Tag: Thakur Anoop Singh

  • ‘ಉದ್ಘರ್ಷ’ದಿಂದ ಎದ್ದು ಬಂದರು ದೇಸಾಯಿ

    ‘ಉದ್ಘರ್ಷ’ದಿಂದ ಎದ್ದು ಬಂದರು ದೇಸಾಯಿ

    ಬೆಂಗಳೂರು: ಕನ್ನಡ ಸಿನಿಮಾ ಇತಿಹಾಸವನ್ನೊಮ್ಮೆ ತಿರುಗಿ ನೋಡಿದರೆ ದೇಸಾಯಿ ತಮ್ಮ ಸಿನಿಮಾಗಳ ಮೂಲಕ ತಮ್ಮದೇ ಆದ ಸೊಗಡನ್ನು ಉಳಿಸಿಕೊಂಡುಬಂದವರು. ನಡುವೆ ಒಂದಷ್ಟು ಸಿನಿಮಾಗಳಲ್ಲಿ ಅದು ಘಮ ಕಳೆದುಕೊಂಡಿದ್ದನ್ನು ಸ್ವತಃ ದೇಸಾಯಿಯೇ ಒಪ್ಪಿಕೊಂಡಿದ್ದಾರೆ. ಇವತ್ತು ರಿಲೀಸಾಗಿರುವ ಉದ್ಘರ್ಷ ಸಿನಿಮಾವನ್ನು ನೋಡಿದ ಯಾರಿಗೇ ಆದರೂ ಸುನೀಲ್ ಕುಮಾರ್ ದೇಸಾಯಿ ಮತ್ತೊಂದು ಇನ್ನಿಂಗ್ಸ್ ಆರಂಭಿಸಿದ್ದಾರೆ ಅನ್ನಿಸದೇ ಇರಲಾರದು. ಯಾಕೆಂದರೆ, ಈ ಕಾಲಕ್ಕೆ ತಕ್ಕಂತೆ ಅಪ್‍ಡೇಟ್ ಆಗಿ, ರೋಚಕ ಸಿನಿಮಾಗಳನ್ನು ಇಷ್ಟಪಡುವ ವರ್ಗಕ್ಕೆಂದೇ ದೇಸಾಯಿ `ಉದ್ಘರ್ಷ’ವನ್ನು ಹೆಣೆದುಕೊಟ್ಟಿದ್ದಾರೆ.

    ಕೊಲೆಯೊಂದರ ಸುತ್ತ ನಡೆಯುವ ಕಥೆ, ಅದಕ್ಕೊಂದು ಉಪಕತೆ ಸೇರಿಸಿ ಕ್ಷಣಕ್ಷಣಕ್ಕೂ ಗಾಬರಿ ಹುಟ್ಟಿಸುವ ಸನ್ನಿವೇಶಗಳನ್ನು ಸೃಷ್ಟಿಸಿ ಉದ್ಘರ್ಷವಾಗಿಸಿದ್ದಾರೆ ನಿರ್ದೇಶಕ ದೇಸಾಯಿ. ದಕ್ಷಿಣ ಭಾರತದ ಖ್ಯಾತ ಖಳನಟರೆಲ್ಲಾ ಇಲ್ಲಿ ಒಂದಾಗಿ ನಟಿಸಿದ್ದಾರೆ. ಠಾಕೂರ್ ಅನೂಪ್ ಸಿಂಗ್ ಬರೀ ವಿಲನ್ ಮಾತ್ರವಲ್ಲ, ಹೀರೋ ಆಗಿ ಕೂಡಾ ನೆಲೆ ನಿಲ್ಲಬಹುದು ಅನ್ನೋದು ಇಲ್ಲಿ ರುಜುವಾತಾಗಿದೆ.

    ಇದು ಥ್ರಿಲ್ಲರ್ ಮತ್ತು ಆಕ್ಷನ್ ವರ್ಗಕ್ಕೆ ಸೇರಿದ ಸಿನಿಮಾ ಆಗಿರೋದರಿಂದ ಒಂದಿಷ್ಟು ರಕ್ತದ ಕಲೆ, ಹೊಡೆದಾಟಗಳು ಹೆಚ್ಚಿವೆ. ಆದರೆ ಅವು ಅತಿರಂಜಕವೆನಿಸದೇ ಸಂದರ್ಭಕ್ಕೆ ಸೂಕ್ತವಾಗಿರೋದು ಸಮಾಧಾನದ ವಿಷಯ. ಬಹುತೇಕ ಸಿನಿಮಾ ದಟ್ಟಾರಣ್ಯದಲ್ಲೇ ಸಾಗುತ್ತದೆ. ಒಬ್ಬರ ಬೆನ್ನಟ್ಟಿ ಒಬ್ಬರು ಸಾಗೋ ದಾರಿಯಲ್ಲಿ ಬೆಚ್ಚಿಬೀಳುವಂಥಾ ಘಟನೆಗಳು, ಅದರೊಳಗೊಂದು ಪ್ರೀತಿಯ ಎಳೆ, ದ್ವೇಷ, ಹಣಕ್ಕಾಗಿ ಏನನ್ನು ಬೇಕಾದರೂ ಮಾಡುವ ದುಷ್ಟರ ಜಾಡು ಎಲ್ಲವೂ ತೆರೆದುಕೊಳ್ಳುತ್ತಾ ಸಾಗುತ್ತದೆ.

    ಹಿಂದೆ ಸುನೀಲ್ ಕುಮಾರ್ ದೇಸಾಯಿ ತರ್ಕ, ನಿಷ್ಕರ್ಷದಂಥಾ ಥ್ರಿಲ್ಲರ್ ಎಲಿಮೆಂಟುಗಳಿದ್ದ ಸಿನಿಮಾಗಳನ್ನು ಮಾಡಿದ್ದವರು. ಆಗ ಮೊಬೈಲ್ ಫೋನಿನ ಕಲ್ಪನೆಯೇ ಇರಲಿಲ್ಲ. ಆದರಿದು ಮೊಬೈಲ್ ಯುಗ. ಆ ಮೊಬೈಲೇ ಚಿತ್ರದ ಟರ್ನಿಂಗ್ ಪಾಯಿಂಟ್‍ಗಳಲ್ಲಿ ಒಂದಾಗಿರುವುದು ನಿರ್ದೇಶಕರು ಅಪ್‍ಡೇಟ್ ಆಗಿರೋದನ್ನು ಸೂಚಿಸುತ್ತದೆ. ಒಟ್ಟಾರೆಯಾಗಿ ಸಣ್ಣದೊಂದು ಕಥೆ ಮತ್ತು ಗಟ್ಟಿಯಾದ ಚಿತ್ರಕತೆಯನ್ನಿಟ್ಟುಕೊಂಡು ತಯಾರಿಸಿರುವ ದೇಸಾಯಿ ಬ್ರಾಂಡ್‍ನ ಈ ಸಿನಿಮಾ ಎಲ್ಲರಿಗೂ ರುಚಿಸಬಲ್ಲದು.

    ರೇಟಿಂಗ್: 4/5

  • ಉದ್ಘರ್ಷ: ಚಿತ್ರಕಥೆಯೇ ನಿಜವಾದ ಹೀರೋ ಅಂದ್ರು ದೇಸಾಯಿ!

    ಉದ್ಘರ್ಷ: ಚಿತ್ರಕಥೆಯೇ ನಿಜವಾದ ಹೀರೋ ಅಂದ್ರು ದೇಸಾಯಿ!

    ಬೆಂಗಳೂರು: ಎಂಬತ್ತರ ದಶಕದಲ್ಲಿಯೇ ಈಗಿನ ಕಾಲಮಾನಕ್ಕೆ ತಕ್ಕುದಾದ ಚಿತ್ರಗಳನ್ನು ನಿರ್ದೇಶನ ಮಾಡಿದ್ದವರು ಸುನೀಲ್ ಕುಮಾರ್ ದೇಸಾಯಿ. ಅವರು ಬಹು ಕಾಲದ ನಂತರ ನಿರ್ದೇಶನ ಮಾಡಿರೋ ಉದ್ಘರ್ಷ ಚಿತ್ರದ ಬಗ್ಗೆ ಜನ ಆಕರ್ಷಿತರಾಗಿರೋದು ಕೂಡಾ ದೇಸಾಯಿಯವರ ಕ್ರಿಯೇಟಿವಿಟಿ ಮತ್ತು ದೂರದೃಷ್ಟಿಯ ಕಾರಣದಿಂದಲೇ.

    ಹಾಗೆ ಎಲ್ಲೆಡೆ ವ್ಯಾಪಕವಾಗಿ ಟಾಕ್ ಕ್ರಿಯೇಟ್ ಮಾಡಿರೋ ಉದ್ಘರ್ಷ ಚಿತ್ರ ಈ ವಾರ ಬಿಡುಗಡೆಗೊಳ್ಳುತ್ತಿದೆ. ಈ ಸಿನಿಮಾ ಮೂಲಕ ದಕ್ಷಿಣ ಭಾರತೀಯ ಚಿತ್ರರಂಗದ ಖ್ಯಾತ ಖಳನಟ ಠಾಕೂರ್ ಅನೂಪ್ ಸಿಂಗ್ ನಾಯಕನಾಗಿದ್ದಾರೆ. ಕಬಾಲಿ ಖ್ಯಾತಿಯ ದನ್ಷಿಕಾ, ತಾನ್ಯಾ ಹೋಪ್ ನಾಯಕಿಯರಾಗಿ ನಟಿಸಿದ್ದಾರೆ. ಇನ್ನುಳಿದಂತೆ ಬೇರೆ ಬೇರೆ ಭಾಷೆಗಳ ಖ್ಯಾತ ನಟನಟಿಯರ ತಾರಾಗಣವೇ ಈ ಚಿತ್ರದಲ್ಲಿದೆ.

    ದೇಸಾಯಿಯವರು ಮನಸು ಮಾಡಿದರೆ ಖ್ಯಾತ ಸ್ಟಾರ್ ನಟರನ್ನೇ ಹೀರೋ ಆಗಿ ಕರೆತರ ಬಹುದಿತ್ತು. ಆದರೆ ದೇಸಾಯಿ ಅವರೇಕೆ ಅಷ್ಟಾಗಿ ಪರಿಚಿತರಲ್ಲದ ನಟನಟಿಯರನ್ನ ಈ ಚಿತ್ರಕ್ಕೆ ಆರಿಸಿಕೊಂಡಿದ್ದಾರೆಂಬ ಪ್ರಶ್ನೆ ಹಲವರಲ್ಲಿದೆ. ಅದಕ್ಕೆ ದೇಸಾಯಿಯವರೇ ಉತ್ತರವನ್ನೂ ಕೊಟ್ಟಿದ್ದಾರೆ. ಈ ಚಿತ್ರದಲ್ಲಿ ಚಿತ್ರಕಥೆಯೇ ಹೀರೋ ಸ್ಥಾನದಲ್ಲಿದೆಯಂತೆ. ಇಲ್ಲಿನ ಪಾತ್ರಗಳೆಲ್ಲವೂ ಅದನ್ನು ನಿರ್ವಹಿಸಿದ ಕಲಾವಿದರನ್ನು ಮೀರಿಕೊಂಡು ವಿಶಿಷ್ಠ ಪಾತ್ರಗಳಾಗಿಯಷ್ಟೇ ಪ್ರೇಕ್ಷಕರನ್ನ ಕಾಡಲಿವೆಯಂತೆ.

    ಒಟ್ಟಾರೆಯಾಗಿ, ಉದ್ಘರ್ಷ ಪ್ರತೀ ಕ್ಷಣವೂ ಪ್ರೇಕ್ಷಕರನ್ನು ತುದೀ ಸೀಟಿಗೆ ತಂದು ಕೂರಿಸುವಷ್ಟು ರೋಚಕವಾಗಿ ಮೂಡಿ ಬಂದಿದೆಯಂತೆ. ಕೇವಲ ಸಸ್ಪೆನ್ಸ್ ಥ್ರಿಲ್ಲರ್ ಚಿತ್ರ ಪ್ರೇಮಿಗಳಿಗೆ ಮಾತ್ರವಲ್ಲದೇ ಎಲ್ಲ ವರ್ಗದ ಪ್ರೇಕ್ಷಕರಿಗೂ ಉದ್ಘರ್ಷ ಇಷ್ಟವಾಗಲಿದೆ ಅನ್ನೋದು ಸುನೀಲ್ ಕುಮಾರ್ ದೇಸಾಯಿ ಅವರ ಭರವಸೆ.

  • ಉದ್ಘರ್ಷದ ಬಗ್ಗೆ ಚಾಲೆಂಜಿಂಗ್ ಸ್ಟಾರ್ ಹೇಳಿದ್ದೇನು?

    ಉದ್ಘರ್ಷದ ಬಗ್ಗೆ ಚಾಲೆಂಜಿಂಗ್ ಸ್ಟಾರ್ ಹೇಳಿದ್ದೇನು?

    ಬೆಂಗಳೂರು: ಸುನೀಲ್ ಕುಮಾರ್ ದೇಸಾಯಿ ಕನ್ನಡ ಚಿತ್ರರಂಗ ಕಂಡ ಅತ್ಯಂತ ಕ್ರಿಯೇಟಿವ್ ನಿರ್ದೇಶಕ. ಕನ್ನಡದಲ್ಲಿ ಒಂದು ಬಗೆಯ ಚಿತ್ರಗಳು ಮಾತ್ರವೇ ಗಿರಕಿ ಹೊಡೆಯುತ್ತಿದ್ದ ಕಾಲದಲ್ಲಿಯೇ ಏಕಾಏಕಿ ಥ್ರಿಲ್ಲರ್ ಚಿತ್ರಗಳ ಮೂಲಕ ಅಚ್ಚರಿ ಹುಟ್ಟಿಸಿದ್ದವರು ದೇಸಾಯಿ. ಇದೀಗ ಅವರು ನಿರ್ದೇಶನ ಮಾಡಿರುವ ಉದ್ಘರ್ಷ ಇದೇ ಮಾರ್ಚ್ 22ರಂದು ತೆರೆ ಕಾಣಲು ರೆಡಿಯಾಗಿದೆ.

    ದೇಸಾಯಿಯವರು ಈ ಸಿನಿಮಾ ಆರಂಭಿಸಿದಾಗಲೇ ಸುದ್ದಿ ಶುರುವಾಗಿತ್ತು. ಯಾಕೆಂದರೆ ಥ್ರಿಲ್ಲರ್ ಚಿತ್ರಗಳ ಮಾಸ್ಟರ್ ಡೈರೆಕ್ಟರ್ ಮತ್ತೆ ಮರಳಿದ್ದಾರೆಂದರೆ ಅಂಥಾ ಸಂಚಲನ ಸೃಷ್ಟಿಯಾಗೋದು ಸಹಜವೇ. ಒಟ್ಟಾರೆಯಾಗಿ ಈ ಚಿತ್ರದ ಅಂತರಾಳ ಏನನ್ನೋದಕ್ಕೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಿಡುಗಡೆ ಮಾಡಿರೋ ಟ್ರೈಲರ್ ಸಾಕ್ಷಿಯಾಗಿದೆ.

    ದರ್ಶನ್ ಬಿಡುಗಡೆ ಮಾಡಿರೋ ಟ್ರೈಲರ್ ಕಡಿಮೆ ಅವಧಿಯಲ್ಲಿಯೇ ಟ್ರೆಂಡ್ ಸೆಟ್ ಮಾಡಿತ್ತು. ಗಾಢವಾದ ಕುತೂಹಲ ಮತ್ತು ಬಾಲಿವುಡ್ ಚಿತ್ರಗಳಿಗೇ ಸೆಡ್ಡು ಹೊಡೆಯುವಂಥಾ ತಾಂತ್ರಿಕ ಶ್ರೀಮಂತಿಕೆಯೂ ಈ ಮೂಲಕವೇ ಪ್ರೇಕ್ಷಕರ ಅರಿವಿಗೆ ಬಂದಿತ್ತು. ಈ ಟ್ರೈಲರ್ ನೋಡಿ ಬಿಡುಗಡೆ ಮಾಡಿರೋ ದರ್ಶನ್ ಅವರೇ ಥ್ರಿಲ್ ಆಗಿದ್ದಾರೆ.

    ದೇಸಾಯಿಯವರು ಯಾವ ಚಿತ್ರವನ್ನೇ ಮಾಡಿದರೂ ಅದರಲ್ಲೊಂದು ಹೊಸತನವಿರುತ್ತೆ. ಉದ್ಘರ್ಷ ಕೂಡಾ ಅಂಥಾದ್ದೇ ಹೊಸತನದಿಂದ ಕೂಡಿರೋ ಸುಳಿವು ಸಿಕ್ಕಿದೆ. ಈ ಸಿನಿಮಾ ಕೂಡಾ ಸೂಪರ್ ಹಿಟ್ ಆಗಲಿ ಅಂತ ದರ್ಶನ್ ಹಾರೈಸಿದ್ದಾರೆ. ದರ್ಶನ್ ಅವರೇ ಮೆಚ್ಚಿಕೊಂಡಿರೋ ಈ ಚಿತ್ರವೀಗ ಐದು ಭಾಷೆಗಳಲ್ಲಿ ಅದ್ಧೂರಿಯಾಗಿ ಬಿಡುಗಡೆಗೆ ಅಣಿಗೊಂಡಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ದರ್ಶನ್‍ಗೆ ಬರೊಬ್ಬರಿ 1 ಕೆಜಿ ತೂಕದ ವಾಚ್ ಗಿಫ್ಟ್ ನೀಡಿದ ಸ್ನೇಹಿತ..!

    ದರ್ಶನ್‍ಗೆ ಬರೊಬ್ಬರಿ 1 ಕೆಜಿ ತೂಕದ ವಾಚ್ ಗಿಫ್ಟ್ ನೀಡಿದ ಸ್ನೇಹಿತ..!

    ಬೆಂಗಳೂರು: ಸುನೀಲ್ ಕುಮಾರ್ ದೇಸಾಯಿ ನಿರ್ದೇಶನದ ‘ಉದ್ಘರ್ಷ’ ಸಿನಿಮಾದ ಟ್ರೈಲರ್ ಅನ್ನು ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಬುಧವಾರ ಅನಾವರಣಗೊಳಿಸಿ ಚಿತ್ರತಂಡಕ್ಕೆ ಶುಭ ಹಾರೈಸಿದ್ದರು. ಈ ವೇಳೆ ಅವರಿಗೆ ಬರೊಬ್ಬರಿ 1 ಕೆಜಿ ತೂಕದ ವಾಚ್ ಉಡುಗೊರೆಯಾಗಿ ಸಿಕ್ಕಿದೆ.

    ನಟ ಠಾಕೂರ್ ಅನೂಪ್ ಸಿಂಗ್ ಅವರು ದರ್ಶನ್ ಅವರಿಗೆ 1 ಕೆಜಿ ತೂಕದ ವಾಚ್ ಗಿಫ್ಟ್ ನೀಡಿದ್ದಾರೆ. ದರ್ಶನ್ ಅವರು ಸ್ನೇಹಿತ ಅನೂಪ್ ಸಿಂಗ್ ಹಾಗೂ ಸುನೀಲ್ ಕುಮಾರ್ ದೇಸಾಯಿ ಆಹ್ವಾನಿಸಿದ್ದರಿಂದ ಟ್ರೈಲರ್ ಲಾಂಚ್ ಕಾರ್ಯಕ್ರಮಕ್ಕೆ ಅತಿಥಿಯಾಗಿ ಆಗಮಿಸಿದ್ದರು.

    ಅನೂಪ್ ಸಿಂಗ್ ಅವರು ದರ್ಶನ್ ಅಭಿನಯದ ‘ಯಜಮಾನ’ ಚಿತ್ರದಲ್ಲಿ ವಿಲನ್ ಆಗಿ ಅಭಿನಯಿಸಿದ್ದಾರೆ. ಹೀಗಾಗಿ ಠಾಕೂರ್ ಮತ್ತು ದರ್ಶನ್ ಇಬ್ಬರು ಸ್ನೇಹಿತರಾಗಿದ್ದರು. ‘ಉದ್ಘರ್ಷ’ ಸಿನಿಮಾದಲ್ಲಿ ಅನೂಪ್ ಸಿಂಗ್ ನಾಯಕ ನಟನಾಗಿ ಕಾಣಿಸಿಕೊಂಡಿದ್ದಾರೆ. ಅದಕ್ಕಾಗಿಯೇ ಠಾಕೂರ್ ತನ್ನ ಗೆಳೆಯ ದರ್ಶನ್‍ಗೆ ಒಂದು ಕೆಜಿ ತೂಕದ ವಾಚ್ ನೀಡಿದ್ದಾರೆ. ಆದರೆ ವಾಚಿನ ಬೆಲೆ ಮಾತ್ರ ತಿಳಿಸಲಿಲ್ಲ.

    ಹೊರಗಡೆಯಿಂದ ಬರುವ ಕೆಲವು ಕಲಾವಿದರು, ಕನ್ನಡ ಸಿನಿಮಾದಲ್ಲಿ ಅಭಿನಯಿಸಿ ಹಣ ತೆಗೆದುಕೊಂಡು ಹೋಗುತ್ತಾರೆ. ಆದರೆ ಈ ವಿಚಾರದಲ್ಲಿ ಠಾಕೂರ್ ಅನೂಪ್ ಅವರ ಕಮಿಟ್ ಮೆಂಟ್ ನನಗೆ ತುಂಬಾ ಸಂತಸ ತಂದಿದೆ. ಸಿನಿಮಾದಲ್ಲಿ ಅಭಿನಯಿಸಿ ಡೈಲಾಗ್ ಅಭ್ಯಾಸ ಮಾಡಿ, ಅವರೇ ಡಬ್ ಮಾಡಿದ್ದಾರೆ. ಇದು ನಿಜಕ್ಕೂ ಖುಷಿಯ ವಿಚಾರ” ಎಂದು ದರ್ಶನ್ ಹೇಳಿದ್ದರು.

    ಸುನೀಲ್ ಕುಮಾರ್ ದೇಸಾಯಿ ನಿರ್ದೇಶನ ಈ ಸಿನಿಮಾ ಕನ್ನಡ, ತೆಲುಗು, ತಮಿಳು ಹಾಗೂ ಮಲಯಾಳಂ ಭಾಷೆಯಲ್ಲಿ ಬರುತ್ತಿದೆ. ಕಿಚ್ಚ ಸುದೀಪ್ ಈ ಟ್ರೈಲರ್ ಗೆ ಹಿನ್ನೆಲೆ ಧ್ವನಿ ನೀಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ತೆರೆ ಕಾಣುವ ಮೊದಲೇ ಹೆಚ್ಚಿದ ಬೇಡಿಕೆ, ಮಲಯಾಳಂಗೆ ಡಬ್ ಆಯ್ತು ‘ಉದ್ಘರ್ಷ’

    ತೆರೆ ಕಾಣುವ ಮೊದಲೇ ಹೆಚ್ಚಿದ ಬೇಡಿಕೆ, ಮಲಯಾಳಂಗೆ ಡಬ್ ಆಯ್ತು ‘ಉದ್ಘರ್ಷ’

    ಥ್ರಿಲ್ಲರ್ ಸಿನಿಮಾಗಳ ಮಾಸ್ಟರ್ ಡೈರೆಕ್ಟರ್ ಸುನೀಲ್ ಕುಮಾರ್ ದೇಸಾಯಿ ದಶಕಗಳ ನಂತರ ಮತ್ತೊಂದು ಸಸ್ಪೆನ್ಸ್ ಥ್ರಿಲ್ಲರ್ ಸಿನಿಮಾ ಮಾಡ್ತಾರೆ ಅಂದಾಗಲೇ ಅವರ ಅಭಿಮಾನಿಗಳಲ್ಲಿ ಪುಳಕವುಂಟಾಗಿತ್ತು. ಇನ್ನು ದೇಸಾಯಿ ಉದ್ಘರ್ಷ ಚಿತ್ರದ ಫಸ್ಟ್‌ಲುಕ್, ಫಸ್ಟ್‌ಲುಕ್ ಟೀಸರ್, ಪೋಸ್ಟರ್ಸ್ ಒಂದಕ್ಕೊಂದು ವಿಭಿನ್ನವಾಗಿದ್ದು ಚಿತ್ರ ರಸಿಕರ ನಿರೀಕ್ಷೆಯನ್ನು ಹೆಚ್ಚಿಸಿದೆ.


    ಈ ನಡುವೆ ಇದೇ ಮೊದಲ ಬಾರಿಗೆ ಸುನೀಲ್ ಕುಮಾರ್ ದೇಸಾಯಿ ಬಹು ಭಾಷಾ ಚಿತ್ರ ಮಾಡಿದ್ದು ಉದ್ಘರ್ಷ ಚಿತ್ರವನ್ನು ಕನ್ನಡ ಹಾಗೂ ತೆಲುಗಿನಲ್ಲಿ ಏಕಕಾಲದಲ್ಲಿ ಚಿತ್ರೀಕರಿಸಿದ್ದಾರೆ. ಅಲ್ಲದೇ, ತಮಿಳಿಗೆ ಉಚ್ಚಕಟ್ಟಂ ಅನ್ನೋ ಹೆಸರಿನಲ್ಲಿ ಡಬ್ ಕೂಡ ಮಾಡಿದ್ದಾರೆ. ಆದ್ರೆ, ಈಗ ಲೇಟೆಸ್ಟ್ ವಿಷಯವೆಂದರೆ, ದೇಸಾಯಿ ಚಿತ್ರಕ್ಕೆ ಮಲಯಾಳಂನಲ್ಲೂ ಬೇಡಿಕೆ ಬಂದಿದ್ದು, ಆ ಭಾಷೆಗೂ ಚಿತ್ರವನ್ನು ದೇಸಾಯಿ ಡಬ್ ಮಾಡಿದ್ದಾರೆ. ದೇಸಾಯಿ ಚಿತ್ರಗಳು ಈ ಹಿಂದೆಯೂ ಮಲಯಾಳಂಗೆ ಡಬ್ ಆಗಿದ್ದವು.

    ಈ ಬಗ್ಗೆ ವಿವರಣೆ ನೀಡಿರೋ ದೇಸಾಯಿ, ನನ್ನ ತರ್ಕ, ನಿಷ್ಕರ್ಷ, ಮರ್ಮ ಚಿತ್ರ ಈಗಾಗಲೇ ಮಲಯಾಳಂ ಭಾಷೆಗೆ ಡಬ್ ಆಗಿ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ಪಡೆದಿವೆ. ಇದೇ ಹಿನ್ನೆಲೆಯಲ್ಲಿ ಮಲಯಾಳಂ ಇಂಡಸ್ಟ್ರೀಯಿಂದ ಉದ್ಘರ್ಷಕ್ಕೂ ಬೇಡಿಕೆ ಬಂದ ಹಿನ್ನೆಲೆ, ನಾವೇ ಡಬ್ಬಿಂಗ್ ಮಾಡಿಸುತ್ತಿದ್ದೇವೆ. ಈ ಗಾಗಲೇ ಕನ್ನಡ, ತೆಲುಗು, ತಮಿಳು ಡಬ್ಬಿಂಗ್ ಮುಗಿದಿದ್ದು ಮಲಯಾಳಂ ಭಾಷೆಯ ಡಬ್ಬಿಂಗ್ ಕಾರ್ಯವೂ ಭರದಿಂದ ಸಾಗಿದೆ ಅಂತಾ ಹೇಳಿದ್ದಾರೆ. ಅಲ್ಲದೇ, ಅವರೇ ಹೇಳುವಂತೆ ಶೀಘ್ರದಲ್ಲಿಯೇ ನಾಲ್ಕೂ ಭಾಷೆಗಳಲ್ಲಿ ಶೀಘ್ರದಲ್ಲಿಯೇ ಚಿತ್ರದ ಟ್ರೈಲರ್ ಅನ್ನು ರಿಲೀಸ್ ಮಾಡಲಾಗುತ್ತಿದೆಯಂತೆ.


    ಯಾರೆಲ್ಲ ನಟಿಸಿದ್ದಾರೆ ಗೊತ್ತಾ..?!
    ಇನ್ನು, ಚಿತ್ರದಲ್ಲಿ ಸಿಂಗಂ 3 ಖ್ಯಾತಿಯ ಠಾಕೂರ್ ಅನೂಪ್ ಸಿಂಗ್ ನಾಯಕ ನಟರಾಗಿ ನಟಿಸಿದ್ದರೆ, ತಮಿಳಿನ ಕಬಾಲಿ ಖ್ಯಾತಿಯ ಧನ್ಸಿಕಾ ಹಾಗೂ ನವ ನಟಿ ತಾನ್ಯಾ ಹೋಪ್ ನಾಯಕಿಯರಾಗಿ ಅಭಿನಯಿಸಿದ್ದಾರೆ. ಅಲ್ಲದೇ ಬಾಲಿವುಡ್ ವಿಲನ್ ಕಬೀರ್ ಸಿಂಗ್ ದುಹಾನ್, ತೆಲುಗಿನ ಬಾಹುಬಲಿ ಖ್ಯಾತಿಯ ಪ್ರಭಾಕರ್, ಶ್ರವಣ್ ರಾಘವೇಂದ್ರ, ವಂಶಿ ಕೃಷ್ಣ, ಶ್ರದ್ಧಾ ದಾಸ್ ಮುಂತಾದವರು ಕೂಡ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಬಹುಭಾಷಾ ತಾರೆ, ಕನ್ನಡಿಗ ಕಿಶೋರ್ ಮತ್ತೊಂದು ಪ್ರಮುಖ ಹಾಗೂ ವಿಶಿಷ್ಟ ಪಾತ್ರದಲ್ಲಿ ನಟಿಸಿದ್ದರೆ, ಹರ್ಷಿಕಾ ಪೂಣಚ್ಚ ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಚಿತ್ರಕ್ಕೆ ಪಿ. ರಾಜನ್ ಹಾಗೂ ದಿವಂಗತ ವಿಷ್ಣುವರ್ಧನ್ ಅವರು ಕ್ಯಾಮರಾ ವರ್ಕ್ ಮಾಡಿದ್ದರೆ, ಹಿಂದಿಯ ಖ್ಯಾತ ಮ್ಯೂಸಿಕ್ ಡೈರೆಕ್ಟರ್ ಸಂಜೋಯ್ ಚೌಧುರಿ ಸಂಗೀತ ನೀಡಿದ್ದಾರೆ. ಇನ್ನು ಚಿತ್ರಕ್ಕೆ ನಿರ್ದೇಶಕ ದೇಸಾಯಿ ಅವರ ಸ್ನೇಹಿತ ಆರ್. ದೇವರಾಜ್ ಹಣ ಹೂಡಿದ್ದು, ರಾಜೇಂದ್ರ ಹಾಗೂ ಡಿ. ಮಂಜುನಾಥ್ ಸಹ ನಿರ್ಮಾಪಕರಾಗಿದ್ದಾರೆ. ಡಿ ಕ್ರಿಯೇಶನ್ಸ್ ಬ್ಯಾನರ್ ಅಡಿ ಚಿತ್ರ ಮೂಡಿ ಬಂದಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಮಾಸ್ಟರ್ ಡೈರೆಕ್ಟರ್ ಸುನೀಲ್ ಕುಮಾರ್ ದೇಸಾಯಿ ‘ಉದ್ಘರ್ಷ’ ಶೂಟಿಂಗ್ ಕಂಪ್ಲೀಟ್

    ಮಾಸ್ಟರ್ ಡೈರೆಕ್ಟರ್ ಸುನೀಲ್ ಕುಮಾರ್ ದೇಸಾಯಿ ‘ಉದ್ಘರ್ಷ’ ಶೂಟಿಂಗ್ ಕಂಪ್ಲೀಟ್

    ಬೆಂಗಳೂರು: ಸಸ್ಪೆನ್ಸ್ ಥ್ರಿಲ್ಲರ್ ಚಿತ್ರಗಳ ಮಾಸ್ಟರ್ ಡೈರೆಕ್ಟರ್ ಸುನೀಲ್ ಕುಮಾರ್ ದೇಸಾಯಿ ನಿರ್ದೇಶನದ ಬಹುನಿರೀಕ್ಷಿತ ಉದ್ಘರ್ಷ ಚಿತ್ರದ ಶೂಟಿಂಗ್ ಕಂಪ್ಲೀಟ್ ಆಗಿದೆ. ಚಿತ್ರದ ಬಹುತೇಕ ಶೂಟಿಂಗ್ ಅನ್ನು ಈಗಾಗಲೇ ಕಂಪ್ಲೀಟ್ ಮಾಡಿ, ಎಡಿಟಿಂಗ್ ಕೂಡ ಮುಗಿಸಿರೋ ನಿರ್ದೇಶಕ ಸುನೀಲ್ ಕುಮಾರ್ ದೇಸಾಯಿ, ಸದ್ಯ ಕುಂಬಳಕಾಯಿ ಒಡೆದಿದ್ದಾರೆ.

    ಕನ್ನಡ ಮತ್ತು ತೆಲುಗಿನಲ್ಲಿ ಉದ್ಘರ್ಷ ಹೆಸರಿನಿಂದ ಚಿತ್ರ ತೆರೆಕಾಣಲಿದ್ದು, ತಮಿಳಿನಲ್ಲಿ ಉಚ್ಚಕಟ್ಟಮ್ ಅಂತಾ ಹೆಸರಿಡಲಾಗಿದೆ. ಇನ್ನು ಚಿತ್ರದ ಬಹುತೇಕ ಚಿತ್ರೀಕರಣ ಮಡಿಕೇರಿಯಲ್ಲಿ ನಡೆದಿದ್ದು, ಬೆಂಗಳೂರು, ಹೈದರಾಬಾದ್ ಹಾಗೂ ಕೇರಳದಲ್ಲೂ ಕೆಲ ದೃಶ್ಯಗಳ ಚಿತ್ರೀಕರಣವಾಗಿದೆ. ಚಿತ್ರದಲ್ಲಿ ಸಿಂಗಂ 3 ಖ್ಯಾತಿಯ ಠಾಕೂರ್ ಅನೂಪ್ ಸಿಂಗ್ ನಾಯಕ ನಟರಾಗಿ ನಟಿಸಿದ್ದರೆ, ತಮಿಳಿನ ಕಬಾಲಿ ಖ್ಯಾತಿಯ ಧನ್ಸಿಕಾ ಹಾಗೂ ನವ ನಟಿ ತಾನ್ಯಾ ಹೋಪ್ ನಾಯಕಿಯರಾಗಿ ಅಭಿನಯಿಸಿದ್ದಾರೆ.

    ಅಲ್ಲದೇ ಬಾಲಿವುಡ್ ವಿಲನ್ ಕಬೀರ್ ಸಿಂಗ್ ದುಹಾನ್, ತೆಲುಗಿನ ಬಾಹುಬಲಿ ಖ್ಯಾತಿಯ ಪ್ರಭಾಕರ್, ಶ್ರವಣ್ ರಾಘವೇಂದ್ರ, ವಂಶಿ ಕೃಷ್ಣ, ಶ್ರದ್ಧಾ ದಾಸ್ ಮುಂತಾದವರು ಕೂಡ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಬಹುಭಾಷಾ ತಾರೆ ಕನ್ನಡಿಗ ಕಿಶೋರ್ ಮತ್ತೊಂದು ಪ್ರಮುಖ ಹಾಗೂ ವಿಶಿಷ್ಟ ಪಾತ್ರದಲ್ಲಿ ನಟಿಸಿದ್ದರೆ, ಹರ್ಷಿಕಾ ಪೂಣಚ್ಚ ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

    ಚಿತ್ರಕ್ಕೆ ಪಿ ರಾಜನ್ ಹಾಗೂ ದಿವಂಗತ ವಿಷ್ಣುವರ್ಧನ್ ಅವರ ಕ್ಯಾಮರಾ ವರ್ಕ್ ಮಾಡಿದ್ದರೆ, ಹಿಂದಿಯ ಖ್ಯಾತ ಮ್ಯೂಸಿಕ್ ಡೈರೆಕ್ಟರ್ ಸಂಜೋಯ್ ಚೌಧುರಿ ಸಂಗೀತ ನೀಡಿದ್ದಾರೆ. ಚಿತ್ರಕ್ಕೆ ನಿರ್ದೇಶಕ ದೇಸಾಯಿ ಅವರ ಸ್ನೇಹಿತ ಆರ್. ದೇವರಾಜ್ ಹಣ ಹೂಡಿದ್ದು, ರಾಜೇಂದ್ರ ಹಾಗೂ ಡಿ. ಮಂಜುನಾಥ್ ಸಹ ನಿರ್ಮಾಪಕರಾಗಿದ್ದು, ಡಿ ಕ್ರಿಯೇಶನ್ಸ್ ಬ್ಯಾನರ್ ಅಡಿ ಚಿತ್ರ ಮೂಡಿ ಬಂದಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಉದ್ಘರ್ಷ ಹೀರೋ ನಾನೇ ಅಂದಾಗ ಶಾಕ್ ಆಯ್ತು!: ಅನೂಪ್ ಸಿಂಗ್

    ಉದ್ಘರ್ಷ ಹೀರೋ ನಾನೇ ಅಂದಾಗ ಶಾಕ್ ಆಯ್ತು!: ಅನೂಪ್ ಸಿಂಗ್

    ಬೆಂಗಳೂರು: ಖ್ಯಾತ ಚಿತ್ರ ನಿರ್ದೇಶಕ ಸುನಿಲ್ ದೇಸಾಯಿ ಅವರ ಉದ್ಘರ್ಷ ಸಿನಿಮಾ ಮೂಲಕ ಮೊದಲ ಬಾರಿಗೆ ಸ್ಯಾಂಡಲ್‍ವುಡ್ ನಾಯಕನಟರಾಗಿ ಎಂಟ್ರಿ ಪಡೆಯುತ್ತಿದ್ದಾರೆ ನಟ ಠಾಕೂರ್ ಅನೂಪ್ ಸಿಂಗ್. ಬೆಂಗಳೂರಿನಲ್ಲಿ ಚಿತ್ರ ತಂಡ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ, ಕನ್ನಡಗಿರ ಪ್ರೀತಿ ಮತ್ತು ಆಶೀರ್ವಾದ ಸಿಗುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

    ಮೂಲತಃ ಮರಾಠಿ ಚಿತ್ರೋದ್ಯಮದ ಅನೂಪ್ ಕನ್ನಡಕ್ಕೆ ಹೊಸ ಮುಖವೇನು ಅಲ್ಲ. ಅನೂಪ್ ಸಿನಿ ಜರ್ನಿಯ ಹಿಂದಿನ ಕೆಲ ವಿಶೇಷ ಅಂಶಗಳನ್ನು ಅವರೇ ಹಂಚಿಕೊಂಡರು. ಹಿಂದಿ ಖಾಸಗಿ ವಾಹಿನಿಯ `ಮಹಾಭಾರತ’ ಧಾರಾವಾಹಿ ಬಳಿಕ ನನ್ನ ಜೀವನವೇ ಬದಲಾಯ್ತು. ಆ ಧಾರಾವಾಹಿಯಿಂದಲೇ ಜನರು ಇಂದು ನನ್ನನ್ನು ಗುರುತಿಸುತ್ತಾರೆ. ಧಾರಾವಾಹಿಯಲ್ಲಿಯ ಪಾತ್ರ ನನ್ನಲ್ಲಿ ಹಲವು ಬದಲಾವಣೆಗಳನ್ನು ತಂದಿದೆ ಎಂದು ಸಿನಿ ಬದುಕಿನ ಆರಂಭದ ಕುರಿತು ವಿವರಿಸಿದರು.

    ಅನೂಪ್ ಎಲ್ಲರ ಗಮನ ಸೆಳೆಯುವುದು ಅವರ ಸಿಕ್ ಪ್ಯಾಕ್ ದೇಹದಿಂದ. ಸಿನಿಮಾಗಾಗಿಯೇ ದೇಹದ ಕಸರತ್ತು ಆರಂಭಿಸಿದ ಅವರು 2015 ಮಿಸ್ಟರ್ ಇಂಡಿಯಾ ಸ್ಥಾನ ಪಡೆದು ಕೊಂಡಿದ್ದಾರೆ. ಅಲ್ಲದೇ ಮಿಸ್ಟರ್ ಏಷ್ಯಾದಲ್ಲಿ ಭಾರತವನ್ನು ಪ್ರತಿನಿಧಿಸಿ ಕಂಚಿನ ಪದಕ ಪಡೆದಿದ್ದಾರೆ. ಈಗಾಗಲೇ ತಮಿಳು, ತೆಲುಗು ಸಿನಿಮಾಗಳಲ್ಲಿ ನಟಿಸಿದ್ದು, ತಮಿಳಿನ ಸೂರ್ಯ ಮತ್ತು ತೆಲುಗು ಸ್ಟೈಲಿಷ್ ಸ್ಟಾರ್ ಅಲ್ಲು ಅರ್ಜುನ್ ನನಗೆ ಪ್ರೇರಣೆಯಾಗಿದ್ದು. ಮುಂದೊಂದು ದಿನ ಹೀರೋ ಆದರೆ ಇವರಂತೆ ಆಗಬೇಕು ಅಂತಾ ಅನ್ನಿಸುತ್ತಿತ್ತು. ಆದರೆ ರಾಷ್ಟ್ರ ಪ್ರಶಸ್ತಿ ಪಡೆದ ಸುನಿಲ್ ಕುಮಾರ್ ದೇಸಾಯಿ ಅವರ ಚಿತ್ರದಲ್ಲಿ ನಟಿಸುತ್ತೇನೆ ಎಂದು ನಾನು ಯೋಚಿಸಿರಲಿಲ್ಲ ಎಂದು ತಿಳಿಸಿದ್ದಾರೆ.

    ಸಿನಿಮಾ ಅಫರ್ ಬಂದಿದ್ದು ಶಾಕ್: ಹೈದರಾಬಾದ್ ನಲ್ಲಿದ್ದಾಗ ಸುನಿಲ್ ಕುಮಾರ್ ಬಂದು ಚಿತ್ರದ ಕಥೆ ಹೇಳಿದ್ರು. ಅದ್ಭುತವಾದ ಸ್ಟೋರಿ ಕೇಳಿದ ಮೇಲೆ ಚಿತ್ರ ಹೀರೋ ಯಾರು ಅಂತಾ ಕೇಳಿದಾಗ ಅವರು ನೀವೇ ಅಂತಾ ಹೇಳಿದಾಗ ನನಗೆ ಶಾಕ್ ಆಗಿತ್ತು. ವಿಲನ್ ಪಾತ್ರಗಳಿಗೆ ನಾನು ಸೂಟ್ ಆಗ್ತೇನೆ ಅಂತಾ ಹೇಳುತ್ತಾರೆ. ಆದ್ರೆ ಸುನಿಲ್ ಸರ್ ನನ್ನಲ್ಲಿ ಒಬ್ಬ ಹೀರೋನನ್ನು ನೋಡಿದ್ದಾರೆ. ವಿಶೇಷ ಎಂದರೆ ಹೀರೋ ಅಂದ ಮೇಲೆ ನಾನೇನಾದರು ಲುಕ್, ಹೇರ್ ಸ್ಟೈಲ್ ಚೇಂಜ್ ಮಾಡ್ಬೇಕಾ ಅಂತಾ ಭಯದಿಂದ ಕೇಳಿದೆ. ನನ್ನ ಸಿನಿಮಾಗೆ ನಿನ್ನಂತಹ ವ್ಯಕ್ತಿಯೇ ಬೇಕೆಂದು ಹೇಳಿದರು. ಅವರಿಗೆ ನನ್ನ ಧನ್ಯವಾದ ಎಂದರು.

    ಇದುವರೆಗೂ ನಾನು ಮಾಡಿದ ಪಾತ್ರಗಳಿಗಿಂತೂ ಇದು ತುಂಬಾ ವಿಭಿನ್ನವಾಗಿದೆ. ಕೊಡಗು ಜಿಲ್ಲೆಯಲ್ಲಿ ಸಿನಿಮಾದ ಚಿತ್ರೀಕರಣ ನಡೆದಿದೆ. ಇತ್ತೀಚೆಗೆ ಅತಿವೃಷ್ಠಿಯಿಂದಾಗಿ ಕೊಡಗಿನ ಜನರು ಸಾಕಷ್ಟು ಕಷ್ಟಗಳನ್ನು ಅನುಭವಿಸಿದ್ದಾರೆ. ಕೊಡಗಿನಲ್ಲಿ ಕೆಲವು ಸೀನ್ ಗಳ ಮರು ಚಿತ್ರೀಕರಣ ನಡೆಯಬೇಕಿತ್ತು. ಆದ್ರೆ ಕಾರಣಾಂತರಗಳಿಂದ ಸಾಧ್ಯವಾಗಲಿಲ್ಲ. ಚಿತ್ರತಂಡದೊಂದಿಗೆ ಶೂಟಿಂಗ್ ಮಾಡುವಾಗ ಎಲ್ಲರೂ ಸಹಾಯ ಮಾಡಿದ್ದಾರೆ. ನನ್ನ ಪಾತ್ರಕ್ಕೆ ಸಾಧ್ಯವಾದಷ್ಟು ನ್ಯಾಯ ಒದಗಿಸಿದ್ದೇನೆ ಎಂದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv