Tag: Tillu Tajpuriya

  • ತಿಹಾರ್ ಜೈಲಿನಲ್ಲಿ ಗ್ಯಾಂಗ್‌ಸ್ಟರ್ ಹತ್ಯೆ ಪ್ರಕರಣ – ತಮಿಳುನಾಡಿನ 7 ಪೊಲೀಸರು ಸಸ್ಪೆಂಡ್

    ತಿಹಾರ್ ಜೈಲಿನಲ್ಲಿ ಗ್ಯಾಂಗ್‌ಸ್ಟರ್ ಹತ್ಯೆ ಪ್ರಕರಣ – ತಮಿಳುನಾಡಿನ 7 ಪೊಲೀಸರು ಸಸ್ಪೆಂಡ್

    ನವದೆಹಲಿ: ತಿಹಾರ್ ಜೈಲಿನಲ್ಲಿ (Tihar Jail) ಗ್ಯಾಂಗ್‌ಸ್ಟರ್ (Gangster) ಟಿಲ್ಲು ತಾಜ್‌ಪುರಿಯಾನನ್ನು (Tillu Tajpuriya) ಸಹ ಕೈದಿಗಳು ಇರಿದು ಹತ್ಯೆಗೈದ ಸಂದರ್ಭ ಕರ್ತವ್ಯದಲ್ಲಿದ್ದ ತಮಿಳುನಾಡು ವಿಶೇಷ ಪೊಲೀಸ್‌ನ (TNSP) 7 ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ.

    ಸಹ ಕೈದಿಗಳು ಟಿಲ್ಲು ತಾಜ್‌ಪುರಿಯಾ ಮೇಲೆ ಹಲ್ಲೆ ನಡೆಸಿ, ಇರಿದು, ಬರ್ಬರವಾಗಿ ಹತ್ಯೆ ನಡೆಸಿದ್ದು, ಇವೆಲ್ಲವನ್ನೂ ನೋಡುತ್ತ ಮೂಕಪ್ರೇಕ್ಷಕರಂತೆ ನಿಂತಿದ್ದ ಆರೋಪದ ಮೇಲೆ ತಮಿಳುನಾಡಿನ ಪೊಲೀಸರನ್ನು ಅಮಾನತುಗೊಳಿಸಲಾಗಿದೆ. ಅವರನ್ನು ತಮಿಳುನಾಡಿಗೆ ವಾಪಸ್ ಕಳುಹಿಸಲಾಗಿದೆ ಎಂದು ಜೈಲಿನ ಅಧಿಕಾರಿಗಳು ತಿಳಿಸಿದ್ದಾರೆ.

    ಟಿಲ್ಲು ತಾಜ್‌ಪುರಿಯಾ ಹತ್ಯೆ ಬಳಿಕ ದೆಹಲಿ ಕಾರಾಗೃಹಗಳ ಮಹಾನಿರ್ದೇಶಕ ಸಂಜಯ್ ಬೇನಿವಾಲ್ ತನ್ನ ಸಿಬ್ಬಂದಿ ವಿರುದ್ಧ ಕ್ರಮ ಕೈಗೊಳ್ಳುವಂತೆ ತಮಿಳುನಾಡು ಪೊಲೀಸರಿಗೆ ಪತ್ರ ಬರೆದಿದ್ದರು. ಅದರಂತೆ ತಮ್ಮ ಸಿಬ್ಬಂದಿಯ ಆಪಾದಿತ ನಿರ್ಲಕ್ಷ್ಯದ ಬಗ್ಗೆ ಟಿಎನ್‌ಎಸ್‌ಪಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಅವರ ವಿರುದ್ಧ ಸರಿಯಾದ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ ಎಂದು ಜೈಲಿನ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

    ಟಿಲ್ಲು ತಾಜ್‌ಪುರಿಯಾ ಯಾರು?
    2021ರಲ್ಲಿ ದೆಹಲಿಯ ರೋಹಿಣಿ ಕೋರ್ಟ್‌ನಲ್ಲಿ ಗ್ಯಾಂಗ್‌ಸ್ಟರ್ ಜಿತೇಂದರ್ ಗೋಗಿಯನ್ನು ಗುಂಡಿಕ್ಕಿ ಕೊಲ್ಲಲಾಗಿತ್ತು. ಗುಂಡು ಹಾರಿಸಿದ ಇಬ್ಬರು ಆರೋಪಿಗಳನ್ನು ಪೊಲೀಸರು ಪ್ರತಿದಾಳಿ ನಡೆಸಿ ಕೊಂದಿದ್ದರು. ಈ ಪ್ರಕರಣದಲ್ಲಿ ಗುಂಡು ಹಾರಿಸುವಂತೆ ಸೂಚನೆ ನೀಡಿದ್ದ ತಾಜ್‌ಪುರಿಯಾ ಪ್ರಮುಖ ಆರೋಪಿಯಾಗಿದ್ದು, ಜೈಲು ಸೇರಿದ್ದ.

    ಜಿತೇಂದರ್ ಗೋಗಿ ಗ್ಯಾಂಗ್ ಹಾಗೂ ಟಿಲ್ಲು ಗ್ಯಾಂಗ್ ನಡುವೆ ಹಲವು ವರ್ಷಗಳಿಂದಲೇ ದ್ವೇಷವಿತ್ತು. ಜೈಲಿನೊಳಗೆ ಟಿಲ್ಲುನನ್ನು ಹತ್ಯೆಗೈದ ಆರೋಪಿಗಳು ಗೋಗಿ ಗ್ಯಾಂಗ್‌ನವರು ಎನ್ನಲಾಗಿದೆ. ಇದನ್ನೂ ಓದಿ: ದೋಣಿ ದುರಂತ- ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ ಘೋಷಿಸಿದ ಕೇರಳ ಸರ್ಕಾರ

    ಘಟನೆಗೆ ಸಂಬಂಧಿಸಿದಂತೆ ಸಾಮಾಜಿಕ ಮಾಧ್ಯಮಗಳಲ್ಲಿ ತಿಹಾರ್ ಜೈಲಿನ ಸಿಸಿಟಿವಿ ವೀಡಿಯೋಗಳು ಹರಿದಾಡಿವೆ. ಅದರಲ್ಲಿ ಕೈದಿಗಳು ಭದ್ರತಾ ಸಿಬ್ಬಂದಿಯ ಮುಂದೆಯೇ ದಾಳಿ ನಡೆಸುತ್ತಿದ್ದುದು ಕಂಡುಬಂದಿದೆ. ತಾಜ್‌ಪುರಿಯಾಗೆ ಚೂರಿಯಿಂದ ಇರಿದ ಬಳಿಕ ಸಿಬ್ಬಂದಿ ಆತನನ್ನು ಅಲ್ಲಿಂದ ಕರೆದುಕೊಂಡು ಹೋಗಿರುವುದು ಕಾಣಿಸಿಕೊಂಡಿದೆ.

    ಇದೀಗ ತಮಿಳುನಾಡು ಪೊಲೀಸರು ತನ್ನ 7 ಸಿಬ್ಬಂದಿಯನ್ನು ಅಮಾನತುಗೊಳಿಸಿದ್ದಾರೆ ಹಾಗೂ ರಾಜ್ಯಕ್ಕೆ ಕರೆಸಿಕೊಂಡಿರುವುದಾಗಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದನ್ನೂ ಓದಿ: ಪಾಕ್‌ ಜೈಲುಗಳಲ್ಲಿದ್ದಾರೆ 654 ಭಾರತೀಯ ಮೀನುಗಾರರು; ಶುಕ್ರವಾರ 199 ಮಂದಿ ರಿಲೀಸ್‌

  • ದೆಹಲಿ ಕೋರ್ಟ್‌ನಲ್ಲಿ ಗುಂಡು ಹಾರಿಸಿದ್ದ ಆರೋಪಿ ತಿಹಾರ್ ಜೈಲಿನಲ್ಲಿ ಹತ್ಯೆ

    ದೆಹಲಿ ಕೋರ್ಟ್‌ನಲ್ಲಿ ಗುಂಡು ಹಾರಿಸಿದ್ದ ಆರೋಪಿ ತಿಹಾರ್ ಜೈಲಿನಲ್ಲಿ ಹತ್ಯೆ

    ನವದೆಹಲಿ: ಕೋರ್ಟ್‌ನಲ್ಲಿ (Court) ಗುಂಡು ಹಾರಿಸಿದ ಪ್ರಕರಣದಲ್ಲಿ ಆರೋಪಿಯಾಗಿ ಜೈಲು ಸೇರಿದ್ದ ಗ್ಯಾಂಗ್‌ಸ್ಟರ್ (Gangster) ಟಿಲ್ಲು ತಾಜ್‌ಪುರಿಯಾನನ್ನು (Tillu Tajpuriya) ಬೇರೊಂದು ಗ್ಯಾಂಗ್‌ನ ಸಹ ಕೈದಿಗಳು ಥಳಿಸಿ ಹತ್ಯೆ ನಡೆಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಮಂಗಳವಾರ ಮುಂಜಾನೆ ತಿಹಾರ್ ಜೈಲಿನಲ್ಲಿದ್ದ (Tihar Jail) ಟಿಲ್ಲು ತಾಜ್‌ಪುರಿಯಾ ಅಲಿಯಾಸ್ ಸುನೀಲ್ ಮಾನ್‌ನನ್ನು ಮತ್ತೊಬ್ಬ ಗ್ಯಾಂಗ್‌ಸ್ಟರ್ ಯೋಗೇಶ್ ತುಂಡಾ ಹಾಗೂ ಆತನ ಸಹಚರರು ಕಬ್ಬಿಣದ ರಾಡ್‌ಗಳಿಂದ ಥಳಿಸಿದ್ದಾರೆ. ತೀವ್ರವಾಗಿ ಗಾಯಗೊಂಡಿದ್ದ ಟಿಲ್ಲುನನ್ನು ತಕ್ಷಣ ದೀನ್ ದಯಾಳ್ ಉಪಾಧ್ಯಾಯ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಆತ ಅಲ್ಲಿ ಸಾವನ್ನಪ್ಪಿರುವುದಾಗಿ ವೈದ್ಯರು ಘೋಷಿಸಿದ್ದಾರೆ.

    ಘಟನೆಯೇನು?
    2021ರಲ್ಲಿ ದೆಹಲಿಯ ರೋಹಿಣಿ ಕೋರ್ಟ್‌ನಲ್ಲಿ (Rohini Court) ಗ್ಯಾಂಗ್‌ಸ್ಟರ್ ಜಿತೇಂದರ್ ಗೋಗಿಯನ್ನು ಗುಂಡಿಕ್ಕಿ ಕೊಲ್ಲಲಾಗಿತ್ತು. ಈ ಪ್ರಕರಣದಲ್ಲಿ ಟಿಲ್ಲು ಪ್ರಮುಖ ಆರೋಪಿಯಾಗಿದ್ದ. ನ್ಯಾಯಾಲಯದ ಒಳಗಡೆ ಇಬ್ಬರು ವಕೀಲರ ವೇಷದಲ್ಲಿ ಬಂದಿದ್ದ ಗ್ಯಾಂಗ್‌ಸ್ಟರ್‌ಗಳು ಜಿತೇಂದರ್ ಗೋಗಿ ಮೇಲೆ ಗುಂಡು ಹಾರಿಸಿ ಕೊಂದಿದ್ದರು. ಆ ವೇಳೆ ಪೊಲೀಸರು ಪ್ರತಿ ದಾಳಿ ನಡೆಸಿ ಆರೋಪಿಗಳಿಬ್ಬರನ್ನೂ ಗುಂಡಿಕ್ಕಿ ಕೊಂದಿದ್ದರು. ಇದನ್ನೂ ಓದಿ: ಮಳೆ, ಹಿಮಪಾತ – ತಂಗಿರುವ ಸ್ಥಳದಲ್ಲಿಯೇ ಇರಿ: ಕೇದಾರನಾಥ ಯಾತ್ರಾರ್ಥಿಗಳಿಗೆ ಎಚ್ಚರಿಕೆ

    ಜಿತೇಂದರ್ ಗೋಗಿ ಗ್ಯಾಂಗ್ ಹಾಗೂ ಟಿಲ್ಲು ಗ್ಯಾಂಗ್ ನಡುವೆ ಹಲವು ವರ್ಷಗಳಿಂದ ದ್ವೇಷವಿತ್ತು. ಈ ಹಿನ್ನೆಲೆ ಗುಂಡಿನ ದಾಳಿ ನಡೆಸಿದ್ದರು. ಜಿತೇಂದರ್ ಗೋಗಿ ಮೇಲೆ ಗುಂಡು ಹಾರಿಸಲು ಟಿಲ್ಲು ತಾಜ್‌ಪುರಿಯಾ ಫೋನ್ ಕಾಲ್ ಮೂಲಕ ಆರೋಪಿಗಳಿಗೆ ಸೂಚನೆಯನ್ನು ನೀಡಿದ್ದ ಎಂಬುದು ಪ್ರಕರಣದ ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ. ಇದನ್ನೂ ಓದಿ: ಖರ್ಗೆ ತವರಿನಲ್ಲಿ ಮೋದಿ ದಂಡಯಾತ್ರೆ – 25 ಕ್ಷೇತ್ರದ ಮೇಲೆ ಬಿಜೆಪಿ ಕಣ್ಣು