Tag: Thinner Bottle

  • ಥಿನ್ನರ್ ಬಾಟಲಿ ಬಿದ್ದು ಬಾಲಕ ಸಾವನ್ನಪ್ಪಿದ ಪ್ರಕರಣ – ಗಂಭೀರ ಸ್ಥಿತಿಯಲ್ಲಿದ್ದ ತಂದೆಯೂ ಸಾವು

    ಥಿನ್ನರ್ ಬಾಟಲಿ ಬಿದ್ದು ಬಾಲಕ ಸಾವನ್ನಪ್ಪಿದ ಪ್ರಕರಣ – ಗಂಭೀರ ಸ್ಥಿತಿಯಲ್ಲಿದ್ದ ತಂದೆಯೂ ಸಾವು

    ಧಾರವಾಡ: ಥಿನ್ನರ್ ಬಾಟಲಿ ಜಾರಿ ಬಿದ್ದು ಮಗು ಸಾವನ್ನಪ್ಪಿದ ಪ್ರಕರಣದಲ್ಲಿ ಗಂಭೀರ ಗಾಯಗೊಂಡಿದ್ದ ತಂದೆಯೂ ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿಂದು ಮೃತಪಟ್ಟಿದ್ದಾರೆ.

    ಚಂದ್ರಕಾಂತ್ ಮಾಶ್ಯಾಳ ಮೃತ ದುರ್ದೈವಿ. ಧಾರವಾಡದ (Dharwad) ಸಂತೋಷ್ ನಗರದಲ್ಲಿ ಮನೆಯಲ್ಲಿ ಕಳೆದ ಶುಕ್ರವಾರ (ಆ.15) ಬೆಂಕಿ ಕಾಯಿಸಿಕೊಳ್ಳಲೆಂದು ಕುಪ್ಪಡಿ ಇಡಲಾಗಿತ್ತು. ಈ ವೇಳೆ ಅಲ್ಲೇ ಆಟವಾಡುತ್ತಿದ್ದ 4 ವರ್ಷದ ಅಗಸ್ತ್ಯ ಥಿನ್ನರ್ ಬಾಟಲಿಯನ್ನು ಕೆಡವಿದ್ದ. ಈ ವೇಳೆ ಥಿನ್ನರ್‌ಗೆ ಬೆಂಕಿ ತಗುಲಿದ್ದು, ಬೆಂಕಿಯ ಕೆನ್ನಾಲಿಗೆ ಬಾಲಕನ ದೇಹ ಸುಟ್ಟು ಹೋಗಿತ್ತು. ಮಗನನ್ನು ಕಾಪಾಡಲು ಹೋಗಿದ್ದ ಚಂದ್ರಕಾಂತ್‌ಗೆ ಸಹ ಗಂಭೀರವಾಗಿ ಸುಟ್ಟ ಗಾಯಗಳಾಗಿದ್ದವು. ಕೂಡಲೆ ಮನೆಯವರು ತಂದೆ, ಮಗನನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದನ್ನೂ ಓದಿ: ಮನೆಯಲ್ಲಿ ಇಟ್ಟಿದ್ದ ಥಿನ್ನರ್ ಬಾಟಲಿ ಉರುಳಿ ಬಿದ್ದು ಬೆಂಕಿ – 4 ವರ್ಷದ ಬಾಲಕ ಸಾವು

    ಅಷ್ಟರಲ್ಲಾಗಲೇ ಬಾಲಕ ಅಗಸ್ತ್ಯ ಮೃತಪಟ್ಟಿದ್ದ. ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಚಂದ್ರಕಾಂತ್ ಅವರು ಇಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಇದೀಗ ತಂದೆ, ಮಗನನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ.

  • ಮನೆಯಲ್ಲಿ ಇಟ್ಟಿದ್ದ ಥಿನ್ನರ್ ಬಾಟಲಿ ಉರುಳಿ ಬಿದ್ದು ಬೆಂಕಿ – 4 ವರ್ಷದ ಬಾಲಕ ಸಾವು

    ಮನೆಯಲ್ಲಿ ಇಟ್ಟಿದ್ದ ಥಿನ್ನರ್ ಬಾಟಲಿ ಉರುಳಿ ಬಿದ್ದು ಬೆಂಕಿ – 4 ವರ್ಷದ ಬಾಲಕ ಸಾವು

    ಧಾರವಾಡ: ಮನೆಯಲ್ಲಿ ಇಟ್ಟಿದ್ದ ಥಿನ್ನರ್ ಬಾಟಲಿ ಉರುಳಿ ಬಿದ್ದು ಬೆಂಕಿ ಹತ್ತಿಕೊಂಡು ನಾಲ್ಕು ವರ್ಷದ ಬಾಲಕ ಮೃತಪಟ್ಟಿರುವ ಘಟನೆ ಧಾರವಾಡದ (Dharwad) ಕೆಲಗೇರಿಯ (Kelageri) ಸಂತೋಷ ನಗರದಲ್ಲಿ ನಡೆದಿದೆ.

    ಅಗಸ್ತ್ಯ ಮಾಶಾಳ್ (4) ಮೃತ ಬಾಲಕನೆಂದು ಗುರುತಿಸಲಾಗಿದೆ. ಮನೆಯಲ್ಲಿ ಬೆಂಕಿ ಕಾಯಿಸಿಕೊಳ್ಳಲೆಂದು ಕುಪ್ಪಡಿಗೆ ಇಡಲಾಗಿತ್ತು. ಅದರ ಪಕ್ಕದಲ್ಲೇ ಥಿನ್ನರ್ ಬಾಟಲಿ (Tinner Bottle) ಕೂಡ ಇತ್ತು. ಬಾಲಕ ಅಗಸ್ತ್ಯ ಆಟವಾಡುತ್ತ ಆ ಥಿನ್ನರ್ ಬಾಟಲಿಯ ಹತ್ತಿರ ಹೋಗಿ ಅದನ್ನು ಕೆಡವಿದ್ದಾನೆ. ತಕ್ಷಣವೇ ಥಿನ್ನರ್‌ಗೆ ಬೆಂಕಿ ತಗುಲಿದ್ದು, ಬೆಂಕಿಯ ಕೆನ್ನಾಲಿಗೆಗೆ ಬಾಲಕನ ದೇಹ ಸುಟ್ಟು ಹೋಗಿತ್ತು. ಇದನ್ನೂ ಓದಿ: ಬಲವಂತದ ಮತಾಂತರ, ಮೋಸದ ಮದ್ವೆ – ಪಾಕಿಸ್ತಾನದ ವ್ಯಕ್ತಿ ಹೈದರಾಬಾದ್‌ನಲ್ಲಿ ಅರೆಸ್ಟ್

    ಈ ಘಟನೆಯಲ್ಲಿ ಬಾಲಕನನ್ನು ಉಳಿಸಲು ಹೋದ ತಂದೆಗೂ ಗಾಯವಾಗಿದೆ. ಕೂಡಲೇ ಇಬ್ಬರನ್ನೂ ಕಿಮ್ಸ್ಗೆ ರವಾನಿಸಲಾಗಿತ್ತು. ಆದರೆ ಬಾಲಕ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾನೆ. ಇದನ್ನೂ ಓದಿ: ಡಿಗ್ನಿಫೈಡ್ ರೀತಿಯಲ್ಲಿ ಹ್ಯಾಂಡಲ್ ಮಾಡಿ ಸಾಲ್ವ್ ಮಾಡಿಕೊಳ್ತೀನಿ: ಅಜಯ್‌ ರಾವ್‌

    ಬೆಂಕಿ ಹತ್ತಿದ್ದ ವೇಳೆ ಮನೆಯಲ್ಲಿದ್ದವರು ಚೀರಾಡುತ್ತಿದ್ದ ಹಾಗೂ ಅಕ್ಕಪಕ್ಕದ ಮನೆಯವರು ಸಹಾಯಕ್ಕೆ ಧಾವಿಸಿದ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಸದ್ಯ ಗಾಯಗೊಂಡಿರುವ ಬಾಲಕ ತಂದೆಗೆ ಚಿಕಿತ್ಸೆ ಮುಂದುವರೆದಿದೆ. ಉಪನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.