Tag: thriller cinema

  • ಥ್ರಿಲ್ಲರ್ ಸಿನಿಮಾಗೆ ಪ್ರಿಯಾಂಕ ಉಪೇಂದ್ರ ನಾಯಕಿ

    ಥ್ರಿಲ್ಲರ್ ಸಿನಿಮಾಗೆ ಪ್ರಿಯಾಂಕ ಉಪೇಂದ್ರ ನಾಯಕಿ

    ಮ್ಮ ಅಮೋಘ ಅಭಿನಯದ ಮೂಲಕ ಜನಮನ ಸೂರೆಗೊಂಡಿರುವ ಪ್ರಿಯಾಂಕ ಉಪೇಂದ್ರ ಅಭಿನಯದ “ಕರ್ತ ಕರ್ಮ ಕ್ರಿಯ” ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗೆ ಜಯನಗರದ ಶ್ರೀವಿನಾಯಕ ದೇವಾಲಯದಲ್ಲಿ ನಡೆಯಿತು. ಪ್ರಿಯಾಂಕ ಉಪೇಂದ್ರ ‌ಸೇರಿದಂತೆ ಚಿತ್ರತಂಡದ ಸದಸ್ಯರು ಮುಹೂರ್ತ ಸಮಾರಂಭದಲ್ಲಿ ಭಾಗವಹಿಸಿದ್ದರು.

    ವೇದಾಂತ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ವೇದಾಂತ್ ಗೌಡ ಹಾಗೂ ಶಿವ ರೆಡ್ಡಿ ನಿರ್ಮಿಸುತ್ತಿರುವ ಈ ಚಿತ್ರವನ್ನು ರಾಜಕಿರಣ್ ಜೆ ನಿರ್ದೇಶಿಸುತ್ತಿದ್ದಾರೆ. ಈ ಹಿಂದೆ ಪ್ರಿಯಾಂಕ ಉಪೇಂದ್ರ ನಟಿಸಿದ್ದ 1980 ಚಿತ್ರವನ್ನು ನಿರ್ದೇಶಿಸಿದ್ದ ರಾಜಕಿರಣ್ ಅವರಿಗೆ ಇದು ಎರಡನೇ ಚಿತ್ರ. ಇದನ್ನೂ ಓದಿ:ಐದು ಭಾಷೆ, ಐದು ಸ್ಟಾರ್ ನಟರಿಂದ ಕಿಚ್ಚನ ವಿಕ್ರಾಂತ್ ರೋಣ ಟ್ರೈಲರ್ ರಿಲೀಸ್

    ಕ್ರೈಂಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರದ ಚಿತ್ರೀಕರಣ  ಜುಲೈ ಮೊದಲವಾರದಲ್ಲಿ ಆರಂಭವಾಗಲಿದೆ. ಬೆಂಗಳೂರು ಹಾಗೂ ದಾವಣಗೆರೆಯಲ್ಲಿ ಚಿತ್ರೀಕರಣ ನಡೆಯಲಿದೆ. “ಕರ್ತ ಕರ್ಮ ಕ್ರಿಯ” ವಿಭಿನ್ನ ಶೀರ್ಷಿಕೆ. ಇಲ್ಲಿ ಮಾಡಿದ ತಪ್ಪಿಗೆ ಇಲ್ಲೇ ಶಿಕ್ಷೆ ಅನುಭವಿಸಬೇಕು ಎಂಬ ಮಾತಿಗೆ ಅನುಗುಣವಾಗಿ ಕಥೆ ಹೆಣೆಯಲಾಗಿದೆ ಎನ್ನುತ್ತಾರೆ ನಿರ್ದೇಶಕ ರಾಜಕಿರಣ್.

    ಜೀವ ಆಂಟೋನಿ ಛಾಯಾಗ್ರಹಣ, ಆನಂದರಾಜ್ ವಿಕ್ರಮ್ ಸಂಗೀತ ನಿರ್ದೇಶನ, ಲೋಕೇಶ್ ಪುಟ್ಟೇಗೌಡ ಸಂಕಲನ ಹಾಗೂ ಪುಷ್ಪರಾಜ್ ಅವರ ಸಾಹಸ ನಿರ್ದೇಶನವಿರುವ ಈ ಚಿತ್ರಕ್ಕೆ ಎಸ್ ನರೇಂದ್ರಬಾಬು ಸಂಭಾಷಣೆ ಬರೆಯುತ್ತಿದ್ದಾರೆ.

    Live Tv

  • ಪೂಜಾ ಗಾಂಧಿಯ `ಸಂಹಾರಿಣಿ’ ಚಿತ್ರೀಕರಣ ಪೂರ್ಣ

    ಪೂಜಾ ಗಾಂಧಿಯ `ಸಂಹಾರಿಣಿ’ ಚಿತ್ರೀಕರಣ ಪೂರ್ಣ

    ಅಂದು `ದಂಡು ಪಾಳ್ಯ’ ಸಿನಿಮಾದಲ್ಲಿ ನಿರ್ಭಯವಾಗಿ ಅಭಿನಯಿಸಿದ್ದವರು ಪೂಜಾ ಗಾಂಧಿ. ಈಗ ಪೂಜಾ ಗಾಂಧಿ `ಸಂಹಾರಿಣಿ’ ಎಂಬ ಸಾಹಸ ಪ್ರಧಾನ ಸಿನಿಮಾದಲ್ಲಿ ಅಭಿನಯಿಸಿದ್ದು, ಈ ಚಿತ್ರದ ಚಿತ್ರೀಕರಣವೀಗ ಸಂಪೂರ್ಣಗೊಂಡಿದೆ.

    2 ಎಂ ಸಿನಿಮಾಸ್ ಬ್ಯಾನರ್ ಅಡಿಯಲ್ಲಿ, ಕೆ ವಿ ಶಭರೀಶ್ ನಿರ್ಮಾಣ ಮಾಡಿರುವ, ಥ್ರಿಲ್ಲರ್ ಅಂಶಗಳನ್ನು ಒಳಗೊಂಡಿರುವ ಈ ಚಿತ್ರವನ್ನು ಕೆ ಜವಾಹರ್ ನಿರ್ದೇಶನ ಮಾಡಿದ್ದಾರೆ.

    ಬಾಲಿವುಡ್ ಸಿನಿಮಾಗಳ ಪ್ರಸಿದ್ಧ ಖಳ ನಟ ರಾಹುಲ್ ದೇವ್, ರವಿ ಕಾಳೆ, ಹ್ಯಾರಿ ಜೋಶ್ ಈ ಚಿತ್ರದಲ್ಲಿ ಖಳನಟರಾಗಿ ಪಾತ್ರ ನಿರ್ವಹಿಸಿದ್ದಾರೆ. ನಟ ಕಿಶೋರ್ ಪ್ರಧಾನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಸಚಿನ್ ಹಾಗೂ ಅರುಣ್ ಪೋಷಕ ಕಲಾವಿದರಾಗಿ ಅಭಿನಯಿಸಿದ್ದಾರೆ.

    ಮಾಸ್ ಮಾದ ಸಾಹಸ, ಡಾ. ವಿ.ನಾಗೇಂದ್ರ ಪ್ರಸಾದ್ ಗೀತ ಸಾಹಿತ್ಯ, ಅಖಿಲ್ ಸಂಕಲನ, ವಿ 2 ಸಂಗೀತ ನಿರ್ದೇಶನ, ರಾಜೇಶ್ ಕುಮಾರ್ ಅವರು ಛಾಯಾಗ್ರಹಣ ಮಾಡಿದ್ದಾರೆ. ಗಂಗಾಧರ್ ನಿರ್ಮಾಣ ನಿರ್ವಹಣೆ ಇರುವ ಈ ಚಿತ್ರದ ಪ್ರಚಾರ ಕಲೆ ಲಕ್ಕಿ, ಸ್ಥಿರ ಛಾಯಾಗ್ರಹಣ ಸುರೇಶ್ ಮೆರ್ಲಿನ್ ಅವರು ಮಾಡಿದ್ದಾರೆ.