Tag: Thotapuri Film

  • ‘ಪರಿಮಳ ಲಾಡ್ಜ್’ ನಲ್ಲಿ ಮತ್ತೆ ಕಾಣಿಸಿಕೊಂಡ ನೀರ್ ದೋಸೆ ನಿರ್ದೇಶಕ ವಿಜಯ್ ಪ್ರಸಾದ್

    ‘ಪರಿಮಳ ಲಾಡ್ಜ್’ ನಲ್ಲಿ ಮತ್ತೆ ಕಾಣಿಸಿಕೊಂಡ ನೀರ್ ದೋಸೆ ನಿರ್ದೇಶಕ ವಿಜಯ್ ಪ್ರಸಾದ್

    ತೋತಾಪುರಿ ಮತ್ತು ಪೆಟ್ರೋಮ್ಯಾಕ್ಸ್ ಸಿನಿಮಾದ ನಂತರ ಮತ್ತೆ ತಮ್ಮ ಪರಿಮಳ ಲಾಡ್ಜ್ ಸಿನಿಮಾವನ್ನು ಕೈಗೆತ್ತಿಕೊಂಡಿದ್ದಾರೆ ವಿಜಯ್ ಪ್ರಸಾದ್. 2019ರಲ್ಲಿ ಈ ಸಿನಿಮಾದ ಟೀಸರ್ ಬಿಡುಗಡೆ ಮಾಡಿದ್ದ ಇವರು, ಆನಂತರ ಈ ಪ್ರಾಜೆಕ್ಟ್ ಹಿಂದಕ್ಕಿಟ್ಟು ‘ಪೆಟ್ರೊಮ್ಯಾಕ್ಸ್’ ಸಿನಿಮಾ ಮಾಡಿದರು. ಇದೀಗ ಅವರ ಎರಡು ಚಿತ್ರಗಳು ಬಿಡುಗಡೆಗೆ ಸಿದ್ಧವಾಗಿವೆ. ಈ ನಡುವೆ ಮತ್ತೆ ಅವರು ಪರಿಮಳ ಲಾಡ್ಜ್ ನತ್ತ ಮುಖ ಮಾಡಿದ್ದಾರೆ. ಈ ಕುರಿತು ಟ್ವಿಟ್ ಮಾಡಿರುವ ವಿಜಯ್ ಪ್ರಸಾದ್, ‘ತೋತಾಪುರಿ, ಪೆಟ್ರೋಮ್ಯಾಕ್ಸ್ ಆಯ್ತು, ಸದ್ಯದಲ್ಲೇ ಪರಿಮಳ ಲಾಡ್ಜ್’ ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ : ಕೆಜಿಎಫ್ 2.. ಹುಷಾರ್, ಮಾರ್ಚ್ 21ಕ್ಕೆ ತೂಫಾನ್ ಅಪ್ಪಳಿಸಲಿದೆ!

    2019ರಲ್ಲಿ ಈ ಸಿನಿಮಾದ ಟೀಸರ್ ಬಿಡುಗಡೆ ಆಗಿತ್ತು. ಸಖತ್ ಡಬಲ್ ಮೀನಿಂಗ್ ಸಂಭಾಷಣೆಯಿಂದಾಗಿ ಸದ್ದು ಮಾಡಿತ್ತು. ಈ ಟೀಸರ್ ನಲ್ಲಿ ತಮ್ಮ ತಂಡವನ್ನು ನಿರ್ದೇಶಕ ವಿಜಯ್ ಪ್ರಸಾದ್ ವಿಭಿನ್ನವಾಗಿಯೇ ಪರಿಚಯ ಮಾಡಿಸಿದ್ದರು. ಲಾಡ್ಜ್ ಓನರ್ ಸ್ಕಂದ್ ಎಂಟರ್ ಟೇನ್ಮೆಂಟ್ (ಬ್ಯಾನರ್), ಲಾಡ್ಜ್ ನಲ್ಲಿ ಸಲಿಂಗಕಾಮಿಗಳು (ನಾಯಕ) ಲೂಸ್ ಮಾದ ಯೋಗಿ, ಲಾಡ್ಜನಲ್ಲಿ ಆಳ ನೋಡಿ, ಲಾಳ ಹೊಡ್ದವ್ರು (ತಾರಾಗಣ) ದತ್ತಣ್ಣ,  ಸುಮನ್ ರಂಗನಾಥ್, ಹೇಮಾ ದತ್ತ್, ಲಾಡ್ಜನಲ್ಲಿ ಗುಪ್ತವಾಗಿ ಕ್ಯಾಮೆರಾ ಇಟ್ಟು ಗುನ್ನ ತಿಂದವ್ರು (ಸಿನಿಮಾಟೋಗ್ರಫಿ) ನಿರಂಜನ್ ಬಾಬು, ಲಾಡ್ಜನಲ್ಲಿ ಲಾಡಿ ಜೊತೆ ರಾಗಾನೂ ಎಳ್ದೆವ್ರು (ಸಂಗೀತ ನಿರ್ದೇಶನ) ಅನೂಪ್ ಸೀಳಿನ್, ಲಾಡ್ಜನಲ್ಲಿ ಕಾಸ್ ಬದ್ಲು ಕಾಂಡೋಮ್ ಇಟ್ಕೊಂಡವ್ರು (ನಿರ್ಮಾಪಕ) ಪ್ರಸನ್ನ, ಲಾಡ್ಜನಲ್ಲಿ ಕಾಚ ತೋರ್ಸಿ ಕಥೆ ಮಾಡ್ದವ್ರು (ನಿರ್ದೇಶಕ) ವಿಜಯ ಪ್ರಸಾದ್ ಹೀಗೆಯೇ ಪದಗಳನ್ನು ಬಳಸಿ ವಿಚಿತ್ರವಾದ ಮನರಂಜನೆ ಕೊಟ್ಟಿದ್ದರು. ಈಗ ಅದೇ ಸಿನಿಮಾವನ್ನು ಕೈಗೆತ್ತಿಕೊಂಡಿದ್ದಾರೆ ನಿರ್ದೇಶಕರು.

    ಸದ್ಯ ಬಿಡುಗಡೆ ಆಗಬೇಕಿರುವ ವಿಜಯ್ ಪ್ರಸಾದ್ ಅವರ ತೋತಾಪುರಿ ಸಿನಿಮಾ ಈಗಾಗಲೇ ಸಾಕಷ್ಟು ಕುತೂಹಲ ಮೂಡಿಸಿದೆ. ಈ ಸಿನಿಮಾದಲ್ಲಿ ಜಗ್ಗೇಶ್ ನಾಯಕನಾಗಿ ನಟಿಸಿದ್ದರೆ, ಮತ್ತೊಂದು ಮಹತ್ವದ ಪಾತ್ರದಲ್ಲಿ ಡಾಲಿ ಧನಂಜಯ್ ಇದ್ದಾರೆ. ಈಗಾಗಲೇ ಸಿನಿಮಾದ ಹಾಡುಗಳು ಸೂಪರ್ ಹಿಟ್ ಆಗಿವೆ. ಈ ಸಿನಿಮಾ ಎರಡು ಭಾಗವಾಗಿ ಮೂಡಿ ಬಂದಿದೆ. ಇದನ್ನೂ ಓದಿ : ಪಠಾಣ್ ಚಿತ್ರಕ್ಕಾಗಿ ಬಿಕಿನಿ ತೊಟ್ಟ ದೀಪಿಕಾ ಪಡುಕೋಣೆ: ಫೋಟೋ ಲೀಕ್

    ಪೆಟ್ರೋಮ್ಯಾಕ್ಸ್ ಕೂಡ ಅತೀ ನಿರೀಕ್ಷೆಯ ಸಿನಿಮಾಗಳ ಸಾಲಿನಲ್ಲಿದೆ. ನೀನಾಸಂ ಸತೀಶ್ ಮತ್ತು ಹರಿಪ್ರಿಯಾ ಕಾಂಬಿನೇಷನ್ ಮೊದಲ ಸಿನಿಮಾವಿದು. ಈಗಾಗಲೇ ಟ್ರೇಲರ್ ಬಿಡುಗಡೆ ಆಗಿದ್ದು, ಸಖತ್ ಮನರಂಜನೆ ನೀಡುವಂತಹ ಅಂಶಗಳನ್ನು ಇದು ಒಳಗೊಂಡಿದೆ.

  • ಜಗ್ಗೇಶ್ ಹುಟ್ಟು ಹಬ್ಬಕ್ಕೆ ಮೂರು ಸಿನಿಮಾಗಳ ಪೋಸ್ಟರ್ ರಿಲೀಸ್

    ಜಗ್ಗೇಶ್ ಹುಟ್ಟು ಹಬ್ಬಕ್ಕೆ ಮೂರು ಸಿನಿಮಾಗಳ ಪೋಸ್ಟರ್ ರಿಲೀಸ್

    ಪುನೀತ್ ರಾಜ್ ಕುಮಾರ್ ಮತ್ತು ನವರಸ ನಾಯಕ ಜಗ್ಗೇಶ್ ಒಂದೇ ದಿನ ತಮ್ಮ ಹುಟ್ಟು ಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಪ್ರತಿ ವರ್ಷವೂ ಒಬ್ಬರಿಗೊಬ್ಬರು ಶುಭಾಶಯಗಳನ್ನು ವಿನಿಮಯ ಮಾಡಿಕೊಳ್ಳುತ್ತಿದ್ದರು ಪುನೀತ್ ಮತ್ತು ಜಗ್ಗೇಶ್. ಈ ವರ್ಷ ಪುನೀತ್ ನಿಧನದಿಂದಾಗಿ ಹುಟ್ಟು ಹಬ್ಬವನ್ನು ಆಚರಿಸಿಕೊಳ್ಳುವುದಿಲ್ಲ ಎಂದಿದ್ದಾರೆ ಜಗ್ಗೇಶ್. ಹಾಗಾಗಿ ಇಂದು ಅವರು ಮಂತ್ರಾಲಯದ ರಾಯರ ಮಠದಲ್ಲಿ ಪೂಜೆ ಸಲ್ಲಿಸುತ್ತಿದ್ದಾರೆ.

    ಜಗ್ಗೇಶ್ ಅವರು ಹುಟ್ಟು ಹಬ್ಬವನ್ನು ಆಚರಿಸಿಕೊಳ್ಳದೇ ಇದ್ದರೂ, ಅವರ ಮೂರು ಸಿನಿಮಾಗಳ ಪೋಸ್ಟರ್ ಗಳು ಇಂದು ಬಿಡುಗಡೆ ಆಗಿವೆ. ಮೂರು ವಿಭಿನ್ನ ರೀತಿಯಲ್ಲಿ ಡಿಸೈನ್ ಆಗಿದ್ದು ವಿಶೇಷ. ಸದ್ಯ ಜಗ್ಗೇಶ್ ‘ತೋತಾಪುರಿ’, ‘ರಂಗನಾಯಕ’ ಮತ್ತು ‘ರಾಘವೇಂದ್ರ ಸ್ಟೋರ್ಸ್’ ಚಿತ್ರಗಳಲ್ಲಿ ನಟಿಸುತ್ತಿದ್ದಾರೆ. ಅಷ್ಟೂ ಸಿನಿಮಾಗಳ ಪೋಸ್ಟರ್ ಇಂದು ರಿಲೀಸ್ ಆಗಿವೆ.

    ತೋತಾಪುರಿ

    ನೀರ್ ದೋಸೆ ಖ್ಯಾತಿಯ ನಿರ್ದೇಶಕ ವಿಜಯ್ ಪ್ರಸಾದ್ ಈ ಸಿನಿಮಾಗೆ ಆಕ್ಷನ್ ಕಟ್ ಹೇಳಿದ್ದಾರೆ. ನಗಿಸುತ್ತಲೇ ಒಂದೊಳ್ಳೆ ಭಾವನಾತ್ಮಕ ಕಥೆಯನ್ನು ಈ ಸಿನಿಮಾ ಹೇಳಲಿದೆಯಂತೆ. ಹಿಂದೂ ಮುಸ್ಲಿಂ ಸಾಮರಸ್ಯವನ್ನು ಸಾರುವಂತಹ ಚಿತ್ರ ಕೂಡ ಇದಾಗಿದೆ. ಜಗ್ಗೇಶ್ ಹೀರೋ ಆಗಿ ನಟಿಸಿದ್ದರೆ, ಡಾಲಿ ಧನಂಜಯ್ ಕೂಡ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಅದಿತಿ ಪ್ರಭುದೇವ್ ನಾಯಕಿ. ಈ ಸಿನಿಮಾ ಎರಡು ಭಾಗದಲ್ಲಿ ಮೂಡಿ ಬರುತ್ತಿರುವುದು ವಿಶೇಷ. ಕೆ.ಎ. ಸುರೇಶ್ ಇದರ ನಿರ್ಮಾಪಕರು. ಇದನ್ನೂ ಓದಿ : ವಿಭಿನ್ನ, ವಿಶಿಷ್ಟ, ಭಾವನಾತ್ಮಕ ಡಿಪಿಗಳಲ್ಲಿ ಪುನೀತ್ ರಾಜ್ ಕುಮಾರ್

    ರಂಗನಾಯಕ

    ಮಠದ ಗುರು ಪ್ರಸಾದ್ ಮತ್ತು ಜಗ್ಗೇಶ್ ಕಾಂಬಿನೇಷನ್ ನ ಮೂರನೇ ಸಿನಿಮಾ ‘ರಂಗನಾಯಕ’. ಈಗಾಗಲೇ ಸಿನಿಮಾದ ಬಹುತೇಕ ಶೂಟಿಂಗ್ ಮುಗಿದಿದೆ. ನಟನೊಬ್ಬನ ಬದುಕಿನ ಕುರಿತಾದ ಸಿನಿಮಾ ಇದಾಗಿದ್ದು, ಜಗ್ಗೇಶ್ ರಂಗನಾಯಕನಾಗಿ ತೆರೆಯ ಮೇಲೆ ಕಾಣಿಸಿಕೊಳ್ಳಲಿದ್ದಾರೆ. ಜಗ್ಗೇಶ್ ಮತ್ತು ಗುರು ಪ್ರಸಾದ್ ಮತ್ತೆ ಸಿನಿಮಾ ಮಾಡುವುದಿಲ್ಲ ಎಂಬ ಗಾಂಧಿನಗರದ ಮಾತನ್ನು ಸುಳ್ಳು ಮಾಡಿದ ಚಿತ್ರವಿದು. ವಿಖ್ಯಾತ ಈ ಚಿತ್ರದ ನಿರ್ಮಾಪಕರು. ಇದನ್ನೂ ಓದಿ : ‘ಜೇಮ್ಸ್’ ಸಿನಿಮಾ ಫಸ್ಟ್ ಹಾಫ್ ಹೇಗಿದೆ? – ಕಣ್ಣಿಗೆ ಹಬ್ಬ, ಮನಸ್ಸಿಗೆ ಬೇಸರ

    ರಾಘವೇಂದ್ರ ಸ್ಟೋರ್ಸ್

    ‘ರಾಜಕುಮಾರ’ ಸಿನಿಮಾ ಖ್ಯಾತಿಯ ಸಂತೋಷ್ ಆನಂದ್ ರಾಮ್, ಇದೇ ಮೊದಲ ಬಾರಿಗೆ ಜಗ್ಗೇಶ್ ಗಾಗಿ ಮಾಡಿದ ಚಿತ್ರ ‘ರಾಘವೇಂದ್ರ ಸ್ಟೋರ್ಸ್’. ಅನ್ನದ ಮಹತ್ವವನ್ನು ಇಟ್ಟುಕೊಂಡು ಕಥೆ ಬರೆದಿದ್ದಾರಂತೆ ನಿರ್ದಶಕರು. ಜಗ್ಗೇಶ್ ನಾಯಕನಾದರೆ, ಶ್ವೇತಾ ಶ್ರೀವಾತ್ಸವ್ ನಾಯಕಿ. ಈಗಾಗಲೇ ಬಹುತೇಕ ಶೂಟಿಂಗ್ ಮುಗಿಸಿದ, ಡಬ್ಬಿಂಗ್ ಕೆಲಸವನ್ನೂ ಮುಗಿಸಿದೆ ಚಿತ್ರತಂಡ. ಹೊಂಬಾಳೆ ಫಿಲ್ಮ್ಸ್ ಇದರ ನಿರ್ಮಾಪಕರು.