Tag: Thailand-Cambodia Conflict

  • ಭಾರತ-ಪಾಕ್‌ನಂತೆಯೇ ಥಾಯ್ಲೆಂಡ್‌-ಕಾಂಬೋಡಿಯಾ ಯುದ್ಧ ನಿಲ್ಲಿಸಿದ್ದು ನಾನೇ: ಟ್ರಂಪ್‌

    ಭಾರತ-ಪಾಕ್‌ನಂತೆಯೇ ಥಾಯ್ಲೆಂಡ್‌-ಕಾಂಬೋಡಿಯಾ ಯುದ್ಧ ನಿಲ್ಲಿಸಿದ್ದು ನಾನೇ: ಟ್ರಂಪ್‌

    ನೋಮ್ ಪೆನ್: ಥೈಲ್ಯಾಂಡ್ ಶನಿವಾರ ತಡರಾತ್ರಿ ಕಾಂಬೋಡಿಯಾ ಜೊತೆಗಿನ ಕದನ ವಿರಾಮಕ್ಕೆ ಒಪ್ಪಿಕೊಂಡಿರುವುದಾಗಿ ಘೋಷಿಸಿತು.

    ಥೈಲ್ಯಾಂಡ್ ಜೊತೆಗಿನ ಗಡಿ ಸಂಘರ್ಷವನ್ನು ನಿಲ್ಲಿಸಲು ಕಾಂಬೋಡಿಯಾ ಕದನ ವಿರಾಮದ ಬಗ್ಗೆ ಚರ್ಚಿಸಲು ಸಿದ್ಧವಾಗಿದೆ ಎಂದು ಪ್ರಧಾನಿ ಹನ್ ಮಾನೆಟ್ ಭಾನುವಾರ ಹೇಳಿದ್ದಾರೆ. ಕದನ ವಿರಾಮಕ್ಕೆ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಮಧ್ಯಪ್ರವೇಶವನ್ನು ಸ್ವಾಗತಿಸಿದ್ದಾರೆ.

    ಥೈಲ್ಯಾಂಡ್ ಜನರೊಂದಿಗೆ ಸಮನ್ವಯ ಸಾಧಿಸಲು ತಮ್ಮ ವಿದೇಶಾಂಗ ಸಚಿವರು ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಅವರೊಂದಿಗೆ ಮಾತನಾಡುತ್ತಾರೆ ಎಂದು ಹನ್ ಮಾನೆಟ್ ಹೇಳಿದ್ದಾರೆ. ಆದರೆ, ಯಾವುದೇ ಒಪ್ಪಂದವನ್ನು ರದ್ದುಗೊಳಿಸುವುದರ ವಿರುದ್ಧ ಬ್ಯಾಂಕಾಕ್‌ಗೆ ಎಚ್ಚರಿಕೆ ನೀಡಿದ್ದಾರೆ.

    ಭಾರತ-ಪಾಕಿಸ್ತಾನ ರೀತಿಯಲ್ಲಿಯೇ ಕಾಂಬೋಡಿಯಾ-ಥಾಯ್ಲೆಂಡ್‌ ಕದನ ವಿರಾಮಕ್ಕೆ ಮಧ್ಯಸ್ಥಿಕೆ ವಹಿಸಿದ್ದೇನೆ ಎಂದು ಟ್ರಂಪ್‌ ಪುನರುಚ್ಚರಿಸಿದ್ದಾರೆ. ವ್ಯಾಪಾರ ಒಪ್ಪಂದದ ಎಚ್ಚರಿಕೆ ನೀಡಿ ಕದನ ವಿರಾಮ ಘೋಷಿಸುವಂತೆ ಮಾಡಿದ್ದೇವೆ ಎಂದು ಟ್ರಂಪ್‌ ತಿಳಿಸಿದ್ದಾರೆ.

    ಟ್ರೂತ್‌ ಸೋಷಿಯಲ್‌ ಮೀಡಿಯಾದಲ್ಲಿ, ಕಾಂಬೋಡಿಯಾ ಮತ್ತು ಥಾಯ್ಲೆಂಡ್‌ನ ಪ್ರಧಾನಿಗಳ ಜೊತೆ ಮಾತನಾಡಿದೆ. ಯುದ್ಧ ನಿಲ್ಲುವ ತನಕ ನಿಮ್ಮೊಂದಿಗೆ ವ್ಯಾಪಾರ ಒಪ್ಪಂದ ಮಾಡುವುದಿಲ್ಲ ಎಂದು ಹೇಳಿ ಕದನ ವಿರಾಮಕ್ಕೆ ಒಪ್ಪಿಸಿದೆ ಎಂದು ಪೋಸ್ಟ್‌ ಹಂಚಿಕೊಂಡಿದ್ದಾರೆ.

    ಹಿಂದೂ ದೇಗುಲ ವಿಚಾರಕ್ಕಾಗಿ ಕಾಂಬೋಡಿಯಾ ಮತ್ತು ಥಾಯ್ಲೆಂಡ್‌ ಗಡಿಯಲ್ಲಿ ಸಂಘರ್ಷ ನಡೆಯುತ್ತಿದೆ. ಯುದ್ಧದಿಂದಾಗಿ 33 ಮಂದಿ ಬಲಿಯಾಗಿದ್ದಾರೆ.

  • ಕಾಂಬೋಡಿಯಾ-ಥೈಲ್ಯಾಂಡ್‌ ಘರ್ಷಣೆ – ಗಡಿ ಪ್ರದೇಶಗಳಿಗೆ ತೆರಳದಂತೆ ಭಾರತೀಯ ಪ್ರಜೆಗಳಿಗೆ ಸಲಹೆ

    ಕಾಂಬೋಡಿಯಾ-ಥೈಲ್ಯಾಂಡ್‌ ಘರ್ಷಣೆ – ಗಡಿ ಪ್ರದೇಶಗಳಿಗೆ ತೆರಳದಂತೆ ಭಾರತೀಯ ಪ್ರಜೆಗಳಿಗೆ ಸಲಹೆ

    – ಸಂಘರ್ಷದಲ್ಲಿ ಎರಡೂ ದೇಶಗಳಿಂದ ಮೃತರ ಸಂಖ್ಯೆ 32ಕ್ಕೆ ಏರಿಕೆ

    ನೋಮ್ ಪೆನ್: ಕಾಂಬೋಡಿಯಾ ಮತ್ತು ಥೈಲ್ಯಾಂಡ್‌ (Thailand-Cambodia Conflict) ಗಡಿ ಘರ್ಷಣೆ ಉದ್ವಿಗ್ನತೆ ತಾರಕಕ್ಕೇರಿದೆ. ಈ ಹಿನ್ನೆಲೆಯಲ್ಲಿ ಗಡಿ ಪ್ರದೇಶಗಳಿಗೆ ಪ್ರಯಾಣಿಸದಂತೆ ಭಾರತೀಯ ಪ್ರಜೆಗಳಿಗೆ ರಾಯಭಾರ ಕಚೇರಿ ಸಲಹೆ ನೀಡಿದೆ.

    ಆಗ್ನೇಯ ಏಷ್ಯಾದ ಕಾಂಬೋಡಿಯಾ-ಥೈಲ್ಯಾಂಡ್ ಗಡಿಯಲ್ಲಿ ನಡೆಯುತ್ತಿರುವ ಘರ್ಷಣೆಗಳ ಹಿನ್ನೆಲೆಯಲ್ಲಿ, ಭಾರತೀಯ ಪ್ರಜೆಗಳು ಗಡಿ ಪ್ರದೇಶಗಳಿಗೆ ಪ್ರಯಾಣಿಸುವುದನ್ನು ನಿಲ್ಲಿಸಲು ಸೂಚಿಸಲಾಗಿದೆ ಎಂದು ರಾಯಭಾರ ಕಚೇರಿಯು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ ಹೇಳಿಕೆಯಲ್ಲಿ ತಿಳಿಸಿದೆ. ಇದನ್ನೂ ಓದಿ: ಅಂದು ಇಂಡಿಯಾ ಔಟ್‌ – ಇಂದು ಸೇನಾ ಕಚೇರಿಯಲ್ಲೇ ದೊಡ್ಡ ಕಟೌಟ್‌ | ಇದು ಮೋದಿ ಮ್ಯಾಜಿಕ್‌

    ಕಾಂಬೋಡಿಯಾದ ರಾಜಧಾನಿ ನೋಮ್ ಪೆನ್‌ನಲ್ಲಿರುವ ರಾಯಭಾರ ಕಚೇರಿಯು ಭಾರತೀಯ ಪ್ರಜೆಗಳಿಗೆ ತುರ್ತು ಸಂಪರ್ಕ ಮಾಹಿತಿಯನ್ನು ಹಂಚಿಕೊಂಡಿದೆ. ಯಾವುದೇ ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ, ಭಾರತೀಯ ಪ್ರಜೆಗಳು ಭಾರತದ ರಾಯಭಾರ ಕಚೇರಿ, ನೋಮ್ ಪೆನ್ ಅನ್ನು +855 92881676 ಗೆ‌ ಕರೆ ಮಾಡಿ ಸಂಪರ್ಕಿಸಬಹುದು ಎಂದು ಸೂಚಿಸಿದೆ.

    ಕಾಂಬೋಡಿಯಾ ಮತ್ತು ಥೈಲ್ಯಾಂಡ್ ನಡುವಿನ ಘರ್ಷಣೆಗಳು ಶನಿವಾರ ಮೂರನೇ ದಿನಕ್ಕೆ ಕಾಲಿಟ್ಟಿವೆ. ಕಾಂಬೋಡಿಯಾದ ರಕ್ಷಣಾ ಸಚಿವಾಲಯವು ಈವರೆಗೆ ಹೋರಾಟದಲ್ಲಿ 13 ಜನರು ಸಾವನ್ನಪ್ಪಿದ್ದಾರೆ ಎಂದು ವರದಿ ಮಾಡಿದೆ. ಇದರಲ್ಲಿ ಎಂಟು ನಾಗರಿಕರು ಮತ್ತು ಐದು ಸೈನಿಕರು ಸೇರಿದ್ದಾರೆ. 71 ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಇದನ್ನೂ ಓದಿ: ಶಿವನ ದೇವಸ್ಥಾನಕ್ಕಾಗಿ ಥಾಯ್ಲೆಂಡ್, ಕಾಂಬೋಡಿಯಾ ಮಧ್ಯೆ ಗಡಿಯಲ್ಲಿ ಘರ್ಷಣೆ!

    ಶುಕ್ರವಾರ ಐದು ಸೈನಿಕರು ಸಾವನ್ನಪ್ಪಿದ್ದಾರೆ ಎಂದು ಥಾಯ್ ಸೇನೆ ತಿಳಿಸಿದೆ. ಇದರಿಂದಾಗಿ 14 ನಾಗರಿಕರು ಮತ್ತು ಆರು ಸೈನಿಕರು ಸೇರಿದಂತೆ ಥೈಲ್ಯಾಂಡ್‌ನ ಸಾವಿನ ಸಂಖ್ಯೆ 20 ಕ್ಕೆ ತಲುಪಿದೆ. ಎರಡೂ ದೇಶಗಳಿಂದ ಒಟ್ಟು ಮೃತರ ಸಂಖ್ಯೆ 32ಕ್ಕೆ ಏರಿಕೆಯಾಗಿದೆ.