Tag: Tibet

  • ಟಿಬೆಟ್‌ನಲ್ಲಿ 7.1 ತೀವ್ರತೆಯ ಭೂಕಂಪ – ಸಾವಿನ ಸಂಖ್ಯೆ 95ಕ್ಕೆ ಏರಿಕೆ

    ಟಿಬೆಟ್‌ನಲ್ಲಿ 7.1 ತೀವ್ರತೆಯ ಭೂಕಂಪ – ಸಾವಿನ ಸಂಖ್ಯೆ 95ಕ್ಕೆ ಏರಿಕೆ

    ಬೀಜಿಂಗ್‌: ಇಂದು ಮುಂಜಾನೆ ನೇಪಾಳ (Nepal) ಮತ್ತು ಟಿಬೆಟ್‌ (Tibet) ಗಡಿಯಲ್ಲಿ 7.1 ತೀವ್ರತೆಯ ಭಾರೀ ಭೂಕಂಪ (EarthQuake) ಸಂಭವಿಸಿದ್ದು, 95 ಮಂದಿ ಸಾವಿಗೀಡಾಗಿದ್ದು, 130 ಮಂದಿ ಗಾಯಗೊಂಡಿದ್ದಾರೆ.

    ಭೂಕಂಪದ ತೀವ್ರತೆಗೆ ಚೀನಾ, ನೇಪಾಳ, ಉತ್ತರ ಭಾರತದ ಹಲವು ಭಾಗಗಳಲ್ಲಿ ಕಂಪನದ ಅನುಭವವಾಗಿದೆ. ಭೂಕಂಪವು ಭಾರತೀಯ ಕಾಲಮಾನ ಬೆಳಿಗ್ಗೆ 6:35 ಕ್ಕೆ ಸಂಭವಿಸಿದೆ ಮತ್ತು ಟಿಬೆಟ್‌ನ ಕ್ಸಿಜಾಂಗ್ ಅದರ ಕೇಂದ್ರಬಿಂದುವಾಗಿದೆ ಎಂದು ಭೂಕಂಪನ ರಾಷ್ಟ್ರೀಯ ಕೇಂದ್ರ (NCS) ತಿಳಿಸಿದೆ.

    ದೆಹಲಿ-ಎನ್‌ಸಿಆರ್ ಮತ್ತು ಬಿಹಾರದ ರಾಜಧಾನಿ ಪಾಟ್ನಾ ಸೇರಿದಂತೆ ಉತ್ತರ ಭಾರತದ ವಿವಿಧ ಭಾಗಗಳಲ್ಲಿ ಮತ್ತು ರಾಜ್ಯದ ಉತ್ತರ ಭಾಗದ ಅನೇಕ ಸ್ಥಳಗಳಲ್ಲಿ ಬಲವಾದ ಕಂಪನಗಳು ಸಂಭವಿಸಿವೆ. ಪಶ್ಚಿಮ ಬಂಗಾಳ ಮತ್ತು ಅಸ್ಸಾಂ ಸೇರಿದಂತೆ ಈಶಾನ್ಯ ರಾಜ್ಯಗಳಲ್ಲೂ ಭೂಕಂಪದ ಅನುಭವವಾಗಿದೆ.

    ನೇಪಾಳದ ರಾಜಧಾನಿ ಕಠ್ಮಂಡುವಿನಲ್ಲಿ, ಬಲವಾದ ಕಂಪನದ ನಂತರ ನಿವಾಸಿಗಳು ತಮ್ಮ ಮನೆಗಳಿಂದ ಹೊರಗೆ ಓಡಿಹೋಗಿದ್ದಾರೆ. ಟಿಬೆಟ್‌ನ ಗಡಿಯಲ್ಲಿರುವ ಏಳು ಗುಡ್ಡಗಾಡು ಜಿಲ್ಲೆಗಳಲ್ಲಿ ಕಂಪನದ ಅನುಭವವಾಗಿದೆ ಎಂದು ದೇಶದ ವಿಪತ್ತು ನಿರ್ವಹಣಾ ಪ್ರಾಧಿಕಾರ ತಿಳಿಸಿದೆ.

  • ಟಿಬೆಟ್‌ನಲ್ಲಿ ಭಾರೀ ಭೂಕಂಪ – 32 ಮಂದಿ ಬಲಿ

    ಟಿಬೆಟ್‌ನಲ್ಲಿ ಭಾರೀ ಭೂಕಂಪ – 32 ಮಂದಿ ಬಲಿ

    ಬೀಜಿಂಗ್‌: ಇಂದು ಮುಂಜಾನೆ ನೇಪಾಳ (Nepal) ಮತ್ತು ಟಿಬೆಟ್‌ (Tibet) ಗಡಿಯಲ್ಲಿ 7.1 ತೀವ್ರತೆಯ ಭಾರೀ ಭೂಕಂಪ (EarthQuake) ಸಂಭವಿಸಿದೆ. ಟಿಬೆಟ್‌ನಲ್ಲಿ ಸಂಭವಿಸಿದರೂ ಚೀನಾ, ನೇಪಾಳ, ಉತ್ತರ ಭಾರತದ ಹಲವು ಭಾಗಗಳಲ್ಲಿ ಕಂಪನದ ಅನುಭವವಾಗಿದೆ.

    ಭೂಕಂಪನದ ರಾಷ್ಟ್ರೀಯ ಕೇಂದ್ರದ ಪ್ರಕಾರ (NCS), ಭೂಕಂಪವು ಭಾರತೀಯ ಕಾಲಮಾನ ಬೆಳಿಗ್ಗೆ 6:35 ಕ್ಕೆ ಸಂಭವಿಸಿದೆ ಮತ್ತು ಟಿಬೆಟ್‌ನ ಕ್ಸಿಜಾಂಗ್ ಅದರ ಕೇಂದ್ರಬಿಂದುವಾಗಿದೆ.

    ಚೀನಾದ Xinhua ನ್ಯೂಸ್‌ ಏಜೆನ್ಸಿ 32 ಮಂದಿ ಮೃತಪಟ್ಟರೆ 38 ಮಂದಿ ಗಾಯಗೊಂಡಿದ್ದಾರೆ ಎಂದು ವರದಿ ಮಾಡಿದೆ. ಇದನ್ನೂ ಓದಿ: “ಕಷ್ಟದಲ್ಲಿದ್ರೂ ತಂದೆ, ತಾಯಿ ಮಾತನಾಡ್ತಿಲ್ಲ, ಕಾಲ್‌ ಮಾಡಿದ್ರೂ ಕಟ್‌ ಮಾಡ್ತಿದ್ರು” – ಟೆಕ್ಕಿ ಅನೂಪ್‌ ಡೆತ್‌ನೋಟ್‌ನಲ್ಲಿ ಏನಿದೆ?

    ನೇಪಾಳದ ರಾಜಧಾನಿ ಕಠ್ಮಂಡುವಿನಲ್ಲಿ ಜನ ಮನೆಯಿಂದ ಹೊರಗಡೆ ಓಡಿಕೊಂಡು ಬಂದಿರುವ ಮೊಬೈಲ್‌ ಕ್ಯಾಮೆರಾದಲ್ಲಿ ಸೆರೆಯಾಗಿದೆ.

     

  • ಧರ್ಮಶಾಲಾದಲ್ಲಿ ದಲೈಲಾಮ ಭೇಟಿಯಾದ ನ್ಯಾನ್ಸಿ ಪೆಲೋಸಿ- ಕಣ್ಣು ಕೆಂಪಗಾಗಿಸಿದ ಚೀನಾ

    ಧರ್ಮಶಾಲಾದಲ್ಲಿ ದಲೈಲಾಮ ಭೇಟಿಯಾದ ನ್ಯಾನ್ಸಿ ಪೆಲೋಸಿ- ಕಣ್ಣು ಕೆಂಪಗಾಗಿಸಿದ ಚೀನಾ

    ನವದೆಹಲಿ: ಭಾರತ ಪ್ರವಾಸದಲ್ಲಿರುವ ಅಮೆರಿಕಾದ ಹಿರಿಯ ರಾಜಕಾರಣಿ ನ್ಯಾನ್ಸಿ ಪೆಲೋಸಿ (Nancy Pelosi) ನೇತೃತ್ವದ ನಿಯೋಗ ಧರ್ಮಶಾಲಾದಲ್ಲಿ ಟಿಬೆಟ್ ಮುಖ್ಯಸ್ಥ ದಲೈಲಾಮ (Dalai Lama) ಅವರನ್ನು ಭೇಟಿ ಮಾಡಿರೋದು ಚೀನಾದ (China) ಕಣ್ಣು ಕೆಂಪಗಾಗಿಸಿದೆ.

    ಇತ್ತೀಚಿಗೆ ಅಮೆರಿಕ ಸಂಸತ್‌ನಲ್ಲಿ ದಿ ರಿಸಾಲ್ವ್ ಟಿಬೆಟ್ ಆಕ್ಟ್‌ಗೆ ಅನುಮೋದನೆ ನೀಡಲಾಗಿತ್ತು. ಇದರ ಪ್ರಕಾರ, ಟಿಬೆಟ್ (Tibet) ನಾಯಕರೊಂದಿಗೆ ಚೀನಾ ಚರ್ಚೆ ಆರಂಭಿಸಬೇಕು. ನೆಲದ ಸಂಸ್ಕೃತಿ ಕಾಪಾಡುವ ನಿಟ್ಟಿನಲ್ಲಿ ಒಪ್ಪಂದಕ್ಕೆ ಬರಬೇಕು ಎಂದು ಅಮೆರಿಕ ಕೋರಲಿದೆ. ಅಲ್ಲದೇ ಟಿಬೆಟ್ ಇತಿಹಾಸ, ಜನರ ಬಗ್ಗೆ ಚೀನಾ ಹಬ್ಬಿಸುವ ಸುಳ್ಳು ಸುದ್ದಿಗಳ ತಡೆಗೆ ಅಮೆರಿಕ ವಿದೇಶಾಂಗ ಇಲಾಖೆ ಕೆಲಸ ಮಾಡಲಿದೆ. ಇದಕ್ಕಾಗಿ ದೇಣಿಗೆ ಸಂಗ್ರಹಿಸಲು ಅವಕಾಶ ಸಿಗಲಿದೆ. ಬೈಡನ್ ಸಹಿ ಹಾಕಿದ ನಂತರ ಈ ಕಾಯ್ದೆ ಅನುಷ್ಠಾನಕ್ಕೆ ಬರಲಿದೆ. ಆದರೆ ಇದು ಜಾರಿಗೆ ಬರದಂತೆ ಮಾಡಲು ಅಮೆರಿಕ ಮೇಲೆ ಚೀನಾ ಒತ್ತಡ ಹೇರುತ್ತಿದೆ. ಇದನ್ನೂ ಓದಿ: ಕೇಂದ್ರ ಸರ್ಕಾರಿ ಆಸ್ಪತ್ರೆಗಳಲ್ಲಿ ವಿಶೇಷ ಹೀಟ್ ವೇವ್ ಘಟಕ ಸ್ಥಾಪಿಸಲು ನಡ್ಡಾ ಸೂಚನೆ

    ಇದೀಗ ಪೆಲೋಸಿ-ದಲೈಲಾಮ ಭೇಟಿಯನ್ನು ಚೀನಾ ತೀವ್ರವಾಗಿ ಖಂಡಿಸಿದೆ. ಈ ಹಿಂದೆ ಟಿಬೆಟ್ ವಿಚಾರದಲ್ಲಿ ಅಮೆರಿಕಗೆ ನೀಡಿದ ಭರವಸೆಗಳಿಗೆ ಕಟಿಬದ್ಧರಾಗಿದ್ದೇವೆ. ದಲೈಲಾಮ ಜೊತೆ ಸಂಪರ್ಕ ಬೇಡ. ಜಗತ್ತಿಗೆ ತಪ್ಪು ಸಂದೇಶ ತಲುಪಿಸೋದನ್ನು ನಿಲ್ಲಿಸಿ ಎಂದು ಗುಡುಗಿದೆ. ಟಿಬೆಟ್ ಎಂದೆಂದಿಗೂ ಚೀನಾಗೆ ಅವಿಭಾಜ್ಯ ಅಂಗ. ಇದನ್ನು ಉಳಿಸಿಕೊಳ್ಳಲು ಯಾವುದೇ ಕ್ರಮಕ್ಕೆ ಬೇಕಾದರೂ ಮುಂದಾಗುತ್ತೇವೆ ಎಂದು ಬೀಜಿಂಗ್ ಎಚ್ಚರಿಕೆ ನೀಡಿದೆ. ಇದನ್ನೂ ಓದಿ: ಚಿಕ್ಕಮಗಳೂರಿನಲ್ಲಿ ತೆಪ್ಪ ಮುಳುಗಿ ಮೂವರು ಪ್ರವಾಸಿಗರು ದುರ್ಮರಣ

  • ಮಂಗಳೂರಿಗೆ ಆಗಮಿಸಿದ ದಲೈ ಲಾಮಾ

    ಮಂಗಳೂರಿಗೆ ಆಗಮಿಸಿದ ದಲೈ ಲಾಮಾ

    – ಝೀರೋ ಟ್ರಾಫಿಕ್ ಮೂಲಕ ಕರೆತಂದ ಅಧಿಕಾರಿಗಳು

    ಮಂಗಳೂರು: ಟಿಬೆಟಿಯನ್ ಧರ್ಮ ಗುರು ದಲೈ ಲಾಮಾ ಅವರು ಇಂದು ಮಂಗಳೂರಿಗೆ ಆಗಮಿಸಿದ್ದು, ಮೂರು ದಿನಗಳ ಕಾಲ ಮಂಗಳೂರಿನಲ್ಲಿಯೇ ತಂಗಲಿದ್ದಾರೆ.

    ದಲೈ ಲಾಮಾ ಆಗಮಿಸುವ ಸೂಚನೆ ತಿಳಿದಿದ್ದರಿಂದ ಮಂಗಳೂರು ವಿಮಾನ ನಿಲ್ದಾಣದ ಹೊರಗಡೆ ಟಿಬೆಟಿಯನ್ ಸಾಂಪ್ರದಾಯಿಕ ನೃತ್ಯದ ಮೂಲಕ ಅವರನ್ನು ಸ್ವಾಗತಿಸಲಾಯಿತು. ಅಲ್ಲದೆ ವಿಮಾನ ನಿಲ್ದಾಣದ ಸುತ್ತ ಭಾರೀ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು. ನಗರದ ಖಾಸಗಿ ಹೋಟೆಲ್‍ನಲ್ಲಿ ತಂಗಿರುವ ಅವರನ್ನು ಭಾರೀ ಭದ್ರತೆಯಲ್ಲಿ ಝೀರೋ ಟ್ರಾಫಿಕ್ ಮೂಲಕ ವಿಮಾನ ನಿಲ್ದಾಣದಿಂದ ನಗರಕ್ಕೆ ಕರೆ ತರಲಾಯಿತು.

    ಆಗಸ್ಟ್ 30 ರಂದು ನಗರದ ಫಾದರ್ ಮುಲ್ಲರ್ ಸಭಾಂಗಣದಲ್ಲಿ ನಡೆಯಲಿರುವ ನಯನ ಅಖಿಲ ಭಾರತ ಕ್ಯಾಥೊಲಿಕ್ ಶಾಲಾ ಒಕ್ಕೂಟದ ರಾಷ್ಟ್ರೀಯ ಸಮಾವೇಶದಲ್ಲಿ ಭಾಗವಹಿಸಲಿದ್ದು, 31 ರಂದು ಅವರು ಬೆಂಗಳೂರಿಗೆ ತೆರಳಲಿದ್ದಾರೆ.

    ಮಧ್ಯಾಹ್ನ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಅವರನ್ನು ಮಂಗಳೂರು ಉಪವಿಭಾಗಾಧಿಕಾರಿ ರವಿಚಂದ್ರ ನಾಯ್ಕ್, ಉಪ ಪೊಲೀಸ್ ಆಯುಕ್ತ ಅರುಣಾಂಶು ಗಿರಿ, ಲಕ್ಷ್ಮೀ ಗಣೇಶ್ ಅವರು ಜಿಲ್ಲಾಡಳಿತದ ಪರವಾಗಿ ಸ್ವಾಗತಿಸಿದರು.