Tag: tiger census

  • ಬಂಡೀಪುರದಲ್ಲಿ ಸಿದ್ಧವಾಯ್ತು ಟೈಗರ್ ರಿಸರ್ಚ್ ಮಾನಿಟರಿಂಗ್ ಸೆಲ್

    ಬಂಡೀಪುರದಲ್ಲಿ ಸಿದ್ಧವಾಯ್ತು ಟೈಗರ್ ರಿಸರ್ಚ್ ಮಾನಿಟರಿಂಗ್ ಸೆಲ್

    – ಇನ್ಮುಂದೆ ಪ್ರತಿ ವರ್ಷ ಸುಲಭವಾಗಿ ನಡೆಯಲಿದೆ ಹುಲಿ ಗಣತಿ, ಕ್ಯಾಪ್ಚರ್ ಕಾರ್ಯ

    ಚಾಮರಾಜನಗರ: ರಾಜ್ಯದಲ್ಲೇ ಅತಿ ಹೆಚ್ಚು ಹುಲಿಗಳನ್ನು ಹೊಂದಿರುವ ಬಂಡೀಪುರದ ಪ್ರಾಕೃತಿಕ ಸೌಂದರ್ಯಕ್ಕೆ ಮನ ಸೋಲದವರೇ ಇಲ್ಲ. ಇಂತಹ ಹುಲಿ ಸಂರಕ್ಷಿತ ಅರಣ್ಯದಲ್ಲಿ ಹುಲಿಗಳ ಕುರಿತು ರಿಸರ್ಚ್ ನಡೆಸಬೇಕಿದರೆ ಅರಣ್ಯಾಧಿಕಾರಿಗಳು ಪಡಬಾರದ ಪರಿಪಾಟಿಲು ಪಡುತ್ತಿದ್ದರು. ಆದರೆ, ಆ ಸಂಕಷ್ಟಕ್ಕೆ ಈಗ ಬ್ರೇಕ್ ಬಿದ್ದಿದೆ.

    ಬಂಡೀಪುರ ಈ ಹೆಸರು ಕೇಳಿದ್ರೆ ಸಾಕು ಪ್ರಾಣಿ ಪ್ರಿಯರು ಹಾಗೂ ಪರಿಸರವಾದಿಗಳ ಮೊಗದಲ್ಲಿ ಮಂದಹಾಸ ಮೂಡುತ್ತದೆ. ಯಾಕಂದ್ರೆ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನಲ್ಲಿರುವ ಈ ಬಂಡೀಪುರ ಟೈಗರ್ ರಿಸರ್ವ್ ಫಾರೆಸ್ಟ್‌ನ ಪ್ರಕೃತಿಯ ಸೌಂದರ್ಯದ ವರ್ಚಸ್ಸೆ ಅಂತಹದ್ದು. ರಾಜ್ಯದಲ್ಲೇ ಅತಿ ಹೆಚ್ಚು ಹುಲಿಗಳನ್ನ ರಾಜ್ಯದಲ್ಲೇ ಅತಿ ಹೆಚ್ಚು ಆನೆ ಮತ್ತು ಚಿರತೆಗಳನ್ನ ಹೊಂದಿರುವ ಟೈಗರ್ ರಿಸರ್ವ್ ಫಾರೆಸ್ಟ್ ಇದು. ಇಂತಹ ಖ್ಯಾತಿ ಪಡೆದ ಬಂಡೀಪುರದಲ್ಲಿ ಹುಲಿಯ ಗಣತಿ ಕಾರ್ಯ ಅಥವಾ ಯಾವುದಾದ್ರು ವ್ಯಾಘ್ರದ ಕುರಿತು ರಿಸರ್ಚ್ ಮಾಡ್ಬೇಕಿದ್ರೆ ದೂರದ ಬೆಂಗಳೂರಿನ ಕೇಂದ್ರ ಕಚೇರಿಗೆ ತೆರಳಬೇಕಿತ್ತು. ಇದರಿಂದ ಅರಣ್ಯಾಧಿಕಾರಿಗಳಿಗೆ ಭಾರೀ ಸಂಕಷ್ಟ ಎದುರಾಗುತ್ತಿತ್ತು. ಈಗ ಇದಕ್ಕೊಂದು ಪರಿಹಾರ ಸಿಕ್ಕಿದೆ. ಇನ್ನು ಕೆಲವೇ ದಿನಗಳಲ್ಲಿ ಬಂಡೀಪುರದ ಮೇಲುಕಾಮನಹಳ್ಳಿಯಲ್ಲಿ ಟೈಗರ್ ರಿಸರ್ಚ್ ಸೆಲ್ ಆರಂಭಗೊಳ್ಳಲಿದೆ.

    ಬಂಡೀಪುರ ಸೇರಿದಂತೆ ರಾಜ್ಯದಲ್ಲಿ ಬಿಳಿಗಿರಿ ಟೈಗರ್ ರಿಸರ್ವ್, ಭದ್ರ ಟೈಗರ್ ರಿಸರ್ವ್ ನಾಗರಹೊಳೆ ಟೈಗರ್ ರಿಸರ್ವ್ ಫಾರೆಸ್ಟ್‌ಗಳಿವೆ. ರಾಜ್ಯ ಎಲ್ಲಾ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಒಂದು ಟೈಗರ್ ರಿಸರ್ಚ್ ಎಂಡ್ ಮಾನಿಟರಿಂಗ್ ಸೆಲ್‌ನ ಅನಿವಾರ್ಯತೆ ಕುರಿತು ಅರಣ್ಯ ಸಚಿವ ಈಶ್ವರ್ ಖಂಡ್ರೆಗೆ ವರದಿ ನೀಡಲಾಗಿತ್ತು. ಈ ವರದಿ ಆಧಾರದ ಮೇಲೆ ರಾಜ್ಯದ ಎಲ್ಲಾ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಟೈಗರ್ ಸೆಲ್ ತೆರೆಯಲು ರಾಜ್ಯ ಸರ್ಕಾರ ಮುಂದಾಗಿದ್ದು, ಅದರ ಮೊದಲ ಹಂತವಾಗಿ ಬಂಡೀಪುರದಲ್ಲಿ ಹೊಸ ಕಟ್ಟಡ ನಿರ್ಮಾಣವಾಗಿದೆ. ಇನ್ನು ಕೆಲ ದಿನಗಳಲ್ಲೇ ನೂತನ ಟೈಗರ್ ರಿಸರ್ಚ್ ಎಂಡ್ ಮಾನಿಟರಿಂಗ್ ಸೆಲ್ ಲೋಕಾರ್ಪಣೆಗೊಳ್ಳಲಿದೆ. ಇದರಿಂದ ಬಂಡೀಪುರದಲ್ಲಿ ಪ್ರತಿಯೊಂದು ಹುಲಿಯ ಮಾನಿಟರಿಂಗ್ ಮಾಡಬಹುದು. ವರ್ಷದಿಂದ ವರ್ಷಕ್ಕೆ ಎಷ್ಟು ಹುಲಿಗಳ ಸಂಖ್ಯೆ ಹೆಚ್ಚಾಗಿದೀಯಾ ಅಥವಾ ಕಡಿಮೆ ಆಗಿದ್ಯಾ ಎಂಬುದರ ನಿಖರ ಮಾಹಿತಿ ದೊರೆಯಲಿದೆ. ಇದರ ಜೊತೆಗೆ ಕ್ಯಾಪ್ಚರಿಂಗ್ ಕಾರ್ಯ ಹಾಗೂ ಯಾವುದಾದ್ರು ಹುಲಿಯ ಮೇಲೆ ರಿಸರ್ಚ್‌ ಅನ್ನು ಸಹ ಇಲ್ಲೇ ಮಾಡಬಹುದಾಗಿದೆ.

    ಸದ್ಯ ರಾಜ್ಯ ಸರ್ಕಾರದ ಈ ನಡೆಯಿಂದ ಮುಂಬರುವ ಕಾಡುಪ್ರಾಣಿಗಳ ಕುರಿತಾದ ನಿಖರ ಹಾಗೂ ಸ್ಪಷ್ಟ ಮಾಹಿತಿ ಸಿಗಲಿದೆ, ಇದರ ಜೊತೆಗೆ ಇನ್ನೂ ಅಧಿಕವಾಗಿ ವನ್ಯಮೃಗಗಳನ್ನ ಅಧ್ಯಯನ ಮಾಡಬಹುದಾಗಿದೆ.

  • ಬಂಡೀಪುರದಲ್ಲಿ ಹುಲಿ ಗಣತಿ ಆರಂಭ: ಲೆಕ್ಕ ಹೇಗೆ ಹಾಕುತ್ತಾರೆ? ಇಲ್ಲಿದೆ ಪೂರ್ಣ ಮಾಹಿತಿ

    ಬಂಡೀಪುರದಲ್ಲಿ ಹುಲಿ ಗಣತಿ ಆರಂಭ: ಲೆಕ್ಕ ಹೇಗೆ ಹಾಕುತ್ತಾರೆ? ಇಲ್ಲಿದೆ ಪೂರ್ಣ ಮಾಹಿತಿ

    ಚಾಮರಾಜನಗರ: ಬಂಡೀಪುರ ಹುಲಿಸಂರರಕ್ಷಿತ ಪ್ರದೇಶದಲ್ಲಿ 5ನೇ ಅಖಿಲ ಭಾರತ ಹುಲಿ ಗಣತಿ ಪ್ರಕ್ರಿಯೆ ಇಂದಿನಿಂದ ಆರಂಭವಾಗಿದೆ. ಹುಲಿ ಅಂದಾಜು ಪ್ರಕ್ರಿಯೆಗೆ ಇದೇ ಮೊದಲ ಬಾರಿಗೆ ಎಂ ಸ್ಟ್ರೈಪ್ಸ್ ಎಂಬ ಎಕೋಲಾಜಿಕಲ್ ಆ್ಯಪ್‍ನ್ನು ಬಳಸಲಾಗುತ್ತಿದೆ.

    ದೇಶದಲ್ಲಿ ಪ್ರತಿ ಐದು ವರ್ಷಕ್ಕೊಮ್ಮೆ ನಡೆಯುವ ಅಖಿಲ ಭಾರತ ಹುಲಿ ಗಣತಿ ಪ್ರಕ್ರಿಯೆ ಚಾಮರಾಜನಗರ ಜಿಲ್ಲೆಯ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲೂ ಆರಂಭವಾಗಿದೆ. ಇಂದಿನಿಂದ ಫೆಬ್ರವರಿ 8 ರವರಗೆ ಗಣತಿ ಪ್ರಕ್ರಿಯೆ ನಡೆಯಲಿದ್ದು, ಮೊದಲ ಹಂತದಲ್ಲಿ ಮಾಂಸಹಾರಿ ಹಾಗೂ ಸಸ್ಯಹಾರಿ ಪ್ರಾಣಿಗಳ ಓಡಾಟಗಳ ಕುರಿತಾದ ಗುರುತುಗಳು, ಅವುಗಳ ಹಿಕ್ಕೆ, ಲದ್ದಿ, ಪಾದದ ಗುರುತು, ಪರಚಿದ ಗುರುತುಗಳನ್ನು ಪತ್ತೆ ಹಚ್ಚುವ ಕಾರ್ಯ ನಡೆಸಲಾಗುತ್ತದೆ. ಬಂಡೀಪುರವನ್ನು ಮೂರು ಬ್ಲಾಕ್‍ಗಳನ್ನಾಗಿ ವಿಂಗಡಿಸಿ 112 ಗಸ್ತುಗಳಲ್ಲಿ ಗಣತಿ ಪ್ರಕ್ರಿಯೆ ನಡೆಸಲಾಗುತ್ತಿದೆ.

    ಕೊರೊನಾ ಸಂದರ್ಭದಲ್ಲಿ ಕಾಡಿನಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗೆ ಹೊರಗಿನಿಂದ ಬಂದವರಿಂದ ಸೋಂಕು ತಗುಲಬಾರದು ಎಂಬ ಉದ್ದೇಶದಿಂದ ಗಣತಿ ಕಾರ್ಯದಲ್ಲಿ ಸ್ವಯಂಸೇವಕರ ಸೇವೆ ಬಳಸಿಕೊಳ್ಳುತ್ತಿಲ್ಲ. ಗಣತಿ ಕಾರ್ಯದಲ್ಲಿ ಉಪವಲಯ ಅರಣ್ಯಾಧಿಕಾರಿಗಳು, ಅರಣ್ಯ ರಕ್ಷಕರು ಅರಣ್ಯ ವೀಕ್ಷಕರು ಸೇರಿದಂತೆ 300 ಹೆಚ್ಚು ಮಂದಿ ಗಣತಿ ಕಾರ್ಯದಲ್ಲಿ ಪಾಲ್ಗೊಂಡಿದ್ದಾರೆ.

    ಹುಲಿಗಳ ಗಣತಿಗೆ ಇದೇ ಮೊದಲ ಬಾರಿಗೆ ಎಂ ಸ್ಟ್ರೈಪ್ಸ್ ಎಂಬ ಎಕಾಲಾಜಿಕಲ್ ಆ್ಯಪ್‍ನ್ನು ಬಳಸಲಾಗುತ್ತಿದೆ. ಎಂ ಸ್ಟ್ರೈಪ್ಸ್ ಆ್ಯಪ್‍ನ್ನು ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರ ಹಾಗೂ ಭಾರತೀಯ ವನ್ಯಜೀವಿವ ಸಂಸ್ಥೆ ಅಭಿವೃದ್ಧಿ ಪಡಿಸಿದ್ದು, ಬಂಡೀಪುರದಲ್ಲಿ 40 ಮೊಬೈಲ್‍ಗಳಿಗೆ ಈ ತಂತ್ರಾಂಶ ಅಳವಡಿಸಲಾಗಿದೆ.

    ಅಂದಾಜು ಪ್ರಕ್ರಿಯೆಗೆ ನಿಯೋಜಿಸಲಾಗಿರುವ ಅರಣ್ಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಲಭ್ಯವಾಗುವ ಮಾಹಿತಿಗಳನ್ನು ಈ ಆ್ಯಪ್‍ನಲ್ಲಿ ದಾಖಲಿಸಲಿದ್ದು, ಹೆಚ್ಚಿನ ನಿಖರತೆ ಇರಲಿದೆ. ಇದನ್ನೂ ಓದಿ: ಉಡುಪಿಯ ಕಾಂಗ್ರೆಸ್ ನಾಯಕಿಗೆ ಚಾಕು ಇರಿತ

    ಈಗಾಗಲೇ ಕ್ಯಾಮೆರಾ ಟ್ರಾಪ್ ಮೂಲಕ ಹುಲಿ ಅಂದಾಜು ಪ್ರಕ್ರಿಯೆಯು ಪೂರ್ಣಗೊಂಡಿದ್ದು, ಅಂತಿಮ ಹಂತದ ಅಂದಾಜು ಪ್ರಕ್ರಿಯೆ ಇದೀಗ ಆರಂಭಗೊಂಡಿದೆ. 2018ರಲ್ಲಿ ಕೈಗೊಂಡಿದ್ದ ನಾಲ್ಕನೇ ಅಖಿಲ ಭಾರತ ಮಟ್ಟದ ಗಣತಿ ಕಾರ್ಯ ಬಂಡಿಪುರ ಸಂರಕ್ಷಿತ ಪ್ರದೇಶದಲ್ಲಿ 173 ಹುಲಿಗಳನ್ನು ಗುರುತಿಸಲಾಗಿತ್ತು. ಈ ಬಾರಿ ಅರಣ್ಯದಲ್ಲಿ ಹುಲಿಗಳ ಸಂಖ್ಯೆ ಹೆಚ್ಚಳವಾಗುವ ನಿರೀಕ್ಷೆ ಇದೆ. ಇದನ್ನೂ ಓದಿ: ಮೃತ ವ್ಯಕ್ತಿಯ ದೇಹದ ಪಕ್ಕ ಸಿಕ್ತು 124 ಹಾವುಗಳು!