Tag: thrashed

  • ಮಧ್ಯಾಹ್ನ ನಿದ್ದೆ ಮಾಡುವ ಸೊಸೆಗೆ ಗೂಸಾ ಕೊಟ್ಟ ಅತ್ತೆ, ಮಾವ

    ಮಧ್ಯಾಹ್ನ ನಿದ್ದೆ ಮಾಡುವ ಸೊಸೆಗೆ ಗೂಸಾ ಕೊಟ್ಟ ಅತ್ತೆ, ಮಾವ

    ಗಾಂಧಿಗನರ: ಮನೆಯ ಕೆಲಸವನ್ನು ಮಾಡಿ ಸುಸ್ತಾಗಿದೆ ಎಂದು ಮಧ್ಯಾಹ್ನ ಮಲಗಿದ್ದ ಸೊಸೆಯನ್ನು ನೋಡಿದ ಅತ್ತೆ, ಮಾವ ಹೊಡೆದು ಹಲ್ಲೆ ಮಾಡಿರುವ ಘಟನೆ ಗುಜರಾತಿನ ಅಹ್ಮದಾಬಾದ್‍ನ ಶಾಹಿಬಾಗ್‍ನಲ್ಲಿ ನಡೆದಿದೆ.

    2016ರಲ್ಲಿ ಮೆಹ್ಸಾನಾದಲ್ಲಿರುವ ಕಾಡಿಯ ವ್ಯಕ್ತಿಯೊಬ್ಬನನ್ನು ಮದುವೆಯಾದಳು ಮತ್ತು ಅಂದಿನಿಂದ ತನ್ನ ಅತ್ತೆ-ಮಾವನೊಂದಿಗೆ ಒಂದೇ ಮನೆಯಲ್ಲಿಯೇ ವಾಸಿಸುತ್ತಿದ್ದಳು. ಸೊಸೆ ಮಧ್ಯಾಹ್ನ ವೇಳೆ ನಿದ್ದೆ ಜಾರಿರುವುದನ್ನು ಕಂಡು ಆಕೆಯ ಮೇಲೆ ಹಲ್ಲೇ ಮಾಡಿದ್ದಾರೆ.

    ನಾನು ಈ ಮನೆಗೆ ಬಂದಾಗಿನಿಂದಲೂ ನಾನು ಮಧ್ಯಾಹ್ನ ನಿದ್ರೆ ಮಾಡುವುದನ್ನು ಅತ್ತೆ, ಮಾವ ವಿರೋಧಿಸುತ್ತಿದ್ದರು. ನಾನು ಮುಂಜಾನೆ ಬೇಗೆ ಏಳುವುದರಿಂದ ನನಗೆ ಮಧ್ಯಾಹ್ನ ಬರುವ ನಿದ್ರೆ ತಡೆಯಲು ಸಾಧ್ಯವಾಗುವುದಿಲ್ಲ. ಅತ್ತೆ ಮತ್ತು ಮಾವ ಇಬ್ಬರೂ ಹೊಡೆಯಲು ಪ್ರಾರಂಭಿಸಿದ್ದರು. ಮೊದಲ ಬಾರಿಗೆ ತನ್ನ ಪತಿ ಹೊಡೆದಾಗ ಕಾಡಿ ಪೊಲೀಸರಿಗೆ ದೂರು ಸಲ್ಲಿಸಿದ್ದೆ. ನಂತರ ರಾಜಿ ಮಾಡಿಕೊಂಡು ಪತಿ ಜೊತೆಗೆ ವಾಸಿಸಲು ನಿರ್ಧರಿಸಿದ್ದಳು. ಆದರೆ ಅತ್ತೆ ಮಾವನ ಕಿರುಕುಳ ನಿರಂತರವಾಗಿತ್ತು. ನಾನು ಗರ್ಭಿಣಿಯಾಗಿದ್ದಾಗ ನನ್ನ ಪತಿ ಮತ್ತು ಅತ್ತೆ ಮಾವ ನನಗೆ ಸಹಾಯ ಮಾಡಲಿಲ್ಲ ಮತ್ತು ನನ್ನನ್ನು ನನ್ನ ಹೆತ್ತವರ ಮನೆಗೆ ಕಳುಹಿಸಿದರು ಎಂದು ಹಲ್ಲೆಗೊಳಗಾದ ಸೊಸೆ ಹೇಳಿಕೊಂಡಿದ್ದಾಳೆ. ಇದನ್ನೂ ಓದಿ: ನಾಯಕರಿಗೆ ಗತಿ ಇಲ್ಲ, ಅಭ್ಯರ್ಥಿಗಳಿಗಂತೂ ದಟ್ಟ ದಾರಿದ್ರ್ಯ- ಕಾಂಗ್ರೆಸ್ ವಿರುದ್ಧ ಹೆಚ್‍ಡಿಕೆ ಕಿಡಿ

    2017 ಸೆಪ್ಟೆಂಬರ್ 18ರಂದು ಒಂದು ಹೆಣ್ಣು ಮಗುವಿಗೆ ಜನ್ಮ ನೀಡಿದೆ. ಗಂಡು ಮಗು ಆಗದ ಕಾರಣ ಅವರು ನನಗೆ ತುಂಬಾನೇ ಕಿರುಕುಳ ನೀಡಿದರು ಮತ್ತು ಥಳಿಸಿದರು. ವರ್ಷದ 2021 ಫೆಬ್ರವರಿ 7ರಂದು ಪತಿ ಮನೆಯಿಂದ ಹೊರ ಹಾಕಿದ್ದಾರೆ. ಸಮುದಾಯದ ನಾಯಕರ ಹಸ್ತಕ್ಷೇಪದ ಹೊರತಾಗಿಯೂ, ಪತಿ ಮನೆಗೆ ಕರೆದುಕೊಂಡು ಹೋಗಲು ನಿರಾಕರಿಸಿದ್ದಾರೆ. ಇದನ್ನೂ ಓದಿ: ಗೋ ಕಳ್ಳರಿಗೆ ಸಹಾಯ ಮಾಡಿದ್ದ ಪೊಲೀಸರ ಬಗ್ಗೆಯಷ್ಟೇ ಮಾತನಾಡಿದ್ದೇನೆ: ಆರಗ ಜ್ಞಾನೇಂದ್ರ

    ಇದೀಗ ಈ ವಿಚಾರವಾಗಿ ಸೊಸೆ ಮಾಧವಪುರ ಪೊಲೀಸರನ್ನು ಸಂಪರ್ಕಿಸಿ ತನ್ನ ಪತಿ ಮತ್ತು ಅತ್ತೆ ಮಾವಂದಿರ ವಿರುದ್ಧ ಕೌಟುಂಬಿಕ ಹಿಂಸೆಯ ಬಗ್ಗೆ ದೂರು ಸಲ್ಲಿಸಿದ್ದಾಳೆ.

  • ‘ನಮ್ಮ ಮನೆಗೆ ಮರಳಿ ಬಾ’ – ಪತ್ನಿ ಜೊತೆ ಮಾತುಕತೆ ವೇಳೆ ಪತಿ, ಕುಟುಂಬಸ್ಥರಿಗೆ ಗ್ರಾಮಸ್ಥರಿಂದ ಥಳಿತ

    ‘ನಮ್ಮ ಮನೆಗೆ ಮರಳಿ ಬಾ’ – ಪತ್ನಿ ಜೊತೆ ಮಾತುಕತೆ ವೇಳೆ ಪತಿ, ಕುಟುಂಬಸ್ಥರಿಗೆ ಗ್ರಾಮಸ್ಥರಿಂದ ಥಳಿತ

    ವಿಜಯಪುರ: ಜಗಳವಾಡಿ ತವರು ಮನೆಗೆ ಹೋಗಿದ್ದ ಪತ್ನಿಯನ್ನ ಕರೆತರಲು ತೆರಳಿದ್ದ ಪತಿ ಹಾಗೂ ಆತನ ಕುಟುಂಬಸ್ಥರನ್ನ ಗ್ರಾಮಸ್ಥರು ಕಟ್ಟಿ ಹಾಕಿ ಹಿಗ್ಗಾ ಮುಗ್ಗಾ ಥಳಿಸಿದ ಘಟನೆ ವಿಜಯಪುರದಲ್ಲಿ ನಡೆದಿದೆ.

    ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಆಲಕೊಪ್ಪ ಗ್ರಾಮದ ಕಮಲವ್ವ ವಡ್ಡರ ಹಾಗೂ ನಿಡಗುಂದಿ ತಾಲೂಕಿನ ಬಿದ್ನಾಳ ಗ್ರಾಮದ ಅಶೋಕ ವಡ್ಡರ ವಿವಾಹವಾಗಿತ್ತು. ಆದರೆ ಇಬ್ಬರು ಪರಸ್ಪರ ಜಗಳವಾಡಿ ಕಮಲವ್ವ ತನ್ನ ತವರು ಮನೆಗೆ ಹೋಗಿದ್ದಳು. ಕಮಲವ್ವನಿಗೆ ಬುದ್ಧಿ ಹೇಳಿ ಕರೆತರಲೆಂದು ಪತಿ ಅಶೋಕ ಹಾಗೂ ಆತನ ಕುಟುಂಬಸ್ಥರು ಆಲಕೊಪ್ಪ ಗ್ರಾಮಕ್ಕೆ ಹೋಗಿದ್ದರು.

    ಆಗ ಇಬ್ಬರ ಕುಟುಂಬಸ್ಥರು ಸಂಧಾನ ಮಾತುಕತೆ ಮಾಡುವಾಗ ಪರಸ್ಪರ ಮಾತಿನ ಚಕಮಕಿ ನಡೆದಿದೆ. ನಂತರ ಕೈ ಕೈಮಿಲಾಯಿಸುವ ಹಂತಕ್ಕೆ ಜಗಳ ತಲುಪಿದ್ದು, ಗ್ರಾಮಸ್ಥರು ಮಧ್ಯ ಪ್ರವೇಶಿಸಿ ಅಶೋಕ ಕುಟುಂಬಸ್ಥರನ್ನ ಕಟ್ಟಿ ಹಾಕಿ ಹಿಗ್ಗಾ ಮುಗ್ಗಾ ಥಳಿಸಿದ್ದಾರೆ.

    ಈ ಹಲ್ಲೆಯಲ್ಲಿ ಮೂವರು ಮಹಿಳೆಯರು ಸೇರಿದಂತೆ ಒಟ್ಟು 10 ಜನರಿಗೆ ಗಾಯಗಳಾಗಿದೆ. ಹಲ್ಲೆ ವೇಳೆ ಅಶೋಕ ಪರಾರಿಯಾಗಿದ್ದು, ಗಾಯಾಳುಗಳನ್ನ ಮುದ್ದೇಬಿಹಾಳ ತಾಲೂಕಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಮುದ್ದೇಬಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಈ ಸಂಬಂಧ 6 ಜನರನ್ನು ಪೊಲೀಸರು ವಶಕ್ಕೆ ಪಡೆದು ತನಿಖೆ ಮುಂದುವರೆದಿದ್ದಾರೆ.

  • ಸಾರಿಗೆ ಬಸ್ ಚಾಲಕ, ನಿರ್ವಾಹಕನಿಂದ ಪ್ರಯಾಣಿಕನ ಮೇಲೆ ಹಲ್ಲೆ

    ಸಾರಿಗೆ ಬಸ್ ಚಾಲಕ, ನಿರ್ವಾಹಕನಿಂದ ಪ್ರಯಾಣಿಕನ ಮೇಲೆ ಹಲ್ಲೆ

    ಧಾರವಾಡ: ಕ್ಷುಲ್ಲಕ ಕಾರಣಕ್ಕೆ ಪ್ರಯಾಣಿಕನ ಮೇಲೆ ಸಾರಿಗೆ ಬಸ್ ಸಿಬ್ಬಂದಿ ಹಿಗ್ಗಾಮುಗ್ಗ ಥಳಿಸಿ ಹಲ್ಲೆ ನಡೆಸಿದ ಘಟನೆ ಧಾರವಾಡದಲ್ಲಿ ನಡೆದಿದೆ.

    ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸಿನಲ್ಲಿ ಭಾನುವಾರ ರಾತ್ರಿ ಈ ಘಟನೆ ನಡೆದಿದೆ. ಬಸ್ ಚಾಲಕ ಮತ್ತು ನಿರ್ವಾಹಕ ಪ್ರಯಾಣಿಕನಿಗೆ ಥಳಿಸಿದ್ದಾರೆ. ಹುಬ್ಬಳ್ಳಿ ವಿಭಾಗದ ಬಸ್ಸಿನಲ್ಲಿ ಈ ಘಟನೆ ನಡೆದಿದೆ. ರಾತ್ರಿ ಹುಬ್ಬಳ್ಳಿಯಿಂದ ಧಾರವಾಡಕ್ಕೆ ಬರುತ್ತಿದ್ದ ಬಸ್ಸಿನಲ್ಲಿ ಪ್ರಯಾಣಿಕನೊಬ್ಬ ಚಾಲಕನಿಗೆ ಏನೋ ಹೇಳಿದ್ದಾನೆ. ಇದರಿಂದ ಆಕ್ರೋಶಗೊಂಡ ಬಸ್ ಚಾಲಕ ರಾಯಾಪೂರ ಬಸ್ ನಿಲ್ದಾಣದ ಬಳಿ ರಸ್ತೆ ಪಕ್ಕದ್ದಲ್ಲಿ ಬಸ್ ನಿಲ್ಲಿಸಿ, ಪ್ರಯಾಣಿಕನಿಗೆ ಹಿಗ್ಗಾಮುಗ್ಗ ಥಳಿಸಲು ಆರಂಭಿಸಿದನು.

    ಈ ವೇಳೆ ಚಾಲಕನಿಗೆ ಬಸ್ ನಿರ್ವಾಹಕ ಕೂಡ ಸಾಥ್ ಕೊಟ್ಟಿದ್ದು, ಇಬ್ಬರೂ ಸೇರಿ ಪ್ರಯಾಣಿಕನಿಗೆ ಹೊಡೆದಿದ್ದಾರೆ. ಪ್ರಯಾಣಿಕ ಮೇಲಿನ ಹಲ್ಲೆಗೆ ಸ್ಪಷ್ಟ ಕಾರಣ ತಿಳಿದು ಬಂದಿಲ್ಲ. ರಾತ್ರಿ ಅದೇ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಇತರೆ ಪ್ರಯಾಣಿಕರು ಚಾಲಕ, ನಿರ್ವಾಹಕ ವ್ಯಕ್ತಿಗೆ ಥಳಿಸುವ ದೃಶ್ಯವನ್ನು ಮೊಬೈಲ್‍ನಲ್ಲಿ ಸೆರೆ ಹಿಡಿದಿದ್ದಾರೆ.

    ಥಳಿತಕ್ಕೊಳಗಾದ ಪ್ರಯಾಣಿಕನ ವಿವರ ಕೂಡ ತಿಳಿದು ಬಂದಿಲ್ಲ. ವಿಡಿಯೋದಲ್ಲಿ ಚಾಲಕ ಹಾಗೂ ನಿರ್ವಾಹಕ ಪ್ರಯಾಣಿಕನಿಗೆ ಹೊಡೆಯುವಾಗ ‘ಅವನನ್ನು ಬಸ್ಸಿನಿಂದ ಕೆಳಗೆ ಇಳಿಸಿ’ ಎಂಬ ಮಾತುಗಳು ಕೇಳಿ ಬಂದಿವೆ. ಅಲ್ಲದೇ ಪ್ರಯಾಣಿಕನಿಗೆ ಹೊಡೆಯುವಾಗ ಅಲ್ಲಿಯೇ ಒಬ್ಬ ಪೊಲೀಸ್ ಕೂಡ ಇರುವುದು ವಿಡಿಯೋದಲ್ಲಿ ಕಂಡು ಬಂದಿದೆ.

  • ಕಳ್ಳಿಯೆಂದು ಚಿಂದಿ ಆಯುವ ಗರ್ಭಿಣಿಗೆ ಹಿಗ್ಗಾಮುಗ್ಗ ಥಳಿಸಿದ ಕ್ರೂರಿಗಳು

    ಕಳ್ಳಿಯೆಂದು ಚಿಂದಿ ಆಯುವ ಗರ್ಭಿಣಿಗೆ ಹಿಗ್ಗಾಮುಗ್ಗ ಥಳಿಸಿದ ಕ್ರೂರಿಗಳು

    ಬಾಗಲಕೋಟೆ: ಕಳ್ಳತನ ಮಾಡೋದಕ್ಕೆ ಬಂದಿದ್ದಾರೆ ಎಂದು ಆರೋಪಿಸಿ ಚಿಂದಿ ಆಯುವ ಇಬ್ಬರು ಮಹಿಳೆಯರಿಗೆ ಯುವಕರು ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಅವರಲ್ಲಿ ಓರ್ವ ಗರ್ಭಿಣಿ ಇದ್ದರೂ ಕರುಣೆ ತೋರದೆ ಮನಬಂದಂತೆ ಕ್ರೂರಿಗಳು ಹಲ್ಲೆ ನಡೆಸಿದ್ದಾರೆ.

    ಜಿಲ್ಲೆಯ ಜಮಖಂಡಿಯಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದ್ದು, ಚಿಂದಿ ಆಯುವ ಮಹಿಳೆಯರ ಮೇಲೆ ದುಷ್ಕರ್ಮಿಗಳು ಪ್ರತಾಪ ತೋರಿದ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ. ಚಿಂದಿ ಆಯ್ದುಕೊಂಡು ಹೋಗುತ್ತಿದ್ದ ಮಹಿಳೆಯರಿಗೆ ಕೆಲ ಯುವಕರು ಮನಬಂದಂತೆ ಥಳಿಸಿದ್ದಾರೆ. ಕಳ್ಳತನ ಮಾಡೋದಕ್ಕೆ ಇಲ್ಲಿಗೆ ಬಂದಿದ್ದೀರಾ ಎಂದು ಆರೋಪಿಸಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಮಹಿಳೆಯರ ಮೇಲೆ ಹಲ್ಲೆ ಮಾಡಲಾಗಿದೆ.

    ಗರ್ಭಿಣಿಯಿದ್ದಾಳೆ ದಯವಿಟ್ಟು ಹೊಡಿಬೇಡಿ ಎಂದು ಮಹಿಳೆ ಕೈ ಮುಗಿದು ಕೇಳಿದರೂ ಪಾಪಿಗಳು ಕರುಣೆ ತೋರದೆ ಥಳಿಸಿದ್ದಾರೆ. ಮಹಿಳೆಯರ ಕೂದಲು ಹಿಡಿದು ಹೊಡೆದಿದ್ದಲ್ಲದೆ, ಕಾಲಿನಿಂದ ಒದ್ದು, ಹಗ್ಗದಿಂದಲೂ ಹೊಡೆದು ಕ್ರೂರಿಗಳು ಹಲ್ಲೆ ಮಾಡಿದ್ದಾರೆ. ಹೊಟ್ಟೆಪಾಡಿಗೆ ಹೀಗೆ ಮಾಡಿದೆವು ತಪ್ಪಾಯ್ತು ಬಿಟ್ಟುಬಿಡಿ ಎಂದು ಬೇಡಿಕೊಂಡರೂ ದುಷ್ಕರ್ಮಿಗಳು ಥಳಿಸಿದ್ದಾರೆ. ಈ ಎಲ್ಲಾ ದೃಶ್ಯಗಳನ್ನು ಸ್ಥಳೀಯರು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ.

  • ಅತ್ಯಾಚಾರಿಗಳ ಎನ್‍ಕೌಂಟರ್ ಸಂಭ್ರಮಾಚರಣೆಯಲ್ಲೂ ಕಾಮುಕನ ಕಳ್ಳಾಟ

    ಅತ್ಯಾಚಾರಿಗಳ ಎನ್‍ಕೌಂಟರ್ ಸಂಭ್ರಮಾಚರಣೆಯಲ್ಲೂ ಕಾಮುಕನ ಕಳ್ಳಾಟ

    ತುಮಕೂರು: ಹೈದರಾಬಾದ್ ದಿಶಾ ಪ್ರಕರಣ ಅತ್ಯಾಚಾರಿಗಳನ್ನು ಸೈಬರಾಬಾದ್ ಪೊಲೀಸ್ ಆಯುಕ್ತ ವಿಶ್ವನಾಥ್ ಸಜ್ಜನರ್ ನೇತೃತ್ವದ ತಂಡ ಎನ್‍ಕೌಂಟರ್ ಮಾಡಿರುವ ಹಿನ್ನೆಲೆ ಸಂಭ್ರಮಾಚರಣೆ ವೇಳೆ ಕಳ್ಳಾಟವಾಡಿದ ಕಾಮುಕನಿಗೆ ಸಖತ್ ಗೂಸ ಬಿದ್ದಿದೆ.

    ಇಡೀ ದೇಶವೇ ಹೈದರಾಬಾದ್ ಪೊಲೀಸರ ಕಾರ್ಯವನ್ನು ಶ್ಲಾಘಿಸಿದೆ. ಅತ್ಯಚಾರಿಗಳನ್ನು ಎನ್‍ಕೌಂಟರ್ ಮಾಡಿದ ಖುಷಿಯಲ್ಲಿ ತುಮಕೂರಿನಲ್ಲಿ ವಿದ್ಯಾರ್ಥಿಗಳು, ಸಾರ್ವಜನಿಕರು ಸಂಭ್ರಮಾಚರಣೆ ಮಾಡಿದ್ದಾರೆ. ತಿಪಟೂರು ನಗರದ ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜು ಬಳಿ ವಿದ್ಯಾರ್ಥಿನಿಯರು, ಸಾರ್ವಜನಿಕರು ಸಿಹಿ ಹಂಚಿ ಸಂತೋಷಪಟ್ಟಿದ್ದಾರೆ. ಈ ನಡುವೆ ಹುಡಿಗಿಯರನ್ನ ಚುಡಾಯಿಸಿದ ವ್ಯಕ್ತಿಗೆ ವಿದ್ಯಾರ್ಥಿನಿಯರು ಹಾಗೂ ಸಾರ್ವಜನಿಕರು ಹಿಗ್ಗಾಮುಗ್ಗಾ ಥಳಿಸಿದ್ದಾರೆ.

    ಕಾಮುಕರಿಗೆ ಪೊಲೀಸರು ಎನ್‍ಕೌಂಟರ್ ಮಾಡಿ ತಕ್ಕಶಾಸ್ತಿ ಮಾಡಿದ್ದಾರೆ ಎಂದು ಜನರು ಖುಷಿಪಟ್ಟು ಸಂಭ್ರಮಿಸುತ್ತಿದ್ದಾಗಲೇ ಈ ಘಟನೆ ನಡೆದಿರುವುದು ವಿರ್ಪಯಾಸ ಎಂದು ಸಾರ್ವಜನಿಕರು ಬೇಸರ ವ್ಯಕಪಡಿಸಿದ್ದಾರೆ.

    ಹೈದರಾಬಾದ್-ಬೆಂಗಳೂರು ಹೈವೇ 44ರಲ್ಲಿ ಪೊಲೀಸರು ಅತ್ಯಾಚಾರಿಗಳನ್ನು ಎನ್‍ಕೌಂಟರ್ ಮಾಡಿದ್ದಾರೆ. ಕಾಮುಕರು ಪಶುವೈದ್ಯೆಯನ್ನು ಬೆಂಕಿ ಹಚ್ಚಿ ಸುಟ್ಟ ಸ್ಥಳದಲ್ಲೇ ಪೊಲೀಸರು ಅತ್ಯಾಚಾರಿಗಳ ಮೇಲೆ ಫೈರಿಂಗ್ ಮಾಡಿ ಹತ್ಯೆ ಮಾಡಿದ್ದಾರೆ. ಪಶುವೈದ್ಯೆಯನ್ನು ಸುಟ್ಟ ಘಟನಾ ಸ್ಥಳ ಮಹಜರು ವೇಳೆ ಆರೋಪಿಗಳು ಪೊಲೀಸರಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದರು. ಈ ವೇಳೆ ಪೊಲೀಸರು ನಾಲ್ವರು ಅತ್ಯಾಚಾರಿಗಳ ಮೇಲೆ ಎನ್‍ಕೌಂಟರ್ ಮಾಡಿದ್ದಾರೆ.

  • ಕಳ್ಳನೆಂದು ಭಾವಿಸಿ ಕೂಲಿ ಕಾರ್ಮಿಕನನ್ನು ಹೊಡೆದು ಕೊಂದ ಗ್ರಾಮಸ್ಥರು

    ಕಳ್ಳನೆಂದು ಭಾವಿಸಿ ಕೂಲಿ ಕಾರ್ಮಿಕನನ್ನು ಹೊಡೆದು ಕೊಂದ ಗ್ರಾಮಸ್ಥರು

    ಹೈದರಾಬಾದ್: ಕೂಲಿ ಕಾರ್ಮಿಕನೊಬ್ಬನನ್ನು ದೇವಸ್ಥಾನದಲ್ಲಿ ಕಳ್ಳತನ ಮಾಡಿದ ಖದೀಮ ಎಂದು ಭಾವಿಸಿ ಗ್ರಾಮಸ್ಥರು ಮನಬಂದಂತೆ ಹೊಡೆದು ಜೀವ ತೆಗೆದ ಅಮಾನವೀಯ ಘಟನೆ ತೆಲಂಗಾಣದಲ್ಲಿ ನಡೆದಿದೆ.

    ತೆಲಂಗಾಣದ ಧರ್ಮರಾಮ್ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಕೂಲಿ ಕಾರ್ಮಿಕ ಗಂಗಾಧರ್(25) ಮೃತ ದುರ್ದೈವಿ. ಅರ್ಸಪಲ್ಲಿ ಮೂಲದ ಗಂಗಾಧರ್ ಕಟ್ಟಡ ನಿರ್ಮಾಣ ಮಾಡುವ ಕೂಲಿ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದನು. ಹೀಗಾಗಿ ಧರ್ಮರಾಮ್ ಗ್ರಾಮದಲ್ಲಿ ಕಟ್ಟುತ್ತಿದ್ದ ಕಟ್ಟಡವೊಂದರಲ್ಲಿ ಕೂಲಿ ಮಾಡುತ್ತ ಆ ಗ್ರಾಮದಲ್ಲಿಯೇ ಕುಟುಂಬ ಸಮೇತ ವಾಸವಾಗಿದ್ದನು. ಮಂಗಳವಾರ ಬೆಳಗ್ಗೆ ಗಂಗಾಧರ್ ಎಂದಿನಂತೆ ಕೂಲಿ ಕೆಲಸಕ್ಕೆ ಹೋಗುವುದಾಗಿ ಮನೆಯಲ್ಲಿ ಹೇಳಿ ಹೊರಟ್ಟಿದ್ದನು. ಆದರೆ ಮಾರ್ಗ ಮಧ್ಯೆ ಆತನನ್ನು ಧರ್ಮರಾಮ್ ಗ್ರಾಮಸ್ಥರು ತಡೆದು, ಸ್ಥಳೀಯ ದೇವಸ್ಥಾನದಲ್ಲಿ ಕಳ್ಳತನವಾಗಿದೆ. ನೀನೇ ದೇವಸ್ಥಾನದಲ್ಲಿ ಕಳ್ಳತನ ಮಾಡಿದ್ದೀಯ ಎಂದು ಗಂಗಾಧರ್ ನನ್ನು ಮನಬಂದಂತೆ ಬೈದು, ಹೊಡೆಯಲು ಆರಂಭಿಸಿದ್ದಾರೆ.

    ಗ್ರಾಮಸ್ಥರ ಥಳಿತಕ್ಕೆ ಗಂಭೀರ ಗಾಯಗೊಂಡಿದ್ದ ಆತನನ್ನು ಕೆಲವರು ಆಸ್ಪತ್ರೆಗೆ ದಾಖಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. ಅಷ್ಟರಲ್ಲಿ ಗಂಗಾಧರ್ ಸಾವನ್ನಪ್ಪಿದ್ದನು. ಬಳಿಕ ಮರಣೋತ್ತರ ಪರೀಕ್ಷೆಗೆಂದು ಆತನ ಮೃತದೇಹವನ್ನು ಪೊಲೀಸರು ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ.

    ಈ ಸಂಬಂಧ ಮೃತ ಕೂಲಿ ಕಾರ್ಮಿಕನ ಪತ್ನಿ ಪೊಲೀಸರಿಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ಅನಾಮಧೇಯ ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ 202ನೇ ವಿಧಿ ಅನ್ವಯ ಪ್ರಕರಣ ದಾಖಲಿಸಿಕೊಂಡಿದ್ದೇವೆ. ಆದಷ್ಟು ಬೇಗ ಆರೋಪಿಗಳನ್ನು ಪತ್ತೆ ಹಚ್ಚುತ್ತೇವೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.

  • ಹಣದ ಬ್ಯಾಗ್ ಕದ್ದು ಎಸ್ಕೇಪ್ ಆಗ್ತಿದ್ದ ಓಜಿಕುಪ್ಪಂ ಗ್ಯಾಂಗ್ ಸದಸ್ಯನಿಗೆ ಗೂಸ

    ಹಣದ ಬ್ಯಾಗ್ ಕದ್ದು ಎಸ್ಕೇಪ್ ಆಗ್ತಿದ್ದ ಓಜಿಕುಪ್ಪಂ ಗ್ಯಾಂಗ್ ಸದಸ್ಯನಿಗೆ ಗೂಸ

    ಬೆಂಗಳೂರು: ಹಣದ ಬ್ಯಾಗ್ ಕದ್ದು ಎಸ್ಕೇಪ್ ಆಗ್ತಿದ್ದ ಓಜಿಕುಪ್ಪಂ ಗ್ಯಾಂಗ್ ಸದಸ್ಯನೊಬ್ಬನನ್ನು ಸ್ಥಳೀಯರು ಕಂಬಕ್ಕೆ ಕಟ್ಟಿ ಗೂಸ ಕೊಟ್ಟಿದ್ದಲ್ಲದೆ, ಕೆಳಗೆ ಹಾಕ್ಕೊಂಡು ತುಳಿದು ಧರ್ಮದೇಟು ಕೊಟ್ಟ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ.

    ಬ್ಯಾಂಕ್ ನಿಂದ ಹಣ ತೆಗೆದುಕೊಂಡು ಬರುವ ಜನರ ಗಮನ ಬೇರೆಡೆಗೆ ಹೋಗುವಂತೆ ಮಾಡಿ, ಹಣ ಲಪಟಾಯಿಸೋದರಲ್ಲಿ ಓಜಿಕುಪ್ಪಂ ಗ್ಯಾಂಗ್ ಸದಸ್ಯರು ನಿಸ್ಸೀಮರು. ಗುರುವಾರ ಹಣ ಲಪಟಾಯಿಸಲು ಹೋಗಿ ಸಿಕ್ಕಿಬಿದ್ದ ಓಜಿಕುಪ್ಪಂ ಗ್ಯಾಂಗ್ ಸದಸ್ಯನಿಗೆ ಸ್ಥಳೀಯರು ಕಂಬಕ್ಕೆ ಕಟ್ಟಿ ಹಿಗ್ಗಾಮುಗ್ಗ ಥಳಿಸಿದ್ದಾರೆ. ಅಷ್ಟೇ ಅಲ್ಲದೆ ಆತನನ್ನು ಕೆಳಗೆ ಬೀಳಿಸಿ ಒದೆ ಕೊಟ್ಟಿದ್ದಾರೆ. ಈ ದೃಶ್ಯವನ್ನು ಸ್ಥಳೀಯರು ಮೊಬೈಲ್‍ನಲ್ಲಿ ಸೆರೆಹಿಡಿದಿದ್ದಾರೆ.

    ಅಲ್ಲದೆ ಖತರ್ನಾಕ್ ಖದೀಮ ಹೇಗೆ ಹಣ ದೋಚಲು ಹೊಂಚು ಹಾಕಿದ್ದ, ಸ್ಥಳೀಯರ ಕೈಗೆ ಸಿಕ್ಕಿಬಿದ್ದ ದೃಶ್ಯಗಳು ಸ್ಥಳದಲ್ಲಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ವೃದ್ದರೊಬ್ಬರು ಬ್ಯಾಂಕ್‍ನಿಂದ ಹಣ ತೆಗೆದುಕೊಂಡು ಚೀಲವನ್ನು ಹಿಡಿದುಕೊಂಡು ಬರುತ್ತಿರುತ್ತಾರೆ. ಇವರ ಹಿಂದೆಯೇ ನಡೆದುಕೊಂಡು ಬಂದು ಫಾಲೊ ಮಾಡೊ ಓಜಿಕುಪ್ಪಂ ಗ್ಯಾಂಗ್ ಸದಸ್ಯ, ಬ್ಯಾಂಕ್‍ನಿಂದ ಸ್ವಲ್ಪ ದೂರ ವೃದ್ಧ ಬರುತ್ತಿದ್ದ ಹಾಗೆ ನಿಮ್ಮ ಶರ್ಟ್ ಮೇಲೆ ಗಲೀಜು ಬಿದ್ದಿದೆ ನೋಡಿ ಎಂದು ವೃದ್ಧನಿಗೆ ಹೇಳಿದ್ದಾನೆ.

    ಕ್ಷಣಾರ್ಧದಲ್ಲಿ ಅವರ ಗಮನ ಬೇರೆಡೆಗೆ ಹೋಗುವಂತೆ ಮಾಡಿ, ವೃದ್ಧರ ಹಣದ ಬ್ಯಾಗ್ ಕಸಿದು ಓಜಿಕುಪ್ಪಂ ಗ್ಯಾಂಗ್‍ನ ಮತ್ತೊಬ್ಬ ಕಳ್ಳ ಓಡಿಹೋಗಲು ಯತ್ನಿಸಿದ್ದಾನೆ. ಈ ವೇಳೆ ಮತ್ತೊಬ್ಬ ಕಳ್ಳ ಬೈಕಿನಲ್ಲಿ ಆತನನ್ನು ಕರೆದುಕೊಂಡು ಹೋಗಲು ಬಂದಿದ್ದಾನೆ. ಆದರೆ ಆಗ ಬೈಕ್ ಸ್ವಲ್ಪ ಮುಂದೆ ಹೋಗಿದ್ದರಿಂದ ಹಣ ಕಸಿದ ಕಳ್ಳ ಸ್ಥಳೀಯರ ಕೈಗೆ ಸಿಕ್ಕಿಬಿದ್ದಿದ್ದಾನೆ. ಆಗ ಅಲ್ಲಿಂದ ಎಸ್ಕೇಪ್ ಆಗಲು ಹಣದ ಚೀಲ ಎಸೆದು ಕಳ್ಳ ಓಡಿದ್ದಾನೆ. ಈ ವೇಳೆ ಆತನನ್ನು ಬೆನ್ನಟ್ಟಿದ ಸ್ಥಳೀಯರು ಆತನನ್ನು ಹಿಡಿದು, ಕಂಬಕ್ಕೆ ಕಟ್ಟಿ ಥಳಿಸಿ, ಚಳಿ ಬಿಡಿಸಿದ್ದಾರೆ.

    ಹಲವು ಕಳ್ಳತನ ಪ್ರಕರಣದಲ್ಲಿ ಓಜಿಕುಪ್ಪಂ ಗ್ಯಾಂಗ್ ಭಾಗಿಯಾಗಿದೆ. ಆದರೆ ಇದೇ ಮೊದಲ ಬಾರಿಗೆ ಈ ಗ್ಯಾಂಗ್‍ನ ಸದಸ್ಯನನ್ನು ರೆಡ್ ಹ್ಯಾಂಡಾಗಿ ಹಿಡಿದ ಸ್ಥಳೀಯರು ಸರಿಯಾಗೇ ಥಳಿಸಿ ಪಾಠ ಕಲಿಸಿದ್ದಾರೆ.

  • ಮಕ್ಕಳ ಕಳ್ಳರೆಂದು ಕಾಂಗ್ರೆಸ್ ನಾಯಕರನ್ನು ಥಳಿಸಿದ ಗ್ರಾಮಸ್ಥರು

    ಮಕ್ಕಳ ಕಳ್ಳರೆಂದು ಕಾಂಗ್ರೆಸ್ ನಾಯಕರನ್ನು ಥಳಿಸಿದ ಗ್ರಾಮಸ್ಥರು

    ಭೋಪಾಲ್: ಮೂವರು ಕಾಂಗ್ರೆಸ್ ನಾಯಕರನ್ನು ಮಕ್ಕಳ ಅಪಹರಣಕಾರರು ಎಂದು ತಪ್ಪಾಗಿ ತಿಳಿದು ಗ್ರಾಮಸ್ಥರು ಅವರನ್ನು ಥಳಿಸಿರುವ ಘಟನೆ ಮಧ್ಯಪ್ರದೇಶದ ಹಳ್ಳಿಯೊಂದರಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    ಈ ಘಟನೆ ಗುರುವಾರ ರಾತ್ರಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಮಧ್ಯಪ್ರದೇಶದ ಬೆತುಲ್ ಜಿಲ್ಲೆಯ ನವಲ್ಸಿಂಹ್ ಗ್ರಾಮದಲ್ಲಿ ಮಕ್ಕಳನ್ನು ಅಪಹರಿಸುವ ಕಳ್ಳರ ಗ್ಯಾಂಗ್ ಓಡಾಡುತ್ತಿದೆ ಎಂಬ ವದಂತಿಗಳ ಮೇರೆಗೆ ಊರಿನ ಗ್ರಾಮಸ್ಥರು ರಸ್ತೆ ಮಧ್ಯ ಮರಗಳನ್ನು ಹಾಕಿ ಮಾರ್ಗ ಬಂದ್ ಮಾಡಿ ಕಾಯುತ್ತಾ ಕುಳಿತಿದ್ದಾರೆ.

    ಈ ಸಮಯದಲ್ಲಿ ಅದೇ ಮಾರ್ಗದಲ್ಲಿ ಮೂವರು ಸ್ಥಳೀಯ ಕಾಂಗ್ರೆಸ್ ನಾಯಕರಾದ ಧರ್ಮೇಂದ್ರ ಶುಕ್ಲಾ, ಧರ್ಮ ಸಿಂಗ್ ಲಂಜಿವಾರ್ ಮತ್ತು ಲಲಿತ್ ಬರಾಸ್ಕರ್ ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ ರಾತ್ರಿಯಲ್ಲಿ ಮರಗಳು ಬಿದ್ದಿರುವುದನ್ನು ನೋಡಿದ್ದಾರೆ. ಈ ಕೆಲಸವನ್ನು ಯಾರೋ ಹೆದ್ದಾರಿ ದರೋಡೆಕೋರರು ಮಾಡಿ ದರೋಡೆ ಮಾಡಲು ಕಾಯುತ್ತಿದ್ದಾರೆಂದು ಭಾವಿಸಿದ ನಾಯಕರು ಕಾರನ್ನು ವೇಗವಾಗಿ ಹಿಂದಿರುಗಿಸಲು ನೋಡಿದ್ದಾರೆ.

    ಈ ವೇಳೆ ಅನುಮಾನಗೊಂಡ ಗ್ರಾಮಸ್ಥರು ಅವರನ್ನು ಬೆನ್ನಟ್ಟಿ ಹಿಡಿದು ಅವರನ್ನು ಸುತ್ತುವರೆದು ವಾಹನವನ್ನು ಜಖಂ ಮಾಡಿ. ಅವರನ್ನು ಹೊರಗೆ ಎಳೆದುಕೊಂಡು ಮೂವರನ್ನು ಥಳಿಸಿದ್ದಾರೆ.

    ಈ ವಿಚಾರವಾಗಿ ಮಾತನಾಡಿರುವ ಹಿರಿಯ ಪೊಲೀಸ್ ಅಧಿಕಾರಿ ರಾಮ್ ಸ್ನೇಹಿ ಮಿಶ್ರಾ, ಗ್ರಾಮಸ್ಥರು ಮಕ್ಕಳ ಅಪಹರಣಕಾರರೆಂದು ಶಂಕಿಸಿ, ನಾಯಕರ ವಾಹನವನ್ನು ಬೆನ್ನಟ್ಟಿ ಹಲ್ಲೆ ನಡೆಸಿದ್ದಾರೆ. ಈ ವೇಳೆ ವಾಹನಕ್ಕೆ ಹಾನಿಯಾಗಿದೆ ಮತ್ತು ಮೂವರು ಕಾಂಗ್ರೆಸ್ ಮುಖಂಡರ ಮೇಲೂ ಗಂಭೀರವಾಗಿ ಹಲ್ಲೆ ನಡೆಸಿದ್ದಾರೆ. ಈ ಸಂಬಂಧ ಬೆತುಲ್ ಪೊಲೀಸ್ ಠಾಣೆಯಲ್ಲಿ ಗ್ರಾಮಸ್ಥರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಮತ್ತು ತನಿಖೆ ನಡೆಯುತ್ತಿದೆ ಎಂದು ಹೇಳಿದ್ದಾರೆ.

    ಕಳೆದ ಕೆಲ ವಾರಗಳಿಂದ ಮಕ್ಕಳ ಕಳ್ಳರೆಂದ ಭಾವಿಸಿ ಶಂಕಿತ ವ್ಯಕ್ತಿಗಳನ್ನು ಗ್ರಾಮಸ್ಥರು ಥಳಿಸಿರುವ ಸುಮಾರು 12 ಪ್ರಕರಣಗಳು ಮಧ್ಯಪ್ರದೇಶದಲ್ಲಿ ವರದಿಯಾಗಿವೆ. ಕಾಂಗ್ರೆಸ್ ಮುಖಂಡರನ್ನು ಥಳಿಸಿದ ಇದೇ ಜಿಲ್ಲೆಯ ಬೆತುಲ್‍ನಿಂದ ಮೂರು ಪ್ರಕರಣಗಳು ವರದಿಯಾಗಿವೆ. ಇದನ್ನು ಬಿಟ್ಟರೆ ಇಂದೋರ್, ಭೋಪಾಲ್, ಹೋಶಂಗಾಬಾದ್, ಸೆಹೋರ್, ನೀಮುಚ್, ರೈಸನ್ ಮತ್ತು ದೇವಾಸ್‍ನಿಂದ ಇದೇ ರೀತಿಯ ಪ್ರಕರಣಗಳು ವರದಿಯಾಗಿವೆ.

  • ಸೈನಿಕರ ಮೇಲೆ ಮಾರಣಾಂತಿಕ ಹಲ್ಲೆ – ವಿಡಿಯೋ ವೈರಲ್

    ಸೈನಿಕರ ಮೇಲೆ ಮಾರಣಾಂತಿಕ ಹಲ್ಲೆ – ವಿಡಿಯೋ ವೈರಲ್

    ಲಕ್ನೋ: ಸೈನಿಕರಿಬ್ಬರ ಮೇಲೆ ಕೆಲ ದುಷ್ಕರ್ಮಿಗಳು ಮಾರಣಾಂತಿಕವಾಗಿ ಹಲ್ಲೆ ಮಾಡಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದ್ದು, ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಆಗಿದೆ.

    ಬಾಘ್ಪತ್‍ನಲ್ಲಿ ಶನಿವಾರ ಏಳು ಜನರ ಗುಂಪೊಂದು ನಡು ರಸ್ತೆಯಲ್ಲಿ ಕೋಲು ಹಿಡಿದು ಸೈನಿಕರಿಗೆ ಹೊಡೆದಿದ್ದಾರೆ. ಇದರಿಂದಾಗಿ ಒಬ್ಬ ಸೈನಿಕರ ತಲೆಗೆ ಪೆಟ್ಟು ಬಿದ್ದು, ರಕ್ತಸ್ರಾವವಾಗುತ್ತಿತ್ತು. ಅಷ್ಟೇ ಅಲ್ಲದೆ ಮತ್ತೊಬ್ಬ ಸೈನಿಕನ ಮೇಲೂ ಹಲ್ಲೆ ಮಾಡಿದ್ದಾರೆ.

    ಸೈನಿಕರು ರೆಸ್ಟೋರೆಂಟ್​ಗೆ ಊಟ ಮಾಡಲು ಹೋಗಿದ್ದರು. ಊಟ ಮುಗಿಸಿ ಹಣ ಪಾವತಿ ಮಾಡುವಾಗ ಬಿಲ್ ನೋಡಿ ಮಾಲೀಕರನ್ನು ಪ್ರಶ್ನಿಸಿದ್ದಾರೆ. ಇದರಿಂದಾಗಿ ಸೈನಿಕರು ಹಾಗೂ ಮಾಲೀಕರ ಮಧ್ಯೆ ವಾಗ್ದಾಳಿ ನಡೆದಿದ್ದು, ಪರಿಸ್ಥಿತಿ ಉದ್ವಿಗ್ನಗೊಂಡು ಕೈ ಕೈ ಮಿಲಾಯಿಸಿದ್ದಾರೆ. ಈ ವೇಳೆ ರೆಸ್ಟೋರೆಂಟ್​ನಲ್ಲಿ ಕೆಲಸ ಮಾಡುವ 7 ಜನರು ಸೈನಿಕರ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ವರದಿಯಾಗಿದೆ.

    ಇಬ್ಬರು ಸೈನಿಕರಲ್ಲಿ ಒಬ್ಬರು ಬಿಳಿ, ಕೆಂಪು ಪಟ್ಟಿ ಟೀ ಶರ್ಟ್ ಧರಿಸಿದ್ದರೆ, ಮತ್ತೊಬ್ಬರು ಹಸಿರು ಬಣ್ಣದ ಕುರ್ತಾ ಹಾಕಿದ್ದಾರೆ. ನಡು ರಸ್ತೆಯಲ್ಲಿ ಘಟನೆ ನಡೆಯುತ್ತಿದ್ದರೂ ಸ್ಥಳೀಯರು ನಿಂತು ನೋಡಿದರೇ ವಿನಾ: ಯಾರೂ ತಡೆಯಲು ಮುಂದಾಗಲಿಲ್ಲ.

    ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಈಗಾಗಲೇ ಏಳು ಜನ ಆರೋಪಿಗಳನ್ನು ಬಂಧಿಸಿದ್ದೇವೆ. ಸದ್ಯ ಆರೋಪಿಗಳನ್ನು ವಿಚಾರಣೆಗೆ ಒಳಪಡಿಸಲಾಗಿದೆ ಪೊಲೀಸ್ ಅಧಿಕಾರಿ ರಾಮ್‍ನಂದ್ ಕುಶ್ವಾಹ ತಿಳಿಸಿದ್ದಾರೆ.