Tag: Tilak Varma

  • ಪಾಕ್‌ ಸಚಿವನಿಂದ ಏಷ್ಯಾಕಪ್‌ ಟ್ರೋಫಿ ಸ್ವೀಕರಿಸಲು ನಿರಾಕರಿಸಿದ ಟೀಂ ಇಂಡಿಯಾ

    ಪಾಕ್‌ ಸಚಿವನಿಂದ ಏಷ್ಯಾಕಪ್‌ ಟ್ರೋಫಿ ಸ್ವೀಕರಿಸಲು ನಿರಾಕರಿಸಿದ ಟೀಂ ಇಂಡಿಯಾ

    ದುಬೈ: ಪಾಕಿಸ್ತಾನ ಸಚಿವ ಹಾಗೂ ಏಷ್ಯನ್‌ ಕ್ರಿಕೆಟ್‌ ಕೌನ್ಸಿಲ್‌ ಅಧ್ಯಕ್ಷ ಮೊಹ್ಸಿನ್‌ ನಖ್ವಿಯಿಂದ ಏಷ್ಯಾ ಕಪ್‌ ಚಾಂಪಿಯನ್ಸ್‌ ಟ್ರೋಫಿಯನ್ನು ಸ್ವೀಕರಿಸಲು ಭಾರತ ನಿರಾಕರಿಸಿದ ಪ್ರಸಂಗ ನಡೆಯಿತು.

    2025 ರ ಏಷ್ಯಾಕಪ್‌ನ ಉದ್ವಿಗ್ನ ಮತ್ತು ರಾಜಕೀಯವಾಗಿ ತುಂಬಿದ ಪರಾಕಾಷ್ಠೆಯಲ್ಲಿ ಭಾರತೀಯ ಕ್ರಿಕೆಟ್ ತಂಡವು ಪಾಕಿಸ್ತಾನದ ಆಂತರಿಕ ಸಚಿವ ಮತ್ತು ಏಷ್ಯನ್ ಕ್ರಿಕೆಟ್ ಕೌನ್ಸಿಲ್ (ACC) ಅಧ್ಯಕ್ಷ ಮೊಹ್ಸಿನ್ ನಖ್ವಿ ಅವರಿಂದ ವಿಜೇತರ ಟ್ರೋಫಿಯನ್ನು ಸ್ವೀಕರಿಸಲು ನಿರಾಕರಿಸಿತು. ಈ ಹಿನ್ನೆಲೆಯಲ್ಲಿ ಟ್ರೋಫಿ ಸ್ವೀಕಾರ ಸಮಾರಂಭದಲ್ಲಿ ವಿಳಂಬವಾಯಿತು.

    ಎರಡೂ ರಾಷ್ಟ್ರಗಳ ನಡುವೆ ನಡೆಯುತ್ತಿರುವ ರಾಜತಾಂತ್ರಿಕ ಮತ್ತು ಕ್ರೀಡಾ ಉದ್ವಿಗ್ನತೆಯನ್ನು ಪ್ರತಿಬಿಂಬಿಸುವ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ (BCCI) ನಿರ್ದೇಶನದ ಮೇರೆಗೆ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ವರದಿಯಾಗಿದೆ.

    ಈ ವರ್ಷದ ಏಪ್ರಿಲ್‌ನಲ್ಲಿ ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರನ್ನು ಗುರಿಯಾಗಿ ಉಗ್ರರು ದಾಳಿ ನಡೆಸಿದ್ದರು. ದಾಳಿಯಲ್ಲಿ 26 ಮಂದಿ ಪ್ರವಾಸಿಗರು ಸಾವನ್ನಪ್ಪಿದ್ದರು. ಪಹಲ್ಗಾಮ್‌ ದಾಳಿಗೆ ಪ್ರತೀಕಾರವಾಗಿ ಪಾಕಿಸ್ತಾನ ಹಾಗೂ ಪಾಕ್‌ ಆಕ್ರಮಿತ ಕಾಶ್ಮೀರದ ಉಗ್ರರ ನೆಲೆಗಳ ಮೇಲೆ ಭಾರತ ಆಪರೇಷನ್‌ ಸಿಂಧೂರ ಕಾರ್ಯಾಚರಣೆ ನಡೆಸಿತು. ಇದು ಉಭಯ ದೇಶಗಳ ನಡುವಿನ ಸಂಘರ್ಷಕ್ಕೆ ಕಾರಣವಾಯಿತು. ಅಲ್ಲಿಂದ ಎರಡೂ ದೇಶಗಳ ನಡುವೆ ರಾಜತಾಂತ್ರಿಕ ಬಿಕ್ಕಟ್ಟು ಏರ್ಪಟ್ಟಿದೆ.

    ಇದು ಕ್ರಿಕೆಟ್‌ ತಂಡದ ಮೇಲೆಯೂ ಪರಿಣಾಮ ಬೀರಿತ್ತು. ಭಾರಿ ವಿರೋಧದ ನಡುವೆಯೂ ಟೀಂ ಇಂಡಿಯಾ ಏಷ್ಯಾ ಕಪ್‌ ಟೂರ್ನಿಯಲ್ಲಿ ಆಡಿತು. ಆದರೆ, ಪಾಕ್‌ ವಿರುದ್ಧದ ಪಂದ್ಯದಲ್ಲಿ ಹಲವಾರು ಕ್ರಮಗಳನ್ನು ಕೈಗೊಂಡಿತು. ಪಾಕ್‌ ಆಟಗಾರರಿಗೆ ಹ್ಯಾಂಡ್‌ಶೇಕ್‌ ಮಾಡಲಿಲ್ಲ. ಹೀಗೆ, ಎರಡೂ ದೇಶಗಳ ನಡುವಿನ ಪಂದ್ಯದಲ್ಲಿ ಕ್ರಿಕೆಟ್‌ ನಿಯಮ ಉಲ್ಲಂಘನೆಯಂತಹ ಪ್ರಸಂಗಗಳು ನಡೆದವು.

  • ಏಷ್ಯಾಕಪ್‌ನಲ್ಲಿ ಭಾರತಕ್ಕೆ ಸಿಂಧೂರ ʼತಿಲಕʼ!

    ಏಷ್ಯಾಕಪ್‌ನಲ್ಲಿ ಭಾರತಕ್ಕೆ ಸಿಂಧೂರ ʼತಿಲಕʼ!

    ದುಬೈ: ಆರಂಭದಲ್ಲಿ ವಿಕೆಟ್‌ ಕಳೆದುಕೊಂಡಿದ್ದರೂ ತಿಲಕ್‌ ವರ್ಮಾ ಅವರ ಸ್ಫೋಟಕ ಅರ್ಧಶತಕದ ಆಟದಿಂದ ಏಷ್ಯಾಕಪ್‌ ಫೈನಲ್‌ನಲ್ಲಿ ಪಾಕಿಸ್ತಾನವನ್ನು 5 ವಿಕೆಟ್‌ಗಳಿಂದ ಸೋಲಿಸಿ 9ನೇ ಬಾರಿ ಭಾರತ ಚಾಂಪಿಯನ್‌ ಪಟ್ಟವನ್ನು ಅಲಂಕರಿಸಿದೆ.

    ಭಾನುವಾರದ ಏಷ್ಯಾ ಕಪ್‌ ಫೈನಲ್‌ ಹೈವೋಲ್ಟೇಜ್‌ ಪಂದ್ಯ ರೋಚಕತೆಯಿಂದ ಕೂಡಿತ್ತು. ಕೊನೆ 7 ಬಾಲ್‌ಗೆ 10 ರನ್‌ ಬೇಕಾಗಿತ್ತು. ಫಹೀಮ್ ಅಶ್ರಫ್‌ ಕೊನೆ ಎಸೆತಕ್ಕೆ ಸಿಕ್ಸರ್‌ ಹೊಡೆಯಲು ಮುಂದಾಗಿ ಶಿವಂ ದುಬೆ ಬೌಂಡರಿ ಲೈನ್‌ನಲ್ಲಿ ಕ್ಯಾಚ್‌ ನೀಡಿ ನಿರ್ಗಮಿಸಿದ್ದು, ಭಾರತೀಯರಿಗೆ ಅರೆಕ್ಷಣ ಶಾಕ್‌ ನೀಡಿತು. ಕೊನೆ ಓವರ್‌ನಲ್ಲಿ 10 ರನ್‌ ಬೇಕಿತ್ತು. ಆಗ ತಿಲಕ್‌ ವರ್ಮಾಗೆ ರಿಂಕು ಸಿಂಗ್‌ ಜೊತೆಯಾದರು. ಲಾಸ್ಟ್‌ ಓವರ್‌ನ ಮೊದಲ ಬಾಲ್‌ಗೆ ತಿಲಕ್‌ 2 ರನ್‌ ಗಳಿಸಿದರು. ಮತ್ತೆ ಸಿಕ್ಸರ್‌ ಬಾರಿಸಿದರು. 3ನೇ ಬಾಲ್‌ಗೆ ಸಿಂಗಲ್‌ ಬಂದರು. 4ನೇ ಬಾಲ್‌ಗೆ ರಿಂಗ್‌ ಸಿಂಗ್‌ ಫೋರ್‌ ಬಾರಿಸಿ ತಂಡಕ್ಕೆ ಗೆಲುವು ತಂದುಕೊಟ್ಟರು. ‘ಆಪರೇಷನ್‌ ಸಿಂಧೂರ’ದಂತಿದ್ದ ಮೈದಾನದಲ್ಲಿ ಟೀಂ ಇಂಡಿಯಾ ಕೊನೆಗೂ ಗೆದ್ದು ಬೀಗಿತು.

    ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಪಾಕಿಸ್ತಾನ 19.1 ಓವರ್‌ಗೆ ತನ್ನೆಲ್ಲಾ ವಿಕೆಟ್‌ ಕಳೆದುಕೊಂಡು 146 ರನ್‌ ಗಳಿಸಿತು. ನಂತರ ಬ್ಯಾಟಿಂಗ್‌ ಮಾಡಿದ ಭಾರತ 19.4 ಬಾಲ್‌ಗೆ ಗುರಿ ತಲುಪಿ ಗೆದ್ದು ಬೀಗಿತು.

    ಟೀಂ ಇಂಡಿಯಾ ಬ್ಯಾಟಿಂಗ್‌ ವೇಳೆ ಆರಂಭಿಕ ಆಘಾತಗಳನ್ನು ನೀಡಿತು. ಟೂರ್ನಿಯ ಕಳೆದ ಪಂದ್ಯಗಳಲ್ಲಿ ಅಬ್ಬರಿಸಿದ್ದ ಅಭಿಷೇಕ್‌ ವರ್ಮಾ ಹೈವೋಲ್ಟೇಜ್‌ ಪಂದ್ಯದಲ್ಲೇ ಕೇವಲ 5 ರನ್‌ ಗಳಿಸಿ ಕ್ಯಾಚ್‌ ನೀಡಿ ನಿರ್ಗಮಿಸಿದ್ದು, ಆಘಾತ ನೀಡಿತು. ಹೀಗಿರುವಾಗಲೇ ಕೇವಲ 1 ರನ್‌ಗೆ ಕ್ಯಾಪ್ಟನ್‌ ಸೂರ್ಯಕುಮಾರ್‌ ಯಾದವ್‌ ಔಟಾಗಿದ್ದು ತಂಡಕ್ಕೆ ಬರಸಿಡಿಲು ಬಡಿದಂತಾಯಿತು. ಶುಭಮನ್‌ ಗಿಲ್‌ ಕೂಡ ದೊಡ್ಡ ಹೊಡೆತಕ್ಕೆ ಮುಂದಾಗಿ 12 ರನ್‌ ಗಳಿಸಿ ನಿರ್ಗಮಿಸಿದರು. ತಂಡವು ಕೇವಲ 20 ರನ್‌ಗಳಿಗೆ ಪ್ರಮುಖ ಮೂರು ವಿಕೆಟ್‌ಗಳನ್ನು ಕಳೆದುಕೊಂಡು ಆಘಾತ ಅನುಭವಿಸಿತ್ತು.

    ಆಗ ತಂಡಕ್ಕೆ ತಿಲಕ್‌ ವರ್ಮಾ ನೆರವಾದರು. ಜವಾಬ್ದಾರಿಯುತ ಆಟವಾಡಿದರು. ಅವರಿಗೆ ಸಂಜು ಸ್ಯಾಮ್ಸನ್‌ ಸಾಥ್‌ ನೀಡಿದರು. ನಿಧಾನಗತಿಯ ಆಟದ ಮೂಲಕ ಈ ಜೋಡಿ ಅರ್ಧಶತಕದ ಜೊತೆಯಾಟವಾಡಿದರು. ಗೆಲುವಿನತ್ತ ತಂಡವನ್ನು ಮುನ್ನಡೆಸಿದರು. ಈ ಮಧ್ಯೆ 24 ರನ್‌ಗಳಿಸಿ ಸ್ಯಾಮ್ಸನ್‌ ಔಟಾದರು. ಆಗ ತಿಲಕ್‌ಗೆ ಶಿವಂ ದುಬೆ ಜೊತೆಯಾದರು. ಈ ಜೋಡಿ 64 ರನ್‌ಗಳ ಜೊತೆಯಾಟವಾಡಿತು. ತಿಲಕ್ ಅರ್ಧಶತಕ ಸಿಡಿಸಿದರು. ಸಿಕ್ಸರ್‌, ಫೋರ್‌ಗಳ ಸುರಿಮಳೆ ಹರಿದುಬಂತು. ಇವರಿಬ್ಬರ ಜವಾಬ್ದಾರಿಯುತ ಆಟ ತಂಡದ ಗೆಲುವಿಗೆ ಕೊಡುಗೆ ನೀಡಿತು. ತಿಲಕ್‌ ವರ್ಮಾ ಔಟಾಗದೇ 69 ರನ್‌ ಸಿಡಿಸಿ ಆಪದ್ಬಾಂಧವನಂತೆ ಕಂಡರು. ಕೊನೆಗೆ ಭಾರತ ತಂಡ ಪಾಕ್‌ ವಿರುದ್ಧ 5 ವಿಕೆಟ್‌ಗಳ ಜಯ ಸಾಧಿಸಿ ಏಷ್ಯಾ ಚಾಂಪಿಯನ್‌ ಆಗಿ ಹೊರಹೊಮ್ಮಿತು.

    ಮೊದಲು ಬ್ಯಾಟಿಂಗ್‌ ಮಾಡಿದ್ದ ಪಾಕಿಸ್ತಾನ 146 ರನ್‌ ಗಳಿಸಿತ್ತು. ಆರಂಭಿಕರಾಗಿ ಕಣಕ್ಕಿಳಿದ ಸಾಹಿಬ್‌ಜಾದಾ ಫರ್ಹಾನ್, ಫಖರ್ ಜಮಾನ್ ಜೋಡಿ ಉತ್ತಮ ಆರಂಭ ನೀಡಿತು. ಮೊದಲ ವಿಕೆಟ್‌ಗೆ 84 ರನ್‌ಗಳ ಜೊತೆಯಾಟವಾಡಿ ಗಮನ ಸೆಳೆದರು. ಫರ್ಹಾನ್‌ 38 ಬಾಲ್‌ಗೆ ಅರ್ಧಶತಕ (57 ರನ್) ಗಳಿಸಿದರು. ವರುಣ್‌ ಚಕ್ರವರ್ತಿ 9ನೇ ಓವರ್‌ನಲ್ಲಿ ಮೊದಲ ವಿಕೆಟ್‌ ಪಡೆಯುವ ಮೂಲಕ ಜೊತೆಯಾಟಕ್ಕೆ ಬ್ರೇಕ್‌ ಹಾಕಿದರು.

    ತಂಡದ ಮೊತ್ತ 113 ಇದ್ದಾಗ ಸೈಮ್ ಅಯೂಬ್ ಔಟಾದರು. ಈ ಮಧ್ಯೆ ಜಮಾನ್‌ಗೆ ಯಾವೊಬ್ಬ ಬ್ಯಾಟರ್‌ ಕೂಡ ಸಾಥ್‌ ನೀಡಲಿಲ್ಲ. ನಂತರ ಬಂದ ಮೊಹಮ್ಮದ್ ಹ್ಯಾರಿಸ್ ಶೂನ್ಯ ಸುತ್ತಿ ಪೆವಿಲಿಯನ್‌ ಸೇರಿದರು. 46 ರನ್‌ ಗಳಿಸಿದ್ದ ಜಮಾನ್‌ ಕ್ಯಾಚ್‌ ನೀಡಿ ಔಟಾದರು.

    ಆರಂಭದಲ್ಲಿ ರನ್‌ ಬಿಟ್ಟುಕೊಟ್ಟಿದ್ದ ಟೀಂ ಇಂಡಿಯಾ ಬೌಲರ್‌ಗಳು ನಂತರ ಪಾಕ್‌ ವಿರುದ್ಧ ಆರ್ಭಟಿಸಿದರು. ಬ್ಯಾಟರ್‌ಗಳ ಬೆವರಿಳಿಸಿದರು. ವಿಕೆಟ್‌ಗಳು ತರಗೆಲೆಯಂತೆ ಉರುಳಿದವು. ಯಾರೊಬ್ಬರು ಕೂಡ ಒಂದಂಕಿ ರನ್‌ ದಾಟಲು ಅವಕಾಶ ನೀಡಲಿಲ್ಲ. ಅಂತಿಮವಾಗಿ ಪಾಕಿಸ್ತಾನ 19.1 ಓವರ್‌ಗೆ ಆಲೌಟ್‌ ಆಗಿ 146 ರನ್‌ ಗಳಿಸಿತು.

    ಟೀಂ ಇಂಡಿಯಾ ಪರ ಸ್ಪಿನ್ನರ್‌ ಕುಲ್ದೀಪ್‌ ಯಾದವ್‌ ಜಾದು ಮಾಡಿದರು. ಪಂದ್ಯದಲ್ಲಿ ನಾಲ್ಕು ವಿಕೆಟ್‌ ಕಿತ್ತು ಮಿಂಚಿದರು. ಜಸ್ಪ್ರಿತ್‌ ಬುಮ್ರಾ, ವರುಣ್‌ ಚಕ್ರವರ್ತಿ, ಅಕ್ಷರ್‌ ಪಟೇಲ್‌ ತಲಾ 2 ವಿಕೆಟ್‌ ಕಿತ್ತರು.

  • ಪಾಂಡ್ಯ ಪರಾಕ್ರಮ ವ್ಯರ್ಥ, ಮುಂಬೈ ಭದ್ರಕೋಟೆ ಛಿದ್ರ – ಆರ್‌ಸಿಬಿಗೆ 12 ರನ್‌ಗಳ ರೋಚಕ ಜಯ

    ಪಾಂಡ್ಯ ಪರಾಕ್ರಮ ವ್ಯರ್ಥ, ಮುಂಬೈ ಭದ್ರಕೋಟೆ ಛಿದ್ರ – ಆರ್‌ಸಿಬಿಗೆ 12 ರನ್‌ಗಳ ರೋಚಕ ಜಯ

    ಮುಂಬೈ: ಮುಂಬೈ ಭದ್ರಕೋಟೆ ವಾಂಖೆಡೆ ಕ್ರೀಡ ಕೊನೆಯವರೆಗೂ ರೋಚಕತೆಯಿಂದ ಕೂಡಿದ್ದ ಜಿದ್ದಾ ಜಿದ್ದಿ ಕಣದಲ್ಲಿ ಮುಂಬೈ ಇಂಡಿಯನ್ಸ್‌ ವಿರುದ್ಧ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡ 12 ರನ್‌ಗಳ ರೋಚಕ ಗೆಲುವು ಸಾಧಿಸಿದೆ. ಈ ಮೂಲಕ ವಾಂಖೆಡೆ ಕ್ರೀಡಾಂಗಣದಲ್ಲಿ ಆರ್‌ಸಿಬಿ 10 ವರ್ಷಗಳ ಬಳಿಕ ಗೆಲುವು ಸಾಧಿಸಿದ್ದು, ಮುಂಬೈನ ಭದ್ರ ಕೋಟೆಯನ್ನ ಛಿದ್ರಗೊಳಿಸಿದೆ.

    ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿಂದು ನಡೆದ ಪಂದ್ಯವು ಕೊನೆಯವರೆಗೂ ರೋಚಕವಾಗಿತ್ತು. ಕ್ಷಣಕ್ಷಣಕ್ಕೂ ಅಭಿಮಾನಿಗಳ ಎದೆಬಡಿತ ಹೆಚ್ಚಿಸುತ್ತಲೇ ಇತ್ತು. ಅತ್ತ ಉತ್ಸಾಹ ಕಳೆದುಕೊಳ್ಳದ ಉಭಯ ತಂಡಗಳ ಅಭಿಮಾನಿಗಳು ತಮ್ಮಿಷ್ಟದ ಆಟಗಾರರನ್ನ ಊರಿದುಂಬಿಸಿ ಘೋಷಣೆ ಕೂಗುತ್ತಲೇ ಇದ್ದರು. ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಆರ್‌ಸಿಬಿ 5 ವಿಕೆಟ್‌ ನಷ್ಟಕ್ಕೆ 221 ರನ್‌ ಬಾರಿಸಿತ್ತು. 222 ರನ್‌ಗಳ ಬೃಹತ್‌ ಮೊತ್ತದ ಗುರಿ ಬೆನ್ನಟ್ಟಿದ ಮುಂಬೈ 20 ಓವರ್‌ಗಳಲ್ಲಿ 9 ವಿಕೆಟ್‌ ನಷ್ಟಕ್ಕೆ 209 ರನ್‌ ಗಳಿಸಿ ಸೋಲೊಪ್ಪಿಕೊಂಡಿತು.

    ಕೊನೇ ಓವರ್‌ ಥ್ರಿಲ್ಲರ್‌
    ಕೊನೇ ಓವರ್‌ನಲ್ಲಿ ಮುಂಬೈ ಗೆಲುವಿಗೆ 19 ರನ್‌ಗಳ ಅಗತ್ಯವಿತ್ತು. ಕೃನಾಲ್‌ ಪಾಂಡ್ಯ ಬೌಲಿಂಗ್‌ನಲ್ಲಿದ್ದರೆ, ಮಿಚೆಲ್‌ ಸ್ಯಾಂಟ್ನರ್‌ ಸ್ಟ್ರೈಕ್‌ನಲ್ಲಿದ್ದರು. ಮೊದಲ ಎಸೆತದಲ್ಲೇ ಸ್ಯಾಂಟ್ನರ್‌ ಸಿಕ್ಸರ್‌ ಸಿಡಿಸಲು ಪ್ರಯತ್ನಿಸಿ ಬೌಂಡರಿ ಲೈನ್‌ ಬಳಿ ಕ್ಯಾಚ್‌ ಕೊಟ್ಟರು. ಮರು ಎಸೆತದಲ್ಲಿ ದೀಪಕ್‌ ಚಹಾರ್‌ ಸಹ ಟಿಮ್‌ ಡೇವಿಡ್‌-ಫಿಲ್‌ ಸಾಲ್ಟ್‌ ಅವರ ಸ್ಟನ್ನಿಂಗ್‌ ಕ್ಯಾಚ್‌ಗೆ ವಿಕೆಟ್‌ ಒಪ್ಪಿಸಬೇಕಾಯಿತು. ಅಲ್ಲಿಗೆ ಮುಂಬೈ ಗೆಲುವಿನ ಆಸೆ ಕಮರಿತು. 3ನೇ ಎಸೆತದಲ್ಲಿ 1 ರನ್‌ ಸೇರ್ಪಡೆಯಾಯಿತು. 4ನೇ ಎಸೆತದಲ್ಲಿ ನಮನ್‌ ಧೀರ್‌ ಬೌಂಡರಿ ಬಾರಿಸಿದರು. ಇನ್ನೂ 5ನೇ ಎಸೆತದಲ್ಲಿ ನಮನ್‌ ಕ್ಯಾಚ್‌ ನೀಡಿದ್ರೆ, ಕೊನೆಯ ಎಸೆತದಲ್ಲಿ ಯಾವುದೇ ರನ್‌ ಬರದ ಕಾರಣ ಆರ್‌ಸಿಬಿ 12 ರನ್‌ ಗೆಲುವು ಸಾಧಿಸಿರು.

    ಟರ್ನಿಂಗ್‌ ಸಿಕ್ಕಿದ್ದೆಲ್ಲಿ?
    ಹಾರ್ದಿಕ್‌ ಪಾಂಡ್ಯ ಹಾಗೂ ತಿಲಕ್‌ ವರ್ಮಾ ಜೋಡಿ ಉತ್ತಮ ಇನ್ನಿಂಗ್ಸ್‌ ಕಟ್ಟಿತ್ತು. ಆದ್ರೆ ಸ್ಫೋಟಕ ಆಟವಾಡುತ್ತಿದ್ದ ತಿಲಕ್‌ ವರ್ಮಾ 18ನೇ ಓವರ್‌ನ 4ನೇ ಎಸೆತದಲ್ಲಿ ಸಿಕ್ಸರ್‌ ಸಿಡಿಸಲು ಪ್ರಯತ್ನಿಸಿ ಕ್ಯಾಚ್‌ ನೀಡಿ ಔಟಾದರು. ಬಳಿಕ 19ನೇ ಓವರ್‌ನ ಮೊದಲ ಎಸೆತದಲ್ಲೇ ಹಾರ್ದಿಕ್‌ ಪಾಂಡ್ಯ ಸಹ ಕ್ಯಾಚ್‌ ನೀಡಿ ಪೆವಿಲಿಯನ್‌ಗೆ ಮರಳಿದರು. ಇದು ರನ್‌ ಮೇಲೆ ಪರಿಣಾಮ ಬೀರಿತು.

    222 ರನ್‌ಗಳ ಬೃಹತ್‌ ಮೊತ್ತದ ಗುರಿ ಬೆನ್ನಟ್ಟಿದ ಮುಂಬೈ ಇಂಡಿಯನ್ಸ್‌ ಆರಂಭದಲ್ಲೇ ಪ್ರಮುಖ ವಿಕೆಟ್‌ಗಳನ್ನು ಕಳೆದುಕೊಂಡಿತು. ಅಲ್ಲದೇ ಮಧ್ಯಮ ಕ್ರಮಾಂಕದಲ್ಲಿ ಸೂರ್ಯಕುಮಾರ್‌ ಯಾದವ್‌ ಹಾಗೂ ವಿಲ್‌ ಜಾಕ್ಸ್‌ ಅವರ ನಿಧಾನಗತಿಯ ಬ್ಯಾಟಿಂಗ್‌ನಿಂದ ಸಂಕಷ್ಟ ಎದುರಾಗಿತ್ತು. 12 ಓವರ್‌ ಮುಕ್ತಾಯಗೊಂಡರೂ 100 ರನ್‌ಗಳ ಗಡಿಯೂ ದಾಟಿರಲಿಲ್ಲ. ಇದರಿಂದ ಮುಂಬೈ ಸೋಲು ಖಚಿತ ಎಂದೇ ಭಾವಿಸಲಾಗಿತ್ತು. ಆದ್ರೆ ಮಧ್ಯಮ ಕ್ರಮಾಂಕದಲ್ಲಿ ಹಾರ್ದಿಕ್‌ ಪಾಂಡ್ಯ ಹಾಗೂ ತಿಲಕ್‌ ವರ್ಮಾ ಅವರ ಸ್ಫೋಟಕ ಆಟ ಮತ್ತೆ ಮುಂಬೈ ಇಂಡಿಯನ್ಸ್‌ಗೆ ಜೀವ ತುಂಬಿತ್ತು. ಇವರಿಬ್ಬರ ವಿಕೆಟ್‌ ಬೀಳುತ್ತಿದ್ದಂತೆ ಗೆಲುವಿನ ಆಸೆ ನುಚ್ಚುನೂರಾಯ್ತು.

    ಮುಂಬೈ ಪರ ಹಾರ್ದಿಕ್‌ ಪಾಂಡ್ಯ 42 ರನ್‌ (15 ಎಸೆತ, 4 ಸಿಕ್ಸರ್‌, 3 ಬೌಂಡರಿ), ತಿಲಕ್‌ ವರ್ಮಾ 56 ರನ್‌ (29 ಎಸೆತ, 4 ಸಿಕ್ಸರ್‌, 45 ಬೌಂಡರಿ) ಗಳಿಸಿದ್ರೆ, ಸೂರ್ಯಕುಮಾರ್‌ ಯಾದವ್‌ 28 ರನ್‌, ವಿಲ್‌ ಜಾಕ್ಸ್‌ 22 ರನ್‌, ರೋಹಿತ್‌ ಶರ್ಮಾ, ರಿಕಲ್ಟನ್‌ ತಲಾ 17 ರನ್‌ ಗಳಿಸಿದ್ರೆ, ಮಿಚೆಲ್‌ ಸ್ಯಾಂಟ್ನರ್‌ 8 ರನ್‌, ಬೋಲ್ಟ್‌ 1 ರನ್‌ ಗಳಿಸಿದರು. ಆರ್‌ಸಿಬಿ ಪರ ಕೃನಾಲ್‌ ಪಾಂಡ್ಯ 4 ವಿಕೆಟ್‌ ಕಿತ್ತರೆ, ಯಶ್‌ ದಯಾಳ್‌, ಜೋಶ್‌ ಹೇಜಲ್ವುಡ್‌ ತಲಾ 2 ವಿಕೆಟ್‌, ಭುವನೇಶ್ವರ್‌ ಕುಮಾರ್‌ 1 ವಿಕೆಟ್‌ ಕಿತ್ತರು.

    ಇದಕ್ಕೂ ಮುನ್ನ ಟಾಸ್‌ ಸೋತು ಮೊದಲು‌ ಬ್ಯಾಟಿಂಗ್‌ ಮಾಡಿದ ಆರ್‌ಸಿಬಿ ಮುಂಬೈ ಬೌಲರ್‌ಗಳ ವಿರುದ್ಧ ಪರಾಕ್ರಮ ಮೆರೆಯಿತು. ಅತ್ತ ವಿಕೆಟ್‌ ಬೀಳುತ್ತಿದ್ದರೂ ಇತ್ತ ವಿರಾಟ್‌ ಕೊಹ್ಲಿ, ರಜತ್‌ ಪಾಟೀದಾರ್‌, ಜಿತೇಶ್‌ ಶರ್ಮಾ ಅವರ ಬ್ಯಾಟಿಂಗ್‌ ಆರ್ಭಟ ಮುಂದುವರಿಯುತ್ತಲೇ ಸಾಗಿತು.

    ಅಬ್ಬರಿಸಿ ಬೊಬ್ಬರಿದ ಆರ್‌ಸಿಬಿ
    ಆರ್‌ಸಿಬಿ ಪರ ಆರಂಭಿಕ ಆಟಗಾರ ವಿರಾಟ್‌ ಕೊಹ್ಲಿ ಆಕರ್ಷಕ ಅರ್ಧಶತಕ ಗಳಿಸಿದರು. 42 ಎಸೆತಗಳಲ್ಲಿ 67 ರನ್‌ (8 ಬೌಂಡರಿ, 2 ಸಿಕ್ಸರ್‌) ಗಳಿಸಿದ್ರೆ, 200 ಸ್ಟ್ರೈಕ್‌ರೇಟ್‌ನಲ್ಲಿ ಬ್ಯಾಟ್‌ ಬೀಸಿದ ರಜತ್‌ ಪಾಟೀದಾರ್‌ 32 ಎಸೆತಗಳಲ್ಲಿ ಸ್ಪೋಟಕ 64 ರನ್‌ (5 ಬೌಂಡರಿ, 4 ಸಿಕ್ಸರ್‌) ಚಚ್ಚಿದರು. ಇನ್ನೂ 11 ಕೋಟಿ ಮೊತ್ತಕ್ಕೆ ಆರ್‌ಸಿಬಿ ಪಾಲಾದ ಜಿತೇಶ್‌ ಶರ್ಮಾ 19 ಎಸೆತಗಳಲ್ಲಿ ಸ್ಫೋಟಕ 40 ರನ್‌ (4 ಸಿಕ್ಸರ್‌, 2 ಬೌಂಡರಿ) ಸಿಡಿಸುವ ಮೂಲಕ ತಂಡದ ಮೊತ್ತ 200 ರನ್‌ಗಳ ಗಡಿ ದಾಟಿಸುವಲ್ಲಿ ಯಶಸ್ವಿಯಾದರು. ಇದರೊಂದಿಗೆ ದೇವದತ್‌ ಪಡಿಕಲ್‌ 37 ರನ್‌, ಫಿಲ್‌ ಸಾಲ್ಟ್‌ 4 ರನ್‌, ಟಿಮ್‌ ಡೇವಿಡ್‌ 1 ರನ್‌ ಗಳಿಸಿ ಮಿಂಚಿದರು.

  • ರನ್‌ ಹೊಳೆಯಲ್ಲಿ ತೇಲಾಡಿದ ಭಾರತ – ಸಂಜು, ತಿಲಕ್‌ ಶತಕಗಳ ಅಬ್ಬರಕ್ಕೆ ದಾಖಲೆಗಳು ಧೂಳಿಪಟ

    ರನ್‌ ಹೊಳೆಯಲ್ಲಿ ತೇಲಾಡಿದ ಭಾರತ – ಸಂಜು, ತಿಲಕ್‌ ಶತಕಗಳ ಅಬ್ಬರಕ್ಕೆ ದಾಖಲೆಗಳು ಧೂಳಿಪಟ

    ಜೋಹಾನ್ಸ್‌ಬರ್ಗ್: ದಕ್ಷಿಣ ಆಫ್ರಿಕಾ (South Africa) ವಿರುದ್ಧ ನಡೆ ದ 4ನೇ ಹಾಗೂ ಅಂತಿಮ ಟಿ20 ಪಂದ್ಯದಲ್ಲಿ ಸಂಜು ಸ್ಯಾಮ್ಸನ್‌ (Sanju Samson) ಹಾಗೂ ತಿಲಕ್‌ ವರ್ಮಾ ದ್ವಿಶತಕ ಜೊತೆಯಾಟಕ್ಕೆ ದಾಖಲೆಗಳು ಧೂಳಿಪಟವಾಗಿವೆ.

    ಜೋಹಾನ್ಸ್‌ಬರ್ಗ್‌ನ ವಾಂಡರರ್ಸ್ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ 4 ಪಂದ್ಯಗಳ ಟಿ20 ಸರಣಿಯ ಅಂತಿಮ ಪಂದ್ಯದಲ್ಲಿ ಟಾಸ್‌ ಗೆದ್ದ ಭಾರತ ಮೊದಲು ಬ್ಯಾಟಿಂಗ್‌ ಆಯ್ದುಕೊಂಡಿತು. ಮೊದಲ ಓವರ್‌ನಲ್ಲಿ ಕೇವಲ 4 ರನ್‌ ಕಲೆಹಾಕಿದ ಭಾರತ 2ನೇ ಓವರ್‌ನಿಂದಲೇ ಎದುರಾಳಿ ಬೌಲರ್‌ಗಳನ್ನು ಬೆಂಡೆತ್ತಲು ಶುರು ಮಾಡಿತು. ಇದನ್ನೂ ಓದಿ: Champions Trophy | ಪಾಕ್‌ ಆಕ್ರಮಿತ ಕಾಶ್ಮೀರ ಪ್ರವಾಸಕ್ಕೆ ಬಿಸಿಸಿಐ ಆಕ್ಷೇಪ, ನೋ ಎಂದ ಐಸಿಸಿ

    ಹರಿಣರ ಪಡೆಯ ಬೌಲರ್‌ಗಳನ್ನು ಹಿಗ್ಗಾಮುಗ್ಗಾ ಬೆಂಡೆತ್ತಿದ ಸಂಜು ಮತ್ತು ಅಭಿಷೇಕ್‌ ಶರ್ಮಾ ಜೋಡಿ ಮೊದಲ ವಿಕೆಟ್‌ಗೆ 35 ಎಸೆತಗಳಲ್ಲಿ 73 ರನ್‌ ಜೊತೆಯಾಟ ನೀಡಿತು. ಈ ವೇಳೆ 200 ಸ್ಟ್ರೈಕ್‌ರೇಟ್‌ನಲ್ಲಿ ಬ್ಯಾಟ್‌ ಬೀಸಿದ ಅಭಿಷೇಕ್‌ ಶರ್ಮಾ 18 ಎಸೆತಗಳಲ್ಲಿ 4 ಸಿಕ್ಸರ್‌, 3 ಬೌಂಡರಿಗಳೊಂದಿಗೆ 36 ರನ್‌ ಬಾರಿಸಿ ಔಟಾದರು. ಇದನ್ನೂ ಓದಿ: ಟೀಂ ಇಂಡಿಯಾಕ್ಕೆ ಉಗ್ರರ ದಾಳಿಯದ್ದೇ ಭೀತಿ – ಐಸಿಸಿ ಬಳಿ ಇರೋದು ಮೂರೇ ಆಯ್ಕೆ

    ಬಳಿಕ ಕ್ರೀಸ್‌ಗೆ ಬಂದ ತಿಲಕ್‌ ವರ್ಮಾ (Tilak Varma) ಸಂಜು ಜೊತೆಗೂಡಿ ಅಬ್ಬರಿಸಲು ಶುರು ಮಾಡಿದರು. ಕೊನೆಯವರೆಗೂ ವಿಕೆಟ್‌ ಬಿಟ್ಟುಕೊಡದ ಈ ಜೋಡಿ ಕೇವಲ 86 ಎಸೆತಗಳಲ್ಲಿ ಬರೋಬ್ಬರಿ 210 ರನ್‌ ಪೇರಿಸಿತು. ಇದರೊಂದಿಗೆ 20 ಓವರ್‌ಗಳಲ್ಲಿ ಭಾರತ ಕೇವಲ 1 ವಿಕೆಟ್‌ ನಷ್ಟಕ್ಕೆ 283 ರನ್‌ ಗಳಿಸಿ, ಎದುರಾಳಿ ತಂಡಕ್ಕೆ 284 ರನ್‌ ಗಳ ಗುರಿ ನೀಡಿತು. ಇದನ್ನೂ ಓದಿ: Ranji Trophy: ಇನ್ನಿಂಗ್ಸ್‌ನ ಎಲ್ಲಾ 10 ವಿಕೆಟ್‌ ಕಿತ್ತು ದಾಖಲೆ ಬರೆದ ಅಂಶುಲ್‌ ಕಾಂಬೋಜ್‌

    ಸ್ಫೋಟಕ ಶತಕ ಸಿಡಿಸಿದ 3ನೇ ಭಾರತೀಯ
    ಆರಂಭದಿಂದಲೇ ಅಬ್ಬರಿಸಲು ಶುರು ಮಾಡಿದ ತಿಲಕ್‌ ವರ್ಮಾ ಸತತ 2ನೇ ಅಂತಾರಾಷ್ಟ್ರೀಯ ಟಿ20 ಶತಕ ಸಿಡಿಸಿ ಮಿಂಚಿದರು. 255.31 ಸ್ಟ್ರೈಕ್‌ರೇಟ್‌ನಲ್ಲಿ ಬ್ಯಾಟ್‌ ಬೀಸಿದ ತಿಲಕ್‌ 41 ಎಸೆತಗಳಲ್ಲೇ 6 ಬೌಂಡರಿ, 9 ಸಿಕ್ಸರ್‌ಗಳೊಂದಿಗೆ ಶತಕ ಸಿಡಿಸಿದರು. ಈ ಮೂಲಕ ವೇಗದ ಶತಕ ಸಿಡಿಸಿದ 3ನೇ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಈ ಹಿಂದೆ ಶ್ರೀಲಂಕಾ ವಿರುದ್ಧ ಟೀಂ ಇಂಡಿಯಾ ನಾಯಕ ರೋಹಿತ್‌ ಶರ್ಮಾ 35 ಎಸೆತಗಳಲ್ಲಿ, ಬಾಂಗ್ಲಾದೇಶದ ವಿರುದ್ಧ ಸಂಜು ಸ್ಯಾಮ್ಸನ್‌ 40 ಎಸೆತಗಳಲ್ಲಿ ಶತಕ ಸಿಡಿಸಿ ಮೊದಲ ಎರಡು ಸ್ಥಾನಗಳಲ್ಲಿದ್ದಾರೆ. ಒಟ್ಟಾರೆ 47 ಎಸೆತಗಳನ್ನು ಎದುರಿಸಿದ ತಿಲಕ್‌ 10 ಸಿಕ್ಸರ್‌, 9 ಬೌಂಡರಿಗಳೊಂದಿಗೆ ಬರೋಬ್ಬರಿ 120 ರನ್‌ ಚಚ್ಚಿದರು.

    ಸಂಜು ವಿಶೇಷ ಸಾಧನೆ:
    ಸರಣಿಯ ಮೊದಲ ಪಂದ್ಯದಲ್ಲಿ ಶತಕ ಸಿಡಿಸಿ, ಕಳೆದ ಎರಡು ಪಂದ್ಯಗಳಲ್ಲಿ ಡಕ್‌ಔಟ್‌ ಆಗಿದ್ದ ಆರಂಭಿಕ ಸಂಜು ಸ್ಯಾಮ್ಸನ್‌ ಅಂತಿಮ ಪಂದ್ಯದಲ್ಲಿ 51 ಎಸೆತಗಳಲ್ಲಿ 6 ಬೌಂಡರಿ, 8 ಸಿಕ್ಸರ್‌ಗಳೊಂದಿಗೆ ಶತಕ ಸಿಡಿಸಿದರು. ಈ ಮೂಲಕ ಒಂದೇ ವರ್ಷದಲ್ಲಿ 3 ಟಿ20 ಶತಕ ಸಿಡಿಸಿದ ಮೊದಲ ಆಟಗಾರ ಎಂಬ ವಿಶೇಷ ಸಾಧನೆ ಮಾಡಿದ್ದಾರೆ. ಒಟ್ಟಾರೆ 200 ಸ್ಟ್ರೈಕ್‌ರೇಟ್‌ನಲ್ಲಿ ಬ್ಯಾಟ್‌ ಬೀಸಿದ ಸಂಜು ಸ್ಯಾಮ್ಸನ್‌ 56 ಎಸೆತಗಳಲ್ಲಿ 109 ರನ್‌ (9 ಸಿಕ್ಸರ್‌, 6 ಬೌಂಡರಿ) ಸಿಡಿಸಿ ಅಜೇಯರಾಗುಳಿದರು.

  • ವರ್ಮಾ ಸೆಂಚುರಿ, ಆರ್ಶ್‌ದೀಪ್‌ ಬೌಲಿಂಗ್‌, ಅಕ್ಷರ್‌ ಸ್ಟನ್ನಿಂಗ್‌ ಕ್ಯಾಚ್‌ – ಭಾರತಕ್ಕೆ ವಿಜಯ

    ವರ್ಮಾ ಸೆಂಚುರಿ, ಆರ್ಶ್‌ದೀಪ್‌ ಬೌಲಿಂಗ್‌, ಅಕ್ಷರ್‌ ಸ್ಟನ್ನಿಂಗ್‌ ಕ್ಯಾಚ್‌ – ಭಾರತಕ್ಕೆ ವಿಜಯ

    ಸೆಂಚೂರಿಯನ್‌: ನೀರಿಕ್ಷೆಯಂತೆ ರನ್‌ ಮಳೆಯ ಪಂದ್ಯದಲ್ಲಿ ತಿಲಕ್‌ ವರ್ಮಾ (Tilak Varma) ಅವರ ಅಜೇಯ ಶತಕ ಮತ್ತು ಕೊನೆಯಲ್ಲಿ ಆರ್ಶ್‌ದೀಪ್‌ ಸಿಂಗ್‌ (Arshdeep Singh) ಅವರ ಅತ್ಯುತ್ತಮ ಬೌಲಿಂಗ್‌ನಿಂದಾಗಿ ಭಾರತ ಆಫ್ರಿಕಾ ವಿರುದ್ಧ 11 ರನ್‌ಗಳ ರೋಚಕ ಜಯ ಸಾಧಿಸಿದೆ. ಈ ಮೂಲಕ ಐದು ಪಂದ್ಯಗಳ ಸರಣಿಯಲ್ಲಿ 2-1 ಮುನ್ನಡೆ ಸಾಧಿಸಿದೆ.

    ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಭಾರತ (Team India) 6 ವಿಕೆಟ್‌ ನಷ್ಟಕ್ಕೆ 219 ರನ್‌ ಗಳಿಸಿತು. ಸವಾಲಿನ ಮೊತ್ತವನ್ನು ಬೆನ್ನಟ್ಟಿದ ದಕ್ಷಿಣ ಆಫ್ರಿಕಾ (South Africa) 7 ವಿಕೆಟ್‌ ನಷ್ಟಕ್ಕೆ 208 ರನ್‌ ಗಳಿಸಿ ಸೋಲೊಪ್ಪಿಕೊಂಡಿತು.

    ಮಿಲ್ಲರ್‌- ಕ್ಲಾಸನ್‌ ಆಸರೆ:
    84 ರನ್‌ಗಳಿಸುವಷ್ಟರಲ್ಲೊ ಆಫ್ರಿಕಾದ 4 ಮಂದಿ ಆಗ್ರ ಆಟಗಾರರು ಔಟಾದರು. ಈ ವೇಳೆ ಡೇವಿಡ್‌ ಮಿಲ್ಲರ್‌ ಮತ್ತು ಕ್ಲಾಸನ್‌ 35 ಎಸೆತಗಳಲ್ಲಿ 58 ರನ್‌ ಜೊತೆಯಾಟವಾಡಿ ಚೇತರಿಕೆ ನೀಡಿದರು.

    ಪಾಂಡ್ಯ ಎಸೆದ ಬೌಲಿಂಗ್‌ನಲ್ಲಿ ಸಿಕ್ಸ್‌ ಸಿಡಿಸಲು ಹೋದ ಡೇವಿಡ್‌ ಮಿಲ್ಲರ್‌ ಅವರ ಕ್ಯಾಚನ್ನು ಅಕ್ಷರ್‌ ಪಟೇಲ್‌ ಬೌಂಡರಿ ಗೆರೆಯ ಬಳಿ ಗಾಳಿಯಲ್ಲಿ ಹಾರಿ ಹಿಡಿದು ಔಟ್‌ ಮಾಡುವ ಮೂಲಕ ರೋಚಕ ತಿರುವು ನೀಡಿದರು.

    ಮಿಲ್ಲರ್‌ 18 ರನ್‌ಗಳಿಸಿ ಔಟಾದರೆ ಕ್ಲಾಸನ್‌ 41 ರನ್‌ (22 ಎಸೆತ, 1 ಬೌಂಡರಿ, 4 ಸಿಕ್ಸರ್‌) ಸಿಡಿಸಿ ವಿಕೆಟ್‌ ಒಪ್ಪಿಸಿದರು. ವಿಕೆಟ್‌ ಉರುಳುತ್ತಿದ್ದರೂ ಮಾರ್ಕೊ ಜಾನ್ಸೆನ್ ಸ್ಫೋಟಕ ಅರ್ಧಶತಕ ಸಿಡಿಸಿದರು. 54 ರನ್‌ (17 ಎಸೆತ, 4 ಬೌಂಡರಿ, 5 ಸಿಕ್ಸರ್‌) ಗಳಿಸಿದ್ದಾಗ ಆರ್ಶ್‌ದೀಪ್‌ ಎಸೆದ ಕೊನೆಯ ಓವರ್‌ನ ಮೂರನೇ ಎಸೆತದಲ್ಲಿ ಔಟಾದರು.

    ಆರ್ಶ್‌ದೀಪ್‌ 3 ವಿಕೆಟ್‌ ಪಡೆದರೆ ವರುಣ್‌ ಚಕ್ರವರ್ತಿ 2 ವಿಕೆಟ್‌ ಕಿತ್ತರು. ಹಾರ್ದಿಕ್‌ ಪಾಂಡ್ಯ, ಅಕ್ಷರ್‌ ಪಟೇಲ್‌ ತಲಾ ಒಂದೊಂದು ವಿಕೆಟ್‌ ಪಡೆದರು. ಇತರೇ ರೂಪದಲ್ಲಿ 5 ರನ್‌ (4 ಲೆಗ್‌ ಬೈ, 1 ವೈಡ್‌) ನೀಡಿದ್ದು ಭಾರತದ ಗೆಲುವಿಗೆ ಸಹಕಾರಿಯಾಯಿತು. ಇದನ್ನೂ ಓದಿ: ಭಾರತ ಬರಲಿ, ಬಾರದೇ ಇರಲಿ ನಾವು ಚಾಂಪಿಯನ್ಸ್‌ ಟ್ರೋಫಿ ಆಯೋಜಿಸುತ್ತೇವೆ: ಪಾಕಿಸ್ತಾನ
    ಸ್ಫೋಟಕ ಬ್ಯಾಟಿಂಗ್‌
    ಟಾಸ್‌ ಸೋತು ಭಾರತ ಇನ್ನಿಂಗ್ಸ್‌ ಆರಂಭಿಸುತ್ತಿದ್ದಂತೆ 2ನೇ ಎಸೆತದಲ್ಲೇ ಸಂಜು‌ ಸ್ಯಾಮ್ಸನ್‌ ಕ್ಲೀನ್‌ ಬೌಲ್ಡ್‌ ಆದರು. ಬಳಿಕ 2ನೇ ವಿಕೆಟ್‌ಗೆ ಜೊತೆಗೂಡಿದ ತಿಲಕ್‌ ವರ್ಮಾ ಹಾಗೂ ಆರಂಭಿಕ ಅಭಿಷೇಕ್‌ ಶರ್ಮಾ ಎದುರಾಳಿ ಬೌಲರ್‌ಗಳನ್ನು ಹಿಗ್ಗಾಮುಗ್ಗ ಚಚ್ಚಿ, ಪವರ್‌ ಪ್ಲೇ ಹೊತ್ತಿಗೆ 70 ರನ್‌ ಕಲೆಹಾಕಿದ್ದರು. 2ನೇ ವಿಕೆಟ್‌ಗೆ ಈ ಜೋಡಿ 52 ಎಸೆತಗಳಲ್ಲಿ ಬರೋಬ್ಬರಿ 107 ರನ್‌ ಪೇರಿಸಿತ್ತು.

    ಈ ವೇಳೆ ಅರ್ಧಶತಕ ಸಿಡಿಸಿ ಸ್ಫೋಟಕ ಬ್ಯಾಟಿಂಗ್‌ ಮಾಡುತ್ತಿದ್ದ ಅಭಿಷೇಕ್‌ ಶರ್ಮಾ ಸಿಕ್ಸರ್‌ ಸಿಡಿಸಲು ಯತ್ನಿಸಿ ಸ್ಟಂಪ್‌ ಔಟ್‌ಗೆ ತುತ್ತಾದರು. ಇದಾದ ಬಳಿಕ ಮಧ್ಯಮ ಕ್ರಮಾಂಕದಲ್ಲಿ ರಿಂಕು ಸಿಂಗ್‌ ಹಾಗೂ ತಿಲಕ್‌ ವರ್ಮಾ ಜೋರಿ 30 ಎಸೆತಗಳಲ್ಲಿ 58 ರನ್‌ಗಳ ಜೊತೆಯಾಟವೊಂದು ತಂಡದ ಬೃಹತ್‌ ಮೊತ್ತಕ್ಕೆ ಕಾರಣವಾಯಿತು.

    ವರ್ಮಾ ಚೊಚ್ಚಲ ಶತಕ:
    ಮೊದಲ ಓವರ್‌ನಿಂದಲೇ ಹರಿಣರ ಬೌಲರ್‌ಗಳನ್ನು ಬೆಂಡೆತ್ತಿದ ತಿಲಕ್ 8 ಬೌಂಡರಿ ಹಾಗೂ 6 ಸಿಕ್ಸರ್​ಗಳ ನೆರವಿನಿಂದ ಶತಕ ಪೂರೈಸಿದರು. ಈ ಮೂಲಕ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಶತಕ ಸಿಡಿಸಿದ ಭಾರತದ 11ನೇ ಆಟಗಾರ ಎಂಬ ಹೆಗ್ಗಳಿಕೆಗೆ ತಿಲಕ್ ವರ್ಮಾ ಪಾತ್ರರಾದರು. ಹಾಗೆಯೇ ದಕ್ಷಿಣ ಆಫ್ರಿಕಾ ವಿರುದ್ಧ ಈ ಸಾಧನೆ ಮಾಡಿದ ಭಾರತದ 5ನೇ ಆಟಗಾರ ಜೊತೆಗೆ ಭಾರತದ ಅತ್ಯಂತ ಕಿರಿಯ ಆಟಗಾರ ಎಂಬ ಹೆಗ್ಗಳಿಕೆಗೂ ಪಾತ್ರರಾದರು. ಒಟ್ಟಾರೆ 191.07 ಸ್ಟ್ರೇಕ್‌ರೇಟ್‌ನಲ್ಲಿ ಬ್ಯಾಟ್‌ ಬೀಸಿದ ತಿಲಕ್‌ ವರ್ಮಾ 56 ಎಸೆತಗಳಲ್ಲಿ 107 ರನ್‌ (7 ಸಿಕ್ಸರ್‌, 8 ಬೌಂಡರಿ) ಸಿಡಿಸಿ ಅಜೇಯರಾಗುಳಿದರು.

    ಟೀಂ ಇಂಡಿಯಾ ಪರ 200 ಸ್ಟ್ರೈಕ್‌ರೇಟ್‌ನಲ್ಲಿ ಬ್ಯಾಟ್‌ ಬೀಸಿದ ಅಭಿಷೇಕ್‌ ಶರ್ಮಾ 25 ಎಸೆತಗಳಲ್ಲಿ ಸ್ಫೋಟಕ 50 ರನ್‌ (5 ಸಿಕ್ಸರ್‌, 3 ಬೌಂಡರಿ), ಹಾರ್ದಿಕ್‌ ಪಾಂಡ್ಯ 18 ರನ್‌, ರಮಣದೀಪ್‌ ಸಿಂಗ್‌ 15 ರನ್‌ ಗಳಿಸಿದರು. ಇದಲ್ಲದೇ 10 ವೈಡ್‌, 6 ಬೈಸ್‌, 3 ನೋಬಾಲ್‌ ಸೇರಿ 19 ರನ್‌ ಹೆಚ್ಚುವರಿ ಸೇರ್ಪಡೆಯಾಯಿತು.

     

  • ತಿಲಕ್‌‌, ಹಾರ್ದಿಕ್ ಹೋರಾಟ ವ್ಯರ್ಥ; ಡೆಲ್ಲಿಗೆ 10 ರನ್‌ಗಳ ಜಯ – ಮುಂಬೈ ಪ್ಲೇ ಆಫ್‌ ಹಾದಿ ಬಹುತೇಕ ಬಂದ್‌!

    ತಿಲಕ್‌‌, ಹಾರ್ದಿಕ್ ಹೋರಾಟ ವ್ಯರ್ಥ; ಡೆಲ್ಲಿಗೆ 10 ರನ್‌ಗಳ ಜಯ – ಮುಂಬೈ ಪ್ಲೇ ಆಫ್‌ ಹಾದಿ ಬಹುತೇಕ ಬಂದ್‌!

    ನವದೆಹಲಿ: ಕೊನೆಯವರೆಗೂ ಜಿದ್ದಾ-ಜಿದ್ದಿಯಿಂದ ಕೂಡಿದ್ದ ಅಖಾಡದಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌ ತಂಡವು ಮುಂಬೈ ಇಂಡಿಯನ್ಸ್‌ ವಿರುದ್ಧ 10 ರನ್‌ಗಳ ಭರ್ಜರಿ ಜಯ ಸಾಧಿಸಿದೆ. ಇದರೊಂದಿಗೆ ವಾಂಖೆಡೆ ಮೈದಾನದಲ್ಲಿ ಅನುಭವಿಸಿದ ಸೋಲಿಗೆ ಸೇಡು ತೀರಿಸಿಕೊಂಡಿದೆ.

    ಇಲ್ಲಿನ ಅರುಣ್‌ ಜೇಟ್ಲಿ ಕ್ರೀಡಾಂಗಣದಲ್ಲಿ ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್‌ 20 ಓವರ್‌ಗಳಲ್ಲಿ ಕೇವಲ 4 ವಿಕೆಟ್‌ ನಷ್ಟಕ್ಕೆ 257 ರನ್‌ ಬಾರಿಸಿತ್ತು. 258 ರನ್‌ಗಳ ಬೃಹತ್‌ ಮೊತ್ತದ ಗುರಿ ಬೆನ್ನತ್ತಿದ ಮುಂಬೈ ಇಂಡಿಯನ್ಸ್‌ 20 ಓವರ್‌ಗಳಲ್ಲಿ 9 ವಿಕೆಟ್‌ ನಷ್ಟಕ್ಕೆ 247 ರನ್‌ ಗಳಿಸಿ 10 ರನ್‌ಗಳ ವಿರೋಚಿತ ಸೋಲಿಗೆ ತುತ್ತಾಗಿದೆ.

    ಕೊನೇ ಓವರ್‌ನಲ್ಲಿ ಕೈತಪ್ಪಿದ ಗೆಲುವು:
    ಕೊನೇ ಓವರ್‌ನಲ್ಲಿ ಮುಂಬೈ ಗೆಲುವಿಗೆ 25 ರನ್‌ಗಳ ಅಗತ್ಯವಿತ್ತು. ಮುಕೇಶ್‌ ಕುಮಾರ್‌ ಬೌಲಿಂಗ್‌ ವೇಳೆ ತಿಲಕ್‌ ವರ್ಮಾ ಸ್ಟ್ರೈಕ್‌ನಲ್ಲಿದ್ದರು. ಮೊದಲ ಎಸೆತದಲ್ಲಿ 2 ರನ್‌ ಕದಿಯಲು ಯತ್ನಿಸಿ ತಿಲಕ್‌ ರನೌಟ್‌ಗೆ ತುತ್ತಾದರು. ಇದರೊಂದಿಗೆ ಮುಂಬೈ ತಂಡದ ಗೆಲುವಿನ ಕನಸೂ ಭಗ್ನವಾಯಿತು. ಕೊನೆಯವರೆಗೂ ಹೋರಾಡಿದ ಮುಂಬೈ 247 ರನ್‌ ಗಳಿಸಿತು.

    ಬೃಹತ್‌ ಮೊತ್ತದ ಚೇಸಿಂಗ್‌ ಆರಂಭಿಸಿದ ಮುಂಬೈ ಇಂಡಿಯನ್ಸ್‌ ಆರಂಭದಲ್ಲೇ ಪ್ರಮುಖ ವಿಕೆಟ್‌ಗಳನ್ನು ಕಳೆದುಕೊಂಡಿತು. ಮಾಜಿ ನಾಯಕ ರೋಹಿತ್‌ ಶರ್ಮಾ 8 ರನ್‌ಗಳಿಗೆ ವಿಕೆಟ್‌ ಕೈಚೆಲ್ಲಿದರು, ಈ ಬೆನ್ನಲ್ಲೇ 20 ರನ್‌ ಗಳಿಸಿ ಇಶಾನ್‌ ಕಿಶನ್‌ ಸಹ ಪೆವಿಲಿಯನ್‌ಗೆ ಮರಳಿದರು. ನಂತರ ಸ್ಪೋಟಕ ಬ್ಯಾಟಿಂಗ್‌ ಆರಂಭಿಸಿದ್ದ ಸೂರ್ಯಕುಮಾರ್‌ ಯಾದವ್‌ 13 ಎಸೆತಗಳಲ್ಲಿ 26 ರನ್‌ ಬಾರಿಸಿ ಔಟಾದರು. ಇದು ಮುಂಬೈ ತಂಡಕ್ಕೆ ಸೋಲಿನ ಭೀತಿ ಉಂಟುಮಾಡಿತ್ತು.

    ಮುಂಬೈ ಪರ ತಿಲಕ್‌ ವರ್ಮಾ 63 ರನ್‌ (32 ಎಸೆತ, 4 ಸಿಕ್ಸರ್‌, 4 ಬೌಂಡರಿ), ಹಾರ್ದಿಕ್‌ ಪಾಂಡ್ಯ 46 ರನ್‌ (24 ಎಸೆತ, 3 ಸಿಕ್ಸರ್‌, 4 ಬೌಂಡರಿ), ಟಿಮ್‌ ಡೇವಿಡ್‌ 37 ರನ್‌ (17 ಎಸೆತ, 3 ಸಿಕ್ಸರ್‌, 4 ಬೌಂಡರಿ), ಸೂರ್ಯಕುಮಾರ್‌ 26 ರನ್‌, ಇಶಾನ್‌ ಕಿಶನ್‌ 20 ರನ್‌, ಗಳಿಸಿದ್ದು ಬಿಟ್ಟರೆ ಉಳಿದ ಆಟಗಾರರು ಹೆಚ್ಚು ಹೊತ್ತು ಕ್ರೀಸ್‌ನಲ್ಲಿ ಉಳಿಯದ ಕಾರಣ ಮುಂಬೈ ವಿರೋಚಿತ ಸೋಲಿಗೆ ತುತ್ತಾಯಿತು. ಡೆಲ್ಲಿ ಕ್ಯಾಪಿಟಲ್ಸ್‌ ಪರ ಮುಕೇಶ್‌ ಕುಮಾರ್‌, ರಸಿಖ್‌ ಸಲಾಮ್‌ ತಲಾ 3 ವಿಕೆಟ್‌ ಕಿತ್ತರೆ, ಖಲೀಲ್‌ ಅಹ್ಮದ್‌ 2 ವಿಕೆಟ್‌ ಪಡೆದು ಮಿಂಚಿದರು.

    ಮೊದಲು ಬ್ಯಾಟಿಂಗ್‌ ಮಾಡಲಿಳಿದ ಡೆಲ್ಲಿ ಕ್ಯಾಪಿಟಲ್ಸ್‌ ಪರ ಆರಂಭಿಕರಾದ ಫ್ರೇಸರ್‌ ಮೆಕ್‌ಗಾರ್ಕ್‌ ಹಾಗೂ ಅಭಿಷೇಕ್ ಪೋರೆಲ್ ಆರಂಭದಿಂದಲೇ ಸ್ಪೋಟಕ ಇನ್ನಿಂಗ್ಸ್‌ ಕಟ್ಟಲು ಶುರು ಮಾಡಿದರು. ಮೊದಲ 2.4 ಓವರ್‌ಗಳಲ್ಲೇ ಡೆಲ್ಲಿ ತಂಡ 50 ರನ್‌ ಬಾರಿಸಿತ್ತು. ಆಸ್ಟ್ರೇಲಿಯಾ ಮೂಲದ ಯುವ ಸ್ಪೋಟಕ ಬ್ಯಾಟರ್ ಫ್ರೇಸರ್‌ ಮೆಗಾರ್ಕ್‌ ಮುಟ್ಟಿದ್ದೆಲ್ಲ ಚಿನ್ನ ಎನ್ನುವಂತಾಗಿದ್ದು. ಒಂದಾದಮೇಲೊಂದು ಎಸೆತಗಳು ಸಿಕ್ಸರ್‌, ಬೌಂಡರಿಯ ಹಾದಿಯನ್ನೇ ಹಿಡಿಯುತ್ತಿದ್ದವು. ಇದರೊಂದಿಗೆ ಮೆಕ್‌ಗಾರ್ಕ್ ಕೇವಲ 15 ಎಸೆತಗಳಲ್ಲಿ ಅರ್ಧಶತಕ ಸಿಡಿಸಿ ಮಿಂಚಿದರು. ಇದರೊಂದಿಗೆ ಡೆಲ್ಲಿ ಪವರ್‌ ಪ್ಲೇ ನಲ್ಲಿ 92 ರನ್ ಕಲೆಹಾಕಿತ್ತು. ಇದು ಐಪಿಎಲ್‌ ಇತಿಹಾಸದಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌ ಪವರ್‌ ಪ್ಲೇನಲ್ಲಿ ಸಿಡಿಸಿದ ಗರಿಷ್ಠ ಸ್ಕೋರರ್‌ ಆಗಿತ್ತು.

    ಮೆಕ್‌ಗಾರ್ಕ್‌ ಹಾಗೂ ಅಭಿಷೇಕ್ ಮೊದಲ ವಿಕೆಟ್‌ಗೆ 7.3 ಓವರ್‌ಗಳಲ್ಲಿ ಬರೋಬ್ಬರಿ 114 ರನ್‌ ಸಿಡಿಸಿತ್ತು. ಮೆಕ್‌ಗಾರ್ಕ್‌ ಬಳಿಕ ಶಾಯ್‌ ಹೋಪ್‌, ರಿಷಭ್‌ ಪಂತ್‌, ಟ್ರಿಸ್ಟನ್‌ ಸ್ಟಬ್ಸ್‌ ಸಹ ಮುಂಬೈ ಬೌಲರ್‌ಗಳನ್ನು ಹಿಗ್ಗಾಮುಗ್ಗಾ ಜಾಡಿಸಿದರು. ಅಂತಿಮವಾಗಿ ಡೆಲ್ಲಿ ತಂಡ 20 ಓವರ್‌ಗಳಲ್ಲಿ 257 ರನ್‌ ಸಿಡಿಸಿತ್ತು.

    ಡೆಲ್ಲಿ ಪರ ಮೆಕ್‌ಗಾರ್ಕ್‌ 84 ರನ್‌ (27 ಎಸೆತ, 11 ಬೌಂಡರಿ, 6 ಸಿಕ್ಸರ್‌), ಟ್ರಿಸ್ಟನ್‌ ಸ್ಟಬ್ಸ್‌ 48 ರನ್‌ (25 ಎಸೆತ, 6 ಬೌಂಡರಿ, 2 ಸಿಕ್ಸರ್‌), ಶಾಯ್‌ಹೋಪ್‌ 41 ರನ್‌ (17 ಎಸೆತ, 5 ಸಿಕ್ಸರ್‌), ರಿಷಭ್‌ ಪಂತ್‌ 29 ರನ್‌, ಅಕ್ಷರ್‌ ಪಟೇಲ್‌ 11 ರನ್‌ ಗಳಿಸಿದರು.

    ಮುಂಬೈ ಇಂಡಿಯನ್ಸ್‌ ಪರ ಲ್ಯೂಕ್ ವುಡ್, ಜಸ್ಪ್ರೀತ್‌ ಬುಮ್ರಾ, ಪಿಯೂಷ್‌ ಚಾವ್ಲಾ, ಮೊಹಮ್ಮದ್‌ ನಬಿ ತಲಾ ಒಂದೊಂದು ವಿಕೆಟ್‌ ಪಡೆದು ಮಿಂಚಿದರು.

    ರನ್‌ ಏರಿದ್ದು ಹೇಗೆ?
    17 ಎಸೆತ – 50 ರನ್‌
    41 ಎಸೆತ – 100 ರನ್‌
    73 ಎಸೆತ – 150 ರನ್‌
    98 ಎಸೆತ – 200 ರನ್‌
    120 ಎಸೆತ – 257 ರನ್‌

  • ಹರಿಣರ ಬೇಟೆಯಾಡಿ ಸರಣಿ ಗೆದ್ದ ಭಾರತ – ಧೋನಿ ಟ್ರೆಂಡ್‌ ಮುಂದುವರಿಸಿದ ಕೆ.ಎಲ್‌ ರಾಹುಲ್‌

    ಹರಿಣರ ಬೇಟೆಯಾಡಿ ಸರಣಿ ಗೆದ್ದ ಭಾರತ – ಧೋನಿ ಟ್ರೆಂಡ್‌ ಮುಂದುವರಿಸಿದ ಕೆ.ಎಲ್‌ ರಾಹುಲ್‌

    – ಕಿಂಗ್‌ ಕೊಹ್ಲಿ ಬಳಿಕ ದಕ್ಷಿಣ ಆಫ್ರಿಕಾದಲ್ಲಿ ಸರಣಿ ಗೆದ್ದ ಟೀಂ‌ ಭಾರತದ 2ನೇ ನಾಯಕ ರಾಹುಲ್

    ಪರ್ಲ್‌: ಸಂಜು ಸ್ಯಾಮ್ಸನ್‌ ಅವರ ಚೊಚ್ಚಲ ಶತಕ ಹಾಗೂ ಅರ್ಷ್‌ದೀಪ್‌ ಸಿಂಗ್‌ ಶಿಸ್ತುಬದ್ಧ ಬೌಲಿಂಗ್‌ ದಾಳಿಯ ನೆರವಿನಿಂದ ಭಾರತ ತಂಡ ಏಕದಿನ ಸರಣಿಯ ಅಂತಿಮ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ 78 ರನ್‌ಗಳ ಭರ್ಜರಿ ಗೆಲುವು ಸಾಧಿಸಿದೆ. ಈ ಮೂಲಕ ಮೂರು ಪಂದ್ಯಗಳ ಏಕದಿನ ಸರಣಿಯನ್ನು 2-1 ಅಂತರದಲ್ಲಿ ಮುಡಿಗೇರಿಸಿಕೊಂಡಿದೆ. ಈ ಸರಣಿ ಗೆಲುವು ಕೆ.ಎಲ್‌ ರಾಹುಲ್‌ ನಾಯಕತ್ವಕ್ಕೆ ಮತ್ತಷ್ಟು ಬಲ ನೀಡಿದೆ.

    ಟೀಂ ಇಂಡಿಯಾ ಮಾಜಿ ನಾಯಕ ವಿರಾಟ್‌ ಕೊಹ್ಲಿ ಅವರ ಬಳಿಕ ದಕ್ಷಿಣ ಆಫ್ರಿಕಾದಲ್ಲಿ ಹರಿಣರ ವಿರುದ್ಧ ಸರಣಿ ಗೆದ್ದ ಟೀಂ ಇಂಡಿಯಾದ 2ನೇ ನಾಯಕ ಎಂಬ ಖ್ಯಾತಿಯನ್ನೂ ರಾಹುಲ್‌ ಗಳಿಸಿದ್ದಾರೆ. ಇದರೊಂದಿಗೆ ಲೆಜೆಂಡ್‌ ಎಂ.ಎಸ್‌ ಧೋನಿ ಅವರ ಟ್ರೆಂಡನ್ನೇ ಮುಂದುವರಿಸಿ ಅಭಿಮಾನಿಗಳ ಮೆಚ್ಚುಗೆಗೂ ಪಾತ್ರರಾಗಿದ್ದಾರೆ. ಗಣ್ಯರಿಂದ ಸರಣಿ ಟ್ರೋಫಿ ಪಡೆಯುತ್ತಿದ್ದಂತೆ ಅದನ್ನು ಸಹ ಆಟಗಾರ ರಿಂಕು ಸಿಂಗ್‌ಗೆ ನೀಡಿದ್ದಾರೆ. ಗ್ರೂಪ್‌ ಫೋಟೋ ತೆಗೆಸಿಕೊಳ್ಳುವಾಗಲು ಕೆ.ಎಲ್‌ ರಾಹುಲ್‌ ಕೊನೆಯಲ್ಲಿ ನಿಂತು ಸಹ ಆಟಗಾರರೊಂದಿಗೆ ಸಂಭ್ರಮಿಸಿದ್ದಾರೆ. ಇದು ಧೋನಿ ಅಭಿಮಾನಿಗಳಿಂದಲೂ ಮೆಚ್ಚುಗೆಗೆ ಪಾತ್ರವಾಗಿದೆ.

    ಪರ್ಲ್‌ನ ಬೋಲೆಂಡ್‌ ಪಾರ್ಕ್‌ನಲ್ಲಿ ನಡೆದ ಏಕದಿನ ಸರಣಿಯ 3ನೇ ಹಾಗೂ ಅಂತಿಮ ಪಂದ್ಯದಲ್ಲಿ ಟೀಂ ಇಂಡಿಯಾ ನೀಡಿದ್ದ 297 ರನ್‌ಗಳ ಬೆನ್ನತ್ತಿದ್ದ ದಕ್ಷಿಣ ಆಫ್ರಿಕಾ ಉತ್ತಮ ಆರಂಭ ಪಡೆದುಕೊಂಡಿತ್ತಾದರೂ ಬಳಿಕ ಭಾರತದ ಸಂಘಟಿತ ಬೌಲಿಂಗ್‌ ದಾಳಿ ಎದುರಿಸುವಲ್ಲಿ ವಿಫಲವಾಯಿತು. ಅಂತಿಮವಾಗಿ 45.5 ಓವರ್‌ಗಳಲ್ಲಿ 218 ರನ್‌ಗಳಿಗೆ ಆಲೌಟ್‌ ಆಯಿತು. ಇದರಿಂದ ಭಾರತ 78 ರನ್‌ಗಳ ಭರ್ಜರಿ ಜಯ ಸಾಧಿಸಿ, ಸರಣಿ ಕೈವಶ ಮಾಡಿಕೊಂಡಿತು.

    ಟೋನಿ ಡಿ ಜಾರ್ಜಿ ಅರ್ಧಶತಕ:
    2ನೇ ಪಂದ್ಯದಲ್ಲಿ ಹರಿಣರ ಪರ ಶತಕ ಸಿಡಿಸಿದ್ದ ಟೋನಿ ಡಿ ಜಾರ್ಜಿ ಅವರು 3ನೇ ಪಂದ್ಯದಲ್ಲಿಯೂ ಅತ್ಯುತ್ತಮ ಫಾರ್ಮ್‌ ಮುಂದುವರಿಸಿದರು. ಅಕ್ಷರ್‌ ಪಟೇಲ್‌ ಅವರ ಬೌಲಿಂಗ್‌ನಲ್ಲಿ ಒಂದು ಜೀವ ದಾನ ಪಡೆದಿದ್ದ ಟೋನಿ ಡಿ ಜಾರ್ಜಿ 87 ಎಸೆತಗಳಲ್ಲಿ 81 ರನ್ (3 ಸಿಕ್ಸರ್‌, 6 ಬೌಂಡರಿ) ಗಳಿಸಿ ಸತತ 2ನೇ ಶತಕ ಪೂರೈಸುವ ಮುನ್ಸೂಚನೆ ನೀಡಿದ್ದರು. ಆದ್ರೆ, ಇದಕ್ಕೆ ಅರ್ಷ್‌ದೀಪ್‌ ಸಿಂಗ್‌ ಬ್ರೇಕ್‌ ಹಾಕಿದರು. ನಾಯಕ ಏಡೆನ್‌ ಮಾರ್ಕ್ರಮ್‌ ಅನಗತ್ಯವಾಗಿ ರಿವರ್ಸ್‌ ಸ್ವೀಪ್‌ ತೆಗೆದುಕೊಳ್ಳಲು ಯತ್ನಿಸಿ ಸುಲಭ ಕೀಪರ್‌ ಕ್ಯಾಚ್‌ಗೆ ತುತ್ತಾದರು. ಇನ್ನುಳಿದ ಬ್ಯಾಟ್ಸ್‌ಮನ್‌ಗಳು ಭಾರತೀರ ದಾಳಿ ಎದುರಿಸುವಲ್ಲಿ ವಿಫಲರಾದರು.

    ಇನ್ನುಳಿದಂತೆ ರೀಜಾ ಹೆಂಡ್ರಿಕ್ಸ್ 19 ರನ್‌, ರಾಸ್ಸಿ ವಾನ್‌ ಡೇರ್‌ ಡುಸ್ಸೆನ್‌ 2 ರನ್‌, ಹೆನ್ರಿಚ್‌ ಕ್ಲಾಸೆನ್‌ 21 ರನ್‌, ಡೇವಿಡ್‌ ಮಿಲ್ಲರ್‌ 10 ರನ್‌, ವಿಯಾನ್ ಮುಲ್ಡರ್ 1 ರನ್‌, ಕೇಶವ್‌ ಮಹಾರಾಜ್‌ 14 ರನ್‌, ಬ್ಯೂರಾನ್ ಹೆಂಡ್ರಿಕ್ಸ್ 18 ರನ್‌, ಲಿಜಾಡ್ ವಿಲಿಯಮ್ಸ್ 2 ರನ್‌ ಗಳಿಸಿದ್ರೆ ನಾಂದ್ರೆ ಬರ್ಗರ್ 1 ರನ್‌ ಗಳಿಸಿ ಅಜೇಯರಾಗುಳಿದರು.

    ಭಾರತದ ಪರ ಅತ್ಯುತ್ತಮ ಬೌಲಿಂಗ್‌ ಪ್ರದರ್ಶನ ತೋರಿದ ಅರ್ಷ್‌ದೀಪ್‌ ಸಿಂಗ್‌ 4 ವಿಕೆಟ್‌ ಕಿತ್ತ ಸಾಧನೆ ಮಾಡಿದರೆ, ವಾಷಿಂಗ್ಟನ್‌ ಸುಂದರ್ ಹಾಗೂ ಅವೇಶ್‌ ಖಾನ್ ತಲಾ 2 ವಿಕೆಟ್‌ ಕಿತ್ತರು.

    ಇದಕ್ಕೂ ಮುನ್ನ ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ್ದ ಭಾರತ 50 ಓವರ್‌ಗಳಲ್ಲಿ 8 ವಿಕೆಟ್‌ ನಷ್ಟಕ್ಕೆ 296 ರನ್‌ ಕಲೆಹಾಕಿತ್ತು. ಸ್ಫೋಟಕ ಇನ್ನಿಂಗ್ಸ್‌ ಆರಂಭಿಸುವ ನಿರೀಕ್ಷೆ ಹುಟ್ಟಿಸಿದ್ದ ರಜತ್‌ ಪಾಟಿದಾರ್‌ 22 ರನ್‌ ಗಳಿಸಿ ಔಟಾಗುತ್ತಿದ್ದಂತೆ, ಸತತ 2 ಅರ್ಧಶತಕ ಗಳಿಸಿದ್ದ ಸಾಯಿ ಸುದರ್ಶನ್‌ 10 ರನ್‌ಗೆ ಔಟಾದರು. 3ನೇ ವಿಕೆಟ್‌ಗೆ ಕೆ.ಎಲ್‌ ರಾಹುಲ್‌ ಹಾಗೂ ಸಂಜು ಸ್ಯಾಮ್ಸನ್‌ ಜೋಡಿ ಅರ್ಧಶತಕದ ಜೊತೆಯಾಟವಾಡುವ ಮೂಲಕ ತಂಡದ ಮೊತ್ತವನ್ನು 100ರ ಗಡಿ ದಾಟಿಸಿತು. ಅಷ್ಟರಲ್ಲಿ 35 ಎಸೆತಗಳಲ್ಲಿ 21 ರನ್‌ ಗಳಿಸಿದ್ದ ರಾಹುಲ್‌ ಔಟಾಗಿ ಪೆವಿಲಿಯನ್‌ಗೆ ಮರಳಿದರು.

    ಸಂಜು ಶತಕ-ತಿಲಕ್‌ ಅರ್ಧಶತಕ:
    4ನೇ ವಿಕೆಟ್‌ಗೆ ಜೊತೆಯಾದ ಸಂಜು ಸ್ಯಾಮ್ಸನ್‌ ಹಾಗೂ ತಿಲಕ್‌ ವರ್ಮಾ ಎಡಗೈ-ಬಲಗೈ ಕಾಂಬಿನೇಷನ್‌ನಲ್ಲಿ ಹರಿಣ ಪಡೆಯ ಬೌಲರ್‌ಗಳನ್ನು ಕಾಡಿದರು. ಈ ಇಬ್ಬರು ಮಧ್ಯಮ ಓವರ್‌ಗಳಲ್ಲಿ ಅತ್ಯುತ್ತಮ ಬ್ಯಾಟಿಂಗ್‌ ಪ್ರದರ್ಶಿಸಿ 4ನೇ ವಿಕೆಟ್‌ಗೆ 116 ರನ್‌ಗಳ ಜೊತೆಯಾಟದ ಕೊಡುಗೆ ನೀಡಿದರು. ಸಮಯಕ್ಕೆ ತಕ್ಕಂತೆ ಬ್ಯಾಟ್‌ ಮಾಡಿದ ತಿಲಕ್‌ ವರ್ಮಾ ಅವರು 77 ಎಸೆತಗಳಲ್ಲಿ 52 ರನ್‌ ಕಲೆ ಹಾಕಿ, ಕೇಶವ್‌ ಮಹಾರಾಜ್‌ ಸ್ಪಿನ್‌ ದಾಳಿಗೆ ಔಟಾದರು. ಕೊನೆಯಲ್ಲಿ ರಿಂಕು ಸಿಂಗ್‌ 38 ರನ್‌ಗಳ ನಿರ್ಣಾಯಕ ಕೊಡುಗೆ ನೀಡಿದರು.

    2015ರಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ್ದ ಸಂಜು ಸ್ಯಾಮ್ಸನ್‌ಗೆ ಇಲ್ಲಿಯವರೆಗೂ ನಿಯಮಿತವಾಗಿ ಅವಕಾಶಗಳು ಸಿಕ್ಕಿರಲಿಲ್ಲ. ಈ ಕಾರಣದಿಂದಾಗಿ ಶತಕ ಸಿಡಿಸಲು ಸಾಧ್ಯವಾಗಿರಲಿಲ್ಲ. ಆದ್ರೆ, ಇತ್ತೀಚಿನ ದಿನಗಳಲ್ಲಿ ಏಕದಿನ ಸ್ವರೂಪದಲ್ಲಿ ಅತ್ಯುತ್ತಮ ಲಯ ಹೊಂದಿರುವ ಸಂಜು ಸ್ಯಾಮ್ಸನ್‌ ಅವರು ಅತ್ಯುತ್ತಮ ಪ್ರದರ್ಶನ ತೋರುತ್ತಿದ್ದಾರೆ. ಅದೇ ರೀತಿ ಗುರುವಾರ 3ನೇ ಏಕದಿನ ಪಂದ್ಯದಲ್ಲಿಯೂ ಎದುರಿಸಿದ 114 ಎಸೆತಗಳಲ್ಲಿ 3 ಸಿಕ್ಸರ್‌ ಹಾಗೂ 6 ಬೌಂಡರಿಗಳೊಂದಿಗೆ 108 ರನ್‌ ಗಳಿಸಿದರು.

  • ಸಂಜು ಸ್ಯಾಮ್ಸನ್ ಚೊಚ್ಚಲ ಶತಕ – ಸಂಭ್ರಮದಲ್ಲಿ ತೋಳ್ಬಲ ಪ್ರದರ್ಶನ!

    ಸಂಜು ಸ್ಯಾಮ್ಸನ್ ಚೊಚ್ಚಲ ಶತಕ – ಸಂಭ್ರಮದಲ್ಲಿ ತೋಳ್ಬಲ ಪ್ರದರ್ಶನ!

    ಪಾರ್ಲ್ (ದಕ್ಷಿಣ ಆಫ್ರಿಕಾ): ವಿಕೆಟ್ ಕೀಪರ್ ಬ್ಯಾಟ್ಸ್ಮನ್ ಸಂಜು ಸ್ಯಾಮ್ಸನ್ (Sanju Samson) ಇಂದು ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಪಂದ್ಯದಲ್ಲಿ ಚೊಚ್ಚಲ ಶತಕ ಬಾರಿಸಿದರು. ಸಂಜು ಸ್ಯಾಮ್ಸನ್‌ಗೆ ಉತ್ತಮ ಸಾಥ್ ನೀಡಿದ ತಿಲಕ್ ವರ್ಮಾ ಏಕದಿನ ಪಂದ್ಯಗಳಲ್ಲಿ ಮೊದಲ ಅರ್ಧಶತಕ ಬಾರಿಸಿದರು.

    ಪಾರ್ಲ್‌ನ ಬೊಲ್ಯಾಂಡ್ ಪಾರ್ಕ್ ಕ್ರೀಡಾಂಗಣದಲ್ಲಿ ನಡೆದ ಏಕದಿನ ಸರಣಿಯ ಮೂರನೇ ಪಂದ್ಯದಲ್ಲಿ ಸಂಜು ಸ್ಯಾಮ್ಸನ್ ಶತಕ ಬಾರಿಸಿದರು. 114 ಎಸೆತಗಳಲ್ಲಿ 6 ಬೌಂಡರಿ ಹಾಗೂ 3 ಸಿಕ್ಸರ್ ನೆರವಿನಿಂದ 108 ರನ್ ಗಳಿಸಿದರು. ಇದನ್ನೂ ಓದಿ: IND vs SA: ಸಂಜು ಸ್ಯಾಮ್ಸನ್ ಮೊದಲ ಶತಕ; ಆಫ್ರಿಕಾಗೆ 297 ರನ್‌ಗಳ ಗುರಿ

    ಪದೇ ಪದೇ ಕ್ರೀಡಾಂಗಣಕ್ಕಿಳಿಯುವ ಅವಕಾಶ ವಂಚಿತರಾಗಿದ್ದ ಸಂಜು ಇಂದು ಸೆಂಚುರಿ ಬಾರಿಸುತ್ತಿದ್ದಂತೆ ತಮ್ಮ ತೋಳ್ಬಲ ಪ್ರದರ್ಶಿಸಿದರು. ಸೆಂಚುರಿ ಸಿಡಿಸಿದ ಸಂಭ್ರಮದಲ್ಲಿ ಹೆಲ್ಮೆಟ್ ಕೆಳಗೆಸೆದ ಸಂಜು ಟೀ ಶರ್ಟ್ ಮೇಲೆ ಸರಿಸಿ ತೋಳ್ಬಲ ಪ್ರದರ್ಶಿಸಿದರು.

    ಇನ್ನಿಂಗ್ಸ್ ಬ್ರೇಕ್ ಮಧ್ಯೆ ಮಾತನಾಡಿದ ಸಂಜು, ಕಳೆದ ಕೆಲ ವರ್ಷಗಳಿಂದ ದೈಹಿಕವಾಗಿ ಹಾಗೂ ಮಾನಸಿಕವಾಗಿ ಉತ್ತಮ ಆಟವಾಡಲು ಸಿದ್ಧವಾಗಿದ್ದೆ. ಸೆಂಚುರಿ ಬಾರಿಸಿರುವ ಈ ಕ್ಷಣ ಭಾವುಕನಾಗಿದ್ದೇನೆ. ಖುಷಿಯಾಗಿದೆ ಎಂದರು. ಇದನ್ನೂ ಓದಿ: RCB ಕಪ್‌ ಗೆಲ್ಲುವಂತೆ ಬೆಂಬಲಿಸಿ ಎಂದ ‌ಅಭಿಮಾನಿ – ಲೆಜೆಂಡ್‌ ಮಹಿ ಕೊಟ್ಟ ಉತ್ತರ ಏನು?

    ಸಂಜು ಸೆಂಚುರಿ ಸಹಾಯದಿಂದ ಟೀಂ ಇಂಡಿಯಾ ನಿಗದಿತ 50 ಓವರ್ ನಲ್ಲಿ 296 ರನ್ ಗಳಿಸಿತು. ಸಂಜು ಹಾಗೂ ತಿಲಕ್ ವರ್ಮಾ ಮೂರನೇ ವಿಕೆಟ್‌ಗೆ ಗಳಿಸಿದ 116 ರನ್ ಜೊತೆಯಾಟ ಭಾರತ ಉತ್ತಮ ಮೊತ್ತ ಕಲೆಹಾಕುವಲ್ಲಿ ಪ್ರಮುಖ ಪಾತ್ರವಹಿಸಿತು. ಕೊನೆಯ 10 ಓವರ್‌ಗಳಲ್ಲಿ ಭಾರತ 93 ರನ್ ಗಳಿಸಿ, ತಂಡದ ಮೊತ್ತ 296 ರನ್ ತಲುಪಲು ಸಹಕಾರಿಯಾಯಿತು.

  • ತಿಲಕ್ ವರ್ಮಾ ಫಿಫ್ಟಿ ತಪ್ಪಿಸಿ ಹಿಗ್ಗಾಮುಗ್ಗ ಟ್ರೋಲ್‌ಗೆ ಗುರಿಯಾದ ಪಾಂಡ್ಯ – ಅಭಿಮಾನಿಗಳು ಕೆಂಡ

    ತಿಲಕ್ ವರ್ಮಾ ಫಿಫ್ಟಿ ತಪ್ಪಿಸಿ ಹಿಗ್ಗಾಮುಗ್ಗ ಟ್ರೋಲ್‌ಗೆ ಗುರಿಯಾದ ಪಾಂಡ್ಯ – ಅಭಿಮಾನಿಗಳು ಕೆಂಡ

    -ನಾಯಕನ ಸ್ಥಾನಕ್ಕೆ ಪಾಂಡ್ಯ ಅರ್ಹನಲ್ಲ, ಮಹಿ ಸ್ಥಾನ ತುಂಬೋಕಾಗಲ್ಲ ಅಂತಾ ಟ್ರೋಲ್‌

    ಜಾರ್ಜ್ಟೌನ್ (ಗಯಾನ): ವೆಸ್ಟ್ ಇಂಡೀಸ್ (West Indies) ವಿರುದ್ಧ ನಡೆದ T20 ಸರಣಿಯ 3ನೇ ಪಂದ್ಯದಲ್ಲಿ ಟೀಂ ಇಂಡಿಯಾ ಭರ್ಜರಿ ಜಯ ಸಾಧಿಸಿದೆ. ಆದ್ರೆ ಕೊನೆಯಲ್ಲಿ ನಾಯಕ ಹಾರ್ದಿಕ್ ಪಾಂಡ್ಯ (Hardik Pandya) ಮಾಡಿದ ಎಡವಟ್ಟಿನಿಂದ ಭಾರೀ ಟೀಕೆಗೆ ಗುರಿಯಾಗಿದ್ದಾರೆ.

    ಬ್ಯಾಟಿಂಗ್ ವೈಫಲ್ಯ ಕಾರಣ ಸತತ ಸೋಲುಂಡಿದ್ದ ಟೀಂ ಇಂಡಿಯಾ (Team India), ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಸರಣಿಯ 3ನೇ ಪಂದ್ಯದಲ್ಲಿ 7 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿ, ಸರಣಿ ಜಯದ ಕನಸು ಜೀವಂತವಾಗಿರಿಸಿಕೊಂಡಿದೆ. ಸೂರ್ಯಕುಮಾರ್ ಯಾದವ್ (Suryakumar Yadav) ಭರ್ಜರಿ ಬ್ಯಾಟಿಂಗ್‌ನೊಂದಿಗೆ 83 ರನ್ ಗಳಿಸಿದರು. ಇನ್ನೂ ಉತ್ತಮ ಬ್ಯಾಟಿಂಗ್ ಫಾರ್ಮ್‌ನಲ್ಲಿರುವ ಯುವ ಬ್ಯಾಟರ್ ತಿಲಕ್ ವರ್ಮಾ 37 ಎಸೆತಗಳಲ್ಲಿ 49 ರನ್ ಗಳಿಸಿ ಅಜೇಯರಾಗಿ ಉಳಿದರು. ಆದ್ರೆ ಕೊನೆಯಲ್ಲಿ ನಾಯಕ ಹಾರ್ದಿಕ್ ಪಾಂಡ್ಯ ಅರ್ಧಶತಕ ತಪ್ಪಿಸಿದ್ದು ಟ್ರೋಲ್‌ಗೆ ಗುರಿಯಾಗಿದ್ದಾರೆ.

    ಕೊನೆಯ 14 ಎಸೆತಗಳಲ್ಲಿ ಟೀಂ ಇಂಡಿಯಾ ಗೆಲುವಿಗೆ 2 ರನ್‌ಗಳ ಅಗತ್ಯವಿತ್ತು. ಈ ವೇಳೆ 49 ರನ್‌ಗಳಿಸಿದ್ದ ತಿಲಕ್ ವರ್ಮಾ ನಾನ್ ಸ್ಟ್ರೈಕ್‌ನಲ್ಲಿದ್ದರು. 14 ಎಸೆತಗಳಲ್ಲಿ 14 ರನ್‌ಗಳಿಸಿ ಸ್ಟ್ರೈಕ್‌ನಲ್ಲಿದ್ದ ಪಾಂಡ್ಯ ತಿಲಕ್ ವರ್ಮಾಗೆ ಫಿಫ್ಟಿ ಮಾಡುವ ಅವಕಾಶ ಮಾಡಿಕೊಡ್ತಾರೆ ಎಂದು ಭಾವಿಸಲಾಗಿತ್ತು. ಆದ್ರೆ ಪಾಂಡ್ಯ, ರೋವ್ಮನ್ ಪೋವೆಲ್ ಬೌಲಿಂಗ್‌ಗೆ ಸಿಕ್ಸರ್ ಬಾರಿಸುವುದರೊಂದಿಗೆ ವಿನ್ನಿಂಗ್ ಶಾಟ್ ಬಾರಿಸಿದ್ರು. ಇದರಿಂದ ಅಭಿಮಾನಿಗಳು ಪಾಂಡ್ಯ ವಿರುದ್ಧ ಕೆಂಡ ಕಾರಿದ್ದಾರೆ.

    ಎಂ.ಎಸ್ ಧೋನಿ, ರೋಹಿತ್ ಶರ್ಮಾ, ಸಂಜು ಸ್ಯಾಮ್ಸನ್ ಹಾಗೂ ಸೂರ್ಯಕುಮಾರ್ ಯಾದವ್‌ ಅವರನ್ನ ಉದಾಹರಣೆ ನೀಡಿ ಪಾಂಡ್ಯ ಅವ್ರನ್ನ ಹಿಗ್ಗಾಮುಗ್ಗ ಟ್ರೋಲ್ ಮಾಡಿದ್ದಾರೆ. ಇದನ್ನೂ ಓದಿ: ಸೂರ್ಯನ ಆರ್ಭಟಕ್ಕೆ ವಿಂಡೀಸ್‌ ಕಂಗಾಲು, ಭಾರತಕ್ಕೆ 7 ವಿಕೆಟ್‌ಗಳ ಭರ್ಜರಿ ಜಯ – ಸರಣಿ ಜಯದ ಕನಸು ಜೀವಂತ

    ರೋಹಿತ್ ನೋಡಿ ಕಲಿಯಿರಿ ಪಾಂಡ್ಯ:
    ವರ್ಷಾರಂಭದಲ್ಲಿ ಶ್ರೀಲಂಕಾ ವಿರುದ್ಧ ನಡೆದ ಏಕದಿನ ಕ್ರಿಕೆಟ್ ಸರಣಿಯಲ್ಲಿ ಲಂಕಾ ತಂಡದ ನಾಯಕ ದಸುನ್ ಶನಕ ಶತಕ ಪೂರೈಸಲಿ ಎಂದು ಮೊಹಮ್ಮದ್ ಶಮಿ ಅವರ ಮಂಕಡಿಂಗ್ ಮನವಿಯನ್ನು ಕ್ಯಾಪ್ಟನ್ ರೋಹಿತ್ ಶರ್ಮಾ ಹಿಂಪಡೆದಿದ್ದರು. ರೋಹಿತ್ ಮೆರೆದ ಔದಾರ್ಯದಿಂದ ದಸುನ್ ಶನಕಗೆ ಶತಕ ಲಭ್ಯವಾಯಿತು. ಭಾರತ ಪಂದ್ಯ ಗೆದ್ದಿತ್ತು. ಈಗ ಹಾರ್ದಿಕ್ ಪಾಂಡ್ಯ ತಮ್ಮದೇ ತಂಡದ ಆಟಗಾರನ ಜೊತೆಗೆ ನಡೆದುಕೊಂಡ ರೀತಿ ಗಮನಿಸಿದರೆ ಭಯವಾಗುತ್ತದೆ. ಪಾಂಡ್ಯ ಎಷ್ಟು ಕೆಟ್ಟ ವ್ಯಕ್ತಿ ಎಂಬುದನ್ನು ಅಂದಾಜಿಸಿ ಎಂದು ಅಭಿಮಾನಿಯೊಬ್ಬ ತನ್ನ ಟ್ವೀಟ್ ಮೂಲಕ ಕಿಡಿ ಕಾರಿದ್ದಾರೆ.

    ಕೊಹ್ಲಿಗಾಗಿ ಡಿಫೆನ್ಸ್ ಮಾಡಿದ್ದ ಮಹಿ:
    ಹಿಂದೆ ವಿರಾಟ್ ಕೊಹ್ಲಿ ಅವರನ್ನ ಎಂ.ಎಸ್ ಧೋನಿ ನಡೆಸಿಕೊಂಡ ರೀತಿಯ ವಿಡಿಯೋ ಹಂಚಿಕೊಂಡಿರುವ ಅಭಿಮಾನಿಯೊಬ್ಬ, ಅಂದು ವಿರಾಟ್ ಶತಕ ಸಲುವಾಗಿ ಎಂ.ಎಸ್ ಧೋನಿ ಓವರ್‌ನ ಅಂತಿಮ ಎಸೆತದಲ್ಲಿ ಮ್ಯಾಚ್ ಮುಗಿಸುವ ಅವಕಾಶ ಇದ್ದರೂ ಡಿಫೆನ್ಸ್ ಮಾಡಿದ್ದರು. ಇದಕ್ಕೆ ಭಾರಿ ಮೆಚ್ಚುಗೆ ವ್ಯಕ್ತವಾಗಿತ್ತು. ಇದನ್ನೂ ಓದಿ: ನಮ್ಮ ಬ್ಯಾಟಿಂಗ್‌ ಕಳಪೆಯಾಗಿತ್ತು – ಅಗ್ರಕ್ರಮಾಂಕದ ಬ್ಯಾಟರ್‌ಗಳ ವಿರುದ್ಧ ಪಾಂಡ್ಯ ಬೇಸರ

    ಅಲ್ಲದೇ 2023ರ ಐಪಿಎಲ್‌ನಲ್ಲಿ ಯಶಸ್ವಿ ಜೈಸ್ವಾಲ್ ಶತಕ ಪೂರೈಸಲು ರಾಜಸ್ಥಾನ್ ರಾಯಲ್ಸ್ ತಂಡದ ನಾಯಕ ಸಂಜು ಸ್ಯಾಮ್ಸನ್ ಅವಕಾಶ ಮಾಡಿಕೊಟ್ಟಿದ್ದರು. ಮುಂಬೈ ಇಂಡಿಯನ್ಸ್ ತಂಡದಲ್ಲಿದ್ದ ಕ್ಯಾಮರೂನ್ ಗ್ರೀನ್ ಚೊಚ್ಚಲ ಐಪಿಎಲ್ ಶತಕ ದಾಖಲಿಸಲು ಸೂರ್ಯಕುಮಾರ್ ಯಾದವ್ ಒಂದು ರನ್ ತೆಗೆದುಕೊಂಡು ಅವಕಾಶ ಮಾಡಿಕೊಂಡಿದ್ದರು. ಆದ್ರೆ ಈಗ ಪಾಂಡ್ಯ ನಡೆದುಕೊಂಡ ರೀತಿ ಅಭಿಮಾನಿಗಳಿಂದ ತೀವ್ರ ಟೀಕೆಗೆ ಗುರಿಯಾಗಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • IPL 2023 Finals: ಗಿಲ್‌ ಅಬ್ಬರಕ್ಕೆ ಮುಂಬೈ ಬರ್ನ್‌ – 2ನೇ ಬಾರಿಗೆ ಗುಜರಾತ್‌ ಟೈಟಾನ್ಸ್‌ ಫೈನಲ್‌ಗೆ

    IPL 2023 Finals: ಗಿಲ್‌ ಅಬ್ಬರಕ್ಕೆ ಮುಂಬೈ ಬರ್ನ್‌ – 2ನೇ ಬಾರಿಗೆ ಗುಜರಾತ್‌ ಟೈಟಾನ್ಸ್‌ ಫೈನಲ್‌ಗೆ

    ಅಹಮದಾಬಾದ್‌: ಶುಭಮನ್‌ ಗಿಲ್‌ ಸ್ಫೋಟಕ ಶತಕದ ಬ್ಯಾಟಿಂಗ್‌ ಹಾಗೂ ಸಂಘಟಿತ ಬೌಲಿಂಗ್‌ ಪ್ರದರ್ಶನದಿಂದ ಗುಜರಾತ್‌ ಟೈಟಾನ್ಸ್‌ ತಂಡವು ಮುಂಬೈ ಇಂಡಿಯನ್ಸ್‌ ವಿರುದ್ಧ 62 ರನ್‌ಗಳ ಭರ್ಜರಿ ಜಯದೊಂದಿಗೆ ಸತತ 2ನೇ ಬಾರಿಗೆ ಐಪಿಎಲ್‌ನಲ್ಲಿ ಫೈನಲ್‌ ಪ್ರವೇಶಿಸಿದೆ. ಇನ್ನೂ 5 ಬಾರಿ ಚಾಂಪಿಯನ್ಸ್‌ ಪಟ್ಟಕ್ಕೇರಿದ್ದ ಮುಂಬೈ ಇಂಡಿಯನ್ಸ್‌ ಸೋಲಿನೊಂದಿಗೆ 2023ರ ಐಪಿಎಲ್‌ ಆವೃತ್ತಿಗೆ ವಿದಾಯ ಹೇಳಿದೆ.

    2022ರ ಆವೃತ್ತಿಯಲ್ಲಿ ಐಪಿಎಲ್‌ ಪ್ರವೇಶಿಸಿದ ಹಾರ್ದಿಕ್‌ ಪಾಂಡ್ಯ ನಾಯಕತ್ವದ ಗುಜರಾತ್‌ ಟೈಟಾನ್ಸ್‌ ತಂಡ ಸತತ 2ನೇ ಬಾರಿಗೆ ಐಪಿಎಲ್‌ನಲ್ಲಿ ಫೈನಲ್‌ ತಲುಪಿದೆ. ಸೂಪರ್‌ ಸಂಡೇನಲ್ಲಿ (ಮೇ 28) ಚೆನ್ನೈ ಸೂಪರ್‌ ಕಿಂಗ್ಸ್‌ ವಿರುದ್ಧ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಸೆಣಸಲಿದೆ.

    ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಗುಜರಾತ್‌ ಟೈಟಾನ್ಸ್‌ 20 ಓವರ್‌ಗಳಲ್ಲಿ 20 ಓವರ್‌ಗಳಲ್ಲಿ 233 ರನ್‌ ಗಳಿಸಿತು. ಬೃಹತ್‌ ಮೊತ್ತದ ಗುರಿ ಬೆನ್ನತ್ತಿದ ಮುಂಬೈ ಇಂಡಿಯನ್ಸ್‌ 18.2 ಓವರ್‌ಗಳಲ್ಲಿ 171 ರನ್‌ಗಳಿಗೆ ಸರ್ವಪತನ ಕಂಡಿತು.

    ಚೇಸಿಂಗ್‌ ಆರಂಭಿಸಿದ ಮುಂಬೈ ಇಂಡಿಯನ್ಸ್‌ ಆರಂಭದಲ್ಲೇ ರೋಹಿತ್‌ ಶರ್ಮಾ ಹಾಗೂ ನೆಹಾಲ್‌ ವಧೇರಾ ಪ್ರಮುಖ ವಿಕೆಟ್‌ಗಳನ್ನು ಕಳೆದುಕೊಂಡು ಸಂಕಷ್ಟಕ್ಕೀಡಾಗಿತ್ತು. ನಂತರ ಕಣಕ್ಕಿಳಿದ ‌14 ಎಸೆತಗಳಲ್ಲಿ ವರ್ಮಾ 307.14 ಸ್ಟ್ರೈಕ್‌ರೇಟ್‌ನಲ್ಲಿ ಬ್ಯಾಟ್‌ ಬೀಸಿ ಸ್ಫೋಟಕ 43 ರನ್‌ (5 ಬೌಂಡರಿ, 3 ಸಿಕ್ಸರ್‌) ಚಚ್ಚಿ ತಂಡಕ್ಕೆ ಚೇತರಿಕೆ ತಂದರು.

    ನಂತರ 4ನೇ ವಿಕೆಟ್‌ಗೆ ಜೊತೆಯಾದ ಕ್ಯಾಮರೂನ್‌ ಗ್ರೀನ್‌ ಹಾಗೂ ಸೂರ್ಯಕುಮಾರ್‌ ಯಾದವ್‌ ಜೋಡಿ 32 ಎಸೆತಗಳಲ್ಲಿ 52 ರನ್‌ ಜೊತೆಯಾಟ ನೀಡಿತ್ತು. ಅಷ್ಟರಲ್ಲೇ 20 ಎಸೆತಗಳಲ್ಲಿ 30 ರನ್‌ (2 ಸಿಕ್ಸರ್‌, 2 ಬೌಂಡರಿ) ಗಳಿಸಿದ್ದ ಗ್ರೀನ್‌ ವಿಕೆಟ್‌ ಕೈಚೆಲ್ಲಿ ನಿರಾಸೆ ಮೂಡಿಸಿದರು. ಇನ್ನೂ ಅರ್ಧಶತಕ ಗಳಿಸಿ ಸ್ಫೋಟಕ ಬ್ಯಾಟಿಂಗ್‌ ಮಾಡುತ್ತಿದ್ದ ಸೂರ್ಯಕುಮಾರ್‌ ಯಾದವ್‌, ತಂಡಕ್ಕೆ ಗೆಲುವು ತಂದುಕೊಡುತ್ತಾರೆ ಎಂಬ ನಿರೀಕ್ಷೆಯಿತ್ತು. ಆದ್ರೆ ಬೇಡದ ಶಾಟ್‌ ಹೊಡೆಯಲು ಯತ್ನಿಸಿ ಸೂರ್ಯ ಕ್ಲೀನ್‌ ಬೌಲ್ಡ್‌ ಆಗಿ ತಂಡದ ಗೆಲುವಿನ ಕನಸನ್ನ ನುಚ್ಚು ನೂರು ಮಾಡಿದರು.

    ಸೂರ್ಯಕುಮಾರ್‌ ಯಾದವ್‌ 61 ರನ್‌ (38 ಎಸೆತ, 7 ಬೌಂಡರಿ, 2 ಸಿಕ್ಸರ್‌) ಗಳಿಸಿ ಔಟಾಗುತ್ತಿದ್ದಂತೆ ವಿಷ್ಣು ವಿನೋದ್‌ 5 ರನ್‌ ಗಳಿಸಿ ಔಟಾದರು. ಕೊನೆಯಲ್ಲಿ ಟಿಮ್‌ ಡೇವಿಡ್‌ 2 ರನ್‌, ಕ್ರಿಸ್‌ ಜೋರ್ಡಾನ್‌ 2 ರನ್‌ ಗಳಿಸಿದರೆ ಪಿಯೂಷ್‌ ಚಾವ್ಲಾ ಶೂನ್ಯಕ್ಕೆ ನಿರ್ಗಮಿಸಿದರು. ಕುಮಾರ್‌ ಕಾರ್ತಿಕೇಯನ್‌ 6 ರನ್‌ ಗಳಿಸಿ ಔಟಾದರೆ, ಜೇಸನ್ ಬೆಹ್ರೆನ್ಡಾರ್ಫ್ 3 ರನ್‌ ಗಳಿಸಿ ಕ್ರೀಸ್‌ನಲ್ಲಿ ಉಳಿದರು.

    ಮೊದಲು ಬ್ಯಾಟಿಂಗ್‌ ಮಾಡಿದ ಗುಜರಾತ್‌ ಟೈಟಾನ್ಸ್‌ತಂಡ ಉತ್ತಮ ಆರಂಭ ಪಡೆಯುವಲ್ಲಿ ವಿಫಲರಾದರೂ ಬಳಿಕ ಆಕ್ರಮಣಕಾರಿ ಬ್ಯಾಟಿಂಗ್‌ನಿಂದ ಬೃಹತ್‌ ಮೊತ್ತ ದಾಖಲಿಸಿತು. 6.3 ಓವರ್‌ಗಳಲ್ಲಿ 54 ರನ್‌ಗಳಿಗೆ ಮೊದಲ ವಿಕೆಟ್‌ ಕಳೆದುಕೊಂಡರು. 2ನೇ ವಿಕೆಟ್‌ಗೆ 16.5 ಓವರ್‌ಗಳಲ್ಲಿ ತಂಡದ ಮೊತ್ತ 192ಕ್ಕೆ ಏರಿತ್ತು.

    ಶುಭಮನ್‌ ಗಿಲ್‌ ಸ್ಫೋಟಕ ಶತಕದಾಟಕ್ಕೆ ಮುಂಬೈ ಬೌಲರ್‌ಗಳು ಕಂಗಾಲಾಗಿದ್ದರು. ಸಾಯಿ ಸುದರ್ಶನ್‌ ಹಾಗೂ ಶುಭಮನ್‌ ಗಿಲ್‌ ಜೋಡಿ 64 ಎಸೆತಗಳಲ್ಲಿ 138 ರನ್‌ ಗಳಿಸಿತ್ತು. ಮೊದಲ 32 ಎಸೆತಗಳಲ್ಲಿ 50 ರನ್‌ ಗಳಿಸಿದ್ದ ಗಿಲ್‌, ಮುಂದಿನ 17 ಎಸೆತಗಳಲ್ಲಿ 50 ರನ್‌ ಚಚ್ಚಿ ಶತಕ ಪೂರೈಸಿದರು. ಕೊನೆಗೆ 60 ಎಸೆತಗಳನ್ನು ಎದುರಿಸಿ 10 ಭರ್ಜರಿ ಸಿಕ್ಸರ್‌ ಹಾಗೂ 7 ಬೌಂಡರಿಗಳೊಂದಿಗೆ 129 ರನ್‌ ಗಳಿಸಿ ಔಟಾದರು.

    ಈ ನಡುವೆ ಸಾಯಿ ಸುದರ್ಶನ್‌ 43 ರನ್‌ (‌ 31 ಎಸೆತ, 5 ಬೌಂಡರಿ, 1 ಸಿಕ್ಸರ್), ವೃದ್ಧಿಮಾನ್‌ ಸಾಹಾ 18 ರನ್‌, ಹಾರ್ದಿಕ್‌ ಪಾಂಡ್ಯ ಅಜೇಯ 28 ರನ್‌, ರಶೀದ್‌ ಖಾನ್‌ ಅಜೇಯ 5 ರನ್‌ ಗಳಿಸಿದರು.

    ಮುಂಬೈ ಪರ ಆಕಾಶ್‌ ಮಧ್ವಾಲ್‌, ಪಿಯೂಷ್‌ ಚಾವ್ಲಾ ತಲಾ ಒಂದೊಂದು ವಿಕೆಟ್‌ ಪಡೆದರು.