Tag: The Kashmir Files

  • ಮತ್ತೆ ‘ದಿ ಕಾಶ್ಮೀರ್ ಫೈಲ್ಸ್’ ಕಥೆಯೊಂದಿಗೆ ಬಂದ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ

    ಮತ್ತೆ ‘ದಿ ಕಾಶ್ಮೀರ್ ಫೈಲ್ಸ್’ ಕಥೆಯೊಂದಿಗೆ ಬಂದ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ

    ಬಾಲಿವುಡ್‌ನಲ್ಲಿ (Bollywood) ಹೊಸ ಅಲೆ ಸೃಷ್ಟಿಸಿದ ಸಿನಿಮಾ ಅಂದರೆ ಅದು ‘ದಿ ಕಾಶ್ಮೀರ್ ಫೈಲ್ಸ್’ (The Kashmir Files) ಸಿನಿಮಾ. 2022ರಲ್ಲಿ 250 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್ ಮಾಡುವ ಮೂಲಕ ವಿವೇಕ್ ಅಗ್ನಿಹೋತ್ರಿ ನಿರ್ದೇಶದ ಸಿನಿಮಾ ಸೌಂಡ್ ಮಾಡಿತ್ತು. ಈ ಚಿತ್ರದ ನಿರ್ದೇಶಕ ಫ್ಯಾನ್ಸ್ ಮತ್ತೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಈ ಬಾರಿ ಅವರು ಮತ್ತೊಂದು ‘ದಿ ಕಾಶ್ಮೀರ್ ಫೈಲ್ಸ್’ ಜೊತೆ ಬರೋದಾಗಿ ಅಪ್‌ಡೇಟ್ ಹಂಚಿಕೊಂಡಿದ್ದಾರೆ. ಇನ್ನೂ ಎಲ್ಲೂ ಹೇಳಿರದ ಸಾಕಷ್ಟು ವಿಚಾರಗಳನ್ನ ಒಟಿಟಿ ಮೂಲಕ ತೋರಿಸಲು ನಿರ್ದೇಶಕರು ಮುಂದಾಗಿದ್ದಾರೆ.

    2022ರಲ್ಲಿ ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾದಲ್ಲಿ ಅನುಪಮ್ ಖೇರ್ (Anupam Kher) ಅವರು ಪ್ರಮುಖವಾಗಿ ನಟಿಸಿದ್ದರು. ಕಾಶ್ಮೀರ ಪಂಡಿತರನ್ನ ಆಧರಿಸಿ ನೈಜ ಕಥೆಯನ್ನೇ ಈ ಸಿನಿಮಾ ಮೂಲಕ ತೋರಿಸಿಲಾಗಿತ್ತು. ಅನೇಕರು ಈ ಸಿನಿಮಾವನ್ನು ಖಂಡಿಸಿದ್ದರು. ಆದರೆ ಸಾಕಷ್ಟು ಟೀಕೆ, ವಿರೋಧದ ನಡುವೆಯೂ ಸಿನಿಮಾ ಸಕ್ಸಸ್‌ಫುಲ್ ಪ್ರದರ್ಶನ ಕಂಡಿತ್ತು.

    ವಿವೇಕ್ ಅಗ್ನಿಹೋತ್ರಿ ಅವರು ‘ದಿ ಕಾಶ್ಮೀರ್ ಫೈಲ್ಸ್ ಅನ್‌ರಿಪೋರ್ಟೆಡ್’ ಎಂಬ ಪ್ರಾಜೆಕ್ಟ್ ಈಗ ಘೋಷಣೆ ಮಾಡಿದ್ದಾರೆ. ಇದರ ಟೀಸರ್ ಕೂಡ ಬಿಡುಗಡೆ ಮಾಡಲಾಗಿದೆ. ಇದರಲ್ಲಿ ಅನೇಕ ಕಾಶ್ಮೀರಿ ಹಿಂದೂಗಳು ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ. ಇದರ ಜೊತೆ ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾದ ತುಣುಕುಗಳನ್ನ ಸೇರಿಸಲಾಗಿದೆ. ಈ ಬಾರಿ ಒಟಿಟಿ ಮೂಲಕ ಸಿನಿಮಾ ರಿಲೀಸ್ ಆಗಲಿದೆ. ಇದನ್ನೂ ಓದಿ:ಆಲ್ ಓಕೆ ಅಲೋಕ್ ಜೊತೆ ಕೈ ಜೋಡಿಸಿದ ಕ್ರೇಜಿಸ್ಟಾರ್ ರವಿಚಂದ್ರನ್

    kashmir

    ನರಮೇಧ ನಡೆದಿದೆ ಎಂದು ಒಪ್ಪದವರು, ಭಯೋತ್ಪಾದಕ ಬೆಂಬಲಿಗರು ಮತ್ತು ಭಾರತದ ಶತ್ರುಗಳು ಕಾಶ್ಮೀರ ಫೈಲ್ಸ್ನ ಪ್ರಶ್ನಿಸಿದರು. ಕಾಶ್ಮೀರ ಹಿಂದೂಗಳ ಹತ್ಯಾಕಾಂಡದ ಭೀಕರ ಸತ್ಯವನ್ನು ಈಗ ನಿಮ್ಮ ಮುಂದಿಡುತ್ತಿದ್ದೇನೆ. ಇದನ್ನು ದೆವ್ವಗಳು ಮಾತ್ರ ಪ್ರಶ್ನಿಸಬಹುದು. ಶೀಘ್ರದಲ್ಲೇ ಬರಲಿದೆ #KashmirUnreported ಎಂದು ವಿವೇಕ್ ಅಗ್ನಿಹೋತ್ರಿ ಬರೆದುಕೊಂಡಿದ್ದಾರೆ. ಕಾಶ್ಮೀರಿ ಪಂಡಿತರ ಇತಿಹಾಸದ ನಿರ್ಲಕ್ಷಿತ ಅಧ್ಯಾಯಗಳ ಮರುಶೋಧ ಎಂದು ಖಾಸಗಿ ಒಟಿಟಿವೊಂದು ಟ್ವೀಟ್ ಮಾಡಿಕೊಂಡಿದೆ.

    ‘ದಿ ಕಾಶ್ಮೀರ್ ಫೈಲ್ಸ್ ಅನ್‌ರಿಪೋರ್ಟೆಡ್’ (Kashmir Files Unreported) ಯಾವ ರೀತಿಯಲ್ಲಿ ಮೂಡಿ ಬರಲಿದೆ ಎನ್ನುವ ಬಗ್ಗೆ ಸದ್ಯ ಹೆಚ್ಚಿನ ಮಾಹಿತಿ ರಿವೀಲ್ ಆಗಿಲ್ಲ. ಹೆಚ್ಚಿನ ಅಪ್‌ಡೇಟ್‌ಗೆ ಕಾದುನೋಡಬೇಕಿದೆ. ವಿವೇಕ್ ಅಗ್ನಿಹೋತ್ರಿ ಅವರು ‘ದಿ ವ್ಯಾಕ್ಸಿನ್ ವಾರ್’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈ ಚಿತ್ರದಲ್ಲಿ ಕನ್ನಡದ ನಟಿ ಕಾಂತಾರ ಬೆಡಗಿ ಸಪ್ತಮಿ ಗೌಡ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಸಿನಿಮಾ ಈ ವರ್ಷದ ಅಂತ್ಯದಲ್ಲಿ ತೆರೆಗೆ ಬರಲಿದೆ.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕೋರ್ಟ್ ಕಟಕಟೆಯಲ್ಲಿ ನಿಂತು ಕ್ಷಮೆ ಕೇಳಿದ ಕಾಶ್ಮೀರ್ ಫೈಲ್ಸ್ ನಿರ್ದೇಶಕ

    ಕೋರ್ಟ್ ಕಟಕಟೆಯಲ್ಲಿ ನಿಂತು ಕ್ಷಮೆ ಕೇಳಿದ ಕಾಶ್ಮೀರ್ ಫೈಲ್ಸ್ ನಿರ್ದೇಶಕ

    ದು ವರ್ಷಗಳ ಹಿಂದಿನ ಪ್ರಕರಣಕ್ಕೆ ಸಂಬಂಧಿಸಿದಂತೆ ದಿ ಕಾಶ್ಮೀರ್ ಫೈಲ್ಸ್ (The Kashmir Files) ನಿರ್ದೇಶಕ ವಿವೇಕ್ ಅಗ್ನಿಹೋತ್ರಿ (Vivek Agnihotri) ಕ್ಷಮೆ ಕೇಳಿದ್ದಾರೆ. 2018ರಲ್ಲಿ ವಿವೇಕ್ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ (Contempt of Court) ದಾಖಲಾಗಿತ್ತು. ಖುದ್ದಾಗಿ ಕೋರ್ಟಿಗೆ ಬಂದು ಕ್ಷಮೆ ಕೇಳಬೇಕು ಎಂದು ದೆಹಲಿ (Delhi) ಹೈಕೋರ್ಟ್ (High Court) ವಿವೇಕ್ ಅವರಿಗೆ ನೋಟಿಸ್ ಜಾರಿ ಮಾಡಿತ್ತು.

    ಭೀಮಾ ಕೋರೆಗಾಂವ್ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಮೂರ್ತಿ ಎಸ್.ಮುರಳೀಧರ್ ಅವರ ಕುರಿತು ವಿವೇಕ್ ಅಗ್ನಿಹೋತ್ರಿ ಟ್ವೀಟ್ ಮಾಡಿದ್ದರು. ಭೀಮಾ ಕೋರೆಗಾಂವ್ ಪ್ರಕರಣದಲ್ಲಿ ಬಂಧಿತನಾಗಿದ್ದ ಗೌತಮ್ ನವ್ಲಾಖಾ ಅವರನ್ನು ಗೃಹಬಂಧನದಿಂದ ಮುಕ್ತಗೊಳಿಸಿದ್ದ ನ್ಯಾಯಾಧೀಶರ ವಿರುದ್ಧ ಪಕ್ಷಪಾತದ ಆರೋಪ ಮಾಡಿದ್ದರು ವಿವೇಕ್. ಈ ಕುರಿತಂತೆ ವಿವೇಕ್ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಾಗಿತ್ತು.

    kashmir

    ಈ ಪ್ರಕರಣಕ್ಕೆ ಇತಿಶ್ರೀ ಹಾಡಲೆಂದೇ ವಿವೇಕ್ 2022ರ ಡಿಸೆಂಬರ್ ನಲ್ಲಿ ಕ್ಷಮೆಯಾಚಿಸಿದ್ದರು. ಆದರೆ, ದೆಹಲಿ ಹೈಕೋರ್ಟ್ ಖುದ್ದಾಗಿ ಬಂದು ಕ್ಷಮೆಯಾಚಿಸಬೇಕು ಎಂದು ಸೂಚಿಸಿತ್ತು. ಅಲ್ಲದೇ ಮುಂದಿನ ದಿನಗಳಲ್ಲಿ ಇಂತಹ ಹೇಳಿಕೆ ನೀಡದಂತೆ ಎಚ್ಚರಿಕೆಯನ್ನೂ ನೀಡಿತ್ತು. ಹಾಗಾಗಿ ನಿನ್ನೆ ಖುದ್ದಾಗಿ ಕೋರ್ಟಿಗೆ ಹಾಜರಾಗಿ ಕ್ಷಮೆಯಾಚಿಸಿದ್ದಾರೆ. ಕ್ಷಮೆ ಕೇಳಿದ ಹಿನ್ನೆಲೆಯಲ್ಲಿ ನ್ಯಾಯಾಂಗ ನಿಂದನೆ ಪ್ರಕರಣವನ್ನು ಕೋರ್ಟ್ ವಜಾಗೊಳಿಸಿದೆ.

    ದಿ ಕಾಶ್ಮೀರ ಫೈಲ್ಸ್ ಸಿನಿಮಾ ಹಿಟ್ ಆದ ನಂತರ ಸೋಷಿಯಲ್ ಮೀಡಿಯಾದಲ್ಲಿ ಅನೇಕ ರೀತಿಯಲ್ಲಿ ವಿವೇಕ್ ಬರೆಯುತ್ತಿದ್ದಾರೆ. ಇವರ ಬರವಣಿಗೆ ಸಾಕಷ್ಟು ವಿವಾದಗಳನ್ನೂ ಹುಟ್ಟುಹಾಕಿವೆ. ಪ್ರಕಾಶ್ ರಾಜ್ ಸೇರಿದಂತೆ ಅನೇಕರು ವಿವೇಕ್ ಕುರಿತು ಟೀಕೆಗಳನ್ನು ಮಾಡಿದ್ದಾರೆ. ಮಾಡಿದ ಟೀಕೆಗಳಿಗೆ ಅವರೂ ಉತ್ತರವನ್ನು ನೀಡಿದ್ದಾರೆ.

  • ಆಸ್ಕರ್ ವೇದಿಕೆಯಲ್ಲಿ ದೀಪಿಕಾ : ‘ಅಚ್ಚೇ ದಿನ್’ ಎಂದ ವಿವೇಕ್ ಅಗ್ನಿಹೋತ್ರಿ

    ಆಸ್ಕರ್ ವೇದಿಕೆಯಲ್ಲಿ ದೀಪಿಕಾ : ‘ಅಚ್ಚೇ ದಿನ್’ ಎಂದ ವಿವೇಕ್ ಅಗ್ನಿಹೋತ್ರಿ

    ಬಾಲಿವುಡ್ ಖ್ಯಾತ ನಟಿ ದೀಪಿಕಾ ಪಡುಕೋಣೆ (Deepika Padukone) ಈ ಬಾರಿಯ ಆಸ್ಕರ್ (Oscar) ಪ್ರಶಸ್ತಿ ಪ್ರದಾನ ಸಮಾರಂಭವನ್ನು ನಡೆಸಿಕೊಡಲಿದ್ದಾರೆ. ಈ ಸಾಲಿನ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಒಟ್ಟು 16 ಜನರನ್ನು ನಿರೂಪಕರನ್ನಾಗಿ ಆಯ್ಕೆ ಮಾಡಿದ್ದು, ಅದರಲ್ಲಿ ದೀಪಿಕಾ ಪಡುಕೋಣೆ ಕೂಡ ಒಬ್ಬರು ಎನ್ನುವುದು ವಿಶೇಷ. ಈ ಆಯ್ಕೆಯನ್ನು ದಿ ಕಾಶ್ಮೀರ್ ಫೈಲ್ಸ್  (The Kashmir Files) ಸಿನಿಮಾ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ (Vivek Agnihotri) ಸ್ವಾಗತಿಸಿದ್ದಾರೆ. ಭಾರತವು ಎಲ್ಲ ಕ್ಷೇತ್ರದಲ್ಲೂ ಮುನ್ನುಗ್ಗುತ್ತಿದೆ. ಇದೇ ಅಚ್ಚೇ ದಿನ್ ಎಂದು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

    ಪ್ರತಿ ವರ್ಷವೂ ಒಂದಿಲ್ಲೊಂದು ಮಹತ್ವದ ಜವಾಬ್ದಾರಿಯನ್ನು ದೀಪಿಕಾ ನಿರ್ವಹಿಸುತ್ತಿದ್ದಾರೆ. 2022ನೇ ಸಾಲಿನ ಕೇನ್ಸ್ ನಲ್ಲಿ ತೀರ್ಪುಗಾರರಾಗಿ ದೀಪಿಕಾ, ಆಸ್ಕರ್ ನಲ್ಲಿ ನಿರೂಪಕಿಯಾಗಿ ಮಿಂಚಲಿದ್ದಾರೆ. ಈ ಮಾಹಿತಿಯನ್ನು ಸ್ವತಃ ದೀಪಿಕಾ ಅವರೇ ಸೋಷಿಯಲ್ ಮೀಡಿಯಾ ಮೂಲಕ ಅಭಿಮಾನಿಗಳಿಗೆ ತಿಳಿಸಿದ್ದಾರೆ. ಆ ದಿನಕ್ಕಾಗಿ ಕಾಯುತ್ತಿರುವುದಾಗಿಯೂ ಅವರು ತಿಳಿಸಿದ್ದಾರೆ. ಇದನ್ನೂ ಓದಿ: ನಟ ಗೋಪಿಚಂದ್‌ಗೆ ಸ್ಯಾಂಡಲ್‌ವುಡ್‌ ನಿರ್ದೇಶಕ ಎ.ಹರ್ಷ ಆ್ಯಕ್ಷನ್ ಕಟ್

    ಇದೇ ಮಾರ್ಚ್ 12ರಂದು (ಭಾರತೀಯ ಕಾಲಮಾನದ ಪ್ರಕಾರ ಮಾರ್ಚ್ 13) ಲಾಸ್ ಏಂಜಲೀಸ್ ನಲ್ಲಿ ಆಸ್ಕರ್ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. ಈ ಸಮಾರಂಭದಲ್ಲಿ ಹತ್ತು ಜನ ನಿರೂಪಕರು ಕೆಲಸ ಮಾಡಲಿದ್ದಾರೆ. ಅದರಲ್ಲಿ ದೀಪಿಕಾ ಪಡುಕೋಣೆ ಕೂಡ ಒಬ್ಬರು. ದೀಪಿಕಾ ಜೊತೆ ಮೆಲಿಸ್ಸಾ ಮೆಕಾರ್ಥಿ, ಜಾನೆಲ್ಲೆ ಮೋನೆ, ಜೆನ್ನಿಫರ್ ಕೊನ್ನೆಲ್ಲಿ, ಸ್ಯಾಮ್ಯುಯೆಲ್ ಎಲ್ ಜಾಕ್ಸನ್, ಜೋ ಸಲ್ಡಾನಾ ಸೇರಿದಂತೆ ಇತರರು ಕಾರ್ಯಕ್ರಮವನ್ನು ನಡೆಸಿಕೊಡಲಿದ್ದಾರೆ.

    ಈ ಬಾರಿ ಆಸ್ಕರ್ ವೇದಿಕೆಯ ಮೇಲೆ ನಿರಂತರವಾಗಿ ದೀಪಿಕಾ ಕಾಣಿಸಿಕೊಂಡರೆ, ರಾಮ್ ಚರಣ್ ಮತ್ತು ಜ್ಯೂನಿಯರ್ ಎನ್.ಟಿ.ಆರ್ ಲೈವ್ ಆಗಿ ಡ್ಯಾನ್ಸ್ ಮಾಡಲಿದ್ದಾರೆ. ಅಲ್ಲದೇ, ಅದೇ ವೇದಿಕೆಯಲ್ಲೇ ಗಾಯಕರಾದ ರಾಹುಲ್ ಸಿಪ್ಲಿಗುಂಜ್ ಮತ್ತು ಕಾಲಾ ಭೈರವ ಹಾಡಲಿದ್ದಾರೆ. ಭಾರತದಿಂದ ಆಲ್ ದಟ್ ಬ್ರೀಥ್ಸ್, ದಿ ಎಲಿಫೆಂಟ್ ವಿಸ್ಪರರ್ಸ್ ಕಿರುಚಿತ್ರಗಳು ನಾಮ ನಿರ್ದೇಶನಗೊಂಡಿವೆ. ಆರ್.ಆರ್.ಆರ್ ಸಿನಿಮಾದ ನಾಟು ನಾಟು ಕೂಡ ಪ್ರಶಸ್ತಿಯ ರೇಸ್ ನಲ್ಲಿದೆ.

  • ಪ್ರಕಾಶ್ ರೈ ‘ಅರ್ಬನ್ ನಕ್ಸಲ್’ : ಕಾಶ್ಮೀರ್ ಫೈಲ್ಸ್ ನಿರ್ದೇಶಕ ವಿವೇಕ್

    ಪ್ರಕಾಶ್ ರೈ ‘ಅರ್ಬನ್ ನಕ್ಸಲ್’ : ಕಾಶ್ಮೀರ್ ಫೈಲ್ಸ್ ನಿರ್ದೇಶಕ ವಿವೇಕ್

    ಹೆಸರಾಂತ ನಟ ಪ್ರಕಾಶ್ ರೈ (Prakash Rai) ಗೆ ದಿ ಕಾಶ್ಮೀರ್ ಫೈಲ್ಸ್ (The Kashmir Files)ಸಿನಿಮಾದ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ (Vivek Agnihotri) ಅರ್ಬನ್ ನಕ್ಸಲ್ (Urban Naxal) ಎಂದು ಕರೆದಿದ್ದಾರೆ. ಅಲ್ಲದೇ, ಅಂಧಕಾರ್ ರಾಜ್ ಎಂದೂ ಅವರನ್ನು ಸಂಬೋಧಿಸಿದ್ದಾರೆ. ಈ ಹಿಂದಿ ಪ್ರಕಾಶ್ ರೈ ಪಠಾಣ್ (Pathan) ಸಿನಿಮಾದ ಬಗ್ಗೆ ಮಾತನಾಡುತ್ತಾ, ‘ಪಠಾಣ್ ಸಿನಿಮಾ 700 ಕೋಟಿ ಸಂಪಾದಿಸಿದೆ. ಕೆಲವರು ಈ ಸಿನಿಮಾವನ್ನು ಬ್ಯಾನ್ ಮಾಡಲು ಹೊರಟಿದ್ದರು. ಮೂರ್ಖರು, ಮತಾಂಧರು ಪಠಾಣ್ ಸಿನಿಮಾಗೆ ತೊಂದರೆ ಕೊಟ್ಟರು. ಮೋದಿ (Modi) ಸಿನಿಮಾ 30 ಕೋಟಿಯೂ ಕಲೆಕ್ಷನ್ ಮಾಡಲಿಲ್ಲ. ಅವರು ಬೊಗಳುತ್ತಾರೆ ಕಚ್ಚುವುದಿಲ್ಲ’ ಎಂದು ಟೀಕೆ ಮಾಡಿದ್ದರು.

    ಮುಂದುವರೆದು ಮಾತನಾಡಿದ್ದ ಪ್ರಕಾಶ್ ರೈ ದಿ ಕಾಶ್ಮೀರ್ ಫೈಲ್ಸ್ ಸಿನಿಮಾವನ್ನೂ ಟೀಕಿಸಿದ್ದರು. ಭಾಸ್ಕರ್ ಪ್ರಶಸ್ತಿಯನ್ನೂ ಪಡೆಯದವರು ಆಸ್ಕರ್ ಪ್ರಶಸ್ತಿ ಕೇಳುತ್ತಿದ್ದಾರೆ ಎಂದು ಪರೋಕ್ಷವಾಗಿ ವಿವೇಕ್ ಅಗ್ನಿಹೋತ್ರಿಯನ್ನು ಕಾಲೆಳೆದಿದ್ದರು. ದಿ ಕಾಶ್ಮೀರ್ ಫೈಲ್ಸ್ ಸಿನಿಮಾವನ್ನು ಅಂತಾರಾಷ್ಟ್ರೀಯ ಜ್ಯೂರಿಗಳು ತೆಗಳಿದ್ದರು ಎಂದು ನೆನಪಿಸಿದ್ದರು. ಹೀಗಾಗಿ ಅಗ್ನಿಹೋತ್ರಿ ಮತ್ತೆ ಪ್ರಕಾಶ್ ರೈಗೆ ತಿರುಗೇಟು ನೀಡಿದ್ದಾರೆ. ಇದನ್ನೂ ಓದಿ: ದಾಂಪತ್ಯ ಜೀವನಕ್ಕೆ ಕಾಲಿಟ್ಟ ಸಿದ್ಧಾ ರ್ಥ್ -ಕಿಯಾರಾ ಜೋಡಿ

    ಸೋಷಿಯಲ್ ಮೀಡಿಯಾದಲ್ಲಿ ಪ್ರಕಾಶ್ ರೈ ಅವರ ಬಗ್ಗೆ ಬರೆದಿರುವ ವಿವೇಕ್ ಅಗ್ನಿಹೋತ್ರಿ, ‘ಅರ್ಬನ್ ನಕ್ಸಲ್ ಗಳ ನಿದ್ದೆ ಕೆಡಿಸಿದೆ ದಿ ಕಾಶ್ಮೀರ್ ಫೈಲ್ಸ್ ಸಿನಿಮಾ. ಚಿತ್ರವು ಬಿಡುಗಡೆಯಾಗಿ ಒಂದು ವರ್ಷ ಕಳೆದರೂ, ಓರ್ವ ವ್ಯಕ್ತಿಯ ನಿದ್ದೆ ಕೆಡಿಸಿದೆ ಆ ಸಿನಿಮಾ. ಭಾಸ್ಕರ್ ಪ್ರಶಸ್ತಿಯು ನಿಮ್ಮ ಬಳಿಯೇ ಇರುವಾಗ  ಅದನ್ನು ನಾನು ಪಡೆಯಲು ಸಾಧ್ಯವಿಲ್ಲ’ ಎಂದು ವ್ಯಂಗ್ಯವಾಡಿದ್ದಾರೆ.

    ಪಠಾಣ್ ಸಿನಿಮಾದ ಗೆಲುವಿನ ಹಿನ್ನೆಲೆಯಲ್ಲಿ ಶಾರುಖ್ ಖಾನ್ ಪರವಾಗಿ ಪ್ರಕಾಶ್ ರೈ ಹಲವು ವಿಚಾರಗಳನ್ನು ಹಂಚಿಕೊಂಡಿದ್ದರು. ಭಕ್ತರು ಎಷ್ಟೇ ಚೀರಾಡಿದರೂ ಸಿನಿಮಾ ಗೆದ್ದಿತು. ಆದರೆ, ಮೋದಿ ಸಿನಿಮಾ ಮೂವತ್ತು ಕೋಟಿ ರೂಪಾಯಿಯನ್ನೂ ಮಾಡಲಿಲ್ಲ ಎಂದು ಕಾಲೆಳೆದಿದ್ದರು. ಪ್ರಕಾಶ್ ರೈ ಅವರ ಈ ಬರಹ ಸಾಕಷ್ಟು ಚರ್ಚೆಯನ್ನು ಹುಟ್ಟು ಹಾಕಿತ್ತು. ಇದೀಗ ವಿವೇಕ್ ಅಗ್ನಿಹೋತ್ರಿ ತಿರುಗೇಟು ನೀಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • BBC Modi V/s The Kashmir Filesː ಎಸ್‌ಎಫ್‌ಐ, ಎಬಿವಿಪಿ ವಿದ್ಯಾರ್ಥಿಗಳ ನಡುವೆ ತಾರಕಕ್ಕೇರಿದ ಸಂಘರ್ಷ

    BBC Modi V/s The Kashmir Filesː ಎಸ್‌ಎಫ್‌ಐ, ಎಬಿವಿಪಿ ವಿದ್ಯಾರ್ಥಿಗಳ ನಡುವೆ ತಾರಕಕ್ಕೇರಿದ ಸಂಘರ್ಷ

    ಹೈದರಾಬಾದ್: ಪ್ರಧಾನಿ ನರೇಂದ್ರ ಮೋದಿ (Narendra Modi) ಕುರಿತು ಬಿಬಿಸಿ ನಿರ್ಮಿಸಿರುವ ಸಾಕ್ಷ್ಯಚಿತ್ರ ( BBC Documentary) ಈಗಾಗಲೇ ದೇಶದ ವಿವಿಧ ವಿಶ್ವವಿದ್ಯಾಲಯಗಳಲ್ಲಿ ಭಾರೀ ಸಂಘರ್ಷವನ್ನುಂಟುಮಾಡಿದೆ. ದೇಶದ ವಿವಿಧ ವಿಶ್ವವಿದ್ಯಾಲಯಗಳಲ್ಲಿ (Hyderabad University) ವಿದ್ಯಾರ್ಥಿಗಳು ಸ್ವಯಂಪ್ರೇರಿತರಾಗಿ ಸಿನಿಮಾ ಮಾದರಿಯಲ್ಲಿ ವೀಕ್ಷಣೆ ಮಾಡುತ್ತಿದ್ದಾರೆ.

    ಹೈದರಾಬಾದ್ ವಿಶ್ವವಿದ್ಯಾನಿಲಯದಲ್ಲಿ ಗುರುವಾರ ಸ್ಟೂಡೆಂಟ್ಸ್ ಫೆಡರೇಶನ್ ಆಫ್ ಇಂಡಿಯಾ (SFI) `ಪಿಎಂ ಮೋದಿ’ ಅವರ ಬಿಬಿಸಿ ಸಾಕ್ಷ್ಯಚಿತ್ರದ ಪ್ರದರ್ಶನ ಆಯೋಜಿಸಿತ್ತು. ಇದಕ್ಕೆ ತಿರುಗೇಟು ನೀಡುವಂತೆ ಆರ್‌ಎಸ್‌ಎಸ್ (RSS) ಸಂಯೋಜಿತ ಎಬಿವಿಪಿ (ABVP) ಸಂಘಟನೆಯು ಅದೇ ಕ್ಯಾಂಪಸ್‌ನಲ್ಲಿ `ದಿ ಕಾಶ್ಮೀರ್ ಫೈಲ್ಸ್’ (The Kashmir Files) ಚಿತ್ರ ಪ್ರದರ್ಶನ ಏರ್ಪಡಿಸಿತ್ತು.

    ಗಣರಾಜ್ಯೋತ್ಸವ ದಿನದಂದೇ ವಿವಿಯಲ್ಲಿ ಸಾಕ್ಷ್ಯಚಿತ್ರ ಸ್ಕ್ರೀನಿಂಗ್ ಮಾಡಲಾಗಿದ್ದು, 400ಕ್ಕೂ ಹೆಚ್ಚು ವಿದ್ಯಾರ್ಥಿಗಳು ವೀಕ್ಷಣೆ ಮಾಡಿದ್ದಾರೆ ಎಂದು ಎಸ್‌ಎಫ್‌ಐ ಹೇಳಿಕೊಂಡಿದೆ.

    ಪೂರ್ವಾನುಮತಿಯಿಲ್ಲದೇ ಕ್ಯಾಂಪಸ್‌ನಲ್ಲಿ ಚಿತ್ರಪ್ರದರ್ಶಿಸಿದ ಬಗ್ಗೆ ವರದಿ ನೀಡುವಂತೆ ವಿವಿ ಅಧಿಕಾರಿಗಳಿಗೆ ತಾಕೀತು ಮಾಡಿದ್ದು, ಈ ಬೆನ್ನಲ್ಲೇ ಎಬಿವಿಪಿ, ಎಸ್‌ಎಫ್‌ಐ ವಿರುದ್ಧ ದೂರು ಸಲ್ಲಿಸಿದೆ. ಆದರೆ ಎಸ್‌ಎಫ್‌ಐ ತನ್ನ ಮೇಲಿನ ಆರೋಪವನ್ನು ತಳ್ಳಿಹಾಕಿದೆ.

    ಬಿಬಿಸಿ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿ ಎಬಿವಿಪಿ ವಿದ್ಯಾರ್ಥಿಗಳು ಅದೇ ದಿನ ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ `ದಿ ಕಾಶ್ಮೀರ ಫೈಲ್ಸ್’ ಚಿತ್ರ ಪ್ರದರ್ಶಿಸಿದ್ದಾರೆ. ಇದನ್ನೂ ಓದಿ: ಡಾರ್ಕ್‌ನೆಟ್‌ ಬಳಸಿ ಮೋದಿ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ಯತ್ನ- ರಣಾಂಗಣವಾದ ವಿವಿ ಕ್ಯಾಂಪಸ್

    ಡಾರ್ಕ್‌ನೆಟ್‌ ಬಳಸಿ ಮೋದಿ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ಯತ್ನ- ರಣಾಂಗಣವಾದ ವಿವಿ ಕ್ಯಾಂಪಸ್

    ಎರಡೂ ಸಿನಿಮಾಗಳ ಸ್ಕ್ರೀನಿಂಗ್ ಸಮಯದಲ್ಲಿ ಯಾವುದೇ ಅಹಿತಕರ ಘಟನೆ ನಡೆದಿಲ್ಲ, ಕ್ಯಾಂಪಸ್ ಶಾಂತಿಯುತವಾಗಿತ್ತು ಎಂದು ವಿಶ್ವವಿದ್ಯಾನಿಲಯದ ರಿಜಿಸ್ಟಾರ್‌ ಹೇಳಿದ್ದಾರೆ. ಆದರೆ ಎಬಿವಿಪಿ ಕಾರ್ಯಕರ್ತರು ಕ್ಯಾಂಪಸ್ ಭದ್ರತಾ ಸಿಬ್ಬಂದಿ ತಮ್ಮ ಮೇಲೆ ಹಲ್ಲೆ ನಡೆಸಿರುವುದಾಗಿ ಆರೋಪಿಸಿದ್ದಾರೆ. ಇದನ್ನೂ ಓದಿ: Australian Open 2023: ಫೈನಲ್‍ನಲ್ಲಿ ಸೋತ ಬೋಪಣ್ಣ, ಸಾನಿಯಾ ಜೋಡಿ – ರನ್ನರ್ ಅಪ್ ಕಿರೀಟದೊಂದಿಗೆ ಗ್ರ್ಯಾಂಡ್‍ ಸ್ಲಾಮ್‍ಗೆ ಗುಡ್‍ಬೈ

    ಡಾರ್ಕ್‌ನೆಟ್‌ ಬಳಸಿ ಮೋದಿ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ಯತ್ನ- ರಣಾಂಗಣವಾದ ವಿವಿ ಕ್ಯಾಂಪಸ್

    ವಿಶ್ವವಿದ್ಯಾನಿಲಯ ಆಡಳಿತ ಮಂಡಳಿ `ದಿ ಕಾಶ್ಮೀರ್ ಫೈಲ್ಸ್’ ಚಲನಚಿತ್ರದ ಪ್ರದರ್ಶನ ನಿಲ್ಲಿಸಲು ಪ್ರಯತ್ನಿಸಿತು. ಎಬಿವಿಪಿ ಕಾರ್ಯಕರ್ತರು ಮುಖ್ಯದ್ವಾರದಿಂದ ಪ್ರೊಜೆಕ್ಟರ್ ತರುತ್ತಿದ್ದಾಗ ವಿಶ್ವವಿದ್ಯಾಲಯದ ಭದ್ರತಾ ಸಿಬ್ಬಂದಿ ನಮ್ಮ ಕಾರ್ಯಕರ್ತರ ಮೇಲೆ ಹಲ್ಲೆ ಸಹ ನಡೆಸಿದರು ಎಂದು ಎಬಿವಿಪಿ ಜಾಲತಾಣದಲ್ಲಿ ಹಂಚಿಕೊಂಡಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ನಾಮಿನೇಷನ್ ಲಿಸ್ಟ್ ನಲ್ಲಿ ಇಲ್ಲ ‘ದಿ ಕಾಶ್ಮೀರ್ ಫೈಲ್ಸ್’ : ಬಾಯ್ಕಾಟ್ ಆಸ್ಕರ್ ಎಂದ ಫ್ಯಾನ್ಸ್

    ನಾಮಿನೇಷನ್ ಲಿಸ್ಟ್ ನಲ್ಲಿ ಇಲ್ಲ ‘ದಿ ಕಾಶ್ಮೀರ್ ಫೈಲ್ಸ್’ : ಬಾಯ್ಕಾಟ್ ಆಸ್ಕರ್ ಎಂದ ಫ್ಯಾನ್ಸ್

    ಕ್ಯಾಲಿಫೋರ್ನಿಯಾದ ಬೆವರ್ಲಿ ಹಿಲ್ಸ್ ನಲ್ಲಿ ನಡೆದ ಆಸ್ಕರ್ ಪ್ರಶಸ್ತಿಯ ನಾಮ ನಿರ್ದೇಶನ ಘೋಷಣೆ ಕಾರ್ಯಕ್ರಮ ಅಚ್ಚುಕಟ್ಟಾಗಿ ನಡೆದಿದೆ. ಭಾರತೀಯ ಕಾಲಮಾನದ ಪ್ರಕಾರ ನಿನ್ನೆ ಸಂಜೆ 7 ಗಂಟೆಯ ಹೊತ್ತಿಗೆ ಈ ಪ್ರಕ್ರಿಯೆ ನಡೆದಿದ್ದು ಭಾರತದ ಹಲವು ಸಿನಿಮಾಗಳ ನಾಮಿನೇಷನ್ ಲಿಸ್ಟ್ ನಲ್ಲಿ ಕಾಣಿಸಿಕೊಳ್ಳಲಿವೆ ಎಂದು ನಿರೀಕ್ಷಿಸಲಾಗಿತ್ತು. ಅದರಲ್ಲೂ ದಿ ಕಾಶ್ಮೀರ್ ಫೈಲ್ ನಾಮ ನಿರ್ದೇಶನ ಪಟ್ಟಿಯಲ್ಲಿ ಇರಲಿದೆ ಎಂದೇ ನಂಬಲಾಗಿತ್ತು. ನಂಬಿಕೆ ಹುಸಿಯಾಗಿದೆ.

    ಈ ಬಾರಿಯ ಆಸ್ಕರ್ ಪ್ರಶಸ್ತಿಗಾಗಿ ಕನ್ನಡದ ಸಿನಿಮಾಗಳಾದ ರಿಷಬ್ ಶೆಟ್ಟಿ ನಿರ್ದೇಶನದ ಕಾಂತಾರ, ಸುದೀಪ್ ನಟನೆಯ ‘ವಿಕ್ರಾಂತ್ ರೋಣ’ ಚಿತ್ರಗಳು ಕೂಡ ಇದ್ದವು. ಜೊತೆಗೆ ತೆಲುಗು ಸಿನಿಮಾ ರಂಗದಿಂದ ಆರ್.ಆರ್.ಆರ್, ತಮಿಳಿನಿಂದ ಇರುವಿನ್ ನಿಲಳ್ ಹಾಗೂ ರಾಕೆಟ್ರಿ ದಿ ನಂಭಿ ಎಫೆಕ್ಟ್ ಚಿತ್ರಗಳು ಸ್ಪರ್ಧೆ ಮಾಡುತ್ತಿವೆ. ಹಿಂದಿಯಿಂದ ಗಂಗೂಬಾಯಿ ಕಾಠಿಯಾವಾಡಿ ಹಾಗೂ ದಿ ಕಾಶ್ಮೀರ್ ಫೈಲ್ಸ್ ಸಿನಿಮಾಗಳಿವೆ. ಗುಜರಾತಿನಿಂದ ಛೆಲ್ಲೋ ಶೋ, ಚಿತ್ರವೊಂದನ್ನು ಕಳುಹಿಸಲಾಗಿದೆ. ಮಿ ವಸಂತ್ ರಾವ್, ದಿ ನೆಕ್ಸ್ಸಟ್ ಮಾರ್ನಿಂಗ್, ತುಜೆ ಸಾಥಿ ಕಹಿ ಸೇರಿದಂತೆ ಭಾರತದಿಂದಲೇ ಹಲವು ಚಿತ್ರಗಳು ಸ್ಪರ್ಧಾ ಕಣದಲ್ಲಿದ್ದವು. ಆದರೆ, ಈ ಸಿನಿಮಾಗಳ ಪೈಕಿ ಕೇವಲ ಮೂರು ಚಿತ್ರಗಳು ನಾಮಿನೇಷನ್ ಪಟ್ಟಿಯಲ್ಲಿವೆ.

    ರಾಜಮೌಳಿ ನಿರ್ದೇಶನದಲ್ಲಿ ಮೂಡಿ ಬಂದ ಆರ್.ಆರ್.ಆರ್ ಸಿನಿಮಾದ ನಾಟು ನಾಟು ಹಾಡು ಮತ್ತು ಆಲ್ ದಟ್ ಬ್ರೀಥ್ಸ್, ದಿ ಎಲಿಫೆಂಟ್ ವಿಸ್ಪರ್ಸ್‍ ಕಿರುಚಿತ್ರಗಳು ನಾಮ ನಿರ್ದೇಶನಗೊಂಡಿವೆ. ಆದರೆ, ದಿ ಕಾಶ್ಮೀರ್ ಫೈಲ್ಸ್ ಇಲ್ಲ ಎನ್ನುವ ಕಾರಣಕ್ಕಾಗಿ ಅನೇಕರು ಸೋಷಿಯಲ್ ಮೀಡಿಯಾದಲ್ಲಿ ಬಾಯ್ಕಾಟ್ ಆಸ್ಕರ್ ಹ್ಯಾಶ್ ಟ್ಯಾಗ್ ಮೂಲಕ ಬಹಿಷ್ಕರಿಸಿ ಎಂದು ಅಭಿಮಾನ ನಡೆಸಿದ್ದಾರೆ. ಇದನ್ನೂ ಓದಿ: ಕೊಡವ ಶೈಲಿಯಲ್ಲಿ ಮಿಂಚಿದ ನಟಿ ಶುಭ್ರ ಅಯ್ಯಪ್ಪ- ವಿಶಾಲ್ ಜೋಡಿ

    ಈ ಬಾರಿಯ ಪ್ರಶಸ್ತಿಗಾಗಿ ಒಟ್ಟು ಮುನ್ನೂರು ಸಿನಿಮಾಗಳನ್ನು ಆಯ್ಕೆ ಮಾಡಲಾಗಿತ್ತು.  ಮುನ್ನೂರು ಸಿನಿಮಾಗಳಲ್ಲಿ ನಾಮಿನೇಷನ್ ಪ್ರಕ್ರಿಯೆ ನಡೆದಿದೆ. ನಾಮಿನೇಷನ್ ಗೆ ಆಯ್ಕೆಯಾದ ಸಿನಿಮಾಗಳಲ್ಲಿ ಮತ್ತೆ ಆಸ್ಕರ್ ಪ್ರಶಸ್ತಿಗಾಗಿ ಆಯ್ಕೆ ನಡೆಯುತ್ತದೆ. ಆಸ್ಕರ್ ಪ್ರಶಸ್ತಿಗೆ ಆಯ್ಕೆಯಾದ ಸಿನಿಮಾಗಳನ್ನು ಮಾರ್ಚ್ 12ರಂದು ಘೋಷಿಸಲಾಗುವುದು. ಇಂದು ಕೇವಲ ನಾಮ ನಿರ್ದೇಶನಗೊಂಡ ಸಿನಿಮಾಗಳನ್ನು ಮಾತ್ರ ಘೋಷಿಸಲಾಗುತ್ತದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಬೇರೆ ಭಾಷೆಗಳ ಚಿತ್ರಗಳಲ್ಲಿ ನಟಿಸಿದರೂ, ನನ್ನ ಮೊದಲ ಆದ್ಯತೆ ಕನ್ನಡಕ್ಕೆ: ʻಕಾಂತಾರʼ ನಟಿ

    ಬೇರೆ ಭಾಷೆಗಳ ಚಿತ್ರಗಳಲ್ಲಿ ನಟಿಸಿದರೂ, ನನ್ನ ಮೊದಲ ಆದ್ಯತೆ ಕನ್ನಡಕ್ಕೆ: ʻಕಾಂತಾರʼ ನಟಿ

    `ಕಾಂತಾರ’ (Kantara) ಸಿನಿಮಾದ ಮೂಲಕ ಪ್ಯಾನ್ ಇಂಡಿಯಾ ನಟಿಯಾಗಿ ಮಿಂಚ್ತಿರುವ ಸಪ್ತಮಿ ಗೌಡ (Saptami Gowda) ಇದೀಗ ಬಾಲಿವುಡ್‌ಗೆ (Bollywood) ಹಾರಿದ್ದಾರೆ. `ಕಾಶ್ಮೀರ್ ಫೈಲ್ಸ್’ (Kashmir Files) ಖ್ಯಾತಿಯ ವಿವೇಕ್ ಅಗ್ನಿಹೋತ್ರಿ ಜೊತೆ ಸಿನಿಮಾಗಾಗಿ ಸಪ್ತಮಿ ಕೈ ಜೋಡಿಸಿದ್ದಾರೆ. ನಾನು ಯಾವುದೇ ಭಾಷೆಯಲ್ಲಿ ನಟಿಸಿದ್ರು ನನ್ನ ಆದ್ಯತೆ ಕನ್ನಡಕ್ಕೆ ಎಂದು ಇತ್ತೀಚಿನ ಸಂದರ್ಶನದಲ್ಲಿ ಸಪ್ತಮಿ ಮಾತನಾಡಿದ್ದಾರೆ.

    ಹೊಂಬಾಳೆ ಸಂಸ್ಥೆಯ `ಕಾಂತಾರ’ ಸಿನಿಮಾದಲ್ಲಿ ಸಪ್ತಮಿ ಗೌಡ ಪಾತ್ರಕ್ಕೂ ತೂಕವಿದೆ. ತಮಗೆ ಸಿಕ್ಕ ಪಾತ್ರದಲ್ಲಿ ಅಚ್ಚುಕಟ್ಟಾಗಿ ನಟಿಸಿ ಸೈ ಎನಿಸಿಕೊಂಡಿದ್ದರು. ಈಗ ಸಪ್ತಮಿಗೆ ಬಹುಭಾಷೆಗಳಿಂದ ಅನೇಕ ಆಫರ್ಸ್‌ಗಳು ಅರಸಿ ಬರುತ್ತಿದೆ. ಸದ್ಯ ಬಾಲಿವುಡ್ ವಿವೇಕ್ ಅಗ್ನಿಹೋತ್ರಿ (Vivek Agnihotri) ನಿರ್ದೇಶನದ `ದಿ ವಾಕ್ಸಿನ್ ವಾರ್’ ಚಿತ್ರಕ್ಕೆ ಓಕೆ ಅಂದಿದ್ದಾರೆ. ಈ ಸಿನಿಮಾಗೆ ಆಯ್ಕೆಯಾಗಿದ್ದು ಹೇಗೆ? ಎಂಬುದರ ಜೊತೆಗೆ ಸಾಕಷ್ಟು ವಿಚಾರಗಳ ಬಗ್ಗೆ ನಟಿ ಸಂದರ್ಶನವೊಂದರಲ್ಲಿ ರಿವೀಲ್ ಮಾಡಿದ್ದಾರೆ.

    ವಿವೇಕ್ ಅಗ್ನಿಹೋತ್ರಿ ಅವರು, ಕಾಂತಾರ ಸಿನಿಮಾದಲ್ಲಿ ಸಪ್ತಮಿ (Saptami) ನಟನೆ ನೋಡಿ, ರಿಷಬ್‌ಗೆ ಕಾಲ್ ಮಾಡಿದ್ದರು. ಚಿತ್ರದಲ್ಲಿನ ಪಾತ್ರಕ್ಕೆ ಸಪ್ತಮಿ ಸೂಕ್ತ ಎಂದೆನಿಸಿ ನನ್ನ ಫೋನ್ ನಂಬರ್ ಕೇಳಿದ್ದಾರೆ. ಬಳಿಕ ನನಗೆ ಕರೆ ಮಾಡಿ, ಈ ಪಾತ್ರ ನಾನು ಮಾಡಿದರೆ ಚೆನ್ನಾಗಿರುತ್ತದೆ ಎಂದು ಹೇಳಿದರು. ನಾನು ತಕ್ಷಣ ಒಪ್ಪಿಕೊಂಡೆ, ಬಳಿಕ ನನಗೆ ಸ್ಕ್ರಿಪ್ಟ್ (Script) ಕಳುಹಿಸಲಾಯಿತು. ಬಳಿಕ ನಾನು ಈ ಚಿತ್ರದ ಭಾಗವಾದೆ ಎಂದು `ಕಾಂತಾರ’ ನಟಿ ಮಾತನಾಡಿದ್ದಾರೆ. ಇದನ್ನೂ ಓದಿ: `ವಾರಿಸು’ದಲ್ಲಿ ತನ್ನ ಪಾತ್ರಕ್ಕೆ ಮಹತ್ವವಿಲ್ಲ: ಕಾರಣ ಬಿಚ್ಚಿಟ್ಟ ರಶ್ಮಿಕಾ ಮಂದಣ್ಣ

     

    View this post on Instagram

     

    A post shared by Sapthami Gowda ???? (@sapthami_gowda)

    ಮುಂದೆ ಕೂಡ ಬಾಲಿವುಡ್ ಚಿತ್ರದಲ್ಲಿ ನಟಿಸುತ್ತೀರಾ ಎಂದು ಕೇಳಿದಾಗ, ನನಗೆ ಕಥೆ ಇಷ್ಟವಾದರೆ ಖಂಡಿತಾ ನಟಿಸುತ್ತೇನೆ. ಆದರೆ ನನ್ನ ಆದ್ಯತೆ ಕನ್ನಡಕ್ಕೆ ಮತ್ತು ಕನ್ನಡ ಸಿನಿಮಾಗಳಿಗಾಗಿ (Kannada Films) ಎದುರು ನೋಡುತ್ತಿದ್ದೇನೆ ಎಂದು ನಟಿ ಮಾತನಾಡಿದ್ದಾರೆ.

    ಇನ್ನೂ `ದಿ ವ್ಯಾಕ್ಸಿನ್ ವಾರ್’ ಸಿನಿಮಾದಲ್ಲಿ ನಾಯಕ- ನಾಯಕಿ ಎಂಬುದಿಲ್ಲ. ಎಲ್ಲಾ ಪಾತ್ರಗಳಿಗೂ ಪ್ರಾಮುಖ್ಯತೆ ಇದೆ. ನನ್ನ ಪಾತ್ರವಂತೂ ಕಷ್ಟಕರವಾಗಿದೆ. ಸುಲಭ ಇದ್ದರೆ ಮಜಾ ಇರೋಲ್ಲ. ಈ ಪಾತ್ರ ಮಾಡುವುದ್ದಕ್ಕೆ ನನಗೆ ವಿವೇಕ್ ಅಗ್ನಿಹೋತ್ರಿ ನನಗೆ ತುಂಬಾ ಬೆಂಬಲಿಸಿದ್ದಾರೆ ಎಂದು ನಟಿ ಸಪ್ತಮಿ ಮುಕ್ತವಾಗಿ ಮಾತನಾಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಇಂದು ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ರಿರಿಲೀಸ್: ಕಾರಣ ತಿಳಿಸಿದ ವಿವೇಕ್ ಅಗ್ನಿಹೋತ್ರಿ

    ಇಂದು ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ರಿರಿಲೀಸ್: ಕಾರಣ ತಿಳಿಸಿದ ವಿವೇಕ್ ಅಗ್ನಿಹೋತ್ರಿ

    ಳೆದ ವರ್ಷ ಭಾರತೀಯ ಸಿನಿಮಾ ರಂಗದಲ್ಲಿ ಭಾರೀ ಸಂಚಲನ ಮೂಡಿಸಿದ್ದ ‘ದಿ ಕಾಶ್ಮೀರ್ ಫೈಲ್ಸ್’ (The Kashmir Files) ಇದೀಗ ಮತ್ತೆ ರಿರಿಲೀಸ್ (Rerelease) ಆಗುತ್ತಿದೆ. ವಿವೇಕ್ ಅಗ್ನಿಹೋತ್ರಿ (Vivek Agnihotri) ನಿರ್ದೇಶನದಲ್ಲಿ ಮೂಡಿ ಬಂದಿದ್ದ ಈ ಸಿನಿಮಾ ಇನ್ನೂರಕ್ಕೂ ಹೆಚ್ಚು ಕೋಟಿ ರೂಪಾಯಿ ಗಳಿಸಿತ್ತು. ದೇಶದ ನಾನಾ ಭಾಷೆಗಳಿಗೆ ಡಬ್ ಆಗಿಯೂ ಬಿಡುಗಡೆ ಆಗುತ್ತಿದೆ. ಸಿನಿಮಾ ಬಿಡುಗಡೆಯ ದಿನದಿಂದ ಈವರೆಗೂ ಒಂದಿಲ್ಲೊಂದು ವಿವಾದಕ್ಕೂ ಈ ಸಿನಿಮಾ ಕಾರಣವಾಗಿತ್ತು.

    kashmir

    ಸಿನಿಮಾ ಥಿಯೇಟರ್ ನಲ್ಲಿ ರಿಲೀಸ್ ಆಗಿ, ಟಿವಿಯಲ್ಲೂ ಪ್ರಸಾರವಾಗಿ, ಓಟಿಟಿಯಲ್ಲೂ ಇರುವ ಈ ಸಿನಿಮಾವನ್ನು ಇಂದು ಮತ್ತೆ ಬಿಡುಗಡೆ ಮಾಡುತ್ತಿರುವುದಕ್ಕೆ ಕಾರಣವನ್ನು ತಿಳಿಸಿದ್ದಾರೆ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ. ಈ ಕುರಿತು ಅವರು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ಇದು ಕಾಶ್ಮೀರ ಪಂಡಿತರ ಹತ್ಯೆಯ ಹಿನ್ನೆಲೆಯಾಗಿಟ್ಟುಕೊಂಡು ತಯಾರಾದ ಸಿನಿಮಾ. ಆ ಹತ್ಯೆ ನಡೆದು ಇಂದಿಗೆ 33 ವರ್ಷಗಳು. ಆ ಗೌರವಾರ್ಥವಾಗಿ ಸಿನಿಮಾ ರಿಲೀಸ್ ಮಾಡುತ್ತಿರುವುದಾಗಿ ತಿಳಿಸಿದ್ದಾರೆ. ಇದನ್ನೂ ಓದಿ: ಸಿನಿಮಾರಂಗಕ್ಕೆ ದಾರಿ ತೋರಿಸಿದ್ದೇ ರಕ್ಷಿತ್, ರಿಷಬ್: ನಟಿ ರಶ್ಮಿಕಾ ಮಂದಣ್ಣ

    ಕಾಶ್ಮೀರ ಪಂಡಿತರ ನರಮೇಧ ನಡೆದು ಜನವರಿ 19ಕ್ಕೆ 33 ವರ್ಷಗಳು ಆಗುತ್ತಿವೆ. ಇಂತಹ ಕರಾಳ ಅಧ್ಯಾಯವನ್ನು ಮತ್ತೊಮ್ಮೆ ಜನರಿಗೆ ನೆನಪಿಸಬೇಕು. ನರಹತ್ಯೆಯಲ್ಲಿ ಹತರಾದ ಕಾಶ್ಮೀರ ಪಂಡಿತರಿಗೆ ಗೌರವವನ್ನು ಸೂಚಿಸುವುದಕ್ಕಾಗಿ ಇಂದು ಮತ್ತೆ ದಿ ಕಾಶ್ಮೀರ್ ಫೈಲ್ಸ್ ತೆರೆಯ ಮೇಲೆ ಇರಲಿದೆ. ಪ್ರಕಾಶ್ ಬೆಳವಾಡಿ, ಅನುಪಮ್ ಖೇರ್ (Anupam Kher) ಸೇರಿದಂತೆ ಹಲವು ನುರಿತ ಕಲಾವಿದರು ಈ ಸಿನಿಮಾದಲ್ಲಿ ಇದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ‘ದಿ ವ್ಯಾಕ್ಸಿನ್ ವಾರ್’ ಸಿನಿಮಾದಲ್ಲೂ ಅನುಪಮ್ ಖೇರ್: ಇದು ಅವರ 534ನೇ ಚಿತ್ರ

    ‘ದಿ ವ್ಯಾಕ್ಸಿನ್ ವಾರ್’ ಸಿನಿಮಾದಲ್ಲೂ ಅನುಪಮ್ ಖೇರ್: ಇದು ಅವರ 534ನೇ ಚಿತ್ರ

    ದಿ ಕಾಶ್ಮೀರ್ ಫೈಲ್ಸ್ ಖ್ಯಾತಿಯ ವಿವೇಕ್ ಅಗ್ನಿಹೋತ್ರಿ ಜೊತೆ ಮತ್ತೊಂದು ಸಿನಿಮಾ ಮಾಡುತ್ತಿರುವುದಾಗಿ ಬಾಲಿವುಡ್ ಖ್ಯಾತ ನಟ ಅನುಪಮ್ ಖೇರ್ ಘೋಷಿಸಿದ್ದಾರೆ. ಇಂಥದ್ದೊಂದು ಸಿನಿಮಾದಲ್ಲಿ ನಟಿಸುತ್ತಿರುವುದಕ್ಕೆ ಹೆಮ್ಮೆ ಆಗುತ್ತಿದೆ ಎಂದಿರುವ ಅವರು, ಇದು ಅವರ 534ನೇ ಸಿನಿಮಾ ಎಂದು ಬರೆದುಕೊಂಡಿದ್ದಾರೆ. ಈ ಸಿನಿಮಾ ಆಕರ್ಷಕ ಮತ್ತು ಸ್ಫೂರ್ತಿದಾಯಕ ಎಂದು ಹೆಮ್ಮೆಪಟ್ಟಿದ್ದಾರೆ. ಶೂಟಿಂಗ್ ಸೆಟ್ ನಿಂದಲೇ ಕ್ಲ್ಯಾಪ್ ಬೋರ್ಡ್ ಹಿಡಿದುಕೊಂಡಿರುವ ಫೋಟೋವನ್ನೂ ಅವರು ಹಂಚಿಕೊಂಡಿದ್ದಾರೆ.

    ವಿವೇಕ್ ಅಗ್ನಿಹೋತ್ರಿ ನಿರ್ದೇಶನದ ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾದಲ್ಲಿ ಅನುಪಮ್ ಖೇರ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದರು. ಅಲ್ಲದೇ, ಈ ಸಿನಿಮಾ ವಿವಾದವಾದಾಗ ನಿರ್ದೇಶಕರ ಪರವಾಗಿ ನಿಂತಿದ್ದರು. ಈಗ ಮತ್ತೆ ವಿವೇಕ್ ಜೊತೆ ಮತ್ತೊಂದು ಸಿನಿಮಾಗೆ ಬಣ್ಣ ಹಚ್ಚಿದ್ದಾರೆ. ಈ ನಿರ್ದೇಶಕರ ಜೊತೆ ಮತ್ತೆ ಮತ್ತೆ ಸಿನಿಮಾ ಮಾಡುವ ಇಂಗಿತವನ್ನೂ ಅವರು ವ್ಯಕ್ತ ಪಡಿಸಿದ್ದಾರೆ. ಮತ್ತೆ ಮತ್ತೆ ಈ ರೀತಿಯ ಚಿತ್ರಗಳಲ್ಲಿ ಕಾಣಿಸಿಕೊಳ್ಳಲು ಹೆಮ್ಮೆ ಪಡುತ್ತೇನೆ ಎಂದೂ ಅವರು ಹಾಡಿ ಹೊಗಳಿದ್ದಾರೆ. ಇದನ್ನೂ ಓದಿ: ವಂದೇ ಭಾರತ್ ಎಕ್ಸ್‌ಪ್ರೆಸ್‌ ಉದ್ಘಾಟನೆಗೊಂಡ 4ನೇ ದಿನಕ್ಕೆ ಕಲ್ಲು ತೂರಾಟ- ಕಿಟಕಿ ಗಾಜು ಪುಡಿ ಪುಡಿ

    ಸದ್ಯ ದಿ ವಾಕ್ಸಿನ್ ವಾರ್ ಸಿನಿಮಾದ ಶೂಟಿಂಗ್ ಲಖನೌದಲ್ಲಿ ನಡೆದಿದೆ. ಈ ಸಿನಿಮಾದಲ್ಲಿ ನಾಯಕನಾಗಿ ನಾನಾ ಪಾಟೇಕರ್ ಪಾತ್ರ ಮಾಡಲಿದ್ದಾರೆ ಎಂದು ಹೇಳಲಾಗುತ್ತಿದೆ. ಗೋಪಾಲ್ ಸಿಂಗ್, ದಿವ್ಯಾ ಸೇಠ್ ಸೇರಿದಂತೆ ಹಲವು ಕಲಾವಿದರು ತಾರಾ ಬಳಗದಲ್ಲಿ ಇದ್ದಾರೆ. ಕನ್ನಡ, ಹಿಂದಿ, ತಮಿಳು, ತೆಲುಗು ಸೇರಿದಂತೆ ಒಟ್ಟು 11 ಭಾಷೆಗಳಲ್ಲಿ ಈ ಸಿನಿಮಾವನ್ನು ನಿರ್ಮಾಣ ಮಾಡುತ್ತಿದ್ದಾರೆ ವಿವೇಕ್ ಅಗ್ನಿಹೋತ್ರಿ.

    Live Tv
    [brid partner=56869869 player=32851 video=960834 autoplay=true]

  • ಮಗಳ ಬಿಕಿನಿ ಫೋಟೋ ಕಳುಹಿಸಿ ಬೆದರಿಕೆ ಹಾಕುತ್ತಿದ್ದಾರೆ ಎಂದ ದಿ ಕಾಶ್ಮೀರ್ ಫೈಲ್ಸ್ ನಿರ್ದೇಶಕ

    ಮಗಳ ಬಿಕಿನಿ ಫೋಟೋ ಕಳುಹಿಸಿ ಬೆದರಿಕೆ ಹಾಕುತ್ತಿದ್ದಾರೆ ಎಂದ ದಿ ಕಾಶ್ಮೀರ್ ಫೈಲ್ಸ್ ನಿರ್ದೇಶಕ

    ಮಗೆ ಶಾರುಖ್ ಖಾನ್ ಅಭಿಮಾನಿಗಳು ಅಶ್ಲೀಲ ಸಂದೇಶ ಕಳುಹಿಸುತ್ತಿದ್ದಾರೆ ಎಂದು ಮೊನ್ನೆಯಷ್ಟೇ ದಿ ಕಾಶ್ಮೀರ್ ಫೈಲ್ಸ್ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಆರೋಪ ಮಾಡಿದ್ದರು. ಇದೀಗ ಅವರು ತಮಗೆ ಜೀವ ಬೆದರಿಕೆಯನ್ನೂ ಹಾಕುತ್ತಿದ್ದಾರೆ ಎಂದು ಟ್ವೀಟ್ ಮಾಡಿದ್ದಾರೆ. ತಮ್ಮ ಮಗಳ ಬಿಕಿನಿ ಫೋಟೋ ಕಳುಹಿಸುವುದರ ಜೊತೆಗೆ ಜೀವ ಬೆದರಿಕೆಯ ಬರಹಗಳನ್ನು ಬರೆಯುತ್ತಿದ್ದಾರೆ ಎಂದು ಅವರು ಕೆಲವು ಸ್ಕ್ರೀನ್ ಶಾಟ್ ಹಾಕಿದ್ದಾರೆ.

    ಕೆಲ ಕಿಡಿಗೇಡಿಗಳು ಅಶ್ಲೀಲ ಸಂದೇಶಗಳನ್ನು ಕಳುಹಿಸುತ್ತಿರುವುದಕ್ಕೆ ಕಾರಣ ಶಾರುಖ್ ಖಾನ್ ನಟನೆಯ ಪಠಾಣ್ ಸಿನಿಮಾಗೆ ಅವರು ಕೊಟ್ಟ ಪ್ರತಿಕ್ರಿಯೆ ಕಾರಣವೆಂದು ಹೇಳಲಾಗುತ್ತಿದೆ. ಪಠಾಣ್ ಸಿನಿಮಾದಲ್ಲಿ ದೀಪಿಕಾ ಪಡುಕೋಣೆ ಕೇಸರಿ ಬಿಕಿನಿ ಹಾಕಿದರು ಎನ್ನುವ ಕಾರಣಕ್ಕಾಗಿ ದೊಡ್ಡ ಸುದ್ದಿ ಆಗಿತ್ತು. ಹಿಂದೂಪರ ಸಂಘಟನೆಗಳು ಪ್ರತಿಭಟಿಸಿದವು. ಹಲವರು ಈ ವಿವಾದದ ಬಗ್ಗೆ ಪ್ರತಿಕ್ರಿಯಿಸಿದರು. ಅದೇ ರೀತಿಯ ವಿವೇಕ್ ಅಗ್ನಿಹೋತ್ರಿ ಕೂಡ ಮಾತನಾಡಿದ್ದಾರೆ.

    ಪಠಾಣ್ ಸಿನಿಮಾದಲ್ಲಿ ಕೇಸರಿ ಬಿಕಿನಿ ಮತ್ತು ಕೇಸರಿ ಬಣ್ಣಕ್ಕೆ ಅವಮಾನ ಮಾಡಲಾಗಿದೆ ಎನ್ನುವ ಕಾರಣಕ್ಕಾಗಿ ವಿವೇಕ್ ಅಗ್ನಿಹೋತ್ರಿ ಬಾಲಿವುಡ್ ಸಿನಿಮಾ ರಂಗವನ್ನು ಜರಿದಿದ್ದರು. ಅದರಲ್ಲೂ ಶಾರುಖ್ ಖಾನ್ ಅವರ ಈ ನಡೆಯನ್ನು ಖಂಡಿಸಿದ್ದರು. ಯಶಸ್ಸಿಗಾಗಿ ಇಂತಹ ಕೀಳುಮಟ್ಟಕ್ಕೆ ಇಳಿಯದಿರಲಿ ಎಂದು ಪರೋಕ್ಷವಾಗಿ ದೀಪಿಕಾ ಪಡುಕೋಣೆ ಅವರಿಗೂ ಚಾಟಿ ಬೀಸಿದ್ದರು. ವಿವೇಕ್ ಮಾತ್ರ ಹಲವರ ಕಂಗೆಣ್ಣಿಗೂ ಗುರಿಯಾಗಿತ್ತು. ಇದನ್ನೂ ಓದಿ: ನಾನಿಲ್ಲಿ ಗೆದ್ದಿರುವಂಥದ್ದು ನಿಮ್ಮಿಂದ, ನೀವು ನನ್ನನ್ನು ಗೆಲ್ಲಿಸಿದ್ದೀರಿ: ರೂಪೇಶ್ ಶೆಟ್ಟಿ

    kashmir

    ವಿವೇಕ್ ಅಗ್ನಿಹೋತ್ರಿ ಅವರು ಪಠಾಣ್ ಚಿತ್ರಕ್ಕೆ ಮತ್ತು ಶಾರುಖ್ ಖಾನ್ ವಿರುದ್ಧ ಮಾತನಾಡಿದ್ದಾರೆ ಎನ್ನುವ ಕಾರಣಕ್ಕಾಗಿ ಶಾರುಖ್ ಖಾನ್ ಹೆಸರಿನಲ್ಲಿ ಕಿಡಿಗೇಡಿಗಳು ವಿವೇಕ್ ಅವರಿಗೆ ಅಶ್ಲೀಲ ಸಂದೇಶವನ್ನು ಕಳುಹಿಸುತ್ತಿದ್ದಾರಂತೆ. ಮಸೆಂಜರ್ ಸೇರಿದಂತೆ ಹಲವು ಕಡೆ ಶಾರುಖ್ ಖಾನ್ ಫೋಟೋ ಇರುವಂತಹ ಫೇಕ್ ಐಡಿಗಳಿಂದ ನಿಂದನೆಯ ಮತ್ತು ಕೆಟ್ಟ ಬೈಗುಳ ಇರುವಂತಹ ಮಸೇಜ್ ಗಳನ್ನು ಕಳುಹಿಸುತ್ತಿದ್ದಾರೆ. ಈ ವಿಷಯವನ್ನು ಸ್ವತಃ ವಿವೇಕ್ ಅವರೇ ತಮ್ಮ ಸೋಷಿಯಲ್ ಮೀಡಿಯಾಗಳಲ್ಲಿ ಹಂಚಿಕೊಂಡಿದ್ದಾರೆ.

    ವಿವೇಕ್ ಅವರಿಗೆ ರಾಶಿ ರಾಶಿ ಅಶ್ಲೀಲ ಮಸೇಜ್ ಗಳು ಬರುತ್ತಿವೆಯಂತೆ. ಇದೇ ರೀತಿ ಮುಂದುವರೆದರೆ ಸೈಬರ್ ಠಾಣೆಗೆ ದೂರು ಕೂಡ ನೀಡುತ್ತಾರಂತೆ. ತಾವು ಯಾವುದೇ ರೀತಿಯಲ್ಲಿ ಯಾರನ್ನೂ ನಿಂದಿಸಿಲ್ಲ. ತಪ್ಪನ್ನು ಖಂಡಿಸಿದ್ದೇನೆ. ಅದಕ್ಕಾಗಿ ಈ ರೀತಿ ಶಿಕ್ಷೆ ಎಂದು ಅವರು ಬರೆದುಕೊಂಡಿದ್ದಾರೆ. ಈ ನಡೆಯನ್ನು ಬಲವಾಗಿ ಖಂಡಿಸುವುದಾಗಿಯೂ ಅವರು ಹೇಳಿಕೊಂಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]