Tag: theatre

  • ಕಾಲೇಜಿನತ್ತ ಕಲಬುರಗಿ ರಂಗಾಯಣ – ಜ.10 ರಿಂದ ಮೂರು ದಿನ ಸಿಂಧನೂರಿನಲ್ಲಿ ಕಾಲೇಜು ʻರಂಗೋತ್ಸವʼ

    ಕಾಲೇಜಿನತ್ತ ಕಲಬುರಗಿ ರಂಗಾಯಣ – ಜ.10 ರಿಂದ ಮೂರು ದಿನ ಸಿಂಧನೂರಿನಲ್ಲಿ ಕಾಲೇಜು ʻರಂಗೋತ್ಸವʼ

    ಕಲಬುರಗಿ: ಕಾಲೇಜು ವಿದ್ಯಾರ್ಥಿಗಳಲ್ಲಿ ರಂಗಭೂಮಿ (Rangabhoomi) ಕುರಿತು ಆಸಕ್ತಿ ಮೂಡಿಸುವುದರ ಜೊತೆಗೆ ವಿದ್ಯಾರ್ಥಿಗಳ ಮನೋವಿಕಾಸ ಮತ್ತು ಶೈಕ್ಷಣಿಕ ಕಲಿಕಾ ಸಾಮರ್ಥ್ಯ ಹೆಚ್ಚಿಸುವ ಉದ್ದೇಶದಿಂದ ಇದೇ ಜನವರಿ 10 ರಿಂದ 12ರ ವರೆಗೆ ಮೂರು ದಿನಗಳ ಕಾಲ ʻಕಾಲೇಜು ರಂಗೋತ್ಸವʼ (College Theatre Festival) ಕಾರ್ಯಕ್ರಮ ಆಯೋಜಿಸಿದೆ ಎಂದು ಕಲಬುರಗಿ ರಂಗಾಯಣದ ನಿರ್ದೇಶಕಿ ಡಾ.ಸುಜಾತಾ ಜಂಗಮಶೆಟ್ಟಿ ತಿಳಿಸಿದ್ದಾರೆ.

    ರಾಯಚೂರು (Raichur) ಜಿಲ್ಲೆಯ ಸಿಂಧನೂರಿನ ಟೌನ್ ಹಾಲ್ ರಂಗಮಂದಿರದಲ್ಲಿ ಕಾರ್ಯಕ್ರಮ ನಡೆಯಲಿದೆ. ಟಿ.ವಿ, ಸಿನಿಮಾ, ಕಂಪ್ಯೂಟರ್, ಸಾಮಾಜಿಕ ಜಾಲತಾಣಗಳ ಪ್ರಭಾವದಲ್ಲಿ ರಂಗಭೂಮಿ ಮರೆಯಾಗಿ ಹೋಯಿತು ಎನ್ನುವದರ ನಡುವೆ ಕಾಲೇಜು ಮಟ್ಟದಲ್ಲಿ ರಂಗಭೂಮಿಯತ್ತ ವಿದ್ಯಾರ್ಥಿಗಳು ವಾಲುತ್ತಿರುವುದು ಉತ್ತಮ ಬೆಳವಣಿಗೆಯಾಗಿದೆ. ಇಂತಹ ಯುವ ಪೀಳಿಗೆಯನ್ನು ಮತ್ತಷ್ಟು ರಂಗಭೂಮಿಯತ್ತ ಸೆಳೆಯುವ ಉದ್ದೇಶದಿಂದ ಕಾಲೇಜು ರಂಗೋತ್ಸವ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

    ಕಲಬುರಗಿಯೊಂದೇ ಕೇಂದ್ರವಾಗಿ ಕಾರ್ಯಕ್ರಮ ರೂಪಿತವಾಗಬಾರದೆಂಬ ಉದ್ದೇಶದಿಂದ ಪ್ರದೇಶದ 7 ಜಿಲ್ಲೆಗಳಲ್ಲಿ ತಲಾ ಒಂದು ಕಾಲೇಜು ಆಯ್ಕೆ ಮಾಡಿಕೊಳ್ಳಲಾಗಿದೆ. ಸುಮಾರು 20 ದಿನಗಳ ಕಾಲ ನಾಟಕ ನಿರ್ದೇಶಕರಿಂದ ತರಬೇತಿ ಪಡೆದ ವಿದ್ಯಾರ್ಥಿಗಳು ಇಲ್ಲಿ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಲಿದ್ದಾರೆ ಎಂದಿದ್ದಾರೆ.

    3 ದಿನಗಳ 7 ನಾಟಕ ಪ್ರದರ್ಶನ:
    ಸಿಂಧನೂರಿನಲ್ಲಿ ಆಕ್ಸ್‌ಫರ್ಡ್‌ ಸಮೂಹ ಸಂಸ್ಥೆಗಳ ಸಹಯೋಗದೊಂದಿಗೆ ಆಯೋಜಿಸಿರುವ ಮೂರು ದಿನಗಳ ಕಾಲೇಜು ರಂಗೋತ್ಸವಕ್ಕೆ ಜನವರಿ 10ರಂದು ಬೆಳಗ್ಗೆ 11 ಗಂಟೆಗೆ ಚಾಲನೆ ನೀಡಲಾಗುತ್ತದೆ. ಶ್ರೀ ಸಿದ್ದರಾಮೇಶ್ವರ ಶರಣರ ಸಾನಿಧ್ಯದಲ್ಲಿ ನಡೆಯುವ ಈ ಕಾರ್ಯಕ್ರಮವನ್ನು ಸಿಂಧನೂರು ಶಾಸಕ ಹಂಪನಗೌಡ ಬಾದರ್ಲಿ ಉದ್ಘಾಟಿಸಲಿದ್ದು, ಅಧಿಕಾರಿಗಳು, ಕಲಾವಿದರು ಹಾಗೂ ಚುನಾಯಿತ ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ.

    ಜನವರಿ 10 ರಂದು ಮಧ್ಯಾಹ್ನ 12.30 ಗಂಟೆಗೆ ಶ್ರೀನಿವಾಸ ದೋರನಹಳ್ಳಿ ಅವರ ರಚನೆ ಮತು ನಿರ್ದೇಶನದ “ಶಪಥದ ಮಹಾಭಾರತ” ನಾಟಕವು ಯಾದಗಿರಿ ಜಿಲ್ಲೆಯ ಭೀಮರಾಯನಗುಡಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಮತ್ತು ಮಧ್ಯಾಹ್ನ 2.30 ಗಂಟೆಗೆ ಮೈಸೂರಿನ ಎಸ್.ರಾಮನಾಥ ಅವರ ರಚನೆ ಮತು ಮಹೇಶ ಭೋವಿ ಅವರ ನಿರ್ದೇಶನದ “ಅಶ್ವ ಪರ್ವ” ನಾಟಕವನ್ನು ಸ್ಥಳೀಯ ಸಿಂಧನೂರಿನ ಆಕ್ಸ್‌ಫರ್ಡ್‌ ಸಮೂಹ ಸಂಸ್ಥೆಗಳ ಪಿಯು ಕಾಲೇಜಿನ ವಿದ್ಯಾರ್ಥಿಗಳು ಪ್ರದರ್ಶನ ಮಾಡಲಿದ್ದಾರೆ.

    ಜನವರಿ 11 ರಂದು ಬೆಳಿಗ್ಗೆ 11 ಗಂಟೆಗೆ ದಲಿತ ಕವಿ ಡಾ.ಸಿದ್ದಲಿಂಗಯ್ಯ ಅವರ ರಚನೆಯ ʻಒಂದಾನೊಂದು ಊರು (ನನ್ನ ಕತ್ತೆ ನಿಮ್ಮ ಧರ್ಮ)ʼ ಎಂಬ ನಾಟಕವನ್ನು ಮಹೇಶ ವಿ. ಪಾಟೀಲ ಅವರ ನಿರ್ದೇಶನದಲ್ಲಿ ಬೀದರ ಜಿಲ್ಲೆಯ ಫೋಡಂಪಳ್ಳಿಯ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ ಮತ್ತು ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಪ್ರಸ್ತುತಪಡಿಸಲಿದ್ದಾರೆ. ಮಧ್ಯಾಹ್ನ 12.30 ಗಂಟೆಗೆ ಶಾಂತಲಿಂಗಯ್ಯ ಎಸ್.ಮಠಪತಿ ಅವರ ರಚನೆಯ ʻಕರ್ಮʼ ಎಂಬ ನಾಟಕವನ್ನು ಗಂಗೋತ್ರಿ ಎಸ್.ಮಠಪತಿ ನಿರ್ದೇಶನದಲ್ಲಿ ಕಲಬುರಗಿಯ ಎಂ.ಎ ಟೆಂಗಳೀಕರ್ ಕಾಲೇಜಿನ ವಿದ್ಯಾರ್ಥಿಗಳು ಪ್ರದರ್ಶಿಸಲಿದ್ದಾರೆ. ಮಧ್ಯಾಹ್ನ 2.30 ಗಂಟೆಗೆ ಡಾ.ಚನ್ನಣ್ಣ ವಾಲೀಕರ ರಚನೆಯ “ಬಾಲಿ” ನಾಟಕವನ್ನು ರೇಣುಶ್ರೀ ಅವರ ನಿರ್ದೇಶನದಲ್ಲಿ ಕೊಪ್ಪಳ ಜಿಲ್ಲೆಯ ಕಿನ್ನಾಳ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಪ್ರಸ್ತುತಪಡಿಸಲಿದ್ದಾರೆ.

    ಕೊನೆಯ ದಿನವಾದ ಜ.12 ರಂದು ಬೆಳಿಗ್ಗೆ 11 ಗಂಟೆಗೆ ಡಾ.ಚಂದ್ರಶೇಖರ ಕಂಬಾರ ಅವರ “ಸಂಗ್ಯಾ ಬಾಳ್ಯಾ” ನಾಟಕವನ್ನು ಚಂದ್ರಶೇಖರ ಬಸಾಪುರ ಅವರ ನಿರ್ದೇಶನದಲ್ಲಿ ಬಳ್ಳಾರಿಯ ಸರಳಾದೇವಿ ಸತೀಶ್ಚಂದ್ರ ಅಗರವಾಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಮತ್ತು ಮಧ್ಯಾಹ್ನ 12.30 ಗಂಟೆಗೆ ಹನುಮಂತ ಹಾಲಿಗೇರಿ ರಚನೆ ಮತ್ತು ಡಾ.ಸಹನ ಪಿಂಜಾರ್ ಅವರ ನಿರ್ದೇಶನದ “ಊರು ಸುಟ್ಟರು ಹನುಮಪ್ಪ ಹೊರಗ್” ಎಂಬ ನಾಟಕವನ್ನು ವಿಜಯನಗರ ಜಿಲ್ಲೆಯ ಹೊಸಪೇಟೆಯ ಟಿ.ಎಂ.ಎ.ಇ.ಎಸ್. ಪಾಲಿಟೆಕ್ನಿಕ್ ಕಾಲೇಜಿನ ತಾಂತ್ರಿಕ ವಿದ್ಯಾರ್ಥಿಗಳು ತಮ್ಮ ಕಲಾ ಪ್ರದರ್ಶನ ನೀಡಲಿದ್ದಾರೆ. ಸಂಜೆ ವೇಳೆಗೆ ಸಮಾರೋಪ ಸಮಾರಂಭ ನಡೆಯಲಿದೆ ಎಂದು ಸುಜಾತಾ ಜಂಗಮಶೆಟ್ಟಿ ತಿಳಿಸಿದ್ದಾರೆ.

  • ಮಲ್ಟಿಪ್ಲೆಕ್ಸ್‌ ಚಿತ್ರಮಂದಿರಗಳಲ್ಲಿ ಟಿಕೆಟ್‌ ದರ 200 ರೂ.ಗೆ ನಿಗದಿಪಡಿಸುವಂತೆ ಸಿಎಂಗೆ ಮನವಿ

    ಮಲ್ಟಿಪ್ಲೆಕ್ಸ್‌ ಚಿತ್ರಮಂದಿರಗಳಲ್ಲಿ ಟಿಕೆಟ್‌ ದರ 200 ರೂ.ಗೆ ನಿಗದಿಪಡಿಸುವಂತೆ ಸಿಎಂಗೆ ಮನವಿ

    ಬೆಂಗಳೂರು: ಎಲ್ಲಾ ಮಲ್ಟಿಪ್ಲೆಕ್ಸ್ ಚಿತ್ರಮಂದಿರಗಳಲ್ಲಿ (Multiplex Theatre) ಟಿಕೆಟ್‌ ದರ 200 ರೂ.ಗೆ ನಿಗದಿಪಡಿಸಿ ಸರ್ಕಾರದಿಂದ ಆದೇ ಹೊರಡಿಸುವಂತೆ ಚಲನಚಿತ್ರ ವಾಣಿಜ್ಯ ಮಂಡಳಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರಿಗೆ ಮನವಿ ಸಲ್ಲಿಸಿದೆ.

    ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಸುರೇಶ್, ಸಾ.ರಾ ಗೋವಿಂದು ನೇತೃತ್ವದ ನಿಯೋಗ ಶನಿವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನ ಭೇಟಿ ಮಾಡಿ, ಟಿಕೆಟ್‌ ದರ (Cinema Ticket Price) 200 ರೂ.ಗೆ ನಿಗದಿಪಡಿಸುವಂತೆ ಮನವಿ ಮಾಡಿದೆ. ಇದನ್ನೂ ಓದಿ: ಬೆಂಗಳೂರು ಅಭಿವೃದ್ಧಿಗೆ 7,000 ಕೋಟಿ ನೆರವು ನೀಡಲು ವಿಶ್ವಬ್ಯಾಂಕ್‌ ಒಪ್ಪಿದೆ: ಸಿಎಂ

    ಈ ಸಂಬಂಧ ಮಾಧ್ಯಮಗಳೊಂದಿಗೆ ಮಾತನಾಡಿರುವ ಸಾ.ರಾ ಗೋವಿಂದು, ಇತ್ತೀಚೆಗೆ ಮಲ್ಟಿಪ್ಲೆಕ್ಸ್ ಸೇರಿದಂತೆ ಚಿತ್ರಮಂದಿರಗಳಲ್ಲಿ ಪ್ರವೇಶ ದರ ದುಬಾರಿಯಾಗಿದ್ದು, ಸಾವಿರದಿಂದ ಒಂದೂವರೆ ಸಾವಿರ ರೂಪಾಯಿವರೆಗೂ ಟಿಕೆಟ್ ದರ ನಿಗದಿಪಡಿಸಲಾಗುತ್ತಿದೆ. ಇದರಿಂದ ಕನ್ನಡ ಪ್ರೇಕ್ಷಕರಿಗೆ ಹೊರೆಯಾಗಿರುತ್ತದೆ. ಹಾಗಾಗಿ ಟಿಕೆಟ್‌ ದರ 200 ರೂ. ಮೀರದಂತೆ ನಿಗದಿಪಡಿಸುವಂತೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಿಂದ ಸಿಎಂಗೆ ಮನವಿ ಪತ್ರ ಸಲ್ಲಿಸಿದ್ದೇವೆ ಎಂದು ತಿಳಿಸಿದ್ದಾರೆ.

    ಈ ಹಿಂದೆ ಇದೇ ರೀತಿ ಮನವೊಗೆ ವಾರ್ತಾ ಇಲಾಖೆಯ ಮೂಲಕ ಆದೇಶ ಹೊರಡಿಸಲಾಗಿತ್ತು. ಈ ಆದೇಶವನ್ನು ಪ್ರಶ್ನಿಸಿ ಅಧಿಕಾರ ವ್ಯಾಪ್ತಿಗೆ ಒಳಪಡುವುದಿಲ್ಲವೆಂದು ಮಲ್ಟಿಪ್ಲೆಕ್ಸ್ ಚಿತ್ರಮಂದಿರಗಳ ಮಾಲೀಕರು ನ್ಯಾಯಾಲಯದಲ್ಲಿ ತಡೆಯಾಜ್ಞೆ ತಂದಿದ್ದಾರೆ. ತಡೆಯಾಜ್ಞೆ ತೆರವುಗೊಳಿಸಿ ಸರ್ಕಾರ ಟಿಕೆಟ್‌ ದರ ನಿಗದಿಪಡಿಸಬೇಕೆಂದು ಮನವಿ ಮಾಡಿದ್ದೇವೆ ಎಂದಿದ್ದಾರೆ. ಇದನ್ನೂ ಓದಿ: ದೀಪಾವಳಿಗೆ ಪಟಾಕಿ ಸಿಡಿಸಲು ಸಮಯ ನಿಗದಿ – ಹಸಿರು ಪಟಾಕಿಗೆ ಮಾತ್ರ ಅವಕಾಶ ಎಂದ ಸಿಎಂ

    ದುಬಾರಿ ಪ್ರವೇಶದರದಿಂದ ಚಿತ್ರಮಂದಿರದಲ್ಲಿ ಚಿತ್ರ ವೀಕ್ಷಿಸಲು ಪ್ರೇಕ್ಷಕರು ಗಣನೀಯ ಪ್ರಮಾಣದಲ್ಲಿ ಕುಂಠಿತಗೊಂಡು ಚಿತ್ರ ನಿರ್ಮಾಣಕ್ಕೆ ಹಾಕಿದ ಬಂಡವಾಳ ವಾಪಸ್ ಪಡೆಯಲು ಕಷ್ಟಸಾಧ್ಯವಾಗುತ್ತಿದೆ. ಹಾಗಾಗಿ ಕೂಡಲೇ 200 ರೂ. ಮೀರದಂತೆ ಪ್ರವೇಶದರ ನಿಗದಿಪಡಿಸಲು ಕೋರಿದ್ದೇವೆ. ಈಗಾಗಲೇ ನೆರೆರಾಜ್ಯಗಳಾದ ತೆಲಂಗಾಣ, ಆಂಧ್ರಪ್ರದೇಶ ಮತ್ತು ಚೆನ್ನೈ ಮಲ್ಟಿಪ್ಲೆಕ್ಸ್‌ಗಳಲ್ಲಿ 150 ರೂ. ನಿಂದ 200 ರೂ. ಪ್ರವೇಶದರ ನಿಗದಿಪಡಿಸಲಾಗಿದೆ. ನಮ್ಮಲ್ಲೂ ಮಲ್ಟಿಪ್ಲೆಕ್ಸ್ ಚಿತ್ರಮಂದಿರಗಳಲ್ಲಿ 150 ರೂ.ನಿಂದ 200 ರೂ.ಗೆ ಟಿಕೆಟ್‌ ದರ ನಿಗದಿ ಮಾಡಿ ಸರ್ಕಾರದಿಂದಲೇ ಆದೇಶ ಹೊರಡಿಸುವಂತೆ ಪತ್ರದಲ್ಲಿ ಉಲ್ಲೇಖಿಸಿರುವುದಾಗಿ ತಿಳಿಸಿದ್ದಾರೆ.

  • ಬೆಂಗಳೂರಿನ ಮತ್ತೊಂದು ಪ್ರತಿಷ್ಠಿತ ಥಿಯೇಟರ್ ಬಂದ್

    ಬೆಂಗಳೂರಿನ ಮತ್ತೊಂದು ಪ್ರತಿಷ್ಠಿತ ಥಿಯೇಟರ್ ಬಂದ್

    ಬೆಂಗಳೂರಿನ (Bangalore) ಒಂದೊಂದೇ ಚಿತ್ರಮಂದಿರಗಳ ಬಾಗಿಲು ಹಾಕುತ್ತಿವೆ. ಒಟಿಟಿ, ಕಡಿಮೆ ಸಂಖ್ಯೆಯಲ್ಲಿ ಸಿನಿಮಾ ನಿರ್ಮಾಣ ಸೇರಿದಂತೆ ಹಲವಾರು ಕಾರಣಗಳಿಂದಾಗಿ ಕೆಂಪೇಗೌಡ ರಸ್ತೆ ಅನೇಕ ಚಿತ್ರಮಂದಿಗಳು (Theatre) ಬಂದ್ ಆಗಿವೆ. ಆ ಜಾಗದಲ್ಲಿ ಶಾಪಿಂಗ್ ಕಾಂಪ್ಲೆಕ್ಸ್ ಗಳು ತಲೆಯೆತ್ತಿವೆ. ಈಗ ಕಾವೇರಿ (Cauvery) ಚಿತ್ರಮಂದಿರದ ಸರದಿ.

    ಬೆಂಗಳೂರಿನ ಅತ್ಯಂತ ಪ್ರತಿಷ್ಠಿತ ಬಡಾವಣೆಯಲ್ಲಿ ಒಂದಾಗಿರುವ ಸ್ಯಾಂಕಿ ರಸ್ತೆಯ, ಪ್ಯಾಲೇಸ್ ಗುಟ್ಟಳ್ಳಿಯಲ್ಲಿರುವ ಕಾವೇರಿ ಚಿತ್ರಮಂದಿರ ತನ್ನ ಶಾಶ್ವತ ಪ್ರದರ್ಶನವನ್ನು ನಿಲ್ಲಿಸಲಿಲ್ಲ. ಕಳೆದ ಜನವರಿ 11ಕ್ಕೆ ಕಾವೇರಿಗೆ ಭರ್ತಿ 50 ವರ್ಷ ತುಂಬಿತ್ತು. ಗೋಲ್ಡನ್ ಜ್ಯುಬಿಲಿ ಆಚರಣೆಯನ್ನೂ ಮಾಡಲಾಗಿತ್ತು.

    ನಾನಾ ಕಾರಣಗಳಿಂದಾಗಿ ಕಾವೇರಿ ಥಿಯೇಟರ್ ಇತಿಹಾಸದ ಪುಟದಲ್ಲಿ ದಾಖಲಾಗಿತ್ತು. ಮೆಜೆಸ್ಟಿಕ್ ಏರಿಯಾದಲ್ಲಿದ್ದ ಕಪಾಲಿ ಚಿತ್ರಮಂದಿರ ಹೊರತು ಪಡಿಸಿದರೆ, ಅತೀ ಹೆಚ್ಚು ಹಾಸನಗಳುಳ್ಳ ಚಿತ್ರಮಂದಿರ ಇದಾಗಿತ್ತು. 1300ರಷ್ಟು ಸೀಟುಗಳು ಈ ಚಿತ್ರಮಂದಿರದಲ್ಲಿದ್ದವು. ಜೊತೆಗೆ ಸಾಕಷ್ಟು ಚಿತ್ರಗಳು ಇಲ್ಲಿ ಶತದಿನ ಪ್ರದರ್ಶನ ಕೂಡ ಕಂಡಿವೆ.

    ಕಾವೇರಿ ಸಿನಿಮಾ ರಂಗಕ್ಕೆ ಪದಾರ್ಪಣೆ ಮಾಡಿದ್ದು 1974 ಜನವರಿ 11ರಂದು. ಮೊದಲ ಚಿತ್ರ ಪ್ರದರ್ಶನವಾಗಿದ್ದ ಡಾ.ರಾಜ್ ಕುಮಾರ್ ಅಭಿನಯದ ಬಂಗಾರದ ಪಂಜರ. ಕಮಲ್ ಹಾಸನ್ ನಟನೆಯ ಶಂಕರಾಭರಣಂ ಸಿನಿಮಾ ದಾಖಲೆ ರೀತಿಯಲ್ಲಿ ಪ್ರದರ್ಶನವಾಗಿತ್ತು. ಕನ್ನಡ, ತಮಿಳು, ಹಿಂದೆ, ಮಲಯಾಳಂ ಜೊತೆಗೆ ಹಾಲಿವುಡ್ ನ ಅನೇಕ ಚಿತ್ರಗಳು ಇಲ್ಲಿ ಪ್ರದರ್ಶನಗೊಂಡಿವೆ.

    ಜನರು ಥಿಯೇಟರ್ ಬರುತ್ತಿಲ್ಲ. ಇಂತಹ ದೊಡ್ಡ ಕಟ್ಟಡವನ್ನು ನಿಭಾಯಿಸೋದು ಕಷ್ಟ. ಹಾಗಾಗಿ ಥಿಯೇಟರ್ ಬಂದು ಮಾಡಿ ವಾಣಿಜ್ಯ ಸಂಕೀರ್ಣವನ್ನು ನಿರ್ಮಿಸಲು ಚಿತ್ರಮಂದಿರದ ಮಾಲೀಕರು ನಿರ್ಧಾರ ಮಾಡಿದ್ದಾರೆ ಎನ್ನುವ ಮಾಹಿತಿ ಇದೆ.

  • ನಾಳೆ ಕರ್ನಾಟಕ ಬಂದ್: ಸಂಜೆ ನಂತರ ಚಿತ್ರಮಂದಿರ ಓಪನ್

    ನಾಳೆ ಕರ್ನಾಟಕ ಬಂದ್: ಸಂಜೆ ನಂತರ ಚಿತ್ರಮಂದಿರ ಓಪನ್

    ನಾಳೆ ನಡೆಯಲಿರುವ ಕರ್ನಾಟಕ ಬಂದ್ (Karnataka Band) ಹೋರಾಟಕ್ಕೆ ಚಿತ್ರಮಂದಿರಗಳ (Theatre) ಮಾಲೀಕರು ಕೂಡ ಬೆಂಬಲ ಸೂಚಿಸಿದ್ದು, ನಾಳೆ ಬೆಳಿಗ್ಗೆಯಿಂದಲೇ ಕರ್ನಾಟಕದ ಎಲ್ಲ ಚಿತ್ರಮಂದಿರಗಳು ಬಾಗಿಲು ಹಾಕಲಿವೆ. ಸಂಜೆ ಹೋರಾಟ ಮುಗಿದ ಬಳಿಕ ಮತ್ತೆ ಚಿತ್ರ ಪ್ರದರ್ಶನಗಳನ್ನು ಆರಂಭಿಸಲಿವೆ ಎಂದು ಕರ್ನಾಟಕ ಚಿತ್ರ ಪ್ರದರ್ಶಕರ ಸಂಘದ ಅಧ್ಯಕ್ಷ ಕೆ.ವಿ.ಚಂದ್ರಶೇಖರ್ (KV Chandrasekhar) ತಿಳಿಸಿದ್ದಾರೆ.

    ಶುಕ್ರವಾರ ನಡೆಯಲಿರುವ ಕರ್ನಾಟಕ ಬಂದ್ ಗೆ ರಾಜ್ಯದ ಎಲ್ಲ ಚಿತ್ರಮಂದಿರಗಳು ಸಂಪೂರ್ಣ ಬೆಂಬಲ ವ್ಯಕ್ತಪಡಿಸುತ್ತಾ, ಸಂಜೆವರೆಗೆ ಪ್ರದರ್ಶನಗಳನ್ನು ಸ್ಥಗಿತಗೊಳಿಸಿ ಸಂಜೆ ನಂತರ ಪ್ರದರ್ಶನಗಳು ಮಾಮೂಲಿನಂತೆ ಪ್ರದರ್ಶನಗೊಳ್ಳುತ್ತವೆ. ಕಾವೇರಿ ನಮ್ಮದು. ರಾಜ್ಯ ಭಾಷೆ, ನೀರು ಮತ್ತು ನೆಲದ ವಿಷಯದಲ್ಲಿ ಯಾವುದೇ ರಾಜಿ ಇಲ್ಲದೇ ಸರ್ಕಾರ, ರೈತರ ಮತ್ತು ಹೋರಾಟಗಾರರ ಬೆಂಬಲಕ್ಕೆ ಸದಾ ಸಿದ್ಧರಿದ್ದೇವೆ ಎಂದು ತಿಳಿಸಿದ್ದಾರೆ ಅಧ್ಯಕ್ಷರು.

    ಇಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ (Film Chamber) ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಶಿವರಾಜ್ ಕುಮಾರ್ ನಿವಾಸಕ್ಕೆ ಆಗಮಿಸಿ, ನಾಳೆಯ ಹೋರಾಟಕ್ಕೆ ಮುಂದಾಳತ್ವ ವಹಿಸಿಕೊಳ್ಳಬೇಕು ಎಂದು ಮನವಿ ಮಾಡಿದರು. ಹೀಗಾಗಿ ಶಿವರಾಜ್ ಕುಮಾರ್ ನೇತೃತ್ವದಲ್ಲಿ ನಾಳೆ ಚಿತ್ರೋದ್ಯಮ ಹೋರಾಟಕ್ಕೆ ಇಳಿಯಲಿದೆ. ಇದನ್ನೂ ಓದಿ:ಸಮಂತಾ ಔಟ್‌, ರಶ್ಮಿಕಾ ಮಂದಣ್ಣಗೆ ಸಿಕ್ತು ಬಿಗ್‌ ಚಾನ್ಸ್

    ಸಾಕಷ್ಟು ವರ್ಷಗಳಿಂದ ಕಾವೇರಿ ನೀರಿಗಾಗಿ ಹೋರಾಟ ನಡೆಯುತ್ತಲೇ ಇದೆ. ಈ ಹಿನ್ನೆಲೆಯಲ್ಲಿ ಸೆ.29ರಂದು ಕರ್ನಾಟಕ ಬಂದ್ ಕರೆ ನೀಡಿದ್ದು, ಸೀರಿಯಲ್, ಸಿನಿಮಾ ಚಿತ್ರೀಕರಣ, ಚಿತ್ರ ಪ್ರದರ್ಶನ ಸೇರಿದಂತೆ ಎಲ್ಲಾ ಚಟುವಟಿಕೆಗಳು ಬಂದ್ ಮೂಲಕ ಚಿತ್ರೋದ್ಯಮ ಸಾಥ್ ನೀಡುತ್ತಿದೆ.

    ನಾಳೆಯ ಪ್ರತಿಭಟನೆಯಲ್ಲಿ ಶಿವಣ್ಣ, ಉಪೇಂದ್ರ, ರಾಘಣ್ಣ, ನೆನಪಿರಲಿ ಪ್ರೇಮ್, ಅಜಯ್ ರಾವ್, ಪ್ರಜ್ವಲ್ ದೇವರಾಜ್, ರಂಗಾಯಣ ರಘು, ಸಾಧು ಕೋಕಿಲಾ ಸೇರಿದಂತೆ ಕಿರುತೆರೆ ನಟ- ನಟಿಯರು ಭಾಗಿಯಾಗುವ ಸಾಧ್ಯತೆ ಇದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕನ್ನಡ ಚಿತ್ರೋದ್ಯಮದಲ್ಲಿ ಹಣ ತೊಡಗಿಸಿದ ಪ್ರಿನ್ಸ್ ಮಹೇಶ್ ಬಾಬು

    ಕನ್ನಡ ಚಿತ್ರೋದ್ಯಮದಲ್ಲಿ ಹಣ ತೊಡಗಿಸಿದ ಪ್ರಿನ್ಸ್ ಮಹೇಶ್ ಬಾಬು

    ತೆಲುಗು ಸಿನಿಮಾ ರಂಗದ ಖ್ಯಾತ ನಟ ಮಹೇಶ್ ಬಾಬು (Mahesh Babu), ಕನ್ನಡ ಚಿತ್ರೋದ್ಯಮದಲ್ಲಿ ಹಣ ಹೂಡಲಿದ್ದಾರೆ. ಈಗಾಗಲೇ ತೆಲುಗು ಚಿತ್ರೋದ್ಯಮದಲ್ಲಿ ಮಲ್ಟಿಪ್ಲೆಕ್ಸ್ (Multiplex) ಚಿತ್ರಮಂದಿರಗಳಿಗೆ ಬಂಡವಾಳ ಹಾಕಿರುವ ಮಹೇಶ್ ಬಾಬು, ಈಗ ಆ ಮಲ್ಟಿಪ್ಲೆಕ್ಸ್ ಚಿತ್ರಮಂದಿರಗಳನ್ನು ಕರ್ನಾಟಕದಲ್ಲೂ ತೆರೆಯಲಿದ್ದಾರೆ.

    ಬೆಂಗಳೂರಿನ ಗಾಂಧಿನಗರದಲ್ಲಿರುವ ಚಿತ್ರಮಂದಿರಗಳಿಗೆ ಸಾಕಷ್ಟು ಬೇಡಿಕೆ ಇದೆ. ಇವುಗಳನ್ನೇ ಪ್ರಮುಖ ಚಿತ್ರಮಂದಿರಗಳು ಎಂದು ಹೇಳಲಾಗುತ್ತಿದೆ. ಈ ಜಾಗದಲ್ಲೇ ಪ್ರಿನ್ಸ್ ಮಹೇಶ್ ಬಾಬು ಅವರ ಎ.ಎಂ.ಬಿ ಮಲ್ಟಿಪ್ಲೆಕ್ಸ್  ಚಿತ್ರಮಂದಿರಗಳು ಕಾರ್ಯರಂಭ ಮಾಡಲಿವೆ. ಈ ಹಿಂದೆ ಕಪಾಲಿ ಚಿತ್ರಮಂದಿರವಿದ್ದ ಜಾಗದಲ್ಲಿ ಐದು ಅಂತಸ್ತಿನ ಕಟ್ಟಡ ನಿರ್ಮಾಣವಾಗುತ್ತಿದೆ. ಇದೇ ಕಟ್ಟದಲ್ಲೇ ಚಿತ್ರಮಂದಿರಗಳು ಇರಲಿವೆ.

     

    ಕನ್ನಡ ಸಿನಿಮಾ ರಂಗದ ಅನೇಕ ನಟರು ಚಿತ್ರೋದ್ಯಮದಲ್ಲಿ ಹಣವನ್ನು ತೊಡಗಿಸಿಲ್ಲ. ಆದರೆ ತಮಿಳು ಮತ್ತು ತೆಲುಗಿನಲ್ಲಿ ಅನೇಕ ನಟರು ಬಂಡವಾಳವನ್ನು ನಾನಾ ರೂಪದಲ್ಲಿ ಚಿತ್ರೋದ್ಯಮದಲ್ಲೇ ತೊಡಗಿಸಿದ್ದಾರೆ. ಕರ್ನಾಟಕದಲ್ಲಿಯ ಈ ಕೊರತೆಯನ್ನು ಮನಗಂಡಿದ್ದ ಮಹೇಶ್ ಬಾಬು, ತಾವೇ ಹಣ ಹೂಡಲು ಮುಂದಾಗಿದ್ದಾರೆ. ಇನ್ನೂ ಕೆಲವೇ ತಿಂಗಳಲ್ಲಿ ಈ ಚಿತ್ರಮಂದಿರಗಳು ತಮ್ಮ ಪ್ರದರ್ಶನವನ್ನು ಶುರು ಮಾಡಲಿವೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಸಂಸತ್ ನಲ್ಲಿ ‘ಪಠಾಣ್’ ಸಿನಿಮಾ ಹೊಗಳಿದ್ರಾ ಪ್ರಧಾನಿ ಮೋದಿ?

    ಸಂಸತ್ ನಲ್ಲಿ ‘ಪಠಾಣ್’ ಸಿನಿಮಾ ಹೊಗಳಿದ್ರಾ ಪ್ರಧಾನಿ ಮೋದಿ?

    ಪ್ರಧಾನಿ ನರೇಂದ್ರ ಮೋದಿ (Narendra Modi) ‘ಪಠಾಣ್’ (Pathan) ಸಿನಿಮಾವನ್ನು ಪರೋಕ್ಷವಾಗಿ ಸಂಸತ್ ನಲ್ಲಿ ಹೊಗಳಿದ್ದಾರೆ ಎನ್ನುವ ವಿಡಿಯೋ ಸಖತ್ ವೈರಲ್ ಆಗಿದೆ.  ಸಂಸತ್ ನಲ್ಲಿ ಅವರು ಮಾತನಾಡುತ್ತಾ, ‘ದಶಕಗಳ ನಂತರ ಶ್ರೀನಗರದಲ್ಲಿ ಥಿಯೇಟರ್ (Theatre) ಹೌಸ್ ಫುಲ್ ಕಂಡಿದೆ’ ಎಂದು ಹೇಳಿದ್ದಾರೆ. ಸದ್ಯ ಶ್ರೀನಗರದಲ್ಲಿ (Srinagar) ಪಠಾಣ್ ಸಿನಿಮಾ ಪ್ರದರ್ಶನ ಆಗುತ್ತಿರುವ ಹಿನ್ನೆಲೆಯಲ್ಲಿ ಅವರು ಈ ಮಾತುಗಳನ್ನು ಆಡಿದ್ದಾರೆ ಎಂದು ಬಣ್ಣಿಸಲಾಗುತ್ತಿದೆ.

    ಶಾರುಖ್ (Shah Rukh Khan) ಅಭಿಮಾನಿಗಳು ಮೋದಿ ಅವರ ಮಾತುಗಳನ್ನು ‘ಪಠಾಣ್’ ಸಿನಿಮಾ ಹಿನ್ನೆಲೆಯಲ್ಲೇ ಆಡಿದ್ದು ಎಂದು ಚರ್ಚೆ ಮಾಡುತ್ತಿದ್ದರೆ, ಮೋದಿ ಹಿಂಬಾಲಕರು ಶ್ರೀನಗರ ಇದೀಗ ಶಾಂತವಾಗಿ, ನೆಮ್ಮದಿಯಾಗಿ ಸಿನಿಮಾ ನೋಡುವಂತಹ ವಾತಾವರಣ ನಿರ್ಮಾಣವಾಗಿದೆ ಎನ್ನುವ ಅರ್ಥ ವಿವರಿಸುತ್ತಿದ್ದಾರೆ. ಮೋದಿ ಆಡಿದ ಆ ಮಾತು ಪಠಾಣ್ ಸಿನಿಮಾಗಿಂತಲೂ ಸಖತ್ ಫೇಮಸ್ ಕೂಡ ಆಗಿದೆ. ಇದನ್ನೂ ಓದಿ: ಸಾಲು ಸಾಲು ಸಿನಿಮಾಗಳ ನಡುವೆ ಕಾವಿತೊಟ್ಟು ಅಚ್ಚರಿ ಮೂಡಿಸಿದ ಮಿಲ್ಕಿ ಬ್ಯೂಟಿ

    ಪಠಾಣ್ ಸಿನಿಮಾದಲ್ಲಿ ಹಿಂದೂಗಳ ಭಾವನೆಗೆ ಧಕ್ಕೆ ತರಲಾಗಿದೆ ಎನ್ನುವ ಕಾರಣಕ್ಕಾಗಿ ಬಾಯ್ಕಾಟ್ ಪಠಾಣ್ ಅಭಿಯಾನ ಶುರುವಾಗಿತ್ತು. ಕೆಲವು ಕಡೆ ಸಿನಿಮಾ ಪ್ರದರ್ಶನಕ್ಕೂ ಅಡೆತಡೆ ನೀಡಲಾಯಿತು. ಎಲ್ಲವನ್ನೂ ದಾಟಿಕೊಂಡು ಸಿನಿಮಾ ಬಾಕ್ಸ್ ಆಫೀಸಿನಲ್ಲಿ ಗೆದ್ದಿದೆ. ಇನ್ನೂ ಹಲವು ಕಡೆ ಹೌಸ್ ಫುಲ್ ಪ್ರದರ್ಶನ ಕಂಡಿದೆ. ಬಾಯ್ಕಾಟ್ ನಡುವೆಯೂ ಸಿನಿಮಾ ಗೆದ್ದಿರುವುದಕ್ಕೆ ಮತ್ತೊಂದು ಸುತ್ತಿನ ಚರ್ಚೆ ಶುರುವಾಗಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಮುಖಮುಚ್ಚಿಕೊಂಡು ‘ಪಠಾಣ್’ ಸಿನಿಮಾಗೆ ಬಂದ ದೀಪಿಕಾ ಪಡುಕೋಣೆ

    ಮುಖಮುಚ್ಚಿಕೊಂಡು ‘ಪಠಾಣ್’ ಸಿನಿಮಾಗೆ ಬಂದ ದೀಪಿಕಾ ಪಡುಕೋಣೆ

    ಬಾಲಿವುಡ್ ಪಠಾಣ್ (Pathan) ಸಿನಿಮಾ ಬಿಡುಗಡೆಯಾದ ಬಹುತೇಕ ಕಡೆ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಬಾಯ್ಕಾಟ್ ನಡುವೆಯೂ ಭರ್ಜರಿ ಓಪನಿಂಗ್ ಪಡೆದುಕೊಂಡಿದೆ. ಸಿನಿಮಾ ನೋಡಿದ ಪ್ರೇಕ್ಷಕರು ಕುಣಿದು ಕುಪ್ಪಳಿಸುತ್ತಿದ್ದಾರೆ. ಈ ಸಂಭ್ರಮವನ್ನು ಕಣ್ತುಂಬಿಕೊಳ್ಳಲು ನಟಿ ದೀಪಿಕಾ ಪಡುಕೋಣೆ (Deepika Padukone) ಮಾರುವೇಷದಲ್ಲಿ ಚಿತ್ರಮಂದಿರಕ್ಕೆ (Theatre) ಹೋಗಿದ್ದಾರೆ. ಆ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

    ದೀಪಿಕಾ ಪಡುಕೋಣೆ ಮತ್ತು ಶಾರುಖ್ ಖಾನ್ (Shah Rukh Khan) ಕಾಂಬಿನೇಷನ್ ನ ಸಿನಿಮಾ ಪಠಾಣ್. ಈ ಸಿನಿಮಾದ ಹಾಡೊಂದರಲ್ಲಿ ದೀಪಿಕಾ ಕೇಸರಿ ಬಿಕಿನಿ ಧರಿಸಿದ್ದರು ಎನ್ನುವ ಕಾರಣಕ್ಕಾಗಿ ವಿವಾದ ಎದ್ದಿತ್ತು. ಕೇಸರಿ ಬಣ್ಣವನ್ನು ಅವಮಾನಿಸಲಾಗಿದೆ ಎಂದು ಹಲವರು ತಗಾದೆ ತಗೆದಿದ್ದರು. ಸೆನ್ಸಾರ್ ಮಂಡಳಿ ಕೂಡ ಮಧ್ಯ ಪ್ರವೇಶ ಮಾಡಿತ್ತು. ಆದರೂ, ಕೇಸರಿ ಬಿಕಿನಿ ತಗೆಯುವಂತಹ ಸಾಹಸವನ್ನು ಚಿತ್ರತಂಡ ಮಾಡಿಲ್ಲ. ಆದರೂ, ಸಿನಿಮಾ ಗೆದ್ದಿದೆ. ಇದನ್ನೂ ಓದಿ: `ಗಟ್ಟಿಮೇಳ’ ನಟಿ ಪ್ರಿಯಾ ಜೊತೆ ಸಿದ್ದು ಮದುವೆ ಡೇಟ್ ಫಿಕ್ಸ್ 

    ಅಂಗರಕ್ಷಕರೊಂದಿಗೆ ದೀಪಿಕಾ ಪಡುಕೋಣೆ ಥಿಯೇಟರ್ ಗೆ ಬಂದಿದ್ದಾರೆ. ಮುಖ ಕವರ್ ಮಾಡಿಕೊಂಡು ಪ್ರೇಕ್ಷಕರ ಮಧ್ಯೆ ಸಿನಿಮಾ ನೋಡಿದ್ದಾರೆ. ಆ ಅನುಭವವನ್ನು ಅವರು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಪ್ರೇಕ್ಷಕರು ಸಿನಿಮಾ ಗೆಲ್ಲಿಸಿದ್ದಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ. ಅಲ್ಲದೇ, ಥಿಯೇಟರ್ ನಲ್ಲಿ ನೋಡುಗರು ಸಂಭ್ರಮಿಸುತ್ತಿರುವ ರೀತಿ ಕಂಡು ತುಂಬಾ ಖುಷಿಯಾಗಿದೆ ಎಂದು ಅವರು ಪ್ರತಿಕ್ರಿಯೆ ನೀಡಿದ್ದಾರೆ.

    ಪಠಾಣ್ ಸಿನಿಮಾ ರಿಲೀಸ್ ಆಗಿ ಐದು ದಿನಗಳಾಗಿವೆ. ಬಾಕ್ಸ್ ಆಫೀಸ್ ಭರ್ತಿಯಾಗಿದೆ. ನಾಲ್ಕು ನೂರು ಕೋಟಿಗೂ ಅಧಿಕ ಹಣವನ್ನು ಅದು ಬಾಚಿದೆ. ಕಳೆದ ಎರಡ್ಮೂರು ವರ್ಷಗಳಲ್ಲಿ ಈ ಪ್ರಮಾಣದಲ್ಲಿ ಹಣ ಹರಿದು ಬಂದ ಮೊದಲ ಸಿನಿಮಾ ಇದಾಗಿದೆ. ಈ ವರ್ಷದ ಮೊದಲ ಸೂಪರ್ ಹಿಟ್ ಸಿನಿಮಾಗಳ ಸಾಲಿಗೂ ಪಠಾಣ್ ಸೇರಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಕರ್ನಾಟಕದಲ್ಲಿ ಈ ವಾರ ಪರಭಾಷಾ ಚಿತ್ರಗಳದ್ದೇ ಹಾವಳಿ

    ಕರ್ನಾಟಕದಲ್ಲಿ ಈ ವಾರ ಪರಭಾಷಾ ಚಿತ್ರಗಳದ್ದೇ ಹಾವಳಿ

    ವಾರ ಕರ್ನಾಟಕದಲ್ಲಿ ಕನ್ನಡ ಚಿತ್ರಗಳಿಗೆ ಥಿಯೇಟರ್ (Theatre) ಸಿಗುತ್ತಾ ಎನ್ನುವ ಆತಂಕ ಎದುರಾಗಿದೆ. ಸಂಕ್ರಾಂತಿ ಹಬ್ಬಕ್ಕೆ ಸಾಮಾನ್ಯವಾಗಿ ತೆಲುಗು ಮತ್ತು ತಮಿಳಿನ ಭಾರೀ ಬಜೆಟ್ ಚಿತ್ರಗಳು ಬಿಡುಗಡೆ ಆಗುವುದು ವಾಡಿಕೆ. ಈ ಬಾರಿಯೂ ಅಂತಹ ದೊಡ್ಡ ಬಜೆಟ್  ಮತ್ತು ಹೆಸರಾಂತ ನಟರೇ ನಟಿಸಿರುವ ಚಿತ್ರಗಳು ತೆರೆ ಕಾಣುತ್ತಿವೆ. ಆ ನಟರ ಚಿತ್ರಗಳು ಕರ್ನಾಟಕದಲ್ಲೂ ಈ ಹಿಂದೆ ಬಾಕ್ಸ್ ಆಫೀಸ್ ಕೊಳ್ಳೆ ಹೊಡೆದಿವೆ. ಹೀಗಾಗಿ ಕನ್ನಡ ಚಿತ್ರಗಳಿಗೆ ಅವುಗಳಿಂದಾಗಿ ನಾನಾ ಸಮಸ್ಯೆಗಳು ಎದುರಾಗಬಹುದು.

    ತಮಿಳಿನ ಹೆಸರಾಂತ ನಟ ವಿಜಯ್ (Vijay) ಹಾಗೂ ರಶ್ಮಿಕಾ ಮಂದ‍ಣ್ಣ ಕಾಂಬಿನೇಷನ್ ನ ‘ವಾರಿಸು’ ಮತ್ತು ಅಜಿತ್ ಕುಮಾರ್ (Ajith) ನಟನೆಯ ‘ತುನಿವು’ ಸಿನಿಮಾ ಜನವರಿ 11 ರಂದು ತೆರೆ ಕಾಣುತ್ತಿವೆ. ತೆಲುಗಿನ ಖ್ಯಾತ ನಟ ಬಾಲಕೃಷ್ಣ (Balayya) ಮತ್ತು ಕನ್ನಡದ ದುನಿಯಾ ವಿಜಯ್ ವಿಲನ್ ಆಗಿ ನಟಿಸಿರುವ ‘ವೀರಸಿಂಹ ರೆಡ್ಡಿ’ ಚಿತ್ರ ಜನವರಿ 12 ರಂದು ದೇಶಾದ್ಯಂತ ಬಿಡುಗಡೆ ಆಗುತ್ತಿದೆ. ಅಲ್ಲದೇ, ಜನವರಿ 13ಕ್ಕೆ ಮೆಗಾಸ್ಟಾರ್ ಚಿರಂಜೀವಿ (Chiranjeevi) ನಟನೆಯ ‘ವಾಲ್ತೇರು ವೀರಯ್ಯ’ ಕೂಡ ರಿಲೀಸ್ ಆಗುತ್ತಿದೆ. ಈ ಸಿನಿಮಾಗಳಲ್ಲಿ ಕೆಲವು ಕನ್ನಡಕ್ಕೆ ಡಬ್ ಆಗಿಯೂ ಬಿಡುಗಡೆ ಆಗುತ್ತಿವೆ. ಹಾಗಾಗಿ ಕನ್ನಡ ಸಿನಿಮಾಗಳಿಗೆ ಥಿಯೇಟರ್ ಸಿಗುತ್ತವಾ ಎನ್ನುವುದೇ ಆತಂಕಕ್ಕೆ ಕಾರಣವಾಗಿವೆ. ಇದನ್ನೂ ಓದಿ: ವಿಜಯ್ ವರ್ಮಾ ಜೊತೆಗಿನ ಡೇಟಿಂಗ್ ಸುದ್ದಿ ಬೆನ್ನಲ್ಲೇ ಗುಡ್ ನ್ಯೂಸ್ ಕೊಟ್ರು ತಮನ್ನಾ

     

    ಎದುರಾಗಬಹುದಾದ ಇಂತಹ ಆತಂಕವನ್ನು ಗಮನಿಸಿಯೇ ತೆಲುಗು ಚಿತ್ರರಂಗ ಈ ಹಿಂದೆ ತೀರ್ಮಾನವೊಂದನ್ನು ತಗೆದುಕೊಂಡಿದೆ. ಮೊದಲ ತೆಲುಗು ಸಿನಿಮಾಗಳಿಗೆ ಥಿಯೇಟರ್ ಕೊಡಬೇಕು. ನಂತರ ಇತರ ಭಾಷೆಯ ಚಿತ್ರಗಳಿಗೆ ಅವಕಾಶ  ನೀಡಬೇಕು ಎಂದು. ಆದರೂ, ತೆಲುಗು ವಿತರಕ ದಿಲ್ ರಾಜು, ಈ ನಿಯಮಕ್ಕೆ ಸೆಡ್ಡು ಹೊಡೆದು ತಮಿಳಿನ ವಾರಿಸು ಸಿನಿಮಾವನ್ನು ತೆಲುಗಿಗೆ ಡಬ್ ಮಾಡಿ, ಹೆಚ್ಚಿನ ಸಂಖ್ಯೆಯ ಚಿತ್ರಮಂದಿರಗಳಿಗೆ ರಿಲೀಸ್ ಮಾಡಲು ಹೊರಟಿದ್ದರು. ಈ ವಿಷಯದಲ್ಲಿ ಕೊನೆಗೂ ದಿಲ್ ರಾಜು ಸೋತಿದ್ದಾರೆ. ಚಿತ್ರೋದ್ಯಮದ ಒಗ್ಗಟ್ಟಿನ ಪರಿಣಾಮವಾಗಿ, ಹೆಚ್ಚಿನ ಸಂಖ್ಯೆಯ ಥಿಯೇಟರ್ ಗಳು ತೆಲುಗು ಚಿತ್ರಗಳಿಗೆ ಸಿಕ್ಕಿವೆ. ಅಲ್ಲದೇ ಡಬ್ ಸಿನಿಮಾ ರಿಲೀಸ್ ದಿನಾಂಕವನ್ನು ಅವರು ಮೂರು ದಿನಗಳ ಕಾಲ ಮುಂದೂಡಿದ್ದಾರೆ.

    ಕನ್ನಡ ಚಿತ್ರೋದ್ಯಮದಲ್ಲಿ ಇಂತಹ ಯಾವುದೇ ನಿಯಮಗಳಿಲ್ಲ. ಒಗ್ಗಟ್ಟಿನ ಮಂತ್ರವೂ ಇಲ್ಲ. ಹಾಗಾಗಿ ದೊಡ್ಡ ದೊಡ್ಡ ಪರಭಾಷಾ ಚಿತ್ರಗಳು ತೆರೆಕಂಡಾಗ ಕನ್ನಡದ ನಿರ್ಮಾಪಕರು ಥಿಯೇಟರ್ ಗಾಗಿ ಪರದಾಡಿದ ಸಾಕಷ್ಟು ಉದಾಹರಣೆಗಳಿವೆ. ಈ ವಾರ ಕೂಡ ಕನ್ನಡದ ಅನೇಕ ಚಿತ್ರಗಳಿಗೆ ಬೇಡಿಕೆಗೆ ತಕ್ಕಂತೆ ಚಿತ್ರಮಂದಿರಗಳು ಸಿಗುವುದು ಅನುಮಾನ ಎನ್ನಲಾಗುತ್ತಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಲಾಲ್ ಸಿಂಗ್ ಚಡ್ಡಾ ಚಿತ್ರಕ್ಕೆ ಒಟಿಟಿಯಲ್ಲಿ ಭರ್ಜರಿ ರೆಸ್ಪಾನ್ಸ್: ನಂ1 ಸ್ಥಾನ

    ಲಾಲ್ ಸಿಂಗ್ ಚಡ್ಡಾ ಚಿತ್ರಕ್ಕೆ ಒಟಿಟಿಯಲ್ಲಿ ಭರ್ಜರಿ ರೆಸ್ಪಾನ್ಸ್: ನಂ1 ಸ್ಥಾನ

    ಮೀರ್ ಖಾನ್ ನಟನೆಯ ಲಾಲ್ ಸಿಂಗ್ ಚಡ್ಡಾ (Lal Singh Chadha) ಸಿನಿಮಾಗೆ ಚಿತ್ರಮಂದಿರಗಳಲ್ಲಿ ಅಷ್ಟೇನೂ ಒಳ್ಳೆಯ ಪ್ರತಿಕ್ರಿಯೆ ಸಿಗಲಿಲ್ಲ. ಬಾಯ್ಕಾಟ್ ಲಾಲ್ ಸಿಂಗ್ ಚಡ್ಡಾ ಸೇರಿದಂತೆ ಅನೇಕ ತೊಂದರೆಗಳಿಂದಾಗಿ ಸಿನಿಮಾ ಕೂಡ ಬಾಕ್ಸ್ ಆಫೀಸಿನಲ್ಲಿ ಗೆಲ್ಲಲು ಸಾಧ್ಯವಾಗಲಿಲ್ಲ. ಆದರೆ, ಒಟಿಟಿಯಲ್ಲಿ ಮಾತ್ರ ಚಿತ್ರಕ್ಕೆ ಭರ್ಜರಿ ಪ್ರತಿಕ್ರಿಯೆ ಸಿಕ್ಕಿದೆ. ಒಟಿಟಿಯಲ್ಲಿ (OTT) ನೋಡಿದವರು, ಥಿಯೇಟರ್ ನಲ್ಲಿ ಈ ಸಿನಿಮಾ ಯಾಕೆ ಓಡಲಿಲ್ಲ ಎಂದು ಪ್ರಶ್ನೆ ಮಾಡುತ್ತಿದ್ದಾರೆ.

    ಲಾಲ್ ಸಿಂಗ್ ಚಡ್ಡಾ ಇದೀಗ ನೆಟ್ ಫ್ಲಿಕ್ಸ್ ನಲ್ಲಿ ಲಭ್ಯವಿದ್ದು, ಜಗತ್ತಿನ ಇಂಗ್ಲಿಷೇತರ ಸಿನಿಮಾಗಳ ಪಟ್ಟಿಯಲ್ಲಿ ಅದಕ್ಕೆ 2ನೇ ಸ್ಥಾನ ಸಿಕ್ಕಿದೆ. ಅಲ್ಲದೇ, ಭಾರತೀಯ ಪಟ್ಟಿಯಲ್ಲಿ ಇದು ಮೊದಲ ಸ್ಥಾನವನ್ನು (No.1) ತನ್ನದಾಗಿಸಿಕೊಂಡಿದೆ. 6.63 ದಶಲಕ್ಷ ಸ್ಟ್ರೀಮ್ ಆಗುವ ಮೂಲಕ ಹೊಸ ದಾಖಲೆಯನ್ನು ಈ ಸಿನಿಮಾ ಬರೆದಿದೆ. ಹಾಗಾಗಿ ಸಹಜವಾಗಿಯೇ ಅಮೀರ್ ಖಾನ್ (Aamir Khan) ಸಂತಸ ವ್ಯಕ್ತ ಪಡಿಸಿದ್ದಾರೆ. ಇದನ್ನೂ ಓದಿ:ದೊಡ್ಮನೆಯಲ್ಲಿ ಮಕ್ಕಳ ದರ್ಬಾರ್: ಮಗುವನ್ನು ತಬ್ಬಿ ಗಳಗಳನೆ ಅತ್ತ ಮಯೂರಿ

    ಥಿಯೇಟರ್ (Theatre) ನಲ್ಲಿ ಬಿಡುಗಡೆಯಾದಾಗ ಪ್ರೇಕ್ಷಕ ಅಷ್ಟೇನೂ ಒಳ್ಳೆಯ ಪ್ರತಿಕ್ರಿಯೆ ನೀಡಲಿಲ್ಲ. ಹಾಗಾಗಿ ಕೇವಲ 88 ಕೋಟಿ ಗಳಿಸುವಲ್ಲಿ ಚಿತ್ರ ಸಫಲವಾಯಿತು. ಅಮೀರ್ ಸಿನಿಮಾವನ್ನು ಬಹಿಷ್ಕರಿಸಿ ಎನ್ನುವ ಟ್ರೆಂಡ್ ನಿಂದಾಗಿ ಚಿತ್ರ ಅಂದುಕೊಂಡಷ್ಟು ದುಡ್ಡು ಮಾಡಲಿಲ್ಲ. ಆದರೆ, ಒಟಿಟಿಯಲ್ಲಿ ಮಾತ್ರ ಭರ್ಜರಿ ಪ್ರದರ್ಶನ ಕಾಣುತ್ತಿದೆ. ದೇಶದಲ್ಲಿ ಮಾತ್ರವಲ್ಲ, ವಿದೇಶಗಳಲ್ಲೂ ಜನರು ಈ ಸಿನಿಮಾವನ್ನು ದಾಖಲೆಯ ರೀತಿಯಲ್ಲೇ ನೋಡಿದ್ದಾರೆ.

    ಇದೊಂದು ರೀಮೇಕ್ ಸಿನಿಮಾವಾಗಿದ್ದು, ಹಾಲಿವುಡ್ ನ ಫಾರೆಸ್ಟ್ ಗಂಪ್ ಚಿತ್ರವನ್ನು ಹಿಂದಿಗೆ ರೀಮೇಕ್ ಮಾಡಿದ್ದರು ಅಮೀರ್ ಖಾನ್. ಫಾರೆಸ್ಟ್ ಗಂಪ್ ಸಿನಿಮಾಗೆ ಆಸ್ಕರ್ ಪ್ರಶಸ್ತಿ ಕೂಡ ಬಂದಿದೆ. ಈ ಸಿನಿಮಾದಲ್ಲಿ ಕೆಲವು ಬದಲಾವಣೆಗಳನ್ನು ಮಾಡಿಕೊಂಡು ಈ ಚಿತ್ರವನ್ನು ಅಮೀರ್ ನಿರ್ಮಾಣ ಮಾಡಿದ್ದರು. ಆಗಸ್ಟ್ 11 ರಂದು ಈ ಸಿನಿಮಾ ದೇಶಾದ್ಯಂತ ಬಿಡುಗಡೆ ಆಗಿತ್ತು.

    Live Tv
    [brid partner=56869869 player=32851 video=960834 autoplay=true]

  • ಚಿತ್ರಮಂದಿರಗಳಲ್ಲಿ ನಾಡಗೀತೆಯೂ ಮೊಳಗಲಿ: ಸಿಎಂ ಗೆ ಮನವಿ ಸಲ್ಲಿಸಿದ ನಟ ಝೈದ್ ಖಾನ್

    ಚಿತ್ರಮಂದಿರಗಳಲ್ಲಿ ನಾಡಗೀತೆಯೂ ಮೊಳಗಲಿ: ಸಿಎಂ ಗೆ ಮನವಿ ಸಲ್ಲಿಸಿದ ನಟ ಝೈದ್ ಖಾನ್

    ರಾಜ್ಯದ ಚಿತ್ರಮಂದಿರಗಳಲ್ಲಿ (Theatre) ಇನ್ನುಮುಂದೆ ರಾಷ್ಟ್ರಗೀತೆಯ ಜೊತೆಗೆ ನಾಡಗೀತೆಯನ್ನೂ ಹಾಕುವಂತೆ ಚಾಮರಾಜಪೇಟೆ ಶಾಸಕರು ಹಾಗೂ ಮಾಜಿ ಸಚಿವರಾದ ಶ್ರೀ ಬಿ ಝೆಡ್ ಜಮೀರ್ ಅಹ್ಮದ್ ಖಾನ್ ಅವರ ಪುತ್ರ, ಸ್ಯಾಂಡಲ್ ವುಡ್ ನಟ ಶ್ರೀ ಝೈದ್ ಖಾನ್ (Zaid Khan) ಅವರು ಇಂದು ಮುಖ್ಯಮಂತ್ರಿಗಳಾದ ಮಾನ್ಯ ಶ್ರೀ ಬಸವರಾಜ್ ಬೊಮ್ಮಾಯಿ (Basavaraja Bommai) ಅವರಿಗೆ ಮನವಿ ಸಲ್ಲಿಸಿದರು.

    ನಮ್ಮ ದೇಶ, ನಾಡು, ನುಡಿಯ ಸಂಕೇತವಾಗಿರುವ ರಾಷ್ಟ್ರ ಗೀತೆ ಹಾಗೂ ನಾಡಗೀತೆಗಳು ಹಿರಿಯರಿಂದ ಕಿರಿಯವರೆಗೂ ಎಲ್ಲರ ಬಾಯಲ್ಲೂ ಮೊಳಗಬೇಕು. ನಾಡಗೀತೆಯ ಮಹತ್ವ ಇಂದಿನ ಮತ್ತು ಮುಂದಿನ ಪೀಳಿಗೆಯ ಹೃದಯದೊಳಗೆ ಇಳಿಯಬೇಕು. ಹಾಗಾಗಿ ಮುಖ್ಯಮಂತ್ರಿಗಳು ರಾಜ್ಯದ ಚಿತ್ರಮಂದಿರಗಳಲ್ಲಿ ಇನ್ನುಮುಂದೆ ರಾಷ್ಟ್ರಗೀತೆಯ ಜೊತೆಗೆ ನಾಡಗೀತೆಯೂ (state anthem) ಮೊಳಗುವಂತೆ ಮಾಡಬೇಕು ಎಂಬುದಾಗಿ ಮನವಿ ಮಾಡಿದ್ದೇವೆ. ಮುಖ್ಯಮಂತ್ರಿಗಳು ಚಲನಚಿತ್ರ ಮಂಡಳಿಯವರೊಂದಿಗೆ ಚರ್ಚಿಸಿ ಈ ಕುರಿತು ತೀರ್ಮಾನ ಕೈಗೊಳ್ಳುವುದಾಗಿ ತಿಳಿಸಿದ್ದಾರೆ ಎಂದು ನಟ ಝೈದ್ ಖಾನ್ ಹೇಳಿದರು.

    ಇದೇ ವೇಳೆ ತಮ್ಮ ಪ್ಯಾನ್ ಇಂಡಿಯಾ ಚಿತ್ರವಾದ ಬನಾರಸ್ ನ್ನು ಬೈಕಾಟ್ ಮಾಡುವ ಕೂಗು ಕೇಳಿ ಬರುತ್ತಿದೆ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, ನಾನು ಒಬ್ಬ ಕಲಾವಿದ. ಪ್ರಾಮಾಣಿಕವಾಗಿ ಈ ಚಿತ್ರಕ್ಕಾಗಿ ಕೆಲಸ ಮಾಡಿದ್ದೇನೆ. ಇದರಲ್ಲಿ ನನ್ನದೇನು ತಪ್ಪಿದೆ? ಸೋಲು ಮತ್ತು ಗೆಲುವು ಎರಡನ್ನೂ ಸಮನಾಗಿ ತೆಗೆದುಕೊಳ್ಳುವ ಸ್ವಭಾವ ನನ್ನದು. ನಾನೂ ಈ ನೆಲದ ಕಲಾವಿದ. ಜನ ಚಿತ್ರ ನೋಡಿ ಆಶೀರ್ವದಿಸುತ್ತಾರೆ ಎಂದು ನಂಬಿದ್ದೇನೆ ಎಂದು ಪ್ರತಿಕ್ರಿಯಿಸಿದರು.

    ಈ ವೇಳೆ ವಿವಿಧ ಕನ್ನಡಪರ ಸಂಘಟನೆ, ದಲಿತಪರ ಸಂಘಟನೆಗಳ ಮುಖಂಡರು ಹಾಗೂ ಮತ್ತಿತರರು ಝೈದ್ ಖಾನ್ ಅವರೊಂದಿಗಿದ್ದರು.

    Live Tv
    [brid partner=56869869 player=32851 video=960834 autoplay=true]