Tag: terrorist attacks

  • ಚುನಾವಣೆಗೂ ಮುನ್ನವೇ ಜಮ್ಮು-ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ; ಗುಂಡಿನ ದಾಳಿಗೆ ಮಾಜಿ ಸರ್ಪಂಚ್‌ ಬಲಿ, ದಂಪತಿಗೆ ಗಾಯ!

    ಚುನಾವಣೆಗೂ ಮುನ್ನವೇ ಜಮ್ಮು-ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ; ಗುಂಡಿನ ದಾಳಿಗೆ ಮಾಜಿ ಸರ್ಪಂಚ್‌ ಬಲಿ, ದಂಪತಿಗೆ ಗಾಯ!

    ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ (Jammu and Kashmir) ಲೋಕಸಭೆ ಚುನಾವಣೆಯ 5ನೇ ಹಂತದ ಮತದಾನಕ್ಕೆ ಕ್ಷಣನೆ ಬಾಕಿಯಿರುವಾಗಲೇ ಉಗ್ರರು ಅಟ್ಟಹಾಸ ಮೆರೆದಿದ್ದಾರೆ. ಒಂದೇ ದಿನ ಎರಡು ಕಡೆ ಉಗ್ರರು ನಾಗರಿಕರು ಹಾಗೂ ವಲಸೆ ಕಾರ್ಮಿಕರನ್ನು ಗುರಿಯಾಗಿಸಿ ಗುಂಡಿನ ದಾಳಿ ನಡೆಸಿದ್ದಾರೆ.

    ಇಲ್ಲಿನ ಶೋಪಿಯಾನ್‌ ಜಿಲ್ಲೆಯಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಮಾಜಿ ಸರ್ಪಂಚ್‌ (Ex Sarpanch) ಒಬ್ಬರು ಹತರಾದರೆ, ಅನಂತನಾಗ್‌ ಜಿಲ್ಲೆಯಲ್ಲಿ ರಾಜಸ್ಥಾನದ ದಂಪತಿಯು ಗಾಯಗೊಂಡಿದ್ದಾರೆ ಎಂದು ಜಮ್ಮು-ಕಾಶ್ಮೀರ ಪೊಲೀಸರು (J & K Police) ಮಾಹಿತಿ ನೀಡಿದ್ದಾರೆ. ಇತ್ತೀಚೆಗೆ ವಲಸೆ ಕಾರ್ಮಿಕರನ್ನು ಗುರಿಯಾಗಿಸಿ ನಡೆಸುತ್ತಿರುವ ದಾಳಿಗಳು ಹೆಚ್ಚಾಗಿದ್ದು, ಕಳೆದ ಏಪ್ರಿಲ್‌ನಲ್ಲೂ ಶೋಪಿಯಾನ್‌ ಜಿಲ್ಲೆಯಲ್ಲಿ ಟೂರಿಸ್ಟ್‌ ಗೈಡ್‌ ಒಬ್ಬನನ್ನ ಹತ್ಯೆ ಮಾಡಲಾಗಿತ್ತು. ಇದನ್ನೂ ಓದಿ: ಜೀನ್ಸ್ ಪ್ಯಾಂಟ್, ಟೀಶರ್ಟ್‍ನಲ್ಲಿಟ್ಟು ಸಾಗಿಸುತ್ತಿದ್ದ 1.96 ಕೋಟಿ ಮೌಲ್ಯದ ಚಿನ್ನ ಸೀಜ್

    ಶೋಪಿಯಾನ್‌ ಜಿಲ್ಲೆಯ ಹುರ್ಪುರ ಗ್ರಾಮದಲ್ಲಿ ಉಗ್ರರ ದಾಳಿಯಲ್ಲಿ (Terrorist Attacks) ಮಾಜಿ ಸರ್ಪಂಚ್‌ ಐಜಾಜ್‌ ಅಹ್ಮದ್‌ ಶೇಖ್‌ ಮೃತಪಟ್ಟಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ ಚಿಕಿತ್ಸೆಗೆ ದೇಹ ಸ್ಪಂಧಿಸದೇ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: 10ಕ್ಕೂ ಹೆಚ್ಚು ಅನಧಿಕೃತ ಕೋಚಿಂಗ್‌ ಸೆಂಟರ್‌ಗಳ ಮೇಲೆ ದಾಳಿ – ಸೋಮವಾರದ ಒಳಗೆ ಬಂದ್‌ಗೆ ಸೂಚನೆ!

    ದಂಪತಿಗೆ ಗಾಯ:
    ಅನಂತನಾಗ್‌ನಲ್ಲಿಯೂ ಉಗ್ರರ ದಾಳಿ ನಡೆದಿದ್ದು, ರಾಜಸ್ಥಾನ ಮೂಲದ ಪತಿ-ಪತ್ನಿ (Tourist Couple) ಗಾಯಗೊಂಡಿದ್ದಾರೆ. ಟೂರಿಸ್ಟ್‌ ಕ್ಯಾಂಪ್‌ ಮೇಲೆ ಉಗ್ರರು ನಡೆಸಿದ ದಾಳಿಯಲ್ಲಿ ಪರ್ಹಾ ಹಾಗೂ ಅವರ ಪತಿ ತಬ್ರೇಜ್‌ ಎಂಬುವರು ಗಾಯಗೊಂಡಿದ್ದಾರೆ. ಅವರನ್ನು ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಎರಡೂ ಕಡೆ ದಾಳಿ ಮಾಡಿದವರು ಯಾವ ಸಂಘಟನೆಗೆ ಸೇರಿದವರು ಎಂಬುದರ ಕುರಿತು ತನಿಖೆ ನಡೆಯುತ್ತಿದೆ. ಸ್ಪಷ್ಟ ಮಾಹಿತಿ ಇನ್ನೂ ಲಭ್ಯವಾಗಿಲ್ಲ ಎಂದು ಪೊಲೀಸರು ಮಾಹಿತಿ ಹಂಚಿಕೊಂಡಿದ್ದಾರೆ.

    ಜಮ್ಮು ಮತ್ತು ಕಾಶ್ಮೀರದಲ್ಲಿ ಇದೇ ಮೇ 20ರಂದು ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಲೋಕಸಭಾ ಕ್ಷೇತ್ರಕ್ಕೆ (Lok Sabha Constituency) ಮತದಾನ ನಡೆಯಲಿದೆ.

  • CRPF ಯೋಧರನ್ನು ಗುರಿಯಾಗಿಸಿ ಪುಲ್ವಾಮಾದಲ್ಲಿ ಮತ್ತೆ ಉಗ್ರರ ದಾಳಿ

    CRPF ಯೋಧರನ್ನು ಗುರಿಯಾಗಿಸಿ ಪುಲ್ವಾಮಾದಲ್ಲಿ ಮತ್ತೆ ಉಗ್ರರ ದಾಳಿ

    ಶ್ರೀನಗರ: ಜಮ್ಮು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಸಿಆರ್‌ಪಿಎಫ್‌ ಯೋಧರನ್ನು ಗುರಿಯಾಗಿಸಿಕೊಂಡು ಉಗ್ರರು ದಾಳಿ ನಡೆಸಿದ್ದಾರೆ.

    ಪುಲ್ವಾಮಾದ ಡ್ರಾಬ್‍ಗ್ರಮ್ ಪ್ರದೆಶದಲ್ಲಿ 10ನೇ ತರಗತಿಯ ಬೋರ್ಡ್ ಪರೀಕ್ಷೆ ನಡೆಯುತ್ತಿದ್ದ ವೇಳೆ ಉಗ್ರರರು ದಾಳಿ ನಡೆಸಿದ್ದಾರೆ. ಪರೀಕ್ಷೆಗೆ ತೊಂದರೆಯಾಗದಂತೆ ಭದ್ರತೆಗಾಗಿ ನಿಯೋಜನೆಗೊಂಡಿದ್ದ ಸಿಆರ್‌ಪಿಎಫ್‌ ಯೋಧರನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಲಾಗಿದೆ.

    ಉಗ್ರರ ನಡುವಿನ ಈ ಗುಂಡಿನ ಚಕಮಕಿಯಲ್ಲಿ ಭಾರತೀಯ ಯೋಧರಿಗೆ ಯಾವುದೇ ಪ್ರಾಣಹಾನಿಯಾಗಿಲ್ಲ ಎಂಬ ಮಾಹಿತಿ ಲಭಿಸಿದ್ದು, ಉಗ್ರ ದಾಳಿಗೆ ಯೋಧರು ಪ್ರತಿದಾಳಿ ನಡೆಸಿದ್ದಾರೆ. ಉಗ್ರರು ಸುಮಾರು 6 ರಿಂದ 7 ಸುತ್ತು ಗುಂಡು ಹರಿಸಿದ್ದರು ಎಂಬ ಮಾಹಿತಿ ಲಭಿಸಿದೆ. ಉಗ್ರರ ದಾಳಿಯ ಹಿನ್ನೆಲೆಯಲ್ಲಿ ಹೆಚ್ಚಿನ ಸೇನೆಯನ್ನು ಕರೆಯಿಸಿಕೊಂಡಿರುವ ಪೊಲೀಸರು, ಪ್ರದೇಶವನ್ನು ಸುತ್ತುವರೆದು ಸರ್ಚ್ ಆಪರೇಷನ್ ನಡೆಸಿದ್ದಾರೆ. ಕಾರ್ಯಾಚರಣೆ ಮುಂದುವರಿಸಿದಿದೆ.

    ಯೂರೋಪ್‍ನ ಯೂನಿಯನ್ ಸಂಸದರ ತಂಡ ಜಮ್ಮು ಕಾಶ್ಮೀರಕ್ಕೆ ಭೇಟಿ ನೀಡಿದ್ದ ಸಮಯದಲ್ಲೇ ಉಗ್ರರು ದಾಳಿ ನಡೆಸಿದ್ದಾರೆ. ಆರ್ಟಿಕಲ್ 370 ರದ್ದು ಬಳಿಕ ಕಣಿವೆಯ ಪ್ರದೇಶದ ಸ್ಥಿತಿಗತಿ ಬಗ್ಗೆ ತಿಳಿಯಲು ಯುರೋಪಿಯನ್ ಯೂನಿಯನ್ ಸಂಸದರು ಭೇಟಿ ನೀಡಿದ್ದಾರೆ. ಜಮ್ಮು ಕಾಶ್ಮೀರದ ಸೆಪೋರ್ ಬಸ್ ನಿಲ್ದಾಣದಲ್ಲಿ ಸೋಮವಾರ ಗ್ರೇನೇಡ್ ದಾಳಿ ನಡೆಸಿದ್ದರು. ಈ ದಾಳಿಯಲ್ಲಿ ಇಬ್ಬರು ಮಹಿಳೆಯರು ಸೇರಿದಂತೆ 19ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು.

  • ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ: ಐಇಡಿ ಸ್ಫೋಟಿಸಿ ನಾಲ್ವರು ಪೊಲೀಸರ ಹತ್ಯೆ

    ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ: ಐಇಡಿ ಸ್ಫೋಟಿಸಿ ನಾಲ್ವರು ಪೊಲೀಸರ ಹತ್ಯೆ

    ಶ್ರೀನಗರ: ಕಣಿವೆ ರಾಜ್ಯ ಜಮ್ಮು ಕಾಶ್ಮೀರದಲ್ಲಿ ಮತ್ತೆ ಉಗ್ರರ ಅಟ್ಟಹಾಸ ಮುಂದುವರೆದಿದ್ದು, ಪೊಲೀಸರನ್ನು ಗುರಿಯಾಗಿಕೊಂಡು ಐಇಡಿ (ಸುಧಾರಿತ ಸ್ಫೋಟಕ ಸಾಧನ) ಸ್ಫೋಟಿಸಿ 4 ಪೊಲೀಸರನ್ನು ಹತ್ಯೆ ಮಾಡಲಾಗಿದೆ.

    ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಸೋಪೋರ್ ನ ಚೋಟಾ ಬಜಾರ್ ಹಾಗೂ ಬಡ ಬಜಾರ್ ಪ್ರದೇಶದ ಅಂಗಡಿಯೊಂದರ ಬಳಿ ಉಗ್ರರು ರಿಮೋಟ್ ಕಾಂಟ್ರೋಲ್ ಉಳ್ಳ ಐಇಡಿ ಯನ್ನು ಅಳವಡಿಸಿದ್ದರು. ಪೊಲೀಸರು ಗಸ್ತಿನಲ್ಲಿದ್ದ ವೇಳೆ ಈ ಸ್ಥಳಕ್ಕೆ ಬಂದಾಗ ಐಇಡಿ ಯನ್ನು ಸ್ಫೋಟಿಸಲಾಗಿದೆ. ಸ್ಫೋಟದಿಂದ 3 ಅಂಗಡಿಗಳಿಗೂ ಕೂಡ ಹಾನಿಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಈವರೆಗೆ ಯಾವುದೇ ಉಗ್ರಗಾಮಿ ಸಂಘಟನೆಗಳು ಈ ಕೃತ್ಯದ ಹೊಣೆ ಹೊತ್ತುಕೊಂಡಿಲ್ಲ. ವಿಚಾರ ತಿಳಿದ ಬಳಿಕ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಸುತ್ತಮುತ್ತಲಿನ ಪ್ರದೇಶದಲ್ಲಿ ಶೋಧ ಕಾರ್ಯ ನಡೆಸುತ್ತಿರುವುದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

    1993 ರಲ್ಲಿ ಭದ್ರತಾಪಡೆಯ ಗುಂಡಿನ ದಾಳಿಯಿಂದ 57 ಮಂದಿ ಸಾವನ್ನಪ್ಪಿದ್ದ ಸಾಮೂಹಿಕ ಹತ್ಯಾಕಾಂಡದ ಹಿನ್ನೆಲೆಯಲ್ಲಿ ಶನಿವಾರ ಕಾಶ್ಮೀರದ ಪ್ರತ್ಯೇಕತಾವಾದಿಗಳು ಮುಷ್ಕರಕ್ಕೆ ಕರೆ ನೀಡಿದ್ದರು. ಹೀಗಾಗಿ ಸ್ಫೋಟ ಸಂಭವಿಸಿದ ಸಂದರ್ಭದಲ್ಲಿ ಮಾರ್ಕೆಟ್‍ನಲ್ಲಿನ ಅಂಗಡಿಗಳು ಬಂದ್ ಆಗಿದ್ದವು. ಸ್ಥಳದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನ ಇರಲಿಲ್ಲ.

    ಘಟನೆ ಕುರಿತು ಜಮ್ಮು ಕಾಶ್ಮೀರ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಟ್ವೀಟ್ ಮಾಡಿದ್ದು, ಐಇಡಿ ಸ್ಫೋಟದಿಂದ ನಾಲ್ವರು ಪೊಲೀಸರು ಸಾವನ್ನಪ್ಪಿರುವ ವಿಷಯ ಕೇಳಿ ನೋವಾಗಿದೆ ಎಂದು ಹೇಳಿದ್ದಾರೆ. ಘಟನೆಯಲ್ಲಿ ಮೃತಪಟ್ಟ ಪೊಲೀಸ್ ಸಿಬ್ಬಂದಿಯ ಕುಟುಂಬಕ್ಕೆ ತಮ್ಮ ಸಂತಾಪವನ್ನು ಸೂಚಿಸಿದ್ದಾರೆ.

  • ನ್ಯೂಯಾರ್ಕ್ ನಲ್ಲಿ ಐಸಿಸ್ ದಾಳಿ: ಅಪಾಯದಿಂದ ಪ್ರಿಯಾಂಕಾ ಚೋಪ್ರಾ ಪಾರು

    ನ್ಯೂಯಾರ್ಕ್ ನಲ್ಲಿ ಐಸಿಸ್ ದಾಳಿ: ಅಪಾಯದಿಂದ ಪ್ರಿಯಾಂಕಾ ಚೋಪ್ರಾ ಪಾರು

    ನ್ಯೂಯಾರ್ಕ್: ಪಿಕಪ್ ವಾಹನ ಹರಿಸಿ 8 ಜನರನ್ನು ಹತ್ಯೆಗೈದ ಉಗ್ರನ ಕೃತ್ಯ ನಟಿ ಪ್ರಿಯಾಂಕಾ ಚೋಪ್ರಾ ವಾಸವಿರುವ ಮನೆಯ 5 ಬ್ಲಾಕ್ ದೂರದಲ್ಲಿ ನಡೆದಿದೆ.

    ಕೆಲಸ ಮುಗಿಸಿಕೊಂಡು ಮನೆಯತ್ತ ತೆರಳುತ್ತಿರುವ ವೇಳೆ ಆಂಬುಲೆನ್ಸ್ ಸೈರನ್ ಗಳಿಂದ ಉಗ್ರರ ದಾಳಿ ನಡೆದಿದೆ ಎಂದು ಗೊತ್ತಾಯಿತು. ಈ ದಾಳಿಯನ್ನು ನಾನು ಖಂಡಿಸುತ್ತೇನೆ. ದುರಂತದಲ್ಲಿ ಸಾವನ್ನಪ್ಪಿದ ಕುಟುಂಬದವರಿಗೆ ನನ್ನ ವಿಷಾದ ಎಂದು ಪ್ರಿಯಾಂಕ ತಮ್ಮ ಟ್ವಿಟರ್ ನಲ್ಲಿ ಬರೆದುಕೊಂಡಿದ್ದಾರೆ.

    ಸದ್ಯ ಪ್ರಿಯಾಂಕಾ ಹಾಲಿವುಡ್ ನ ಸಿನಿಮಾ ಮತ್ತು ರಿಯಾಲಿಟಿ ಶೋಗಳಲ್ಲಿ ಭಾಗಿಯಾಗಿದ್ದರಿಂದ ಸದ್ಯ ನ್ಯೂಯಾರ್ಕ್ ಸಿಟಿಯಲ್ಲಿ ವಾಸವಾಗಿದ್ದಾರೆ. ಕ್ವಾಂಟಿಕೋ ಸೀಸನ್-3ರಲ್ಲಿ ಶೂಟಿಂಗ್ ನಲ್ಲಿ ಪ್ರಿಯಾಂಕ ಬ್ಯೂಸಿಯಾಗಿದ್ದಾರೆ. ಹಾಲಿವುಡ್ ಚಿತ್ರಗಳ ಬಳಿಕ ಪ್ರಿಯಾಂಕ ಮರಳಿ ಪಿ.ಟಿ.ಉಷಾ ಜೀವನಾಧರಿತ ಸಿನಿಮಾದ ಚಿತ್ರೀಕರಣದಲ್ಲಿ ಭಾಗಿಯಾಗಲಿದ್ದಾರೆ ಎಂದು ಹೇಳಲಾಗಿದೆ.

    ಘಟನಾ ಸ್ಥಳದಲ್ಲಿ ಅಧಿಕಾರಿಗಳಿಗೆ ದಾಳಿ ನಡೆದ ಸ್ಥಳದಲ್ಲಿ ಇಂಗ್ಲೀಷ್‍ನಲ್ಲಿ ಬರೆದಿರುವ ಒಂದು ನೋಟ್ ಸಿಕ್ಕಿದ್ದು, ಅದರ ಆಧಾರದ ಮೇಲೆ ಐಸಿಸ್ ಉಗ್ರ ಸಂಘಟನೆಗೆ ಸೇರಿದ ವ್ಯಕ್ತಿಯೊಬ್ಬ ಈ ದಾಳಿಯನ್ನು ನಡೆಸಿದ್ದಾನೆ ಎನ್ನುವ ಶಂಕೆ ವ್ಯಕ್ತವಾಗಿದೆ. ಮೂಲಗಳ ಪ್ರಕಾರ, ದಾಳಿಕೋರನನ್ನು 29 ವರ್ಷದ ಸೈಫಲೋಲೋ ಹಬಿಬುಲ್ಲೇವಿಕ್ ಸೈಪೋವ್ ಎಂದು ಗುರುತಿಸಲಾಗಿದೆ. ಈತ ಏಷ್ಯಾದ ಕೇಂದ್ರ ರಾಷ್ಟ್ರವಾದ ಉಜ್ಬೇಕಿಸ್ತಾನ್‍ನ ಪ್ರಜೆಯಾಗಿದ್ದು, 2010ರಲ್ಲಿ ಅಮೆರಿಕಕ್ಕೆ ಬಂದಿದ್ದ ಎನ್ನುವ ಮಾಹಿತಿ ಲಭ್ಯವಾಗಿದೆ. ಟ್ರಕ್ ಚಾಲಕ ‘ಅಲ್ಲಾಹು ಅಕ್ಬರ್’ ಎಂಬುದಾಗಿ ಚೀರುತ್ತಿದ್ದ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. ಪಿಸ್ತೂಲ್ ಹಿಡಿದುಕೊಂಡು ಮತ್ತಷ್ಟು ಜನರನ್ನು ಹತ್ಯೆ ಮಾಡಲು ಮುಂದಾಗುತ್ತಿದ್ದ ವೇಳೆ ಭದ್ರತಾ ಸಿಬ್ಬಂದಿ ಆತನನ್ನು ಸುತ್ತುವರೆದು ಗುಂಡಿಟ್ಟು ಹತ್ಯೆ ಮಾಡಿದ್ದಾರೆ.

     

    https://twitter.com/movarsi/status/925615605750947840

    https://twitter.com/bryanofmcccd/status/925615567003795456

    https://twitter.com/Bubbalouwie/status/925615469314347008

    https://twitter.com/willwphoto/status/925615424179527680

    https://twitter.com/TheAndroid2011/status/925615353794883584

  • ನ್ಯೂಯಾರ್ಕ್‍ನಲ್ಲಿ ಐಸಿಸ್ ಕೃತ್ಯಕ್ಕೆ 8 ಬಲಿ: ರಸ್ತೆಯಲ್ಲಿ ಉಗ್ರನ ಆಟಾಟೋಪ ನೋಡಿ

    ನ್ಯೂಯಾರ್ಕ್‍ನಲ್ಲಿ ಐಸಿಸ್ ಕೃತ್ಯಕ್ಕೆ 8 ಬಲಿ: ರಸ್ತೆಯಲ್ಲಿ ಉಗ್ರನ ಆಟಾಟೋಪ ನೋಡಿ

    ನ್ಯೂಯಾರ್ಕ್: ಪಾದಚಾರಿ ಮಾರ್ಗದಲ್ಲಿ ಏಕಾಏಕಿ ಉಗ್ರನೊಬ್ಬ ಪಿಕಪ್ ಹರಿಸಿದ ಪರಿಣಾಮ 8 ಮಂದಿ ಸ್ಥಳದಲ್ಲಿಯೇ ಮೃತಪಟ್ಟಿದ್ದು, ಸುಮಾರು 12 ಕ್ಕೂ ಹೆಚ್ಚು ಜನರಿಗೆ ಗಂಭೀರವಾಗಿರುವ ಘಟನೆ ನ್ಯೂಯಾರ್ಕ್‍ನ ವಿಶ್ವ ವ್ಯಾಪಾರ ಕೇಂದ್ರದ ಬಳಿ ನಡೆದಿದೆ.

    ಅಧಿಕಾರಿಗಳಿಗೆ ದಾಳಿ ನಡೆದ ಸ್ಥಳದಲ್ಲಿ ಇಂಗ್ಲೀಷ್‍ನಲ್ಲಿ ಬರೆದಿರುವ ಒಂದು ನೋಟ್ ಸಿಕ್ಕಿದ್ದು, ಅದರ ಆಧಾರದ ಮೇಲೆ ಐಸಿಸ್ ಉಗ್ರ ಸಂಘಟನೆಗೆ ಸೇರಿದ ವ್ಯಕ್ತಿಯೊಬ್ಬ ಈ ದಾಳಿಯನ್ನು ನಡೆಸಿದ್ದಾನೆ ಎನ್ನುವ ಶಂಕೆ ವ್ಯಕ್ತವಾಗಿದೆ.

    ಇದು ಭಯೋತ್ಪಾದಕರ ಹೇಡಿತನದ ಕೃತ್ಯವಾಗಿದೆ. ಉಗ್ರರು ಮುಗ್ಧ ನಾಗರಿಕರನ್ನು ಗುರಿಯಾಗಿಸಿಕೊಂಡು ಈ ದಾಳಿ ನಡೆಸಿದ್ದಾರೆ ಎಂದು ನ್ಯೂಯಾರ್ಕ್ ಮೇಯರ್ ಬಿಲ್ ಡಿ ಬ್ಲೇಸಿಯೋ ಹೇಳಿದ್ದಾರೆ.

    ಮೂಲಗಳ ಪ್ರಕಾರ, ದಾಳಿಕೋರನನ್ನು 29 ವರ್ಷದ ಸೈಫಲೋಲೋ ಹಬಿಬುಲ್ಲೇವಿಕ್ ಸೈಪೋವ್ ಎಂದು ಗುರುತಿಸಲಾಗಿದೆ. ಈತ ಏಷ್ಯಾದ ಕೇಂದ್ರ ರಾಷ್ಟ್ರವಾದ ಉಜ್ಬೇಕಿಸ್ತಾನ್‍ನ ಪ್ರಜೆಯಾಗಿದ್ದು, 2010ರಲ್ಲಿ ಅಮೆರಿಕಕ್ಕೆ ಬಂದಿದ್ದ ಎನ್ನುವ ಮಾಹಿತಿ ಲಭ್ಯವಾಗಿದೆ.

    ಪಿಕಪ್ ಬಾಡಿಗೆ ಪಡೆದುಕೊಂಡು ಮನಸೋ ಇಚ್ಛೆ ವಾಹನವನ್ನು ಅತೀವೇಗದಿಂದ ಚಲಾಯಿಸಿಕೊಂಡು ಬಂದಿದ್ದಾನೆ. ಮೊದಲು ನಿಂತಿದ್ದ ಒಂದು ಶಾಲಾ ಬಸ್‍ಗೆ ಡಿಕ್ಕಿ ಹೊಡೆದು ನಂತರ ಬೈಕ್ ಮತ್ತು ಸೈಕಲ್ ಪಾದಚಾರಿ ಸವಾರರ ಮೇಲೆ ಏಕಾಏಕಿ ಹರಿಸಿದ್ದಾನೆ. ಪರಿಣಾಮ ಸ್ಥಳದಲ್ಲಿಯೇ 6 ಮಂದಿಯನ್ನು ಸಾವನ್ನಪ್ಪಿದ್ದಾರೆ. ಇಬ್ಬರು ಗಾಯಾಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಈ ದಾಳಿಯಲ್ಲಿ ಸುಮಾರು 12 ಕ್ಕೂ ಮಂದಿಗೆ ಗಂಭೀರವಾಗಿ ಗಾಯಗೊಂಡಿದ್ದು, ಸದ್ಯಕ್ಕೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

    ಟ್ರಕ್ ಚಾಲಕ ‘ಅಲ್ಲಾಹು ಅಕ್ಬರ್’ ಎಂಬುದಾಗಿ ಚೀರುತ್ತಿದ್ದ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. ಪಿಸ್ತೂಲ್ ಹಿಡಿದುಕೊಂಡು ಮತ್ತಷ್ಟು ಜನರನ್ನು ಹತ್ಯೆ ಮಾಡಲು ಮುಂದಾಗುತ್ತಿದ್ದ ವೇಳೆ ಭದ್ರತಾ ಸಿಬ್ಬಂದಿ ಆತನನ್ನು ಸುತ್ತುವರೆದು ಗುಂಡಿಟ್ಟು ಹತ್ಯೆ ಮಾಡಿದ್ದಾರೆ.

    ಈ ಘಟನೆಯ ಬಗ್ಗೆ ಅಮೆರಿಕದ ಅಧ್ಯಕ್ಷ ಟ್ರಂಪ್ ಟ್ವಿಟ್ಟರ್‍ನಲ್ಲಿ ಪ್ರತಿಕ್ರಿಯೆ ನೀಡಿದ್ದು, ಅಮಾಯಕರ ಮೇಲಿನ ಉಗ್ರರ ದಾಳಿ ಹೇಡಿತನದ್ದು. ಉಗ್ರ ದಾಳಿಯಿಂದ ಸಾವನ್ನಪ್ಪಿದ ಸಂತ್ರಸ್ತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇವೆ. ಅಂತೆಯೇ ದಾಳಿ ನಡೆಸಿದ ಉಗ್ರರನ್ನು ಪತ್ತೆ ಮಾಡುತ್ತೇವೆ ಕಠಿಣ ಕ್ರಮಗಳನ್ನು ಕೈಗೊಳ್ಳುತ್ತೇವೆ ಎಂದು ಟ್ವೀಟ್ ಮಾಡಿದ್ದಾರೆ.

    https://twitter.com/movarsi/status/925615605750947840

    https://twitter.com/bryanofmcccd/status/925615567003795456

    https://twitter.com/Bubbalouwie/status/925615469314347008

    https://twitter.com/willwphoto/status/925615424179527680

    https://twitter.com/TheAndroid2011/status/925615353794883584

  • ರಜೆ ಮೇಲೆ ಮನೆಗೆ ಬಂದಿದ್ದ ಬಿಎಸ್‍ಎಫ್ ಯೋಧನನ್ನು ಗುಂಡಿಟ್ಟು ಕೊಂದ ಉಗ್ರರು

    ರಜೆ ಮೇಲೆ ಮನೆಗೆ ಬಂದಿದ್ದ ಬಿಎಸ್‍ಎಫ್ ಯೋಧನನ್ನು ಗುಂಡಿಟ್ಟು ಕೊಂದ ಉಗ್ರರು

    ಶ್ರೀನಗರ: ಜಮ್ಮು ಕಾಶ್ಮೀರದಲ್ಲಿ ಭಯೋತ್ಪದಾಕರ ಅಟ್ಟಹಾಸ ಮುಂದುವರೆದಿದ್ದು, ಗುರುವಾರ ಬಿಎಸ್‍ಎಫ್ ಯೋಧನ ಮನೆಯಲ್ಲಿ ಗುಂಡಿನ ದಾಳಿಯನ್ನು ನಡೆಸಿದ್ದಾರೆ. ಭಯೋತ್ಪದಾಕರ ದಾಳಿಗೆ ಯೋಧ ಮೊಹ್ಮದ್ ರಮ್ಜಾನ್ ಪ್ರಯರ್ ಸ್ಥಳದಲ್ಲಿ ಮೃತಪಟಿದ್ದು, ಕುಟುಂಬದ ನಾಲ್ವರು ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡಿದ್ದಾರೆ.

    ಪ್ರರಯ್ ಜಮ್ಮು ಕಾಶ್ಮೀರ ಗಡಿನಿಯಂತ್ರಣ ಪಡೆಯ 73ನೇ ಬೇಟಾಲಿಯಾನ್‍ನಲ್ಲಿ ಸೇವೆ ಸಲ್ಲಿಸುತ್ತಿದ್ದು, ಕೆಲವು ದಿನಗಳ ಹಿಂದಷ್ಟೇ ರಜೆ ಪಡೆದು ಜಮ್ಮು ಕಾಶ್ಮೀರದ ಬಂಡೀಪುರ ಜಿಲ್ಲೆಯ ನಿವಾಸಿಕ್ಕೆ ಬಂದಿದ್ದರು. ಭಯೋತ್ಪದಾಕರು ರಮ್ಜಾನ್ ಅವರನ್ನು ಅಪಹರಣ ಮಾಡಲು ಯತ್ನಿಸಿದ್ದಾರೆ. ಆದರೆ ಇದಕ್ಕೆ ಪ್ರತಿರೋಧ ತೋರಿದ ವೇಳೆ ಪ್ರರಯ್‍ರನ್ನು ಮನೆ ಹೊರಗಡೆ ಎಳೆದು ತಂದು ಹತ್ಯೆ ಮಾಡಿದ್ದಾರೆ.

    ಘಟನೆಯ ಕುರಿತು ಟ್ವೀಟ್ ಮಾಡಿರುವ ಉತ್ತರ ಕಾಶ್ಮೀರ ಪೊಲೀಸ್ ಮುಖ್ಯಸ್ಥ ನಿತೀಶ್ ಕುಮಾರ್, ರಮ್ಜಾನ್ ಕುಟುಂಬದ ನಾಲ್ವರು ಸದಸ್ಯರು ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿಸಿದ್ದಾರೆ.

    ಯೋಧ ನಿರಾಯುಧರಾಗಿದ್ದ ಸಂದರ್ಭದಲ್ಲಿ ದಾಳಿ ನಡೆಸಿರುವುದು ಅತ್ಯಂತ ಅನಾಗರಿಕ ಮತ್ತು ಅಮಾನವೀಯವಾಗಿದ್ದು, ಭಯೋತ್ಪದಾಕರ ಕೃತ್ಯಕ್ಕೆ ತಕ್ಕ ಶಿಕ್ಷೆಯನ್ನು ನೀಡಲಾಗುವುದು ಎಂದು ಜಮ್ಮು ಕಾಶ್ಮೀರ ಪೊಲೀಸ್ ಮುಖ್ಯಸ್ಥ ಎಸ್‍ಪಿ ವೈದ್ ಹೇಳಿದ್ದಾರೆ.

    ಪಾಕಿಸ್ತಾನ ಭಯೋತ್ಪಾದರು ಕಳೆದ ಮೇ ತಿಂಗಳಿನಲ್ಲಿ ಲೆ. ಉಮ್ಮರ್ ಫಯಾಜ್(22)ರನ್ನು ಹತ್ಯೆ ಮಾಡಿರುವ ಕುರಿತು ವಿಶ್ವ ಸಂಸ್ಥೆಯ ಸಾಮಾನ್ಯ ಸಭೆಯ ಮಹಾ ಅಧಿವೇಶನದಲ್ಲಿ ಭಾರತ ಪ್ರಸ್ತಾಪ ಮಾಡಿ, ಪಾಕಿಸ್ತಾನದಿಂದ ಹೊರಹೊಮ್ಮುತ್ತಿರುವ ಭಯೋತ್ಪಾದನೆಗೆ ಉದಾಹರಣೆ ನೀಡಿತ್ತು. ಇದೊಂದು ನೈಜ ಚಿತ್ರಣವಾಗಿದ್ದು, ಕಠಿಣ ವಾಸ್ತವಿಕತೆ ಹಾಗೂ ದುರಂತವನ್ನು ಸೂಚಿಸುತ್ತದೆ ಎಂದು ಭಾರತದ ಪ್ರತಿನಿಧಿ 22 ವರ್ಷದ ಸೇನಾ ಧಿಕಾರಿಯ ಫೋಟೋ ಹಿಡಿದು ಪಾಕಿಸ್ತಾನದ ದುಷ್ಕೃತ್ಯಗಳನ್ನು ವಿವರಿಸಿದ್ದರು.

    https://twitter.com/nitishcop/status/913104415476682752

    ಲೆ.ಉಮ್ಮರ್ ಫಯಾಜ್ ಕೂಡ ಕರ್ತವ್ಯದಲ್ಲಿಲ್ಲದ ಸಂದರ್ಭದಲ್ಲಿ ನಿರಾಯುಧರಾಗಿದ್ದಾಗ ಕಿಡ್ನ್ಯಾಪ್ ಆಗಿದ್ದರು. ಸಂಬಂಧಿಗಳ ಮದುವೆಯ ಸಂಭ್ರಮದಲ್ಲಿದ್ದ ಉಮ್ಮರ್‍ರನ್ನು ದಕ್ಷಿಣ ಜಮ್ಮವಿನ ಜಿಲ್ಲೆಯಿಂದ ಅಪಹರಣ ಮಾಡಲಾಗಿತ್ತು. ಉಗ್ರರು ಅವರನ್ನು ಬಿಟ್ಟುಬಿಡುತ್ತಾರೆ ಎಂದುಕೊಂಡು ಕುಟುಂಬಸ್ಥರು ಈ ವಿಚಾರವನ್ನು ಪೊಲೀಸರಿಗೆ ತಿಳಿಸಿರಲಿಲ್ಲ. ಮರುದಿನ ಗ್ರಾಮದ 30 ಕಿ.ಮೀ ದೂರದಲ್ಲಿ ಸೇನಾಧಿಕಾರಿಯ ಮೃತದೇಹ ಪತ್ತೆಯಾಗಿತ್ತು. ಅವರ ತಲೆ ಹಾಗೂ ಹುಟ್ಟೆಯ ಭಾಗದಲ್ಲಿ ಬುಲೆಟ್ ಪತ್ತೆಯಾಗಿತ್ತು.

    ಜಮ್ಮು ಕಾಶ್ಮೀರದ ಮಾಜಿ ಮುಖ್ಯ ಮಂತ್ರಿ ಓಮರ್ ಅಬ್ದುಲ್ಲಾ ಟ್ವೀಟ್ ಮಾಡಿ ತಮ್ಮ ಸಂತಾಪವನ್ನು ಸೂಚಿಸಿದ್ದಾರೆ. ಭಯೋತ್ಪಾದಕರ ಕೃತ್ಯ ಅತ್ಯಂತ ಅಸಹನೀಯವಾದುದು ಎಂದು ಹೇಳಿದ್ದಾರೆ.