Tag: Thrissur

  • ನನ್ನ ಬಗ್ಗೆ ತಪ್ಪು ವರದಿಯಾಗಿದೆ, ಕೇರಳದ ಅಭಿವೃದ್ಧಿಗೆ ಬದ್ಧ: ರಾಜೀನಾಮೆ ವಿಚಾರಕ್ಕೆ ಸುರೇಶ್‌ ಗೋಪಿ ಸ್ಪಷ್ಟನೆ

    ನನ್ನ ಬಗ್ಗೆ ತಪ್ಪು ವರದಿಯಾಗಿದೆ, ಕೇರಳದ ಅಭಿವೃದ್ಧಿಗೆ ಬದ್ಧ: ರಾಜೀನಾಮೆ ವಿಚಾರಕ್ಕೆ ಸುರೇಶ್‌ ಗೋಪಿ ಸ್ಪಷ್ಟನೆ

    ನವದೆಹಲಿ: ನನ್ನ ಬಗ್ಗೆ ಕೆಲ ಮಾಧ್ಯಮಗಳಲ್ಲಿ ತಪ್ಪು ವರದಿ ಬರುತ್ತಿದೆ ಎಂದು ತ್ರಿಶೂರು (Thrissur) ಬಿಜೆಪಿ ಸಂಸದ ಸುರೇಶ್‌ ಗೋಪಿ (Suresh Gopi) ಹೇಳಿದ್ದಾರೆ.

    ಈ ಸಂಬಂಧ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ ಅವರು ನಾನು ಕೌನ್ಸಿಲ್‌ ಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಎಂಬ ವರದಿ ಕೆಲ ಮಾಧ್ಯಮಗಳಲ್ಲಿ ಪ್ರಕಟವಾಗುತ್ತಿದೆ. ಇದು ತಪ್ಪು. ಪಿಎಂ ನರೇಂದ್ರ ಮೋದಿ (PM Narendra Modi) ಅವರ ನೇತೃತ್ವದಲ್ಲಿ ನಾವು ಕೇರಳದ ಅಭಿವೃದ್ಧಿ ಮತ್ತು ಸಮೃದ್ಧಿಗೆ ಬದ್ಧರಾಗಿದ್ದೇವೆ ಎಂದು ಸ್ಪಷ್ಟನೆ ನೀಡಿದ್ದಾರೆ.


    ಸುರೇಶ್‌ ಗೋಪಿ ಅವರು ಭಾನುವಾರ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದರು. ಆದರೆ ಇಂದು ನನಗೆ ಮಂತ್ರಿ ಸ್ಥಾನ ಬೇಡ ಎಂದು ಹೇಳಿರುವುದಾಗಿ ವರದಿಯಾಗಿತ್ತು.

    ತ್ರಿಶೂರ್ ಜನರಿಗಾಗಿ ಸಂಸದನಾಗಿ ಕೆಲಸ ಮಾಡಲು ನಾನು ಬಯಸುತ್ತೇನೆ. ಸಂಸದನಾಗಿ ಕೆಲಸ ಮಾಡುವುದೇ ನನ್ನ ಗುರಿ, ನಾನು ಏನನ್ನೂ ಕೇಳಿಲ್ಲ, ನನಗೆ ಈ ಹುದ್ದೆ ಬೇಕಾಗಿಲ್ಲ ಎಂದು ಹೇಳಿರುವಾಗಿ ವರದಿ ತಿಳಿಸಿತ್ತು. ಇದನ್ನೂ ಓದಿ: ನನಗೆ ಯಾರೂ ಹಿತಶತ್ರುಗಳಿಲ್ಲ, ನನಗೆ ನಾನೇ ಶತ್ರು, ಸೋಲಿಗೆ ನಾನೇ ಹೊಣೆ: ಡಿಕೆ ಸುರೇಶ್

    ಸುರೇಶ್‌ ಗೋಪಿ ಈಗಾಗಲೇ ಕೆಲ ಚಲನಚಿತ್ರಗಳಿಗೆ ಸಹಿ ಹಾಕಿದ್ದಾರೆ. ಸಹಿ ಹಾಕಿದ ಎಲ್ಲಾ ಚಲನ ಚಿತ್ರಗಳ ಕೆಲಸ ಪೂರ್ಣಗೊಂಡ ನಂತರ ಮಂತ್ರಿಯಾಗಿ ಮುಂದುವರಿಯಲಿದ್ದಾರೆ ಎಂದು ವರದಿಯಾಗಿದೆ.

     

  • ಕೇರಳದಲ್ಲಿ ಮೊದಲ ಬಾರಿಗೆ ಅರಳಿದ ಕಮಲ – ಸುರೇಶ್‌ ಗೋಪಿಗೆ ಗೆಲುವು

    ಕೇರಳದಲ್ಲಿ ಮೊದಲ ಬಾರಿಗೆ ಅರಳಿದ ಕಮಲ – ಸುರೇಶ್‌ ಗೋಪಿಗೆ ಗೆಲುವು

    ತಿರುವನಂತಪುರಂ: ಕೇರಳದಲ್ಲಿ (Kerala) ಮೊದಲ ಬಾರಿಗೆ ಕಮಲ ಅರಳಿದೆ. ತ್ರಿಶ್ಯೂರ್‌ನಲ್ಲಿ (Thrissur) ಸುರೇಶ್‌ ಗೋಪಿ (Suresh Gopi) ಜಯಗಳಿಸಿದ್ದಾರೆ.

    74 ಸಾವಿರ ಮತಗಳ ಅಂತರದಿಂದ ಸುರೇಶ್‌ ಗೋಪಿ ಜಯಗಳಿಸಿದ್ದಾರೆ. ಸುರೇಶ್‌ ಗೋಪಿ 4,09,302 ಮತಗಳನ್ನು ಪಡೆದರೆ ಸಮೀಪದ ಪ್ರತಿ ಸ್ಪರ್ಧಿ ಸಿಪಿಐ ವಿಎಸ್‌ ಸುನಿಲ್‌ ಕುಮಾರ್‌ 3,34,462 ಮತಗಳನ್ನು ಪಡೆದಿದ್ದಾರೆ. ಕಾಂಗ್ರೆಸ್‌ನ (Congress) ಕೆ ಮುರಳೀಧರನ್‌ 3,22,102 ಮತಗಳನ್ನು ಗಳಿಸಿದ್ದಾರೆ.

    2019ರ ಚುನಾವಣೆಯಲ್ಲಿ ಕಾಂಗ್ರೆಸ್‌ನ ಪ್ರತಾಪನ್‌ ಜಯಗಳಿಸಿದ್ದರು. ಸುರೇಶ್‌ ಗೋಪಿ 2,93,822 ಮತಗಳನ್ನು ಪಡೆದು ಮೂರನೇ ಸ್ಥಾನ ಪಡೆದಿದ್ದರು.

    ಕೇರಳದಲ್ಲಿ ಬಿಜೆಪಿ ಗೆಲ್ಲಿಸಲೇಬೇಕೆಂದು ಸುರೇಶ್‌ ಗೋಪಿ ಅವರಿಗೆ ಬಿಜೆಪಿ ರಾಜ್ಯಸಭಾ ಸ್ಥಾನಮಾನ ನೀಡಿತ್ತು. 2016 ರಿಂದ 2022ವರೆಗೆ ಸುರೇಶ್‌ ಗೋಪಿ ರಾಜ್ಯಸಭಾ ಸದಸ್ಯರಾಗಿ ಈ ಕ್ಷೇತ್ರದಲ್ಲಿ ಬಹಳಷ್ಟು ಕೆಲಸ ಮಾಡಿದ್ದರು.

  • ಕೇರಳ ಪ್ರವಾಹ – ಮಾರುತಿ ಸುಜುಕಿಯ 357 ಹೊಸ ಕಾರುಗಳು ಗುಜುರಿಗೆ!

    ಕೇರಳ ಪ್ರವಾಹ – ಮಾರುತಿ ಸುಜುಕಿಯ 357 ಹೊಸ ಕಾರುಗಳು ಗುಜುರಿಗೆ!

    ತಿರುವನಂತಪುರ: ಕೇರಳ ಪ್ರವಾಹಕ್ಕೆ ಒಂದೇ ಕಾರ್ ಶೋರೂಂನ 357 ಹೊಸ ಕಾರುಗಳು ಸಂಪೂರ್ಣ ಹಾಳಾಗಿದ್ದು, ಎಲ್ಲಾ ಕಾರುಗಳನ್ನು ಗುಜುರಿಗೆ ಹಾಕಲು ಶೋರೂಂ ಮಾಲೀಕರು ನಿರ್ಧರಿಸಿದ್ದಾರೆ.

    ಪ್ರವಾಹದಿಂದಾಗಿ ತ್ರಿಶೂರ್ ನ ಮಾರುತಿ ಸುಜುಕಿ ಕಾರು ಡೀಲರ್ ಬಿಆರ್‌ಡಿ ಕಾರ್ ವರ್ಲ್ಡ್ ಶೋರಂನ ಒಟ್ಟು 357 ಹೊಸ ಕಾರುಗಳೂ ನೀರಿನಿಂದ ತುಂಬಿಕೊಂಡು ಸಂಪೂರ್ಣ ಹಾಳಾಗಿ ಹೋಗಿದೆ. ಇದಲ್ಲದೇ 147 ಬಳಸಿದ ಕಾರುಗಳು ಹಾಗೂ 110 ಗ್ರಾಹಕರ ವಾಹನಗಳಿಗಾಗಿರುವ ಹಾನಿಯ ಬಗ್ಗೆಯೂ ಸಹ ವಿಮೆ ಸಮೀಕ್ಷಕರು ಮೌಲ್ಯಮಾಪನ ನಡೆಸುತ್ತಿದ್ದಾರೆ.

    ನಷ್ಟವಾದ 357 ಹೊಸ ಕಾರುಗಳ ಮಾರುಕಟ್ಟೆ ಮೌಲ್ಯ ಜಿಎಸ್‍ಟಿ ಸೇರಿದಂತೆ ಒಟ್ಟು 28.75 ಕೋಟಿ ರೂಪಾಯಿಯಾಗಿದೆ. ಅಲ್ಲದೇ ಶೋರೂಮಿನಲ್ಲಿ ಸುಮಾರು 500 ಹೊಸ ಕಾರುಗಳನ್ನು ಶೇಖರಿಸಿ ಇಡಲಾಗಿತ್ತು, ನೀರಿನ ಪ್ರಮಾಣ ಹೆಚ್ಚಾದ ಕಾರಣ ಕೆಲವು ಕಾರುಗಳನ್ನು ಮಾತ್ರ ಸುರಕ್ಷತಾ ಸ್ಥಳಕ್ಕೆ ರವಾನೆ ಮಾಡಲಾಗಿತ್ತು ಎಂದು ತಿಳಿದು ಬಂದಿದೆ.

    ಈ ಎಲ್ಲಾ ಕಾರುಗಳಲ್ಲಿ ಡ್ಯಾಶ್‍ಬೋರ್ಡ್‍ನವರೆಗೂ ನೀರು ತುಂಬಿದ್ದ ಕಾರಣ ವಿಮಾ ಸಂಸ್ಥೆಯವರು `ಸಿ’ ವಿಭಾಗದಡಿ ಸೇರಿಸಿ ಸಂಪೂರ್ಣ ನಷ್ಟ ಎಂದು ವರದಿ ನೀಡಿದ್ದಾರೆ. ಹೀಗಾಗಿ ವಾಹನಗಳನ್ನು ಕಡಿಮೆ ಬೆಲೆಗೆ ಪುಣೆ, ಜೈಪುರ ಹಾಗೂ ಅಹಮದಾಬಾದಿನ ಗುಜುರಿದಾರರಿಗೆ ಮಾರಲು ಕಂಪೆನಿ ನಿರ್ಧರಿಸಿದೆ.

    ಈ ಕುರಿತು ಪ್ರತಿಕ್ರಿಯಿಸಿರುವ ಶೋರೂಂ ಅಧಿಕಾರಿಗಳು, ಪ್ರವಾಹದಿಂದ ಸಂಪೂರ್ಣ ಹಾಳಾಗಿರುವ ಕಾರುಗಳ ಮಾರಾಟವನ್ನು ಸಂಪೂರ್ಣವಾಗಿ ನಿಲ್ಲಿಸಿದ್ದೇವೆ. ಅಲ್ಲದೇ ಆ ಕಾರುಗಳ ಮಾರಾಟವನ್ನು ಸಹ ನಿಷೇಧಿಸಲಾಗುತ್ತದೆ. ಅಂತಹ ವಾಹನಗಳು ನಮ್ಮ ಶೋರೂಂಗಳಲ್ಲಿ ಕಾಣಿಸುವುದಿಲ್ಲ ಎಂದು ತಿಳಿಸಿದ್ದಾರೆ.

    ಕೇರಳ ಆಟೋಮೊಬೈಲ್ ಡೀಲರ್ಸ್ ಅಸೋಸಿಯೇಷನ್ ಕಾರ್ಯದರ್ಶಿ ಮನೋಜ್ ಕುರುಪ್ ಮಾತನಾಡಿ, ಪ್ರವಾಹದಲ್ಲಿ ಹಾನಿಯಾಗಿರುವ ವಾಹನಗಳನ್ನು ಮತ್ತೆ ಶೋರೂಂಗಳಲ್ಲಿ ಮಾರಾಟಕ್ಕೆ ಇಡುವುದಿಲ್ಲ. ವಾಹನಗಳು ವಿಮೆಯ ವಿಧಿಗಳ ವ್ಯಾಪ್ತಿಗೆ ಬರುವುದಿಲ್ಲ. ಹೀಗಾಗಿ ಯಾವ ಡೀಲರ್ ಸಹ ಅಂತಹ ವಾಹನಗಳನ್ನು ಮಾರಾಟ ಮಾಡುವುದಿಲ್ಲ. ಕೇರಳದಲ್ಲಿ ಸುರಿದ ಭಾರಿ ಮಳೆಯಿಂದಾಗಿ ಹಲವು ಆಟೋಮೊಬೈಲ್ ಕಂಪನಿಗಳ ಸುಮಾರು 1,000 ಹೊಸ ಕಾರುಗಳು ಹಾಗೂ 7,000 ದಿಂದ 8,000 ಗ್ರಾಹಕರ ಕಾರುಗಳು ಹಾನಿಗೀಡಾಗಿವೆ ಎಂದು ಹೇಳಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv