Tag: Throat

  • ಪಾಕಿಸ್ತಾನದಲ್ಲಿ ಹಿಂದೂ ವೈದ್ಯನ ಕತ್ತು ಸೀಳಿ ಹತ್ಯೆ – 24 ಗಂಟೆಯಲ್ಲಿ ಚಾಲಕನ ಬಂಧನ

    ಪಾಕಿಸ್ತಾನದಲ್ಲಿ ಹಿಂದೂ ವೈದ್ಯನ ಕತ್ತು ಸೀಳಿ ಹತ್ಯೆ – 24 ಗಂಟೆಯಲ್ಲಿ ಚಾಲಕನ ಬಂಧನ

    ಇಸ್ಲಾಮಾಬಾದ್: ಪಾಕಿಸ್ತಾನದ (Pakistan) ಹೈದರಾಬಾದ್‍ನ ವೈದ್ಯನನ್ನು (Doctor) ಮನೆಯೊಳಗೆ ಆತನ ಚಾಲಕ ಕತ್ತು (Throat) ಸೀಳಿ ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿ 24 ಗಂಟೆಯೋಳಗೆ ಆರೋಪಿಯನ್ನು ಬಂಧಿಸಿದ ಘಟನೆ ನಡೆದಿದೆ.

    ಮೃತನನ್ನು ಧರಮ್ ದೇವ್ ರಾಠಿ ಎಂದು ಗುರುತಿಸಲಾಗಿದೆ. ಪಾಕಿಸ್ತಾನದ ಹೈದರಾಬಾದ್‍ನ ವೈದ್ಯನಾಗಿದ್ದ ಧರಮ್ ಠಾಟಿ ಬಳಿ ಹನೀಫ್ ಲೆಘರಿ ಎಂಬಾತ ಚಾಲಕನಾಗಿ (Driver) ಕೆಲಸ ಮಾಡುತ್ತಿದ್ದ. ಆದರೆ ಮನೆಗೆ ಹೋಗುವಾಗ ಧರಮ್ ದೇವ್ ಹಾಗೂ ಹನೀಫ್ ಮಧ್ಯೆ ಜಗಳ ನಡೆದಿತ್ತು.

    ಈ ವೇಳೆ ಮನೆಗೆ ತಲುಪಿದ ನಂತರ ಹನೀಫ್ ಅಡುಗೆ ಮನೆಯಲ್ಲಿದ್ದ ಚಾಕುವನ್ನು ತೆಗೆದುಕೊಂಡು ವೈದ್ಯ ಧರಮ್ ರಾಠಿಯ ಕತ್ತು ಸೀಳಿ, ಹತ್ಯೆ ಮಾಡಿದ್ದಾನೆ. ನಂತರ ಹನೀಫ್ ಸ್ಥಳದಿಂದ ವೈದ್ಯರ ಕಾರಿನಲ್ಲೇ ಪರಾರಿಯಾಗಿದ್ದಾನೆ. ಇದನ್ನೂ ಓದಿ: ಬೆಳಗಾವಿಯಲ್ಲಿ ವಿಚಿತ್ರವಾದ ಎಲೆಕ್ಟ್ರಾನಿಕ್ ಬಲೂನು ಪತ್ತೆ – ಆತಂಕದಲ್ಲಿ ಜನ

    ಹೈದರಾಬಾದ್ ಪ್ರದೇಶದಲ್ಲಿ ಪ್ರಸಿದ್ಧ ಚರ್ಮರೋಗ ವೈದ್ಯನಾಗಿದ್ದ ಡಾ. ಧರಮ್ ದೇವ್ ರಾಠಿ ಹತ್ಯೆಗೆ ಸಂಬಂಧಿಸಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಆರೋಪಿ ಚಾಲಕನನ್ನು ಖೈರ್‌ಪುರದ ಆತನ ಮನೆಯಲ್ಲಿ ಪೊಲೀಸರು ಬಂಧಿಸಿದ್ದಾರೆ. ಇದನ್ನೂ ಓದಿ: ಪಾಕ್ ಇತಿಹಾಸ ಪುಸ್ತಕಗಳಲ್ಲಿ ಭಾರತ, ಹಿಂದೂ ವಿರೋಧಿ ನಿಲುವು – ಪಠ್ಯದಲ್ಲಿ ಗಾಂಧಿ ಹಿಂದೂ ನಾಯಕ ಎಂದು ಪರಿಚಯ

  • ಬೇಯಿಸಿದ ಮೊಟ್ಟೆಯಿಂದ ಪ್ರಾಣ ಬಿಟ್ಟ ಮಹಿಳೆ

    ಬೇಯಿಸಿದ ಮೊಟ್ಟೆಯಿಂದ ಪ್ರಾಣ ಬಿಟ್ಟ ಮಹಿಳೆ

    ಹೈದರಾಬಾದ್: ಊಟದ ವೇಳೆ ಬೇಯಿಸಿದ ಮೊಟ್ಟೆ ತಿನ್ನುವಾಗ ಗಂಟಲಿನಲ್ಲಿ ಸಿಲುಕಿಕೊಂಡು ಉಸಿರುಗಟ್ಟಿ ಮಹಿಳೆ ಮೃತಪಟ್ಟಿರುವ ಘಟನೆ ತೆಲಂಗಾಣದ ನೇರಳಪಲ್ಲಿಯಲ್ಲಿ ನಡೆದಿದೆ.

    ನೀಲಮ್ಮ ಮೃತಳು. ಬೇಯಿಸಿದ ಮೊಟ್ಟೆಯನ್ನು ತಿನ್ನಲು ಹೋಗಿ ಅದು ಗಂಟಲಿನಲ್ಲಿ ಸಿಲುಕಿ ಈಕೆ ಸಾವನ್ನಪ್ಪಿದ್ದಾಳೆ. ಒಂದು ಮೊಟ್ಟೆ ಮಹಿಳೆಯ ಜೀವವನ್ನು ತೆಗೆದಿದೆ. ಇದನ್ನೂ ಓದಿ: ಸೋನಿಯಾ ಗಾಂಧಿ ನಾಯಕತ್ವದಲ್ಲಿ ಸಂಪೂರ್ಣ ನಂಬಿಕೆ ಇದೆ: ಸಿಧು

    ನೀಲಮ್ಮ ಊಟ ಮಾಡುತ್ತಿದ್ದಳು. ಈ ವೇಳೆ ಬೇಯಿಸಿದ ಮೊಟ್ಟೆಯನ್ನು ಕತ್ತರಿಸದೇ, ಹಾಗೇ ದೊಡ್ಡ ಮೊಟ್ಟೆಯನ್ನು ಬಾಯಿಯೊಳಗೆ ಹಾಕಿಕೊಂಡಿದ್ದಾಳೆ. ಈ ವೇಳೆ ಮೊಟ್ಟೆ ನೇರವಾಗಿ ಗಂಟಲಿಗೆ ಹೋಗಿದೆ. ಗಂಟಲಲ್ಲಿ ಮೊಟ್ಟೆ ಸಿಲುಕಿಕೊಂಡಿದೆ. ಆಗ ಮೊಟ್ಟೆ ಗಂಟಲಿನಿಂದ ಕೆಳಗೆ ಜಾರದೇ, ಹೊರಗೆ ಬಾರದೇ ನೀಲಮ್ಮನಿಗೆ ಉಸಿರಾಡಲು ಕಷ್ಟವಾಗಿದೆ. ಈ ಪರಿಣಾಮ ಆಕೆ ಸಾವನ್ನಪ್ಪಿದ್ದಾಳೆ. ಕುಟುಂಬಸ್ಥರು ಆಕೆಯ ಸಾವಿನ ಬಳಿಕ ಮೊಟ್ಟೆಯನ್ನು ಕತ್ತರಿಸಿ ತಿಂದಿದ್ದರೆ ಈ ಅನಾಹುತ ಆಗುತ್ತಿರಲಿಲ್ಲ ಎಂದು ಕಂಬನಿ ಮಿಡಿದಿದ್ದಾರೆ. ಇದನ್ನೂ ಓದಿ: ಮತ್ತೆ ಸರ್ಜಿಕಲ್‌ ಸ್ಟ್ರೈಕ್‌? – ಪಾಕಿಸ್ತಾನಕ್ಕೆ ಅಮಿತ್‌ ಶಾ ಎಚ್ಚರಿಕೆ

  • ತಾನು ನಿರ್ಮಿಸಿದ ಹೆಲಿಕಾಪ್ಟರ್‌ನಿಂದಲೇ ಯುವಕನಿಗೆ ಕಾದಿತ್ತು ಆಪತ್ತು

    ತಾನು ನಿರ್ಮಿಸಿದ ಹೆಲಿಕಾಪ್ಟರ್‌ನಿಂದಲೇ ಯುವಕನಿಗೆ ಕಾದಿತ್ತು ಆಪತ್ತು

    ಮುಂಬೈ: 24 ವರ್ಷದ ಯುವಕರೊಬ್ಬರು ತಾವೇ ನಿರ್ಮಿಸಿದ ಹೆಲಿಕಾಪ್ಟರ್ ಟ್ರಯಲ್ ರನ್ ನೋಡುವ ವೇಳೆ ಅದರ ಬ್ಲೇಡ್ ಗಂಟಲಿಗೆ ತಗುಲಿ ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ.

    ಮಹಾರಾಷ್ಟ್ರದ ಮಹಾಗಾಂವ್ ತಾಲೂಕಿನ ಪುಲ್ಸವಾಂಗಿ ಗ್ರಾಮದ ಶೇಖ್ ಇಸ್ಮಾಯಿಲ್ ಶೇಖ್ ಇಬ್ರಾಹಿಂ 8ನೇ ತರಗತಿಯಲ್ಲಿದ್ದಾಗಲೇ ಶಾಲೆ ತೊರೆದು ಮೆಕ್ಯಾನಿಕ್ ಆಗಿ ಸ್ಟಿಲ್ ಪೈಪ್‍ಗಳನ್ನು ಬೆಸೆಯುವ ಕೆಲಸ ಮಾಡುತ್ತಿದ್ದರು. ಅವರೇ ಸಿಂಗಲ್ ಸೀಟ್ ಇರುವ ಹೆಲಿಕಾಪ್ಟರ್ ಮೂಲ ಮಾದರಿಯೊಂದನ್ನು ನಿರ್ಮಿಸಿದ್ದರು. ಆದರೆ ಹೆಲಿಕಾಪ್ಟರ್ ಹೇಗೆ ಕಾರ್ಯನಿರ್ವಹಿಸುತ್ತದೆ ಎಂದು ಪರೀಕ್ಷಿಸುತ್ತಿದ್ದ ವೇಳೆ ಬ್ಲೇಡ್ ತಗುಲಿ ಅವರ ಗಂಟಲು ಕಟ್ ಆಗಿದೆ. ಈ ಘಟನೆ ಆಗಸ್ಟ್ 10 ರಂದು ಮಹಾರಾಷ್ಟ್ರದ ಯವತ್ಮಲ್ ಜಿಲ್ಲೆಯಲ್ಲಿ ನಡೆದಿದ್ದು, ಗಾಯಗೊಂಡ ಶೇಖ್ ಇಸ್ಮಾಯಿಲ್ ಶೇಖ್ ಇಬ್ರಾಹಿಂಯನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಾಕಾರಿಯಾಗದೇ ಇಸ್ಮಾಯಿಲ್ ಶೇಖ್ ಮೃತಪಟ್ಟಿದ್ದಾರೆ. ಸದ್ಯ ಈ ವಿಚಾರ ಸೋಶಿಯಲ್ ಮೀಡಿಯಾದಲ್ಲಿ ಭಾರೀ ಸುದ್ದಿಯಾಗುತ್ತಿದೆ.

    ಈ ಕುರಿತಂತೆ ಪೊಲೀಸರು, ಮೃತ ವ್ಯಕ್ತಿ 2 ವರ್ಷಗಳ ಹಿಂದೆ ಈ ಹೆಲಿಕಾಪ್ಟರ್‌ನನ್ನು ನಿರ್ಮಿಸಿದ್ದರು. ಅಲ್ಲದೇ ಹೆಲಿಕಾಪ್ಟರ್ ಚಾಪರ್ ಸಿದ್ಧಪಡಿಸಲು ವೆಲ್ಡಿಂಗ್ ಸ್ಟೀಲ್ ಪೈಪ್ ಮತ್ತು ಮಾರುತಿ 800 ಎಂಜಿನ್ ಬಳಸಿದ್ದರು. ಆಗಸ್ಟ್ 15 ಸ್ವಾತಂತ್ರ್ಯ ದಿನದಂದು ಸಾರ್ವಜನಿಕವಾಗಿ ಹೆಲಿಕಾಪ್ಟರ್‍ನನ್ನು ಅನಾವರಣಗೊಳಿಸುವ ಯೋಜನೆ ಹೊಂದಿದ್ದರು ಎಂದು ತಿಳಿಸಿದ್ದಾರೆ. ಇದನ್ನೂ ಓದಿ:ಸರ್ಕಾರ ಸಾರ್ವಜನಿಕ ಗಣೇಶೋತ್ಸವದ ನಿಷೇಧವನ್ನು ಹಿಂಪಡೆಯಬೇಕು: ಶ್ರೀರಾಮಸೇನೆ

    ಈ ಬಗ್ಗೆ ಇಸ್ಮಾಯಿಲ್ ಅವರ ಸಹೋದರ ಮತ್ತು ಮೂವರು ಸ್ನೇಹಿತರನ್ನು ವಿಚಾರಣೆ ನಡೆಸಲಾಗುತ್ತಿದ್ದು, ಸದ್ಯ ಹೆಲಿಕಾಪ್ಟರ್‌ನನ್ನು ಪೊಲೀಸರು ವಶಪಡೆದುಕೊಂಡಿದ್ದಾರೆ. ಇದನ್ನೂ ಓದಿ:BJP ಜೊತೆಗೆ ಟ್ವಿಟ್ಟರ್ ಕೈಜೋಡಿಸಿ ಪ್ರಜಾತಂತ್ರ ಹತ್ತಿಕ್ಕುವ ಕೃತ್ಯದಲ್ಲಿ ತೊಡಗಿದೆ: ಪ್ರಿಯಾಂಕಾ ಗಾಂಧಿ

  • ದೇವಾಲಯಕ್ಕೆ ತೆರಳಿ ನಾಲಿಗೆ ಕತ್ತರಿಸಿ ದೇವರಿಗೆ ಅರ್ಪಿಸಿದ ಯುವಕ

    ದೇವಾಲಯಕ್ಕೆ ತೆರಳಿ ನಾಲಿಗೆ ಕತ್ತರಿಸಿ ದೇವರಿಗೆ ಅರ್ಪಿಸಿದ ಯುವಕ

    – ಇನ್ನೊಂದೆಡೆ ಕತ್ತು ಕುಯ್ದುಕೊಂಡ ವ್ಯಕ್ತಿ
    – ಇಬ್ಬರ ಆರೋಗ್ಯವೂ ಸ್ಥಿರ

    ಲಕ್ನೋ: ಅಚ್ಚರಿಯ ಘಟನೆ ಎಂಬಂತೆ 22 ವರ್ಷದ ಯುವಕನೊಬ್ಬ ದೇವಸ್ಥಾನಕ್ಕೆ ತೆರಳಿ ದೇವರ ಎದುರು ತನ್ನ ನಾಲಿಗೆಯನ್ನು ಕತ್ತರಿಸಿಕೊಂಡು ಅರ್ಪಣೆ ಮಾಡಿದ ಘಟನೆ ಉತ್ತರಪ್ರದೇಶದ ಬಬೇರು ಪ್ರದೇಶದಲ್ಲಿ ನಡೆದಿದೆ.

    ಯುವಕನನ್ನು ಆತ್ಮರಾಮ್ ಎಂದು ಗುರುತಿಸಲಾಗಿದೆ. ಈತ ಶನಿವಾರ ದೇವಸ್ಥಾನಕ್ಕೆ ತೆರಳಿದ್ದಾನೆ. ಬಳಿಕ ಅಲ್ಲಿ ದೇವರ ಮುಂದೆಯೇ ತನ್ನ ನಾಲಿಗೆಯನ್ನು ತಾನೇ ಕತ್ತರಿಸಿಕೊಂಡು ದೇವರಿಗೆ ಅರ್ಪಿಸಿದ್ದಾನೆ. ಘಟನೆಯ ಬಳಿಕ ಕೂಡಲೇ ಆತನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ಯುವಕನ ಆರೋಗ್ಯ ಸ್ಥಿರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    ಈ ಸಂಬಂಧ ಆತ್ಮರಾಮ್ ತಂದೆ ಮಾತನಾಡಿ, ಮಗ ಮಾನಸಿಕ ಅಸ್ವಸ್ಥನಾಗಿದ್ದಾನೆ. ಆತ ನವರಾತ್ರಿ ಉಪವಾಸ ಮಾಡಿದ್ದು, ಈ ಕೃತ್ಯ ಎಸಗಿದ್ದಾನೆ ಎಂದು ಹೇಳಿದ್ದಾರೆ.

    ಇನ್ನೊಂದೆಡೆ 49 ವರ್ಷದ ವ್ಯಕ್ತಿಯೊಬ್ಬರು ಕತ್ತು ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಶಿವನಿಗೆ ತನ್ನನ್ನು ತಾನು ಅರ್ಪಿಸಿಕೊಳ್ಳುವ ಸಲುವಾಗಿ ಈ ಕೃತ್ಯ ಎಸಗಿದ್ದಾರೆ. ಈ ಘಟನೆ ಉತ್ತರಪ್ರದೇಶದ ಕುರಾರ ಪ್ರದೇಶದಲ್ಲಿ ನಡೆದಿದೆ.

    ವ್ಯಕ್ತಿಯನ್ನು ರುಕ್ಮಾನಿ ಮಿಶ್ರಾ ಎಂದು ಗುರುತಿಸಲಾಗಿದ್ದು, ಇವರು ಶನಿವಾರ ರಾತ್ರಿ ಕೋಟೇಶ್ವರ ದೇವಸ್ಥಾನಕ್ಕೆ ತೆರಳಿ ಅಲ್ಲಿ ತನ್ನ ಕತ್ತಿಗೆಯನ್ನು ಚೂರಿಯಿಂದ ಕೊಯ್ದುಕೊಂಡಿದ್ದಾರೆ. ಘಟನೆಯಿಂದ ಗಂಭೀರ ಗಾಯಗೊಂಡಿದ್ದ ರುಕ್ಮಾನಿಯನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಸದ್ಯ ಇವರ ಆರೋಗ್ಯ ಕೂಡ ಸ್ಥಿರವಾಗಿದೆ ಎಂದು ತಿಳಿದುಬಂದಿದೆ.

    ಈ ಎರಡೂ ಪ್ರಕರಣ ಸಂಬಂಧ ತನಿಖೆ ನಡೆಯುತ್ತಿರುವುದಾಗಿ ಎಸ್‍ಪಿ ತಿಳಿಸಿದ್ದಾರೆ.

  • ಮದ್ವೆ ವೇಳೆ ಕೊಟ್ಟಿದ್ದ ಫ್ಲ್ಯಾಟ್ ತನ್ನ ಹೆಸರಿಗೆ ಬರೆದುಕೊಡದಿದ್ದಕ್ಕೆ ಪತ್ನಿಯನ್ನೇ ಕೊಂದ!

    ಮದ್ವೆ ವೇಳೆ ಕೊಟ್ಟಿದ್ದ ಫ್ಲ್ಯಾಟ್ ತನ್ನ ಹೆಸರಿಗೆ ಬರೆದುಕೊಡದಿದ್ದಕ್ಕೆ ಪತ್ನಿಯನ್ನೇ ಕೊಂದ!

    ಹೈದರಾಬಾದ್: ಹೆಚ್ಚಿನ ವರದಕ್ಷಿಣೆಗಾಗಿ ಪತಿಯೊಬ್ಬ ತನ್ನ ಪತ್ನಿಯ ಕತ್ತು ಸೀಳಿ ಬರ್ಬರವಾಗಿ ಕೊಲೆ ಮಾಡಿದ ಘಟನೆ ಹೈದರಾಬಾದ್ ನ ಬಂಜಾರಾ ಹಿಲ್ಸ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

    ಅಸೀಮಾ(19) ಎಂಬಾಕೆಯೇ ತನ್ನ ಪತಿ ಸಿರಾಜ್ ನಿಂದ ಕೊಲೆಯಾದ ದುರ್ದೈವಿ ಮಹಿಳೆ. ಆರೋಪಿ ಸಿರಾಜ್ ಸನತ್ ನಗರ್ ಎಂಬಲ್ಲಿ ವೆಲ್ಡರ್ ಆಗಿ ಕೆಲಸ ಮಾಡುತ್ತಿದ್ದು, ಈತ ಕಳೆದ ವರ್ಷ ಶ್ರೀ ಕಷ್ಣ ನಗರದ ಅಸೀಮಾಳನ್ನು ಮದುವೆಯಾಗಿದ್ದನು.

    ಮದುವೆ ಸಂದರ್ಭದಲ್ಲಿ ಸಿರಾಜ್, ಅಸೀಮಾ ಮನೆಯಿಂದ 1.5 ಲಕ್ಷ ನಗದು, 200 ಗ್ರಾಂ ಚಿನ್ನ ಹಾಗೂ 50 ಲಕ್ಷ ಮೌಲ್ಯದ ಫ್ಲ್ಯಾಟ್ ನ್ನು ವರದಕ್ಷಿಣೆಯಾಗಿ ಪಡೆದಿದ್ದನು. ಇದುವರೆಗೆ ಆ ಫ್ಲ್ಯಾಟ್ ಅಸೀಮಾಳ ಹೆಸರಲ್ಲಿದೆ. ಇದೀಗ ಅದನ್ನು ತನ್ನ ಹೆಸರಿಗೆ ಬರೆದುಕೊಡಬೇಕಾಗಿ ಅಸೀಮಾ ತಂದೆಗೆ ಸಿರಾಜ್ ಪೀಡಿಸುತ್ತಿದ್ದನು.

    ಇದೇ ವಿಚಾರಕ್ಕೆ ಆಗಾಗ ಅಸೀಮಾ ಹಾಗೂ ಪತಿ ಸಿರಾಜ್ ಮಧ್ಯೆ ಜಗಳ ನಡೆಯುತ್ತಿತ್ತು. ಆಗಸ್ಟ್ 18ರಂದು ಕೂಡ ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಜಗಳ ನಡೆದಿತ್ತು. ಗಲಾಟೆ ತಾರಕಕ್ಕೇರಿದ್ದು, ಆಸೀಮಾಳಿಗೆ ಥಳಿಸಿ ಮನೆಯಿಂದ ಹೊರಗೆ ಹಾಕಿದ್ದನು. ಗಂಡನ ಕೃತ್ಯದಿಂದಾಗಿ ಮನೆಯಿಂದ ಹೊರಗಡೆಯಿದ್ದ ಅಸೀಮಾ ತನ್ನ 4 ತಿಂಗಳ ಗಂಡು ಮಗುವಿನೊಂದಿಗೆ ನೇರವಾಗಿ ತವರು ಮನೆಗೆ ತೆರಳಿದ್ದಾಳೆ.

    ಹೀಗೆ ಮನೆಗೆ ತೆರಳಿದ ಅಸೀಮಾ, ನಡೆದ ಘಟನೆಯನ್ನು ತನ್ನ ತಂದೆಯ ಬಳಿ ವಿವರಿಸಿದ್ದಾಳೆ. ಮಗಳ ಅಳಲನ್ನು ಆಲಿಸಿದ ತಂದೆ, ಅಳಿ ಸಿರಾಜ್ ಬಳಿ ಮಾತುಕತೆ ನಡೆಸಿ ಸಂಧಾನ ಮಾಡಿ ಮತ್ತೆ ಮಗಳನ್ನು ಗಂಡನ ಮನೆಗೆ ಕಳುಹಿಸಿದ್ದಾರೆ. ಆದ್ರೆ ಭಾನುವಾರ ಮುಂಜಾನೆ ಕುಟುಂಬಸ್ಥರು ಮಲಗಿದ್ದ ಸಂದರ್ಭದಲ್ಲಿ ಪತಿ ಸಿರಾಜ್ ತಾವು ಮಲಗಿದ್ದ ಕೊಣೆಯ ಬಾಗಿಲು ಹಾಕಿಕೊಂಡು ಪತ್ನಿ ಅಸೀಮಾಳ ಕತ್ತು ಸೀಳಿ ಬರ್ಬರವಾಗಿ ಕೊಲೆ ಮಾಡಿದ್ದಾನೆ. ಘಟನೆಯಿಂದ ಗಂಭೀರವಾಗಿ ಗಾಯಗೊಂಡ ಅಸೀಮಾ ತೀವ್ರ ರಕ್ತಸ್ರಾವದಿಂದಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಕೃತ್ಯದ ಬಳಿಕ ಸಿರಾಜ್ ಹಾಗೂ ಆತನ ಕುಟುಂಬಸ್ಥರು ತಲೆಮರೆಸಿಕೊಂಡಿದ್ದಾರೆ.

     

    ಇತ್ತ ಮಗಳ ಮೇಲಿನ ಕೃತ್ಯದ ವಿಚಾರ ತಿಳಿದ ಕೂಡಲೇ ಅಸೀಮಾ ತಂದೆ ಆಕೆಯ ಮನೆಯ ಅಕ್ಕಪಕ್ಕದವರಿಗೆ ಮಾಹಿತಿ ನೀಡಿ ಮಗಳನ್ನು ನೋಡಿ ಬರಲು ತಿಳಿಸಿದ್ದಾರೆ. ಆದ್ರೆ ಅದಾಗಲೇ ಮಗಳು ಸಾವನ್ನಪ್ಪಿದ್ದಾಳೆ ಎಂದು ತಿಳಿದು ಅವರು ಶಾಕ್ ಗೆ ಒಳಗಾಗಿದ್ದಾರೆ. ಕೂಡಲೇ ಬಂಜಾರಾ ಠಾಣಾ ಪೊಲೀಸರು ಸ್ಥಳಕ್ಕೆ ದೌಡಾಯಿಸಿ, ಮಾಹಿತಿ ಕಲೆಹಾಕಿದ್ದಾರೆ. ಸದ್ಯ ಅಸೀಮಾ ತಂದೆಯ ದೂರಿನಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

    ತಲೆಮರೆಸಿಕೊಂಡಿರು ಆರೋಪಿ ಸಿರಾಜ್ ಗಾಗಿ ಪೊಲೀಸರು ಆತನ ಫೋನ್ ಟ್ರೇಸ್ ಮಾಡಿದ್ದಾರೆ. ಆದ್ರೆ ಅದಾಗಲೇ ಆತ ತಾನೆಲ್ಲಿದ್ದೇನೆ ಅನ್ನೋದು ಗೊತ್ತಾಗದಂತೆ ಸಿಗ್ನಲ್ ಡಿಸ್ ಕನೆಕ್ಟ್ ಮಾಡಿದ್ದಾನೆ ಅಂತ ಪೊಲೀಸರು ತಿಳಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಮಗುವಿನ ಗಂಟಲಲ್ಲಿ ಸಿಕ್ಕಿಕೊಂಡ ನಾಣ್ಯ: ಚಿಕಿತ್ಸೆ ನೀಡದೇ ಅಲೆದಾಡಿಸಿದ 4 ಆಸ್ಪತ್ರೆಗಳು!

    ಮಗುವಿನ ಗಂಟಲಲ್ಲಿ ಸಿಕ್ಕಿಕೊಂಡ ನಾಣ್ಯ: ಚಿಕಿತ್ಸೆ ನೀಡದೇ ಅಲೆದಾಡಿಸಿದ 4 ಆಸ್ಪತ್ರೆಗಳು!

    ಕೋಲ್ಕತ್ತಾ:ಸರಿಯಾದ ಸಮಯದಲ್ಲಿ ಸೂಕ್ತ ಚಿಕಿತ್ಸೆ ದೊರೆಯದೆ ನಾಣ್ಯ ನುಂಗಿದ್ದ 4 ವರ್ಷದ ಮಗುವೊಂದು ಪರದಾಡಿದ ಘಟನೆ ಪಶ್ಚಿಮ ಬಂಗಾಳದ ಕೋಲ್ಕತ್ತಾದ ಗಂಗಾಪುರದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

    ಶನಿವಾರ ಮಧ್ಯಾಹ್ನ 1 ಗಂಟೆಯ ಸುಮಾರಿಗೆ ಮನೆಯೊಳಗೆ ಆಟವಾಡುತ್ತಿದ್ದಾಗ 4 ವರ್ಷದ ಆಗ್ರ್ಯ ಬಿಸ್ವಾಸ್ ಏಕಾಏಕಿ 1 ರೂಪಾಯಿ ನಾಣ್ಯವನ್ನು ನುಂಗಿದ್ದಾನೆ. ನಾಣ್ಯ ಗಂಟಲಲ್ಲಿ ಸಿಕ್ಕಿಕೊಂಡು ಅಗ್ರ್ಯ ಜೋರಾಗಿ ಅಳುತ್ತಿದ್ದ. ಕೂಡಲೇ ಅವನನ್ನು ಪರೀಕ್ಷಿಸಿದಾಗ ನಾಣ್ಯ ನುಂಗಿರುವುದು ತಿಳಿಯಿತು ಎಂದು ಮಗುವಿನ ಅಜ್ಜ ದಿನೇಶ್ ಬಿಸ್ವಾಸ್ ತಿಳಿಸಿದ್ದಾರೆ.

    ಮಗುವನ್ನು 2 ಗಂಟೆಹೊತ್ತಿಗೆ ಹತ್ತಿರದ ಕಲ್ಯಾಣಿ ಮೆಡಿಕಲ್ ಕಾಲೇಜು ಆಸ್ಪತ್ರೆ ಹಾಗೂ ಜೆಎನ್‍ಎಂ ಆಸ್ಪತ್ರೆಯ ವೈದ್ಯರುಗಳಿಗೆ ತೋರಿಸಲಾಯಿತು. ಆದರೆ ಮಗುವನ್ನು ಪರೀಕ್ಷಿಸಿದ ಅವರು ನಮ್ಮ ಬಳಿ ಸರಿಯಾದ ಉಪಕರಣಗಳಿಲ್ಲ, ಮಗುವನ್ನು ಎನ್‍ಆರ್‍ಎಸ್ ಆಸ್ಪತ್ರೆ ಅಥವಾ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ತೋರಿಸಿ ಎಂದು ಸಲಹೆ ನೀಡಿದರು. ನಾವು ಎನ್‍ಆರ್‍ಎಸ್ ಆಸ್ಪತ್ರೆ ತಲುಪಿದಾಗ ರಾತ್ರಿ 10 ಗಂಟೆಯಾಗಿತ್ತು, ಆದರೆ ಅಲ್ಲಿಯೂ ಸಹ ನಮಗೆ ಯಾವುದೇ ಪ್ರಯೋಜನವಾಗಲಿಲ್ಲ. ಅಲ್ಲಿಂದ ನೇರವಾಗಿ ನಾವು ಮೆಡಿಕಲ್ ಕಾಲೇಜು ಆಸ್ಪತ್ರೆಗೆ ಹೋದರೂ ವೈದ್ಯರು ಮಗುವನ್ನು ದಾಖಲಿಸಿಕೊಳ್ಳಲು ನಿರಾಕರಿಸಿದ್ದರು ಎಂದು ಹೇಳಿದರು.

    ಕೊನೆಗೆ ತಡರಾತ್ರಿ 2 ರ ಸುಮಾರಿಗೆ ಎಸ್‍ಎಸ್‍ಕೆಎಂ ಆಸ್ಪತ್ರೆಗೆ ಹೋದೆವು, ಕೂಡಲೇ ಅಲ್ಲಿನ ವೈದ್ಯರುಗಳು ಮಗುವನ್ನು ದಾಖಲಿಸಿಕೊಂಡು ಎಂಡೋಸ್ಕೋಪಿ ಮುಖಾಂತರ ನಾಣ್ಯವನ್ನು ಹೊರತೆಗೆಯುವಲ್ಲಿ ಯಶಸ್ವಿಯಾಗಿದ್ದಾರೆ. ಸದ್ಯ ಆಗ್ರ್ಯ ಪ್ರಾಣಾಪಾಯದಿಂದ ಪಾರಾಗಿದ್ದು, ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದ್ದಾನೆ. ನಾನು ಹಾಗೂ ನಮ್ಮ ಕುಟುಂಬವು ಎಸ್‍ಎಸ್‍ಕೆಎಂ ಆಸ್ಪತ್ರೆಯ ವೈದ್ಯರಾದ ಡಾ. ಅರುಣಭ ಸೇನಗುಪ್ತರಿಗೆ ಕೃತಜ್ಞತೆಗಳನ್ನು ಅರ್ಪಿಸುತ್ತೇವೆ. ನಮ್ಮ ಮೊಮ್ಮಗ ತಾಯಿ ಇಲ್ಲದ ತಬ್ಬಲಿ, ನಾನು, ನನ್ನ ಹೆಂಡತಿ ಹಾಗೂ ತಂದೆಯ ಆಶ್ರಯದಲ್ಲಿ ಅವನು ಬೆಳೆಯುತ್ತಿದ್ದಾನೆ ಎಂದು ತಿಳಿಸಿದರು.

    ನಾಣ್ಯನುಂಗಿದ್ದ ಮಗುವನ್ನು ಸತತ ನಾಲ್ಕು ಆಸ್ಪತ್ರೆಗಳನ್ನು ತಿರುಗಿ, ಕೊನೆಗೂ ಮಗುವನ್ನು ಉಳಿಸಿಕೊಳ್ಳುವಲ್ಲಿ ಪೋಷಕರು ಯಶಸ್ವಿಯಾಗಿದ್ದಾರೆ. ಸರಿಯಾದ ಸಮಯಕ್ಕೆ ಚಿಕಿತ್ಸೆ ನೀಡದ ಆಸ್ಪತ್ರೆಗಳು, ಕೇವಲ ಉಪಕರಣಗಳ ಕೊರತೆಯಿಂದ ಸಾಗಾಕಿರುವುದು ಶೋಚನೀಯ ಸಂಗತಿಯಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvnews

  • ಯಾವಾಗ್ಲೂ ಇಂಗ್ಲಿಷ್ ನಲ್ಲೇ ಮಾತಾಡ್ತಾನೆ ಅಂತ ಕತ್ತು ಸೀಳಿ, 54 ಬಾರಿ ಇರಿದು ಕೊಂದೇ ಬಿಟ್ಟ!

    ಯಾವಾಗ್ಲೂ ಇಂಗ್ಲಿಷ್ ನಲ್ಲೇ ಮಾತಾಡ್ತಾನೆ ಅಂತ ಕತ್ತು ಸೀಳಿ, 54 ಬಾರಿ ಇರಿದು ಕೊಂದೇ ಬಿಟ್ಟ!

    ಮುಂಬೈ: 21 ವರ್ಷದ ಯುವಕನೊಬ್ಬ 18 ವರ್ಷದ ತನ್ನ ಗೆಳೆಯನನ್ನೇ ಕತ್ತು ಸೀಳಿ ಬಳಿಕ 54 ಬಾರಿ ಇರಿದು ಕೊಲೆಗೈದ ಆಘಾತಕಾರಿ ಘಟನೆಯೊಂದು ನಗರದಲ್ಲಿ ನಡೆದಿದೆ.

    ಮೊಹಮ್ಮದ್ ಆಫ್ರೋಜ್ ಆಲಂ ಶೇಖ್ ಎಂಬ ಯುವಕನನ್ನು ಮೊಹಮ್ಮದ್ ಅಮೀರ್ ಅಬ್ದುಲ್ ವಹೀದ್ ರಹೀನ್ ಎಂಬಾತ ಕೊಲೆಗೈದಿದ್ದಾನೆ.

    ಮೃತ ಯುವಕ ತನ್ನೊಂದಿಗೆ ಇಂಗ್ಲಿಷ್ ನಲ್ಲಿ ಮಾತ್ರ ವ್ಯವಹರಿಸುತ್ತಾನೆ. ಅಲ್ಲದೇ  ನನಗೆ ಇಂಗ್ಲಿಷ್ ಬರಲ್ಲ ಅಂತ ತಮಾಷೆ ಮಾಡಿರುವುದರಿಂದ ಕೋಪಗೊಂಡು ಈ ಕೃತ್ಯ ಎಸಗಿರುವುದಾಗಿ ಆರೋಪಿ ಸಾಹು ನಗರ ಪೊಲೀಸರಲ್ಲಿ ತನ್ನ ತಪ್ಪೊಪ್ಪಿಕೊಂಡಿದ್ದಾನೆ.

    ಸುಮಾರು ಮಧ್ಯರಾತ್ರಿ 1 ಗಂಟೆ ವೇಳೆಗೆ ಆರೋಪಿ ರಹೀನ್ ಮಾಹಿಮ್‍ನ ನಿರ್ಜನ ಪ್ರದೇಶದಲ್ಲಿ ತಿರುಗಾಡುತ್ತಿದ್ದನು. ಈ ವೇಳೆ ಅನುಮಾನಗೊಂಡ ಪೊಲೀಸರು ರಹೀನ್ ನ್ನು ಬಂಧಿಸಿದ್ದಾರೆ. ಇದೇ ಸ್ಥಳದಲ್ಲಿಯೇ ಶೇಖ್ ಮೃತ ದೇಹ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    ಶೇಖ್ ಯಾವತ್ತೂ ನನಗೆ ತಮಾಷೆ ಮಾಡುತ್ತಿದ್ದನು. ಇದರಿಂದ ಸಿಟ್ಟುಗೊಂಡು ಆತನನನ್ನು ಕೊಲೆ ಮಾಡಲು ಸುಮಾರು ಒಂದು ವಾರಗಳ ಹಿಂದೆಯೇ ಪ್ಲಾನ್ ಮಾಡಿದ್ದೆ. ಆದ್ರೆ ಸಮಯ ಮತ್ತು ಜಾಗಕ್ಕೆ ಕಾಯುತ್ತಿದ್ದೆ ಅಂತ ಆರೋಪಿ ಬಾಯ್ಬಿಟ್ಟಿರುವುದಾಗಿ ಸಾಹು ನಗರ ಪೊಲೀಸ್ ಠಾಣೆಯ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

    ಬುಧವಾರ ರಾತ್ರಿ ಆರೋಪಿ ರಹೀನ್ ತನ್ನ ಗೆಳೆಯ ಶೇಖ್ ನನ್ನು ಕುಡಿಯುವ ಪಾರ್ಟಿ ಮಾಡುವುದಾಗಿ ಹೇಳಿ ನಗರದ ಬಾಂದ್ರಾಕ್ಕೆ ಕರೆದುಕೊಂಡು ಹೋಗಿದ್ದಾನೆ. ಅಂತೆಯೇ ಇವರಿಬ್ಬರೂ ಬಿಯರ್ ಕೂಡ ತೆಗೆದುಕೊಂಡಿದ್ದರು. ಇಬ್ಬರೂ ಜೊತೆಜೊತೆಯಾಗಿ ಕುಡಿದು, ಸ್ವಲ್ಪ ಸಮಯದ ಬಳಿಕ ಶೌಚಾಲಯಕ್ಕೆ ತೆರಳಿದ ಶೇಖ್ ನ ಹಿಂದೆ ರಹೀನ್ ಕೂಡ ಹೋಗಿದ್ದಾನೆ. ಮೊದಲೇ ಕುಡಿದ ಮತ್ತಿನಲ್ಲಿದ್ದ ರಹೀನ್ ತನ್ನ ಕೈಯಲಿದ್ದ ಚೂರಿಯಿಂದ ರಹೀನ್ ಕತ್ತು ಸೀಳಿದ್ದಾನೆ. ಪರಿಣಾಮ ಶೇಖ್ ಕೆಳಗೆ ಬಿದ್ದಿದ್ದಾನೆ. ಇದೇ ವೇಳೆ ರಹೀನ್ ಆತನಿಗೆ 54 ಬಾರಿ ಇರಿದಿದ್ದಾನೆ. ಹೀಗಾಗಿ ಕತ್ತು ಮತ್ತು ಹೊಟ್ಟೆಗೆ ಗಂಭೀರ ಗಾಯಗಳಾಗಿರುವುದರಿಂದ ಶೇಖ್ ಸ್ಥಳದಲ್ಲೆ ಸಾವನ್ನಪ್ಪಿದ್ದಾನೆ ಅಂತ ಪೊಲೀಸ್ ಅಧಿಕಾರಿ ವಿವರಿಸಿದ್ದಾರೆ.

  • ಪ್ರಿಯಕರನ ಪ್ರಾಣ ಉಳಿಸಲು ಆತನ ಗಂಟಲನ್ನೇ ಕಟ್ ಮಾಡಿದ ಪ್ರಿಯತಮೆ!

    ಪ್ರಿಯಕರನ ಪ್ರಾಣ ಉಳಿಸಲು ಆತನ ಗಂಟಲನ್ನೇ ಕಟ್ ಮಾಡಿದ ಪ್ರಿಯತಮೆ!

    ವೆಲ್ಲಿಂಗ್ಟನ್: ಪ್ರಿಯಕರನ ಪ್ರಾಣ ಉಳಿಸಲು ಪ್ರಿಯತಮೆ ಆತನ ಗಂಟಲನ್ನೇ ಕತ್ತರಿಸಿದ ಘಟನೆ ನ್ಯೂಜಿಲೆಂಡ್‍ನಲ್ಲಿ ನಡೆದಿದೆ.

    ಹೌದು. ನಂಬಲಸಾಧ್ಯವಾದ್ರೂ ಇದು ನಿಜ. ಸಾರಾ ಗ್ಲಾಸ್ ಹಾಗೂ ಐಸಾಕ್ ಬೆಸ್ಟರ್ ಊಟಕ್ಕೆಂದು ಹೋಟೆಲ್‍ಗೆ ಹೋಗಿದ್ದರು. ಹೋಟೆಲ್‍ನಲ್ಲಿ ಬಾರ್ಬೆಕ್ಯೂ ಆರ್ಡರ್ ಮಾಡಿದ್ದಾರೆ. ಐಸಾಕ್ ತನ್ನ ಸಾಮಥ್ರ್ಯಕಿಂತ ಹೆಚ್ಚು ಮಾಂಸವನ್ನ ಬಾಯಿಯಲ್ಲಿ ಹಾಕಿಕೊಂಡಿದ್ದ. ಆಹಾರವನ್ನು ಒಂದೇ ಸಮನೆ ಬಾಯಿಗೆ ಹಾಕಿದ ಮೇಲೆ ಐಸಾಕ್ ಅದನ್ನು ಜಗಿಯಲು ಸಾಧ್ಯವಾಗದೇ ಒದ್ದಾಡಿದ್ದ. ಮಾಂಸದ ತುಂಡು ಗಂಟಲಲ್ಲಿ ಸಿಲುಕಿಕೊಂಡು ಉಸಿರಾಡಲಾಗದೇ ಐಸಾಕ್ ಒದ್ದಾಡುತ್ತಿದ್ದನು.

    ಐಸಾಕ್‍ನ ಆ ಸ್ಥಿತಿ ನೋಡಿ ಹೋಟೆಲ್‍ನಲ್ಲಿದ್ದ ಅಕ್ಕಪಕ್ಕದ ಟೇಬಲ್‍ನವರು ಆತನ ಸಹಾಯಕ್ಕೆ ಬಂದರು. ಆತನ ಹೊಟ್ಟೆ ಮೇಲೆ ಒತ್ತಡ ಹಾಕಿ ಗಂಟಲಲ್ಲಿದ್ದ ಮಾಂಸದ ತುಂಡನ್ನು ಹೊರತೆಗೆಯಲು ಯತ್ನಿಸಿದ್ದರು. ಆದರೆ ಅದು ಸಾಧ್ಯವಾಗಲಿಲ್ಲ. ಹೀಗೆ ಇದ್ದರೆ ಐಸಾಕ್ ಬದುಕುಳಿಯುವುದು ಕಷ್ಟವೆಂದು ತಿಳಿದ ಸಾರಾ ದೃಢ ನಿರ್ಧಾರವನ್ನು ಕೈಗೊಂಡರು.

    ವೃತಿಯಲ್ಲಿ ಸೂಲಗಿತ್ತಿಯಾಗಿದ್ದ ಸಾರಾ ತನ್ನ ಬಾಯ್‍ಫ್ರೆಂಡ್ ಐಸಾಕ್‍ನನ್ನು ಉಳಿಸಲು ಆತನ ಗಂಟಲನ್ನು ಶ್ವಾಸನಾಳದ ಬಳಿ ಸಣ್ಣಗೆ ಕತ್ತರಿಸಿದ್ದಳು. ಐಸಾಕ್ ಗಂಟಲನ್ನು ಕತ್ತರಿಸಿದಕ್ಕೆ ಆತನಿಗೆ ಉಸಿರಾಡಲು ಸಾಧ್ಯವಾಯಿತು. ನಂತರ ವೈದ್ಯಕೀಯ ಸಬ್ಬಂದಿಯವರು ಸ್ಥಳಕ್ಕೆ ಭೇಟಿ ನೀಡಿ ಐಸಾಕ್ ಗೆ ಆಕ್ಸಿಜನ್ ಅಳವಡಿಸಿ ಆಸ್ಪತ್ರೆಗೆ ಕರೆದುಕೊಂಡು ಹೋದರು.

    ನನಗೆ ಬೇರೆ ಯಾವುದೇ ದಾರಿ ಇರಲಿಲ್ಲ. ನಾನು ಈ ರೀತಿ ಮಾಡದಿದ್ದರೆ ಐಸಾಕ್ ಬದುಕುತ್ತಿರಲಿಲ್ಲ. ನಾನೇ ಅಲ್ಲ, ನನ್ನ ಜಾಗದಲ್ಲಿ ಬೇರೆ ಯಾರೇ ಇದ್ದರೂ ತಮ್ಮವರ ಪ್ರಾಣ ಉಳಿಸಲು ಈ ರೀತಿ ಮಾಡುತ್ತಿದ್ದರು ಎಂದು ಸಾರಾ ತಿಳಿಸಿದ್ದಾರೆ.

    ವೈದ್ಯರು ಸ್ಥಳಕ್ಕೆ 20 ನಿಮಿಷಗಳ ಬಳಿಕ ಬಂದು ಐಸಾಕ್‍ನನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು. ಸಂಪೂರ್ಣವಾಗಿ ಗುಣವಾದ ನಂತರ ಐಸಾಕ್‍ನನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗುತ್ತದೆ. ತನ್ನ ಪ್ರಿಯಕರನನ್ನು ಉಳಿಸಲು ಸಾರಾ ಈ ನಿರ್ಧಾರ ತೆಗೆದುಕೊಳ್ಳಲಿಲ್ಲವೆಂದರೆ ಐಸಾಕ್ ಉಳಿಯುವುದು ಕಷ್ಟವಾಗುತ್ತಿತ್ತು ಎಂದು ಹೇಳಲಾಗಿದೆ.