Tag: theatre

  • ಕರ್ನಾಟಕದ ಸಿನಿ ಪ್ರಿಯರಿಗೆ ನಿರಾಸೆ -ಹೌಸ್‌ಫುಲ್‌ ಪ್ರದರ್ಶನಕ್ಕೆ ಅನುಮತಿ ಇಲ್ಲ

    ಕರ್ನಾಟಕದ ಸಿನಿ ಪ್ರಿಯರಿಗೆ ನಿರಾಸೆ -ಹೌಸ್‌ಫುಲ್‌ ಪ್ರದರ್ಶನಕ್ಕೆ ಅನುಮತಿ ಇಲ್ಲ

    ಬೆಂಗಳೂರು: ಕರ್ನಾಟಕದ ಸಿನಿಮಾ ಪ್ರಿಯರಿಗೆ ನಿರಾಸೆಯ ಸುದ್ದಿ ಪ್ರಕಟವಾಗಿದೆ. ಕೋವಿಡ್‌ 19 ಎರಡನೇ ಅಲೆಯ ಹಿನ್ನೆಲೆಯಲ್ಲಿ  ಸಿನಿಮಾ ಮಂದಿರಗಳಲ್ಲಿ  ಶೇ.50ರಷ್ಟು ಪ್ರೇಕ್ಷಕರ ಪ್ರವೇಶಕ್ಕೆ ಮಾತ್ರ ರಾಜ್ಯ ಸರ್ಕಾರ ಅನುಮತಿ ನೀಡಿದೆ.

    ಮೂರು ದಿನಗಳ ಹಿಂದೆ ಕೇಂದ್ರ ಗೃಹಸಚಿವಾಲಯ ಶೇ.100ರಷ್ಟು ಪ್ರೇಕ್ಷಕರ ಪ್ರವೇಶಕ್ಕೆ ಸಮ್ಮತಿ ನೀಡಿ ಕೋವಿಡ್‌ 19 ಮಾರ್ಗಸೂಚಿಯನ್ನು ಪ್ರಕಟಿಸಿತ್ತು. ಹೀಗಿದ್ದರೂ ಪ್ರಕಟಿಸಲಾದ ಮಾರ್ಗಸೂಚಿ ಹೊರತಾಗಿ ರಾಜ್ಯ ಸರ್ಕಾರ ಮತ್ತು ಕೇಂದ್ರಾಡಳಿತ ಪ್ರದೇಶಗಳು ಮತ್ತಷ್ಟು ಸುರಕ್ಷತಾ ಕ್ರಮಗಳನ್ನು ಅಳವಡಿಸಿಕೊಳ್ಳಬಹುದು ಎಂದು ಹೇಳಿತ್ತು.

     

    ರಾಜ್ಯ ಸರ್ಕಾರಗಳಿಗೆ ಅಧಿಕಾರ ಸಿಕ್ಕಿದ ಹಿನ್ನೆಲೆಯಲ್ಲಿ ಈ ಹಿಂದಿನಂತೆ ಶೇ.50 ರಷ್ಟು ಪ್ರೇಕ್ಷಕರ ಪ್ರವೇಶಕ್ಕೆ ಅನುಮತಿ ನೀಡಿ ಕರ್ನಾಟಕ ಸರ್ಕಾರ ಇಂದು ಹೊಸ ಮಾರ್ಗಸೂಚಿಯನ್ನು ಪ್ರಕಟಿಸಿದೆ. ಹೊಸ ಮಾರ್ಗಸೂಚಿ ಫೆ.28ರ ವರೆಗೆ ಅನ್ವಯವಾಗಲಿದೆ.

    ಕೈಗಾರಿಕಾ ಪ್ರದೇಶ ಮತ್ತು ವಾಣಿಜ್ಯ ಮಳಿಗೆಗಳಲ್ಲಿ ಪೂರ್ಣ ಪ್ರಮಾಣದಲ್ಲಿ ಸಿಬ್ಬಂದಿ ಹಾಜರಾಗಬಹುದು. ಮದುವೆ, ಮರಣ ಇತ್ಯಾದಿ ಸಮಾರಂಭಗಳಿಗೆ ಗರಿಷ್ಟ 500 ಜನ ಸೇರಲು ಸರ್ಕಾರ ಅನುಮತಿ ನೀಡಿದೆ.

    ನಟ ಪ್ರಜ್ವಲ್‌ ದೇವರಾಜ್‌ ಅಭಿನಯದ ಇನ್ಸ್‌ಪೆಕ್ಟರ್‌ ವಿಕ್ರಂ ಫೆ.5 ರಂದು, ನಟ ಧ್ರುವ ಸರ್ಜಾ ಅಭಿನಯದ ನಾಲ್ಕು ಭಾಷೆಯಲ್ಲಿ ಬರಲಿರುವ ಪೊಗರು ಚಿತ್ರ ಫೆ.19ರಂದು ಬಿಡುಗಡೆಯಾಗಲಿದೆ.

  • ಚಾಲೆಂಜಿಂಗ್ ಸ್ಟಾರ್ ದರ್ಶನ್ ಓಟಿಟಿ ಅಭಿಪ್ರಾಯಕ್ಕೆ ಕೌರವ ಪ್ರತಿಕ್ರಿಯೆ

    ಚಾಲೆಂಜಿಂಗ್ ಸ್ಟಾರ್ ದರ್ಶನ್ ಓಟಿಟಿ ಅಭಿಪ್ರಾಯಕ್ಕೆ ಕೌರವ ಪ್ರತಿಕ್ರಿಯೆ

    ದಾವಣಗೆರೆ: ಓಟಿಟಿ ಸಿನಿಮಾ ರಂಗಕ್ಕೇನು ಮಾರಕವಲ್ಲ. ಓಟಿಟಿ ಆಧುನಿಕಥೆಗೆ ತಕ್ಕ ಹಾಗೆ ಕೆಲ ಬದಲಾವಣೆ ಆಗುತ್ತೆ ಎಂದು ಕೃಷಿ ಸಚಿವ ಬಿ.ಸಿ ಪಾಟೀಲ್ ಹೇಳಿದ್ದಾರೆ.

    ದಾವಣಗೆರೆಯ ಹೊನ್ನಾಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ 5ಜಿ ಯಿಂದ ದೊಡ್ಡ ಸ್ಕ್ಯಾಮ್ ಇದೆ ಎಂಬ ದರ್ಶನ್ ಹೇಳಿಕೆಗೆ ಪ್ರತಿಕ್ರಿಯಿಸಿದರು. ಓಟಿಟಿ ಆಧುನಿಕಥೆಗೆ ತಕ್ಕ ಹಾಗೆ ಕೆಲ ಬದಲಾವಣೆ ಆಗುತ್ತೆ. ಆದರೆ ಚಿತ್ರಮಂದಿರದಲ್ಲಿ ಸಿನಿಮಾ ನೋಡಿದಾಗ ಸಿಗುವ ಖುಷಿ ಓಟಿಟಿ, ಟಿವಿಯಲ್ಲಿ ಸಿಗಲ್ಲ. ಓಟಿಟಿ ಮತ್ತು ಟಿವಿಯಲ್ಲಿ ನೋಡಿ ಸಿಳ್ಳೆ ಹೊಡೆಯೋಕೆ ಆಗಲ್ಲ ಎಂದರು.

    ಚಿತ್ರರಂಗದಲ್ಲಿ ನಿರ್ದೇಶಕರು ಮನೆ-ಮಠ ಮಾರಿಕೊಂಡ ಸಿನಿಮಾ ಮಾಡಿರುತ್ತಾರೆ. ಹೀರೋಗಳು ತಮ್ಮ ಎಫರ್ಟ್ ಹಾಕಿ ಸಿನಿಮಾ ಮಾಡಿರುತ್ತಾರೆ. ಸಿನಿಮಾವನ್ನ ಸಿಳ್ಳೆ, ಚಪ್ಪಾಳೆ ಮೂಲಕ ಥಿಯೇಟರ್ ನಲ್ಲಿ ನೋಡಿದ್ರೆ ಒಂದು ರೀತಿ ಖುಷಿ ಇರುತ್ತೆ. ಅದನ್ನ ಟಿವಿಯಲ್ಲಿ ನೋಡಿದ್ರೆ ಆ ರೀತಿಯ ಖುಷಿ ಸಿಗುತ್ತಾ ಎಂದು ಪ್ರಶ್ನಿಸಿದ್ದರು.

    ಜನವರಿ 10ರಂದು ಫೇಸ್‍ಬುಕ್ ಲೈವ್ ಬಂದಿದ್ದ ಸಾರಥಿ, ಆರಂಭದಲ್ಲಿ ಎಲ್ಲರಿಗೂ ಹೊಸ ವರ್ಷದ ಶುಭಾಶಯ ತಿಳಿಸಿದ್ದರು. ನಂತರ ಬಹುನಿರೀಕ್ಷೆಯ ರಾಬರ್ಟ್ ಸಿನಿಮಾ ಮಾರ್ಚ್ 11ರಂದು ಚಿತ್ರಮಂದಿರಗಳಲ್ಲೇ ಬಿಡುಗಡೆಯಾಗಲಿದೆ ಎಮದು ಹೇಳಿದ್ದರು. ಇದೇ ವೇಳೆ ಓಟಿಟಿ ಪ್ಲಾಟ್‍ಫಾರಂನಲ್ಲಿ ಸಿನಿಮಾ ಬಿಡುಗಡೆಗೆ ವಿರೋಧ ವ್ಯಕ್ತಪಡಿಸಿದ ಅವರು, ಥಿಯೇಟರ್ ನಲ್ಲಿ ಕೇಳುವ ಚಪ್ಪಾಳೆಗಳೇ ನಮಗೆ ಮುಖ್ಯ. ಸದ್ಯ ಶೇ.50ರಷ್ಟು ಆಸನ ಭರ್ತಿಗೆ ಸರ್ಕಾರ ಅನುಮತಿ ನೀಡಿದೆ. ಆದ್ರೂ ನಾವು ಚಿತ್ರಮಂದಿರದಲ್ಲಿಯೇ ಸಿನಿಮಾ ಬಿಡುಗಡೆ ಮಾಡಲು ಪ್ಲಾನ್ ಮಾಡಿಕೊಂಡಿದ್ದೇವೆ ಎಂದು ತಿಳಿಸಿದ್ದರು.

    ಚಿತ್ರಮಂದಿರಗಳಲ್ಲಿ ಸಂಪೂರ್ಣ ಸೀಟು ಭರ್ತಿಗೆ ಅವಕಾಶ ನೀಡದೆ ಇರುವುದರ ಹಿಂದೆ ಅಂಬಾನಿಯ 5ಜಿ ಸ್ಕ್ಯಾಮ್ ಇದೆ ಎಂಬುದು ನನ್ನ ವೈಯಕ್ತಿಕ ಅಭಿಪ್ರಾಯ. ಯಾಕೆಂದರೆ ಮಾಲ್ ಗಳು, ಮಾರುಕಟ್ಟೆ, ಅಂಗಡಿ, ಕಲ್ಯಾಣ ಮಂಟಪಗಳು, ಶಾಲಾ- ಕಾಲೇಜುಗಳು ತೆರೆದಿವೆ. ಎಲ್ಲ ಕಡೆ ಜನ ಸೇರುತ್ತಿದ್ದಾರೆ. ಆದರೆ ಚಿತ್ರಮಂದಿರಗಳಲ್ಲಿ ಮಾತ್ರ ಶೇ.100ರಷ್ಟು ಸೀಟು ಭರ್ತಿಗೆ ಅವಕಶ ನೀಡುತ್ತಿಲ್ಲ. ಅಂಬಾನಿ 5 ಜಿ ನೆಟ್ ವರ್ಕ್ ಲಾಂಚ್ ಮಾಡುತ್ತಿದ್ದಾರೆ. ಅವರ 5 ಜಿ ನೆಟ್‍ವರ್ಕ್ ಚಾಲ್ತಿಯಲ್ಲಿರಬೇಕು ಎಂದರೆ ಎಲ್ಲರೂ ಮೊಬೈಲ್ ಗೆ ಅಡಿಕ್ಟ್ ಆಗಬೇಕು. 5 ಜಿ ಓಡಬೇಕು ಅಂದರೆ ಓಟಿಟಿಯಲ್ಲಿ ಸಿನಿಮಾಗಳು ಇರಬೇಕು. ಆಗಲೇ ಅವರಿಗೆ ಹಣ ಬರುವುದು. ಅದೇ ಚಿತ್ರಮಂದಿರಗಳು ತೆರೆದರೆ ಓಟಿಟಿಗಳ ಮಾರುಕಟ್ಟೆ ಕುಸಿಯುತ್ತದೆ. ಹಾಗಾಗಿ ಅಂಬಾನಿ ದೊಡ್ಡವರಿಗೆ ಹೇಳಿ ಚಿತ್ರಮಂದಿರಗಳಿಗೆ ಅವಕಾಶ ನಿರಾಕರಿಸುತ್ತಿರಬಹುದು ಎಂದು ಅಭಿಪ್ರಾಯ ಪಟ್ಟಿದ್ದರು.

  • ಸಲಗ ದೊಡ್ಡ ಬಜೆಟ್ ಸಿನಿಮಾ, ಅರ್ಧ ಪ್ರೇಕ್ಷಕರಿಗಾಗಿ ಬಿಡುಗಡೆ ಮಾಡಲ್ಲ: ನಿರ್ಮಾಪಕ

    ಸಲಗ ದೊಡ್ಡ ಬಜೆಟ್ ಸಿನಿಮಾ, ಅರ್ಧ ಪ್ರೇಕ್ಷಕರಿಗಾಗಿ ಬಿಡುಗಡೆ ಮಾಡಲ್ಲ: ನಿರ್ಮಾಪಕ

    ಮೈಸೂರು: ನಮ್ಮದು ದೊಡ್ಡ ಬಜೆಟ್ ಸಿನಿಮಾವಾಗಿದ್ದು, ಅರ್ಧ ಪ್ರೇಕ್ಷಕರಿಗೆ ಚಿತ್ರ ನೋಡಲು ಅವಕಾಶ ನೀಡಿದ್ರೆ ನಷ್ಟವಾಗುತ್ತೆ. ಹೀಗಾಗಿ ಸದ್ಯ ಚಿತ್ರ ಬಿಡುಗಡೆ ಮಾಡಲ್ಲ ಎಂದು ‘ಸಲಗ’ ಚಿತ್ರದ ನಿರ್ಮಾಪಕ ಕೆ.ಪಿ ಶ್ರೀಕಾಂತ್ ಹೇಳಿದ್ದಾರೆ.

    ಚಿತ್ರಮಂದಿರ ತೆರೆಯಲು ಸರ್ಕಾರದಿಂದ ಅನುಮತಿ ಹಿನ್ನೆಲೆ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಅರ್ಧ ಪ್ರೇಕ್ಷಕರರಿಗಾಗಿ ಸಲಗ ಚಿತ್ರ ಬಿಡುಗಡೆ ಮಾಡಲ್ಲ. ಚಿತ್ರಮಂದಿರ ತೆರೆಯಲು ಅವಕಾಶ ನೀಡಿದ್ದಾರೆ ಸರಿ. ಆದರೆ ಅರ್ಧ ಪ್ರೇಕ್ಷಕರಿಗೆ ಅವಕಾಶ ನೀಡಿರೋದಕ್ಕೆ ನಮಗೆ ಅಸಮಾಧಾನ ಇದೆ. ನಮ್ಮ ಸಿನಿಮಾ ದೊಡ್ಡ ಬಜೆಟ್ ಸಿನಿಮಾ ಆಗಿದೆ. ಇದಕ್ಕೆ ಅರ್ಧ ಪ್ರೇಕ್ಷಕರಿಗೆ ಚಿತ್ರ ನೋಡಲು ಅವಕಾಶ ನೀಡಿದ್ರೆ ನಷ್ಟವಾಗುತ್ತೆ. ಈ ಹಿನ್ನೆಲೆಯಲ್ಲಿ ಪೂರ್ಣ ಪ್ರಮಾಣದಲ್ಲಿ ಥಿಯೇಟರ್ ಓಪನ್ ಆದ ಮೇಲೆಯೇ ಸಲಗ ಚಿತ್ರ ತೆರೆಗೆ ಬರಲಿದೆ ಎಂದು ಹೇಳಿದರು.

    ಆಕ್ಟಿವ್ ಪ್ರೋಡ್ಯೂಸರ್ ಟೀಂನಿಂದ ಸೋಮವಾರ ಸಭೆ ಕರೆದಿದ್ದೇವೆ. ಆ ಟೀಂನಲ್ಲಿ ರಾಬರ್ಟ್, ಕೋಟಿಗೊಬ್ಬ, ಕೆಜಿಎಫ್ ಹಾಗೂ ಯುವರತ್ನ ಮೊದಲಾದ ಚಿತ್ರಗಳ ನಿರ್ಮಾಪಕರಿದ್ದಾರೆ. ಎಲ್ಲರು ಒಟ್ಟಾಗಿ ಕುಳಿತು ನಿರ್ಧಾರ ಮಾಡ್ತೀವಿ. ಯಾವ ಚಿತ್ರ ಬಿಡುಗಡೆ ಮಾಡಬೇಕು ಅನ್ನೋ ಬಗ್ಗೆಯೂ ನಿರ್ಧಾರ ಮಾಡ್ತೀವಿ. ಆದರೆ ದೊಡ್ಡ ಬಜೆಟ್‍ನ ಸಿನಿಮಾಗಳಿಗೆ ಅರ್ಧ ಪ್ರೇಕ್ಷಕರು ಸಾಕಗೋದಿಲ್ಲ. ನಮಗೆ ಪೂರ್ತಿ ಅನುಮತಿ ಸಿಕ್ಕರಷ್ಟೇ ನಾವು ಚಿತ್ರ ಬಿಡುಗಡೆ ಮಾಡಲು ಆಗೋದು. ಆನ್‍ಲೈನ್ ಫ್ಲಾಟ್‍ಫಾರ್ಮ್(ಓಟಿಟಿ) ವೇದಿಕೆಗಳು ದೊಡ್ಡ ಬಜೆಟ್ ಸಿನಿಮಾಗಳಿಗೆ ಸರಿ ಹೊಂದುವುದಿಲ್ಲ ಎಂದು ತಿಳಿಸಿದರು.

    ಕೇಂದ್ರ ಸರ್ಕಾರ ಅನ್‍ಲಾಕ್ 5ರ ಮಾರ್ಗಸೂಚಿಯನ್ನು ಬುಧವಾರ ಪ್ರಕಟಿಸಿದ್ದು, ಚಿತ್ರಮಂದಿರ ಮತ್ತು ಈಜುಕೊಳ ತೆರೆಯಲು ಷರತ್ತುಬದ್ಧ ಅನುಮತಿಯನ್ನು ನೀಡಿದೆ. ಬಹುತೇಕ ಚಟುವಟಿಕೆಗಳಿಗೆ ಅಕ್ಟೋಬರ್ 15ರ ನಂತ್ರವೇ ಗ್ರೀನ್ ಸಿಗ್ನಲ್ ನೀಡಿದೆ. ಹಾಗೇ ಸರ್ಕಾರ ಮೈಕ್ರೋ ಲೆವಲ್ ಕಂಟೈನ್‍ಮೆಂಟ್ ಝೋನ್ ಮಾಡಲು ಜಿಲ್ಲಾಡಳಿತಗಳಿಗೆ ಅವಕಾಶ ನೀಡಿದೆ.

    ಈ ಲಾಕ್‍ಡೌನ್ 2020 ಅಕ್ಟೋಬರ್ 31ರವರೆಗೆ ಮುಂದುವರಿಯಲಿದೆ. ರಾಜ್ಯ/ಕೇಂದ್ರ ಸರ್ಕಾರ ಯಾವುದೇ ಲೋಕಲ್ ಲಾಕ್‍ಡೌನ್ ಮಾಡುತ್ತಿಲ್ಲ. ಜಲ್ಲಾಡಳಿತಗಳು ಕಂಟೈನ್‍ಮೆಂಟ್ ಪ್ರದೇಶಗಳಲ್ಲಿ ಮೈಕ್ರೋ ಲೆವಲ್ ಝೋನ್ ಮಾಡಿಕೊಳ್ಳಲು ಅವಕಾಶ ನೀಡಲಾಗಿದೆ. ಕಂಟೈನ್‍ಮೆಂಟ್ ಝೋನ್ ಗಳಲ್ಲಿ ಅವಶ್ಯಕ ಸೇವೆಗಳನ್ನು ಹೊರತುಪಡಿಸಿದ ಇನ್ನುಳಿದ ಎಲ್ಲ ಚಟುವಟಿಕೆಗಳ ಮೇಲೆ ನಿರ್ಬಂಧವಿದೆ. ಅಂತರಾಜ್ಯ ಮತ್ತು ಅಂತರ್ ಜಿಲ್ಲೆ ಪ್ರಯಾಣದ ಮೇಲೆ ಯಾವುದೇ ನಿಬಂಧನೆಗಳಿಲ್ಲ ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.

  • ಮಾಲ್, ಥಿಯೇಟರ್‌ಗಳಿಗೂ ತಟ್ಟಿದ ಕೊರೊನಾ ವೈರಸ್‍ ಬಿಸಿ

    ಮಾಲ್, ಥಿಯೇಟರ್‌ಗಳಿಗೂ ತಟ್ಟಿದ ಕೊರೊನಾ ವೈರಸ್‍ ಬಿಸಿ

    ಬೆಂಗಳೂರು: ಕೊರೊನಾ ವೈರಸ್‍ನ ಎಫೆಕ್ಟ್ ಮಾಲ್ ಹಾಗೂ ಚಿತ್ರಮಂದಿರಗಳಿಗೂ ತಟ್ಟಿದೆ. ಈ ಹಿನ್ನೆಲೆಯಲ್ಲಿ ನಗರದ ಮಾಲ್ ಹಾಗೂ ಚಿತ್ರಮಂದಿರಗಳಲ್ಲಿ ಜನರಿಲ್ಲದೇ ಬಿಕೋ ಎನ್ನುತ್ತಿವೆ.

    ಸಾಮಾನ್ಯವಾಗಿ ವೀಕೆಂಡ್ ಸಮಯದಲ್ಲಿ ಸಾಕಷ್ಟು ಜನರು ಮಾಲ್ ಹಾಗೂ ಚಿತ್ರಮಂದಿರಗಳಿಗೆ ಬರುತ್ತಿದ್ದರು. ಆದರೆ ಇಂದು ಗಣನೀಯವಾಗಿ ಜನರ ಸಂಖ್ಯೆ ಕಡಿಮೆಯಿತ್ತು. ಶೀತ, ಕೆಮ್ಮು ಇರುವವರು ಬೇರೆ ಬೇರೆ ಭಾಗಗಳಿಂದ ಬರುತ್ತಾರೆ. ಈ ವೇಳೆ ಅವರಿಂದ ಶೀತ, ಕೆಮ್ಮು ಅಟ್ಯಾಕ್ ಆಗಬಹುದು ಎನ್ನುವ ಲೆಕ್ಕಾಚಾರದ ಮೇಲೆ ಜನ ಮಾಲ್ ಹಾಗೂ ಚಿತ್ರಮಂದಿರಗಳಿಗೆ ಬರಲು ಭಯಪಡುತ್ತಿದ್ದಾರೆ. ಹೀಗಾಗಿ ಮಾಲ್‍ಗಳಲ್ಲಿ ವ್ಯಾಪಾರ ವಹಿವಾಟಿಲ್ಲ ಹಾಗೂ ಥಿಯೇಟರ್‌ಗಳಲ್ಲಿ ಕಲೆಕ್ಷನ್ ಇಲ್ಲ.

    ಗಾಂಧಿನಗರದ ಥಿಯೇಟರ್‌ಗಳಲ್ಲಂತೂ ಜನರೇ ಇರಲಿಲ್ಲ. ಸಾಮಾನ್ಯ ದಿನಗಳಿಗಿಂತ ಜನ ಕಡಿಮೆ ಇದ್ದರು. ಮಧ್ಯಾಹ್ನದ ಶೋಗೆ ಗಾಂಧಿನಗರದ ಚಿತ್ರಮಂದಿರವೊಂದರಲ್ಲಿ ಕೇವಲ 100-120 ಟಿಕೆಟ್‍ಗಳು ಮಾತ್ರ ಸೇಲಾದವು. ಮಹಾಮಾರಿ ವೈರಸ್‍ಗೆ ಹೆದರಿ ಜನ ಮನೆಯಲ್ಲಿಯೇ ಉಳಿದುಕೊಂಡಿದ್ದಾರೆ. ಇದರಿಂದಾಗಿ ಮಾಲ್ ಹಾಗೂ ಚಿತ್ರಮಂಗರ ಕ್ಷೇತ್ರಕ್ಕೂ ಕೂಡ ನಷ್ಟ ಉಂಟಾಗುತ್ತಿದೆ.

  • ಸಿನಿಮಾ ನೋಡ್ತಿದ್ದಾಗಲೇ ಸಾವನ್ನಪ್ಪಿದ ವ್ಯಕ್ತಿಗೆ ಜಗ್ಗೇಶ್ ಸಂತಾಪ

    ಸಿನಿಮಾ ನೋಡ್ತಿದ್ದಾಗಲೇ ಸಾವನ್ನಪ್ಪಿದ ವ್ಯಕ್ತಿಗೆ ಜಗ್ಗೇಶ್ ಸಂತಾಪ

    ಬೆಂಗಳೂರು: ನವರಸನಾಯಕ ಜಗ್ಗೇಶ್ ನಟಿಸಿರುವ ‘ಕಾಳಿದಾಸ ಕನ್ನಡ ಮೇಷ್ಟ್ರು’ ಚಿತ್ರ ನೋಡುತ್ತಿದ್ದ ವ್ಯಕ್ತಿಯೊಬ್ಬರು ಚಿತ್ರಮಂದಿರದಲ್ಲೇ ಮೃತಪಟ್ಟಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಜಗ್ಗೇಶ್ ಮೃತಪಟ್ಟ ವ್ಯಕ್ತಿಗೆ ಸಂತಾಪ ಸೂಚಿಸಿದ್ದಾರೆ.

    ವ್ಯಕ್ತಿಯೊಬ್ಬರು ಕಾಳಿದಾಸ ಕನ್ನಡ ಮೇಷ್ಟ್ರು ಸಿನಿಮಾ ನೋಡಲು ಸೋಮವಾರ ಮೈಸೂರಿನ ಪ್ರಭಾ ಚಿತ್ರಮಂದಿರಕ್ಕೆ ಬಂದಿದ್ದರು. ಈ ವೇಳೆ ಸಿನಿಮಾ ನೋಡುತ್ತಿದ್ದಂತೆ ವ್ಯಕ್ತಿ ಮೃತಪಟ್ಟಿದ್ದಾರೆ. ಕೊನೆಗೆ ಚಿತ್ರ ಮುಗಿದ ನಂತರ ಚಿತ್ರಮಂದಿರ ಸ್ವಚ್ಛಗೊಳಿಸಲು ಸಿಬ್ಬಂದಿ ಹೋಗಿದ್ದಾರೆ. ಈ ವೇಳೆ ವ್ಯಕ್ತಿ ಮೃತಪಟ್ಟಿರುವುದು ತಿಳಿದು ಬಂದಿದೆ.

    ಮೃತಪಟ್ಟ ವ್ಯಕ್ತಿಯನ್ನು ನೋಡಿ ಸಿಬ್ಬಂದಿ ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ತಿಳಿದ ತಕ್ಷಣ ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದಾರೆ. ಅಲ್ಲದೆ ಮೃತದೇಹವನ್ನು ಮೈಸೂರಿನ ಮೆಡಿಕಲ್ ಕಾಲೇಜು ಮತ್ತು ಸಂಶೋಧನ ಸಂಸ್ಥೆಯ ಶವಾಗಾರಕ್ಕೆ ರವಾನಿಸಿದ್ದಾರೆ

    ಈ ಬಗ್ಗೆ ಪೊಲೀಸರು ತನಿಖೆ ನಡೆಸಿದಾಗ ವ್ಯಕ್ತಿಗೆ ಸುಮಾರು 40 ರಿಂದ 50 ವರ್ಷ ವಯಸ್ಸು ಆಗಿದೆ ಎಂಬುದು ತಿಳಿದು ಬಂದಿದೆ. ಅಲ್ಲದೆ ಅವರ ಎಡಗೈ ಮೇಲೆ ಬೋರೆಗೌಡ ಎಂಬ ಹೆಸರು ಅಚ್ಚೆ ಹಾಕಿಸಿಕೊಂಡಿರುವುದು ಪತ್ತೆಯಾಗಿದೆ. ಆದರೆ ಅವರ ವಿಳಾಸ ಇನ್ನೂ ತಿಳಿದು ಬಂದಿಲ್ಲ.

    ಈ ವಿಷಯ ತಿಳಿದ ಜಗ್ಗೇಶ್ ಅವರು ಟ್ವೀಟ್ ಮಾಡುವ ಮೂಲಕ ಸಂತಾಪ ಸೂಚಿಸಿದ್ದಾರೆ. “ದಿಘ್ಬ್ರಾಂತನಾದೆ ಈ ವಿಷಯ ಓದಿ. ನನ್ನ ಅಭಿಮಾನದ ಆತ್ಮವೇ ಒಬ್ಬ ಸಹೋದರನ ಕಳೆದುಕೊಂಡ ದುಃಖವಾಯಿತು. ನಿಮ್ಮ ಆತ್ಮಕ್ಕೆ ಶಾಂತಿ ಸಿಗಲಿ. ದಯಮಾಡಿ ಇವರ ವಿಳಾಸ ಸಿಕ್ಕರೆ ತಿಳಿಸಿ ವೈಯಕ್ತಿಕವಾಗಿ ನಾನು ಅವರ ಕುಟುಂಬಕ್ಕೆ ಸಾಂತ್ವನ ಹೇಳಬೇಕು. ಹರಿಓಂ” ಎಂದು ಟ್ವೀಟ್ ಮಾಡಿದ್ದಾರೆ.

    ನವರಸ ನಾಯಕ ಜಗ್ಗೇಶ್ ಅಭಿನಯದ `ಕಾಳಿದಾಸ ಕನ್ನಡ ಮೇಷ್ಟ್ರು’ ಸಿನಿಮಾ ಕಳೆದ ವಾರ ಬಿಡುಗಡೆಯಾಗಿದ್ದು, ಯಶಸ್ವಿ ಪ್ರದರ್ಶನ ಕಾಣುತ್ತಿದೆ.

  • ದೇಸಿ ಕಥೆಯೊಂದಿಗೆ ಅಖಾಡಕ್ಕಿಳಿದ ಜಬರ್ಧಸ್ತ್ ಪೈಲ್ವಾನ್!

    ದೇಸಿ ಕಥೆಯೊಂದಿಗೆ ಅಖಾಡಕ್ಕಿಳಿದ ಜಬರ್ಧಸ್ತ್ ಪೈಲ್ವಾನ್!

    ಬೆಂಗಳೂರು: ಕರ್ನಾಟಕ ಮಾತ್ರವಲ್ಲದೇ ದೇಸಾದ್ಯಂತ ಅಗಾಧ ಕಾತರಕ್ಕೆ ಕಾರಣವಾಗಿದ್ದ ಕಿಚ್ಚ ಸುದೀಪ್ ಅಭಿನಯದ ಪೈಲ್ವಾನ್ ತೆರೆ ಕಂಡಿದೆ. ಈ ಬಾರಿ ನಿರ್ದೇಶಕ ಕೃಷ್ಣ ಮತ್ತು ಸುದೀಪ್ ಜೋಡಿ ಬೆರಗಾಗಿಸುವಂಥಾ ಕಮಾಲ್ ಸೃಷ್ಟಿಸುತ್ತಾರೆಂಬ ಭರವಸೆಯೂ ಎಲ್ಲಡೆ ಮೂಡಿಕೊಂಡಿತ್ತು. ಅದಕ್ಕೆ ಎಲ್ಲ ದಿಕ್ಕಿನಲ್ಲಿಯೂ ಪೂರಕವಾಗಿರುವಂತೆಯೇ ಪೈಲ್ವಾನ್ ಪ್ರೇಕ್ಷಕರ ಮುಂದೆ ಬಂದಿದ್ದಾನೆ. ಎಲ್ಲಿಯೂ ಬಿಗುವು ಕಳೆದುಕೊಳ್ಳದ ಕಥೆ, ಪ್ರತೀ ಫ್ರೇಮಿನಲ್ಲಿಯೂ ಕಣ್ಣಿಗೆ ಹಬ್ಬ ಅನ್ನಿಸೋ ದೃಷ್ಯ ವೈಭವ, ಮೈ ನವಿರೇಳಿಸೋ ಸಾಹಸ ಸನ್ನಿವೇಶ ಮತ್ತು ಆಹ್ಲಾದಕರ ಪ್ರೇಮ… ಇವಿಷ್ಟು ಅಂಶಗಳೊಂದಿಗೆ ನಿರ್ದೇಶಕ ಕೃಷ್ಣ ಪೈಲ್ವಾನನನ್ನು ಪೊಗದಸ್ತಾಗಿಯೇ ಅಖಾಡಕ್ಕಿಳಿದಿದ್ದಾರೆ.

    ನಿರ್ದೇಶಕ ಕೃಷ್ಣ ಹಲವಾರು ಕೊಂಬೆ ಕೋವೆಗಳ ಸಂಕೀರ್ಣ ಕಥೆಯನ್ನು ಯಾವ ಗೊಂದಲಕ್ಕೂ ಆಸ್ಪದವಿಲ್ಲದಂತೆ, ಕ್ಷಣ ಕ್ಷಣವೂ ಕುತೂಹಲ ಕೊತಗುಡುವಂತೆ ಕಟ್ಟಿಕೊಟ್ಟಿದ್ದಾರೆ. ಕಿಚ್ಚಾ ಸುದೀಪ್ ಅನಾಥ ಹುಡುಗನಾಗಿ, ಅಖಾಡಕ್ಕಿಳಿಯೋ ಜಟ್ಟಿಯಾಗಿ, ಅಪ್ರತಿಮ ಪ್ರೇಮಿಯಾಗಿಯೂ ಕೃಷ್ಣನ ಪಾತ್ರದಲ್ಲಿ ಮುದ ನೀಡಿದ್ದಾರೆ. ಈ ಕಥೆ ತೆರೆದುಕೊಳ್ಳೋದೇ ಓರ್ವ ಅನಾಥ ಹುಡುಗನಿಂದ. ಚಿಕ್ಕಂದಿನಲ್ಲಿಯೇ ಎಲ್ಲ ಬಂಧಗಳನ್ನೂ ಕಳೆದುಕೊಂಡು ತಬ್ಬಲಿಯಾಗಿದ್ದ ಹುಡುಗ ಕೃಷ್ಣನಿಗೆ ಆಶ್ರಯ ನೀಡುವಾತ ಸರ್ಕಾರ್. ಈ ಸರ್ಕಾರ್‍ನದ್ದು ಪೈಲ್ವಾನರ ಮನೆತನ. ಕಟ್ಟುಮಸ್ತಾದ ಕೃಷ್ಣನನ್ನು ಮಗನಂತೆಯೇ ಪೊರೆಯೋ ಸರ್ಕಾರ್ ಪಾಲಿಗೆ ಆತನನ್ನು ಪೈಲ್ವಾನನಾಗಿ ರೂಪಿಸೋದೊಂದೇ ಗುರಿಯಾಗುತ್ತದೆ.

    ತನ್ನ ತಂದೆಯಂಥಾ ಸರ್ಕಾರ್ ಮತ್ತು ಪೈಲ್ವಾನನಾಗೋ ಕನಸುಗಳೇ ಕೃಷ್ಣನ ಜಗತ್ತಾಗಿ ಬಿಡುತ್ತದೆ. ಈ ಸರ್ಕಾರ್ ಮತ್ತು ಕೃಷ್ಣ ಇಬ್ಬರೂ ಸೇರಿ ಒಂದೇ ಕನಸು ಕಂಡು ಮುಂದುವರೆಯುವಾಗಲೇ ಕಿಚ್ಚನ ಬಾಳಲ್ಲಿ ಪ್ರೀತಿಯ ಬೆಳಕು ಮೂಡಿಕೊಳ್ಳುತ್ತೆ. ರುಕ್ಮಿಣಿ ಎಂಬ ಬ್ಯಸಿನೆಸ್‍ಮನ್ ಮಗಳ ಮೋಹಕ್ಕೆ ಬೀಳೋ ಕಿಚ್ಚನ ಗಮನ ಕುಸ್ತಿಯಿಂದ ಬೇರೆಡೆಗೆ ಹೊರಳಿಕೊಂಡಿದ್ದ ಸರ್ಕಾರ್ ಮನಸು ಕೆಡಿಸುತ್ತೆ. ಇದುವೇ ಜಗತ್ತೇ ಆಗಿದ್ದ ಸಾಕುತಂದೆಯಿಂದಲೂ ಕಿಚ್ಚನನ್ನು ದೂರಾಗಿಸುತ್ತೆ. ಆ ನಂತರದಲ್ಲಿ ಏನಾಗುತ್ತದೆ ಅನ್ನೋದನ್ನು ಥೇಟರಿನಲ್ಲಿಯೇ ನೋಡಿದರೆ ಚೆನ್ನ.

    ಇಡೀ ಸಿನಿಮಾ ಒಂದೇ ವೇಗದಲ್ಲಿ ಚಲಿಸುತ್ತದೆ ಅನ್ನೋದು ನಿಜವಾದ ಪ್ಲಸ್ ಪಾಯಿಂಟ್. ಕಿಚ್ಚ ಸುದೀಪ್ ಈ ಸಿನಿಮಾಗಾಗಿ ಅದೆಂಥಾ ತಯಾರಿ ಮಾಡಿಕೊಂಡಿದ್ದಾರೆಂಬುದು ಕುಸ್ತಿ ಅಖಾಡದಲ್ಲಿ, ಬಾಕ್ಸಿಂಗ್ ರಿಂಗ್‍ನೊಳಗೆ ಸ್ಪಷ್ಟವಾಗಿಯೇ ಗೊತ್ತಾಗುವಂತಿದೆ. ಸಾಮಾನ್ಯವಾಗಿ ಪರಭಾಷಾ ನಾಯಕಿಯರು ಗ್ಲಾಮರ್‍ಗಷ್ಟೇ ಸೀಮಿತವಾಗುತ್ತಾರೆ. ಆದರೆ ನಾಯಕಿ ಆಕಾಂಕ್ಷಾ ಸಿಂಗ್ ಗಟ್ಟಿತನ ಹೊಂದಿರೋ ಪಾತ್ರವನ್ನು ಅಷ್ಟೇ ಪರಿಣಾಮಕಾರಿಯಾಗಿ ನಿಭಾಯಿಸಿದ್ದಾರೆ. ಸುನೀ ಶೆಟ್ಟಿ ತಮ್ಮ ಪಾತ್ರಕ್ಕೆ ಪೈಲ್ವಾನ್ ಮನೆತನದ ಗತ್ತು ಗೈರತ್ತುಗಳನ್ನು ಆವಾಹಿಸಿಕೊಂಡಂತೆ ಜೀವ ತುಂಬಿದ್ದಾರೆ. ಎಲ್ಲ ಪಾತ್ರಗಳೂ ಕೂಡಾ ಇಂಥಾದ್ದೇ ಅಮೋಘ ನಟನೆಯಿಂದ ಕಥೆಗೆ ಜೊತೆಯಾಗಿ ಸಾಗಿವೆ.

    ಪೈಲ್ವಾನ್ ಕೃಷ್ಣ ಪೈಲ್ವಾನನನ್ನು ಪ್ಯಾನಿಂಡಿಯಾ ಲೆವೆಲ್ಲಿನಲ್ಲಿ ಕಾಲೂರಿ ಕಾದಾಡುವಷ್ಟು ಶಶಕ್ತವಾಗಿ ಕಟ್ಟಿ ಕೊಟ್ಟಿದ್ದಾರೆ. ಬಾಲಿವುಡ್ ಸಿನಿಮಾಗಳನ್ನೇ ಮೀರಿಸುವ ದೃಷ್ಯ ವೈಭವ, ನಿರೂಪಣೆಯಲ್ಲಿನ ಕಲಾತ್ಮಕತೆ ಮತ್ತು ಸುದೀಪ್ ಅವರ ನಟನೆಯ ಖದರ್‍ನಿಂದ ಪೈಲ್ವಾನ್ ಕಳೆಗಟ್ಟಿಕೊಂಡಿದೆ. ಅವರು ಜಟ್ಟಿಯಾಗಿ ಕಣಕ್ಕಿಳಿದು ಮೈನವಿರೇಳಿಸುತ್ತಾರೆ, ಭಾವನಾತ್ಮಕ ದೃಷ್ಯಗಳಲ್ಲಿ ಮನಸು ತೊಯ್ದಾಡುವಂತೆ ಮಾಡುತ್ತಾರೆ. ಒಟ್ಟಾರೆಯಾಗಿ ಎಲ್ಲ ಶೇಡುಗಳಲ್ಲಿಯೂ ಸುದೀಪ್ ಅದ್ಭುತವೆಂಬಂಥಾ ನಟನೆಯನ್ನೆ ಕೊಟ್ಟಿದ್ದಾರೆ. ಒಟ್ಟಾರೆಯಾಗಿ ಪೈಲ್ವಾನ್ ಎಲ್ಲ ವರ್ಗದ ಪ್ರೇಕ್ಷಕರಿಗೂ ಇಷ್ಟವಾಗುವಂಥಾ ಚಿತ್ರ.

    ರೇಟಿಂಗ್: 4/5

  • ವಿಶ್ವಾದ್ಯಂತ ಪೈಲ್ವಾನ್ ರಿಲೀಸ್ – 3 ಸಾವಿರ ಥಿಯೇಟರ್‌ಗಳಲ್ಲಿ ಕಿಚ್ಚನ ಹವಾ

    ವಿಶ್ವಾದ್ಯಂತ ಪೈಲ್ವಾನ್ ರಿಲೀಸ್ – 3 ಸಾವಿರ ಥಿಯೇಟರ್‌ಗಳಲ್ಲಿ ಕಿಚ್ಚನ ಹವಾ

    – ಚಿತ್ರಮಂದಿರದ ಎದುರು 101 ತೆಂಗಿನಕಾಯಿ ಒಡೆದ ಅಭಿಮಾನಿ

    ಬೆಂಗಳೂರು: ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರು ನಟಿಸಿದ ಸ್ಯಾಂಡಲ್‍ವುಡ್ ಬಹುನಿರೀಕ್ಷಿತ ‘ಪೈಲ್ವಾನ್’ ಚಿತ್ರ ಇಂದು ಅದ್ಧೂರಿಯಾಗಿ ತೆರೆಗೆ ಅಪ್ಪಳಿಸಿದೆ.

    ಬೆಂಗಳೂರಿನ ಸಿದ್ದೇಶ್ವರ ಚಿತ್ರಮಂದಿರದಲ್ಲಿ ಮುಂಜಾನೆ 5.30ರಿಂದ ಪ್ರದರ್ಶನ ಶುರುವಾಗಿದೆ. ಇತ್ತ ಮೆಜೆಸ್ಟಿಕ್‍ನ ಸಂತೋಷ್ ಚಿತ್ರಮಂದಿರದಲ್ಲಿ ಇದೇ ಮೊದಲ ಬಾರಿಗೆ ಬೆಳಗ್ಗೆ 7 ಗಂಟೆಗೆ ಶೋ ಆರಂಭವಾಗಿದೆ. ಸ್ವತಃ ಕಿಚ್ಚ ಸುದೀಪ್ ಅವರೇ ಚಿತ್ರಮಂದಿರಕ್ಕೆ ಆಗಮಿಸಿ ಚಿತ್ರ ವೀಕ್ಷಿಸುತ್ತಿದ್ದಾರೆ. ಇದೇ ವೇಳೆ ಅಭಿಮಾನಿಯೊಬ್ಬರು ಚಿತ್ರಮಂದಿರದ ಎದುರು 101 ತೆಂಗಿನ ಕಾಯಿಯನ್ನು ಒಡೆದಿದ್ದಾರೆ.

    ಸುದೀಪ್ ಅವರ ಸಿನಿಮಾ ಇದೇ ಮೊದಲ ಬಾರಿಗೆ ಕನ್ನಡ, ತಮಿಳು, ತೆಲುಗು, ಮಲಯಾಳಂ ಮತ್ತು ಹಿಂದಿ ಭಾಷೆಗಳಲ್ಲಿ ಬಿಡುಗಡೆ ಆಗಿದೆ. ಅಲ್ಲದೆ ಹೊರ ರಾಜ್ಯ ಮತ್ತು ವಿದೇಶಗಳಲ್ಲಿ ಪೈಲ್ವಾನ್ ತನ್ನ ತಾಕತ್ತನ್ನು ಪ್ರದರ್ಶಿಸುತ್ತಿದ್ದು, ಅಭಿಮಾನಿಗಳು ಚಿತ್ರವನ್ನು ಅದ್ಧೂರಿಯಾಗಿ ಬರಮಾಡಿಕೊಂಡಿದ್ದಾರೆ.

    ಕರ್ನಾಟಕದಲ್ಲಿ ಪೈಲ್ವಾನ್ ಸಿನಿಮಾ 400 ಚಿತ್ರಮಂದಿರಗಳಲ್ಲಿ, ಆಂಧ್ರಪ್ರದೇಶ ಹಾಗೂ ತೆಲಂಗಾಣದಲ್ಲಿ 450ಕ್ಕೂ ಹೆಚ್ಚು ಚಿತ್ರಮಂದಿರ ತಮಿಳುನಾಡಿನಲ್ಲಿ 150ಕ್ಕೂ ಹೆಚ್ಚು ಚಿತ್ರಮಂದಿರ ಹಾಗೂ ವಿಶ್ವಾದ್ಯಂತ 3000 ಚಿತ್ರಮಂದಿರದಲ್ಲಿ ಸಿನಿಮಾ ಬಿಡುಗಡೆ ಆಗಿದೆ.

    ಪೈಲ್ವಾನ್ ಚಿತ್ರವನ್ನು ಎಸ್. ಕೃಷ್ಣ ನಿರ್ದೇಶನ ಮಾಡಿದ್ದು, ಅವರ ಪತ್ನಿ ಸ್ವಪ್ನ ಕೃಷ್ಣ ಅವರು ನಿರ್ಮಾಣ ಮಾಡಿದ್ದಾರೆ. ಈ ಚಿತ್ರದಲ್ಲಿ ಕಿಚ್ಚ ಸುದೀಪ್‍ಗೆ ನಾಯಕಿಯಾಗಿ ಆಕಾಂಕ್ಷ ಸಿಂಗ್ ನಟಿಸಿದ್ದಾರೆ. ಬಾಲಿವುಡ್ ನಟ ಸುನೀಲ್ ಶೆಟ್ಟಿ, ಕಬೀರ್ ದುಹಾನ್ ಸಿಂಗ್ ಮತ್ತು ಸುಶಾಂತ್ ಸಿಂಗ್ ನಟನೆ ಮಾಡಿರುವ ಈ ಚಿತ್ರಕ್ಕೆ ಅರ್ಜನ್ ಜನ್ಯ ಸಂಗೀತ ನಿರ್ದೇಶನ ಮಾಡಿದ್ದಾರೆ.

  • ನವರಂಗ್ ಚಿತ್ರಮಂದಿರದಲ್ಲಿ ಪ್ರದರ್ಶನ ಸ್ಥಗಿತ

    ನವರಂಗ್ ಚಿತ್ರಮಂದಿರದಲ್ಲಿ ಪ್ರದರ್ಶನ ಸ್ಥಗಿತ

    ಬೆಂಗಳೂರು: ನಗರದ ಖ್ಯಾತ ಚಿತ್ರಮಂದಿರ ನವರಂಗ್ ಚಿತ್ರ ಪ್ರದರ್ಶನವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗುತ್ತಿದ್ದು, ಹೊಸ ರೂಪ ಪಡೆದುಕೊಂಡು ಮತ್ತೆ ಆರಂಭವಾಗಲಿದೆ.

    ಡಾ. ರಾಜ್‍ಕುಮಾರ್ ರಸ್ತೆಯಲ್ಲಿರುವ ನವರಂಗ್ ಚಿತ್ರ ಮಂದಿರದಲ್ಲಿ ಸದ್ಯ ಚಿತ್ರ ಪ್ರದರ್ಶನ ಸ್ಥಗಿತಗೊಳಿಸಲಾಗಿದೆ. ಈ ಬಗ್ಗೆ ಮಾತನಾಡಿದ ಮಾಲೀಕ ಕೆಸಿಎನ್ ಮೋಹನ್, ತಾತ್ಕಾಲಿಕವಾಗಿ ಮಾತ್ರ ಚಿತ್ರಮಂದಿರವನ್ನು ಕ್ಲೋಸ್ ಮಾಡುತ್ತಿದ್ದೇವೆ ಎಂದು ಹೇಳಿದ್ದಾರೆ.

    ಈಗಾಗಲೇ ನಗರದಲ್ಲಿ ಅತ್ಯಾಧುನಿಕ ಸೌಲಭ್ಯಗಳೊಂದಿಗೆ ಎರಡು, ಮೂರು ಸ್ಕ್ರೀನ್ ಗಳನ್ನು ಹೊಂದಿರುವ ಹಲವು ಮಲ್ಟಿಪ್ಲೆಕ್ಸ್ ಥಿಯೇಟರ್ ಗಳು ನಿರ್ಮಾಣವಾಗಿದೆ. ಹಾಗಾಗಿ ನವರಂಗ ಚಿತ್ರಮಂದಿರವನ್ನು ಕೂಡ ಇದೇ ರೀತಿ ನವೀಕರಣ ಮಾಡಲು ಮಾಲೀಕರು ಮುಂದಾಗಿದ್ದಾರೆ.

    ನಗರದಲ್ಲಿ ಇತ್ತೀಚೆಗೆ ಮಲ್ಟಿಪ್ಲೆಕ್ಸ್ ಚಿತ್ರಮಂದಿರಗಳು ಜಾಸ್ತಿ ಆಗುತ್ತಿರುವುರಿಂದ ಜಾಸ್ತಿ ಲಾಭ ಸಿಗುತ್ತಿಲ್ಲ. ಅನಿವಾರ್ಯವಾಗಿ ಚಿತ್ರಮಂದಿರಗಳಲ್ಲಿ ಕೆಲ ಆಧುನಿಕ ಬದಲಾವಣೆಗಳನ್ನು ಮಾಡಬೇಕು. ಚಿತ್ರಮಂದಿರ ನವೀಕರಣ ಮಾಡುತ್ತಿರುವ ವಿಷಯ ತಿಳಿದ ಕೆಲವರು, ಥಿಯೇಟರ್ ಕೆಡವಿ ಶಾಪಿಂಗ್ ಮಾಲ್ ಮಾಡಲು ಸಲಹೆ ನೀಡಿದ್ದರು. ಆದರೆ ಇದು ನಮ್ಮ ತಂದೆಯವರ ಕನಸು. ಹಾಗಾಗಿ ನಾನು ಚಿತ್ರಮಂದಿರ ಕೆಡವದೆ ಹೊಸ ರೂಪ ಪಡೆದುಕೊಂಡು ಮತ್ತೆ ರೀ-ಓಪನ್ ಮಾಡುತ್ತೇನೆ ಎಂದು ಕೆಸಿಎನ್ ಮೋಹನ್ ಪ್ರತಿಕ್ರಿಯಿಸಿದ್ದಾರೆ.

    1963ರಲ್ಲಿ ಎಸ್ ನಿಜಲಿಂಗಪ್ಪವರು ಚಿತ್ರಮಂದಿರವನ್ನು ಉದ್ಘಾಟನೆ ಮಾಡಿದ್ದರು. ರಾಜ್‍ಕುಮಾರ್ ಅವರ `ವೀರ ಕೇಸರಿ’ ಸಿನಿಮಾ ಮೊದಲ ಬಾರಿಗೆ ಬಿಡುಗಡೆಯಾಗಿತ್ತು. ನವರಂಗ ಚಿತ್ರಮಂದಿಕ್ಕೆ ಸುಮಾರು 60 ವರ್ಷಗಳ ಇತಿಹಾಸವನ್ನು ಇದೆ.

    ಇತ್ತೀಚೆಗೆ ಈ ಚಿತ್ರಮಂದಿರದಲ್ಲಿ ಯಂಗ್ ರೆಬೆಲ್ ಸ್ಟಾರ್ ನಟ ಅಭಿಷೇಕ್ ನಟನೆಯ ‘ಅಮರ್’ ಸಿನಿಮಾ ಬಿಡುಗಡೆಯಾಗಿತ್ತು. ಡಾ. ರಾಜ್‍ಕುಮಾರ್ ಕುಟುಂಬ ಎಲ್ಲಾ ಸಿನಿಮಾಗಳು ಈ ಚಿತ್ರಮಂದಿರಲ್ಲಿ ಬಿಡುಗಡೆಯಾಗಿದೆ. ಗೋಲ್ಡನ್ ಸ್ಟಾರ್ ಗಣೇಶ್ ನಟನೆಯ `ಮುಂಗಾರು ಮಳೆ’ ಸಿನಿಮಾ ಚಿತ್ರಮಂದಿರಲ್ಲಿ 25 ವಾರ ಪ್ರದರ್ಶನ ಕಂಡಿತ್ತು.

  • ದಾವಣಗೆರೆಯ ಚಿತ್ರಮಂದಿರದಲ್ಲಿ ಡಿ-ಬಾಸ್ ಅಭಿಮಾನಿಗಳಿಂದ ಸಂಭ್ರಮಾಚರಣೆ

    ದಾವಣಗೆರೆಯ ಚಿತ್ರಮಂದಿರದಲ್ಲಿ ಡಿ-ಬಾಸ್ ಅಭಿಮಾನಿಗಳಿಂದ ಸಂಭ್ರಮಾಚರಣೆ

    ದಾವಣಗೆರೆ: ಚಾಲೆಂಜಿಂಗ್ ಸ್ಟಾರ್ ದರ್ಶನ ಅಭಿನಯದ ‘ಯಜಮಾನ’ ಚಿತ್ರ 100 ದಿನಗಳ ಪೂರೈಸಿದ್ದು, ದಾವಣಗೆರೆಯ ಗೀತಾಂಜಲಿ ಚಿತ್ರಮಂದಿರದಲ್ಲಿ ಅಭಿಮಾನಿಗಳು ಕೇಕ್ ಕತ್ತರಿಸಿ ಸಿಹಿ ಹಂಚುವ ಮೂಲಕ ಸಂಭ್ರಮಾಚರಣೆ ಮಾಡಿದ್ದಾರೆ.

    ಜಿಲ್ಲಾ ದರ್ಶನ್ ಅಭಿಮಾನಿ ಸಂಘ ಈ ಆಚರಣೆ ಮಾಡಿ ಡಿ-ಬಾಸ್ ಗೆ ಜೈಕಾರ ಹಾಕಿದರು. ದರ್ಶನ್ ಅಭಿನಯದ ಯಜಮಾನ ಚಿತ್ರ ರಾಜ್ಯದಲ್ಲಿ ಯಶಸ್ವಿ ಪ್ರದರ್ಶನವಾಗಿದ್ದು, ಹತ್ತಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ನೂರು ದಿನ ಪೂರೈಸಿದೆ. ಕನ್ನಡ ಚಿತ್ರ ನೂರು ದಿನ ಪೂರೈಸುವುದೇ ಕಷ್ಟವಾಗಿದ್ದು, ಅಂತಹದರಲ್ಲಿ ಯಜಮಾನ 100 ದಿನ ಪೂರೈಸಿದೆ ಎಂದು ಅಭಿಮಾನಿಗಳು ಹರ್ಷ ವ್ಯಕ್ತಪಡಿಸಿದರು.

    ಯಜಮಾನ ಚಿತ್ರ ಮಾರ್ಚ್ 1ರಂದು ವಿಶ್ವಾದ್ಯಂತ ಬಿಡುಗಡೆಯಾಗಿತ್ತು. ಈ ಚಿತ್ರ ಬಿಡುಗಡೆಯಾಗುವಾಗ ದರ್ಶನ್ ಅವರ 80 ಅಡಿ ಎತ್ತರದ ಕಟೌಟ್‍ಗೆ ಅಭಿಮಾನಿಗಳು ಹಾಲಿನ ಅಭಿಷೇಕ ಮಾಡಿದ್ದರು. ಕಟೌಟ್ ಜೊತೆಗೆ ಮೊದಲ ಬಾರಿಗೆ ದರ್ಶನ್ ಪುತ್ರ ವಿನೀಶ್‍ನ 30 ಅಡಿ ಕಟೌಟನ್ನು ಕೂಡ ಹಾಕಲಾಗಿತ್ತು. ದರ್ಶನ್ ಅವರ ಯಜಮಾನ ಚಿತ್ರದಲ್ಲಿ ಅವರ ಮಗ ವಿನೀಶ್ ಅವರು ಒಂದು ವಿಶೇಷ ಹಾಡಿನಲ್ಲಿ ನಟಿಸಿದ್ದಾನೆ.

    ಈ ಚಿತ್ರದ ಟ್ರೈಲರ್ ಗೆ ಭರ್ಜರಿ ರೆಸ್ಪಾನ್ಸ್ ಸಿಕ್ಕಿತ್ತು. ಅಲ್ಲದೇ ಯೂಟ್ಯೂಬ್ ಸಂಸ್ಥೆ ತನ್ನ ಟ್ವಿಟ್ಟರ್ ಖಾತೆಯಲ್ಲಿ, “ಈ ಅತಿಥಿ ಯಾವಾಗಲೂ ಗ್ರ್ಯಾಂಡ್ ಎಂಟ್ರಿ ಪಡೆಯುತ್ತಾರೆ. ಈ ಟ್ರೈಲರ್ ನೋಡಿದ್ದಾಗ ನಿಮಗೆ ಗೊತ್ತಾಗುತ್ತೆ” ಎಂದು ಚಿತ್ರದ ಫೋಟೋಗಳನ್ನು ಹಾಗೂ ಟ್ರೈಲರ್ ಲಿಂಕ್ ಹಾಕಿ ಟ್ವೀಟ್ ಮಾಡಿತ್ತು.

    ಯಜಮಾನ ಚಿತ್ರದಲ್ಲಿ ದರ್ಶನ್‍ಗೆ ಜೋಡಿಯಾಗಿ ರಶ್ಮಿಕಾ ಮಂದಣ್ಣ ಹಾಗೂ ತಾನ್ಯ ಹೋಪ್ ಮಿಂಚಿದ್ದರು. ಡೈನಾಮಿಕ್ ಸ್ಟಾರ್ ದೇವರಾಜ್, ರವಿಶಂಕರ್, ಡಾಲಿ ಧನಂಜಯ್, ದತ್ತಣ್ಣ, ಶಿವರಾಜ್. ಕೆ.ಆರ್ ಪೇಟೆ, ಸಾಧುಕೋಕಿಲ ಸೇರಿದಂತೆ ಅತಿ ದೊಡ್ಡ ತಾರಾಬಳಗವೇ ಈ ಚಿತ್ರದಲ್ಲಿ ಇತ್ತು.

    ಈ ಚಿತ್ರವನ್ನು ಪೋನ್‍ಕುಮಾರ್ ಹಾಗೂ ವಿ. ಹರಿಕೃಷ್ಣ ಜಂಟಿಯಾಗಿ ನಿರ್ದೇಶಿಸಿದ್ದರು. ಸಂಗೀತ ನಿರ್ದೇಶಕರಾಗಿ ಬಜಾರ್ ನಲ್ಲಿ ಮಿನುಗುತ್ತಿರುವ ಹರಿಕೃಷ್ಣ, ಯಜಮಾನನಿಗಾಗಿ ಡೈರೆಕ್ಟರ್ ಕ್ಯಾಪ್ ತೊಟ್ಟು ನಿರ್ದೇಶಕರಾಗಿದ್ದರು. ಈ ಚಿತ್ರವನ್ನು ಶೈಲಜಾ ನಾಗ್ ಹಾಗೂ ಬಿ. ಸುರೇಶ್ ನಿರ್ಮಿಸಿದ್ದಾರೆ.

  • 2 ವರ್ಷಗಳಿಂದ ಮುಚ್ಚಿದ್ದ ಶಂಕರ್ ನಾಗ್ ಚಿತ್ರಮಂದಿರ ಈಗ ಮತ್ತೆ ಓಪನ್

    2 ವರ್ಷಗಳಿಂದ ಮುಚ್ಚಿದ್ದ ಶಂಕರ್ ನಾಗ್ ಚಿತ್ರಮಂದಿರ ಈಗ ಮತ್ತೆ ಓಪನ್

    ಬೆಂಗಳೂರು: ನಟ ಶಂಕರ್ ನಾಗ್ ಅವರು ಕನ್ನಡ ಚಿತ್ರರಂಗದ ಮರೆಲಾಗದ ಮಾಣಿಕ್ಯ. ಶಂಕರ್ ನಾಗ್ ಹೆಸರೇ ಅದೆಷ್ಟೋ ಜನರಿಗೆ ಸ್ಪೂರ್ತಿ. ಎರಡು ವರ್ಷಗಳಿಂದ ಮುಚ್ಚಿದ ಶಂಕರ್ ನಾಗ್ ಚಿತ್ರಮಂದಿರ ಈಗ ಮತ್ತೆ ಆಟ ಆರಂಭಿಸಿದ್ದು, ಶಂಕ್ರಣ್ಣನ ಅಭಿಮಾನಿಗಳು ಪುಲ್ ಖುಷ್ ಆಗಿದ್ದಾರೆ.

    1907ರಲ್ಲಿ ನಗರದ ಮಹಾತ್ಮ ಗಾಂಧಿ ರಸ್ತೆಯಲ್ಲಿ ಬಿಬಿಎಂಪಿ ಕಟ್ಟಡದಲ್ಲಿ ಶಂಕರ್ ನಾಗ್ ಹೆಸರಲ್ಲಿ ಚಿತ್ರಮಂದಿರ ತೆರೆಯಲಾಗಿತ್ತು. ಆದರೆ ಹಲವು ಕಾರಣಗಳಿದ್ದ 2 ವರ್ಷಗಳ ಹಿಂದೆ ಚಿತ್ರಮಂದಿರ ಕ್ಲೋಸ್ ಆಗಿತ್ತು. ಈಗ ಸ್ವಾಗತ್ ಶಂಕರ್ ನಾಗ್ ಚಿತ್ರಮಂದಿರ ಎಂಬ ಹೆಸರಿನಲ್ಲಿ ರೀ-ಓಪನ್ ಆಗಿದೆ.

    ಈ ಚಿತ್ರಮಂದಿರವನ್ನು ನ್ಯೂ ಟೆಕ್ನಾಲಜಿ ಬಳಸಿ, ಈಗಿನ ಜನರೇಶನ್‍ಗೆ ತಕ್ಕಂತೆ ರೆಡಿ ಮಾಡಲಾಗಿದೆ. ಇದರ ಮತ್ತೊಂದು ವಿಶೇಷತೆಯೆಂದರೆ ಭಾರತದಲ್ಲೇ ಅತೀ ದೊಡ್ಡ ಡಿಜಿಟಲ್ ಎಲ್‍ಇಡಿ ಸ್ಕ್ರೀನ್ ಇರುವು ಚಿತ್ರಮಂದಿರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

    ಯಾವುದೇ ಪ್ರೋಜೆಕ್ಟರ್ ಗಳನ್ನು ಬಳಸದೇ 14 ಮೀಟರ್ ಅಗಲ, 7.2 ಮೀಟರ್ ಎತ್ತರದಲ್ಲಿ ಸ್ಕ್ರೀನ್‍ನ್ನು ಖಾಸಗಿ ಸಂಸ್ಥೆ ಸಹಭಾಗಿತ್ವದಲ್ಲಿ ಅಳವಡಿಸಲಾಗಿದೆ. ಸಿಂಗಲ್ ಸ್ಕ್ರೀನ್‍ನಲ್ಲಿಯೇ 614 ಆಸನಗಳ ವ್ಯವಸ್ಥೆ ಸಹ ಮಾಡಲಾಗಿದೆ. ಹೀಗಾಗಿ ಸೌಂಡ್, ಪಿಚ್ಚರ್ ಕ್ವಾಲಿಟಿ ಸಹ ಅದ್ಭುತವಾಗಿ ಮೂಡಿ ಬರುತ್ತಿದೆ ಎಂದು ವೀಕ್ಷಕರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.