Tag: threat letter

  • ಅಭಿನೇತ್ರಿಯ ಕಾಲು ಹಿಡಿದು ಕ್ಷಮೆ ಕೇಳಬೇಕು – ಸಿ.ಟಿ ರವಿಗೆ ಅನಾಧೇಮಯ ಬೆದರಿಕೆ ಪತ್ರ

    ಅಭಿನೇತ್ರಿಯ ಕಾಲು ಹಿಡಿದು ಕ್ಷಮೆ ಕೇಳಬೇಕು – ಸಿ.ಟಿ ರವಿಗೆ ಅನಾಧೇಮಯ ಬೆದರಿಕೆ ಪತ್ರ

    – ಮನೆಗೆ ನುಗ್ಗಿ ಸಾಯಿಸ್ತೀವಿ ಎಂದು ಬೆದರಿಕೆ

    ಚಿಕ್ಕಮಗಳೂರು: ಬಿಜೆಪಿ ಎಂಎಲ್‌ಸಿ ಸಿ.ಟಿ ರವಿ (CT Ravi) ಹಾಗೂ ಅವರ ಮಗ ಸೂರ್ಯನಿಗೆ ಅನಾಮಧೇಯ ವ್ಯಕ್ತಿಗಳಿಂದ ಬೆದರಿಕೆ ಪತ್ರವೊಂದು ಬಂದಿದೆ.ಇದನ್ನೂ ಓದಿ:ಬಿಡುಗಡೆಯಾಯ್ತು `ರುದ್ರ ಗರುಡ ಪುರಾಣ’ದ ನಶೆಯೇರಿಸೋ ಸಾಂಗು!

    ಸಿ.ಟಿ ರವಿ ಸ್ವಗೃಹಕ್ಕೆ ಅನಾಮಧೇಯ ವ್ಯಕ್ತಿಗಳು ಪತ್ರ ಕಳುಹಿಸಿದ್ದಾರೆ. ಪತ್ರದಲ್ಲಿ ಇನ್ನೂ 15 ದಿನದೊಳಗೆ ಚಿಕ್ಕಮಗಳೂರಿನಿಂದ ಬೆಳಗಾವಿಗೆ ಬಂದು ಅಭಿನೇತ್ರಿಯ ಕೈಕಾಲು ಹಿಡಿದು ಕ್ಷಮೆ ಕೇಳಬೇಕು. ಇಲ್ಲದಿದ್ದರೆ ನಿಮ್ಮ ಮನೆಗೆ ನುಗ್ಗಿ ನಿಮ್ಮ ಕೈಕಾಲ ಮುರಿದು ಸಾಯಿಸುತ್ತೇವೆ. ನಿನ್ನ ಕೈ ಕಾಲು ಮುರಿಯುತ್ತೇವೆ, ಪ್ರಾಣ ತೆಗೆಯುತ್ತೇವೆ ಹಾಗೂ ನಿನ್ನ ಮಗನನ್ನೂ ಸಾಯಿಸುತ್ತೇವೆ. ಹುಷಾರ್… ಹುಷಾರ್… ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

    ಈ ಕುರಿತು ಸಿ.ಟಿ ರವಿ ಅವರು ಚಿಕ್ಕಮಗಳೂರು ನಗರದ ಬಸವನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳುವಂತೆ ಆಗ್ರಹಿಸಿದ್ದಾರೆ. ಸದ್ಯ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಆರಂಭಿಸಿದ್ದಾರೆ.ಇದನ್ನೂ ಓದಿ: ನಕಲಿ ಸಿಗರೇಟ್ ಸರಬರಾಜು ಮಾಡ್ತಿದ್ದ ಕೇರಳ ಗ್ಯಾಂಗ್ ಅರೆಸ್ಟ್ – ಕೋಟಿ ಮೌಲ್ಯದ ಸಿಗರೇಟ್ ಸೀಜ್

  • Breaking- ಕಿಚ್ಚ ಸುದೀಪ್ ಗೆ ಬೆದರಿಕೆ ಪತ್ರ ಪ್ರಕರಣ: ಆರೋಪಿ ಅರೆಸ್ಟ್

    Breaking- ಕಿಚ್ಚ ಸುದೀಪ್ ಗೆ ಬೆದರಿಕೆ ಪತ್ರ ಪ್ರಕರಣ: ಆರೋಪಿ ಅರೆಸ್ಟ್

    ಸ್ಯಾಂಡಲ್ ವುಡ್ ಖ್ಯಾತ ನಟ ಕಿಚ್ಚ ಸುದೀಪ್ (Sudeep) ಗೆ ಬೆದರಿಕೆ ಪತ್ರ (Threat letter) ಬರೆದಿದ್ದ ವ್ಯಕ್ತಿಯ ಬಂಧನವಾಗಿದೆ. ಹಲವು ದಿನಗಳಿಂದ ಆರೋಪಿಯ ಬೆನ್ನು ಹತ್ತಿದ್ದ ಪೊಲೀಸರು ಕೊನೆಗೂ ಅರೆಸ್ಟ್ (Arrest)  ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಈ ಬೆದರಿಕೆ ಪತ್ರದ ಹಿಂದೆ ಡೈರೆಕ್ಟರ್ ಒಬ್ಬರ ಕೈವಾಡವಿದೆ ಎಂದು ಹೇಳಲಾಗುತ್ತಿದೆ. ಸದ್ಯ ರಮೇಶ್ ಕಿಟ್ಟಿ ಎನ್ನುವವರನ್ನು ಪೊಲೀಸರು ಬಂಧಿಸಿದ್ದಾರೆ.

    ಸುದೀಪ್ ಅವರ ಆತ್ಮೀಯರಾಗಿದ್ದ ರಮೇಶ್ ಕಿಟ್ಟಿ (Ramesh Kitty), ಸುದೀಪ್ ಚಾರಿಟಬಲ್ ಟ್ರಸ್ಟ್ ನೋಡಿಕೊಳ್ಳುತ್ತಿದ್ದರು. ಸುದೀಪ್ ಮತ್ತು ರಮೇಶ್ ನಡುವಿನ ಹಣಕಾಸು ವೈಷಮ್ಯವೇ ಬೆದರಿಕೆ ಪತ್ರಕ್ಕೆ ಕಾರಣವೆಂದು ಹೇಳಲಾಗುತ್ತಿದೆ. ಸುದೀಪ್ ಚಾರಿಟಬಲ್ ಟ್ರಸ್ಟ್ ಮೇಲೆ ನಂಬಿಕೆ ಇಟ್ಟು ಎರಡು ಕೋಟಿ ಇನ್ವೆಸ್ಟ್ ಮಾಡಿದ್ದ ರಮೇಶ್ ಗೆ ಆನಂತರ ಸುದೀಪ್ ವಾಪಸ್ಸು ನೀಡಿಲ್ಲ ಎನ್ನುವ ಕಾರಣಕ್ಕೆ ಈ ರೀತಿಯಾಗಿ ಪತ್ರ ಬರೆದಿದ್ದಾರೆಂದು ಹೇಳಲಾಗುತ್ತಿದೆ. ಇದನ್ನೂ ಓದಿ:ಆರ್.ಎಲ್ ಜಾಲಪ್ಪ ವಿರುದ್ಧ ಸ್ಪರ್ಧಿಸಿ ಸೋತಿದ್ದರು ಹಿರಿಯ ನಟ ಶ್ರೀನಿವಾಸ್ ಮೂರ್ತಿ

    ಹಣಕಾಸಿನ ವೈಷಮ್ಯವೇ ಬೆದರಿಕೆ ಪತ್ರಕ್ಕೆ ಕಾರಣವೆಂದು ಸ್ವತಃ ರಮೇಶ್ ಕಿಟ್ಟಿನೇ ಒಪ್ಪಿಕೊಂಡಿದ್ದಾನೆಂದು ಹೇಳಲಾಗುತ್ತಿದೆ. ಅಲ್ಲದೇ, ಈ ಪ್ರಕರಣದ ಹಿಂದೆ ಇನ್ನೂ ಹಲವರು ಇದ್ದಾರೆಂದು ಶಂಕಿಸಲಾಗುತ್ತಿದೆ. ಬೆದರಿಕೆ ಪತ್ರದ ಪ್ರಕರಣದ ಹಿಂದೆ ಯಾರಿದ್ದಾರೆ ಎಂಬುದು ನನಗೆ ಗೊತ್ತಿದೆ ಎಂದು ಮೊನ್ನೆಯಷ್ಟೇ ಸುದೀಪ್ ಹೇಳಿದ್ದರು. ಸಿನಿಮಾ ರಂಗದವರೇ ಈ ಪ್ರಕರಣದಲ್ಲಿ ಭಾಗಿಯಾಗಿದ್ದು, ಕಾನೂನು ಮೂಲಕವೇ ಅವರಿಗೆ ಉತ್ತರ ಕೊಡುತ್ತೇನೆ ಎಂದೂ ಹೇಳಿಕೊಂಡಿದ್ದರು. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕಿಟ್ಟಿ ಬಂಧನವಾಗಿದೆ.

  • ಕಿಚ್ಚನಿಗೆ ಬೆದರಿಕೆ ಪತ್ರ: ಸುದೀಪ್ ನೀಡಿದ ಅಚ್ಚರಿಕೆ ಪ್ರತಿಕ್ರಿಯೆ

    ಕಿಚ್ಚನಿಗೆ ಬೆದರಿಕೆ ಪತ್ರ: ಸುದೀಪ್ ನೀಡಿದ ಅಚ್ಚರಿಕೆ ಪ್ರತಿಕ್ರಿಯೆ

    ಟ ಸುದೀಪ್ (Sudeep) ಅವರಿಗೆ ಬೆದರಿಕೆ ಪತ್ರ ಬಂದು ಒಂದು ತಿಂಗಳು ಕಳೆದಿದೆ. ಅವರು ದೂರು ದಾಖಲಿಸಿ 25 ದಿನಕ್ಕೂ ಹೆಚ್ಚು ದಿನಗಳು ಉರುಳಿವೆ. ಪತ್ರ ಬರೆದವರ ಬೆನ್ನತ್ತಿರುವ ಸಿಸಿಬಿಗೆ ಈವರೆಗೂ ಯಾವುದೇ ಸುಳಿವು ಸಿಕ್ಕಿಲ್ಲ. ಆದರೂ, ತಮ್ಮ ಪ್ರಯತ್ನವನ್ನು ಅವರು ನಿಲ್ಲಿಸಿಲ್ಲ. ಈ ಕುರಿತು ಇದೇ ಮೊದಲ ಬಾರಿಗೆ ಕಿಚ್ಚು ಸುದೀಪ್ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಇಂದು ಚುನಾವಣಾ ಪ್ರಚಾರಕ್ಕೆ ಹೊರಡುತ್ತಿರುವ ಸಂದರ್ಭದಲ್ಲಿ ಬೆದರಿಕೆ ಪತ್ರದ ಬಗ್ಗೆ ಮಾತನಾಡಿದ್ದಾರೆ.

    ಬೆದರಿಕೆಯ ಪತ್ರದ (Threat letter) ಬಗ್ಗೆ ಮಾತನಾಡಿದ ಸುದೀಪ್, ‘ನಂಗೆ ತುಂಬಾ ಲವ್ ಲೇಟರ್ ಗಳು ಬರ್ತಾ ಇರ್ತಾವೆ. ಅದಕ್ಕೆಲ್ಲಾ ತಲೆಕೆಡಿಸಿಕೊಳ್ಳೋಕೆ ಆಗಲ್ಲ’ ಎಂದು ಚುಟುಕಾಗಿ ಉತ್ತರಿಸಿದ್ದಾರೆ. ಈ ಮೂಲಕ ಪತ್ರ ಬರೆದವರ ಬಗ್ಗೆ ಕೇರ್ ಮಾಡುವುದಿಲ್ಲ ಎಂದು ಸ್ಪಷ್ಟ ಸಂದೇಶವನ್ನು ರವಾನಿಸಿದ್ದಾರೆ. ‘ಆ ವಿಚಾರದಲ್ಲಿ ತನಿಖೆ ನಡೆಯುತ್ತಿದೆ. ನನ್ನ ಪಾಡಿಗೆ ನಾನು ಇವತ್ತಿನಿಂದ ಪ್ರಚಾರಕ್ಕೆ ಹೋಗ್ತಾ ಇದೀನಿ’ ಎಂದಿದ್ದಾರೆ.

    ಇಂದಿನಿಂದ ಸುದೀಪ್ ಬಿಜೆಪಿ (BJP) ಅಭ್ಯರ್ಥಿಗಳ ಪರವಾಗಿ ಮತಯಾಚನೆ (Campaign) ಮಾಡುತ್ತಿದ್ದಾರೆ.  ಬೆಂಗಳೂರಿನಿಂದ ಹೊರಡುವ ಇವರ ಪಯಣ ಮೊದಲು ಮೊಳಕಾಲ್ಮೂರು (Molakalmuru) ಕ್ಷೇತ್ರದಿಂದ ಪ್ರಚಾರ ಆರಂಭಿಸಲಿದೆ. ಬೆಳಗ್ಗೆ 10.15ಕ್ಕೆ ಮೊಳಕಾಲ್ಮೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್. ತಿಪ್ಪೇಸ್ವಾಮಿ ಪರವಾಗಿ ಕಿಚ್ಚ ಮತಯಾಚನೆ ಮಾಡಲಿದ್ದಾರೆ. ಇದನ್ನೂ ಓದಿ: ವಿಜಯ್‌ ವರ್ಮಾ ಜೊತೆ KGF ನಟಿ ತಮನ್ನಾ ಡಿನ್ನರ್‌ ಡೇಟ್‌

    ಮೊಳಕಾಲ್ಮೂರು ಕ್ಷೇತ್ರದಿಂದ ನೇರವಾಗಿ ಜಗಳೂರು ಕ್ಷೇತ್ರದತ್ತ ಹೆಲಿಕಾಪ್ಟರ್ ನಲ್ಲೇ ಪ್ರಯಾಣ ಮುಂದುವರೆಸುವ ಸುದೀಪ್ 12.30ಕ್ಕೆ ಜಗಳೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್.ವಿ. ರಾಮಚಂದ್ರ ಅವರ ಪರವಾಗಿ ರೋಡ್ ಶೋ ನಡೆಸಲಿದ್ದಾರೆ. ಒಂದು ಗಂಟೆಗೂ ಅಧಿಕ ಕಾಲ ಅವರು ರೋಡ್ ಶೋ ಮಾಡಲಿದ್ದಾರೆ.

    ಜಗಳೂರು (Jagaluru) ರೋಡ್ ಶೋ ಮುಗಿಸಿಕೊಂಡು ಊಟದ ನಂತರ ಸುದೀಪ್, ಮಾಯಕೊಂಡ (Mayakonda) ಕ್ಷೇತ್ರದತ್ತ ಪ್ರಯಾಣ ಬೆಳೆಸಲಿದ್ದಾರೆ. ಮಧ್ಯಾಹ್ನ 3.10ಕ್ಕೆ ಮಾಯಕೊಂಡ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ನಾಯ್ಕ ಪರವಾಗಿ ಸುದೀಪ್ ಮತಯಾಚನೆ ಮಾಡಲಿದ್ದಾರೆ. ಅಲ್ಲದೇ, ಸರಕಾರಿ ಕಾಲೇಜು ಮೈದಾನದಲ್ಲಿ ನಡೆಯುವ ಕಾರ್ಯಕ್ರಮದಲ್ಲೂ ಅವರು ಭಾಗಿಯಾಗಲಿದ್ದಾರೆ.

    ಮಾಯಕೊಂಡದಿಂದ ಸುದೀಪ್ ದಾವಣಗೆರೆಗೆ (Davangere) ತೆರಳಲಿದ್ದು, ದಾವಣಗೆರೆಯ ಸೌತ್ ಮತ್ತು ನಾರ್ತ್ ಕ್ಷೇತ್ರಗಳ ಅಭ್ಯರ್ಥಿಗಳಾದ ಲೊಕ್ಕಿಕೆರೆ ನಾಗರಾಜ ಹಾಗೂ ಬಿ.ಜಿ. ಅಜಯ್ ಕುಮಾರ್ ಪರವಾಗಿ ಸಂಜೆ 4.20ಕ್ಕೆ ರೋಡ್ ಶೋ ಮೂಲಕ ಮತಯಾಚನೆ ಮಾಡಲಿದ್ದಾರೆ. ಅಲ್ಲಿಂದ ನೇರವಾಗಿ ಸಂಡೂರಿಗೆ ತೆರಳಿ ಸಂಡೂರು (Sandur) ಬಿಜೆಪಿ ಅಭ್ಯರ್ಥಿ ಶಿಲ್ಪಾ ನಾಗೇಂದ್ರ ಪರವಾಗಿ ಸಂಜೆ 6.10ಕ್ಕೆ ರೋಡ್ ಶೋ ಮೂಲಕ ಮತಯಾಚನೆ ಮಾಡಲಿದ್ದಾರೆ.

  • ರಾಜೀವ್‌ ಗಾಂಧಿಗೆ ಆದ ಗತಿ ನಿಮಗೂ ಆಗುತ್ತೆ – ಮೋದಿಗೆ ಆತ್ಮಹುತಿ ಬಾಂಬ್‌ ದಾಳಿ ಬೆದರಿಕೆ

    ರಾಜೀವ್‌ ಗಾಂಧಿಗೆ ಆದ ಗತಿ ನಿಮಗೂ ಆಗುತ್ತೆ – ಮೋದಿಗೆ ಆತ್ಮಹುತಿ ಬಾಂಬ್‌ ದಾಳಿ ಬೆದರಿಕೆ

    ನವದೆಹಲಿ: ಪ್ರಧಾನಿ ಮೋದಿ (Narendra Modi) ಏ.24 ರಂದು ಕೇರಳ (Kerala) ಪ್ರವಾಸ ಕೈಗೊಳ್ಳಲಿದ್ದಾರೆ. ಮೋದಿ ಕೊಚ್ಚಿ ಪ್ರವಾಸ ವೇಳೆ ಆತ್ಮಾಹುತಿ ದಾಳಿ ನಡೆಸೋದಾಗಿ ದುಷ್ಕರ್ಮಿಗಳು ಬೆದರಿಕೆ ಹಾಕಿದ್ದಾರೆ. ಹೀಗಾಗಿ ಖಾಕಿ ಹೈ ಅಲರ್ಟ್ ಆಗಿದ್ದಾರೆ.

    ಕಳೆದ ವಾರ ತಿರುವನಂತಪುರಂ ಬಿಜೆಪಿ ಕಚೇರಿಗೆ ಈ ಬೆದರಿಕೆ ಪತ್ರ ಬಂದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಈ ಬೆನ್ನಲ್ಲೇ ಎಚ್ಚೆತ್ತ ಪೊಲೀಸ್ ಇಲಾಖೆ ಕೇರಳದಾದ್ಯಂತ ಹೈ ಅಲರ್ಟ್ ಘೋಷಿಸಿದ್ದಾರೆ. ರಾಜ್ಯಾದ್ಯಂತ ಬಿಗಿಭದ್ರತೆ ಕೈಗೊಂಡಿದ್ದಾರೆ. ಇದನ್ನೂ ಓದಿ: ಪ್ರಾಣ ನೀಡಲು ಸಿದ್ಧನಿದ್ದೇನೆ ಆದ್ರೆ ದೇಶ ವಿಭಜಿಸಲು ಬಿಡಲ್ಲ: ಮಮತಾ ಬ್ಯಾನರ್ಜಿ

    ಕೊಚ್ಚಿಯಲ್ಲಿರುವ ವ್ಯಕ್ತಿಯೊಬ್ಬರು ಮಲಯಾಳಂ ಭಾಷೆಯಲ್ಲಿ ಬರೆದಿದ್ದಾರೆ ಎನ್ನಲಾದ ಪತ್ರವನ್ನು ಬಿಜೆಪಿ ರಾಜ್ಯಾಧ್ಯಕ್ಷ ಕೆ. ಸುರೇಂದ್ರನ್ ಅವರ ಕಚೇರಿಯಲ್ಲಿ ಸ್ವೀಕರಿಸಲಾಗಿದ್ದು, ಅವರು ಕಳೆದ ವಾರ ಅದನ್ನು ಪೊಲೀಸರಿಗೆ ಹಸ್ತಾಂತರಿಸಿದ್ದಾರೆ. ಈ ಸಂಬಂಧ ಭದ್ರತಾ ಏಜೆನ್ಸಿಗಳು ತನಿಖೆ ಆರಂಭಿಸಿವೆ.

    ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರ ಭವಿಷ್ಯವನ್ನು ಮೋದಿ ಎದುರಿಸಲಿದ್ದಾರೆ ಎಂದು ಪತ್ರದಲ್ಲಿ ಬರೆದಿತ್ತು. ವಿಳಾಸ ಹೊಂದಿದ್ದ ಎನ್.ಕೆ.ಜಾನಿ ಎಂಬ ವ್ಯಕ್ತಿಯನ್ನು ಪೊಲೀಸರು ಪತ್ತೆಹಚ್ಚಿದ್ದಾರೆ. ಕೊಚ್ಚಿ ಮೂಲದ ಜಾನಿ ಪತ್ರ ಬರೆದಿರುವುದನ್ನು ಅಲ್ಲಗಳೆದಿದ್ದಾನೆ. ತನ್ನ ವಿರುದ್ಧ ದ್ವೇಷ ಸಾಧಿಸಿದ ವ್ಯಕ್ತಿಯೇ ಈ ರೀತಿ ಬೆದರಿಕೆ ಪತ್ರ ಬರೆದು ನನ್ನ ಮೇಲೆ ಸಂಶಯ ಬರುವಂತೆ ಮಾಡಿರಬಹುದು ಎಂದು ಪೊಲೀಸರಿಗೆ ಜಾನಿ ತಿಳಿಸಿದ್ದಾನೆ. ಇದನ್ನೂ ಓದಿ: 2005ರಿಂದ ವಾಸವಿದ್ದ ಸರ್ಕಾರಿ ಬಂಗಲೆ ತೊರೆದ ರಾಹುಲ್ ಗಾಂಧಿ

    ಈ ಕುರಿತು ಪ್ರತಿಕ್ರಿಯಿಸಿರುವ ಜಾನಿ, ಪೊಲೀಸರು ನನ್ನ ಕೈಬರಹದೊಂದಿಗೆ ಪತ್ರವನ್ನು ತೆಗೆದುಕೊಂಡು ಹೋಗಿದ್ದಾರೆ. ನಾನು ಪತ್ರ ಬರೆದಿಲ್ಲ ಎಂಬುದು ಅವರಿಗೆ ಮನವರಿಕೆಯಾಗಿದೆ. ನನ್ನ ವಿರುದ್ಧ ದ್ವೇಷ ಹೊಂದಿರುವ ಯಾರೋ ಈ ರೀತಿ ಪತ್ರ ಬರೆದಿರಬಹುದು. ನನಗೆ ಅನುಮಾನವಿರುವ ವ್ಯಕ್ತಿಗಳ ಹೆಸರನ್ನು ಪೊಲೀಸರಿಗೆ ತಿಳಿಸಿದ್ದೇನೆ ಎಂದು ಹೇಳಿದ್ದಾನೆ.

  • ಸುದೀಪ್ ಖಾಸಗಿ ವಿಡಿಯೋ ಬೆದರಿಕೆ ಪತ್ರ : ಸಿಸಿಬಿ ಕಚೇರಿಯಲ್ಲಿ ಜಾಕ್ ಮಂಜು

    ಸುದೀಪ್ ಖಾಸಗಿ ವಿಡಿಯೋ ಬೆದರಿಕೆ ಪತ್ರ : ಸಿಸಿಬಿ ಕಚೇರಿಯಲ್ಲಿ ಜಾಕ್ ಮಂಜು

    ಖಾಸಗಿ ವಿಡಿಯೋ (Private Video) ಬೆದರಿಕೆ ಪತ್ರಕ್ಕೆ ಸಂಬಂಧಿಸಿದಂತೆ ನಿರ್ಮಾಪಕ ಕಂ ಸುದೀಪ್  (Sudeep)  ಆಪ್ತ ಜಾಕ್ ಮಂಜು (Jack Manju) ಸಿಸಿಬಿ ಕಚೇರಿಗೆ ಭೇಟಿ ನೀಡಿದ್ದಾರೆ. ಸಿಸಿಬಿ (CCB) ಅಧಿಕಾರಿಗಳು ವಿವರಣೆಗೆ ಕರೆದ ಹಿನ್ನೆಲೆಯಲ್ಲಿ ಮಂಜು ಭೇಟಿ ನೀಡಿದ್ದು,  ಸುದೀಪ್ ಅವರಿಗೆ ಬಂದಿದ್ದ ಎರಡು ಪತ್ರಗಳು ಕುರಿತಾಗಿ ವಿವರಣೆ ಪಡೆದಿದ್ದಾರೆ. ಅಲ್ಲದೇ, ಕೆಲವರ ಬಗ್ಗೆ ಅನುಮಾನವನ್ನೂ ವ್ಯಕ್ತ ಪಡಿಸಿದ್ದಾರೆ ಎನ್ನಲಾಗುತ್ತಿದೆ. ಈವರೆಗೂ ಸುದೀಪ್ ಮೇಲೆ ನಡೆದ ಕುತಂತ್ರಗಳ ಬಗ್ಗೆಯೂ ಮಂಜು ಅಧಿಕಾರಿಗಳಿಗೆ ವಿವರಿಸಿದ್ದಾರೆ ಎನ್ನಲಾಗುತ್ತಿದೆ.

    ಬೆದರಿಕೆ ಪತ್ರದ ಪ್ರಕರಣದ ಹಿಂದೆ ಯಾರಿದ್ದಾರೆ ಎಂಬುದು ನನಗೆ ಗೊತ್ತಿದೆ ಎಂದು ಮೊನ್ನೆಯಷ್ಟೇ ಸುದೀಪ್‍ ಹೇಳಿದ್ದರು. ಸಿನಿಮಾ ರಂಗದವರೇ ಈ ಪ್ರಕರಣದಲ್ಲಿ ಭಾಗಿಯಾಗಿದ್ದು, ಕಾನೂನು ಮೂಲಕವೇ ಅವರಿಗೆ ಉತ್ತರ ಕೊಡುತ್ತೇನೆ ಎಂದೂ ಹೇಳಿಕೊಂಡಿದ್ದರು. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ಮಹತ್ವದ ಸುಳಿವು ಸಿಕ್ಕಿದೆ. ಸುದೀಪ್ ಮನೆಗೆ ಬಂದಿದ್ದ ಆ ಎರಡೂ ಬೆದರಿಕೆ ಪತ್ರಗಳು ದೊಮ್ಮಲೂರಿನಿಂದ ಪೋಸ್ಟ್ ಆಗಿವೆ ಎಂದು ಹೇಳಲಾಗುತ್ತಿದೆ. ಆ ಬೆದರಿಕೆ ಪತ್ರಗಳ ಸಂಬಂಧ ಸಿಸಿಬಿಯಿಂದ ತನಿಖೆ ಶುರುವಾಗಿದ್ದು, ಶಂಕೀತ ಜಾಡು ಹಿಡಿದು ಹೊರಟಿದ್ದಾರಂತೆ ಸಿಸಿಬಿ ಅಧಿಕಾರಿಗಳು.

    ಮೊದಲ ಪತ್ರ ಬಂದಾಗ ಸುದೀಪ್ ಅವರೇ ನಿರ್ಲಕ್ಷ್ಯ ವಹಿಸಿದ್ದರಂತೆ. ದುಷ್ಟರು ಬರೆದ ಮೊದಲನೇ ಪತ್ರಕ್ಕೆ ಯಾವಾಗ ಸುದೀಪ್ ರಿಯಾಕ್ಟ್ ಆಗ್ಲಿಲ್ವೋ, ಈತ ಏನೂ ಮಾಡಲ್ಲ ಎಂಬ ಭಂಡ ಧೈರ್ಯದಿಂದ ಮತ್ತೊಂದು ಪತ್ರ ಕಳಿಸಿದ್ದಾನಂತೆ ಆ ಭೂಪ. ಯಾವಾಗ ಎರಡನೇ ಪತ್ರ ಕೈ ಸೇರಿತೋ ಇದರ ಗಂಭೀರತೆಯನ್ನು ಅರಿತು ಕಾನೂನು ಪ್ರಕ್ರಿಯೆಯೇ ಸೂಕ್ತ ಎಂದು ತಮ್ಮ ಆಪ್ತ ಜಾಕ್ ಮಂಜು ಮೂಲಕ ದೂರು ನೀಡಿದ್ದರು ಸುದೀಪ್. ಸದ್ಯ ಈ ಪತ್ರದ ಸುತ್ತ ಪೊಲೀಸರು ತನಿಖೆಗಿಳಿದಿದ್ದಾರೆ. ಇದನ್ನೂ ಓದಿ: ‘ವಿಷ್ಣುಪ್ರಿಯಾ’ಗಾಗಿ ಕೇರಳದಿಂದ ಹಾರಿಬಂದ ಕಣ್ಸನ್ನೆ ಬೆಡಗಿ ಪ್ರಿಯಾ

    ಮಾರ್ಚ್ 10ನೇ ತಾರೀಕು ಸುದೀಪ್ ಮನೆಗೆ ಮೊದಲ ಪತ್ರ ತಲುಪಿದೆ. ಆ ಪತ್ರದ ಬಗ್ಗೆ ಅಷ್ಟಾಗಿ ಸುದೀಪ್ ತಲೆ ಕೆಡಿಸಿಕೊಂಡಿರಲಿಲ್ಲ‌. ಆದರೂ ಇಂಟರ್ ನಲ್ ಎನ್ಕೈರಿಯಂತೆ ಮಾಹಿತಿಯನ್ನು ಕಲೆ ಹಾಕುವುದಕ್ಕೆ ಯತ್ನಿಸಿದ್ದರಂತೆ. ಅದರ ಬೆನ್ನಲ್ಲೆ ಮತ್ತೊಂದು ಪತ್ರ ಬಂದಿದ್ದರಿಂದ ಸಹಜವಾಗಿಯೇ ಇದು ಗಂಭೀರ ಪ್ರಕರಣ ಅನಿಸಿ ದೂರು ನೀಡಲಾಗಿತ್ತು. ಇನ್ನು ಆ ಪತ್ರದ ಮೂಲ ಹುಡುಕುತ್ತಾ ಹೋದಾಗ ಸಿಕ್ಕಿದ್ದು ದೊಮ್ಮಲೂರು ಪೋಸ್ಟ್ ಬಾಕ್ಸ್.  ಸುದೀಪ್ ಮನೆಗೆ ಬಂದ  ಎರಡೂ ಪತ್ರಗಳು ದೊಮ್ಮಲೂರಿನಿಂದ ಬಂದಿದ್ದವು. ಹೀಗಾಗಿ ಆ ಪತ್ರವನ್ನು ಯಾರು ಪೋಸ್ಟ್ ಮಾಡಿದ್ದು ಎಂಬುದರ ಬಗ್ಗೆ ಅಲ್ಲಿನ ಸಿಸಿಟಿವಿ ಪರಿಶೀಲನೆಗೆ ಸಿಸಿಬಿ ಮುಂದಾಗಿದೆ.

    ಈ ಹಿಂದೆ ಸುದೀಪ್ ಜೊತೆ ಇದ್ದ ಕಾರು ಚಾಲಕನ ಮೇಲೆ ಪೊಲೀಸರಿಗೆ ಬಲವಾದ ಶಂಕೆ ಇದೆ ಎಂದು ಹೇಳಲಾಗುತ್ತಿದೆ. ಈಗಾಗಲೆ ದೂರು ದಾಖಲಿಸಿ ತನಿಖೆ ನಡೆಸಿದ್ದ ಪುಟ್ಟೇನಹಳ್ಳಿ ಪೊಲೀಸರು ಸುದೀಪ್ ಮನೆಯಲ್ಲಿ ಸ್ಪಾಟ್ ಇನ್ವೆಷ್ಟಿಗೇಷನ್ ಕೂಡ ನಡೆಸಿದ್ದಾರೆ. ಕೆಲವೊಂದು ಸಾಂಧರ್ಭಿಕ ಸಾಕ್ಷಿಗಳ ಅನ್ವಯ ಈ ಹಿಂದೆ ಇದ್ದ ಸುದೀಪ್ ಮನೆಯ ಕಾರು ಚಾಲಕನ ಮೇಲೆ ಅನುಮಾನ ಬಂದಿದೆ ಎಂದು ಹೇಳಲಾಗುತ್ತಿದೆ. ಇವೆಲ್ಲ ವರದಿಯನ್ನು ಪುಟ್ಟೇನಹಳ್ಳಿ ಪೊಲೀಸರು ಸಿಸಿಬಿಗೆ ನೀಡಿದ್ದಾರೆ. ಇನ್ನು ಈ ಕಾರು ಚಾಲಕನನ್ನು ಬಳಸಿಕೊಂಡು ಚಿತ್ರ ರಂಗದ ಆ ವ್ಯಕ್ತಿ ಕೃತ್ಯವನ್ನು ಎಸಗಿದ್ದನಾ ಎಂಬ ಶಂಕೆ ವ್ಯಕ್ತವಾಗಿದೆ.  ಇದೊಂದು ಪ್ರೀ ಪ್ಲಾನ್ ಕೃತ್ಯ ಎಂಬುದಕ್ಕೆ ಸಿಸ್ಟಂ ಟೈಪಿಂಗ್ ಪತ್ರವೇ ಸಾಕ್ಷಿಯಾಗಿದೆ.  ಕೈ ಬರಹ ಪತ್ರವನ್ನು ಕಳಿಸಿದರೆ ಸಾಕ್ಷಿ ಸಿಗುತ್ತೆ ಎಂಬ ಕಾರಣಕ್ಕೆ ಟೈಪ್ ಮಾಡಿ ಆ ಪತ್ರವನ್ನು ಪೋಸ್ಟ್ ಮಾಡಲಾಗಿದೆ. ಪೊಲೀಸರು ದೂರು ಪಡೆದುಕೊಳ್ಳುವಾಗಲೇ ಇದೊಂದು ಕ್ರಿಮಿನಲ್ ಕಾನ್ಸ್ ಪೆರೆಸಿ ಎಂದು ತಿಳಿದು ಸೆಕ್ಷನ್ 120b ಒಳಸಂಚು ಅಡಿಯಲ್ಲಿ ಕೇಸು ದಾಖಲಿಸಿದ್ದರು. ಸದ್ಯ ಅವರ ಅನುಮಾನ ಕೂಡ ನಿಜವಾಗ್ತಿದೆ ಎಂಬುದಕ್ಕೆ ಸಿಸಿಬಿಗೆ ಸಿಕ್ಕ ಬೇಸಿಕ್ ಇನ್ಪಾರ್ಮೇಷನ್ ಗಳೆ ಸಾಕ್ಷಿಯಾಗಿವೆ.

    ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿಯ ಸೈಬರ್ ವಿಂಗ್ ಕೂಡ ಕೆಲಸ ಮಾಡುತ್ತಿದ್ದು ಮುಂದಿನ ದಿನದಲ್ಲಿ ನಟ ಸುದೀಪ್ ಗೂ ನೊಟೀಸ್ ನೀಡಿ ಹೇಳಿಕೆಗಳನ್ನು ಪಡೆಯಲು ಸಿದ್ಧತೆಯನ್ನ ನಡೆಸುತ್ತಿದ್ದಾರೆ. ಸದ್ಯ ಆ ಕಾರು ಚಾಲಕ ಸಿಕ್ಕ ಬಳಿಕವಷ್ಟೆ ಅಸಲಿ ಸಂಗತಿ ಹೊರ ಬರಬೇಕಿದೆ.

  • ಸುದೀಪ್ ಖಾಸಗಿ ವಿಡಿಯೋ ಬೆದರಿಕೆ ಹಿಂದೆ ಕಾರು ಡ್ರೈವರ್ ಇರುವ  ಶಂಕೆ

    ಸುದೀಪ್ ಖಾಸಗಿ ವಿಡಿಯೋ ಬೆದರಿಕೆ ಹಿಂದೆ ಕಾರು ಡ್ರೈವರ್ ಇರುವ ಶಂಕೆ

    ಟ ಕಿಚ್ಚ ಸುದೀಪ್ (Sudeep) ಅವರ ಖಾಸಗಿ ವಿಡಿಯೋ (Private Video) ಬಹಿರಂಗ ಪಡಿಸುವುದಾಗಿ ಬರೆದ ಬೆದರಿಕೆ ಪತ್ರದ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ. ಈ ಪ್ರಕರಣದ ಹಿಂದೆ ಯಾರಿದ್ದಾರೆ ಎಂಬುದು ನನಗೆ ಗೊತ್ತಿದೆ ಎಂದು ನಿನ್ನೆಯಷ್ಟೇ ಸುದೀಪ್‍ ಹೇಳಿದ್ದರು. ಸಿನಿಮಾ ರಂಗದವರೇ ಈ ಪ್ರಕರಣದಲ್ಲಿ ಭಾಗಿಯಾಗಿದ್ದು, ಕಾನೂನು ಮೂಲಕವೇ ಅವರಿಗೆ ಉತ್ತರ ಕೊಡುತ್ತೇನೆ ಎಂದೂ ಹೇಳಿಕೊಂಡಿದ್ದರು. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ಮಹತ್ವದ ಸುಳಿವು ಸಿಕ್ಕಿದೆ. ಸುದೀಪ್ ಮನೆಗೆ ಬಂದಿದ್ದ ಆ ಎರಡೂ ಬೆದರಿಕೆ ಪತ್ರಗಳು ದೊಮ್ಮಲೂರಿನಿಂದ ಪೋಸ್ಟ್ ಆಗಿವೆ ಎಂದು ಹೇಳಲಾಗುತ್ತಿದೆ. ಆ ಬೆದರಿಕೆ ಪತ್ರಗಳ ಸಂಬಂಧ ಸಿಸಿಬಿಯಿಂದ (CCB)ತನಿಖೆ ಶುರುವಾಗಿದ್ದು, ಶಂಕೀತ ಜಾಡು ಹಿಡಿದು ಹೊರಟಿದ್ದಾರಂತೆ ಸಿಸಿಬಿ ಅಧಿಕಾರಿಗಳು.

    ಮೊದಲ ಪತ್ರ ಬಂದಾಗ ಸುದೀಪ್ ಅವರೇ ನಿರ್ಲಕ್ಷ್ಯ ವಹಿಸಿದ್ದರಂತೆ. ದುಷ್ಟರು ಬರೆದ ಮೊದಲನೇ ಪತ್ರಕ್ಕೆ ಯಾವಾಗ ಸುದೀಪ್ ರಿಯಾಕ್ಟ್ ಆಗ್ಲಿಲ್ವೋ, ಈತ ಏನೂ ಮಾಡಲ್ಲ ಎಂಬ ಭಂಡ ಧೈರ್ಯದಿಂದ ಮತ್ತೊಂದು ಪತ್ರ ಕಳಿಸಿದ್ದಾನಂತೆ ಆ ಭೂಪ. ಯಾವಾಗ ಎರಡನೇ ಪತ್ರ ಕೈ ಸೇರಿತೋ ಇದರ ಗಂಭೀರತೆಯನ್ನು ಅರಿತು ಕಾನೂನು ಪ್ರಕ್ರಿಯೆಯೇ ಸೂಕ್ತ ಎಂದು ತಮ್ಮ ಆಪ್ತ ಜಾಕ್ ಮಂಜು ಮೂಲಕ ದೂರು ನೀಡಿದ್ದರು ಸುದೀಪ್. ಸದ್ಯ ಈ ಪತ್ರದ ಸುತ್ತ ಪೊಲೀಸರು ತನಿಖೆಗಿಳಿದಿದ್ದಾರೆ. ಇದನ್ನೂ ಓದಿ: ಯಶ್‌ ಜೊತೆ ದಿಲ್‌ ರಾಜು ಹೊಸ ಸಿನಿಮಾ- ಅಪ್‌ಡೇಟ್‌ ಹಂಚಿಕೊಂಡ ನಿರ್ಮಾಪಕ

    ಮಾರ್ಚ್ 10ನೇ ತಾರೀಕು ಸುದೀಪ್ ಮನೆಗೆ ಮೊದಲ ಪತ್ರ ತಲುಪಿದೆ. ಆ ಪತ್ರದ ಬಗ್ಗೆ ಅಷ್ಟಾಗಿ ಸುದೀಪ್ ತಲೆ ಕೆಡಿಸಿಕೊಂಡಿರಲಿಲ್ಲ‌. ಆದರೂ ಇಂಟರ್ ನಲ್ ಎನ್ಕೈರಿಯಂತೆ ಮಾಹಿತಿಯನ್ನು ಕಲೆ ಹಾಕುವುದಕ್ಕೆ ಯತ್ನಿಸಿದ್ದರಂತೆ. ಅದರ ಬೆನ್ನಲ್ಲೆ ಮತ್ತೊಂದು ಪತ್ರ ಬಂದಿದ್ದರಿಂದ ಸಹಜವಾಗಿಯೇ ಇದು ಗಂಭೀರ ಪ್ರಕರಣ ಅನಿಸಿ ದೂರು ನೀಡಲಾಗಿತ್ತು. ಇನ್ನು ಆ ಪತ್ರದ ಮೂಲ ಹುಡುಕುತ್ತಾ ಹೋದಾಗ ಸಿಕ್ಕಿದ್ದು ದೊಮ್ಮಲೂರು ಪೋಸ್ಟ್ ಬಾಕ್ಸ್.  ಸುದೀಪ್ ಮನೆಗೆ ಬಂದ  ಎರಡೂ ಪತ್ರಗಳು ದೊಮ್ಮಲೂರಿನಿಂದ ಬಂದಿದ್ದವು. ಹೀಗಾಗಿ ಆ ಪತ್ರವನ್ನು ಯಾರು ಪೋಸ್ಟ್ ಮಾಡಿದ್ದು ಎಂಬುದರ ಬಗ್ಗೆ ಅಲ್ಲಿನ ಸಿಸಿಟಿವಿ ಪರಿಶೀಲನೆಗೆ ಸಿಸಿಬಿ ಮುಂದಾಗಿದೆ.

    ಈ ಹಿಂದೆ ಸುದೀಪ್ ಜೊತೆ ಇದ್ದ ಕಾರು ಚಾಲಕನ (Car Driver) ಮೇಲೆ ಪೊಲೀಸರಿಗೆ ಬಲವಾದ ಶಂಕೆ ಇದೆ ಎಂದು ಹೇಳಲಾಗುತ್ತಿದೆ. ಈಗಾಗಲೆ ದೂರು ದಾಖಲಿಸಿ ತನಿಖೆ ನಡೆಸಿದ್ದ ಪುಟ್ಟೇನಹಳ್ಳಿ ಪೊಲೀಸರು ಸುದೀಪ್ ಮನೆಯಲ್ಲಿ ಸ್ಪಾಟ್ ಇನ್ವೆಷ್ಟಿಗೇಷನ್ ಕೂಡ ನಡೆಸಿದ್ದಾರೆ. ಕೆಲವೊಂದು ಸಾಂರ್ಭಿಕ ಸಾಕ್ಷಿಗಳ ಅನ್ವಯ ಈ ಹಿಂದೆ ಇದ್ದ ಸುದೀಪ್ ಮನೆಯ ಕಾರು ಚಾಲಕನ ಮೇಲೆ ಅನುಮಾನ ಬಂದಿದೆ ಎಂದು ಹೇಳಲಾಗುತ್ತಿದೆ. ಇವೆಲ್ಲ ವರದಿಯನ್ನು ಪುಟ್ಟೇನಹಳ್ಳಿ ಪೊಲೀಸರು ಸಿಸಿಬಿಗೆ ನೀಡಿದ್ದಾರೆ. ಇನ್ನು ಈ ಕಾರು ಚಾಲಕನನ್ನು ಬಳಸಿಕೊಂಡು ಚಿತ್ರ ರಂಗದ ಆ ವ್ಯಕ್ತಿ ಕೃತ್ಯವನ್ನು ಎಸಗಿದ್ದನಾ ಎಂಬ ಶಂಕೆ ವ್ಯಕ್ತವಾಗಿದೆ.  ಇದೊಂದು ಪ್ರೀ ಪ್ಲಾನ್ ಕೃತ್ಯ ಎಂಬುದಕ್ಕೆ ಸಿಸ್ಟಂ ಟೈಪಿಂಗ್ ಪತ್ರವೇ ಸಾಕ್ಷಿಯಾಗಿದೆ.  ಕೈ ಬರಹ ಪತ್ರವನ್ನು ಕಳಿಸಿದರೆ ಸಾಕ್ಷಿ ಸಿಗುತ್ತೆ ಎಂಬ ಕಾರಣಕ್ಕೆ ಟೈಪ್ ಮಾಡಿ ಆ ಪತ್ರವನ್ನು ಪೋಸ್ಟ್ ಮಾಡಲಾಗಿದೆ. ಪೊಲೀಸರು ದೂರು ಪಡೆದುಕೊಳ್ಳುವಾಗಲೇ ಇದೊಂದು ಕ್ರಿಮಿನಲ್ ಕಾನ್ಸ್ ಪೆರೆಸಿ ಎಂದು ತಿಳಿದು ಸೆಕ್ಷನ್ 120b ಒಳಸಂಚು ಅಡಿಯಲ್ಲಿ ಕೇಸು ದಾಖಲಿಸಿದ್ದರು. ಸದ್ಯ ಅವರ ಅನುಮಾನ ಕೂಡ ನಿಜವಾಗ್ತಿದೆ ಎಂಬುದಕ್ಕೆ ಸಿಸಿಬಿಗೆ ಸಿಕ್ಕ ಬೇಸಿಕ್ ಇನ್ಪಾರ್ಮೇಷನ್ ಗಳೆ ಸಾಕ್ಷಿಯಾಗಿವೆ.

    ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿಯ ಸೈಬರ್ ವಿಂಗ್ ಕೂಡ ಕೆಲಸ ಮಾಡುತ್ತಿದ್ದು ಮುಂದಿನ ದಿನದಲ್ಲಿ ನಟ ಸುದೀಪ್ ಗೂ ನೊಟೀಸ್ ನೀಡಿ ಹೇಳಿಕೆಗಳನ್ನು ಪಡೆಯಲು ಸಿದ್ಧತೆಯನ್ನ ನಡೆಸುತ್ತಿದ್ದಾರೆ. ಸದ್ಯ ಆ ಕಾರು ಚಾಲಕ ಸಿಕ್ಕ ಬಳಿಕವಷ್ಟೇ ಅಸಲಿ ಸಂಗತಿ ಹೊರ ಬರಬೇಕಿದೆ.

  • ಸುದೀಪ್ ಖಾಸಗಿ ವಿಡಿಯೋ ಲೀಕ್ ಬೆದರಿಕೆ: ಸಿಸಿಬಿಗೆ ಮಹತ್ವದ ಸುಳಿವು

    ಸುದೀಪ್ ಖಾಸಗಿ ವಿಡಿಯೋ ಲೀಕ್ ಬೆದರಿಕೆ: ಸಿಸಿಬಿಗೆ ಮಹತ್ವದ ಸುಳಿವು

    ಖಾಸಗಿ ವಿಡಿಯೋ ಹರಿಬಿಡುವುದಾಗಿ ಕಿಚ್ಚ ಸುದೀಪ್ ಗೆ (Sudeep) ಎರಡು ಬೆದರಿಕೆ ಪತ್ರ (Threat letter) ಬರೆದವರ ಪತ್ತೆಗೆ ಬಲೆ ಬೀಸಿರುವ ಸಿಸಿಬಿ (CCB) ಹಲವರನ್ನು ಕರೆದು ವಿಚಾರಣೆ ನಡೆಸುತ್ತಿದೆ ಎಂದು ಹೇಳಲಾಗುತ್ತಿದೆ. ಈ ಕುರಿತಂತೆ ಜಾಕ್ ಮಂಜು ಮತ್ತು ಸುದೀಪ್ ಅವರಿಂದಲೂ ಹೇಳಿಕೆ ಪಡೆದುಕೊಳ್ಳಲಿದೆಯಂತೆ. ಈಗಾಗಲೇ ಬೆದರಿಕೆ ಹಾಕಿದವರ ಸುಳಿವು ಕೂಡ ಸಿಸಿಬಿಗೆ ಸಿಕ್ಕಿದ್ದು, ಅಧಿಕಾರಿಗಳು ಅವರ ಬೆನ್ನು ಹತ್ತಿದ್ದಾರಂತೆ.

    ತಮ್ಮ ಮನೆಯ ವಿಳಾಸಕ್ಕೆ ಖಾಸಗಿ ವಿಡಿಯೋ ಲೀಕ್ ಮಾಡುವುದಾಗಿ ಬೆದರಿಸಿ ಪತ್ರ ಬರೆದವರು ಬೇರೆ ಯಾರೂ ಅಲ್ಲ, ಅವರು ಸಿನಿಮಾ ರಂಗದವರೇ ಆಗಿದ್ದಾರೆ ಎಂದು ಕಿಚ್ಚ ಸುದೀಪ್ ತಿಳಿಸಿದ್ದಾರೆ.  ಅಲ್ಲದೇ, ಅವರು ಯಾರು ಅಂತಾನೂ ಗೊತ್ತಿದೆ. ಮುಂದಿನ ದಿನಗಳಲ್ಲಿ ಅವರಿಗೆ ಪಾಠ ಕಲಿಸಲಾಗುವುದು ಎಂದು ಸುದೀಪ್ ತಿಳಿಸಿದ್ದಾರೆ. ಯಾವುದರ ಮೂಲಕ ಅವರಿಗೆ ಉತ್ತರ ಕೊಡಬೇಕು ಎನ್ನುವುದು ಗೊತ್ತಿದೆ. ಹಾಗೆಯೇ ಕೊಡುತ್ತೇನೆ ಎಂದು ಮಾಧ್ಯಮಗಳೊಂದಿಗೆ ಸುದೀಪ್ ಮಾತನಾಡಿದರು.

    ಸುದೀಪ್ ಗೆ ಬೆದರಿಕೆ ಪತ್ರ ಬಂದ ಹಿನ್ನೆಲೆಯಲ್ಲಿ ಪುಟ್ಟೇನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಸುದೀಪ್ ಅವರ ಖಾಸಗಿ ವಿಡಿಯೋ ಲೀಕ್ ಮಾಡುವುದಾಗಿ ಮಾರ್ಚ್ 29 ರಂದೇ ಆ ಪತ್ರವನ್ನು ಬರೆದಿದ್ದಾರೆ ಎನ್ನಲಾಗಿದೆ. ಈ ಕುರಿತಂತೆ ಸುದೀಪ್ ಅವರ ಆಪ್ತ ಜಾಕ್ ಮಂಜು ದೂರು ನೀಡಿದ್ದರು.

    ಜಾಕ್ ಮಂಜು (Jack Manju) ನೀಡಿದ ದೂರಿನನ್ವಯ ಪೊಲೀಸರು ಎಫ್.ಐ.ಆರ್ ದಾಖಲಿಸಿದ್ದು, ತನಿಖೆ ನಡೆಸುತ್ತಿದ್ದಾರೆ. ಸುದೀಪ್ ಅವರ ಖಾಸಗಿ ವಿಡಿಯೋ ಲೀಕ್ ಮಾಡುತ್ತೇವೆ ಎನ್ನುವುದರ ಜೊತೆಗೆ  ಕೆಲ ಅವಾಚ್ಯ ಶಬ್ದಗಳನ್ನು ಸಹ ಲೆಟರ್ ನಲ್ಲಿ  ದುಷ್ಕರ್ಮಿಗಳು ಬರೆದಿದ್ದಾರೆ ಎನ್ನಲಾಗುತ್ತಿದೆ. ಈ ಪತ್ರವು ಸುದೀಪ್ ಅವರ ಮ್ಯಾನೇಜರ್ ಜಾಕ್ ಮಂಜುಗೆ ಸಿಕ್ಕಿದ್ದು ಅದನ್ನು ಪೊಲೀಸರಿಗೆ ಹಸ್ತಾಂತರಿಸಿದ್ದಾರೆ. ಜಾಕ್ ಮಂಜು ನೀಡಿದ ದೂರನ್ನು ಆಧರಿಸಿ ಐಪಿಸಿ 504, 506 ಹಾಗೂ ಐಟಿ ಆಕ್ಟ್ ಅಡಿಯಲ್ಲಿ ಪೊಲೀಸರು ಕೇಸ್ ದಾಖಲಿಸಿದ್ದಾರೆ.

  • ಕದ್ರಿ ದೇಗುಲಕ್ಕೆ IRCಯಿಂದ ಬೆದರಿಕೆ ಪತ್ರ – ದೇಗುಲದ ಮಂಡಳಿಯಿಂದ ದೂರು

    ಕದ್ರಿ ದೇಗುಲಕ್ಕೆ IRCಯಿಂದ ಬೆದರಿಕೆ ಪತ್ರ – ದೇಗುಲದ ಮಂಡಳಿಯಿಂದ ದೂರು

    ಮಂಗಳೂರು: ಆಟೋ ರಿಕ್ಷಾ ಬಾಂಬ್ ಸ್ಪೋಟ (Auto Rikshaw Blast) ದಲ್ಲಿ ಕದ್ರಿ ದೇವಸ್ಥಾನ (Kadri Temple) ಟಾರ್ಗೆಟ್ ವಿಚಾರ ಸಂಬಂಧ ಇದೀಗ ಕದ್ರಿ ದೇವಸ್ಥಾನದ ಕಾರ್ಯ ನಿರ್ವಾಹಣಾಧಿಕಾರಿಯು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

    ಸಾಮಾಜಿಕ ಜಾಲತಾಣ (Social Media) ದಲ್ಲಿ ಸಂದೇಶಗಳು ಹರಿದಾಡುತ್ತಿರುವುದು ಕಂಡುಬಂದಿದೆ. ಕದ್ರಿ ಮಂಜುನಾಥೇಶ್ವರ ದೇವಸ್ಥಾನಕ್ಕೆ ಪ್ರತಿದಿನ ಸಾವಿರಾರು ಭಕ್ತರು ಬರುತ್ತಿದ್ದಾರೆ. ಇಸ್ಲಾಮಿಕ್ ರೆಸಿಸ್ಟೆನ್ಸ್ ಕೌನ್ಸಿಲ್ (Islamic Resistance Council) ಕದ್ರಿ ದೇವಸ್ಥಾನದ ಮೇಲೆ ಬಾಂಬ್ ಬೆದರಿಕೆ ಹಾಕಿದೆ. ಇದನ್ನು ಗಂಭೀರವಾಗಿ ಪರಿಗಣಿಸಿ ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಿ. ಅಲ್ಲದೇ ದೇವಸ್ಥಾನಕ್ಕೆ ಸೂಕ್ತ ಭದ್ರತೆಯನ್ನು ಒದಗಿಸಬೇಕೆಂದು ಕಾರ್ಯ ನಿರ್ವಾಹಣಾಧಿಕಾರಿ ಜಯಮ್ಮ ಕದ್ರಿ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ಕುಕ್ಕರ್‌ ಬಾಂಬ್‌ ಸ್ಫೋಟಕ್ಕೂ ಮುನ್ನ ದಿನ ಕರಾವಳಿಯಲ್ಲಿ ರಿಂಗಣಿಸಿದ್ದ ಸ್ಯಾಟಲೈಟ್‌ ಫೋನ್‌

    ಸದ್ಯ ಜಯಮ್ಮ ದೂರನ್ನು ಕದ್ರಿ ಠಾಣೆ ಪೊಲೀಸರು ಸ್ವೀಕರಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬಾಂಬ್ ಸ್ಫೋಟದ ಹೊಣೆ ಹೊತ್ತುಕೊಂಡ ಇಸ್ಲಾಮಿಕ್ ರೆಸಿಸ್ಟನ್ಸ್ ಕೌನ್ಸಿಲ್ ಉಗ್ರ ಸಂಘಟನೆಯ ಟಾರ್ಗೆಟ್ ಆಗಿದ್ದು ಕದ್ರಿ ದೇವಸ್ಥಾನ ಅಂತ ಪೋಸ್ಟ್ ಮಾಡಿತ್ತು. ಅರೇಬಿಕ್ ಭಾಷೆಯಲ್ಲಿ ಬರೆದುಕೊಂಡು ತಮ್ಮ ಟಾರ್ಗೆಟ್ ಕದ್ರಿ ದೇವಸ್ಥಾನ ಆಗಿತ್ತು ಎಂದು ಉಗ್ರರು ಹೇಳಿರುವುದರಿಂದ ಈ ದೂರು ನೀಡಲಾಗಿದೆ. ಇದನ್ನೂ ಓದಿ: ಕದ್ರಿ ದೇವಸ್ಥಾನ ಮಾತ್ರವಲ್ಲ 6 ಸ್ಥಳಗಳು ಟಾರ್ಗೆಟ್‌ – ಮೊಬೈಲ್‌ನಲ್ಲಿ 6 ಜಾಗ ಸರ್ಚ್‌ ಮಾಡಿದ್ದ ಬಾಂಬರ್‌

    Live Tv
    [brid partner=56869869 player=32851 video=960834 autoplay=true]

  • ಗೊಡ್ಡು ಬೆದರಿಕೆಗಳಿಗೆ, ಹೇಡಿಗಳಿಗೆ ಹೆದರಲ್ಲ: ಬೆದರಿಕೆ ಪತ್ರಕ್ಕೆ ಈಶ್ವರಪ್ಪ ರಿಯಾಕ್ಟ್

    ಗೊಡ್ಡು ಬೆದರಿಕೆಗಳಿಗೆ, ಹೇಡಿಗಳಿಗೆ ಹೆದರಲ್ಲ: ಬೆದರಿಕೆ ಪತ್ರಕ್ಕೆ ಈಶ್ವರಪ್ಪ ರಿಯಾಕ್ಟ್

    ಶಿವಮೊಗ್ಗ: ಬೆದರಿಕೆ ಪತ್ರವೊಂದು ಬಂದಿದ್ದು, ಅದರಲ್ಲಿ ನಾಲಿಗೆ ಕಟ್ ಮಾಡುತ್ತೇನೆ ಅಂತಾ ಬರೆಯಲಾಗಿದೆ. ಈ ರೀತಿಯ ಗೊಡ್ಡು ಬೆದರಿಕೆಗಳಿಗೆ, ಹೇಡಿಗಳಿಗೆ ನಾನು ಹೆದರಲ್ಲ, ಬಗ್ಗಲ್ಲ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.

    ಅನಾಮಧೇಯ ಬೆದರಿಕೆ ಪತ್ರ ವಿಚಾರ ಸಂಬಂಧ ಪ್ರತಿಕ್ರಿಯಿಸಿದ ಅವರು, ಯಾರೋ ಹೇಡಿಗಳು ಅನಾಮಧೇಯ ಬೆದರಿಕೆ ಪತ್ರ ಬರೆದಿದ್ದಾರೆ. ಟಿಪ್ಪು ಸುಲ್ತಾನ್ ಗೆ ಮುಸ್ಲಿಂ ಗೂಂಡಾ ಅಂತಾ ಕರೆದಿದ್ದೇನೆ ಅಂತಾ ಉಲ್ಲೇಖ ಮಾಡಿದ್ದಾರೆ. ಈ ಹೇಡಿ ಬಗ್ಗೆ ತನಿಖೆ ಮಾಡುವಂತೆ ಪೊಲೀಸ್ ವರಿಷ್ಠಾಧಿಕಾರಿಗೆ ದೂರು ನೀಡಿದ್ದೇನೆ ಎಂದರು.

    ಪೊಲೀಸರು ಕ್ರಮ ಕೈಗೊಳ್ಳುತ್ತಾರೆ ಎಂಬ ಭರವಸೆ, ವಿಶ್ವಾಸ ಇದೆ. ಈ ಪತ್ರ ನಮ್ಮ ರಾಜ್ಯದಿಂದಲೇ ಬಂದಿರೋದು. ಹೆಚ್ಚಿನ ಭದ್ರತೆ ಅವಶ್ಯಕತೆ ಏನಿಲ್ಲ. ಗೂಂಡಾಗಳಿಗೆ ಗೂಂಡಾ ಅಂತಾ ಕರೆಯದೇ ಬೇರೆ ಪದ ಬಳಸಲು ಆಗುತ್ತದಾ ಎಂದು ಈಶ್ವರಪ್ಪ ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ನಾಲಿಗೆ ಕಟ್ ಮಾಡ್ತೀವಿ ಹುಷಾರ್ ಮಗನೇ ಬಾಲ ಬಿಚ್ಬೇಡ- ಈಶ್ವರಪ್ಪಗೆ ಬೆದರಿಕೆ ಪತ್ರ

    ಬೆದರಿಕೆ ಪತ್ರದಲ್ಲೇನಿದೆ..?: ಸ್ವಾತಂತ್ರ್ಯ ಸೇನಾನಿಯಾದ ನಮ್ಮ ಸಮಾಜದ ಟಿಪ್ಪು ಸುಲ್ತಾನ್ ಬಗ್ಗೆ ನಿನ್ನ ಬಾಯಿಂದ ”ಮುಸ್ಲಿಂ ಗೂಂಡಾ” ಅಂತಾ ಹೇಳಿದ್ದೀಯಲ್ಲ, ಹಾವೇರಿ ಜಿಲ್ಲೆ ಬ್ಯಾಡಗಿ ತಾಲೂಕಿನ ಮೋಟೆಬೆನ್ನೂರಿನ ಕಾಲೇಜಿಗೆ ಕಟ್ಟಡ ಕಟ್ಟಲು ನಮ್ಮ ಮುಸ್ಲಿಂ ಸಿಮೆಂಟ್ ಬ್ರಿಕ್ಸ್ ಬೇಕು ನಿನಗೆ. ಆದರೆ ಮುಸ್ಲಿಮರು ಮಾತ್ರ ಬೇಡ ಮಗನೆ ನಾಚಿಕೆಯಾಗಬೇಕು. ನಾಲಿಗೆ ಕಟ್ ಮಾಡುತ್ತೇವೆ ಹುಷಾರ್ ಮಗನೆ ಬಾಲ ಬಿಚ್ಚಬೇಡ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

    ಬೆದರಿಕೆ ಪತ್ರ ಬಂದ ಬೆನ್ನಲ್ಲೇ ಈಶ್ವರಪ್ಪ ಅವರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಿಪ್ರಸಾದ್ ಅವರಿಗೆ ದೂರು ನೀಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ನಾಲಿಗೆ ಕಟ್ ಮಾಡ್ತೀವಿ ಹುಷಾರ್ ಮಗನೇ ಬಾಲ ಬಿಚ್ಬೇಡ- ಈಶ್ವರಪ್ಪಗೆ ಬೆದರಿಕೆ ಪತ್ರ

    ನಾಲಿಗೆ ಕಟ್ ಮಾಡ್ತೀವಿ ಹುಷಾರ್ ಮಗನೇ ಬಾಲ ಬಿಚ್ಬೇಡ- ಈಶ್ವರಪ್ಪಗೆ ಬೆದರಿಕೆ ಪತ್ರ

    ಶಿವಮೊಗ್ಗ: ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಅವರಿಗೆ ಬೆದರಿಕೆ ಪತ್ರವೊಂದು ಬಂದಿದೆ.

    ಅನಾಮಧೇಯ ವ್ಯಕ್ತಿಯಿಂದ ಈ ಬೆದರಿಕೆ ಪತ್ರ ಬಂದಿದ್ದು, ಮಾಜಿ ಸಚಿವರ ಶಿವಮೊಗ್ಗದ ನಿವಾಸಕ್ಕೆ ಪೋಸ್ಟ್ ಮೂಲಕ ಪತ್ರ ರವಾನೆಯಾಗಿದೆ. ಸದ್ಯ ಬೆದರಿಕೆ ಪತ್ರ ಬಂದ ಬೆನ್ನಲ್ಲೇ ಈಶ್ವರಪ್ಪ ಅವರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಿಪ್ರಸಾದ್ ಅವರಿಗೆ ದೂರು ನೀಡಿದ್ದಾರೆ. ಇದನ್ನೂ ಓದಿ: ಸತೀಶ್ ಜಾರಕಿಹೊಳಿ ವಿರುದ್ಧ ಬಿಜೆಪಿಯಲ್ಲಿ ಟಿಕೆಟ್ ಫೈಟ್- ಹುಟ್ಟುಹಬ್ಬ ಆಚರಿಸಿಕೊಂಡು ಶಕ್ತಿ ಪ್ರದರ್ಶನ

    ಪತ್ರದಲ್ಲೇನಿದೆ..?: ಸ್ವಾತಂತ್ರ್ಯ ಸೇನಾನಿಯಾದ ನಮ್ಮ ಸಮಾಜದ ಟಿಪ್ಪು ಸುಲ್ತಾನ್ ಬಗ್ಗೆ ನಿನ್ನ ಬಾಯಿಂದ ”ಮುಸ್ಲಿಂ ಗೂಂಡಾ” ಅಂತಾ ಹೇಳಿದ್ದೀಯಲ್ಲ, ಹಾವೇರಿ ಜಿಲ್ಲೆ ಬ್ಯಾಡಗಿ ತಾಲೂಕಿನ ಮೋಟೆಬೆನ್ನೂರಿನ ಕಾಲೇಜಿಗೆ ಕಟ್ಟಡ ಕಟ್ಟಲು ನಮ್ಮ ಮುಸ್ಲಿಂ ಸಿಮೆಂಟ್ ಬ್ರಿಕ್ಸ್ ಬೇಕು ನಿನಗೆ. ಆದರೆ ಮುಸ್ಲಿಮರು ಮಾತ್ರ ಬೇಡ ಮಗನೆ ನಾಚಿಕೆಯಾಗಬೇಕು. ನಾಲಿಗೆ ಕಟ್ ಮಾಡುತ್ತೇವೆ ಹುಷಾರ್ ಮಗನೆ ಬಾಲ ಬಿಚ್ಚಬೇಡ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

    Live Tv
    [brid partner=56869869 player=32851 video=960834 autoplay=true]