Tag: The- end

  • ಕನ್ನಡದ ಮೊದಲ ‘ಸೂಪರ್ ಹೀರೋ’ ಕಾನ್ಸೆಪ್ಟ್ ಚಿತ್ರದಲ್ಲಿ ಹನುಮಾನ್ ಚಾಲೀಸ್

    ಕನ್ನಡದ ಮೊದಲ ‘ಸೂಪರ್ ಹೀರೋ’ ಕಾನ್ಸೆಪ್ಟ್ ಚಿತ್ರದಲ್ಲಿ ಹನುಮಾನ್ ಚಾಲೀಸ್

    ವನ್ ಕುಮಾರ್ (Pawan Kumar) ನಿರ್ದೇಶನದ ‘ದಿ ಎಂಡ್’ (The End) ಚಿತ್ರದ ಹಾಡೊಂದರ (ಹನುಮಾನ್ ಚಾಲೀಸ) (Hanuman Chalice) ಲಿರಿಕಲ್ ವಿಡಿಯೋ ಮಹಾಶಿವರಾತ್ರಿಯ ಪುಣ್ಯದಿವಸ ಬಿಡುಗಡೆಯಾಯಿತು. ನಿರ್ಮಾಪಕರಾದ ಶಿಲ್ಪ ಶ್ರೀನಿವಾಸ್, ಮಂಜುನಾಥ್, ಧರ್ಮಶ್ರೀ ಮಂಜುನಾಥ್, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಉಪಾಧ್ಯಕ್ಷ ವೆಂಕಟೇಶ್ ಮುಂತಾದ ಗಣ್ಯರು ಅತಿಥಿಗಳಾಗಿ ಆಗಮಿಸಿ ಚಿತ್ರತಂಡಕ್ಕೆ ಶುಭ ಕೋರಿದರು. ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.

    ಕನ್ನಡ ಪ್ರಥಮ ಸೂಪರ್ ಹೀರೋ ಕಾನ್ಸೆಪ್ಟ್ ನ ಚಿತ್ರ ದಿ ಎಂಡ್‌‌. ಈಗಾಗಲೇ ಚಿತ್ರದ ಚಿತ್ರೀಕರಣ ಮುಕ್ತಾಯ ಹಂತ ತಲುಪಿದೆ. ಕೇವಲ ಐದು ದಿನಗಳ ಚಿತ್ರೀಕರಣ ಮಾತ್ರ ಬಾಕಿಯಿದೆ. ವಿಶೇಷ ಪಾತ್ರದಲ್ಲಿ ನಟಿಸಲು ಅನಂತನಾಗ್ ಅವರ ಜೊತೆ ಮಾತುಕತೆ ನಡೆಯುತ್ತಿದೆ. ಹದಿನೆಂಟು ಪುರಾಣಗಳನ್ನು ಆಧರಿಸಿ ಮಾಡುತ್ತಿರುವ ಈ ಚಿತ್ರ, ಒಂಭತ್ತು ಭಾಷೆಗಳಲ್ಲಿ ಐದು ಭಾಗಗಳಲ್ಲಿ ಬರಲಿದೆ. ಇದು ಮೊದಲ ಭಾಗ. ದಿ ಎಂಡ್ ಚಿತ್ರಕ್ಕೆ PREAMBLE ಎಂಬ ಅಡಿಬರಹವಿದೆ.PREAMBLE ಎಂದರೆ ಪೀಠಿಕೆ ಎಂದು ಅರ್ಥ. ಇನ್ನು ಸರ್ವಕಾಲಿಕ ಸೂಪರ್ ಹೀರೋ ಹನುಮಂತನ ಮಹಿಮೆಯನ್ನು ವರ್ಣಿಸುವ ಹನುಮಾನ್ ಚಾಲೀಸ ಹಾಡನ್ನು ಈ ಚಿತ್ರದಲ್ಲಿ ಬಳಸಿಕೊಂಡಿದ್ದೇವೆ.  ಮಹಾಶಿವರಾತ್ರಿ ಪುಣ್ಯದಿವಸ ಈ ಹಾಡನ್ನು ಬಿಡುಗಡೆ ಮಾಡಿದ್ದೇವೆ. ಐದು ಪ್ರಸಿದ್ದ ಶಿವ ದೇಗುಲಗಳಲ್ಲಿ ಏಕಕಾಲಕ್ಕೆ ಈ ಹಾಡು ಬಿಡುಗಡೆಯಾಗಿರುವುದು ವಿಶೇಷ. ಅರುಣ್ ಆಂಡ್ರ್ಯೂ ಸಂಗೀತ ನೀಡಿರುವ ಈ ಹಾಡನ್ನು ಮಧುಕುಮಾರ್ ಭಾವಪರವಶರಾಗಿ ಹಾಡಿದ್ದಾರೆ. ಅಂದುಕೊಂಡ ಹಾಗೆ ಆದರೆ “ದಿ ಎಂಡ್” ಇದೇ ಮೇ ವೇಳೆಗೆ ನಿಮ್ಮ ಮುಂದೆ ಬರಲಿದೆ ಎಂದು ನಿರ್ದೇಶಕ ಪವನ್ ಕುಮಾರ್ ತಿಳಿಸಿದರು.

    ಪವನ್ ಕುಮಾರ್ ಅವರು ಆಯ್ದುಕೊಂಡಿರುವ ಕಥೆ ಚೆನ್ನಾಗಿದೆ. ಸೂಪರ್ ಹೀರೋ ಎಂದರೆ ವಿಶೇಷ ಶಕ್ತಿಯುಳ್ಳವನು ಎಂದು. ಚಿತ್ರದಲ್ಲಿ ನಾನು ಸೂಪರ್ ಹೀರೋ ಪಾತ್ರದಲ್ಲಿ ಕಾಣಿಸಿಕೊಂಡಿದ್ದೇನೆ ಎಂದರು ನಾಯಕ ರವಿಶೇಖರ್.

    ನಾಯಕಿ ಪವಿತ್ರ, ವಿಶೇಷ ಪಾತ್ರದಲ್ಲಿ ನಟಿಸಲಿರುವ ನಟಿ ಚೈತ್ರಾ ಕೊಟ್ಟೂರ್, ಸಂಗೀತ ನಿರ್ದೇಶಕ ಅರುಣ್ ಆಂಡ್ರ್ಯೂ, ಗಾಯಕ ಮಧುಕುಮಾರ್ ಸೇರಿದಂತೆ ಚಿತ್ರತಂಡದ ಅನೇಕ ಸದಸ್ಯರು “ದಿ ಎಂಡ್” ಕುರಿತು ಮಾತನಾಡಿದರು.

  • ಮನೆಗೆ ಬಂದ್ರೆ ಸಾಯಿಸ್ತೀನಿ – ಪತಿಯ ಹುಚ್ಚು ಸಾಹಸಕ್ಕೆ ಟ್ವಿಂಕಲ್ ಖನ್ನಾ ಗರಂ

    ಮನೆಗೆ ಬಂದ್ರೆ ಸಾಯಿಸ್ತೀನಿ – ಪತಿಯ ಹುಚ್ಚು ಸಾಹಸಕ್ಕೆ ಟ್ವಿಂಕಲ್ ಖನ್ನಾ ಗರಂ

    ಮುಂಬೈ: ಬಾಲಿವುಡ್ ಕಿಲಾಡಿ ಅಕ್ಷಯ್ ಕುಮಾರ್ ಅವರ ಹುಚ್ಚು ಸಾಹಸಕ್ಕೆ ಅವರ ಪತ್ನಿ, ನಟಿ ಟ್ವಿಂಕಲ್ ಖನ್ನಾ ಅವರು ಗರಂ ಆಗಿ ಮನೆಗೆ ಬಂದ್ರೆ ಸಾಯಸ್ತೀನಿ ಎಂದು ಎಚ್ಚರಿಕೆ ನೀಡಿದ್ದಾರೆ.

    ಅಕ್ಷಯ್ ಕುಮಾರ್ ನಟಿಸುತ್ತಿರುವ ತಮ್ಮ ಮೊದಲ ವೆಬ್ ಸಿರೀಸ್ ‘ದಿ-ಎಂಡ್’ ಬಗ್ಗೆ ಘೋಷಣೆ ಮಾಡಲು ತಮ್ಮ ದೇಹ ಹಾಗೂ ಕೈ- ಕಾಲುಗಳಿಗೆ ಬೆಂಕಿ ಹಚ್ಚಿಕೊಂಡು ಕಾರ್ಯಕ್ರಮಕ್ಕೆ ಎಂಟ್ರಿ ನೀಡಿದ್ದರು. ಅಲ್ಲದೇ ಅಕ್ಷಯ್ ಕುಮಾರ್ ತಾವು ಬೆಂಕಿ ಹಚ್ಚಿಕೊಂಡ ಫೋಟೋವನ್ನು ತಮ್ಮ ಟ್ವಿಟ್ಟರಿನಲ್ಲಿ ಹಂಚಿಕೊಂಡಿದ್ದರು.

    ಈ ಟ್ವೀಟ್‍ಗೆ ಅವರ ಪತ್ನಿ ಟ್ವಿಂಕಲ್ ಖನ್ನಾ ಅವರು, “ನೀವು ಈ ರೀತಿ ಬೆಂಕಿ ಹಚ್ಚಿಕೊಂಡಿದ್ದೀರಿ ಎನ್ನುವುದು ಈಗ ನನಗೆ ಗೊತ್ತಾಯಿತು. ನೀವು ಈ ಬೆಂಕಿಯಲ್ಲಿ ಸತ್ತಿಲ್ಲ ಎಂದರೆ ನೀವು ಮನೆಗೆ ಬಂದಾಗ ನಾನೇ ಸಾಯಸುತ್ತೇನೆ” ಎಂದು ಟ್ವೀಟ್ ಮಾಡಿ, “ದೇವರೇ ನನ್ನನ್ನು ರಕ್ಷಿಸು” ಎಂಬ ಹ್ಯಾಶ್‍ಟ್ಯಾಗ್ ಬಳಸಿ ರೀ ಟ್ವೀಟ್ ಮಾಡಿದ್ದಾರೆ.

    ಟ್ವಿಂಕಲ್ ಅವರು ತಮಾಷೆಗಾಗಿ ಈ ರೀತಿ ಟ್ವೀಟ್ ಮಾಡಿದ್ದರೂ ಕೆಲವರು ಅಕ್ಷಯ್ ಮನೆಗೆ ಬಂದ ಮೇಲೆ ಏನಾಯಿತು. ನಮಗೆ ಅಪ್‍ಡೇಟ್ ಮಾಡಿ. ನಾವು ಕುತೂಹಲದಿಂದ ಇದ್ದೇವೆ ಎಂದು ಟ್ವೀಟ್ ಮಾಡುವ ಮೂಲಕ ಅಭಿಮಾನಿಗಳು ಪ್ರಶ್ನೆ ಮಾಡಿದ್ದಾರೆ.

    ಸದ್ಯ ಅಕ್ಷಯ್ ಕುಮಾರ್ ಅಭಿನಯದ ಕೇಸರಿ ಚಿತ್ರ ಮಾರ್ಚ್ 21ರಂದು ಬಿಡುಗಡೆಯಾಗಲಿದೆ. ಅಲ್ಲದೇ ಅಕ್ಷಯ್ ‘ಹೌಸ್‍ಫುಲ್-4’, ‘ಗುಡ್ ನ್ಯೂಸ್’ ಹಾಗೂ ‘ಮಿಶನ್ ಮಂಗಲ್’ ಚಿತ್ರದಲ್ಲಿ ನಟಿಸಲಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv