Tag: Testing

  • ಪಿಎಸ್‍ಐ ನೇಮಕಾತಿ ಅಕ್ರಮ ಭೇದಿಸಲು ಸಹಾಯವಾಯ್ತು ಫೋಟೋಶೂಟ್

    ಪಿಎಸ್‍ಐ ನೇಮಕಾತಿ ಅಕ್ರಮ ಭೇದಿಸಲು ಸಹಾಯವಾಯ್ತು ಫೋಟೋಶೂಟ್

    ಕಲಬುರಗಿ: ಪಿಎಸ್‍ಐ ನೇಮಕಾತಿ ಅಕ್ರಮದ ಪ್ರಕರಣಕ್ಕೆ ಸಂಬಂಧಿಸಿದಂತೆ ಪಿಎಸ್‍ಐ ನೇಮಕಾತಿ ಪರೀಕ್ಷೆಯಲ್ಲಿ ಯಶಸ್ಸು ಕಂಡ ನಂತರ ಕಲಬುರಗಿಯ ಜ್ಞಾನ ಜ್ಯೋತಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸಿಬ್ಬಂದಿಗಳು ಫೋಟೋಶೂಟ್ ಮಾಡಿಸಿದ್ದರು. ಈಗ ಈ ಫೋಟೋಶೂಟ್ ಅಕ್ರಮ ಭೇದಿಸಲು ಅಧಿಕಾರಿಗಳಿಗೆ ಸಹಾಯವಾಗಿದೆ.

    ಪಿಎಸ್‍ಐ ಪರೀಕ್ಷೆ ಬಳಿಕ ಎಲ್ಲ ಸಿಬ್ಬಂದಿಗೆ 4 ಸಾವಿರ ಹೆಚ್ಚಿನ ಭತ್ಯೆಯನ್ನು ಶಾಲೆಯ ಒಡತಿ ದಿವ್ಯಾ ಹಾಗರಗಿ ನೀಡಿದ್ದರು. ಆ ಭತ್ಯೆ ನೀಡುವ ಸಂದರ್ಭದಲ್ಲಿ ನೆನಪಿನ ಸ್ಮರಣಾರ್ಥ ಇದೊಂದು ಐತಿಹಾಸಿಕ ದಿನವೆಂದು ಎಲ್ಲರಿಗೂ ಒಟ್ಟಿಗೆ ಕೂಡಿಸಿ ಫೋಟೋಶೂಟ್ ಮಾಡಿಕೊಂಡಿದ್ದರು. ಇದನ್ನೂ ಓದಿ: 1945 ರಲ್ಲಿದ್ದಂತೆ, ವಿಜಯವು ನಮ್ಮದಾಗಿರುತ್ತದೆ: ಪುಟಿನ್ ಪ್ರತಿಜ್ಞೆ 

    ಫೋಟೋಶೂಟ್‍ನಲ್ಲಿ ಬಹುತೇಕರು ಪಿಎಸ್‍ಐ ನೇಮಕಾತಿ ಅಕ್ರಮದಲ್ಲಿ ಭಾಗಿಯಾಗಿರುವ ಪರಿಣಾಮ ಇದೀಗ ಸಿಐಡಿ ಬಲೆಗೆ ಬಿದ್ದಿದ್ದಾರೆ. ಈಗ ಅಕ್ರಮದ ನೇಮಕಾತಿ ಪ್ರಕರಣ ಭೇಧಿಸಲು ಈ ಫೋಟೋಶೂಟ್ ಸಹಾಯಕವಾಗಿದೆ.

    KARNATAKA PSI EXAM

    ಫೋಟೋಶೂಟ್‍ನಲ್ಲಿ ಶಾಲಾ ಸಿಬ್ಬಂದಿಗಳ ಜೊತೆಗೆ ಪೊಲಿಸ್ ಅಧಿಕಾರಿಗಳು ಸಹ ಕ್ಯಾಮೆರಾಗೆ ಪೋಸ್ ನೀಡಿದ್ದು, ಡಿವೈಎಸ್‍ಪಿ ಹೊಸಮನಿ, ಸಿಪಿಐ ಆನಂದ ಮೇತ್ರೆ, ದಿಲೀಪ್ ಸಾಗರ ಸೇರಿದಂತೆ ಹಲವರು ಭಾಗಿಯಾಗಿದ್ದು ಕಾಣಬಹುದು.

  • ಸದ್ಯಕ್ಕೆ ಟಫ್ ರೂಲ್ಸ್ ಜಾರಿಯಿಲ್ಲ: ಸಿಎಂ

    ಸದ್ಯಕ್ಕೆ ಟಫ್ ರೂಲ್ಸ್ ಜಾರಿಯಿಲ್ಲ: ಸಿಎಂ

    ಬೆಂಗಳೂರು: ಕೊರೊನಾ 4ನೇ ಅಲೆ ಆತಂಕದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಸದ್ಯಕ್ಕೆ ಟಫ್ ರೂಲ್ಸ್ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದರು.

    ಪ್ರಧಾನಿ ಮೋದಿ ಅವರೊಂದು ತುರ್ತು ಸಭೆ ಮುಕ್ತಾಯದ ಬಳಿಕ ಮಾತನಾಡಿದ ಅವರು, ಸದ್ಯಕ್ಕೆ ರಾಜ್ಯದಲ್ಲಿ ಸಾಫ್ಟ್ ರೂಲ್ಸ್ ಮಾತ್ರ ಜಾರಿ ಮಾಡುತ್ತೇವೆ. ಸ್ವಲ್ಪ ದಿನ ಕಾದು ನೋಡುವ ಬಗ್ಗೆ ಚಿಂತನೆ ನಡೆಸಿದ್ದೇವೆ. ಕೇಂದ್ರದಿಂದ ಯಾವುದೇ ನಿಯಮ ಜಾರಿಗೆ ಸೂಚನೆ ಬಾರದ ಹಿನ್ನಲೆ ಸದ್ಯಕ್ಕೆ ಕಠಿಣ ನಿಯಮ ಜಾರಿ ಮಾಡದೇ ಇರಲು ನಿರ್ಧಾರ ಮಾಡಿದ್ದೇವೆ ಎಂದರು.

    corona

    ಪ್ರಧಾನಿಗಳ 3ಟಿ ಸೂತ್ರ ಅಳವಡಿಕೆಗೆ ನಿರ್ಧರಿಸಿದ್ದು, ರಾಜ್ಯದಲ್ಲಿ ಟೆಸ್ಟಿಂಗ್, ಟ್ರೇಸಿಂಗ್, ಟ್ರೀಟ್‍ಮೆಂಟ್ ಸೂತ್ರ ಅನುಷ್ಠಾನ ಆಗಲಿದೆ. ಇದರ ಜೊತೆಗೆ ಲಸಿಕೆ ಅಭಿಯಾನ ಚುರುಕು ಮಾಡುತ್ತೇವೆ. ಹಾಗೆಯೇ ಮಕ್ಕಳ ಲಸಿಕೆ ಅಭಿಯಾನಕ್ಕೆ ವೇಗ ಕೊಡಲು ನಿರ್ಧಾರ ಮಾಡಿದ್ದೇವೆ. 6 ರಿಂದ 12 ಮತ್ತು 15 ರಿಂದ 18 ಮತ್ತು 60 ವರ್ಷ ಮೇಲ್ಪಟ್ಟವರಿಗೂ ಲಸಿಕೆ ವೇಗ ಹೆಚ್ಚಳ ಮಾಡಿತ್ತೇವೆ ಎಂದು ಹೇಳಿದರು. ಇದನ್ನೂ ಓದಿ: ಪ್ರಿಯಾಂಕಾ ಗಾಂಧಿ ಕಾಂಗ್ರೆಸ್ ಮುಖ್ಯಸ್ಥೆ ಆಗಬೇಕು ಅಂತ ಪ್ರಶಾಂತ್ ಕಿಶೋರ್ ಬಯಸಿದ್ರು

    ಜನರಲ್ಲಿ ಲಸಿಕೆ ಜಾಗೃತಿ, ಕೊರೊನಾ ಜಾಗೃತಿ ಮೂಡಿಸುವ ಕೆಲಸವನ್ನು ಮಾಡುತ್ತೇವೆ. ಆದರೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೆಲ ನಿಯಮ ಸೇರ್ಪಡೆ ಮಾಡುತ್ತಿದ್ದೇವೆ. ಅಂತಾರಾಜ್ಯ ಪ್ರಯಾಣಿಕರಿಗೂ ಕೆಲವು ನಿಯಮ ಜಾರಿಗೆ ಸರ್ಕಾರದ ಚಿಂತನೆ ನಡೆಸುತ್ತೇವೆ ಎಂದು ಮಾಹಿತಿ ನೀಡಿದರು. ಇದನ್ನೂ ಓದಿ: ಕೇರಳದಲ್ಲಿ ಮಾಸ್ಕ್ ಕಡ್ಡಾಯಗೊಳಿಸಿ ಸರ್ಕಾರ ಆದೇಶ

    ಆಸ್ಪತ್ರೆ ವ್ಯವಸ್ಥೆ ಬಗ್ಗೆ ಹೇಳಿದ್ದೇವೆ. ಸರ್ಕಾರಿ 50 ಸಾವಿರ ಬೆಡ್, ಖಾಸಗಿ 1 ಲಕ್ಷ ಬೆಡ್ ವ್ಯವಸ್ಥೆ ಮಾಡುತ್ತೇವೆ. ನಾವು ಸನ್ನದ್ಧರಾಗಿದೀವಿ ಅಂತ ಹೇಳಿದ್ದೇವೆ. ಪ್ರಧಾನ ಮಂತ್ರಿಗಳು ಸುದೀರ್ಘವಾಗಿ ರಾಜ್ಯದ ವರದಿ ಬಗ್ಗೆ ಪಡೆದಿದ್ದಾರೆ. ರಾಜ್ಯದ ಸ್ಥಿತಿಗತಿ ಬಗ್ಗೆಯೂ ನಾವು ಹೇಳಿದ್ದೇವೆ. ಸದ್ಯ ಕೋವಿಡ್‌ ನಿಯಂತ್ರಣದಲ್ಲಿದೆ. ಪ್ರತಿ ದಿನ 30 ಸಾವಿರ ಟೆಸ್ಟ್ ಹೆಚ್ಚಳ ಮಾಡಲು ಕ್ರಮ ವಹಿಸಿದ್ದೇವೆ ಎಂದರು.

    ಏಪ್ರಿಲ್ 9ರ ಬಳಿಕ ಬೆಂಗಳೂರಿನಲ್ಲಿ ಕೋವಿಡ್ ಟೆಸ್ಟ್ ಹೆಚ್ಚಳ ಮಾಡುತ್ತೇವೆ. ಬೆಂಗಳೂರಿಗೆ ಹೆಚ್ಚು ಗಮನ ಕೊಟ್ಟಿದ್ದೇವೆ. ಟೆಸ್ಟಿಂಗ್ ಹೆಚ್ಚು ಮಾಡಲು ಕ್ರಮ ವಹಿಸಿದ್ದೇವೆ. ಸಾರ್ವಜನಿಕವಾಗಿ ಸ್ಥಳಗಳಲ್ಲಿ ಕೊವೀಡ್ ನಿಯಮ ಪಾಲನೆಗೆ ಕ್ರಮ ಕೈಗೊಳ್ಳುತ್ತೇವೆ ಹಾಗೂ ವಿಮಾನ ನಿಲ್ದಾಣ ಇರೋದ್ರಿಂದ ಹೆಚ್ಚು ಪರೀಕ್ಷೆ ಮಾಡಲು ಕ್ರಮ ವಹಿಸಿದ್ದೇವೆ ಎಂದು ಸ್ಪಷ್ಟಪಡಿಸಿದರು.

  • ಗಮನಿಸಿ, ಡಿ.29ಕ್ಕೆ ಕೆಪಿಎಸ್‍ಸಿ ಮರುಪರೀಕ್ಷೆ – ಯಾವೆಲ್ಲ ದಾಖಲೆ ಸಲ್ಲಿಸಬೇಕು?

    ಗಮನಿಸಿ, ಡಿ.29ಕ್ಕೆ ಕೆಪಿಎಸ್‍ಸಿ ಮರುಪರೀಕ್ಷೆ – ಯಾವೆಲ್ಲ ದಾಖಲೆ ಸಲ್ಲಿಸಬೇಕು?

    ಬೆಂಗಳೂರು: ಲೋಕೋಪಯೋಗಿ ಇಲಾಖೆಯ ಸಹಾಯಕ ಎಂಜಿನಿಯರಿಂಗ್ ಹುದ್ದೆಯ ಸಾಮಾನ್ಯ ಪತ್ರಿಕೆಯ ಮರು ಪರೀಕ್ಷೆ ಡಿ.29ಕ್ಕೆ ಬೆಂಗಳೂರಿನಲ್ಲಿ ನಡೆಸಲಾಗುವುದು ಎಂದು ಕೆಪಿಎಸ್‍ಸಿ ತಿಳಿಸಿದೆ.

    ಹಾಸನ-ಸೋಲಾಪುರ ಎಕ್ಸ್ ಪ್ರೆಸ್ ಮತ್ತು ಉದ್ಯಾನ್ ಎಕ್ಸ್ ಪ್ರೆಸ್ ರೈಲು ತಡವಾಗಿದ್ದರಿಂದ ಕಲಬುರಗಿ ಕೇಂದ್ರದಲ್ಲಿ ಪರೀಕ್ಷೆ ಬರೆಯಬೇಕಾಗಿದ್ದ ಅಭ್ಯರ್ಥಿಗಳು ಸರಿಯಾದ ಸಮಯಕ್ಕೆ ತಲುಪಲು ಸಾಧ್ಯವಾಗಿರಲಿಲ್ಲ.

    ಈ ಕುರಿತು ಮಾಧ್ಯಮ ಪ್ರಕಟನೆಯನ್ನು ಹೊರಡಿಸಿದ್ದು, ಕಲಬುರಗಿ ಪರೀಕ್ಷಾ ಕೇಂದ್ರಗಳಲ್ಲಿ ಬೆಳಗ್ಗಿನ ಅಧಿವೇಶನದ ಪರೀಕ್ಷೆಗೆ ಹಾಜರಾಗಲು ಸಾಧ್ಯವಾಗದೇ ಮಧ್ಯಾಹ್ನದ ಅಧಿವೇಶನದ ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳಿಗೆ ಮಾತ್ರ ಸಾಮಾನ್ಯ ಪತ್ರಿಕೆ-1 ರ ಮರು ಪರೀಕ್ಷೆಯನ್ನು ನಡೆಸಲಾಗುತ್ತದೆ ಎಂದು ತಿಳಿಸಿದೆ. ಇದನ್ನೂ ಓದಿ: ರೈಲು ವಿಳಂಬ – ಅಭ್ಯರ್ಥಿಗಳಿಗೆ ಟ್ರಾಫಿಕ್ ರಹಿತ ಸಾರಿಗೆ ವ್ಯವಸ್ಥೆ

    ದಾಖಲೆ ಸಲ್ಲಿಸಬೇಕು?
    ಈ ಪರೀಕ್ಷೆ ಬರೆಯಬೇಕಾದರೆ ಅಭ್ಯರ್ಥಿಗಳು ಕೆಲವು ಕಟ್ಟುನಿಟ್ಟಿನ ನಿಯಮಗಳನ್ನು ಪಾಲಿಸಬೇಕು. ಮನವಿ ಪತ್ರ, ಹಾಸನ-ಸೋಲಾಪುರ ಎಕ್ಸ್ ಪ್ರೆಸ್ ಮತ್ತು ಉದ್ಯಾನ್ ಎಕ್ಸ್ ಪ್ರೆಸ್ ರೈಲಿನಲ್ಲಿ ಪ್ರಯಾಣಿಸಿದ ಸಂಬಂಧ ಟಿಕೆಟ್ ಪ್ರತಿ ಮತ್ತು ಆಯೋಗ ನೀಡಿರುವ ಪ್ರವೇಶ ಪತ್ರದ ಪ್ರತಿಯನ್ನು ಮಧ್ಯಾಹ್ನದ ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳು ಡಿ.22ರ ಒಳಗಡೆ ಕರ್ನಾಟಕ ಲೋಕಸೇವಾ ಆಯೋಗ ಬೆಂಗಳೂರಿಗೆ ಸಲ್ಲಿಸಬೇಕು ಎಂದು ಸೂಚಿಸಿದೆ.

    ಒಂದು ವೇಳೆ ಈ ದಾಖಲೆಗಳನ್ನು ಸಲ್ಲಿಸಲು ಅಭ್ಯರ್ಥಿಗಳು ವಿಫಲವಾದರೆ ಮರು ಪರೀಕ್ಷೆ ಬರೆಯಲು ಅವಕಾಶ ನೀಡಲಾಗುವುದಿಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಈ ದಾಖಲೆಗಳನ್ನು ಸ್ಪೀಡ್ ಪೋಸ್ಟ್ ಮುಖಾಂತರ ಅಥವಾ ಖುದ್ದಾಗಿ ಕೇಂದ್ರ ಕಛೇರಿಗೆ ಬಂದು ಅಥವಾ ಇಮೇಲ್ ಮುಖಾಂತರ ಸಲ್ಲಿಸಬಹುದು

    ನಡೆದಿದ್ದೇನು?
    ಹಾಸನ-ಸೋಲಾಪುರ ಸೂಪರ್ ಫಾಸ್ಟ್, ಉದ್ಯಾನ್ ರೈಲು ಬೆಳಗ್ಗೆ 6 ಗಂಟೆಗೆ ಕಲಬುರಗಿ ನಗರಕ್ಕೆ ಬರಬೇಕಿತ್ತು. ಆದ್ರೆ ತಾಂತ್ರಿಕ ತೊಂದರೆಯಿಂದ ರೈಲುಗಳು ಬೆಳಗ್ಗೆ 6 ಗಂಟೆ ಬದಲಾಗಿ ಮಧ್ಯಾಹ್ನ 1:30ಕ್ಕೆ ಕಲಬುರಗಿ ತಲುಪಿತ್ತು. ಹೀಗಾಗಿ ಪಿಡಬ್ಲ್ಯೂಡಿ, ಎಹಿ ಸ್ಪರ್ಧಾತ್ಮಕ ಲಿಖಿತ ಪರೀಕ್ಷೆ ಬರೆಯಲು ಬಂದ ಅಭ್ಯರ್ಥಿಗಳು ಪರದಾಡಿದ್ದರು. ಇದರಿಂದ ಎಚ್ಚೆತ್ತ ಪರೀಕ್ಷೆ ಕೇಂದ್ರ ಕೆಪಿಎಸ್‍ಸಿ ರೈಲು ವಿಳಂಬವಾದ ಅಭ್ಯರ್ಥಿಗಳಿಗೆ ಪರೀಕ್ಷೆ ಸಮಯ ಬದಲಾವಣೆ ಮಾಡಿತ್ತು. ಬೆಳಗ್ಗೆ 11 ಗಂಟೆಯ ಪತ್ರಿಕೆ ಹಾಜರಾಗಲು ಅಭ್ಯರ್ಥಿಗಳಿಗೆ ಸಾಧ್ಯವಾಗಿಲ್ಲದ ಕಾರಣ ಮಧ್ಯಾಹ್ನ 2 ಗಂಟೆಗೆ ಎರಡನೇ ಪರೀಕ್ಷೆ ಹಾಜರಾಗಲು ಅಭ್ಯರ್ಥಿಗಳಿಗೆ ಕಲಬುರಗಿ ಪೊಲೀಸರು ವ್ಯವಸ್ಥೆ ಮಾಡಿಕೊಟ್ಟರು. ಇದನ್ನೂ ಓದಿ:  ಕ್ಯಾ. ವರುಣ್ ಸಿಂಗ್ ನಿಧನ ದೇಶಕ್ಕೆ ತುಂಬಲಾರದ ನಷ್ಟ: ಸಿಎಂ

  • ಟೆಸ್ಟಿಂಗ್ ಪ್ರಮಾಣ ಕಡಿಮೆಯಾಗಿಲ್ಲ, ವಿಧಾನ ಬದಲಾಗಿದೆ ಅಷ್ಟೆ- ಬೊಮ್ಮಾಯಿ ಸಮರ್ಥನೆ

    ಟೆಸ್ಟಿಂಗ್ ಪ್ರಮಾಣ ಕಡಿಮೆಯಾಗಿಲ್ಲ, ವಿಧಾನ ಬದಲಾಗಿದೆ ಅಷ್ಟೆ- ಬೊಮ್ಮಾಯಿ ಸಮರ್ಥನೆ

    – ಇಸ್ಕಾನ್‍ನ ಅಕ್ಷಯ ಪಾತ್ರೆಯಿಂದ ಕಾರ್ಮಿಕರಿಗೆ ಆಹಾರ

    ಬೆಂಗಳೂರು: ಕೊರೊನಾ ಟೆಸ್ಟಿಂಗ್ ಪ್ರಮಾಣ ಕಡಿಮೆಯಾಗಿಲ್ಲ, ಟೆಸ್ಟ್ ಮಾಡುವ ವಿಧಾನ ಬದಲಾಗಿದೆ ಅಷ್ಟೆ ಎಂದು ಹೇಳುವ ಮೂಲಕ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಟೆಸ್ಟಿಂಗ್ ಕಡಿಮೆಯಾಗಿರುವುದನ್ನು ಒಪ್ಪಿಕೊಳ್ಳದೆ, ಸಮರ್ಥಿಸಿಕೊಂಡಿದ್ದಾರೆ.

    ಇಂದು ಕೆ.ಆರ್.ಮಾರ್ಕೆಟ್‍ನಲ್ಲಿ ಇಸ್ಕಾನ್ ಸಂಸ್ಥೆಯ ಅಕ್ಷಯಪಾತ್ರೆ ಯೋಜನೆಯಿಂದ ಕೂಲಿ ಕಾರ್ಮಿಕರು ಹಾಗೂ ಬಡವರಿಗೆ ಆಹಾರ ಪೂರೈಕೆ ಮಾಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಟೆಸ್ಟಿಂಗ್ ಕಡಿಮೆಯಾಗಿದ್ದಕ್ಕೆ ಕೊರೊನಾ ಸೋಂಕಿನ ಪ್ರಕರಣಗಳಲ್ಲಿ ಇಳಿಕೆಯಾಗಿದೆ ಎಂಬ ಚರ್ಚೆ ನಡೆಯುತ್ತಿರುವ ಬಗ್ಗೆ ಸ್ಪಷ್ಟಪಡಿಸಿದರು. ಟೆಸ್ಟಿಂಗ್ ಪ್ರಮಾಣ ಕಡಿಮೆಯಾಗಿಲ್ಲ, ಟೆಸ್ಟ್ ಮಾಡುವ ವಿಧಾನ ಬದಲಾಗಿದೆ. ಪಾಸಿಟಿವ್ ಬಂದವರ ಕಟುಂಬ ಹಾಗೂ ಸುತ್ತಮುತ್ತಲಿನವರ ಟೆಸ್ಟ್ ನಡೆಯುತ್ತಿದೆ. ಆದರೆ ಲಾಕ್‍ಡೌನ್ ಹಿನ್ನೆಲೆಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಟೆಸ್ಟ್ ಮಾಡುತ್ತಿಲ್ಲ. ಹೀಗಾಗಿ ಸಂಖ್ಯೆ ಕಡಿಮೆ ಆಗಿರಬಹುದು ಎಂದರು.

    ಲಾಕ್‍ಡೌನ್ ಮುಂದುವರಿಕೆ ಬಗ್ಗೆ ಸಿಎಂ ಮಟ್ಟದಲ್ಲಿ ಇನ್ನು ಚರ್ಚೆ ನಡೆದಿಲ್ಲ. ಸಿಎಂ ಅಂಕಿ, ಅಂಶ ಪಡೆಯುತ್ತಿದ್ದಾರೆ. ಇಂದು ಟಾಸ್ಕ್ ಫೋರ್ಸ್ ಸಭೆ ನಡೆಯುತ್ತಿದೆ. ಏನು ತೀರ್ಮಾನ ಆಗುತ್ತೆ ಅನ್ನೋದು ನೋಡಬೇಕು. ಟಾಸ್ಕ್ ಫೋರ್ಸ್ ಸಭೆಯ ತೀರ್ಮಾನದ ಮಾಹಿತಿ ಪಡೆದು ಮುಂದಿನ ನಿರ್ಧಾರ ಕೈಗೊಳ್ಳುತ್ತಾರೆ ಎಂದು ಇದೇ ವೇಳೆ ತಿಳಿಸಿದರು.

    ಅಕ್ಷಯಪಾತ್ರೆಯಿಂದ ಆಹಾರ
    ಇಸ್ಕಾನ್ ಸಂಸ್ಥೆಯ ಅಕ್ಷಯಪಾತ್ರೆ ಯೋಜನೆಯಿಂದ ಕೂಲಿ ಕಾರ್ಮಿಕರು ಹಾಗೂ ಬರವಡಿಗೆ ಆಹಾರ ಪೂರೈಕೆ ಮಾಡುವ ಕಾರ್ಯಕ್ರಮಕ್ಕೆ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಇಂದು ಕೆ.ಆರ್.ಮಾರ್ಕೆಟ್‍ನಲ್ಲಿ ಚಾಲನೆ ನೀಡಿದರು. ಕೂಲಿ ಕಾರ್ಮಿಕರಿಗೆ ಆಹಾರ ಪೂರೈಕೆ ಕಾರ್ಯಕ್ರಮ ಇಂದಿನಿಂದ ಆರಂಭವಾಗಲಿದ್ದು, ಫುಡ್ ರಿಲೀಫ್ ಸೆಂಟರ್ ಕಾರ್ಯನಿರ್ವಹಿಸಲಿದೆ. ಕಾರ್ಯಕ್ರಮದಲ್ಲಿ ಗೃಹ ಇಲಾಖೆ ಪ್ರಧಾನ ಕಾರ್ಯದರ್ಶಿ ರಜನೀಶ್ ಗೋಯಲ್, ಪೊಲೀಸ್ ಆಯುಕ್ತ ಕಮಲ್‍ಪಂತ್ ಉಪಸ್ಥಿತರಿದ್ದರು.

  • ಕೋವಿಡ್ ಟೆಸ್ಟ್ ಮಾಡದೆ ಸಾಮಗ್ರಿಗಳ ವ್ಯರ್ಥ- ಇಬ್ಬರು ಆರೋಗ್ಯ ಸಿಬ್ಬಂದಿ ಅಮಾನತು

    ಕೋವಿಡ್ ಟೆಸ್ಟ್ ಮಾಡದೆ ಸಾಮಗ್ರಿಗಳ ವ್ಯರ್ಥ- ಇಬ್ಬರು ಆರೋಗ್ಯ ಸಿಬ್ಬಂದಿ ಅಮಾನತು

    ಬೆಂಗಳೂರು: ಕೋವಿಡ್ ಟೆಸ್ಟ್ ಮಾಡದೆ ಸಾಮಗ್ರಿಗಳನ್ನು ವ್ಯರ್ಥ ಮಾಡುತ್ತಿದ್ದ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ ಆರೋಗ್ಯ ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ.

    ಯಲಹಂಕ ವಲಯದ ಕೊಡಿಗೇಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕೋವಿಡ್ ಟೆಸ್ಟ್ ಮಾಡದೆ ಟೆಸ್ಟಿಂಗ್ ಸಾಮಗ್ರಿಗಳನ್ನು ವ್ಯರ್ಥ ಮಾಡುತ್ತಿದ್ದರು. ಅಲ್ಲದೆ ಹೆಚ್ಚು ಟೆಸ್ಟ್ ಮಾಡಿದಂತೆ ಲೆಕ್ಕ ನೀಡುತ್ತಿದ್ದರು. ಈ ದೃಶ್ಯಾವಳಿ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿತ್ತು.

    ದೃಶ್ಯಾವಳಿ ಗಮನಿಸಿದ ಆಧಾರದ ಮೇಲೆ ಇಬ್ಬರು ಸ್ವಾಬ್ ಕಲೆಕ್ಟರ್ ಗಳನ್ನು ಅಮಾನತು ಮಾಡಲಾಗಿದೆ. ಅಲ್ಲದೆ ಸಂಬಂಧಪಟ್ಟ ಅಧಿಕಾರಿಗಳನ್ನು ನಿರೀಕ್ಷಣಾ ವಿಚಾರಣೆ ಬಳಿಕ ಕಡ್ಡಾಯವಾಗಿ ಅಮಾನತುಗೊಳಿಸುವಂತೆ ಮುಖ್ಯ ಆಯುಕ್ತ ಗೌರವ್ ಗುಪ್ತಾ ಆದೇಶ ಹೊರಡಿಸಿದ್ದಾರೆ.

    ನಗರದ ಆಡುಗೋಡಿ ಔಷಧಾಲಯಕ್ಕೆ ಮುಖ್ಯ ಆಯುಕ್ತರು ಇಂದು ಬೆಳಗ್ಗೆ ಭೇಟಿ ನೀಡಿ ಕೋವಿಡ್ ಪರೀಕ್ಷೆ ಹಾಗೂ ಲಸಿಕೆ ನೀಡುವ ಪ್ರಕ್ರಿಯೆಯನ್ನು ಪರಿಶೀಲನೆ ನಡೆಸಿದು. ಈ ವೇಳೆ ಲಸಿಕೆ ಪಡೆಯಲು ಬಂದ ನಾಗರಿಕರ ಜೊತೆ ಮಾತನಾಡಿ, ಲಸಿಕೆ ನೀಡುವ ಬಗ್ಗೆ ಹಾಗೂ ಪಡೆದ ನಂತರ ಅಭಿಪ್ರಾಯ ಪಡೆದರು. 45 ವರ್ಷ ಮೇಲ್ಪಟ್ಟ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದ್ದು, ಪ್ರಮುಖವಾಗಿ 60 ವರ್ಷ ಮೇಲ್ಪಟ್ಟವರಿಗೆ ಬೇಗ ಲಸಿಕೆ ಪಡೆಯಲು ತಿಳಿಸಿ ಎಂದು ಮನವಿ ಮಾಡಿದರು.

    ವ್ಯಾಕ್ಸಿನೇಷನ್ ಗಾಗಿ ನಗರದಲ್ಲಿ ಸುಮಾರು 500 ಸೈಟ್‍ಗಳಿದ್ದು, ಪ್ರತಿ ಸೈಟ್‍ನಲ್ಲಿಯೂ ಕನಿಷ್ಟ 100 -150 ವ್ಯಾಕ್ಸಿನೇಷನ್ ನೀಡುವ ಗುರಿ ಹೊಂದಲಾಗಿದೆ. ಅಲ್ಲದೆ ಈಗಿರುವ ಸೈಟ್ ಗಳ ಜೊತೆಗೆ ಹೆಚ್ಚುವರಿಯಾಗಿ ಅಗತ್ಯವಿರುವ ಕಡೆ ಸೈಟ್ ಗಳನ್ನು ತೆರೆದು ಹೆಚ್ಚು ವ್ಯಾಕ್ಸಿನೇಷನ್ ನೀಡಲು ಪಾಲಿಕೆ ವತಿಯಿಂದ ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ. ಲಸಿಕೆ ಪಡೆಯುವವರಿಗೆ ಅವಶ್ಯಕವಿರುವ ಕಡೆ ವಾಹನಗಳ ವ್ಯವಸ್ಥೆಯನ್ನೂ ಅಯಾ ವಲಯ ಆಯುಕ್ತರ ಮಟ್ಟದಲ್ಲಿ ಮಾಡಲಾಗುವುದು ಎಂದರು.

    ಬಾಷ್ ಸಂಸ್ಥೆ ಸಹಭಾಗಿತ್ವದಲ್ಲಿ ಕೋವಿಡ್ ಆರೈಕೆ ಕೇಂದ್ರವನ್ನು ಸ್ಥಾಪಿಸಿದ್ದು, ಇದನ್ನು ಪಾಲಿಕೆಗೆ ಪಡೆಯಲಿದ್ದೇವೆ. ಈ ಸಂಬಂಧ ಬಾಷ್ ಸಂಸ್ಥೆ ಹಾಗೂ ಪಾಲಿಕೆ ಜೊತೆ ಚರ್ಚೆ ನಡೆಯುತ್ತಿದ್ದು, ಕೋವಿಡ್ ಆರೈಕೆ ಕೇಂದ್ರ ಪ್ರಾರಂಭಿಸಲು ಇನ್ನೆರಡು ದಿನದಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯ ಆಯುಕ್ತರು ರವರು ತಿಳಿಸಿದರು.

    ನಗರದಲ್ಲಿ ಕೋವಿಡ್ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಪಾಲಿಕೆಯ ಎಲ್ಲ ವಲಯಗಳಲ್ಲಿ ಸುಮಾರು 50 ಹಾಸಿಗೆ ಸಾಮಥ್ರ್ಯದ 2 ಅಥವಾ 3 ಕೋವಿಡ್ ಆರೈಕೆ ಕೇಂದ್ರಗಳನ್ನು ಶೀಘ್ರ ಸ್ಥಾಪಿಸಲು ಉದ್ದೇಶಿಸಲಾಗಿದೆ. ಸಣ್ಣ ಪ್ರಮಾಣದ ಕೋವಿಡ್ ಆರೈಕೆ ಕೇಂದ್ರಗಳನ್ನು ಸ್ಥಾಪಿಸಿ ಮನೆಯಲ್ಲಿ ಪ್ರತ್ಯೇಕವಾಗಿರಲು ಸಾಧ್ಯವಾಗದಂತಹ ಸೋಂಕಿತರನ್ನು ಆರೈಕೆ ಕೇಂದ್ರಗಳಲ್ಲಿರಿಸಿ, ಚಿಕಿತ್ಸೆ ನೀಡಿ, ಆರೈಕೆ ಮಾಡಲಾಗವುದು ಎಂದರು.

    ಕೋರಮಂಗಲದ ಫೋರಂ ಮಾಲ್ ಹತ್ತಿರವಿರುವ ಪ್ರೆಸ್ಟೀಜ್ ಅಪಾರ್ಟ್‍ಮೆಂಟ್ ನಲ್ಲಿನ ಟೆಸ್ಟಿಂಗ್ ಕಾರ್ಯ ವೀಕ್ಷಿಸಿದರು. ಅಪಾರ್ಟ್‍ಮೆಂಟ್ ನ ಪದಾಧಿಕಾರಿಗಳೊಂದಿಗೆ ಮಾತನಾಡಿ, ಎಲ್ಲರೂ ಕೋವಿಡ್ ಟೆಸ್ಟ್ ಮಾಡಿಸಿಕೊಳ್ಳುವಂತೆ ಕೋರಿದರು.

  • ಚಿನ್ನದ ನಾಡಿನಲ್ಲಿ 2 ದಶಕಗಳ ನಂತ್ರ ಮತ್ತೆ ಚಿನ್ನದ ಗಣಿ ಪುನರಾರಂಭಕ್ಕೆ ತಯಾರಿ

    ಚಿನ್ನದ ನಾಡಿನಲ್ಲಿ 2 ದಶಕಗಳ ನಂತ್ರ ಮತ್ತೆ ಚಿನ್ನದ ಗಣಿ ಪುನರಾರಂಭಕ್ಕೆ ತಯಾರಿ

    – ಕೋಲಾರ ಚಿನ್ನದ ಗಣಿ ಪುನಾರಂಭದ ನಿರೀಕ್ಷೆ
    – ಪರೀಕ್ಷೆಗೆ ಸೈನೈಡ್ ಮಣ್ಣು ಹೊತ್ತೊಯ್ದ ಅಧಿಕಾರಿಗಳು

    ಕೋಲಾರ: ವಿಶ್ವಕ್ಕೆ ಚಿನ್ನವನ್ನು ಕೊಟ್ಟ ಚಿನ್ನದ ನಾಡಿನಲ್ಲಿ ಎರಡು ದಶಕಗಳ ನಂತರ ಮತ್ತೆ ಚಿನ್ನದ ಗಣಿ ಪುನರಾರಂಭಕ್ಕೆ ತೆರೆಮರೆಯಲ್ಲಿ ತಯಾರಿಗಳು ನಡೆಯುತ್ತಿವೆ. ಈಗಾಗಲೇ ಚಿನ್ನದ ಗಣಿಯ ಭೂಮಿ ಹಾಗೂ ಮಣ್ಣಿನ ಪರೀಕ್ಷೆಗಳು ನಡೆಯುತ್ತಿದ್ದು, ಚಿನ್ನದ ನಾಡಿನ ಗತ ವೈಭವ ಮತ್ತೆ ಮರುಕಳಿಸುತ್ತಾ ಅನ್ನೋ ನಿರೀಕ್ಷೆ ಗರಿಗೆದರಿವೆ.

    ಜಿಲ್ಲೆಯ ಕೆಜಿಎಫ್ ನಗರ ಚಿನ್ನ ಬೆಳೆಯುತ್ತಿದ್ದ ನೆಲ. ಒಂದು ಕಾಲದಲ್ಲಿ ಇಡೀ ವಿಶ್ವಕ್ಕೆ ಚಿನ್ನವನ್ನು ಕೊಟ್ಟಂತಹ ಇತಿಹಾಸವೇ ಇದೆ. ಆದರೆ ಚಿನ್ನ ಬರಿದಾಗಿ ಎರಡು ದಶಕಗಳೇ ಕಳೆದಿವೆ. ಇದರಿಂದ ಸಾವಿರಾರು ಮಂದಿ ಕೆಲಸ ಕಳೆದುಕೊಂಡು ಬೀದಿಪಾಲಾಗಿದ್ದಾರೆ. ಸರ್ಕಾರಗಳು ನಾನಾ ಯೋಜನೆಗಳನ್ನ ಜಾರಿ ಮಾಡುವ ಭರವಸೆಗಳನ್ನ ನೀಡುತ್ತಾ ಕಣ್ಣೊರೆಸುವ ತಂತ್ರ ಮಾಡಿಕೊಂಡು ಬಂದಿವೆ. ಆದರೆ ಇದುವರೆಗೂ ಕೆಜಿಎಫ್ ಗಣಿ ಪುನಾರಂಭ ಆಗಲಿಲ್ಲ.

    ಸದ್ಯ ಸರ್ಕಾರ ಕೈಗಾರಿಕಾ ಟೌನ್ ಶಿಪ್ ಮತ್ತು ಚಿನ್ನದ ಗಣಿ ಮತ್ತೆ ಓಪನ್ ಮಾಡಲು ಮುಂದಾಗಿದೆ. ಈಗಾಗಲೇ ಚಿನ್ನದ ನಿಕ್ಷೇಪಗಳು ಎಲ್ಲೆಲ್ಲಿ ಇದೆ, ಅದರಲ್ಲಿ ಚಿನ್ನದ ಸಾಂದ್ರತೆ ಎಷ್ಟಿದೆ ಅನ್ನೋದನ್ನು ಪರೀಕ್ಷೆ ನಡೆಸಿದ್ದ ಗಣಿ ಇಲಾಖೆ ಈಗ ಮತ್ತೆ ಚಿನ್ನವನ್ನು ಬೇರ್ಪಡಿಸಿ ಹಾಕಲಾಗಿದ್ದ ಸೈನೈಡ್ ಗುಡ್ಡಗಳಲ್ಲಿ ಚಿನ್ನದ ಅಂಶ ಎಷ್ಟಿದೆ ಅನ್ನೋದನ್ನ ಪರೀಕ್ಷೆ ನಡೆಸಲು ಮುಂದಾಗಿದೆ. ಮೂರನೇ ಹಂತದ ಸೈನೈಡ್ ಗುಡ್ಡದ ಮಣ್ಣನ್ನು ಹೈದರಾಬಾದ್‍ನಲ್ಲಿ ರಾಷ್ಟ್ರೀಯ ಮಣ್ಣು ಮತ್ತು ಖನಿಜ ಪರೀಕ್ಷಾ ಕೇಂದ್ರಕ್ಕೆ ಕಳುಹಿಸಲಾಗಿದೆ.

    ಕೆಜಿಎಫ್ ಭೂಮಿಯ ಮಣ್ಣಿನಲ್ಲಿ ಇರುವ ಖನಿಜದ ಅಂಶ ಹಾಗೂ ಚಿನ್ನದ ಅಂಶ ಎಷ್ಟಿದೆ ಅನ್ನೋದರ ಬಗ್ಗೆ ಪರೀಕ್ಷೆ ನಡೆಸಿ 6 ತಿಂಗಳಲ್ಲಿ ವರದಿ ನೀಡುವಂತೆ ಅಧಿಕಾರಿಗಳಿಗೆ ಕೇಂದ್ರ ಸರ್ಕಾರ ಸೂಚನೆ ನೀಡಿದೆ. ಈಗಾಗಲೇ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಕೆಜಿಎಫ್ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ವಾಪಸ್ಸಾಗಿದ್ದಾರೆ. ಒಂದು ವೇಳೆ ಚಿನ್ನದ ನಿಕ್ಷೇಪ ವಿರುವುದು ಖಚಿತವಾದರೆ ಚಿನ್ನದ ಗಣಿ ಆರಂಭಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ.

    ನಗರದಲ್ಲಿ ಇರುವ ಸೈನೈಡ್ ಗುಡ್ಡಗಳಲ್ಲಿ ಟಂಗ್ ಸ್ಟನ್, ಪೊಲಾಡಿಯಂ ಮತ್ತು ಚಿನ್ನದ ಅಂಶ ಇರುವ ಮಾಹಿತಿ ಇದೆ. ಸುಮಾರು ಇಪ್ಪತ್ತೈದು ಸಾವಿರ ಕೋಟಿ ಬೆಲೆ ಬಾಳುವಷ್ಟಿದೆ ಅನ್ನೋ ಮಾತು ಕೂಡ ಕೇಳಿ ಬರ್ತಿದೆ. ಸದ್ಯ ಶೀಘ್ರದಲ್ಲಿಯೇ ಕೆಜಿಎಫ್ ನಗರ ಮತ್ತೆ ಹಿಂದಿನ ಗತವೈಭವಕ್ಕೆ ಮರಳುತ್ತದೆ ಅನ್ನೋದು ಸಾವಿರಾರು ಗಣಿ ಕಾರ್ಮಿಕರು ಹಾಗೂ ಕುಟುಂಬಗಳ ನಿರೀಕ್ಷೆಯಾಗಿದೆ. 2 ದಶಕಗಳ ನಂತರ ಈಗ ಮತ್ತೆ ಕೆಜಿಎಫ್‍ನಲ್ಲಿ ಚಿನ್ನದ ನೆಲದ ಗತವೈಭವ ಮರುಕಳಿಸುವ ಕುರಿತು ಆಶಾದಾಯಕ ಬೆಳವಣಿಗೆಗಳು ನಡೆಯುತ್ತಿದೆ.

  • ಗಣಿತ 100ಕ್ಕೆ 100, 5 ವಿಷಯದಲ್ಲಿ ಶೇ.93 ಅಂಕ – ಸಂಭ್ರಮಿಸಲು ಅವಳೇ ಇಲ್ಲ

    ಗಣಿತ 100ಕ್ಕೆ 100, 5 ವಿಷಯದಲ್ಲಿ ಶೇ.93 ಅಂಕ – ಸಂಭ್ರಮಿಸಲು ಅವಳೇ ಇಲ್ಲ

    ದಾವಣಗೆರೆ: ಆಕೆ ಪ್ರತಿಭಾವಂತ ವಿದ್ಯಾರ್ಥಿನಿ ಪಿಯುಸಿಯಲ್ಲಿ ಐದು ವಿಷಯಗಳಲ್ಲಿಯೇ ಶೇ.93 ರಷ್ಟು ಅಂಕ ಪಡೆದಿದ್ದಳು. ಆದರೆ ಈ ಫಲಿತಾಂಶವನ್ನು ನೋಡಿ ಸಂಭ್ರಮಿಸಲು ಆಕೆಯೇ ಇಲ್ಲವಾಗಿದ್ದಾಳೆ.

    ದಾವಣಗೆರೆಯ ಸಿದ್ದಗಂಗಾ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ಓದುತ್ತಿದ್ದ ಅನುಷಾ ಬಿ ಪ್ರತಿಭಾವಂತ ವಿದ್ಯಾರ್ಥಿನಿ. ಹಾಸ್ಟೆಲ್‌ನಲ್ಲಿದ್ದುಕೊಂಡು ಓದುತ್ತಿದ್ದ ಈಕೆಗೆ ಜೀವನದಲ್ಲಿ ಏನಾದರೂ ಸಾಧಿಸುವ ಅದಮ್ಯ ಬಯಕೆಯಿತ್ತು. ಮಾರ್ಚ್‍ನಲ್ಲಿ ಪಿಯುಸಿಯ ಐದು ವಿಷಯಗಳಿಗೆ ಪರೀಕ್ಷೆ ಬರೆದಿದ್ದಳು. ಕೊರೊನಾ ಲಾಕ್‍ಡೌನ್‍ನಿಂದ ಇಂಗ್ಲಿಷ್ ಪರೀಕ್ಷೆ ಮುಂದೂಡಿದ್ದರಿಂದ ತನ್ನೂರು ಚನ್ನಗಿರಿಯ ತಾಳಿಕಟ್ಟೆಗೆ ತೆರಳಿದ್ದಳು.

    ಇಂಗ್ಲಿಷ್ ವಿಷಯದಲ್ಲೂ ಚೆನ್ನಾಗಿ ಅಂಕಗಳಿಸುವ ಗುರಿ ಹೊಂದಿದ್ದಳು. ಆದರೆ ವಿಧಿಯಾಟವೇ ಬೇರೆಯಾಗಿತ್ತು. ಈಕೆಗೆ ಆರೋಗ್ಯದಲ್ಲಿ ಏರುಪೇರು ಕಂಡು ಬಂದಿದ್ದರಿಂದ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿತ್ತು. ಆದರೆ ಅಲ್ಲಿನ ವೈದ್ಯರು ಉಡುಪಿಯ ಕಸ್ತೂರ್ಬಾ ಆಸ್ಪತ್ರೆಗೆ ಕರೆದುಕೊಂಡು ಹೋಗುವಂತೆ ತಿಳಿಸಿದ್ದರು. ಕಸ್ತೂರ್ಬಾ ಆಸ್ಪತ್ರೆಗೆ ದಾಖಲಿಸಿದ ಬಳಿಕ ವಿದ್ಯಾರ್ಥಿನಿಗೆ ಬ್ಲಡ್ ಕ್ಯಾನ್ಸರ್ ಇರುವುದು ದೃಢಪಟ್ಟಿತ್ತು.

    ಚಿಕಿತ್ಸೆಯ ನಡುವೆಯೂ ಪರೀಕ್ಷೆಗೆ ತಯಾರಿ ನಡೆಸಿದ್ದಳು. ಕಾಲೇಜಿನ ಆಡಳಿತ ಮಂಡಳಿಯವರೂ ಸಾಕಷ್ಟು ಧೈರ್ಯ ತುಂಬಿದ್ದರು. ಪರೀಕ್ಷೆ ಬರೆಯುವ ಆಸೆ ಅವಳಲ್ಲಿತ್ತು. ನೀಟ್ ಪರೀಕ್ಷೆಗೂ ಸಿದ್ಧವಾಗುತ್ತಿದ್ದಳು. ಈ ನಡುವೆ ಇಂಗ್ಲಿಷ್ ಪರೀಕ್ಷೆ ಜೂನ್ 18ಕ್ಕೆ ನಿಗದಿಯಾಯಿತು. ಆದರೆ ಪರೀಕ್ಷೆಯ ಒಂದು ದಿನ ಬಾಕಿ ಇರುವಾಗ ಅನುಷಾ ಅಸುನೀಗಿದ್ದು, ಕುಟುಂಬ ವರ್ಗ ಮತ್ತು ಆಪ್ತ ವಲಯದವರ ದುಃಖ ಮಡುಗಟ್ಟಿತ್ತು.

    ಕಳೆದ ಬುಧವಾರ ಪ್ರಕಟವಾದ ಪಿಯುಸಿ ಫಲಿತಾಂಶದಲ್ಲಿ ಕನ್ನಡ 92, ಭೌತಶಾಸ್ತ್ರ 91, ರಸಾಯನಶಾಸ್ತ್ರ 89, ಗಣಿತ 100, ಜೀವಶಾಸ್ತ್ರ 95 ಅಂಕಗಳಿಸಿದ್ದಾಳೆ. ವೈದ್ಯಳಾಗುವ ಕನಸು ಕಾಣುತ್ತಿದ್ದ ಅನುಷಾಳ ಆಸೆ ಅರ್ಧದಲ್ಲೇ ಮುಗಿದು ಹೋಗಿದೆ. ಫಲಿತಾಂಶದಲ್ಲಿ ಅತ್ಯುತ್ತಮ ಸಾಧನೆ ಮಾಡಿದ್ದು, ಸಂಭ್ರಮಿಸಲು ಅವಳೇ ಇಲ್ಲವಾಗಿದ್ದಾಳೆ.

  • ಎನ್‍ಕೌಂಟರ್ ಆಗಿದ್ದ ದುಬೆ ಸಹಚರನಿಗೆ ಕೊರೊನಾ- ವಿಕಾಸ್ ಮೃತದೇಹ ಪರೀಕ್ಷೆಗೆ ರವಾನೆ

    ಎನ್‍ಕೌಂಟರ್ ಆಗಿದ್ದ ದುಬೆ ಸಹಚರನಿಗೆ ಕೊರೊನಾ- ವಿಕಾಸ್ ಮೃತದೇಹ ಪರೀಕ್ಷೆಗೆ ರವಾನೆ

    ಲಕ್ನೋ: ಮೃತ ಗ್ಯಾಂಗ್‍ಸ್ಟಾರ್ ವಿಕಾಸ್ ದುಬೆ ಸಹಚರನಿಗೆ ಕೊರೊನಾ ಸೋಂಕು ಪತ್ತೆಯಾದ ಹಿನ್ನೆಲೆ ಇಂದು ಎನ್‍ಕೌಂಟರ್ ಗೆ ಬಲಿಯಾದ ವಿಕಾಸ್ ದುಬೆ ಮೃತದೇಹವನ್ನು ಪೊಲೀಸರು ಕೊರೊನಾ ಪರೀಕ್ಷೆಗೆ ಒಳಪಡಿಸಿದ್ದಾರೆ.

    ಕಳೆದ ಎರಡು ದಿನದ ಹಿಂದೆ ವಿಕಾಸ್ ದುಬೆ ಬಲಗೈ ಬಂಟನಂತಿದ್ದ ಅಮರ್ ದುಬೆಯನ್ನು ಪೊಲೀಸರು ಎನ್‍ಕೌಂಟರ್ ಮಾಡಿದ್ದರು. ಈತನ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಮುನ್ನ ಕೊರೊನಾ ಪರೀಕ್ಷೆ ಮಾಡಿಸಿದ್ದು, ಆತನಿಗೆ ಕೊರೊನಾ ಪಾಟಿಸಿವ್ ಬಂದಿತ್ತು. ಈ ಕಾರಣದಿಂದ ಇಂದು ಬೆಳಗ್ಗೆ ಎನ್‍ಕೌಂಟರ್ ಆದ ವಿಕಾಸ್ ದುಬೆ ಮೃತದೇಹವನ್ನು ಕೂಡ ಕೊರೊನಾ ಪರೀಕ್ಷೆಗೆ ಒಳಪಡಿಸುವುದಾಗಿ ಪೊಲೀಸರು ಹೇಳಿದ್ದಾರೆ.

    ಎಂಟು ಮಂದಿ ಪೊಲೀಸರನ್ನು ಅಮಾನುಷವಾಗಿ ಕೊಂದು ಹಾಕಿದ್ದ ಪ್ರಕರಣದಲ್ಲಿ, ಬುಧವಾರ ಉತ್ತರ ಪ್ರದೇಶದ ವಿಶೇಷ ಕಾರ್ಯಪಡೆ ಸಿಬ್ಬಂದಿ ಪ್ರಮುಖ ಆರೋಪಿ ವಿಕಾಸ್ ದುಬೆ ಸಹಚರ ಅಮರ್ ದುಬೆಯನ್ನು ಎನ್‍ಕೌಂಟರ್ ಮಾಡಿತ್ತು. ಎನ್‍ಕೌಂಟರ್ ಗೆ ಬಲಿಯಾದ ಅಮರ್ ದುಬೆ ವಿಕಾಸ್ ದುಬೆ ಅಪ್ತನಾಗಿದ್ದು, ಈತ ಕೂಡ ಪೊಲೀಸರ ಮೇಲೆ ಗುಂಡು ಹಾರಿಸಿದ್ದ. ಅಮರ್ ಹೆಸರು ಕೂಡ ಎಫ್‍ಐಆರ್ ಅಲ್ಲಿ ಉಲ್ಲೇಖವಾಗಿತ್ತು.

    ಗುರುವಾಗ ಮಧ್ಯಪ್ರದೇಶದಲ್ಲಿ ಸೆರೆಸಿಕ್ಕ ವಿಕಾಸ್ ದುಬೆಯನ್ನು ಇಂದು ಮುಂಜಾನೆ ಉತ್ತರ ಪ್ರದೇಶದ ವಿಶೇಷ ಕಾರ್ಯಪಡೆ ಪೊಲೀಸರು ಎನ್‍ಕೌಂಟರ್ ಮಾಡಿದ್ದಾರೆ. ಮಧ್ಯಪ್ರದೇಶದ ಪೊಲೀಸರಿಂದ ದುಬೆಯನ್ನು ವಶಕ್ಕೆ ಪಡೆದು ಕರೆತರುವ ಸಮಯದಲ್ಲಿ ನಮ್ಮ ವಾಹನ ಅಪಘಾತವಾಗಿ ಪಲ್ಟಿಯಾಗಿತ್ತು. ಈ ವೇಳೆ ದುಬೆ ತಮ್ಮ ಪೊಲೀಸರ ಬಂದೂಕನ್ನು ಕಿತ್ತುಕೊಂಡು ನಮ್ಮ ಮೇಲೆ ಹಲ್ಲೆ ಮಾಡಲು ಯತ್ನಿಸಿದಾಗ ಆತನನ್ನು ಎನ್‍ಕೌಂಟರ್ ಮಾಡಿದ್ದೇವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಜುಲೈ 2ರಂದು ರಾತ್ರಿ ಪೊಲೀಸರ ತಂಡ 60 ಪ್ರಕರಣಗಳಲ್ಲಿ ಬೇಕಾಗಿದ್ದ ಆರೋಪಿ ವಿಕಾಸ್ ದುಬೆಯನ್ನು ಬಂಧಿಸಲೆಂದು ದಿಕ್ರು ಗ್ರಾಮಕ್ಕೆ ತೆರಳಿತ್ತು. ಈ ವಿಚಾರ ಮೊದಲೇ ತಿಳಿದಿದ್ದ ವಿಕಾಸ್ ದುಬೆ ಬೆಂಬಲಿಗರು ರಸ್ತೆಗೆ ಅಡ್ಡಲಾಗಿ, ಕಲ್ಲು ಹಾಗೂ ಇಟ್ಟಿಗೆಗಳನ್ನು ಇಟ್ಟಿದ್ದರು. ಇದನ್ನು ತೆರವುಗೊಳಿಸಿ ಪೊಲೀಸರು ದುಬೆ ಅವಿತಿದ್ದ ಮನೆಯತ್ತ ಆಗಮಿಸುತ್ತಿದ್ದರು. ಈ ವೇಳೆ ಗ್ಯಾಂಗ್ ಅವರ ಮೇಲೆ ಗುಂಡಿನ ದಾಳಿ ಮಾಡಿ ಎಂಟು ಮಂದಿ ಪೊಲೀಸರನ್ನು ಕೊಂದು ಹಾಕಿತ್ತು.

  • ಒಂದೂರಿನ ಶವ ಮತ್ತೊಂದು ಊರಲ್ಲಿ – ಮೃತದೇಹ ಕಂಡು ಗ್ರಾಮಸ್ಥರು ಗಾಬರಿ

    ಒಂದೂರಿನ ಶವ ಮತ್ತೊಂದು ಊರಲ್ಲಿ – ಮೃತದೇಹ ಕಂಡು ಗ್ರಾಮಸ್ಥರು ಗಾಬರಿ

    – ವೈದ್ಯಾಧಿಕಾರಿಗಳು ಎಡವಟ್ಟು

    ಮಂಡ್ಯ: ಮಹಾಮಾರಿ ಕೊರೊನಾದಿಂದ ಜನರು ಈಗಾಗಲೇ ಭಯಭೀತರಾಗಿದ್ದಾರೆ. ಇದೀಗ ಜಿಲ್ಲೆಯ ಮಳವಳ್ಳಿ ತಾಲೂಕಿನ ಹೊನಗನಹಳ್ಳಿ ಗ್ರಾಮದಲ್ಲಿ ಶವ ಕಂಡು ಗ್ರಾಮಸ್ಥರು ಗಾಬರಿಯಾಗಿದ್ದಾರೆ.

    ನಾಗರಾಜು (50) ಸಾವನ್ನಪ್ಪಿರುವ ವ್ಯಕ್ತಿ. ನಾಗರಾಜು ಮೂಲತಃ ಟಿ.ನರಸಿಪುರ ತಾಲೂಕಿನ ಮುಸುಕನಕೊಪ್ಪಲು ಗ್ರಾಮದವರು. ಅನೇಕ ವರ್ಷಗಳಿಂದ ಬೆಂಗಳೂರಿನಲ್ಲಿ ವಾಸವಿದ್ದರು. ಆದರೆ ಬೆಂಗಳೂರಿನಲ್ಲಿ ದಿನೇ ದಿನೇ ಕೊರೊನಾ ಸೋಂಕಿತರ ಸಂಖ್ಯೆ ಹಚ್ಚಾಗುತ್ತಿದೆ. ಇದರಿಂದ ಗಾಬರಿಗೊಂಡು ನಾಗರಾಜು ಮಂಗಳವಾರ ಬೆಂಗಳೂರಿನಿಂದ ಹೊರಟ್ಟಿದ್ದಾರೆ. ಆದರೆ ತಮ್ಮ ಗ್ರಾಮಕ್ಕೆ ಹೋಗುವಷ್ಟಲ್ಲಿ ಕತ್ತಲಾಗುತ್ತದೆ ಎಂದು ತಮ್ಮ ಸಂಬಂಧಿಕರ ಮನೆಯಿದ್ದ ಹೊನಗನಹಳ್ಳಿಗೆ ಬಂದಿದ್ದರು.

    ಮಂಗಳವಾರ ರಾತ್ರಿ ಉಸಿರಾಟದ ಸಮಸ್ಯೆಯಿಂದ ಕೊಳ್ಳೆಗಾಲ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ನಾಗರಾಜು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ನಂತರ ಸಂಬಂಧಿಕರು ನಾಗರಾಜು ಶವವನ್ನು ಮುಸುಕನಕೊಪ್ಪಲು ಗ್ರಾಮಕ್ಕೆ ತೆಗೆದುಕೊಂಡು ಹೋಗಿದ್ದಾರೆ. ಅಲ್ಲಿ ಇವರಿಗೆ ಕೊರೊನಾ ಪರೀಕ್ಷೆ ಮಾಡಿಸಬೇಕು. ಇಲ್ಲವಾದರೆ ಗ್ರಾಮದಲ್ಲಿ ಅಂತ್ಯಕ್ರಿಯೆ ಮಾಡಲು ಬಿಡುವುದಿಲ್ಲ ಎಂದು ಗ್ರಾಮಸ್ಥರು ಹೇಳಿದ್ದಾರೆ.

    ಕೊನೆಗೆ ಸಂಬಂಧಿಕರು ಹೊನಗನಹಳ್ಳಿ ಗ್ರಾಮಕ್ಕೆ ಶವ ತೆಗೆದುಕೊಂಡು ಬಂದು ಮನೆಯೊಂದರ ಮುಂಭಾಗದಲ್ಲಿ ಇಟ್ಟಿದ್ದಾರೆ. ಈ ಶವ ಕಂಡು ಗ್ರಾಮಸ್ಥರು ಗಾಬರಿಯಾಗಿದ್ದಾರೆ. ಅಲ್ಲದೇ ಇವರಿಗೆ ಕೊರೊನಾ ಪರೀಕ್ಷೆ ಮಾಡಿಸದೆ ಅಂತ್ಯಸಂಸ್ಕಾರ ಮಾಡಲು ಬಿಡುವುದಿಲ್ಲ ಎಂದು ಹೇಳಿದ್ದಾರೆ. ನಂತರ ಸಂಬಂಧಿಕರು ವೈದ್ಯರಿಗೆ ಫೋನ್ ಮಾಡಿ ಹೇಳಿದ್ದಾರೆ. ಆದರೆ ವೈದ್ಯರು ತಡವಾಗಿ ಬಂದಿದ್ದಲ್ಲದೇ, ನಾವು ಶವಕ್ಕೆ ಕೋವಿಡ್ ಪರೀಕ್ಷೆ ಮಾಡುವುದಿಲ್ಲ. ಬೇಕಿದ್ದರೆ ಅವರ ಸಂಪರ್ಕಿತರಿಗೆ ಕೋವಿಡ್ ಪರೀಕ್ಷೆ ಮಾಡುತ್ತೇವೆ ಎಂದು ಹೇಳಿ ಗ್ರಾಮದಿಂದ ಹೋಗಿದ್ದಾರೆ.

    ವೈದ್ಯಾಧಿಕಾರಿಗಳು ಎಡವಟ್ಟು:
    ಕೊನೆಗೆ ಮುಸುಕನಕೊಪ್ಪಲು ಗ್ರಾಮಸ್ಥರು ಊರಿನ ಹೊರಗಡೆ ಶವ ಸಂಸ್ಕಾರ ಮಾಡಲು ಒಪ್ಪಿಗೆ ನೀಡಿದ್ದಾರೆ. ಜಿಲ್ಲೆಯ ಹೊನಗನಹಳ್ಳಿಯಿಂದ ಮುಸುಕನಕೊಪ್ಪಲಿಗೆ ಶವ ರವಾನೆ ಮಾಡುವಾಗಲೂ ವೈದ್ಯಾಧಿಕಾರಿಗಳ ಮತ್ತೊಂದು ಎಡವಟ್ಟು ಮಾಡಿದ್ದಾರೆ.

    ವೈದ್ಯಾಧಿಕಾರಿಗಳು ಶವ ರವಾನೆಗೆ ಅಂಬ್ಯುಲೆನ್ಸ್ ಹಾಗೂ ಸಿಬ್ಬಂದಿಯನ್ನು ಕಳಿಸದೆ ಎಡವಟ್ಟು ಮಾಡಿದ್ದಾರೆ. ಕುಟುಂಬಸ್ಥರಿಗೆ ಎರಡು ಪಿಪಿಇ ಕಿಟ್ ನೀಡಿ ನೀವೇ ಮಾಡಿಕೊಳ್ಳಿ ಎಂದು ಹೇಳಿದ್ದಾರೆ. ಕೊನೆಗೆ ಸಂಬಂಧಿಕರು ಪಿಪಿಇ ಕಿಟ್ ಹಾಕಿಕೊಂಡು ಖಾಸಗಿ ವಾಹನದಲ್ಲಿ ಶವ ತೆಗೆದುಕೊಂಡು ಹೋಗಿದ್ದಾರೆ.

  • ದೇಶದಲ್ಲಿ ಇದೂವರೆಗೆ 1 ಕೋಟಿ ಮಂದಿಗೆ ಕೊರೊನಾ ಪರೀಕ್ಷೆ: ಐಸಿಎಂಆರ್

    ದೇಶದಲ್ಲಿ ಇದೂವರೆಗೆ 1 ಕೋಟಿ ಮಂದಿಗೆ ಕೊರೊನಾ ಪರೀಕ್ಷೆ: ಐಸಿಎಂಆರ್

    ನವದೆಹಲಿ: ದೇಶದಲ್ಲಿ ಕೊರೊನಾ ವೈರಸ್ ಸೋಂಕು ಪತ್ತೆ ಹಚ್ಚಲು ಈವರೆಗೂ ಒಂದು ಕೋಟಿ ಮಂದಿಯನ್ನು ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಐಸಿಎಂಆರ್ ಹೇಳಿದೆ.

    ಎಲ್ಲ ರಾಜ್ಯಗಳಲ್ಲೂ ಸೋಂಕು ಹೆಚ್ಚಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಪರೀಕ್ಷೆಗಳನ್ನು ಹೆಚ್ಚು ಮಾಡಿದೆ. ಕಳೆದ 14 ದಿನಗಳಿಂದ ಪ್ರತಿನಿತ್ಯ ಸರಾಸರಿ 2.15 ಲಕ್ಷ ಮಂದಿಯನ್ನು ಪರೀಕ್ಷೆಗೆ ಒಳಪಡಿಸಲಾಗುತ್ತಿದೆ. ಇಂದು ಬೆಳಗ್ಗೆ 11 ಗಂಟೆ ವೇಳೆಗೆ ಒಂದು ಕೋಟಿ (1,00,04,101) ಪರೀಕ್ಷೆಗಳು ಪೂರ್ಣಗೊಂಡಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

    ಒಂದು ಕೋಟಿ ಪರೀಕ್ಷೆಗಳ ಪೈಕಿ 6,97,413 ಮಂದಿಯಲ್ಲಿ ಸೋಂಕು ದೃಢವಾಗಿದ್ದು, ಈವರೆಗೂ 19,693 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ಸದ್ಯ ದೇಶದಲ್ಲಿ 2,53,287 ಸಕ್ರಿಯ ಪ್ರಕರಣಗಳಿದ್ದು, 4,24,433 ಮಂದಿ ಗುಣಮುಖವಾಗಿದ್ದಾರೆ.

    ಪರೀಕ್ಷೆ ಸಾಮರ್ಥ್ಯ ಹೆಚ್ಚಿಸಲು ಐಸಿಎಂಆರ್ 788 ಸರ್ಕಾರಿ, 317 ಖಾಸಗಿ ಲ್ಯಾಬ್‍ಗಳಿಗೆ ದೇಶದ್ಯಾಂತ ಅನುಮತಿ ನೀಡಿದೆ. ಒಟ್ಟು 1,105 ಲ್ಯಾಬ್‍ಗಳ ಪೈಕಿ, 592 ಆರ್‌ಟಿ – ಪಿಸಿಆರ್, 421 ಟ್ರೊನಾಟ್ ಲ್ಯಾಬ್ಸ್, 92 ಎನ್‍ಎಟಿ ಲ್ಯಾಬ್‍ಗಳನ್ನು ಒಳಗೊಂಡಿದೆ.

    ಪ್ರತಿನಿತ್ಯ ಮೂರು ಲಕ್ಷ ಪರೀಕ್ಷೆಗಳನ್ನು ನಡೆಸಲು ಚಿಂತಿಸಿದ್ದು, ಮಹಾರಾಷ್ಟ್ರ, ತಮಿಳುನಾಡು, ಕರ್ನಾಟಕ, ರಾಜಸ್ಥಾನ, ಆಂಧ್ರ ಪ್ರದೇಶದಲ್ಲಿ ಪರೀಕ್ಷೆ ವೇಗ ಹೆಚ್ಚಿಸಲಾಗಿದೆ. ಹೆಚ್ಚು ಕೊರೊನಾ ಪೀಡಿತ ರಾಜ್ಯಗಳಲ್ಲಿ ಮುಂದಿನ ಹಂತಗಳಲ್ಲಿ ಟೆಸ್ಟಿಂಗ್ ಹೆಚ್ಚಿಸಲಿದ್ದೇವೆ ಎಂದು ಐಸಿಎಂಆರ್ ಹೇಳಿದೆ.