Tag: Timings

  • ಇಂದಿನಿಂದ ರಾತ್ರಿ 10ರವರೆಗೆ ಕಾರ್ಯನಿರ್ವಹಿಸಲಿರುವ ಬೆಂಗಳೂರು ಮೆಟ್ರೋ

    ಇಂದಿನಿಂದ ರಾತ್ರಿ 10ರವರೆಗೆ ಕಾರ್ಯನಿರ್ವಹಿಸಲಿರುವ ಬೆಂಗಳೂರು ಮೆಟ್ರೋ

    ಬೆಂಗಳೂರು: ಬೆಂಗಳೂರು ಮೆಟ್ರೋ ರೈಲು ನಿಗಮ(ಬಿಎಂಆರ್‌ಸಿ) ಶುಕ್ರವಾರ ತಿಳಿಸಿದಂತೆ, ಸೆಪ್ಟೆಂಬರ್ 18ರಿಂದ ಪ್ರತಿದಿನ ಬೆಳಗ್ಗೆ 6ರಿಂದ ರಾತ್ರಿ 10ರವರೆಗೆ ಮೆಟ್ರೋ ರೈಲುಗಳು ಕಾರ್ಯನಿರ್ವಹಿಸಲಿದೆ.

    ವಾರದ ಎಲ್ಲಾ ದಿನಗಳಲ್ಲಿ ಕೊನೆಯ ಮೆಟ್ರೋ ರಾತ್ರಿ 9.30ಕ್ಕೆ ಬೈಯಪ್ಪನಹಳ್ಳಿ, ಕೆಂಗೇರಿ, ನಾಗಸಂದ್ರ ಮತ್ತು ಸಿಲ್ಕ್ ಇನ್ಸ್ಟಿಟ್ಯೂಟ್ ಟರ್ಮಿನಲ್ ನಿಲ್ದಾಣಗಳಿಂದ ಹೊರಡಲಿದೆ. ಇದನ್ನೂ ಓದಿ: ನಂಗೆ ಕಣ್ಣು ಕಾಣಿಸಲ್ಲ, ವ್ಯಾಕ್ಸಿನ್ ಹಾಕಿಸಿಕೊಳ್ಳಲ್ಲ – ಲಸಿಕೆಗೆ ಅಜ್ಜಿ, ಅಜ್ಜಾ ನಿರಾಕರಣೆ

    ನೇರಳೆ ಮಾರ್ಗದಲ್ಲಿ ಬೈಯಪ್ಪನಹಳ್ಳಿ ಮತ್ತು ಮೈಸೂರು ರಸ್ತೆ ನಿಲ್ದಾಣದ ನಡುವೆ ರೈಲು ಸಂಚರಿಸಿದರೆ, ಹಸಿರು ಮಾರ್ಗದಲ್ಲಿ ಯಲಚೇನಹಳ್ಳಿ ಮತ್ತು ನಾಗಸಂದ್ರ ನಿಲ್ದಾಣಗಳ ನಡುವಿನ ರೈಲು ಸಂಚರಿಸಲಿದೆ. ಅಲ್ಲದೇ ಪ್ರತಿ 5 ಮತ್ತು 10 ನಿಮಿಷಕ್ಕೊಮ್ಮೆ ಮೆಟ್ರೋ ರೈಲುಗಳು ಸಂಚರಿಸಲಿದೆ. ಇದನ್ನೂ ಓದಿ: ಭಾನುವಾರ ಮನೆ ಬಿಟ್ಟಿದ್ದ ಮನೆ ಯಜಮಾನ ನಿನ್ನೆ ವಾಪಸ್‌ ಬಂದಾಗ ಕಂಡಿದ್ದು ಐವರ ಮೃತದೇಹ

    ಪ್ರತಿದಿನ ಸಿಲ್ಕ್ ಇನ್ಸ್ಟಿಟ್ಯೂಟ್ ಮತ್ತು ಕೆಂಗೇರಿ ನಿಲ್ದಾಣಗಳಿಗೆ ಪ್ರತಿ 10 ನಿಮಿಷಕ್ಕೊಮ್ಮೆ ರೈಲು ಓಡಾಡಲಿದೆ. ಆದರೆ ವಾರಾಂತ್ಯಗಳಲ್ಲಿ ಮೆಟ್ರೋ ರೈಲು ಸಂಚಾರವನ್ನು ಹೆಚ್ಚಿಸಬಹುದು ಅಥವಾ ಕಡಿತಗೊಳಿಸಬಹುದು ಎಂದು ಬಿಎಂಆರ್‌ಸಿ ಸೂಚಿಸಿದೆ. ಇನ್ನೂ ಮೆಟ್ರೋ ರೈಲಿನಲ್ಲಿ ಓಡಾಡುವ ಎಲ್ಲಾ ಪ್ರಯಾಣಿಕರು ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಮತ್ತು ಕೈಗಳನ್ನು ಸ್ವಚ್ಛವಾಗಿ ನೋಡಿಕೊಳ್ಳುವುದು ಇತರೆ ಕೋವಿಡ್ ನಿಯಮಗಳನ್ನು ಪಾಲಿಸಬೇಕಾಗಿ ತಿಳಿಸಲಾಗಿದೆ.

     

  • ಗ್ರಹಣ ಯಾವಾಗ, ಭಾರತದಲ್ಲಿ ಎಲ್ಲೆಲ್ಲಿ ಗೋಚರ?- ಯಾರ್ಯಾರಿಗೆ ಶುಭ, ಅಶುಭ?

    ಗ್ರಹಣ ಯಾವಾಗ, ಭಾರತದಲ್ಲಿ ಎಲ್ಲೆಲ್ಲಿ ಗೋಚರ?- ಯಾರ್ಯಾರಿಗೆ ಶುಭ, ಅಶುಭ?

    ಬೆಂಗಳೂರು: ಜೂನ್ 21ರಂದು ನಭೋ ಮಂಡಲದಲ್ಲಿ ಅಪರೂಪದ ಸೂರ್ಯ ಗ್ರಹಣವಾಗಲಿದ್ದು, ಉಡುಪಿಯಲ್ಲಿ ಪಾಶ್ರ್ವ ಸೂರ್ಯ ಗ್ರಹಣ 40 ಅಂಶ ಗೋಚರವಾಗಲಿದೆ. ಡೆಹ್ರಾಡೂನ್‍ನ ಕುರುಕ್ಷೇತ್ರದಲ್ಲಿ ಸುಮಾರು 180 ಕಿ.ಮೀ.ವ್ಯಾಪ್ತಿಯಲ್ಲಿ ಸಂಪೂರ್ಣ ಕಂಕಣ ಗ್ರಹಣ ಕಾಣಲಿದೆ. ರಾಜಸ್ಥಾನ, ಹರಿಯಾಣ, ಉತ್ತರಾಖಂಡಗಳ ಕೆಲವು ಪ್ರದೇಶಗಳಲ್ಲಿ ಕಂಕಣ ಸೂರ್ಯ ಗ್ರಹಣ ಗೋಚರವಾಗಲಿದೆ. ಉಳಿದ ಪ್ರದೇಶದಲ್ಲಿ ಪಾಶ್ರ್ವ ಸೂರ್ಯ ಗ್ರಹಣ ಗೋಚರವಾಗಲಿದೆ.

    ಗ್ರಹಣ ಯಾವಾಗ?
    ಗ್ರಹಣ ಸ್ಪರ್ಶ ಕಾಲ – ಬೆಳಗ್ಗೆ 9.15
    ಗ್ರಹಣ ಮಧ್ಯಕಾಲ – ಮಧ್ಯಾಹ್ನ 12.10
    ಗ್ರಹಣ ಮೋಕ್ಷ ಕಾಲ – ಮಧ್ಯಾಹ್ನ 3.04

    ಯಾರ್ಯಾರಿಗೆ ಶುಭ, ಅಶುಭ?
    ಮಿಥುನ ರಾಶಿಯಲ್ಲಿ ಗ್ರಹಣ ಗೋಚರ
    ಶುಭ ಫಲ – ಮೇಷ, ಸಿಂಹ, ಕನ್ಯಾ, ಮಕರ
    ಅಶುಭ ಫಲ – ಮಿಥುನ, ಕರ್ಕಾಟಕ, ವೃಶ್ಚಿಕ, ಮೀನ
    ಮಿಶ್ರ ಫಲ – ವೃಷಭ, ತುಲಾ, ಧನಸ್ಸು, ಕುಂಭ

    ವಿಶ್ವದ ಎಲ್ಲೆಲ್ಲಿ ಗೋಚರ?
    ಈ ಗ್ರಹಣವು ಭಾರತ ಸೇರಿದಂತೆ ಏಷ್ಯಾ, ಆಫ್ರಿಕಾ, ಹಿಂದೂ ಮಹಾಸಾಗರ, ಪೆಸಿಫಿಕ್ ಸಾಗರಗಳಲ್ಲಿ ಸ್ಪಷ್ಟವಾಗಿ ಗೋಚರವಾಗಲಿದೆ. ಆಸ್ಟ್ರೇಲಿಯಾ, ಪಾಕಿಸ್ತಾನ, ನೇಪಾಳ, ಸೌದಿ ಅರೇಬಿಯಾ, ಯುರೋಪ್‍ನ ಕೆಲ ಭಾಗಗಳಲ್ಲಿ ಗ್ರಹಣ ಕಾಣಬಹುದು.

    ಮೇಷ ರಾಶಿ:
    ಉದ್ಯೋಗದಲ್ಲಿ ಹೆಚ್ಚಾಗಿ ಅಭಿವೃದ್ಧಿ ಪ್ರಾಪ್ತಿಯಾಗುತ್ತದೆ. ಮಾಡುವ ಕೆಲಸದಲ್ಲಿ ಹೆಚ್ಚಿಗೆ ಲಾಭ ಸಿಗುತ್ತದೆ. ಉದ್ಯೋಗಕ್ಕೆ ಸಂಬಂಧಿಸಿದಂತೆ ಶುಭಸುದ್ದಿ ಬರುತ್ತದೆ. ವ್ಯವಹಾರದಲ್ಲಿ ಜಯ ನಿಮ್ಮದಾಗುತ್ತದೆ. ಹೊಸ ಯೋಜನೆ ಆರಂಭಕ್ಕೆ ಶುಭಕಾಲವಾಗಿದೆ. ವಿದ್ಯಾರ್ಥಿಗಳಿಗೆ ಹೆಚ್ಚಿನ ಯಶಸ್ಸು ಸಿಗುತ್ತದೆ.

    ವೃಷಭ ರಾಶಿ:
    ಇತರರ ಕೋಪಕ್ಕೆ ಬೇಗ ತುತ್ತಾಗುತ್ತೀರಿ. ಆದಷ್ಟು ಎಚ್ಚರವಾಗಿ ಕೆಲಸ ಮಾಡಿ. ವ್ಯವಹಾರದಲ್ಲಿ ನಷ್ಟವಾಗಬಹುದು. ನಿಮ್ಮ ಸೋದರ ಸಂಬಂಧಿಗಳಿಂದ ಹೆಚ್ಚಿನ ಲಾಭವಾಗುತ್ತದೆ. ಶ್ರೀ ವಿಷ್ಣುಸಹಸ್ರನಾಮ ಪಠಿಸಿ.

    ಮಿಥುನ ರಾಶಿ:
    ಆಗಾಗ್ಗೆ ಕಲಹಗಳು ಸಂಭವಿಸಬಹುದು. ಸಂಬಂಧಗಳಲ್ಲಿ ಸಂಘರ್ಷವನ್ನು ತಪ್ಪಿಸಿಕೊಳ್ಳಿ. ಎಲ್ಲರೊಂದಿಗೂ ನಾಜೂಕಾಗಿ ವ್ಯವಹಾರ ನಡೆಸಿ. ಆರೋಗ್ಯ ಹದಗೆಡಬಹುದು, ಎಚ್ಚರದಿಂದಿರಿ. ಅನಾರೋಗ್ಯ ನಿಮ್ಮನ್ನು ಹೆಚ್ಚಾಗಿ ಬಾಧಿಸಬಹುದು. ಗಾಯಗಳಾಗುವ ಸಾಧ್ಯತೆ ಹೆಚ್ಚು. ಗಾಯದಂತಹ ಕೆಲಸದಿಂದ ದೂರವಿರಿ. ಕಬ್ಬಿಣದ ಕೆಲಸದಿಂದ ಎಚ್ಚರವಹಿಸಿ. ಶ್ರೀ ವಿಷ್ಣುಸಹಸ್ರನಾಮ ಪಠಿಸಿ.

    ಕರ್ಕಾಟಕ ರಾಶಿ:
    ಧಾರ್ಮಿಕ ಕಾರ್ಯಗಳಲ್ಲಿ ಅಭಿವೃದ್ಧಿಯಾಗುತ್ತದೆ. ಧಾರ್ಮಿಕ ಕೆಲಸದತ್ತ ಹೆಚ್ಚು ನಿರತರಾಗುತ್ತೀರಿ. ಸ್ನೇಹಿತರಿಂದ ಹೆಚ್ಚಿನ ಬೆಂಬಲ ಸಿಗುತ್ತದೆ. ಉದ್ಯೋಗಿಗಳಿಗೆ ಹೆಚ್ಚಿನ ಯಶಸ್ಸು ಪ್ರಾಪ್ತಿಯಾಗುತ್ತದೆ. ಸ್ಥಗಿತಗೊಂಡ ಸರ್ಕಾರಿ ಕೆಲಸಗಳು ಪೂರ್ಣಗೊಳ್ಳುತ್ತವೆ. ಆರೋಗ್ಯದ ಬಗ್ಗೆ ಎಚ್ಚರವಿರಲಿ. ಗಾಯಗಳು ಹೆಚ್ಚಾಗಿ ಸಂಭವಿಸಬಹುದು. ಬೆಲ್ಲವನ್ನು ದಾನ ಮಾಡಿ.

    ಸಿಂಹ ರಾಶಿ:
    ಕೆಲಸದಲ್ಲಿ ಉತ್ತಮ ಯೋಗ ಸಿಗುತ್ತದೆ. ನಿರ್ಧರಿಸಿದ ಕೆಲಸ-ಕಾರ್ಯಗಳು ಪೂರ್ಣಗೊಳ್ಳುತ್ತದೆ. ಆರ್ಥಿಕವಾಗಿ ಹೆಚ್ಚಿನ ಪ್ರಗತಿ ಸಿಗುತ್ತದೆ. ಆರ್ಥಿಕವಾಗಿ ಹೆಚ್ಚು ಸಂತೋಷ ಅನುಭವಿಸ್ತೀರಿ. ತಂದೆಯಿಂದ ಮಕ್ಕಳಿಗೆ ಹೆಚ್ಚಿನ ಅಭಿವೃದ್ಧಿಯಾಗುತ್ತದೆ. ಯೋಗ, ಧ್ಯಾನ ಹೆಚ್ಚು ಮಾಡಬೇಕು.

    ಕನ್ಯಾರಾಶಿ:
    ವ್ಯವಹಾರದಲ್ಲಿ ಹೆಚ್ಚಿನ ಪ್ರಗತಿಯಾಗುತ್ತದೆ. ವ್ಯಾಪಾರ-ವ್ಯವಹಾರದಲ್ಲಿ ಶುಭಸುದ್ದಿ ಕೇಳಿ ಬರುತ್ತದೆ. ಆರ್ಥಿಕ ಪ್ರಗತಿ ಹೆಚ್ಚಾಗುತ್ತದೆ. ಉದ್ಯೋಗದಲ್ಲಿ ಯಶಸ್ಸು ಸಿಗುತ್ತದೆ. ವಿದ್ಯಾರ್ಥಿಗಳಿಗೆ ಶುಭಯೋಗ ಪ್ರಾಪ್ತವಾಗುತ್ತದೆ.

    ತುಲಾ:
    ಸೂರ್ಯಗ್ರಹಣದಿಂದ ತುಲಾ ರಾಶಿಯವರಿಗೆ ಮಿಶ್ರಫಲ. ನೀವು ಕೆಲಸದ ಬಗ್ಗೆ ಉದ್ವಿಗ್ನರಾಗಿರುತ್ತೀರಿ. ವ್ಯಾಪಾರ-ವ್ಯವಹಾರದಲ್ಲಿ ಪ್ರಗತಿಯಾಗುತ್ತದೆ. ಹರಳಾಗಿಸಿದ ನೀರನ್ನು ಪಕ್ಷಿಗಳಿಗೆ ನೀಡಬೇಕು. ಆರ್ಥಿಕ ವ್ಯವಹಾರದಲ್ಲಿ ಎಚ್ಚರವಿರಲಿ. ಯೋಚಿಸಿ ಖರ್ಚು ಮಾಡುವುದು ಉತ್ತಮ.

    ವೃಶ್ಚಿಕ ರಾಶಿ:
    ವೃತ್ತಿಪರ ಚಿಂತನೆ ಹೆಚ್ಚಾಗುತ್ತದೆ. ಉದ್ಯೋಗಗಳಲ್ಲಿ ಉದ್ವೇಗ ಹೆಚ್ಚಾಗಬಹುದು. ವ್ಯವಹಾರಗಳಲ್ಲಿ ನಷ್ಟ ಸಾಧ್ಯತೆ ಹೆಚ್ಚಿಗೆ ಸಂಭವಿಸಬಹುದು. ಕಲಹಗಳು ಹೆಚ್ಚಾಗಬಹುದು. ವ್ಯವಹಾರದ ವೇಳೆ ಎಚ್ಚರ ಇರಲಿ. ಹನುಮಾನ್ ಚಾಲಿಸ ಪಠಿಸಿ.

    ಧನು ರಾಶಿ:
    ವ್ಯವಹಾರದಲ್ಲಿ ಯಶಸ್ಸು ಸಿಗುತ್ತದೆ. ಮಾಡಿದ ಕೆಲಸದಿಂದ ಉತ್ತಮ ಫಲಿತಾಂಶ ನಿರೀಕ್ಷಿಸಬಹುದು. ಆರ್ಥಿಕವಾಗಿ ಪ್ರಗತಿ ಸಿಗುತ್ತದೆ. ತಾಪತ್ರಯದಿಂದ ನಿಂತು ಹೋಗಿದ್ದ ಕೆಲಸ ಪೂರ್ಣವಾಗುತ್ತದೆ. ಅನಿರೀಕ್ಷಿತವಾಗಿ ಹಣ ಬರುತ್ತದೆ. ಸಂಗಾತಿ ಆರೋಗ್ಯದ ಬಗ್ಗೆ ಎಚ್ಚರವಿರಲಿ.

    ಮಕರ ರಾಶಿ:
    ವ್ಯವಹಾರದಲ್ಲಿ ಹೆಚ್ಚಿನ ಲಾಭ ಸಿಗುತ್ತದೆ. ಸ್ಥಗಿತಗೊಂಡ ಅನೇಕ ಕಾರ್ಯಗಳು ಪೂರ್ಣಗೊಳ್ಳುತ್ತದೆ. ವ್ಯಾಪಾರ-ವಹಿವಾಟು ವೇಳೆ ಎಚ್ಚರವಿರಲಿ.

    ಕುಂಭ ರಾಶಿ:
    ಆಧ್ಯಾತ್ಮಿಕವಾಗಿ ಹೆಚ್ಚಿನ ಸಂತೋಷ ಪ್ರಾಪ್ತಿಯಾಗುತ್ತದೆ. ವ್ಯವಹಾರದಲ್ಲಿ ಹೆಚ್ಚಿನ ಲಾಭ ನಿರೀಕ್ಷಿಸಬಹುದು. ಮಾನಸಿಕವಾಗಿ ಉದ್ವೇಗ ಹೆಚ್ಚಾಗುತ್ತದೆ. ಎಳ್ಳು ದಾನ ಮಾಡಿ.

    ಮೀನ ರಾಶಿ:
    ಕೆಲಸದಲ್ಲಿ ಹೆಚ್ಚಿನ ಪ್ರಗತಿ ಸಿಗುತ್ತದೆ. ಉನ್ನತ ಅಧಿಕಾರಿಗಳಿಂದ ಶುಭಸುದ್ದಿ ಸಿಗುತ್ತದೆ. ಅನಾರೋಗ್ಯ ಬಾಧಿಸಬಹುದು, ಎಚ್ಚರದಿಂದಿರಿ. ಉದ್ಯೋಗಗಳಲ್ಲಿ ಯಶಸ್ಸು ಸಿಗುತ್ತದೆ. ಶ್ರೀ ವಿಷ್ಣುಸಹಸ್ರನಾಮ ಪಠಿಸಿ.

    ಗ್ರಹಣದ ವಿಶೇಷತೆ?
    ಬೆಳಗ್ಗೆ 11:37ಕ್ಕೆ ಗ್ರಹಣ ಪ್ರಮಾಣ ಹೆಚ್ಚು ಗೋಚರ. ಜೂನ್ 21ರ ಗ್ರಹಣ ಶತಮಾನಕ್ಕೊಮ್ಮೆ ಬರುವಂತಹುದು. ಕಂಕಣ ಗ್ರಹಣ ಮತ್ತೆ 2064ಕ್ಕೆ ಸಂಭವಿಸಲಿದೆ.

  • ತಾಜ್ ಮಹಲ್‍ನಲ್ಲಿ 3 ಗಂಟೆಗೂ ಹೆಚ್ಚಿದ್ದರೆ ಬೀಳುತ್ತೆ ದಂಡ

    ತಾಜ್ ಮಹಲ್‍ನಲ್ಲಿ 3 ಗಂಟೆಗೂ ಹೆಚ್ಚಿದ್ದರೆ ಬೀಳುತ್ತೆ ದಂಡ

    ನವದೆಹಲಿ: ಭಾರತೀಯ ಮತ್ತು ವಿದೇಶಿ ಪ್ರವಾಸಿಗರ ನೆಚ್ಚಿನ ತಾಣಗಳಲ್ಲಿ ಒಂದಾದ ಆಗ್ರಾದ ಐತಿಹಾಸಿಕ ಸುಂದರ ತಾಜ್ ಮಹಲ್ ವೀಕ್ಷಣೆಗೆ ಇನ್ನೂ ಮುಂದೆ 3 ಗಂಟೆ ಮಾತ್ರ ಸಮಯಾವಕಾಶ ನಿಗದಿ ಪಡಿಸಲಾಗಿದೆ.

    ಹೌದು. ಸುಂದರ ತಾಜ್ ಮಹಲ್ ನೋಡಲು ಪ್ರತಿದಿನ ಸಾವಿರಾರು ಮಂದಿ ಪ್ರವಾಸಿಗರು ಬರುತ್ತಾರೆ. ಶ್ವೇತವರ್ಣದ ಮನಮೋಹಕ ಶಿಲ್ಪಕಲೆಗೆ ಮನಸೋಲದ ಮಂದಿಯೇ ಇಲ್ಲ. ಆದರೆ ತಾಜ್ ಮಹಲ್‍ನಲ್ಲಿ ಇನ್ನು ಮುಂದೆ ಪ್ರವಾಸಿಗರು 3 ಗಂಟೆಗಳಿಗಿಂತ ಹೆಚ್ಚು ಹೊತ್ತು ಕಳೆಯುವಂತಿಲ್ಲ ಎಂಬ ನಿಯಮ ಜಾರಿಗೆ ತರಲಾಗಿದೆ. ಆಡಳಿತ ಮಂಡಳಿ ನಿಗದಿಪಡಿಸಿರುವ ಸಮಯವನ್ನೂ ಮೀರಿ ಪ್ರವಾಸಿಗರು ಇಲ್ಲಿ ಹೆಚ್ಚು ಸಮಯ ಕಳೆದರೆ ಹೆಚ್ಚುವರಿ ಶುಲ್ಕ ವಿಧಿಸಲಾಗುತ್ತದೆ.

    ತಾಜ್ ಮಹಲ್‍ಗೆ ಪ್ರವಾಸಿಗರ ಆಗಮನ ಮತ್ತು ನಿರ್ಗಮನಕ್ಕೆ ಪ್ರತ್ಯೇಕ ದ್ವಾರದ ವ್ಯವಸ್ಥೆ ಮಾಡಲಾಗಿದ್ದು, ಹೆಚ್ಚುವರಿ ಸಮಯ ಕಳೆದವರು, ನಿರ್ಗಮನದ ವೇಳೆ ಹೆಚ್ಚುವರಿ ಹಣ ಪಾವತಿಸಬೇಕು. ಕೆಲ ಪ್ರವಾಸಿಗರು ಮುಂಜಾನೆಯಿಂದ ಸಂಜೆಯವರೆಗೂ ತಾಜ್ ಆವರಣದಲ್ಲೇ ಕಾಲ ಕಳೆಯುತ್ತಿದ್ದರು. ಇದಕ್ಕೆ ಬ್ರೇಕ್ ಹಾಕಲು ಈ ನಿರ್ಧಾರ ಕೈಗೊಳ್ಳಲಾಗಿದೆ.

    ಪೂರ್ವ ಮತ್ತು ಪಶ್ಚಿಮದಲ್ಲಿ ಒಟ್ಟು 7 ಪ್ರವೇಶ ದ್ವಾರಗಳು ಹಾಗೂ 5 ನಿರ್ಗಮನ ದ್ವಾರಗಳ ವ್ಯವಸ್ಥೆ ಮಾಡಲಾಗಿದೆ. ಅಲ್ಲದೆ ವಿದೇಶಿ ಪ್ರವಾಸಿಗರಿಗಾಗಿ ಪ್ರತ್ಯೇಕ ಪ್ರವೇಶ ಹಾಗೂ ನಿರ್ಗಮನ ದ್ವಾರಗಳ ವ್ಯವಸ್ಥೆ ಕೂಡ ಮಾಡಲಾಗಿದೆ. ಹಾಗೆಯೇ ಪ್ರವಾಸಿಗರಿಗೆ ಪ್ರವೇಶದ ವೇಳೆ ಕೇವಲ ಮೂರು ಗಂಟೆಯವರೆಗೆ ಮಾತ್ರ ಸೀಮಿತವಿರುವ ಟೋಕನ್ ನೀಡಲಾಗುತ್ತದೆ. ಒಂದು ವೇಳೆ ಪ್ರವಾಸಿಗರು ಇಲ್ಲಿ ಹೆಚ್ಚು ಸಮಯ ಕಳೆಯಬೇಕಾದರೆ ನಿರ್ಗಮನ ಕೌಂಟರ್ ನಲ್ಲಿ ಹಣ ನೀಡಿ ಟೋಕನ್ ರಿಚಾರ್ಜ್ ಮಾಡಿಸಿಕೊಳ್ಳಬೇಕು ಎಂದು ಭಾರತದ ಪುರಾತತ್ವ ಇಲಾಖೆಯ ಅಧೀಕ್ಷಕ ಬಸಂತ್ ಕುಮಾರ್ ತಿಳಿಸಿದ್ದಾರೆ.

    ಈ ನಿಯಮದಿಂದ ಪ್ರವಾಸಿಗರಿಗೆ ಬೇಸರವಾಗಿದೆ. ತಾಜ್ ಮಹಲ್‍ನಲ್ಲಿ ಸುಂದರ ಕ್ಷಣಗಳನ್ನು ಕಳೆಯಲು ಪ್ರವಾಸಿಗರು ಬಂದಿರುತ್ತಾರೆ. ಆದರೆ ಅವರ ಖುಷಿಗೆ ಇಲ್ಲಿನ ಆಡಳಿತ ಮಂಡಳಿ ಅಡ್ಡಿಯಾಗುತ್ತಿದೆ. ಈ ನಿಯಮದಿಂದ ಇನ್ನು ಮುಂದೆ ತಾಜ್ ಮಹಲ್‍ಗೆ ಬರುವ ಮುನ್ನ ಯೋಚನೆ ಮಾಡುವ ಸ್ಥಿತಿ ನಿರ್ಮಾಣವಾಗಿದೆ ಎಂದು ಪ್ರವಾಸಿಗರೊಬ್ಬರು ಬೇಸರ ವ್ಯಕ್ತಪಡಿಸಿದ್ದಾರೆ.

    ಹಾಗೆಯೇ ಈ ಬಗ್ಗೆ ವಿದೇಶಿ ಪ್ರವಾಸಿಗರೊಬ್ಬರು ಪ್ರತಿಕ್ರಿಯಿಸಿ, ತಾಜ್ ಮಹಲ್ ವೀಕ್ಷಣೆಗೆ ಬರುವ ವಿದೇಶಿಗರಿಗೆ ಇತರೇ ಪ್ರವಾಸಿಗರಿಗಿಂತ 10 ಪಟ್ಟು ಹೆಚ್ಚು ಪ್ರವೇಶ ಶುಲ್ಕ ಪಾವತಿಸಬೇಕಾಗುತ್ತದೆ. ಇಲ್ಲಿ ಹೆಚ್ಚು ಸಮಯ ಕಳೆಯುವುದಕ್ಕೆ ಖುಷಿಯಾಗುತ್ತೆ, ಆದರೆ ಈಗ ವೀಕ್ಷಣೆ ಸಮಯವನ್ನು ಸೀಮಿತಗೊಳಿಸಿದ್ದಾರೆ ಎಂದಿದ್ದಾರೆ.

  • ಇಂದೇ ಮಂತ್ರಿ ಆಗ್ತೇವೆ ಅಂದ್ಕೊಂಡವರಿಗೆ ಗೌಡ್ರ ಕುಟುಂಬದಿಂದ ಶಾಕ್

    ಇಂದೇ ಮಂತ್ರಿ ಆಗ್ತೇವೆ ಅಂದ್ಕೊಂಡವರಿಗೆ ಗೌಡ್ರ ಕುಟುಂಬದಿಂದ ಶಾಕ್

    ಬೆಂಗಳೂರು: ಕಾಂಗ್ರೆಸ್ ಕೋಟಾದ ಸಚಿವ ಸ್ಥಾನ ಭರ್ತಿಗೆ ಲೋಕೋಪಯೋಗಿ ಸಚಿವ ಎಚ್.ಡಿ ರೇವಣ್ಣ ಘಳಿಗೆ ನೋಡಿ ಮುಹೂರ್ತ ಫಿಕ್ಸ್ ಮಾಡಿದ್ದರು. ಆದರೆ ಈಗ ಜೆಡಿಎಸ್ ಕೋಟಾದ ಸಚಿವ ಸ್ಥಾನ ಭರ್ತಿ ಸಮಯ ಹಾಗೂ ಗಳಿಗೆ ಕೂಡಿ ಬಂದಿಲ್ಲ ಎಂದು ಹೇಳಲಾಗುತ್ತಿದೆ.

    ಸಚಿವ ಸಂಪುಟ ವಿಸ್ತರಣೆ ಹಿನ್ನೆಲೆಯಲ್ಲಿ ಇಂದು ಜೆಡಿಎಸ್ ಸ್ಥಾನ ಭರ್ತಿಯಾಗುವುದಿಲ್ಲ. ಜೆಡಿಎಸ್‍ನಲ್ಲಿ ಎರಡು ಸ್ಥಾನ ಖಾಲಿ ಇದ್ದು, ಕಾಂಗ್ರೆಸ್ ಸಚಿವರ ಜೊತೆ ಪ್ರಮಾಣ ವಚನ ಸ್ವೀಕರಿಸುವುದಿಲ್ಲ. ಸ್ಥಾನ ಹಂಚಿಕೆ ಫೈನಲ್ ಆಗದ ಹಿನ್ನೆಲೆಯಲ್ಲಿ ಜೆಡಿಎಸ್ ಸ್ಥಾನ ಭರ್ತಿ ಅನುಮಾನವಾಗಿದೆ.

    ಇಂದು ಸಮಯ ಸರಿ ಇಲ್ಲದ ಕಾರಣ ಸ್ಥಾನ ಭರ್ತಿಗೆ ಜೆಡಿಎಸ್ ಹಿಂದೇಟು ಹಾಕುತ್ತಿದೆ. ಮತ್ತೊಂದು ದಿನ ಸ್ಥಾನ ಭರ್ತಿ ಮಾಡಿ ಪ್ರಮಾಣ ವಚನ ಕಾರ್ಯಕ್ರಮ ಮಾಡಲು ಜೆಡಿಎಸ್ ವರಿಷ್ಠರು ನಿರ್ಧಾರ ಮಾಡಿದ್ದಾರೆ.

    ಧನುರ್ಮಾಸ ಆಗಿರುವುದಕ್ಕೆ ಜೆಡಿಎಸ್‍ನಿಂದ ಯಾರನ್ನು ಮಂತ್ರಿ ಮಾಡುವುದು ಬೇಡ ಎಂದು ಮಾಜಿ ಪ್ರಧಾನಿ ದೇವೇಗೌಡ ಮತ್ತು ರೇವಣ್ಣ ತೀರ್ಮಾನಕ್ಕೆ ಬಂದಿದ್ದಾರೆ. ಇದರೊಂದಿಗೆ ಇಂದು ಮಂತ್ರಿ ಆಗುತ್ತೇವೆ ಎನ್ನುವ ಕನವರಿಕೆಯಲ್ಲಿದ್ದ ಆಕಾಂಕ್ಷಿಗಳಿಗೆ ಗೌಡರ ಕುಟುಂಬ ಶಾಕ್ ನೀಡಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಬೆಂಗ್ಳೂರಿಗರೇ ಗಮನಿಸಿ, ಅಂಬಿ ಅಂತಿಮ ಯಾನ – ಯಾವ ಸಮಯಕ್ಕೆ ಏನು ನಿಗದಿಯಾಗಿದೆ?

    ಬೆಂಗ್ಳೂರಿಗರೇ ಗಮನಿಸಿ, ಅಂಬಿ ಅಂತಿಮ ಯಾನ – ಯಾವ ಸಮಯಕ್ಕೆ ಏನು ನಿಗದಿಯಾಗಿದೆ?

    ಬೆಂಗಳೂರು: ರೆಬೆಲ್ ಸ್ಟಾರ್ ಅಂಬರೀಶ್ ಅವರ ಅಂತಿಮ ಯಾತ್ರೆಗೆ ಸರ್ಕಾರ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಮಂಡ್ಯ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಇಂದು ಬೆಳಗ್ಗೆ 9 ಗಂಟೆವರೆಗೂ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಬಳಿಕ ಬೆಳಗ್ಗೆ ಹೆಲಿಕಾಪ್ಟರ್ ಮೂಲಕ ಪಾರ್ಥಿವ ಶರೀರ ಬೆಂಗಳೂರಿನ ಕಂಠೀರವ ಸ್ಟೇಡಿಯಂಗೆ ಬರಲಿದೆ. ಬಳಿಕ ಕಂಠೀರವ ಸ್ಟುಡಿಯೋದವರೆಗೆ ಮೆರವಣಿಗೆ ಮೂಲಕ ಅಂತಿಮ ಯಾತ್ರೆ ನಡೆಯಲಿದೆ.

    ಅಂಬಿ ಅಂತಿಮ ಯಾನ:
    * ಬೆಳಗ್ಗೆ 9 ಗಂಟೆ – ಸೇನಾ ಹೆಲಿಕಾಪ್ಟರ್ ಮೂಲಕ ಮಂಡ್ಯದಿಂದ ಬೆಂಗಳೂರಿಗೆ ಪಾರ್ಥಿವ ಶರೀರ ರವಾನೆ
    * ಬೆಳಗ್ಗೆ 10 ಗಂಟೆ – ಹೆಚ್‍ಎಎಲ್ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗಲಿರುವ ಅಂಬಿ ಹೊತ್ತ ಹೆಲಿಕಾಪ್ಟರ್
    * ಬೆಳಗ್ಗೆ 10.15 ಗಂಟೆ – ಹೆಚ್‍ಎಎಲ್‍ನಿಂದ ಕಂಠೀರವ ಸ್ಟೇಡಿಯಂಗೆ ಅಂಬುಲೆನ್ಸ್ ನಲ್ಲಿ ಪಾರ್ಥಿವ ಶರೀರ ಶಿಫ್ಟ್ (ಸಾರ್ವಜನಿಕ ದರ್ಶನ ಇರಲ್ಲ)
    * ಬೆಳಗ್ಗೆ 11 ಗಂಟೆ – ಕಂಠೀರವ ಸ್ಟೇಡಿಯಂನಿಂದ ತೆರೆದ ವಾಹನದಲ್ಲಿ ಅಂಬಿ ಅಂತಿಮ ಯಾನ ಆರಂಭ
    * ಮಧ್ಯಾಹ್ನ 1 ಗಂಟೆ – ಕಂಠೀರವ ಸ್ಟುಡಿಯೋಗೆ ಅಂಬರೀಶ್ ಪಾರ್ಥಿವ ಶರೀರ ರವಾನೆ
    * ಮಧ್ಯಾಹ್ನ 2 ಗಂಟೆ – ಸಕಲ ಸರ್ಕಾರಿ ಗೌರವಗಳೊಂದಿಗೆ ಅಣ್ಣಾವ್ರ ಸ್ಮಾರಕದ ಪಕ್ಕದಲ್ಲಿ ಅಂಬಿ ಅಂತ್ಯಕ್ರಿಯೆ


    ಅಂತಿಮ ಯಾನದ ಮಾರ್ಗ
    ಕಂಠೀರವ ಕ್ರೀಡಾಂಗಣದಿಂದ ಹೊರಡುವ ಮೆರವಣಿಗೆ ಕೆಜಿ ರೋಡ್ ಮೂಲಕ ಸಾಗಿ ಹಡ್ಸನ್ ಸರ್ಕಲ್, ಹಲಸೂರು ಗೇಟ್ ಪಿಎಸ್, ಪೊಲೀಸ್ ಕಾರ್ನರ್, ಮೈಸೂರ್ ಬ್ಯಾಂಕ್ ಸರ್ಕಲ್ ಮಾರ್ಗವಾಗಿ ಪ್ಯಾಲೇಸ್ ರೋಡ್ ಮೂಲಕ ಸಾಗಲಿದೆ. ಬಳಿಕ ಸಿಐಡಿ ಜಂಕ್ಷನ್, ಬಸವೇಶ್ವರ ಸರ್ಕಲ್, ಓಲ್ಡ್ ಹೈಗ್ರೌಂಡ್ಸ್ ಪಿಎಸ್, ವಿಂಡ್ಸರ್ ಮ್ಯಾನರ್, ಕಾವೇರಿ ಜಂಕ್ಷನ್, ಬಾಷ್ಯಂ ಸರ್ಕಲ್, ಸ್ಯಾಂಕಿ ರೋಡ್, ಮಾರಮ್ಮ ಸರ್ಕಲ್, ಬಿಎಚ್‍ಇಐ ಮೂಲಕ ಯಶವಂತಪುರ ಫ್ಲೈಓವರ್ ಮೇಲೇರಿ ಮೆಟ್ರೋ ಬಳಿ ಬಲ ತಿರುವು ಪಡೆದು ಆರ್‍ಎಂಸಿ ಯಾರ್ಡ್ ಪಿಎಸ್ ಮಾರ್ಗವಾಗಿ ಗೊರುಗುಂಟೆಪಾಳ್ಯ ಸಿಗ್ನಲ್ ಬಳಿ ಎಡ ತಿರುವು ಪಡೆದು ಸಿಎಂಟಿಐ ಮಾರ್ಗ ಮೂಲಕ ಕಂಠೀರವ ಸ್ಟುಡಿಯೋ ತಲುಪಲಿದೆ.

    ಮಾರ್ಗ ಬದಲಾವಣೆ:
    ಕಂಠೀರವ ಕ್ರೀಡಾಂಗಣದಿಂದ ಆರಂಭವಾಗುವ ಅಂತಿಮ ಯಾತ್ರೆಯನ್ನು ಮೊದಲು ರಾಜಭವನ, ಕಸ್ತೂರ್ ಬಾ ರಸ್ತೆ ಮೂಲಕ ಕರೆತರಲು ಯೋಜನೆ ರೂಪಿಸಿಲಾಗಿತ್ತು. ಆದರೆ ಟ್ರಾಫಿಕ್ ಜಾಮ್ ಹಾಗೂ ಗಣ್ಯ ವ್ಯಕ್ತಿಗಳ ಸಂಚಾರ ಪ್ರಯುಕ್ತ ಈ ಮಾರ್ಗವನ್ನು ಬದಲಾವಣೆ ಮಾಡಲಾಗಿದೆ.

    ಔಟರ್ ರಿಂಗ್ ರಸ್ತೆಯ ಸುಮನಹಳ್ಳಿ ಜಂಕ್ಷನ್ ನಿಂದ ಗೊರಗುರಂಟೆಪಾಳ್ಯ ಮಾರ್ಗದಲ್ಲಿ ಬದಲಾವಣೆ ಮಾಡಲಾಗಿದ್ದು, ಸುಮನಹಳ್ಳಿಯಿಂದ ಮಾಗಡಿ ರಸ್ತೆ, ಕಾಮಾಕ್ಷಿ ಪಾಳ್ಯ, ಕಾರ್ಡ್ ರಸ್ತೆ ಮೂಲಕ ಸಂಚಾರ ಮಾಡಲು ಅವಕಾಶ ಕಲ್ಪಿಸಲಾಗಿದೆ. ಅಲ್ಲದೇ ಗೊರಗುಂಟೆಪಾಳ್ಯದಿಂದ ಎಂಇಎ ಜಂಕ್ಷನ್, ಆರೆಂಸಿ ಯಾರ್ಡ್ ನಿಂದ ಸೋಪ್ ಫ್ಯಾಕ್ಟರಿ ಮೂಲಕ ಸುಮನಹಳ್ಳಿಗೆ ವ್ಯವಸ್ಥೆ ಮಾಡಲಾಗಿದೆ. ಉಳಿದಂತೆ ಬಿಎಎಲ್ ರಸ್ತೆ, ಗಂಗಮ್ಮ ಸರ್ಕಲ್ ನಿಂದ ತುಮಕೂರು ರಸ್ತೆಗೆ ಹೋಗಲು ಅವಕಾಶ ನೀಡಲಾಗಿದೆ.

    ಇಂದು ಬೆಳಗ್ಗೆ ಸುಮಾರು 10.30ರ ವೇಳೆಗೆ ಆರಂಭವಾಗುವ ಮೆರವಣಿಗೆಯಿಂದ ಸಂಚಾರದಲ್ಲಿ ಭಾರೀ ವ್ಯತ್ಯಯ ಆಗುವ ಲಕ್ಷಣಗಳು ಇದ್ದು, ಏರ್ ಪೋರ್ಟ್ ರಸ್ತೆ, ತುಮಕೂರು ರಸ್ತೆ, ಮೈಸೂರು ರಸ್ತೆ ಮಾರ್ಗದಲ್ಲಿ ಸಂಚಾರ ದಟ್ಟನೆ ಉಂಟಾಗುವ ಸಾಧ್ಯತೆ ಇದೆ. ಇದರಿಂದ ವಾಹನ ಸವಾರರು ಪರ್ಯಾಯ ಮಾರ್ಗಗಳಲ್ಲಿ ಸಂಚರಿಸೋದು ಉತ್ತಮ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv