Tag: Thippeswamy

  • ಹಾಲಿ, ಮಾಜಿ ಶಾಸಕರ ಮಧ್ಯೆ ಜನಮನ ಗೆದ್ದವರ್ಯಾರು? ಹೇಗಿದೆ ಮೊಳಕಾಲ್ಮೂರು ಅಖಾಡ?

    ಹಾಲಿ, ಮಾಜಿ ಶಾಸಕರ ಮಧ್ಯೆ ಜನಮನ ಗೆದ್ದವರ್ಯಾರು? ಹೇಗಿದೆ ಮೊಳಕಾಲ್ಮೂರು ಅಖಾಡ?

    ಚಿತ್ರದುರ್ಗ: ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದಲ್ಲಿ (Molakalmuru constituency) ಬಿಜೆಪಿ (BJP) ಅಭ್ಯರ್ಥಿಯಾಗಿ ಮಾಜಿ ಶಾಸಕ ತಿಪ್ಪೇಸ್ವಾಮಿ (Thippeswamy), ಕಾಂಗ್ರೆಸ್‌ನಿಂದ (Congress) ಕೂಡ್ಲಿಗಿ ಮಾಜಿ ಶಾಸಕ ಎನ್‌ವೈ ಗೋಪಾಲಕೃಷ್ಣ (NY Gopalakrishna) ಹಾಗೂ ಜೆಡಿಎಸ್‌ನಿಂದ (JDS) ವೀರಭದ್ರ ಬಾಬು (Veerabhadra Babu) ಸ್ಪರ್ಧಿಸುತ್ತಿದ್ದಾರೆ. ಈ ಕ್ಷೇತ್ರದಲ್ಲಿ ಗೋಪಾಲಕೃಷ್ಣ ಹಾಗೂ ತಿಪ್ಪೇಸ್ವಾಮಿ ಹಿಂದಿನಿಂದಲೂ ಬದ್ಧ ವೈರಿಗಳಾಗಿದ್ದು, ಇಬ್ಬರು ಸಹ ಸಮಬಲದ ಹೋರಾಟ ನಡೆಸುತಿದ್ದಾರೆ. ಆದರೆ ಜೆಡಿಸ್‌ನ ಅಭ್ಯರ್ಥಿ ವಲಸಿಗರಾಗಿದ್ದು, ಕ್ಷೇತ್ರದಲ್ಲಿ ಅಷ್ಟು ಪರಿಚಯವಿಲ್ಲ.

    ಈ ಕ್ಷೇತ್ರದಲ್ಲಿ ಕಳೆದ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ, ಗೆದ್ದು ಸಚಿವರಾಗಿದ್ದ ಶ್ರೀರಾಮುಲು ಅವರ ಎದುರಾಳಿಯಾಗಿದ್ದ ತಿಪ್ಪೇಸ್ವಾಮಿಗೆ ಬಿಜೆಪಿಯಿಂದ ಟಿಕೆಟ್ ಕೊಡಿಸಿ, ಅವರನ್ನು ಗೆಲ್ಲಿಸಲು ಬೆಂಗಾವಲಾಗಿ ನಿಂತಿದ್ದಾರೆ. ಈ ಮಧ್ಯೆ ಕೂಡ್ಲಿಗಿ ಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಕಾಂಗ್ರೆಸ್ ಸೇರ್ಪಡೆಯಾಗಿ ಮೊಳಕಾಲ್ಮೂರು ಕ್ಷೇತ್ರದಿಂದ ಸ್ಪರ್ಧಿಸಿರುವ ಗೋಪಾಲಕೃಷ್ಣ ಕೂಡಾ ಸತತ 6 ಬಾರಿ ಶಾಸಕರಾಗಿದ್ದು, ತಿಪ್ಪೇಸ್ವಾಮಿ ವಿರುದ್ಧ ಭಾರೀ ಕಸರತ್ತು ಆರಂಭಿಸಿದ್ದಾರೆ.

    ಇಬ್ಬರು ನಾಯಕರು ಸಹ ಸ್ಥಳೀಯರಾಗಿದ್ದು, ದಿಗ್ಗಜರ ಮಧ್ಯೆ ಜಿದ್ದಾಜಿದ್ದಿನ 50:50 ಸ್ಪರ್ಧೆ ನಡೆಯುತ್ತಿದೆ. ಈ ಕ್ಷೇತ್ರವು ಎಸ್‌ಟಿ ಮೀಸಲು ಕ್ಷೇತ್ರವಾಗಿದ್ದು, ಇಲ್ಲಿ ಬುಡಕಟ್ಟು ಸಂಪ್ರದಾಯದ ಮ್ಯಾಸನಾಯಕ ಸಮುದಾಯ ಹೆಚ್ಚಾಗಿದೆ. ಅವರೇ ಫಲಿತಾಂಶದ ನಿರ್ಣಾಯಕ ಪಾತ್ರ ವಹಿಸಲಿದ್ದಾರೆ. ಇಲ್ಲಿ ಊರು ನಾಯಕ ಸಮುದಾಯ ಅವರಿಗಿಂತ ಕಡಿಮೆ ಇದೆ. ಹೀಗಾಗಿ ಈ ಇಬ್ಬರು ಸ್ಪರ್ಧಿಗಳಲ್ಲಿ ತಿಪ್ಪೇಸ್ವಾಮಿ ಮ್ಯಾಸನಾಯಕ ಬೇಡರ ಸಮುದಾಯದವರಾಗಿದ್ದು, ಗೋಪಾಲಕೃಷ್ಣ ಊರು ನಾಯಕರಾಗಿರುವುದು ಬಿಜೆಪಿಗೆ ವರದಾನವಾಗಿದೆ.

    ಕಾಂಗ್ರೆಸ್ ಟಿಕೆಟ್ ವಂಚಿತ ಯೋಗೇಶ್ ಬಾಬು ಸಹ ಮ್ಯಾಸನಾಯಕ ಬುಡಕಟ್ಟಿನವರಾಗಿದ್ದು, ಗೋಪಾಲಕೃಷ್ಣ ಜೊತೆ ಗುರುತಿಸಿಕೊಂಡಿರುವುದು ಬಿಜೆಪಿಗೆ ತೀವ್ರ ಪೈಪೋಟಿ ಎನಿಸಿದೆ. ಈ ಜಿದ್ದಾಜಿದ್ದಿನ ಕಣದಲ್ಲಿ ಇಬ್ಬರು ಸ್ಪರ್ಧಿಗಳು ಸಹ ಭಾರೀ ಪೈಪೋಟಿಯಲ್ಲಿದ್ದಾರೆ. ಬಿಜೆಪಿ ಅಭ್ಯರ್ಥಿಯಾದ ತಿಪ್ಪೇಸ್ವಾಮಿ ಪರ ಕಳೆದ ಬಾರಿ ಸೋತಿರುವ ಅನುಕಂಪ ಹಾಗೂ ಇತ್ತೀಚೆಗೆ ಅವರ ಏಕೈಕ ಪುತ್ರನ ಅಕಾಲಿಕ ಸಾವು ಸಹ ಮತದಾರರ ಮನ ಕರಗಿಸಿದೆ.

    ಕ್ಷೇತ್ರದಲ್ಲಿನ ಮತದಾರರೊಂದಿಗಿನ ಒಡನಾಟ ವರ್ಕೌಟ್ ಆದರೆ ಬಿಜೆಪಿ ಗೆಲುವು ಸುಲಭವಾಗಲಿದೆ. ಆದರೆ ತುಂಬಾ ಬುದ್ಧಿವಂತ ಹಾಗೂ ಚುನಾವಣಾ ತಂತ್ರಗಾರಿಕೆ ಬಲ್ಲ ಕಾಂಗ್ರೆಸ್ ಅಭ್ಯರ್ಥಿ ಗೋಪಾಲಕೃಷ್ಣ ವಿರುದ್ಧ ಗೆಲ್ಲೋದು ಅಷ್ಟು ಸುಲಭದ ಮಾತಲ್ಲ ಎಂಬ ಚರ್ಚೆ ಸಹ ಕ್ಷೇತ್ರದಲ್ಲಿದೆ.

    ಇನ್ನು ಮಾಜಿ ಶಾಸಕ ತಿಪ್ಪೇಸ್ವಾಮಿ ಪರ ಮಾಜಿ ಸಚಿವ ಶ್ರೀರಾಮುಲು ಆಪ್ತ ಪಾಪೇಶ್ ನಾಯಕ ಓಡಾಡುತ್ತಿರುವುದು ಬಿಜೆಪಿಗೆ ಹಿನ್ನಡೆಯಾಗುತ್ತಿದೆ. ಕಳೆದ ಬಾರಿ ಗೆದ್ದಿದ್ದ ಶ್ರೀ ರಾಮುಲು ಪರ ಎಲ್ಲಾ ಕೆಲಸಗಳನ್ನು ಪಾಪೇಶ್ ನಾಯಕ ನೆರವೇರಿಸುತ್ತಿದ್ದು, ಕ್ಷೇತ್ರದಲ್ಲಿ ಜನವಿರೋಧಿ ಅಲೆ ಪರಿಣಾಮ ರಾಮುಲು ಕ್ಷೇತ್ರ ಬದಲಾವಣೆ ಮಾಡಿದ್ದರು. ಹೀಗಾಗಿ ಅದರ ಎಫೆಕ್ಟ್ ತಿಪ್ಪೇಸ್ವಾಮಿ ಮೇಲೆ ತಟ್ಟಿದರೆ ಬಿಜೆಪಿ ಗೆಲುವು ಕಷ್ಟವಾಗಲಿದೆ. ಇದನ್ನೂ ಓದಿ: ‘ಕೈ’, ‘ಕಮಲ’ದ ನಡುವೆ ಟಫ್ ಫೈಟ್ – ಕಾಗವಾಡ ಅಖಾಡ ಹೇಗಿದೆ?

    ಮತದಾರರು ಎಷ್ಟಿದ್ದಾರೆ?
    ಒಟ್ಟು ಮತದಾರರು: 2,43,027
    ಪುರುಷರು: 1,22,622
    ಮಹಿಳೆಯರು: 1,20,393

    ಯಾರ ವೋಟು ಎಷ್ಟು?
    ನಾಯಕ : 1,10,000
    ಎಸ್‌ಸಿ : 55,000
    ರೆಡ್ಡಿ ಲಿಂಗಾಯತ : 25,000
    ಗೊಲ್ಲ : 16,000
    ಮುಸ್ಲಿಂ : 9,000
    ಕುರುಬ : 10,000
    ನೇಕಾರ : 5,000
    ಇತರೆ: 13,000 ಇದನ್ನೂ ಓದಿ: ಕಾಂಗ್ರೆಸ್ 10 ಪರ್ಸೆಂಟ್ ಕೆಲಸ ಮಾಡಿದ್ರೆ ವೋಟ್ ಕೇಳೋ ಅವಶ್ಯತೆ ಇರ್ತಿರಲಿಲ್ಲ : ಶಾ ಗುಡುಗು

  • ಈಶ್ವರಪ್ಪಗೆ ಒಂದು ನ್ಯಾಯ, ಶ್ರೀರಾಮುಲುಗೆ ಒಂದು ನ್ಯಾಯನಾ: ತಿಪ್ಪೇಸ್ವಾಮಿ

    ಈಶ್ವರಪ್ಪಗೆ ಒಂದು ನ್ಯಾಯ, ಶ್ರೀರಾಮುಲುಗೆ ಒಂದು ನ್ಯಾಯನಾ: ತಿಪ್ಪೇಸ್ವಾಮಿ

    ಚಿತ್ರದುರ್ಗ: ಭೂ ಕಬಳಿಕೆ ಆರೋಪ ಹೊತ್ತಿರೋ ಭ್ರಷ್ಟಮಂತ್ರಿ ಶ್ರೀರಾಮುಲು ಅವರನ್ನು ಕ್ಯಾಬಿನೆಟ್‍ನಿಂದ ಕೈಬಿಡುವಂತೆ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಮೊಳಕಾಲ್ಮೂರು ಮಾಜಿ ಶಾಸಕ ತಿಪ್ಪೇಸ್ವಾಮಿ ಆಗ್ರಹಿಸಿದರು.

    ಸಚಿವ ಶ್ರೀರಾಮುಲು ಅಕ್ರಮ ಕುರಿತು ವಿವರಿಸಿದ ಅವರು, ಶ್ರೀರಾಮುಲು ಬಳ್ಳಾರಿಯ ಶಾಸಕರಾಗಿದ್ದ ಅವಧಿಯಲ್ಲಿ ನಕಲಿ ದಾಖಲೆ ಸೃಷ್ಟಿಸಿ ಲಕ್ಷ್ಮಮ್ಮ ಮಹಿಳೆಗೆ ವಂಚಿಸಿದ್ದಾರೆ. ಲಕ್ಷ್ಮಮ್ಮ ಅವರ 27 ಎಕರೆ 25 ಗುಂಟೆ ಜಮೀನಿನಲ್ಲಿ 10 ಎಕರೆ ಜಮೀನು ನೀರಾವರಿ ಯೋಜನೆಯ ಕೆನಾಲ್ ವಶಪಡಿಸಿಕೊಳ್ಳಲಾಗಿದೆ. ಉಳಿದ 17 ಎಕರೆ 25 ಗುಂಟೆ ಜಮೀನನ್ನು ಶ್ರೀರಾಮುಲು ಬಳ್ಳಾರಿ ಶಾಸಕರಾಗಿದ್ದ ಅವಧಿಯಲ್ಲಿ ಅಧಿಕಾರ ದುರುಪಯೋಗದಿಂದ ಡಿಸಿ, ಎಸಿ, ಸಬ್‍ರಿಜಿಸ್ಟ್ರಾರ್ ಹಾಗೂ ತಹಶೀಲ್ದಾರ್ ಒಳಗೊಂಡಂತೆ ಎಲ್ಲರೂ ಶಾಮೀಲಾಗಿ ಅಮಾಯಕ ಮಹಿಳೆಗೆ ವಂಚಿಸಿದ್ದಾರೆ. ಮಹಿಳೆಗೆ ತಿಳಿಯದಂತೆ ಕೃಷ್ಣಮೂರ್ತಿ ಎನ್ನುವವರಿಂದ ಕ್ರಯ ಮಾಡಿಸಿಕೊಂಡಿದ್ದಾರೆಂಬ ಗಂಭೀರ ಆರೋಪ ಕೇಳಿಬಂದಿದೆ ಎಂದರು. ಇದನ್ನೂ ಓದಿ: ಅಮಿತ್ ಶಾ ಭೇಟಿ ಮಾಡಿಲ್ಲ, ಫೋನ್‍ನಲ್ಲಿ ಮಾತುಕತೆ: ಸಿಎಂ ಬೊಮ್ಮಾಯಿ 

    ಈ ಹಿಂದೆ ಸಂಪುಟದಲ್ಲಿದ್ದ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರ ಮೇಲೆ ಭ್ರಷ್ಟಾಚಾರದ ಆರೋಪ ಕೇಳಿಬಂದ ಬೆನ್ನಲ್ಲೇ ಅವರ ತಲೆದಂಡವಾಗಿದೆ. ಆದರೆ ಶ್ರೀರಾಮುಲು ವಿಚಾರದಲ್ಲಿ ಸಿಎಂ ಮೀನಾಮೇಷ ಎಣಿಸುವುದು ಸರಿಯಲ್ಲ. ಈಶ್ವರಪ್ಪ ಅವರಿಗೆ ಒಂದು ನ್ಯಾಯ, ಶ್ರೀರಾಮುಲು ಅವರಿಗೆ ಒಂದು ನ್ಯಾಯನಾ! ಈಗಾಗಲೇ ಭೂ ಕಬಳಿಕೆ ಆರೋಪದಡಿ ಶ್ರೀರಾಮುಲು ವಿರುದ್ಧ ಬಳ್ಳಾರಿಯಲ್ಲಿ ಚಾರ್‍ಶೀಟ್ ಆಗಿದೆ ಎಂದು ಕಿಡಿಕಾರಿದರು.

    ಭ್ರಷ್ಟಾಚಾರದ ಅಲೆಯಲ್ಲಿ ಸಚಿವ ಶ್ರೀರಾಮುಲು ತೇಲುತ್ತಿದ್ದಾರೆ. ಆದರೂ ಸಚಿವ ಸ್ಥಾನದಿಂದ ತೆಗೆಯಲು ತಾರತಮ್ಯ ಮಾಡಲಾಗ್ತಿದೆ. ಈ ಪ್ರಕರಣದಲ್ಲಿ ಆರನೇ ಆರೋಪಿಯಾಗಿ ಜಾಮೀನು ಪಡೆದಿರೋ ಶ್ರೀರಾಮುಲು ಅವರನ್ನು ಸಂಪುಟದಿಂದ ವಜಾಗೊಳಿಸಬೇಕೆಂದು ಒತ್ತಾಯಿಸಿದರು.

    ಈ ಕೇಸು ಬೆಂಗಳೂರು ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ವರ್ಗಾವಣೆಯಾಗಿದ್ದು, ಇನ್ಯಾವ ತಿರುವು ಪಡೆಯಲಿದೆ ನೋಡಬೇಕು. ಇಂತಹ ಭ್ರಷ್ಟ ಶ್ರೀರಾಮುಲು ಸಚಿವರಾಗಿದ್ರೆ, ಅನೇಕ ಜನ ಅಮಾಯಕರಿಗೆ ಅನ್ಯಾಯವಾಗಲಿದೆ. ಹೀಗಾಗಿ ಇಂತಹ ಭ್ರಷ್ಟಮಂತ್ರಿಯನ್ನು ಸಂಪುಟದಿಂದ ಕೈಬಿಡುವಂತೆ ಬೊಮ್ಮಾಯಿ ಅವರನ್ನು ಆಗ್ರಹಿಸಿದರು. ಇದನ್ನೂ ಓದಿ: ಆಜಾನ್ ವಿರೋಧಿಸಿ ಜಮ್ಮು ಕಾಲೇಜು ವಿದ್ಯಾರ್ಥಿಗಳಿಂದ ಹನುಮಾನ್ ಚಾಲೀಸಾ ಪಠಣ

    ಶ್ರೀರಾಮುಲು ನಾಯಕ ಸಮುದಾಯದವನಲ್ಲ
    ಎಸ್.ಟಿ ಮೀಸಲಾತಿ ವಿಚಾರದಲ್ಲಿ ವಾಲ್ಮೀಕಿ ಸಮುದಾಯಕ್ಕೆ ಶ್ರೀರಾಮುಲು ವಂಚಿಸಿದ್ದಾರೆ. ಸೆಷನ್‍ನಲ್ಲಿ ಮೀಸಲಾತಿ ಬಗ್ಗೆ ಶಾಸಕರು ಕೇಳಬೇಕಿತ್ತು. ವಾಲ್ಮೀಕಿ ಶ್ರೀಗಳನ್ನು ಪ್ರತಿಭಟಿಸಲು ಮುಂದೆ ಬಿಟ್ಟು ಸುಮ್ಮನಾಗಿದ್ದಾರೆ. ವಾಲ್ಮೀಕಿ ಸಮುದಾಯಕ್ಕೆ ಅಗೌರವ ತೋರಿದ್ದಾರೆ. ಶ್ರೀರಾಮುಲುಗೆ ವಾಲ್ಮೀಕಿ ಸಮುದಾಯ ಪಾಠ ಕಲಿಸಬೇಕು. ಮುಂಬರುವ ಚುನಾವಣೆಯಲ್ಲಿ ತಿರಸ್ಕರಿಸಬೇಕು. ಶ್ರೀರಾಮುಲು ನಾಯಕ ಸಮುದಾಯದವನೇ ಅಲ್ಲ ಅನ್ನೋದನ್ನ ತಿಳ್ಕೊಬೇಕು ಎಂದು ಕುಟುಕಿದರು.

  • ಸುಳ್ಳು ಆರೋಪ ಮಾಡಿದ ಮಾಜಿ ಶಾಸಕನ ಮೇಲೆ ಮಾನನಷ್ಟ ಮೊಕದ್ದಮೆ ಹಾಕ್ತೀನಿ: ಪಾಪೇಶ್

    ಸುಳ್ಳು ಆರೋಪ ಮಾಡಿದ ಮಾಜಿ ಶಾಸಕನ ಮೇಲೆ ಮಾನನಷ್ಟ ಮೊಕದ್ದಮೆ ಹಾಕ್ತೀನಿ: ಪಾಪೇಶ್

    ಚಿತ್ರದುರ್ಗ: ಆಧಾರ ರಹಿತವಾಗಿ ನನ್ನ ಮೇಲೆ ಸುಳ್ಳು ಆರೋಪ ಮಾಡಿರುವ ಮೊಳಕಾಲ್ಮೂರು ಮಾಜಿ ಶಾಸಕ ತಿಪ್ಪೇಸ್ವಾಮಿ ಮೇಲೆ ಮಾನನಷ್ಟ ಮೊಕದ್ದಮೆ ಹಾಕುತ್ತೇನೆ ಎಂದು ಸಚಿವ ಶ್ರೀರಾಮುಲು ಆಪ್ತ ಸಹಾಯಕ ಪಾಪೇಶ್ ಗುಡುಗಿದ್ದಾರೆ.

    ನಿನ್ನೆ ಮಾಜಿ ಶಾಸಕ ತಿಪ್ಪೇಸ್ವಾಮಿ ಸುದ್ದಿಗೋಷ್ಠಿ ನಡೆಸಿ ಸಚಿವರ ಪಿಎಗಳಾದ ಹನುಮಂತ ರಾಯ ಹಾಗೂ ಪಾಪೇಶ್ ವಿರುದ್ಧ 772 ಜನ ಫಲಾನುಭವಿಗಳ ನೇರ ಸಾಲದ ಹಣವನ್ನು ನುಂಗಿದ್ದಾರೆಂಬ ಆರೋಪ ಮಾಡಿದ ಬೆನ್ನಲ್ಲೇ ಇಂದು ಶ್ರೀರಾಮುಲು ಪಿಎ ಪಾಪೇಶ್ ಹಾಗೂ ಬೆಂಬಲಿಗ ಜಯಪಾಲಯ್ಯ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿದರು. ಇದನ್ನೂ ಓದಿ: ಪೊಲೀಸ್‍ಗೆ ಕಪಾಳಮೋಕ್ಷ ಮಾಡಿದ ಮಾಜಿ ಶಾಸಕ ಎ.ಪಾಪಾರೆಡ್ಡಿ

    ಈ ವೇಳೆ ಮಾತನಾಡಿದ ಪಾಪೇಶ್, ಮಾಜಿ ಶಾಸಕ ತಿಪ್ಪೇಸ್ವಾಮಿ ಸುಖಾಸುಮ್ಮನೆ ನಮ್ಮ ಮೇಲೆ ಸುಳ್ಳು ಆರೋಪ ಮಾಡುತ್ತಿದ್ದಾರೆ. ಮೊಳಕಾಲ್ಮೂರು ಕ್ಷೇತ್ರದಲ್ಲಿ ಹೇಳಲು ಹೆಸರಿಲ್ಲದಂತಾಗಿದ್ದ ತಿಪ್ಪೇಸ್ವಾಮಿಗೆ ನಮ್ಮ ಸಚಿವರಾದ ಶ್ರೀರಾಮುಲು ಅವರು ಇವರಿಗೆ ಕೊಟ್ಟ ಭಿಕ್ಷೆಯಿಂದ ಬಿಎಸ್‍ಆರ್ ಪಕ್ಷದಿಂದ ಗೆದ್ದು ಶಾಸಕರಾಗಿದ್ದರು. ಈಗ ಮಾಜಿ ಶಾಸಕರಾಗಿರೋದು ಸಹ ಸಚಿವರ ಕೃಪೆಯಿಂದಲೇ ಎಂಬುದನ್ನು ಮರೆತಿದ್ದಾರೆ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ದೀಪಾವಳಿ ಗಿಫ್ಟ್ ಅಲ್ಲ, ಪೆಟ್ರೋಲ್, ಡೀಸೆಲ್ ಬೆಲೆ ಇನ್ನೂ ಕಡಿಮೆಯಾಗಬೇಕು: ಸತೀಶ್ ಜಾರಕಿಹೊಳಿ

    ನಮ್ಮ ಮೇಲೆ ಬಂದಿರುವ ಆರೋಪಗಳೆಲ್ಲಾ ಸುಳ್ಳು. ಮಾಜಿ ಶಾಸಕರನ್ನು ಜನರು ಮರೆಯುತ್ತಾರೆಂದು ಈ ರೀತಿ ನಮ್ಮ ಮೇಲೆ ಆರೋಪ ಮಾಡುತ್ತಿದ್ದಾರೆ. ನೇರ ಸಾಲ ಫಲಾನುಭವಿಗಳಿಗೆ ಹಣ ತಲುಪದ ಬಗ್ಗೆ ಮಾಹಿತಿ ಇಲ್ಲ. ಒಂದು ವೇಳೆ ಅಕ್ರಮವಾಗಿದ್ದರೆ, ಸಚಿವರ ಗಮನಕ್ಕೆ ತಂದು ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲು ಮನವಿ ಮಾಡುತ್ತೇವೆ. ಅಲ್ಲದೇ ನಮ್ಮ ಮೇಲೆ ಮರಳು ದಂಧೆ ಆರೋಪ ಸಹ ಮಾಡಿರುವ ಮಾಜಿ ಶಾಸಕರು, ಒಮ್ಮೆ ಭೂ ವಿಜ್ಞಾನ ಇಲಾಖೆ ಹಾಗೂ ಡಿಸಿ ಕಚೇರಿಯಿಂದ ಮಾಹಿತಿ ಪಡೆಯಬೇಕು. ಅವುಗಳೆಲ್ಲವೂ ಅವರ ಅವಧಿಯಲ್ಲೇ ಪರ್ಮಿಟ್ ಪಡೆದ ಪ್ರದೇಶಗಳಾಗಿವೆ ಎಂದು ತಿರುಗೇಟು ನೀಡಿದರು. ಇದನ್ನೂ ಓದಿ: ನಿಮ್ಮ ಪಾದಕ್ಕೆ ನಮಸ್ಕಾರ ಮಾಡ್ತೀನಿ, ಪುನೀತ್‍ಗೆ ಕೆಟ್ಟ ಹೆಸ್ರು ತರಬೇಡಿ: ರಾಘವೇಂದ್ರ ರಾಜ್ ಕುಮಾರ್

    ಮಾಜಿ ಶಾಸಕರು ಪದೇ ಪದೇ ನಮ್ಮ ಸಚಿವರ ವಿರುದ್ಧ ಏಕವಚನದಲ್ಲಿ ಆಧಾರ ರಹಿತ ಆರೋಪ ಮಾಡುತ್ತಿದ್ದಾರೆ. ಅಲ್ಲದೇ ಪಿಎಗಳು ಕೇವಲ ಸಚಿವರ ಪಟ್ಟಿಯನ್ನು ಅಧಿಕಾರಿಗಳಿಗೆ ತಲುಪಿಸುವ ಕಾರ್ಯ ಮಾಡುತ್ತೇವೆ. ಆದರೆ ತಿಪ್ಪೇಸ್ವಾಮಿ ಪೂರ್ವಗ್ರಹ ಪೀಡಿತರಾಗಿ ಮಾತನಾಡುತ್ತಿದ್ದಾರೆ. ಒಂದು ವೇಳೆ ಮಾಜಿ ಶಾಸಕರ ಆರೋಪ ಸಾಭೀತಾದ್ರೆ ಅವರ ಮನೆಯಲ್ಲಿ ಕೆಲಸ ಮಾಡುತ್ತೇವೆ ಎಂದು ಸವಾಲು ಹಾಕಿದರು.

    ಸುದ್ದಿಗೋಷ್ಠಿಯಲ್ಲಿ ರಾಮುಲು ಬೆಂಬಲಿಗರಾದ ಜಯಪಾಲಯ್ಯ, ಮಂಜುನಾಥ್, ತಾಯಮ್ಮ ಉಪಸ್ಥಿತರಿದ್ದರು. ಇದನ್ನೂ ಓದಿ: ಕಂಠೀರವ ಸ್ಟುಡಿಯೋ ಬಳಿ ಬಿಗಿ ಪೊಲೀಸ್ ಭದ್ರತೆ

  • ಮಂತ್ರಿಗಿರಿ ನಿಭಾಯಿಸಲು ಬರಲ್ಲ, ಬಿಲ್ಡಪ್ ಕೊಡಲು ಬರ್ತಾನೆ – ರಾಮುಲು ವಿರುದ್ಧ ತಿಪ್ಪೇಸ್ವಾಮಿ ಕಿಡಿ

    ಮಂತ್ರಿಗಿರಿ ನಿಭಾಯಿಸಲು ಬರಲ್ಲ, ಬಿಲ್ಡಪ್ ಕೊಡಲು ಬರ್ತಾನೆ – ರಾಮುಲು ವಿರುದ್ಧ ತಿಪ್ಪೇಸ್ವಾಮಿ ಕಿಡಿ

    ಚಿತ್ರದುರ್ಗ: ಸಚಿವ ಶ್ರೀರಾಮುಲುಗೆ ಮಂತ್ರಿಗಿರಿ ನಿಭಾಯಿಸಲು ಬರಲ್ಲ. ಇಲ್ಲಿಗೆ ಬಿಲ್ಡಪ್ ಕೊಡಲು ಬರುತ್ತಾನೆ. ಅವನ ಬುಡುಬುಡುಕೆ ಮಾತುಗಳಿಗೆ ಇಲ್ಲಿ ಯಾರೂ ಹೆದರಲ್ಲ ಎಂದು ಮೊಳಕಾಲ್ಮೂರು ಮಾಜಿ ಶಾಸಕ ತಿಪ್ಪೇಸ್ವಾಮಿ ಏಕವಚನದದಲ್ಲಿ ವಾಗ್ದಾಳಿ ನಡೆಸಿದ್ದಾರೆ.

    ಚುನಾವಣೆ ವೇಳೆ ಬಿಜೆಪಿ ಟಿಕೆಟ್ ಪಡೆಯುವ ವಿಚಾರದಲ್ಲಿ ಆರಂಭವಾದ ಸಚಿವ ಶ್ರೀರಾಮುಲು ಹಾಗೂ ತಿಪ್ಪೇಸ್ವಾಮಿ ನಡುವಿನ ವಾಕ್ಸಮರ, ವಿಧಾನಸಭಾ ಚುನಾವಣೆ ಮುಗಿದು ಹಲವು ವರ್ಷಗಳೇ ಕಳೆದಿದ್ದರು ಸಹ ಇವರ ಸಮರ ಮಾತ್ರ ನಿಲ್ಲೋ ಲಕ್ಷಣಗಳು ಕಾಣ್ತಿಲ್ಲ.

    ಕಳೆದ ಎರಡು ದಿನಗಳ ಹಿಂದೆಯಷ್ಟೇ ಸಚಿವ ಶ್ರೀರಾಮುಲು ಸ್ವಕ್ಷೇತ್ರ ಮೊಳಕಾಲ್ಮೂರಿನಲ್ಲಿ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿದ್ದರು. ಹೀಗಾಗಿ ಆಕ್ರೋಶಗೊಂಡಿರೋ ತಿಪ್ಪೇಸ್ವಾಮಿಯವರು, ಆ ಕಾಮಗಾರಿಗಳಿಗೆ ನಾನು ಶಂಕು ಸ್ಥಾಪನೆ ಮಾಡಿದ್ದು, ನಾನು ಶಾಸಕನಾಗಿದ್ದಾಗ ನಿರ್ಮಿಸಿದ್ದ ಕಟ್ಟಡಗಳನ್ನು ಉದ್ಘಾಟನೆ ಮಾಡಲು ರಾಮುಲು ಬರುತ್ತಾನೆಂದು ಆರೋಪಿಸಿದ್ದಾರೆ.

    ಬಳ್ಳಾರಿಯಲ್ಲೂ ಶ್ರೀರಾಮುಲು ವರ್ಚಸ್ಸು ಬಿದ್ದು ಹೋಗಿದೆ. ಆದರೆ ತಾನೊಬ್ಬ ದೊಡ್ಡ ಲೀಡರ್ ಅಂತ ಫೋಸ್ ಕೊಡುವ ಈ ಮಹಾನುಭಾವ ನಾಯಕ ಸಮುದಾಯದ ಲೀಡರ್ ಆಗಿದ್ದಾರೆ. ಹುಣಸೂರಲ್ಲಿ ಬಿಜೆಪಿ ಅಭ್ಯರ್ಥಿ ವಿಶ್ವನಾಥ್ ಅವರನ್ನು ಗೆಲ್ಲಿಸುವ ಗಂಡಸುತನ ತೋರಬೇಕಿತ್ತು ಅಂತ ವಾಗ್ದಾಳಿ ನಡೆಸಿದ್ದಾರೆ. ಜೊತೆಗೆ ಆರೋಗ್ಯ ಸಚಿವ ಶ್ರೀ ರಾಮುಲು ಹಣ ಮಾಡಲು ಮೊಳಕಾಲ್ಮೂರು ಕ್ಷೇತ್ರದ ಶಾಸಕನಾಗಿದ್ದು, ತನ್ನೊಂದಿಗೆ 20 ಜನ ಆಪ್ತ ಸಹಾಯಕರನ್ನ ಇಟ್ಟುಕೊಂಡಿದ್ದಾನೆ. ಇಲಾಖೆಗೋರ್ವ ಪಿಎಗಳನ್ನು ನೇಮಿಸಿರುವ ಈ ಪುಣ್ಯಾತ್ಮ, ತನ್ನ ಹೊಟ್ಟೆಪಾಡಿಗಾಗಿ ದುಡ್ಡು ವಸೂಲಿ ಮಾಡಲು ಮೊಳಕಾಲ್ಮೂರಿಗೆ ಬಂದಿದ್ದಾನೆಂದು ಆರೋಪಿಸಿದ್ದಾರೆ.

    ವಿಧಾನಸಭಾ ಚುನಾವಣೆ ವೇಳೆ ಮೊಳಕಾಲ್ಮೂರು ಕ್ಷೇತ್ರಕ್ಕೆ ಬಿಜೆಪಿಯಿಂದ ಟಿಕೆಟ್ ನೀಡುವುದಾಗಿ ಹೇಳಿ ಕೊನೆ ಕ್ಷಣದಲ್ಲಿ ಬಿಜೆಪಿಯಿಂದ ಶ್ರೀ ರಾಮುಲುಗೆ ಟಿಕೇಟ್ ನೀಡಿದ ಪರಿಣಾಮ ತೀವ್ರ ಆಕ್ರೋಶಕ್ಕೊಳಗಾಗಿದ್ದ ಮಾಜಿ ಶಾಸಕ ತಿಪ್ಪೇಸ್ವಾಮಿ ಅವರ ಬೆಂಬಲಿಗರಿಂದ ನಾಯಕನಹಟ್ಟಿ ತಿಪ್ಪೇರುದ್ರಸ್ವಾಮಿ ದೇಗುಲದ ಕಲ್ಲು ತೂರಾಟ ಹಾಗೂ ರಾಮುಲು ಮೇಲೆ ಚಪ್ಪಲಿ ಎಸೆದು ಹೆದರಿಸಿ ಟಿಕೇಟ್ ಪಡೆಯಲು ಬಾರಿ ಪ್ರಯತ್ನ ಮಾಡಿದ್ದರು.

    ಆದರೆ ಈ ಗಲಭೆ ಹಾಗೂ ಸ್ಥಳೀಯರ ವಿರೋಧದ ನಡುವೆಯೂ ಶ್ರೀರಾಮುಲು ಮೊಳಕಾಲ್ಮೂರು ಕ್ಷೇತ್ರದಲ್ಲಿ ಗೆದ್ದು ಆರೋಗ್ಯ ಸಚಿವರಾಗಿದ್ದಾರೆ. ಅಲ್ಲದೆ ಮಾಜಿ ಶಾಸಕ ತಿಪ್ಪೇಸ್ವಾಮಿ ಸಹ ಚುನಾವಣೆಯಲ್ಲಿ ಪಕ್ಷೇತರರಾಗಿ ಸ್ಪರ್ಧಿಸಿ ಸೋತ ಬಳಿಕ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಿದ್ದಾರೆ. ಆದರೂ ಇವರಿಬ್ಬರ ನಡುವಿನ ದ್ವೇಷ ಮಾತ್ರ ಇನ್ನೂ ಶಮನವಾಗದೇ ಪರಸ್ಪರ ಆರೋಪ, ಪ್ರತ್ಯಾರೋಪ ಮುಂದುವರಿಸಿದ್ದಾರೆ.

  • ಮಾಜಿ ಸಚಿವ ತಿಪ್ಪೇಸ್ವಾಮಿ ನಿಧನ

    ಮಾಜಿ ಸಚಿವ ತಿಪ್ಪೇಸ್ವಾಮಿ ನಿಧನ

    ಬೆಂಗಳೂರು: ಬಹು ಅಂಗಾಂಗ ವೈಫಲ್ಯದಿಂದಾಗಿ ಬಳಲುತ್ತಿದ್ದ ಮಾಜಿ ಸಚಿವ ತಿಪ್ಪೇಸ್ವಾಮಿ ಚಿಕಿತ್ಸೆ ಫಲಕಾರಿಯಾಗದೇ ಇಂದು ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

    76 ವರ್ಷದ ತಿಪ್ಪೇಸ್ವಾಮಿಯವರು, ಬಹು ಅಂಗಾಂಗ ಸಮಸ್ಯೆಯಿಂದ ಕಳೆದೊಂದು ವಾರದಿಂದ ನಗರದ ಕೊಲಂಬಿಯಾ ಏಷ್ಯಾ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ಬೆಳಗಿನ ಜಾವ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಬಾರದ ಲೋಕಕ್ಕೆ ತೆರಳಿದ್ದಾರೆ.

    ಕುಟುಂಬಸ್ಥರು ಮೃತರ ಪಾರ್ಥಿವ ಶರೀರವನ್ನು ಚಳ್ಳಕೆರೆಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಿದ್ದು, ಇಂದು ಸಂಜೆ ಸ್ವಗ್ರಾಮವಾದ ಕಾಳಪ್ಪನಹಟ್ಟಿಯಲ್ಲಿ ಅಂತ್ಯಕ್ರಿಯೆ ನಡೆಸಲಾಗುತ್ತದೆ ಎಂದು ತಿಳಿಸಿದ್ದಾರೆ.

    ತಿಪ್ಪೇಸ್ವಾಮಿಯವರು ಮೂಲತಃ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆಯ ಕಾಳಪ್ಪನಹಟ್ಟಿಯ ಗ್ರಾಮದವರಾಗಿದ್ದರು. ತಮ್ಮ ರಾಜಕೀಯ ಜೀವನವನ್ನು ಜೆಡಿಎಸ್ ನೊಂದಿಗೆ ಪ್ರಾರಂಭಿಸಿದ್ದರು. ಇವರು ಮೂರು ಬಾರಿ ಚಳ್ಳಕೆರೆ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಗೊಂಡಿದ್ದರು. ಅಲ್ಲದೇ ದೇವೇಗೌಡರ ಸಚಿವ ಸಂಪುಟದಲ್ಲಿ ಅಬಕಾರಿ ಸಚಿವರಾಗಿ ಹಾಗೂ ಜೆ.ಎಚ್.ಪಟೇಲ್ ಸರ್ಕಾರದಲ್ಲಿ ಸಣ್ಣ ನೀರಾವರಿ ಸಚಿವರಾಗಿಯೂ ಸೇವೆ ಸಲ್ಲಿಸಿದ್ದರು.

    ಜೆಡಿಎಸ್ ತೊರೆದು ಬಿಜೆಪಿ ಸೇರಿಕೊಂಡಿದ್ದ ತಿಪ್ಪೇಸ್ವಾಮಿಯವರು ಯಡಿಯೂರಪ್ಪನವರ ವಲಯದಲ್ಲಿ ಗುರುತಿಸಿಕೊಂಡಿದ್ದರು. ವಾಲ್ಮೀಕಿ ಸಮುದಾಯದ ಹಿರಿಯ ಮುಖಂಡರಾಗಿದ್ದ ಅವರು ವಾಲ್ಮೀಕಿ ಗುರುಪೀಠ ಸ್ಥಾಪನೆಯಲ್ಲಿ ಮಹತ್ತರ ಪಾತ್ರ ವಹಿಸಿದ್ದರು. ರಾಜ್ಯ ಸರ್ಕಾರದಿಂದ ವಾಲ್ಮೀಕಿ ಪುರಸ್ಕಾರಕ್ಕೂ ಭಾಜನರಾಗಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvnews

  • ನಟರನ್ನು ಬಚ್ಚಾ ಎಂದಿದ್ದ ಶಾಸಕ ತಿಪ್ಪೇಸ್ವಾಮಿಗೆ ಯಶ್ ತಿರುಗೇಟು

    ನಟರನ್ನು ಬಚ್ಚಾ ಎಂದಿದ್ದ ಶಾಸಕ ತಿಪ್ಪೇಸ್ವಾಮಿಗೆ ಯಶ್ ತಿರುಗೇಟು

    ಬೆಂಗಳೂರು: ನಟ, ಸುದೀಪ್, ಯಶ್ ಇವರೆಲ್ಲ ನನ್ನ ಮುಂದೆ ಇನ್ನು ಬಚ್ಚಾಗಳು ಎಂದು ಹೇಳಿಕೆ ನೀಡಿದ್ದ ಮೊಳಕಾಲ್ಮೂರು ಶಾಸಕ ತಿಪ್ಪೇಸ್ವಾಮಿಗೆ ರಾಕಿಂಗ್ ಸ್ಟಾರ್ ತಿರುಗೇಟು ನೀಡಿದ್ದಾರೆ.

    ಬೆಂಗಳೂರು ಹೊರವಲಯ ನೆಲಮಂಗಲ ಮೀಸಲು ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಎಂ.ವಿ.ನಾಗರಾಜು ಪರ ನಟ ಯಶ್ ಮತಯಾಚನೆ ಮಾಡಿದ್ದಾರೆ. ನಂತರ ತಿಪ್ಪೇಸ್ವಾಮಿ ಯಶ್ ಬಚ್ಚಾ ಎನ್ನುವ ವಿಚಾರದ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ, ರಾಜಕೀಯ ಒಂದು ಗೇಮ್. ಅದು ನಿಜ ಇರಬೇಕು. ಅವರ ವಯಸ್ಸೇನು, ಅವರು ತುಂಬಾ ಹಿರಿಯರು, ಅವರ ಮುಂದೆ ನಾನು ಬಚ್ಚಾನೆ. ಅದನ್ನ ಜನ ಡಿಸೈಡ್ ಮಾಡುತ್ತಾರೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಈ ಸುದೀಪ್, ಯಶ್ ಇವರೆಲ್ಲ ನನ್ನ ಮುಂದೆ ಇನ್ನು ಬಚ್ಚಾಗಳು: ತಿಪ್ಪೇಸ್ವಾಮಿ

    ರಾಜಕೀಯದಲ್ಲಿ ಒಬ್ಬ ಗೆಲ್ಲಬೇಕಾದರೆ ನಾಲ್ಕು ಜನ ಸೋಲಲೇಬೇಕು. ಶ್ರೀರಾಮುಲು ನನಗೆ ಪರಿಚಯ ಹೀಗಾಗಿ ಅವರ ಹಾಗೂ ನನ್ನ ಅಭಿಮಾನಿಗಳಿಗೋಸ್ಕರ ಪ್ರಚಾರ ಮಾಡಿದೆ. ಜನಕ್ಕೆ ಏನೂ ಮಾಡಬೇಕು ಅನ್ನೋದು ನನ್ನ ಬುದ್ಧಿವಂತಿಕೆ, ವ್ಯವಸ್ಥೆಯನ್ನು ಬದಲಾಯಿಸುವ ನಂಬಿಕೆ ನನ್ನಲ್ಲಿಲ್ಲ. ಶಕ್ತಿವಂತರು, ಬುದ್ಧಿವಂತರು, ಜನರ ಪ್ರೀತಿಗಳಿಸಲು ಪ್ರಯತ್ನ ಪಡುವವರಿಗೆ ನಾನು ಸಹಕಾರಿಯಾಗುತ್ತೇನೆ. ನಾನು ಪ್ರಚಾರ ಮಾಡುವ ಸ್ಥಳಗಳಲ್ಲಿ ವಿರೋಧಿಗಳಿಗೆ ಭಯ ಹುಟ್ಟಿರಬಹುದು ಎಂದು ತಿರುಗೇಟು ನೀಡಿದ್ರು.

    ನಾನು ಪ್ರಚಾರ ಮಾಡುತ್ತಿರುವ ಅಭ್ಯರ್ಥಿಗಳ ಗೆಲುವು ಸೋಲಿಗಿಂತ ಹೇಗೆ ಕೆಲಸ ಮಾಡುತ್ತಾರೆ ಎನ್ನುವುದು ಮುಖ್ಯ. ಕಲಾವಿದನಾಗಿ ಜನ ನನಗೆ ಪ್ರೀತಿ ತೋರಿಸುತ್ತಾ ಇದ್ದಾರೆ. ಅದಕ್ಕೆ ನಾನು ಏನು ಮಾಡಬೇಕು ಅಂತಾ ಅವರ ಪರವಾಗಿ ಯೋಚನೆ ಮಾಡುತ್ತಾ ಇದ್ದೇನೆ. ನನಗೆ ಒಳ್ಳೆಯವನು ಕೆಟ್ಟವನು ಅನ್ನಿಸಿಕೊಳ್ಳುವ ಬಗ್ಗೆ ಯೋಚನೆ ಇಲ್ಲ. ಎಸ್ಟೋ ಸಲ ಕೆಟ್ಟೋನು ಎಂದವರು ನಂತರ ಒಳ್ಳೆಯವನು ಅಂದಿದ್ದಾರೆ ಎಂದು ವಿರೋಧಿಗಳಿಗೆ ಯಶ್ ಟಾಂಗ್ ನೀಡಿದ್ದಾರೆ.

  • ಈ ಸುದೀಪ್, ಯಶ್ ಇವರೆಲ್ಲ ನನ್ನ ಮುಂದೆ ಇನ್ನು ಬಚ್ಚಾಗಳು: ತಿಪ್ಪೇಸ್ವಾಮಿ

    ಈ ಸುದೀಪ್, ಯಶ್ ಇವರೆಲ್ಲ ನನ್ನ ಮುಂದೆ ಇನ್ನು ಬಚ್ಚಾಗಳು: ತಿಪ್ಪೇಸ್ವಾಮಿ

    ಚಿತ್ರದುರ್ಗ: ನಟ ಕಿಚ್ಚ ಸುದೀಪ್ ಹಾಗೂ ಗಣಿದಣಿ ಜನಾರ್ದನ ರೆಡ್ಡಿ ವಿರುದ್ಧ ಪಕ್ಷೇತರ ಅಭ್ಯರ್ಥಿ ತಿಪ್ಪೇಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

    ನಾಯಕನಟ್ಟಿಯಲ್ಲಿ ನಟ ಕಿಚ್ಚ ಸುದೀಪ್, ಬಿಜೆಪಿ ಅಭ್ಯರ್ಥಿ ಶ್ರೀರಾಮುಲು ಪರ ಮತಯಾಚನೆಗಾಗಿ ಆಗಮಿಸಿದ್ದಕ್ಕಾಗಿ ಆಕ್ರೋಶಗೊಂಡ ತಿಪ್ಪೇಸ್ವಾಮಿ, ಈ ಸುದೀಪ್, ಯಶ್ ಇವರೆಲ್ಲ ನನ್ನ ಮುಂದೆ ಇನ್ನು ಬಚ್ಚಾಗಳು. ನಾನು ಇವರಿಗಿಂತ ಮೊದಲೇ ಬಣ್ಣ ಹಚ್ಚಿದ ಕಲಾವಿದ. ಹೀಗಾಗಿ ಇವರೆಲ್ಲಾ ಬಂದು ಪ್ರಚಾರ ಮಾಡಿದರೆ ನಮ್ ಜನ ಮರಳಾಗಲ್ಲ. ಮೊಳಕಾಲ್ಮೂರು ಕ್ಷೇತ್ರದಲ್ಲಿ ಶ್ರೀ ರಾಮುಲು ಈ ಗೆಲ್ಲಲ್ಲ. ಅಂತ ಸುದೀಪ್ ವಿರುದ್ಧ ಕಿಡಿಕಾರಿದ್ದಾರೆ.

    ಬಳ್ಳಾರಿಯವರ ಅಟ ಇಲ್ಲಿ ನಡೆಯಲ್ಲ. ಆ ಜನಾರ್ದನ ರೆಡ್ಡಿಗೆ ನಾಚಿಕೆಯಾಗಬೇಕು. ಅವರಿಗೆ ಬಿಜೆಪಿಯೊಂದಿಗೆ ಬರಬೇಡ ಅಂದರೂ ನಾಚಿಕೆ ಇಲ್ಲದೇ ಬರುತ್ತಾರೆ. ಕದ್ದು ಮುಚ್ಚಿ ಪ್ರಚಾರ ಮಾಡುತ್ತಾರೆ. ನಾಚಿಕೆಯಾಗಲ್ವಾ ಅವರಿಗೆ ಅಂತ ಪ್ರಶ್ನಿಸಿದ್ರು.

    ತಿಪ್ಪೇಸ್ವಾಮಿ ಒಲವು ಸಿಎಂ ಸಿದ್ದರಾಮಯ್ಯ ಕಡೆ ವಾಲಿದ್ದೂ, ಬದಾಮಿಯಲ್ಲಿ ಸಿದ್ದರಾಮಯ್ಯ ಗೆದ್ದೇ ಗೆಲ್ಲುತ್ತಾರೆ. ಶ್ರೀರಾಮುಲು ಸೋಲುತ್ತಾರೆ. ಆದರೆ ಬದಾಮಿಯಲ್ಲಿ ಪ್ರಚಾರ ಮಾಡಲ್ಲ ಅಂದಿದ್ದ ನಟ ಸುದೀಪ್, ಮೊಳಕಾಲ್ಮೂರು ಕ್ಷೇತ್ರಕ್ಕೆ ಯಾಕೆ ಬಂದ್ರು ಅಂತ ಕಿಡಿಕಾರಿದ್ದಾರೆ.

    ಜೊತೆಗೆ ನಾವು ಯಾರಿಗೂ ಕಮ್ಮಿ ಇಲ್ಲವೆಂಬಂತೆ ಸುದೀಪ್ ರೋಡ್ ಶೋ ವೇಳೆಯೇ ದೇಗುಲದ ಆವರಣದಲ್ಲಿ ಬಂಡಾಯ ಶಾಸಕ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದೂ, ಅವರ ಗುರುತಾದ ನೂರಾರು ಟ್ರಾಕ್ಟರ್ ಗಳಲ್ಲಿ ಅಪಾರ ಜನಸ್ತೋಮವನ್ನು ಸೇರಿಸಿ ಬಹಿರಂಗ ಸಭೆಯಲ್ಲಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

  • ನಾನು ಬಿಜೆಪಿಗೆ ಮತ್ತೆ ಸೇರಲ್ಲ, ಇದೆಲ್ಲಾ ಬಳ್ಳಾರಿಯವರ ತಂತ್ರ: ಶಾಸಕ ತಿಪ್ಪೇಸ್ವಾಮಿ ಗರಂ

    ನಾನು ಬಿಜೆಪಿಗೆ ಮತ್ತೆ ಸೇರಲ್ಲ, ಇದೆಲ್ಲಾ ಬಳ್ಳಾರಿಯವರ ತಂತ್ರ: ಶಾಸಕ ತಿಪ್ಪೇಸ್ವಾಮಿ ಗರಂ

    ಚಿತ್ರದುರ್ಗ: ನನ್ನನ್ನು ಇದುವರೆಗೂ ಯಾರು ಸಂಪರ್ಕಿಸಿಲ್ಲ ಮತ್ತು ನಾನು ಬಿಜೆಪಿಗೆ ಮತ್ತೆ ಸೇರಲ್ಲ. ಬಳ್ಳಾರಿಯವರ ಕುತಂತ್ರದಿಂದ ನನಗೆ ಟಿಕೆಟ್ ತಪ್ಪಿದೆ. ಆದ್ರೆ ಇವರ ಆಟ ಇಲ್ಲಿ ನಡೆಯಲ್ಲ ಅಂತಾ ಮೊಳಕಾಲ್ಮೂರು ವಿಧಾನ ಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ತಿಪ್ಪೇಸ್ವಾಮಿ ಕಿಡಿಕಾರಿದ್ದಾರೆ.

    ಸಂಸದ ಶ್ರೀರಾಮುಲು ವಿರುದ್ಧ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ತಿಪ್ಪೇಸ್ವಾಮಿ ಅವರು ಈಗಾಗಲೇ ಪಕ್ಷೇತರ ಅಭ್ಯರ್ಥಿಯಾಗಿ ಮೊಳಕಾಲ್ಮೂರು ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಜನಾರ್ದನ ರೆಡ್ಡಿ, ಕಣದಿಂದ ಹಿಂದೆ ಸರಿಯುವಂತೆ ತಿಪ್ಪೇಸ್ವಾಮಿ ಅವರ ಮನವೊಲಿಸಲು ಮುಂದಾಗಿದ್ದಾರೆ ಎಂಬ ಮಾತುಗಳು ಕೇಳಿ ಬಂದಿದ್ದವು. ಇದನ್ನೂ ಓದಿ: ನಾಲ್ಕು ಕಡೆ ಕಲ್ಲು ತೂರಾಡಿ, ಇಲ್ಲದಿದ್ರೆ ಸುಮ್ಮನಿರಿ…- ತಿಪ್ಪೇಸ್ವಾಮಿಯಿಂದ ಬೆಂಬಲಿಗರಿಗೆ ಪ್ರಚೋದನೆ

    ತಮ್ಮ ಬಗ್ಗೆ ಹುಟ್ಟಿಕೊಂಡಿರುವ ಮಾತುಗಳಿಗೆ ಸ್ಪಷ್ಟನೆ ನೀಡಿದ ತಿಪ್ಪೇಸ್ವಾಮಿ, ನನ್ನ ಬೆಂಬಲಿಗರು ಮತ್ತು ಮತದಾರರಲ್ಲಿ ಗೊಂದಲ ಮೂಡಿಸಲು ಈ ರೀತಿಯ ಸುದ್ದಿಗಳನ್ನು ಹರಿಬಿಡಲಾಗುತ್ತಿದೆ. ಈ ಕೆಲಸವನ್ನು ಬಳ್ಳಾರಿಯವ್ರೆ ಮಾಡ್ತಿದ್ದಾರೆ ಅಂತಾ ಆರೋಪಿಸಿದ್ರು. ಇದನ್ನೂ ಓದಿ: ನೀನು ಗಂಡಸಾಗಿದ್ರೆ, ಮೊಳಕಾಲ್ಮೂರಲ್ಲಿ ಗೆದ್ದು ತೋರ್ಸು ನಾನು ನೋಡ್ತಿನಿ-ಶ್ರೀರಾಮುಲುಗೆ ಸವಾಲೆಸೆದ ಶಾಸಕ ತಿಪ್ಪೇಸ್ವಾಮಿ

    ಇದನ್ನೂ ಓದಿ:  ಮಾತು ಕೊಟ್ಟು ಮೋಸ ಮಾಡಿದ್ರು ಶ್ರೀರಾಮುಲು-ತಿಪ್ಪೇಸ್ವಾಮಿ ಬೆಂಬಲಿಗರ ಆಕ್ರೋಶ: ನೀವೇ ವಿಡಿಯೋ ನೋಡಿ

  • ನೀನು ಗಂಡಸಾಗಿದ್ರೆ, ಮೊಳಕಾಲ್ಮೂರಲ್ಲಿ ಗೆದ್ದು ತೋರ್ಸು ನಾನು ನೋಡ್ತಿನಿ-ಶ್ರೀರಾಮುಲುಗೆ ಸವಾಲೆಸೆದ ಶಾಸಕ ತಿಪ್ಪೇಸ್ವಾಮಿ

    ನೀನು ಗಂಡಸಾಗಿದ್ರೆ, ಮೊಳಕಾಲ್ಮೂರಲ್ಲಿ ಗೆದ್ದು ತೋರ್ಸು ನಾನು ನೋಡ್ತಿನಿ-ಶ್ರೀರಾಮುಲುಗೆ ಸವಾಲೆಸೆದ ಶಾಸಕ ತಿಪ್ಪೇಸ್ವಾಮಿ

    ಚಿತ್ರದುರ್ಗ: ವಿಧಾನಸಭಾ ಚುನಾವಣೆಗೆ ಬಿಜೆಪಿ ಟಿಕೆಟ್ ಸಿಗದೆ ಅಸಮಾಧಾನಗೊಂಡಿರುವ ಶಾಸಕ ತಿಪ್ಪೇಸ್ವಾಮಿ ಅವರು ಸಂಸದ ಶ್ರೀರಾಮುಲು ಅವರ ಸವಾಲಿಗೆ ಪ್ರತಿ ಸವಾಲು ಎಸೆದಿದ್ದಾರೆ.

    ತನ್ನ ವಿರುದ್ಧ ಚುನಾವಣೆಯಲ್ಲಿ ನಿಂತು ಸ್ಪರ್ಧೆ ಮಾಡಿ ಗೆದ್ದು ತೋರಿಸಿ ಎಂಬ ಶ್ರೀ ರಾಮುಲು ಅವರ ಸವಾಲನ್ನು ಸ್ವೀಕರಿಸಿ ಮಾತನಾಡಿದ ಶಾಸಕ ತಿಪ್ಪೇಸ್ವಾಮಿ, ಸಂಸದರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ನೀನು ಗಂಡಸಾಗಿದ್ರೆ. ನಾಯಕನೇ ಆಗಿದ್ರೆ. ಇಲ್ಲಿ ಗೆದ್ದು ತೋರಿಸು ನಿಮ್ಮಂತವರಿಗೆ ಇಲ್ಲಿನ ಜನರು ಹೆದರುವುದಿಲ್ಲ. ಇದು ಮದಕರಿನಾಯಕ ಕಟ್ಟಿದ ಜಿಲ್ಲೆ ಎಂದು ಕಟು ಶಬ್ಧಗಳಲ್ಲಿ ಪ್ರತಿ ಸವಾಲು ಹಾಕಿದರು.

    ಮೊಳಕಾಲ್ಮೂರು ಕ್ಷೇತ್ರದ ಸ್ವ-ಗ್ರಾಮದಲ್ಲಿ ಬೆಂಬಲಿಗರ ಸಭೆ ಬಳಿಕ ಮಾತನಾಡಿದ ತಿಪ್ಪೇಸ್ವಾಮಿ, ಶತಾಯಗತಾಯ ಶ್ರೀರಾಮುಲು ಅವರಿಗೆ ಈ ಚುನಾವಣೆಯಲ್ಲಿ ಸೋಲಿನ ರುಚಿ ತೋರಿಸುತ್ತೇನೆ. ಪಕ್ಷದಲ್ಲಿ ಟಿಕೆಟ್ ನೀಡದಿದ್ದರೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವುದು ಖಚಿತ. ನಾನು ಯಾವ ಪಕ್ಷದವರನ್ನೂ ಟಿಕೆಟ್ ಗಾಗಿ ಸಂಪರ್ಕಿಸಿಲ್ಲ ಎಂದರು.

    ಬಳ್ಳಾರಿಯಲ್ಲಿ ಸೋಲಿನ ಭೀತಿಯಿಂದ ಶ್ರೀರಾಮುಲು ವರು ಚಿತ್ರದುರ್ಗಕ್ಕೆ ಬಂದಿದ್ದಾರೆ. ಅಲ್ಲದೇ ತನಗೆ ಟಿಕೆಟ್ ನೀಡುವ ಭರವಸೆ ನೀಡಿ ಮೋಸ ಮಾಡಿದ್ದಾರೆ. ಬಿಜೆಪಿ ಮೋಸ ಮಾಡಿದ ಪಕ್ಷ, ಬಿಜೆಪಿಗೆ ಮತ ಹಾಕಬೇಡಿ. ಅಲ್ಲದೇ ನಾಗೇಂದ್ರ, ಆನಂದ್ ಸಿಂಗ್ ಅವರೆಲ್ಲ ಶ್ರೀರಾಮುಲು ಅವರನ್ನು ಯಾಕೆ ಬಿಟ್ಟು ಹೋದರು ನನಗೆ ತಿಳಿದಿದೆ. ಆದರೆ ಅವರು ಇಲ್ಲಿನ ಕೆಲ ಸ್ಥಳೀಯರ ಮಾತು ಕೇಳಿದ್ದಾರೆ. ಅಂಥವರ ಮಾತಿನಿಂದ ಎಲ್ಲರೂ ಹಾಳಾಗಬೇಕಾಗುತ್ತದೆ. ಪದೇ ಪದೇ ಸೋಲು ಖಚಿತ ಎಂದು ರಕ್ತದಲ್ಲಿ ಬರೆದು ಕೊಡುತ್ತೇನೆ ಎಂದು ರಾಮುಲು ಅವರು ಹೇಳುತ್ತಾರೆ ಆದ್ರೆ ಅವರದ್ದು, ಮಾತು ಕೊಟ್ಟು ಮೋಸ ಮಾಡಿದ ರಕ್ತ ಎಂದು ತೀವ್ರ ವಾಗ್ದಾಳಿ ನಡೆಸಿದರು.

    ಕ್ಷೇತ್ರದ ಜನತೆ ನನ್ನೊಂದಿಗೆ ಇದ್ದಾರೆ, ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಮಾಡಿದ್ದೇನೆ. ಎಲ್ಲಾ ಸಮುದಾಯದವರೂ ನನ್ನ ಜೊತೆಗಿದ್ದಾರೆ. ಚುನಾವಣೆಯಲ್ಲಿ ಸ್ಪರ್ಧಿಸುವುದು ಖಚಿತ. ಬಿಜೆಪಿ ನನ್ನ ಕುಟುಂಬಕ್ಕೆ ಅನ್ಯಾಯ ಮಾಡಿದೆ ಎಂದು ತಮ್ಮ ಸಹೋದರನ ಹೆಸರು ಹೇಳದೆ ಶ್ರೀರಾಮುಲು ವಿರುದ್ಧ ಕೆಂಡಾಮಂಡಲರಾದ್ರು.  ಇದನ್ನೂ ಓದಿ:   ಶಾಸಕ ತಿಪ್ಪೇಸ್ವಾಮಿಗೆ ಬಹಿರಂಗ ಸವಾಲೆಸೆದ ಶ್ರೀರಾಮುಲು

     

     

  • ಶಾಸಕ ತಿಪ್ಪೇಸ್ವಾಮಿಗೆ ಬಹಿರಂಗ ಸವಾಲೆಸೆದ ಶ್ರೀರಾಮುಲು

    ಶಾಸಕ ತಿಪ್ಪೇಸ್ವಾಮಿಗೆ ಬಹಿರಂಗ ಸವಾಲೆಸೆದ ಶ್ರೀರಾಮುಲು

    ಬಳ್ಳಾರಿ: ಕರ್ನಾಟಕ ವಿಧಾನಸಭಾ ಚುನಾವಣಾ ಪಟ್ಟಿ ಬಿಡುಗಡೆಗೊಂಡ ಬಳಿಕ ಶ್ರೀರಾಮುಲು ಮತ್ತು ತಿಪ್ಪೇಸ್ವಾಮಿ ಬೆಂಬಲಿಗರ ವಿರುದ್ಧ ಭಿನ್ನಮತ ಏರ್ಪಟ್ಟಿದೆ.

    ಬಳ್ಳಾರಿಯ ತಮ್ಮ ನಿವಾಸದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಶ್ರೀರಾಮುಲು, ಶುಕ್ರವಾರ ನಡೆದ ಘಟನೆ ನನಗೆ ಮತ್ತು ನಮ್ಮ ಸಮಾಜಕ್ಕೆ ಮಾಡಿದ ಅಪಮಾನವಾಗಿದೆ. ನಿನ್ನೆಯ ಘಟನೆಯಲ್ಲಿ ನನ್ನ ಕಾರು ಜಖಂ ಆಗಿದೆ. ನನ್ನ ಹುಡುಗರ ಮೇಲೆ ಹಲ್ಲೆಯಾಗಿದೆ ಅಷ್ಟೆ. ನನ್ನ ಶರ್ಟ್ ಹರಿದು ಹಲ್ಲೆ ಮಾಡಿದ್ದಾರೆ ಅನ್ನೋದು ಸುಳ್ಳು ವದಂತಿಯಾಗಿದೆಂದು ಅವರು ಹೇಳಿದ್ದಾರೆ.

    ಮೊಳಕಾಲ್ಮೂರು ಶಾಸಕ ತಿಪ್ಪೇಸ್ವಾಮಿ ಈ ಹಿಂದೆ ನನ್ನಿಂದ ಗೆದ್ದಿಲ್ಲ ಅಂತಿದ್ದಾರೆ. ಆದರೆ ಇದೀಗ ಅವರಿಗೆ ಸವಾಲು ಹಾಕುವೆ, ತಿಪ್ಪೇಸ್ವಾಮಿಗೆ ಶಕ್ತಿ ಇದ್ದರೇ ಪಕ್ಷೇತರ ಅಭ್ಯರ್ಥಿಯಾಗಲಿ. ಇಲ್ಲವೇ ಬೇರೆಯವರಿಗೆ ಬೆಂಬಲ ನೀಡಿ ಗೆದ್ದು ತೋರಿಸಲಿ ಅಂತ ಸಂಸದ ಹಾಗೂ ಮೊಳಕಾಲ್ಮೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀರಾಮುಲು ಬಹಿರಂಗವಾಗಿ ಸವಾಲು ಎಸೆದಿದ್ದಾರೆ. ಇದನ್ನೂ ಓದಿ: ಬಿಜೆಪಿ ಭಿನ್ನಮತೀಯರಿಂದ ಶ್ರೀರಾಮುಲು ಕಾರಿಗೆ ಕಲ್ಲು ತೂರಾಟ – ಪೊಲೀಸರಿಂದ ಲಾಠಿ ಚಾರ್ಜ್

    ಅಲ್ಲದೇ ಈ ಘಟನೆಯ ಬಗ್ಗೆ ಪಕ್ಷದ ನಾಯಕರು ನಿನ್ನೆಯೇ ನನ್ನಿಂದ ಮಾಹಿತಿ ಪಡೆದಿದ್ದಾರೆ. ಮೊಳಕಾಲ್ಮೂರು ಕ್ಷೇತ್ರದ ಶಾಸಕ ತಿಪ್ಪೇಸ್ವಾಮಿಗೆ 2013ರಲ್ಲಿ ನಾನೇ ಅವರ ಕೈ ಹಿಡಿದು ಗೆಲ್ಲಿಸಿದೆ. ಆದ್ರೆ ಇದೀಗ ಅವರು ತಿರುಗಿ ಬಿದ್ದಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಜೊತೆಗೆ ಕಾಂಗ್ರೆಸ್ ನನ್ನನ್ನೂ ಕಟ್ಟಿ ಹಾಕುವ ಪ್ರಯತ್ನ ಮಾಡುತ್ತಿದೆ. ಇದನ್ನೂ ಓದಿ:  ನನ್ನ ಮೇಲೆ ಕಲ್ಲು ತೂರಾಟ ಮಾಡಿದವರಿಗೆ ಒಳ್ಳೆಯದಾಗಲಿ, ದೂರು ನೀಡಲ್ಲ: ಶ್ರೀರಾಮುಲು

    ಹಿಂದುಳಿದ ಜನಾಂಗದ ಪರ ನಾನು ಹೋರಾಡುತ್ತಿದ್ದೇನೆ. ಕಾಂಗ್ರೆಸ್ ಎಸ್ಸಿ ಎಸ್‍ಟಿ ಮತಗಳಿಗೋಸ್ಕರ ನನ್ನ ಕಟ್ಟಿ ಹಾಕುವ ಪ್ರಯತ್ನ ಮಾಡುತ್ತಿದೆ. ಆದರೆ ಕಾಂಗ್ರೆಸ್ ನವರೂ ಏನೇ ಷಡ್ಯಂತ್ರ ಮಾಡಿದರೂ ನಾನು ಜಗ್ಗುವುದಿಲ್ಲ. ಮೊಳಕಾಲ್ಮೂರು ಕ್ಷೇತ್ರದಿಂದ ನಾನು ಕೇವಲ ನಾಮಪತ್ರ ಹಾಕಿ 2-3 ದಿನ ಮಾತ್ರ ಪ್ರಚಾರ ಮಾಡುವೆ. ಉಳಿದ ದಿನಗಳಲ್ಲಿ ನಾನು ರಾಜ್ಯದ ಎಲ್ಲ ಕ್ಷೇತ್ರಗಳಲ್ಲೂ ಪ್ರಚಾರ ಮಾಡಿ ಪಕ್ಷವನ್ನು ಅಧಿಕಾರಕ್ಕೆ ತರಲು ಶ್ರಮಿಸುವೆ ಎಂದು ಶ್ರೀರಾಮುಲು ಹೇಳಿದ್ದಾರೆ.