ಕನ್ನಡ ಚಿತ್ರರಂಗದಲ್ಲಿ ಹೊಸ ಹೊಸ ಪ್ರಯೋಗಗಳು ನಡೆಯುತ್ತಲೇ ಇರುತ್ತವೆ. ಅದರ ಭಾಗವಾಗಿ ಮೂಡಿ ಬರ್ತಿರುವ ಸಿನಿಮಾ ಟೆನೆಂಟ್ (Tennant). ಟೆನೆಂಟ್ ಎಂದರೆ ಬಾಡಿಗೆದಾರ..ಯುವ ಪ್ರತಿಭೆ ಶ್ರೀಧರ್ ಶಾಸ್ತ್ರೀ ನಿರ್ದೇಶನ ಈ ಚಿತ್ರದ ಫಸ್ಟ್ ಲುಕ್ ರಿಲೀಸ್ ಆಗಿದೆ. ವಿಎಫ್ ಎಕ್ಸ್ ನಲ್ಲಿ 4 ವರ್ಷದ ಅನುಭವವಿರುವ ಶ್ರೀಧರ್ ಮೊದಲ ಪ್ರಯತ್ನ ಟೆನೆಂಟ್. ಒಂದಷ್ಟು ಕಿರುಚಿತ್ರ ನಿರ್ದೇಶಿಸಿರುವ ಅವರೀಗ ನಿರ್ದೇಶಕರಾಗಿ ಸ್ಯಾಂಡಲ್ ವುಡ್ ಗೆ ಹೆಜ್ಜೆ ಇಡುತ್ತಿದ್ದಾರೆ.
ಶ್ರೀಧರ್ ಹೊಸ ಪ್ರಯತ್ನಕ್ಕೆ ಪ್ರತಿಭಾನ್ವಿತ ತಾರಾಬಳಗ ಸಾಥ್ ಕೊಟ್ಟಿದೆ. ಧರ್ಮ ಕೀರ್ತಿರಾಜ್ (Keerthiraj), ತಿಲಕ್ ರಾಜ್ (Tilak) , ಸೋನು ಗೌಡ (Sonu Gowda), ರಾಕೇಶ್ ಮಯ್ಯ ಹಾಗೂ ಉಗ್ರಂ ಮಂಜು ಈ ಚಿತ್ರದಲ್ಲಿ ಮುಖ್ಯಭೂಮಿಕೆಯಲ್ಲಿ ನಟಿಸುತ್ತಿದ್ದಾರೆ.
ಕ್ರೈಮ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ಶ್ರೀಧರ್ ಶಾಸ್ತ್ರೀ ಕಥೆ ಬರೆದು ಆಕ್ಷನ್ ಕಟ್ ಹೇಳಿದ್ದಾರೆ. ಈಗಾಗಲೇ ಸಿನಿಮಾದ ಶೂಟಿಂಗ್ ಮುಕ್ತಾಯಗೊಂಡಿದೆ. ಬೆಂಗಳೂರಿನ ಮನೆಯೊಂದರಲ್ಲಿ ಇಡೀ ಚಿತ್ರದ ಚಿತ್ರೀಕರಣ ನಡೆಸಲಾಗಿದೆ. ಮಾಸ್ಟರ್ ಚಾಯ್ಸ್ ಕ್ರಿಯೇಷನ್ ನಡಿ ನಾಗರಾಜ್ ಟಿ ಟೆನೆಂಟ್ ಸಿನಿಮಾ ನಿರ್ಮಿಸುತ್ತಿದ್ದು, ಪೃಥ್ವಿರಾಜ್ ಸಹ ನಿರ್ಮಾಪಕರಾಗಿ ಕೈ ಜೋಡಿಸಿದ್ದಾರೆ.
ಗಿರೀಶ್ ಹೋತೂರ್ ಸಂಗೀತ, ಉಜ್ವಲ್ ಚಂದ್ರ ಸಂಕಲನ, ಮನೋಹರ್ ಜೋಷಿ ಛಾಯಾಗ್ರಹಣ ಚಿತ್ರಕ್ಕಿದೆ. ಶ್ರೀಧರ್ ಶಾಸ್ತ್ರಿ, ಪ್ರವೀಣ್ ಪ್ರಕಾಶ್, ಪ್ರದೀಪ್ ಚಂದ್ರ, ಪ್ರಸನ್ನ ಭಟ್, ಪುರಷೋತ್ತಮ್ ಎ, ರಾಘವೇಂದ್ರ ಸಿ.ಪಿ, ಕಾರ್ತಿಕ್ ಎಸ್.ಎಸ್ ಸಂಭಾಷಣೆ ಬರೆದಿದ್ದು, ಐಶ್ವರ್ಯ ರಂಗರಾಜನ್, ಅನಿರುದ್ಧ ಶಾಸ್ತ್ರಿ, ಗಿರೀಶ್ ಹೋತೂರ್ ಹಾಡುಗಳಿಗೆ ಧ್ವನಿಯಾಗಿದ್ದಾರೆ. ಸದ್ಯ ಫಸ್ಟ್ ಲುಕ್ ರಿಲೀಸ್ ಮಾಡಿರುವ ಚಿತ್ರತಂಡ ಶೀಘ್ರದಲ್ಲೇ ಟೀಸರ್ ಬಿಡುಗಡೆ ಮಾಡಲು ಸಜ್ಜಾಗುತ್ತಿದೆ.
ಆರ್.ಎಸ್.ಪಿ. ಪ್ರೊಡಕ್ಷನ್ಸ್ ಮೂಲಕ ಲಕ್ಷ್ಮಿ ಹರೀಶ್ ಅವರು ನಿರ್ಮಿಸುತ್ತಿರುವ ಉಸಿರು (Usiru) ಚಿತ್ರದ ಶೀರ್ಷಿಕೆ ಅನಾವರಣ ಹಾಗೂ ಪತ್ರಿಕಾಗೋಷ್ಠಿ ಇತ್ತೀಚೆಗೆ ನಡೆಯಿತು. ನಟ ತಿಲಕ್, ಪ್ರಿಯಾ ಹೆಗ್ಡೆ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಈ ಚಿತ್ರಕ್ಕೆ ಪ್ರಭಾಕರ್ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಆರ್ಎಸ್ಪಿ ಗ್ರೂಪ್ ಆಫ್ ಕಂಪನೀಸ್ ನಡೆಸುತ್ತಿರುವ, ಲಕ್ಷ್ಮಿ ಹರೀಶ್ ಅವರು ನೂತನ ಪ್ರೊಡಕ್ಷನ್ ಹೌಸ್ ಆರಂಭಿಸಿ ಆ ಮೂಲಕ ಉಸಿರು ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಸದ್ಯದಲ್ಲೇ ಚಿತ್ರೀಕರಣ ಆರಂಭಿಸುತ್ತಿರುವ ಈ ಚಿತ್ರದ ಪೋಸ್ಟರ್ ಅನಾವರಣ ಹಾಗೂ ಪತ್ರಿಕಾಗೋಷ್ಠಿ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು, ಒಬ್ಬ ಬೇಜವಾಬ್ದಾರಿ ಪೊಲೀಸ್ ಅಧಿಕಾರಿ, ತನ್ನ ಹೆಂಡತಿಗೆ ಅನಾಮಿಕ ವ್ಯಕ್ತಿಯಿಂದ ಪ್ರಾಣಕ್ಕೆ ಆಪತ್ತು ಬಂದಾಗ ಆತ ಪತ್ನಿಯನ್ನು ಹೇಗೆ ಕಾಪಾಡಿಕೊಳ್ಳುತ್ತಾನೆ, ತನ್ನ ತಾಯಿಯನ್ನು ಕೊಂದವರ ಮೇಲೆ ಹೇಗೆ ಪ್ರತೀಕಾರ ತೀರಿಸಿಕೊಳ್ಳುತ್ತಾನೆ ಎಂಬುದನ್ನು ಉಸಿರು ಚಿತ್ರದ ಮೂಲಕ ನಿರ್ದೇಶಕ ಪ್ರಭಾಕರ್ (Prabhakar) ಹೇಳಹೊರಟಿದ್ದಾರೆ, ಸುಮಾರು 6 ತಿಂಗಳವರೆಗೆ ವರ್ಕ್ ಷಾಪ್ ನಡೆಸಿ ತಯಾರಾಗಿರುವ ಚಿತ್ರತಂಡ ಇದೇ ತಿಂಗಳ 17ರಿಂದ ಮಡಿಕೇರಿಯಲ್ಲಿ ಚಿತ್ರದ ಮುಹೂರ್ತ ನಡೆಸಿ ಶೂಟಿಂಗ್ ಆರಂಭಿಸಲಿದೆ.
ಈ ಸಂದರ್ಭದಲ್ಲಿ ನಿರ್ಮಾಪಕಿ ಲಕ್ಷ್ಮೀ ಹರೀಶ್ ಮಾತನಾಡುತ್ತ ನಮ್ಮ ಸಂಸ್ಥೆಯ ಮೂಲಕ ನಿರ್ಮಾಣವಾಗುತ್ತಿರುವ ಪ್ರಥಮ ಚಿತ್ರವಿದು. ನಿರ್ದೇಶಕ ಪ್ರಭಾಕರ್ ನಮಗೆ ಬಹಳ ದಿನಗಳ ಪರಿಚಯ. ಅವರು ಈ ಥರ ಒಂದು ಕಥೆಯಿದೆ ಎಂದು ಹೇಳಿದ ಸ್ಟೋರಿ ಲೈನ್ ನಮಗೆ ಇಷ್ಟವಾಯ್ತು, ಹಾಗಾಗಿ ಚಿತ್ರ ನಿರ್ಮಾಣಕ್ಕೆ ಮುಂದಾದೆವು. ತಿಲಕ್ ಚಿತ್ರದ ನಾಯಕನಾಗಿ ನಟಿಸುತ್ತಿದ್ದು, ಬೇರೆ ಶೂಟಿಂಗ್ನಲ್ಲಿರುವ ಕಾರಣ ಇವತ್ತು ಬಂದಿಲ್ಲ ಎಂದರು.
ನಂತರ ನಿರ್ದೇಶಕ ಪ್ರಭಾಕರ್ ಮಾತನಾಡಿ ನನ್ನ 12 ವರ್ಷಗಳ ಕನಸೀಗ ನನಸಾಗುತ್ತಿದೆ. ಈಗಾಗಲೇ ಒಂದೆರಡು ತಮಿಳು ಸಿನಿಮಾಗಳಿಗೆ ಸಹನಿರ್ದೇಶಕನಾಗಿ ಕೆಲಸ ಮಾಡಿದ್ದು, ಈ ಚಿತ್ರದ ಮೂಲಕ ಸ್ವತಂತ್ರ ನಿರ್ದೇಶಕನಾಗುತ್ತಿದ್ದೇನೆ. ಇದೊಂದು ಸೈಕೋ ಥ್ರಿಲ್ಲರ್ ಕಥಾಹಂದರ ಇರುವ ಚಿತ್ರವಾಗಿದ್ದು, “ಉಸಿರು” ಟೈಟಲ್ ನಮ್ಮ ಕಥೆಗೆ ಸೂಕ್ತವಾಗುತ್ತೆ ಅಂತ ಇಡಲಾಗಿದೆ. ಒಂದೊಳ್ಳೇ ಟೀಮ್ ಕಟ್ಟಿಕೊಂಡು ಈ ಸಿನಿಮಾ ಮಾಡುತ್ತಿದ್ದೇವೆ ತಿಲಕ್ ಒಬ್ಬ ಪೊಲೀಸ್ ಅಧಿಕಾರಿಯ ಪಾತ್ರದಲ್ಲಿ ನಟಿಸುತ್ತಿದ್ದಾರೆ, ನಾಯಕಿಯಾಗಿ ಪ್ರಿಯಾ ಹೆಗ್ಡೆ ಉಳಿದಂತೆ ರಘು ರಮಣಕೊಪ್ಪ, ರಂಗಾಯಣ ರಘು ನಟಿಸುತ್ತಿದ್ದಾರೆ, ಮುಖ್ಯವಾಗಿ ಒಂಬತ್ತು ಪಾತ್ರಗಳ ಮೇಲೆ ಚಿತ್ರದ ಕಥೆ ಸಾಗುತ್ತದೆ. ಮೊದಲ ಹಂತದಲ್ಲಿ ಮಡಿಕೇರಿ ಸುತ್ತಮುತ್ತ 15 ದಿನಗಳ ಚಿತ್ರೀಕರಣ ನಡೆಸಿ, ನಂತರ ಬೆಂಗಳೂರಲ್ಲಿ ಮುಂದುವೆಸುತ್ತೇವೆ ಎಂದು ಹೇಳಿದರು.
ಸಂಗೀತ ನಿರ್ದೇಶಕ ಆರ್ಎಸ್ಜಿ ನಾರಾಯಣ ಮಾತನಾಡುತ್ತ ನನ್ನ ಸಿನಿ ಜರ್ನಿಯ 25ನೇ ವರ್ಷವಿದು, ಕಥೆಯಲ್ಲಿರುವ ಸನ್ನಿವೇಶಗಳು ನನಗೆ ತುಂಬಾ ಇಷ್ಟವಾಯ್ತು. ಬೇರೆ ಬೇರೆ ಜಾನರ್ನ ನಾಲ್ಕು ಹಾಡುಗಳನ್ನು ಕಂಪೋಜ್ ಮಾಡಿದ್ದು, ತುಂಬಾ ಚೆನ್ನಾಗಿ ಮೂಡಿಬಂದಿವೆ, ಅಭಿ ಅರ್ಥಗರ್ಭಿತವಾದ ಲಿರಿಕ್ ಬರೆದಿದ್ದಾರೆ ಎಂದರು. ಚಿತ್ರದ ನಾಯಕಿ ಪ್ರಿಯಾ ಹೆಗ್ಡೆ ಮಾತನಾಡಿ ಚಿತ್ರದ ಕಾನ್ಸೆಪ್ಟ್, ಟೈಟಲ್ ಎರಡೂ ಚೆನ್ನಾಗಿದೆ, ಸಿನಿಮಾದಲ್ಲಿ ನನ್ನ ಪಾತ್ರಕ್ಕೆ ಎರಡು ಶೇಡ್ಸ್ ಇದೆ. ಈಗಾಗಲೇ ಕನ್ನಡದ ಜಿಲ್ಕಾ, ಕುದ್ರು ಅಲ್ಲದೆ ಒಂದು ತೆಲುಗು ಚಿತ್ರದಲ್ಲೂ ಸಹ ಅಭಿನಯಿಸಿದ್ದೇನೆ ಎಂದು ಹೇಳಿದರು. ಮತ್ತೊಬ್ಬ ನಟ ಸಂತೋಷ್ ಮಾತನಾಡಿ ನಾನು ರಂಗಭೂಮಿಯಿಂದ ಬಂದವನು, ಇದು ನನ್ನ ಮೊದಲ ಚಿತ್ರವಾಗಿದ್ದು, ಪಾತ್ರ ತುಂಬಾ ಎಮೋಷನಲ್ ಪಾತ್ರವಿದೆ ಎಂದರು. ನಟಿ ಅಪೂರ್ವ ಮಾತನಾಡಿ ನಾನು ಭರತನಾಟ್ಯ ಕಲಾವಿದೆ, ರಂಗಭೂಮಿ ನಟಿ, ನಿರ್ದೇಶಕಿ ಕೂಡ ಎಂದು ಹೇಳಿದರು, ಮತ್ತೊಬ್ಬನಟ ಅರುಣ್, ಸಾಹಿತಿ, ಡೈಲಾಗ್ ರೈಟರ್ ಭೈರವರಾಮ(ಅಭಿ), ಸಂಕಲನಕಾರ ಹರೀಶ್ ಕೊಮ್ಮೆ ಎಲ್ಲರೂ ಚಿತ್ರದ ಕುರಿತಂತೆ ಮಾತನಾಡಿದರು.
ವಿಭಿನ್ನ ಕಥಾಹಂದರ ಹೊಂದಿರುವ ’ರೋನಿ’ (Ronnie) ಚಿತ್ರದ ಮೋಷನ್ ಪೋಸ್ಟರ್ನ್ನು ಪ್ರಜ್ವಲ್ ದೇವರಾಜ್ ಮತ್ತು ಟೀಸರ್ನ್ನು ಖ್ಯಾತ ನಿರ್ಮಾಪಕಿ ಶೈಲಜಾನಾಗ್ ಬಿಡುಗಡೆ ಮಾಡಿ ತಂಡಕ್ಕೆ ಶುಭ ಹಾರೈಸಿದರು. ಮುಂಬೈನಲ್ಲಿ ಡಬ್ಬಿಂಗ್ ಹಕ್ಕುಗಳನ್ನು ಖರೀದಿಸುತ್ತಿದ್ದ ಹಿರಿಯ ಸಿನಿಪಂಡಿತ ಎಂ.ರಮೇಶ್ ಹಾಗೂ ಪವನ್ಕುಮಾರ್ ಮೊದಲಬಾರಿ ಕನ್ನಡ ಚಿತ್ರಕ್ಕೆ ಲಕ್ಷೀ ಗಣಪತಿ ಸ್ಟುಡಿಯೋಸ್ ಮತ್ತು ರೋಶಿಕಾ ಎಂಟರ್ಪ್ರೈಸಸ್ ಮೂಲಕ ಬಂಡವಾಳ ಹೂಡಿದ್ದಾರೆ. ಕಿರಣ್.ಆರ್.ಕೆ ಅವರ ಕಥೆ,ಚಿತ್ರಕಥೆ, ಸಂಭಾಷಣೆ ಮತ್ತು ನಿರ್ದೇಶನವಿದೆ. ’ದ ಹಂಟರ್’ ಅಂತ ಅಡಿಬಹರದಲ್ಲಿ ಹೇಳಲಾಗಿದೆ.
ಉನ್ನತ ಮಟ್ಟದ ಕೇಸ್ ನಡೆಯುವ ಕಥೆಯಲ್ಲಿ ಶ್ರೀಮಂತ ಹುಡುಗಿ ಮನೆಯಲ್ಲಿರುವ ಮೂವತ್ತು ಕೋಟಿ ದರೋಡೆ ಆಗುತ್ತದೆ. ಇದನ್ನು ತನಿಖೆ ನಡೆಸಲು ಎಸಿಪಿ ಅಧಿಕಾರಿಯೊಬ್ಬರು ನೇಮಕಗೊಳ್ಳುತ್ತಾರೆ. ಅವರಿಂದ ಇದನ್ನು ಹುಡುಕಲಾಗದ ಪರಿಸ್ಥಿತಿ ಒದಗಿ ಬಂದು ವರ್ಗಾವಣೆಗೊಳ್ಳುತ್ತಾರೆ. ನಂತರ ಕೇಸ್ ಸಿಸಿಬಿ ಅಧಿಕಾರಿಗೆ ಬರುತ್ತದೆ. ಇದರ ಮಧ್ಯೆ ಎರಡು ಕೊಲೆಗಳು ನಡೆಯುತ್ತದೆ. ಎರಡಕ್ಕೂ ಒಂದೇ ಸಾಮ್ಯತೆ ಇರುತ್ತದೆ. ಕೊಲೆ ಮಾಡಿದವರು ಯಾರು? ಇದಕ್ಕೆ ಸಂಬಂಧವೇನು? ಈಕೆಗೆ ನ್ಯಾಯ ಸಿಗುತ್ತದಾ? ನಾಲ್ಕು ಪಾತ್ರಗಳು ಇರಲಿದ್ದು ರೋನಿ ಯಾರು ಎನ್ನುವುದು ಕ್ಲೈಮಾಕ್ಸ್ ನಲ್ಲಿ ತಿಳಿಯುತ್ತದೆ.
ಧರ್ಮ ಕೀರ್ತಿರಾಜ್ (Dharma Keerthiraj) ಸಿನಿಮಾದ ನಾಯಕ. ಬಾಂಬೆ ಮೂಲದ ರುತ್ವಿ ಪಟೇಲ್ (Ruthvi Patel) ನಾಯಕಿ. ಮತ್ತೊಂದು ಮುಖ್ಯ ಪಾತ್ರದಲ್ಲಿ ತಿಲಕ್ (Tilak) ಉಳಿದಂತೆ ಕೀರ್ತಿರಾಜ್, ವರ್ಧನ್, ರಘು ಪಾಂಡೇಶ್ವರ್, ಬಲರಾಜವಾಡಿ, ರತನ್ ಕರತಮಾಡ ಮುಂತಾದವರು ನಟಿಸಿದ್ದಾರೆ. ಮತ್ತೊಂದು ವಿಶೇಷ ಅಂದರೆ ಲಿಯೋ ಎನ್ನುವ ನಾಯಿ ಸಹ ಪ್ರಮುಖ ಪಾತ್ರ ನಿರ್ವಹಿಸಿದೆ.
ಕವಿರಾಜ್-ಕಿನ್ನಾಳ್ರಾಜ್ ಸಾಹಿತ್ಯದ ಮೂರು ಹಾಡುಗಳಿಗೆ ಆಕಾಶ್ಪರ್ವ ಸಂಗೀತ ಸಂಯೋಜಿಸಿದ್ದಾರೆ. ಛಾಯಾಗ್ರಹಣ ವೀನಸ್ ನಾಗರಾಜಮೂರ್ತಿ, ಸಂಕಲನ ವೆಂಕಿ.ಯುಡಿವಿ, ಸಾಹಸ ಕುಂಗುಫು ಚಂದ್ರು, ತಾಂತ್ರಿಕ ಮುಖ್ಯಸ್ಥ ಧರಂ.ಕೆ.ಸವಲಾನಿ ಅವರದಾಗಿದೆ. ಬೆಂಗಳೂರು, ಮಂಗಳೂರು ಸುಂದರ ತಾಣಗಳಲ್ಲಿ ಚಿತ್ರೀಕರಣ ನಡೆಸಲಾಗಿದೆ. ಇದನ್ನೂ ಓದಿ:ಸಂಪತ್ ಪತ್ನಿ 5 ತಿಂಗಳ ಗರ್ಭಿಣಿ- ಸಹನಟನ ನೆನೆದು ಕಣ್ಣೀರಿಟ್ಟ ವೈಷ್ಣವಿ
ಸಿನಿಮಾವು ಕನ್ನಡ ಸೇರಿದಂತೆ ಹಿಂದಿ, ತೆಲುಗು, ತಮಿಳು ಹಾಗೂ ಮಲೆಯಾಳಂ ಭಾಷೆಗಳಲ್ಲಿ ಸಿದ್ದಗೊಂಡಿದೆ. ಇದೇ ಸಂಸ್ಥೆಯು ಮತ್ತೊಂದು ಚಿತ್ರವನ್ನು ನಿರ್ಮಾಣ ಮಾಡುವುದಾಗಿ ಘೋಷಣೆ ಮಾಡಿದ್ದು ಪ್ರಜ್ವಲ್ ದೇವರಾಜ್ (Prajvaj Devaraj) ನಾಯಕರಾಗಿ ಆಯ್ಕೆಯಾಗಿದ್ದಾರೆ.
ಶ್ರೀನಗರ: ಹಿಜಬ್ ಮತ್ತು ತಿಲಕದ ವಿಷಯಕ್ಕೆ ಸಂಬಂಧಿಸಿ ಇಬ್ಬರು ವಿದ್ಯಾರ್ಥಿನಿಯರ ಮೇಲೆ ಶಿಕ್ಷಕ ಹಲ್ಲೆ ನಡೆಸಿದ ಘಟನೆ ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯಲ್ಲಿ ನಡೆದಿದೆ.
ನಿಸಾರ್ ಅಹ್ಮದ್ ಆರೋಪಿ ಶಿಕ್ಷಕ. ಸರ್ಕಾರಿ ಮಧ್ಯಮ ಶಾಲೆಯ ಖದುರಿಯ ಪಂಚಾಯತ್ ಡ್ರಾಮ್ಮನ್ನಲ್ಲಿ ಘಟನೆ ನಡೆದಿದೆ. 4ನೇ ತರಗತಿಯ ವಿದ್ಯಾರ್ಥಿನಿಯರಲ್ಲಿ ಒಬ್ಬಳು ಹಣೆಗೆ ಕುಂಕುಮವನ್ನು ಇಟ್ಟಿದ್ದಳು. ಮತ್ತೊಬ್ಬಳು ಸ್ಕಾರ್ಫ್ ಧರಿಸಿದ್ದಳು. ಈ ಹಿನ್ನೆಲೆಯಲ್ಲಿ ಆ ಇಬ್ಬರು ವಿದ್ಯಾರ್ಥಿನಿಯರ ಮೇಲೆ ಶಿಕ್ಷಕ ಹಲ್ಲೆ ನಡೆಸಿದ್ದಾರೆ.
ವೀಡಿಯೋದಲ್ಲಿ ಏನಿದೆ?: ನನ್ನ ಮಗಳನ್ನು ಹೊಡೆದ ರೀತಿಯಲ್ಲಿ ಶಕೂರ್ ಅವರ ಮಗಳನ್ನು ಹೊಡೆಯಲಾಯಿತು. ಈ ರೀತಿ ನಾಳೆ ಇನ್ನೊಬ್ಬ ಶಿಕ್ಷಕರು ಕುಂಕುಮ ಅಥವಾ ಹಿಜಬ್ ಧರಿಸಿದ್ದಾಕ್ಕಾಗಿ ಬೇರೆ ವಿದ್ಯಾರ್ಥಿನಿಯರನ್ನು ಹೊಡೆಯಬಹುದು. ಈ ಬಗ್ಗೆ ತನಿಖೆಯಾಗಬೇಕು ಎಂದು ಮನವಿ ಮಾಡುತ್ತೇನೆ ಎಂದು ವಿದ್ಯಾರ್ಥಿನಿಯ ಪಾಲಕರು ಮನವಿ ಮಾಡಿದ್ದಾರೆ.
ಈ ರೀತಿಯ ಗೊಂದಲ ಸೃಷ್ಟಿಸುತ್ತಿರುವುದರಿಂದ ಕೋಮು ಸೌಹಾರ್ದತೆಯನ್ನು ಕದಡುವ ಪ್ರಯತ್ನವಾಗಿದೆ. ಇದೀಗ ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗುತ್ತಿದೆ. ಈ ವೀಡಿಯೋ ಆಧರಿಸಿ ರಜೌರಿ ಜಿಲ್ಲಾಡಳಿತವು ಶಿಕ್ಷನ ವಿರುದ್ಧ ತನಿಖೆಗೆ ಆದೇಶಿಸಿದೆ. ಇದನ್ನೂ ಓದಿ: ‘ಬಿಗ್ ಬ್ರದರ್’ ಎಂದು ಭಾರತ, ಮೋದಿಗೆ ಧನ್ಯವಾದ ಹೇಳಿದ ಲಂಕಾ ಕ್ರಿಕೆಟಿಗ ಜಯಸೂರ್ಯ
ವಿದ್ಯಾರ್ಥಿನಿಯರಿಗೆ ಶಿಕ್ಷಕ ಹೊಡೆದಿದರುವುದು ನಿಜವೇ ಹಾಗೂ ಹೊಡೆಯಲು ನಿಜವಾದ ಕಾರಣವೇನು ಎನ್ನುವುದರ ಕುರಿತು ವಿಚಾರಣೆ ನಡೆಸಲಿದ್ದಾರೆ ಎಂದು ರಾಜೌರಿಯ ಜಿಲ್ಲಾ ಮ್ಯಾಜಿಸ್ಟ್ರೇಟ್ ಆದೇಶ ಹೊರಡಿಸಿದ್ದಾರೆ.
ವಿಜಯಪುರ: ಐ ಆಮ್ ಪ್ರೌಡ್ ಟು ಬಿ ಹಿಂದೂ, ತಿಲಕ್ ಇಸ್ ಮೈ ರೈಟ್ ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡುವ ಮುಖಾಂತರ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಟಾಂಗ್ ನೀಡಿದ್ದಾರೆ.
ಸಿದ್ದರಾಮಯ್ಯ ಅವರ ತಿಲಕ ಹೇಳಿಕೆ ಸದ್ಯ ಭಾರೀ ಸುದ್ದಿಯಲ್ಲಿದೆ. ಕುಂಕುಮಧಾರಿಯನ್ನು ಕಂಡರೆ ಭಯ ಹುಟ್ಟದೆ, ಗೌರವ ಹುಟ್ಟುತ್ತಾ ಎಂದು ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿದ್ದರು. ಈ ಟ್ವೀಟ್ ಬಿಜೆಪಿ ನಾಯಕರು ಹಾಗೂ ಹಿಂದೂ ಪರ ಸಂಘಟನೆಯ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಅಲ್ಲದೆ ಬಿಜೆಪಿಯಿಂದ ತಿಲಕ ಅಭಿಯಾನವೇ ಶುರುವಾಗಿಬಿಟ್ಟಿದೆ. ಒಬ್ಬರ ಮೇಲ್ಲೊಬ್ಬರು ಬಿಜೆಪಿ ನಾಯಕರು ತಿಲಕ ವಿಚಾರಕ್ಕೆ ಸಿದ್ದರಾಮಯ್ಯ ಅವರಿಗೆ ಟಾಂಗ್ ಕೊಡುತ್ತ ಕಾಲೆಳೆಯುತ್ತಿದ್ದಾರೆ. ಇದನ್ನೂ ಓದಿ:ಸಿದ್ದರಾಮಯ್ಯ ವಿರುದ್ಧ ಬಿಜೆಪಿ ತಿಲಕ ಅಭಿಯಾನ
ಈ ನಡುವೇ ಯತ್ನಾಳ್ ಅವರು ತಾವು ತಿಲಕ ಇಟ್ಟುಕೊಂಡಿರುವ ಫೋಟೋವೊಂದನ್ನು ಫೇಸ್ಬುಕ್ನಲ್ಲಿ ಹಾಕಿ “I’m proud to be Hindu. Tilak is my right” ಎಂದು ಬರೆದು ಪೋಸ್ಟ್ ಮಾಡಿ ಸಿದ್ದರಾಮಯ್ಯ ಅವರಿಗೆ ಪರೋಕ್ಷವಾಗಿ ಟಾಂಗ್ ಕೊಟ್ಟಿದ್ದಾರೆ.
ತಿಲಕ ಕಂಡರೆ ಭಯವಾಗುತ್ತೆ ಎಂದು ಹೇಳಿಕೆ ನೀಡಿದ್ದ ಸಿದ್ದರಾಮಯ್ಯರಿಗೆ ಒಂದು ಡಬ್ಬಿ ಕುಂಕುಮ ಹಾಗೂ ತಿಲಕದ ಮಹತ್ವದ ಪುಸ್ತಕವನ್ನು ಮಹಿಳೆಯರು ಮಾಜಿ ಸಿಎಂಗೆ ಕೊರಿಯರ್ ಮಾಡಿದ್ದಾರೆ. ಸಿದ್ದರಾಮಯ್ಯನವರ ಪತ್ನಿಗೆ ಕೇಳಿದರೆ ಕುಂಕುಮದ ಮಹತ್ವ ಹೇಳುತ್ತಾರೆ. ಅವರು ತಿಲಕ ಹಾಕಲ್ಲವೆ ಎಂದು ಟಾಂಗ್ ಕೊಟ್ಟಿದ್ದಾರೆ. ಈಗಾಗಲೇ ಸೋಶಿಯಲ್ ಮೀಡಿಯಾದಲ್ಲಿ ಸೆಲ್ಫಿ ವಿತ್ ತಿಲಕ ಕೂಡ ಟ್ರೆಂಡ್ ಸೃಷ್ಟಿಸಿದೆ. ಇದನ್ನೂ ಓದಿ:ಕುಂಕುಮಧಾರಿಯನ್ನ ನೋಡಿದಾಗ ಭಯ ಹುಟ್ಟದೆ, ಗೌರವ ಹುಟ್ಟುತ್ತಾ: ಸಿದ್ದರಾಮಯ್ಯ ಪ್ರಶ್ನೆ
ಕುಂಕುಮ ನಾಮ, ಕಾವಿ ಬಟ್ಟೆಗಳೆಲ್ಲ ಭಾರತೀಯ ಧಾರ್ಮಿಕ ಪರಂಪರೆಯ ಭಾಗ, ಅದಕ್ಕೊಂದು ಪಾವಿತ್ರ್ಯ ಇತ್ತು. ಆದರೆ ಯಾವಾಗ #BJP4India ನಾಯಕರೆಲ್ಲ ಇವುಗಳನ್ನೆಲ್ಲ ರಾಜಕೀಯಕ್ಕೆ ದುರುಪಯೋಗ ಮಾಡಿಕೊಳ್ಳಲು ಹೊರಟರೋ, ಅದ ನಂತರ ಕುಂಕುಮ,ಕಾವಿ ಹಾಕಿಕೊಂಡವರನ್ನು ಜನತೆ ಸಂಶಯ-ಭಯದಿಂದ ನೋಡುವಂತಾಗಿದೆ.@INCKarnataka
ಸಂಸದೆ ಶೋಭಾ ಕರಂದ್ಲಾಜೆ ತಮ್ಮ ಟ್ವಿಟ್ಟರಿನಲ್ಲಿ, ಹಣೆಗೆ ತಿಲಕವಿಟ್ಟು ಸೆಲ್ಫಿ ತೆಗೆಸಿಕೊಂಡಿರುವ ಫೋಟೋವನ್ನು ಅಪ್ಲೋಡ್ ಮಾಡಿ ಅದಕ್ಕೆ, “ತಿಲಕಕ್ಕೂ, ರಾಜಕೀಯಕ್ಕೂ ಸಂಬಂಧವಿಲ್ಲ. ಅದು ಭಾರತ ಸಂಸ್ಕೃತಿಯ ಭಾಗ, ತಿಲಕದ ಬಗ್ಗೆ ನನಗೆ ಹೆಮ್ಮೆಯಿದೆ” ಎಂದು ಬರೆದುಕೊಂಡಿದ್ದರು.
ಬೆಂಗಳೂರು: ಉತ್ತರ ಪ್ರದೇಶ ಸಿಎಂ ಯೋಗಿ ಅದಿತ್ಯನಾಥ್ ಅವರನ್ನು ಟೀಕಿಸಿ ಟ್ವೀಟ್ ಮಾಡಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಬಿಜೆಪಿ ತಿರುಗೇಟು ನೀಡಿದೆ.
ಕರ್ನಾಟಕದಲ್ಲಿ ಒಬ್ಬರು ಬಿಳಿ ಅಂಗಿ ಬಿಳಿ ಪಂಚೆ ತೊಟ್ಟ ಮಾಜಿ ಮುಖ್ಯಮಂತ್ರಿ ಇದ್ದಾರೆ. ನೋಡೋಕೆ ತುಂಬಾ ಸಂಭಾವಿತರ ರೀತಿ ಕಾಣುತ್ತಾರೆ ಆದರೆ ಸಭೆ ಸಮಾರಂಭಗಳಲ್ಲಿ ದುಶ್ಯಾಸನ ತರ ಹೆಣ್ಣುಮಕ್ಕಳ ಸೆರಗು ಎಳೆಯುತ್ತಾರೆ. ಸಾಮಾನ್ಯರ ತರ ಕಾಣುತ್ತಾರೆ ಆದರೆ ಕೋಟಿ ಬೆಲೆ ಬಾಳೋ ವಾಚ್ ಕಟ್ಟುತ್ತಾರೆ. ಯಾರಿವರು ಗೊತ್ತೇ ಎಂದು ಕರ್ನಾಟಕ ಬಿಜೆಪಿ ಟ್ವೀಟ್ ಮಾಡಿ ಪ್ರಶ್ನಿಸಿದೆ. ಇದನ್ನೂ ಓದಿ:ಕುಂಕುಮಧಾರಿಯನ್ನ ನೋಡಿದಾಗ ಭಯ ಹುಟ್ಟದೆ, ಗೌರವ ಹುಟ್ಟುತ್ತಾ: ಸಿದ್ದರಾಮಯ್ಯ ಪ್ರಶ್ನೆ
ಕರ್ನಾಟಕದಲ್ಲಿ ಒಬ್ಬರು ಬಿಳಿ ಅಂಗಿ ಬಿಳಿ ಪಂಚೆ ತೊಟ್ಟ ಮಾಜಿ ಮುಖ್ಯಮಂತ್ರಿ ಒಬ್ಬರು ಇದ್ದಾರೆ ನೋಡೋಕೆ ತುಂಬಾ ಸಂಭಾವಿತರ ರೀತಿ ಕಾಣುತ್ತಾರೆ ಆದರೆ ಸಭೆ ಸಮಾರಂಭಗಳಲ್ಲಿ ದುಶ್ಯಾಸನ ತರ ಹೆಣ್ಣುಮಕ್ಕಳ ಸೆರಗು ಎಳೆಯುತ್ತಾರೆ, ಸಾಮಾನ್ಯರ ತರ ಕಾಣುತ್ತಾರೆ ಆದರೆ ಕೋಟಿ ಬೆಲೆ ಬಾಳೋ ವಾಚ್ ಕಟ್ಟುತ್ತಾರೆ.
ಸಿದ್ದರಾಮಯ್ಯ ಉತ್ತರ ಪ್ರದೇಶದಲ್ಲೊಬ್ಬರು ಬಿಜೆಪಿಯ ಮುಖ್ಯಮಂತ್ರಿ ಇದ್ದಾರೆ. ಮೈತುಂಬಾ ಕಾವಿ ಬಟ್ಟೆ, ಮುಖತುಂಬಾ ಕುಂಕುಮ ಬಳಿದುಕೊಳ್ಳುತ್ತಾರೆ. ಆದರೆ ಅವರ ವಿರುದ್ಧ ಹತ್ತಾರು ಕ್ರಿಮಿನಲ್ ಕೇಸ್ ಗಳಿವೆ. ಈ ಕುಂಕುಮಧಾರಿಯನ್ನು ನೋಡಿದಾಗ ಜನರಿಗೆ ಭಯ ಹುಟ್ಟದೆ, ಗೌರವ ಹುಟ್ಟುತ್ತಾ ಎಂದು ಪ್ರಶ್ನಿಸಿ ಟ್ವೀಟ್ ಮಾಡಿದ್ದರು. ಈ ಟ್ವೀಟ್ ಅನ್ನು ಬಿಜೆಪಿ ಕರ್ನಾಟಕ ರಿಟ್ವೀಟ್ ಮಾಡಿ ಈ ಮೇಲಿನ ಪ್ರಶ್ನೆಯನ್ನು ಕೇಳಿದೆ. ಇದನ್ನೂ ಓದಿ:ಸಿದ್ದರಾಮಯ್ಯ ವಿರುದ್ಧ ಬಿಜೆಪಿ ತಿಲಕ ಅಭಿಯಾನ
ಬಹಳಷ್ಟು ಕ್ರಿಮಿನಲ್ ಗಳು ತಮ್ಮ ರಕ್ಷಣೆಗಾಗಿ ತಿಲಕ ಧರಿಸಿ ಮೆರೆದಾಡುತ್ತಿದ್ದಾರೆ. ಇವರು ಧರ್ಮದ್ರೋಹಿಗಳು ಮಾತ್ರವಲ್ಲ, ಸಮಾಜ ದ್ರೋಹಿಗಳು ಕೂಡಾ. ಅವರನ್ನು ದೃಷ್ಟಿಯಲ್ಲಿಟ್ಟುಕೊಂಡೇ ಹೇಳಿದ್ದು. ಏನಿವಾಗ?: ಶ್ರೀ ಸಿದ್ದರಾಮಯ್ಯ (File Pic) pic.twitter.com/PnA5F8wniV
ಕುಂಕುಮ ನಾಮ, ಕಾವಿ ಬಟ್ಟೆಗಳೆಲ್ಲ ಭಾರತೀಯ ಧಾರ್ಮಿಕ ಪರಂಪರೆಯ ಭಾಗ, ಅದಕ್ಕೊಂದು ಪಾವಿತ್ರ್ಯ ಇತ್ತು. ಆದರೆ ಯಾವಾಗ ಬಿಜೆಪಿ ನಾಯಕರೆಲ್ಲ ಇವುಗಳನ್ನೆಲ್ಲ ರಾಜಕೀಯಕ್ಕೆ ದುರುಪಯೋಗ ಮಾಡಿಕೊಳ್ಳಲು ಹೊರಟರೋ, ಅದ ನಂತರ ಕುಂಕುಮ,ಕಾವಿ ಹಾಕಿಕೊಂಡವರನ್ನು ಜನತೆ ಸಂಶಯ-ಭಯದಿಂದ ನೋಡುವಂತಾಗಿದೆ. ಹೌದು, ತಿಲಕ ಇಟ್ಟುಕೊಂಡವರನ್ನು ನೋಡಿದರೆ ಭಯವಾಗುತ್ತೆ ಎಂದು ಹೇಳಿರುವುದು ನಿಜ. ಬಹಳಷ್ಟು ಕ್ರಿಮಿನಲ್ ಗಳು ತಮ್ಮ ರಕ್ಷಣೆಗಾಗಿ ತಿಲಕ ಧರಿಸಿ ಮೆರೆದಾಡುತ್ತಿದ್ದಾರೆ. ಇವರು ಧರ್ಮದ್ರೋಹಿಗಳು ಮಾತ್ರವಲ್ಲ, ಸಮಾಜ ದ್ರೋಹಿಗಳು ಕೂಡಾ. ಅವರನ್ನು ದೃಷ್ಟಿಯಲ್ಲಿಟ್ಟುಕೊಂಡೇ ಹೇಳಿದ್ದು ಏನಿವಾಗ ಎಂದು ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದರು. ಇದನ್ನೂ ಓದಿ:ಇವರು ತಿಲಕವಿಟ್ಟುಕೊಂಡ ಹಿಂದೂಗಳನ್ನು ಕಂಡರೆ ಗಾಬರಿಯಾಗುವ ನಮ್ಮ ಸಿದ್ದಣ್ಣ: ಅನಂತ್ ಕುಮಾರ್ ಹೆಗ್ಡೆ ವ್ಯಂಗ್ಯ
ಉತ್ತರ ಪ್ರದೇಶದಲ್ಲೊಬ್ಬರು @BJP4India ಮುಖ್ಯಮಂತ್ರಿ ಇದ್ದಾರೆ. ಮೈತುಂಬಾ ಕಾವಿ ಬಟ್ಟೆ, ಮುಖತುಂಬಾ ಕುಂಕುಮ ಬಳಿದುಕೊಳ್ಳುತ್ತಾರೆ. ಆದರೆ ಅವರ ವಿರುದ್ಧ ಹತ್ತಾರು ಕ್ರಿಮಿನಲ್ ಕೇಸ್ ಗಳಿವೆ. ಈ ಕುಂಕುಮಧಾರಿಯನ್ನು ನೋಡಿದಾಗ ಜನರಿಗೆ ಭಯ ಹುಟ್ಟದೆ, ಗೌರವ ಹುಟ್ಟುತ್ತಾ?@INCKarnataka
ಬೆಂಗಳೂರು: ಕುಂಕುಮವನ್ನು ನೋಡಿದರೆ ಜನರಿಗೆ ಭಯ ಹುಟ್ಟದೆ, ಗೌರವ ಹುಟ್ಟತ್ತಾ ಎಂಬ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಟ್ವೀಟ್ಗೆ ಕೇಂದ್ರ ಕೌಶಲ್ಯಾಭಿವೃದ್ಧಿ ಸಚಿವ ಅನಂತ್ ಕುಮಾರ್ ಹೆಗ್ಡೆ ಟ್ವೀಟ್ ಮೂಲಕವೇ ತಿರುಗೇಟು ನೀಡಿದ್ದಾರೆ.
ಸಿದ್ದರಾಮಯ್ಯ ಅವರು ಹಿಂದೂ ಹಾಗೂ ಬಿಜೆಪಿ ವಿರುದ್ಧ ಮಾತನಾಡಿರುವುದಕ್ಕೆ ಬಿಜೆಪಿ ನಾಯಕರಿಂದ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ಮಧ್ಯೆ ಅನಂತ್ ಕುಮಾರ್ ಹೆಗ್ಡೆ ಅವರು ಸಿದ್ದರಾಮಯ್ಯ ಅವರು ಕುಂಕುಮ ಇಟ್ಟಿಕೊಂಡಿರುವ ಫೋಟೋವೊದನ್ನು ಹಾಕಿ “ಅಯ್ಯೋ! ಭಯ, ಭೀತಿಗೊಳ್ಳಬೇಡಿ. ಇವರು ಹಣೆಯಲ್ಲಿ ತಿಲಕವಿಟ್ಟುಕೊಂಡ ಹಿಂದೂಗಳನ್ನು ಕಂಡರೆ ಗಾಬರಿಯಾಗುವ ನಮ್ಮ ಸಿದ್ದಣ್ಣ #selfie with tilak” ಅಂತ ಬರೆದು ಟ್ವೀಟ್ ಮಾಡಿದ್ದಾರೆ.ಇದನ್ನೂ ಓದಿ: ಕುಂಕುಮಧಾರಿಯನ್ನ ನೋಡಿದಾಗ ಭಯ ಹುಟ್ಟದೆ, ಗೌರವ ಹುಟ್ಟುತ್ತಾ: ಸಿದ್ದರಾಮಯ್ಯ ಪ್ರಶ್ನೆ
ಅಷ್ಟೇ ಅಲ್ಲದೆ ಸಿದ್ದರಾಮಯ್ಯ ಅವರ ಟ್ವೀಟ್ ಬಗ್ಗೆ ಬಿಜೆಪಿ ನಾಯಕ ಸಿ.ಟಿ ರವಿ ಅವರು ಕೂಡ ರೀ-ಟ್ವೀಟ್ ಮಾಡಿ ಪ್ರತಿಕ್ರಿಯಿಸಿದ್ದಾರೆ. “ಚುನಾವಣೆ ವೇಳೆ ಇದೇ ಕುಂಕುಮ ತಾನೆ ನಿಮ್ಮ ಹಣೆಮೇಲೆ ಇದ್ದಿದ್ದು. ಆಗ ನಿಮಗೆ ಭಯವಿರಲಿಲ್ಲವೇ? ಬೇಕಾದಾಗ ಕುಂಕುಮ, ತಿಲಕ ಹಚ್ಚಿ ಬೇಡವಾದಾಗ ಅದೇ ಸಂಪ್ರದಾಯದ ವಿರುದ್ಧ ಕೇವಲ ಮತಗಳಿಕೆಗೋಸ್ಕರ ಜನರನ್ನು ಎತ್ತಿಕಟ್ಟುವ ನಿಮ್ಮ ಕೀಳು ಮನಸ್ಥಿತಿಗೆ ಭಾರತದ ಯಾವ ಭಾಗದಲ್ಲೂ ಬೆಲೆ ಇಲ್ಲ. ಇನ್ನೂ ಎಷ್ಟು ನೀಚ ರಾಜಕಾರಣ ಮಾಡುತ್ತೀರ ಸಿದ್ದರಾಮಯ್ಯ ಸಾರ್?” ಎಂದು ಪ್ರಶ್ನಿಸಿ ಟ್ವೀಟ್ ಮಾಡಿದ್ದಾರೆ.
ಚುನಾವಣೆ ಸಮಯದಲ್ಲಿ ಇದೇ ಕುಂಕುಮ ತಾನೇ ನಿಮ್ಮ ಹಣೆಯ ಮೇಲೆ ಇದ್ದದ್ದು ಆಗ ನಿಮಗೆ ಭಯ ಇರಲಿಲ್ಲವೇ?
ಬೇಕಾದಾಗ ಕುಂಕುಮ ತಿಲಕ ಹಚ್ಚಿ ಬೇಡದಾಗ ಅದೇ ಸಂಪ್ರದಾಯದ ವಿರುದ್ಧ ಕೇವಲ ಮತಗಳಿಗೋಸ್ಕರ ಜನರನ್ನು ಎತ್ತಿ ಕಟ್ಟುವ ನಿಮ್ಮ ಕೀಳು ಮನಸ್ಥಿತಿಗೆ ಭಾರತದದ ಯಾವ ಭಾಗದಲ್ಲೂ ಬೆಲೆ ಇಲ್ಲ.
ಬೆಂಗಳೂರು: ಮದುವೆಯಾದ ನಂತರ ಹೆಚ್ಚಿನ ನಟಿಯರು ಸಂಸಾರದ ಸಡಗರಗಳಲ್ಲಿ ಕಳೆದು ಹೋಗೋದೇ ಹೆಚ್ಚು. ಚಿರಂಜೀವಿಯವರನ್ನು ಮದುವೆಯಾದ ಮೇಘನಾ ಕೂಡಾ ಅದೇ ಸಾಲಿಗೆ ಸೇರುತ್ತಾರಾ ಅಂತೊಂದು ಆತಂಕ ಅಭಿಮಾನಿಗಳಲ್ಲಿ ಇದ್ದೇ ಇತ್ತು. ಆದರೆ ಕಾಂತ ಕನ್ನಲಿ ನಿರ್ದೇಶನದ ಇರುವುದೆಲ್ಲವ ಬಿಟ್ಟು ಚಿತ್ರ ಆ ಆತಂಕವನ್ನು ದೂರಾಗಿಸಿದೆ!
ಮೇಘನಾ ರಾಜ್ ಇರುವುದೆಲ್ಲವ ಬಿಟ್ಟು ಚಿತ್ರದ ಮೂಲಕ ಪಕ್ಕಾ ಹಾಟ್ ಲುಕ್ಕಿನೊಂದಿಗೆ ಮರಳಿ ಬಂದಿದ್ದಾರೆ. ಈ ಚಿತ್ರವೇ ಅವರ ಪಾಲಿನ ಸೆಕೆಂಡ್ ಇನ್ನಿಂಗ್ಸನ್ನು ಭರ್ಜರಿಯಾಗಿಸೋ ಲಕ್ಷಣಗಳೂ ಕಾಣಿಸುತ್ತಿವೆ. ಇರುವುದೆಲ್ಲವ ಬಿಟ್ಟು ಚಿತ್ರದ ಪ್ರತೀ ಪಾತ್ರಗಳನ್ನೂ ನಿರ್ದೇಶಕ ಕಾಂತ ಕನ್ನಲಿ ವಿಶಿಷ್ಟವಾಗಿಯೇ ರೂಪಿಸಿದ್ದಾರೆ. ಅದರಲ್ಲೊಂದು ಮುಖ್ಯ ಪಾತ್ರವನ್ನು ಮೇಘನಾ ನಿರ್ವಹಿಸಿದ್ದಾರೆ.
ಈ ಚಿತ್ರದಲ್ಲಿ ಮೇಘನಾ ಐಟಿ ಉದ್ಯೋಗಿಯಾಗಿ ನಟಿಸಿದ್ದಾರೆ. ಅವರದ್ದಿಲ್ಲಿ ಪಕ್ಕಾ ಬೋಲ್ಡ್ ಪಾತ್ರ. ಇದರ ಕೆಲ ಫೋಟೋಗಳು ಜಾಹೀರಾಗಿ ಅಭಿಮಾನಿಗಳನ್ನು ಮುದಗೊಳಿಸಿವೆ. ಈವರೆಗೂ ಥರ ಥರದ ಪಾತ್ರಗಳಲ್ಲಿ ನಟಿಸಿದ್ದರೂ ಮೇಘನಾ ಅವರು ಈ ಥರದ ಹಾಟ್ ಪಾತ್ರದಲ್ಲಿ ಕಾಣಿಸಿಕೊಂಡಿರೋದು ಇದೇ ಮೊದಲು. ತಿಲಕ್ಗೆ ಜೋಡಿಯಾಗಿ ನಟಿಸಿರೋ ಮೇಘನಾ ಸಂಬಂಧಗಳಿಗೆ ಹೊಸ ಭಾಷ್ಯ ಬರೆಯಲು ಹೊರಟ ಯುವ ಮನಸುಗಳ ಸಂಕೇತದಂಥಾ ಪಾತ್ರ ನಿರ್ವಹಿಸಿದ್ದಾರೆ.
ಬೋಲ್ಡ್ ನೆಸ್ ಮಾತ್ರವಲ್ಲದೇ ಭಾವುಕವಾಗಿಯೂ ಕಾಡುವಂತಿರುವ ಈ ಪಾತ್ರವನ್ನು ಮೇಘನಾ ಬಹಳಷ್ಟು ಇಷ್ಟಪಟ್ಟು ಒಪ್ಪಿಕೊಂಡಿದ್ದರಂತೆ. ಬಿಡುಗಡೆಗೂ ಮುಂಚೆಯೇ ಅದರ ಬಗ್ಗೆ ಬರುತ್ತಿರೋ ಸಕಾರಾತ್ಮಕ ಅಭಿಪ್ರಾಯಗಳು ಮೇಘನಾರಲ್ಲಿ ಥ್ರಿಲ್ ಮೂಡಿಸಿವೆ. ಸದ್ಯ ಈ ಚಿತ್ರ ಇದೇ ತಿಂಗಳು 21ರಂದು ಬಿಡುಗಡೆಯಾಗಲಿದೆ.
ಬೆಂಗಳೂರು: ಬಿಲ್ವ ಕ್ರಿಯೇಷನ್ಸ್ ಲಾಂಛನದಲ್ಲಿ ದಾವಣಗೆರೆ ದೇವರಾಜ್ ನಿರ್ಮಾಣದ ‘ಇರುವುದೆಲ್ಲವ ಬಿಟ್ಟು’ ಚಿತ್ರದ ಪ್ರಥಮ ಪ್ರತಿ ಸಿದ್ಧವಾಗಿದ್ದು, ಮುಂದಿನ ತಿಂಗಳು ಬಿಡುಗಡೆ ಮಾಡುವುದಾಗಿ ನಿರ್ಮಾಪಕರು ತಿಳಿಸಿದ್ದಾರೆ. ಚಿತ್ರದ ಚಿತ್ರೀಕರಣ ಬೆಂಗಳೂರು, ಮಂಗಳೂರು, ಊಟಿ ಮುಂತಾದೆಡೆಗಳಲ್ಲಿ ನಡೆದಿದೆ.
ಈ ಚಿತ್ರದ ಕಥೆ-ಚಿತ್ರಕಥೆ-ನಿರ್ದೇಶನ ಕಾಂತಕನ್ನಲ್ಲಿ, ಸಂಭಾಷಣೆ-ಮಹೇಶ್ ಮಳವಳ್ಳಿ, ಛಾಯಾಗ್ರಹಣ – ವಿಲಿಯಂ ಡೇವಿಡ್, ಸಂಗೀತ – ಶ್ರೀಧರ್ ವಿ ಸಂಭ್ರಮ್, ಕಲೆ-ಶ್ರೀನಿವಾಸ್, ನೃತ್ಯ-ಮುರಳಿ ಧನಕುಮಾತ್, ಸಂಕಲನ-ಕೆ.ಎಂ. ಪ್ರಕಾಶ್, ಸಾಹಿತ್ಯ – ಜಯಂತ್ ಕಾಯ್ಕಿಣಿ, ವಿ ನಾಗೇಂದ್ರಪ್ರಸಾದ್, ಕವಿರಾಜ್, ಕಾಂತಕನ್ನಲ್ಲಿ ರಚಿಸಿದ್ದಾರೆ. ಸಹ ನಿರ್ದೇಶನ ಸೋಮುಗೌಡ, ತಾರಾಗಣದಲ್ಲಿ ಮೇಘನರಾಜ್, ತಿಲಕ್, ಶ್ರೀಮಹದೇವ್, ಅಚ್ಯುತ್ ಕುಮಾರ್, ಅರುಣ ಬಾಲರಾಜ್, ಅಭಿಷೇಕ್ ರಾಯಣ್ಣ, ರಿಚರ್ಡ್ ಲೂಯಿಸ್ ಮುಂತಾದವರಿದ್ದಾರೆ.