Tag: Thermal Power Plants

  • ವಿದ್ಯುತ್ ಕಂಪನಿಗಳ 389.66 ಕೋಟಿ ರೂ. ಬಾಕಿ ಮನ್ನಾ: ಸಿಎಂ ಘೋಷಣೆ

    ವಿದ್ಯುತ್ ಕಂಪನಿಗಳ 389.66 ಕೋಟಿ ರೂ. ಬಾಕಿ ಮನ್ನಾ: ಸಿಎಂ ಘೋಷಣೆ

    ಬೆಂಗಳೂರು: ಭಾಗ್ಯಜ್ಯೋತಿ, ಕುಟೀರ ಜ್ಯೋತಿ, ಅಮೃತಜ್ಯೋತಿ ಯೋಜನೆಗಳಡಿ 389.66 ಕೋಟಿ ರೂ.ಗಳು ಬಾಕಿ ಉಳಿದಿದ್ದವು. ಬಾಕಿ ಇರುವುದರಿಂದ ಗೃಹಜ್ಯೋತಿಯಡಿ (Gruha Jyothi Scheme) ಉಚಿತ ಕೊಡುವುದು ಕಷ್ಟವಾಗುತ್ತಿತ್ತು. ಆದ್ದರಿಂದ ಬಾಕಿ ಮೊತ್ತವನ್ನು ಒಂದು ಬಾರಿಗೆ ಮನ್ನಾ ಮಾಡಲಾಗುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಘೋಷಣೆ ಮಾಡಿದರು.

    ಇಂಧನ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ನಂತರ ನಡೆದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ಭಾಗ್ಯಜ್ಯೋತಿ, ಕುಟೀರ ಜ್ಯೋತಿಗೆ 18 ಯೂನಿಟ್‍ಗಳ ಮಿತಿಯಿತ್ತು. ಅದನ್ನು 40 ಯೂನಿಟ್‍ಗಳಿಗೆ ನಮ್ಮ ಸರ್ಕಾರವೇ ಹಿಂದೆ ಹೆಚ್ಚಳ ಮಾಡಿತ್ತು. ಈ ಗೃಹಜ್ಯೋತಿ ಬಂದ ನಂತರ ಭಾಗ್ಯಜ್ಯೋತಿ (Bhagya Jyoti Scheme), ಕುಟೀರ ಜ್ಯೋತಿ, ಅಮೃತಜ್ಯೋತಿ ಯೋಜನೆಗಳನ್ನ ಗೃಹಜ್ಯೋತಿ ಯೋಜನೆಯಡಿ ಸೇರಿಸಿ, 58 ಯೂನಿಟ್‍ವರಗೆ ಉಚಿತವಾಗಿ ವಿದ್ಯುತ್ ನೀಡಲು ತೀರ್ಮಾನಿಸಿದೆ ಎಂದು ಹೇಳಿದರು. ಇದನ್ನೂ ಓದಿ: ಕೃಷಿ ಪಂಪ್‌ಸೆಟ್‌ಗಳಿಗೆ ಪ್ರತಿದಿನ 7 ಗಂಟೆ ವಿದ್ಯುತ್‌ – ಸಿಎಂ ಮಹತ್ವದ ಸಭೆಯಲ್ಲಿ ನಿರ್ಧಾರ

    ಭಾಗ್ಯಜ್ಯೋತಿ, ಕುಟೀರ ಜ್ಯೋತಿ, ಅಮೃತಜ್ಯೋತಿ ಯೋಜನೆಗಳಡಿ 389.66 ಕೋಟಿ ರೂ.ಗಳು ಬಾಕಿ ಉಳಿದಿದ್ದವು. ಬಾಕಿ ಇರುವುದರಿಂದ ಗೃಹಜ್ಯೋತಿಯಡಿ ಉಚಿತ ಕೊಡುವುದು ಕಷ್ಟವಾಗುತ್ತಿತ್ತು. ಆದ್ದರಿಂದ ಬಾಕಿ ಮೊತ್ತವನ್ನು ಒಂದು ಬಾರಿಗೆ ಮನ್ನಾ ಮಾಡಲಾಗುತ್ತಿದೆ. ಇನ್ಮುಂದೆ ಬಾಕಿ ಕೊಡಬೇಕಾದ ಅಗತ್ಯವಿಲ್ಲ. ಸರ್ಕಾರಿ ಪ್ರಾಥಮಿಕ ಶಾಲೆ ಹಾಗೂ ಜೂನಿಯರ್ ಕಾಲೇಜುಗಳಿಗೆ ನ.1 ರಂದು ಘೋಷಿಸಿದಂತೆ ವಿದ್ಯುತ್ ಹಾಗೂ ನೀರಿನ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ಸಭೆಯಲ್ಲಿ ತೀರ್ಮಾನಿಸಲಾಗಿದೆ. ಮುಂದಿನ ಮುಂಗಾರಿನ ವರೆಗೆ ಮಳೆ ಬರುವುದಿಲ್ಲ ಎಂಬುದೆಲ್ಲವನ್ನು ಲೆಕ್ಕಾಚಾರ ಮಾಡಿಯೇ ಈ ತೀರ್ಮಾನ ಮಾಡಲಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ರಶ್ಮಿಕಾ ಅರೆಬೆತ್ತಲೆ ಫೇಕ್ ವಿಡಿಯೋ: ಕಿಡಿಗೇಡಿಗಳಿಗೆ ರಾಜೀವ್‌ ಚಂದ್ರಶೇಖರ್‌ ಖಡಕ್‌ ವಾರ್ನಿಂಗ್‌

    ರಾಜ್ಯದಲ್ಲಿ ವಿದ್ಯುತ್‌ ಕೊರತೆಯಿದೆ ಎಂದು ನೀರಾವರಿ ಪಂಪ್‍ಸೆಟ್‍ಗಳಿಗೆ 7 ಗಂಟೆಗಳ ಕಾಲ ಹರಿಸಲು ಮೊದಲೇ ಘೋಷಣೆ ಮಾಡಿದ್ದೆವು. ಕೆಲವು ಜನ ಸತತವಾಗಿ ಮೂರು ಫೇಸ್‍ನಲ್ಲಿ 5 ಗಂಟೆ ವಿದ್ಯುತ್ ನೀಡಿದರೆ ಸಾಕು ಎಂದಿದ್ದರು. ಅದಕ್ಕಾಗಿ 5 ಗಂಟೆಗಳ ಕಾಲ 3 ಫೇಸ್‍ನಲ್ಲಿ ವಿದ್ಯುತ್ ನೀಡುವಂತೆ ಸೂಚನೆ ನೀಡಲಾಗಿತ್ತು. ರಾಯಚೂರು, ಕೊಪ್ಪಳ, ಬಳ್ಳಾರಿ, ಯಾದಗಿರಿ ರೈತರು ಭೇಟಿ ಮಾಡಿ ಭತ್ತ ಬೆಳೆಯುವುದರಿಂದ 5 ಗಂಟೆಗಳ ಕಾಲ ವಿದ್ಯುತ್ ನೀಡುವುದು ಸಾಕಾಗುವುದಿಲ್ಲ, 7 ಗಂಟೆಗಳ ಕಾಲ ನೀಡಬೇಕೆಂದು ಎಂದು ಮನವಿ ಮಾಡಿದರು. ಕಬ್ಬು ಹಾಗೂ ಭತ್ತ ಕಟಾವಿಗೆ ಬಂದಿರುವುದರಿಂದ ಈ ಭಾಗದಲ್ಲಿ 7 ಗಂಟೆಗಳ ಕಾಲ ವಿದ್ಯುತ್ ನೀಡಲು ಸೂಚನೆ ನೀಡಲಾಗಿದೆ. ಉಳಿದ ಭಾಗಗಳಿಗೆ ನೀಡುತ್ತಿದ್ದ 5 ಗಂಟೆಗಳ ವಿದ್ಯುತ್‌ ಅನ್ನು 7 ಗಂಟೆಗಳ ಕಾಲ ನೀಡಲು ಸಾಧ್ಯವಾಗುತ್ತದೆ ಎಂದು ನಿರ್ಧರಿಸಲಾಗಿದೆ.

    ವಿದ್ಯುತ್ ಉತ್ಪಾದನೆಯಲ್ಲಿ ಹೆಚ್ಚಳ: ರಾಯಚೂರು, ಬಳ್ಳಾರಿಯಲ್ಲಿ ಥರ್ಮಲ್ ಘಟಕಗಳಿದ್ದು, ರಾಜ್ಯದಲ್ಲಿ ಥರ್ಮಲ್, ಜಲವಿದ್ಯುತ್, ಸೋಲಾರ್ ಮೂಲಕ ವಿದ್ಯುತ್ ಉತ್ಪಾದಿಸುತ್ತಿದ್ದು. ಥರ್ಮಲ್ ಘಟಕವು 1000 ಮೆಗಾ ವ್ಯಾಟ್ ಉತ್ಪಾದಿಸುತ್ತಿದೆ. ಸುಮಾರು 2,400 ರಿಂದ 3,200 ಮೆ.ವ್ಯಾ, ವಿದ್ಯುತ್ ಉತ್ಪಾದನೆ ಹೆಚ್ಚಾಗಿದೆ. ಕಬ್ಬು ಅರೆಯುವುದು ಪ್ರಾರಮಭವಾಗಿ ಕೋ-ಜನರೇಷನ್ ಆಗಿರುವುದರಿಂದ 450 ಮೆ.ವ್ಯಾಟ್ ಉತ್ಪಾದನೆಯಾಗಿದೆ. ಕೂಡ್ಲಗಿಯಲ್ಲಿ 150 ಮೆ.ವ್ಯಾ ಕರ್ನಾಟಕಕ್ಕೆ ಉಳಿತಾಯವಾಗಲಿದೆ. ಜೊತೆಗೆ ವಿದ್ಯುತ್‌ ಖರೀದಿ ಮಾಡುವುದರಿಂದ ಹೆಚ್ಚು ವಿದ್ಯುತ್ ದೊರೆಯಲಿದೆ. ಹಾಗಾಗಿ ಪ್ರತಿದಿನ 7 ತಾಸು ವಿದ್ಯುತ್‌ ಪಂಪ್‍ಸೆಟ್‍ಗಳಿಗೆ ನೀಡುತ್ತಿದ್ದೇವೆ. ಕೈಗಾರಿಕೆಗಳಿಗೆ, ಗೃಹಬಳಕೆಗೆ ವಿದ್ಯುತ್ ಕಡಿತ ಮಾಡುವುದಿಲ್ಲ. ಪಂಪ್‍ಸೆಟ್‍ಗಳಿಗೆ ನೀಡುವ ವಿದ್ಯುತ್ ಸಹಾಯಧನವನ್ನು ಸರ್ಕಾರವೇ ನೀಡಲಿದೆ. 13,100 ಕೋಟಿ ರೂ.ಗಳನ್ನು ಬಜೆಟ್‍ನಲ್ಲಿ ಒದಗಿಸಲಾಗಿದೆ ಎಂದು ಮಾಹಿತಿ ನೀಡಿದರು.

    70% ರಷ್ಟು ಥರ್ಮಲ್ ವಿದ್ಯುತ್ ಉತ್ಪಾದನೆ: 70% ರಷ್ಟು ಥರ್ಮಲ್ ವಿದ್ಯುತ್‌ ಉತ್ಪಾದನೆಯಾಗುತ್ತಿದೆ 1,000 ಯೂನಿಟ್‍ವರೆಗೆ ವಿದ್ಯುತ್‌ ಅನ್ನು ಹೊರಗಿನಿಂದ ಖರೀದಿಸಲಾಗುತ್ತಿದೆ. ವಿದ್ಯುತ್ ಖರೀದಿಯ ಮೊತ್ತ ಎಷ್ಟು ವಿದ್ಯುತ್ ಖರೀದಿಸುತ್ತೇವೆ ಎನ್ನುವುದರ ಮೇಲೆ ಅವಲಂಬಿತವಾಗಿದೆ. ಸ್ಥಳೀಯ ಹಾಗೂ ಆಮದು ಮಾಡಿದ ಕಲ್ಲಿದ್ದಲನ್ನು ಮಿಶ್ರಣ ಮಾಡಿ ಬಳಸುವುದರಿಂದ ವಿದ್ಯುತ್ ಉತ್ಪಾದನೆಯಾಗುತ್ತದೆ. ಉತ್ತರ ಪ್ರದೇಶ ಹಾಗೂ ಪಂಜಾಬ್ ನಡುವೆ ನಮ್ಮದು ವಿನಿಮಯ ಪದ್ದತಿ ಇದೆ. ಈಗ ಪಡೆದು, ಜೂನ್‍ನಿಂದ ನಾವು ಅವರಿಗೆ ಹಿಂದಿರುಗಿಸುತ್ತೇವೆ. ಯಾವುದೇ ಖಾಸಗಿಯವರಿಂದ ವಿದ್ಯುತ್ ಖರೀದಿಸಿಲ್ಲ ಎಂದು ವಿವರಿಸಿದರು.

    ಗೃಹಲಕ್ಷ್ಮಿ ಯೋಜನೆಯ 2 ಸಾವಿರಗಳನ್ನು ಚಿಟ್ ಫಂಡ್ ಹೂಡಿಕೆ ಮಾಡುವ ಪ್ರಸ್ತಾಪ ಸರ್ಕಾರದ ಮುಂದಿದೆಯೇ ಎಂಬ ಪ್ರಶ್ನೆಗೆ ಉತ್ತರಿಸುತ್ತಾ, ಇಂತಹ ಯಾವುದೇ ಯೋಜನೆಗಳು ಸರ್ಕಾರದ ಮುಂದಿಲ್ಲ. ಮಹಿಳೆಯರಿಗೆ ಡಿಬಿಟಿ ಮೂಲಕ 2 ಸಾವಿರ ರೂ.ಗಳು ನೀಡಲಾಗುತ್ತಿದ್ದು, ಇದನ್ನು ಮುಂದುವರೆಸಲಾಗುವುದು ಎಂದರು.

  • ಕೃಷಿ ಪಂಪ್‌ಸೆಟ್‌ಗಳಿಗೆ ಪ್ರತಿದಿನ 7 ಗಂಟೆ ವಿದ್ಯುತ್‌ – ಸಿಎಂ ಮಹತ್ವದ ಸಭೆಯಲ್ಲಿ ನಿರ್ಧಾರ

    ಕೃಷಿ ಪಂಪ್‌ಸೆಟ್‌ಗಳಿಗೆ ಪ್ರತಿದಿನ 7 ಗಂಟೆ ವಿದ್ಯುತ್‌ – ಸಿಎಂ ಮಹತ್ವದ ಸಭೆಯಲ್ಲಿ ನಿರ್ಧಾರ

    ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರಿಂದು ಗೃಹ ಕಚೇರಿ ಕೃಷ್ಣಾದಲ್ಲಿ ಇಂಧನ ಇಲಾಖೆಯ (Energy Department) ಅಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ಈ ಸಭೆಯಲ್ಲಿ ಸರ್ಕಾರದ ಮೇಲೆ ಹೆಚ್ಚಿನ ಹೊರೆಯಾಗದಂತೆ ಕೃಷಿ ಪಂಪ್ ಸೆಟ್‌ಗಳಿಗೆ ಪ್ರತಿದಿನ 7 ತಾಸು ವಿದ್ಯುತ್ ನೀಡಲು ನಿರ್ಧರಿಸಲಾಗಿತು.

    ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಇಂಧನ ಸಚಿವ ಕೆ.ಜೆ ಜಾರ್ಜ್ (K.J George), ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ನಜೀರ್ ಅಹ್ಮದ್ ಸೇರಿದಂತೆ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು. ಸಭೆಯಲ್ಲಿ ಮಳೆ ಅಭಾವದಿಂದ ರಾಜ್ಯದಲ್ಲಿ ಉಂಟಾಗಿರುವ ವಿದ್ಯುತ್ ಸಮಸ್ಯೆ ಬಗ್ಗೆ ಸುದೀರ್ಘವಾಗಿ ಚರ್ಚಿಸಲಾಯಿತು. ಇದನ್ನೂ ಓದಿ: ರಶ್ಮಿಕಾ ಅರೆಬೆತ್ತಲೆ ಫೇಕ್ ವಿಡಿಯೋ: ಕಿಡಿಗೇಡಿಗಳಿಗೆ ರಾಜೀವ್‌ ಚಂದ್ರಶೇಖರ್‌ ಖಡಕ್‌ ವಾರ್ನಿಂಗ್‌

    ಸಭೆಯ ಮುಖ್ಯಾಂಶಗಳು:
    2022ಕ್ಕೆ ಹೋಲಿಸಿದ್ರೆ 2023 ರಲ್ಲಿ ವಿದ್ಯುತ್‌ (Electricity) ಬೇಡಿಕೆ ಸರಾಸರಿ ಶೇ.43 ರಷ್ಟು ಹೆಚ್ಚಿದೆ. ಅಕ್ಟೋಬರ್‌ ತಿಂಗಳಲ್ಲಿ 15,978 ಮೆಗಾವ್ಯಾಟ್‌ ಬೇಡಿಕೆ ದಾಖಲಾಗಿದೆ. ವಿದ್ಯುತ್‌ ಬಳಕೆಯಲ್ಲಿ ಕಳೆದ ವರ್ಷಕ್ಕಿಂತ ಶೇ. 45 ರಷ್ಟು ಹೆಚ್ಚಿದೆ. ಕೃಷಿ ಬಳಕೆಯಲ್ಲಿ ಶೇ. 55ರಿಂದ 119 ರಷ್ಟು ಹೆಚ್ಚಳವಾಗಿದೆ. ಇತರ ವಿಭಾಗಗಳಲ್ಲಿ ಶೇ.9 ರಿಂದ 14 ರಷ್ಟು ಹೆಚ್ಚಳವಾಗಿದೆ. ಮಳೆ ಕೊರತೆ, ವಾಡಿಕೆಗಿಂತ ಮೊದಲೇ ಐಪಿ ಸೆಟ್‌ ಗಳ ಬಳಕೆ ಪ್ರಾರಂಭವಾಗಿರುವುದು ಹಾಗೂ ಕೋವಿಡ್‌ 19ರ ನಂತರದ ಆರ್ಥಿಕ ಪುನಶ್ಚೇತನ ಇದಕ್ಕೆ ಕಾರಣವಾಗಿದೆ.

    ಕಳೆದ ಬಾರಿ ಪ್ರಗತಿ ಪರಿಶೀಲನೆಯ ನಂತರ ರಾಯಚೂರು, ಬಳ್ಳಾರಿ ಉಷ್ಣವಿದ್ಯುತ್‌ ಸ್ಥಾವರಗಳ ಉತ್ಪಾದನೆ ಹೆಚ್ಚಾಗಿದೆ. ಉತ್ತರ ಪ್ರದೇಶ, ಪಂಜಾಬ್‌ ಮತ್ತು ಹಿಮಾಚಲ ಪ್ರದೇಶಗಳಿಂದ ವಿದ್ಯುತ್‌ ಪಡೆಯಲಾಗುತ್ತಿದೆ. ಸೆಕ್ಷನ್‌-11 ಅಡಿ ಬೇರೆ ರಾಜ್ಯಗಳಿಗೆ ವಿದ್ಯುತ್‌ ನೀಡದಂತೆ ಆದೇಶ ಹೊರಡಿಸಿ, ವಿದ್ಯುತ್‌ ಪಡೆಯಲಾಗುತ್ತಿದೆ. ಆ ಮೂಲಕ ವಿದ್ಯುತ್‌ ವಿತರಣೆ ಸಹಜ ಸ್ಥಿತಿಗೆ ಬಂದಿದೆ. ನೋಡಲ್‌ ಅಧಿಕಾರಿಗಳು ನಿರಂತರವಾಗಿ ಪರಿಸ್ಥಿತಿಯನ್ನು ಗಮನಿಸುತ್ತಿದ್ದಾರೆ. ಇದನ್ನೂ ಓದಿ: ಸಹಾಯ ಮಾಡುವ ನೆಪದಲ್ಲಿ ಎಟಿಎಂ ಪಿನ್ ಪಡೆದು ವಂಚನೆ – ಅಂತರಾಜ್ಯ ಕಳ್ಳರ ಬಂಧನ

    ವಿವಿಧ ವಿದ್ಯುತ್‌ ಸರಬರಾಜು ಕಂಪೆನಿಗಳ ವ್ಯಾಪ್ತಿಯಲ್ಲಿ ರೈತರ ಅಗತ್ಯತೆಗನುಗುಣವಾಗಿ ಐದರಿಂದ ಏಳು ಗಂಟೆಗಳ ಅವಧಿಗೆ ನಿರಂತರ ವಿದ್ಯುತ್‌ ಪೂರೈಕೆ ಮಾಡಲಾಗುತ್ತಿದೆ. ರಾಜ್ಯಾದ್ಯಂತ ಐಪಿ ಸೆಟ್‌ಗಳಿಗೆ ನಿರಂತರ 7 ಗಂಟೆಗಳ ಅವಧಿಗೆ ವಿದ್ಯುತ್‌ ಒದಗಿಸಲು 600 ಮೆಗಾವ್ಯಾಟ್‌/ಗಂಟೆ ಹಾಗೂ ಪ್ರತಿದಿನಕ್ಕೆ 14 ಮಿಲಿಯನ್‌ ಯುನಿಟ್‌ಗಳ ಅಗತ್ಯವಿದೆ. ಇದನ್ನೂ ಓದಿ: ಕೆಪಿಎಸ್‌ಸಿ ಪರೀಕ್ಷೆಯಲ್ಲಿ ತಾಳಿ, ಕಾಲುಂಗುರ ತೆಗೆಸಿದ್ದು ಅಕ್ಷಮ್ಯ: ಜೆಡಿಎಸ್ ಆಕ್ರೋಶ

    ಸರ್ಕಾರದ ಮೇಲೆ ಹೆಚ್ಚಿನ ಹೊರೆಯಾಗದಂತೆ ಪ್ರತಿದಿನ 7 ತಾಸು ವಿದ್ಯುತ್‌ ನೀಡಲು ನಿರ್ಧರಿಸಲಾಗಿದೆ. ಇದಕ್ಕಾಗಿ ಸುಮಾರು 1500 ಕೋಟಿ ರೂ. ಅಗತ್ಯವಿದೆ. ಅನುದಾನದ ಉಳಿತಾಯ, ಮರುಹಂಚಿಕೆಯ ಮೂಲಕ ಈ ವೆಚ್ಚ ಭರಿಸಲಾಗುವುದು. ಮುಂದಿನ ವರ್ಷದಲ್ಲಿ ಐಪಿ ಸೆಟ್‌ಗಳಿಗೆ ವಿದ್ಯುತ್‌ ಪೂರೈಕೆಯನ್ನು ಸೌರವಿದ್ಯುತ್‌ ಮೂಲದಿಂದ ಒದಗಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. (Solarisation of EIP Feeders). ಟೆಂಡರ್‌ ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಮುಂದಿನ ವರ್ಷದ ವೇಳೆಗೆ ಹಗಲು ವೇಳೆಯಲ್ಲಿಯೇ ರೈತರಿಗೆ ವಿದ್ಯುತ್‌ ನೀಡಲು ಇದರಿಂದ ಅನುಕೂಲವಾಗಲಿದೆ ಎಂದು ಚರ್ಚಿಸಲಾಯಿತು.

  • ಕತ್ತಲೆಯತ್ತ ಶಾಖೋತ್ಪನ್ನ ವಿದ್ಯುತ್ ಕೇಂದ್ರ – ಒಂದೊಂದಾಗಿ ಮುಚ್ಚುತ್ತಿದೆ RTPS ಘಟಕ

    ಕತ್ತಲೆಯತ್ತ ಶಾಖೋತ್ಪನ್ನ ವಿದ್ಯುತ್ ಕೇಂದ್ರ – ಒಂದೊಂದಾಗಿ ಮುಚ್ಚುತ್ತಿದೆ RTPS ಘಟಕ

    ರಾಯಚೂರು: ರಾಜ್ಯದ ಪ್ರಥಮ ಶಾಖೋತ್ಪನ್ನ ವಿದ್ಯುತ್ ಕೇಂದ್ರ (RTPS) ಈಗ ಹಂತ ಹಂತವಾಗಿ ಮುಚ್ಚುವ ಸಿದ್ಧತೆಯಲ್ಲಿದೆ. ಇದಕ್ಕೆ ಸಾಕ್ಷಿ ಎನ್ನುವಂತೆ ಕೇಂದ್ರದ ಎರಡು ಘಟಕಗಳು ತಿಂಗಳಾನುಗಟ್ಟಲೇ ಕಾರ್ಯಸ್ಥಗಿತಗೊಂಡಿದ್ದು, ಒಂದೇ ಒಂದು ವ್ಯಾಟ್ ವಿದ್ಯುತ್ (Electricity) ಉತ್ಪಾದಿಸಿಲ್ಲ. ಪದೇ, ಪದೇ ಅವಘಡಗಳು ಸಂಭವಿಸುತ್ತಿರುವುದು, ಹಳೆಯದಾದ ಘಟಕಗಳ ನವೀಕರಣ ನಡೆಯದಿರುವುದು ಅನುಮಾನ ಮೂಡಿಸಿದೆ.

    ರಾಜ್ಯದ ಒಟ್ಟು ವಿದ್ಯುತ್ ಉತ್ಪಾದನೆಯಲ್ಲಿ ಶೇಕಡಾ 70 ರಷ್ಟು ಪಾಲನ್ನು ಹೊಂದಿದ್ದ ರಾಯಚೂರಿನ (Raichur) ಶಕ್ತಿನಗರದ ಬೃಹತ್ ಶಾಖೋತ್ಪನ್ನ ವಿದ್ಯುತ್ ಕೇಂದ್ರ ಆರ್‌ಟಿಪಿಎಸ್‌ನ ಸಾಮರ್ಥ್ಯ ಈಗ ಕಡಿಮೆಯಾಗಿದೆ. ಒಟ್ಟು 1,720 ಮೆಗಾ ವ್ಯಾಟ್ ಸಾಮರ್ಥ್ಯದ ವಿದ್ಯುತ್ ಕೇಂದ್ರ ಈಗ ಕೇವಲ 666 ಮೆಗಾ ವ್ಯಾಟ್ ವಿದ್ಯುತ್ ಉತ್ಪಾದಿಸುತ್ತಿದೆ. ಒಟ್ಟು ಎಂಟು ಘಟಕಗಳಲ್ಲಿ 5 ಘಟಕ ಮಾತ್ರ ಕಾರ್ಯನಿರ್ವಹಿಸುತ್ತಿವೆ. ಇದರಲ್ಲಿ 35 ವರ್ಷಕ್ಕೂ ಹಳೆಯದಾದ ಒಂದು ಮತ್ತು ಎರಡನೇ ಘಟಕ ಕಳೆದ ಮೂರು ತಿಂಗಳಿನಿಂದ ಕಾರ್ಯಸ್ಥಗಿತಗೊಳಿಸಿವೆ. ಇದನ್ನೂ ಓದಿ: RTPSನಲ್ಲಿ ಅಗ್ನಿ ಅವಘಡ – 25ಕ್ಕೂ ಹೆಚ್ಚು ಕ್ಯಾರಿಂಗ್ ರೋಲರ್‌ಗಳು ಬೆಂಕಿಗಾಹುತಿ

    ವಿದ್ಯುತ್ ಉತ್ಪಾದನೆ ಕುಂಠಿತಕ್ಕೆ ಅಧಿಕಾರಿಗಳು ವಿದ್ಯುತ್ ಬೇಡಿಕೆ ಕುಸಿತ ಹಾಗೂ ತಾಂತ್ರಿಕ ಸಮಸ್ಯೆಗಳ ಕಾರಣ ಹೇಳುತ್ತಿದ್ದಾರೆ. ಆದ್ರೆ ಸದ್ಯ ರಾಜ್ಯದ ವಿದ್ಯುತ್ ಬೇಡಿಕೆ 6,555 ಮೆಗಾ ವ್ಯಾಟ್ ಇದ್ದು ರಾಜ್ಯದ ವಿದ್ಯುತ್ ಉತ್ಪಾದನೆ 2,342 ಮೆಗಾ ವ್ಯಾಟ್ ಇದೆ. ರಾಜ್ಯ ಸರ್ಕಾರ ಹೊಸ ಶಾಖೋತ್ಪನ್ನ ವಿದ್ಯುತ್ ಕೇಂದ್ರ ತೆರೆಯುವ ಆಸಕ್ತಿ ಹೊಂದಿಲ್ಲ ನಿಜ ಆದ್ರೆ ಇರುವ ವಿದ್ಯುತ್ ಕೇಂದ್ರವನ್ನು ಸರಿಯಾಗಿ ನಿರ್ವಹಣೆ ಮಾಡದೇ ಹಳೆಯ ಘಟಕಗಳನ್ನು ಒಂದೊಂದಾಗೇ ಮುಚ್ಚಲು ಮುಂದಾಗಿದೆ ಅಂತ ಸಾರ್ವಜನಿಕರು ಆರೋಪಿಸಿದ್ದಾರೆ.

    ಕೆಪಿಸಿಎಲ್ ಖಾಸಗಿ ಸಂಸ್ಥೆ ಕೈಯಲ್ಲಿ ನಿರ್ವಹಣೆ ಜವಾಬ್ದಾರಿ ಕೊಟ್ಟಿದ್ದು ಆರ್‌ಟಿಪಿಎಸ್‌ನಲ್ಲಿ ಅವಘಡಗಳ ಮೇಲೆ ಅವಘಡಗಳು ಸಂಭವಿಸುತ್ತಲೇ ಇವೆ. ಆಗಸ್ಟ್ ತಿಂಗಳಲ್ಲಿ ಹಾರೋ ಬೂದಿ ಸಾಗಿಸುವ ಬಂಕರ್‌ಗಳು ಕಳಚಿ ಬಿದ್ದಿದ್ದವು. ಘಟನೆಯಿಂದ ಮೂರು ತಿಂಗಳಾದರೂ ಒಂದನೇ ಘಟಕ ಇನ್ನೂ ಕಾರ್ಯಾರಂಭ ಮಾಡಿಲ್ಲ. ಇತ್ತೀಚೆಗೆ ಕಲ್ಲಿದ್ದಲು ಸರಬರಾಜು ಮಾಡುವ ಕನ್ವೇಯರ್ ಬೆಲ್ಟ್‌ಗೆ ಬೆಂಕಿ ಹೊತ್ತಿ ಕೋಟ್ಯಂತರ ರೂಪಾಯಿ ನಷ್ಟವಾಗಿದೆ. 85ಕ್ಕೂ ಹೆಚ್ಚು ಕ್ಯಾರಿಂಗ್ ರೋಲರ್‌ಗಳು ಬೆಂಕಿಗಾಹುತಿಯಾಗಿವೆ. ಇಂತಹ ಘಟನೆಗಳು ಮರುಕಳಿಸುತ್ತಲೇ ಒಂದೊಂದೇ ಘಟಕ ವಿದ್ಯುತ್ ಉತ್ಪಾದನೆ ನಿಲ್ಲಿಸುತ್ತಿರುವುದು ಅನುಮಾನಕ್ಕೆ ಕಾರಣವಾಗಿದೆ. ಇದನ್ನೂ ಓದಿ: ಎಲ್ಲಿ ಆತಂಕಗಳು ಹೆಚ್ಚಾಗುತ್ತೋ ಆಗ ಕ್ಷೇತ್ರ ಪರ್ಯಟನೆ ನಡೆಯುತ್ತೆ: ಸಿದ್ದು ಬಗ್ಗೆ ಬಿ.ವೈ.ರಾಘವೇಂದ್ರ ವ್ಯಂಗ್ಯ

    ಅಗತ್ಯ ಪ್ರಮಾಣದ ಕಲ್ಲಿದ್ದಲು ಕೊರತೆ ಜೊತೆಗೆ ನಿರಂತರ ತಾಂತ್ರಿಕ ಸಮಸ್ಯೆ ಎದುರಿಸುತ್ತಿರುವ ಆರ್‌ಟಿಪಿಎಸ್‌ ನಿರ್ವಹಣೆ ಕೊರತೆಯನ್ನೂ ಎದುರಿಸುತ್ತಿದೆ. ಇಡೀ ರಾಜ್ಯಕ್ಕೆ ಬೆಳಕು ನೀಡುವ ವಿದ್ಯುತ್ ಕೇಂದ್ರ ಕತ್ತಲೆಡೆಗೆ ಜಾರುತ್ತಿದೆಯಾ ಅನ್ನೋ ಆತಂಕ ಇಲ್ಲಿನ ನೌಕರರನ್ನು ಕಾಡುತ್ತಿದೆ.

    Live Tv
    [brid partner=56869869 player=32851 video=960834 autoplay=true]