Tag: Tiger reserve

  • ಘರ್ಜಿಸುವ ಹುಲಿ ಸಂರಕ್ಷಣೆಗೆ ಬೇಕಿದೆ ಬಲ; ಸಹ್ಯಾದ್ರಿ-ಕೊಂಕಣ ಕಾರಿಡಾರ್‌ ಪ್ಲ್ಯಾನ್‌ ಹೇಗಿದೆ ನೋಡಿ..

    ಘರ್ಜಿಸುವ ಹುಲಿ ಸಂರಕ್ಷಣೆಗೆ ಬೇಕಿದೆ ಬಲ; ಸಹ್ಯಾದ್ರಿ-ಕೊಂಕಣ ಕಾರಿಡಾರ್‌ ಪ್ಲ್ಯಾನ್‌ ಹೇಗಿದೆ ನೋಡಿ..

    ʻʻಮೃತ ಹೆಂಗಸಿನ ಕಾಲುಗಳು ಮೆಲ್ಲನೆ ನನ್ನ ಕೆನ್ನೆ ತಟ್ಟಿದವು ಒಂದೇ ಒಂದು ಶಬ್ಧವೂ ಇಲ್ಲ. ಮತ್ತೆ ಕಾಲುಗಳು ಅಲ್ಲಾಡಿದವು ಶವ ಸಜೀವವಾಗುತ್ತಿದೆಯೇ? ಅಂತ ನನಗೆ ಗಾಬರಿಯಾಯ್ತು. ಕೋವಿ, ಟಾರ್ಚನ್ನು ತೆಗೆದುಕೊಂಡು ಅಲ್ಲಾಡುವ ಹೆಣದ ಪಕ್ಕದಿಂದೆದ್ದು ಓಡಬೇಕು. ಅಷ್ಟರಲ್ಲಿ ನನ್ನ ವಾಸ್ತವ ಪ್ರಜ್ಞೆ ಮರಳಿತು. ಆ ಕಾಲು ಮತ್ತು ವಾರಸುದಾರರು ಸಜೀವಗೊಂಡಿಲ್ಲ. ನರಭಕ್ಷಕ ಅನ್ನು ಸಜೀವಗೊಂಡಂತೆ ಅಲ್ಲಾಡಿಸುತ್ತಿದೆ. ಶವದ ಅಲುಗಾಟಕ್ಕೆ ಕಾರಣ ನನ್ನ ತಲೆಗೆ ಹೊಳೆಯುವ ಹೊತ್ತಿಗಾಗಲೇ ಬೆವರಿನಿಂದ ನನ್ನ ಮೈಯೆಲ್ಲಾ ತೊಯ್ದುಹೋಗಿತ್ತುʼʼ.

    ಅಬ್ಬಬ್ಬಾ ಪೂರ್ಣಚಂದ್ರ ತೇಜಸ್ವಿ ಅವರ ʻಬೆಳ್ಳಂದೂರಿನ ನರಭಕ್ಷಕʼ ಅನುವಾದ ಕೃತಿಯಲ್ಲಿ ಬರುವ ಈ ದೃಶ್ಯವನ್ನು ಓದಿದರೆ ಕಾಡಿನ ಬಗ್ಗೆ, ವನ್ಯಜೀವಿಗಳ ಬಗ್ಗೆ ನೂರಾರು ಕುತೂಹಲಗಳು ಹುಟ್ಟಿಕೊಳ್ಳುತ್ತವೆ. ಮೈ ರೋಮಾಂಚನಗೊಳ್ಳುತ್ತದೆ. ಆದ್ರೆ ಮನುಷ್ಯನಲ್ಲಿ ನಾಗರಿಕತೆ ಬೆಳೆದಂತೆ ವನ್ಯ ಜೀವಿಗಳ ಆವಾಸಸ್ಥಾನಕ್ಕೆ ಕುತ್ತು ಬರುತ್ತಿವೆ. ಅದರಲ್ಲೂ ರಾಷ್ಟ್ರೀಯ ಪ್ರಾಣಿ (National Animal) ಎಂದೇ ಗುರುತಿಸಿಕೊಂಡಿರುವ ಹುಲಿಗಳ ಸಂಖ್ಯೆ ವರ್ಷದಿಂದ ವರ್ಷಕ್ಕೆ ಗಣನೀಯವಾಗಿ ಏರಿಕೆಯಾಗುತ್ತಿದ್ದರೂ ಕೆಲವು ಕಾಡುಗಳಲ್ಲಿ ವಂಶಾಭಿವೃದ್ಧಿಯೇ ಅಳಿಸಿಹೋಗುತ್ತಿದೆ ಎಂದು ವನ್ಯಜೀವಿ (Wildlife) ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

    ಮಹಾರಾಷ್ಟ್ರದ ಪಶ್ಚಿಮ ಪ್ರದೇಶದ ಏಕೈಕ ಹುಲಿ ಸಂರಕ್ಷಿತ ಪ್ರದೇಶವಾದ ಸಹ್ಯಾದ್ರಿ ಹುಲಿ ಸಂರಕ್ಷಿತ ಪ್ರದೇಶದಲ್ಲಿ (Sahyadri Tiger Reserve) ಹುಲಿಗಳ ಸಂತತಿಯನ್ನು ಪುನರುಜ್ಜೀವನಗೊಳಿಸಲು ರಾಜ್ಯದ ಅರಣ್ಯ ಇಲಾಖೆಯು ಹೊಸ ಯೋಜನೆಯೊಂದನ್ನು ಕೈಗೆತ್ತಿಕೊಂಡಿದೆ. ರಾಜ್ಯದ ಅರಣ್ಯ ಇಲಾಖೆಯು ಚಂದ್ರಾಪುರ ಜಿಲ್ಲೆಯ ತಡೋಬಾ-ಅಂಧಾರಿ ಹುಲಿ ಸಂರಕ್ಷತ ಪ್ರದೇಶದಿಂದ ಹುಲಿಗಳನ್ನು ಸ್ಥಳಾಂತರಿಸುವ ಕಾರಿಡಾರ್‌ ಯೋಜನೆಯನ್ನು ಕೈಗೆತ್ತಿಕೊಂಡಿದೆ. ಆದರೆ ʻಸಹ್ಯಾದ್ರಿ ಕೊಂಕಣ ವೈಲ್ಡ್‌ಲೈಫ್‌ ಕಾರಿಡಾರ್‌ʼ (Sahyadri-Konkan wildlife corridor) ಯೋಜನೆಗೆ ಮಹಾರಾಷ್ಟ್ರವೊಂದೇ ಅಲ್ಲ. ಕರ್ನಾಟಕ, ಗೋವಾ ಅರಣ್ಯ ಇಲಾಖೆಗಳೂ ಒಟ್ಟಾಗಿ ಕಾರ್ಯನಿರ್ವಹಿಸಿದ್ರೆ ಈ ಯೋಜನೆ ಯಶಸ್ವಿಯಾಗುತ್ತದೆ ಎಂದು ವನ್ಯಜೀವಿ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

    ಅಷ್ಟಕ್ಕೂ ವನ್ಯಜೀವಿ ಕಾರಿಡಾರ್‌ ಯೋಜನೆಯ ಪ್ರಯೋಜನಗಳೇನು? ಮಹಾರಾಷ್ಟ್ರದ ಸಹ್ಯಾದ್ರಿ ಹುಲಿ ಸಂರಕ್ಷಿತ ಪ್ರದೇಶಕ್ಕೆ ಹುಲಿಗಳನ್ನು ಸ್ಥಳಾಂತರಿಸುವ ಯೋಜನೆ ಹಾಕಿಕೊಂಡಿದ್ದೇಕೆ? ಈ ಯೋಜನೆ ಹುಲಿ ಸಂರಕ್ಷಣೆಗೆ ಹೇಗೆ ಪಾತ್ರವಹಿಸುತ್ತದೆ? ಎಂಬುದನ್ನು ತಿಳಿಯುವ ಕುತೂಹಲ ನಿಮಗಿದ್ದರೆ ಮುಂದೆ ಓದಿ…

    ಸಹ್ಯಾದ್ರಿ ಹುಲಿಸಂರಕ್ಷಿತ ಪ್ರದೇಶ ಹೇಗಿದೆ?

    ಉತ್ತರ ಭಾರತದ ಪಶ್ಚಿಮ ಘಟ್ಟಗಳಲ್ಲಿ ಸಹ್ಯಾದ್ರಿ ಹುಲಿ ಸಂರಕ್ಷಿತ ಪ್ರದೇಶ ನೆಲೆಗೊಂಡಿದೆ. 2010ರಲ್ಲಿ ಈ ಪ್ರದೇಶವನ್ನು ಹುಲಿ ಸಂರಕ್ಷಿತ ಪ್ರದೇಶವನ್ನಾಗಿ ಮಾಡಲಾಯಿತು. ಇದು ಮಹಾರಾಷ್ಟ್ರದ ಕೊಲ್ಲಾಪುರ, ಸತಾರಾ, ಸಾಂಗ್ಲಿ ಮತ್ತು ರತ್ನಗಿರಿ ಜಿಲ್ಲೆಗಳನ್ನು ವ್ಯಾಪಿಸಿದೆ. ಅಲ್ಲದೇ ಚಂದೋಲಿ ರಾಷ್ಟ್ರೀಯ ಉದ್ಯಾನವನ ಮತ್ತು ಕೊಯ್ನಾ ವನ್ಯಜೀವಿ ಅಭಯಾರಣ್ಯಗಳೊಂದಿಗೆ ತನ್ನ ವ್ಯಾಪ್ತಿಯನ್ನು ಹಂಚಿಕೊಂಡಿದೆ. ಕಳ್ಳಬೇಟೆ, ಬದಲಾಗುತ್ತಿರುವ ಆವಾಸಸ್ಥಾನ, ಸಂತಾನೋತ್ಪತ್ತಿ ಕುಂಠಿತಗೊಂಡಿದ್ದರಿಂದಾಗಿ ಈ ಪ್ರದೇಶದಲ್ಲಿ ಹುಲಿಗಳ ಸಂಖ್ಯೆ ಗಣನೀಯವಾಗಿ ಕಡಿಮೆಯಾಗಿದೆ. ಸದ್ಯಕ್ಕೆ ಸಿಕ್ಕಿರುವ ಫೋಟೋ ಸಾಕ್ಷ್ಯಗಳ ಪ್ರಕಾರ ಸಹ್ಯಾದ್ರಿ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಕೇವಲ 7-8 ಹುಲಿಗಳು ಮಾತ್ರ ಇವೆ ಎಂದು ಅಂದಾಜಿಸಲಾಗಿದೆ. ಅದಕ್ಕಾಗಿಯೇ ಮಹಾರಾಷ್ಟ್ರ ಅರಣ್ಯ ಇಲಾಖೆಯು ಹುಲಿಗಳನ್ನು ಸ್ಥಳಾಂತರಿಸುವ ಯೋಜನೆಯನ್ನು ಕೈಗೆತ್ತಿಕೊಂಡಿದೆ. ಇಲ್ಲಿನ ಹುಲಿಗಳ ಸಂಖ್ಯೆ ಹೆಚ್ಚಿಸಲು ಕರ್ನಾಟಕ ಮತ್ತು ಗೋವಾ ಅರಣ್ಯ ಪ್ರದೇಶಗಳಿಂದ ಹುಲಿಗಳನ್ನು ಸ್ಥಳಾಂತರಿಸುವ ಕೆಲಸ ಆಗಬೇಕು. ಇದರೊಂದಿಗೆ ಹುಲಿಗಳ ಸಂತಾನೋತ್ಪತ್ತಿಗೆ ಸೂಕ್ತ ವಾತಾವರಣವನ್ನೂ ಕಲ್ಪಿಸಿಕೊಟ್ಟಲ್ಲಿ, ಈ ಯೋಜನೆ ಯಶಸ್ವಿಯಾಲಿದೆ ಎಂದು ತಜ್ಞರು ಹೇಳುತ್ತಾರೆ.

    ದೇಶದಲ್ಲಿ ಹುಲಿಗಳ ಸಂಖ್ಯೆ ಎಷ್ಟಿದೆ?

    2006 ರಿಂದಲೂ ದೇಶದಲ್ಲಿ ಹುಲಿಗಳ ಸಂಖ್ಯೆ ಏರುಗತಿಯಲ್ಲಿ ಸಾಗುತ್ತಿದೆ. ಹೌದು. 2006ರಲ್ಲಿ ಹುಲಿಗಳ ಸಂಖ್ಯೆ 1,411 ಆಗಿತ್ತು. ಆ ನಂತರ 2010 ರಲ್ಲಿ 1,706, 2014ರಲ್ಲಿ 2,226, 2018ರಲ್ಲಿ 2,967 ಇದ್ದ ಹುಲಿಗಳ ಸಂಖ್ಯೆ 2022ರ ಅಂಕಿ ಅಂಶದ ಪ್ರಕಾರ 3,682ಕ್ಕೆ ಹುಲಿಗಳ ಸಂಖ್ಯೆ ಏರಿಕೆಯಾಗಿದೆ.

    ಹುಲಿಗಳ ಸ್ಥಳಾಂತರ ಉತ್ತಮ ವಿಧಾನವೇ?

    ಭಾರತದಲ್ಲಿ 2008 ರಿಂದ ಹುಲಿಗಳ ಸ್ಥಳಾಂತರ (translocate tigers) ಯೋಜನೆಯನ್ನು ಪ್ರಾರಂಭಿಸಲಾಯಿತು. 2008ರಲ್ಲಿ ಸರಿಸ್ಕಾ ಹುಲಿ ಸಂರಕ್ಷಿತ ಪ್ರದೇಶ, 2009ರಲ್ಲಿ ಪನ್ನಾ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಈ ಯೋಜನೆ ಯಶಸ್ವಿಯಾಗಿರುವ ಉದಾಹರಣೆಯೂ ಇದೆ. ಅಲ್ಲದೇ ದೇಶದಲ್ಲೇ ಮೊದಲ ಅಂತರರಾಜ್ಯ ಸ್ಥಳಾಂತರ ಯೋಜನೆಗೆ ಕೈಹಾಕಿ ಒಡಿಶಾದ ಸತ್ಕೋಸಿಯಾ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಯೋಜನೆ ವೈಫಲ್ಯ ಅನುಭವಿಸಿದ ಉದಾಹರಣೆಯೂ ಇದೆ.

    ಈ ಕುರಿತು ಪ್ರತಿಕ್ರಿಯೆ ನೀಡಿರುವ ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರದ ಮಾಜಿ ಸದಸ್ಯ ಕಾರ್ಯದರ್ಶಿ ಅನುಪ್ ನಾಯಕ್, ಹುಲಿಗಳ ಸ್ಥಳಾಂತರ ಉಪಕ್ರಮವು ದೀರ್ಘಾವಧಿ ಯೋಜನೆಯಾಗಿದ್ದು, ಕೊನೇ ಆಯ್ಕೆಯಾಗಿ ಇಟ್ಟುಕೊಳ್ಳಬೇಕು. ಮೊದಲಿಗೆ ಹುಲಿಗಳ ಆವಾಸಸ್ಥಾ ಸುಧಾರಣೆ, ಕಳ್ಳಬೇಟೆಯಿಂದ ರಕ್ಷಣೆ, ಹುಲಿ ಸಂರಕ್ಷಿತಾರಣ್ಯಗಳ ಅಭಿವೃದ್ಧಿಪಡಿಸುವಂತಹ ಆಯ್ಕೆಗಳನ್ನು ನಿರ್ಣಿಸಬೇಕು. ಹುಲಿಗಳನ್ನು ಸ್ಥಳಾಂತರಿಸುವುದರಿಂದ ಒಳ್ಳೆಯದ್ದು ಆಗಬಹುದು, ವಿಫಲವೂ ಆಗಬಹುದು. ಹಾಗಾಗಿ ಅದನ್ನು ಕೊನೇ ಆಯ್ಕೆಯಾಗಿ ಇಟ್ಟುಕೊಳ್ಳಬೇಕು. ಸ್ಥಳಾಂತರಿಸಿದ ನಂತರವು ಅವು ಜನವಸತಿ ಪ್ರದೇಶಗಳಿಂದ ಮುಕ್ತವಾಗಿವೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಬೇಕು. ಬಳಿಕ ಅವರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಯೋಜನೆಗೆ ಕೈಹಾಕಬೇಕು ಎಂದು ಸಲಹೆ ನೀಡಿದ್ದಾರೆ.

    ಜನರನ್ನೂ ಕೊಂದಿತ್ತು.. ಹುಲಿಯೂ ಸತ್ತಿತ್ತು..

    ಈ ಹಿಂದೆ ಸತ್ಕೋಸಿಯಾ ಮೀಸಲು ಅರಣ್ಯದಲ್ಲಿ ಹುಲಿಗಳನ್ನು ಸ್ಥಳಾಂತರಿಸುವ ಯೋಜನೆ ವಿಫಲವಾಗಿತ್ತು. 2018ರಲ್ಲಿ ಕನ್ಹಾ ಸಂರಕ್ಷಿತ ಪ್ರದೇಶದಿಂದ ಒಂದು ಗಂಡು ಮತ್ತು ಒಂದು ಹೆಣ್ಣು ಹುಲಿಯನ್ನು ಸತ್ಕೋಸಿಯಾ ಪ್ರದೇಶಕ್ಕೆ ಸ್ಥಳಾಂತರಿಸಲಾಗಿತ್ತು. ಆದ್ರೆ ಕಳಪೆ ನಿರ್ವಹಣೆಯಿಂದಾಗಿ ಹುಲಿಗಳು ಸ್ಥಳೀಯರ ಮೇಲೆ ದಾಳಿ ಮಾಡತೊಡಗಿದ್ದವು, ಕೆಲವರನ್ನು ಕೊಂದುಹಾಕಿದ್ದವು. ಇದರಿಂದ ರೊಚ್ಚಿಗೆದ್ದ ಸ್ಥಳೀಯರು ಅರಣ್ಯ ಇಲಾಖೆ ವಿರುದ್ಧ ಹಿಂಸಾತ್ಮಕ ಪ್ರತಿಭಟನೆ ನಡೆಸಿದ್ದರು. ಕೊನೆಗೆ ಅಲ್ಲಿದ್ದ ʻಮಹಾವೀರ್‌ʼ ಎಂಬ ಗಂಡು ಹುಲಿ ಉರುಳಿಗೆ ಸಿಕ್ಕಿ ಸಾವನ್ನಪ್ಪಿತ್ತು. ಬಳಿಕ ಈ ಯೋಜನೆಯ ಪ್ರಸ್ತಾಪವನ್ನೇ ನಿಲ್ಲಿಸಲಾಗಿತ್ತು.

    ಸಹ್ಯಾದ್ರಿ-ಕೊಂಕಣ ಕಾರಿಡಾರ್‌ನ ಪ್ರಾಮುಖ್ಯತೆ ಏನು?

    ಈ ಯೊಜನೆಯು ಸಹ್ಯಾದ್ರಿ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಹುಲಿಗಳ ಸಂಖ್ಯೆಯನ್ನು ಹೆಚ್ಚಿಸುವ ಉದ್ದೇಶ ಹೊಂದಿದೆ. ಜೊತೆಗೆ ಸಹ್ಯಾದ್ರಿ, ರಾಧನಗರಿ, ಗೋವಾ, ಕರ್ನಾಟಕ, ಕಾರಿಡಾರ್‌ ಮತ್ತು ಪಶ್ಚಿಮ ಘಟ್ಟಗಳಲ್ಲಿ ದೀರ್ಘಾವಧಿವರೆಗೆ ಸಂರಕ್ಷಣೆ ಮಾಡುವ ಉದ್ದೇಶವಾಗಿದೆ. ಈ ಕಾರಿಡಾರ್‌ ಕರ್ನಾಟಕದ ʻಕಾಳಿʼ ಸಂರಕ್ಷಿತ ಪ್ರದೇಶ ಹಾಗೂ ಗೋವಾ ಒಳನಾಡಿನ ಕಾಡುಗಳನ್ನೂ ಸಂಪರ್ಕಿಸುತ್ತದೆ. ಜೊತೆಗೆ ರಾಧಾನಗರಿ ವನ್ಯಜೀವಿ ಅಭಯಾರಣ್ಯ, ಸಿಂಧುದುರ್ಗ ಜಿಲ್ಲೆಯ ಸಂರಕ್ಷಣಾ ಮೀಸಲು ಪ್ರದೇಶವನ್ನು ಸಂಪರ್ಕಿಸುತ್ತದೆ. ಈ ಕಾರಿಡಾರ್‌ಗಳು ವನ್ಯಜೀವಿಗಳಿಗೆ ಮಾತ್ರವಲ್ಲದೇ ಗೋವಾ ಮತ್ತು ಕರ್ನಾಟಕದ ಈ ಕಾಡುಗಳ ಸುತ್ತ ವಾಸಿಸುವ ಸಮುದಾಯಗಳ ನೀರಿನ ಸಂರಕ್ಷಣೆಗೂ ಸಹಾಯಕವಾಗಲಿದೆ. ಆದ್ದರಿಂದ ಮಹಾರಾಷ್ಟ್ರ, ಗೋವಾ ಮತ್ತು ಕರ್ನಾಟಕದ ನಡುವೆ ಉತ್ತಮ ಸಮನ್ವಯತೆಯ ಅಗತ್ಯವಿದೆ ಎಂದು ತಜ್ಞರು ಹೇಳಿದ್ದಾರೆ.

    ಹುಲಿಗಳ ಯೋಜನೆಗೆ ಆಯ್ಕೆ ಹೇಗೆ?

    ಹುಲಿಯೋಜನೆ ಸಂರಕ್ಷಿತ ಪ್ರದೇಶ ಆಯ್ಕೆಗೆ ಮಾನಂದಡವಾಗಿದ್ದು ಹುಲಿಗಳ ಸಂಖ್ಯೆಯ ಜತೆಗೆ ವಾಸಕ್ಕೆ ಪೂರಕವಾದ ಅಲ್ಲಿನ ದಟ್ಟಾರಣ್ಯದ ಪ್ರಮಾಣ. ಇದನ್ನು ಗಮನಿಸಿಯೇ ಮೊದಲ ಹಂತದಲ್ಲಿ 9 ಪ್ರದೇಶ ಗುರುತಿಸಲಾಯಿತು. ಇನ್ನಷ್ಟು ಅರಣ್ಯಗಳಲ್ಲಿ ಹುಲಿ ಸಂರಕ್ಷಣೆ ಸಾಧ್ಯವಿದೆ ಎನ್ನುವ ಮಾಹಿತಿ ಆಧರಿಸಿ ವಿಸ್ತರಿಸಲಾಗಿದೆ. ಜನಸಮುದಾಯದಿಂದ ಮುಕ್ತವಾದ ವನ್ಯಜೀವಿಗಳಿಗೆ ಮಾತ್ರ ಮೀಸಲಾದ ಸ್ಥಳ ನಿಗದಿಪಡಿಸುವ (ಕೋರ್ ಬಫರ್) ಲೆಕ್ಕಾಚಾರದ ಮೇಲೆಯೇ ಹುಲಿ ಸಂರಕ್ಷಿತ ಪ್ರದೇಶ ಗುರುತಿಸಲಾಗಿದೆ.

    ಹುಲಿ ಯೋಜನೆಯಿಂದ ಪ್ರಯೋಜನವೇನು?

    ಹುಲಿ ಯೋಜನೆ ಅನುಷ್ಠಾನಗೊಂಡ ನಂತರ ಸಂಪೂರ್ಣ ಅಳಿವಿನ ಅಂಚಿಗೆ ತಲುಪಿದ್ದ ಹುಲಿಯನ್ನು ಸಂರಕ್ಷಿಸಲು ಸಾಧ್ಯವಾಗಿದೆ. ಈಗ ಹುಲಿಗೂ ತನ್ನದೇ ಪ್ರದೇಶದಲ್ಲಿ ನೆಮ್ಮದಿಯಿಂದ ಬದುಕುವ ಅವಕಾಶ. ಬಂಡೀಪುರ, ನಾಗರಹೊಳೆ, ರಣ ತಂಭೋರ್‌, ಕನ್ಹಾ ಸೇರಿದಂತೆ ಹಲವು ಪ್ರದೇಶಗಳು ಹುಲಿ ಸಂರಕ್ಷಣೆ ಮತ್ತು ವಂಶಾಭಿವೃದ್ಧಿಗೆ ಯೋಗ್ಯವಾದ ಸ್ಥಳಗಳಾಗಿವೆ. ಹುಲಿ ಯೋಜನೆ ಜಾರಿಗೊಳಿಸಿದ ಕೆಲವೇ ವರ್ಷದಲ್ಲಿ ಸುರಕ್ಷಿತ ವಲಯ ರೂಪುಗೊಂಡು ಹುಲಿಗಳ ಸಂಖ್ಯೆಯಲ್ಲೂ ಗಣನೀಯ ಏರಿಕೆ ಕಂಡು ಬಂದಿದೆ.

    – ಮೋಹನ ಬನ್ನಿಕುಪ್ಪೆ, ಮೈಸೂರು

  • ಮಧ್ಯಪ್ರದೇಶದ ಸಂರಕ್ಷಿತಾರಣ್ಯದಲ್ಲಿ 7 ತಿಂಗಳ ಹುಲಿ ಮರಿ ಅನುಮಾನಾಸ್ಪದ ಸಾವು

    ಮಧ್ಯಪ್ರದೇಶದ ಸಂರಕ್ಷಿತಾರಣ್ಯದಲ್ಲಿ 7 ತಿಂಗಳ ಹುಲಿ ಮರಿ ಅನುಮಾನಾಸ್ಪದ ಸಾವು

    ಭೋಪಾಲ್: ಮಧ್ಯಪ್ರದೇಶದ (Madhya Pradesh) ಬಾಂಧವಗಢ (Bandhavgarh) ಹುಲಿ ಸಂರಕ್ಷಿತಾರಣ್ಯದಲ್ಲಿ (Tiger Reserve) ಏಳು ತಿಂಗಳ ಹೆಣ್ಣು ಹುಲಿ ಮರಿಯೊಂದು (Female Tiger Cub) ಅನುಮಾನಾಸ್ಪದವಾಗಿ ಸಾವನ್ನಪ್ಪಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಬಾಂಧವಗಢ ಹುಲಿ ಸಂರಕ್ಷಿತ ಪ್ರದೇಶದ ಸಹಾಯಕ ಅರಣ್ಯ ಸಂರಕ್ಷಣಾ ಅಧಿಕಾರಿ ಎಫ್‌ಎಸ್ ನಿನಾಮ, ಹೆಣ್ಣು ಹುಲಿಮರಿ ಇನ್ನೊಂದು ಹುಲಿಯೊಂದಿಗೆ ಕಾದಾಟ ಮಾಡುವ ವೇಳೆ ಸಾವನ್ನಪ್ಪಿರಬಹುದು ಎಂದು ಶಂಕಿಸಲಾಗಿದೆ. ಹುಲಿ ಮರಿಯ ಮೃತದೇಹದಲ್ಲಿ ಮತ್ತೊಂದು ಹುಲಿಯ ಪಗ್‌ಮಾರ್ಕ್ (Pug Mark) ಪತ್ತೆಯಾಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ದೇಶದಲ್ಲಿ ಬಾಂಬ್ ಸ್ಫೋಟದ ಬೆದರಿಕೆ, ಪ್ರಧಾನಿ ಕೊಲ್ಲುವುದಾಗಿ ಕಾಮೆಂಟ್: ಆರೋಪಿಗಾಗಿ ತೀವ್ರ ಶೋಧ

    ಘಟನೆಯ ಕುರಿತು ತನಿಖೆ ನಡೆಯುತ್ತಿದ್ದು, ತನಿಖೆಗೆ ಸಹಾಯವಾಗಲು ಶ್ವಾನದಳವನ್ನು (Dog Squads) ಕರೆತರಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕಳೆದ ತಿಂಗಳು ಅಂದರೆ ಜುಲೈ ತಿಂಗಳಿನಲ್ಲಿ ಮಧ್ಯಪ್ರದೇಶ ಮತ್ತೊಮ್ಮೆ ಹುಲಿರಾಜ್ಯವಾಗಿ ಹೊರಹೊಮ್ಮಿದ್ದು, ಒಟ್ಟು 785 ಹುಲಿಗಳನ್ನು ಈ ರಾಜ್ಯ ಒಳಗೊಂಡಿದೆ. ಇದನ್ನೂ ಓದಿ: ಹನಿಮೂನ್‍ಗೆ ಬಂದು ಪತಿಯನ್ನು ಹೋಟೆಲ್‍ನಲ್ಲೇ ಬಿಟ್ಟು ಹೋದ ಪತ್ನಿ!

    ಹುಲಿಗಳ ಸಂಖ್ಯೆಯಲ್ಲಿ ಮಧ್ಯಪ್ರದೇಶ ಅಗ್ರಸ್ಥಾನದಲ್ಲಿದ್ದು, ಕರ್ನಾಟಕದಲ್ಲಿ 563, ಉತ್ತರಾಖಂಡದಲ್ಲಿ 560 ಮತ್ತು ಮಹಾರಾಷ್ಟ್ರ 444 ಹುಲಿಗಳನ್ನು ಒಳಗೊಂಡಿದೆ. ಅಲ್ಲದೇ ಮಧ್ಯಪ್ರದೇಶದಲ್ಲಿ ಒಟ್ಟು ಆರು ಹುಲಿ ಸಂರಕ್ಷಿತ ಪ್ರದೇಶಗಳಿವೆ. ಅವುಗಳೆಂದರೆ ಕನ್ಹಾ ಹುಲಿ ಸಂರಕ್ಷಿತ ಪ್ರದೇಶ, ಬಾಂಧವಗಢ ಹುಲಿ ಸಂರಕ್ಷಿತ ಪ್ರದೇಶ, ಪನ್ನಾ ಹುಲಿ ಸಂರಕ್ಷಿತ ಪ್ರದೇಶ, ಪೆಂಚ್ ಹುಲಿ ಸಂರಕ್ಷಿತ ಪ್ರದೇಶ, ಸತ್ಪುರ ಹುಲಿ ಸಂರಕ್ಷಿತ ಪ್ರದೇಶ ಮತ್ತು ಸಂಜಯ್ ದುಬ್ರಿ ಹುಲಿ ಸಂರಕ್ಷಿತ ಪ್ರದೇಶ. ಇದನ್ನೂ ಓದಿ: ಗೇ ಡೇಟಿಂಗ್ ಆ್ಯಪ್‌ನಲ್ಲಿ ಯುವಕರಿಗೆ ವಂಚನೆ- 6 ಮಂದಿ ಅರೆಸ್ಟ್

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕಾಡುಗಳ್ಳರೇ ಹುಷಾರ್! ಬಿಆರ್​​ಟಿಗೆ ಬಂದಾಯ್ತು ಸ್ನೈಪರ್ ಡಾಗ್ ಝಾನ್ಸಿ

    ಕಾಡುಗಳ್ಳರೇ ಹುಷಾರ್! ಬಿಆರ್​​ಟಿಗೆ ಬಂದಾಯ್ತು ಸ್ನೈಪರ್ ಡಾಗ್ ಝಾನ್ಸಿ

    ಚಾಮರಾಜನಗರ: ತನ್ನ ಶಕ್ತಿ, ಚತುರತೆ, ಸೂಕ್ಷ್ಮತೆಯಿಂದ ಬೇಟೆಗಾರನ ಪತ್ತೆ ಹಚ್ಚುವಲ್ಲಿ ಬಂಡೀಪುರದ ರಾಣಾದಂತೆ ಬಿಆರ್​​ಟಿ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಬೇಟೆಗಾರರ ಸೊಕ್ಕಡಗಿಸಲು ಝಾನ್ಸಿ ಎಂಬ ಸ್ನೈಫರ್ ಡಾಗ್ ಚಂಡೀಗಢದಲ್ಲಿ ತರಬೇತಿ ಮುಗಿಸಿಕೊಂಡು ಬಿಳಿಗಿರಿರಂಗನ ಬೆಟ್ಟದ ಹುಲಿ ಸಂರಕ್ಷಿತಾರಣ್ಯಕ್ಕೆ ಎಂಟ್ರಿ ಕೊಟ್ಟಿದೆ.

    ಬಂಡೀಪುರದಲ್ಲಿ ತನ್ನ ಪರಾಕ್ರಮ ಮೆರೆಯುತ್ತಿರುವ ರಾಣಾದಂತೆ ಬಿಆರ್​​ಟಿ  ಹುಲಿ ಸಂರಕ್ಷಿತ ಪ್ರದೇಶಕ್ಕೆ ಝಾನ್ಸಿ ಎಂಬ ಜರ್ಮನ್ ಶೆಫರ್ಡ್ ತಳಿಯ ಶ್ವಾನವು ಚಂಡೀಗಢದಲ್ಲಿ ಸ್ವಯಂ ಸೇವಾ ಸಂಸ್ಥೆಯಾದ ಬಿಟಿಸಿ-ಐಟಿಬಿಪಿ ಶಿಬಿರದಲ್ಲಿ 7 ತಿಂಗಳ ಕಠಿಣ ತರಬೇತಿ ಬಳಿಕ ಬಿಳಿಗಿರಿರಂಗನ ಬೆಟ್ಟದ ಹುಲಿ ಸಂರಕ್ಷಿತಾರಣ್ಯದಲ್ಲಿ ಕಾರ್ಯಾರಂಭ ಮಾಡಿದೆ. ಇದನ್ನೂ ಓದಿ: ಹುಲಿಗಿಟ್ಟಿದ್ದ ಬೋನಿನಲ್ಲಿ ಚಿರತೆ ಸೆರೆ – ರೈತರಿಗಿನ್ನು ದೂರವಾಗಿಲ್ಲ ವ್ಯಾಘ್ರನ ಆತಂಕ

    ಸದ್ಯಕ್ಕೆ ಪುಣಜನೂರು ವಲಯದಲ್ಲಿ ಶ್ವಾನವನ್ನು ಬಳಸಿಕೊಳ್ಳಲು ಅರಣ್ಯ ಇಲಾಖೆ ಮುಂದಾಗಿದ್ದು, ಝಾನ್ಸಿಯನ್ನು ನೋಡಿಕೊಳ್ಳಲು ಫಾರೆಸ್ಟ್ ಗಾರ್ಡ್ ಬಸವರಾಜು ಹಾಗೂ ವಾಚರ್ ಸಿದ್ದರಾಮಣ್ಣ ಎಂಬವರಿಗೂ ತರಬೇತಿ ಕೊಡಲಾಗಿದೆ. ಇದನ್ನೂ ಓದಿ: ಹೋಂ ವರ್ಕ್ ಮಾಡದ ಮಗನ ಕೈ,ಕಾಲು ಕಟ್ಟಿ ಫ್ಯಾನಿಗೆ ನೇತು ಹಾಕಿದ ತಂದೆ

    ಬಿಆರ್​​ಟಿ ಹುಲಿ ಸಂರಕ್ಷಿತಾರಣ್ಯ ಪ್ರದೇಶದಲ್ಲಿ ಈವರೆಗೂ ಸ್ನೈಫರ್ ಡಾಗ್ ಒಂದೂ ಕೂಡ ಇರಲಿಲ್ಲ. ಇದೇ ಮೊದಲ ಬಾರಿಗೆ ಝಾನ್ಸಿ ಬಿಆರ್​​ಟಿಗೆ ಕಾಲಿಟ್ಟಿದ್ದು ಈ ಶ್ವಾನ ಬಳಸಿಕೊಂಡು ಮರಗಳ್ಳತನ, ಕಳ್ಳಬೇಟೆಗಳಂತಹ ಅಪರಾಧ ಚಟುವಟಿಕೆಗಳಿಗೆ ಕಡಿವಾಣ ಹಾಕುವ ವಿಶ್ವಾಸ ಅರಣ್ಯಾಧಿಕಾರಿಗಳದಾಗಿದೆ. ಈಗಾಗಲೇ ಬಂಡೀಪುರದ ಹುಲಿ ಸಂರಕ್ಷಿತ ಪ್ರದೇಶದಲ್ಲಿ ರಾಣಾ ಮತ್ತು ಮುಧೋಳ ತಳಿಯ ಮಾರ್ಗರೇಟ್ ಶ್ವಾನಗಳಿವೆ. ಕಳ್ಳಬೇಟೆಗಾರರು, ಹುಲಿ ಪತ್ತೆ ಕಾರ್ಯಾಚರಣೆ, ಇನ್ನಿತರ ಅರಣ್ಯ ಅಪರಾಧ ಪ್ರಕರಣ ಪತ್ತೆಗೆ ಝಾನ್ಸಿ ಅರಣ್ಯ ಇಲಾಖೆಗೆ ವರವಾಗಿ ಪರಿಣಮಿಸಲಿದೆ.

  • ಹೆದ್ದಾರಿ ಅಗಲೀಕರಣಕ್ಕೆ ಪ್ರಸ್ತಾಪ – ಬಂಡೀಪುರಕ್ಕೆ ಎದುರಾಗಲಿದ್ಯಾ ಕಂಟಕ?

    ಹೆದ್ದಾರಿ ಅಗಲೀಕರಣಕ್ಕೆ ಪ್ರಸ್ತಾಪ – ಬಂಡೀಪುರಕ್ಕೆ ಎದುರಾಗಲಿದ್ಯಾ ಕಂಟಕ?

    ಚಾಮರಾಜನಗರ: ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ವಿಶ್ವ ವಿಖ್ಯಾತ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ರಸ್ತೆ ಅಗಲೀಕರಣಕ್ಕೆ ಮುಂದಾಗಿದೆ. ಆದರೆ ರಸ್ತೆಯ ಅಗಲೀಕರಣಕ್ಕೆ ಲಕ್ಷಾಂತರ ಮರಗಳನ್ನು ಕಡಿಯುವ ಸಾಧ್ಯತೆಗಳಿರುವುದರಿಂದ ಹುಲಿ, ಆನೆ ಸೇರಿದಂತೆ ವನ್ಯಜೀವಿಗಳ ಆವಾಸ ಸ್ಥಾನವಾಗಿರುವ ಬಂಡೀಪುರಕ್ಕೆ ಕಂಟಕ ಎದುರಾಗಲಿದೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ.

    ಗುಂಡ್ಲುಪೇಟೆಯಿಂದ ತಮಿಳುನಾಡಿನ ಊಟಿಗೆ ಸಂಪರ್ಕ ಕಲ್ಪಿಸುವ ಬಂಡೀಪುರದ ಅರಣ್ಯದ ನಡುವೆ ಹಾದು ಹೋಗುವ ಹೆದ್ದಾರಿ ಸಂಖ್ಯೆ 181 ರಲ್ಲಿ ಮೇಲು ಕಾಮನಹಳ್ಳಿಯಿಂದ ಕೆಕ್ಕನಹಳ್ಳದವರೆಗಿನ 13.2 ಕಿ.ಮೀ ರಸ್ತೆಯನ್ನು ಅಗಲೀಕರಣ ಮಾಡುವ ಪ್ರಸ್ತಾಪವನ್ನು ಅರಣ್ಯ ಇಲಾಖೆಗೆ ಸಲ್ಲಿಸಿದೆ. ಇದಕ್ಕಾಗಿ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಸುಮಾರು 24 ಎಕರೆಗಳಷ್ಟು ಜಾಗವನ್ನು ನೀಡಬೇಕೆಂದು ಕೇಂದ್ರ ಪರಿಸರ ಮತ್ತು ಅರಣ್ಯ ಖಾತೆಯ ಅನುಮತಿ ಕೋರಿದೆ. ಇದನ್ನೂ ಓದಿ: ನಂದಿಬೆಟ್ಟಕ್ಕೆ ಶಾಶ್ವತ ರಸ್ತೆ ನಿರ್ಮಾಣ ಆಗೋವರೆಗೂ ಪ್ರವಾಸಿಗರಿಗೆ ನಿಷೇಧ 

    ಈಗಾಗಲೇ 2 ಹೆದ್ದಾರಿಗಳು ಬಂಡೀಪುರ ಹುಲಿ ಸಂರಕ್ಷಣಾಧಾಮದ ಮೂಲಕ ಹಾದು ಹಾದುಹೋಗುತ್ತಿವೆ. ಈ ಹೆದ್ದಾರಿಗಳಿಂದ ಈಗಾಗಲೇ ವನ್ಯಜೀವಿಗಳ ಸ್ವಚ್ಛಂದ ಓಡಾಟದ ಮೇಲೆ ತೀವ್ರ ಪರಿಣಾಮ ಬೀರಿದೆ. ಅತಿಯಾದ ವಾಹನಗಳ ಓಡಾಟದಿಂದ ಶಬ್ದ ಮಾಲಿನ್ಯ, ಘನ ತ್ಯಾಜ್ಯ ಇತ್ಯಾದಿಗಳಿಂದಾಗುವ ಮಾಲಿನ್ಯ, ವನ್ಯಜೀವಿಗಳ ವರ್ತನೆಗಳ ಮೇಲೆ ಪ್ರಭಾವ ಮತ್ತು ಇತರ ಹಲವಾರು ತೊಂದರೆಗಳನ್ನು ವನ್ಯಜೀವಿಗಳು ಈ ಹೆದ್ದಾರಿಗಳಿಂದ ಎದುರಿಸುತ್ತಿವೆ. ಇದನ್ನೂ ಓದಿ: ಸೆಕ್ಸ್ ವೇಳೆ ಕಾಂಡೋಮ್ ಬದಲು ಗಮ್ ಹಚ್ಚಿ ಪ್ರಾಣವೇ ಕಳ್ಕೊಂಡ! 

    ಅರಣ್ಯದಲ್ಲಿ ಹುಲಿಯೂ ಸೇರಿದಂತೆ ಆನೆ, ಚಿರತೆ, ಜಿಂಕೆ, ಕಡವೆ ಹಾಗೂ ಇನ್ನಿತರೇ ಪ್ರಾಣಿಗಳು ಅತೀ ವೇಗವಾಗಿ ಸಂಚರಿಸುವ ವಾಹನಗಳಿಗೆ ಸಿಲುಕಿ ಮೃತಪಟ್ಟಿವೆ. ಲೆಕ್ಕವಿರದಷ್ಟು ಉಭಯ ಚರಜೀವಿಗಳು, ಸರೀಸೃಪಗಳು, ಹಕ್ಕಿಗಳು ತಮ್ಮ ಜೀವ ಕಳೆದುಕೊಂಡಿವೆ. ಈಗ ರಸ್ತೆ ಅಗಲೀಕರಣ ಮಾಡಲು ಲಕ್ಷಾಂತರ ಮರಗಳನ್ನು ಕಡಿಯಬೇಕಾಗುತ್ತದೆ. ವನ್ಯ ಪ್ರಾಣಿಗಳ ಆವಾಸಸ್ಥನಕ್ಕೆ ಧಕ್ಕೆಯಾಗಲಿದೆ ಎಂದು ವನ್ಯಜೀವಿ ತಜ್ಞರು ಪರಿಸರವಾದಿಗಳು ಆತಂಕ ವ್ಯಕ್ತಪಡಿಸಿದ್ದಾರೆ.

    ಅರಣ್ಯ ಪರಿಸರಕ್ಕೆ ಮಾರಕವಾಗಿರುವ ಹೆದ್ದಾರಿ ಅಗಲೀಕರಣಕ್ಕೆ ಅವಕಾಶ ನೀಡಬಾರದು. ಅವಕಾಶ ನೀಡಿದಲ್ಲಿ ಸೂಕ್ಷ್ಮ ಪರಿಸರ ವಲಯದ ನೀತಿ ನಿಯಮಗಳ ಉಲ್ಲಂಘನೆಯಾಗಲಿದೆ ಎಂಬುದು ಪರಿಸರವಾದಿಗಳ ಅಭಿಮತವಾಗಿದೆ.

  • ಬಂಡೀಪುರ ರಾತ್ರಿ ಸಂಚಾರ ನಿಷೇಧ- ಸುಪ್ರೀಂಗೆ ಕೇಂದ್ರದ ಅಫಿಡೆವಿಟ್

    ಬಂಡೀಪುರ ರಾತ್ರಿ ಸಂಚಾರ ನಿಷೇಧ- ಸುಪ್ರೀಂಗೆ ಕೇಂದ್ರದ ಅಫಿಡೆವಿಟ್

    ನವದೆಹಲಿ: ಬಂಡೀಪುರ ಹುಲಿ ರಕ್ಷಿತಾರಣ್ಯವನ್ನು ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ 766ರಲ್ಲಿ ರಾತ್ರಿ ಸಂಚಾರ ನಿಷೇಧ ಕುರಿತಂತೆ ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟಿಗೆ ಅಫಿಡೆವಿಟ್ ಸಲ್ಲಿಕೆ ಮಾಡಿದೆ.

    ಕೇರಳ ಮತ್ತು ಕರ್ನಾಟಕ ನಡುವಿನ ಸಂಚಾರಕ್ಕೆ ಕೇಂದ್ರ ಸರ್ಕಾರ ಅಫಿಡೆಟಿವ್‍ನಲ್ಲಿ ಪರ್ಯಾಯ ರಸ್ತೆ ಮಾರ್ಗ ರಚನೆಯ ಪ್ರಸ್ತಾಪವನ್ನು ಮುಂದಿಟ್ಟಿದೆ. ಕರ್ನಾಟಕ ರಾಜ್ಯ ಹೆದ್ದಾರಿ 89 ಮತ್ತು 90ರ ಮೂಲಕ ಕೇರಳ ತಲುಪಬಹುದಾಗಿದ್ದು, ಎಸ್‍ಎಚ್ 89 ಮಡಿಕೇರಿ, ಗೋಣಿಕೊಪ್ಪ, ಕುಟ್ಟಾ ಮೂಲಕ ಕೇರಳ ತಲುಪಬಹುದಾಗಿದೆ. ಅಲ್ಲದೇ ಎಸ್‍ಎಚ್ 90 ಹುಣಸೂರು ನಿಂದ ತಲಕಾವೇರಿ ಮಾರ್ಗ ಸೇರಿದಂತೆ ಕರ್ನಾಟಕದಲ್ಲಿ ಒಟ್ಟು 211 ಕಿಲೋ ಮೀಟರ್ ಪರ್ಯಾಯ ಮಾರ್ಗ ಸೂಚಿಸಿದೆ. ಇತ್ತ ಕೇರಳ ಭಾಗ ಪ್ರವೇಶಕ್ಕೆ ಜಿಲ್ಲಾ ಹೆದ್ದಾರಿ ಬಳಸಿ ವೈಯನಾಡು ತಲುಪಬಹುದಾಗಿದೆ.

    ಬಂಡೀಪುರ ಹುಲಿ ರಕ್ಷಿತಾರಣ್ಯವನ್ನು ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ 766ರಲ್ಲಿ ರಾತ್ರಿ ಸಂಚಾರ ನಿಷೇಧ ಮಾಡಲಾಗಿದ್ದು, ಈ ಕ್ರಮವನ್ನು ರದ್ದುಪಡಿಸಬೇಕು ಎಂದು ತಮಿಳುನಾಡು ಸರ್ಕಾರ ಒತ್ತಾಯ ಮಾಡಿತ್ತು. ಅಲ್ಲದೇ ವಯನಾಡು ಸಂಸದ ರಾಹುಲ್ ಗಾಂಧಿ ಅವರು ಕೂಡ ವಯನಾಡಿನಲ್ಲಿ ನಡೆದ ಅನಿರ್ಧಿಷ್ಟಾವಧಿ ಹೋರಾಟಕ್ಕೆ ಬೆಂಬಲ ಸೂಚಿಸಿದ್ದರು.

    ದೇಶದ 50ಕ್ಕೂ ಹೆಚ್ಚು ಹುಲಿ ರಕ್ಷಿತಾರಣ್ಯ ಪ್ರದೇಶಗಳಲ್ಲಿ ರಾತ್ರಿ ಸಂಚಾರಕ್ಕೆ ಅವಕಾಶವಿದೆ. ಆದರೆ ಬಂಡೀಪುರದಲ್ಲಿ ಮಾತ್ರ ರಾತ್ರಿ ಸಂಚಾರ ನಿಷೇಧ ಮಾಡಲಾಗಿದೆ ಎಂದು ಕೇರಳ ಸರ್ಕಾರ ವಾದ ಮುಂದಿಟ್ಟಿತ್ತು. 2009ರಲ್ಲಿ ರಾಜ್ಯ ಸರ್ಕಾರ ಬಂಡೀಪುರ ಅಭಯಾರಣ್ಯದ ರಾಷ್ಟ್ರೀಯ ಹೆದ್ದಾರಿಯಲ್ಲಿ ರಾತ್ರಿ 9 ರಿಂದ ಬೆಳಗ್ಗೆ 6ರ ವರೆಗೂ ಸಂಚಾರ ನಿಷೇಧ ಮಾಡಿ ಆದೇಶ ನೀಡಿತ್ತು. ಹುಲಿ, ಕಾಡೆಮ್ಮೆ, ಆನೆ ಸೇರಿದಂತೆ ಆನೇಕ ಕಾಡು ಪ್ರಾಣಿಗಳು ರಾತ್ರಿ ವೇಳೆ ಅಪಘಾತಕ್ಕೀಡಾಗಿ ಸಾವನ್ನಪ್ಪುತ್ತಿದ್ದರಿಂದ ಸರ್ಕಾರ ನಿಷೇಧವನ್ನು ಜಾರಿ ಮಾಡಿತ್ತು. ಬಂಡೀಪುರವನ್ನು ಹಾದುಹೋಗುವ ಹೆದ್ದಾರಿಗೆ ಪರ್ಯಾಯವಾಗಿ ರಾಷ್ಟ್ರೀಯ ಹೆದ್ದಾರಿ 275 ಮತ್ತು ರಾಜ್ಯ ಹೆದ್ದಾರಿ 90 ಅನ್ನು ಸೂಚಿಸಲಾಗಿತ್ತು.

  • ಬಂಡೀಪುರ ಉಳಿಸಿ – ಅಭಿಮಾನಿಗಳಲ್ಲಿ ‘ದಚ್ಚು’ ಮನವಿ

    ಬಂಡೀಪುರ ಉಳಿಸಿ – ಅಭಿಮಾನಿಗಳಲ್ಲಿ ‘ದಚ್ಚು’ ಮನವಿ

    ಬೆಂಗಳೂರು/ಚಾಮರಾಜನಗರ: ಬಂಡೀಪುರ ಹುಲಿರಕ್ಷಿತಾರಣ್ಯ ಉಂಟಾಗಿರುವ ಕಾಡ್ಗಿಚ್ಚಿನಿಂದ ಸಾಕಷ್ಟು ವನ್ಯಜೀವಿ ಸಂಕುಲಕ್ಕೆ ತೊಂದರೆಯಾಗಿದ್ದು, ಬೆಂಕಿ ನಂದಿಸಲು ಸ್ವಯಂ ಸೇವಕರು ಸರ್ಕಾರದ ಇಲಾಖೆಯೊಂದಿಗೆ ಕೈಜೋಡಿಸಬೇಕು ಎಂದು ನಟ ದರ್ಶನ್ ಅಭಿಮಾನಿಗಳಲ್ಲಿ ವಿನಂತಿ ಮಾಡಿದ್ದಾರೆ.

    ಕಳೆದ 5 ದಿನಗಳಿಂದ ಬಂಡೀಪುರ ಅಭಯಾರಣ್ಯದಲ್ಲಿ ಪದೇ ಪದೇ ಕಾಡ್ಗಿಚ್ಚು ಕಾಣಿಸಿಕೊಳ್ಳುತ್ತಿದ್ದು, ಅಗ್ನಿಶಾಮಕ ಇಲಾಖೆ ಸೇರಿದಂತೆ ಹಲವು ಸ್ವಯಂ ಸೇವಕರು ಈಗಾಗಲೇ ಬೆಂಕಿ ನಂದಿಸುವ ಕಾರ್ಯ ಮಾಡುತ್ತಿದ್ದಾರೆ. ಸತತ ಪ್ರಯತ್ನ ನಡುವೆಯೂ ಬೆಂಕಿ ನರ್ತನ ಮುಂದುವರಿದಿದ್ದು, ಅನೇಕ ಪ್ರಾಣಿಗಳು ಬೆಂಕಿಯಲ್ಲಿ ಸಿಕ್ಕಿ ಭಸ್ಮವಾಗಿದೆ. ಈ ಕುರಿತಂತೆ ದರ್ಶನ ಅವರು ಕೂಡ ಫೋಟೋ ಟ್ವೀಟ್ ಮಾಡಿದ್ದು, ಮೊಲವೊಂದು ಸುಟ್ಟು ಕರಕಲಾಗಿರುವ ದೃಶ್ಯವನ್ನು ಕಾಣಬಹುದಾಗಿದೆ.

    ಸಫಾರಿ ಬಂದ್:
    ಇಂದು ಬೆಳಗಿನ ವೇಳೆ ನಿಯಂತ್ರಣಕ್ಕೆ ಬಂದಿದ್ದ ಬೆಂಕಿ ಮತ್ತೆ ಮತ್ತೆ ಕಾಣಿಸಿಕೊಳ್ಳುತ್ತಿದೆ. ಕಳೆದ ಐದು ದಿನಗಳಿಂದ ಬಂಡೀಪುರದ ಗೋಪಾಲಸ್ವಾಮಿ ಬೆಟ್ಟ ಮತ್ತು ಕುಂದಕೆರೆ ವಲಯದ ಸಾವಿರಾರು ಎಕರೆ ಅರಣ್ಯ ಪ್ರದೇಶ ನಾಶವಾಗಿದೆ. ಇದೀಗ ಮತ್ತೆ ಗೋಪಾಲಸ್ವಾಮಿ ಬೆಟ್ಟದ ವಲಯದಲ್ಲಿ ಬೆಂಕಿ ಕಾಣಿಸಿಕೊಂಡು ಭಾರೀ ಅನಾಹುತವನ್ನೇ ಸೃಷ್ಟಿಸಿದೆ. ಪರಿಣಾಮ ಅರಣ್ಯದಲ್ಲಿ ಒಂದು ವಾರದ ಕಾಲ ಸಫಾರಿಯನ್ನು ಸ್ಥಗಿತಗೊಳಿಸಲಾಗಿದೆ.

    ಹಸಿರಿನಿಂದ ಕಂಗೊಳಿಸುತ್ತಿದ್ದ ಬಂಡೀಪುರ ಹುಲಿರಕ್ಷಿತಾರಣ್ಯ ಇದೀಗ ಬೆಂದ ಕಾಡಾಗಿದ್ದು, ಹುಲಿ, ಕರಡಿ, ಚಿರತೆ, ಆನೆ, ಜಿಂಕೆ ಮೊದಲಾದ ವನ್ಯಪ್ರಾಣಿಗಳ ಆವಾಸ ಸ್ಥಾನವಾದ ಬಂಡೀಪುರ ಇದೀಗ ಅಕ್ಷರಶ: ಸ್ಮಶಾನದಂತೆ ಗೋಚರಿಸುತ್ತಿದೆ. ಸ್ಥಳೀಯರ ಪ್ರಕಾರ ಸುಮಾರು ಹತ್ತು ಸಾವಿರ ಎಕರೆ ಅರಣ್ಯ ಪ್ರದೇಶ ಸುಟ್ಟು ಕರಕಲಾಗಿದ್ದಾರೆ, ಅಪರೂಪದ ಸರಿಸೃಪಗಳು ಕೂಡ ಬೆಂಕಿಯ ಕೆನ್ನಾಲಿಗೆ ಭಸ್ಮವಾಗಿದೆ.

    ಕಳೆದ ಐದು ದಿನಗಳಿಂದ ನೂರಾರು ಅರಣ್ಯ ಸಿಬ್ಬಂದಿ, ಅಗ್ನಿಶಾಮಕದಳ ಹಾಗು ಸ್ವಯಂ ಸೇವಕರ ಸತತ ಕಾರ್ಯಾಚರಣೆ ಫಲವಾಗಿ ಬೆಂಕಿ ಹತೋಟಿ ಪ್ರಯತ್ನಿಸುತ್ತಿದ್ದಾರೆ. ಆದರೆ ಗಾಳಿಯ ರಭಸಕ್ಕೆ ವ್ಯಾಪಕವಾಗಿ ಹರಡುತ್ತಿದೆ.

    ಅಧಿಕ ನಷ್ಟ: ಬೆಂಕಿಯ ನರ್ತನಕ್ಕೆ ಆಪಾರ ಪ್ರಮಾಣದ ವನ್ಯ ಸಂಪತ್ತು ನಾಶವಾಗಿ ನಷ್ಟ ಅನುಭವಿಸಿದೆ. ಇದರೊಂದಿಗೆ ಸಫಾರಿಗೆ ಆಗಮಿಸುತ್ತ ಸಾವಿರಾರು ಪ್ರವಾಸಿಗರಿಗೂ ನಿರಾಸೆಯಾಗಿದ್ದು, ಸಫಾರಿ ನಿಷೇಧ ಮಾಡಿರುವುದರಿಂದ ಅರಣ್ಯ ಇಲಾಖೆಗೆ ಲಕ್ಷಾಂತರ ರೂಪಾಯಿ ಆದಾಯ ಕೂಡ ನಷ್ಟವಾಗಿದೆ.

    ಕಳೆದ ವರ್ಷ ಬಂಡಿಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಯಾವುದೇ ಬೆಂಕಿ ಅವಘಡ ಸಂಭವಿಸಿರಲಿಲ್ಲ. ಆದರೆ ಈ ವರ್ಷದ ಬೇಸಿಗೆ ಆರಂಭದಲ್ಲೇ ಕಾಡ್ಗಿಚ್ಚಿಗೆ ಸಾವಿರಾರು ಎಕರೆ ಅರಣ್ಯ ಪ್ರದೇಶ ಸುಟ್ಟು ಕರಕಲಾಗಿರುವುದು ಆತಂಕ ಮೂಡಿಸಿದೆ.

     

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಬಿಬಿಸಿ ಮೇಲೆ 5 ವರ್ಷ ನಿಷೇಧ ಹೇರಿದ ಭಾರತ ಸರ್ಕಾರ

    ಬಿಬಿಸಿ ಮೇಲೆ 5 ವರ್ಷ ನಿಷೇಧ ಹೇರಿದ ಭಾರತ ಸರ್ಕಾರ

    – 5 ವರ್ಷಗಳವರೆಗೆ ದೇಶದ ಯಾವುದೇ ಹುಲಿ ಸಂರಕ್ಷಿತ ಅರಣ್ಯದಲ್ಲಿ ಶೂಟಿಂಗ್ ನಡೆಸುವಂತಿಲ್ಲ

    ನವದೆಹಲಿ: ಮುಂದಿನ 5 ವರ್ಷಗಳವರೆಗೆ ದೇಶದ ಯಾವುದೇ ಹುಲಿ ಸಂರಕ್ಷಿತ ಅರಣ್ಯದಲ್ಲಿ ಚಿತ್ರೀಕರಣ ಮಾಡದಂತೆ ಜಾಗತಿಕ ಸುದ್ದಿ ಸಂಸ್ಥೆ ಬಿಬಿಸಿ ಹಾಗೂ ಪತ್ರಕರ್ತ ಜಸ್ಟಿನ್ ರೋಲಟ್ ಮೇಲೆ ಭಾರತ ಸರ್ಕಾರ ನಿಷೇಧ ಹೇರಿದೆ.

    ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರ(ಎನ್‍ಟಿಸಿಎ) ಸೋಮವಾರದಂದು ಈ ಆದೇಶ ನೀಡಿದ್ದು, ದೇಶದಲ್ಲಿರುವ 50 ಹುಲಿ ಸಂರಕ್ಷಿತಾರಣ್ಯದಲ್ಲಿ ಮುಂದಿನ 5 ವರ್ಷಗಳ ಕಾಲ ಬಿಬಿಸಿ ಚಿತ್ರೀಕರಣ ಮಾಡುವಂತಿಲ್ಲ ಎಂದು ಹೇಳಿದೆ. ಪರಿಸರ ಮತ್ತು ಅರಣ್ಯ ಸಚಿವಾಲಯವೂ ಕೂಡ ರಾಷ್ಟ್ರೀಯ ಉದ್ಯಾನವನ ಹಾಗೂ ಅಭಯಾರಣ್ಯಗಳಿಂದ ಬಿಬಿಸಿಗೆ ನಿಷೇಧ ಹೇರಲು ಚಿಂತಿಸುತ್ತಿದೆ ಎಂದು ಮೂಲಗಳು ತಿಳಿಸಿವೆ. ಆದರೆ ಅಧಿಕಾರಿಗಳು ಈ ಬಗ್ಗೆ ಇನ್ನೂ ಸ್ಪಷ್ಟಪಡಿಸಿಲ್ಲ ಎಂದು ವರದಿಯಾಗಿದೆ.

    ನಿಷೇಧಕ್ಕೆ ಕಾರಣವೇನು: ಬಿಬಿಸಿ ತಯಾರಿಸಿದ್ದ ಒಂದು ಸಾಕ್ಷ್ಯಚಿತ್ರದಲ್ಲಿ ಕಾಝೀರಂಗಾ ಹುಲಿ ಸಂರಕ್ಷಿತ ಅರಣ್ಯವನ್ನು ಆಕ್ಷೇಪಾರ್ಹ ರೀತಿಯಲ್ಲಿ ತೋರಿಸಲಾಗಿತ್ತು. ಕಾಝೀರಂಗಾ: ದಿ ಪಾರ್ಕ್ ದಟ್ ಶೂಟ್ಸ್ ಪೀಪಲ್ ಟು ಪ್ರೊಟೆಕ್ಟ್ ರಿನೋಸ್ (ಘೇಂಡಾಮೃಗಗಳನ್ನು ಉಳಿಸಲು ಮನುಷ್ಯರನ್ನು ಶೂಟ್ ಮಾಡೋ ಕಾಝೀರಂಗಾ ಸಂರಕ್ಷಿತಾರಣ್ಯ) ಎಂದು ಬಿಬಿಸಿ ಹೇಳಿತ್ತು. ಸಂರಕ್ಷಿತಾರಣ್ಯದ ಈ ನೀತಿಯಿಂದ ಮಾನವ ಹಕ್ಕುಗಳ ಉಲ್ಲಂಘನೆಯಾಗಿದೆ ಎಂಬ ಆರೋಪ ಕೇಳಿಬಂದು ವಿವಾದಕ್ಕೆ ಎಡೆ ಮಾಡಿಕೊಟ್ಟಿತ್ತು.

    ಕೋಡ್ ಆಫ್ ಕ್ರಿಮಿನಲ್ ಪ್ರೊಸಿಜರ್‍ನ 197ನೇ ಸೆಕ್ಷನ್ ಅಡಿಯಲ್ಲಿ ಶಸ್ತ್ರಾಸ್ತ್ರ ಹೊಂದಿದ ಬೇಟೆಗಾರರನ್ನು ಹತ್ತಿಕ್ಕಲು ಕಾಝೀರಂಗಾ ಅರಣ್ಯದ ಗಾರ್ಡ್‍ಗಳಿಗೆ ಅಸ್ಸಾಂ ಸರ್ಕಾರ ನೀಡಿರುವ ವಿನಾಯಿತಿಯನ್ನು ಸಾಕ್ಷ್ಯ ಚಿತ್ರದಲ್ಲಿ ಕೊಲೆ ಮಾಡಲು ಗುಂಡು ಹಾರಿಸುತ್ತಾರೆ ಎಂಬಂತೆ ತೋರಿಸಲಾಗಿದೆ ಎಂದು ಆರೋಪಿಸಿ ಎನ್‍ಟಿಸಿಎ ಬಿಬಿಸಿಗೆ ನೋಟಿಸ್ ನೀಡಿತ್ತು. ಇದಕ್ಕೆ ಉತ್ತರಿಸಿದ್ದ ಪತ್ರಕರ್ತ ರೋಲಟ್, ನಾವು ಚಿತ್ರೀಕರಣ ಮಾಡುವ ವೇಳೆ ಯಾರಿಗೂ ಮೋಸ ಮಾಡುವ ಪ್ರಯತ್ನ ಮಾಡಿಲ್ಲ. ಸಂರಕ್ಷಿತಾರಣ್ಯದ ಪ್ರಾಣಿ ರಕ್ಷಣಾ ತಂತ್ರವನ್ನು ಕೊಲ್ಲವುದಕ್ಕೆ ಶೂಟ್ ಮಾಡುವುದು ಎಂಬ ಅರ್ಥದಲ್ಲಿ ತೋರಿಸಿಲ್ಲ. ಆದರೆ ನಾವು ಚಿತ್ರೀಕರಣ ಮಾಡುವ ವೇಳೆ ಅನುಮಾನಾಸ್ಪದ ಬೇಟೆಗಾರರನ್ನು ಕೊಲ್ಲುವಂತಹ ಸಂಗತಿ ತಿಳಿಯಿತು ಎಂದು ಹೇಳಿದ್ದಾರೆ. ನೋಟಿಸ್‍ಗೆ ಬಿಬಿಸಿ ಸಮಾಧಾನಕರವಾದ ಉತ್ತರ ನೀಡದ ಹಿನ್ನೆಲೆಯಲ್ಲಿ ಎನ್‍ಟಿಸಿಎ ನಿಷೇಧ ಹೇರಿದೆ.

    ಬಿಬಿಸಿಯ ಸಾಕ್ಷ್ಯಚಿತ್ರವನ್ನು ನೋಡಿದ ನಂತರ ಅಸ್ಸಾಂ ಸರ್ಕಾರಕ್ಕೆ ವರದಿ ಸಲ್ಲಿಸಿದ್ದೆವು. ಮುಂದೆ ದೇಶದ ಹುಲಿ ಸಂರಕ್ಷಿತಾರಣ್ಯದಲ್ಲಿ ಬಿಬಿಸಿ ಚಿತ್ರೀಕರಣ ಮಾಡದಂತೆ ನಿಷೇಧ ಹೇರಬೇಕೆಂದು ಶಿಫಾರಸ್ಸು ಮಾಡಿದ್ದೆವು. ಚಿತ್ರೀಕರಣ ಮಾಡಲು ಅನುಮತಿ ಪಡೆಯುವ ವೇಳೆ ಅವರು ಯಾವ ವಿಷಯದ ಮೇಲೆ ಚಿತ್ರೀಕರಣ ಮಾಡುತ್ತೇವೆ ಎಂದು ಹೇಳಿದ್ದರೋ ಅದಕ್ಕೆ ವಿರುದ್ಧವಾಗಿ ನಡೆದುಕೊಂಡಿದ್ದಾರೆ. ಬಿಬಿಸಿಯ ಅಂತಿಮ ಸಾಕ್ಷ್ಯ ಚಿತ್ರ ಸಂಪೂರ್ಣ ಭಿನ್ನವಾಗಿತ್ತು ಎಂದು ಕಾಝೀರಂಗಾ ಸಂರಕ್ಷಿತಾರಣ್ಯದ ಅಧಿಕಾರಿ ಸಂತ್ಯೇಂದ್ರ ಸಿಂಗ್ ಹೇಳಿದ್ದಾರೆ. ಬಿಬಿಸಿ ಯವರು ಅನುಮತಿ ಪಡೆಯುವ ವೇಳೆ ಪ್ರಾಣಿ ಸಂರಕ್ಷಣೆಯಲ್ಲಿ ಭಾರತದ ಪರಿಣಿತಿ ಮತ್ತು ಎದುರಿಸುತ್ತಿರುವ ಸವಾಲಗಳು ಎಂಬ ವಿಷಯದ ಬಗ್ಗೆ ಸಾಕ್ಷ್ಯಚಿತ್ರ ಮಾಡಲಿರುವುದಾಗಿ ಹೇಳಲಾಗಿತ್ತು ಎಂದು ವರದಿಯಾಗಿದೆ.

    ಅಸ್ಸಾಂನ ಕಾಝೀರಂಗಾ ಹುಲಿ ಸಂರಕ್ಷಿತಾರಣ್ಯ 800 ಚದರ ಅಡಿಗಳಷ್ಟು ವಿಸ್ತೀರ್ಣವಿದ್ದು. ಅತ್ಯಂತ ಹೆಚ್ಚಿನ ಸಂಖ್ಯೆಯಲ್ಲಿ ಒಂದು ಕೊಂಬಿನ ಘೇಂಡಾ ಮೃಗಗಳಿರುವ ಪ್ರದೇಶವಾಗಿದೆ. ಎನ್‍ಟಿಸಿಎ ನ ಇತ್ತೀಚಿನ ಸಮೀಕ್ಷೆಯ ಪ್ರಕಾರ ಇಲ್ಲಿ 103 ಹುಲಿಗಳಿವೆ.