Tag: thimmaiah

  • ದಿಗಂತ್ ಗೆ ತಾತನಾಗಿ ಕಾಣಿಸಿಕೊಂಡ  ಅನಂತ್ ನಾಗ್

    ದಿಗಂತ್ ಗೆ ತಾತನಾಗಿ ಕಾಣಿಸಿಕೊಂಡ ಅನಂತ್ ನಾಗ್

    ಮ್ಮ ಅಮೋಘ ಅಭಿನಯದ ಮೂಲಕ ಜನಮನ ಗೆದ್ದಿರುವ ಅನಂತನಾಗ್ ಹಾಗೂ ದೂದ್ ಪೇಡ ಎಂದೇ ಖ್ಯಾತರಾಗಿರುವ ದಿಗಂತ್ ಕಾಂಬಿನೇಶನ್ ನಲ್ಲಿ ಮೂಡಿಬಂದಿರುವ “ತಿಮ್ಮಯ್ಯ & ತಿಮ್ಮಯ್ಯ” ಚಿತ್ರ ತೆರೆಗೆ ಬರಲು ಅಣಿಯಾಗಿದೆ. ಇತ್ತೀಚಿಗೆ ಈ ಚಿತ್ರದ ಟೀಸರ್ ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿದೆ.

    ಅನಂತನಾಗ್ ಹಾಗೂ ದಿಗಂತ್, ತಾತ – ಮೊಮ್ಮಗನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಇವರಿಬ್ಬರ ನಡುವಿನ ಬಾಂಧವ್ಯದ ಸನ್ನಿವೇಶಗಳೇ ಚಿತ್ರದ ಹೈಲೆಟ್. ಮೂವತ್ತು ವರ್ಷಗಳ ನಂತರ ತಾತ ಹಾಗೂ ಮೊಮ್ಮಗ ಭೇಟಿಯಾದಾಗ ಯಾವ ರೀತಿ ಇರಬಹುದು? ಎಂಬುದನ್ನು ಟೀಸರ್ ಮೂಲಕ ನಿರ್ದೇಶಕ ಸಂಜಯ್ ಶರ್ಮ ಮನಮುಟ್ಟುವಂತೆ ತೋರಿಸಿದ್ದಾರೆ. ಟೀಸರ್ ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದ್ದು, ಪ್ರಶಂಸೆ ದೊರಕುತ್ತಿದೆ. ಇದನ್ನೂ ಓದಿ:ಸಾರಾ ಜೊತೆಗಿನ ಡೇಟಿಂಗ್ ಬಗ್ಗೆ ಸ್ಪಷ್ಟನೆ ನೀಡಿದ ಕ್ರಿಕೆಟಿಗ ಶುಭಮನ್ ಗಿಲ್

    ಗರುಡ ಮೋಷನ್ ಪಿಕ್ಚರ್ಸ್ ಪ್ರೈ ಲಿ ಲಾಂಛನದಲ್ಲಿ ರಾಜೇಶ್ ಶರ್ಮ ಅವರು ಈ ಚಿತ್ರವನ್ನು ನಿರ್ಮಿಸಿದ್ದಾರೆ. ಮೂಲತಃ ಕನ್ನಡದವರೇ ಆಗಿರುವ ನಿರ್ದೇಶಕ ಸಂಜಯ್ ಶರ್ಮ ಈ ಚಿತ್ರಕ್ಕೆ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದಿದ್ದಾರೆ. ಬಾಲಿವುಡ್ ನ ಖ್ಯಾತ ನಿರ್ದೇಶಕರ ಬಳಿ ಕಾರ್ಯ ನಿರ್ವಹಿಸಿರುವ ಸಂಜಯ್ ಶರ್ಮ ಅವರಿಗೆ ಇದು ಚೊಚ್ಚಲ ನಿರ್ದೇಶನದ ಚಿತ್ರ.

    ಚಿತ್ರದಲ್ಲಿ ನಾಲ್ಕು ಸುಮಧುರ ಹಾಡುಗಳಿದ್ದು, ಅನೂಪ್ ಸೀಳಿನ್ ಸಂಗೀತ ನೀಡಿದ್ದಾರೆ. ಜಯಂತ ಕಾಯ್ಕಿಣಿ ಹಾಡುಗಳನ್ನು ಬರೆದಿದ್ದಾರೆ. ಬಾಲಕೃಷ್ಣ ತೋಟ ಛಾಯಾಗ್ರಹಣ ಹಾಗೂ ಸುರೇಶ್ ಅರಸ್ ಸಂಕಲನ ಈ ಚಿತ್ರಕ್ಕಿದೆ. ಬೆಂಗಳೂರು, ಕೊಡಗು ಹಾಗೂ ಕುಣಿಗಲ್ ನಲ್ಲಿ ಚಿತ್ರೀಕರಣ ನಡೆದಿದೆ. ಅನಂತನಾಗ್, ದಿಗಂತ್, ಶುಭ್ರ ಅಯ್ಯಪ್ಪ, ರುಕ್ಮಿಣಿ ವಿಜಯಕುಮಾರ್, ವಿನೀತ್ ಬೀಪ್ ಕುಮಾರ್, ಪ್ರಕಾಶ್ ತುಮ್ಮಿನಾಡ್, ಕೆ.ಎಸ್.ಶ್ರೀಧರ್, ಮಿಮಿಕ್ರಿ ಗೋಪಿ, ಅಂಬುಜಾಕ್ಷಿ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಪುತ್ರಿ ಬಳಿಕ ಡಿಕೆಶಿ ಮಾವನಿಗೂ ಇಡಿ ಸಮನ್ಸ್

    ಪುತ್ರಿ ಬಳಿಕ ಡಿಕೆಶಿ ಮಾವನಿಗೂ ಇಡಿ ಸಮನ್ಸ್

    ಬೆಂಗಳೂರು: ಮಾಜಿ ಸಚಿವ ಡಿಕೆ ಶಿವಕುಮಾರ್ ಅವರ ಪುತ್ರಿಯ ಬಳಿಕ ಇದೀಗ ಅವರ ಮಾವ ತಿಮ್ಮಯ್ಯ ಅವರಿಗೂ ಇಡಿ ಸಮನ್ಸ್ ನೀಡಿದೆ.

    ಮೈಸೂರಿನಲ್ಲಿರುವ ಡಿಕೆಶಿ ಮಾವ ತಿಮ್ಮಯ್ಯಗೆ ಮಾತ್ರವಲ್ಲದೇ ಸ್ನೇಹಿತ ಶಶಿಕುಮಾರ್, ಆಡಿಟರ್ ಚಂದ್ರಶೇಖರ್ ತಿಮ್ಮಯ್ಯ, ಸಿಂಗಾಪುರದ ಗೆಳೆಯ ರಜನೀಶ್ ಗೋಪಿನಾಥ್ ಹಾಗೂ ವ್ಯವಹಾರಿಕ ಸಂಬಂಧಿ ಅನಿಲ್ ಜೈನ್ ಗೂ ಇಡಿ ಸಮನ್ಸ್ ಜಾರಿ ಮಾಡಿದೆ. ಮತ್ತೊಂದೆಡೆ ಪುತ್ರಿ ಐಶ್ವರ್ಯಾ ಹೆಸರಿನಲ್ಲಿದ್ದ ಆಸ್ತಿಯನ್ನೂ ಜಪ್ತಿ ಮಾಡಲಾಗಿದೆ.

    184 ಜನರ ಲಿಸ್ಟ್ ನಲ್ಲಿ ಇವರುಗಳ ಹೆಸರೂ ಇದೆ. ಐಟಿ ದಾಳಿ ನಡೆದ ಸಂದರ್ಭದಲ್ಲಿ ಸರಿಸುಮಾರು 64 ಕಡೆ ಏಕಕಾಲದಲ್ಲಿ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದರು. ಈ ಸಂದರ್ಭದಲ್ಲಿ ಎಲ್ಲರನ್ನೂ ವಿಚಾರಣೆಗೆ ಒಳಪಡಿಸಿದರು. ಇದನ್ನೂ ಓದಿ: 78 ಕೋಟಿ ಹೂಡಿಕೆ – ಐಶ್ವರ್ಯ ಕಂಪನಿಯ ಆಸ್ತಿ ದಾಖಲೆ ಜಪ್ತಿ – ಏನಿದು ಗಿಫ್ಟ್ ಡೀಡ್?

    ಐಟಿ ದಾಳಿ ಬಳಿಕ ಇಡಿ ಅಧಿಕಾರಿಗಳು ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದಾರೆ. ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಇನ್ನು ಹಲವು ಮಂದಿಯನ್ನು ವಿಚಾರಣೆಗೆ ಒಳಪಡಿಸಬೇಕು ಎಂದು ವಿಶೇಷ ನ್ಯಾಯಾಲಯದಲ್ಲಿ ಮಂಗಳವಾರ ಇಡಿ ಹೇಳಿತ್ತು.

    ಇತ್ತ ಮಾವ ತಿಮ್ಮಯ್ಯ ಅವರನ್ನು ವಿಚಾರಣೆಗೆ ಒಳಪಡಿಸಿದರೆ ಹಣ ವರ್ಗಾವಣೆಯ ಬಗ್ಗೆ ಮಾಹಿತಿ ಸಿಗಬಹುದು ಅಥವಾ ವ್ಯವಹಾರಿಕ ಸಂಬಂಧಗಳ ಮಾಹಿತಿ ಕಲೆ ಹಾಕಬಹುದು ಎಂಬ ನಿಟ್ಟಿನಲ್ಲಿ ಇಡಿ ಸಮನ್ಸ್ ನೀಡಿದೆ ಎಂದು ಹೇಳಲಾಗುತ್ತಿದೆ. ಇದನ್ನೂ ಓದಿ:ಐಶ್ವರ್ಯಾ ಖಾತೆಯಿಂದ 108 ಕೋಟಿ ವರ್ಗಾವಣೆ – ಕೋರ್ಟಿಗೆ ಇಡಿ ಮಾಹಿತಿ