Tag: theatre

  • 18ರ ಯುವತಿ ಆರ್ಯ ವಾಲ್ವೇಕರ್‌ಗೆ ಮಿಸ್ ಇಂಡಿಯಾ USA-2022 ಕಿರೀಟ; ಈಕೆ ಯಾರು ಗೊತ್ತಾ?

    18ರ ಯುವತಿ ಆರ್ಯ ವಾಲ್ವೇಕರ್‌ಗೆ ಮಿಸ್ ಇಂಡಿಯಾ USA-2022 ಕಿರೀಟ; ಈಕೆ ಯಾರು ಗೊತ್ತಾ?

    ವಾಷಿಂಗ್ಟನ್: ಅಮೆರಿಕದ ನ್ಯೂಜೆರ್ಸಿಯಲ್ಲಿ ನಡೆದ 40ನೇ ವಾರ್ಷಿಕೋತ್ಸವ ಸ್ಪರ್ಧೆಯಲ್ಲಿ ವರ್ಜೀನಿಯಾದ 18ರ ಯುವತಿ (ಭಾರತೀಯ ಅಮೆರಿಕನ್) ಆರ್ಯ ವಾಲ್ವೇಕರ್ `ಮಿಸ್ ಇಂಡಿಯಾ USA-2022′ ಕಿರೀಟ ಮುಡಿಗೇರಿಸಿಕೊಂಡಿದ್ದಾರೆ.

    ಯುಎಸ್‌ನ 30 ರಾಜ್ಯಗಳಿಂದ 74 ಸ್ಪರ್ಧಿಗಳು ಮಿಸ್ ಇಂಡಿಯಾ ಯುಎಸ್‌ಎ, ಮಿಸೆಸ್ ಇಂಡಿಯಾ ಯುಎಸ್‌ಎ ಹಾಗೂ ಮಿಸ್ ಟೀನ್ ಇಂಡಿಯಾ ಯುಎಸ್‌ಎ ವಿಭಾಗಗಳಲ್ಲಿ ಭಾಗವಹಿಸಿದ್ದರು. ವಾಷಿಂಗ್ಟನ್‌ನ ಅಕ್ಷಿ ಜೈನ್ ಮಿಸೆಸ್ ಇಂಡಿಯಾ ಯುಎಸ್‌ಎ, ನ್ಯೂಯಾರ್ಕ್ನ ತನ್ವಿ ಗ್ರೂವರ್ ಮಿಸ್ ಟೀನ್ ನ್ಯೂಯಾರ್ಕ್ ಕಿರೀಟ ಧರಿಸಿದರೆ ಭಾರತೀಯ ಅಮೆರಿಕನ್ನರಾದ ವಾಲ್ಟೇಕರ್ ಮಿಸ್ ಇಂಡಿಯಾ ಕಿರೀಟ ಧರಿಸಿದ್ದಾರೆ. ಇದನ್ನೂ ಓದಿ: 9 ವರ್ಷಗಳ ಹಿಂದೆ ಕಿಡ್ನ್ಯಾಪ್‌ ಆಗಿದ್ದ ಬಾಲಕಿ ಪೋಸ್ಟರ್ ಸಹಾಯದಿಂದ ಹೆತ್ತವರ ಮಡಿಲಿಗೆ

    ಈ ವೇಳೆ ತನ್ನ ಖುಷಿಯನ್ನು ಹಂಚಿಕೊಂಡಿರುವ ವಾಲ್ಟೇಕರ್, `ನನ್ನನ್ನು ಬೆಳ್ಳಿ ತೆರೆಯಲ್ಲಿ ನೋಡುವುದು, ಚಲನಚಿತ್ರ ಹಾಗೂ ಟಿವಿಯಲ್ಲಿ ಕೆಲಸ ಮಾಡುವುದು ನನ್ನ ಕನಸಾಗಿತ್ತು’ ಎಂದು ಅವರು ಹೇಳಿಕೊಂಡಿದ್ದಾರೆ. ಈ ಕುರಿತ ಫೋಟೋಗಳನ್ನು ಟ್ವೀಟ್‌ನಲ್ಲಿ ಹಂಚಿಕೊಂಡಿದ್ದಾರೆ.

    ಪ್ರಪಂಚದಾದ್ಯಂತ ಇರುವ ಭಾರತೀಯ ಸಮುದಾಯಕ್ಕೆ, ಅವರು ನೀಡಿದ ಸಹಕಾರಕ್ಕೆ ನಾನು ಧನ್ಯವಾದ ಹೇಳಲು ಬಯಸುತ್ತೇನೆ ಎಂದು ಹರ್ಷ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: CWG 2022: ಟ್ರಿಪಲ್ ಜಂಪ್‍ನಲ್ಲಿ ಡಬಲ್ ಧಮಾಕ – ಎಲ್ದೋಸ್ ಪೌಲ್‍ಗೆ ಚಿನ್ನ, ಅಬ್ದುಲ್ಲಾ ಅಬೂಬಕರ್‌ಗೆ ಕಂಚು

    ಯಾರಿದು ವಾಲ್ಟೇಕರ್?
    ವರ್ಜೀನಿಯಾದ ಬ್ರಿಯಾರ್ ವುಡ್ಸ್ ಪ್ರೌಢಶಾಲೆಯ ಹಿರಿಯ ವಿದ್ಯಾರ್ಥಿನಿ ಆರ್ಯ ವಾಲ್ವೇಕರ್ 18 ವರ್ಷದ ಯುವತಿ. ಈಕೆ ವಿವಿಧ ಜಾಗೃತಿ ಅಭಿಯಾನಗಳನ್ನ ಮಾಡಿದ್ದು, ಟಿಇಡಿಎಕ್ಸ್ ಕಾರ್ಯಕ್ರಮಗಳಲ್ಲಿ ಆರೋಗ್ಯಕರ ಮರುಚಿಂತನೆಯ ಉಪನ್ಯಾಸ ನೀಡಿದ್ದಾರೆ. ಯುಫೋರಿಯಾ ಡ್ಯಾನ್ಸ್ ಸ್ಟುಡಿಯೋದ ಸಂಸ್ಥಾಪಕರಾಗಿರುವ ವಾಲ್ವೇಕರ್, ಸ್ಥಳೀಯ ಮಕ್ಕಳಿಗೆ ಕಡಿಮೆ ಶುಲ್ಕದಲ್ಲೇ ನೃತ್ಯ ಹೇಳಿಕೊಡುತ್ತಿದ್ದಾರೆ.

    18 ವರ್ಷದ ವಾಲ್ವೇಕರ್ ಶಾಲೆ ಮತ್ತು ಸಮುದಾಯ ರಂಗಭೂಮಿ ಚಟುವಟಿಕೆಗಳಲ್ಲೂ ಭಾಗವಹಿಸಿದ್ದಾರೆ. ಮಕ್ಕಳ ನಾಟಕಗಳಿಗೆ ನಿರ್ದೇಶಕರಾಗಿ ಸ್ವಯಂ ಸೇವಕರಾಗಿ ಕೆಲಸ ಮಾಡಿದ್ದಾರೆ. ಅಡುಗೆ ಮಾಡುವುದು, ಚರ್ಚೆ ಮಾಡುವುದು ಇವರ ಹವ್ಯಾಸವಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

    Live Tv
    [brid partner=56869869 player=32851 video=960834 autoplay=true]

  • ಕೆಜಿಎಫ್-2 ಸಿನಿಮಾ ವೀಕ್ಷಣೆ ವೇಳೆ ಹಾರಿದ ಗುಂಡು- ಯುವಕನ ಹೊಟ್ಟೆಗೆ ಗಾಯ

    ಕೆಜಿಎಫ್-2 ಸಿನಿಮಾ ವೀಕ್ಷಣೆ ವೇಳೆ ಹಾರಿದ ಗುಂಡು- ಯುವಕನ ಹೊಟ್ಟೆಗೆ ಗಾಯ

    ಹಾವೇರಿ: ಸಿನಿಮಾ ವೀಕ್ಷಣೆ ಮಾಡುವ ಸಂದರ್ಭದಲ್ಲಿ ಗುಂಡು ಹಾರಿದ ಪರಿಣಾಮ ಯುವಕನೊಬ್ಬನ ಹೊಟ್ಟೆಗೆ ಗಾಯವಾದ ಘಟನೆ ಹಾವೇರಿಯಲ್ಲಿ ನಡೆದಿದೆ.

    ಗಾಯಾಳುವನ್ನು ವಸಂತ ಕುಮಾರ್ ಎಂದು ಗುರುತಿಸಲಾಗಿದೆ. ಈ ಘಟನೆ ಹಾವೇರಿ ಜಿಲ್ಲೆ ಶಿಗ್ಗಾಂವಿ ಪಟ್ಟಣದ ರಾಜೇಶ್ವರಿ ಚಿತ್ರಮಂದಿರದಲ್ಲಿ ನಡೆದಿದೆ. ಕೆಜಿಎಫ್ 2 ಚಿತ್ರ ವೀಕ್ಷಣೆ ವೇಳೆ ಗುಂಡುಹಾರಿದೆ. ಈ ಗುಂಡು ವಸಂತ ಕುಮಾರ್ ಹೊಟ್ಟೆಗೆ ತಗುಲಿದೆ. ಕೂಡಲೇ ಗಾಯಾಳುವನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

    ಚಿತ್ರಮಂದಿರದಲ್ಲಿ ಗುಂಡು ಹಾರಿರುವುದನ್ನು ಎಸ್‍ಪಿ ಹನುಮಂತರಾಯ ಖಚಿತಪಡಿಸಿದ್ದಾರೆ. ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳ ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಶಿಗ್ಗಾಂವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಪಿಎಸ್‍ಐ ಕೇಸ್- ಬುಧವಾರದಿಂದ ಅಭ್ಯರ್ಥಿಗಳ ವಿಚಾರಣೆ

    kgf 2

    ಇತ್ತ ಬಾಕ್ಸಾಫೀಸ್‍ನಲ್ಲಿ ಕೆಜಿಎಫ್-2 ಧೂಳೆಬ್ಬಿಸುತ್ತಿದೆ. ವಾರದ ದಿನಗಳಲ್ಲೂ ಗಳಿಕೆಯಲ್ಲಿ ಹಿಂದೆ ಬಿದ್ದಿಲ್ಲ. ಸೋಮವಾರವಾದ ನಿನ್ನೆ ಹಿಂದಿ ಅವತರಣಿಕೆಯ ಕೆಜಿಎಫ್-ಚಾಪ್ಟರ್ 2 ಸಿನಿಮಾ 25.57 ಕೋಟಿ ಗಳಿಸಿ ಎಲ್ಲರನ್ನು ಬೆರಗಾಗಿಸಿದೆ. ಈವರೆಗೂ ಹಿಂದಿ ಮಾರ್ಕೆಟ್ ಒಂದ್ರಲ್ಲೇ 219.6 ಕೋಟಿ ರೂಪಾಯಿ ಗಳಿಸಿದೆ. ದಂಗಲ್ ಸಿನಿಮಾದ ಮೊದಲ ವಾರದ ಗಳಿಕೆ 270 ಕೋಟಿ.. ಕೆಜಿಎಫ್-2 ಸಿನಿಮಾದ ಸದ್ಯದ ವೇಗ ನೋಡಿದ್ರೇ ದಂಗಲ್ ಸಿನಿಮಾದ ದಾಖಲೆಯನ್ನು ಉಡೀಸ್ ಮಾಡೋದು ಖಚಿತ ಎಂಬಂತೆ ಕಾಣುತ್ತಿದೆ.

    rrr - kgf

    ರಾಜಮೌಳಿಯ ಆರ್‍ಆರ್‍ಆರ್ ಸಿನಿಮಾ ಕಳೆದ 25 ದಿನಗಳಲ್ಲಿ ಹಿಂದಿ ಮಾರ್ಕೆಟ್‍ನಲ್ಲಿ ಗಳಿಸಿದ್ದು 255 ಕೋಟಿ.. ಈ ದಾಖಲೆಯನ್ನು ಆರನೇ ದಿನಕ್ಕೆ ಕೆಜಿಎಫ್2 ಬ್ರೇಕ್ ಮಾಡಿದೆ. ಇನ್ನು 5 ದಿನದಲ್ಲಿ ಕೆಜಿಎಫ್ 625.12 ಕೋಟಿ ಕಲೆಕ್ಷನ್ ಮಾಡಿದೆ.

  • ಮೈಸೂರಿನಲ್ಲಿರುವ ಪ್ರವಾಸಿತಾಣಗಳಿಗೆ ಜಾರಿಯಾಗುತ್ತಾ ಟಫ್‍ರೂಲ್ಸ್..?

    ಮೈಸೂರಿನಲ್ಲಿರುವ ಪ್ರವಾಸಿತಾಣಗಳಿಗೆ ಜಾರಿಯಾಗುತ್ತಾ ಟಫ್‍ರೂಲ್ಸ್..?

    ಮೈಸೂರು: ಕೊರೊನಾ ಮೂರನೇ ಅಲೆಯ ದೊಡ್ಡ ಅಪಾಯ ಮೈಸೂರಿನ ಮೇಲೆ ಅಪ್ಪಳಿಸಿದೆ. ಒಂದೇ ವಾರದಲ್ಲಿ ಮೈಸೂರಲ್ಲಿ ಕೊರೊನಾ ದೊಡ್ಡ ಮಟ್ಟದಲ್ಲಿ ಸ್ಫೋಟವಾಗಿವೆ. ಹೀಗಾಗಿ ಜಿಲ್ಲೆಯ ಪ್ರವಾಸಿತಾಣ ಸೇರಿದಂತೆ ಇತರ ಸಾರ್ವಜನಿಕ ಸ್ಥಳಗಳಲ್ಲಿ ಟಫ್‍ರೂಲ್ಸ್ ಜಾರಿ ತರಲು ಜಿಲ್ಲಾಡಳಿತ ಚಿಂತನೆ ನಡೆಸಿದೆ.

    ರಾಜ್ಯದ ಪ್ರವಾಸಿತಾಣಗಳಲ್ಲಿ ಒಂದಾಗಿರುವ ಹಾಗೂ ಪ್ರವಾಸಿಗರ ನೆಚ್ಚಿನ ತಾಣವಾಗಿರುವ ಮೈಸೂರಿಗೆ 3ನೇ ಅಲೆಯ ಭೀತಿ ಎದುರಾಗಿದೆ. ನೋಡನೋಡ್ತಿದ್ದಂತೆ ಕೊರೊನಾ ಬಿಗ್‍ಬ್ಲಾಸ್ಟ್ ಆಗಿ, ಪಾಸಿಟಿವಿಟಿ ರೇಟ್ ಹೆಚ್ಚಾಗಿದೆ. ಅಲ್ಲದೆ ರಾಜಧಾನಿ ಬೆಂಗಳೂರಿಗೆ ಹತ್ತಿರವಾದ ಕಾರಣ ದಿನನಿತ್ಯ ಕೆಲಸಕ್ಕಾಗಿ ಓಡಾಡುವರ ಸಂಖ್ಯೆಯೂ ದಿನದಿಂದ ದಿನಕ್ಕೆ ಏರುತ್ತಲೇ ಸಾಗಿದೆ. ಪ್ರತಿನಿತ್ಯ ಸಾವಿರಾರು ಪ್ರಯಾಣಿಕರು ರೈಲು ಹಾಗೂ ಬಸ್‍ಗಳ ಮೂಲಕ ಪ್ರಯಾಣಿಸುತ್ತಲೇ ಇರುತ್ತಾರೆ. ಇದಕ್ಕೆ ಕಡಿವಾಣ ಹಾಕುವುದೇ ಜಿಲ್ಲಾಡಾಳಿತಕ್ಕೆ ಸವಾಲಿನ ಕೆಲಸವಾಗಿದೆ.

    ಕಳೆದ ಒಂದು ವಾರದಿಂದ ಸೋಂಕಿನ ಸಂಖ್ಯೆ ಸಾವಿರ ಗಡಿ ದಾಟುತ್ತಲೆ ಸಾಗಿದೆ. ನಿನ್ನೆ 1892 ಕೊರೊನಾ ಕೇಸ್ ಬಂದಿದೆ. ದಿನ ದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವುದು ಸ್ಥಳೀಯರಲ್ಲಿ ಹಾಗೂ ಜಿಲ್ಲಾಡಾಳಿತಕ್ಕೆ ಚಿಂತೆಗೇಡು ಮಾಡಿದೆ. ಬೆಂಗಳೂರಿನಿಂದ ಮೈಸೂರಿಗೆ ನಿತ್ಯ ಓಡಾಡೋರ ಸಂಖ್ಯೆಯಲ್ಲಿ ಹೆಚ್ಚಳ. ಪ್ರವಾಸಿ ಕೇಂದ್ರಗಳನ್ನು ಇನ್ನೂ ತೆರೆದಿರುವುದು. ಪ್ರವಾಸಿ ಕೇಂದ್ರಗಳಲ್ಲಿ ಜನರ ನಿಯಂತ್ರಿಸುವಲ್ಲಿ ವಿಫಲವಾಗಿರುವುದು. ಕಾರ್ಖಾನೆಗಳಲ್ಲಿ ಕಾರ್ಮಿಕರ ನಿಯಂತ್ರಣಕ್ಕೆ ಸೂಕ್ತ ಕ್ರಮ ಜರುಗಿಸದೇ ಇರುವುದು. ಹಾಗೂ ಜನರು ರೂಲ್ಸ್ ಮರೆತು ಓಡಾಡುವುದೇ ಮೈಸೂರಲ್ಲಿ ಸೋಂಕು ಹೆಚ್ಚಳವಾಗಲು ಮುಖ್ಯ ಕಾರಣವಾಗಿದೆ. ಇದನ್ನೂ ಓದಿ: 11 ವರ್ಷದವರೆಗೆ ಮಾಸ್ಕ್ ಕಡ್ಡಾಯವಲ್ಲ: ಕೇಂದ್ರ

    ವೀಕೆಂಡ್ ಕರ್ಫ್ಯೂ ಹಾಗೂ ಸಿನಿಮಾ ಮಂದಿರಗಳಲ್ಲಿ ಸೀಟು ಭರ್ತಿಗೆ 50-50 ನಿಯಮ ಹಿನ್ನೆಲೆಯಲ್ಲಿ ಸಂಕಷ್ಟಕ್ಕೆ ಸಿಲುಕಿದ ಚಿತ್ರಮಂದಿರಗಳ ಮಾಲೀಕರು, ಇಂದಿನಿಂದ ಮೈಸೂರಿನಲ್ಲಿ ಚಲನಚಿತ್ರ ಮಂದಿರಗಳನ್ನು ಬಂದ್ ಮಾಡುವ ನಿರ್ಧಾರ ಪ್ರಕಟಿಸಿದ್ದಾರೆ. ರೂಲ್ಸ್ ಮುಗಿಯೋವರೆಗೆ ಚಿತ್ರಮಂದಿರ ಬಂದ್ ಆಗಿರಲಿವೆ. ಇತ್ತ ಮೈಸೂರಂದ್ರೆ ಪ್ರವಾಸಿಗರ ಹಾಟ್‍ಸ್ಪಾಟ್. ಕೊರೊನಾ ಹೆಚ್ಚಾಗ್ತಿದ್ರೂ ಜಿಲ್ಲಾಡಳಿತ ಮಾತ್ರ ಪ್ರವಾಸಿತಾಣಗಳ ಮೇಲೆ ಕ್ರಮ ಕೈಗೊಂಡಿಲ್ಲ. ಹಾಗಾಗಿ ನಿತ್ಯ ಸಾವಿರಾರು ಸಂಖ್ಯೆಯ ಪ್ರವಾಸಿಗರು ಬರ್ತಾನೇ ಇದ್ದಾರೆ. ಈಗ ಕೊರೊನಾ ಡಬ್ಲಿಂಗ್ ಆಗ್ತಿರೋ ಹೊತ್ತಲ್ಲಿ ಪ್ರವಾಸಿತಾಣಗಳಿಗೆ ಕಠಿಣ ನಿಯಮ ತರುವ ಸಾಧ್ಯತೆ ಇದೆ.

  • ಕಾರ್‌ನಲ್ಲೇ ಕುಳಿತು ಸಿನಿಮಾ ನೋಡುವ ಓಪನ್ ಥಿಯೇಟರ್‌ಗೆ ಚಾಲನೆ

    ಕಾರ್‌ನಲ್ಲೇ ಕುಳಿತು ಸಿನಿಮಾ ನೋಡುವ ಓಪನ್ ಥಿಯೇಟರ್‌ಗೆ ಚಾಲನೆ

    ಮುಂಬೈ: ದೇಶದ ಮೊಟ್ಟ ಮೊದಲ ರೂಫ್ ಟಾಪ್ ಡ್ರೈವ್ ಇನ್( ಓಪನ್ ಥಿಯೇಟರ್) ಸಿನಿಮಾ ಥಿಯೇಟರ್ ಮುಂಬೈನಲ್ಲಿ ಶುಕ್ರವಾರದಿಂದ ಪ್ರಾರಂಭವಾಗಿದೆ.

    ದೇಶದ ಮೊದಲ ಓಪನ್ ಥಿಯೇಟರ್ ಪ್ರಾರಂಭವಾಗಿದೆ. ಜಿಯೋ ವರ್ಲ್ಡ್ ಡ್ರೈವ್ ಇನ್ ಮಾಲ್‍ನಲ್ಲಿರುವ ಜಿಯೋ ಡ್ರೈವ್ ಇನ್ ಥಿಯೇಟರ್ ಭಾರತದ ದೊಡ್ಡ ಪರದೆ ಹೊಂದಿದ ಥಿಯೇಟರ್‌‌ಗಳಲ್ಲಿ ಒಂದಾಗಿದೆ.

    ಕೊರೊನಾ ವೈರಸ್ ಸಾಂಕ್ರಾಮಿಕದ ನಂತರ ಜಗತ್ತು ಇನ್ನೂ ಹೊಸ ಜೀವನಕ್ಕೆ ಹೊಂದಿಕೊಳ್ಳುತ್ತಿರುವುದರಿಂದ, ಡ್ರೈವ್-ಇನ್ ಥಿಯೇಟರ್ ಅನ್ನು ಚಲನಚಿತ್ರ ಅಭಿಮಾನಿಗಳಿಗೆ ಸುರಕ್ಷಿತವಾದ ಮುಕ್ತ ಸ್ಥಳವಾಗಿದೆ. ಬಾಲಿವುಡ್ ನಟ ಅಕ್ಷಯ್ ಕುಮಾರ್ ಅವರ ಸೂರ್ಯವಂಶಿ ಸಿನಿಮಾ ರೂಫ್‍ಟಾಪ್ ಡ್ರೈವ್-ಇನ್ ಥಿಯೇಟರ್‌ನಲ್ಲಿ ಪ್ರದರ್ಶನ ಕಂಡಿರುವ ಮೊದಲ ಚಲನಚಿತ್ರವಾಗಿದೆ. ಸುಮಾರು 290 ಕಾರ್ ಪಾರ್ಕ್ ಮಾಡುವ ವ್ಯವಸ್ಥೆ. ಸ್ಥಳಾವಕಾಶ ನೀಡಬಹುದಾದ ಡ್ರೈವ್-ಇನ್ ಥಿಯೇಟರ್, ರಿಲಯನ್ಸ್ ರೀಟೈಲ್ ಸಹಭಾಗಿತ್ವದ ಮುಂಬೈನ ಜಿಯೋ ವರ್ಲ್ಡ್ ಡ್ರೈವ್ ಮಾಲ್ ಇದಾಗಿದೆ. ಇದನ್ನೂ ಓದಿ: ದತ್ತಪೀಠಕ್ಕೆ ತೆರಳ್ತಿದ್ದ ಬಸ್ ಮೇಲೆ ಅನ್ಯ ಕೋಮಿನ ಗುಂಪಿನಿಂದ ಕಲ್ಲುತೂರಾಟ

    ಇದರ ವಿಶೇಷತೆ ಏನು?
    * ರೂಪ್ ಟಾಪ್ ಡ್ರೈವ್ ಇನ್ ಥಿಯೇಟರ್‍ನಲ್ಲಿ 290 ಕಾರು ಪಾರ್ಕ್ ಮಾಡುವ ವ್ಯವಸ್ಥೆ.
    * ಕ್ರಿಸ್ಟಿ ಆರ್‌ಜಿಬಿ ಲೇಸರ್‌ ಪ್ರೊಜೆಕ್ಷನ್‍ನಿಂದ ಸಿನಿಮಾ ಪ್ರದರ್ಶನ
    * ದೇಶದಲ್ಲೇ ಅತೀ ದೊಡ್ಡ ಪ್ರದರ್ಶನ ಪರದೆ ಹೊಂದಿರುವ ಚಿತ್ರ ಮಂದಿರದಲ್ಲಿ 24 ಮೀಟರ್
    * ಪ್ರತಿ ಕಾರಿಗೆ 1,200ರೂಪಾಯಿ ಟಿಕೆಟ್ ಶುಲ್ಕವಾಗಿರುತ್ತದೆ. ನಾಲ್ಕು ಮಂದಿ ಮಾತ್ರ ವಾಹನದಲ್ಲಿ ಕುಳಿತು ಸಿನಿಮಾ ನೋಡಬಹುದಾಗಿದೆ. ಇದನ್ನೂ ಓದಿ: ಕಾಲೇಜಿನಲ್ಲಿ ವಿದ್ಯಾರ್ಥಿಗಳ 250 ಮೊಬೈಲ್ ಜಪ್ತಿ – ಫೋನ್ ನೋಡಿ ಪೋಷಕರು ಶಾಕ್

  • ಅ. 1ರಿಂದ ಥಿಯೇಟರ್‌ಗಳು ಹೌಸ್‍ಫುಲ್- ಕಂಡೀಷನ್ಸ್ ಅಪ್ಲೈ

    ಅ. 1ರಿಂದ ಥಿಯೇಟರ್‌ಗಳು ಹೌಸ್‍ಫುಲ್- ಕಂಡೀಷನ್ಸ್ ಅಪ್ಲೈ

    ಬೆಂಗಳೂರು: ರಾಜ್ಯದಲ್ಲಿ ನೈಟ್ ಕರ್ಫ್ಯೂ ನಲ್ಲಿ ಸಡಿಲಿಕೆ ಮಾಡಲಾಗಿದ್ದು, ಅಕ್ಟೋಬರ್ 1ರಿಂದ ಥಿಯೇಟರ್ ಗಳಲ್ಲಿ ಹೌಸ್ ಫುಲ್ ಗೆ ಅನುಮತಿ ನೀಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

    ತಜ್ಞರ ಜೊತೆಗೆ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದಿನಿಂದ ರಾಜ್ಯದಲ್ಲಿ ನೈಟ್ ಕರ್ಫ್ಯೂ ಅವಧಿಯನ್ನು ರಾತ್ರಿ 10 ರಿಂದ ಬೆಳಗ್ಗಿನ ಜಾವ 5 ರವರೆಗೆ ನಿಗದಿಗೊಳಿಸಲಾಗಿದೆ.

    ಅಕ್ಟೋಬರ್ 3ರಿಂದ ಪಬ್ ಹಾಗೂ ಕ್ಲಬ್ ಗಳಿಗೆ ಅನುಮತಿ ನೀಡಲಾಗುತ್ತದೆ. ರಾಜ್ಯದಲ್ಲಿ ಪ್ರಸ್ತುತ ಕೋವಿಡ್ ಪಾಸಿಟಿವಿಟಿ ಸರಾಸರಿ ದರ ಶೇ.0.66 ಇದೆ. ಅಕ್ಟೋಬರ್ 1ರಿಂದ ಕೋವಿಡ್ ಪಾಸಿಟಿವ್ ದರ ಶೇ.1ಕ್ಕಿಂತ ಕಡಿಮೆ ಇರುವ ಜಿಲ್ಲೆಗಳಲ್ಲಿ ಶೇ.100ರಷ್ಟು ಸೀಟು ಭರ್ತಿಗೆ ಅವಕಾಶ ನಿಡಲಾಗುವುದು.

    ಪಾಸಿಟಿವಿಟಿ ದರ ಶೇ.1ಕ್ಕಿಂತ ಜಾಸ್ತಿ ಆದರೆ ಶೇ.50ರಷ್ಟು ಸೀಟು ಭರ್ತಿ ಹಾಗೂ ಶೇ.2ಕ್ಕಿಂತ ಜಾಸ್ತಿಯಾದರೆ ಚಿತ್ರ ಮಂದಿರ ಬಂದ್ ಮಾಡಲಾಗುವುದು. ಇದೇ ಮಾನದಂಡ ಪಬ್ ಗಳಿಗೂ ಅನ್ವಯವಾಗಲಿದೆ ಎಂದು ಸಿಎಂ ಮಾಹಿತಿ ನಿಡಿದರು.

    ಕನಿಷ್ಠ 1 ಡೋಸ್ ಲಸಿಕೆ ಹಾಕಿಸಿಕೊಂಡವರಿಗೆ ಮಾತ್ರ ಪ್ರವೇಶ ಅವಕಾಶ ನೀಡಲಾಗುವುದು. ಗರ್ಭಿಣಿಯರು ಮತ್ತು ಮಕ್ಕಳಿಗೆ ಅವಕಾಶ ನೀಡದಿರಲು ಸಭೆಯಲ್ಲಿ ನಿರ್ಧರಿಸಲಾಯಿತು. ಇದನ್ನೂ ಓದಿ:  ನಟ ದುನಿಯಾ ವಿಜಯ್ ನೋಡಲು ಮುಗಿಬಿದ್ದ ಅಭಿಮಾನಿಗಳು!

    6ರಿಂದ 12ನೇ ತರಗತಿಯವರೆಗೆ ಶೇ.100ರಷ್ಟು ಹಾಜರಾತಿಗೆ ಅವಕಾಶ ನೀಡಲು ನಿರ್ಧರಿಸಿದ್ದು, ವಾರದಲ್ಲಿ 5 ದಿನ ಅಂದರೆ ಸೋಮವಾರದಿಂದ ಶುಕ್ರವಾರವದರೆಗೆ ಶಾಲಾ-ಕಾಲೇಜುಗಳನ್ನು ನಡೆಸಲು ನಿರ್ಧರಿಸಲಾಯಿತು.

    ಯಾದಗಿರಿ, ರಾಯಚೂರು, ಕಲಬುರಗಿ ಹಾಗೂ ಮೈಸೂರು ಜಿಲ್ಲೆಯಲ್ಲಿ ಲಸಿಕೆ ಅಭಿಯಾನ ತೀವ್ರಗೊಳಿಸಿ ಜನರಲ್ಲಿ ಅರಿವು ಮೂಡಿಸಲು ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳಲು ಸೂಚಿಸಲಾಯಿತು. ಅಲ್ಲದೆ ಗಡಿ ಭಾಗದಲ್ಲಿ ಹೆಚ್ಚು ನಿಗಾವಹಿಸಲು ಸೂಚಿಸಿರುವುದಾಗಿ ಸಿಎಂ ಹೇಳಿದರು. ಇದನ್ನೂ ಓದಿ: ಆಶ್ರಯ ನೀಡಿದ ಅಭಿಮಾನಿಯೊಂದಿಗೆ ಕಿರಿಕ್- ಮನೆ ಬಿಟ್ಟು ಬಂದ ನಟಿ ವಿಜಯಲಕ್ಷ್ಮಿ

    ದಸರಾ ಆಚರಣೆ ಬಗ್ಗೆ ಪ್ರತ್ಯೇಕ ಮಾರ್ಗಸೂಚಿ ಹೊರಡಿಸುವುದಾಗಿ ಸಿಎಂ ಇದೇ ವೇಲೆ ಹೇಳಿದರು. ಸ್ವಿಮ್ಮಿಂಗ್ ಪೂಲ್ ಗೆ ಈಗ ಇರುವ ಮಾರ್ಗಸೂಚಿಗಳು ಯಥಾಸ್ಥಿತಿ ಅನ್ವಯವಾಗಲಿದೆ.

  • ಸಂಚಾರಿ ವಿಜಯ್‍ಗೆ ಅಮೆರಿಕದ ಥಿಯೇಟರ್ ನಿಂದ ಗೌರವ

    ಸಂಚಾರಿ ವಿಜಯ್‍ಗೆ ಅಮೆರಿಕದ ಥಿಯೇಟರ್ ನಿಂದ ಗೌರವ

    ವಾಷಿಂಗ್ಟನ್: ರಾಷ್ಟ್ರ ಪ್ರಶಸ್ತಿ ಪುರಸ್ಕೃತ ನಟ ಸಂಚಾರಿ ವಿಜಯ್ ಅವರಿಗೆ ಅಮೆರಿಕಾದ ಫ್ರಾಂಕ್ಲಿನ್ ಥಿಯೇಟರ್ ವತಿಯಿಂದ ವಿಭಿನ್ನವಾಗಿ ಗೌರವ ಸಲ್ಲಿಸಲಾಗಿದೆ.

    ನಾನು ಅವನಲ್ಲ ಅವಳು, ಹರಿವು, ನಾತಿಚರಾಮಿ ಖ್ಯಾತಿಯ ನಟ ಸಂಚಾರಿ ವಿಜಯ್ ಅವರು ಜೂನ್ 15ರಂದು ಕೊನೆಯುಸಿರೆಳೆದಿದ್ದರು. ಅವರಿಗೆ ಗೌರವ ಸಲ್ಲಿಸಲು ಅಮೆರಿಕದ ಪ್ರತಿಷ್ಠಿತ ಫ್ರಾಂಕ್ಲಿನ್ ಥಿಯೇಟರ್ ವತಿಯಿಂದ ಒಂದು ಸಂದೇಶವನ್ನು ಬಿತ್ತರಿಸಲಾಗಿದೆ.

    ‘Always in our Heart, Sanchari Vijay, Gone Yet Not Forgotten’ ಇದು ಅಮೆರಿಕದ ಪ್ರತಿಷ್ಠಿತ ಫ್ರಾಂಕ್ಲಿನ್ ಥಿಯೇಟರ್‌ನಲ್ಲಿ ಪ್ರಸಾರವಾಗುತ್ತಿರುವ ಸಂದೇಶ. ಈ ಸಂದೇಶ 24 ಗಂಟೆಗಳ ಕಾಲ ಥಿಯೇಟರ್ ಬೋರ್ಡ್ ಮೇಲೆ ಡಿಸ್‍ಪ್ಲೇ ಆಗಿದೆ. ಅತ್ಯದ್ಭುತ ಕಲಾವಿದ ಸಂಚಾರಿ ವಿಜಯ್‍ಗೆ ಫ್ಲಾಂಕ್ಲಿನ್ ಥಿಯೇಟರ್‍ನವರು ಸಲ್ಲಿಸಿದ ಗೌರವ ಇದಾಗಿದೆ. ಅಂದಹಾಗೆ,  ಅಮೆರಿಕದಲ್ಲಿ ವಾಸಿಸುತ್ತಿರುವ ಕನ್ನಡಿಗ, ಸಿನಿಮಾ ನಿರ್ಮಾಪಕ ರವಿ ಕಶ್ಯಪ್ ಅವರಿಂದ ಈ ಒಂದು ಗೌರವ ಸಲ್ಲಿಕೆ ಸಾಧ್ಯವಾಗಿದೆ.

    ವಿಜಯ್‍ಗೆ ರಾಷ್ಟ್ರ ಪ್ರಶಸ್ತಿ ಬಂದಿದ್ದು ಬಿ.ಎಸ್. ಲಿಂಗದೇವರು ನಿರ್ದೇಶನ ಮಾಡಿದ್ದ ನಾನು ಅವನಲ್ಲ ಅವಳು ಸಿನಿಮಾದಿಂದ. ಇದೀಗ ಲಿಂಗದೇವರು ಅವರು ಫ್ರಾಂಕ್ಲಿನ್ ಚಿತ್ರಮಂದಿರದವರಿಗೆ ಧನ್ಯವಾದಗಳನ್ನು ತಿಳಿಸಿದ್ದಾರೆ. ಅಮೆರಿಕದ ಫ್ರಾಂಕ್ಲಿನ್ ಥಿಯೇಟರ್‍ನವರು ವಿಜಯ್ ನೆನಪಲ್ಲಿ ಇಂದು ಮೆಸೇಜ್ ಪ್ರದರ್ಶನ ಮಾಡುವ ಮೂಲಕ ಗೌರವ ಸೂಚಿಸಿದ್ದಾರೆ. ಅಗಲಿದ ಕನ್ನಡದ ಕಲಾವಿದನನ್ನು ಗುರುತಿಸಿದ ಫ್ರಾಂಕ್ಲಿನ್ ಥಿಯೇಟರ್ ಮತ್ತು ಕಾರಣಕರ್ತರಾದ ರವಿ ಕಶ್ಯಪ್ ರವರಿಗೆ ವಂದನೆಗಳು ಎಂದಿದ್ದಾರೆ ಅವರು.

    ಜೂನ್ 12ರ ತಡರಾತ್ರಿ ಬೈಕ್‍ನಲ್ಲಿ ಬರುವಾಗ ವಿಜಯ್‍ಗೆ ಅಪಘಾತವಾಗಿತ್ತು. ತಲೆಗೆ ಬಲವಾದ ಪೆಟ್ಟು ಬಿದ್ದಿದ್ದರಿಂದ ಅವರು ಕೋಮಗೆ ಜಾರಿದ್ದರು. ನಂತರ ವೈದ್ಯರು ಎಷ್ಟೇ ಪ್ರಯತ್ನಪಟ್ಟರು ಅವರನ್ನು ಉಳಿಸಿಕೊಳ್ಳಲು ಸಾಧ್ಯವಾಗಲಿಲ್ಲ. ಜೂನ್ 14ರ ವೇಳೆಗೆ ಅವರ ಮೆದುಳು ನಿಷ್ಕ್ರೀಯಗೊಂಡಿದ್ದರಿಂದ ಅವರ ಅಂಗಾಂಗ ದಾನಕ್ಕೆ ಕುಟುಂಬದವರು ನಿರ್ಧಾರ ಮಾಡಿದ್ದರು. ನಂತರ ಅವರ ಅಂಗಾಂಗಗಳನ್ನು ಅವಶ್ಯಕವಿರುವ ರೋಗಿಗಳಿಗೆ ನೀಡಲಾಗಿತ್ತು. ಸಾವಿನಲ್ಲೂ ವಿಜಯ್ ಸಾರ್ಥಕತೆಯನ್ನು ಮರೆದಿದ್ದಾರೆ. ಅತ್ಯದ್ಭುತ ಕಲಾವಿದನಿಗೆ ಅಮೆರಿಕಾರದಲ್ಲಿ ಹೀಗೆ ವಿಭಿನ್ನವಾಗಿ ಗೌರವ ಸಲ್ಲಿಸಿರುವುದು ಎಲ್ಲರ ಮೆಚ್ಚಿಗೆಗೆ ಪಾತ್ರವಾಗಿದೆ.

  • ಚಿತ್ರರಂಗದ ಆಕ್ರೋಶಕ್ಕೆ ಮಣಿದ ಸರ್ಕಾರ- ಥಿಯೇಟರ್‌ಗಳಲ್ಲಿ ಹೌಸ್‍ಫುಲ್‍ಗೆ ಗ್ರೀನ್ ಸಿಗ್ನಲ್

    ಚಿತ್ರರಂಗದ ಆಕ್ರೋಶಕ್ಕೆ ಮಣಿದ ಸರ್ಕಾರ- ಥಿಯೇಟರ್‌ಗಳಲ್ಲಿ ಹೌಸ್‍ಫುಲ್‍ಗೆ ಗ್ರೀನ್ ಸಿಗ್ನಲ್

    – ಏ.7ರಿಂದ ರೂಲ್ಸ್ ಜಾರಿ

    ಬೆಂಗಳೂರು: ಕೊನೆಗೂ ಚಿತ್ರರಂಗದ ಆಕ್ರೋಶಕ್ಕೆ ಮಣಿದ ಸರ್ಕಾರ ಥಿಯೇಟರ್ ಗಳಲ್ಲಿ ಹೌಸ್ ಫುಲ್ ಪ್ರದರ್ಶನಕ್ಕೆ ಗ್ರೀನ್ ಸಿಗ್ನಲ್ ನೀಡಿದೆ.

    ಹೌದು. ನಿನ್ನೆಯಷ್ಟೇ ಸರ್ಕಾರ ರಾಜ್ಯದ 8 ಜಿಲ್ಲೆಗಳ ಥಿಯೇಟರ್ ಗಳಲ್ಲಿ ಶೇ.50ರಷ್ಟು ವೀಕ್ಷಕರಿಗೆ ಮಾತ್ರ ಅವಕಾಶಕ್ಕಾಗಿ ಆದೇಶ ನೀಡಿತ್ತು. ಸರ್ಕಾರದ ಆದೇಶದ ಬೆನ್ನಲ್ಲೇ ನಟ ಪುನೀತ್ ರಾಜ್ ಕುಮಾರ್, ಯಶ್, ಸುದೀಪ್ ಸೇರಿದಂತೆ ಇಡೀ ಚಿತ್ರರಂಗವೇ ಸರ್ಕಾರದ ವಿರುದ್ಧ ತಿರುಗಿ ಬಿತ್ತು. ಸರ್ಕಾರದ ಆದೇಶಕ್ಕೆ ಖಂಡನೆ ವ್ಯಕ್ತವಾಗಿತ್ತು.

    ಕನ್ನಡ ಸಿನಿಮಾಗಳ ಟಿಕೆಟ್ ಮುಂಗಡ ಬುಕಿಂಗ್ ಆಗಿತ್ತು. ಹೀಗಾಗಿ ನಿರ್ಬಂಧ ಸಡಿಲಿಕೆಗೆ ಚಲನಚಿತ್ರ ವಾಣಿಜ್ಯ ಮಂಡಳಿ ಮತ್ತು ಯುವರತ್ನ ಚಿತ್ರತಂಡ ಇಂದು ಸಂಜೆ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಮನವಿ ಮಾಡಿತ್ತು. ಎಲ್ಲ ಮಾರ್ಗಸೂಚಿಗಳನ್ನೂ ಪಾಲಿಸುತ್ತೇವೆ. ಆದರೆ ಶೇ.100ರಷ್ಟು ಭರ್ತಿಗೆ ಅವಕಾಶ ಮಾಡಿಕೊಡಿ. ಇಲ್ಲವಾದಲ್ಲಿ ತುಂಬಾ ನಷ್ಟವಾಗಲಿದೆ ಎಂದು ಪುನೀತ್ ರಾಜ್ ಕುಮಾರ್ ಮನವಿ ಮಾಡಿಕೊಂಡಿದ್ದರು. ಇದನ್ನೂ ಓದಿ: ಥಿಯೇಟರ್‌ಗಳಲ್ಲಿ ಶೇ.100 ಭರ್ತಿಗೆ ಅವಕಾಶ ನೀಡಿ- ಸಿಎಂಗೆ ಪುನೀತ್ ಮನವಿ

    ಈ ಹಿನ್ನೆಲೆಯಲ್ಲಿ ಚಲನಚಿತ್ರ ವಾಣಿಜ್ಯ ಮಂಡಳಿಯ ಮನವಿ ಪುರಸ್ಕರಿಸಿದ ಸರ್ಕಾರ, ಸಿನಿಮಾ ಥಿಯೇಟರ್ ಗಳಲ್ಲಿ ಏಪ್ರಿಲ್ 7 ರ ವರೆಗೆ ನಿರ್ಬಂಧ ಸಡಿಲಿಕೆ ಮಾಡಿದೆ. ಈ ಮೂಲಕ ಮೂರು ದಿನಗಳ ಕಾಲ ನಿರ್ಬಂಧ ಸಡಿಲಿಕೆ ಮಾಡಿರುವ ಸರ್ಕಾರ, ಏಪ್ರಿಲ್ 6 ರ ಮಧ್ಯರಾತ್ರಿವರೆಗೆ ನಿರ್ಬಂಧ ಸಡಿಲಿಕೆ ಮಾಡಿ ಸಿಎಸ್ ರವಿಕುಮಾರ್ ಆದೇಶ ಹೊರಡಿಸಿದ್ದಾರೆ.

  • ರಾಜಕೀಯ ಸಮಾವೇಶಗಳಲ್ಲಿ ಇಲ್ಲದ ನಿರ್ಬಂಧ ಸಿನಿಮಾ ಥಿಯೇಟರ್‌ಗೆ ಏಕೆ..?: ದುನಿಯಾ ವಿಜಿ

    ರಾಜಕೀಯ ಸಮಾವೇಶಗಳಲ್ಲಿ ಇಲ್ಲದ ನಿರ್ಬಂಧ ಸಿನಿಮಾ ಥಿಯೇಟರ್‌ಗೆ ಏಕೆ..?: ದುನಿಯಾ ವಿಜಿ

    – ಟಫ್ ರೂಲ್ಸ್ ಗಳನ್ನು ಸಡಿಲಿಸುವಂತೆ ಮನವಿ

    ದಾವಣಗೆರೆ: ರಾಜಕೀಯ ಸಮಾವೇಶಗಳಲ್ಲಿ ಸಾವಿರಾರು ಜನ ಸೇರ್ತಾರೆ. ಅದಕ್ಕೆ ನಿರ್ಬಂಧ ಇಲ್ಲ. ಎಲ್ಲೂ ಇಲ್ಲದ ನಿಯಮಗಳು ಸಿನಿಮಾ ಥಿಯೇಟರ್‌ಗೆ ಏಕೆ ಎಂದು ಸ್ಯಾಂಡಲ್‍ವುಡ್ ನಟ ದುನಿಯಾ ವಿಜಯ್ ಪ್ರಶ್ನಿಸಿದ್ದಾರೆ.

    ದಾವಣಗೆರೆ ಜಿಲ್ಲೆ ಹರಿಹರ ತಾಲೂಕಿನ ಹರಿಹರದ ಬೆಳ್ಳೂಡಿ ಕಾಗಿನೆಲೆ ಶಾಖಾ ಮಠದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಥಿಯೇಟರ್‌ಗಳಿಗೆ ಶೇ.50 ರಷ್ಟು ಪ್ರೇಕ್ಷಕರಿಗೆ ಮಾತ್ರ ಅವಕಾಶ ಎಂಬ ಸರ್ಕಾರದ ಅದೇಶಕ್ಕೆ ಪ್ರತಿಕ್ರಿಯಿಸಿದರು. ಅಲ್ಲದೆ ಸರ್ಕಾರದ ವಿರುದ್ಧ ಅಸಮಾಧಾನ ಹೊರ ಹಾಕಿದರು.

    ಎಲ್ಲೂ ಇಲ್ಲದ ನಿಯಮಗಳು ಸಿನಿಮಾ ಥಿಯೇಟರ್‌ಗೆ ಏಕೆ ಎಂದು ಪ್ರಶ್ನಿಸಿದ ಅವರು, ರಾಜಕೀಯ ಸಮಾವೇಶಗಳಲ್ಲಿ ಸಾವಿರಾರು ಜನ ಸೇರ್ತಾರೆ, ಆದರೆ ಅದಕ್ಕೆ ನಿರ್ಬಂಧ ಇಲ್ಲ. ಪುನೀತ್ ರಾಜಕುಮಾರ್ ಒಂದೊಳ್ಳೆ ಸಿನಿಮಾ ಮಾಡಿದ್ದಾರೆ. ಎರಡು ದಿನ ಮೊದಲು ಹೇಳಿದ್ದರೆ ಅವರು ಸಿನಿಮಾ ರಿಲೀಸ್ ಮಾಡುತ್ತಿರಲಿಲ್ಲ. ಬಿಗ್ ಬಜೆಟ್ ಗಳ ಸಿನಿಮಾಗಳಿಗೆ ಈ ರೀತಿ ಆದ್ರೆ ಸಿನಿಮಾ ಇಂಡಸ್ಟ್ರಿ ಉಳಿಯುವುದು ಹೇಗೆ ಎಂದು ಪ್ರಶ್ನಿಸಿ ಕಿಡಿಕಾರಿದ್ದಾರೆ.

    ಪುನಿತ್ ಸಿನಿಮಾ ನೋಡಲು ಫ್ಯಾಮಿಲಿ ಗಳು ಬರ್ತಾ ಇದೆ. ದಯವಿಟ್ಟು ಟಫ್ ರೂಲ್ಸ್‍ಗಳನ್ನು ಸಡಿಲಿಸಿ ಎಂದು ವಿಜಿ ಸರ್ಕಾರಕ್ಕೆ ಮನವಿ ಮಾಡಿದರು. ಕೋವಿಡ್ ಸಂದರ್ಭದಲ್ಲಿ ಪುನೀತ್ ಅವರು ಸರ್ಕಾರಕ್ಕೆ ನಿಧಿ ನೀಡಿದರು. ಅದಕ್ಕೆ ಅಂತ ನಾವು ಕೇಳ್ತಾ ಇಲ್ಲ, ಕನ್ನಡ ಸಿನಿಮಾ ರಂಗ ಉಳಿಯಲು ಕೇಳುತ್ತಿದ್ದೇವೆ ಎಂದರು.

    ಎಲ್ಲಾ ಮಠಗಳ ಮೇಲೆ ಅಭಿಮಾನ ಇದೆ. ನಾನು ಒಂದು ಸಮುದಾಯಕ್ಕೆ ಸೇರಿಲ್ಲ. ನನಗೆ ಎಲ್ಲಿ ಹೋಗಬೇಕು ಅನ್ನಿಸುತ್ತೋ ಅಲ್ಲಿ ಹೋಗುತ್ತೇನೆ. ‘ದುನಿಯಾ’ವನ್ನು ಎಲ್ಲಾ ಜಾತಿ ಧರ್ಮದವರು ನೋಡಿ ಬೆಳೆಸಿದ್ದೀರಿ ಎಂದು ಇದೇ ವೇಳೆ ವಿಜಯ್ ಹೇಳಿದರು.

  • ಚಿತ್ರ ಮಂದಿರಗಳಲ್ಲಿ ಹೌಸ್‍ಫುಲ್ ಪ್ರದರ್ಶನಕ್ಕೆ ರಾಜ್ಯ ಸರ್ಕಾರದಿಂದ ಅನುಮತಿ

    ಚಿತ್ರ ಮಂದಿರಗಳಲ್ಲಿ ಹೌಸ್‍ಫುಲ್ ಪ್ರದರ್ಶನಕ್ಕೆ ರಾಜ್ಯ ಸರ್ಕಾರದಿಂದ ಅನುಮತಿ

    – ಸರ್ಕಾರದ ನಡೆಗೆ ವಿರೋಧ ವ್ಯಕ್ತಪಡಿಸಿದ್ದ ಧ್ರುವ ಸರ್ಜಾ
    – ಪಬ್ಲಿಕ್ ಟಿವಿ ಬಿಗ್ ಇಂಪ್ಯಾಕ್ಟ್

    ಬೆಂಗಳೂರು: ರಾಜ್ಯ ಸರ್ಕಾರ ಕೊನೆಗೂ ಚಿತ್ರ ಮಂದಿರಗಳಲ್ಲಿ ಹೌಸ್ ಫುಲ್ ಪ್ರದರ್ಶನಕ್ಕೆ ಅನುಮತಿ ನೀಡಿದೆ. ಹೊಸ ಕೋವಿಡ್‌ 19 ಮಾರ್ಗಸೂಚಿಯನ್ನು ಹೊರಡಿಸುವಂತೆ ಸರ್ಕಾರ ಸೂಚಿಸಿದೆ.

    ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸುಧಾಕರ್‌, ಕೋವಿಡ್‌ 19 ಸಲಹಾ ಸಮಿತಿಯ ನೀಡಿದ ಸಲಹೆಯ ಆಧಾರದ ಮೇರೆಗೆ ನಿನ್ನೆ ಸರ್ಕಾರ ಆದೇಶವನ್ನು ಹೊರಡಿಸಿತ್ತು. ಆದರೆ ಇಂದು ಚಲನ ಚಿತ್ರ ರಂಗದ ಗಣ್ಯರು ಶೇ.100 ರಷ್ಟು ಪ್ರವೇಶಕ್ಕೆ ಅನುಮತಿ ನೀಡದಿದ್ದರೆ ಇದನ್ನೇ ನಂಬಿಕೊಂಡವರ ಜೀವನ ಕಷ್ಟವಾಗುತ್ತದೆ ಎಂದು ಮನವಿ ಮಾಡಿಕೊಂಡಿದ್ದರು. ಈ ಮನವಿಗೆ ಸ್ಪಂದಿಸಿ ಶೇ.100 ರಷ್ಟು ಭರ್ತಿಗೆ ಅವಕಾಶ ನೀಡುತ್ತೇವೆ. ನಾಳೆ ಚಲನ ಚಿತ್ರ ಮಂದಿರಗಳಲ್ಲಿ ಅನುಸರಿಸಬೇಕಾದ ನಿಯಮಗಳ ಬಗ್ಗೆ ಮಾರ್ಗಸೂಚಿಯನ್ನು ಹೊರಡಿಸಲಾಗುವುದು ಎಂದು ತಿಳಿಸಿದರು.

    ಕೇಂದ್ರ ಸರ್ಕಾರ ಇತ್ತೀಚೆಗೆ ಹೊರಡಿಸಿದ ಕೊರೊನಾ ಮಾರ್ಗಸೂಚಿಗಳಲ್ಲಿ ಚಿತ್ರಮಂದಿರಗಳಿಗೆ ಹೌಸ್‍ಫುಲ್ ಪ್ರದರ್ಶನಕ್ಕೆ ಅನುಮತಿ ನೀಡಿತ್ತು. ಆದರೆ ರಾಜ್ಯ ಸರ್ಕಾರ ಮಾತ್ರ ಒಪ್ಪಿಗೆ ಸೂಚಿಸಿರಲಿಲ್ಲ. ಇದಕ್ಕೆ ಸ್ಯಾಂಡಲ್‍ವುಡ್‍ನಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಅಲ್ಲದೆ ಪಬ್ಲಿಕ್ ಟಿವಿ ಸಹ ನಿರತಂತರವಾಗಿ ಸುದ್ದಿ ಬಿತ್ತರಿಸಿತ್ತು. ಇದೀಗ ವರದಿಯ ಫಲವಾಗಿ ರಾಜ್ಯ ಸರ್ಕಾರ ಹೌಸ್‍ಫುಲ್ ಪ್ರದರ್ಶನಕ್ಕೆ ಅನುಮತಿ ನೀಡಿದೆ.

    ಚಿತ್ರಮಂದಿರಗಳಲ್ಲಿ ಶೇ.100ರಷ್ಟು ಭರ್ತಿಗೆ ನಿರ್ಬಂಧ ಹೇರಿ ಶೇ.50 ರಷ್ಟು ಪ್ರೇಕ್ಷಕರಿಗೆ ಅವಕಾಶ ನೀಡುವ ರಾಜ್ಯ ಸರ್ಕಾರದ ಅದೇಶಕ್ಕೆ ನಟ ಧ್ರುವ ಸರ್ಜಾ ಸೇರಿದಂತೆ ಸ್ಯಾಂಡಲ್‍ವುಡ್‍ನ ಅನೇಕರು ಆಕ್ಷೇಪ ವ್ಯಕ್ತಪಡಿಸಿದ್ದರು. ಚಿತ್ರಮಂದಿರಗಳಲ್ಲಿ ಶೇ.100 ರಷ್ಟು ಪ್ರವೇಶ ಕಲ್ಪಿಸುವ ಸಂಬಂಧ ಇಂದು ಸಂಜೆ 5 ಗಂಟೆಗೆ ಸರ್ಕಾರ ದಿಢೀರ್ ಆರೋಗ್ಯ ಇಲಾಖೆಯ ಜೊತೆ ಸಭೆ ನಡೆಸಿತ್ತು. ಸಭೆಯ ಬಳಿಕ ಹೌಸ್‍ಫುಲ್ ಪ್ರದರ್ಶನಕ್ಕೆ ಅನುಮತಿ ನೀಡಿದೆ.

    ಮಾರ್ಕೆಟ್ ಗಳಲ್ಲಿ ಗಿಜಿಗುಡುವಂತೆ ಜನ, ಬಸ್ ಫುಲ್ ರಶ್, ಚಿತ್ರಮಂದಿರಕ್ಕೆ ಮಾತ್ರ ಶೇ.50 ನಿರ್ಬಂಧ ಎಂದು ನಟ ಧ್ರುವ ಸರ್ಜಾ ಪೋಸ್ಟ್ ಮಾಡುವ ಮೂಲಕ ಅಭಿಯಾನವನ್ನು ಪ್ರಾರಂಭಿಸಿದ್ದರು. ಇದಕ್ಕೆ ಇಡೀ ಚಿತ್ರರಂಗವೇ ಒಟ್ಟಾಗಿ ಸೋಷಿಯಲ್ ಮೀಡಿಯಾದಲ್ಲಿ ಸರ್ಕಾರವನ್ನು ಪ್ರಶ್ನಿಸಿತ್ತು.

    ಖಾಸಗಿ ಕಾರ್ಯಕ್ರಮಗಳು, ದೇವಸ್ಥಾನ, ಚರ್ಚ್, ಮಸೀದಿ, ಮಾರ್ಕೆಟ್, ಸಾರ್ವಜನಿಕ ಸಾರಿಗೆಗಳು, ಪ್ರವಾಸೋದ್ಯಮಗಳು ಯಾಥಾವತ್ತಾಗಿ ತೆರೆದಿರುವಾಗ ಸಿನಿಮಾ ಥಿಯೇಟರ್‍ಗಳು ಯಾಕಿರಬಾರದು ಎಂದು ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಪ್ರಶ್ನಿಸಿ ಟ್ವೀಟ್ ಮಾಡಿದ್ದರು.

    ಸಿನಿಮಾ ಕೆಲವರಿಗೆ ಎಂಟರ್ಟೈನ್‍ಮೆಂಟ್ ಆದರೆ ಇನ್ನು ಹಲವರಿಗೆ ಅದೇ ಜೀವಾಳವಾಗಿದೆ ಎಂದು ಸ್ಟಾರ್ ನಿರ್ದೇಶಕ ಪ್ರಶಾಂತ್ ನೀಲ್ ಟ್ವೀಟ್ ಮಾಡಿ ರಾಜ್ಯ ಸರ್ಕಾರದ ತೆದೆದುಕೊಂಡಿರುವ ನಿರ್ಧಾರದ ಕುರಿತು ಅಸಮಾಧಾನ ವ್ಯಕ್ತಪಡಿಸಿದ್ದರು.

    ಹ್ಯಾಟ್ರಿಕ್ ಹೀರೋ ಶಿವರಾಜ್‍ಕುಮಾರ್ ಸಹ ಚಿತ್ರಮಂದಿರಗಳಲ್ಲಿ ಶೇ.100 ಭರ್ತಿಗೆ ಅವಕಾಶ ನೀಡಬೇಕು. ಚಿತ್ರಮಂದಿರದ ನಾವೆಲ್ಲರೂ ಜೊತೆಯಲ್ಲಿದ್ದೇವೆ. ಸರ್ಕಾರದ ನಿರ್ಧಾರ ಬದಲಾಗಬೇಕು ಎಂದು ಹೇಳಿ ವೀಡಿಯೋ ಶೇರ್ ಮಾಡಿದ್ದರು. ಎಲ್ಲ ಸಾರ್ವಜನಿಕ ಪ್ರದೇಶಗಳು ಜನಸಂದಣಿಯಿಂದ ಕೂಡಿದೆ. ಕರ್ನಾಟಕದಲ್ಲಿ ರಂಗಭೂಮಿಯನ್ನು ಶೇ.50 ಕ್ಕೆ ಮಾತ್ರ ಸೀಮಿತಗೊಳಿಸಿದೆ. ಏಕೆ? ಸಿನೆಮಾ ರಾಜ್ಯಾದ್ಯಂತ ಅನೇಕರಿಗೆ ಜೀವನೋಪಾಯದ ಸಾಧನವಾಗಿದೆ ಎಂಬುದನ್ನು ನಾವು ಮರೆಯುತ್ತಿದ್ದೇವೆ ಎಂದು ರಕ್ಷಿತ್ ಶೆಟ್ಟಿ ಬೇಸರ ವ್ಯಕ್ತಪಡಿಸಿದ್ದರು.

    ಬೀದಿಗಳು, ಬಸ್ಸುಗಳು, ಮಾಲ್‍ಗಳು, ಪಬ್‍ಗಳು ಮತ್ತು ಇತರ ಎಲ್ಲ ಸಾರ್ವಜನಿಕ ಪ್ರದೇಶಗಳು ಜನರಿಂದ ತುಂಬಿರುವಾಗ, ಕರ್ನಾಟಕ ಸರ್ಕಾರ ಶೇ.100 ಥಿಯೇಟರ್ ಆಕ್ಯುಪೆನ್ಸೀ ಘೋಷಣೆಯನ್ನು ಏಕೆ ಹಿಂತೆಗೆದುಕೊಂಡಿದೆ ಎಂದು ನೆನಪಿರಲಿ ಪ್ರೇಮ್ ಪ್ರಶ್ನಿಸಿದ್ದರು.

    ಧನಂಜಯ್, ಧುನಿಯಾ ವಿಜಯ್, ಪ್ರೀತಮ್ ಗುಬ್ಬಿ, ಸಿಂಪಲ್ ಸುನಿ ಹೀಗೆ ಸಿನಿಮಾ ಮಂದಿ ಟ್ವೀಟ್ ಮಾಡುವ ಮೂಲಕ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದರು. ಹೀಗೆ ಸಿನಿಮಾ ರಂಗದಿಂದ ವಿರೋಧ ವ್ಯಕ್ತವಾದ ಹಿನ್ನೆಲೆ ಇದೀಗ ಸರ್ಕಾರ ನಿರ್ಧಾರ ಬದಲಿಸಿದ್ದು, ಹೌಸ್‍ಫುಲ್ ಪ್ರದರ್ಶನಕ್ಕೆ ಅನುಮತಿ ನೀಡಿದೆ.

  • ರಾಜ್ಯ ಸರ್ಕಾರದ ವಿರುದ್ಧ ನಟ ಧ್ರುವ ಸರ್ಜಾ ಕಿಡಿ

    ರಾಜ್ಯ ಸರ್ಕಾರದ ವಿರುದ್ಧ ನಟ ಧ್ರುವ ಸರ್ಜಾ ಕಿಡಿ

    ಬೆಂಗಳೂರು: ರಾಜ್ಯ ಸರ್ಕಾರದ ವಿರುದ್ಧ ನಟ ಧ್ರುವ ಸರ್ಜಾ ಅವರು ಕಿಡಿಕಾರಿದ್ದಾರೆ.

    ಹೌದು. ಚಿತ್ರಮಂದಿರ ಶೇ.100 ಭರ್ತಿಗೆ ನಿರ್ಬಂಧ ಹೇರಿ, ಶೇ.50 ಭರ್ತಿಗೆ ರಾಜ್ಯ ಸರ್ಕಾರ ಆದೇಶ ನೀಡಿದೆ. ಈ ಹಿನ್ನೆಲೆಯಲ್ಲಿ ನಟ ಸರ್ಕಾರದ ನಡೆಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

    ಈ ಸಂಬಂಧ ಟ್ವೀಟ್ ಮಾಡಿರುವ ಧ್ರುವ, ಮಾರ್ಕೆಟ್‍ನಲ್ಲಿ ಗಿಜಿ ಗಿಜಿ ಜನ ಸೇರುತ್ತಾರೆ. ಬಸ್ಸಿನಲ್ಲೂ ಫುಲ್ ರಶ್ ಇರುತ್ತೆ. ಆದರೆ ಚಿತ್ರಮಂದಿರಕ್ಕೆ ಮಾತ್ರ ಏಕೆ ಶೇ.50 ನಿರ್ಬಂಧ ಎಂದು ಸರ್ಕಾರವನ್ನು ಪ್ರಶ್ನಿಸಿದ್ದಾರೆ. ಅಲ್ಲದೆ ಈ ಟ್ವೀಟ್ ಅನ್ನು ಸಿಎಂ, ಡಿಸಿಎಂ ಅಶ್ವತ್ಥ್ ನಾರಾಯಣ್ ಹಾಗೂ ಆರೋಗ್ಯ ಸಚಿವ ಸುಧಾಕರ್‍ಗೆ ಟ್ಯಾಗ್ ಮಾಡಿದ್ದಾರೆ.

    ಮಹಾಮಾರಿ ಕೊರೊನಾ ವೈರಸ್ ಪ್ರಕರಣಗಳು ಕಡಿಮೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಚಿತ್ರಮಂದಿರಗಳ ಭರ್ತಿಗೆ ಆದೇಶ ನೀಡಿ ಮಾರ್ಗಸೂಚಿ ಪ್ರಕಟಿಸಿ, ರಾಜ್ಯ ಸರ್ಕಾರಗಳು ಈ ಸಂಬಂಧ ನಿರ್ಧಾರ ಕೈಗೊಳ್ಳಬಹುದು ಎಂದು ಸೂಚಿಸಿತ್ತು. ಆದರೆ ರಾಜ್ಯ ಸರ್ಕಾರ ಚಿತ್ರಮಂದಿರಗಳಲ್ಲಿ ಶೇ. 50ರಷ್ಟು ಆಸನ ಮಾತ್ರ ಭರ್ತಿ ಮಾಡಲು ಅವಕಾಶ ನೀಡಿ ಮಂಗಳವಾರ ಆದೇಶ ಹೊರಡಿಸಿದೆ. ಇದರಿಂದ ದೊಡ್ಡ ದೊಡ್ಡ ಸಿನಿಮಾಗಳಿಗೆ ಮತ್ತೆ ನಿರಾಸೆಯಾಗಿದೆ.

    ಒಟ್ಟಿನಲ್ಲಿ ಚಿತ್ರಮಂದಿರ ಶೇ.100 ರಷ್ಟು ಭರ್ತಿಗೆ ಕೇಂದ್ರ ಅನುಮತಿ ಕೊಟ್ಟರೂ ರಾಜ್ಯ ಸರ್ಕಾರ ಅಡ್ಡಿಪಡಿಸಿದೆ. ಈ ಹಿನ್ನೆಲೆಯಲ್ಲಿ ಟ್ವೀಟ್‍ನಲ್ಲಿ ನಟ ಧೃವ ಸರ್ಜಾ ಅಸಮಾಧಾನ ಹೊರಹಾಕಿದ್ದಾರೆ.