Tag: test

  • ನೋಬಾಲ್ ಎಸೆದು ಕೆಂಗಣ್ಣಿಗೆ ಗುರಿಯಾದ ಟೀಂ ಇಂಡಿಯಾ, ಇಂಗ್ಲೆಂಡ್ ಬೌಲರ್​ಗಳು

    ನೋಬಾಲ್ ಎಸೆದು ಕೆಂಗಣ್ಣಿಗೆ ಗುರಿಯಾದ ಟೀಂ ಇಂಡಿಯಾ, ಇಂಗ್ಲೆಂಡ್ ಬೌಲರ್​ಗಳು

    ಲಂಡನ್: ಭಾರತ ಹಾಗೂ ಇಂಗ್ಲೆಂಡ್ ವಿರುದ್ಧ 5 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಈಗಾಗಲೇ 3 ಪಂದ್ಯಗಳು ಮುಗಿದಿದೆ. ಈ ಸರಣಿಯ ಮೂರು ಪಂದ್ಯಗಳಲ್ಲಿ ಎರಡು ತಂಡದ ಬೌಲರ್​ಗಳು ಬರೋಬ್ಬರಿ 58 ನೋ ಬಾಲ್ ಹಾಕಿದ್ದಾರೆ.

    ಕ್ರಿಕೆಟ್‍ನಲ್ಲಿ ಒಂದೇ ಒಂದು ನೋ ಬಾಲ್‍ನಿಂದ ಹಲವು ಪಂದ್ಯಗಳ ಚಿತ್ರಣವೇ ಬದಲಾಗಿರುವ ನಿದರ್ಶನಗಳಿವೆ. ಹಾಗಾಗಿ ಬೌಲರ್​ಗಳು ಗೆರೆ ದಾಟಿ ಬೌಲ್ ಮಾಡುವುದನ್ನು ಆದಷ್ಟು ನಿಯಂತ್ರಿಸುತ್ತಾರೆ. ಈ ನಡುವೆ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟೆಸ್ಟ್ ಸರಣಿಯಲ್ಲಿ ನೋ ಬಾಲ್‍ಗಳ ಸಂಖ್ಯೆ ಅರ್ಧಶತಕ ದಾಟಿದೆ.

    ಭಾರತ ಹಾಗೂ ಇಂಗ್ಲೆಂಡ್ ಸರಣಿಯಲ್ಲಿ  ಮೂರು ಪಂದ್ಯಗಳಿಂದ ಎರಡು ತಂಡದ ಬೌಲರ್​ಗಳು ಒಟ್ಟು 58 ನೋ ಬಾಲ್ ಮಾಡಿದ್ದು, ಅದರಲ್ಲಿ ಭಾರತೀಯ ಬೌಲರ್​ಗಳು 41 ನೋ ಬಾಲ್ ಮತ್ತು ಇಂಗ್ಲೆಂಡ್ ಬೌಲರ್​ಗಳು 17 ನೋ ಬಾಲ್ ಹಾಕಿದ್ದಾರೆ. ಇದನ್ನೂ ಓದಿ: 515 ಓವರ್ ಎಸೆದ ಬಳಿಕ ಸಣ್ಣ ತಪ್ಪು ಮಾಡಿದ ಭುವಿ

    ವೈಯಕ್ತಿಕವಾಗಿ ಭಾರತ ತಂಡದ ವೇಗಿ ಜಸ್ಪ್ರೀತ್ ಬುಮ್ರಾ ಬರೋಬ್ಬರಿ 25 ನೋ ಬಾಲ್  ಹಾಕಿದರೆ, ಇಂಗ್ಲೆಂಡ್ ತಂಡದ ಸ್ಪಿನ್ನರ್ ರಾಬಿನ್ಸನ್ 9 ನೋ ಬಾಲ್ ಮತ್ತು ರವೀಂದ್ರ ಜಡೇಜಾ 6 ನೋ ಬಾಲ್ ಹಾಕಿ ಮೊದಲ ಮೂರು ಸ್ಥಾನದಲ್ಲಿದ್ದಾರೆ. ಇದನ್ನೂ ಓದಿ: ಇಂಗ್ಲೆಂಡ್ ಟಾಪ್ ಬೌಲರ್ ಜೀವನಕ್ಕೆ ಮುಳುವಾಯ್ತು 9 ವರ್ಷ ಹಿಂದಿನ ಟ್ವೀಟ್‍

  • ಶತಕ ಸಿಡಿಸದೇ 50 ಇನ್ನಿಂಗ್ಸ್ ಕಳೆದ ವಿರಾಟ್ ಬ್ಯಾಟ್

    ಶತಕ ಸಿಡಿಸದೇ 50 ಇನ್ನಿಂಗ್ಸ್ ಕಳೆದ ವಿರಾಟ್ ಬ್ಯಾಟ್

    ಲಂಡನ್: ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಬ್ಯಾಟ್ ಶತಕ ಕಾಣದೇ ಇದೀಗ 50ನೇ ಇನ್ನಿಂಗ್ಸ್ ಕಳೆದು ಹೋಗಿದೆ.

    ಭಾರತ ತಂಡದ ಪರ ಯಾವತ್ತು ಅಬ್ಬರಿಸುವ ವಿರಾಟ್ ಬ್ಯಾಟ್ ಕೆಲಪಂದ್ಯಗಳಿಂದ ಸೈಲೆಂಟ್ ಅಗಿದೆ. ಭಾರತದ ರನ್ ಮಿಷಿನ್ ಎಂದೇ ಖ್ಯಾತರಾದ ವಿರಾಟ್ ಬ್ಯಾಟ್‍ನಿಂದ ಸೆಂಚುರಿ ಬರದೆ 50 ಇನ್ನಿಂಗ್ಸ್ ಕಳೆದುಹೋಗಿದೆ. ಕೊನೆಯದಾಗಿ 2019ರಲ್ಲಿ ಬಾಂಗ್ಲದೇಶದ ವಿರುದ್ಧ ಶತಕದ ಬಳಿಕ ಇಲ್ಲಿಯವರೆಗೆ ವಿರಾಟ್ ಕೊಹ್ಲಿ ಒಂದೇ ಒಂದು ಶತಕ ಸಿಡಿಸಿಲ್ಲ ಎಂಬುದು ಅಚ್ಚರಿಯಾದರು ಸತ್ಯ.  ಇದನ್ನೂ ಓದಿ: ಇತರೇ 16 ರನ್ – 78 ರನ್‍ಗಳಿಗೆ ಭಾರತ ಆಲೌಟ್

    ಅದಲ್ಲದೆ ಇದೀಗ ಸದ್ಯ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲೂ ಕೂಡ ವಿರಾಟ್ ಬ್ಯಾಟ್ ಸದ್ದು ಮಾಡುತ್ತಿಲ್ಲ. ಕಳೆದ ನಾಲ್ಕು ಇನ್ನಿಂಗ್ಸ್ ಗಳಿಂದ ವಿರಾಟ್ ಬ್ಯಾಟ್‍ನಿಂದ ಸಿಡಿದಿರುವುದು ಕೇವಲ 69ರನ್ ಮಾತ್ರ ಅದರಲ್ಲೂ ಲಾಡ್ರ್ಸ್ ಟೆಸ್ಟ್ ನಲ್ಲಿ ಸಿಡಿಸಿದ 42ರನ್ ಹೆಚ್ಚಿನ ಗಳಿಕೆಯಾಗಿದೆ. ಇದನ್ನೂ ಓದಿ: ಭಾರತ ತಂಡದ ಶಕ್ತಿಯಾಗಿ ಬೆಳೆದ ವೇಗಿಗಳು

    ವಿರಾಟ್ ಕೊಹ್ಲಿ ಬ್ಯಾಟ್‍ನಿಂದ ರನ್ ಹೊಳೆ ಹರಿದರೆ ಭಾರತಕ್ಕೆ ಯಾವುದೇ ಭಯವಿಲ್ಲ, ಆದರೆ ಇದೀಗ ಕೊಹ್ಲಿ ರನ್ ಗಳಿಸಲು ಪರದಾಡುವುದನ್ನು ಗಮನಿಸುತ್ತಿದ್ದಂತೆ ಭಾರತಕ್ಕೆ ಚಿಂತೆ ಕಾಡುತ್ತಿದೆ. ಕೊಹ್ಲಿ 95 ಟೆಸ್ಟ್ ಪಂದ್ಯಗಳಿಂದ 27 ಶತಕ ಸಹಿತ 7,616ರನ್ ಸಿಡಿಸಿದರೆ, 254 ಏಕದಿನ ಪಂದ್ಯಗಳಿಂದ 43 ಶತಕ ಸಹಿತ 12,169ರನ್ ಬಾರಿಸಿದ್ದಾರೆ. ಇದೀಗ ವಿರಾಟ್ ಅಭಿಮಾನಿಗಳು ಕೊಹ್ಲಿ ಬ್ಯಾಟ್‍ನಿಂದ ಶತಕದಾಟಕ್ಕಾಗಿ ಕಾಯುತ್ತಿದ್ದಾರೆ.

  • ಲಾರ್ಡ್ಸ್ ಟೆಸ್ಟ್​ನಲ್ಲಿ ಆಂಗ್ಲರ ವಿರುದ್ಧ ಚೆಂಡು ವಿರೂಪ ಆರೋಪ

    ಲಾರ್ಡ್ಸ್ ಟೆಸ್ಟ್​ನಲ್ಲಿ ಆಂಗ್ಲರ ವಿರುದ್ಧ ಚೆಂಡು ವಿರೂಪ ಆರೋಪ

    ಲಂಡನ್: ಭಾರತ ಹಾಗೂ ಇಂಗ್ಲೆಂಡ್ ನಡುವಿನ ಎರಡನೇ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ಆಟಗಾರರು ಶೂನಿಂದ ಚೆಂಡನ್ನು ತುಳಿದು ವಿರೂಪಗೊಳಿದ್ದಾರೆ ಎಂಬ ಕುರಿತು ಆರೋಪ ಕೇಳಿಬಂದಿದ್ದು, ಸಾಮಾಜಿಕ ಜಾಲತಾಣದಲ್ಲಿ ಫೋಟೋಗಳು ಹರಿದಾಡುತ್ತಿದೆ.

    ಇಂಗ್ಲೆಂಡ್‍ನ ಇಬ್ಬರು ಆಟಗಾರರು ಶೂನಲ್ಲಿ ಚೆಂಡನ್ನು ತುಳಿದಿರುವ ಫೋಟೋಗಳನ್ನು ಹಾಕಿ ಆಂಗ್ಲ ಆಟಗಾರರು ಕಳ್ಳಾಟದಲ್ಲಿ ತೊಡಗಿದ್ದಾರೆ ಎಂದು ಆರೋಪಿಸಿದ್ದಾರೆ. ಈ ಬಗ್ಗೆ ಮಾಜಿ ಆಟಗಾರರು ಕೂಡ ತಮ್ಮ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ. ಇದನ್ನೂ ಓದಿ: ಚೆಂಡು ವಿರೂಪಗೊಳಿಸಿ ಸಿಕ್ಕಿಬಿದ್ದ ಆಸೀಸ್ ಆಟಗಾರ – ಸ್ಮಿತ್ ನಾಯಕತ್ವ ತಲೆದಂಡ? 

    ವಿರೇಂದ್ರ ಸೆಹ್ವಾಗ್ ಇದು ಇಂಗ್ಲೆಂಡ್ ಆಟಗಾರರು ನಡೆಸುತ್ತಿರುವ ಚೆಂಡು ವಿರೂಪವೇ ಅಥವಾ ಕೊರೊನಾ ಮುನ್ನಚ್ಚೆರಿಕಾ ಕ್ರಮವೇ ಎಂದು ತಮಾಷೆಯಾಗಿ ಪ್ರಶ್ನೆ ಮಾಡಿದರೆ. ಸ್ಟುವರ್ಟ್ ಬ್ರಾಡ್, ಈ ಘಟನೆಯ ಪೂರ್ಣ ವೀಡಿಯೋ ನೋಡದೆ ವಿಶ್ಲೇಷಿಸುವುದು ಸರಿಯಲ್ಲ. ಇದು ಆಕಸ್ಮಿಕವಾಗಿರಬಹುದು ಎಂದಿದ್ದಾರೆ.

    ಈ ನಡುವೆ ಈ ದೃಶ್ಯಗಳ ಬಗ್ಗೆ ಸಾಕಷ್ಟು ಚರ್ಚೆಗಳು ನಡೆಯುತ್ತಿದೆ. ಹಾಗಾಗಿ ಈ ಕುರಿತು ಮ್ಯಾಚ್ ರೆಫ್ರಿ ಸೂಕ್ಷವಾಗಿ ತನಿಖೆ ನಡೆಸುವ ಸಾಧ್ಯತೆ ಇದೆ.

  • ಸಿರಾಜ್ ವಿಕೆಟ್ ಪಡೆದ ಬಳಿಕ ವಿಶೇಷ ಸಂಭ್ರಮಾಚರಣೆಯ ಕಹಾನಿ ರಿವೀಲ್

    ಸಿರಾಜ್ ವಿಕೆಟ್ ಪಡೆದ ಬಳಿಕ ವಿಶೇಷ ಸಂಭ್ರಮಾಚರಣೆಯ ಕಹಾನಿ ರಿವೀಲ್

    ಲಂಡನ್: ಭಾರತ ತಂಡದ ಯುವ ವೇಗಿ ಮೊಹಮ್ಮದ್ ಸಿರಾಜ್ ವಿಕೆಟ್ ಪಡೆದ ಬಳಿಕ ತುಟಿಯ ಮೇಲೆ ಬೆರಳಿಟ್ಟು ಸಂಭ್ರಮಾಚರಣೆ ಮಾಡುವುದನ್ನು ಎಲ್ಲರೂ ನೋಡಿದ್ದೇವೆ. ಈ ಸಂಭ್ರಮಾಚರಣೆಯ ಹಿಂದಿನ ಅಸಲಿ ಕಹಾನಿಯನ್ನು ಸ್ವತಃ ಅವರೇ ಇದೀಗ ರಿವೀಲ್ ಮಾಡಿದ್ದಾರೆ.

    ತಮ್ಮ ನಿಖರ ದಾಳಿಯ ಮೂಲಕ ಇಂಗ್ಲೆಂಡ್ ಬ್ಯಾಟ್ಸ್‌ಮ್ಯಾನ್ ಗಳನ್ನು ಕಾಡಿದ ಸಿರಾಜ್, ಲಾರ್ಡ್ಸ್ ಟೆಸ್ಟ್ ನಲ್ಲಿ 4 ವಿಕೆಟ್ ಕಿತ್ತು ಮಿಂಚಿದರು. ಈ ಮೂಲಕ ಲಾರ್ಡ್ಸ್ ಮೈದಾನದಲ್ಲಿ 4 ವಿಕೆಟ್ ಕಿತ್ತ ಮೊದಲ ಭಾರತೀಯ ಬೌಲರ್ ಎಂಬ ಹಿರಿಮೆಗೆ ಪಾತ್ರರಾದರು. ಪ್ರತಿ ವಿಕೆಟ್ ಪಡೆದಾಗಲೂ ಕೂಡ ಸಿರಾಜ್ ತುಟಿಯ ಮೇಲೆ ಬೆರಳಿಟ್ಟು ಸಂಭ್ರಮಾಚರಣೆ ಮಾಡಿದ್ದನ್ನು ಗಮನಿಸಿ ವರ್ಚುವಲ್ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಪ್ರಶ್ನೆ ಕೇಳಲಾಯಿತು.

    ಸಂಭ್ರಮಾಚರಣೆಯ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿರಾಜ್, ನನ್ನ ಈ ರೀತಿಯ ಸಂಭ್ರಮಾಚರಣೆ ನನ್ನನ್ನು ಟೀಕೆ ಮಾಡುವವರಿಗಾಗಿ. ಟೀಕಾಕಾರರು ನನ್ನ ಬಗ್ಗೆ ಬೇಕಾದಷ್ಟು ಹೇಳಿಕೆಗಳನ್ನು ನೀಡುತ್ತಾರೆ. ನಾನು ಅವರಿಗೆ ಮಾತಿನ ಉತ್ತರ ಕೊಡಲು ಇಷ್ಟಪಡುವುದಿಲ್ಲ. ಹಾಗಾಗಿ ನನ್ನ ಬೌಲಿಂಗ್ ಮೂಲಕ ಅವರ ಬಾಯಿ ಮುಚ್ಚಿಸಲು ಪ್ರಯತ್ನಿಸುತ್ತೇನೆ ಹಾಗಾಗಿ ಈ ರೀತಿ ಸಂಭ್ರಮಾಚರಣೆ ಮಾಡುತ್ತಿದ್ದೇನೆ ಎಂದರು. ಇದನ್ನೂ ಓದಿ: ಡಿಆರ್‌ಎಸ್‌ ಎಡವಟ್ಟು – ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾದ ಸಿರಾಜ್

    ಸಿರಾಜ್ ಟೆಸ್ಟ್ ಕ್ರಿಕೆಟ್‍ನಲ್ಲಿ ಭಾರತದ ಪರ ಉತ್ತಮ ಪ್ರದರ್ಶನ ತೋರುವ ಮೂಲಕ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದಾರೆ. ಈಗಾಗಲೇ ಸಿರಾಜ್ 7 ಟೆಸ್ಟ್ ಪಂದ್ಯಗಳಿಂದ 23 ವಿಕೆಟ್ ಪಡೆದಿದ್ದಾರೆ. ಇದಲ್ಲದೆ ಒಂದು ಬಾರಿ ಐದು ವಿಕೆಟ್‍ಗೊಂಚಲು ಪಡೆದು ತನ್ನ ವಿಕೆಟ್ ಬೇಟೆ ಮುಂದುವರಿಸುತ್ತಿದ್ದಾರೆ.

  • ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದಾರಾ ಬೆನ್ ಸ್ಟೋಕ್ಸ್?

    ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದಾರಾ ಬೆನ್ ಸ್ಟೋಕ್ಸ್?

    ಲಂಡನ್: ಇಂಗ್ಲೆಂಡ್ ಕ್ರಿಕೆಟ್ ತಂಡದ ನಂಬರ್ ಒನ್ ಆಲ್‍ರೌಂಡರ್ ಬೆನ್ ಸ್ಟೋಕ್ಸ್ ಭಾರತ ವಿರುದ್ಧದ 5 ಪಂದ್ಯಗಳ ಟೆಸ್ಟ್ ಸರಣಿಯಿಂದ ಹೊರ ನಡೆದಿದ್ದಾರೆ. ಮಾನಸಿಕ ಆರೋಗ್ಯದ ಸುಧಾರಣೆಗಾಗಿ ನಾನು ಸರಣಿಯಿಂದ ಹೊರನಡೆದಿರುವುದಾಗಿ ತಿಳಿಸಿದ್ದು ಈಗ ಚರ್ಚೆಗೆ ಕಾರಣವಾಗಿದೆ.

    ಭಾರತ ಹಾಗೂ ಇಂಗ್ಲೆಂಡ್ ನಡುವಿನ ಟೆಸ್ಟ್ ಸರಣಿ ಆರಂಭಕ್ಕೆ ಕೆಲದಿನಗಳಷ್ಟೆ ಬಾಕಿ ಉಳಿದುಕೊಂಡಿದೆ. ಈ ನಡುವೆ ಅಂತಿಮ ಕ್ಷಣದಲ್ಲಿ ಮಾನಸಿಕ ಆರೋಗ್ಯದ ಸುಧಾರಣೆಗಾಗಿ ಮತ್ತು ಬೆರಳಿನ ಗಾಯಕ್ಕೆ ಚಿಕಿತ್ಸೆ ಪಡೆಯಲು ನಾನು ಹೊರಗುಳಿಯುದಾಗಿ ಸ್ಟೋಕ್ಸ್ ಹೇಳಿದ್ದಾರೆ. ಇದನ್ನು ಗಮನಿಸುತ್ತಿದ್ದಂತೆ ಸ್ಟೋಕ್ಸ್ ಮಾನಸಿಕ ಖಿನ್ನತೆಗೆ ಒಳಗಾಗಿರುವುದು ಯಾಕೆ ಎಂಬ ಪ್ರಶ್ನೆ ಉದ್ಭವಿಸಿದೆ.

    ಸ್ಟೋಕ್ಸ್ ಅವರ ಈ ನಿರ್ಧಾರದಿಂದಾಗಿ ಇಂಗ್ಲೆಂಡ್ ಕ್ರಿಕೆಟ್ ಮಂಡಳಿ ಶಾಕ್ ಆಗಿದ್ದರು ಕೂಡ, ಅವರಿಗೆ ವಿಶ್ರಾಂತಿ ನೀಡಲು ಒಪ್ಪಿಕೊಂಡಿದೆ. ಈ ನಡುವೆ ತಂಡದ ಸಹ ಆಟಗಾರರು ಕೂಡ ಸ್ಟೋಕ್ಸ್ ಅವರ ನಡೆಗೆ ಬೆಂಬಲ ಸೂಚಿಸಿದ್ದಾರೆ.

    ಸ್ಟೋಕ್ಸ್ ಅವರು ಈ ವರ್ಷದ ಆರಂಭದಲ್ಲಿ ತಮ್ಮ ತಂದೆಯನ್ನು ಕಳೆದುಕೊಂಡಿದ್ದರು. ಬಳಿಕ ಐಪಿಎಲ್‍ಗಾಗಿ ಭಾರತಕ್ಕೆ ಆಗಮಿಸಿದ್ದರು. ರಾಜಸ್ಥಾನ್ ತಂಡದ ಪರ ಆಡುತ್ತಿದ್ದ ಸ್ಟೋಕ್ಸ್ ಬೆರಳಿನ ಗಾಯಕ್ಕೆ ತುತ್ತಾಗಿ 14ನೇ ಆವೃತ್ತಿಯ ಐಪಿಎಲ್‍ನಿಂದ ಹೊರಗುಳಿದಿದ್ದರು. ಇದೆಲ್ಲದರ ನಡುವೆ ಕೊರೊನಾದಿಂದಾಗಿ ತಂಡದಲ್ಲಿರುವ ಬಯೋ ಬಬಲ್‍ನಿಂದಾಗಿ ಸ್ಟೋಕ್ಸ್ ಅವರು ಮಾನಸಿಕವಾಗಿ ಖಿನ್ನತೆಗೆ ಒಳಗಾಗಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಇದನ್ನೂ ಓದಿ: ಹಾಕಿಯಲ್ಲಿ ಭಾರತದ ಸಾಧನೆ – 41 ವರ್ಷದ ಬಳಿಕ ಸೆಮಿ ಪ್ರವೇಶ

    ಕ್ರಿಕೆಟ್‍ನಲ್ಲಿ ಈ ಹಿಂದೆ ಆಸ್ಟ್ರೇಲಿಯಾದ ಆಟಗಾರ ಗ್ಲೇನ್ ಮ್ಯಾಕ್ಸ್​ವೆಲ್ ಮಾನಸಿಕ ಖಿನ್ನತೆಗೆ ಒಳಗಾಗಿ ಕ್ರಿಕೆಟ್‍ನಿಂದ ದೂರ ಉಳಿದಿದ್ದರು. ಬಳಿಕ ಇದೀಗ ಮತ್ತೆ ಕ್ರಿಕೆಟ್ ಆಡುತ್ತಿದ್ದಾರೆ. ಇದೀಗ ಸ್ಟೋಕ್ಸ್ ಮಾನಸಿಕ ಖಿನ್ನತೆ ಕುರಿತು ಹೇಳಿಕೊಂಡಿದ್ದು ಅದಷ್ಟು ಬೇಗ ಇದರಿಂದ ಹೊರಬರಲಿ ಎಂಬುದು ಕ್ರಿಕೆಟ್ ಅಭಿಮಾನಿಗಳ ಆಶಯವಾಗಿದೆ.

  • ಇಂಗ್ಲೆಂಡ್ ಟೆಸ್ಟ್ ಸರಣಿಗೆ ಪೃಥ್ವಿ ಶಾ, ಸೂರ್ಯಕುಮಾರ್ ಯಾದವ್?

    ಇಂಗ್ಲೆಂಡ್ ಟೆಸ್ಟ್ ಸರಣಿಗೆ ಪೃಥ್ವಿ ಶಾ, ಸೂರ್ಯಕುಮಾರ್ ಯಾದವ್?

    ಲಂಡನ್: ಭಾರತ ಹಾಗೂ ಇಂಗ್ಲೆಂಡ್ ನಡುವಿನ ಟೆಸ್ಟ್ ಸರಣಿ ಆರಂಭಕ್ಕೂ ಮುನ್ನ ಭಾರತ ತಂಡದಿಂದ ಮೂವರು ಆಟಗಾರರು ಗಾಯದಿಂದಾಗಿ ಹೊರಬಿದ್ದಿದ್ದಾರೆ. ಈ ನಡುವೆ ಈ ಮೂವರಿಗೆ ಬದಲಿ ಆಟಗಾರರಾಗಿ ಪೃಥ್ವಿ ಶಾ ಮತ್ತು ಸೂರ್ಯಕುಮಾರ್ ಯಾದವ್ ಇಂಗ್ಲೆಂಡ್‍ಗೆ ತೆರಳಲಿದ್ದಾರೆ ಎಂಬ ಕುರಿತು ವರದಿಯಾಗಿದೆ.

    ಭಾರತ ತಂಡದ ಆಟಗಾರರಾದ ಶುಭಮನ್ ಗಿಲ್, ವಾಷಿಂಗ್ಟನ್ ಸುಂದರ್ ಮತ್ತು ಅವೇಶ್ ಖಾನ್ ಗಾಯಕ್ಕೆ ತುತ್ತಾಗಿ ತವರಿಗೆ ಮರಳಿದ್ದಾರೆ. ಹಾಗಾಗಿ ಇವರ ಸ್ಥಾನಕ್ಕೆ ಬದಲಿಆಟಗಾರರಾಗಿ ಸೂರ್ಯಕುಮಾರ್ ಯಾದವ್ ಮತ್ತು ಪೃಥ್ವಿ ಶಾ ಅವರನ್ನು ಕಳುಹಿಸಲು ಬಿಸಿಸಿಐ ಪ್ಲಾನ್ ಮಾಡಿದೆ. ಹಾಗೆ ಜಯಂತ್ ಯಾದವ್ ಅವರನ್ನು ಕಳುಹಿಸಿಕೊಡುವ ಸಾಧ್ಯತೆ ಇದೆ ಎಂದು ಬಿಸಿಸಿಐನ ಹಿರಿಯ ಅಧಿಕಾರಿಯೋರ್ವರು ಸ್ಥಳೀಯ ಮಾಧ್ಯಮಕ್ಕೆ ತಿಳಿಸಿದ್ದಾರೆ ಎಂದು ವರದಿಯಾಗಿದೆ. ಇದನ್ನೂ ಓದಿ: ಇಂಗ್ಲೆಂಡ್ ಸರಣಿ ಆರಂಭಕ್ಕೂ ಮುನ್ನ ಟೀಂ ಇಂಡಿಯಾಗೆ ಗಾಯದ ಬರೆ

    ಸೂರ್ಯಕುಮಾರ್ ಯಾದವ್ ಮತ್ತು ಪೃಥ್ವಿ ಶಾ ಈಗಾಗಲೇ ಭಾರತ ಹಾಗೂ ಶ್ರೀಲಂಕಾ ಸರಣಿಗಾಗಿ ಲಂಕಾ ಪ್ರವಾಸ ಕೈಗೊಂಡಿದ್ದಾರೆ. ಈ ಸರಣಿಯ ಏಕದಿನ ಪಂದ್ಯದಲ್ಲಿ ಇಬ್ಬರು ಆಟಗಾರರು ಕೂಡ ಭರ್ಜರಿ ಪ್ರದರ್ಶನ ನೀಡಿದ್ದಾರೆ. ಹಾಗಾಗಿ ಬಿಸಿಸಿಐ ಈ ಇಬ್ಬರು ಆಟಗಾರರನ್ನು ಇಂಗ್ಲೆಂಡ್‍ಗೆ ಕಳುಹಿಸಿಕೊಡಲು ತೀರ್ಮಾನಿಸಿದೆ. ಇವರೊಂದಿಗೆ ಜಯಂತ್ ಯಾದವ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ವರದಿಯಾಗಿದ್ದು, ಇನ್ನೂ ಕೆಲ ದಿನಗಳಲ್ಲಿ ಈ ಕುರಿತು ಬಿಸಿಸಿಐ ಸ್ಪಷ್ಟ ನಿರ್ಧಾರ ಕೈಗೊಳ್ಳುವ ನಿರೀಕ್ಷೆ ಇದೆ.

  • ಇಂಗ್ಲೆಂಡ್ ಸರಣಿ ಆರಂಭಕ್ಕೂ ಮುನ್ನ ಟೀಂ ಇಂಡಿಯಾಗೆ ಗಾಯದ ಬರೆ

    ಇಂಗ್ಲೆಂಡ್ ಸರಣಿ ಆರಂಭಕ್ಕೂ ಮುನ್ನ ಟೀಂ ಇಂಡಿಯಾಗೆ ಗಾಯದ ಬರೆ

    – ಗಿಲ್ ಬಳಿಕ ಮತ್ತಿಬ್ಬರಿಗೆ ಗಾಯ

    ಲಂಡನ್: ಇಂಗ್ಲೆಂಡ್ ಸರಣಿ ಆರಂಭಕ್ಕೆ ಇನ್ನೇನೂ ಕೆಲವೇ ದಿನಗಳು ಬಾಕಿ ಉಳಿದುಕೊಂಡಿದೆ. ಈ ನಡುವೆ ಟೀಂ ಇಂಡಿಯಾಗೆ ಗಾಯದ ಸಮಸ್ಯೆ ಕಾಡುತ್ತಿದೆ. ಇದೀಗ ವಾಷಿಂಗ್ಟನ್ ಸುಂದರ್ ಮತ್ತು ಅವೇಶ್ ಖಾನ್ ಗಾಯದ ಸಮಸ್ಯೆಯಿಂದಾಗಿ ಸರಣಿಯಿಂದ ಹೊರಬಿದ್ದಿದ್ದಾರೆ.

    ಕೆಲ ದಿನಗಳ ಹಿಂದೆ ಯುವ ಆರಂಭಿಕ ಆಟಗಾರ ಶುಭಮನ್ ಗಿಲ್ ಗಾಯದಿಂದಾಗಿ ಟೆಸ್ಟ್ ಸರಣಿಯಿಂದ ಹೊರಬಿದ್ದಿದ್ದರು. ಇದೀಗ ಆಲ್‍ರೌಂಡರ್ ವಾಷಿಂಗ್ಟನ್ ಸುಂದರ್ ಮತ್ತು ವೇಗಿ ಅವೇಶ್ ಖಾನ್ ಕೂಡ ಸರಣಿಯಿಂದ ಹೊರಗುಳಿಯುವಂತೆ ಆಗಿದೆ.

    ವಾಷಿಂಗ್ಟನ್ ಸುಂದರ್ ಮತ್ತು ವೇಗಿ ಅವೇಶ್ ಖಾನ್ ಅಭ್ಯಾಸ ಪಂದ್ಯದಲ್ಲಿ ಅಡುವ ವೇಳೆ ಇಬ್ಬರಿಗೂ ಕೂಡ ಕೈ ಬೆರಳಿನ ಗಾಯವಾಗಿದೆ ಎಂದು ವರದಿಯಾಗಿದೆ. ಅದರಲ್ಲೂ ಆವೇಶ್ ಖಾನ್ ಅವರ ಕೈ ಬೆರಳು ಮುರಿತಕ್ಕೆ ಒಳಗಾಗಿದೆ ಎಂದು ಮೂಲಗಳು ತಿಳಿಸಿವೆ. ಅಭ್ಯಾಸ ಪಂದ್ಯದಲ್ಲಿ ಸುಂದರ್ ಹಾಗೂ ಆವೇಶ್ ಖಾನ್ ಜೊತೆಯಾಗಿ ಕಂಟ್ರಿ ಇಲೆವೆನ್ ತಂಡದ ಪರ ಆಡಿದ್ದರು. ಈ ವೇಳೆ ಗಾಯವಾಗಿದೆ. ಈ ಮೂಲಕ ಭಾರತದ 3 ಮಂದಿ ಆಟಗಾರರು ಸರಣಿಯ ಆರಂಭಕ್ಕೂ ಮೊದಲೇ ತಂಡದಿಂದ ಹೊರ ಬಿದ್ದಂತಾಗಿದೆ. ಇದನ್ನೂ ಓದಿ: ಹಿಟ್‍ಮ್ಯಾನ್ ಹಸ್ತಾಕ್ಷರ ಹಾಕಿಸಿಕೊಂಡ ಫ್ಯಾನ್‍ಬಾಯ್ ಅವೇಶ್ ಖಾನ್

    ಬಿಸಿಸಿಐ ಶುಭಮನ್ ಗಿಲ್ ಅವರ ಜಾಗಕ್ಕೆ ಬದಲಿ ಆಟಗಾರನನ್ನು ಇಂಗ್ಲೆಂಡ್ ಕಳುಹಿಸಿಲ್ಲ. ಇದೀಗ ಈ ಇಬ್ಬರು ಆಟಗಾರರು ಕೂಡ ಗಾಯಲು ಆಗಿರುವುದರಿಂದ ಬದಲಿ ಆಟಗಾರರನ್ನು ಕಳುಹಿಸಲಿದೆಯೆ ಎಂಬುದನ್ನು ಕಾದು ನೋಡಬೇಕಾಗಿದೆ.

    ಭಾರತ ಹಾಗೂ ಇಂಗ್ಲೆಂಡ್ ನಡುವಿನ ಟೆಸ್ಟ್ ಸರಣಿಯ ಮೊದಲ ಪಂದ್ಯ ಆಗಸ್ಟ್ 4ರಂದು ನಾಟಿಂಗ್ ಹ್ಯಾಮ್‍ನ ಟ್ರೆಂಟ್ ಬ್ರಿಡ್ಜ್ ನಲ್ಲಿ ಆರಂಭಗೊಳ್ಳಲಿದೆ. ಇದನ್ನೂ ಓದಿ: 515 ಓವರ್ ಎಸೆದ ಬಳಿಕ ಸಣ್ಣ ತಪ್ಪು ಮಾಡಿದ ಭುವಿ

  • ಸಹ ಆಟಗಾರನ ಫುಟ್‍ಬಾಲ್ ಆಟಕಂಡು ನೆಲದಲ್ಲಿ ಹೊರಳಾಡಿ ನಕ್ಕ ಕೊಹ್ಲಿ

    ಸಹ ಆಟಗಾರನ ಫುಟ್‍ಬಾಲ್ ಆಟಕಂಡು ನೆಲದಲ್ಲಿ ಹೊರಳಾಡಿ ನಕ್ಕ ಕೊಹ್ಲಿ

    ಲಂಡನ್: ಇಂಗ್ಲೆಂಡ್ ಪ್ರವಾಸ ಕೈಗೊಂಡಿರುವ ಭಾರತ ತಂಡದ ಆಟಗಾರರು ಅಭ್ಯಾಸ ಆರಂಭಿಸಿದ್ದಾರೆ. ಈ ನಡುವೆ ಅಭ್ಯಾಸದ ವೇಳೆ ಸಹ ಆಟಗಾರನ ಫುಟ್‍ಬಾಲ್ ಆಟಕಂಡು ತಂಡದ ನಾಯಕ ವಿರಾಟ್ ಕೊಹ್ಲಿ ನೆಲದಲ್ಲಿ ಬಿದ್ದು ಹೊರಳಾಡಿ ನಕ್ಕಿದ್ದಾರೆ.

    ಇಂಗ್ಲೆಂಡ್‍ನಲ್ಲಿ ನಡೆದ ವಿಶ್ವಟೆಸ್ಟ್ ಚಾಂಪಿಯನ್‍ಶಿಪ್ ಫೈನಲ್ ಬಳಿಕ ಸ್ವಲ್ಪ ವಿರಾಮದಲ್ಲಿದ್ದ ಭಾರತ ತಂಡ ಮತ್ತೆ ಇದೀಗ ಇಂಗ್ಲೆಂಡ್ ಸರಣಿಗೆ ಅಭ್ಯಾಸ ಆರಂಭಿಸಿದೆ. ಈ ನಡುವೆ ತಂಡದ ಸಹ ಆಟಗಾರರಲ್ಲಿ ಕೊರೊನಾ ದೃಢಪಟ್ಟಿರುವ ಆತಂಕದ ನಡುವೆ ಭಾರತ ತಂಡದ ಸದಸ್ಯರು ಡರ್ಹಾಮ್‍ಗೆ ತೆರಳಿ ಅಭ್ಯಾಸ ಅರಂಭಿಸಿದ್ದಾರೆ.

    ಅಭ್ಯಾಸದ ವೇಳೆ ವಿರಾಟ್ ಕೊಹ್ಲಿ ಸಹಿತ ಎಲ್ಲ ಆಟಗಾರರು ಫುಟ್‍ಬಾಲ್ ಆಟದಲ್ಲಿ ತೊಡಗಿದ್ದಾರೆ. ಈ ವೇಳೆ ಸಹ ಆಟಗಾರರು ಕಾಲು ಮತ್ತು ತಲೆಯಲ್ಲಿ ಬಾಲ್‍ನ್ನು ಒದೆಯುತ್ತಿದ್ದರು. ಈ ಸಂದರ್ಭ ಕನ್ನಡಿಗ ಪ್ರಸಿದ್ಧ್ ಕೃಷ್ಣ ಫುಟ್‍ಬಾಲ್ ಆಡುವುದನ್ನು ಕಂಡು ವಿರಾಟ್ ಕೊಹ್ಲಿ ಮತ್ತು ಕೆ.ಎಲ್ ರಾಹುಲ್ ಅಣಕಿಸಿದ್ದಾರೆ.

    ವಿರಾಟ್ ಕೊಹ್ಲಿ ಮತ್ತು ರಾಹುಲ್ ತಲೆಯಲ್ಲಿ ಪ್ರಸಿದ್ಧ್ ಕೃಷ್ಣರಂತೆ ಆ್ಯಕ್ಷನ್ ಮಾಡುವ ಮೂಲಕ ನಗಲು ಆರಂಭಿಸಿದ್ದಾರೆ. ಕೊಹ್ಲಿ ನಕ್ಕು, ನಕ್ಕು ಕೊನೆಗೆ ಮೈದಾನದಲ್ಲಿ ಹೊರಳಾಡಿದ್ದಾರೆ. ಇದನ್ನೂ ಓದಿ: ಸಚಿನ್, ಸೆಹ್ವಾಗ್ ಬಳಿಕ ಆರಂಭಿಕನಾಗಿ ಶಿಖರ್ ಧವನ್ ನೂತನ ಮೈಲಿಗಲ್ಲು

    ಭಾರತ ಹಾಗೂ ಇಂಗ್ಲೆಂಡ್ ನಡುವಿನ 5 ಪಂದ್ಯಗಳ  ಟೆಸ್ಟ್ ಸರಣಿ  ಆಗಸ್ಟ್ 4 ರಂದು ಆರಂಭವಾಗಲಿದೆ.

  • ಇಂಗ್ಲೆಂಡ್ ಸರಣಿ ಆರಂಭಕ್ಕೂ ಮೊದಲೇ ಟೀಂ ಇಂಡಿಯಾದಿಂದ  ಶುಭಮನ್ ಗಿಲ್ ಔಟ್

    ಇಂಗ್ಲೆಂಡ್ ಸರಣಿ ಆರಂಭಕ್ಕೂ ಮೊದಲೇ ಟೀಂ ಇಂಡಿಯಾದಿಂದ ಶುಭಮನ್ ಗಿಲ್ ಔಟ್

    ಲಂಡನ್: ಭಾರತ ಟೆಸ್ಟ್ ವಿಶ್ವಚಾಂಪಿಯನ್‍ಶಿಪ್ ಫೈನಲ್ ಸೋತ ಬಳಿಕ ಇದೀಗ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಗೆ ತಯಾರಿಮಾಡಿಕೊಳ್ಳುತ್ತಿದೆ. ಈ ನಡುವೆ ಇದೀಗ ಭಾರತ ತಂಡದ ಯುವ ಆರಂಭಿಕ ಆಟಗಾರ ಶುಭಮನ್ ಗಿಲ್ ಗಾಯದಿಂದಾಗಿ ಟೆಸ್ಟ್ ಸರಣಿಯಿಂದ ಹೊರಬಿದ್ದಿದ್ದಾರೆ ಎಂದು ವರದಿಯಾಗಿದೆ.

    ಇಂಗ್ಲೆಂಡ್ ವಿರುದ್ಧ 5 ಪಂದ್ಯಗಳ ಟೆಸ್ಟ್ ಸರಣಿಯನ್ನು ಭಾರತ ತಂಡ ಆಡಲಿದೆ. ಆದರೆ ಇದೀಗ ಸರಣಿ ಆರಂಭಕ್ಕೂ ಮೊದಲೇ ತಂಡದ ಅರಂಭಿಕ ಆಟಗಾರ ಶುಭಮನ್ ಗಿಲ್ ಗಾಯಗೊಂಡು ಮಹತ್ವದ ಪಂದ್ಯದಿಂದ ಹೊರಬಿದ್ದಿದ್ದಾರೆ. ಇವರಿಗೆ ಬದಲಿ ಆಟಗಾರನಾಗಿ ಅಭಿಮನ್ಯು ಈಶ್ವರನ್ ಈಗಾಗಲೇ ತಂಡದಲ್ಲಿದ್ದಾರೆ ಎಂದು ಬಿಸಿಸಿಐ ಮೂಲಗಳಿಂದ ವರದಿಯಾಗಿದೆ.

    ಗಿಲ್ ಗಾಯಗೊಂಡರೂ ಕೂಡ ಆಸ್ಟ್ರೇಲಿಯಾದಲ್ಲೇ ಉಳಿದುಕೊಳ್ಳಲಿದ್ದಾರೆ. ಇದೀಗ ಗಿಲ್ ಅವರ ಸ್ಥಾನವನ್ನು ಕನ್ನಡಿಗರಾದ ಕೆ.ಎಲ್ ರಾಹುಲ್ ಮತ್ತು ಮಯಾಂಕ್ ಅಗರ್ವಾಲ್ ಇಬ್ಬರಲ್ಲಿ ಒಬ್ಬರು ತುಂಬುವ ಭರವಸೆ ಇದೆ, ಈ ಇಬ್ಬರಲ್ಲಿ ಒಬ್ಬರು ರೋಹಿತ್ ಶರ್ಮಾ ಜೊತೆ ಇನ್ನಿಂಗ್ಸ್ ಆರಂಭಿಸಲಿದ್ದಾರೆ. ಇದನ್ನೂ ಓದಿ: ಬಾಲಕಿಯ ಚಿಕಿತ್ಸೆಗಾಗಿ ಡಬ್ಲ್ಯುಟಿಸಿ ಫೈನಲ್‍ನಲ್ಲಿ ಆಡಿದ ಜೆರ್ಸಿಯನ್ನು ಹರಾಜಿಗಿಟ್ಟ ಆಟಗಾರ

    ಗಿಲ್ ಈಗಾಗಲೇ ಭಾರತ ತಂಡದ ಪರವಾಗಿ ಒಟ್ಟು 8 ಟೆಸ್ಟ್ ಪಂದ್ಯಗಳನ್ನು ಆಡಿ 31.84ರ ಸರಾಸರಿಯಲ್ಲಿ 3 ಅರ್ಧಶತಕ ಸಹಿತ 414 ರನ್ ಸಿಡಿಸಿದ್ದಾರೆ. ವಿಶ್ವ ಟೆಸ್ಟ್ ಚಾಂಪಿಯನ್‍ಶಿಪ್ ಫೈನಲ್‍ನಲ್ಲಿ ಕೂಡ ಆರಂಭಿಕರಾಗಿ ಸ್ಥಾನ ಪಡೆದುಕೊಂಡಿದ್ದರು. ಆದರೆ ಎರಡು ಇನ್ನಿಂಗ್ಸ್ ಸೇರಿ ಒಟ್ಟು 36 ರನ್ ಗಳಿಸುವ ಮೂಲಕ ವಿಫಲತೆ ಅನುಭವಿಸಿದ್ದರು.

    ಗಿಲ್ ಅವರ ಬದಲಿಗೆ ಇದೀಗ ತಂಡದಲ್ಲಿ ಸ್ಥಾನ ಪಡೆದಿರುವ ಅಭಿಮನ್ಯು ಈಶ್ವರನ್ ಪ್ರಥಮ ದರ್ಜೆ ಕ್ರಿಕೆಟ್‍ನಲ್ಲಿ 54 ಪಂದ್ಯಗಳಿಂದ 13 ಶತಕ ಮತ್ತು 18 ಅರ್ಧಶತಕ ಸಹಿತ 4401ರನ್ ಗಳಿಸಿದ್ದಾರೆ.

    ಭಾರತ ಹಾಗೂ ಇಂಗ್ಲೆಂಡ್ ನಡುವಿನ ಟೆಸ್ಟ್ ಸರಣಿಯ ಮೊದಲ ಪಂದ್ಯ ಆಗಸ್ಟ್ 4 ರಂದು ನಾಟಿಂಗ್ ಹ್ಯಾಮ್ ನ ಟ್ರೆಂಟ್ ಬ್ರಿಡ್ಜ್ ನಲ್ಲಿ ಆರಂಭಗೊಳ್ಳಲಿದೆ.

  • ಬಾಲಕಿಯ ಚಿಕಿತ್ಸೆಗಾಗಿ ಡಬ್ಲ್ಯುಟಿಸಿ ಫೈನಲ್‍ನಲ್ಲಿ ಆಡಿದ ಜೆರ್ಸಿಯನ್ನು ಹರಾಜಿಗಿಟ್ಟ ಆಟಗಾರ

    ಬಾಲಕಿಯ ಚಿಕಿತ್ಸೆಗಾಗಿ ಡಬ್ಲ್ಯುಟಿಸಿ ಫೈನಲ್‍ನಲ್ಲಿ ಆಡಿದ ಜೆರ್ಸಿಯನ್ನು ಹರಾಜಿಗಿಟ್ಟ ಆಟಗಾರ

    ವೆಲ್ಲಿಂಗ್ಟನ್: ಭಾರತ ಹಾಗೂ ನ್ಯೂಜಿಲೆಂಡ್ ನಡುವೆ ನಡೆದ ಚೊಚ್ಚಲ ವಿಶ್ವ ಟೆಸ್ಟ್ ಚಾಂಪಿಯನ್‍ಶಿಪ್ ಫೈನಲ್‍ನಲ್ಲಿ ಧರಿಸಿದ್ದ ಬಟ್ಟೆಯನ್ನು, ಎಂಟು ವರ್ಷದ ಬಾಲಕಿಯ ಕ್ಯಾನ್ಸರ್ ಚಿಕಿತ್ಸೆಗಾಗಿ ಹರಾಜಿಗಿಡುವ ಮೂಲಕ ಟಿಮ್ ಸೌಥಿ ಮಾನವೀಯತೆ ಮೆರೆದಿದ್ದಾರೆ.

    ನ್ಯೂಜಿಲೆಂಡ್‍ನಲ್ಲಿ 8 ವರ್ಷದ ಬಾಲಕಿ ಹಾಲ್ಲೀ ಬೀಟಿಯಾ ನ್ಯೂರೋಬ್ಲಾಸ್ಟೊಮಾ ಎಂಬ ಅಪರೂಪದ ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದು 2018ರಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ಇದನ್ನು ತಿಳಿದ ನ್ಯೂಜಿಲೆಂಡ್ ತಂಡದ ಹಿರಿಯ ವೇಗಿ ಟಿಮ್ ಸೌಥಿ ಆ ಬಾಲಕಿಯ ಚಿಕಿತ್ಸೆಗೆ ನೆರವಾಗಲು ಡಬ್ಲ್ಯುಟಿಸಿ ಫೈನಲ್‍ನಲ್ಲಿ ತಾನು ಧರಿಸಿದ್ದ ಬಟ್ಟೆಯೊಂದನ್ನು ಹರಾಜಿಗೆ ಇಟ್ಟಿದ್ದಾರೆ. ಹರಾಜಿನಲ್ಲಿ ಬಂದ ಹಣವನ್ನು ಆ ಬಾಲಕಿಯ ಚಿಕಿತ್ಸೆಗೆ ಭರಿಸಲು ಮುಂದಾಗಿದ್ದಾರೆ. ಇದನ್ನೂ ಓದಿ: ಕೊನೆಗೂ ಕನಸು ನನಸು: ಐಸಿಸಿ ಟೆಸ್ಟ್ ಟ್ರೋಫಿಗೆ ಮುತ್ತಿಕ್ಕಿದ ನ್ಯೂಜಿಲೆಂಡ್

    ಟಿಮ್ ಸೌಥಿ ಡಬ್ಲ್ಯುಟಿಸಿ ಫೈನಲ್‍ನಲ್ಲಿ ಆಡುವಾಗ ಧರಿಸಿದ್ದ ಈ ಒಂದು ಬಟ್ಟೆಯಲ್ಲಿ ತಂಡದ ಎಲ್ಲಾ ಸದಸ್ಯರು ಕೂಡ ತಮ್ಮ ಹಸ್ತಾಕ್ಷರ ಹಾಕಿದ್ದಾರೆ. ಆ ಬಟ್ಟೆಯನ್ನೇ ಇದೀಗ ಹರಾಜಿಗಿಟ್ಟಿರುವ ಬಗ್ಗೆ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಸೌಥಿ ಪೋಸ್ಟ್ ಹಾಕಿಕೊಂಡಿದ್ದಾರೆ.

     

    View this post on Instagram

     

    A post shared by Tim Southee (@tim_southee)

    ಸೌಥಿ ಪೋಸ್ಟ್ ಹಾಕುತ್ತಿದ್ದಂತೆ ಅವರ ಜೆರ್ಸಿಯನ್ನು ಖರೀದಿಸಲು ಸಾವಿರಾರು ಮಂದಿ ಮುಂದೆ ಬಂದಿದ್ದಾರೆ. ಸೌಥಿಗಿಂತ ಮೊದಲು ಮಾರ್ಟಿನ್ ಗಪ್ಟಿಲ್ ತಮ್ಮ ಬ್ಯಾಟನ್ನು ಹರಾಜಿಗಿಟ್ಟು ಹಾಲ್ಲೀ ಬೀಟಿಯಾ ಚಿಕಿತ್ಸೆಗೆ ನೆರವಾಗಿದ್ದರು. ಇದನ್ನೂ ಓದಿ: ಟೆಸ್ಟ್ ಚಾಂಪಿಯನ್ ಆದ ಬೆನ್ನಲ್ಲೇ ನ್ಯೂಜಿಲೆಂಡ್ ತಂಡದಿಂದ ಹೊಸ ನಿರ್ಧಾರ..?

    ಟಿಮ್ ಸೌಥಿ ವಿಶ್ವಟೆಸ್ಟ್ ಚಾಂಪಿಯನ್‍ಶಿಪ್‍ನಲ್ಲಿ ನ್ಯೂಜಿಲೆಂಡ್ ಚಾಂಪಿಯನ್ ಆಗಲು ಸಾಕಷ್ಟು ಸಹಕಾರಿಯಾಗಿದ್ದಾರೆ. ಫೈನಲ್‍ನಲ್ಲಿ ಭಾರತದ ವಿರುದ್ಧ 112ರನ್ ನೀಡಿ ಐದು ವಿಕೆಟ್ ಕಬಳಿಸಿದ್ದರು. ಅಷ್ಟೆ ಅಲ್ಲದೆ ಬ್ಯಾಟಿಂಗ್‍ನಲ್ಲಿ ಕೂಡ ನ್ಯೂಜಿಲೆಂಡ್ ತಂಡಕ್ಕೆ ನೆರವಾಗಿದ್ದರು. ಇದೀಗ ಕ್ಯಾನ್ಸರ್ ಪೀಡಿತ ಬಾಲಕಿಗೆ ನೆರವಾಗುವ ಮೂಲಕ ಎಲ್ಲರ ಮನಗೆದ್ದಿದ್ದಾರೆ.