Tag: Thotapuri

  • ಮಸಾಜ್ ಪಾರ್ಲರ್ ಹುಡುಗಿ ಪಾತ್ರದಲ್ಲಿ ಅದಿತಿ ಪ್ರಭುದೇವ್

    ಮಸಾಜ್ ಪಾರ್ಲರ್ ಹುಡುಗಿ ಪಾತ್ರದಲ್ಲಿ ಅದಿತಿ ಪ್ರಭುದೇವ್

    ಹೊಸ ಹೊಸ ಪಾತ್ರಗಳ ಮೂಲಕ ಅಭಿಮಾನಿಗಳನ್ನು ರಂಜಿಸುತ್ತಿರುವ ಅದಿತಿ ಪ್ರಭುದೇವ್, ಈಗ ಮತ್ತಷ್ಟು ವಿಭಿನ್ನ ಪಾತ್ರಗಳನ್ನು ಮಾಡುತ್ತಿದ್ದಾರೆ. ಈಗಾಗಲೇ ರಿಲೀಸ್ ಗೆ ರೆಡಿ ಆಗಿರುವ ತೋತಾಪುರಿಯಲ್ಲಿ ಅವರು ಮುಸ್ಲಿಂ ಹುಡುಗಿಯಾಗಿ ನಟಿಸುತ್ತಿದ್ದರೆ, ಧನಂಜಯ್ ನಟನೆಯ ಒನ್ಸ್ ಅಪಾನ್ ಅ ಟೈಮ್ ಜಮಾಲಿಗುಡ್ಡ ಚಿತ್ರದಲ್ಲಿ ಅವರದ್ದು ಮಸಾಜ್ ಪಾರ್ಲರ್ ನಲ್ಲಿ ಕೆಲಸ ಮಾಡುವ ಹುಡುಗಿಯ ಪಾತ್ರವಂತೆ. ಇದನ್ನೂ ಓದಿ : ನಮ್ಮದು ಪ್ಯಾನ್ ಇಂಡಿಯಾ ಸಿನಿಮಾವಲ್ಲ, ಸಿನಿಮಾ ಅಷ್ಟೇ : ಬಾಲಿವುಡ್ ವಿರುದ್ಧ ಕಿಚ್ಚ ಸುದೀಪ್ ಗುಡುಗು

    ಕಲಾವಿದರು, ಕಲಾವಿದರ ವಯಸ್ಸು, ನಿರ್ದೇಶಕರು, ಬ್ಯಾನರ್ ಹೀಗೆ ಯಾವುದನ್ನೂ ನೋಡದೇ ತಮ್ಮ ಪಾತ್ರ ಅಚ್ಚುಕಟ್ಟಾಗಿದ್ದರೆ ಮತ್ತು ಅದು ಸವಾಲಿನ ಪಾತ್ರವಾಗಿದ್ದರೆ ಅದಿತಿ ಪ್ರಭುದೇವ್ ಬೇರೆ ಯಾವುದಕ್ಕೂ ತಲೆ ಕೆಡಿಸಿಕೊಳ್ಳುವುದಿಲ್ಲ. ಹೀಗಾಗಿಯೇ ತೋತಾಪುರಿ ಸಿನಿಮಾದಲ್ಲಿ ಜಗ್ಗೇಶ್ ಅವರಿಗೆ ನಾಯಕಿಯಾದರೆ, ಜಮಾಲಿಗುಡ್ಡ ಚಿತ್ರದಲ್ಲಿ ಧನಂಜಯ್ ಗೆ ಜೊತೆಯಾಗಿದ್ದಾರೆ.  ಇದನ್ನೂ ಓದಿ : ಮಂದಣ್ಣಗಾಗಿ ಮುಂಬೈನಲ್ಲಿ ಮುಗಿಬಿದ್ದ ಫ್ಯಾನ್ಸ್ : ಬಾಲಿವುಡ್ ನಲ್ಲೂ ರಶ್ಮಿಕಾ ಹವಾ

    ಈ ಎರಡೂ ಸಿನಿಮಾಗಳು ಅದಿತಿ ವೃತ್ತಿ ಜೀವನಕ್ಕೆ ಹೊಸ ತಿರುವು ನೀಡಬಲ್ಲವು. ತೋತಾಪುರಿಯಲ್ಲಿ ಒಂದು ರೀತಿಯಲ್ಲಿ ತಮಾಷೆಯಾಗಿ ಸಿನಿಮಾ ಸಾಗಿದರೆ, ಜಮಾಲಿಗುಡ್ಡ ಚಿತ್ರದಲ್ಲಿ ಬೇರೊಂದು ಪ್ರಪಂಚವೇ ಇರಲಿದೆ. ಎರಡೂ ಎರಡು ಬಗೆಯ ಚಿತ್ರವಾದ್ದರಿಂದ ಬೇರೆ ಬೇರೆ ವರ್ಗದ ಜನರಿಗೆ ಈ ಎರಡೂ ಪಾತ್ರಗಳು ಮುಟ್ಟುವುದಕ್ಕೆ ಸಾಧ್ಯವಾಗಲಿದೆ. ಇದನ್ನೂ ಓದಿ : ಬಾಲಿವುಡ್ ಎಂದರೆ ಭಾರತೀಯ ಸಿನಿಮಾರಂಗವಲ್ಲ: ಮೆಗಾಸ್ಟಾರ್ ಚಿರಂಜೀವಿಗೂ ಆಗಿತ್ತು ಅವಮಾನ

    ಮೊನ್ನೆಯಷ್ಟೇ ಅದಿತಿ ಪ್ರಭುದೇವ್ ನಿಶ್ಚಿತಾರ್ಥ ಮಾಡಿಕೊಂಡಿದ್ದರೆ, ಬಹುಶಃ ಈ ವರ್ಷದ ಕೊನೆಯಲ್ಲಿ ಮದುವೆನೂ ಆಗಲಿದ್ದಾರೆ. ಮದುವೆಯ ನಂತರವೂ ಸಿನಿಮಾ ರಂಗದಲ್ಲೇ ಮುಂದುವರೆಯುವುದಾಗಿ ಅದಿತಿ ಹೇಳಿದ್ದಾರೆ. ಮದುವೆ ನಂತರ ಎಲ್ಲ ಬಗೆಯ ಪಾತ್ರಗಳನ್ನೂ ಮಾಡದೇ ಇರಬಹುದು. ಆದರೆ, ಒಂದೊಳ್ಳೆ ಪಾತ್ರಗಳನ್ನು ನಿರ್ವಹಿಸಿದ ತೃಪ್ತಿ ಅವರಲ್ಲಿ ಇದ್ದೇ ಇದೆ.

  • ನೀವ್ಯಾರು ಮಕ್ಕಳು ಮಾಡಲ್ವಾ?: ತೋತಾಪುರಿ ಚಿತ್ರದ ಡಬಲ್ ಮೀನಿಂಗ್ ಡೈಲಾಗ್ ಸಮರ್ಥಿಸಿಕೊಂಡ ಜಗ್ಗೇಶ್

    ನೀವ್ಯಾರು ಮಕ್ಕಳು ಮಾಡಲ್ವಾ?: ತೋತಾಪುರಿ ಚಿತ್ರದ ಡಬಲ್ ಮೀನಿಂಗ್ ಡೈಲಾಗ್ ಸಮರ್ಥಿಸಿಕೊಂಡ ಜಗ್ಗೇಶ್

    ನಿನ್ನೆಯಷ್ಟೇ ಜಗ್ಗೇಶ್ ನಟನೆಯ ‘ತೋತಾಪುರಿ’ ಸಿನಿಮಾದ ಟ್ರೈಲರ್ ರಿಲೀಸ್ ಆಗಿದೆ. ಟ್ರೈಲರ್ ತುಂಬಾ ಬರೀ ಡಬಲ್ ಮೀನಿಂಗ್ ಡೈಲಾಗ್ ಗಳೇ ತುಂಬಿಕೊಂಡಿವೆ. ಇಂತಹ ಸಿನಿಮಾವನ್ನು ಕುಟುಂಬ ಸಮೇತ ನೋಡುವುದಕ್ಕೆ ಆಗುತ್ತಾ ಎನ್ನುವ ಮಾತುಗಳು ಕೂಡ ಕೇಳಿ ಬಂದಿದ್ದವು. ನಿರ್ದೇಶಕ ವಿಜಯ್ ಪ್ರಸಾದ್ ಅವರ ಬಹುತೇಕ ಸಿನಿಮಾಗಳ ಡೈಲಾಗ್ ಹಾಗೆಯೇ ಏಕೆ ಎನ್ನುವ ಪ್ರಶ್ನೆಯೂ ಪತ್ರಿಕಾಗೋಷ್ಠಿಯಲ್ಲಿ ತೂರಿ ಬಂತು. ಅದಕ್ಕೆ ಜಗ್ಗೇಶ್ ಮಾರ್ಮಿಕವಾಗಿಯೇ ಸಮರ್ಥನೆ ನೀಡಿರು. ಇದನ್ನೂ ಓದಿ : ಅಪ್ಪ ಸರಿ, ಮಕ್ಕಳು ತಪ್ಪು ಸರಕಾರಕ್ಕೆ ಟಾಂಗ್ ಕೊಟ್ಟ ನಟ ಉಪೇಂದ್ರ

    ತೋತಾಪುರಿ ಒಂದೊಳ್ಳೆ ಸಿನಿಮಾ. ಆ ಡೈಲಾಗ್ ಕೇಳಿದಾಗ ಸಹಜವಾಗಿ ಡಬಲ್ ಮೀನಿಂಗ್ ಅನಿಸತ್ತೆ. ನಾವ್ಯಾರು ಆ ರೀತಿ ಮಾತೇ ಆಡಲ್ಲವಾ? ಮಾಯಮಂತ್ರದಿಂದ ಹೆಂಡತಿ ನೋಡಿದ್ರೆ ಮಕ್ಕಳ ಆಗತ್ತಾ? ನಾವ್ಯಾರು ಮಕ್ಕಳ ಮಾಡಲ್ವಾ?’ ಎಂದು ಡಬಲ್ ಮೀನಿಂಗ್ ನಲ್ಲೇ ಉತ್ತರಿಸಿದರು ಜಗ್ಗೇಶ್. ಈ ಸಿನಿಮಾದಲ್ಲಿ ಅದ್ಭುತವಾದ ಸಂದೇಶವಿದೆ. ಅದನ್ನು ಮನರಂಜನೆಯ ಮೂಲಕ ಹೇಳುವ ಪ್ರಯತ್ನ ಮಾಡಿದ್ದಾರೆ ಎಂದರು ಜಗ್ಗೇಶ್. ಇದನ್ನೂ ಓದಿ : ಕನ್ನಡ ಚಿತ್ರರಂಗವನ್ನು ರಾಷ್ಟ್ರಮಟ್ಟಕ್ಕೆ ತಗೆದುಕೊಂಡು ಹೋದ ಮೊದಲಿಗರಾರು? ಹೀಗಿದೆ ನಟ ಜಗ್ಗೇಶ್ ಉತ್ತರ

    ವಿಜಯ್ ಪ್ರಸಾದ್ ಮತ್ತು ಜಗ್ಗೇಶ್ ಕಾಂಬಿನೇಷನ್ ನ ಎರಡನೇ ಸಿನಿಮಾವಿದು. ಈ ಹಿಂದೆ ರಿಲೀಸ್ ಆಗಿದ್ದ ನೀರ್ ದೋಸೆ ಕೂಡ ಸಿಕ್ಕಾಪಟ್ಟೆ ಹಿಟ್ ಆಗಿತ್ತು. ಈ ಸಿನಿಮಾ ಕೂಡ ನಿರೀಕ್ಷೆ ಮೂಡಿಸಿದೆ. ಮತ್ತೇ ಜಗ್ಗೇಶ್ ಮತ್ತು ವಿಜಯ್ ಪ್ರಸಾದ್ ಪ್ರೇಕ್ಷಕರಿಗೆ ಒಂದೊಳ್ಳೆ ಸಿನಿಮಾ ಕೊಡಲಿದ್ದಾರೆ ಎನ್ನುವ ಸೂಚನೆ ಕೊಡುವಂತಿದೆ ರಿಲೀಸ್ ಆಗಿರುವ ಟ್ರೈಲರ್. ಇದನ್ನೂ ಓದಿ :  ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ನಿರ್ದೇಶಕನ ವಿರುದ್ಧ ಕಿಡಿಕಾರಿದ ಸಿಖ್ ಸಂಘ

    ಹಿಂದೂ ಮುಸ್ಲಿಂ ಕಥೆಯನ್ನು ಸಿನಿಮಾಗಾಗಿ ನಿರ್ದೇಶಕರು ಆಯ್ಕೆ ಮಾಡಿಕೊಂಡಿದ್ದು, ಭಾವಕ್ಯತೆಗೆ ಹೇಳಿ ಮಾಡಿಸಿದ ಸಿನಿಮಾ ಎನ್ನಲಾಗುತ್ತಿದೆ. ಎಲ್ಲಿಯೂ ಕೋಮಗಲಭೆ ಆಗುವಂತಹ ಒಂದೇ ಒಂದು ದೃಶ್ಯವನ್ನೂ ಸಿನಿಮಾದಲ್ಲಿ ಬಳಸಿಲ್ಲವಂತೆ. ಇಡೀ ಕುಟುಂಬ ಸಮೇತ ನೋಡುವಂತಹ ಸಿನಿಮಾ ಇದಾಗಿದೆ ಎನ್ನುತ್ತಾರೆ ನಿರ್ದೇಶಕರು. ಇದನ್ನೂ ಓದಿ : ನಟಿ ಮಂದನಾ ಕರೀಮಿಗೆ ಮೋಸ ಮಾಡಿದ್ರಾ ನಿರ್ದೇಶಕ ಅನುರಾಗ್ ಕಶ್ಯಪ್?

    ಕೆ.ಎ.ಸುರೇಶ್ ನಿರ್ಮಾಣದಲ್ಲಿ ಈ ಸಿನಿಮಾ ಮೂಡಿ ಬಂದಿದ್ದು, ಜಗ್ಗೇಶ್ ಜತೆ ಡಾಲಿ ಧನಂಜಯ್, ಹೇಮಾ ದತ್ತ್, ಅದಿತಿ ಪ್ರಭುದೇವ್ ಸೇರಿದಂತೆ ಹಲವು ಕಲಾವಿದರು ಸಿನಿಮಾದಲ್ಲಿದ್ದಾರೆ. ಈ ಸಿನಿಮಾ ಎರಡು ಪಾರ್ಟ್ ನಲ್ಲಿ ಮೂಡಿ ಬಂದಿದೆ. ಮೊದಲನೇ ಭಾಗ ಅತೀ ಶೀಘ್ರದಲ್ಲೇ ರಿಲೀಸ್ ಮಾಡಲಿದ್ದಾರಂತೆ ನಿರ್ಮಾಪಕರು.

  • ಬಾಗ್ಲು ತೆಗಿ ಮೇರಿ ಜಾನ್ ಹಾಡಿಗೆ ಗಲ್ಫ್ ಕನ್ನಡಿಗರ ಬಹುಪರಾಕ್: ಹಾಡೂ ಬೊಂಬಾಟ್ ಹಿಟ್

    ಬಾಗ್ಲು ತೆಗಿ ಮೇರಿ ಜಾನ್ ಹಾಡಿಗೆ ಗಲ್ಫ್ ಕನ್ನಡಿಗರ ಬಹುಪರಾಕ್: ಹಾಡೂ ಬೊಂಬಾಟ್ ಹಿಟ್

    ರೀಲ್ಸ್ ಮತ್ತು ಸೋಷಿಯಲ್ ಮೀಡಿಯಾಗಳಲ್ಲಿ ‘ಬಾಗ್ಲು ತೆಗಿ ಮೇರಿ ಜಾನ್’ ಹಾಡಿನದ್ದೇ ಸದ್ದು. ನವರಸ ನಾಯಕ ಜಗ್ಗೇಶ್ ನಟನೆಯ ತೋತಾಪುರಿ ಚಿತ್ರದ ಈ ಹಾಡಿಗೆ ದೇಶ-ವಿದೇಶದಿಂದ ಮೆಚ್ಚುಗೆಯ ಮಹಾಪೂರವೇ ಹರಿದುಬರುತ್ತಿದೆ. ‘ಬಾಗ್ಲು ತೆಗಿ ಮೇರಿ ಜಾನ್’ ಹಾಡು ಬಿಡುಗಡೆಯಾದಾಗಿನಿಂದಲೂ ಸಖತ್ ಸದ್ದು ಮಾಡುತ್ತಿದೆ. ದೇಶ ಮಾತ್ರವಲ್ಲದೇ ವಿದೇಶದಿಂದಲೂ ಈ ಹಾಡನ್ನು ಮೆಚ್ಚಿಕೊಂಡಿದ್ದು ‘ತೋತಾಪುರಿ’ ಹೆಚ್ಚುಗಾರಿಕೆ. ಇದನ್ನೂ ಓದಿ : ಹಾಲಿವುಡ್ ಗೆ ಹಾರಿದ ಸುದೀಪ್ ನಟನೆಯ ವಿಕ್ರಾಂತ್ ರೋಣ

    `ಬಾಗ್ಲು ತೆಗಿ ಮೇರಿ ಜಾನ್‌’ ಹಾಡು 100 ಮಿಲಿಯನ್‌ಗೂ ಅಧಿಕ ಹಿಟ್ಸ್ ದಾಖಲಿಸಿ ಮುನ್ನುಗ್ಗುತ್ತಿದೆ.  ಈ ಹಾಡಿಗೆ ಪ್ರಸ್ತುತ ಚಾನಲ್‌ವೊಂದರಲ್ಲೇ 15 ಮಿಲಿಯನ್‌ಗೂ ಅಧಿಕ ಹಿಟ್ಸ್ ದಾಖಲಾಗಿದೆ. ಅಲ್ಲದೇ ಸಾಮಾಜಿಕ ಜಾಲತಾಣದಲ್ಲಿ 85 ಮಿಲಿಯನ್‌ಗೂ ಅಧಿಕ ಹಿಟ್ಸ್ ದಾಖಲಾಗಿರುವುದು `ತೋತಾಪುರಿ’ ಹೆಚ್ಚುಗಾರಿಕೆ. ಇತ್ತೀಚೆಗೆ ಬಂದ ಹಾಡುಗಳ ಪೈಕಿ ದೊಡ್ಡ ಮಟ್ಟದಲ್ಲಿ ಜನರನ್ನು ಸೆಳೆದ ಹಾಡು ಇದಾಗಿದ್ದು, ದಿನದಿಂದ ದಿನಕ್ಕೆ ಕ್ರೇಜ್‌ ಹೆಚ್ಚಿಸುತ್ತಲೇ ಇದೆ. ಯೂ ಟ್ಯೂಬ್‌ ರೀಲ್ಸ್, ಶಾರ್ಟ್ಸ್ ಹಾಗೂ ಸ್ಟೋರಿಸ್‌ಗಳಲ್ಲಿ ಈ ಹಾಡಿನ ತುಣುಕಿಗೆ ಡಾನ್ಸ್ ಮಾಡಿ ಅಪ್ಲೋಡ್‌ ಮಾಡಿರುವುದು ವಿಶೇಷ. ವಿದೇಶದಲ್ಲಿ ನೆಲೆಸಿರುವ ಕನ್ನಡಿಗರಿಗೂ ಈ ಹಾಡು ಇಷ್ಟವಾಗಿರುವುದು `ತೋತಾಪುರಿ’ ಹಾಡಿನ ವಿಶೇಷ.

    ತೋತಾಪುರಿ ಚಿತ್ರದ ಹಾಡು, ಮೇಕಿಂಗ್ ಹಾಗೂ ತಂಡದ ಬಗ್ಗೆ ಸಾಕಷ್ಟು ವಿಷಯ ಹಂಚಿಕೊಂಡಿರುವ ಜಗ್ಗೇಶ್, ಈ ಸಿನಿಮಾಕ್ಕೆ ಬೆಂಬಲ ನೀಡುವಂತೆ ಮನವಿ ಮಾಡಿಕೊಂಡರು. ಇನ್ನು ‘ಬಾಗ್ಲು ತೆಗಿ ಮೇರಿ ಜಾನ್’ಗೆ ದುಬೈ ಕನ್ನಡಿಗರಿಂದ ಪ್ರಶಂಸೆಗಳ ಮಹಾಪೂರವೇ ಹರಿದುಬಂದಿದ್ದು ಈ ಕಾರ್ಯಕ್ರಮದ ವಿಶೇಷ. ಇದನ್ನೂ ಓದಿ : ಸ್ಸಾರಿ… ಥಿಯೇಟರ್ ಗೆ ಬರ್ತಿಲ್ಲ ತಮಿಳಿನ ಧನುಷ್ ನಟನೆಯ ಮಾರನ್ ಸಿನಿಮಾ

    ಇತ್ತೀಚೆಗಷ್ಟೇ ಅಮೆರಿಕಾ ನೆರೆಹೊರೆಯ ರಾಷ್ಟ್ರದ ಅನಿವಾಸಿ ಕನ್ನಡಿಗರೊಂದಿಗೆ ವರ್ಚುವಲ್ ಮಾತುಕತೆ ನಡೆಸಿದ್ದ ಜಗ್ಗೇಶ್, ಇದೀಗ ಗಲ್ಫ್ ಕನ್ನಡಿಗರೊಂದಿಗೂ ‘ತೋತಾಪುರಿ’ ಬಗ್ಗೆ ವಿಶೇಷವಾಗಿ ವಿಷಯ ಹಂಚಿಕೊಂಡಿದ್ದಾರೆ. ಇದನ್ನೂ ಓದಿ:  ಸುದೀಪ್ ನಟನೆಯ ವಿಕ್ರಾಂತ್ ರೋಣ ಸಿನಿಮಾದ ಅಪ್ಡೇಟ್ : ಯಾವಾಗ, ಏನು ಅಂತ ನೋಡ್ಕೊಂಡ್ ಬಿಡಿ

    ಈಗಾಗಲೇ ಮಿಲಿಯನ್’ಗಟ್ಟಲೆ ಹಿಟ್ಸ್ ದಾಖಲಿಸಿರುವ ಈ ಚಿತ್ರದ ಹಾಡಿಗೆ ಎಲ್ಲರೂ ತಲೆದೂಗಿಸುತ್ತಿದ್ದಾರೆ. ‘ನೀರ್ ದೋಸೆ’ ಖ್ಯಾತಿಯ ವಿಜಯಪ್ರಸಾದ್ ನಿರ್ದೇಶಿಸಿರುವ ತೋತಾಪುರಿ ಚಿತ್ರಕ್ಕೆ ಅನೂಪ್ ಸೀಳಿನ್ ಸಂಗೀತ ಸಂಯೋಜಿಸಿದ್ದಾರೆ. ಮೋನಿಫ್ಲಿಕ್ಸ್ ಸ್ಟುಡಿಯೋಸ್ ಬ್ಯಾನರ್ ಅಡಿಯಲ್ಲಿ ಕೆ.ಎ.ಸುರೇಶ್ ಈ ಚಿತ್ರವನ್ನು ನಿರ್ಮಿಸಿದ್ದಾರೆ. ಎರಡು ಭಾಗಗಳಲ್ಲಿ ತೋತಾಪುರಿ ತೆರೆಕಾಣಲಿರುವುದು ವಿಶೇಷ. ಇದನ್ನೂ ಓದಿ : ಖ್ಯಾತ ಗಾಯಕ ಮಿಕಾ ಸಿಂಗ್ ಸ್ವಯಂವರ : ನೀವೂ ಭಾಗಿಯಾಗಬಹುದು

    ಡಾಲಿ ಧನಂಜಯ್, ಸುಮನ್ ರಂಗನಾಥ್, ದತ್ತಣ್ಣ, ಅದಿತಿ ಪ್ರಭುದೇವ, ವೀಣಾ ಸುಂದರ್ ಸೇರಿದಂತೆ ಸಾಕಷ್ಟು ಕಲಾವಿದರು ಈ ಚಿತ್ರದ ತಾರಾಗಣದಲ್ಲಿದ್ದಾರೆ.

  • ನವರಸ ನಾಯಕ ಜಗ್ಗೇಶ್ ಬರ್ತ್‍ಡೇಗೆ ಬಂತು ‘ತೋತಾಪುರಿ’  ಪೋಸ್ಟರ್

    ನವರಸ ನಾಯಕ ಜಗ್ಗೇಶ್ ಬರ್ತ್‍ಡೇಗೆ ಬಂತು ‘ತೋತಾಪುರಿ’  ಪೋಸ್ಟರ್

    ನ್ನಡ ಚಿತ್ರರಂಗದ ನವರಸ ನಾಯಕ ಜಗ್ಗೇಶ್ ಅವರಿಗಿಂದು ಹುಟ್ಟುಹಬ್ಬದ ಸಂಭ್ರಮ. ಹುಟ್ಟುಹಬ್ಬದ ಖುಷಿಯಲ್ಲಿರುವ ಜಗ್ಗೇಶ್ ಅವರಿಗೆ ತೋತಾಪುರಿ ಸಿನಿಮಾ ಟೀಂನಿಂದ ವಿಶೇಷ ಉಡುಗೊರೆಯೊಂದು ಸಿಕ್ಕಿದೆ.

    ಜಗ್ಗೇಶ್ ಜನ್ಮದಿನದ ಪ್ರಯುಕ್ತ ತೋತಾಪುರಿ ಚಿತ್ರತಂಡ ಪೋಸ್ಟರ್ ರಿಲೀಸ್ ಮಾಡುವ ಮೂಲಕ, ಇಂದಿನಿಂದ ಪ್ರಚಾರ ಕಾರ್ಯಕ್ಕೆ ಚಾಲನೆ ನೀಡಿದೆ. ವಿಭಿನ್ನ ಟೈಟಲ್ ಮೂಲಕ ಗಾಂಧಿನಗರದಲ್ಲಿ ನಿರೀಕ್ಷೆ ಹುಟ್ಟುಹಾಕಿರುವ ತೋತಾಪುರಿ ಸಿನಿಮಾದ ಶೂಟಿಂಗ್ ಇತ್ತೀಚೆಗಷ್ಟೇ ಕಂಪ್ಲೀಟ್ ಆಗಿದ್ದು, ಇದೀಗ ಜಗ್ಗೇಶ್ ಹುಟ್ಟುಹಬ್ಬಕ್ಕೆ ಸಿನಿಮಾದ ಮೊದಲ ಪೋಸ್ಟರ್ ಬಿಡುಗಡೆಯಾಗಿದೆ.

    ಈ ಹಿಂದೆ ನೀರ್ ದೋಸ್ ಸಿನಿಮಾ ಮೂಲಕ ಪ್ರೇಕ್ಷಕರನ್ನು ಹೊಟ್ಟೆ ಉಣ್ಣಾಗುವಷ್ಟು ನಗಿಸಿದ್ದ ಜಗ್ಗೇಶ್ ಹಾಗೂ ನಿರ್ದೇಶಕ ವಿಜಯ್ ಪ್ರಸಾದ್ ಜೋಡಿ, ನಾಲ್ಕು ವರ್ಷಗಳ ಬಳಿಕ ತೋತಾಪುರಿ ಸಿನಿಮಾದ ಮೂಲಕ ಸಿನಿರಸಿಕರನ್ನು ಮತ್ತಷ್ಟು ರಂಜಿಸಲು ರೆಡಿಯಾಗಿದ್ದಾರೆ.

    ಅಂದಹಾಗೆ ತೋತಾಪುರಿ ಸಿನಿಮಾವನ್ನು ಎರಡು ಭಾಗಗಳಾಗಿ ತೆರೆಗೆ ತರಲು ಚಿತ್ರತಂಡ ಯೋಜನೆ ಹಾಕಿಕೊಂಡಿದೆ. ಕೊರೋನಾ ಲಾಕ್‍ಡೌನ್‍ಗೂ ಮೊದಲೇ ಫಸ್ಟ್ ಶೆಡ್ಯುಲ್ಡ್ ಶೂಟಿಂಗ್ ಕಂಪ್ಲೀಟ್ ಮಾಡಿದ್ದ ಚಿತ್ರತಂಡ ಇತ್ತೀಚೆಗಷ್ಟೇ ಸೆಕೆಂಡ್ ಶೆಡ್ಯುಲ್ಡ್ ಶೂಟಿಂಗ್ ಕಂಪ್ಲಿಟ್ ಮಾಡುವ ಮೂಲಕ ಎರಡೂ ಸೀಕ್ವೆಲ್‍ಗಳ ಚಿತ್ರೀಕರಣ ಕಂಪ್ಲೀಟ್ ಮಾಡಿರುವ ಮೊದಲ ಸಿನಿಮಾ ಎಂಬ ದಾಖಲೆ ಬರೆದಿದೆ ತೋತಾಪುರಿ ಸಿನಿಮಾ.

    ಜಗ್ಗೇಶ್ ರೈತನ ಪಾತ್ರದಲ್ಲಿ ಅಭಿನಯಿಸಿದ್ದು, ಹಿಂದೆಂದೂ ಕಾಣಿಸಿಕೊಳ್ಳದ ರೋಲ್‍ನಲ್ಲಿ ಪ್ರೇಕ್ಷಕರನ್ನು ನಕ್ಕು ನಲಿಸಲಿದ್ದಾರೆ. ಜಗ್ಗೇಶ್‍ಗೆ ಜೋಡಿಯಾಗಿ ಅದಿತಿ ಪ್ರಭುದೇವ ನಟಿಸಿದ್ದಾರೆ. ಉಳಿದಂತೆ ಡಾಲಿ ಧನಂಜಯ್, ಸುಮನ್ ರಂಗನಾಥ್, ವೀಣಾ ಸುಂದರ್, ದತ್ತಣ್ಣ ಸೇರಿದಂತೆ ದೊಡ್ಡ ತಾರಾಬಳಗ ಚಿತ್ರದಲ್ಲಿ ಇರಲಿದೆ.

    ಸುರೇಶ್  ಆರ್ಟ್ಸ್ ಬ್ಯಾನರ್ ಅಡಿಯಲ್ಲಿ ಶಿವಲಿಂಗ ಖ್ಯಾತಿಯ ನಿರ್ಮಾಪಕ ಸುರೇಶ್ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಅನೂಪ್ ಸೀಳೀನ್ ಮ್ಯೂಸಿಕ್, ನಿರಂಜನ್ ಬಾಬು ಕ್ಯಾಮೆರಾ ವರ್ಕ್, ಸುರೇಶ್ ಅರಸ್ ಸಂಕಲನ ಸಿನಿಮಾಕ್ಕಿರಲಿದೆ. ಸದ್ಯ ಪೋಸ್ಟ್ ಪ್ರೊಡಕ್ಷನ್ ಕೆಲಸಗಳಲ್ಲಿ ಬ್ಯುಸಿಯಾಗಿರುವ ತೋತಾಪುರಿ ಚಿತ್ರತಂಡ, ಏಪ್ರಿಲ್ ಅಥವಾ ಮೇ ವೇಳೆಗೆ ಸಿನಿಮಾ ರಿಲೀಸ್ ಮಾಡಲು ಪ್ಲಾನ್ ಹಾಕಿಕೊಂಡಿದೆ.

  • ಭಿನ್ನ-ವಿಭಿನ್ನತೆಯಿಂದ ಕೂಡಿದೆ ‘ತೋತಾಪುರಿ’

    ಭಿನ್ನ-ವಿಭಿನ್ನತೆಯಿಂದ ಕೂಡಿದೆ ‘ತೋತಾಪುರಿ’

    ಸೀಕ್ವೆನ್ಸ್ ಅನ್ನೋದು ಹಾಲಿವುಡ್, ಬಾಲಿವುಡ್ ಗಳಲ್ಲಿ ಹೆಚ್ಚಾಗಿತ್ತು. ಆದ್ರೆ ಇತ್ತೀಚೆಗೆ ಕನ್ನಡದಲ್ಲೂ ಸೀಕ್ವೆನ್ಸ್ ಹಾವಳಿ ಹೆಚ್ಚಾಗಿದೆ. ಅದೆಷ್ಟೋ ಸಿನಿಮಾಗಳಲ್ಲಿ ಕಥೆಯ ಗಡಸುತನ ಒಂದೇ ಭಾಗದಲ್ಲಿ ತೋರಿಸಲು ಆಗಲ್ಲ. ಹಾಗೇ ಒಂದೇ ಸಿನಿಮಾದಲ್ಲಿ ಇರುವಷ್ಟು ಮ್ಯಾಟರ್ ನ್ನು ತುರಿಕಿದರೆ ಪ್ರೇಕ್ಷಕನ ತಲೆಗೆ ಹೋಗಲ್ಲ. ಹೀಗಾಗಿ ನೋಡುಗರಿಗೂ ಮನರಂಜನೆಯಾಗಿ ನೀಡುವ ಮೆಸೇಜ್ ನ್ನು ಮನಸ್ಸಿಗೆ ಮುಟ್ಟುವ ಹಾಗೇ ಸಿನಿಮಾ ಕೊಡಬೇಕೆಂದರೆ ಒಂದಷ್ಟು ಫಿಲ್ಟರ್ ಇರಬೇಕಾಗುತ್ತದೆ. ಕಥೆಯ ಆಳವನ್ನು ಜನರಿಗೆ ಮುಟ್ಟಿಸಲೇಬೇಕಾದಂತ ಸಂದರ್ಭಗಳಲ್ಲಿ ಸೀಕ್ವೇನ್ಸ್ ದಾರಿ ಹಿಡಿಯಬೇಕಾಗುತ್ತದೆ. ಅದೇ ದಾರಿಯಲ್ಲಿ ಸಾಗುತ್ತಿರುವುದೇ ‘ತೋತಾಪುರಿ’ ಸಿನಿಮಾ.

    ಹೌದು ನವರಸ ನಾಯಕ ಜಗ್ಗೇಶ್ ಅಭಿನಯದ ‘ತೋತಾಪುರಿ’ ಬಗ್ಗೆ ಎಲ್ಲರಿಗೂ ಗೊತ್ತೆ ಇದೆ. ಈಗಾಗಲೇ ಸಿನಿಮಾದ ಶೂಟಿಂಗ್ ಕೂಡ ಕಂಪ್ಲೀಟ್ ಮಾಡಿಕೊಂಡಿದೆ ಚಿತ್ರತಂಡ. ಕಥೆ ತುಂಬಾ ಸ್ಟ್ರಾಂಗ್ ಆಗಿದ್ದು, ಭಾಗ 1 ಮತ್ತು 2 ರಲ್ಲಿ ಬರ್ತಾ ಇದೆ. ಸೀಕ್ವೆನ್ಸ್ ಸಿನಿಮಾಗಳು ಹೊಸತೇನಲ್ಲ. ಆದ್ರೆ ಸದ್ಯ ಬಂದು ಹೋಗಿರುವ ಬರುತ್ತಿರುವ ಸೀಕ್ವೆನ್ಸ್ ಸಿನಿಮಾಗಳಿಗೂ ‘ತೋತಾಪುರಿ’ ಗೂ ಕೊಂಚ ಭಿನ್ನ ಸಂಬಂಧವಿದೆ.

    ಹೌದು, ಕತೆ ಚೆನ್ನಾಗಿದ್ರೆ ಅಥವಾ ಪ್ರೇಕ್ಷಕರಿಂದ ರೆಸ್ಪಾನ್ಸ್ ಚೆನ್ನಾಗಿ ಬಂದ್ರೆ ಆ ಸಿನಿಮಾದೊಳಗಿನ ಪಾತ್ರಗಳ ಎಳೆಯನ್ನು ಹಿಡಿದು ಸಿನಿಮಾವನ್ನು ಮುಂದುವರೆಸಲಾಗುತ್ತೆ. ಸಿನಿಮಾ ಹಿಟ್ ಆಗುವವರೆಗೂ ಅದರ ಸೀಕ್ವೇನ್ಸ್ ಬರಲಿದೆ ಎಂಬುದು ಪ್ರೇಕ್ಷಕನಿಗೆ ಗೊತ್ತಿರಲ್ಲ. ವಿಜಯ್ ಪ್ರಸಾದ್ ಪ್ರೇಕ್ಷಕನ ನರನಾಡಿಗಳನ್ನು ಅರಿತಿರುವವರಾಗಿರುವುದರಿಂದ, ಇವತ್ತಿನ ಪ್ರೇಕ್ಷಕ ಏನನ್ನ ಬಯಸುತ್ತಾನೆಂಬುದು ಅವರಿಗೆ ಗೊತ್ತು. ಹೀಗಾಗಿ ‘ತೋತಾಪುರಿ’ ಯನ್ನು ಎರಡು ಭಾಗಗಳಾಗಿ ಸೀಳಿದ್ದಾರೆ. ಇಡೀ ಭಾರತೀಯ ಚಿತ್ರರಂಗದಲ್ಲೇ ಎರಡು ಭಾಗಗಳನ್ನು ಒಮ್ಮೆಗೆ ಸಿದ್ಧಪಡಿಸಿದ ಉದಾಹರಣೆಯೆ ಇಲ್ಲ. ಅಂತದ್ದೊಂದು ದಾಖಲೆಯನ್ನು ಈಗಾಗಲೇ ‘ತೋತಾಪುರಿ’ ಸಿನಿಮಾ ಮಾಡಿದೆ. ಸದ್ಯ ಎರಡು ಭಾಗದ ಚಿತ್ರೀಕರಣವನ್ನು ಪೂರ್ಣಗೊಳಿಸಿ, ಉಳಿದ ಕೆಲಸಕ್ಕೆ ಕೈ ಹಾಕಿದೆ. ಒಟ್ಟಾರೆ ಸದ್ಯ ಪ್ರಪಂಚದಲ್ಲಿರುವ ವೈರಸ್ ಎಂಬ ರೋಗ ಮಾಯವಾದ ನಂತರ, ಉಪ್ಪು, ಖಾರ ಹಾಕಿ ರೆಡಿ ಮಾಡುತ್ತಿರುವ ‘ತೋತಾಪುರಿ’ಯನ್ನು ಪ್ರೇಕ್ಷಕನಿಗೆ ಸವಿಯಲು ನೀಡಲಿದ್ದಾರೆ.

    ನವರಸ ನಾಯಕ ಜಗ್ಗೇಶ್, ಸುಮನ್ ರಂಗನಾಥ್, ವೀಣಾ, ಅದಿತಿ ಪ್ರಭುದೇವ, ಡಾಲಿ ಧನಂಜಯ್ ಸೇರಿದಂತೆ ಇನ್ನು ಅನೇಕರು ತಾರಾಬಳಗದಲ್ಲಿದ್ದಾರೆ.