Tag: test

  • ಮಾಸ್ಕ್ ಧರಿಸಿ ಮೈದಾನಕ್ಕೆ ಇಳಿದ ಲಂಕಾ ಆಟಗಾರರು!

    ಮಾಸ್ಕ್ ಧರಿಸಿ ಮೈದಾನಕ್ಕೆ ಇಳಿದ ಲಂಕಾ ಆಟಗಾರರು!

    ನವದೆಹಲಿ: ಫಿರೋಜ್ ಶಾ ಕೋಟ್ಲಾ ಮೈದಾನದಲ್ಲಿ ನಡೆಯುತ್ತಿರುವ ಮೂರನೇ ಟೆಸ್ಟ್ ಪಂದ್ಯದ ಎರಡನೇ ದಿನದಾಟದ ಸಮಯದಲ್ಲಿ ವಾತಾವರಣದಲ್ಲಿನ ದಟ್ಟ ಮಂಜು, ಹೊಗೆ ಹಾಗೂ ಅಪಾಯಕಾರಿ ದೂಳಿನ ಕಣಗಳಿಂದ ಲಂಕಾದ ಆಟಗಾರರು ಹೈರಾಣಗಿದ್ದಾರೆ.

    ಭಾನುವಾರ ಪಂದ್ಯದ ವೇಳೆ ಕೆಲ ಆಟಗಾರರು ಮುಖಕ್ಕೆ ಮಾಸ್ಕ್ ಧರಿಸಿ ಮೈದಾನಕ್ಕೆ ಇಳಿದಿದ್ದರು. ಈ ವೇಳೆ ಲಂಕಾ ತಂಡದ ನಾಯಕ ದಿನೇಶ್ ಚಂಡಿಮಾಲ್ ಅಂಪೈರ್ ಗಳಿಗೆ ವಾತಾವರಣ ಕುರಿತು ದೂರು ನೀಡಿದರು. ಇದರಿಂದ 17 ನಿಮಿಷಗಳ ಕಾಲ ಆಟ ನಿಲ್ಲಿಸಲಾಗಿತ್ತು. ಆದರೆ ಅಂಪೈರ್ ಹಾಗೂ ಮ್ಯಾಚ್ ರೆಫ್ರಿ ಡೇವಿಡ್ ಬೂನ್ ಲಂಕಾ ಆಟಗಾರರ ಮನವೊಲಿಸಿ ಆಟ ಮುಂದುವರೆಸಲು ಯಶಸ್ವಿಯಾದರು.

    ಮತ್ತೆ ಬೌಲಿಂಗ್ ಆರಂಭಿಸಿದ ಶ್ರೀಲಂಕಾದ ಬೌಲರ್ ಲಕ್ಮಲ್ ಪಂದ್ಯದ 123 ನೇ ಓವರ್ ನಲ್ಲಿ ಉಸಿರಾಟ ಸಮಸ್ಯೆ ಎದುರಿಸಿ ಮೈದಾನದಿಂದ ಹೊರ ನಡೆದರು. ಈ ವೇಳೆ ಎರಡನೇ ಬಾರಿ ಆಟ ಸ್ಥಗಿತಗೊಂಡಿತು. (ಇದನ್ನೂ ಓದಿ: ಡಬಲ್ ಸೆಂಚುರಿ ಮೆಷಿನ್ ಕೊಹ್ಲಿಯಿಂದ ವಿಶ್ವದಾಖಲೆ! )

    ಈ ಪಂದ್ಯದಲ್ಲಿ 243 ರನ್ ಗಳಿಸಿ ಪೆವಿಲಿಯನ್ ಸೇರಿದ್ದ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ 7 ವಿಕೆಟ್ ನಷ್ಟಕ್ಕೆ 536 ರನ್ ಗಳಿಸಿದ್ದಾಗ ಮೊದಲ ಇನ್ನಿಂಗ್ಸ್ ಡಿಕ್ಲೇರ್ ಮಾಡುವ ನಿರ್ಧಾರ ಪ್ರಕಟಿಸಿದರು. ದಿನದ ಆಟದ ಅಂತ್ಯಕ್ಕೆ ಲಂಕಾ 3 ವಿಕೆಟ್ ಕಳೆದುಕೊಂಡು 131 ರನ್ ಗಳಿಸಿದೆ. ಫೀಲ್ಡಿಂಗ್ ವೇಳೆ ಟೀಂ ಇಂಡಿಯಾದ ಎಲ್ಲ ಆಟಗಾರು ಮಾಸ್ಕ್ ಧರಿಸದೇ ಎಂದಿನಂತೆ ಅಂಗಳಕ್ಕೆ ಇಳಿದಿದ್ದರು.

  • ದ್ವಿಶತಕ ಸಿಡಿಸಿ ಭಾರತದ ಪರ ಹೊಸ ದಾಖಲೆ ಬರೆದ ಕೊಹ್ಲಿ

    ದ್ವಿಶತಕ ಸಿಡಿಸಿ ಭಾರತದ ಪರ ಹೊಸ ದಾಖಲೆ ಬರೆದ ಕೊಹ್ಲಿ

    ನಾಗ್ಪುರ: ಇಲ್ಲಿನ ಜಮ್ತಾ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಶ್ರೀಲಂಕಾ ನಡುವಿನ ಎರಡನೇ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್ ನಲ್ಲಿ ದ್ವಿಶತಕ ಸಿಡಿಸುವ ಮೂಲಕ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಭಾರತದ ಪರ ಹೊಸ ದಾಖಲೆ ನಿರ್ಮಿಸಿದ್ದಾರೆ.

    ಈ ಹಿಂದೆ ನಾಯಕನಾಗಿದ್ದುಕೊಂಡು ವೆಸ್ಟ್ ಇಂಡೀಸ್ ಬ್ಯಾಟ್ಸ್ ಮನ್ ಬ್ರಿಯಾನ್ ಲಾರಾ 5 ದ್ವಿಶತಕ ಹೊಡೆದಿದ್ದರು. ಕೊಹ್ಲಿ ಈಗ 213 ರನ್ ಹೊಡೆಯುವ ಮೂಲಕ ಈ ದಾಖಲೆಯನ್ನು ಸರಿದೂಗಿಸಿದ್ದಾರೆ.

    ಆಸ್ಟ್ರೇಲಿಯಾದ ಡಾನ್ ಬ್ರಾಡ್ಮನ್, ದಕ್ಷಿಣ ಆಫ್ರಿಕಾದ ಗ್ರೇಮ್ ಸ್ಮಿತ್ ಮತ್ತು ಆಸ್ಟ್ರೇಲಿಯಾದ ಮೈಕಲ್ ಕ್ಲಾರ್ಕ್ ನಾಯಕನಾಗಿದ್ದುಕೊಂಡು 4 ದ್ವಿಶತಕ ಸಿಡಿಸಿದ್ದಾರೆ. ಪಂದ್ಯದ ಮೂರನೇ ದಿನವಾದ ಇಂದು ಕೊಹ್ಲಿ 267 ಎಸೆತಗಳಲ್ಲಿ 17 ಬೌಡರಿ, 2 ಸಿಕ್ಸರ್ ನೆರವಿನಿಂದ 213 ರನ್ ಸಿಡಿಸಿದರು.

    ಭಾರತದ ಪರ 5 ದ್ವಿಶತಕ ಸಿಡಿಸಿದ ಎರಡನೇ ಆಟಗಾರನೆಂಬ ಹೆಗ್ಗಳಿಕೆಗೆ ಕೊಹ್ಲಿ ಈಗ ಪಾತ್ರರಾಗಿದ್ದಾರೆ. ಈ ಹಿಂದೆ ರಾಹುಲ್ ದ್ರಾವಿಡ್ 5 ದ್ವಿಶತಕ ಸಿಡಿಸಿ ಭಾರತದ ಪರ ಪಟ್ಟಿಯಲ್ಲಿ ಮೊದಲ ಸ್ಥಾನವನ್ನು ಪಡೆದಿದ್ದರು.

    ಟೆಸ್ಟ್ ಕ್ರಿಕೆಟ್‍ನಲ್ಲಿ ಅತಿ ಹೆಚ್ಚು ದ್ವಿಶತಕ ಹೊಡೆದ ದಾಖಲೆ ಡಾನ್ ಬ್ರಾಡ್ಮನ್ ಹೆಸರಿನಲ್ಲಿದೆ. ಬ್ರಾಡ್ಮನ್ 12 ದ್ವಿಶತಕ ಹೊಡೆದಿದ್ದಾರೆ.

    ಈ ಪಂದ್ಯದಲ್ಲಿ ಮೂರನೇ ವಿಕೆಟ್ ಗೆ ಪೂಜಾರಾ ಜೊತೆ 183 ರನ್ ಹಾಗೂ ಐದನೇ ವಿಕೆಟ್ ಗೆ ರೋಹಿತ್ ಶರ್ಮಾ 173 ರನ್ ಜೊತೆ ಆಟ ಆಡುವ ಮೂಲಕ ಕೊಹ್ಲಿ ಭಾರತದ ಬೃಹತ್ ಮೊತ್ತ ಗಳಿಸಲು ಕಾರಣರಾದರು. ಭಾರತ 6 ವಿಕೆಟ್ ಗೆ 610 ರನ್ ಗಳಿಸಿದ್ದಾಗ ಇನ್ನಿಂಗ್ಸ್ ಡಿಕ್ಲೇರ್ ಮಾಡಿಕೊಂಡಿತು.

    ಕೊಹ್ಲಿಯ ದ್ವಿಶತಕಗಳು: 2016 ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಆಂಟಿಗುವಾದಲ್ಲಿ ನಡೆದ ಪಂದ್ಯದಲ್ಲಿ ಕೊಹ್ಲಿ 200 ರನ್ ಗಳಿಸುವ ಮೂಲಕ ಮೊದಲ ದ್ವಿಶತಕ ದಾಖಲಿಸಿದ್ದರು. ನಂತರ ಇಂದೋರ್ ನಲ್ಲಿ ನ್ಯೂಜಿಲೆಂಡ್ ವಿರುದ್ಧ 211 ರನ್, ವಾಂಕೆಡೆಯಲ್ಲಿ ಇಂಗ್ಲೆಂಡ್ ವಿರುದ್ಧ ಅತ್ಯಧಿಕ 235 ರನ್ ಹಾಗೂ ಹೈದರಾಬಾದ್ ನಲ್ಲಿ ಬಾಂಗ್ಲಾದೇಶ ವಿರುದ್ಧ 204 ರನ್ ಹೊಡೆದಿದ್ದರು.

    ಕೊಹ್ಲಿ ದ್ವಿಶತಕ ಗಳಿಸಿದ್ದು ಹೀಗೆ
    50 ರನ್ – 66 ಬಾಲ್ (5 ಬೌಂಡರಿ)
    100 ರನ್ – 130 ಬಾಲ್ (10 ಬೌಂಡರಿ)
    150 ರನ್ – 193 ಬಾಲ್ (14 ಬೌಂಡರಿ, 1 ಸಿಕ್ಸರ್)
    200 ರನ್ – 259 ಬಾಲ್ (15 ಬೌಂಡರಿ, 2 ಸಿಕ್ಸರ್)
    217 ರನ್ – 267 ಬಾಲ್ (17 ಬೌಡರಿ, 2 ಸಿಕ್ಸರ್)

    ಒಂದು ವರ್ಷದಲ್ಲಿ ಅತಿ ಹೆಚ್ಚು ಶತಕ: ಕೊಹ್ಲಿ 100 ರನ್ ಗಳಿಸುತ್ತಿದ್ದಂತೆ ಹೊಸ ದಾಖಲೆಯನ್ನು ಬರೆದಿದ್ದಾರೆ. ಒಂದೇ ವರ್ಷದಲ್ಲಿ ಅತಿ ಹೆಚ್ಚು ಶತಕ(9) ಹೊಡೆದ ನಾಯಕ ಎನ್ನುವ ಹೆಗ್ಗಳಿಕೆಗೆ ಕೊಹ್ಲಿ ಪಾತ್ರರಾಗಿದ್ದಾರೆ. ಈ ಹಿಂದೆ ಆಸ್ಟ್ರೇಲಿಯಾದ ಪಾಟಿಂಗ್ 2005 ಮತ್ತು 2006ರಲ್ಲಿ 9 ಶತಕ ಹೊಡೆದಿದ್ದರೆ, ದಕ್ಷಿಣ ಆಫ್ರಿಕಾದ ಗ್ರೇಮ್ ಸ್ಮಿತ್ 9 ಶತಕ ಹೊಡೆದಿದ್ದರು.

     

     

  • ಲಂಕಾ ಟೆಸ್ಟ್ ನಲ್ಲಿ ವಿಶೇಷ ಸಾಧನೆ ನಿರ್ಮಿಸಿದ ಚೇತೇಶ್ವರ ಪೂಜಾರಾ

    ಲಂಕಾ ಟೆಸ್ಟ್ ನಲ್ಲಿ ವಿಶೇಷ ಸಾಧನೆ ನಿರ್ಮಿಸಿದ ಚೇತೇಶ್ವರ ಪೂಜಾರಾ

    ಕೋಲ್ಕತ್ತಾ: ಶ್ರೀಲಂಕಾ ವಿರುದ್ಧ ನಡೆಯುತ್ತಿರುವ ಮೊದಲ ಟೆಸ್ಟ್ ನಲ್ಲಿ ಟೀಂ ಇಂಡಿಯಾ ಆಟಗಾರ ಚೇತೇಶ್ವರ ಪೂಜಾರ ಎಲ್ಲ 5 ದಿನವೂ ಬ್ಯಾಟಿಂಗ್ ನಡೆಸಿ ವಿಶೇಷ ಸಾಧನೆ ಮಾಡಿದ್ದಾರೆ.

    ಈ ಮೂಲಕ ಎಲ್ಲ 5 ದಿನಗಳ ಬ್ಯಾಟಿಂಗ್ ನಡೆಸಿದ ಮೂರನೇ ಭಾರತೀಯ ಆಟಗಾರ ಎನ್ನುವ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಈ ಹಿಂದೆ ಭಾರತದ ಪರವಾಗಿ ಜಯಸಿಂಹ ಮತ್ತು ಪ್ರಸ್ತುತ ಕೋಚ್ ಆಗಿರುವ ರವಿಶಾಸ್ತ್ರಿ  5 ದಿನ ಬ್ಯಾಟಿಂಗ್ ನಡೆಸಿದ್ದರು.

    ಜಯಸಿಂಹ ಅವರು 1960 ರಲ್ಲಿ ಆಸ್ಟ್ರೇಲಿಯಾ ವಿರುದ್ಧ ಸಾಧನೆ ನಿರ್ಮಿಸಿದ್ದರೆ, ರವಿಶಾಸ್ತ್ರಿ 1984 ರಲ್ಲಿ ಇಂಗ್ಲೆಂಡ್ ವಿರುದ್ಧ ಈ ಸಾಧನೆ ಮಾಡಿದ್ದರು. ಮೂರು ಬ್ಯಾಟ್ಸ್ ಮನ್ ಗಳ ಸಾಧನೆ ಕೋಲ್ಕತ್ತಾದ ಈಡನ್ ಗಾರ್ಡನ್ಸ್ ನಲ್ಲೇ ನಡೆದಿದೆ ಎನ್ನುವುದು ವಿಶೇಷ.

    5 ದಿನಗಳ ಕಾಲ ಬ್ಯಾಟಿಂಗ್ ನಡೆಸಿದ ಆಟಗಾರರು:
    ಎಂಎಲ್ ಜಯಸಿಂಹ(ಭಾರತ), ಕಿಮ್ ಹಗ್ಸ್(ಆಸ್ಟ್ರೇಲಿಯಾ), ಅಲನ್ ಲಾಂಬ್( ಇಂಗ್ಲೆಂಡ್), ರವಿಶಾಸ್ತ್ರಿ, ಆಡ್ರಿಯನ್ ಗ್ರಿಫಿತ್(ವೆಸ್ಟ್ ಇಂಡೀಸ್), ಆಂಡ್ರ್ಯೂ ಫ್ಲಿಂಟಾಫ್(ಇಂಗ್ಲೆಂಡ್), ಚೇತೇಶ್ವರ ಪೂಜಾರ

    ಮೊದಲ ದಿನ ಮಳೆ ಬಂದಿದ್ದ ಕಾರಣ ಮಧ್ಯಾಹ್ನ ಟೆಸ್ಟ್ ಆರಂಭವಾಗಿತ್ತು. ಹೀಗಾಗಿ 18 ರನ್ ಗಳಿಸಿದ್ದ ಪೂಜಾರಾ ಎರಡನೇ ದಿನ 47 ರನ್ ಗಳಿಸಿ ಮೂರನೇ ದಿನಕ್ಕೆ ಬ್ಯಾಟಿಂಗ್ ಕಾಯ್ದಿರಿಸಿಕೊಂಡಿದ್ದರು. ಮೂರನೇ ದಿನ 52 ರನ್ ಗಳಿಸಿ ಪೂಜಾರಾ ಔಟಾದರು. ನಾಲ್ಕನೇಯ ದಿನ ಲಂಕಾ 294 ರನ್ ಗಳಿಗೆ ಅಲೌಟ್ ಆಗಿದ್ದರಿಂದ ಭಾನುವಾರ ಪೂಜಾರಾ ಬ್ಯಾಟಿಂಗ್ ಮಾಡುವ ಅವಕಾಶ ಸಿಕ್ಕಿತ್ತು. ಹೀಗಾಗಿ 2 ರನ್ ಗಳಿಸಿದ್ದ ಪೂಜಾರ 5ನೇ ದಿನ 22 ರನ್ ಗಳಿಸಿ ಔಟಾದರು.

    ಇದನ್ನೂ ಓದಿ: ಲಂಕಾ ವಿರುದ್ಧ ಟೀಂ ಇಂಡಿಯಾ ವೇಗದ ಬೌಲರ್ ಗಳಿಂದ ವಿಶೇಷ ಸಾಧನೆ

  • ಗಂಗೂಲಿ ದಾಖಲೆ ಮುರಿಯುವತ್ತ ಕೊಹ್ಲಿ ಕಣ್ಣು!

    ಗಂಗೂಲಿ ದಾಖಲೆ ಮುರಿಯುವತ್ತ ಕೊಹ್ಲಿ ಕಣ್ಣು!

    ನವದೆಹಲಿ: ವಿರಾಟ್ ಕೊಹ್ಲಿ ನಾಯಕತ್ವ ವಹಿಸಿದ ಬಳಿಕ ಹಲವು ದಾಖಲೆಗಳನ್ನು ನಿರ್ಮಾಣ ಮಾಡಿದ್ದು ಈಗ ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿದರೆ ಅತಿ ಹೆಚ್ಚು ಟೆಸ್ಟ್ ಮ್ಯಾಚ್ ಗೆದ್ದ ಎರಡನೇ ಯಶಸ್ವಿ ನಾಯಕ ಎನ್ನುವ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ.

    ಕೋಲ್ಕತ್ತಾದ ಈಡನ್ ಗಾರ್ಡನ್ ಕ್ರೀಡಾಂಗಣದಲ್ಲಿ ಗುರುವಾರದಿಂದ ಮೂರು ಪಂದ್ಯಗಳ ಸರಣಿ ಆರಂಭವಾಗಲಿದೆ. ಈ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿದರೆ ಗಂಗೂಲಿ ಅವರ ದಾಖಲೆಯನ್ನು ಕೊಹ್ಲಿ ಮುರಿಯಲಿದ್ದಾರೆ. ಇದೂವರೆಗೆ ಕೊಹ್ಲಿ ನಾಯಕತ್ವದಲ್ಲಿ 29 ಟೆಸ್ಟ್ ಪಂದ್ಯಗಳನ್ನು ಆಡಿದ್ದು, ಅದರಲ್ಲಿ 19 ಪಂದ್ಯಗಳಲ್ಲಿ ಗೆಲುವು ಪಡೆದು ಟೀಂ ಇಂಡಿಯಾದ ಯಶಸ್ವಿ ನಾಯಕರ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದಾರೆ.

    ಭಾರತದ ಪರ ಟೆಸ್ಟ್ ನಲ್ಲಿ ಯಶಸ್ವಿ ನಾಯಕನೆಂಬ ಹೆಗ್ಗಳಿಕೆಗೆ ಧೋನಿ ಪಾತ್ರರಾಗಿದ್ದಾರೆ. ಧೋನಿ ನೇತೃತ್ವದಲ್ಲಿ 60 ಪಂದ್ಯಗಳನ್ನು ಟೀಂ ಇಂಡಿಯಾ ಆಡಿದ್ದು 27 ರಲ್ಲಿ ಜಯಿಸಿದೆ. ನಂತರ ಸ್ಥಾನದಲ್ಲಿ ಗಂಗೂಲಿ ಇದ್ದು 49 ಪಂದ್ಯಗಳಲ್ಲಿ ಟೀಂ ಇಂಡಿಯಾವನ್ನು ಮುನ್ನಡೆಸಿ 21 ರಲ್ಲಿ ಗೆಲುವು ಪಡೆದಿದ್ದಾರೆ.

    ಅಂತರಾಷ್ಟ್ರೀಯ ಮಟ್ಟದಲ್ಲಿ ಗರಿಷ್ಠ ಟೆಸ್ಟ್ ಪಂದ್ಯಗಳನ್ನು ಗೆದ್ದ ದಾಖಲೆಯನ್ನು ದಕ್ಷಿಣ ಆಫ್ರಿಕಾದ ನಾಯಕ ಗ್ರೇಮ್ ಸ್ಮಿತ್ ಹೆಸರಿನಲ್ಲಿದೆ. 104 ಪಂದ್ಯಗಳನ್ನು ಮುನ್ನಡೆಸಿದ ಸ್ಮಿತ್ 53ರಲ್ಲಿ ಗೆಲುವು ಪಡೆದಿದ್ದಾರೆ. ನಂತರದ ಸ್ಥಾನದಲ್ಲಿ ಆಸ್ಟ್ರೇಲಿಯಾ ತಂಡದ ಮಾಜಿ ನಾಯಕ ರಿಕ್ಕಿ ಪಾಟಿಂಗ್ ಇದ್ದು, 77 ಪಂದ್ಯಗಳಲ್ಲಿ 48ರಲ್ಲಿ ಗೆಲುವು ಪಡೆದಿದ್ದಾರೆ.

    ತಿಂಗಳ ಹಿಂದೆಯಷ್ಟೇ ನಡೆದ ಶ್ರೀಲಂಕಾ ವಿರುದ್ಧದ ಏಕದಿನ ಹಾಗೂ ಟಿ20 ಪಂದ್ಯಗಳ ಸರಣಿಯನ್ನು ಭಾರತ 9-0 ಅಂತರದಿಂದ ಕ್ಲೀನ್ ಸ್ವೀಪ್ ಮಾಡಿಕೊಂಡಿತ್ತು.

     

  • ನ್ಯೂಜಿಲೆಂಡ್ ವಿರುದ್ಧದ ಟಿ 20, ಶ್ರೀಲಂಕಾ ಟೆಸ್ಟ್ ಸರಣಿಗೆ ಟೀಂ ಇಂಡಿಯಾ ಪ್ರಕಟ

    ನ್ಯೂಜಿಲೆಂಡ್ ವಿರುದ್ಧದ ಟಿ 20, ಶ್ರೀಲಂಕಾ ಟೆಸ್ಟ್ ಸರಣಿಗೆ ಟೀಂ ಇಂಡಿಯಾ ಪ್ರಕಟ

    ಮುಂಬೈ: ನ್ಯೂಜಿಲೆಂಡ್ ವಿರುದ್ಧದ ಟಿ20 ಕ್ರಿಕೆಟ್ ಮತ್ತು ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದ್ದು, ಟೆಸ್ಟ್ ತಂಡಕ್ಕೆ ಮುರಳಿ ವಿಜಯ್ ಮರಳಿದ್ದಾರೆ.

    ಎಂಎಸ್‍ಕೆ ಪ್ರಸಾದ್ ನೇತೃತ್ವದ ಆಯ್ಕೆ ಸಮಿತಿ ತಂಡವನ್ನು ಆಯ್ಕೆ ಮಾಡಿದ್ದು, ಟಿ20 ತಂಡದಲ್ಲಿ ಕರ್ನಾಟಕದ ಕೆಎಲ್ ರಾಹುಲ್ ಹಾಗೂ ಮನೀಷ್ ಪಾಂಡೆ ಸ್ಥಾನ ಪಡೆದಿದ್ದಾರೆ. ಈ ಹಿಂದೆ ವಿಶ್ರಾಂತಿ ನೀಡಲಾಗಿದ್ದ ಆರ್ ಅಶ್ವಿನ್ ಹಾಗೂ ರವೀಂದ್ರ ಜಡೇಜಾ ಅವರನ್ನು ಪುನಃ ಟೆಸ್ಟ್ ತಂಡಕ್ಕೆ ವಾಪಸ್ ಕರೆಸಿಕೊಳ್ಳಲಾಗಿದೆ.

    ನಾಯಕ ವಿರಾಟ್ ಕೊಹ್ಲಿ ಶ್ರೀಲಂಕಾ ವಿರುದ್ಧದ ಸರಣಿಯಿಂದ ವಿಶ್ರಾಂತಿ ಬೇಕೆಂದು ಕೇಳಿದ್ದಾರೆ ಎನ್ನುವ ಸುದ್ದಿ ಮಾಧ್ಯಮಗಳಲ್ಲಿ ಪ್ರಕಟವಾಗಿತ್ತು. ಆದರೆ ಕೊಹ್ಲಿಗೆ ವಿಶ್ರಾಂತಿ ನೀಡದೇ ಮುಂದುವರಿಸಲಾಗಿದೆ.

    ನ್ಯೂಜಿಲೆಂಡ್ ವಿರುದ್ಧ ಟಿ20 ಸರಣಿ:
    ಕೊಹ್ಲಿ (ನಾಯಕ), ಶಿಖರ್ ಧವನ್, ರೋಹಿತ್ ಶರ್ಮಾ (ಉಪ ನಾಯಕ), ಕೆಎಲ್ ರಾಹುಲ್, ಮನೀಶ್ ಪಾಂಡೆ, ಶ್ರೇಯಸ್ ಅಯ್ಯರ್, ದಿನೇಶ್ ಕಾರ್ತಿಕ್, ಎಂಎಸ್ ಧೋನಿ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ ಅಕ್ಸರ್ ಪಟೇಲ್, ಯುಜುವೇಂದ್ರ ಚಹಲ್, ಕುಲ್‍ದೀಪ್ ಯಾದವ್, ಭುವನೇಶ್ವರ್ ಕುಮಾರ್, ಜಸ್ ಪ್ರೀತ್ ಬುಮ್ರಾ, ಆಶಿಶ್ ನೆಹ್ರಾ, ಮೊಹಮ್ಮದ್ ಸಿರಾಜ್.

    ಶ್ರೀಲಂಕಾ ವಿರುದ್ಧ ಟೆಸ್ಟ್ ಸರಣಿ:
    ವಿರಾಟ್ ಕೊಹ್ಲಿ (ನಾಯಕ), ಕೆಎಲ್ ರಾಹುಲ್, ಮುರಳಿ ವಿಜಯ್, ಶಿಖರ್ ಧವನ್, ಚೇತೇಶ್ವರ್ ಪೂಜಾರಾ, ಅಜಿಂಕ್ಯಾ ರಹಾನೆ (ಉಪ ನಾಯಕ), ರೋಹಿತ್ ಶರ್ಮಾ, ವೃದ್ಧಿಮಾನ್ ಸಹಾ, ಆರ್ ಅಶ್ವಿನ್, ರವೀಂದ್ರ ಜಡೇಜಾ, ಕುಲ್‍ದೀಪ್ ಯಾದವ್, ಹಾರ್ದಿಕ್ ಪಾಂಡ್ಯಾ, ಮೊಹಮ್ಮದ್ ಶಮಿ, ಉಮೇಶ್ ಯಾದವ್, ಭುವನೇಶ್ವರ್ ಕುಮಾರ್, ಈಶಾಂತ್ ಶರ್ಮಾ.

    ಶ್ರೀಲಂಕಾ ವಿರುದ್ಧದ ಅಭ್ಯಾಸ ಪಂದ್ಯ:
    ನಮನ್ ಓಜಾ (ನಾಯಕ, ವಿಕೆಟ್ ಕೀಪರ್), ಸಂಜು ಸ್ಯಾಮ್ಸನ್, ಜೀವನ್ ಜೋತ್ ಸಿಂಗ್, ಬಿ ಸಂದೀಪ್, ತನ್ಮಯ್ ಅಗರ್‍ವಾಲ್, ಅಭಿಷೇಕ್ ಗುಪ್ತಾ, ರೋಹನ್ ಪ್ರೇಮ್, ಆಕಾಶ್ ಭಂಡಾರಿ, ಜಲಜ್ ಸಕ್ಸೇನಾ, ಸಿವಿ ಮಿಲಿಂದ್, ಅವೇಶ್ ಖಾನ್, ಸಂದೀಪ್ ವಾರಿಯರ್, ರವಿ ಕಿರಣ್.

    ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೊದಲ ಟಿ 20 ಪಂದ್ಯ ನವೆಂಬರ್ ಒಂದರನ್ನು ನಡೆಯಲಿದ್ದು, ಮೂರನೇ ಮತ್ತು ಕೊನೆಯ ಪಂದ್ಯ ನವೆಂಬರ್ 7ರಂದು ನಡೆಯಲಿದೆ. ನವೆಂಬರ್ 16ರಿಂದ ಭಾರತ ಶ್ರೀಲಂಕಾ ನಡುವಿನ ಮೊದಲ ಟೆಸ್ಟ್ ಕೋಲ್ಕತ್ತಾದಲ್ಲಿ ನಡೆಯಲಿದೆ.

  • ಭರ್ಜರಿ ಚೊಚ್ಚಲ ಶತಕ ಸಿಡಿಸಿದ ಹಾರ್ದಿಕ್ ಪಾಂಡ್ಯ – ಟೀಂ ಇಂಡಿಯಾ 487/9

    ಭರ್ಜರಿ ಚೊಚ್ಚಲ ಶತಕ ಸಿಡಿಸಿದ ಹಾರ್ದಿಕ್ ಪಾಂಡ್ಯ – ಟೀಂ ಇಂಡಿಯಾ 487/9

    ಪಲ್ಲಕೆಲೆ: ಶ್ರೀಲಂಕಾ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ಚೊಚ್ಚಲ ಶತಕ ಬಾರಿಸಿದ್ದಾರೆ. ಅರ್ಧ ಶತಕ ಬಾರಿಸುವವರೆಗೆ ನಿಧಾನ ಗತಿಯಲ್ಲಿ ಆಟವಾಡುತ್ತಿದ್ದ ಪಾಂಡ್ಯ ನಂತರ ಟಿ20 ಮಾದರಿಯಲ್ಲಿ ಹೊಡಿಬಡಿ ಆಟವಾಡಿ ಶತಕ ದಾಖಲಿಸಿದರು.

    ಪಾಂಡ್ಯ 61 ಎಸೆತಗಳಲ್ಲಿ 4 ಬೌಂಡರಿ ಹಾಗೂ 1 ಸಿಕ್ಸರ್ ನೆರವಿನಿಂದ ಅರ್ಧ ಶತಕ ಬಾರಿಸಿದರು. ನಂತರದ 25 ಎಸೆತಗಳಲ್ಲಿ 6 ಸಿಕ್ಸರ್ ಹಾಗೂ 3 ಬೌಂಡರಿಗಳ ನೆರವಿನಿಂದ ಶತಕ ಬಾರಿಸಿದರು. ಒಟ್ಟಾರೆ 86 ಬಾಲ್‍ಗಳಲ್ಲಿ 7 ಬೌಂಡರಿ ಹಾಗೂ 7 ಸಿಕ್ಸರ್ ಗಳ ನೆರವಿನಿಂದ ಶತಕ ದಾಖಲಿಸಿದರು. ಭೋಜನ ವಿರಾಮದ ವೇಳೆಗೆ ಟೀಂ ಇಂಡಿಯಾ 122 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 487 ರನ್ ಗಳಿಸಿದೆ.

    329 ರನ್ ಗಳಿಗೆ 2ನೇ ದಿನದಾಟ ಆರಂಭಿಸಿದ ಟೀಂ ಇಂಡಿಯಾ ಆರಂಭದಲ್ಲೇ  ವೃದ್ದಿಮಾನ್ ಸಾಹ ವಿಕೆಟ್ ಕಳೆದುಕೊಂಡಿತು. ನಂತರ ಬ್ಯಾಟಿಂಗ್ ಮಾಡಲು ಆಗಮಿಸಿದ ಕುಲದೀಪ್ ಯಾದವ್, ಮೊಹಮ್ಮದ್ ಶಮಿ ಹಾಗೂ ಉಮೇಶ್ ಯಾದವ್ ಹಾರ್ದಿಕ್ ಪಾಂಡ್ಯಗೆ ಉತ್ತಮ ಸಾಥ್ ನೀಡಿದರು. ಶ್ರೀಲಂಕಾ ಪರವಾಗಿ ಸಂದಕನ್ 4, ಪುಷ್ಪಕುಮಾರ 3 ಹಾಗೂ ಫೆರ್ನಾಂಡೋ 2 ವಿಕೆಟ್ ಗಳಿಸಿದರು.

     

    https://twitter.com/BCCI/status/896632583684997120

     

  • ಎರಡನೇ ಟೆಸ್ಟ್ ಜಯದ ಹೀರೋ ಜಡೇಜಾ ಮೂರನೇ ಪಂದ್ಯದಿಂದ ಅಮಾನತು

    ಎರಡನೇ ಟೆಸ್ಟ್ ಜಯದ ಹೀರೋ ಜಡೇಜಾ ಮೂರನೇ ಪಂದ್ಯದಿಂದ ಅಮಾನತು

    ಕೊಲಂಬೋ: ಎರಡನೇ ಟೆಸ್ಟ್ ಪಂದ್ಯವನ್ನು ಗೆಲ್ಲಿಸಿಕೊಟ್ಟು ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದ ಸ್ಪಿನ್ನರ್ ರವೀಂದ್ರ ಜಡೇಜಾ ಐಸಿಸಿ ನೀತಿ ಸಂಹಿತೆ ಉಲ್ಲಂಘಿಸಿದ್ದಕ್ಕೆ ಒಂದು ಟೆಸ್ಟ್ ಪಂದ್ಯದಿಂದ ಅಮಾನತುಗೊಂಡಿದ್ದಾರೆ.

    ನಿಷೇಧ ಹೇರಿದ್ದರಿಂದ ಆಗಸ್ಟ್ 12ರಿಂದ ಪಳ್ಳೆಕೆಲೆಯಲ್ಲಿ ಆರಂಭವಾಗಲಿರುವ ಮೂರನೇ ಟೆಸ್ಟ್ ಪಂದ್ಯದಲ್ಲಿ ರವೀಂದ್ರ ಜಡೇಜಾ ಅವರ ಜಾಗದಲ್ಲಿ ಕುಲ್‍ದೀಪ್ ಯಾದವ್ ಆಡುವ ಸಾಧ್ಯತೆಯಿದೆ.

    ನಿಷೇಧ ಹೇರಿದ್ದು ಯಾಕೆ? 2ನೇ ಟೆಸ್ಟ್ ಮೂರನೇ ದಿನವಾದ ಶನಿವಾರ 58ನೇ ಓವರ್ ಜಡೇಜಾ ಎಸೆಯುತ್ತಿದ್ದರು. ಈ ವೇಳೆ ಸ್ಟ್ರೈಕ್ ನಲ್ಲಿದ್ದ ದಿಮುತ್ ಕರುಣರತ್ನೆ ಬಾಲನ್ನು ಜಡೇಜಾ ಕೈ ಸೇರುವಂತೆ ಹೊಡೆದಿದ್ದರು. ಕೈ ಸೇರುತ್ತಿದ್ದಂತೆ ಬಾಲನ್ನು ನೇರವಾಗಿ ಬ್ಯಾಟ್ಸ್ ಮನ್ ನತ್ತ ಜಡೇಜಾಥ್ರೋ ಮಾಡಿದ್ದರು. ಈ ಬಾಲು ಕರುಣರತ್ನೆಗೆ ತಾಗದೇ ಇದ್ದರೂ ಇದೊಂದು ಅಪಾಯಕಾರಿ ಥ್ರೋ ಎಸೆದ ಕಾರಣ ಐಸಿಸಿ ಜಡೇಜಾ ಅವರನ್ನು ಒಂದು ಪಂದ್ಯದಿಂದ ಅಮಾನತುಗೊಳಿಸಿದೆ. ಅಷ್ಟೇ ಪಂದ್ಯದ ಶೇ.50 ಸಂಭಾವನೆಯನ್ನು ದಂಡವಾಗಿ ವಿಧಿಸಲಾಗಿದೆ.

    ಆನ್ ಫೀಲ್ಡ್ ಅಂಪೈರ್ ಎಚ್ಚರಿಕೆ ನೀಡಿದ ಬಳಿಕ ಜಡೇಜಾ ಕ್ಷಮೆ ಕೇಳಿದ್ದರು. ಈ ಘಟನೆಯನ್ನು ಮ್ಯಾಚ್ ರೆಫರಿ ಐಸಿಸಿಗೆ ಮಾಹಿತಿ ನೀಡಿದ್ದರು. ಈ ಪ್ರಕರಣವನ್ನು ಗಂಭೀರವಾಗಿ ಸ್ವೀಕರಿಸಿದ ಐಸಿಸಿ ತನ್ನ 2.2.8 ನೀತಿ ಸಂಹಿತೆ ಅಡಿಯಲ್ಲಿ ಕಠಿಣ ಕ್ರಮವನ್ನು ಕೈಗೊಂಡಿದೆ.

    ನೀತಿ ಸಂಹಿತೆ ಏನು ಹೇಳುತ್ತೆ? ಅಂತಾರಾಷ್ಟ್ರೀಯ ಪಂದ್ಯದಲ್ಲಿ ಆಟಗಾರನೊಬ್ಬ ಚೆಂಡನ್ನು (ಅಥವಾ ಕ್ರಿಕೆಟ್ ಆಟಕ್ಕೆ ಬಳಸುವ ಯಾವುದೇ ವಸ್ತು ಉದಾ: ನೀರಿನ ಬಾಟಲ್) ಸಮೀಪದ ಆಟಗಾರ, ಆಟಗಾರರನ ಸಹಾಯಕ್ಕೆ ಧಾವಿಸುವ ಸಿಬ್ಬಂದಿ, ಅಂಪೈರ್, ಪಂದ್ಯದ ರೆಫ್ರೀ ಅಥವಾ ಮೂರನೇ ವ್ಯಕ್ತಿಗೆ ಅಪಾಯಕಾರಿಯಾಗಿ ಎಸೆಯುವಂತಿಲ್ಲ.

    ಇದೇ ಮೊದಲಲ್ಲ: ಐಸಿಸಿ ನಿಯಮವನ್ನು ರವೀಂದ್ರ ಜಡೇಜಾ ಉಲ್ಲಂಘನೆ ಮಾಡಿರುವುದು ಇದೇ ಮೊದಲೇನಲ್ಲ. ಈ ಹಿಂದೆ 2016ರ ಆಕ್ಟೋಬರ್ ನಲ್ಲಿ ನ್ಯೂಜಿಲೆಂಡ್ ವಿರುದ್ಧದ ಇಂದೋರ್ ಟೆಸ್ಟ್ ಪಂದ್ಯದ ವೇಳೆಯಲ್ಲೂ ಜಡೇಜಾ ನಿಯಮ ಉಲ್ಲಂಘಿಸಿದ್ದರು. ಈ ಅಪರಾಧಕ್ಕಾಗಿ ಅವರಿಗೆ ಪಂದ್ಯದ ಶೇ.50 ಸಂಭಾವನೆಯನ್ನು ದಂಡವಾಗಿ ವಿಧಿಸಲಾಗಿತ್ತು.

    ಭಾರತಕ್ಕೆ ಗೆಲುವು: ಶ್ರೀಲಂಕಾ ವಿರುದ್ಧ ನಡೆಯುತ್ತಿರುವ ಎರಡನೇ ಟೆಸ್ಟ್ ಕ್ರಿಕೆಟ್ ಪಂದ್ಯವನ್ನು ಭಾರತ ಒಂದು ಇನ್ನಿಂಗ್ಸ್ ಮತ್ತು 53 ರನ್ ಗಳಿಂದ ಗೆದ್ದುಕೊಂಡಿದೆ. ಫಾಲೋವನ್ ಹೇರಿದ ಬಳಿಕ ಎರಡನೇ ಇನ್ನಿಂಗ್ಸ್ ನಲ್ಲಿ ಶ್ರೀಲಂಕಾ 116.5 ಓವರ್ ಗಳಲ್ಲಿ 386 ರನ್ ಗಳಿಗೆ ಆಲೌಟ್ ಆಯ್ತು. ಈ ಪಂದ್ಯವನ್ನು ಗೆದ್ದುಕೊಳ್ಳುವ ಮೂಲಕ ಮೂರು ಪಂದ್ಯಗಳ ಸರಣಿಯಲ್ಲಿ ಭಾರತ 2-0 ಅಂತರದಿಂದ ಮುನ್ನಡೆ ಸಾಧಿಸಿದೆ.

    ಮೊದಲ ಇನ್ನಿಂಗ್ಸ್ ನಲ್ಲಿ 70 ರನ್ ಹೊಡೆದಿದ್ದ ಜಡೇಜಾ 2 ವಿಕೆಟ್ ಕಬಳಿಸಿದ್ದರು. ಎರಡನೇ ಇನ್ನಿಂಗ್ಸ್ ನಲ್ಲಿ 152 ರನ್ ನೀಡಿ 5 ವಿಕೆಟ್ ಪಡೆಯುವ ಮೂಲಕ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾಗಿದ್ದರು.

  • ಬೆಂಗ್ಳೂರಲ್ಲಿ ಪ್ಲಾಸ್ಟಿಕ್ ಅಕ್ಕಿ ಹಾವಳಿ- ಹೊಟ್ಟೆನೋವಿನಿಂದ ನರಳಿ ಧರಣಿ ಕುಳಿತ ವ್ಯಕ್ತಿ

    ಬೆಂಗ್ಳೂರಲ್ಲಿ ಪ್ಲಾಸ್ಟಿಕ್ ಅಕ್ಕಿ ಹಾವಳಿ- ಹೊಟ್ಟೆನೋವಿನಿಂದ ನರಳಿ ಧರಣಿ ಕುಳಿತ ವ್ಯಕ್ತಿ

    ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಪ್ಲಾಸ್ಟಿಕ್ ಮೊಟ್ಟೆ, ಪ್ಲಾಸ್ಟಿಕ್ ಸಕ್ಕರೆ ಮಾರಾಟ ಆಗ್ತಾ ಇರೋ ಸುದ್ದಿ ಕೇಳಿದ್ವಿ. ಆದ್ರೆ ಈಗ ಬೆಂಗಳೂರಿನಲ್ಲಿ ಪ್ಲಾಸ್ಟಿಕ್ ಅಕ್ಕಿಯದ್ದೆ ಸುದ್ದಿ. ಇಲ್ಲೊಬ್ರು ಮಾಮೂಲಿ ಅಕ್ಕಿ ಅಂತ ಪ್ಲಾಸ್ಟಿಕ್ ಅಕ್ಕಿ ತಿಂದು ಕುಟುಂಬವೆಲ್ಲಾ ಅನಾರೋಗ್ಯದಿಂದ ಬಳಲುತ್ತಿರುವ ವಿಚಾರ ಬೆಳಕಿಗೆ ಬಂದಿದೆ.

    ಬೆಂಗಳೂರಿನ ಉಳ್ಳಾಲದಲ್ಲಿರುವ ರಿಲಿಯನ್ಸ್ ಮಾರ್ಟ್ ನಲ್ಲಿ ಪ್ರವೀಣ್ ಎಂಬವರು 6 ಕೆ.ಜಿ ಅಕ್ಕಿ ಕೊಂಡುಕೊಂಡು ಅನ್ನಮಾಡಿ ತಿಂದಿದ್ದಾರೆ. ತಕ್ಷಣ ಹೊಟ್ಟೆ ನೋವು, ಅನಾರೋಗ್ಯ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅಕ್ಕಿ ಪರೀಕ್ಷೆ ಮಾಡಿದ್ದಾರೆ. ನಂತರ ಇದು ಪ್ಲಾಸ್ಟಿಕ್ ಅಕ್ಕಿ ಅಂತ ಆರೋಪ ಮಾಡಿ ನ್ಯಾಯಕ್ಕಾಗಿ ಮಧ್ಯರಾತ್ರಿ ರಿಲಿಯನ್ಸ್ ಮಾರ್ಟ್ ಮುಂದೆ ಧರಣಿ ಕುಳಿತಿದ್ದರು.

    ಬೆಂಗಳೂರಿನ ಕೋಡಿಗೆಹಳ್ಳಿ ಗೇಟ್ ನಲ್ಲಿರುವ ಮೇಗಾ ಮೋರ್ ಸ್ಟೋರ್ ನಲ್ಲಿಯೂ ಪ್ಲಾಸ್ಟಿಕ್ ಅಕ್ಕಿ ಪತ್ತೆಯಾಗಿರೋ ಬಗ್ಗೆ ವರದಿಯಾಗಿತ್ತು. ಅಲ್ಲಿ ನಾಗೇಶ್ ಎಂಬವರು ಭಾನುವಾರದಂದು 25 ಕೆಜಿ ಬ್ಯಾಂಗ್ ಅಕ್ಕಿಯನ್ನು ಖರೀದಿ ಮಾಡಿದ್ರು. ಅದನ್ನ ಬೇಯಿಸಿದ್ರೆ ಅಕ್ಕಿ ತೇಲುತ್ತಿತ್ತು.

    ರಾತ್ರಿ ಪ್ಲಾಸ್ಟಿಕ್ ಅಕ್ಕಿ ಪತ್ತೆಯಾಗಿದ್ದು, ಆ ಅಕ್ಕಿಯಿಂದ ಮಾಡಿಕೊಂಡು ಬಂದಿದ್ದ ಅನ್ನವನ್ನು ಮುದ್ದೆ ಮಾಡಿ ಗೋಡೆಗೆ ಹೊಡೆದ್ರೆ ಚೂರಾಗಲಿಲ್ಲ. ಗಟ್ಟಿಯಾಗಿ ಕೂಡಿಕೊಂಡು ಹೊಡೆದಾಗಲೆಲ್ಲಾ ಪಿಚ್ ಬೀಳುವ ರೀತಿ ಇತ್ತು. ಇದರಿಂದ ಇದು ಪ್ಲಾಸ್ಟಿಕ್ ಅಕ್ಕಿಯೆಂದು ಆರೋಪಿಸಿದ್ದಾರೆ.

  • ಟೆಸ್ಟ್ ಕ್ರಿಕೆಟ್‍ನಲ್ಲಿ ಭಾರತ ನಂಬರ್ ಒನ್ ಪಟ್ಟಕ್ಕೆ ಏರಿದ ಕಥೆ ಓದಿ

    ಟೆಸ್ಟ್ ಕ್ರಿಕೆಟ್‍ನಲ್ಲಿ ಭಾರತ ನಂಬರ್ ಒನ್ ಪಟ್ಟಕ್ಕೆ ಏರಿದ ಕಥೆ ಓದಿ

    ಧರ್ಮಶಾಲಾ: ಆಸ್ಟ್ರೇಲಿಯಾ ವಿರುದ್ಧದ ನಾಲ್ಕನೇಯ ಟೆಸ್ಟ್ ಪಂದ್ಯವನ್ನು 8 ವಿಕೆಟ್‍ಗಳಿಂದ ಜಯಗಳಿಸುವ ಮೂಲಕ ಭಾರತ ನಂಬರ್ ಒನ್ ಸ್ಥಾನದಲ್ಲಿ ಮುಂದುವರಿದಿದ್ದು, ಟೆಸ್ಟ್ ಗದೆಯನ್ನು ಸ್ವೀಕರಿಸಿದೆ. ಇದರ ಜೊತೆಗೆ ಐಸಿಸಿಯ 10 ಲಕ್ಷ ಡಾಲರ್(ಅಂದಾಜು 6.51 ಕೋಟಿ ರೂ) ಬಹುಮಾನವನ್ನು ಗೆದ್ದುಕೊಂಡಿದೆ.

    ಪ್ರತಿ ವರ್ಷ ಏಪ್ರಿಲ್ 1ರ ಒಳಗಡೆ ಟಾಪ್ ಸ್ಥಾನಗಳಲ್ಲಿರುವ ತಂಡಗಳಿಗೆ ಐಸಿಸಿ ನಗದು ಬಹುಮಾನ ನೀಡುತ್ತಾ ಬಂದಿದೆ. ಟೀಂ ಇಂಡಿಯಾ 122 ರೇಟಿಂಗ್  ಪಡೆಯುವ ಮೂಲಕ ನಂಬರ್ ಒನ್ ಸ್ಥಾನದಲ್ಲಿದ್ದರೆ, 108 ರೇಟಿಂಗ್ ನೊಂದಿಗೆ ಆಸ್ಟ್ರೇಲಿಯಾ ನಂಬರ್ 2 ಸ್ಥಾನದಲ್ಲಿದೆ. ಮೂರನೇ ಸ್ಥಾನದಲ್ಲಿ 107 ರೇಟಿಂಗ್ ಗಳಿಸಿರುವ ದಕ್ಷಿಣ ಆಫ್ರಿಕಾ ಇದ್ದರೆ, 101 ರೇಟಿಂಗ್ ನೊಂದಿಗೆ ಇಂಗ್ಲೆಂಡ್ 4ನೇ ಸ್ಥಾನದಲ್ಲಿದೆ.

    ದ್ವಿತೀಯ ಸ್ಥಾನ ಪಡೆದಿರುವ ಆಸ್ಟ್ರೇಲಿಯಾಗೆ 5ಲಕ್ಷ ಡಾಲರ್(ಅಂದಾಜು 3.25 ಕೋಟಿ ರೂ.), ಮೂರನೇ ಸ್ಥಾನದಲ್ಲಿರುವ ದಕ್ಷಿಣ ಆಫ್ರಿಕಾಗೆ 2 ಲಕ್ಷ ಡಾಲರ್(ಅಂದಾಜು 1.3 ಕೋಟಿ ರೂ.) ಬಹುಮಾನ ಸಿಕ್ಕಿದೆ. 4ನೇ ಸ್ಥಾನದಲ್ಲಿರುವ ಇಂಗ್ಲೆಂಡ್‍ಗೆ 1 ಲಕ್ಷ ಡಾಲರ್(65 ಲಕ್ಷ ರೂ.) ಬಹುಮಾನ ಸಿಕ್ಕಿದೆ.

    ಟೀಂ ಇಂಡಿಯಾಗೆ ಬಹುಮಾನ ಸಿಕ್ಕಿದ ಹಿನ್ನೆಲೆಯಲ್ಲಿ ಭಾರತ 2016-17ರ ಅವಧಿಯಲ್ಲಿ ಗೆದ್ದಿರುವ ಟೆಸ್ಟ್ ಸರಣಿಯ ವಿವರವನ್ನು ಇಲ್ಲಿ ನೀಡಲಾಗಿದೆ

    ನ್ಯೂಜಿಲೆಂಡ್ ವಿರುದ್ಧ 3-0 ಗೆಲುವು
    ಕಾನ್ಪುರದಲ್ಲಿ ನಡೆದ ಮೊದಲ ಟೆಸ್ಟ್ 197 ರನ್‍ಗಳಿಂದ ಗೆದ್ದುಕೊಂಡಿದ್ದರೆ, ಕೋಲ್ಕತ್ತಾದಲ್ಲಿ ನಡೆದ ಎರಡನೇ ಪಂದ್ಯವನ್ನು 178 ರನ್‍ಗಳಿಂದ ಗೆದ್ದುಕೊಂಡಿತ್ತು. ಇಂದೋರ್‍ನಲ್ಲಿ ನಡೆದ ಮೂರನೇ ಪಂದ್ಯವನ್ನು 321 ರನ್‍ಗಳಿಂದ ಗೆಲ್ಲುವ ಮೂಲಕ ಭಾರತ ಕ್ಲೀನ್‍ಸ್ವೀಪ್ ಮಾಡಿಕೊಂಡಿತ್ತು. ಈ ಸರಣಿಯಲ್ಲಿ ಅಶ್ವಿನ್‍ಗೆ ಸರಣಿ ಶ್ರೇಷ್ಠ ಪ್ರಶಸ್ತಿ ಒಲಿದಿತ್ತು.

    ಇಂಗ್ಲೆಂಡ್ ವಿರುದ್ಧ 4-0 ಗೆಲುವು
    ರಾಜ್‍ಕೋಟ್‍ನಲ್ಲಿ ನಡೆದ ಮೊದಲ ಪಂದ್ಯ ಡ್ರಾ ಆಗಿದ್ದರೆ, ವಿಶಾಖಪಟ್ಟಣದಲ್ಲಿ ನಡೆದ ಎರಡನೇ ಪಂದ್ಯವನ್ನು ಭಾರತ 246 ರನ್‍ಗಳಿಂದ ಗೆದ್ದುಕೊಂಡಿತ್ತು. ಮೊಹಾಲಿಯಲ್ಲಿ ನಡೆದ ಮೂರನೇ ಪಂದ್ಯವನ್ನು 8ವಿಕೆಟ್‍ಗಳಿಂದ ಗೆದ್ದುಕೊಂಡಿದ್ದರೆ, ಮುಂಬೈ ನಲ್ಲಿ ನಡೆದ ನಾಲ್ಕನೇಯ ಪಂದ್ಯವನ್ನು ಇನ್ನಿಂಗ್ಸ್ ಮತ್ತು 36 ರನ್‍ಗಳಿಂದ ಗೆದ್ದುಕೊಂಡಿತ್ತು. ಚೆನ್ನೈನಲ್ಲಿ ನಡೆದ 5 ಪಂದ್ಯವನ್ನು ಭಾರತ 1 ಇನ್ನಿಂಗ್ಸ್ ಮತ್ತು 75 ರನ್‍ಗಳಿಂದ ಗೆದ್ದುಕೊಂಡಿತ್ತು. ಸರಣಿಯಲ್ಲಿನ ಅತ್ಯುತ್ತಮ ಆಟಕ್ಕಾಗಿ ವಿರಾಟ್ ಕೊಹ್ಲಿಗೆ ಸರಣಿ ಶ್ರೇಷ್ಠ ಪ್ರಶಸ್ತಿ ಲಭಿಸಿತ್ತು.

    ಬಾಂಗ್ಲಾ ವಿರುದ್ಧ ಏಕೈಕ ಸರಣಿ ಜಯ
    ಹೈದರಾಬಾದ್‍ನಲ್ಲಿ ಬಾಂಗ್ಲಾದೇಶದ ವಿರುದ್ಧ ನಡೆದ ಏಕೈಕ ಟೆಸ್ಟ್ ಪಂದ್ಯವನ್ನು ಭಾರತ 208 ರನ್‍ಗಳಿಂದ ಗೆದ್ದುಕೊಂಡಿತ್ತು. ಮೊದಲ ಇನ್ನಿಂಗ್ಸ್ ನಲ್ಲಿ 204 ರನ್, ಎರಡನೇ ಇನ್ನಿಂಗ್ಸ್ ನಲ್ಲಿ 38 ರನ್ ಹೊಡೆದ ವಿರಾಟ್ ಕೊಹ್ಲಿಗೆ ಪಂದ್ಯಶ್ರೇಷ್ಠ ಪ್ರಶಸ್ತಿ ಲಭಿಸಿತ್ತು.

    ಆಸ್ಟ್ರೇಲಿಯಾ ವಿರುದ್ಧ 2-1 ಸರಣಿ ಜಯ
    ಪುಣೆಯಲ್ಲಿ ನಡೆದಿದ್ದ ಮೊದಲ ಟೆಸ್ಟ್ ಪಂದ್ಯವನ್ನು ಆಸ್ಟ್ರೇಲಿಯಾ 333 ರನ್‍ಗಳಿದ್ದ ಗೆದ್ದುಕೊಂಡಿದ್ದರೆ, ಬೆಂಗಳೂರಿನಲ್ಲಿ ನಡೆದ ಎರಡನೇ ಪಂದ್ಯವನ್ನು ಭಾರತ 75 ರನ್‍ಗಳಿಂದ ಗೆದ್ದುಕೊಂಡಿತು. ರಾಂಚಿಯಲ್ಲಿ ನಡೆದ ಮೂರನೇ ಪಂದ್ಯ ಡ್ರಾ ಕಂಡಿತ್ತು. ಹಿಮಾಚಲ ಪ್ರದೇಶ ಧರ್ಮಶಾಲಾದಲ್ಲಿ ನಡೆದ ಕೊನೆಯ ಪಂದ್ಯವನ್ನು ಭಾರತ 8 ವಿಕೆಟ್‍ಗಳಿಂದ ಗೆದ್ದುಕೊಳ್ಳುವ ಮೂಲಕ ಬಾರ್ಡರ್ ಗಾವಸ್ಕರ್ ಸರಣಿಯನ್ನು ಕೈವಶ ಮಾಡಿಕೊಂಡಿದೆ. ಅತ್ಯುತ್ತಮ ಪ್ರದರ್ಶನ ನೀಡಿದ್ದಕ್ಕೆ ರವೀಂದ್ರ ಜಡೇಜಾ ಸರಣಿ ಶ್ರೇಷ್ಠ ಪ್ರಶಸ್ತಿ ಒಲಿದಿದೆ.

    ಟೆಸ್ಟ್ ನಲ್ಲಿ ನಮ್ಮವರೇ ಮಿಂಚಿಂಗ್:
    ಬ್ಯಾಟ್ಸ್ ಮನ್‍ಗಳ ಪೈಕಿ ಆಸ್ಟ್ರೇಲಿಯಾ ನಾಯಕ ಸ್ಟೀವ್ ಸ್ಮಿತ್ 941 ರೇಟಿಂಗ್ ಪಡೆಯುವ ಮೂಲಕ ಮೊದಲನೇಯ ಸ್ಥಾನದಲ್ಲಿದ್ದರೆ, ಚೇತೇಶ್ವರ ಪೂಜಾರ 861  ರೇಟಿಂಗ್  ನೊಂದಿಗೆ  ದ್ವಿತೀಯ ಶ್ರೇಯಾಂಕ ಪಡೆದಿದ್ದಾರೆ. ಬೌಲಿಂಗ್‍ನಲ್ಲಿ ರವೀಂದ್ರ ಜಡೇಜಾ 899 ರೇಟಿಂಗ್ ಪಡೆಯುವ  ಮೂಲಕ ಮೊದಲ ಸ್ಥಾನದಲ್ಲಿದ್ದರೆ, ಆರ್ ಅಶ್ವಿನ್ 862 ರೇಟಿಂಗ್ ಪಡೆಯುವ ಮೂಲಕ ಎರಡನೇ ಸ್ಥಾನದಲ್ಲಿದ್ದಾರೆ.

    ಇನ್ನು ಅಲ್‍ರೌಂಡರ್ ಪಟ್ಟಿಯಲ್ಲಿ ಬಾಂಗ್ಲಾದೇಶದ ಶಕೀಬ್ ಅಲ್ ಹಸನ್ 431 ರೇಟಿಂಗ್ ಗಳಿಸಿ ಮೊದಲ ಸ್ಥಾನಗಳಿಸಿದ್ದರೆ, ಆರ್ ಅಶ್ವಿನ್ 407 ರೇಟಿಂಗ್ ಗಳಿಸಿ  ಎರಡನೇ ಶ್ರೇಯಾಂಕ, ಜಡೇಜಾ 387 ರೇಟಿಂಗ್ ಗಳಿಸಿ ಮೂರನೇ ಶ್ರೇಯಾಂಕ ಪಡೆದಿದ್ದಾರೆ.

     

  • ಯುಗಾದಿ ಗಿಫ್ಟ್: 2-1 ಅಂತರದಿಂದ ಟೆಸ್ಟ್ ಸರಣಿ ಗೆದ್ದ ಭಾರತ

    ಯುಗಾದಿ ಗಿಫ್ಟ್: 2-1 ಅಂತರದಿಂದ ಟೆಸ್ಟ್ ಸರಣಿ ಗೆದ್ದ ಭಾರತ

    ಧರ್ಮಶಾಲಾ: 4ನೇ ಟೆಸ್ಟ್ ಪಂದ್ಯವನ್ನು ಭಾರತ 8 ವಿಕೆಟ್‍ಗಳಿಂದ ಗೆಲ್ಲುವ ಮೂಲಕ ಬಾರ್ಡರ್- ಗವಾಸ್ಕರ್ ಟೆಸ್ಟ್ ಸರಣಿಯನ್ನು 2-1 ಅಂತರದಿಂದ ಗೆದ್ದುಕೊಂಡಿದೆ.

    ಮೂರನೇ ದಿನದಾಟದ ಅಂತ್ಯಕ್ಕೆ ವಿಕೆಟ್ ನಷ್ಟವಿಲ್ಲದೇ 19 ರನ್‍ಗಳಿಸಿದ್ದ ಭಾರತ ಇಂದು 23.5 ಓವರ್‍ಗಳಲ್ಲಿ 106 ಗಳಿಸುವ ಮೂಲಕ ಸರಣಿಯನ್ನು ಗೆದ್ದುಕೊಂಡಿತು.

    ಕೆಎಲ್ ರಾಹುಲ್ ಔಟಾಗದೇ 51 ರನ್(76 ಎಸೆತ, 4 ಬೌಂಡರಿ) ಹಂಗಾಮಿ ನಾಯಕ ಅಜಿಂಕ್ಯಾ ರೆಹಾನೆ ಔಟಾಗದೇ 38 ರನ್(27 ಎಸೆತ,4 ಬೌಂಡರಿ, 2 ಸಿಕ್ಸರ್) ಹೊಡೆಯುವ ಮೂಲಕ ಭಾರತ ಗೆಲುವಿಗೆ ಕಾರಣರಾದರು.

    ಮೊದಲ ಇನ್ನಿಂಗ್ಸ್ ನಲ್ಲಿ 63 ರನ್(95 ಎಸೆತ, 4 ಬೌಂಡರಿ, 4 ಸಿಕ್ಸರ್) ಸಿಡಿಸಿ ಎರಡೂ ಇನ್ನಿಂಗ್ಸ್ ನಲ್ಲಿ ಒಟ್ಟು 4 ವಿಕೆಟ್ ಪಡೆದ ರವೀಂದ್ರ ಜಡೇಜಾ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು. ಅಷ್ಟೇ ಅಲ್ಲದೇ ಸರಣಿಯಲ್ಲಿ ಅತ್ಯುತ್ತಮ ಪ್ರದರ್ಶನಕ್ಕೆ ಜಡೇಜಾಗೆ ಸರಣಿಶ್ರೇಷ್ಠ ಪ್ರಶಸ್ತಿ ಸಿಕ್ಕಿತು.

    ಪುಣೆಯಲ್ಲಿ ನಡೆದಿದ್ದ ಮೊದಲ ಟೆಸ್ಟ್ ಪಂದ್ಯವನ್ನು ಆಸ್ಟ್ರೇಲಿಯಾ 333 ರನ್‍ಗಳಿದ್ದ ಗೆದ್ದುಕೊಂಡಿದ್ದರೆ, ಬೆಂಗಳೂರಿನಲ್ಲಿ ನಡೆದ ಎರಡನೇ ಪಂದ್ಯವನ್ನು ಭಾರತ 75 ರನ್‍ಗಳಿಂದ ಗೆದ್ದುಕೊಂಡಿತು. ರಾಂಚಿಯಲ್ಲಿ ನಡೆದ ಮೂರನೇ ಪಂದ್ಯ ಡ್ರಾ ಕಂಡಿತ್ತು.

    4ನೇ ಟೆಸ್ಟ್ ಸಂಕ್ಷೀಪ್ತ ಸ್ಕೋರ್:
    ಆಸ್ಟ್ರೇಲಿಯಾ 300 ಮತ್ತು 137
    ಭಾರತ 332 ಮತ್ತು 106/2