ಬೆಂಗಳೂರು: ಶಿವಮೊಗ್ಗದ (Shivamogga) ತೀರ್ಥಹಳ್ಳಿಯಲ್ಲಿರುವ ಗೃಹ ಸಚಿವರ (Home Minister) ಮನೆಯ ಸುತ್ತಮುತ್ತಲೇ ಉಗ್ರರು ಅಡಗಿದ್ದಾರೆ ಎಂದು ಶ್ರೀರಾಮಸೇನೆ (Sri Ram Sena) ಮುಖ್ಯಸ್ಥ ಪ್ರಮೋದ್ ಮುತಾಲಿಕ್ (Pramod Muthalik) ತಿಳಿಸಿದ್ದಾರೆ.
ಬೆಂಗಳೂರಿನಲ್ಲಿಂದು (Benagaluru) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಿಎಫ್ಐ (PFI) ಸಂಘಟನೆ ಬ್ಯಾನ್ ಮಾಡಿದ್ರೂ, ಮಾನಸಿಕತೆ ಬ್ಯಾನ್ ಆಗಿಲ್ಲ. ಕರಾವಳಿ ಭಾಗದಲ್ಲಿ ಉಗ್ರರ ಕೃತ್ಯ ಹೆಚ್ಚಾಗುತ್ತಿದೆ. ಅಲ್ಲಿಗೆ ವಿಶೇಷ ಪಡೆಯ ಅಗತ್ಯ ಕರಾವಳಿ ಭಾಗಕ್ಕೆ ಅಗತ್ಯವಿದೆ. ಪಿಎಫ್ಐ ಮಾತ್ರವಲ್ಲ ಎಸ್ಡಿಪಿಐ (SDPI) ಕೂಡ ಬ್ಯಾನ್ ಆಗ್ಬೇಕು. ಇವರು ಬ್ಯಾನ್ ಆದ್ರೂ ಬಾಲ ಬಿಚ್ಚೋದು ಕಡಿಮೆಯಾಗಿಲ್ಲ. ಹೀಗಾಗಿ ಪೊಲೀಸರು (Police) ಇದನ್ನು ನಿರ್ಲಕ್ಷ್ಯ ಮಾಡಬಾರದು ಎಂದು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಇಂಡೋನೆಷ್ಯಾದಲ್ಲಿ ಭೂಕಂಪ 40ಕ್ಕೂ ಅಧಿಕ ಸಾವು – 300ಕ್ಕೂ ಹೆಚ್ಚು ಮಂದಿಗೆ ಗಾಯ
ಮಂಗಳೂರಿನ ಈ ಪ್ರಕರಣ ಭಟ್ಕಳಕ್ಕೂ ಲಿಂಕ್ ಇದೆ. ತೀರ್ಥಹಳ್ಳಿ ಗೃಹ ಸಚಿವರ ಮನೆ ಸುತ್ತಮುತ್ತಲೇ ಉಗ್ರರು ಅಡಗಿ ಕುಳಿತಿದ್ದಾರೆ. ಗೃಹ ಮಂತ್ರಿಗಳ ತವರೇ ಉಗ್ರರ ಸೆಂಟರ್ ಆಗಿದೆ. ಈ ಹಿಂದೆ ಕಾಂಗ್ರೆಸ್ (Congress) ಅವಧಿಯಲ್ಲೂ ಹಿಂದೂ ಹುಡುಗಿಯ ಅತ್ಯಾಚಾರ, ಹತ್ಯೆಯಾಗಿದೆ. ಆ ಪ್ರಕರಣವನ್ನೂ ರೀ ಓಪನ್ ಮಾಡಿ ತನಿಖೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ. ಇದನ್ನೂ ಓದಿ: ಮಹಾನಗರ ಪಾಲಿಕೆ ಚುನಾವಣೆ ಟಿಕೆಟ್ ಮಾರಾಟ – ಆಪ್ ವಿರುದ್ಧ ಬಿಜೆಪಿ ಗಂಭೀರ ಆರೋಪ
ಪಿಎಫ್ಐ (PFI) ನಿಷೇಧವಾದ್ರೂ ಅವ್ರ ಕುಕೃತ್ಯಕ್ಕೆ ಬ್ರೇಕ್ ಬಿದ್ದಿಲ್ಲ. ಮಂಗಳೂರಿನ ಬಾಂಬ್ ಬ್ಲಾಸ್ಟ್ (Bomb Blast) ಸಿಎಂ ಕಾರ್ಯಕ್ರಮ ಅಥವಾ ಆರ್ಎಸ್ಎಸ್ ಮಕ್ಕಳ ಕಾರ್ಯಕ್ರಮ ಗುರಿಯಾಗಿತ್ತೇ ಅನ್ನೋದನ್ನ ತನಿಖೆ ನಡೆಸಬೇಕು. ಈ ಪ್ರಕರಣವನ್ನು ಹಗುರವಾಗಿ ತೆಗೆದುಕೊಳ್ಳಬೇಡಿ ಎಂದು ಗೃಹ ಸಚಿವರಿಗೆ ಮನವಿ ಮಾಡಿದ್ದಾರೆ.
Live Tv
[brid partner=56869869 player=32851 video=960834 autoplay=true]
– ಕುಟುಂಬಸ್ಥರಿಂದ್ಲೇ ಗುರುತು ಪತ್ತೆ
– ಶಿವಮೊಗ್ಗದ ಪ್ರಕರಣದಲ್ಲೂ ಇದ್ದ
ಮಂಗಳೂರು: ಕುಕ್ಕರ್ ಬಾಂಬ್ ಬ್ಲಾಸ್ಟ್ (Cooker Blast) ಪ್ರಕರಣದಲ್ಲಿ ಗಾಯಗೊಂಡಿದ್ದ ವ್ಯಕ್ತಿ ತೀರ್ಥಹಳ್ಳಿಯ ಶಾರೀಕ್ (Shariq) ಜಾಗತಿಕ ನೆಟ್ ವರ್ಕ್ ಹೊಂದಿರೋ ಉಗ್ರ ಸಂಘಟನೆಯಿಂದ (Terrorist Groups) ಪ್ರಭಾವಿತನಾಗಿ ಕೃತ್ಯ ಎಸಗಿದ್ದಾನೆ ಎಂದು ಎಡಿಜಿಪಿ ಅಲೋಕ್ಕುಮಾರ್ (ADGP Alok Kumar) ಸ್ಪಷ್ಟಪಡಿಸಿದ್ದಾರೆ.
ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಶಿವಮೊಗ್ಗದಿಂದ ಪೊಲೀಸರು (Shivamogga) ಕರೆಸಿಕೊಂಡಿದ್ದ ಮಲತಾಯಿ ಶಬನಾ, ಸೋದರಿ ಆತಿಯಾ, ಚಿಕ್ಕಮ್ಮ ಯಾಸ್ಮಿನ್ ಅವರು ಶಾರೀಕ್ನನ್ನು ಗುರುತು ಹಿಡಿದಿದ್ದಾರೆ. ಈ ಹಿಂದೆ ಶಿವಮೊಗ್ಗದ ಕೇಸ್ನಲ್ಲಿ ಇವನು ಇದ್ದ. ಪೊಲೀಸರ ದಾಳಿ ವೇಳೆ ಶಾರೀಕ್ ಉಳಿದುಕೊಂಡಿದ್ದ ಮೈಸೂರಿನ ಮನೆಯಲ್ಲಿಯೂ ಸ್ಫೋಟಕ ವಸ್ತುಗಳು ಪತ್ತೆಯಾಗಿವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಗ್ರಾಮ ದೈವಗಳೇ ನಮ್ಮ ಊರನ್ನು ಕಾಪಾಡಿವೆ- ಕುಕ್ಕರ್ ಬ್ಲಾಸ್ಟ್ ಆದ ಆಟೋ ಚಾಲಕನ ಸಹೋದರನ ಮಾತು
ಕೊಯಮತ್ತೂರು, ತಮಿಳುನಾಡು (TamilNadu), ಕೇರಳ ಎಲ್ಲೆಡೆ ಸುತ್ತಾಡಿ ಮೈಸೂರಿಗೆ ಬಂದಿದ್ದ. ನಮಗೆ ಮತ್ತೆ ಅವನ ಫೋಟೋ ನೋಡಿ ಶಾರೀಕ್ ಅಂತಾ ಗೊತ್ತಾಗಿತ್ತು. ಆದರೂ ಅವರ ಮನೆಯವರನ್ನ ಕರೆಸಿ ಗುರುತು ಪತ್ತೆ ಮಾಡಿದ್ದೇವೆ. ಅವರ ಮಲತಾಯಿ ಶಬನಾ, ಸಹೋದರಿ ಆಫಿಯಾ, ತಾಯಿ ತಂಗಿ ಯಾಸ್ಮೀನ್ ಅವನ ಗುರುತು ಪತ್ತೆ ಮಾಡಿದ್ದಾರೆಂದು ತಿಳಿಸಿದ್ದಾರೆ. ಇದನ್ನೂ ಓದಿ: ಮಂಗಳೂರು ಬಾಂಬ್ ಬ್ಲಾಸ್ಟ್ಗೆ ನಿಷೇಧಿತ PFI ಲಿಂಕ್ – ಸರ್ಕಾರದ ವಿರುದ್ಧ ಸೇಡು ತೀರಿಸಿಕೊಳ್ಳಲು ಸ್ಕೆಚ್
ನಾವು ಅರಾಫತ್ ಆಲಿ ಮತ್ತು ಮತೀನ್ ಮನೆಯಲ್ಲಿ ಶೋಧ ನಡೆಸಿದ್ದೇವೆ. ಅವರ ಕುಟುಂಬ ಸದಸ್ಯರ ವಿಚಾರಣೆಯನ್ನೂ ನಡೆಸಿದ್ದೇವೆ. ಆದರೆ ಶಾರೀಕ್ಗೆ ಯಾರು ಫಂಡಿಂಗ್ ಮಾಡಿದ್ದಾರೆ ಅನ್ನೋದು ಗೊತ್ತಿಲ್ಲ. 2020ರಲ್ಲಿ ಮಂಗಳೂರಿನಲ್ಲಿ ಗೋಡೆ ಬರಹ ಪ್ರಕರಣ ದಾಖಲಾಗಿತ್ತು. ಅದರಲ್ಲಿ ಅವನ ಮೇಲೆ ಯುಎಪಿಎ ಆಕ್ಟ್ ನಡಿ ಕೇಸ್ ಆಗಿದೆ. ಎ1 ಆರೋಪಿ ಶಾರೀಕ್ ಆಗಿದ್ದ, ಆಗಲೇ ಮನೆಯವರು ಬುದ್ದಿ ಹೇಳಿದ್ದರಂತೆ. ಶಿವಮೊಗ್ಗದಲ್ಲಿ ಜಬೀವುಲ್ಲ ಕೇಸ್ ವಿಚಾರಣೆ ವೇಳೆ ಇವರ ಮಾಹಿತಿ ಗೊತ್ತಾಗಿತ್ತು. ಮುನೀರ್ ಬಂಧನ ಬಳಿಕ ಶಾಕೀರ್ ಟ್ರಯಲ್ ಬ್ಲಾಸ್ಟ್ ಮಾಡಿದ್ದು ಗೊತ್ತಾಗಿದೆ. ಆದರೆ ಇದ್ಯಾವ ವಿಚಾರವೂ ಮೈಸೂರು ಮನೆ ಮಾಲೀಕನಿಗೆ ಗೊತ್ತಿಲ್ಲ. ಮೊನ್ನೆ ಮೈಸೂರಿನಿಂದ ಮಡಿಕೇರಿ ಮಾರ್ಗವಾಗಿ ಬಸ್ ನಲ್ಲಿ ಮಂಗಳೂರಿಗೆ ಒಬ್ಬನೇ ಬಂದಿದ್ದಾನೆ. ನಾವು ಕೊಯಮತ್ತೂರು ಮತ್ತು ತಮಿಳುನಾಡು ಪೊಲೀಸರ ಜೊತೆ ಸಂಪರ್ಕ ಇದ್ದೇವೆ. ಕೊಯಮತ್ತೂರು ಸ್ಪೋಟಕ್ಕೆ ಸಂಪರ್ಕ ಇದೆಯಾ ಅನ್ನೋ ಬಗ್ಗೆ ಸ್ಪಷ್ಟವಾಗಿಲ್ಲ. ಆದರೆ ಕೊಯಮತ್ತೂರು ಮತ್ತು ತಮಿಳುನಾಡಿನ ಅಧಿಕಾರಿಗಳು ಇಲ್ಲಿಗೆ ಬಂದಿದ್ದಾರೆ ಆ ಸ್ಪೋಟ ಸಂಬಂಧ ಲಿಂಕ್ ಇದ್ಯಾ ಅನ್ನೋ ಬಗ್ಗೆಯೂ ತನಿಖೆ ಆಗುತ್ತೆ ಎಂದು ಹೇಳಿದ್ದಾರೆ.
ಈಗಾಗಲೇ ಶಾರೀಕ್ ಸಹೋದರಿಯ ವಿಚಾರಣೆಯೂ ಆಗಿದೆ. ಮೈಸೂರಿನಲ್ಲಿ ಅವನ ಜೊತೆ ಸಂಪರ್ಕ ಇದ್ದ ಇಬ್ಬರನ್ನ ವಶಕ್ಕೆ ಪಡೆದಿದ್ದೇವೆ. ಈ ಕೇಸ್ ನಲ್ಲಿ ಮೈನ್ ಹ್ಯಾಂಡ್ಲರ್ ಮಾಝ್ ಮುನೀರ್ ಇದ್ದಾನ ಗೊತ್ತಿಲ್ಲ, ಏಕೆಂದರೆ ಅವನು ಜೈಲ್ ನಲ್ಲಿ ಇದ್ದಾನೆ. ಅದಕ್ಕೆ ಮೊದಲು ಟ್ರಯಲ್ ಬ್ಲಾಸ್ಟ್ ಜೊತೆಯಾಗಿ ಮಾಡಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
ಶಾರೀಕ್ ಬಾಂಬ್ ಅನ್ನ ಸರಿಯಾಗಿ ಜೋಡಿಸಿರಲಿಲ್ಲ, ಅದರಲ್ಲಿ ಅವನು ಎಕ್ಸ್ ಪರ್ಟ್ ಆಗಿರಲೂ ಇಲ್ಲ. ಅರ್ಧಂಬರ್ಧ ಬಾಂಬ್ ತಯಾರಿಸಿದ್ದ, ಸರಿಯಾಗಿ ಮಾಡಿಲ್ಲ. ಮೈಸೂರಿನಲ್ಲಿ ಮೊಬೈಲ್ ತಯಾರಿ ಸಂಸ್ಥೆಯಲ್ಲಿ ಕೆಲಸ ಮಾಡ್ತಿದ್ದ ಶಾರಿಕ್, ಪೊಟ್ಯಾಸಿಯಮ್ ನೈಟ್ರೈಟ್, ಸೋಡಿಯಂ, ಅಮೋನಿಯಂ ನಂತಹ ಸ್ಪೋಟಕ ಇತ್ತು. ಇದಕ್ಕೆ ಕೆಲವೊಂದು ಐಟಮ್ ಆನ್ ಲೈನ್ನಲ್ಲಿ, ಕೆಲ ಐಟಂ ನೇರವಾಗಿ ಶಾಪ್ ನಲ್ಲಿ ತೆಗೊಂಡಿದ್ದಾನೆ. ಸಿಮ್ ಕಾರ್ಡ್ ಖರೀದಿಗಾಗಿ ಕೊಯಮತ್ತೂರು ಮೂಲದ ಒಬ್ಬರ ಆಧಾರ್ ಕಾರ್ಡ್ ಬಳಕೆ ಮಾಡಿದ್ದ. ಸದ್ಯ ಕಸ್ಟಡಿಯಲ್ಲಿ ನಾಲ್ಕು ಜನ ಇದ್ದಾರೆ. ಮೂವರು ವಶದಲ್ಲಿದ್ದು, ಒಬ್ಬನನ್ನ ಊಟಿಯಿಂದ ಕರೆ ತರ್ತಾ ಇದೀವಿ. ಇದು ಕರ್ನಾಟಕ ಪೊಲೀಸರ ಸ್ವತಂತ್ರ ತನಿಖೆ, ಆದರೆ ಕೇಂದ್ರ ತನಿಖಾ ದಳದ ಜೊತೆ ಸಂಪರ್ಕದಲ್ಲಿ ಇದ್ದೇವೆ ಎಂದು ವಿವರಿಸಿದ್ದಾರೆ.
ಸದ್ಯ ದೇವರ ದಯೆಯಿಂದ ದೊಡ್ಡ ಅನಾಹುತ ತಪ್ಪಿದೆ. ಮೂರು ತಿಂಗಳಿನಿಂದ ಕರಾವಳಿಯಲ್ಲಿ ಶಾಂತಿ ಇದೆ, ಬಾಂಬ್ ಬ್ಲಾಸ್ಟ್ ಆಗಿದ್ರೆ ಮತ್ತೆ ಕರಾವಳಿಯಲ್ಲಿ ತೊಂದರೆಯಾಗುತ್ತಿತ್ತು. ದೇವರ ದಯೆಯಿಂದ ತೊಂದರೆಯಾಗಿಲ್ಲ ಎಂದು ನಿಟ್ಟುಸಿರು ಬಿಟ್ಟಿದ್ದಾರೆ.
ಶಾರೀಕ್ ಪೂರ್ತಿ ಗುಣಮುಖ ಆಗುವ ಹಾಗೆ ಚಿಕಿತ್ಸೆ ನೀಡಲಾಗುತ್ತಿದೆ. ಆ ಬಳಿಕ ಆತನ ಹೆಚ್ಚಿನ ಮಾಹಿತಿ ಸಿಗಬಹುದು. ಅಲ್ಲಿವರೆಗೆ ಆಟೋ ಚಾಲಕನಿಗೂ ಚೇತರಿಸಿಕೊಳ್ಳಲೂ ಚಿಕಿತ್ಸೆ ನೀಡಲಾಗುತ್ತಿದೆ. ಅವರಿಗೆ ಪರಿಹಾರ ನೀಡಲು ಜಿಲ್ಲಾಡಳಿತಕ್ಕೆ ವಿನಂತಿಸಿದ್ದೇವೆ ಎಂದು ತಿಳಿಸಿದ್ದಾರೆ.
Live Tv
[brid partner=56869869 player=32851 video=960834 autoplay=true]
ಬೆಂಗಳೂರು: ಕರ್ನಾಟಕ (Karnataka) ಸೇರಿದಂತೆ ದೇಶಾದ್ಯಂತ 15 ರಾಜ್ಯಗಳಲ್ಲಿ ಬೆಳ್ಳಂಬೆಳಿಗ್ಗೆಯಿಂದಲೇ 93 ಕಡೆ ಎನ್ಐಎ (NIA), ಇಡಿ ದಾಳಿ ನಡೆಸಿದ್ದು, ರಾಜ್ಯದ ಪೊಲೀಸರ (Karnataka Police) ನೆರವಿನೊಂದಿಗೆ ಪಿಎಫ್ಐ (PFI) ಹಾಗೂ ಎಸ್ಡಿಪಿಐ (SDPI) ಸಂಘಟನೆಯ 110ಕ್ಕೂ ಹೆಚ್ಚು ಕಾರ್ಯಕರ್ತರನ್ನು ಬಂಧಿಸಿದೆ.
ಹೇಗಿತ್ತು ಆಪರೇಷನ್?
ಬರೋಬ್ಬರಿ 200ಕ್ಕೂ ಹೆಚ್ಚು ಪೊಲೀಸ್ (Police) ಅಧಿಕಾರಿಗಳ ಪಡೆ ಆರ್.ಟಿ.ನಗರದ ಭೀಮಣ್ಣ ಗಾರ್ಡನ್ 4ನೇ ಕ್ರಾಸ್ನಲ್ಲಿ ಸುತ್ತುವರಿದಿತ್ತು. ಶಂಕಿತ ಉಗ್ರ ಯಾಸಿರ್ ಗಾಢ ನಿದ್ರೆಯಲ್ಲಿದ್ದಾಗ ಮನೆಗೆ ನುಗ್ಗಿದ ಎನ್ಐಎ ಟೀಂ ಸತತ 2 ಗಂಟೆ ಕಾರ್ಯಚರಣೆ ನಡೆಸಿ ಮುಂಜಾನೆ 3 ಗಂಟೆ ವೇಳೆಗೆ ಶಂಕಿತ ಯಾಸಿರ್ನನ್ನು ಬಂಧಿಸಿದೆ. ಇದನ್ನೂ ಓದಿ: ಸೆ.26ರಿಂದ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ ಉದ್ಘಾಟನೆ
ಬೆಂಗಳೂರಿನಲ್ಲಿ ಅಡಗಿದ್ದ ಶಂಕಿತ ಉಗ್ರ 5 ವರ್ಷಗಳಿಂದ ಕೋಟಿ ಕೋಟಿ ಅವ್ಯವಹಾರ ನಡೆಸುತ್ತಿದ್ದ. ಹಣ (Money) ಪಡೆದು ಐಸಿಸ್ಗೆ ಯುವಕರನ್ನ ಭಯೋತ್ಪಾದಕ ಚಟುವಟಿಕೆಗಳಿಗೆ ರವಾನೆ ಮಾಡ್ತಿದ್ದ. ಕಳೆದ 5 ವರ್ಷಗಳಿಂದ ಉಗ್ರ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದ. ವಿದೇಶದಿಂದ ಸಾಕಷ್ಟು ಹಣ ಈತನ ಖಾತೆಗೆ ಜಮೆಯಾಗಿತ್ತು ಎಂದು ಎನ್ಐಎ ಅಧಿಕಾರಿಗಳು ತಿಳಿಸಿದ್ದಾರೆ.
ಯಾಸಿರ್ ಮೇಲಿನ ಆರೋಪಗಳೇನು?
ವಿದೇಶಗಳಿಂದ ಪಿಎಫ್ಐ ಸಂಘಟನೆಗೆ ಹಣ,
ಈ ಹಣ ಬಳಸಿಕೊಂಡು ಯುವಕರನ್ನು ಪಿಎಫ್ಐಗೆ ಆಕರ್ಷಣೆ
ಕರ್ನಾಟಕ, ಕೇರಳ, ತಮಿಳುನಾಡು, ದೆಹಲಿಯಲ್ಲಿ ಉಗ್ರ ದಾಳಿಗೆ ಸಂಚು
ಐಸಿಸ್ ರೀತಿಯಲ್ಲಿ ಯುವಕರಿಗೆ ಟ್ರೈನಿಂಗ್
ಟ್ರೈನಿಂಗ್ ಪಡೆದ ಬಳಿಕ ಯುವಕರನ್ನು ದಾಳಿಗೆ ಬಿಡೋ ಉದ್ದೇಶ
ಆಯುಧಗಳ ಮೂಲಕ ಸಾರ್ವಜನಿಕರ ಮೇಲೆ ದಾಳಿ ಟಾರ್ಗೆಟ್
ಗುಂಪು ಮಾಡಿಕೊಂಡು ಕೋಮುದಳ್ಳುರಿಗೆ ಪ್ಲ್ಯಾನ್
ಸಾಮಾಜಿಕ ಜಾಲತಾಣದ ಮೂಲಕ ಕೋಮು ದ್ವೇಷಕ್ಕೆ ಕುಮ್ಮಕ್ಕು
Live Tv
[brid partner=56869869 player=32851 video=960834 autoplay=true]
ನವದೆಹಲಿ: ಕಳೆದ ಮೂರು ದಿನಗಳಿಂದ ಗೃಹ ಸಚಿವಾಲಯದ (MHA) ಅಧಿಕಾರಿಗಳು ಸಭೆ ನಡೆಸಿ ಪ್ರತ್ಯೇಕ ಕಂಟ್ರೋಲ್ ರೂಮ್ (Control Room) ತೆರೆದು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(PFI) ಪಿಎಫ್ಐ ಮೇಲೆ ದಾಳಿ ನಡೆಸಿದೆ. ಇಲ್ಲಿಯವರೆಗೆ ಕೆಲ ಜಾಗಗಳಲ್ಲಿ ಎನ್ಐಎ (NIA) ದಾಳಿ ನಡೆಸಿದ್ದರೆ, ಮೊದಲ ಬಾರಿ ದೊಡ್ಡ ಮಟ್ಟದಲ್ಲಿ ಇಡಿ ಜೊತೆ ಸೇರಿ ದೇಶದ 11 ರಾಜ್ಯಗಳಲ್ಲಿ ದಾಳಿ ನಡೆಸಲಾಗಿದೆ.
ದೇಶ ವಿರೋಧಿ ಚಟುವಟಿಕೆಗಳಲ್ಲಿ ಪಿಎಫ್ಐ (PFI) ಭಾಗಿಯಾಗಿದೆ ಎಂಬ ಆರೋಪ ಈ ಕೇಳಿ ಬಂದಿತ್ತು. ಬಿಜೆಪಿ (BJP) ಮತ್ತು ಕಾಂಗ್ರೆಸ್ (Congress) ಪಕ್ಷಗಳು ಎಸ್ಡಿಪಿಐ (SDPI), ಪಿಎಫ್ಐ ನಿಷೇಧಿಸುವಂತೆ ಆಗ್ರಹಿಸಿದ್ದವು. ಇಲ್ಲಿಯವರೆಗೆ ಕೇಂದ್ರ ಸರ್ಕಾರ (Central Government) ಯಾವುದೇ ಕಠಿಣ ಕ್ರಮವನ್ನು ಕೈಗೊಂಡಿರಲಿಲ್ಲ. ಹತ್ಯೆಯಾದ ಸಂದರ್ಭದಲ್ಲಿ ಪಿಎಫ್ಐ ಕಾರ್ಯಕರ್ತರನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿತ್ತು. ಆದರೆ ಈ ಬಾರಿ ಸರಿಯಾದ ಪ್ಲ್ಯಾನ್ ಮಾಡಿಕೊಂಡೇ ದೇಶಾದ್ಯಂತ ಪಿಎಫ್ಐ ನಾಯಕರ ಮೇಲೆ ದಾಳಿ ನಡೆಸಿ ಶಾಕ್ ಕೊಟ್ಟಿದೆ. ಇದನ್ನೂ ಓದಿ: SDPI, PFI ಮೇಲೆ NIA, ED ದಾಳಿ – ಕರ್ನಾಟಕದಲ್ಲಿ 20, ದೇಶಾದ್ಯಂತ 106 ಮಂದಿ ಅರೆಸ್ಟ್
ಏನಿದು ಸಭೆಯ ರಹಸ್ಯ?
ಮೂರು ದಿನಗಳ ಹಿಂದೆಯಷ್ಟೇ ಇಡಿ, ಎನ್ಐಎ ಹಾಗೂ ಗುಪ್ತಚರ ಇಲಾಖೆ (Intelligence Bureau) ಅಧಿಕಾರಿಗಳೊಂದಿಗೆ ಗೃಹ ಸಚಿವಾಲಯವು ಸಭೆ ನಡೆಸಿದೆ. ಇಲ್ಲಿಯವರೆಗೆ ಯಾವೆಲ್ಲ ಪ್ರಕರಣ ದಾಖಲಾಗಿದೆ? ಈ ಸಂಘಟನೆಗೆ ಹಣ ಎಲ್ಲಿಂದ ಬರುತ್ತಿದೆ ಈ ಎಲ್ಲಾ ವಿಚಾರಗಳನ್ನು ಮಾಹಿತಿ ಕಲೆ ಹಾಕಿ ಚರ್ಚೆ ನಡೆಸಲಾಗಿತ್ತು. ಅದಕ್ಕಾಗಿ 6 ಕಂಟ್ರೋಲ್ ರೂಂಗಳನ್ನು ತೆರಲಾಗಿತ್ತು. ಪ್ರತಿ ರಾಜ್ಯದಲ್ಲಿರುವ ನಾಯಕರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಕಲೆ ಹಾಕಲಾಗಿತ್ತು. ಸಭೆ ನಡೆದ ತಡರಾತ್ರಿಯಿಂದಲೇ ಕಾರ್ಯಾಚರಣೆ ಆರಂಭವಾಗಿತ್ತು. ಪಿಎಫ್ಐ ಕಾರ್ಯಕರ್ತರು (PFI Workers) ಗಲಾಟೆ ಮಾಡಬಹುದು ಎಂಬ ಕಾರಣಕ್ಕೆ ಬಹುತೇಕ ಕಡೆ ರಾತ್ರಿಯೇ ಕಾರ್ಯಚರಣೆ ನಡೆಸಿ ನಾಯಕರನ್ನು ಬಂಧಿಸಲಾಗಿದೆ. ಇದನ್ನೂ ಓದಿ: ಉಗ್ರ ಸಂಘಟನೆ ಜೊತೆ ಸಂಪರ್ಕ-10 ರಾಜ್ಯಗಳ SDPI, PFI ಕಚೇರಿ, ನಾಯಕರ ಮನೆ ಮೇಲೆ NIA ದಾಳಿ
ಆರೋಪ ಏನು?
ಪಶ್ಚಿಮ ಏಷ್ಯಾದ ದೇಶಗಳಾದ ಕತಾರ್, ಕುವೈತ್, ಸೌದಿ ಅರೇಬಿಯಾ, ಟರ್ಕಿಯಿಂದ ಈ ಸಂಘಟನೆಗಳಿಗೆ ಅಕ್ರಮವಾಗಿ ಹಣ ಬರುತ್ತಿದೆ ಎನ್ನವ ಮಾಹಿತಿಯನ್ನು ಗುಪ್ತಚರ ಇಲಾಖೆ ನೀಡಿದೆ. ಭಾರತದಲ್ಲಿ ಯುವಕರ ತಲೆ ಕೆಡಿಸಿ ಭಯೋತ್ಪಾದಕ ಕೃತ್ಯ ಎಸಗಲು ಈ ಸಂಘಟನೆಗಳು ಪ್ರೋತ್ಸಾಹ ನೀಡುತ್ತಿವೆ. ವಿದೇಶದಿಂದ ಬಂದ ನಿಧಿಯನ್ನು ದೇಶಾದ್ಯಂತ ಭಯೋತ್ಪಾದಕ ಚಟುವಟಿಕೆಗಳಿಗೆ ಮಾತ್ರವಲ್ಲದೆ ಯುವಕರಲ್ಲಿ ಮತಾಂಧತೆಯನ್ನು ಬೆಳೆಸಲು ಬಳಸಲಾಗುತ್ತಿದೆ. ಈ ಸಂಘಟನೆಯು ಮುಸ್ಲಿಂ ಸಹೋದರತ್ವ ಹೊಂದಿರುವಂತಹ ಪ್ಯಾನ್-ಇಸ್ಲಾಮಿಸ್ಟ್ ಸಂಘಟನೆಯೊಂದಿಗೆ ಸಂಪರ್ಕವನ್ನು ಹೊಂದಿದೆ.
ಈ ಕುರಿತು ಮಾತನಾಡಿರುವ ಉತ್ತರ ಪ್ರದೇಶದ ಮಾಜಿ ಡಿಜಿಪಿ (DGP) ಬ್ರಿಜ್ಲಾಲ್, ಪಿಎಫ್ಐ ಅಪಾಯಕಾರಿ ಸಂಘಟನೆಯಾಗಿದ್ದು, ದೇಶದ 10ಕ್ಕೂ ಹೆಚ್ಚು ರಾಜ್ಯಗಳಲ್ಲಿ ಸಕ್ರಿಯವಾಗಿದೆ. ಜೊತೆಗೆ ನೇರವಾಗಿ ಪಾಕಿಸ್ತಾನದೊಂದಿಗೆ ಸಂಬಂಧ ಹೊಂದಿದೆ. ಈ ಸಂಘಟನೆಯ ಸದಸ್ಯರು ಭಾರತೀಯ ಮುಜಾಹಿದ್ದೀನ್ನೊಂದಿಗೆ ನೇರ ಸಂಪರ್ಕ ಹೊಂದಿದ್ದಾರೆ. ದೇಶದಲ್ಲಿ ಅನೇಕ ದೊಡ್ಡ ಸ್ಫೋಟಗಳನ್ನು ನಡೆಸಲು ಇವರೇ ಮುಖ್ಯ ಕಾರಣ ಎಂದು ಗಂಭೀರ ಆರೋಪ ಮಾಡಿದ್ದಾರೆ. ಇದನ್ನೂ ಓದಿ: NIA ದಾಳಿ: ದೇಶದಲ್ಲಿ ಟೆರರಿಸ್ಟ್ಗಳನ್ನ ಹುಟ್ಟುಹಾಕಿದ್ದೇ ಕಾಂಗ್ರೆಸ್ – ಆರಗ ಜ್ಞಾನೇಂದ್ರ
ಭಾರತದಲ್ಲಿ ನಿಷೇಧಕ್ಕೆ ಒಳಗಾಗಿರುವ ಸ್ಟುಡೆಂಟ್ಸ್ ಇಸ್ಲಾಮಿಕ್ ಮೂವ್ಮೆಂಟ್ ಆಫ್ ಇಂಡಿಯಾ(SIMI) ನಾಯಕರೇ ಪಿಎಫ್ಐ- ಎಸ್ಡಿಪಿಐ ಸಂಘಟನೆಯ ಪ್ರಮುಖ ನಾಯಕರಾಗಿದ್ದಾರೆ. ಭಾರತವನ್ನು ಮುಸ್ಲಿಂ ರಾಷ್ಟ್ರವನ್ನಾಗಿ ಮಾಡಬೇಕು ಎನ್ನುವುದೇ ಇವರ ಮುಖ್ಯ ಉದ್ದೇಶ.
ಸದ್ಯ ಭಾರತದಲ್ಲಿರುವ ಶಿಯಾ, ಸುನ್ನಿ, ಸೂಫಿ, ದಿಯೋಬಂದ್ ಪಂಗಡದ ನಾಯಕರು ಪಿಎಫ್ಐ ಹಾಗೂ ಎಸ್ಡಿಪಿಐನಲ್ಲಿದ್ದಾರೆ.
Live Tv
[brid partner=56869869 player=32851 video=960834 autoplay=true]