Tag: Thane

  • ಮುಂಬೈ ಸೇರಿ ಹಲವೆಡೆ ಭಾರೀ ಮಳೆ – ಆರೆಂಜ್ ಅಲರ್ಟ್ ಘೋಷಣೆ

    ಮುಂಬೈ ಸೇರಿ ಹಲವೆಡೆ ಭಾರೀ ಮಳೆ – ಆರೆಂಜ್ ಅಲರ್ಟ್ ಘೋಷಣೆ

    – ನವರಾತ್ರಿಯ ದಾಂಡಿಯಾ ಸಂಭ್ರಮಕ್ಕೆ ಅಡ್ಡಿ ಸಾಧ್ಯತೆ

    ಮುಂಬೈ: ಮುಂಬೈ (Mumbai) ಸೇರಿದಂತೆ ಮಹಾರಾಷ್ಟ್ರದ (Maharashtra) ಕೆಲವು ಭಾಗಗಳಲ್ಲಿ ಶನಿವಾರ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆ (IMD) ಆರೆಂಜ್ ಅಲರ್ಟ್ ಘೋಷಿಸಿದೆ.

    ಮುಂಬೈನಲ್ಲಿ ಗುಡುಗು, ಮಿಂಚು ಸಹಿತ ಮುಂದಿನ 24 ಗಂಟೆಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಪಾಲ್ಘರ್, ಪುಣೆ, ಥಾಣೆ ಮತ್ತು ರಾಯಗಡ್ ಸೇರಿದಂತೆ ಹಲವೆಡೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಅಲ್ಲದೇ ಜಲ್ನಾ, ಬೀಡ್ ಮತ್ತು ಸೋಲಾಪುರದಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.ಇದನ್ನೂ  ಓದಿ: ಕೊಡಗಿನಲ್ಲಿ ನಡೆಯುತ್ತಿದೆ ಅಕ್ರಮ ಗಣಿಗಾರಿಕೆ – ಸುತ್ತಮುತ್ತಲಿನ ಪ್ರದೇಶದ ಜನಕ್ಕೆ ಕಾಡ್ತಿದೆ ಶ್ವಾಸಕೋಶದ ಸಮಸ್ಯೆ!

    ಶನಿವಾರ (ಸೆ.27) ಬೆಳಗ್ಗೆಯಿಂದಲೂ ಮುಂಬೈ ನಗರದಲ್ಲಿ ಮೋಡ ಕವಿದ ವಾತಾವರಣವಿದ್ದು, ಪಾಲ್ಘರ್, ಥಾಣೆ ಮತ್ತು ರಾಯಗಡ್‌ನಲ್ಲಿ ಸೋಮವಾರದವರೆಗೂ (ಸೆ.29) ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಎಚ್ಚರಿಕೆ ನೀಡಿದೆ. ಅಲ್ಲದೇ ಅಕ್ಟೋಬರ್ ಎರಡನೇ ವಾರದವರೆಗೂ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.

    ಇನ್ನೂ ನವರಾತ್ರಿ ಹಿನ್ನೆಲೆ ಆಯೋಜಿಸಲಾಗಿದ್ದ ದಾಂಡಿಯಾ ನೈಟ್ ಫೆಸ್ಟಿವಲ್‌ಗೂ ಮಳೆ ಅಡ್ಡಿಯಾಗುವ ಸಾಧ್ಯತೆಯಿದೆ. ಜೊತೆಗೆ ಸೆ.28ರಂದು ನಡೆಯಬೇಕಿದ್ದ ಮಹಾರಾಷ್ಟ್ರ ಲೋಕ ಸೇವಾ ಆಯೋಗದ ಕೆಲ ಪರೀಕ್ಷೆಗಳನ್ನು ಮುಂದೂಡಿ, ನ.9ರಂದು ನಡೆಸುವುದಾಗಿ ತಿಳಿಸಿದೆ.

    ಇನ್ನೂ ಮಹಾರಾಷ್ಟ್ರದಾದ್ಯಂತ ಭಾರೀ ಮಳೆಯ ಹಿನ್ನೆಲೆ ಮೀನುಗಾರರು ಸಮುದ್ರ, ನದಿ, ಕೆರೆಗಳಿಗೆ ಇಳಿಯದಂತೆ ಸೂಚನೆ ನೀಡಿದೆ.ಇದನ್ನೂ  ಓದಿ: ಗಡಿ ಜಿಲ್ಲೆ ಬೀದರ್‌ನಲ್ಲಿ ಧಾರಾಕಾರ ಮಳೆಗೆ ಭಾರೀ ಅವಾಂತರ – ರಸ್ತೆ ಸಂಚಾರ ಬಂದ್‌

     

  • ಸೈಫ್‌ ಅಲಿ ಖಾನ್‌ಗೆ ಚಾಕು ಇರಿದಿದ್ದ ಆರೋಪಿ ಅರೆಸ್ಟ್‌

    ಸೈಫ್‌ ಅಲಿ ಖಾನ್‌ಗೆ ಚಾಕು ಇರಿದಿದ್ದ ಆರೋಪಿ ಅರೆಸ್ಟ್‌

    ಮುಂಬೈ: ನಟ ಸೈಫ್ ಅಲಿ ಖಾನ್‌ಗೆ (Saif Ali Khan) ಚಾಕು ಇರಿದಿದ್ದ ಆರೋಪಿಯನ್ನು ಮಹಾರಾಷ್ಟ್ರದ (Maharashtra) ಥಾಣೆಯಲ್ಲಿ (Thane) ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    ಬಂಧಿತ ಆರೋಪಿಯನ್ನು ಮೊಹಮ್ಮದ್ ಸರಿಫುಲ್ ಇಸ್ಲಾಂ ಶೆಹಜಾದ್ ಎಂದು ಗುರುತಿಸಲಾಗಿದೆ. ಆತನನ್ನು ಸೈಫ್ ನಿವಾಸದಿಂದ ಸುಮಾರು 35 ಕಿಲೋಮೀಟರ್ ದೂರದಲ್ಲಿರುವ ಕಾಸರ್ವಾಡವಲಿಯ ಹಿರಾನಂದಾನಿ ಎಸ್ಟೇಟ್ ಬಳಿ ಬಂಧಿಸಲಾಗಿದೆ. ದುಷ್ಕರ್ಮಿ ಥಾಣೆಯ ಬಾರ್‌ನಲ್ಲಿ ಕೆಲಸ ಮಾಡುತ್ತಿದ್ದ. ಪೊಲೀಸರಿಗೆ ಸಿಕ್ಕಿಬೀಳುವ ಭಯದಿಂದ ಆತ ತನ್ನ ಹೆಸರನ್ನು ವಿಜಯ್ ದಾಸ್ ಎಂದು ಹೇಳಿಕೊಂಡಿದ್ದ ಎಂದು ಮೂಲಗಳು ತಿಳಿಸಿವೆ.

    ಗುರುವಾರ ಮುಂಜಾನೆ ಬಾಂದ್ರಾದಲ್ಲಿರುವ ಸೈಫ್ ಅಲಿ ಖಾನ್ ಅವರ ಮನೆಗೆ ನುಗ್ಗಿ ಆರೋಪಿ ದಾಳಿ ನಡೆಸಿದ್ದ. ಆರು ಬಾರಿ ಇರಿತಕ್ಕೊಳಗಾಗಿದ್ದ ಸೈಫ್‌ ಅವರನ್ನು ಆಟೋರಿಕ್ಷಾದಲ್ಲಿ ನಗರದ ಲೀಲಾವತಿ ಆಸ್ಪತ್ರೆಗೆ ಸಾಗಿಸಲಾಗಿತ್ತು. ಬಳಿಕ ಅಲ್ಲಿ ಅವರಿಗೆ ತುರ್ತು ಶಸ್ತ್ರಚಿಕಿತ್ಸೆ ನೀಡಿ, ಐದು ಗಂಟೆಗಳ ಕಾಲ ನಡೆದ ಶಸ್ತ್ರಚಿಕಿತ್ಸೆ ನಡೆಸಲಾಗಿತ್ತು. ಬಳಿಕ ಅವರ ಬೆನ್ನುಮೂಳೆಯಿಂದ 2.5 ಇಂಚಿನ ಚಾಕುವಿನ ತುಂಡನ್ನು ತೆಗೆಯಲಾಗಿತ್ತು.

    ಸೈಫ್ ಅಲಿ ಖಾನ್ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಅವರಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರು ತಿಳಿಸಿದ್ದಾರೆ. ಇನ್ನೂ ಪ್ರಕರಣಕ್ಕೆ ಸಂಬಂಧಿಸಿದಂತೆ ಶನಿವಾರ ಆಕಾಶ್ ಕೈಲಾಶ್ ಕನ್ನೋಜಿಯಾ ಎಂಬ ಶಂಕಿತನನ್ನು ಛತ್ತೀಸ್‌ಗಢದ ದುರ್ಗ್ ರೈಲು ನಿಲ್ದಾಣದಲ್ಲಿ ಬಂಧಿಸಲಾಗಿತ್ತು.

  • ಮುಂಬೈನಲ್ಲಿ ವೇಗವಾಗಿ ಬಂದು ಬೈಕ್‌ಗೆ ಡಿಕ್ಕಿ ಹೊಡೆದ ಮರ್ಸಿಡಿಸ್; ಬೈಕ್ ಸವಾರ ಸಾವು

    ಮುಂಬೈನಲ್ಲಿ ವೇಗವಾಗಿ ಬಂದು ಬೈಕ್‌ಗೆ ಡಿಕ್ಕಿ ಹೊಡೆದ ಮರ್ಸಿಡಿಸ್; ಬೈಕ್ ಸವಾರ ಸಾವು

    ಮುಂಬೈ: ವೇಗವಾಗಿ ಬಂದು ಮರ್ಸಿಡಿಸ್ ಬೆಂಜ್ (Mercedes Benz) ಕಾರು ಬೈಕ್‌ಗೆ ಡಿಕ್ಕಿ ಹೊಡೆದಿದ್ದು, ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ಮುಂಬೈನ (Mumbai) ಥಾಣೆ (Thane) ಬಳಿ ನಡೆದಿದೆ.

    ಮೃತ ಯುವಕನನ್ನು 21 ವರ್ಷದ ದರ್ಶನ್ ಹೆಗ್ಡೆ ಎಂದು ಗುರುತಿಸಲಾಗಿದೆ.ಇದನ್ನೂ ಓದಿ:ದಾವಣಗೆರೆ | ಲೌಕಿಕ ಜೀವನ ತೊರೆದು ಸನ್ಯಾಸತ್ವ ಸ್ವೀಕಾರಕ್ಕೆ ಮುಂದಾದ ಯುವತಿಯರು

    ಹಿರಿಯ ಪೊಲೀಸ್ ಅಧಿಕಾರಿ ಶೈಲೇಶ್ ಸಾಲ್ವಿ ಮಾತನಾಡಿ, ರಾತ್ರಿ 1:50ರ ಸುಮಾರಿಗೆ ದರ್ಶನ್ ಹೆಗ್ಡೆ ನಿತಿನ್ ಕಂಪನಿ ಜಂಕ್ಷನ್ ಪ್ರದೇಶವನ್ನು ದಾಟುತ್ತಿದ್ದಾಗ ಮರ್ಸಿಡಿಸ್ ಬೆಂಜ್ ಕಾರೊಂದು ಬೈಕ್‌ಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ.

    ಡಿಕ್ಕಿ ಹೊಡೆದ ಬಳಿಕ ಅಲ್ಲಿಂದ ಕಾರು ಸಮೇತ ಚಾಲಕ ಪರಾರಿಯಾಗಿದ್ದಾನೆ. ಪೊಲೀಸರ ಪರಿಶೀಲನೆಯ ನಂತರ ಕಾರು ಪಾರ್ಕಿಂಗ್ ಸ್ಥಳವೊಂದರಲ್ಲಿ ಸಿಕ್ಕಿದೆ. ಸದ್ಯ ನೌಪಾಡಾ (Naupada) ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಯನ್ನು ಪತ್ತೆ ಹಚ್ಚುವಲ್ಲಿ ನಿರತರಾಗಿದ್ದಾರೆ.

    ಅಪಘಾತ ಸಂಭವಿಸಿದ ಪ್ರದೇಶದಲ್ಲಿನ ಸಿಸಿಟಿವಿಯನ್ನು ಪರಿಶೀಲಿಸುತ್ತಿದ್ದೇವೆ. ಆರೋಪಿಯ ಗುರುತು ಪತ್ತೆಗಾಗಿ ಆರ್‌ಟಿಒ ವಿವರಗಳನ್ನು ಪರಿಶೀಲಿಸಲಾಗುವುದು ಎಂದು ತಿಳಿಸಿದ್ದಾರೆ.

    ಈ ಕುರಿತು ಪ್ರತ್ಯಕ್ಷದರ್ಶಿಯೊಬ್ಬರು ಮಾತನಾಡಿ, ರಾತ್ರಿ 2 ಗಂಟೆ ಸುಮಾರಿಗೆ ಅಪಘಾತದ ಸದ್ದು ಕೇಳಿಸಿದ್ದು, ಬೈಕ್‌ಗೆ ಮರ್ಸಿಡಿಸ್ ಕಾರು ಡಿಕ್ಕಿ ಹೊಡೆದಿದೆ. ತಕ್ಷಣ ನಾನು ಬೈಕ್ ಸವಾರನನ್ನು ಆಟೋ ರಿಕ್ಷಾದಲ್ಲಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ದಾಖಲಿಸಿದೆ. ದಾಖಲಿಸಿದ 15 ನಿಮಿಷಗಳ ಬಳಿಕ ಆತ ಸಾವನ್ನಪ್ಪಿದ. ಇನ್ನೂ ಡಿಕ್ಕಿ ಹೊಡೆದ ಮರ್ಸಿಡಿಸ್ ಕಾರು ಒಂದು ಕ್ಷಣವೂ ನಿಲ್ಲಿಸದೇ ಅಲ್ಲಿಂದ ವೇಗವಾಗಿ ಹೊರಟಿತು.

    ಮರ್ಸಿಡಿಸ್ ಕಾರನ್ನು ಥಾರ್ ಎಸ್‌ಯುವಿ ಕಾರೊಂದು ಹಿಂಬಾಲಿಸಿಕೊಂಡು ಬರುತ್ತಿತ್ತು. ಅಪಘಾತ ನಡೆದ ಬಳಿಕ ಎರಡು ವಾಹನಗಳು ಮುಂಬೈ ಕಡೆಗೆ ತೆರಳಿದವು ಎಂದು ತಿಳಿಸಿದರು.ಇದನ್ನೂ ಓದಿ: ಮೊದಲ ಹಂತದ ಶೂಟಿಂಗ್ ಮುಗಿಸಿದ ಮಂಸೋರೆ

  • ಒಂದೇ ಒಂದು ಬಿಸ್ಕೆಟ್‌ ತಿನ್ನಲು ಹೋದ ಮಗು – ಮಿಷಿನ್‌ ಬೆಲ್ಟ್‌ಗೆ ಸಿಲುಕಿ ಸಾವು!

    ಒಂದೇ ಒಂದು ಬಿಸ್ಕೆಟ್‌ ತಿನ್ನಲು ಹೋದ ಮಗು – ಮಿಷಿನ್‌ ಬೆಲ್ಟ್‌ಗೆ ಸಿಲುಕಿ ಸಾವು!

    ಮುಂಬೈ: ಮಹಾರಾಷ್ಟ್ರದ (Maharashtra) ಥಾಣೆ ಜಿಲ್ಲೆಯ ಬಿಸ್ಕೆಟ್ ಕಾರ್ಖಾನೆಯೊಂದರಲ್ಲಿ (Biscuit Factory) ಯಂತ್ರದ ಬೆಲ್ಟ್‌ಗೆ ಸಿಲುಕಿ ಮೂರು ವರ್ಷದ ಗಂಡು ಮಗು ಸಾವನ್ನಪ್ಪಿರುವುದಾಗಿ ಪೊಲೀಸರು ಬುಧವಾರ ತಿಳಿಸಿದ್ದಾರೆ.

    ಥಾಣೆ ಜಿಲ್ಲೆಯ ಅಂಬರನಾಥದಲ್ಲಿ (Ambarnath) ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಆಯುಷ್ ಚೌಹಾಣ್ ಮೃತಪಟ್ಟ ಮಗು. ಇದನ್ನೂ ಓದಿ: 1,788 ಕೊಠಡಿ, 257 ಸ್ನಾನಗೃಹ, ಅಮೃತಶಿಲೆಯಿಂದ ಮಾಡಿದ ಮೆಟ್ಟಿಲು – ವಿಶ್ವದ ಅತಿದೊಡ್ಡ ಐಷಾರಾಮಿ ಅರಮನೆಯಲ್ಲಿ ಮೋದಿಗೆ ಆತಿಥ್ಯ

    ಅಷ್ಟಕ್ಕೂ ಅಲ್ಲಿ ಆಗಿದ್ದೇನು?
    ಮಗು ಆಯುಷ್ ಚೌಹಾಣ್ ತನ್ನ ತಾಯಿಯೊಂದಿಗೆ ಬಿಸ್ಕೆಟ್‌ ಫ್ಯಾಕ್ಟರಿಗೆ ಹೋಗಿದ್ದನು. ಈ ವೇಳೆ ಮಗುವನ್ನು ಒಂದು ಕಡೆ ಕೂರಿಸಿ, ಮಗುವಿನ ತಾಯಿ ತನ್ನ ಪತಿಗೆ ಉಪಾಹಾರ ಕೊಟ್ಟುಬರಲು ತೆರಳಿದ್ದರು. ಈ ವೇಳೆ ಯಂತ್ರದಲ್ಲಿದ್ದ ರಾಶಿ ರಾಶಿ ಬಿಸ್ಕೆಟ್‌ ನೋಡಿದೆ. ಒಂದೇ ಒಂದು ಬಿಸ್ಕೆಟ್‌ ತೆಗೆದುಕೊಳ್ಳಲು ಕೈಹಾಕಿದೆ. ಆದ್ರೆ ಬೆಲ್ಟ್‌ಗೆ ಕೈ ಸಿಕ್ಕಿಕೊಂಡಿದೆ. ಕೂಡಲೇ ಕಾರ್ಖಾನೆ ಸಿಬ್ಬಂದಿ ಮಗುವನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿದರೂ ಪ್ರಯೋಜನವಾಗಲಿಲ್ಲ. ಅಷ್ಟರಲ್ಲಾಗಲೇ ಮಗು ಸಾವನ್ನಪ್ಪಿತ್ತು. ಎಂದು ಅಂಬರನಾಥ್ ಪೊಲೀಸ್
    (Ambarnath Police) ಠಾಣೆಯ ಅಧಿಕಾರಿ ತಿಳಿಸಿದ್ದಾರೆ.

    ಬಳಿಕ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದ್ದು, ಆಕಸ್ಮಿಕ ಸಾವು ಎಂದು ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಇದನ್ನೂ ಓದಿ: Breaking | ರೇಣುಕಾಸ್ವಾಮಿ ಕೊಲೆ ಕೇಸ್‌ – ದರ್ಶನ್‌ & ಗ್ಯಾಂಗ್‌ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಕೆ

  • ಪ್ರಿಯಕರನೊಂದಿಗೆ ಪತ್ನಿಯ ಖಾಸಗಿ ಕ್ಷಣ ವೀಡಿಯೋ ಮಾಡಿ ಹಂಚಿಕೊಂಡ ಪತಿ!

    ಪ್ರಿಯಕರನೊಂದಿಗೆ ಪತ್ನಿಯ ಖಾಸಗಿ ಕ್ಷಣ ವೀಡಿಯೋ ಮಾಡಿ ಹಂಚಿಕೊಂಡ ಪತಿ!

    ಮುಂಬೈ: ಥಾಣೆಯ (Thane) ಡೊಂಬಿವಲಿಯ ಮಹಿಳೆಯೊಬ್ಬಳು ತನ್ನ ಪ್ರಿಯಕರನೊಂದಿಗೆ ಇದ್ದ ಖಾಸಗಿ ಕ್ಷಣಗಳನ್ನು ಆಕೆಯ ಮಾಜಿ ಪತಿ ವೀಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾನೆ ಎಂದು ಆರೋಪಿಸಿದ್ದಾಳೆ.

    ಮಹಿಳೆ (Woman) ಪ್ರಿಯಕರನೊಂದಿಗೆ ಇರುವುದನ್ನು ರಹಸ್ಯವಾಗಿ ಮಾಜಿ ಪತಿ ಚಿತ್ರೀಕರಿಸಿದ್ದಾನೆ. ಆ ವೀಡಿಯೋಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿರುವುದು ತನಿಖೆ ವೇಳೆ ತಿಳಿದು ಬಂದಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

    ಮಹಿಳೆ ನೀಡಿದ ದೂರಿನ ಆಧಾರದ ಮೇಲೆ ಆಕೆಯ ವಿಚ್ಛೇದಿತ ಪತಿಯ ವಿರುದ್ಧ ಭಾರತೀಯ ನ್ಯಾಯ ಸಂಹಿತೆ ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿ ಮಾನನಷ್ಟ ಪ್ರಕರಣ ದಾಖಲಿಸಲಾಗಿದೆ.

    ಆರೋಪಿಯು ಮಹಿಳೆಯ ಮನೆಯಲ್ಲಿ ರಹಸ್ಯ ಕ್ಯಾಮೆರಾವನ್ನು ಅಳವಡಿಸಿದ್ದ. ಇದರಿಂದ ಖಾಸಗಿ ವೀಡಿಯೋ ಚಿತ್ರೀಕರಿಸಿದ್ದಾನೆ. ಪ್ರಕರಣ ಸಂಬಂಧ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

  • ಆಟೋ ಚಕ್ರದಿಂದ ಮೈಗೆ ಚಿಮ್ಮಿದ ಕೆಸರು – ಮರಳಿ ಬರುವವರೆಗೂ ಕಾದು ಚಾಲಕನಿಗೆ ಚಾಕು ಇರಿತ

    ಆಟೋ ಚಕ್ರದಿಂದ ಮೈಗೆ ಚಿಮ್ಮಿದ ಕೆಸರು – ಮರಳಿ ಬರುವವರೆಗೂ ಕಾದು ಚಾಲಕನಿಗೆ ಚಾಕು ಇರಿತ

    ಮುಂಬೈ: ಆಟೋರಿಕ್ಷಾದ ಚಕ್ರದಿಂದ ಮೈಗೆ ಕೆಸರು ಚಿಮ್ಮಿದ್ದಕ್ಕೆ ಅದೇ ಮಾರ್ಗದಲ್ಲಿ ಆಟೋ ಮರಳಿ ಬರುವ ತನಕ ಕಾದು ಕುಳಿತು ಚಾಲಕನಿಗೆ ವ್ಯಕ್ತಿಯೊಬ್ಬ ಚಾಕು ಇರಿದ ಪ್ರಕರಣ ಮಹಾರಾಷ್ಟ್ರದ ಥಾಣೆಯಲ್ಲಿ (Thane) ನಡೆದಿದೆ.

    ಚಾಕು ಇರಿದ ಆರೋಪಿಯನ್ನು ಶಹಬಾಜ್ ಖಾನ್ ಎಂದು ಗುರುತಿಸಲಾಗಿದೆ. ಶಹಬಾಜ್ ಘೋಡ್‍ಬಂದರ್ ರಸ್ತೆಯಲ್ಲಿ ಬೈಕ್‍ನಲ್ಲಿ ಹೋಗುತ್ತಿದ್ದಾಗ ಆಟೋರಿಕ್ಷಾವೊಂದು ಪಕ್ಕದಲ್ಲಿ ಹಾದು ಹೋಗಿತ್ತು. ಈ ವೇಳೆ ಚಕ್ರ ಗುಂಡಿಗೆ ಇಳಿದ ಪರಿಣಾಮ ಶಹಬಾಜ್ ಮೈಗೆ ಹೆಸರು ಹಾರಿತ್ತು. ಇದೇ ಕಾರಣಕ್ಕೆ ಆತ ಒಂದು ಗಂಟೆಗಳ ಕಾಲ ಕಾದು ಆಟೋ ಚಾಲಕನ ಮೇಲೆ ಹಲ್ಲೆ ನಡೆಸಿ ಚಾಕು ಇರಿದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಬರ್ಗರ್ ಕಿಂಗ್ ರೆಸ್ಟೋರೆಂಟ್ ಶೂಟೌಟ್ ಕೇಸ್ – ಮೂವರು ಗ್ಯಾಂಗ್‍ಸ್ಟರ್‌ಗಳ ಎನ್‍ಕೌಂಟರ್

    ಆಟೋ ಚಾಲಕನ ದೂರಿನ ಆಧಾರದ ಮೇಲೆ ಪೊಲೀಸರು ಖಾನ್ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ (Bharatiya Nyaya Sanhita) ಸೆಕ್ಷನ್ 118-1 (ಹಲ್ಲೆ, ಗಾಯವನ್ನುಂಟುಮಾಡುವುದು) 352 (ಉದ್ದೇಶಪೂರ್ವಕ ಅವಮಾನ) ಮತ್ತು 351-2 (ಅಪರಾಧಿಕ ಭಯೋತ್ಪಾದನೆ) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಇದನ್ನೂ ಓದಿ: ವಾಲ್ಮೀಕಿ ನಿಗಮ ಬಹುಕೋಟಿ ಹಗರಣ ಕೇಸ್ – ಮಾಜಿ ಸಚಿವ ನಾಗೇಂದ್ರ ಬಂಧನ!

  • ಮುಂಬೈನಲ್ಲಿ ದೇಶದ 2ನೇ ಅತಿದೊಡ್ಡ ಕ್ರಿಕೆಟ್‌ ಸ್ಟೇಡಿಯಂ ನಿರ್ಮಿಸಲು ಪ್ಲ್ಯಾನ್‌!

    ಮುಂಬೈನಲ್ಲಿ ದೇಶದ 2ನೇ ಅತಿದೊಡ್ಡ ಕ್ರಿಕೆಟ್‌ ಸ್ಟೇಡಿಯಂ ನಿರ್ಮಿಸಲು ಪ್ಲ್ಯಾನ್‌!

    ‌- ಐತಿಹಾಸಿಕ ವಾಂಖೆಡೆಗೆ ಸೆಡ್ಡು ಹೊಡೆಯುತ್ತಾ ಸ್ಟೇಡಿಯಂ

    ಮುಂಬೈ: ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಅಮಾನೆ ಗ್ರಾಮದಲ್ಲಿ ದೇಶದಲ್ಲೇ 2ನೇ ಅತಿದೊಡ್ಡ ಕ್ರಿಕೆಟ್‌ ಸ್ಟೇಡಿಯಂ (New Cricket Stadium) ನಿರ್ಮಿಸಲು ಮುಂಬೈ ಕ್ರಿಕೆಟ್ ಅಸೋಸಿಯೇಷನ್ ​​(MCA) ಯೋಜಿಸುತ್ತಿದೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ರೋಹಿತ್‌ ನಾಯಕತ್ವದಲ್ಲಿ WTC ಫೈನಲ್‌, ಚಾಂಪಿಯನ್ಸ್‌ ಟ್ರೋಫಿ ಗೆಲ್ಲುತ್ತೇವೆ: ಜಯ್‌ ಶಾ ವಿಶ್ವಾಸ

    ಮುಂಬೈ ಕ್ರಿಕೆಟ್‌ ಅಸೋಸಿಯೇಷನ್‌ 1 ಲಕ್ಷ ಆಸನಗಳ ಸಾಮರ್ಥ್ಯದ ಕ್ರಿಕೆಟ್‌ ಸ್ಟೇಡಿಯಂ ನಿರ್ಮಿಸಲು ಎದುರುನೋಡುತ್ತಿದೆ. ಥಾಣೆ ಜಿಲ್ಲೆಯಿಂದ ಸುಮಾರು 26 ಕಿಮೀ ಹಾಗೂ ವಾಂಖೆಡೆ ಕ್ರೀಡಾಂಗಣದಿಂದ (Wankhede Stadium) 68 ಕಿಮೀ ದೂರದಲ್ಲಿರುವ ಅಮಾನೆ ಗ್ರಾಮದಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ ಸಿದ್ಧತೆ ನಡೆದಿದೆ. ಈಗಾಗಲೇ ಸ್ಟೇಡಿಯಂ ನಿರ್ಮಾಣಕ್ಕೆ ಅಗತ್ಯವಿರುವ 50 ಎಕೆರೆ ಭೂಪ್ರದೇಶ ಸ್ವಾಧೀನಕ್ಕೆ ಮಹಾರಾಷ್ಟ್ರ ರಾಜ್ಯ ರಸ್ತೆ ಅಭಿವೃದ್ಧಿ ನಿಗಮದಿಂದ ಟೆಂಡರ್‌ ಭರ್ತಿಯಾಗಿದ್ದು, ಸರ್ಕಾರದ ಅನುಮೋದನೆಗಾಗಿ ಕಾಯುತ್ತಿದೆ ಎಂದು ತಿಳಿದುಬಂದಿದೆ.

    ಶುಕ್ರವಾರ (ಜು.5) ಟಿ20 ವಿಶ್ವಕಪ್‌ ವಿಜೇತ ತಂಡದ ಭಾಗವಾಗಿರುವ ನಾಲ್ವರು ಆಟಗಾರರ ಅಭಿನಂದನಾ ಸಮಾರಂಭದಲ್ಲಿ ಮಹಾರಾಷ್ಟ್ರ ಡಿಸಿಎಂ ದೇವೇಂದ್ರ ಫಡ್ನವೀಸ್‌ ಈ ಬಗ್ಗೆ ಮಾತನಾಡಿದ್ದರು. ಅತ್ಯಾಧುನಿಕ ಹಾಗೂ ಬೃಹತ್‌ ಕ್ರಿಕೆಟ್‌ ಸ್ಟೇಡಿಯಂ ನಿರ್ಮಿಸಲು ಪರಿಗಣಿಸುವಂತೆ ಸಿಎಂ ಏಕನಾಥ್‌ ಶಿಂಧೆ (Eknath shinde) ಅವರಿಗೆ ಮನವಿ ಮಾಡಿದ್ದೇವೆ. ಮುಂಬೈನಲ್ಲಿ 1 ಆಸನಗಳ ಸಾಮರ್ಥ್ಯದ ಕ್ರೀಡಾಂಗಣ ಅವಶ್ಯಕತೆಯಿದೆ ಎಂದು ಹೇಳಿರುವುದಾಗಿ ತಿಳಿಸಿದ್ದಾರೆ.

    ಮುಂಬೈನಲ್ಲಿ ಬೃಹತ್‌ ಕ್ರೀಡಾಂಗಣ ನಿರ್ಮಿಸಬೇಕು ಎಂಬುದು ಎಂಸಿಎ ಮಾಜಿ ಅಧ್ಯಕ್ಷ ಅಮೋಲ್‌ ಕಾಳೆ ಅವರ ಕನಸಿನ ಯೋಜನೆಯಾಗಿತ್ತು. ಅವರ ನೆನಪಿನಾರ್ಥವಾಗಿ ಕ್ರೀಡಾಂಗಣ ನಿರ್ಮಾಣವಾಗಬೇಕು ಎಂದು ಹೇಳಿದ್ದರು. ಇದನ್ನೂ ಓದಿ: T20 ಏಷ್ಯಾಕಪ್‌ ಟೂರ್ನಿಗೆ ಭಾರತ ಮಹಿಳಾ ತಂಡ ಪ್ರಕಟ – ಕನ್ನಡತಿ ಶ್ರೇಯಾಂಕಾಗೆ ಸ್ಥಾನ!

    ಸದ್ಯ ಅಹಮದಾಬಾದ್‌ನ ಮೊಟೇರಾದಲ್ಲಿರುವ ನರೇಂದ್ರ ಮೋದಿ ಕ್ರೀಡಾಂಗಣ 1.32 ಲಕ್ಷ ಆಸನಗಳ ಸಾಮರ್ಥ್ಯ ಹೊಂದಿದ್ದು, ದೇಶದ ಅತಿದೊಡ್ಡ ಕ್ರೀಡಾಂಗಣ ಎನಿಸಿಕೊಂಡಿದೆ. ಇದನ್ನೂ ಓದಿ: ಬಿಸಿಸಿಐ ಬಳಿಕ ಮಹಾರಾಷ್ಟ್ರ ಸರ್ಕಾರದಿಂದಲೂ ಟೀಂ ಇಂಡಿಯಾ ಆಟಗಾರರಿಗೆ ಬಂಪರ್‌ ಗಿ‌ಫ್ಟ್‌!

  • ಮಹಿಳೆಯ ಹೊಟ್ಟೆಯಿಂದ 10 ಕೆ.ಜಿಯ ಗೆಡ್ಡೆ ಹೊರತೆಗೆದ ವೈದ್ಯರು!

    ಮಹಿಳೆಯ ಹೊಟ್ಟೆಯಿಂದ 10 ಕೆ.ಜಿಯ ಗೆಡ್ಡೆ ಹೊರತೆಗೆದ ವೈದ್ಯರು!

    ಥಾಣೆ: ಮಹಾರಾಷ್ಟ್ರದ ಥಾಣೆಯ (Thane, Maharastra) ಸಿವಿಲ್ ಆಸ್ಪತ್ರೆಯ ವೈದ್ಯರು ಅಸಾಧ್ಯವೆನಿಸಿದ ಆಪರೇಷನ್ ಅನ್ನು ಯಶಸ್ವಿಯಾಗಿ ನಡೆಸುವ ಮೂಲಕ ಮಹಿಳೆಯೊಬ್ಬರಿಗೆ ಹೊಸ ಜೀವನ ನೀಡಿದ ಘಟನೆಯೊಂದು ನಡೆದಿದೆ. ಮಹಿಳೆಯ ಹೊಟ್ಟೆಯಿಂದ 10 ಕೆ.ಜಿ ಗೆಡ್ಡೆಯನ್ನು (ನೀರು ತುಂಬಿದ ಮಾಂಸದ ಉಂಡೆ) ಯಶಸ್ವಿಯಾಗಿ ಹೊರತೆಗೆದಿದ್ದಾರೆ.

    ತೀವ್ರ ಹೊಟ್ಟೆನೋವು: ಮಹಾರಾಷ್ಟ್ರದ ಉಲ್ಲಾಸನಗರ ಪ್ರದೇಶದಲ್ಲಿ ತರಕಾರಿ ಮಾರುತ್ತಿದ್ದ 48 ವರ್ಷದ ಮಹಿಳೆಯೊಬ್ಬರು ಕಳೆದ 6 ತಿಂಗಳಿನಿಂದ ತೀವ್ರ ಹೊಟ್ಟೆನೋವಿನಿಂದ ಬಳಲುತ್ತಿದ್ದರು. ಆರ್ಥಿಕ ಸ್ಥಿತಿ ಚೆನ್ನಾಗಿರದ ಕಾರಣ ಅವರು ಖಾಸಗಿ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದುಕೊಳ್ಳಲು ಹಿಂಜರಿದಿದ್ದಾರೆ. ಹೀಗಾಗಿ ನೋವು ತಿನ್ನುತ್ತಲೇ ಜೀವನ ನಡೆಸುತ್ತಿದ್ದರು.ಕ್ರಮೇಣ ಈ ನೋವು ಹೆಚ್ಚಾಗಿ ತಡೆದುಕೊಳ್ಳಲು ಸಾಧ್ಯವಾಗದಿದ್ದಾಗ ಚಿಕಿತ್ಸೆಗೆ ಸರ್ಕಾರಿ ಆಸ್ಪತ್ರೆಗೆ ತೆರಳಿದ್ದಾರೆ.

    ಆಸ್ಪತ್ರೆಗೆ ದಾಖಲು: ಜನವರಿ ಮೊದಲ ವಾರದಲ್ಲಿ ಉಲ್ಲಾಸನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಮಹಿಳೆ ದಾಖಲಾದರು. ಇಲ್ಲಿನ ವೈದ್ಯರು ಹೆಚ್ಚಿನ ಚಿಕಿತ್ಸೆಗಾಗಿ ಜನವರಿ 20 ರಂದು ಥಾಣೆ ಸಿವಿಲ್ ಆಸ್ಪತ್ರೆಗೆ ಕಳುಹಿಸಿದ್ದರು. ಅದರಂತೆ ಮಹಿಳೆಯನ್ನು ಪರೀಕ್ಷಿಸಿದಾಗ ಆಕೆಯ ಹೊಟ್ಟೆಯಲ್ಲಿ ನೀರು ತುಂಬಿದ ಮಾಂಸದ ಉಂಡೆ ಇರುವುದು ಬೆಳಕಿಗೆ ಬಂದಿದೆ.

    ಆಸ್ಪತ್ರೆಯ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಕೈಲಾಸ್ ಪವಾರ್ ಹಾಗೂ ಹೆಚ್ಚುವರಿ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಧೀರಜ್ ಮಹಾಂಗಡೆ ಅವರ ಮಾರ್ಗದರ್ಶನದಲ್ಲಿ ಸೋಮವಾರ ಮಹಿಳೆಗೆ ಶಸ್ತ್ರ ಚಿಕಿತ್ಸೆ ನಡೆಸಲಾಯಿತು. ಈ ವೇಳೆ ಆಕೆಯ ಹೊಟ್ಟೆಯಿಂದ ಸುಮಾರು 10 ಕೆಜಿ ತೂಕದ ನೀರು ತುಂಬಿದ ಮಾಂಸದ ಗೆಡ್ಡೆಯನ್ನು ಹೊರತೆಗೆಯಲಾಯಿತು.

    4 ಗಂಟೆ ನಡೆದ ಶಸ್ತ್ರಚಿಕಿತ್ಸೆ: ಮಹಿಳೆಯ ಗರ್ಭಾಶಯದದಲ್ಲಿ ನೀರಿನಿಂದ ತುಂಬಿದ ಗೆಡ್ಡೆಯಿರುವುದು (Meat filled with water 10 kg) ಬಯಲಾಯಿತು. ಶಸ್ತ್ರಚಿಕಿತ್ಸೆ ಸಾಕಷ್ಟು ಕಷ್ಟಕರವಾಗಿತ್ತು. ಆದರೆ ಆಸ್ಪತ್ರೆಯ ತಜ್ಞ ವೈದ್ಯರು ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ನಡೆಸಿದರು. ಸುಮಾರು ಎರಡು ಗಂಟೆಗಳ ಕಾಲ ಶಸ್ತ್ರಚಿಕಿತ್ಸೆಯ ನಂತರ ವೈದ್ಯರು ಗೆಡ್ಡೆಯನ್ನು ಹೊರತೆಗೆದರು. ಸ್ತ್ರೀರೋಗ ತಜ್ಞೆ ಡಾ.ಶ್ರೇಯಾ ಶೆಲ್ಕೆ, ಅರಿವಳಿಕೆ ತಜ್ಞೆ ಪ್ರಿಯಾಂಕಾ ಮಹಾಂಗಡೆ ಹಾಗೂ ಇತರ ಸಿಬ್ಬಂದಿ ಈ ಶಸ್ತ್ರಚಿಕಿತ್ಸೆ ಯಶಸ್ವಿಯಾಗಲು ಶ್ರಮಿಸಿದರು.

  • 2 ನಿಮಿಷ ನಿನ್ನ ಧ್ವನಿ ಕೇಳಬೇಕೆಂದು ಫೋನ್ ಮಾಡಿದ್ದ ಪತಿ ಸೂಸೈಡ್ ಮಾಡ್ಕೊಂಡ!

    2 ನಿಮಿಷ ನಿನ್ನ ಧ್ವನಿ ಕೇಳಬೇಕೆಂದು ಫೋನ್ ಮಾಡಿದ್ದ ಪತಿ ಸೂಸೈಡ್ ಮಾಡ್ಕೊಂಡ!

    ಮುಂಬೈ: ಪತ್ನಿ ಗಲಾಟೆ ಮಾಡಿದ್ದಕ್ಕೆ ಮನನೊಂದ ಪತಿರಾಯನೊಬ್ಬ ಆಕೆಗೆ ಫೋನ್ ಮಾಡಿ 2 ನಿಮಿಷ ಆಕೆಯ ಧ್ವನಿ ಕೇಳಿದ ಬಳಿಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಹಾರಾಷ್ಟ್ರದ ಥಾಣೆಯಲ್ಲಿ (Thane) ನಡೆದಿದೆ.

    ಘಟನೆ ಏನಾಗಿತ್ತು..?
    ಮಹಾರಾಷ್ಟ್ರದ ಡೊಂಬಿವಿಲಿ (Dombivali) ನಿವಾಸಿ ಸುಧಾಕರ್ ಯಾದವ್ ಹಾಗೂ ಪತ್ನಿ ಸಂಜನಾ ಯಾದವ್ ನಡುವೆ ಕ್ಷುಲ್ಲಕ ಕಾರಣಕ್ಕೆ ಜಗಳವಾಗಿತ್ತು. ಇದರಿಂದ ಮನನೊಂದ ಸಂಜನಾ ಡಿಸೆಂಬರ್ 19ರಂದು ಪತಿ ಮನೆಯನ್ನು ಬಿಟ್ಟು ತನ್ನ ಸೋದರಿಯ ಮನೆಗೆ ಹೋಗಿದ್ದಾಳೆ.

    ಘಟನೆ ನಡೆದ ಮರುದಿನ, ಡಿಸೆಂಬರ್ 20ರಂದು ಬೆಳಗ್ಗೆ 10 ಗಂಟೆಗೆ ಸಂಜನಾಗೆ ಫೋನ್ ಮಾಡಿದ ಸುಧಾಕರ್ ನನಗೆ ಎರಡು ನಿಮಿಷ ನಿನ್ನ ವಾಯ್ಸ್ ಕೇಳಬೇಕು ಅನಿಸ್ತಿದೆ ಎಂದು ಹೇಳಿದ್ದಾನೆ. ಈ ವೇಳೆ ಸಂಜನಾ ಕುರ್ಲಾಗೆ ಕೆಲಸಕ್ಕಾಗಿ ತೆರಳುತ್ತಿದ್ದಳು. 2 ನಿಮಿಷ ಮಾತನಾಡಿದ ಬಳಿಕ ಸುಧಾಕರ್ ಫೋನ್ ಕಾಲ್ (Phone Call) ಕಟ್ ಮಾಡಿದ್ದ. ನಂತರ ವಾಟ್ಸಪ್‌ನಲ್ಲಿ ಪತಿ ಆತ್ಮಹತ್ಯೆಗೆ ಸಿದ್ಧನಾಗಿ ನಿಂತಿರೋ ಫೋಟೋ ಕಳಿಸಿದ್ದ ಎಂದು ಸಂಜನಾ ಪೊಲೀಸರಿಗೆ ಮಾಹಿತಿ ನೀಡಿದ್ದಾಳೆ. ಇದನ್ನೂ ಓದಿ: RSS ಮುಖ್ಯಸ್ಥ ಮೋಹನ್ ಭಾಗವತ್ ಮೇಲೆ ದಾಳಿ ಎಚ್ಚರಿಕೆ

    ಜೊತೆಗೆ ಗಂಡನ ಮನೆಯ ಪಕ್ಕದ ಮನೆಯಲ್ಲಿದ್ದವರಿಗೆ ಕಾಲ್ ಮಾಡಿ ಮನೆಯಲ್ಲಿ ಚೆಕ್ ಮಾಡುವಂತೆ ಹೇಳಿದ್ದಾಳೆ. ನೆರೆಮನೆಯವರು ಬಂದು ಮನೆ ಬಾಗಿಲು ಬಡಿದರೂ ತೆರೆಯಲಿಲ್ಲ. ಬಳಿಕ ಅವರು ಬಾಗಿಲು ಒಡೆದು ನೋಡಿದಾಗ ಸುಧಾಕರ್ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

    ಡೊಂಬಿವಿಲಿಯ ವಿಷ್ಣುನಗರ ಪೊಲೀಸ್ ಠಾಣೆಯಲ್ಲಿ (Dombivali VishnuNagar Police Station) ಪ್ರಕರಣ ದಾಖಲಾಗಿದ್ದು, ಆತ್ಮಹತ್ಯೆಗೆ ನಿಖರ ಕಾರಣ ಪತ್ತೆಗಾಗಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಇದನ್ನೂ ಓದಿ: ಈಗಲೂ ನ್ಯಾಯ ಸಿಗುವ ನಿರೀಕ್ಷೆಯಲ್ಲಿದ್ದೇವೆ, ನಮ್ಮ ದುಃಖ ಯಾರಿಗೆ ಹೇಳೋಣ? – ನಿಲ್ಲದ ಕುಸ್ತಿಪಟುಗಳ ವೇದನೆ

  • 40ನೇ ಫ್ಲೋರ್‌ನಿಂದ ನೆಲಕ್ಕೆ ಕುಸಿದ ಲಿಫ್ಟ್ – 7 ಜನರ ದುರ್ಮರಣ

    40ನೇ ಫ್ಲೋರ್‌ನಿಂದ ನೆಲಕ್ಕೆ ಕುಸಿದ ಲಿಫ್ಟ್ – 7 ಜನರ ದುರ್ಮರಣ

    ಮುಂಬೈ: 40ನೇ ಮಹಡಿಯಿಂದ ಒಮ್ಮೆಲೆ ನೆಲ ಮಾಳಿಗೆಗೆ ಲಿಫ್ಟ್ (Lift) ಕುಸಿದ ಪರಿಣಾಮ 7 ಜನ ಮೃತಪಟ್ಟ ಘಟನೆ ಮಹಾರಾಷ್ಟ್ರದ (Maharashtra) ಥಾಣೆಯಲ್ಲಿ (Thane) ನಡೆದಿದೆ.

    ಮೃತರನ್ನು ಮಹೇಂದ್ರ ಚೌಪಾಲ್ (32), ರೂಪೇಶ್ ಕುಮಾರ್ ದಾಸ್ (21), ಹರೂನ್ ಶೇಖ್ (47), ಮಿಥ್ಲೇಶ್ (35), ಕರಿದಾಸ್ (38) ಮತ್ತು ಸುನೀಲ್ ಕುಮಾರ್ ದಾಸ್ (21) ಎಂದು ಗುರುತಿಸಲಾಗಿದೆ. ಮತ್ತೋರ್ವನ ಗುರುತು ಪತ್ತೆಯಾಗಿಲ್ಲ. ಇವರೆಲ್ಲ ಕಟ್ಟಡ ಕಾರ್ಮಿಕರಾಗಿದ್ದು ಲಿಫ್ಟ್‌ನಲ್ಲಿ ಇಳಿಯುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಘಟನೆಯಲ್ಲಿ ಲಿಫ್ಟ್‌ನಲ್ಲಿದ್ದ ಎಲ್ಲರೂ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಹಿರಿಯೂರು ಬಳಿ ಬಸ್, ಲಾರಿ ಮಧ್ಯೆ ಭೀಕರ ಅಪಘಾತ – ಐವರ ದುರ್ಮರಣ

    ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ಸಂತ್ರಸ್ತರ ಕುಟುಂಬಗಳಿಗೆ ಸಾಂತ್ವನ ಹೇಳಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ, ಲಿಫ್ಟ್ ಅಪಘಾತ ಬಹು ದೊಡ್ಡ ದುರಂತವಾಗಿದೆ. ಈ ಅಪಘಾತದಲ್ಲಿ ಪ್ರಾಣ ಕಳೆದುಕೊಂಡವರ ಕುಟುಂಬಗಳಿಗೆ ನನ್ನ ತೀವ್ರ ಸಂತಾಪವನ್ನು ವ್ಯಕ್ತಪಡಿಸುತ್ತೇನೆ ಎಂದು ಅವರು ಪೋಸ್ಟ್ ಮಾಡಿದ್ದಾರೆ.

    ಪ್ರಾಥಮಿಕ ತನಿಖೆಯ ಪ್ರಕಾರ ಲಿಫ್ಟ್‌ನ ಕೇಬಲ್ ತುಂಡಾಗಿ ಈ ಅವಘಡ ಸಂಭವಿಸಿದೆ ಎಂದು ಪೊಲೀಸರು (Police) ತಿಳಿಸಿದ್ದಾರೆ. ಇದನ್ನೂ ಓದಿ: ರಸ್ತೆಯಲ್ಲಿ ಕುರಿಬಲಿ ಕೊಟ್ಟಿದ್ದನ್ನು ಪ್ರಶ್ನಿಸಿದ್ದಕ್ಕೆ ಯುವಕರಿಬ್ಬರ ಮೇಲೆ ಹಲ್ಲೆ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]