Tag: terrorism

  • ರಮ್ಯಾ ಭಯ ನಿವಾರಣೆಗೆ ಮಂಡ್ಯದಿಂದ ತಾಯತ ಪೋಸ್ಟ್

    ರಮ್ಯಾ ಭಯ ನಿವಾರಣೆಗೆ ಮಂಡ್ಯದಿಂದ ತಾಯತ ಪೋಸ್ಟ್

    ಮಂಡ್ಯ: ಪ್ರಧಾನಿ ಮೋದಿ ಅವರ ನೋಟು ನಿಷೇಧ ಕ್ರಮವನ್ನು ವಿರೋಧಿಸುವ ಸಲುವಾಗಿ ಅವರನ್ನು ಭೂತಕ್ಕೆ ಹೋಲಿಸಿ ಟ್ವೀಟ್ ಮಾಡಿದ್ದ ಮಾಜಿ ಸಂಸದೆ ರಮ್ಯಾ ಅವರಿಗೆ ತಾಯತ ಹಾಗೂ ಪ್ಯಾಂಪರ್ಸ್ ಕಳುಹಿಸಿ ಕೊಡುವ ಮೂಲಕ ಮಂಡ್ಯ ಬಿಜೆಪಿ ಕಾರ್ಯಕರ್ತರು ವಿಭಿನ್ನವಾಗಿ ಪ್ರತಿಭಟನೆ ನಡೆಸಿದ್ದಾರೆ.

    ಒಂದು ಜವಾಬ್ದಾರಿಯುತ ಸ್ಥಾನದಲ್ಲಿರುವ ಪ್ರಧಾನಿ ಮೋದಿ ಅವರನ್ನು ಭೂತಕ್ಕೆ ಹೋಲಿಸಿ ಟ್ವೀಟ್ ಮಾಡಿದ್ದ ರಮ್ಯಾ ಅವರ ಕ್ರಮವನ್ನು ಪ್ರತಿಭಟನಕಾರರು ತೀವ್ರವಾಗಿ ಖಂಡಿಸಿದರು. ಪ್ರಧಾನಿ ಮೋದಿ ಅವರು ನೋಟು ನಿಷೇಧ ಮಾಡಿರುವುದರಿಂದ ಭಯೋತ್ಪದನೆಗೆ ಹಣವನ್ನು ಕೊಡುತ್ತಿದ್ದ ದುಷ್ಕರ್ಮಿಗಳು ಹಾಗೂ ಕಪ್ಪು ಹಣವನ್ನು ಸಂಗ್ರಹಿಸಿದ್ದ ಸಿರಿವಂತರಿಗೆ ನಿಜವಾಗಿಯೂ ಭೂತವಾಗಿ ಕಾಣಿಸುತ್ತಿದ್ದಾರೆ. ಅದರಿಂದ ನಾವು ಅವರಿಗೆ ಪ್ಯಾಂಪರ್ಸ್ ಹಾಗೂ ದೇವರ ತಾಯತವನ್ನು ಕಳುಹಿಸಿಕೊಡುತ್ತಿರುವುದಾಗಿ ಹೇಳಿದರು.

    ನೋಟು ನಿಷೇಧ ಮಾಡಿರುವುದರಿಂದ ಭಯೋತ್ಪಾದನೆ, ಮತಾಂತರಕ್ಕೆ ಹರಿದು ಬರುತ್ತಿದ್ದ ಬೇನಾಮಿ ಹಣಕ್ಕೆ ಕಡಿವಾಣ ಬಿದ್ದಿದೆ. ಆರ್ಥಿಕ ತಜ್ಞರು, ವಿಶ್ವಸಂಸ್ಥೆ ನಿಷೇಧದ ನಿರ್ಧಾರವನ್ನು ಮೆಚ್ಚಿಕೊಂಡಿದ್ದಾರೆ. ಹೀಗಿರುವಾಗ ರಮ್ಯಾ ಅವರಿಗೆ ಭಯ ಯಾಕೆ? ಈ ಕೂಡಲೇ ರಮ್ಯಾ ಅವರು ತಮ್ಮ ಹೇಳಿಕೆಗೆ ಕ್ಷಮೆ ಕೋರಬೇಕು. ಒಂದು ವೇಳೆ ನೋಟು ನಿಷೇಧದಿಂದ ಯಾರಿಗಾದರೂ ಭಯ ಆದರೆ ಅವರಿಗೆ ಕೊಡಲು ಪ್ಯಾಂಪರ್, ತಾಯತಗಳನ್ನ ನೀಡಲು ಅಂಚೆ ಮೂಲಕ ರಮ್ಯಾ ಅವರಿಗೆ ಕಳುಹಿಸಿದ್ದೇವೆ ಎಂದು ತಿಳಿಸಿದರು.

     

     

  • ನೋಟ್ ಬ್ಯಾನ್ ನಂತರ ಕಾಶ್ಮೀರದಲ್ಲಿ ಉಗ್ರ ಚಟುವಟಿಕೆ ಕಡಿಮೆಯಾಗಿದೆ: ಅರುಣ್ ಜೇಟ್ಲಿ

    ನೋಟ್ ಬ್ಯಾನ್ ನಂತರ ಕಾಶ್ಮೀರದಲ್ಲಿ ಉಗ್ರ ಚಟುವಟಿಕೆ ಕಡಿಮೆಯಾಗಿದೆ: ಅರುಣ್ ಜೇಟ್ಲಿ

    ಕ್ಯಾಲಿಫೋರ್ನಿಯಾ: ನೋಟ್ ಬ್ಯಾನ್ ಆದ ನಂತರ ಜಮ್ಮು ಮತ್ತು ಕಾಶ್ಮೀರದಲ್ಲಿ ಕಲ್ಲು ತೂರಾಟದ ಪ್ರಮಾಣ ಗಣನೀಯ ಪ್ರಮಾಣದಲ್ಲಿ ಇಳಿಕೆಯಾಗಿದೆ ಎಂದು ಹಣಕಾಸು ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ.

    ಶನಿವಾರ ಬರ್ಕೇಲಿಯಾದಲ್ಲಿ ನಡೆದ ವಿಡಿಯೋ ಕಾನ್ಫರೆನ್ಸ್ ನಲ್ಲಿ ಮಾತನಾಡಿ, ಸ್ವಚ್ಛ ಭಾರತ್, ಜಿಎಸ್‍ಟಿ ಮತ್ತು ನೋಟ್‍ಬ್ಯಾನ್ ಅಂತಹ ಕ್ರಮಗಳಿಂದ ದೇಶದಲ್ಲಿ ಯಾವುದೇ ಪರಿವರ್ತನೆ ಆಗಿಲ್ಲ ಎನ್ನುವ ಮಾತನ್ನು ನಾನು ನಿರಾಕರಿಸುತ್ತೇನೆ ಎಂದರು.

    ಭಯೋತ್ಪಾದಕರು ನೀಡುತ್ತಿದ್ದ ಹಣಕ್ಕಾಗಿ ಬಂಡಾಯಕಾರರು ಕಲ್ಲು ಎಸೆದಾಡುವಂತಹ ಚಟುವಟಿಕೆಗಳು ಕಳೆದ 7-8 ತಿಂಗಳಿನಿಂದ ಬಹಳಷ್ಟು ಕಡಿಮೆಯಾಗಿದೆ ಎಂದು ಹಣಕಾಸು ಸಚಿವ ಅರುಣ್ ಜೇಟ್ಲಿ ತಿಳಿಸಿದರು.

    ನೋಟ್ ಬ್ಯಾನ್ ಆದ ಬಳಿಕ ಜಮ್ಮು ಮತ್ತು ಕಾಶ್ಮೀರ ಹಾಗೂ ಛತ್ತೀಸ್‍ಗಢ ದಂತಹ ರಾಜ್ಯಗಳಲ್ಲಿ ಬಂಡಾಯಗಾರರು ಮತ್ತು ಭಯೋತ್ಪಾದಕ ಚಟುವಟಿಕೆಗಳು ಕಳೆದ 7-8 ತಿಂಗಳಿಂದ ಏಕೆ ಹೆಚ್ಚು ಸಂಭವಿಸುತಿಲ್ಲ ಎಂದು ಇದೇ ವೇಳೆ ಸಂದರ್ಭದಲ್ಲಿ ಪ್ರಶ್ನಿಸಿದರು.

    ಪ್ರಧಾನಿ ನರೇಂದ್ರ ಮೋದಿ ಅವರು ಕಳೆದ ನವೆಂಬರ್ 8 ರಂದು 1000 ಮತ್ತು 500 ಮುಖ ಬೆಲೆಯ ನೋಟುಗಳನ್ನು ಬ್ಯಾನ್ ಮಾಡಿದ್ದರು. ದೇಶದಲ್ಲಿ ಕಪ್ಪು ಹಣ, ನಕಲಿ ನೋಟು, ಭಯೋತ್ಪಾದನೆ ಹಣ ಹಾಗೂ ಭ್ರಷ್ಟಾಚಾರ ಇವುಗಳೆಲ್ಲವನ್ನು ನಿಯಂತ್ರಿಸುವ ಸಲುವಾಗಿ ನೋಟ್ ಬ್ಯಾನ್ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಭಾಷಣದಲ್ಲಿ ತಿಳಿಸಿದ್ದರು.

  • ಪಾಕಿಸ್ತಾನ ವಿದೇಶಾಂಗ ಸಚಿವರ ವಿರುದ್ಧ 10 ಕೋಟಿ ರೂ. ಮಾನನಷ್ಟ ಕೇಸ್ ಹಾಕಿದ ಉಗ್ರ ಹಫೀಸ್

    ಪಾಕಿಸ್ತಾನ ವಿದೇಶಾಂಗ ಸಚಿವರ ವಿರುದ್ಧ 10 ಕೋಟಿ ರೂ. ಮಾನನಷ್ಟ ಕೇಸ್ ಹಾಕಿದ ಉಗ್ರ ಹಫೀಸ್

    ಲಾಹೋರ್: ಮುಂಬೈ ಉಗ್ರರ ದಾಳಿಯ ಪ್ರಮುಖ ರೂವಾರಿ ಹಫೀಸ್ ಸಯೀದ್ ಪಾಕಿಸ್ತಾನದ ವಿದೇಶಾಂಗ ಸಚಿವ ಖ್ವಾಜಾ ಆಸಿಫ್‍ರ ವಿರುದ್ಧ ಬರೋಬ್ಬರಿ 10 ಕೋಟಿ ರೂ. ಮಾನನಷ್ಟ ಕೇಸ್ ಹಾಕಿದ್ದಾನೆ.

    ಪಾಕಿಸ್ತಾನ ನೆಲದಿಂದ ಭಯೋತ್ಪದನೆಯನ್ನು ನಿಮೂರ್ಲನೆ ಮಾಡಬೇಕೆಂದು ಒತ್ತಾಯಿಸುವ ಅಮೆರಿಕಕ್ಕೆ ಲಷ್ಕರ್-ಎ-ತೊಬ್ಬಾ ಮತ್ತು ಹಫೀಸ್ ಸಯೀದ್ 20-30 ವರ್ಷಗಳ ಹಿಂದೆ ಹೆಚ್ಚು ಪ್ರಿಯರಾಗಿದ್ದರು ಎಂದು ನ್ಯೂಯಾರ್ಕ್‍ನಲ್ಲಿ ನಡೆದ ಏಷ್ಯಾ ಸೊಸೈಟಿ ಫಾರ್ಮ್ ನ ಸಭೆಯಲ್ಲಿ ಆಸಿಫ್ ಹೇಳಿಕೆ ನೀಡಿದ್ದರು.

    ಈ ಹೇಳಿಕೆಯಿಂದ ಕೋಪಗೊಂಡಿರುವ ಜಮಾತ್-ಉದ್-ದವಾ ಸಂಘಟನೆಯ ಸಂಸ್ಥಾಪಕ ಹಫೀಸ್ ತನ್ನ ವಕೀಲ ಎ.ಕೆ.ಡೋಗರ್ ಮೂಲಕ ಖ್ವಾಜಾ ಆಸಿಫ್ ವಿರುದ್ಧ ಮಾನನಷ್ಟ ಕೇಸ್ ಹಾಕಿರುವುದಾಗಿ ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

    ಹಫೀಸ್ ಸಾಂಪ್ರದಾಯಿಕ ಮುಸ್ಲಿಂ ವ್ಯಕ್ತಿಯಾಗಿದ್ದು, ಅಮೆರಿಕ ಶ್ವೇತಭವನಕ್ಕೆ ಇದುವರೆಗೂ ಭೇಟಿ ನೀಡಿಲ್ಲ, ಯಾರೊಂದಿಗೂ ಚರ್ಚೆಯನ್ನು ನಡೆಸಿಲ್ಲ. ವಿದೇಶಾಂಗ ಸಚಿವರ ಹೇಳಿಕೆ ಅಘಾತವನ್ನು ಉಂಟು ಮಾಡಿದೆ. ಅಲ್ಲದೆ ಅಸೀಫ್ ನಿಂದನಾತ್ಮಕ ಭಾಷೆಯನ್ನು ಬಳಸಿದ್ದಾರೆ. ವಿದೇಶಾಂಗ ಸಚಿವರ ಈ ಹೇಳಿಕೆಗಳಿಂದ ಮಾನನಷ್ಟ ಉಂಟಾಗಿದೆ. ಇಂತಹ ಹೇಳಿಕೆಗಳಿಗೆ ಕಾನೂನಿನಲ್ಲಿ ಶಿಕ್ಷೆಯನ್ನು ವಿಧಿಸಲು ಸಾಧ್ಯವಿದೆ. ಅದರಿಂದ ಈ ನೋಟಿಸ್ ಜಾರಿ ಮಾಡುತ್ತಿರುವುದಾಗಿ ಹಫೀಸ್ ಪರ ವಕೀಲರು ತಿಳಿಸಿದ್ದಾರೆ.

    ಕೇವಲ ಪಾಕಿಸ್ತಾನದಲ್ಲಿ ಮಾತ್ರವಲ್ಲದೇ ವಿಶ್ವದಾದ್ಯಂತ ಹಫೀಸ್ ಅಭಿಮಾನಿಗಳಿಗೆ ಈ ಹೇಳಿಕೆಯಿಂದ ನೋವಾಗಿದೆ. ಪಾಕ್ ಕಾನೂನಿನ ಪ್ರಕಾರ ಇದೊಂದು ಮಾನಹಾನಿ ಹೇಳಿಕೆಯಾಗಿದ್ದು, ಪಾಕಿಸ್ತಾನ ದಂಡ ಸಂಹಿತೆಯ ಪ್ರಕಾರ ಈ ಅಪರಾಧಕ್ಕೆ 5 ವರ್ಷ ಜೈಲು ಶಿಕ್ಷೆ ಮತ್ತು ದಂಡ ವಿಧಿಸಬಹುದಾಗಿದೆ ಎಂದು ವಕೀಲರು ಹೇಳಿದ್ದಾರೆ.

    ಪಾಕಿಸ್ತಾನವು ಅಮೆರಿಕ ನೀಡಿದ ಆರ್ಥಿಕ ನೆರವನ್ನು ತನ್ನ ನೆಲದಲ್ಲಿ ಭಯೋತ್ಪದನೆಗೆ ಬೆಂಬಲವನ್ನು ನೀಡಲು ಬಳಕೆ ಮಾಡಿಕೊಳ್ಳುತ್ತಿದೆ ಎಂದು ಕಳೆದ ತಿಂಗಳು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆರೋಪವನ್ನು ಮಾಡಿದ್ದರು.

    ಪಾಕಿಸ್ತಾನದ ಲಾಹೋರ್‍ನಲ್ಲಿ ಹಫೀಸ್ ಗೆ ಗೃಹ ಬಂಧನ ವಿಧಿಸಲಾಗಿದೆ. ಅಮೆರಿಕ 2014ರಲ್ಲಿ ಜಾಗತಿಕ ಭಯೋತ್ಪಾದಕ ಸಂಘಟನೆಗಳ ಹೆಸರಿನ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಈ ಪಟ್ಟಿಯಲ್ಲಿ ಜಮಾತ್-ಉದ್-ದವಾ ಸ್ಥಾನ ಪಡೆದಿದೆ.

     

  • ವಿಶ್ವಸಂಸ್ಥೆಯಲ್ಲಿ ಪಾಕ್ ಮಾನ ಹರಾಜು ಹಾಕಿದ ಭಾರತದ ಈನಂ ಗಂಭೀರ್

    ವಿಶ್ವಸಂಸ್ಥೆಯಲ್ಲಿ ಪಾಕ್ ಮಾನ ಹರಾಜು ಹಾಕಿದ ಭಾರತದ ಈನಂ ಗಂಭೀರ್

    ನ್ಯೂಯಾರ್ಕ್: ಪಾಕಿಸ್ತಾನ ಈಗ ಟೆರರಿಸ್ತಾನವಾಗಿದ್ದು, ವಿಶ್ವಕ್ಕೆ ಭಯೋತ್ಪಾದನೆ ಅಲ್ಲಿಂದಲೇ ರಫ್ತಾಗುತ್ತಿದೆ ಎಂದು ವಿಶ್ವಸಂಸ್ಥೆಯ ಮಹಾ ಅಧಿವೇಶನದಲ್ಲಿ ಭಾರತ ವಾಗ್ದಾಳಿ ನಡೆಸಿದೆ.

    ಗುರುವಾರ ವಿಶ್ವಸಂಸ್ಥೆಯಲ್ಲಿ ಭಾಷಣ ಮಾಡಿದ ಪಾಕ್ ಪ್ರಧಾನಿ ಶಾಹೀದ್ ಅಬ್ಬಾಸಿ, ಪಾಕಿಸ್ತಾನದಲ್ಲಿ ಉಗ್ರರ ನೆಲೆಗಳಿಲ್ಲ. ಉಗ್ರ ಚಟುವಟಿಕೆಗಳನ್ನು ನಿಗ್ರಹಿಸುವಲ್ಲಿ ನಾವು ವಿಫಲರಾಗಿಲ್ಲ ಎಂದು ಹೇಳಿದ್ದರು. ಈ ಹೇಳಿಕೆಗೆ ವಿಶ್ವಸಂಸ್ಥೆಯಲ್ಲಿ ಭಾರತದ ಮೊದಲ ಕಾರ್ಯದರ್ಶಿಯಾಗಿರುವ ಈನಂ ಗಂಭೀರ್ ಪ್ರತಿಕ್ರಿಯಿಸಿ, ಉಗ್ರ ಹಫೀಸ್ ಸಯೀದ್ ಪಾಕಿಸ್ತಾನದಲ್ಲಿ ರಾಜಕೀಯ ಪಕ್ಷ ಸ್ಥಾಪಿಸಿದ್ದು ಮಾತ್ರವಲ್ಲೇ ಮುಂದಿನ ಚುನಾವಣೆಗೆ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ. ಉಗ್ರರಿಗೆ ಪಾಕ್ ಎಷ್ಟು ಸುರಕ್ಷಿತ ದೇಶ ಎನ್ನುದ್ದಕ್ಕೆ ಇದೊಂದೆ ಉದಾಹರಣೆ ಸಾಕು ಎಂದು ಹೇಳುವ ಮೂಲಕ ತಿರುಗೇಟು ನೀಡಿದ್ದಾರೆ.

    ಒಸಾಮಾ ಬಿನ್ ಲಾಡೆನ್ ಮತ್ತು ಮುಲ್ಲಾ ಓಮರ್‍ಗೆ ಪಾಕಿಸ್ತಾನ ರಕ್ಷಣೆ ನೀಡಿದೆ. ಭಯೋತ್ಪಾದನೆ ಅಲ್ಲಿನ ಉದ್ಯಮವಾಗಿ ಈಗ ಪರಿವರ್ತನೆಯಾಗಿದೆ. ಪಾಕ್ ಮಿಲಿಟರಿ ಮತ್ತು ರಾಜಕೀಯ ನಾಯಕರ ಜೊತೆ ಉಗ್ರರು ಉತ್ತಮ ನಂಟನ್ನು ಹೊಂದಿದ್ದಾರೆ ಎಂದು ಗಂಭೀರ್ ಹೇಳುವ ಮೂಲಕ ಪಾಕಿಸ್ತಾನದ ಮಾನವನ್ನು ಹರಾಜು ಹಾಕಿದರು.

    ಕಾಶ್ಮೀರ ಸಮಸ್ಯೆಗೆ ವಿಶ್ವಸಂಸ್ಥೆ ಮಧ್ಯೆ ಪ್ರವೇಶಿಸಬೇಕು. ಭಾರತದಿಂದ ಕದನ ವಿರಾಮ ಉಲ್ಲಂಘನೆ ಆಗುತ್ತಿದ್ದು, ಗಡಿಯ ಅಶಾಂತಿಗೆ ನಾವು ಕಾರಣರಲ್ಲ ಎಂದು ಪಾಕ್ ಪ್ರಧಾನಿ ಹೇಳಿದ್ದರು. ಇದಕ್ಕೆ ಈನಂ ಗಭೀರ್, ಉಗ್ರರನ್ನು ಕಳುಹಿಸಿ ಭಾರತ ಮೇಲೆ ದಾಳಿ ನಡೆಸುವ ನಿಮ್ಮ ತಂತ್ರ ಎಂದಿಗೂ ಸಫಲವಾಗುವುದಿಲ್ಲ. ಜಮ್ಮು ಕಾಶ್ಮೀರ ಭಾರತದ ಅವಿಭಾಜ್ಯ ಅಂಗವಾಗಿದೆ ಎನ್ನುವುನ್ನು ನೆನಪಿನಲ್ಲಿರಲಿ ಎಂದು ಹೇಳುವ ಮೂಲಕ ಖಾರವಾಗಿ ಪ್ರತಿಕ್ರಿಯಿಸಿದರು.

  • ರಾಜಸ್ಥಾನದ ದೇವಾಲಯಗಳಿಂದ ಪಾಕ್ ಉಗ್ರರಿಗೆ ಹಣ ರವಾನೆ!

    ರಾಜಸ್ಥಾನದ ದೇವಾಲಯಗಳಿಂದ ಪಾಕ್ ಉಗ್ರರಿಗೆ ಹಣ ರವಾನೆ!

    – ಜನರ ನಂಬಿಕೆಯ ಜೊತೆ ಪಾಕ್ ಐಎಸ್‍ಐ ಆಟ
    – ಕಾಣಿಕೆ ಹುಂಡಿಯಲ್ಲಿ ಸಂಗ್ರಹವಾದ ಹಣ ಉಗ್ರರಿಗೆ ಸಂದಾಯ

    ಜೈಪುರ: ರಾಜಸ್ಥಾನ ಹೆಸರು ಕೇಳಿದರೆ ಸಾಕು, ಎಲ್ಲರಿಗೂ ನೆನಪಾಗುವುದು ಅಲ್ಲಿನ ಅರಮನೆಗಳು ಮತ್ತು ಮನಮೋಹಕ ಸಂಸ್ಕೃತಿ ವಿಚಾರಗಳು. ಆದರೆ ಈಗ ಅಲ್ಲಿನ ಗ್ರಾಮಗಳ ದೇವಾಲಯಗಳಿಂದ ಪಾಕಿಸ್ತಾನದ ಉಗ್ರರಿಗೆ ಹಣ ರವಾನೆಯಾಗುತ್ತಿರುವ ಶಾಕಿಂಗ್ ವಿಚಾರ ಕೇಳಿಬಂದಿದೆ.

    ಪಾಕಿಸ್ತಾನದಲ್ಲಿನ ಭಯೋತ್ಪಾದಕರಿಗೆ ರಾಜಸ್ಥಾನ ಗಡಿ ಭಾಗದ ಹಳ್ಳಿಗಳ ದೇವಾಲಯಗಳಿಂದ ಹಣ ಸಂಗ್ರಹವಾಗುತ್ತಿದೆ ಎಂಬ ಮಾಹಿತಿ ಈಗ ಗುಪ್ತಚರ ಇಲಾಖೆಯಿಂದ ಬಹಿರಂಗವಾಗಿದೆ.

    ಭಕ್ತರು ದೇವಾಲಯಗಳಲ್ಲಿ ಕಾಣಿಕೆ ಹಾಕುತ್ತಾರೆ ಎನ್ನುವುದು ಎಲ್ಲಿರಿಗೂ ತಿಳಿದಿರುವ ವಿಚಾರ. ಈಗ ಭಕ್ತರ ನಂಬಿಕೆಯ ಮೇಲೆ ಪಾಕಿಸ್ತಾನ ಗೂಢಚರ್ಯೆ ಸಂಸ್ಥೆ ಐಎಸ್‍ಐ ಆಟವಾಡುತ್ತಿದ್ದು, ಐಎಸ್‍ಐನ ಏಜೆಂಟ್ ಗಳು ರಾಜಸ್ಥಾನದ ಗಡಿಯಲ್ಲಿರುವ ಕೆಲವು ಹಳ್ಳಿಗಳ ದೇವಾಲಯಗಳಲ್ಲಿ ಕಾಣಕೆ ಹುಂಡಿಯನ್ನು ಇರಿಸಿದ್ದಾರೆ. ಇಲ್ಲಿ ಸಂಗ್ರಹವಾದ ಹಣ ನೇರವಾಗಿ ಉಗ್ರರ ಕೈ ಸೇರುತ್ತಿದೆ ಎನ್ನುವ ಅಂಶವನ್ನು ರಾಜಸ್ಥಾನ ಗುಪ್ತಚರ ಇಲಾಖೆ ತಿಳಿಸಿದೆ.

    ಪತ್ತೆಯಾಗಿದ್ದು ಹೇಗೆ?
    ಕಳೆದ ವಾರ ಬಾರ್ಮರ್ ಜಿಲ್ಲೆಯ ಗಡಿಭಾಗದ ಗ್ರಾಮವೊಂದರಲ್ಲಿ ಐಎಸ್‍ಐ ಎಜೆಂಟ್ ದೀನಾ ಖಾನ್ ಎಂಬಾತನನ್ನು ರಾಜಸ್ಥಾನ ಪೊಲೀಸರು ಬಂಧಿಸಿದ್ದರು. ಆತನ ವಿಚಾರಣೆ ವೇಳೆ ಚೋತನ್ ಎಂಬ ಹಳ್ಳಿಯಲ್ಲಿ ಸುಮಾರು 3.5 ಲಕ್ಷ ರೂ. ಕಾಣಿಕೆ ಹುಂಡಿಯಿಂದ ದೇಣಿಗೆ ಸಂಗ್ರಹ ಮಾಡಿ ನಾನು ಹಂಚಿದ್ದೇನೆ ಎಂದು ಹೇಳಿದ್ದಾನೆ.

    ದೀನಾ ಖಾನ್‍ನನ್ನು ನಿಯಂತ್ರಿಸುತ್ತಿದ್ದ ವ್ಯಕ್ತಿಗಳು ಆತನಿಗೆ ಕರೆ ಮಾಡಿ ಹಣವನ್ನು ಹಂಚುವುಂತೆ ನಿರ್ದೇಶಿಸಿದ್ದರು ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

    ಕಾಣಿಕೆ ಹುಂಡಿಯೇ ಯಾಕೆ?
    ಹವಾಲಾ ಮೂಲಕ ಹಣ ಸಾಗಿಸಲು ಈಗ ತುಂಬಾ ಕಷ್ಟವಾಗಿದೆ. ಅಲ್ಲದೇ ಇದರಿಂದ ಸಿಕ್ಕಿಬೀಳುವ ಅಪಾಯ ಹೆಚ್ಚು. ಹೀಗಾಗಿ ಸುಲಭವಾಗಿ ಹಣ ಸಂಗ್ರಹ ಮಾಡಲು ಕಾಣಿಕೆ ಹುಂಡಿಗಳನ್ನು ಇಡುತ್ತಿದ್ದೇವೆ ಎಂದು ಆತ ತಿಳಿಸಿದ್ದಾನೆ.

    ರಾಜಸ್ಥಾನ ಗಡಿ ಭಾಗದಲ್ಲಿರುವ ಹಲವು ದೇವಾಲಯಗಳಲ್ಲಿ ಉಗ್ರರಿಗೆ ಹಣವನ್ನು ಸಂದಾಯ ಮಾಡಲು ಕಾಣಿಕೆ ಡಬ್ಬಿಗಳನ್ನು ಇಟ್ಟಿದ್ದಾರೆ ಎನ್ನುವ ಶಂಕೆಯನ್ನು ಗುಪ್ತಚರ ಇಲಾಖೆ ವ್ಯಕ್ತಪಡಿಸಿದೆ.

  • ಇಂಗ್ಲೆಂಡ್: ಅರಿಯಾನಾ ಗ್ರಾಂಡೇ ಸಂಗೀತ ಕಾರ್ಯಕ್ರಮದಲ್ಲಿ ಬಾಂಬ್ ಸ್ಫೋಟ – 19 ಮಂದಿ ಸಾವು

    ಇಂಗ್ಲೆಂಡ್: ಅರಿಯಾನಾ ಗ್ರಾಂಡೇ ಸಂಗೀತ ಕಾರ್ಯಕ್ರಮದಲ್ಲಿ ಬಾಂಬ್ ಸ್ಫೋಟ – 19 ಮಂದಿ ಸಾವು

    ಲಂಡನ್: ಇಂಗ್ಲೆಂಡ್‍ನ ಮ್ಯಾಂಚೆಸ್ಟರ್ ಅರೇನಾದಲ್ಲಿ ಉಗ್ರರು ಅಟ್ಟಹಾಸ ಮೆರೆದಿದ್ದಾರೆ. ಪಾಪ್ ಗಾಯಕಿ ಅರಿಯಾನ ಗ್ರಾಂಡೇ ಸಂಗೀತ ಕಾರ್ಯಕ್ರಮದಲ್ಲಿ ಬಾಂಬ್ ಸ್ಫೋಟಗೊಂಡು ಕನಿಷ್ಠ 19 ಮಂದಿ ಬಲಿಯಾಗಿದ್ದಾರೆ.

    ಘಟನೆಯಲ್ಲಿ 50ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ರಾತ್ರಿ 3 ಗಂಟೆಗೆ ಈ ಘಟನೆ ನಡೆದಿದ್ದು, ಸ್ಫೋಟದ ಸದ್ದಿಗೆ ಕಾರ್ಯಕ್ರಮದಲ್ಲಿ ನೆರೆದಿದ್ದ ಜನ ಭಯಭೀತರಾಗಿ ದಿಕ್ಕಾಪಾಲಾಗಿ ಓಡಿದ್ದಾರೆ. ಇದರಿಂದಾಗಿ ಸ್ಥಳದಲ್ಲಿ ಕಾಲ್ತುಳಿತ ಸಂಭವಿಸಿದ್ದರಿಂದ ಸಾವಿನ ಸಂಖ್ಯೆ ಹೆಚ್ಚಾಗಿದೆ.

    ಬಾಂಬ್ ಸ್ಫೋಟವಾದ ಸ್ಥಳದಲ್ಲಿ ತುರ್ತು ಸೇವೆ ಒದಗಿಸಲಾಗುತ್ತಿದ್ದು ಹಲವರು ಮೃತಪಟ್ಟಿದ್ದರೆ, ಹಲವರಿಗೆ ಗಾಯಗಳಾಗಿವೆ. ಆ ಸ್ಥಳದಲ್ಲಿ ಶೀಘ್ರ ಕಾರ್ಯಾಚರಣೆ ಕೈಗೊಳ್ಳುತ್ತಿದ್ದು ಗಾಯಾಳುಗಳ ಬಗ್ಗೆ ಶೀಘ್ರವೇ ಮಾಹಿತಿ ನೀಡಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

    ಸಂಗೀತ ಕಾರ್ಯಕ್ರಮದಲ್ಲಿ ಎರಡು ಬಾರಿ ದೊಡ್ಡ ಶಬ್ದ ಕೇಳಿಸಿದೆ. ಈ ಬಗ್ಗೆ ತನಿಖೆ ನಡೆಯುತ್ತಿದ್ದು ಇದೊಂದು ಭಯೋತ್ಪಾದನಾ ಕೃತ್ಯ ಎಂದು ಪರಿಗಣಿಸಿದ್ದೇವೆ ಎಂದು ಪೊಲೀಸರು ಹೇಳಿದ್ದಾರೆ.

    https://twitter.com/ArianaGrande/status/866849021519966208

    https://www.youtube.com/watch?v=4UyH__FSlbo

     

  • ಮಂಗಳೂರು ಟೆರರ್ ಕೇಸ್: ಮೂವರು ದೋಷಿ, ನಾಲ್ವರು ಖುಲಾಸೆ

    ಮಂಗಳೂರು ಟೆರರ್ ಕೇಸ್: ಮೂವರು ದೋಷಿ, ನಾಲ್ವರು ಖುಲಾಸೆ

    – ಏಪ್ರಿಲ್ 12 ರಂದು ಶಿಕ್ಷೆಯ ಪ್ರಮಾಣ ಪ್ರಕಟ

    ಮಂಗಳೂರು: 20008ರಲ್ಲಿ ಮಂಗಳೂರಿನ ವಿವಿಧೆಡೆ ಉಗ್ರವಾದಿ ಚಟುವಟಿಕೆ ಆರೋಪದಲ್ಲಿ ಬಂಧಿತರಾಗಿದ್ದವರ ಪೈಕಿ ಮೂವರ ಮೇಲಿನ ಆರೋಪ ಸಾಬೀತಾಗಿದೆ.

    ಮಂಗಳೂರಿನ 3ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯವು ದೋಷಿಗಳೆಂದು ಮಹತ್ವದ ತೀರ್ಪು ನೀಡಿದ್ದು, ನಾಲ್ವರನ್ನು ಪ್ರಕರಣದಿಂದ ಖುಲಾಸೆಗೊಳಿಸಿದೆ. ಏಪ್ರಿಲ್ 12ರಂದು ಶಿಕ್ಷೆಯ ಪ್ರಮಾಣ ಪ್ರಕಟವಾಗಲಿದೆ.

    ಸೈಯದ್ ಮಹಮ್ಮದ್ ನೌಶಾದ್,ಅಹ್ಮದ್ ಬಾವಾ ಅಬುಬಕ್ಕರ್, ಫಕೀರ್ ಅಹ್ಮದ್ ಎಂಬ ಮೂವರ ಆರೋಪ ಸಾಬೀತಾಗಿದೆ. ಇದೇ ವೇಳೆ ಸಾಕ್ಷ್ಯಾಧಾರಗಳ ಕೊರತೆಯಿಂದ ಶಬೀರ್ ಭಟ್ಕಳ, ಅಹ್ಮದ್ ಅಲಿ, ಜಾವೇದ್ ಅಲಿ ಮತ್ತು ಉಮರ್ ಫಾರೂಕ್ ಅವರನ್ನು ಕೋರ್ಟ್ ಆರೋಪದಿಂದ ಖುಲಾಸೆಗೊಳಿಸಿದೆ.

    2008ರಲ್ಲಿ ಮುಂಬೈ ಮತ್ತು ಮಂಗಳೂರು ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ, ಮಂಗಳೂರಿನ ಉಳ್ಳಾಲದ ಮುಕ್ಕಚ್ಚೇರಿ, ಚೆಂಬುಗುಡ್ಡೆ, ಹಳೆಯಂಗಡಿ, ಪಾಂಡೇಶ್ವರದ ಸುಭಾಷ್‍ನಗರದಿಂದ ಏಳು ಮಂದಿಯನ್ನು ಉಗ್ರವಾದ ಚಟುವಟಿಕೆಯಲ್ಲಿ ಭಾಗಿಯಾದ ಆರೋಪದಲ್ಲಿ ಬಂಧಿಸಿದ್ದರು. ಆ ಬಳಿಕ ದೇಶವಿರೋಧಿ ಚಟುವಟಿಕೆ, ವಿಧ್ವಂಸಕ ಕೃತ್ಯಕ್ಕೆ ಸಂಚು, ಸ್ಪೋಟಕ ತಯಾರಿಕೆ ಆರೋಪದಲ್ಲಿ ಏಳು ಮಂದಿ ವಿರುದ್ಧ ಕೇಸು ದಾಖಲಾಗಿತ್ತು.