Tag: Thavarchand Gehlot

  • ಅಮೃತ ಮಹೋತ್ಸವ ಯಾತ್ರಾ ಕಾರ್ಯಕ್ರಮಕ್ಕೆ ರಾಜ್ಯಪಾಲರಿಂದ ಚಾಲನೆ

    ಅಮೃತ ಮಹೋತ್ಸವ ಯಾತ್ರಾ ಕಾರ್ಯಕ್ರಮಕ್ಕೆ ರಾಜ್ಯಪಾಲರಿಂದ ಚಾಲನೆ

    ಬೆಂಗಳೂರು: ಯುವಜನತೆ ದೇಶದ ಸರ್ವಾಂಗೀಣ ಅಭಿವೃದ್ಧಿಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳುವ ಮೂಲಕ ಸದೃಢ ರಾಷ್ಟ್ರ ಹಾಗೂ ಆತ್ಮ ನಿರ್ಭರ ಭಾರತ ನಿರ್ಮಾಣಕ್ಕೆ ಕೈಜೋಡಿಸಬೇಕೆಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಕರೆ ನೀಡಿದರು.

    ಏಷ್ಯಾನೆಟ್ ವರ್ಕ್ ಗ್ರೂಪ್ ಹಾಗೂ ಎಸ್ ಸಿಸಿ ತಂಡದ ವತಿಯಿಂದ ಆಯೋಜಿಸಿರುವ ಅಮೃತ ಮಹೋತ್ಸವ ಯಾತ್ರಾ ಕಾರ್ಯಕ್ರಮಕ್ಕೆ ಬುಧವಾರ ರಾಜಭವನದ ಅಂಗಳದಲ್ಲಿ ಚಾಲನೆ ನೀಡಿ ಅವರು ಮಾತನಾಡಿದರು.

    ಏಷ್ಯಾನೆಟ್ ವರ್ಕ್ ಗ್ರೂಪ್ ವತಿಯಿಂದ ಆಯೋಜಿಸಿರುವ ಅಮೃತ ಮಹೋತ್ಸವ ಯಾತ್ರೆ ಕಾರ್ಯಕ್ರಮದಲ್ಲಿ ಭಾಗವಹಿಸಿರುವ ಎನ್ ಸಿಸಿ ಕೆಡೆಟ್ ಗಳು ಭಾರತೀಯ ವಿಜ್ಞಾನ ಸಂಸ್ಥೆ, ಇಸ್ರೋ ಮತ್ತು ರಾಷ್ಟ್ರೀಯ ಮಿಲಿಟರಿ ಸ್ಮಾರಕ, ಇನ್ಫೋಸಿಸ್ ಮುಂತಾದ ಪ್ರಮುಖ ಸಂಸ್ಥೆಗಳಿಗೆ ಭೇಟಿ ನೀಡಲಿದ್ದು, ಸಂಸ್ಥೆಗಳ ಕಾರ್ಯಗಳು ಬೆಳೆದು ಬಂದ ಹಾದಿಯ ಬಗ್ಗೆ ಮಾಹಿತಿ ಪಡೆಯಲಿದ್ದಾರೆ. ಈ ಯಾತ್ರೆ ಯುವಕರಿಗೆ ದೇಶದ ಸಾಧನೆಗಳನ್ನು ಅರ್ಥೈಸಿಕೊಳ್ಳುವುದರ ಜೊತೆಗೆ ರಾಷ್ಟ್ರ ನಿರ್ಮಾಣ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಪ್ರೇರೇಪಿಸುತ್ತದೆ ಎಂದು ಹೇಳುವುದರ ಜೊತೆಗೆ ಏಷಿಯಾ ನೆಟವರ್ಕ್ ಈ ಕಾರ್ಯಕ್ರಮ ಹಮ್ಮಿಕೊಂಡಿರುವುದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.

    ಭಾರತವು ಸ್ವಾತಂತ್ರ್ಯದ 75 ನೇ ವಾರ್ಷಿಕೋತ್ಸವವನ್ನು “ಆಜಾದಿ ಕಾ ಅಮೃತ್ ಮಹೋತ್ಸವ” ಎಂದು ಆಚರಿಸುತ್ತಿದೆ ಅಮೃತ ಮಹೋತ್ಸವದ ಸಂದರ್ಭದಲ್ಲಿ ದೇಶಾದ್ಯಂತ ಹಲವು ಕಾರ್ಯಕ್ರಮಗಳು ನಡೆಸಲಾಗುತ್ತಿದೆ. “ಆಜಾದಿ ಕಾ ಅಮೃತ್ ಮಹೋತ್ಸವ”ದಲ್ಲಿ ಪ್ರಗತಿಪರ ಭಾರತದ 75 ವರ್ಷಗಳ ಸ್ವಾತಂತ್ರ್ಯ ಮತ್ತು ಜನತೆ, ಸಂಸ್ಕೃತಿ ಮತ್ತು ಸಾಧನೆಗಳ ವೈಭವದ ಇತಿಹಾಸವನ್ನು ಪ್ರತಿಯೊಬ್ಬರು ತಿಳಿದುಕೊಳ್ಳುವ ಸಲುವಾಗಿ ಕೇಂದ್ರ ಸರ್ಕಾರ ಅನೇಕ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದೆ ಎಂದು ರಾಜ್ಯಪಾಲರು ಹೇಳಿದರು.

    ಸ್ವಾತಂತ್ರ್ಯ ಅಮೃತ ಮಹೋತ್ಸವದ ಸಂದರ್ಭದಲ್ಲಿ 75 ವರ್ಷಗಳಲ್ಲಿ ಭಾರತದ ಬೆಳವಣಿಗೆ ಹಾಗೂ ಇತಿಹಾಸದ ಸುವರ್ಣ ನೆನಪುಗಳ ಬಗ್ಗೆ ತಿಳಿದುಕೊಳ್ಳುವುದರ ಜೊತೆಗೆ ಆತ್ಮ ನಿರ್ಭರ ಭಾರತ ಸಂಕಲ್ಪಕ್ಕೆ ನಾವೆಲ್ಲರೂ ಕೈಜೋಡಿಸೋಣ ಎಂದು ತಿಳಿಸಿದರು.

    ಕಾರ್ಯಕ್ರಮದಲ್ಲಿ ಏಷಿಯಾ ನ್ಯೂಸ್ ನೆಟ್ ವರ್ಕ್ ಕಾರ್ಯಕಾರಿ ಅಧ್ಯಕ್ಷರಾದ ರಾಜೇಶ್ ಕಾಲ್ರ, ಸುವರ್ಣ ನ್ಯೂಸ್, ಕನ್ನಡಪ್ರಭ ಸಂಸ್ಥೆ ಮುಖ್ಯ ಸಂಪಾದಕರಾದ ರವಿ ಹೆಗಡೆ, ಸಿಇಓ ನೀರಜ್ ಕೊಹ್ಲಿ, ಎನ್ ಸಿಸಿ ಕಮಾಂಡರ್ ಕರ್ನಲ್ ಬಸಂತ್ ಸಿಂಗ್ , ಸಹಾಯಕ ಸಂಪಾದಕರಾದ ವಿನೋದ್ ಕುಮಾರ್, ಮಾರ್ಕೆಟಿಂಗ್ ಮುಖ್ಯಸ್ಥರಾದ ಕಿರಣ್ ಅಪ್ಪಚ್ಚು ಸೇರಿದಂತೆ ಮುಂತಾದ ಗಣ್ಯರು, ಎನ್ ಸಿಸಿ ಕೆಡೆಟ್ ಗಳು ಉಪಸ್ಥಿತರಿದ್ದರು.

    Live Tv
    [brid partner=56869869 player=32851 video=960834 autoplay=true]

  • 44ನೇ ಚೆಸ್ ಒಲಿಂಪಿಯಾಡ್ ಟಾರ್ಚ್ ರಿಲೇ ಸ್ವಾಗತಿಸಿದ ರಾಜ್ಯಪಾಲರು

    44ನೇ ಚೆಸ್ ಒಲಿಂಪಿಯಾಡ್ ಟಾರ್ಚ್ ರಿಲೇ ಸ್ವಾಗತಿಸಿದ ರಾಜ್ಯಪಾಲರು

    ಬೆಂಗಳೂರು: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ರಾಜಭವನದಲ್ಲಿ 44ನೇ ಚೆಸ್ ಒಲಿಂಪಿಯಾಡ್ ಟಾರ್ಚ್ ರಿಲೇಯನ್ನು (ಕ್ರೀಡಾ ಜ್ಯೋತಿಯನ್ನು) ಸ್ವಾಗತಿಸಿದರು.

    ಕೇಂದ್ರ ಹಾಗೂ ರಾಜ್ಯ ಯುವ ಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ನೆಹರು ಯುವಕೇಂದ್ರ, ಎನ್‍ಎಸ್‍ಎಸ್‍ಸಿ, ಕರ್ನಾಟಕ ರಾಜ್ಯ ಚೆಸ್ ಅಸೋಸಿಯೇಷನ್, ಎನ್‍ಎಸ್‍ಎಸ್ ಜಂಟಿಯಾಗಿ ರಾಜಭವನದ ಗಾಜಿನಮನೆಯಲ್ಲಿ ಆಯೋಜಿಸಿದ್ದ 44 ನೇ ಚೆಸ್ ಒಲಿಂಪಿಯಾಡ್ ಟಾರ್ಚ್ ರಿಲೇ ಸ್ವಾಗತ ಕಾರ್ಯಕ್ರಮದಲ್ಲಿ ರಾಜ್ಯಪಾಲರು ಕ್ರೀಡಾ ಜ್ಯೋತಿಯನ್ನು ಸ್ವಾಗತಿಸಿದರು.

    ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ರಾಜ್ಯಪಾಲರು, 44ನೇ ವಿಶ್ವ ಚೆಸ್ ಒಲಿಂಪಿಯಾಡ್ ಜುಲೈ 28 ರಿಂದ ಆಗಸ್ಟ್ 10 ರವರೆಗೆ ಐದು ಬಾರಿಯ ವಿಶ್ವ ಚಾಂಪಿಯನ್ ವಿಶ್ವನಾಥನ್ ಆನಂದ್ ಅವರ ಜನ್ಮಸ್ಥಳದಲ್ಲಿ ನಡೆಯಲಿದೆ. ಏಷ್ಯಾ ಖಂಡದಲ್ಲಿ 30 ವರ್ಷಗಳ ನಂತರ ಹಾಗೂ ಭಾರತ ದೇಶದಲ್ಲಿ ಮೊದಲ ಬಾರಿಗೆ ತಮಿಳುನಾಡು ರಾಜ್ಯದ ಮಹಾಬಲಿಪುರಂನಲ್ಲಿ ನಡೆಯಲಿರುವ 44ನೇ ಚೆಸ್ ಒಲಿಂಪಿಯಾಡ್ ಟಾರ್ಚ್ ರಿಲೇಗೆ ಕರ್ನಾಟಕದಲ್ಲಿ ಸ್ವಾಗತ ಕೋರುತ್ತೇನೆ ಎಂದರು.

    ಭಾರತದ ಚೆಸ್ ಕ್ಯಾಪಿಟಲ್ ಎಂದು ಕರೆಯಲ್ಪಡುವ ಚೆನ್ನೈನಲ್ಲಿ ವಿಶ್ವ ಚೆಸ್ ಚಾಂಪಿಯನ್‍ಶಿಪ್ ಅನ್ನು 2013 ರಲ್ಲಿ ಆಯೋಜಿಸಲಾಗಿತ್ತು. ಒಲಿಂಪಿಕ್ ಕ್ರೀಡಾಕೂಟದಂತೆ, ಚೆಸ್ ಒಲಿಂಪಿಯಾಡ್‍ನ ಟಾರ್ಚ್ ರಿಲೇ ಅನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ನವದೆಹಲಿಯಿಂದ ಮೊದಲ ಬಾರಿಗೆ ಪ್ರಾರಂಭಿಸಿದರು. ಇದನ್ನು ಪ್ರಾಚೀನ ಭಾರತದಲ್ಲಿ ಚದುರಂಗ ಎಂದು ಆಡಲಾಗುತ್ತಿತ್ತು. ಈ ಆಟವು ಪ್ರಸ್ತುತ ಪ್ರಪಂಚದ ಮೂಲೆ ಮೂಲೆಗಳಲ್ಲಿ ಚೆಸ್ ರೂಪದಲ್ಲಿ ಪ್ರಚಲಿತದಲ್ಲಿದೆ. ಚೆಸ್ ಒಂದು ಆಟವಾಗಿದ್ದು ಇದರಲ್ಲಿ ಹೆಚ್ಚಿನ ಬುದ್ಧಿವಂತಿಕೆಯನ್ನು ಬಳಸಲಾಗುತ್ತದೆ ಎಂದರು.

    ಚೆಸ್ ಆಟದಲ್ಲಿ, ಕೋಟೆಯ ಮೂಲಕ ಮುಂಭಾಗದ ಆಟಗಾರನನ್ನು ಸುತ್ತುವರಿದಿರುವುದು ಮತ್ತು ಸೋಲಿಸುವುದು, ಕಾರ್ಯತಂತ್ರವನ್ನು ರೂಪಿಸಲು ನಮಗೆ ಸ್ಫೂರ್ತಿ ನೀಡುತ್ತದೆ. ಈ ಕ್ರೀಡೆಯಲ್ಲಿ ನಮ್ಮ ಅನೇಕ ಆಟಗಾರರು ವಿಶ್ವ ಮಟ್ಟದಲ್ಲಿ ದೇಶಕ್ಕೆ ಹೆಮ್ಮೆ ತಂದಿದ್ದಾರೆ. ಇದರಲ್ಲಿ 5 ಬಾರಿಯ ವಿಶ್ವ ಚಾಂಪಿಯನ್ ಮತ್ತು ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿ ಪುರಸ್ಕೃತ, ಪದ್ಮವಿಭೂಷಣ ವಿಶ್ವನಾಥನ್ ಆನಂದ್ ಅವರ ಹೆಸರನ್ನು ಸುವರ್ಣಾಕ್ಷರಗಳಲ್ಲಿ ಕೆತ್ತಲಾಗಿದೆ.

    ಭಾರತದ ಮೊದಲ ಮಹಿಳಾ ಗ್ರೇಡ್‍ಮಾಸ್ಟರ್‍ಗಳಾದ ಸುಬ್ರಮಣ್ಯಂ ವಿಜಯಲಕ್ಷ್ಮಿ ಮತ್ತು ಕೋನೇರು ಹಂಪಿ ಅವರುಗಳು ಈ ಆಟದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದಾರೆ. ಇತ್ತೀಚೆಗೆ 16 ವರ್ಷದ ಗ್ರೇಡ್ ಮಾಸ್ಟರ್ ರಮೇಶ್ ಬಾಬು ಪ್ರಗ್ನಾನಂದ ವಿಶ್ವ ಚಾಂಪಿಯನ್ ಮ್ಯಾಗ್ನಸ್ ಕಾಲ್ರ್ಸನ್ ಅವರನ್ನು ಸೋಲಿಸುವ ಮೂಲಕ ದೇಶಕ್ಕೆ ಗೌರವ ತಂದಿದ್ದಾರೆ ಎಂದು ತಿಳಿಸಿದರು. ಇದನ್ನೂ ಓದಿ: ಜಯದೇವ ಆಸ್ಪತ್ರೆ ನಿರ್ದೇಶಕರಾಗಿ ಸಿ.ಎನ್.ಮಂಜುನಾಥ್‌ ಮುಂದುವರಿಕೆ – ಸೇವಾವಧಿ 1 ವರ್ಷ ವಿಸ್ತರಣೆ

    ಭಾರತದಲ್ಲಿ ಕ್ರೀಡಾ ಚಟುವಟಿಕೆಗಳನ್ನು ಉತ್ತೇಜಿಸುವ ಸಲುವಾಗಿ ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಕೇಂದ್ರ ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಭಾರತೀಯ ಕ್ರೀಡಾ ಪ್ರಾಧಿಕಾರವು ಪರಿಣಾಮಕಾರಿ ಯೋಜನೆಗಳನ್ನು ಸಿದ್ಧಪಡಿಸಿ, ಅನುಷ್ಠಾನಗೊಳಿಸುತ್ತಿದೆ ಎಂದು ಹೇಳಿದರು.

    2024ರಲ್ಲಿ ಪ್ಯಾರಿಸ್‍ನಲ್ಲಿ ನಡೆಯಲಿರುವ ಒಲಿಂಪಿಕ್ಸ್‍ನಲ್ಲಿ ಭಾರತದ ಆಟಗಾರರು ಯಶಸ್ಸಿನ ಪತಾಕೆಯನ್ನು ಬೀಸುವ ಮೂಲಕ ವಿಶ್ವದಲ್ಲಿ ದೇಶದ ಹೆಸರನ್ನು ಬೆಳಗುತ್ತಾರೆ ಎಂಬ ಸಂಪೂರ್ಣ ನಂಬಿಕೆ ನನಗಿದೆ. ಸ್ವಾತಂತ್ರ್ಯದ 75ನೇ ವರ್ಷಾಚರಣೆಯನ್ನು ಅಮೃತ ಮಹೋತ್ಸವ ಎಂದು ಆಚರಿಸುತ್ತಿರುವ ಇಂತಹ ಸಂದರ್ಭದಲ್ಲಿ 44ನೇ ಚೆಸ್ ಒಲಿಂಪಿಯಾಡ್ ಆಯೋಜಿಸಿರುವುದು ನಮಗೆ ಹೆಮ್ಮೆಯ ಸಂಗತಿ. ನನಗೆ ಸಂಪೂರ್ಣ ನಂಬಿಕೆಯಿದೆ, ಈ ಕಾರ್ಯಕ್ರಮವು ದೇಶವು ವಿಶ್ವದಾದ್ಯಂತ ಹೆಮ್ಮೆಪಡುವಂತೆ ಮಾಡುತ್ತದೆ ಎಂದ ಅವರು, ನೆಹರು ಯುವ ಕೇಂದ್ರ ಸಂಘಟನೆ, ಕರ್ನಾಟಕ ರಾಜ್ಯ ಚೆಸ್ ಅಸೋಸಿಯೇಷನ್ ಮತ್ತು ಎನ್‍ಎಸ್‍ಎಸ್ ಗೆ ಅಭಿನಂದನೆಗಳನ್ನು ಸಲ್ಲಿಸಿದರು.

    ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರಾದ ಡಾ.ನಾರಾಯಣಗೌಡ, ವಿಧಾನ ಪರಿಷತ್ ಸದಸ್ಯ, ಕರ್ನಾಟಕ ಒಲಂಪಿಕ್ ಸಂಸ್ಥೆಯ ಅಧ್ಯಕ್ಷ ಕೆ.ಗೋವಿಂದರಾಜ್, ಡಾ. ಶಾಲಿನಿ ರಜನೀಶ್, ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಆಯುಕ್ತ ಡಾ. ಗೋಪಾಲಕೃಷ್ಣ, ನೆಹರು ಯುವ ಕೇಂದ್ರ ಸಂಘಟನೆಯ ದಕ್ಷಿಣ ವಲಯದ ಪ್ರಾದೇಶಿಕ ನಿರ್ದೇಶಕ ಎಂ.ಎನ್. ನಟರಾಜ್, ಕರ್ನಾಟಕ ರಾಜ್ಯದ ಎನ್‍ಎಸ್‍ಎಸ್ ಅಧಿಕಾರಿ ಪ್ರತಾಪ್ ಲಿಂಗಯ್ಯ, ಕರ್ನಾಟಕ ರಾಜ್ಯ ಚೆಸ್ ಅಸೋಸಿಯೇಶನ್‍ನ ಅಧ್ಯಕ್ಷ, ಡಿಪಿ ಅನಂತ, ಮಾಸ್ಟರ್ ಸ್ಟೆನಿ, ತೇಜ್ ಕುಮಾರ್ ಮತ್ತು ಗಿರೀಶ್ ಕೌಶಿಕ್ ಸೇರಿದಂತೆ ಮುಂತಾದ ಗಣ್ಯರು ಉಪಸ್ಥಿತರಿದ್ದರು.

    Live Tv
    [brid partner=56869869 player=32851 video=960834 autoplay=true]

  • ಶ್ರೀ ಸಿದ್ಧಾಚಲ ಸ್ಥೂಲಭದ್ರ ಧಾಮ ಸಿದ್ಧ ಕ್ಷೇತ್ರಕ್ಕೆ ರಾಜ್ಯಪಾಲರ ಭೇಟಿ

    ಶ್ರೀ ಸಿದ್ಧಾಚಲ ಸ್ಥೂಲಭದ್ರ ಧಾಮ ಸಿದ್ಧ ಕ್ಷೇತ್ರಕ್ಕೆ ರಾಜ್ಯಪಾಲರ ಭೇಟಿ

    ಬೆಂಗಳೂರು: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ದೇವನಹಳ್ಳಿಯಲ್ಲಿರುವ ಶ್ರೀ ಸಿದ್ಧಾಚಲ ಸ್ಥೂಲಭದ್ರ ಧಾಮಕ್ಕೆ ಭೇಟಿ ನೀಡಿ, ಶ್ರೀ ಆದಿನಾಥೇಶ್ವರ ಸ್ವಾಮಿ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿದರು.

    ಆಚಾರ್ಯ ಶ್ರೀ ಸ್ಥೂಲಭದ್ರ ಸುರೀಶ್ವರ್ ಜಿ ಮಹಾರಾಜ್ ಸಾಹಬ್ ಅವರ 19 ನೇ ಪುಣ್ಯತಿಥಿ ಕಾರ್ಯಕ್ರಮದಲ್ಲಿ ಭಾಗವಹಿಸಿ, ಚಂದ್ರ ಹಿಲ್ಸ್ ಅಂತರಾಷ್ಟ್ರೀಯ ಶಾಲೆಯ ನಿರ್ಮಾಣ ಕಾಮಾಗಾರಿಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ರಾಜ್ಯಪಾಲರು, ಶ್ರೀ ಸ್ಥೂಲಭದ್ರ ಸೂರೀಶ್ವರ ಮಹಾರಾಜ್ ಅವರು ಮಹಾನ್ ಸದ್ಗುಣಿ ಪ್ರಶಾಂತ ಮೂರ್ತಿ, ಪರಿಪೂರ್ಣ ವ್ಯಕ್ತಿ. ಅವರಿರುವೆಡೆ ಲಕ್ಷ್ಮಿ ಮತ್ತು ಸರಸ್ವತಿ ಇಬ್ಬರೂ ಅಲ್ಲಿ ವಾಸಿಸುತ್ತಿದ್ದರು, ಅವರು ಸಹಜ-ಆಧ್ಯಾತ್ಮಿಕ ಯೋಗಿಯಾಗಿದ್ದರು ಎಂದರು.

    ಬೆಂಗಳೂರು ದೇವನಹಳ್ಳಿಯ ಪುಣ್ಯಕ್ಷೇತ್ರದಲ್ಲಿ ಶ್ರೀ ಸಿದ್ಧಾಚಲ ಸ್ಥೂಲಭದ್ರ ಧಾಮ ಗಿರಿಮಾಲವು ಅದ್ಭುತವಾದ ಕರಕುಶಲ ಕಲೆಯಾಗಿದೆ. ದಕ್ಷಿಣ ಕೇಶರಿ ಆಚಾರ್ಯ ಶ್ರೀ ಸ್ಥೂಲಭದ್ರ ಸೂರೀಶ್ವರ್ಜಿ ಮಹಾರಾಜ್ ಸಾಹೇಬರ ಆಶೀರ್ವಾದ ಮತ್ತು ನಿಮ್ಮ ಶಿಷ್ಯರಾದ ಆಚಾರ್ಯ ಶ್ರೀ ಚಂದ್ರಾಯಶ ಸೂರೀಶ್ವರ್ಜಿ ಮಹಾರಾಜ್ ಸಾಹೇಬರ ಮಹಾನ್ ದೃಷ್ಟಿ ಮತ್ತು ದಿವ್ಯ ಚಿಂತನೆಯ ಪ್ರಭಾವದಿಂದ ಜಿನಾಲಯಗಳ ದರ್ಶನ ಮತ್ತು ತೀರ್ಥಯಾತ್ರೆಗಳು ನಡೆಯುತ್ತಿವೆ ಎಂದು ಹೇಳಿದರು. ಇದನ್ನೂ ಓದಿ: 20 ಮಂದಿಯ ರಾಜೀನಾಮೆಯ ಬೆನ್ನಲ್ಲೇ ನೂತನ ಸಚಿವ ಸಂಪುಟ ರಚನೆ- 13 ಮಂದಿ ಪ್ರಮಾಣವಚನ

    ಧರ್ಮ, ಸಂಸ್ಕೃತಿ ಮತ್ತು ಸಂಸ್ಕಾರಗಳ ಜ್ಞಾನವು ಮಾನವೀಯ, ಸದ್ಗುಣ, ಉತ್ತಮ ಚಿಂತನೆಗಳು ಮತ್ತು ಪರೋಪಕಾರಿ ಶಿಕ್ಷಣದೊಂದಿಗೆ ಬರುತ್ತದೆ. ಭಾರತೀಯ ಶಿಕ್ಷಣ ವ್ಯವಸ್ಥೆಯು ಪ್ರಾಚೀನ ಕಾಲದಿಂದಲೂ “ವಸುಧೈವ ಕುಟುಂಬಕಂ” ತತ್ವಶಾಸ್ತ್ರದ ಮೇಲೆ ಕೇಂದ್ರೀಕೃತವಾಗಿದೆ. ಆಧುನಿಕ ಜ್ಞಾನವನ್ನು ಮೌಲ್ಯಗಳೊಂದಿಗೆ ಸಂಯೋಜಿಸುವ ಮೂಲಕ ಶಿಕ್ಷಣ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸಿ, ಅದು ಜಗತ್ತಿಗೆ ಹೊಸ ದಿಕ್ಕನ್ನು ನೀಡುವುದಲ್ಲದೆ ಇಡೀ ಮಾನವಕುಲಕ್ಕೆ ಪ್ರಯೋಜನವನ್ನು ನೀಡುತ್ತದೆ ಎಂದು ರಾಜ್ಯಪಾಲರು ತಿಳಿಸಿದರು.

    ಪರಮ ಪೂಜ್ಯ ಜೈನ ಆಚಾರ್ಯ ಶ್ರೀ ಚಂದ್ರಯೇಶ ಸೂರೀಶ್ವರ್ಜಿ ಮಹಾರಾಜ್, ಪ್ರಧಾನ ಟ್ರಸ್ಟಿ ಪ್ರಕಾಶ್ ಜಿ ಕೊಠಾರಿ, ಇಂದರಚಂದ್ ಜಿ ಬೋಹ್ರಾ, ಧರ್ಮಿಚಂದ್ ಜಿ ಧೋಕಾ, ಚಿಕ್ಕಪೇಟೆ ಒಕ್ಕೂಟದ ಅಧ್ಯಕ್ಷ ಗೌತಮ್ ಸೋಲಂಕಿ ಸೇರಿದಂತೆ ಮುಂತಾದ ಗಣ್ಯರು ಉಪಸ್ಥಿತರಿದ್ದರು.

  • ಲೋಕ ಕಲ್ಯಾಣ, ವಿಶ್ವಶಾಂತಿಗಾಗಿ ಅಹಿಂಸಾ ಮಾರ್ಗ ಅನುಸರಿಸಿ: ಗೆಹ್ಲೋಟ್

    ಲೋಕ ಕಲ್ಯಾಣ, ವಿಶ್ವಶಾಂತಿಗಾಗಿ ಅಹಿಂಸಾ ಮಾರ್ಗ ಅನುಸರಿಸಿ: ಗೆಹ್ಲೋಟ್

    ಬೆಂಗಳೂರು: ಲೋಕ ಕಲ್ಯಾಣ ಮತ್ತು ವಿಶ್ವಶಾಂತಿಗಾಗಿ ದೇಶದ ಪ್ರತಿಯೊಬ್ಬ ನಾಗರಿಕನೂ ಅಹಿಂಸಾ ಮಾರ್ಗ ಅನುಸರಿಸಬೇಕು ಎಂದು ರಾಜ್ಯಪಾಲರಾದ ಥಾವರ್‌ಚಂದ್ ಗೆಹ್ಲೋಟ್ ಕರೆ ನೀಡಿದ್ದಾರೆ.

    ನಗರದ ಚಿಕ್ಕಪೇಟೆಯಲ್ಲಿರುವ ಉದಯ ಭಾನು ಸಾರ್ವಜನಿಕ ಆಟದ ಮೈದಾನದಲ್ಲಿ ಜೈನ ಸಮುದಾಯದ ವತಿಯಿಂದ ಆಯೋಜಿಸಲಾಗಿದ್ದ ಸದ್ಗುರು ಸಮಾಗಮ, ರಾಜೋಹರಣ್ ಉತ್ಸವದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಅಹಿಂಸಾ ಮಾರ್ಗ ಅನುಸರಿಸುವ ಮೂಲಕ ಶಾಂತಿ ಸಮಾಜ ನಿರ್ಮಾಣಕ್ಕೆ ಶ್ರಮಿಸಬೇಕು ಎಂದಿದ್ದಾರೆ. ಇದನ್ನೂ ಓದಿ: ವಿಧಾನಪರಿಷತ್‍ಗೆ ಕಾಂಗ್ರೆಸ್‍ನಿಂದ ಅಚ್ಚರಿಯ ಆಯ್ಕೆ – ನಾಗರಾಜ್ ಯಾದವ್, ಅಬ್ದುಲ್ ಜಬ್ಬಾರ್ ಕಣಕ್ಕೆ

    ಜೈನ ಸಮಾಜವು ಮಾನವ ಸೇವೆಯ ಜೊತೆಗೆ ಅನೇಕ ಸಾಮಾಜಿಕ, ಧಾರ್ಮಿಕ, ಸಾಂಸ್ಕೃತಿಕ, ನೈತಿಕ, ದತ್ತಿ ಕಾರ್ಯಗಳ ಮೂಲಕ ಜೈನ ಧರ್ಮದ ಕೊನೆಯ ತೀರ್ಥಂಕರರಾದ ಮಹಾವೀರರ `ಬದುಕು ಮತ್ತು ಬದುಕಲು ಬಿಡಿ’ ಎಂಬ ಅಮರ ಸಂದೇಶವನ್ನು ಈಡೇರಿಸುತ್ತಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಜ್ಞಾನವಾಪಿ ಮಸೀದಿ ವಿವಾದ – ಜಿಲ್ಲಾ ನ್ಯಾಯಾಲಯದಿಂದ ನಾಳೆ ಮಹತ್ವದ ಆದೇಶ

    ಜೈನ ಸಮಾಜದ ಗುರುಗಳ ಪ್ರವಚನಗಳಿಂದ ಪ್ರೇರಣೆ ಪಡೆದು ಮಾನವ ಸೇವೆ ಮಾಡುತ್ತಿರುವುದು ಸಂತಸದ ಸಂಗತಿ. ಧೀಕ್ಷೆ ಪಡೆದವರು ಕ್ರೋಧ, ಅಹಂಕಾರ, ಮೋಸ, ಆಸೆ ಇತ್ಯಾದಿಗಳನ್ನು ಜಯಿಸುತ್ತಿದ್ದಾರೆ. ಈ ಆದರ್ಶಗಳನ್ನು ಅನುಸರಿಸಲು 11 ಜನರು ರಾಜೋಹರಣ ಉತ್ಸವದಲ್ಲಿ ದೀಕ್ಷೆ ತೆಗೆದುಕೊಳ್ಳುತ್ತಿರುವುದು ಪುಣ್ಯದ ಕೆಲಸವಾಗಿದೆ ಎಂದು ಶ್ಲಾಘಿಸಿದ್ದಾರೆ.

    thavarchand gehlot
    ಸಾಂದರ್ಭಿಕ ಚಿತ್ರ

    ಅಹಿಂಸೆಯ ಬೆಳಕನ್ನು ಜಾಗೃತಗೊಳಿಸುವ ಮಹತ್ತರವಾದ ಕೆಲಸವನ್ನು ನಾವೆಲ್ಲರೂ ಮಾಡಬೇಕಾಗಿದೆ. ಅಹಿಂಸೆ ತತ್ವ ಪಾಲಿಸುವ ಮೂಲಕ ಶಾಂತಿ ಸಮಾಜ ನಿರ್ಮಿಸಬಹುದು. ಭಾರತದಲ್ಲಿ ಇಂದಿಗೂ ಕೆಲವು ಜ್ವಲಂತ ಸಮಸ್ಯೆಗಳಿವೆ. ಅವುಗಳನ್ನು ಬಗೆಹರಿಸಲು ಅಹಿಂಸಾ ಮಾರ್ಗ ಅನುಸರಿಸಬೇಕು. ವಸುಧೈವ ಕುಟುಂಬಕಂ (ಬ್ರಹ್ಮಾಂಡ ಪರಿವಾರ), ಸರ್ವೇ ಜನೋ ಸುಖಿನೋ ಭವಂತು, ಸರ್ವೇ ಸಂತುಂ ಮಾರ್ಗಗಳನ್ನು ಅನುಸರಿಸಬೇಕಿದೆ. ಲೋಕ ಕಲ್ಯಾಣ ಮತ್ತು ವಿಶ್ವಶಾಂತಿಗಾಗಿ ಮುನ್ನಡೆಯಲು ರಾಷ್ಟ್ರವ್ಯಾಪಿ ಅಹಿಂಸಾ ಮಾರ್ಗವನ್ನು ಅನುಸರಿಸಬೇಕು ಎಂದು ಒತ್ತಿ ಹೇಳಿದ್ದಾರೆ.

    ಶ್ರೀ ವರ್ಧಮಾನ್ ಸಾಗರ್ ಸುರೀಶ್ವರ್ ಮಹಾರಾಜ್, ವಿಜಯ್ ನರರತ್ನ ಸುರೀಶ್ವರ್ ಮಹಾರಾಜ್ ಸಾಹಿಬ್, ಸಚಿವ ಬಿ.ಸಿ.ನಾಗೇಶ್, ಸಂಸದ ಪಿ.ಸಿ.ಮೋಹನ್, ಶಾಸಕರಾದ ಉದಯ ಗರುಣಾಚಾರ್, ಜಮೀರ್ ಅಹ್ಮದ್ ಮೊದಲಾದವರು ಪಾಲ್ಗೊಂಡಿದ್ದರು.