Tag: the villain

  • ಪ್ರೇಮ್ ಆಕ್ರೋಶಕ್ಕೆ ನರ್ತಕಿ ಚಿತ್ರಮಂದಿರದ ಮ್ಯಾನೇಜರ್ ಪ್ರತಿಕ್ರಿಯೆ

    ಪ್ರೇಮ್ ಆಕ್ರೋಶಕ್ಕೆ ನರ್ತಕಿ ಚಿತ್ರಮಂದಿರದ ಮ್ಯಾನೇಜರ್ ಪ್ರತಿಕ್ರಿಯೆ

    ಬೆಂಗಳೂರು: ಇಂದು ಬೆಳಗ್ಗೆ ದಿ ವಿಲನ್ ಸಿನಿಮಾ ನಿರ್ದೇಶಕ ಪ್ರೇಮ್ ನರ್ತಕಿ ಚಿತ್ರಮಂದಿರದ ಸೌಂಡ್ ಎಂಜಿನಿಯರ್ ವಿರುದ್ಧ ಕೋಪಗೊಂಡಿದ್ದರು. ಈ ಸಂಬಂಧ ಮಾಧ್ಯಮಗಳ ಮುಂದೆಯೂ ಪ್ರೇಮ್ ಅಸಮಾಧಾನ ಹೊರ ಹಾಕಿದ್ದರು. ಸದ್ಯ ಪ್ರೇಮ್ ಹೇಳಿಕೆಗೆ ನರ್ತಕಿ ಚಿತ್ರಮಂದಿರದ ಮ್ಯಾನೇಜರ್ ನರಸಿಂಹ ಯಾದವ್ ಪಬ್ಲಿಕ್ ಟಿವಿಗೆ ಪ್ರತಿಕ್ರಿಯೆ ನೀಡಿದ್ದಾರೆ.

    ನಗರದ ಕೆ.ಜಿ.ರಸ್ತೆಯಲ್ಲಿ ನಮ್ಮದೇ ನಂಬರ್ ಒನ್ ಥಿಯೇಟರ್. ಇಲ್ಲಿ ಯಾವುದೇ ಸೌಂಡ್ ಸಮಸ್ಯೆ ಇಲ್ಲ. ನಮ್ಮಲ್ಲಿ ಎಲ್ಲ ಸಿನಿಮಾಗಳು ಸರಿಯಾಗಿ ಪ್ರದರ್ಶನ ಆಗುತ್ತವೆ. ದಿ ವಿಲನ್ ಚಿತ್ರ ಪ್ರದರ್ಶನ ಆರಂಭದಲ್ಲಿ ಸೌಂಡ್ ಸರಿ ಮಾಡುವಾಗ ಅರೆಕ್ಷಣ ತಾಂತ್ರಿಕ ತೊಂದರೆ ಆಯಿತು. ಪ್ರೇಮ್ ಸಿನಿಮಾವನ್ನು ಕಷ್ಟಪಟ್ಟು ಇಷ್ಟದಿಂದ ಮಾಡಿದಾಗ ಸೌಂಡ್ ಸಮಸ್ಯೆಯಾದಾಗ ಬೇಸರವಾಗುವುದು ಸಹಜ ಎಂದು ನರಸಿಂಹ ಯಾದವ್ ತಿಳಿಸಿದ್ದಾರೆ.

    ಪ್ರೇಮ್ ಅವರು ಮೇಲುಗಡೆ ಕ್ಯಾಬಿನ್ ನಲ್ಲಿ ಕುಳಿತು 5 ನಿಮಿಷ ಸಿನಿಮಾ ವೀಕ್ಷಿಸಿದ್ದಾರೆ. ಈವಾಗ ಬಂದು ಕುಳಿತು ನೋಡಲಿ. ಆಗ ನಂಗೂ ಅವರ ಅಭಿಪ್ರಾಯವನ್ನು ಕೇಳಬಹುದು. ಸಡನ್ ಆಗಿ ಅವರು ಆ ತರ ಹೇಳಿರುವುದು ಅವರ ಅಭಿಪ್ರಾಯವಷ್ಟೇ. ಆದ್ರೆ ಇಂದು ಮೆಜೆಸ್ಟಿಕ್, ಕೆ.ಜಿ ರೋಡ್ ಗೆ ನಂಬರ್ 1 ಥಿಯೇಟರ್ ಅಂದ್ರೆ ಅದು ನರ್ತಕಿ. ಇಲ್ಲಿ ರಾತ್ರಿ, ಹಗಲು ನಾವು ಕಷ್ಟಪಟ್ಟು ಕೆಲಸ ಮಾಡುತ್ತೇವೆ ಅಂತ ಅವರು ಹೇಳಿದ್ರು.

    ನಮ್ಮ ಚಿತ್ರಮಂದಿರಲ್ಲಿ ಯಾವುದೇ ರೀತಿಯ ಸಮಸ್ಯೆಯಿಲ್ಲ. ಜನರಿಗೆ ಯಾವ ರೀತಿ, ಮನರಂಜನೆ ಹಾಗೂ ಖುಷಿ ನೀಡಬೇಕೋ ಅದಕ್ಕೆ ಎಲ್ಲಾ ರೀತಿಯಲ್ಲೂ ಸಿದ್ಧತೆ ನಡೆಸಿದ್ದೇವೆ ಅಂತ ಅವರು ಚಿತ್ರವೀಕ್ಷಕರಲ್ಲಿ ಮನವಿ ಮಾಡಿಕೊಂಡರು.

    ನರ್ತಕಿ ಥಿಯೇಟರ್ ನಲ್ಲಿ ಬೆಳಗ್ಗೆ 6 ಗಂಟೆಗೆ ಮೊದಲ ಶೋ ಆರಂಭವಾಗಿತ್ತು. ಚಿತ್ರದ ಆರಂಭದಲ್ಲಿಯೇ ಥಿಯೇಟರ್ ನಲ್ಲಿ ಸೌಂಡ್ ಸಮಸ್ಯೆ ಕಾಣಿಸಿಕೊಂಡಿತು. ಚಿತ್ರ ವೀಕ್ಷಿಸಿಸಲು ಖುಷಿಯಿಂದ ಬಂದ ಅಭಿಮಾನಿಗಳಿಗೆ ಕೆಲ ನಿಮಿಷ ಭಾರೀ ನಿರಾಸೆ ಉಂಟಾಯಿತು. ಇದರಿಂದ ಕೋಪಗೊಂಡು ಹೊರಬಂದ ಪ್ರೇಮ್ ಮಾಧ್ಯಮಗಳ ಮುಂದೆಯೇ ಚಿತ್ರಮಂದಿರದ ಮಾಲೀಕರ ಮೇಲೆ ಕೋಪಗೊಂಡರು.

    ಪ್ರಪಂಚದ ದೊಡ್ಡ ದೊಡ್ಡ ಎಂಜಿನಿಯರ್ ಗಳ ಕರೆಸಿ ಸಾಂಗ್ ಮಾಡಿಸಿದ್ದೇನೆ. ಚಿತ್ರದ ಆರಂಭದಲ್ಲಿ ಸಿನಿಮಾ ನಿಲ್ಲಿಸೋಣ ಅಂದುಕೊಂಡಿದ್ದೆ. ಆದರೆ ಅಭಿಮಾನಿಗಳಿಗೆ ನಿರಾಸೆ ಆಗುತ್ತೆ ಅಂತಾ ನಿರ್ಧಾರ ಬದಲಿಸಿ ಹೊರಗೆ ಬಂದಿದ್ದೇನೆ ಎಂದು ನರ್ತಕಿ ಚಿತ್ರಮಂದಿರದ ಸೌಂಡ್ ಎಂಜಿನಿಯರ್ ವಿರುದ್ಧ ಪ್ರೇಮ್ ಆಕ್ರೋಶ ವ್ಯಕ್ತಪಡಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ‘ದಿ ವಿಲನ್’ ರಿಲೀಸ್ ದಿನವೇ ಪ್ರೇಮ್ ಕೆಂಡಾಮಂಡಲ

    ‘ದಿ ವಿಲನ್’ ರಿಲೀಸ್ ದಿನವೇ ಪ್ರೇಮ್ ಕೆಂಡಾಮಂಡಲ

    ಬೆಂಗಳೂರು: ಇಂದು ವಿಶ್ವದಾದ್ಯಂತ ಪ್ರೇಮ್ ನಿರ್ದೇಶನದ ‘ದಿ ವಿಲನ್’ ಸಿನಿಮಾ ರಿಲೀಸ್ ಆಗಿದೆ. ಅಭಿಮಾನಿಗಳು ಸುದೀಪ್ ಮತ್ತು ಶಿವರಾಜ್‍ಕುಮಾರ್ ಅಭಿನಯವನ್ನು ನೋಡಲು ಮಧ್ಯರಾತ್ರಿಯಿಂದಲೇ ಚಿತ್ರಮಂದಿರಗಳತ್ತ ಬಂದಿದ್ದಾರೆ. ನಗರದ ನರ್ತಕಿ ಚಿತ್ರಮಂದಿರ ಮಾಲೀಕರ ವಿರುದ್ಧ ನಿರ್ದೇಶಕ ಪ್ರೇಮ್ ಗರಂ ಆಗಿದ್ದಾರೆ.

    ನರ್ತಕಿ ಥಿಯೇಟರ್ ನಲ್ಲಿ ಬೆಳಗ್ಗೆ 6 ಗಂಟೆಗೆ ಮೊದಲ ಶೋ ಆರಂಭವಾಗಿತ್ತು. ಚಿತ್ರದ ಆರಂಭದಲ್ಲಿಯೇ ಥಿಯೇಟರ್ ನಲ್ಲಿ ಸೌಂಡ್ ಸಮಸ್ಯೆ ಕಾಣಿಸಿಕೊಂಡಿತು. ಚಿತ್ರ ವೀಕ್ಷಿಸಿಸಲು ಖುಷಿಯಿಂದ ಬಂದ ಅಭಿಮಾನಿಗಳಿಗೆ ಕೆಲ ನಿಮಿಷ ಭಾರೀ ನಿರಾಸೆ ಉಂಟಾಯಿತು. ಇದರಿಂದ ಕೋಪುಗೊಂಡು ಹೊರಬಂದ ಪ್ರೇಮ್ ಮಾಧ್ಯಮಗಳ ಮುಂದೆಯೇ ಚಿತ್ರಮಂದಿರದ ಮಾಲೀಕರ ಮೇಲೆ ಕೋಪಗೊಂಡರು.

    ಪ್ರಪಂಚದ ದೊಡ್ಡ ದೊಡ್ಡ ಇಂಜಿನಿಯರ್ ಗಳ ಕರೆಸಿ ಸಾಂಗ್ ಮಾಡಿಸಿದ್ದೇನೆ. ಚಿತ್ರದ ಆರಂಭದಲ್ಲಿ ಸಿನಿಮಾ ನಿಲ್ಲಿಸೋಣ ಅಂದುಕೊಂಡಿದ್ದೆ, ಆದರೆ ಅಭಿಮಾನಿಗಳಿಗೆ ನಿರಾಸೆ ಆಗುತ್ತೆ ಅಂತಾ ನಿರ್ಧಾರ ಬದಲಿಸಿ ಹೊರಗೆ ಬಂದಿದ್ದೇನೆ ಎಂದು ನರ್ತಕಿ ಚಿತ್ರಮಂದಿರದ ಸೌಂಡ್ ಇಂಜಿನಿಯರ್ ವಿರುದ್ಧ ಪ್ರೇಮ್ ಆಕ್ರೋಶ ವ್ಯಕ್ತಪಡಿಸಿದರು. ಇದೇ ವೇಳೆ ವರ್ಷನಾಗಟ್ಟುಲೇ ಸಿನಿಮಾ ಮಾಡಿದ್ದೀವಿ. ದಯವಿಟ್ಟು ಮೊಬೈಲಿನಲ್ಲಿ ಸೆರೆ ಹಿಡಿಯಬೇಡಿ ಎಂದು ಜನರಲ್ಲಿ ಪ್ರೇಮ್ ಮನವಿ ಮಾಡಿಕೊಂಡರು.

    ಎಲ್ಲೆಡೆ ಟಿಕೆಟ್‍ಗೆ ನೂಕುನುಗ್ಗಲು ಕಂಡು ಬರುತ್ತಿದೆ. ಮಲ್ಟಿಪ್ಲೆಕ್ಸ್ ಗಳು ಹೌಸ್‍ಫುಲ್ ಆಗಿವೆ. ಅಭಿಮಾನಿಗಳ ಸಂಭ್ರಮ ಮುಗಿಲು ಮುಟ್ಟಿದೆ. ಜೋಗಿ ಪ್ರೇಮ್ ನಿರ್ದೇಶನದಲ್ಲಿ ಇದೇ ಮೊದಲ ಬಾರಿಗೆ ಹಿರಿಯ ನಟ ಶಿವರಾಜ್ ಕುಮಾರ್ ಮತ್ತು ಕಿಚ್ಚ ಸುದೀಪ್ ಒಟ್ಟಾಗಿ ನಟಿಸಿದ್ದಾರೆ. ಆಮಿ ಜಾಕ್ಸನ್ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ಈಗಾಗಲೇ ವಿಲನ್ ಹಾಡುಗಳು ಕಮಾಲ್ ಮಾಡಿವೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ರಾಜ್ಯಾದ್ಯಂತ ‘ದಿ ವಿಲನ್’ ಹವಾ- ಥಿಯೇಟರ್ ಗಳ ಮುಂದೆ ಅಭಿಮಾನಿಗಳ ಡ್ಯಾನ್ಸ್

    ರಾಜ್ಯಾದ್ಯಂತ ‘ದಿ ವಿಲನ್’ ಹವಾ- ಥಿಯೇಟರ್ ಗಳ ಮುಂದೆ ಅಭಿಮಾನಿಗಳ ಡ್ಯಾನ್ಸ್

    ಬೆಂಗಳೂರು: ಇವತ್ತು ಡಬಲ್ ಧಮಾಕಾ. ಒಂದೆಡೆ ದಸರಾ ಸಂಭ್ರಮ. ಇನ್ನೊಂದೆಡೆ ದಿ ವಿಲನ್ ರಿಲೀಸ್ ಸಡಗರ. ಹ್ಯಾಟ್ರಿಕ್ ಹೀರೋ ಶಿವರಾಜ್‍ಕುಮಾರ್ ಮತ್ತು ಕಿಚ್ಚ ಸುದೀಪ್ ಒಟ್ಟಿಗೆ ಅಭಿನಯಿಸಿರುವ ‘ದಿ ವಿಲನ್’ ಸಿನಿಮಾ ರಿಲೀಸ್ ಆಗಿದೆ.

    ಬಳ್ಳಾರಿಯ ಥಿಯೇಟರ್‍ಗಳಲ್ಲಿ ಬೆಳಗ್ಗೆ 5 ಗಂಟೆಗೆ ಮೊದಲ ಶೋ ಶುರುವಾಗಿದೆ. ಬೆಂಗಳೂರು, ಶಿವಮೊಗ್ಗ, ದಾವಣಗೆರೆ, ಬಳ್ಳಾರಿ, ಮಂಡ್ಯ ಬೆಳಗಾವಿ ಸೇರಿದಂತೆ ರಾಜ್ಯಾದ್ಯಂತ ವಿಲನ್ ಫಸ್ಟ್ ಶೋ ಶುರುವಾಗಿದೆ. ಹಲವೆಡೆ ಇದೀಗ ಶೋ ಆರಂಭವಾಗಲಿದೆ. ಎಲ್ಲಾ ಥಿಯೇಟರ್‍ಗಳ ಮುಂದೆ ದಿ ವಿಲನ್ ನೋಡಲು ನಸುಕಿನ ಜಾವವೇ ಮುಗಿಬಿದ್ದಿದ್ದಾರೆ. ರಾತ್ರಿಯಿಂದಲೇ ಟಿಕೆಟ್‍ಗೆ ಕಾದು ಕುಳಿತಿದ್ದ ಶಿವಣ್ಣ, ಕಿಚ್ಚನ ವೀರಾಭಿಮಾನಿಗಳು, ಇದೀಗ ಸಿನಿಮಾ ಹಾಲ್ ಪ್ರವೇಶ ಮಾಡಿದ್ದಾರೆ.

    ಶಿವಮೊಗ್ಗದ ಲಕ್ಷ್ಮೀ ಟಾಕೀಸ್ ನಲ್ಲಿ ಮೂರು ದಿನಗಳ ಟಿಕೇಟ್ ಗಳು ಈಗಾಗಲೇ ಆನ್ ಲೈನ್ ನಲ್ಲಿ ಬುಕ್ ಆಗಿವೆ. ಮಧ್ಯರಾತ್ರಿಯೇ ಲಕ್ಷ್ಮಿ ಟಾಕೀಸ್ ಬಳಿ ಡೊಳ್ಳು, ತಮಟೆ ತರಿಸಿ ಅಭಿಮಾನಿಗಳು ಡ್ಯಾನ್ಸ್ ಮಾಡಿದರು. ಕುಂಬಳ ಕಾಯಿ ಒಡೆದು, ಕಟೌಟ್ ಮುಂದೆ ಕರ್ಪೂರ ಹಚ್ಚಿ ಸಂಭ್ರಮಿಸಿದರು. ಗಲಾಟೆ ಆಗಬಹುದು ಎನ್ನುವ ಕಾರಣಕ್ಕೆ ಮಿಡ್‍ನೈಟ್ ಶೋಗೆ ಪೊಲೀಸ್ ಇಲಾಖೆ ಅವಕಾಶ ನೀಡಲಿಲ್ಲ. ಇದರಿಂದಾಗಿ ಸಾವಿರಾರು ಅಭಿಮಾನಿಗಳಿಗೆ ಭಾರೀ ನಿರಾಸೆ ಆಯ್ತು. ಪೊಲೀಸ್ ಮತ್ತು ಜಿಲ್ಲಾಡಳಿತದ ಅನುಮತಿ ಪಡೆಯದೇ ಲಕ್ಷ್ಮೀ ಟಾಕೀಸ್ ಮಾಲೀಕರು ಟಿಕೆಟ್ ಮಾರಾಟ ಮಾಡಿದ್ದರು.

    ಎಲ್ಲೆಡೆ ಟಿಕೆಟ್‍ಗೆ ನೂಕುನುಗ್ಗಲು ಕಂಡು ಬರುತ್ತಿದೆ. ಮಲ್ಟಿಪ್ಲೆಕ್ಸ್ ಗಳು ಹೌಸ್‍ಫುಲ್ ಆಗಿವೆ. ಅಭಿಮಾನಿಗಳ ಸಂಭ್ರಮ ಮುಗಿಲು ಮುಟ್ಟಿದೆ. ಜೋಗಿ ಪ್ರೇಮ್ ನಿರ್ದೇಶನದಲ್ಲಿ ಇದೇ ಮೊದಲ ಬಾರಿಗೆ ಹಿರಿಯ ನಟ ಶಿವರಾಜ್ ಕುಮಾರ್ ಮತ್ತು ಕಿಚ್ಚ ಸುದೀಪ್ ಒಟ್ಟಾಗಿ ನಟಿಸಿದ್ದಾರೆ. ಆಮಿ ಜಾಕ್ಸನ್ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ಈಗಾಗಲೇ ವಿಲನ್ ಹಾಡುಗಳು ಕಮಾಲ್ ಮಾಡಿವೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಸುದೀಪ್, ಆ್ಯಮಿ ಕಾಂಬಿನೇಷನ್ ರೊಮ್ಯಾಂಟಿಕ್ ಹಾಡಿನ ಝಲಕ್ ರಿಲೀಸ್

    ಸುದೀಪ್, ಆ್ಯಮಿ ಕಾಂಬಿನೇಷನ್ ರೊಮ್ಯಾಂಟಿಕ್ ಹಾಡಿನ ಝಲಕ್ ರಿಲೀಸ್

    ಬೆಂಗಳೂರು: ದಿ ವಿಲನ್ ಕರುನಾಡಿನ ಜನತೆ ಕಾಯುತ್ತಿರುವ ಮಲ್ಟಿ ಸ್ಟಾರ್ ಸಿನಿಮಾ. ಸಿನಿಮಾ ಅಕ್ಟೋಬರ್ 18ಕ್ಕೆ ರಿಲೀಸ್ ಆಗಲಿದ್ದು, ಚಿತ್ರತಂಡ ಸಿನಿಮಾದ ಮೇಕಿಂಗ್ ಮತ್ತು ಹಾಡಿನ ತುಣುಖೂಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುತ್ತಿದೆ. ಈಗ ಅಭಿನಯ ಚಕ್ರವರ್ತಿ ಸುದೀಪ್, ಬ್ರಿಟನ್ ಸುಂದರಿ ಆ್ಯಮಿ ಜಾಕ್ಸನ್ ಕಾಂಬೀನೇಷನ್ ‘ಹೇಳಲ್ಲ.. ನಾ, ಹೇಳಲ್ಲ’ ಹಾಡಿನ ಕ್ಲಿಪ್ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ.

    ಕೇವಲ 30 ಸೆಕೆಂಡ್‍ನ ಈ ವಿಡಿಯೋದಲ್ಲಿ ಮನೆಯೊಂದಕ್ಕೆ ಬಣ್ಣ ಹಚ್ಚುತ್ತಿದ್ದು, ಸುದೀಪ್ ಮತ್ತು ಆ್ಯಮಿ ರೊಮ್ಯಾಂಟಿಕ್ ಆಗಿ ಮಿಂಚಿದ್ದಾರೆ. ಸುದೀಪ್ ಬಿಳಿ ಮತ್ತು ನೀಲಿ ಬಣ್ಣದ ಕುರ್ತಾ ಧರಿಸಿ, ತಲೆಗೆ ಟ್ರೆಂಡಿಂಗ್ ಬಟ್ಟೆ ಕಟ್ಟಿದ್ದರೆ, ಇತ್ತ ಆ್ಯಮಿ ಸೀರೆ, ಲಂಗ-ದವಣಿಯಲ್ಲಿ ಕುಣಿದಿದ್ದಾರೆ. ದಿ ವಿಲನ್ ಸಿನಿಮಾದ ಟ್ರೇಲರ್, ಹಾಡಿನ ಲಿರಿಕ್ಸ್ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಮಿಂಚನ್ನು ಹರಿಸಿವೆ.

    ಮಂಗಳವಾರ ಬಿಡುಗಡೆಯಾದ ದಿ ವಿಲನ್ ಹಾಡಿನ ಅಲ್ಬಂ ಟ್ರೆಂಡಿಂಗ್ 2 ರಲ್ಲಿದೆ. ಬಿಡುಗಡೆಯಾದ ಒಂದೇ ದಿನಕ್ಕೆ 8.9 ಲಕ್ಷಕ್ಕೂ ಅಧಿಕ ವ್ಯೂವ್ ಪಡೆದುಕೊಂಡಿದೆ. ಚಿತ್ರದಲ್ಲಿ ಇದೇ ಮೊದಲ ಬಾರಿಗೆ ಸುದೀಪ್ ಮತ್ತು ಕರುನಾಡ ಚಕ್ರವರ್ತಿ ಶಿವರಾಜ್‍ಕುಮಾರ್ ಮೊದಲ ಬಾರಿಗೆ ಅಭಿನಯಿಸಿದ್ದು, ಜೋಗಿ ಪ್ರೇಮ್ ಆ್ಯಕ್ಷನ್ ಕಟ್ ಹೇಳಿದ್ದಾರೆ. ಚಿತ್ರಕ್ಕೆ ಅರ್ಜುನ್ಯ ಸಂಗೀತ ನೀಡಿದ್ದು, ಯುಟ್ಯೂಬ್‍ನಲ್ಲಿ ಸಂಚಲನ ಹುಟ್ಟುಹಾಕಿವೆ. ಚಿತ್ರ ಇದೇ ತಿಂಗಳು ಅಕ್ಟೋಬರ್ 18ರಂದು ತೆರೆಕಾಣಲಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಅಭಿಮಾಗಳಿಗೆ ಶಿವಣ್ಣ ವಾರ್ನಿಂಗ್ – ಯೂಟ್ಯೂಬ್ ನಂ.1 ಟ್ರೆಂಡಿಂಗ್  ನಲ್ಲಿ ದಿ-ವಿಲನ್ ಟೀಸರ್

    ಅಭಿಮಾಗಳಿಗೆ ಶಿವಣ್ಣ ವಾರ್ನಿಂಗ್ – ಯೂಟ್ಯೂಬ್ ನಂ.1 ಟ್ರೆಂಡಿಂಗ್ ನಲ್ಲಿ ದಿ-ವಿಲನ್ ಟೀಸರ್

    ಬೆಂಗಳೂರು: ‘ದಿ ವಿಲನ್’ ಸಿನಿಮಾ ಚಿತ್ರತಂಡ ಸೋಮವಾರ ಸಂಜೆ 7 ಗಂಟೆಗೆ ಟೀಸರ್ ಬಿಡುಗಡೆ ಮಾಡಿದ್ದು, ಇದೀಗ ಯೂ ಟ್ಯೂಬ್ ನಲ್ಲಿ ನಂಬರ್ 1 ಟ್ರೆಂಡಿಂಗ್ ವಿಡಿಯೋವಾಗಿದೆ. ಟೀಸರ್ ಬಿಡುಗಡೆ ಸುದ್ದಿಗೋಷ್ಟಿಯಲ್ಲಿ `ಸಿನಿಮಾವನ್ನು ಸಿನಿಮಾದಂತೆ ನೋಡಿ’ ಎಂದು ಹೇಳುವ ಮೂಲಕ ಶಿವಣ್ಣ ಅವರು ಅಭಿಮಾನಿಗಳಿಗೆ ಖಡಕ್ ವಾರ್ನಿಂಗ್ ಮಾಡಿದ್ದಾರೆ.

    ದಿ ವಿಲನ್ ಸಿನಿಮಾದ ಬಿಡುಗಡೆಗೆ ದಿನಗಣನೇ ಶುರುವಾಗಿದ್ದು, ರಿಲೀಸ್ ಮುನ್ನ ಚಿತ್ರತಂಡ ಸಿನಿಮಾದ ನಾಲ್ಕು ಟೀಸರ್‌ಗಳನ್ನು ನಿದೇರ್ಶಕ ಪ್ರೇಮ್ ಅವರು ಬಿಡುಗಡೆ ಮಾಡಿದ್ದಾರೆ. ಇದೀಗ ಈ ವಿಡಿಯೋ ಯೂಟ್ಯೂಬ್ ನಲ್ಲಿ ಸಖತ್ ಮಿಂಚುತ್ತಿದೆ.

    ಹ್ಯಾಟ್ರಿಕ್ ಹೀರೋ ಶಿವಣ್ಣ ಮತ್ತು ಕಿಚ್ಚ ಸುದೀಪ್ ಅಭಿನಯದ ದಿ-ವಿಲನ್ ಸಿನಿಮಾದ ಟೀಸರ್ ಅನ್ನು ಬಿಡುಗಡೆ ಮಾಡುತ್ತಿದ್ದಂತೆ 8 ಲಕ್ಷದ 50 ಸಾವಿರಕ್ಕೂ ಅಧಿಕ ಹಿಟ್ಸ್ ಪಡೆದುಕೊಂಡಿದೆ. ಈ ವಿಡಿಯೋದಲ್ಲಿ ಶಿವಣ್ಣ ಅವರ ಡೈಲಾಗ್‍ಗಳಿಗೆ ಈಗಾಗಲೇ ಅಭಿಮಾನಿಗಳು ಫಿದಾ ಆಗಿದ್ದಾರೆ. ಅಷ್ಟೇ ಅಲ್ಲದೇ ದಿ ವಿಲನ್ ಸಿನಿಮಾದಲ್ಲಿ ಶಿವಣ್ಣ ಅವರ ಅಭಿನಯಕ್ಕೆ ಅಭಿಮಾನಿಗಳು ಮೆಚ್ಚುಗೆಯನ್ನು ಸೂಚಿಸಿದ್ದಾರೆ. ಸುದೀಪ್ ಅವರು ದಿ ವಿಲನ್ ಅಲ್ಲಿ ವಿಭಿನ್ನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

    ಚಿತ್ರತಂಡ ಸಿನಿಮಾದ ಟೀಸರ್ ಅನ್ನು ಬಿಡುಗಡೆ ಮಾಡುವ ಮೂಲಕ ಅಭಿಮಾನಿಗಳಲ್ಲಿ ಕುತೂಹಲವನ್ನು ಮೂಡಿಸಿದೆ. ಅಕ್ಟೋಬರ್ 18 ರಂದು ದಿ ವಿಲನ್ ಸಿನಿಮಾ ತೆರೆ ಮೇಲೆ ಮಿಂಚಲು ಸಜ್ಜಾಗಿದೆ.

    ಶಿವಣ್ಣ ವಾರ್ನಿಂಗ್:
    ಸೋಮವಾರ ನಡೆದ ದಿ ವಿಲನ್ ಸಿನಿಮಾ ಸುದ್ದಿಗೋಷ್ಟಿಯಲ್ಲಿ ಅಭಿಮಾನಿಗಳಿಗೆ ಶಿವಣ್ಣ ಅವರು ವಾರ್ನಿಂಗ್ ಮಾಡಿದ್ದು, ಈ ತಿಂಗಳು 18 ಕ್ಕೆ ‘ದಿ ವಿಲನ್’ ಸಿನಿಮಾ ಬಿಡುಗಡೆಯಾಗುತ್ತಿರುವ ಹಿನ್ನೆಲೆ ಸಿನಿಮಾವನ್ನ ಸಿನಿಮಾ ಥರ ನೋಡಿ. ನಾವು ಇಂಡಸ್ಟ್ರಿಯಲ್ಲಿ ಎಲ್ಲರೂ ಒಂದೇ. ನಾನು ಸುದೀಪ್ ಇಬ್ಬರೂ ಒಟ್ಟಿಗೆ ಅಭಿನಯಿಸಿದ್ದೇವೆ. ನಾವು ಹೆಚ್ಚು ಅವರು ಕಮ್ಮಿ ಅಂತ ಜಗಳ ತೆಗೆಯಬೇಡಿ. ಅಭಿಮಾನಿಗಳಿಗೆ ಹೇಳುತ್ತಿದ್ದೇನೆ, ಯಾವುದೇ ಕಾರಣಕ್ಕೂ ಗಲಾಟೆಗೆ ಅವಕಾಶ ಕೊಡಬೇಡಿ. ನಾವು ಆ ಗಲಾಟೆ ಈ ಗಲಾಟೆ ಅಂತ ಸುದ್ದಿಗಳನ್ನು ಕೇಳಿ ಕೇಳಿ ರೋಸಿ ಹೋಗಿದ್ದೇವೆ. ಥಿಯೇಟರ್‌ಗೆ ಹೋಗಿ ನಿಮ್ಮ ಜೊತೆ ನಾನೇ ಬರುತ್ತೇನೆ ಸಿನಿಮಾವನ್ನ ಸಿನಿಮಾ ರೀತಿ ನೋಡಿ ಎಂದು ಖಡಕ್ ಸೂಚನೆ ನೀಡಿದರು.

    ಕರಿಯ, ಎಕ್ಸ್ ಕ್ಯೂಸ್ ಮಿ, ಜೋಗಿ ಸಿಸಿಮಾಗಳಂತಹ ಸೂಪರ್ ಡೂಪರ್ ಹಿಟ್ ಕೊಟ್ಟಂತ ನಿರ್ದೇಶಕ ಪ್ರೇಮ್, ಶಿವಣ್ಣ ಹಾಗೂ ಕಿಚ್ಚ ಸುದೀಪ್‍ರನ್ನು ಹಾಕಿಕೊಂಡು ದಿ ವಿಲನ್ ಸಿನಿಮಾವನ್ನು ಮಾಡಿದ್ದು, ಜನರಲ್ಲಿ ಕುತೂಹಲದ ಮಳೆಯನ್ನೇ ಸುರಿಸುತ್ತಿತ್ತು. ದಿ ವಿಲನ್ ಸಿನಿಮಾಕ್ಕೆ ಜೋಗಿ ಪ್ರೇಮ್ ಆಕ್ಷನ್ ಕಟ್ ಹೇಳಿದ್ದು, ಸಿ.ಆರ್ ಮನೋಹರ್ ನಿರ್ಮಾಣ ಮಾಡಿದ್ದಾರೆ. ಸುದೀಪ್, ಶಿವಣ್ಣ, ಆಮಿ ಜಾಕ್ಸನ್ ಜೊತೆಯಲ್ಲಿ ಮಿಥುನ್ ಚಕ್ರವರ್ತಿ, ಶ್ರೀಕಾಂತ್ ಸೇರಿದಂತೆ ಹಲವರು ಸಿನಿಮಾದಲ್ಲಿ ಅಭಿನಯಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

    https://www.youtube.com/watch?v=_OPq9iESM-4

  • ಗಣೇಶನ ಹಬ್ಬದಂದು ‘ದಿ ವಿಲನ್’ ಚಿತ್ರತಂಡದಿಂದ ಗುಡ್ ನ್ಯೂಸ್!

    ಗಣೇಶನ ಹಬ್ಬದಂದು ‘ದಿ ವಿಲನ್’ ಚಿತ್ರತಂಡದಿಂದ ಗುಡ್ ನ್ಯೂಸ್!

    ಬೆಂಗಳೂರು: ಗಣೇಶ ಹಬ್ಬದಂದು ‘ದಿ ವಿಲನ್’ ಚಿತ್ರತಂಡ ಸಿನಿಮಾದ ರಿಲೀಸ್ ಡೇಟ್ ಅನ್ನು ರಿವೀಲ್ ಮಾಡುವ ಮೂಲಕ ಅಭಿಮಾನಿಗಳಿಗೆ ಸಿಹಿ ಸುದ್ದಿಯನ್ನು ನೀಡಿದೆ.

    ಸ್ಯಾಂಡಲ್‍ವುಡ್ ನಿದೇಶಕರಾದ ಜೋಗಿ ಪ್ರೇಮ್ ಮನೆಯಲ್ಲಿ ಪರಿಸರ ಸ್ನೇಹಿ ಗಣೇಶನಿಗೆ ಪೂಜೆ ಪುನಸ್ಕಾರ ಬಲು ಜೋರಾಗಿ ನಡೆಯುತ್ತಿದ್ದು, ದಂಪತಿ ಪೂಜೆ ಪುನಸ್ಕಾರದಲ್ಲಿ ಭಾಗಿಯಾಗಿದ್ದರು. ಇದೇ ವೇಳೆ ವಿನಾಯಕನ ಸಮ್ಮುಖದಲ್ಲಿ `ದಿ ವಿಲನ್’ ಸಿನಿಮಾ ರಿಲೀಸ್ ಡೇಟ್ ಚಿತ್ರತಂಡ ಅನೌನ್ಸ್ ಮಾಡಿದೆ.

    ಅಕ್ಟೋಬರ್ 18 ರಂದು ರಾಜ್ಯಾದ್ಯಂತ ದಿ ವಿಲನ್ ಬಿಡುಗಡೆಯಾಗುತ್ತಿದ್ದು, ಸುಮಾರು 500 ಚಿತ್ರಮಂದಿರಗಳಲ್ಲಿ ದಿ ವಿಲನ್ ತನ್ನ ಆರ್ಭಟ ಶುರುಮಾಡಲಿದೆ. ಅಷ್ಟೇ ಅಲ್ಲದೇ ಕನ್ನಡ, ತೆಲುಗು, ತಮಿಳು, ಭಾಷೆಯಲ್ಲಿ ಏಕಕಾಲಕ್ಕೆ ರಿಲೀಸ್ ಆಗಲಿದೆ ಎಂದು ಹೇಳಿದ್ದಾರೆ.

    ದಿನೇ ದಿನೇ ಒಂದಿಲ್ಲೊಂದು ಸ್ಪೆಷಲ್ ಸಮಾಚಾರ `ದಿ-ವಿಲನ್’ ತಂಡದಿಂದ ಹೊರಬರುತ್ತಿದೆ. ಇದೀಗ ಅಭಿಮಾನಿಗಳಲ್ಲಿ ನಿರೀಕ್ಷೆ ಮೂಡಿಸಿತ್ತಿದ್ದ ದಿ ವಿಲನ್ ಆಗಸ್ಟ್ 24 ರಂದು ಬಿಡುಗಡೆ ಮಾಡಬೇಕು ಅಂತ ಪ್ಲ್ಯಾನ್ ಮಾಡಿದ್ದರು. ಆದರೆ ಸೆನ್ಸಾರ್ ಕಾರಣದಿಂದಾಗಿ ಬರುವ ವಾರವೇ ಚಿತ್ರ ಬಿಡುಗಡೆ ದಿನವನ್ನು ಘೋಷಿಸುವುದಾಗಿ ಹೇಳಿದ್ದರು. ಹೀಗಾಗಿ ಗಣೇಶ ಹಬ್ಬದಂದೇ ಚಿತ್ರತಂಡ ಸಿನಿಮಾ ರಿಲೀಸ್ ಡೇಟ್ ಅನ್ನು ತಿಳಿಸಿದೆ.

    ಕರಿಯ, ಎಕ್ಸ್‍ಕ್ಯೂಸ್ ಮಿ, ಜೋಗಿ ಸಿಸಿಮಾಗಳಂತಹ ಸೂಪರ್ ಡೂಪರ್ ಹಿಟ್ ಕೊಟ್ಟಂತ ನಿರ್ದೇಶಕ ಪ್ರೇಮ್, ಶಿವಣ್ಣ ಹಾಗೂ ಕಿಚ್ಚ ಸುದೀಪ್‍ರನ್ನು ಹಾಕಿಕೊಂಡು ದಿ ವಿಲನ್ ಸಿನಿಮಾವನ್ನು ಮಾಡಿದ್ದು, ಜನರಲ್ಲಿ ಕೂತುಹಲದ ಮಳೆಯನ್ನೇ ಸುರಿಸುತ್ತಿದೆ.

    ದಿ ವಿಲನ್ ಸಿನಿಮಾಕ್ಕೆ ಜೋಗಿ ಪ್ರೇಮ್ ಆಕ್ಷನ್ ಕಟ್ ಹೇಳಿದ್ದು, ಸಿ.ಆರ್ ಮನೋಹರ್ ನಿರ್ಮಾಣ ಮಾಡಿದ್ದಾರೆ. ಸುದೀಪ್, ಶಿವಣ್ಣ, ಆಮಿ ಜಾಕ್ಸನ್ ಜೊತೆಯಲ್ಲಿ ಮಿಥುನ್ ಚಕ್ರವರ್ತಿ, ಶ್ರೀಕಾಂತ್ ಸೇರಿದಂತೆ ಹಲವರು ಸಿನಿಮಾದಲ್ಲಿ ಅಭಿನಯಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • `ದಿ ವಿಲನ್’ ಸಿನಿಮಾಗೆ ಸೆನ್ಸಾರ್ ಸಂಕಷ್ಟ!

    `ದಿ ವಿಲನ್’ ಸಿನಿಮಾಗೆ ಸೆನ್ಸಾರ್ ಸಂಕಷ್ಟ!

    ಬೆಂಗಳೂರು: ಸ್ಯಾಂಡಲ್‍ವುಡ್ ನ ಬಹುನಿರೀಕ್ಷಿತ ಮಲ್ಟಿಸ್ಟಾರ್ ಅಭಿನಯದ `ದಿ ವಿಲನ್’ ಸಿನಿಮಾಗೆ ಸೆನ್ಸಾರ್ ಮಂಡಳಿಯಿಂದ ಸಂಕಷ್ಟ ಎದುರಾಗಿದೆ.

    `ದಿ ವಿಲನ್’ ಸಿನಿಮಾದಲ್ಲಿ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಮತ್ತು ಅಭಿನವ ಚಕ್ರವರ್ತಿ ಸುದೀಪ್ ಒಟ್ಟಿಗೆ ಅಭಿನಯಿಸಿದ್ದಾರೆ. ಸದ್ಯಕ್ಕೆ ಈ ಸಿನಿಮಾ ಸೆನ್ಸಾರ್ ಅಂಗಳದಲ್ಲಿದೆ. ಸೆನ್ಸಾರ್ ಮಂಡಳಿ `ದಿ ವಿಲನ್’ ಸಿನಿಮಾ ವೀಕ್ಷಿಸಿದ ಬಳಿಕ `ಎ’ ಸರ್ಟಿಫಿಕೇಟ್ ಕೊಡಲು ಮುಂದಾಗಿದೆ. ಆದರೆ `ಎ’ ಸರ್ಟಿಫಿಕೇಟ್ ಬಗ್ಗೆ ನಿರ್ದೇಶಕ ಪ್ರೇಮ್ ಬೇಸರ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

    ಮಲ್ಟಿಪ್ಲೆಕ್ಸ್ ನಲ್ಲಿ `ಎ’ ಸರ್ಟಿಫಿಕೇಟ್ ನೀಡುವುದರಿಂದ ಹೆಚ್ಚಿನ ಎಫೆಕ್ಟ್ ಆಗುತ್ತದೆ ಎಂದು ಚಿತ್ರತಂಡದ ಜೊತೆ ಚರ್ಚೆ ನಡೆಸಿದ್ದಾರೆ. ಬಳಿಕ ಸೆನ್ಸಾರ್ ಮಂಡಳಿ `ಯು’ ಸರ್ಟಿಫಿಕೇಟ್ ನೀಡಲು ಮುಂದಾಗಿದ್ದು, `ಯು’ ಸರ್ಟಿಫಿಕೇಟ್ ಬೇಕಾದರೆ ಸಿನಿಮಾದಲ್ಲಿಯ 10 ನಿಮಿಷದ ದೃಶ್ಯವನ್ನು ಕತ್ತರಿಸುವುದಕ್ಕೆ ಸೂಚನೆ ನೀಡಿದೆ ಎಂದು ತಿಳಿದು ಬಂದಿದೆ.

    ಇತ್ತೀಚೆಗಷ್ಟೇ `ದಿ ವಿಲನ್’ ಚಿತ್ರತಂಡ ಅದ್ಧೂರಿಯಾಗಿ ಕಾರ್ಯವನ್ನು ಆಯೋಜನೆ ಮಾಡಿ ಅಲ್ಲಿ ಆಡಿಯೋ ಲಾಂಚ್ ಮಾಡಿತ್ತು. ಈ ಹಿಂದೆಯೂ ಕೂಡ `ದಿ ವಿಲನ್’ ಸಿನಿಮಾದ ಟೀಸರ್ ಬಿಡುಗಡೆಗೊಂಡಾಗ ವಿವಾದವೂ ಹುಟ್ಟಿಕೊಂಡಿತ್ತು. ಅನೇಕ ಕಾರಣಗಳನ್ನ ಮುಂದಿಟ್ಟು ಶಿವಣ್ಣ ಅವರಿಗೆ ಈ ಚಿತ್ರದಲ್ಲಿ ಅವಮಾನ ಮಾಡಲಾಗಿದೆ ಎಂದು ಶಿವರಾಜ್‍ಕುಮಾರ್ ಅಭಿಮಾನಿಗಳು `ದಿ ವಿಲನ್’ ಸಿನಿಮಾ ಬಹಿಷ್ಕಾರ ಹಾಕುತ್ತೇವೆ ಎಂದು ಹಠ ಹಿಡಿದು, ಅನೇಕ ಷರತ್ತುಗಳನ್ನ ಮುಂದಿಟ್ಟಿದ್ದರು.

    ಈ ಬಗ್ಗೆ ನಿರ್ದೇಶಕ ಪ್ರೇಮ್ ಪ್ರತಿಕ್ರಿಯಿಸಿ ಅಭಿಮಾನಿಗಳ ಪ್ರಶ್ನೆಗೆ ಉತ್ತರಿಸಿದ್ದರು. “ಕಳೆದ ಕೆಲ ದಿನಗಳಿಂದ ಕೆಲ ಮಾಧ್ಯಮಗಳಲ್ಲಿ ಶಿವಣ್ಣ ಅವರ ವಿಚಾರವಾಗಿ ಪ್ರೇಮ್ ಅವರಿಗೆ ಅಸಮಾಧಾನವಿದೆ ಎಂದು ವರದಿಯಾಗಿತ್ತು. ಆದರೆ ಈ ಕುರಿತು ನಿರ್ಧಾರ ಮಾಡಬೇಕಾಗಿದ್ದು ಶಿವಣ್ಣ ಅವರು, ಒಂದೊಮ್ಮೆ ಶಿವಣ್ಣ ಅವರು ಪ್ರಶ್ನೆ ಮಾಡಿದರೆ ಅದಕ್ಕೆ ಉತ್ತರಿಸುತ್ತೇನೆ. ಸಿನಿಮಾ ಬಿಡುಗಡೆಗೂ ಮೊದಲೇ ಅಸಮಾಧಾನ ವ್ಯಕ್ತಪಡಿಸಿದರೆ ನಾನು ಏನು ಮಾಡಲು ಸಾಧ್ಯ. ಆದ್ದರಿಂದ ಸಿನಿಮಾ ಬಂದರೆ ನಿಮಗೆ ಈ ಕುರಿತು ಸಂಪೂರ್ಣ ಮಾಹಿತಿ ಲಭಿಸಲಿದೆ. ತಾಳ್ಮೆವಹಿಸಿ, ಅತೀ ಶೀಘ್ರದಲ್ಲಿ ನಿಮ್ಮ ಮುಂದೇ ಸಿನಿಮಾ ತರುತ್ತೇನೆ ಎಂದು ಹೇಳಿದ್ದರು.

    ಸ್ಯಾಂಡಲ್‍ವುಡ್‍ನ ಬಹು ನಿರೀಕ್ಷಿತ `ದಿ ವಿಲನ್’ ಸಿನಿಮಾವು ಪ್ರೇಮ್ ನಿರ್ದೇಶನದಲ್ಲಿ ಮೂಡಿಬರುತ್ತಿದ್ದು, ಇದೊಂದು ಮಲ್ಟಿ ಸ್ಟಾರ್ ಗಳ ಚಿತ್ರವಾಗಿದೆ. ಇದರಲ್ಲಿ ವಿಶೇಷತೆ ಎಂದರೆ ಕಿಚ್ಚ ಮತ್ತು ಶಿವಣ್ಣ ಒಟ್ಟಾಗಿ ಆಭಿನಯಿಸುತ್ತಿರುವುದು. ಈ ಸಿನಿಮಾದಲ್ಲಿ ಬಹುಭಾಷಾ ನಟಿ ಆಮಿ ಜಾಕ್ಸನ್ ನಾಯಕಿಯಾಗಿ ಕಾಣಿಸಿಕೊಳ್ಳಲಿದ್ದಾರೆ. ಅರ್ಜುನ್ ಜನ್ಯ ಅವರ ಸಂಗೀತದಲ್ಲಿ ಈ ಚಿತ್ರ ಮೂಡಿಬರುತ್ತಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ‘ದಿ ವಿಲನ್’ ಟೈಟಲ್ ಟ್ರ್ಯಾಕ್ ಲಿರಿಕಲ್ ವಿಡಿಯೋ ರಿಲೀಸ್

    ‘ದಿ ವಿಲನ್’ ಟೈಟಲ್ ಟ್ರ್ಯಾಕ್ ಲಿರಿಕಲ್ ವಿಡಿಯೋ ರಿಲೀಸ್

    -ಪ್ರೇಮ್ ಪಂಚಿಂಗ್ ಲಿರಿಕ್ಸ್, ಶಂಕರ್ ಮಹಾದೇವನ್ ಸೂಪರ್ ವಾಯ್ಸ್

    ಬೆಂಗಳೂರು: ಸ್ಯಾಂಡಲ್‍ವುಡ್‍ನ ಬಹುನಿರೀಕ್ಷೆಯ ಸಿನಿಮಾ `ದಿ ವಿಲನ್’. ಸೆಟ್ಟೇರಿದಾಗಿನಿಂದಲೂ ಒಂದಲ್ಲ ಒಂದು ಕಾರಣಕ್ಕೆ ಸಖತ್ ಸೌಂಡ್ ಮಾಡುತ್ತಿರುವ ಈ ಚಿತ್ರ ಟೀಸರ್‍ನಿಂದ ಸೃಷ್ಟಿಸಿರುವ ಹವಾ ಅಷ್ಟಿಷ್ಟಲ್ಲ. ಸದ್ಯ ಈ ಚಿತ್ರದ ಟೈಟಲ್ ಟ್ರ್ಯಾಕ್ ರಿಲೀಸ್ ಆಗಿದೆ.

    ‘ಮಚ್ಚು ಗಿಚ್ಚು ಹಿಡಿದವನಲ್ಲ, ಆದ್ರೂ ಹವಾ ಇಟ್ಟವನಲ್ಲ, ಕೋಟೆ ಕಟ್ಟಿ ಮೆರೆದವನಲ್ಲ ಆದ್ರೂ ರಾಜ್ಯ ಆಳುತ್ತವನಲ್ಲ’ ಎಂದು ಸಾಗುವ ಈ ಹಾಡು ಜೋಗಿ ಪ್ರೇಮ್ ಲೇಖನದಲ್ಲಿ ಮೂಡಿ ಬಂದಿದೆ. ಶಂಕರ್ ಮಹಾದೇವನ್ ಕಂಠಸಿರಿಯಲ್ಲಿ ಮೂಡಿಬಂದಿರುವ ವಿಲನ್ ಟೈಟಲ್ ಟ್ರ್ಯಾಕ್ ಕೇಳುಗರಿಗೆ ಸಖತ್ ಕಿಕ್ ಕೊಡುತ್ತಿದೆ.

    ರಿಲೀಸ್ ಆದ ಒಂದು ಗಂಟೆಯಲ್ಲಿ 1 ಲಕ್ಷಕ್ಕೂ ಅಧಿಕ ವ್ಯೂ ಪಡೆದುಕೊಂಡಿದೆ. ಈ ಹಾಡಿನಲ್ಲಿ ಶಿವಣ್ಣ ಹಾಗೂ ಸುದೀಪ್ ಇಬ್ಬರು ಇರ್ತಾರಾ ಇಲ್ಲವೋ ಅನ್ನೋದನ್ನ ಪ್ರೇಮ್ ಸಸ್ಪೆನ್ಸ್ ಆಗಿಟ್ಟಿದ್ದಾರೆ. ಆದರೆ ರಿಲೀಸ್ ಆಗಿರುವ ಲಿರಿಕಲ್ ವಿಡಿಯೋದಲ್ಲಿ ಶಿವಣ್ಣ ಹಾಗೂ ಸುದೀಪ್ ಇಬ್ಬರು ಇರುವ ಮೇಕಿಂಗ್‍ನ ಬಳಸಿಕೊಂಡಿದ್ದಾರೆ.

  • ಮತ್ತೊಂದು ವಿವಾದದಲ್ಲಿ `ದಿ ವಿಲನ್’ – ಸಿನಿಮಾ ನೋಡಿ ಆಮೇಲೆ ಮಾತ್ನಾಡಿ ಅಂದ್ರು ನಿರ್ದೇಶಕ ಪ್ರೇಮ್

    ಮತ್ತೊಂದು ವಿವಾದದಲ್ಲಿ `ದಿ ವಿಲನ್’ – ಸಿನಿಮಾ ನೋಡಿ ಆಮೇಲೆ ಮಾತ್ನಾಡಿ ಅಂದ್ರು ನಿರ್ದೇಶಕ ಪ್ರೇಮ್

    ಬೆಂಗಳೂರು: “ಸಿನಿಮಾ ನೋಡಿ ಆಮೇಲೆ ಮಾತನಾಡಿ, ಇಲ್ಲವೇ ಶಿವಣ್ಣಾವ್ರೇ ನನಗೆ ಇದು ತಪ್ಪು ಅನ್ನೋದನ್ನು ಹೇಳಲಿ, ಆಗ ನೀವೆಲ್ಲಾ ಹೇಳಿದಂತೆ ಕೇಳ್ತೀನಿ “ಎಂದು ನಿರ್ದೇಶಕ ಪ್ರೇಮ್ ಹೇಳಿದ್ದಾರೆ.

    ವಾರದ ಹಿಂದೆ ರಿಲೀಸ್ ಆಗಿದ್ದ `ದಿ ವಿಲನ್’ ಸಿನಿಮಾದ ಟೀಸರ್ ಜೊತೆ ವಿವಾದವೂ ಹುಟ್ಟಿಕೊಂಡಿತ್ತು. ಅನೇಕ ಕಾರಣಗಳನ್ನ ಮುಂದಿಟ್ಟು ಶಿವಣ್ಣ ಅವರಿಗೆ ಈ ಚಿತ್ರದಲ್ಲಿ ಅವಮಾನ ಮಾಡಲಾಗಿದೆ ಎಂದು ಹ್ಯಾಟ್ರಿಕ್ ಹೀರೋ ಶಿವರಾಜ್‍ಕುಮಾರ್ ಅಭಿಮಾನಿಗಳು `ದಿ ವಿಲನ್’ ಸಿನಿಮಾ ಬಹಿಷ್ಕಾರ ಹಾಕುತ್ತೇವೆ ಎಂದು ಹಠ ಹಿಡಿದು, ಅನೇಕ ಷರತ್ತುಗಳನ್ನ ಮುಂದಿಟ್ಟಿದ್ದರು.

    ಸದ್ಯ ವಿಷ್ಯವಾಗಿ ಇದೀಗ `ದಿ ವಿಲನ್’ ಚಿತ್ರ ನಿರ್ದೇಶಕ ಪ್ರೇಮ್ ಪ್ರತಿಕ್ರಿಯಿಸಿ ಅಭಿಮಾನಿಗಳ ಪ್ರಶ್ನೆಗೆ ಉತ್ತರಿಸಿದ್ದಾರೆ. ಕಳೆದ ಕೆಲ ದಿನಗಳಿಂದ ಕೆಲ ಮಾಧ್ಯಮಗಳಲ್ಲಿ ಶಿವಣ್ಣ ಅವರ ವಿಚಾರವಾಗಿ ಪ್ರೇಮ್ ಅವರಿಗೆ ಅಸಮಾಧಾನವಿದೆ ಎಂದು ವರದಿಯಾಗಿತ್ತು. ಆದರೆ ಈ ಕುರಿತು ನಿರ್ಧಾರ ಮಾಡಬೇಕಾಗಿದ್ದು ಶಿವಣ್ಣ ಅವರು, ಒಂದೊಮ್ಮೆ ಶಿವಣ್ಣ ಅವರು ಪ್ರಶ್ನೆ ಮಾಡಿದರೆ ಅದಕ್ಕೆ ಉತ್ತರಿಸುತ್ತೇನೆ. ಸಿನಿಮಾ ಬಿಡುಗಡೆಗೂ ಮೊದಲೇ ಅಸಮಾಧಾನ ವ್ಯಕ್ತಪಡಿಸಿದರೆ ನಾನು ಏನು ಮಾಡಲು ಸಾಧ್ಯ. ಅದ್ದರಿಂದ ಸಿನಿಮಾ ಬಂದರೆ ನಿಮಗೆ ಈ ಕುರಿತು ಸಂಪೂರ್ಣ ಮಾಹಿತಿ ಲಭಿಸಲಿದೆ. ಅದ್ದರಿಂದ ತಾಳ್ಮೆವಹಿಸಿ, ಆತೀ ಶೀಘ್ರದಲ್ಲಿ ನಿಮ್ಮ ಮುಂದೇ ಸಿನಿಮಾ ತರುತ್ತೇನೆ ಎಂದು ಹೇಳಿದ್ದಾರೆ.

    ಈ ಹಿಂದೆಯೂ ದಿ ವಿಲನ್ ಸಿನಿಮಾ ವಿವಾದಕ್ಕೆ ಕಾರಣವಾಗಿತ್ತು. `ನಿನ್ನೆ ಮೊನ್ನೆ ಬಂದೋರೆಲ್ಲ ನಾನೇ ನಂಬರ್ ಒನ್ ಅಂತಾರೋ’ ಎಂದು ಸಾಹಿತ್ಯವಿರುವ ಹಾಡಿಗೆ ಶಿವಣ್ಣ ಸಖತ್ ಡಾನ್ಸ್ ಮಾಡಿದ್ದರು. 

  • ವಿಲನ್ ಟೀಸರ್ ಸೂಪರ್ ಹಿಟ್- ಅರ್ಧಗಂಟೆಯಲ್ಲಿ ಲಕ್ಷ ವ್ಯೂ

    ವಿಲನ್ ಟೀಸರ್ ಸೂಪರ್ ಹಿಟ್- ಅರ್ಧಗಂಟೆಯಲ್ಲಿ ಲಕ್ಷ ವ್ಯೂ

    ಬೆಂಗಳೂರು: ಬಹುನಿರೀಕ್ಷಿತ `ದಿ ವಿಲನ್’ ಚಿತ್ರದ 2 ಟೀಸರ್ ರಿಲೀಸ್ ಆಗಿದೆ. ಮುಖ್ಯಮಂತ್ರಿ ಕುಮಾರಸ್ವಾಮಿಯವರು ‘ದಿ ವಿಲನ್’ ಟೀಸರ್ ಬಿಡುಗಡೆ ಮಾಡಿದ್ದಾರೆ. ಹ್ಯಾಟ್ರಿಕ್ ಹೀರೋ ಶಿವಣ್ಣ ಪಾತ್ರ ಪರಿಚಯದ ಒಂದು ಟೀಸರ್ ಹಾಗೂ ಸುದೀಪ್ ಪಾತ್ರ ಪರಿಚಯದ ಇನ್ನೊಂದು ಟೀಸರ್ ರಿಲೀಸ್ ಆಗಿದೆ.

    ಅನೆಬಂತೊಂದಾನೆ ಅನ್ನುವ ಧ್ವನಿಯಲ್ಲಿ ಕಿಚ್ಚ ಡೈಲಾಗ್ ಅಬ್ಬರಿಸಿ ಬೊಬ್ಬಿರೆದ್ರೆ, ಶಿವರಾಜ್‍ಕುಮಾರ್ ನಾನ್ ಸೈಲೆಂಟಾಗಿದ್ರೆ ರಾಮಾ, ವೈಲೆಂಟಾದ್ರೆ ರಾವಣ ಎಂಬುದಾಗಿ ಡೈಲಾಗ್ ಹೊಡೆದಿದ್ದಾರೆ. ಇಬ್ಬರ ಪಾತ್ರದಲ್ಲೂ ಸಖತ್ ಕ್ಯೂರಿಯಾಸಿಟಿ ಸೃಷ್ಟಿಸಿದ್ದಾರೆ ನಿರ್ದೇಶಕ ಪ್ರೇಮ್.

    ವಿಲನ್ ಟೀಸರ್ ಅರ್ಧಗಂಟೆಯಲ್ಲೇ ಲಕ್ಷ ವೀವರ್ಸ್ ದಾಟಿದೆ. ಗಂಟೆ ಗಂಟೆಗೂ ವೀವ್ಸ್ ದ್ವಿಗುಣಗೊಳ್ಳುತ್ತಲೇ ಇದೆ. ಅಂದಹಾಗೆ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿಯವರು ನಗರದ ಜಿ ಟಿ ಮಾಲ್‍ನಲ್ಲಿ `ದಿ ವಿಲನ್’ ಚಿತ್ರದ ಎರಡೂ ಟೀಸರ್ ಅಧಿಕೃತವಾಗಿ ರಿಲೀಸ್ ಮಾಡಿದ್ದಾರೆ.

    ಶೂಟಿಂಗ್ ನಿಮಿತ್ತ ಸರ್ಬಿಯ ದೇಶಕ್ಕೆ ತೆರಳಿರುವ ನಟ ಸುದೀಪ್ ಟ್ವಿಟ್ಟರ್ ಲೈವ್ ಮುಖೇನ ತಂಡಕ್ಕೆ ಶುಭ ಕೋರಿದರು. ಇನ್ನು `ದಿ ವಿಲನ್’ ಚಿತ್ರಕ್ಕೆ ಟೈಮೆಕ್ಸ್ ವಾಚ್ ಕಂಪೆನಿ ಪ್ರಾಯೋಜಕತ್ವ ನೀಡಿದೆ. ದಕ್ಷಿಣ ಭಾರತದಲ್ಲೇ ಕನ್ನಡ ಚಿತ್ರಕ್ಕೆ ಮೊದಲ ಬಾರಿಗ ಪ್ರಾಯೋಜಕತ್ವ ನೀಡಿದೆ. ಕಾರ್ಯಕ್ರಮದಲ್ಲಿ ಸಿಎಂ ಕುಮಾರಸ್ವಾಮಿ, ಶಿವರಾಜ್ ಕುಮಾರ್, ನಿರ್ದೇಶಕ ಪ್ರೇಮ್ ಅವರಿಗೆ ಟೈಮೆಕ್ಸ್ ಕಂಪೆನಿ ಮಾಲೀಕರು ವಾಚ್ ಕಟ್ಟಿದರು. ಅಲ್ಲದೇ `ದಿ ವಿಲನ್’ ಡೈರಿ ಡೇ ಐಸ್ ಕ್ರೀಂ ಬಿಡುಗಡೆ ಮಾಡಿದರು.

    ಧನ ಸಹಾಯ: ಒಂದು ಟಿಕೆಟ್‍ಗೆ 500 ರೂ. ಪಡೆದು ಟೀಸರ್ ತೋರಿಸಿರುವ ಪ್ರೇಮ್, ಟಿಕೆಟ್‍ನಿಂದ ಬಂದಂತಹ ಹಣವನ್ನು ಆರ್ಥಿಕ ಸಂಕಷ್ಟದಲ್ಲಿ ಬಳಲುತ್ತಿರುವ ಕನ್ನಡದ ನಿರ್ದೇಶಕರಿಗೆ ವಿತರಿಸಿದ್ದಾರೆ. ಚಿತ್ರಕ್ಕೆ ಜೋಗಿ ಪ್ರೇಮ್ ನಿರ್ದೇಶನವಿದ್ದು, ಕಿಚ್ಚ ಸುದೀಪ್, ಹ್ಯಾಟ್ರಿಕ್ ಹೀರೋ ಶಿವರಾಜ್‍ಕುಮಾರ್, ಏಮಿಜಾಕ್ಸನ್, ಮಿಥುನ್ ಚಕ್ರವರ್ತಿ ಸೇರಿದಂತೆ ಅತೀ ದೊಡ್ಡತಾರಾಗಣ ಈ ಸಿನಿಮಾದಲ್ಲಿದೆ. ಕಾರ್ಯಕ್ರಮದಲ್ಲಿ ಸಂಗ್ರಹವಾದ ಹಣವನ್ನು ಸಿಎಂ ಕುಮಾರಸ್ವಾಮಿ ಅವರಿಂದ ನಿರ್ದೇಶಕರಾದ ಬೂದಾಳ್ ಕೃಷ್ಣಮೂರ್ತಿ, ಹಿರೇಮಠ್, ಆನಂದ್ ಪಿ ರಾಜು, ಎ.ಟಿ.ರಘು ಅವರಿಗೆ ಸಹಾಯಧನ ವಿತರಣೆ ಮಾಡಿದರು.