್ತಿಗೆದಾರರಿಗೆ ಬಾಕಿ ಉಳಿದಿರುವ ಬಿಲ್ ಗಳಿಗೆ ಹಣ ಬಿಡುಗಡೆ ಮಾಡುವುದು ಹಾಗೂ ಪ್ಯಾಕೇಜ್ ಪದ್ದತಿಯ ಅಡಿಯಲ್ಲಿ ಟೆಂಡರ್ ಕರೆಯುವುದನ್ನು ರದ್ದುಪಡಿಸುವಂತೆ ಹಲವಾರು ಬಾರಿ ಮಾನ್ಯ ಮುಖ್ಯಮಂತ್ರಿಗಳಲ್ಲಿ, ಮಾನ್ಯ ಸಚಿವರುಗಳಲ್ಲಿ ಹಾಗೂ ಉನ್ನತ ಅಧಿಕಾರಿಗಳಿಗೆ ಮನವಿಯನ್ನು ಸಲ್ಲಿಸಿದ್ದರೂ ಉಪಯೋಗವಾಗಿಲ್ಲ ಎಂದು ಹೇಳಿದ್ದಾರೆ.

    ಗುತ್ತಿಗೆದಾರರ ಬೇಡಿಕೆಗಳು ಏನು?
    * ಟೆಂಡರ್‍ನಲ್ಲಿ ಭಾಗವಹಿಸದಂತೆ ನಿರ್ಬಂಧಿಸುತ್ತಿರುವ ಕುರಿತು : ರಾಜಕೀಯ ಪ್ರಭಾವವನ್ನು ಬಳಸಿಕೊಂಡು ಕೆಲವು ಅಧಿಕಾರಿಗಳು ಗುತ್ತಿಗೆದಾರರಿಗೆ ಸರಕಾರಿ ಟೆಂಡರ್‍ಗಳಲ್ಲಿ ಭಾಗವಹಿಸದಂತೆ ನಿರ್ಬಂಧವನ್ನು ಹೇರುತ್ತಿದ್ದಾರೆ. ಇದರ ಹೊರತಾಗಿ ಗುತ್ತಿಗೆದಾರರು ಟೆಂಡರ್‍ನಲ್ಲಿ ಭಾಗವಹಿಸಿ ಬಿಡ್ ಸಲ್ಲಿಸಿದ ನಂತರವೂ ಟೆಂಡರನ್ನು ಹಿಂಪಡೆಯುವಂತೆ ಒತ್ತಡ ತಂತ್ರವನ್ನು ಅನುಸರಿಸುತ್ತಿದ್ದಾರೆ. ಇದರಿಂದ ಟೆಂಡರ್‍ನಲ್ಲಿ ಸ್ಪರ್ಧಾತ್ಮಕ ದರಗಳಿಂದ ವಂಚಿತವಾಗಿ ಹೆಚ್ಚಿನ ಪಾರದರ್ಶಕತೆಗೆ ಅವಕಾಶವಿಲ್ಲದೆ ರಾಜ್ಯದ ತೆರಿಗೆದಾರರ ಹಣ ವ್ಯರ್ಥವಾಗುತ್ತಿದ್ದು ಗುತ್ತಿಗೆದಾರರ ಮೂಲಭೂತ ಹಕ್ಕಿಗೆ ಧಕ್ಕೆಯಾಗುತ್ತಿದೆ ಎಂದರು.

    *ಗುತ್ತಿಗೆದಾರರ ಬಾಕಿ ಉಳಿದಿರುವ ಬಿಲ್ಲುಗಳಿಗೆ ಹಣ ಪಾವತಿ: ಕಳೆದ ಹಲವಾರು ತಿಂಗಳುಗಳಿಂದ ಸರಕಾರದ ಹಲವಾರು ಇಲಾಖೆಗಳಿಂದ ಗುತ್ತಿಗೆದಾರರಿಗೆ ಬಿಲ್ಲುಗಳನ್ನು ನೀಡಲಾಗಿರುವುದಿಲ್ಲ. ಬಾಕಿ ಬಿಲ್ ಗಳಿಗೆ ಹಣಪಾವತಿಸುವ ಸಮಯದಲ್ಲಿ ಸರಕಾರದ ಆದೇಶ ಸಂಖ್ಯೆ: ನಂ.ಪಿಡಬ್ಲೂಡಿ/260/ಎಸ್‍ಓಎಫ್‍ಸಿ/2001(ಪಿ) 2000 ಸೆಪ್ಟೆಂಬರ್ 25 ರಲ್ಲಿ ಸೂಚಿಸಿರುವಂತೆ ಗುತ್ತಿಗೆದಾರರ ಬಾಕಿ ಉಳಿದಿರುವ ಬಿಲ್ಲುಗಳಿಗೆ ಶೇ.80 ರಷ್ಟು ಹಣ ಬಿಡುಗಡೆ ಮಾಡುವುದನ್ನು ಜೇಷ್ಠತೆ ಆಧಾರದ ಮೇಲೆ ಕಡ್ಡಾಯ ಮಾಡಿದೆ. ಈ ಆಧಾರದಲ್ಲಿ ಅಂದರೆ ಡಿ.ಬಿ.ಆರ್ ಸಂಖ್ಯೆ ಅನುಗುಣವಾಗಿ ಜೇಷ್ಠತೆ ಮೇಲೆ ಹಣ ಬಿಡುಗಡೆ ಮಾಡಬೇಕು. ಅಲ್ಲದೆ, ಸ್ಟಾಂಡರ್ಡ್ ಬಿಡ್ ಗೆ ಸೇರಿಸಿ ನೀಡಬೇಕು ಎಂದರು.

    * ಪ್ಯಾಕೇಜ್ ಪದ್ದತಿಯನ್ನು ರದ್ದಗೊಳಿಸಿ: ಪ್ಯಾಕೇಜ್ ಪದ್ದತಿಯಲ್ಲಿ ಟೆಂಡರ್ ಗಳನ್ನು ಕರೆಯುತ್ತಿರುವುದರಿಂದ ನಮ್ಮ ರಾಜ್ಯದ ಸ್ಥಳೀಯ ಗುತ್ತಿಗೆದಾರರಿಗೆ ಟೆಂಡರ್‍ನಲ್ಲಿ ಭಾಗವಹಿಸದಂತಹ ಸ್ಥಿತಿ ನಿರ್ಮಾಣವಾಗಿದ್ದು, ಸ್ಥಳೀಯ ಗುತ್ತಿಗೆದಾರರಿಗೆ ಕಾಮಗಾರಿ ದೊರೆಯದಂತಹ ಪರಿಸ್ಥಿತಿ ಎದುರಾಗಿದೆ. ಅಲ್ಲದೆ, ಇದು ಹೊರ ರಾಜ್ಯದ ಗುತ್ತಿಗೆದಾರರಿಗೆ ಹೆಚ್ಚು ಅನುಕೂಲವಾಗುತ್ತಿದೆ. ಆದ್ದರಿಂದ ಸಣ್ಣ ಸಣ್ಣ ಕಾಮಗಾರಿಗಳನ್ನು ಒಟ್ಟುಗೂಡಿಸಿ ಪ್ಯಾಕೇಜ್ ಪದ್ದತಿಯಲ್ಲಿ ಟೆಂಡರ್ ಕರೆಯುವುದನ್ನು ನಿಲ್ಲಿಸಿ ಒಂದೊಂದು ಕಾಮಗಾರಿಗಳಿಗೂ ಪ್ರತ್ಯೇಕವಾಗಿ ಟೆಂಡರ್ ಕರೆಯುವಂತೆ ಅವರು ಮನವಿ ಮಾಡಿದರು.

    * ಮಾದರಿ ಟೆಂಡರ್ ದಾಖಲೆ ರಚನಾ ಸಮಿತಿಗೆ ಮನವಿ: ದ್ವಿ ಲಕೋಟೆ ಪ್ಯಾಕೇಜ್ ಪದ್ದತಿಯ ಸ್ಟ್ಯಾಂಡರ್ಡ್ ಟೆಂಡರ್ ಡಾಕ್ಯುಮೆಂಟ್ ಅಡಿಯಲ್ಲಿ ಸರಿಯಾದ ಮಾನದಂಡಗಳಿಲ್ಲದೆ ಎಲ್ಲಾ ಷರತ್ತುಗಳನ್ನು ತಮ್ಮ ಇಚ್ಛೆಗೆ ಬಂದಂತೆ ಪ್ರತ್ಯೇಕ ನಿಯಮಗಳನ್ನು ರೂಪಿಸುತ್ತಿರುವುದು ವಿವಿಧ ಸರಕಾರಿ ಇಲಾಖೆಗಳಲ್ಲಿ ಕಂಡುಬಂದಿದೆ. ಕರ್ನಾಟಕ ರಾಜ್ಯ ಟೆಂಡರ್‍ನಲ್ಲಿ ಭಾಗವಹಿಸುವ ಗುತ್ತಿಗೆದಾರರಿಗೆ ಪದ್ದತಿಯ ಸ್ಟ್ಯಾಂಡರ್ಡ್ ಟೆಂಡರ್ ಡಾಕ್ಯುಮೆಂಟ್ ನ ಏಕರೂಪ ನಿಯಮವನ್ನು ಇಡಿ ರಾಜ್ಯಕ್ಕೆ ಅನ್ವಯವಾಗುವಂತಹ ನಿಯಮಾವಳಿಗಳನ್ನು ರೂಪಿಸಬೇಕು.

    ಇದೇ ವೇಳೆ ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಪ್ರಧಾನ ಕಾರ್ಯದರ್ಶಿ ಜಿಎಂ ರವೀಂದ್ರ ಮಾತನಾಡಿ, ನೆರೆರಾಜ್ಯವಾದ ಕೇರಳದಲ್ಲಿ ರೂ.5.00 ಕೋಟಿವರೆಗಿನ ಕಾಮಗಾರಿಯನ್ನು ಒಂದು ಲಕೋಟೆ ಪದ್ದತಿಯಲ್ಲಿ ಯಾವುದೇ ಪೂರ್ವಭಾಗಿ ಷರತ್ತುಗಳಿಲ್ಲದೆ ಗುತ್ತಿಗೆದಾರರು ನೊಂದಾವಣಿಯಾಗಿರುವ ಆಯಾ ದರ್ಜೆಗೆ ಅನುಗುಣವಾಗಿ ಟೆಂಡರ್‍ನಲ್ಲಿ ಭಾಗವಹಿಸುವ ನಿಯಮ ಜಾರಿಯಲ್ಲಿರುತ್ತದೆ. ಇದೇ ಮಾದರಿಯ ನಿಯಮವನ್ನು ನಮ್ಮ ರಾಜ್ಯದಲ್ಲೂ ಅಳವಡಿಸಿದರೆ ಸ್ಥಳೀಯ ನಿವಾಸಿಗಳಾದ ರಾಜ್ಯದ ಗುತ್ತಿಗೆದಾರರು ಟೆಂಡರ್‍ನಲ್ಲಿ ಭಾಗವಹಿಸಿ ಕಾಮಗಾರಿ ಪಡೆಯುವಂತಹ ಅವಕಾಶ ಕಲ್ಪಿಸಿದಂತಾಗುತ್ತದೆ ಎಂದರು.

  • ನೌಕರರಿದ್ದರೂ, ವಿಧಾನಸೌಧ ಸ್ವಚ್ಛ ಮಾಡಲು 59 ಲಕ್ಷ ಟೆಂಡರ್

    ನೌಕರರಿದ್ದರೂ, ವಿಧಾನಸೌಧ ಸ್ವಚ್ಛ ಮಾಡಲು 59 ಲಕ್ಷ ಟೆಂಡರ್

    – ಅನುಮಾನ ಹುಟ್ಟಿಸಿದ ಪಿಡಬ್ಲ್ಯುಡಿ ಇಲಾಖೆಯ ನಿರ್ಧಾರ

    ಬೆಂಗಳೂರು: ರಾಜ್ಯದ ಶಕ್ತಿಸೌಧ ವಿಧಾನಸೌಧವನ್ನು ಸ್ವಚ್ಛ ಮಾಡಲು ಪಿಡಬ್ಲ್ಯುಡಿ ಇಲಾಖೆ 59 ಲಕ್ಷ ವೆಚ್ಚದಲ್ಲಿ ಟೆಂಡರ್ ಕರೆದು ದುಂದು ವೆಚ್ಚಕ್ಕೆ ಮುಂದಾಗಿದೆ.

    ವಿಧಾನಸೌಧವನ್ನು ಸ್ವಚ್ಛವಾಗಿ ಇಡಲು ಸ್ವಚ್ಛತಾ ಸಿಬ್ಬಂದಿ, ಪ್ರತಿ ವಿಭಾಗದಲ್ಲಿ ಡಿ ಗ್ರೂಪ್ ನೌಕರರು ಇದ್ದಾರೆ. ಈಗಾಗಲೇ ಪ್ರತಿದಿನ ವಿಧಾನಸೌಧದ ಪ್ರತಿ ಕಚೇರಿ ಹಾಗೂ ಕಾರಿಡಾರ್ ಗಳನ್ನು ಸ್ವಚ್ಛಗೊಳಿಸಲಾಗುತ್ತೆ. ಇವೆಲ್ಲ ಇದ್ದರೂ ವಿಧಾನಸೌಧ ಕ್ಲೀನ್ ಮಾಡಲು ಹೊಸ ಟೆಂಡರ್ ಕರೆಯಲಾಗಿದೆ.

    ವಿಧಾನಸೌಧದಲ್ಲಿರುವ ಕಚೇರಿಗಳನ್ನು ಆಯಾ ಇಲಾಖೆಯಲ್ಲಿನ ಡಿ ಗ್ರೂಪ್ ನೌಕರರು ಸ್ವಚ್ಛಗೊಳಿಸುತ್ತಾರೆ. ವಿಧಾನ ಸೌಧದ ಕಾರಿಡಾರ್ ಹಾಗೂ ಹೊರ ಭಾಗದ ಸ್ವಚ್ಛತೆಗೆ ಗುತ್ತಿಗೆ ಆಧಾರಿತ ಕಾರ್ಮಿಕರು ಪ್ರತ್ಯೇಕವಾಗಿದ್ದಾರೆ. ಇಷ್ಟಾಗಿಯೂ ವಿಧಾನಸೌಧದ ಕಾರಿಡಾರ್ ಗಳನ್ನು ನೀರು ಹಾಕಿ ತೊಳೆಯಲು ಪ್ರತ್ಯೇಕ ಟೆಂಡರ್ ಕರೆದಿದ್ದು ಪಿಡಬ್ಲ್ಯುಡಿ ಇಲಾಖೆಯ ಈ ನಿರ್ಧಾರ ಅನುಮಾನ ಕಾರಣವಾಗಿದೆ.

    ಕೊರೊನಾ ಸಮಯದಲ್ಲಿ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ಎದುರಾಗಿದೆ. ಹೀಗಿರುವಾಗ ವಿಧಾನಸೌಧದ ಪಿಡಬ್ಲ್ಯುಡಿ ಅಧಿಕಾರಿಗಳು ʼವಾಟರ್ ವಾಶ್ ಹೆಸರಲ್ಲಿ ಟೆಂಡರ್ ಕಾಸು ಮಾಡಲು ಹೊರಟ್ಟಿದ್ದಾರಾ ಎಂಬ ಪ್ರಶ್ನೆ ಎದ್ದಿದೆ.

  • ಸರ್ಕಾರದ ಟೆಂಡರ್‌ಗಳಿಂದ ಚೀನಾ ಕಂಪನಿಗಳನ್ನು ದೂರವಿಡಿ- ಆರ್‍ಎಸ್‍ಎಸ್ ಅಂಗ ಸಂಸ್ಥೆ

    ಸರ್ಕಾರದ ಟೆಂಡರ್‌ಗಳಿಂದ ಚೀನಾ ಕಂಪನಿಗಳನ್ನು ದೂರವಿಡಿ- ಆರ್‍ಎಸ್‍ಎಸ್ ಅಂಗ ಸಂಸ್ಥೆ

    – ಚೀನಾ ವಸ್ತುಗಳ ಬಹಿಷ್ಕಾರಕ್ಕೆ ಜನರಲ್ಲಿ ಜಾಗೃತಿ ಮೂಡಿಸಿ
    – ಸ್ವದೇಶಿ ಜಾಗರಣ್ ಮಂಚ್‍ನಿಂದ ಆಗ್ರಹ

    ನವದೆಹಲಿ: ಸರ್ಕಾರಗಳ ಟೆಂಡರ್ ಗಳಲ್ಲಿ ಭಾಗವಹಿಸಿರುವ ಚೀನಾದ ಎಲ್ಲ ಕಂಪನಿಗಳಿಗೆ ನಿಷೇಧ ಹೇರಬೇಕು. ಅಲ್ಲದೆ ಚೀನಾ ಉತ್ಪನ್ನಗಳನ್ನು ಬಹಿಷ್ಕರಿಸುವಂತೆ ಜನರಿಗೆ ಪ್ರೋತ್ಸಾಹ ನೀಡಬೇಕು ಎಂದು ಆರ್‍ಎಸ್‍ಎಸ್ ಸಂಯೋಜಿತ ಸ್ವದೇಶಿ ಜಾಗರಣ್ ಮಂಚ್(ಎಸ್‍ಜೆಎಂ) ಕೇಂದ್ರ ಸರ್ಕಾರವನ್ನು ಒತ್ತಾಯಿಸಿದೆ.

    ಚೀನಾ ಉಪಟಳ ಹೆಚ್ಚುತ್ತಿದ್ದು, ಜೂನ್ 15 ಹಾಗೂ 16ರಂದು ಪೂರ್ವ ಲಡಾಕ್‍ನ ಗಲ್ವಾನ್ ಕಣಿವೆಯಲ್ಲಿ ಭಾರತೀಯ ಸೇನೆ ಹಾಗೂ ಚೀನಾ ಮಧ್ಯೆ ನಡೆದ ದಾಳಿ, ಪ್ರತಿ ದಾಳಿಯಲ್ಲಿ 20 ಭಾರತೀಯ ಯೋಧರು ಹುತಾತ್ಮರಾಗಿದ್ದಾರೆ. ಇವರಿಗೆ ಗೌರವ ಸಲ್ಲಿಸಬೇಕಾದರೆ ದೇಶದಲ್ಲಿ ಚೀನಾ ಕಂಪನಿ ಹಾಗೂ ಚೀನಾ ಉತ್ಪನ್ನಗಳನ್ನು ಬಹಿಷ್ಕರಿಸಬೇಕು ಎಂದು ಸ್ವದೇಶಿ ಜಾಗರಣ್ ಮಂಚ್‍ನ ಅಶ್ವಿನಿ ಮಹಾಜನ್ ಆಗ್ರಹಿಸಿದ್ದಾರೆ. ಅಲ್ಲದೆ ನಟ, ನಟಿಯರು ಹಾಗೂ ಕ್ರಿಕೆಟ್ ಆಟಗಾರರು ಸಹ ಚೀನಾ ಉತ್ಪನ್ನಗಳನ್ನು ಪ್ರೋತ್ಸಾಹಿಸದಂತೆ ತಿಳಿಸಿದ್ದಾರೆ.

    ಎಸ್‍ಜೆಎಂ ಈ ಕುರಿತು ಆಕ್ರೋಶ ವ್ಯಕ್ತಪಡಿಸಿದ್ದು, ಚೀನಾ ವಸ್ತುಗಳಿಗೆ ಬಹಿಷ್ಕಾರ ಹಾಕುವುದರ ಜೊತೆಗೆ ಕೇಂದ್ರ ಸರ್ಕಾರದ ಎಲ್ಲ ಟೆಂಡರ್‍ಗಳಿಂದ ಚೀನಾ ಕಂಪನಿಗಳನ್ನು ನಿಷೇಧಿಸಬೇಕು ಎಂದು ಆಗ್ರಹಿಸಿದ್ದಾರೆ.

    ಸೋಮವಾರ ರಾತ್ರಿ ನಡೆದ ಗುಂಡಿನ ಚಕಮಕಿ ವೇಳೆ 20 ಯೋಧರು ಹುತಾತ್ಮರಾಗಿದ್ದಾರೆ. ಕಳೆದ ಐದು ದಶಕಗಳಲ್ಲಿ ನಡೆದ ಅತಿ ದೊಡ್ಡ ಸೇನಾ ಕಾರ್ಯಾಚರಣೆ ಇದಾಗಿದೆ. ಚೀನಾ ಸೈನಿಕರು ಸಹ ಹೆಚ್ಚಿನ ಸಂಖ್ಯೆಯಲ್ಲಿ ಸಾವನ್ನಪ್ಪಿದ್ದು, ಇದನ್ನು ಬಹಿರಂಗಪಡಿಸದಿರಲು ನಿರ್ಧರಿಸಲಾಗಿದೆ.

    ಪೂರ್ವ ಲಡಾಕ್‍ನ ಗಲ್ವಾನ್ ಕಣಿವೆಯಲ್ಲಿ ಚೀನಾದೊಂದಿಗೆ ನಡೆದ ಸಂಘರ್ಷದಲ್ಲಿ ಕನಿಷ್ಠ 20 ಮಂದಿ ಭಾರತೀಯ ಯೋಧರು ಹುತಾತ್ಮರಾಗಿದ್ದಾರೆ. ಅಷ್ಟೇ ಅಲ್ಲದೆ ಈ ಸಂಖ್ಯೆ ಮತ್ತಷ್ಟು ಹೆಚ್ಚಾಗಬಹುದು ಎಂದು ಸರ್ಕಾರದ ಮೂಲಗಳು ತಿಳಿಸಿವೆ. ದಾಳಿಗೆ ಪ್ರತ್ಯುತ್ತರ ನೀಡಿರುವ ಭಾರತೀಯ ಸೇನೆಯು ಚೀನಾದ 43 ಮಂದಿ ಯೋಧರನ್ನು ಸೆದೆಬಡಿದಿದೆ. ಅಷ್ಟೇ ಅಲ್ಲದೆ 100ಕ್ಕೂ ಹೆಚ್ಚು ಚೀನಾ ಯೋಧರು ಗಂಭೀರವಾಗಿ ಗಾಯಗೊಂಡಿದ್ದಾರೆ. ತನ್ನ ಯೋಧರ ಮೃತದೇಹವನ್ನು ಹೊತ್ತೊಯ್ಯಲು ಚೀನಾ ಹೆಲಿಕಾಪ್ಟರ್ ಗಳು ಎಲ್‍ಎಸಿ ಬಳಿ ಹಾರಾಟ ನಡೆಸಿವೆ ಎಂದು ವರದಿಯಾಗಿದೆ.

    ಘರ್ಷಣೆ ಬಗ್ಗೆ ಸ್ಪಷ್ಟನೆ ನೀಡಿರುವ ಭಾರತೀಯ ಸೇನೆ, ನಮ್ಮ ಮತ್ತು ಚೀನಾದ ಸೈನಿಕರು ಗಾಲ್ವಾನ್ ಪ್ರದೇಶದಿಂದ ಹೊರ ಬಂದಿದ್ದಾರೆ. ಆದರೆ ಜೂನ್ 15 ಹಾಗೂ 16ರಂದು ನಡೆದ ದಾಳಿಯಲ್ಲಿ 17 ಭಾರತೀಯ ಸೈನಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅಷ್ಟೇ ಅಲ್ಲದೆ ಒಟ್ಟು 20 ಮಂದಿ ಯೋಧರು ಹುತಾತ್ಮರಾಗಿದ್ದಾರೆ ಎಂದು ತಿಳಿಸಿದೆ.